Tag: T.D.Rajegowda

  • ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

    ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

    ಚಿಕ್ಕಮಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ (T.D.Rajegowda) ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

    ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದೆ. ಇದನ್ನೂ ಓದಿ: ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬಡವರ ಹಣಕ್ಕೆ ಕನ್ನ – 10 ಲಕ್ಷ ವಂಚಿಸಿ ಪರಾರಿಯಾದ ಪೋಸ್ಟ್ ಮಾಸ್ಟರ್

    ಶೃಂಗೇರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಶಾಸಕ ರಾಜೇಗೌಡ, ಪತ್ನಿ‌ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಟಿ.ಡಿ.ರಾಜೇಗೌಡ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಆಸ್ತಿ ಘೋಷಣೆ ಮಾಡದ ದೂರು ನೀಡಲಾಗಿತ್ತು.

    ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಬಿಜೆಪಿ ಮುಖಂಡ ದಿನೇಶ್‌ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ನ್ಯಾಯಾಲಯದ ಸೂಚನೆ ಮೇರೆಗೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಪತ್ನಿ ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ

    ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಜೇಗೌಡರ ನಿವಾಸ ಬಸಾಪುರದ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

  • ಶಾಸಕ ಹಂಚಿದ ಕುಕ್ಕರ್ ಅಸಲಿ ಮುಖ ತೆರೆದಿಟ್ಟ ಶೃಂಗೇರಿಯ ಮತದಾರರು

    ಶಾಸಕ ಹಂಚಿದ ಕುಕ್ಕರ್ ಅಸಲಿ ಮುಖ ತೆರೆದಿಟ್ಟ ಶೃಂಗೇರಿಯ ಮತದಾರರು

    ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ (T.D.Rajegowda) ಕುಕ್ಕರ್ ಹಂಚಿ ಮಾಡಿ ಮತದಾರರಿಂದ ವ್ಯಂಗ್ಯಕ್ಕೊಳಗಾಗಿದ್ದಾರೆ.

    ಎರಡು ದಿನದಿಂದ ಶೃಂಗೇರಿ (Sringeri) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಂಚಿದ ಕುಕ್ಕರ್ (Cooker) ಬಾಕ್ಸ್ ಮೇಲೆ 450 ರೂ. ಎಂದು ಅಚ್ಚಾಗಿದೆ. ಅದರ ಮೇಲೆ 1399 ರೂ. ಲೇಬಲ್ ಅಂಟಿಸಿ ಕಾರ್ಯಕರ್ತರು ಮತದಾರರಿಗೆ ಹಂಚಿದ್ದಾರೆ. ಆನ್‍ಲೈನ್‍ನಲ್ಲಿಯೂ ಕುಕ್ಕರ್ ಬೆಲೆ 450 ರೂ. ಎಂದಿದೆ. ಇದು ಜನರಿಗೆ ತಿಳಿಯುತ್ತಿದ್ದಂತೆ ಶಾಸಕ ನಗೆಪಾಟಲಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಾರೀ ಅಗ್ನಿ ಅವಘಡ- ಹೊತ್ತಿ ಉರಿದ ಪ್ಲಾಸ್ಟಿಕ್ ಗೊಡಾನ್

    ಕುಕ್ಕರ್ ಅಲುಗಾಡಿಸಿದರೆ ಶಬ್ದ ಬರುತ್ತಿದೆ. ಯಾರೂ ಕೇಳದಿದ್ದರೂ ಕೊಟ್ಟಿದ್ದಾರೆ. ಕೊಟ್ಟ ಮೇಲೆ ಒಳ್ಳೆಯದಾದರೂ ಕೊಡಬೇಕು. ಇಲ್ಲ ಸುಮ್ಮನಿರಬೇಕು ಎಂದು ಮತದಾರರು ಕಾಂಗ್ರೆಸ್ (Congress) ವಿರುದ್ಧ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಅಂತರ್ಜಾತಿ ವಿವಾಹ- ಸಾಮಾಜಿಕ ಬಹಿಷ್ಕಾರ ಪ್ರಕರಣ: 12 ಜನರ ಬಂಧನ

  • ಮಲೆನಾಡಿಗೂ ಕಾಲಿಟ್ಟ ಕುಕ್ಕರ್ ಪಾಲಿಟಿಕ್ಸ್- ಕಾಂಗ್ರೆಸ್ ಶಾಸಕರ ನಡೆಗೆ ತೀವ್ರ ಆಕ್ರೋಶ

    ಮಲೆನಾಡಿಗೂ ಕಾಲಿಟ್ಟ ಕುಕ್ಕರ್ ಪಾಲಿಟಿಕ್ಸ್- ಕಾಂಗ್ರೆಸ್ ಶಾಸಕರ ನಡೆಗೆ ತೀವ್ರ ಆಕ್ರೋಶ

    ಚಿಕ್ಕಮಗಳೂರು: ಅಭಿವೃದ್ಧಿ ಕಾರ್ಯದಿಂದ ಮತ ಕೇಳುವ ಬದಲು ಕುಕ್ಕರ್ (Cooker) ನೀಡಿ ಮತ ಕೇಳುತ್ತಿರುವ ಹಾಲಿ ಕಾಂಗ್ರೆಸ್ ಶಾಸಕರ ವಿರುದ್ಧ ಮತದಾರರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಶೃಂಗೇರಿ (Sringeri) ವಿಧಾನಸಭಾ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ಶೃಂಗೇರಿ ಶಾಸಕ ಹಾಗೂ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ (TD Rajegowda) ಕ್ಷೇತ್ರದಾದ್ಯಂತ ಕುಕ್ಕರ್ ರಾಜಕೀಯ ಆರಂಭಿಸಿದ್ದಾರೆ. ಕೇತ್ರದಾದ್ಯಂತ ಸುಮಾರು ಒಂದು ಲಕ್ಷಕ್ಕೂ ಅಧಿಕ ಕುಕ್ಕರ್ ವಿತರಣೆ ಮಾಡಿದ್ದು, ಜನಸಾಮಾನ್ಯರು ಈಗ ಕುಕ್ಕರ್ ನೀಡಿ ಮತ ಕೇಳುವುದಾದರೆ ಕಳೆದ ಐದು ವರ್ಷದಿಂದ ಮಾಡಿದ್ದೇನು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಾರ್ಚ್ 11ಕ್ಕೆ ಇಡಿ ಮುಂದೆ ಹಾಜರಾಗಲಿದ್ದಾರೆ KCR ಪುತ್ರಿ ಕವಿತಾ

    ಮಲೆನಾಡಿನ ಗಾಂಧಿ ಎಂದೇ ಹೆಸರಾಗಿದ್ದ ಗೋವಿಂದೇ ಗೌಡರ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರು ಕುಕ್ಕರ್ ಆಮಿಷವೊಡ್ಡಿ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದ್ದರು. ಚುನಾವಣೆಯ (Election) ಹಿನ್ನೆಲೆ, ಕಾಂಗ್ರೆಸ್ ಮುಖಂಡ ಬೇಗಾರು ರಮೇಶ್ ನೇತೃತ್ವದಲ್ಲಿ (Begar Ramesh) ಟಿ.ಡಿ.ರಾಜೇಗೌಡರ ಭಾವಚಿತ್ರವುಳ್ಳ ಕುಕ್ಕರ್ ಅನ್ನು ಮನೆ-ಮನೆಗೆ ವಿತರಿಸಿ, ಅವರೊಂದಿಗೆ ಫೋಟೋ ಹೊಡೆಸಿಕೊಂಡಿದ್ದರು. ಹಾಲಿ ಶಾಸಕರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಮಗನಿಗೆ ಸಾಹಸಸಿಂಹ ವಿಷ್ಣುವರ್ಧನ್ ಹೆಸರಿಟ್ಟ ವಿಷ್ಣು ಅಭಿಮಾನಿ

    ಚಿಕ್ಕಮಗಳೂರಿನಲ್ಲಿ ಮೂರು ತಾಲೂಕು ಸೇರಿ ಶೃಂಗೇರಿ ವಿಧಾನಸಭಾ ಕ್ಷೇತ್ರವಾಗಿದೆ. ಮೂರೂ ತಾಲೂಕಿನಲ್ಲೂ ಕಳೆದ ಎರಡು ಮೂರು ವರ್ಷಗಳಿಂದ ಭಾರೀ ಮಳೆಗೆ ಜನ ಮನೆ-ಮಠ ಕಳೆದುಕೊಂಡಿದ್ದಾರೆ. ಹಲವರಿಗೆ ಇನ್ನೂ ಸೂಕ್ತ ರೀತಿಯಲ್ಲಿ ಪರಿಹಾರ ಬರಲಿಲ್ಲ. ಮಳೆಯಿಂದ ನಾಶಗೊಂಡಿದ್ದ ಮೂಲಭೂತ ಸೌಕರ್ಯಗಳು ಇಂದಿಗೂ ದುರಸ್ಥಿಗೊಂಡಿಲ್ಲ. ಈಗ ಚುನಾವಣೆ ಬಂತು ಎಂದು ಅಭಿವೃದ್ಧಿ ಕೆಲಸ ಬಿಟ್ಟು ಕುಕ್ಕರ್ ಕೊಟ್ಟು ಮತ ಕೇಳುತ್ತಿದ್ದಾರೆ ಎಂದು ಮತದಾರರು ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ನೂರಾರು ಮತದಾರರಿಗೆ ಬಿಜೆಪಿಯಿಂದ ಬಾಡೂಟ, ಗಿಫ್ಟ್ – ಕಂಠಪೂರ್ತಿ ಕುಡಿದು ಎಲ್ಲೆಂದರಲ್ಲಿ ಮಲಗಿದ ಜನ

    ಕುಕ್ಕರ್ ಬೇಡ. ನಮ್ಮ ಮನೆಯಲ್ಲಿಯೇ ಇದೆ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸಿ ಅವುಗಳನ್ನು ಬಗೆಹರಿಸುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ಎಂದು ಶಾಸಕರಿಗೆ ಜನರು ಸಲಹೆ ನೀಡಿದರು. ಇದನ್ನೂ ಓದಿ: ನಿನ್ನ ಮನೆ ಹಾಳಾಗಲಿ, ನಿನ್ನ ವಂಶ ನಾಶವಾಗಲಿ: ವೆಂಕಟೇಶ್‌ ವಿರುದ್ಧ ಶಾಸಕ ಕೆ. ಮಹದೇವ್ ಕಿಡಿ