Tag: T20 Asia Cup

  • ಕೈಗೆ ಬಂದ ಕ್ಯಾಚ್‌ ಬಿಟ್ಟ ಕುಲ್ದೀಪ್‌, ಅಭಿ – ಪವರ್‌ ಪ್ಲೇನಲ್ಲೇ 34 ರನ್‌ ಚಚ್ಚಿಸಿಕೊಂಡ ಬುಮ್ರಾ

    ಕೈಗೆ ಬಂದ ಕ್ಯಾಚ್‌ ಬಿಟ್ಟ ಕುಲ್ದೀಪ್‌, ಅಭಿ – ಪವರ್‌ ಪ್ಲೇನಲ್ಲೇ 34 ರನ್‌ ಚಚ್ಚಿಸಿಕೊಂಡ ಬುಮ್ರಾ

    – 8 ಓವರ್‌ಗಳಲ್ಲಿ 5 ಕ್ಯಾಚ್‌ ಕೈಚೆಲ್ಲಿದ ಭಾರತ

    ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸೂಪರ್‌ ಫೋರ್‌ ಹಂತದ ಮೊದಲ ಪಂದ್ಯ ನಡೆಯುತ್ತಿದೆ. ಮೊದಲು ಕ್ರೀಸ್‌ಗಿಳಿದ ಪಾಕ್‌ ಸ್ಫೋಟಕ ಪ್ರದರ್ಶನಕ್ಕೆ ಮುಂದಾಗಿದೆ. ಮೊದಲ ಪಂದ್ಯದಲ್ಲಿ ಭಾರೀ ಮುಖಭಂಗ ಅನುಭವಿಸಿದ್ದ ಪಾಕ್‌ 2ನೇ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲೇಬೇಕೆಂದು ಮುಂದಾಗಿದೆ. ಆದ್ರೆ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದಿರುವ ಭಾರತೀಯ ಆಟಗಾರರು ಇಂದೇಕೋ ಫೀಲ್ಡಿಂಗ್‌ನಲ್ಲಿ ಕಳಪೆ ಪ್ರದರ್ಶನ ತೋರಿದಂತೆ ಕಾಣುತ್ತಿದೆ.

    ಹೌದು. ಅತ್ತ ಯಾರ್ಕರ್‌ ಸ್ಪೆಷಲಿಸ್ಟ್‌ ಬುಮ್ರಾ ಪವರ್‌ ಪ್ಲೇನಲ್ಲಿ 3 ಓವರ್‌ಗಳಲ್ಲಿ 34 ರನ್‌ ಬಿಟ್ಟುಕೊಟ್ಟರೆ, ಇತ್ತ ಫೀಲ್ಡರ್‌ಗಳು ಕೈಗೆ ಬಂದ ಕ್ಯಾಚ್‌ಗಳನ್ನೇ ಕೈಚೆಲ್ಲುತ್ತಿದ್ದಾರೆ. ಇದು ಪಾಕ್‌ ದುಬಾರಿ ರನ್‌ ಕಲೆಹಾಕಲು ನೆರವಾಗುತ್ತಿದೆ.

    ಮೊದಲ ಓವರ್‌ನ 3ನೇ ಎಸೆತದಲ್ಲೇ ಸಾಹಿಬ್‌ಜಾದಾ ಫರ್ಹಾನ್ ನೀಡಿದ್ದ ಕ್ಯಾಚ್‌ ಅನ್ನು ಅಭಿಷೇಕ್‌ ಶರ್ಮಾ ಕೈಚೆಲ್ಲಿದರು. ಇದಾದ ಬಳಿಕ 5ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ವರುಣ್‌ ಬೌಲಿಂಗ್‌ಗೆ ಸೈಮ್‌ ಅಯೂಬ್‌ ನೀಡಿದ್ದ ಈಸಿ ಕ್ಯಾಚನ್ನು‌, ಕುಲ್ದೀಪ್‌ ಯಾದವ್‌ ಬಿಟ್ಟರು. ಆಗ ಪಾಕ್‌ ತಂಡದ ಮೊತ್ತ 1 ವಿಕೆಟ್‌ ಕಳೆದುಕೊಂಡು 38 ರನ್‌ಗಳನ್ನಷ್ಟೇ ಗಳಿಸಿತ್ತು. ಅದೇ ಓವರ್‌ ಕೊನೆ ಎಸೆತದಲ್ಲಿ ಮತ್ತೆ ಫರ್ಹಾನ್‌ ನೀಡಿದ ಕೀಪರ್‌ ಕ್ಯಾಚನ್ನೂ ಸಂಜು ಕೈಚೆಲ್ಲಿದರು.

    ಇದಾದ ಬಳಿಕ 8ನೇ ಓವರ್‌ನ 3ನೇ ಎಸೆತದಲ್ಲಿ ಫರ್ಹಾನ್‌ ನೀಡಿದ್ದ ಕ್ಯಾಚನ್ನು ಲಾಂಗ್‌ ಆನ್‌ನಲ್ಲಿ ಅಭಿಷೇಕ್‌ ಶರ್ಮಾ ಕೈಚೆಲ್ಲಿದರಲ್ಲದೇ, ಸಿಕ್ಸ್‌ಗೆ ತಳ್ಳಿದರು. ಅದೇ ಓವರ್‌ 5ನೇ ಎಸೆತದಲ್ಲಿ ಸೈಮ್‌ ಅಯೂಬ್‌ ನೀಡಿದ್ದ ಸುಲಭ ಕ್ಯಾಚ್‌ ಫೀಲ್ಡಿಂಗ್‌ ಸೆಟ್‌ನಿಂದ ಕೈತಪ್ಪಿತು. ಒಟ್ಟಾರೆ, ಟೀಂ ಇಂಡಿಯಾ ಮಾಡಿದ ಈ ಯಡವಟ್ಟು ಪಾಕಿಸ್ತಾನ 10 ಓವರ್‌ಗಳಲ್ಲಿ 90 ರನ್‌ ಪೇರಿಸಲು ಕಾರಣವಾಯಿತು.

    ಭಾರತ ಪ್ಲೇಯಿಂಗ್‌-11
    ಅಭಿಷೇಕ್‌ ಶರ್ಮಾ, ಶುಭಮನ್‌ ಗಿಲ್‌, ಸೂರ್ಯಕುಮಾರ್‌ ಯಾದವ್‌ (ನಾಯಕ), ತಿಲಕ್‌ ವರ್ಮಾ, ಸಂಜು ಸ್ಯಾಮ್ಸನ್‌, ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ, ಅಕ್ಷರ್‌ ಪಟೇಲ್‌, ಕುಲ್ದೀಪ್‌ ಯಾದವ್‌, ವರುಣ್‌ ಚಕ್ರವರ್ತಿ, ಜಸ್ಪ್ರೀತ್‌ ಬುಮ್ರಾ.

    ಪಾಕಿಸ್ತಾನ ಪ್ಲೇಯಿಂಗ್‌-11
    ಸಾಹಿಬ್‌ಜಾದಾ ಫರ್ಹಾನ್, ಸೈಮ್‌ ಅಯೂಬ್‌, ಫಖರ್‌ ಝಮಾನ್‌, ಸಲ್ಮಾನ್‌ ಅಘಾ (ನಾಯಕ), ಮೊಹಮ್ಮದ್‌ ನವಾಜ್‌, ಫಾಹಿಮ್‌ ಅಶ್ರಫ್‌, ಮೊಹಮ್ಮದ್‌ ಹ್ಯಾರಿಸ್‌, ಶಾಹೀನ್‌ ಶಾ ಅಫ್ರಿದಿ, ಹ್ಯಾರಿಸ್‌ ರೌಫ್‌, ಅಬ್ರಾರ್‌ ಅಹ್ಮದ್‌, ಹುಸೇನ್ ತಲಾತ್.

  • ಟಾಸ್‌ ಗೆದ್ದ ಭಾರತ ಫೀಲ್ಡಿಂಗ್‌ ಆಯ್ಕೆ – ಬೂಮ್‌ ಬೂಮ್‌ ಇಸ್‌ ಬ್ಯಾಕ್‌

    ಟಾಸ್‌ ಗೆದ್ದ ಭಾರತ ಫೀಲ್ಡಿಂಗ್‌ ಆಯ್ಕೆ – ಬೂಮ್‌ ಬೂಮ್‌ ಇಸ್‌ ಬ್ಯಾಕ್‌

    ದುಬೈ: ಏಷ್ಯಾಕಪ್‌ ಟೂರ್ನಿಯ ಸೂಪರ್‌ ಫೋರ್‌ ಹಂತದ ಮೊದಲ ಪಂದ್ಯ ಇಂದು ಭಾರತ-ಪಾಕ್‌ ನಡುವೆ ನಡೆಯುತ್ತಿದೆ. ಟಾಸ್‌ ಗೆದ್ದ ಭಾರತ ಫೀಲ್ಡಿಂಗ್‌ ಆಯ್ದುಕೊಂಡಿದ್ದು, ಕೆಲ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ.

    ಒಮನ್‌ ವಿರುದ್ಧ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಸ್ಪಿನ್ನರ್‌ ವರುಣ್‌ ಚಕ್ರವರ್ತಿ ಹಾಗೂ ಯಾರ್ಕರ್‌ ಸ್ಪೆಷಲಿಸ್ಟ್‌ ಬುಮ್ರಾ ಪಾಕ್‌ ವಿರುದ್ಧ ಪಂದ್ಯಕ್ಕೆ ಕಂಬ್ಯಾಕ್‌ ಮಾಡಿದ್ದಾರೆ. ಅಕ್ಷರ್‌ ಪಟೇಲ್‌, ಹರ್ಷಿತ್‌ ರಾಣಾಗೆ ಕೊಕ್‌ ಕೊಡಲಾಗಿದೆ. ಇನ್ನುಳಿದಂತೆ ಸಂಜು ಸ್ಯಾಮ್ಸನ್‌ ವಿಕೆಟ್‌ ಕೀಪರ್‌ ಆಗಿ ಕಣಕ್ಕಿಳಿಯಲಿದ್ದಾರೆ. ಇನ್ನುಳಿದಂತೆ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ.

    ಭಾರತ ಪ್ಲೇಯಿಂಗ್‌-11
    ಅಭಿಷೇಕ್‌ ಶರ್ಮಾ, ಶುಭಮನ್‌ ಗಿಲ್‌, ಸೂರ್ಯಕುಮಾರ್‌ ಯಾದವ್‌ (ನಾಯಕ), ತಿಲಕ್‌ ವರ್ಮಾ, ಸಂಜು ಸ್ಯಾಮ್ಸನ್‌, ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ, ಅಕ್ಷರ್‌ ಪಟೇಲ್‌, ಕುಲ್ದೀಪ್‌ ಯಾದವ್‌, ವರುಣ್‌ ಚಕ್ರವರ್ತಿ, ಜಸ್ಪ್ರೀತ್‌ ಬುಮ್ರಾ.

    ಪಾಕಿಸ್ತಾನ ಪ್ಲೇಯಿಂಗ್‌-11
    ಸಾಹಿಬ್‌ಜಾದಾ ಫರ್ಹಾನ್, ಸೈಮ್‌ ಅಯೂಬ್‌, ಫಖರ್‌ ಝಮಾನ್‌, ಸಲ್ಮಾನ್‌ ಅಘಾ (ನಾಯಕ), ಮೊಹಮ್ಮದ್‌ ನವಾಜ್‌, ಫಾಹಿಮ್‌ ಅಶ್ರಫ್‌, ಮೊಹಮ್ಮದ್‌ ಹ್ಯಾರಿಸ್‌, ಶಾಹೀನ್‌ ಶಾ ಅಫ್ರಿದಿ, ಹ್ಯಾರಿಸ್‌ ರೌಫ್‌, ಅಬ್ರಾರ್‌ ಅಹ್ಮದ್‌, ಹುಸೇನ್ ತಲಾತ್.

  • ಟೆಸ್ಟ್‌ ಕ್ಯಾಪ್ಟನ್‌ ಗಿಲ್‌ಗೆ ಅನಾರೋಗ್ಯ – ಏಷ್ಯಾಕಪ್‌ ಟೂರ್ನಿಗೆ ಅಯ್ಯರ್‌ಗೆ ಸಿಗುತ್ತಾ ಚಾನ್ಸ್‌?

    ಟೆಸ್ಟ್‌ ಕ್ಯಾಪ್ಟನ್‌ ಗಿಲ್‌ಗೆ ಅನಾರೋಗ್ಯ – ಏಷ್ಯಾಕಪ್‌ ಟೂರ್ನಿಗೆ ಅಯ್ಯರ್‌ಗೆ ಸಿಗುತ್ತಾ ಚಾನ್ಸ್‌?

    ಮುಂಬೈ: 2025ರ ಟಿ20 ಏಷ್ಯಾಕಪ್‌ ಟೂರ್ನಿಗೆ ಇನ್ನೂ ಕೆಲ ದಿನಗಳು ಬಾಕಿಯಿರುವಾಗಲೇ ಟೀಂ ಇಂಡಿಯಾ (Team India) ಬಿಗ್‌ ಶಾಕ್‌ ಎದುರಾಗಿದೆ. ಈಗಾಗಲೇ ಏಷ್ಯಾಕಪ್‌ ತಂಡದಲ್ಲಿ ಸ್ಥಾನ ಪಡೆದಿರುವ ಉಪನಾಯಕ ಶುಭಮನ್‌ ಗಿಲ್‌ (Shubman Gill) ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

    ಮುಂದಿನ ಸೆ.9 ರಿಂದ ಸೆ.28ರ ವರೆಗೆ ಯುಎಇನಲ್ಲಿ ಟಿ20 ಏಷ್ಯಾಕಪ್‌ (Asia Cup 2025) ಟೂರ್ನಿ ನಡೆಯಲಿದೆ. ಅನಾರೋಗ್ಯದಿಂದ ಬಳಲುತ್ತಿರುವ ಗಿಲ್‌, ಪ್ರಸ್ತುತ ಚಂಡೀಗಢದಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಫಿಸಿಕಲ್‌ ಫಿಟ್ನೆಸ್‌ ತಜ್ಞರು ಹೇಳುವಂತೆ ಗಿಲ್‌ ಅವರು ಏಷ್ಯಾಕಪ್‌ ಟೂರ್ನಿಗೆ ಫಿಟ್‌ ಆಗುವ ನಿರೀಕ್ಷೆಯಿದೆ. ಆದ್ರೆ ಇದೇ ಆಗಸ್ಟ್‌ 28ರಿಂದ ಸೆ.15ರ ವರೆಗೆ ನಡೆಯಲಿರುವ ಪ್ರತಿಷ್ಠಿತ ದುಲೀಪ್‌ ಟ್ರೋಫಿಯಿಂದ (Duleep Trophy 2025) ಹೊರಗುಳಿಯುವ ಸಾಧ್ಯತೆಗಳಿಗೆ ಎಂದು ವರದಿಯಾಗಿದೆ. ಇದನ್ನೂ ಓದಿ: Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    ಏಷ್ಯಾಕಪ್‌ಗೆ ಭಾರತ ತಂಡ ಹೀಗಿದೆ?
    ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್‌ ಪಟೇಲ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್‌ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಹರ್ಷಿತ್‌ ರಾಣಾ, ರಿಂಕು ಸಿಂಗ್. ಇದನ್ನೂ ಓದಿ: ಟೀಂ ಇಂಡಿಯಾಗೆ ಅಯ್ಯರ್ ಒನ್‌ಡೇ ಕ್ಯಾಪ್ಟನ್? – ವದಂತಿಗಳಿಗೆ ತೆರೆ ಎಳೆದ ಬಿಸಿಸಿಐ

    ಶ್ರೇಯಸ್‌ಗೆ ಸಿಗುತ್ತಾ ಚಾನ್ಸ್‌?
    ಶುಭಮನ್‌ ಗಿಲ್‌ ಏಷ್ಯಾಕಪ್‌ ಟೂರ್ನಿ ಹೊತ್ತಿಗೆ ಸುಧಾರಣೆ ಆಗದಿದ್ದರೇ ಶ್ರೇಯಸ್‌ ಅಯ್ಯರ್‌ ಅವರಿಗೆ ಚಾನ್ಸ್‌ ಸಿಗಬಹುದಾ ಎನ್ನುವ ಪ್ರಶ್ನೆಯೂ ಎದ್ದಿದೆ. ಏಕೆಂದ್ರೆ ಸೂರ್ಯಕುಮಾರ್‌ ಯಾದವ್‌ ಕೂಡ ಶ್ರೇಯಸ್‌ ಅಯ್ಯರ್‌ ಆಯ್ಕೆ ಬಗ್ಗೆ ಆಸಕ್ತಿ ಹೊಂದಿದ್ದರು. ಆದ್ರೆ ಉತ್ತರ ವಲಯದ ಕ್ರಿಕೆಟ್‌ ಕಮಿಟಿ ಗಿಲ್‌ ಸ್ಥಾನಕ್ಕೆ ಸಂಭಾವ್ಯ ಆಟಗಾರರನ್ನಾಗಿ ಶುಭಮನ್‌ ರೊಹಿಲ್ಲಾ ಅಥವಾ ಅಂಕಿತ್‌ ಕುಮಾರ್‌ ರಣಜಿ ಆಟಗಾರರನ್ನ ಸೂಚಿಸಿದೆ ಎಂದು ತಿಳಿದುಬಂದಿದೆ.

    ಶ್ರೇಯಸ್‌ ಕ್ಯಾಪ್ಟನ್‌ ಎಂಬ ವದಂತಿ
    ಎರಡು ದಿನಗಳ ಹಿಂದಷ್ಟೇ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ಒನ್‌ಡೇ ಕ್ಯಾಪ್ಟನ್ ಆಗಿ ಮಾಡಲಾಗುತ್ತದೆ ಅನ್ನೋ ವದಂತಿಗೆ ಬಿಸಿಸಿಐ ತೆರೆ ಎಳೆದಿತ್ತು. ಇದನ್ನೂ ಓದಿ: Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ, ನಾಯಕನ ಆಯ್ಕೆ ವಿಷಯದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಇದರಲ್ಲಿ ಶ್ರೇಯಸ್ ತಪ್ಪು ಏನೂ ಇಲ್ಲ, ನಮ್ಮದೂ ತಪ್ಪಿಲ್ಲ. ಟೂರ್ನಿಗೆ 15 ಜನರನ್ನಷ್ಟೇ ಆಯ್ಕೆ ಮಾಡಲು ಅವಕಾಶವಿದೆ. ಅವಕಾಶ ಬರುವವರೆಗೆ ಕಾಯಬೇಕಾಗುತ್ತದೆ ಎಂದು ತಿಳಿಸಿದ್ದರು. ಇದೀಗ ಗಿಲ್‌ ಅನಾರೋಗ್ಯದ ಬೆನ್ನಲ್ಲೇ ಅಯ್ಯರ್‌ ಅವರತ್ತ ಅಭಿಮಾನಿಗಳ ಚಿತ್ತ ಹರಿದಿದೆ.

  • Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    ಇಸ್ಲಾಮಾಬಾದ್‌: ಬಹುನಿರೀಕ್ಷಿತ 2025ರ ಟಿ20 ಏಷ್ಯಾ ಕಪ್ (Asia Cup 2025 T20I) ಟೂರ್ನಿಗಾಗಿ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ಅಚ್ಚರಿ ತಂಡವನ್ನು ಪ್ರಕಟಿಸಿದೆ.

    ಪಾಕ್‌ ತಂಡದ ಸ್ಟಾರ್‌ ಐಕಾನ್‌ಗಳಾದ ಮೊಹಮ್ಮದ್‌ ರಿಜ್ವಾನ್‌ (Mohammad Rizwan) ಹಾಗೂ ಬಾಬರ್‌ ಆಜಂ (Babar Azam) ಮತ್ತು ಸ್ಟಾರ್‌ ವೇಗಿ ನಸೀಮ್‌ ಶಾ ಅವರನ್ನ ಹೊರದಬ್ಬಿ ಹೊಸ ಮುಖದ ನಾಯಕತ್ವದಲ್ಲಿ ಹೊಸ ತಂಡವನ್ನು ಪ್ರಕಟಿಸಿದೆ. ಇದನ್ನ ಓದಿ: Asia Cup T20 | ಏಷ್ಯಾ ಕಪ್‌ ಟೂರ್ನಿಗೆ ದಿನಾಂಕ ಪ್ರಕಟ; ಭಾರತ – ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್!

    Ind vs Pak 2

    ಸಲ್ಮಾನ್ ಅಲಿ ಅಘಾಗೆ (Salman Ali Agha) ತಂಡದ ನಾಯಕತ್ವದ ಹೊಣೆ ನೀಡಲಾಗಿದೆ. ಉಳಿದಂತೆ ಸ್ಫೋಟಕ ಬ್ಯಾಟರ್‌ ಫಖರ್‌ ಜಮಾನ್‌, ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಖುಷ್ದಿಲ್ ಶಾಗೆ ಸ್ಥಾನ ನೀಡಲಾಗಿದೆ. ಜೊತೆ‌ಗೆ ಇದೇ ಟೂರ್ನಿಯಲ್ಲಿ ಮಿಂಚಿದ ಆಫ್‌ ಸ್ಪಿನ್ನರ್‌ ಅಬ್ರಾರ್ ಅಹ್ಮದ್‌‌ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇದನ್ನ ಓದಿ: ಅನಗತ್ಯ ರನ್‌ ಕದಿಯಲು ಯತ್ನಿಸಿ ಯಡವಟ್ಟು – ಮೈದಾನದಲ್ಲೇ ಬ್ಯಾಟ್‌ ಎಸೆದು ಪಾಕ್‌ ಓಪನರ್ ಆಕ್ರೋಶ

    ಏಷ್ಯಾ ಕಪ್‌ಗೆ ಪಾಕ್‌ ತಂಡ
    ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಜಮಾನ್, ಹ್ಯಾರಿಸ್‌ ರೌಫ್‌, ಹಸನ್ ಅಲಿ, ಹಸನ್ ನವಾಜ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್-ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ನವಾಜ್, ಮೊಹಮ್ಮದ್ ನವಾಜ್ ಅಯೂಬ್, ಸಲ್ಮಾನ್ ಮಿರ್ಜಾ, ಶಾಹೀನ್ ಶಾ ಆಫ್ರಿದಿ ಮತ್ತು ಸುಫ್ಯಾನ್ ಮೊಕಿಮ್.

    ASIA CUP 1

    ಯಾವಾಗಿನಿಂದ ಏಷ್ಯಾಕಪ್‌ ಟೂರ್ನಿ
    2026ರ ಟಿ20 ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು ಈ ಬಾರಿ ಟಿ20 ಮಾದರಿಯಲ್ಲಿ ಏಷ್ಯಾಕಪ್‌ ಟೂರ್ನಿ ಆಡಿಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್‌ 9 ರಿಂದ 28ರ ವರೆಗೆ ಯುಎಇನಲ್ಲಿ ಟೂರ್ನಿ ನಡೆಯಲಿದೆ. ಇದನ್ನ ಓದಿ: 1,650 ಕೋಟಿ ವೆಚ್ಚ, 60,000 ಆಸನ ಸಾಮರ್ಥ್ಯ – ಬೆಂಗ್ಳೂರಲ್ಲಿ ತಲೆ ಎತ್ತಲಿದೆ ಚಿನ್ನಸ್ವಾಮಿಗಿಂತಲೂ ಬೃಹತ್‌ ಸ್ಟೇಡಿಯಂ

    ಜುಲೈ 24 ರಂದು ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ (Asian Cricket Council) ಟೂರ್ನಿಯ ಸ್ಥಳವನ್ನ ಅಧಿಕೃತಗೊಳಿಸಲಾಯಿತು. ಈ ಬಾರಿ ಟೂರ್ನಿಯ ಹಕ್ಕು ಬಿಸಿಸಿಐನದ್ದೇ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಆಗಿದೆ. ಆದ್ರೆ ಭಾರತ ಮತ್ತು ಪಾಕ್‌ ನಡುವಿನ ಉದ್ವಿಗ್ನತೆಯಿಂದಾಗಿ 2027ರ ವರೆಗೂ ತಟಸ್ಥ ಸ್ಥಳಗಳಲ್ಲಿ ಟೂರ್ನಿ ನಡೆಸಲು ನಿರ್ಧರಿಸಲಾಗಿದೆ. ಸೆ.9 ರಿಂದ ಸೆ.28ರ ವರೆಗೆ ಟೂರ್ನಿ ನಿಗದಿಯಾಗಿದ್ದು, ಭಾರತ ಮತ್ತು ಪಾಕ್‌ ನಡುವಿನ ಪಂದ್ಯ ಸೆ.14ರಂದು ನಡೆಯಲಿದೆ.

    ಈ ಬಾರಿ 8 ತಂಡಗಳು
    ಇಷ್ಟು ವರ್ಷ 6 ತಂಡಗಳ ನಡುವೆ ನಡೆಯುತ್ತಿದ್ದ ಹಣಾಹಣಿ ಈ ಬಾರಿ 8 ತಂಡಗಳ ನಡುವೆ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಇರಲಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಭಾರತ ಮತ್ತು ಪಾಕಿಸ್ತಾನ (Ind vs Pak) ತಂಡಗಳು ಮೂರು ಬಾರಿ ಮುಖಾಮುಖಿಯಾಗುವ ಸಾಧ್ಯತೆಗಳೂ ಇವೆ. ಲೀಗ್‌ ಹಂತ, ಸೂಪರ್‌ ಸಿಕ್ಸ್‌ ಹಾಗೂ ಪ್ರಶಸ್ತಿ ಸುತ್ತಿಗೆ ತಲುಪಿದ್ರೆ ಮೂರು ಬಾರಿ ಮುಖಾಮುಖಿ ಆಗುವ ಸಾಧ್ಯತೆಗಳು ಇವೆ.

    ಕಳೆದ ಬಾರಿ ಪಾಕ್‌ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ಏಕದಿನ ಮಾದರಿಯಲ್ಲಿ ಏಷ್ಯಾಕಪ್‌ ಟೂರ್ನಿ ನಡೆದಿತ್ತು. ಭಾರತ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಇದನ್ನ ಓದಿ: ಖ್ಯಾತ ಉದ್ಯಮಿಯ ಮೊಮ್ಮಗಳ ಜೊತೆ ಅರ್ಜುನ್‌ ತೆಂಡ್ಕೂಲರ್‌ ಎಂಗೇಜ್‌