Tag: t20 cricket

  • Ind vs Aus T20I | ಮೊದಲ ಪಂದ್ಯ ಮಳೆಯಾಟಕ್ಕೆ ಬಲಿ – ಭಾರತಕ್ಕೆ ನಿರಾಸೆ

    Ind vs Aus T20I | ಮೊದಲ ಪಂದ್ಯ ಮಳೆಯಾಟಕ್ಕೆ ಬಲಿ – ಭಾರತಕ್ಕೆ ನಿರಾಸೆ

    ಕ್ಯಾನ್ಬೆರಾ: ಭಾರತ ಮತ್ತು ಆಸ್ಟ್ರೇಲಿಯಾ (Ind vs AUS) ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮಳೆಯಾಟವೇ ಮೇಲಾಗಿದೆ. ನಿರಂತರ ಮಳೆ (Rain) ಸುರಿಯುತ್ತಿದ್ದ ಕಾರಣ ಇಂದಿನ ಪಂದ್ಯವನ್ನ ರದ್ದುಗೊಳಿಸಲಾಗಿದೆ.

    ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ ಟಿ20 ಸರಣಿ ಇಂದಿನಿಂದ ಶುರುವಾಗಿದ್ದು, ಮೊದಲ ಪಂದ್ಯ ಮಳೆಗೆ ಬಲಿಯಾಗಿದೆ. ಕ್ಯಾನ್ಬೆರಾದ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 35 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡಿತು. 5 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 43 ರನ್‌ ಗಳಿಸಿದ್ದಾಗ ಮೊದಲ ಬಾರಿಗೆ ಮಳೆ ಶುರುವಾಯ್ತು. ಕೆಲ ಕಾಲ ಬಿಡುವು ಕೊಟ್ಟಿತ್ತು. ಇದನ್ನೂ ಓದಿ: ಆಸೀಸ್‌ ವಿರುದ್ಧ 2 ಸಿಕ್ಸರ್‌ ಸಿಡಿಸಿ ವಿಶೇಷ ದಾಖಲೆ ಬರೆದ ಸೂರ್ಯ

    ಮತ್ತೆ ಬ್ಯಾಟಿಂಗ್‌ ಶುರು ಮಾಡಿದ ಗಿಲ್‌, ಸೂರ್ಯಕುಮಾರ್‌ ಯಾದವ್‌ (Suryakumar Yadav) ಜೋಡಿ ಆಸೀಸ್‌ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿತು. 10ನೇ ಓವರ್‌ನ ಮೊದಲ 4 ಎಸೆತಗಳಲ್ಲೇ ವೇಗಿ ನಾಥನ್‌ ಎಲ್ಲಿಸ್‌ಗೆ ಸೂರ್ಯ 15 ರನ್‌ ಬಾರಿಸಿದ್ದರು. ಇದರೊಂದಿಗೆ ಭಾರತ ಬೃಹತ್‌ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿತ್ತು. ಅಲ್ಲದೇ ಪಂದ್ಯ ಗೆಲ್ಲುವ ವಿಶ್ವಾಸವೂ ಇತ್ತು. ಆದ್ರೆ ಮಳೆಯ ಬಿಡುವುಕೊಡದ ಹಿನ್ನೆಲೆ ಪಂದ್ಯವನ್ನು ಯಾವುದೇ ಫಲಿತಾಂಶವಿಲ್ಲದೇ ರದ್ದುಗೊಳಿಸಲಾಯಿತು. ಅಕ್ಟೋಬರ್‌ 31ರ ಶುಕ್ರವಾರ ಮೆಲ್ಬರ್ನ್‌ ಕ್ರೀಡಾಂಗಣದಲ್ಲಿ 2ನೇ ಟಿ20 ಪಂದ್ಯ ನಡೆಯಲಿದೆ. ಇದನ್ನೂ ಓದಿ: ICC ODI Rankings | ನಿವೃತ್ತಿ ವದಂತಿ ನಡುವೆಯೂ ನಂ.1 ಪಟ್ಟಕ್ಕೇರಿದ ಹಿಟ್‌ಮ್ಯಾನ್‌

    ಭಾರತದ ಪರ ಆರಂಭಿಕ ಅಭಿಷೇಕ್‌ ಶರ್ಮಾ 19 ರನ್‌ ಗಳಿಸಿ ಔಟಾದ್ರೆ, ನಾಯಕ ಸೂರ್ಯಕುಮಾರ್‌ ಯಾದವ್‌ 39 ರನ್‌ (24 ಎಸೆತ, 2 ಸಿಕ್ಸರ, 3 ಬೌಂಡರಿ), ಶುಭಮನ್‌ ಗಿಲ್‌ 37 ರನ್‌ (20 ಎಸೆತ, 1 ಸಿಕ್ಸರ್‌, 4 ಬೌಂಡರಿ) ಗಳಿಸಿ ಅಜೇಯರಾಗುಳಿದರು.

  • ಆಸೀಸ್‌ ವಿರುದ್ಧ 2 ಸಿಕ್ಸರ್‌ ಸಿಡಿಸಿ ವಿಶೇಷ ದಾಖಲೆ ಬರೆದ ಸೂರ್ಯ

    ಆಸೀಸ್‌ ವಿರುದ್ಧ 2 ಸಿಕ್ಸರ್‌ ಸಿಡಿಸಿ ವಿಶೇಷ ದಾಖಲೆ ಬರೆದ ಸೂರ್ಯ

    ಕ್ಯಾನ್ಬೆರಾ: ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 2 ಭರ್ಜರಿ ಸಿಕ್ಸರ್‌ ಸಿಡಿಸುವ ಮೂಲಕ ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav) ವಿಶೇಷ ದಾಖಲೆ ಬರೆದಿದ್ದಾರೆ.

    ಹೌದು. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಇಂದು ಭಾರತ ಆಡುತ್ತಿದೆ. ಕ್ಯಾನ್ಬೆರಾದ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ (Team India) 9.4 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 97 ರನ್‌ ಗಳಿಸಿದೆ. ಬಳಿಕ ಪಂದ್ಯಕ್ಕೆ ಮಳೆ ಅಡ್ಡಿಯಾಯಿತು. ಇದನ್ನೂ ಓದಿ: ICC ODI Rankings | ನಿವೃತ್ತಿ ವದಂತಿ ನಡುವೆಯೂ ನಂ.1 ಪಟ್ಟಕ್ಕೇರಿದ ಹಿಟ್‌ಮ್ಯಾನ್‌

    ಕ್ರೀಸ್‌ಗಿಳಿದ ಬೆನ್ನಲ್ಲೇ ಜೋಶ್‌ ಹೇಜಲ್ವುಡ್‌ಗೆ ಮೊದಲ ಸಿಕ್ಸರ್‌ (Sixes) ಬಾರಿಸಿದ ಸೂರ್ಯ 10 ಓವರ್‌ನ 3ನೇ ಎಸೆತದಲ್ಲಿ ನಾಥನ್‌ ಎಲ್ಲಿಸ್‌ಗೆ‌ ಭರ್ಜರಿ ಸಿಕ್ಸರ್‌ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 150 ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚಿ ಸಿಕ್ಸರ್‌ ಸಿಡಿಸಿದ ವಿಶ್ವದ 5ನೇ ಬ್ಯಾಟರ್‌ ಹಾಗೂ ಭಾರತದ 2ನೇ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 205 ಸಿಕ್ಸರ್‌ ಸಿಡಿಸಿರುವ ರೋಹಿತ್‌ ಶರ್ಮಾ ಅಗ್ರಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ವೈಯಕ್ತಿಕ ಹಗೆತನಕ್ಕೆ ಬಲಿಯಾಗ್ತಿದೆಯೇ ಟೀಂ ಇಂಡಿಯಾ – ಇನ್ನೂ ಮುಗಿದಿಲ್ವಾ ಕೊಹ್ಲಿ-ಗಂಭೀರ್‌ ಮುನಿಸು?

    T20I ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ವಿಶ್ವದ ಟಾಪ್‌-5 ಬ್ಯಾಟರ್ಸ್‌
    * ರೋಹಿತ್‌ ಶರ್ಮಾ – 159 ಪಂದ್ಯ – 205 ಸಿಕ್ಸರ್‌
    * ಮೊಹಮ್ಮದ್‌ ವಸೀಮ್‌ – 91 ಪಂದ್ಯ – 187 ಸಿಕ್ಸರ್
    * ಮಾರ್ಟಿನ್‌ ಗಪ್ಟಿಲ್‌ – 122 ಪಂದ್ಯ – 173 ಸಿಕ್ಸರ್
    * ಜೋಸ್‌ ಬಟ್ಲರ್‌ – 144 ಪಂದ್ಯ – 172‌ ಸಿಕ್ಸರ್‌
    * ಸೂರ್ಯಕುಮಾರ್‌ ಯಾದವ್‌ – 91 ಪಂದ್ಯ – 150 ಸಿಕ್ಸರ್‌

  • ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌

    ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌

    ನವದೆಹಲಿ: ಭಾರತ (India) ಮತ್ತು ಪಾಕಿಸ್ತಾನ (Pakistan) ನಡುವಿನ ಬಹುನಿರೀಕ್ಷಿತ ಟಿ-20 ಕ್ರಿಕೆಟ್ ಪೈಪೋಟಿ ಮತ್ತೆ ಆರಂಭವಾಗಲಿದ್ದು ಜುಲೈ 20 ರಂದು ಎರಡು ತಂಡಗಳು ಮುಖಾಮುಖಿಯಾಗಲಿವೆ.

    ಟೂರ್ನಿಯಲ್ಲಿ ಟೀಂ ಇಂಡಿಯಾದ (Team India) ಸದಸ್ಯರು ಆಡುತ್ತಿಲ್ಲ. ಬದಲಾಗಿ ಟೀ ಇಂಡಿಯಾಗೆ ನಿವೃತ್ತಿ ಹೇಳಿದ ಹಿರಿಯ ಆಟಗಾರರು ಆಡಲಿದ್ದಾರೆ.

    ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 ರ (World Championship of Legends) ಭಾಗವಾಗಿ ಭಾರತ ಚಾಂಪಿಯನ್ಸ್ ಮತ್ತು ಪಾಕಿಸ್ತಾನ ಚಾಂಪಿಯನ್ಸ್ ಮಧ್ಯೆ ಜುಲೈ 20 ರಂದು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಲೀಗ್‌ ಪಂದ್ಯ ನಡೆಯಲಿದೆ.

    ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ನ ಎರಡನೇ ಆವೃತ್ತಿಯು ಜುಲೈ 18 ರಂದು ಪ್ರಾರಂಭವಾಗಲಿದ್ದು ಯುವರಾಜ್ ಸಿಂಗ್ ಭಾರತ ತಂಡವನ್ನು ಮುನ್ನಡೆಸಲಿದ್ದರೆ ಯೂನಿಸ್ ಖಾನ್ ಪಾಕಿಸ್ತಾನ ಚಾಂಪಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.  ಇದನ್ನೂ ಓದಿ: ನಾನು ಮಹಿಳಾ ಕ್ರಿಕೆಟ್‌ಗೆ ಅರ್ಹಳು: ಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳನ್ನು ಸೇರಿಸಿಕೊಳ್ಳುವಂತೆ ICC, BCCIಗೆ ಅನಯಾ ಮನವಿ

    ಕಳೆದ ವರ್ಷ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಿ ಆರಂಭಗೊಂಡಿತ್ತು. ಫೈನಲಿನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಭಾರತ 5 ವಿಕೆಟ್‌ ಜಯ ಸಾಧಿಸಿ ಕಪ್‌ ಗೆದ್ದಿತ್ತು. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌, ಪಾಕಿಸ್ತಾನ, ವೆಸ್ಟ್‌ ಇಂಡೀಸ್‌ನ ಹಿರಿಯ ಆಟಗಾರರು ಈ ಟೂರ್ನಿಯಲ್ಲಿ ಭಾಗವಹಿಸುತ್ತಾರೆ.

    ಭಾರತ ಚಾಂಪಿಯನ್ಸ್ ತಂಡ: ಯುವರಾಜ್ ಸಿಂಗ್ (ನಾಯಕ), ಸುರೇಶ್ ರೈನಾ, ರಾಬಿನ್ ಉತ್ತಪ್ಪ, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ್, ಪಾರ್ಥಿವ್ ಪಟೇಲ್, ವಿನಯ್ ಕುಮಾರ್, ಹರ್ಭಜನ್ ಸಿಂಗ್, ಪ್ರಗ್ಯಾನ್ ಓಜಾ, ಯೂಸುಫ್ ಪಠಾಣ್, ನಮನ್ ಓಜಾ, ಮುನಾಫ್ ಪಟೇಲ್, ರಿತಿಂದರ್ ಸಿಂಗ್ ಸೋಧಿ, ಆರ್‌ಪಿ ಸಿಂಗ್, ಅಶೋಕ್ ದಿಂಡಾ.

    ಪಾಕಿಸ್ತಾನ ಚಾಂಪಿಯನ್ಸ್ ತಂಡ: ಯೂನಿಸ್ ಖಾನ್ (ನಾಯಕ), ಶಾಹಿದ್ ಅಫ್ರಿದಿ, ಶೋಯೆಬ್ ಮಲಿಕ್, ಮಿಸ್ಬಾ-ಉಲ್-ಹಕ್, ಇಮ್ರಾನ್ ನಜೀರ್, ಮೊಹಮ್ಮದ್ ಹಫೀಜ್, ಕಮ್ರಾನ್ ಅಕ್ಮಲ್, ಸಲ್ಮಾನ್ ಬಟ್, ಅಬ್ದುಲ್ ರಜಾಕ್, ವಹಾಬ್ ರಿಯಾಜ್, ಮೊಹಮ್ಮದ್ ಆಮಿರ್, ಯಾಸಿರ್ ಅರಾಫತ್, ಸೊಹೈಲ್ ತನ್ವೀರ್, ಸಯೀದ್ ಅಜ್ಮಲ್, ಉಮರ್ ಗುಲ್.

  • ಚಿಕ್ಕಬಳ್ಳಾಪುರ | ಲಂಕಾಗೆ ಲಗಾಮು ಹಾಕಿದ ಭಾರತ – 6 ರನ್‌ಗಳ ರೋಚಕ ಜಯ

    ಚಿಕ್ಕಬಳ್ಳಾಪುರ | ಲಂಕಾಗೆ ಲಗಾಮು ಹಾಕಿದ ಭಾರತ – 6 ರನ್‌ಗಳ ರೋಚಕ ಜಯ

    – ಟಿ20 ಪಂದ್ಯದಲ್ಲಿ ಮಿಂಚಿದ ನಮನ್ ಓಜಾ-ವೆಂಕಟೇಶ್ ಪ್ರಸಾದ್

    ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿರುವ ಸಾಯಿಕೃಷ್ಣನ್ ಕ್ರೀಡಾಂಗಣದಲ್ಲಿ ನಡೆದ ʻವಸುಧೈವ ಕುಟುಂಬಕಂʼ ತತ್ವದಡಿ ನಡೆದ ʻಒಂದು ಜಗತ್ತು-ಒಂದು ಕುಟುಂಬʼ ಕಪ್‌ನ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಶ್ರೀಲಂಕಾ (Sri Lanka) ವಿರುದ್ಧ ಭಾರತ ಗೆದ್ದು ಬೀಗಿದೆ.

    ಯುವಮಾನವತವಾದಿ ಶ್ರೀ ಸದ್ಗುರು ಮಧುಸೂದನಸಾಯಿ ಆಯೋಜನೆ ಮಾಡಿದ್ದ ʻಒನ್ ವರ್ಲ್ಡ್-ಒನ್ ಫ್ಯಾಮಿಲಿʼ ಕಪ್‌ಗಾಗಿ ಭಾರತ (Team India) ಹಾಗೂ ಶ್ರೀಲಂಕಾ ನಿವೃತ್ತ ಕ್ರಿಕೆಟ್ ಆಟಗಾರರು ಈ ಪಂದ್ಯದಲ್ಲಿ ಸೆಣಸಾಟ ನಡೆಸಿದ್ರು. ಇದನ್ನೂ ಓದಿ: ಚಾಂಪಿಯನ್ಸ್‌ ಟ್ರೋಫಿ ಹೊತ್ತಲ್ಲೇ ಆಸೀಸ್‌ಗೆ ದೊಡ್ಡ ಆಘಾತ – ಏಕದಿನ ಕ್ರಿಕೆಟ್‌ಗೆ ಸ್ಟೋಯ್ನಿಸ್‌ ಗುಡ್‌ಬೈ

    ಭಾರತ ತಂಡದಲ್ಲಿ ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ನಮನ್ ಒಜಾ, ಎಸ್.ಬದ್ರೀನಾಥ್, ಅಶೋಕ್ ದಿಂಡಾ, ಪಿಯೂಷ್ ಚಾವ್ಲಾ, ವೆಂಕಟೇಶ್ ಪ್ರಸಾದ್, ಸುನಿಲ್ ಜೋಷಿ, ಪಾಥೀವ್ ಪಟೇಲ್, ಸುಜಿತ್ ಸೋಮಸುಂದರ್, ಮನೋಜ್ ತಿವಾರಿ, ಸ್ಟುವರ್ಟ್ ಬಿನ್ನಿ, ಅಭಿಮನ್ಯು ಮಿಥುನ್ ಭಾಗವಹಿಸಿದ್ದರು.

    ಇನ್ನೂ ಶ್ರೀಲಂಕಾ ತಂಡದಿಂದ ನಾಯಕ ಮಾರ್ವಿನ್‌ ಅಟಪಟ್ಟು, ಉಪಲ್ ತರಂಗ, ರೋಮೇಶ್, ಮಿಲಿಂಡಾ, ಅಸೆಲಾ, ಅರವಿಂದ ಡಿ ಸಿಲ್ವಾ, ನೂವಾನ್, ಅಜೆಂತಾ ಮೆಂಡಿಸ್, ತಿಲಾನ್, ಮುತ್ತಯ್ಯ ಮುರಳೀಧರನ್ ಪಾಲ್ಗೊಂಡಿದ್ದರು. ಇದನ್ನೂ ಓದಿ: ಟೀಂ ಇಂಡಿಯಾದ ಆಲ್‌ರೌಂಡರ್‌ ಆಟ – ಇಂಗ್ಲೆಂಡ್‌ ವಿರುದ್ಧ 4 ವಿಕೆಟ್‌ಗಳ ಜಯ

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತ್ತು. ಟೀಂ ಇಂಡಿಯಾ ಪರ ಯೂಸೂಫ್ ಪಠಾಣ್ 32 ಎಸೆತಗಳಲ್ಲಿ ಸ್ಫೋಟಕ 61 ರನ್ ಗಳಿಸಿದ್ದು, ನಮನ್ ಒಜಾ 27 ಎಸೆತಗಳಲ್ಲಿ 53 ರನ್ ಚಚ್ಚಿದರು. ಇನ್ನೂ 196 ರನ್‌ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡ 20 ಓವರ್‌ಗಳಲ್ಲಿ 189 ರನ್‌ ಗಳಿಸಿ ವಿರೋಚಿತ ಸೋಲು ಕಂಡಿತು.

    ಲಂಕಾ ತಂಡ ಉತ್ತಮ ಆರಂಭ ಪಡೆದರು ಬಳಿಕ ಟೀಂ ಇಂಡಿಯಾ ವೇಗಿಗಳ ಆರ್ಭಟಕ್ಕೆ ಸಿಲುಕಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು. ಇದನ್ನೂ ಓದಿ: 10 ಸಾವಿರ ಸಾಲ.. ಒಂದೂವರೆ ಲಕ್ಷ ಬಡ್ಡಿ – ಮೈಕ್ರೋ ಫೈನಾನ್ಸ್‌ ಬೆನ್ನಲ್ಲೇ ಮೀಟರ್ ಬಡ್ಡಿ ಹಾವಳಿ

  • ಇದು ಚರಿತ್ರೆ ಸೃಷ್ಟಿಸೊ ಅವತಾರ – U19 ಮಹಿಳಾ T20 ವಿಶ್ವಕಪ್‌ನಲ್ಲಿ ಚೊಚ್ಚಲ ಶತಕ, ಭಾರತದ ತ್ರಿಶಾ ಗೊಂಗಡಿ ದಾಖಲೆ

    ಇದು ಚರಿತ್ರೆ ಸೃಷ್ಟಿಸೊ ಅವತಾರ – U19 ಮಹಿಳಾ T20 ವಿಶ್ವಕಪ್‌ನಲ್ಲಿ ಚೊಚ್ಚಲ ಶತಕ, ಭಾರತದ ತ್ರಿಶಾ ಗೊಂಗಡಿ ದಾಖಲೆ

    ಕೌಲಾಲಂಪುರ್‌: ಕ್ರಿಕೆಟ್‌ ಮೈದಾನದಲ್ಲಿ ಆಟಗಾರರು ದಿನವೂ ಒಂದೊಂದೇ ಯಶಸ್ವಿನ ಮೆಟ್ಟಿಲನ್ನು ಹತ್ತುತ್ತಲೇ ಇರುತ್ತಾರೆ. ಯಾವುದೇ ವಯೋಮಿತಿಯ ಕ್ರಿಕೆಟ್‌ ನಡೆದರೂ ಸಹ ಅಲ್ಲಿ ದಾಖಲೆ ಬರೆಯುವುದು ಕಟ್ಟಿಟ್ಟ ಬುತ್ತಿ. ಹಾಗೆಯೇ ಮಲೇಷ್ಯಾದಲ್ಲಿ ನಡೆಯುತ್ತಿರುವ ಅಂಡರ್‌-19 ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ವನಿತೆ ವಿಶ್ವದಾಖಲೆ ಬರೆದಿದ್ದಾರೆ.

    ಇಂದು ಮಲೇಷ್ಯಾದ ಕೌಲಾಲಂಪುರ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಅಂಗಳದಲ್ಲಿ ಸ್ಕಾಟ್‌ಲೆಂಡ್‌ ಅಂಡರ್‌-19 ಮಹಿಳಾ ತಂಡದ (Scotland Womens Team) ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ್ತಿ ತ್ರಿಶಾ ಗೊಂಗಡಿ (Gongadi Trisha) ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 53 ಎಸೆತಗಳಲ್ಲೇ ಶತಕ ಸಿಡಿಸಿದ ತ್ರಿಶಾ ಗೊಂಗಡಿ ಅಂಡರ್‌-19 ಟಿ20 ವಿಶ್ವಕಪ್‌ ಇತಿಹಾಸದಲ್ಲಿ ವಿಶ್ವದಲ್ಲೇ ಮೊದಲ ಬಾರಿಗೆ ಶತಕ ಸಿಡಿಸಿದ ಸಾಧನೆಗೆ ಪಾತ್ರರಾಗಿದ್ದಾರೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಗೊಂಗಡಿ ಕೇವಲ 53 ಎಸೆತಗಳಲ್ಲೇ ಶತಕ ಸಿಡಿಸಿದರು. 186.44 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ತ್ರಿಶಾ ತಾನು ಎದಿರಿಸಿದ 59 ಎಸೆತಗಳಲ್ಲಿ 13 ಬೌಂಡರಿ, 4 ಸಿಕ್ಸರ್‌ ಸೇರಿ 110 ರನ್‌ ಸಿಡಿಸಿ ಅಜೇಯರಾಗುಳಿದರು.

    ಇದರೊಂದಿಗೆ ಮತ್ತೋರ್ವ ಆರಂಭಿಕ ಆಟಗಾರ್ತಿ ಜಿ ಕಮಲಿನಿ (G Kamalini) 42 ಎಸೆತಗಳಲ್ಲಿ 9 ಬೌಂಡರಿಗಳೊಂದಿಗೆ ಜವಾಬ್ದಾರಿಯುತ 51 ರನ್‌ ಕೊಡುಗೆ ನೀಡಿದರು. ಉಳಿದಂತೆ ಸಾನಿಕಾ ಚಲ್ಕೆ 29 ರನ್‌ಗಳಿಸಿದ್ರೆ, ವೈಡ್‌, ನೋಬಾಲ್‌ನಿಂದಲೇ ಹೆಚ್ಚುವರಿ 18 ರನ್‌ ತಂಡಕ್ಕೆ ಸೇರ್ಪಡೆಯಾಯಿತು.

    209 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಸ್ಕಾಟ್‌ಲೆಂಡ್‌ ಮಹಿಳಾ ತಂಡ 14 ಓವರ್‌ಗಳಲ್ಲಿ ಕೇವಲ 58 ರನ್‌ಗಳಿಗೆ ಸರ್ವಪತನ ಕಂಡಿತು. ಪರಿಣಾಮ ಭಾರತದ ವನಿತೆಯರು 150 ರನ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಕಂಡಿತು.

  • 20 ಓವರ್‌ಗಳಲ್ಲಿ 37 ಸಿಕ್ಸರ್‌, 349 ರನ್‌ – ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ

    20 ಓವರ್‌ಗಳಲ್ಲಿ 37 ಸಿಕ್ಸರ್‌, 349 ರನ್‌ – ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ

    ಮುಂಬೈ: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಗ್ರೂಪ್-ಬಿ ಪಂದ್ಯದಲ್ಲಿ ಬರೋಡಾ (Baroda), ಸಿಕ್ಕಿಂ ತಂಡದ ವಿರುದ್ಧ ರನ್‌ ರಣಮಳೆಯನ್ನೇ ಸುರಿಸಿದೆ.

    ಇಂದೋರ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಕೃನಾಲ್‌ ಪಾಂಡ್ಯ ನಾಯಕತ್ವದ ಬರೋಡಾ ತಂಡ 20 ಓವರ್‌ನಲ್ಲಿ ಬರೋಬ್ಬರಿ 349 ರನ್‌ ಸಿಡಿಸಿ ವಿಶ್ವ ದಾಖಲೆ ಬರೆದಿದೆ. ಆರಂಭಿಕರಾಗಿ ಕಣಕ್ಕಿಳಿದ ಬರೋಡಾದ ಶಾಶ್ವತ್ ರಾವತ್ ಹಾಗೂ ಅಭಿಮನ್ಯು ಸಿಂಗ್ 92 ರನ್‌ ಗಳ ಜೊತೆಯಾಟ ನೀಡಿ ಸ್ಫೋಟಕ ಆರಂಭ ನೀಡಿದರು. ಇದರಲ್ಲಿ ಅಭಿಮನ್ಯು 17 ಎಸೆತಗಳಲ್ಲಿ 53 ರನ್‌ ಬಾರಿಸಿದ್ರೆ, ಶಾಶ್ವತ್‌ 16 ಎಸೆತಗಳಲ್ಲಿ 43 ರನ್ ಸಿಡಿಸಿದರು.

    ಇವರಿಬ್ಬರ ವಿಕೆಟ್‌ ಪತನಗೊಳ್ಳುತ್ತಿದ್ದಂತೆ ಕ್ರೀಗಿಳಿದ ಭಾನು ಪಾನಿಯಾ (Bhanu Pani) ಭರ್ಜರಿ ಸಿಕ್ಟರ್‌ ಬೌಂಡರಿಗಳ ಮಳೆ ಸುರಿಸಿದರು. ತಾನು ಎದುರಿಸಿದ 51 ಎಸೆಯಗಳಲ್ಲಿ 15 ಭರ್ಜರಿ ಸಿಕ್ಸರ್‌, 5 ಬೌಂಡರಿ ಸೇರಿ 262.74 ಸ್ಟ್ರೈಕ್‌ರೇಟ್‌ನೊಂದಿಗೆ ಅಜೇಯ 134 ರನ್‌ ಚಚ್ಚಿದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಟೆಕ್ವಾಂಡೋ ಸ್ಪರ್ಧೆ: ಪಾಣೆಮಂಗಳೂರಿನ‌ ಆಯಿಶಾ ಹಫೀಝ್‌ಗೆ ಚಿನ್ನ

    ಇದರೊಂದಿಗೆ ಜೊತೆಯಾದ ಶಿವಾಲಿಕ್ ಶರ್ಮಾ 17 ಎಸೆತಗಳಲ್ಲಿ 6 ಸಿಕ್ಸರ್‌ ಗಳನ್ನು ಬಾರಿಸಿ 55 ರನ್‌ ಗಳಿಸಿದರು. ಇನ್ನಿಂಗ್ಸ್‌ನ ಕೆಲ ಓವರ್‌ ಬಾಕಿ ಇರುವಾಗ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟರ್ ವಿಷ್ಣು ಸೋಲಂಕಿ 16 ಎಸೆತಗಳಲ್ಲಿ 6 ಸಿಕ್ಸರ್​​ಗಳೊಂದಿಗೆ 50 ರನ್ ಬಾರಿಸಿದರು.

    ಒಟ್ಟಾರೆಯಾಗಿ ಬರೋಡಾ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 349 ರನ್‌ ಪೇರಿಸಿತು. ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ್ದ ಸಿಕ್ಕಿಂ ತಂಡ 20 ಓವರ್‌ಗಳಲ್ಲಿ ಕೇವಲ 86 ರನ್‌ಗಳಿಸಿ 7 ವಿಕೆಟ್‌ ಕಳೆದುಕೊಂಡು 263 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಡಿ.22 ರಂದು ಹಸೆಮಣೆ ಏರಲಿದ್ದಾರೆ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು

    ಈ ಹಿಂದೆ (2024 ರಲ್ಲಿ) ಜಿಂಬಾಬ್ಬೆ ತಂಡ ಗಾಂಬಿಯಾ ವಿರುದ್ಧದ ಪಂದ್ಯದಲ್ಲಿ ತಂಡವು 344 ರನ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿತ್ತು. ಇದಕ್ಕೂ ಮುನ್ನ ನೇಪಾಳ ತಂಡ ಮಂಗೋಲಿಯಾ ವಿರುದ್ಧ ಹ್ಯಾಂಗ್‌ಝೌ (2023ರಲ್ಲಿ) 314/3 ರನ್‌ ಗಳಿಸಿತ್ತು.

    ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್‌ ಗಳಿಸಿದ ಟಾಪ್‌-5 ತಂಡಗಳು
    * ಜಿಂಬಾಬ್ವೆ – 344 ರನ್‌
    * ನೇಪಾಳ – 314 ರನ್‌
    * ಭಾರತ – 297 ರನ್‌
    * ಜಿಂಬಾಬ್ವೆ – 286 ರನ್‌
    * ಭಾರತ – 283 ರನ್‌

  • ಟೀಂ ಇಂಡಿಯಾ ಆರ್ಭಟಕ್ಕೆ ದಾಖಲೆಗಳು ಧೂಳಿಪಟ – ನಿಜಕ್ಕೂ ಇದು ಬೆಂಕಿ ಟೀಂ ಎಂದ ಸೂರ್ಯ!

    ಟೀಂ ಇಂಡಿಯಾ ಆರ್ಭಟಕ್ಕೆ ದಾಖಲೆಗಳು ಧೂಳಿಪಟ – ನಿಜಕ್ಕೂ ಇದು ಬೆಂಕಿ ಟೀಂ ಎಂದ ಸೂರ್ಯ!

    ಹೈದರಾಬಾದ್‌: ಬಾಂಗ್ಲಾ ವಿರುದ್ಧ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಅಬ್ಬರಿಸಿದ ಟೀಂ ಇಂಡಿಯಾ (Team India) ಹಲವು ದಾಖಲೆಗಳನ್ನು ನುಚ್ಚುನೂರು ಮಾಡಿತು.

    ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ (ಅಕ್ಟೋಬರ್‌ 12) ನಡೆದ ಪಂದ್ಯವು ನಿಜಕ್ಕೂ ಕ್ರಿಕೆಟ್‌ ಅಭಿಮಾನಿಗಳ ಪಾಲಿಗೆ ಹಬ್ಬವಾಗಿತ್ತು. ಭಾರತದ ಬ್ಯಾಟರ್‌ಗಳ ಅಬ್ಬರಕ್ಕೆ ದಾಖಲೆಗಳು ಧೂಳಿಪಟ ಆದವು. ಮೊದಲ ಓವರ್‌ನಿಂದಲೇ ಅಬ್ಬರಿಸಲು ಶುರು ಮಾಡಿದ ಸಂಜು ಸ್ಯಾಮ್ಸನ್‌‌ (Sanju Samson), ಸಿಕ್ಸರ್, ಬೌಂಡರಿಗಳೊಂದಿಗೆ ಶತಕ ಸಿಡಿಸಿ ಮೆರೆದಾಡಿದರು. ಈ ಮೂಲಕ ಟಿ20 ಕ್ರಿಕೆಟ್‌ ಶತಕ ಸಿಡಿಸಿದ ಮೊದಲ ವಿಕೆಟ್‌ ಕೀಪರ್‌ ಎನಿಸಿಕೊಂಡರು. ಜೊತೆಗೆ ಟಿ20 ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ ಶತಕ ಸಿಡಿಸಿದ 2ನೇ ಭಾರತೀಯ ಬ್ಯಾಟರ್‌ ಸಹ ಎನಿಸಿಕೊಂಡರು.

    ವಿಶ್ವದ 2ನೇ ಗರಿಷ್ಠ ರನ್‌:
    20 ಓವರ್‌ಗಳಲ್ಲಿ 297 ರನ್‌ ಗಳಿಸಿದ ಭಾರತ ತಂಡವು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (T20I Cricket) ಗಳಿಸಿದ 2ನೇ ಗರಿಷ್ಠ ಸ್ಕೋರ್‌ ಆಯಿತು. 2023ರ ಏಷ್ಯನ್‌ ಗೇಮ್ಸ್‌ನಲ್ಲಿ ನೇಪಾಳ ತಂಡವು ಮಂಗೋಲಿಯಾ ವಿರುದ್ಧ 314 ರನ್‌ ಗಳಿಸಿರುವುದು ಈವರೆಗಿನ ದಾಖಲೆ. ಇದನ್ನೂ ಓದಿ: 6,6,6,6,6: ಒಂದೇ ಓವರ್‌ನಲ್ಲಿ 5 ಸಿಕ್ಸರ್‌ ಸಿಡಿಸಿ ಅಬ್ಬರಿಸಿದ ಸ್ಯಾಮ್ಸನ್‌

    ಅಲ್ಲದೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮೊದಲ 10 ಓವರ್‌ಗಳಲ್ಲಿ ಅತಿಹೆಚ್ಚು ರನ್‌ ಗಳಿಸಿದ, ಅತಿವೇಗವಾಗಿ 100, 150, 200, 250 ರನ್‌ ಗಳಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಯಿತು. ಜೊತೆಗೆ ಇನ್ನಿಂಗ್ಸ್‌ವೊಂದರಲ್ಲಿ ಅತಿಹೆಚ್ಚು ಸಿಕ್ಸರ್‌ ಡಿಸಿದ ಖ್ಯಾತಿಯನ್ನೂ ತನ್ನದಾಗಿಸಿಕೊಂಡಿತು.  ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ -‌ ಕಿಂಗ್‌ ಕೊಹ್ಲಿಗೆ ಸರಿಸಮನಾಗಿ ನಿಂತ ಮಿಸ್ಟರ್‌ 360

    ಕ್ಲೀನ್‌ಸ್ವೀಪ್‌ ಸಾಧನೆ:
    ಬಾಂಗ್ಲಾದೇಶ ವಿರುದ್ಧ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಅತಿಹೆಚ್ಚು ಬಾರಿ ಕ್ಲೀನ್‌ ಸ್ವೀಪ್‌ ಸಣಿ ಗೆದ್ದ ಸಾಧನೆಯೂ ಮಾಡಿತು. 34 ಸರಣಿಗಳ ಪೈಕಿ ಭಾರತ 10 ಸರಣಿಗಳನ್ನು ಕ್ಲೀನ್‌ ಸ್ವೀಪ್‌ ಮಾಡಿ ಭಾರತ ಅಗ್ರಸ್ಥಾನಲ್ಲಿದೆ. ಇನ್ನುಳಿದಂತೆ ಪಾಕಿಸ್ತಾನ (8), ಅಫ್ಘಾನಿಸ್ತಾನ (6), ಆಸ್ಟ್ರೇಲಿಯಾ (5), ಇಂಗ್ಲೆಂಡ್‌ (4) ಸರಣಿಗಳನ್ನು ಗೆದ್ದು ಕ್ರಮವಾಗಿ 2,3,4,5ನೇ ಸ್ಥಾನದಲ್ಲಿವೆ.  ಇದನ್ನೂ ಓದಿ: ಸಂಜು, ಸೂರ್ಯ ಬ್ಯಾಟಿಂಗ್‌ ಅಬ್ಬರ – ಬಾಂಗ್ಲಾ ವಿರುದ್ಧ ಭಾರತಕ್ಕೆ 133 ರನ್‌ ಭರ್ಜರಿ ಜಯ; 3-0 ಅಂತರದಲ್ಲಿ ಕ್ಲೀನ್‌ಸ್ವೀಪ್‌

  • ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ -‌ ಕಿಂಗ್‌ ಕೊಹ್ಲಿಗೆ ಸರಿಸಮನಾಗಿ ನಿಂತ ಮಿಸ್ಟರ್‌ 360

    ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ -‌ ಕಿಂಗ್‌ ಕೊಹ್ಲಿಗೆ ಸರಿಸಮನಾಗಿ ನಿಂತ ಮಿಸ್ಟರ್‌ 360

    ಹೈದರಾಬಾದ್: ಭಾರತದ ಟಿ20 ಕ್ರಿಕೆಟ್‌ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav) ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ‌

    ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ (ಅಕ್ಟೋಬರ್‌ 12) ಬಾಂಗ್ಲಾದೇಶ (Bangladesh) ವಿರುದ್ಧ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಅಬ್ಬರಿಸಿದ ಅಬ್ಬರಿಸಿದ ಸೂರ್ಯ ಕೇವಲ 35 ಎಸೆತಗಳಲ್ಲಿ 75 ರನ್‌ ಚಚ್ಚಿದರು. ಇದೇ ವೇಳೆ ಭಾರತದ ಪರ ಅತಿ ವೇಗವಾಗಿ 2,500 ರನ್‌ ಪೂರೈಸಿದ 2ನೇ ಬ್ಯಾಟರ್‌ ಎಂಬ ದಾಖಲೆಗೆ ಪಾತ್ರರಾದರು.

    ಟೀಂ ಇಂಡಿಯಾ ಪರ ಆಡಿದ 71ನೇ ಇನಿಂಗ್ಸ್‌ ಹಾಗೂ 73ನೇ ಪಂದ್ಯದಲ್ಲಿ ಸೂರ್ಯಕುಮಾರ್‌ ಯಾದವ್‌, 2,500 ರನ್‌ಗಳ ಗಡಿ ದಾಟಿಸಿದರು. ಅಂದಹಾಗೆ ಮಾಜಿ ನಾಯಕ ವಿರಾಟ್‌ ಕೊಹ್ಲಿ ಕೇವಲ 68 ಇನಿಂಗ್ಸ್‌ 73 ಪಂದ್ಯಗಳಲ್ಲಿ ಈ ದಾಖಲೆ ನಿರ್ಮಿಸಿದ ಭಾರತೀಯ ಬ್ಯಾಟರ್‌ ಎನಿಸಿಕೊಂಡಿದ್ದರು. ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್‌ ಆಜಂ ಹೆಸರಿನಲ್ಲೂ ಈ ದಾಖಲೆ ಇದೆ. ಬಾಬರ್‌ ಕೇವಲ 62 ಇನಿಂಗ್ಸ್‌, 67 ಪಂದ್ಯಗಳಲ್ಲಿ ಈ ಮೈಲುಗಲ್ಲು ಮುಟ್ಟಿದ್ದಾರೆ.

    ಅತಿ ವೇಗವಾಗಿ 2,500 ರನ್‌ ಪೂರೈಸಿದ ಬ್ಯಾಟರ್‌
    * ಬಾಬರ್‌ ಆಜಂ (ಪಾಕಿಸ್ತಾನ) – 67 ಪಂದ್ಯ
    * ಸೂರ್ಯಕುಮಾರ್‌ ಯಾದವ್‌ (ಭಾರತ) – 73 ಪಂದ್ಯ
    * ವಿರಾಟ್‌ ಕೊಹ್ಲಿ (ಭಾರತ) – 73 ಪಂದ್ಯ
    * ಮೊಹಮ್ಮದ್‌ ರಿಜ್ವಾನ್‌ (ಪಾಕಿಸ್ತಾನ) – 76 ಪಂದ್ಯ
    * ಆರನ್‌ ಫಿಂಚ್‌ (ಆಸ್ಟ್ರೇಲಿಯಾ) – 78 ಪಂದ್ಯ
    * ಮಾರ್ಟಿನ್‌ ಗಪ್ಟಿಲ್‌ (ನ್ಯೂಜಿಲೆಂಡ್)‌ – 86 ಪಂದ್ಯ

  • ಸೂರ್ಯನ ಆರ್ಭಟಕ್ಕೆ ಲಂಕಾ ದಹನ – ಭಾರತಕ್ಕೆ 43 ರನ್‌ಗಳ ಭರ್ಜರಿ ಗೆಲುವು; 1-0ರಲ್ಲಿ ಸರಣಿ ಮುನ್ನಡೆ

    ಸೂರ್ಯನ ಆರ್ಭಟಕ್ಕೆ ಲಂಕಾ ದಹನ – ಭಾರತಕ್ಕೆ 43 ರನ್‌ಗಳ ಭರ್ಜರಿ ಗೆಲುವು; 1-0ರಲ್ಲಿ ಸರಣಿ ಮುನ್ನಡೆ

    ಕೊಲಂಬೊ: ಜಿದ್ದಾ-ಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ (Sri Lanka) ವಿರುದ್ಧ 43 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ಪ್ರದರ್ಶದೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ (Team India) 1-0 ಮುನ್ನಡೆ ಕಾಯ್ದುಕೊಂಡಿದೆ.

    ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
    ಅಬ್ಬರಿಸುತ್ತಿದ್ದ ಲಂಕಾ ಬ್ಯಾಟರ್‌ಗಳನ್ನು ಕಟ್ಟಿಹಾಕುವುದು ಭಾರತ ತಂಡಕ್ಕೆ ಸವಾಲಾಗಿತು. ಲಂಕಾ 14 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 140 ರನ್‌ ಬಾರಿಸಿತ್ತು. 15ನೇ ಓವರ್‌ನಲ್ಲಿ ಬೌಲಿಂಗ್‌ಗೆ ಬಂದ ಅಕ್ಷರ್‌ ಪಟೇಲ್‌ 9 ರನ್‌ ಬಿಟ್ಟುಕೊಟ್ಟರೂ ಪ್ರಮುಖ 2 ವಿಕೆಟ್‌ ಉರುಳಿಸುವಲ್ಲಿ ಯಶಸ್ವಿಯಾದರು. ಇಲ್ಲಿಂದ ಲಂಕಾ ತಂಡದ ಪಥನ ಶುರುವಾಯಿತು.

    ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿಂದು ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಡೆಯಿತು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 213 ರನ್‌ ಬಾರಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಆರಂಭದಲ್ಲಿ ಅಬ್ಬರಿಸಿದರೂ 170 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಶ್ರೀಲಂಕಾ ತಂಡ ಉತ್ತಮ ಜೊತೆಯಾಟ ನೀಡುವಲ್ಲಿ ಯಶಸ್ವಿಯಾಗಿತ್ತು. ಮೊದಲ ವಿಕೆಟ್‌ಗೆ ಕುಸಲ್‌ ಮೆಂಡಿಸ್‌ ಹಾಗೂ ಪಥುಮ್‌ ನಿಸ್ಸಾಂಕ ಜೋಡಿ 52 ಎಸೆತಗಳಲ್ಲಿ 84 ರನ್‌ಗಳ ಜೊತೆಯಾಟ ನೀಡಿತ್ತು. ಸ್ಫೋಟಕ ಪ್ರದರ್ಶನ ನೀಡುತ್ತಿದ್ದ ಕುಸಾಲ್ ಮೆಂಡಿಸ್ 27 ಎಸೆತಗಳಲ್ಲಿ 45 ರನ್‌ ಸಿಡಿಸಿದ್ದರು. ಈ ವೇಳೆ ಅರ್ಷ್‌ದೀಪ್‌ ಸಿಂಗ್‌ ಮೆಂಡಿಸ್‌ ಆಟಕ್ಕೆ ಬ್ರೇಕ್‌ ಹಾಕಿ ಪೆವಿಲಿಯನ್‌ ದಾರಿ ತೋರಿದರು.

    ಇನ್ನೂ 2ನೇ ವಿಕೆಟ್‌ಗೆ ಜೊತೆಯಾಗಿದ್ದ ಕುಸಲ್‌ ಪೆರೇರಾ ಹಾಗೂ ನಿಸ್ಸಾಂಕ ಜೋಡಿ ಸಹ 33 ಎಸೆತಗಳಲ್ಲಿ 56 ರನ್‌ ಬಾರಿಸಿತ್ತು. ಒಂದಂಥದಲ್ಲಿ ಭಾರತ ಸೋತೇಬಿಡುತ್ತೆ ಎಂದು ಭಾವಿಸಲಾಗಿತ್ತು. ಆದ್ರೆ ಸಂಘಟಿತ ಪ್ರದರ್ಶನ ನೀಡಿದ ಭಾರತದ ಬೌಲರ್‌ಗಳು ಲಂಕಾ ಬ್ಯಾಟರ್‌ಗಳ ಆರ್ಭಟವನ್ನು ಅಡಗಿಸಿದರು. ನಿಸ್ಸಾಂಕ, ಪೆರೇರಾ ಜೋಡಿ ವಿಕೆಟ್‌ ಪತನದೊಂದಿಗೆ ಲಂಕಾ ಅವನತಿ ಶುರುವಾಯಿತು. ಟೀಂ ಇಂಡಿಯಾ ಬೌಲರ್‌ಗಳ ಆರ್ಭಟಕ್ಕೆ ನಲುಗಿ ಪೆವಿಲಿಯನ್‌ ಪೆರೇಡ್‌ ನಡೆಸಲು ಲಂಕನ್ನರು ಶುರು ಮಾಡಿದರು. ಅಂತಿಮವಾಗಿ ಲಂಕಾ 170 ರನ್‌ಗಳಿಗೆ ಆಲೌಟ್‌ ಆಯಿತು.

    ಶ್ರೀಲಂಕಾ ಪರ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ಪಥುಮ್‌ ನಿಸ್ಸಾಂಕ 79 ರನ್‌ (48 ಎಸೆತ, 4 ಸಿಕ್ಸರ್‌, 7 ಬೌಂಡರಿ), ಮೆಂಡಿಸ್‌ 45 ರನ್‌ (27 ಎಸೆತ, 1 ಸಿಕ್ಸರ್‌, 7 ಬೌಂಡರಿ), ಕುಸಾಲ್‌ ಪೆರೇರಾ 20 ರನ್‌ ಹಾಗೂ ಕುಮುಂಡು ಮೆಂಡಿಸ್‌ 12 ರನ್‌ ಕೊಡುಗೆ ನೀಡಿದರು.

    ಟೀಂ ಇಂಡಿಯಾ ಪರ 1.5 ಓವರ್‌ಗಳಲ್ಲಿ ಕೇವಲ 5 ರನ್‌ ಬಿಟ್ಟುಕೊಟ್ಟ ರಿಯಾನ್‌ ಪರಾಗ್‌ 3 ವಿಕೆಟ್‌ ಕಿತ್ತರೆ, ಅರ್ಷ್‌ದೀಪ್‌ ಸಿಂಗ್‌, ಅಕ್ಷರ್‌ ಪಟೇಲ್‌ ತಲಾ 2 ವಿಕೆಟ್‌ ಹಾಗೂ ಮೊಹಮ್ಮದ್‌ ಸಿರಾಜ್‌, ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ ಪರ ಬ್ಯಾಟರ್‌ಗಳು ಅಬ್ಬರಿಸಿದರು. ಆರಂಭಿಕರಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ ಹಾಗೂ ಯಶಸ್ವಿ ಜೈಸ್ವಾಲ್‌ ಜೋಡಿ ಮೊದಲ ವಿಕೆಟ್​ಗೆ 36 ಎಸೆತಗಳಲ್ಲಿ ಸ್ಫೋಟಕ 76 ರನ್‌ ಬಾರಿಸಿತ್ತು. ಶುಭಮನ್‌ ಗಿಲ್‌ 16 ಎಸೆತಗಳಲ್ಲಿ 34 ರನ್‌ ಚಚ್ಚಿ ಔಟಾಗುತ್ತಿದ್ದಂತೆ, ಯಶಸ್ವಿ ಜೈಸ್ವಾಲ್‌ 20 ಎಸೆತಗಳಲ್ಲಿ 40 ರನ್‌ ಸಿಡಿಸಿ ಪೆವಿಲಿಯನ್‌ಗೆ ಮರಳಿದರು. ಬಳಿಕ ಲಂಕನ್ನರನ್ನು ಚೆಂಡಾಡಿದ ಸೂರ್ಯಕುಮಾರ್‌ ಯಾದವ್‌ ಹಾಗೂ ರಿಷಭ್‌ ಪಂತ್‌ ಜೋಡಿ 3ನೇ ವಿಕೆಟ್‌ಗೆ 43 ಎಸೆತಗಳಲ್ಲಿ 76 ರನ್‌ ಪೇರಿಸಿತ್ತು. ಪರಿಣಾಮ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಟೀಂ ಇಂಡಿಯಾ ಪರ ನಾಯಕ ಸೂರ್ಯಕುಮಾರ್‌ ಯಾದವ್‌ 58 ರನ್‌ (26 ಎಸೆತ, 2 ಸಿಕ್ಸರ್‌, 8 ಬೌಂಡರಿ), ರಿಷಭ್‌ ಪಂತ್‌ 49 ರನ್‌ (33 ಎಸೆತ, 1 ಸಿಕ್ಸರ್‌, 6 ಬೌಂಡರಿ), ಯಶಸ್ವಿ ಜೈಸ್ವಾಲ್‌ 40 ರನ್‌ ಹಾಗೂ ಶುಭಮನ್‌ ಗಿಲ್‌ 34 ರನ್‌ ಬಾರಿಸಿದರು.

  • ಭಾರತ-ಲಂಕಾ ದ್ವಿಪಕ್ಷೀಯ ಸರಣಿ ವೇಳಾಪಟ್ಟಿ ಪ್ರಕಟ – ಕೋಚ್‌ ಆಗಿ ʻಗಂಭೀರ್‌ ಹೊಸ ಅಧ್ಯಾಯʼ ಶುರು!

    ಭಾರತ-ಲಂಕಾ ದ್ವಿಪಕ್ಷೀಯ ಸರಣಿ ವೇಳಾಪಟ್ಟಿ ಪ್ರಕಟ – ಕೋಚ್‌ ಆಗಿ ʻಗಂಭೀರ್‌ ಹೊಸ ಅಧ್ಯಾಯʼ ಶುರು!

    – ಯಾರಾಗ್ತಾರೆ ಭಾರತ ಟಿ20 ತಂಡದ ನಾಯಕ?

    ಕೊಲಂಬೊ: ಭಾರತ ಕ್ರಿಕೆಟ್‌ ತಂಡವು ಶ್ರೀಲಂಕಾ ಪ್ರವಾಸದ (India Tour Sri Lanka) ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಪ್ರಕಟಿಸಿದೆ. ಇತ್ತೀಚೆಗೆ ನೂತನ ಮುಖ್ಯಕೋಚ್‌ ನೇಮಕಗೊಂಡ ಗೌತಮ್‌ ಗಂಭೀರ್‌ (Gautam Gambhir) ಅವರ ನೇತೃತ್ವದಲ್ಲಿ ಭಾರತ ಮೊದಲ ದ್ವಿಪಕ್ಷೀಯ ಸರಣಿಯನ್ನಾಡಲಿದೆ. ಈ ಸರಣಿಯೊಂದಿಗೆ ಗಂಭೀರ್‌ ತಮ್ಮ ಮುಖ್ಯಕೋಚ್‌ ಕೋಚ್‌ ಅಭಿಯಾನವನ್ನು ಶುರುಮಾಡಲಿದ್ದಾರೆ.

    ಪಂದ್ಯ ಎಲ್ಲಿ ಯಾವಾಗ?
    ಇದೇ ಜುಲೈ 26ರಿಂದ ಆಗಸ್ಟ್‌ 7ರ ವರೆಗೆ ಭಾರತ, ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಉಭಯ ತಂಡಗಳು ಮೂರು ಟಿ20 ಪಂದ್ಯಗಳು ಹಾಗೂ 3 ಏಕದಿನ ಪಂದ್ಯಗಳನ್ನಾಡಲಿವೆ. ಟಿ20 ಪಂದ್ಯಗಳು ಶ್ರೀಲಂಕಾದ ಪಲ್ಲೆಕೆಲೆ ಹಾಗೂ ಏಕದಿನ ಪಂದ್ಯಗಳು ರಾಜಧಾನಿ ಕೊಲಂಬೊ ಮೈದಾನದಲ್ಲಿ ನಡೆಯಲಿವೆ. ಟಿ20 ಪಂದ್ಯಗಳು ಸಂಜೆ 7 ಗಂಟೆಗೆ ಶುರುವಾದರೆ, ಏಕದಿನ ಪಂದ್ಯಗಳು ಮಧ್ಯಾಹ್ನ 2:30ರಿಂದ ಆರಂಭವಾಗಲಿದೆ.

    ಯಾವ ದಿನ ಪಂದ್ಯ?
    ಟಿ20 ಪಂದ್ಯಗಳು:
    ಮೊದಲ ಪಂದ್ಯ – ಜುಲೈ 26
    2ನೇ ಪಂದ್ಯ – ಜುಲೈ 27
    3ನೇ ಪಂದ್ಯ – ಜುಲೈ 29
    ಸ್ಥಳ: ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಪಲ್ಲೆಕೆಲೆ

    ಏಕದಿನ ಪಂದ್ಯಗಳು
    ಮೊದಲ ಪಂದ್ಯ – ಆಗಸ್ಟ್‌ 1
    2ನೇ ಪಂದ್ಯ – ಆಗಸ್ಟ್‌ 4
    3ನೇ ಪಂದ್ಯ – ಆಗಸ್ಟ್‌ 7
    ಸ್ಥಳ: ಆರ್. ಪ್ರೇಮದಾಸ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಕೊಲಂಬೊ

    ಯಾರಾಗ್ತಾರೆ ಟಿ20 ತಂಡ ನಾಯಕ?
    2024ರ ಟಿ20 ವಿಶ್ವಕಪ್‌ ಟೂರ್ನಿ ಬಳಿಕ ಟಿ20 ಕ್ರಿಕೆಟ್‌ಗೆ ದಿಗ್ಗಜ ಕ್ರಿಕೆಟಿಗರಾದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಗುಡ್‌ಬೈ ಹೇಳಿದ್ದಾರೆ. ಹಾಗಾಗಿ ಮುಂದೆ ಟಿ20 ತಂಡಕ್ಕೆ ನಾಯಕ ಯಾರಾಗ್ತಾರೆ ಅನ್ನೋ ಬಗ್ಗೆ ಸಾಕಷ್ಟು ಕುತೂಹಲ ಕೆರಳಿಸಿದೆ. ಕೆಲವರು ಹಾರ್ದಿಕ್‌ ನಾಯಕನಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಏಕೆಂದರೆ 2023ರ ವರ್ಷಾರಂಭದಲ್ಲಿ ಪಾಂಡ್ಯ ನಾಯಕತ್ವದಲ್ಲೇ ಟೀಂ ಇಂಡಿಯಾ ನ್ಯೂಜಿಲೆಂಡ್‌ ಹಾಗೂ ಶ್ರೀಲಂಕಾ ವಿರುದ್ಧ ಟಿ20 ಸರಣಿ ಗೆದ್ದಿತ್ತು. ಹಾಗಾಗಿ ಟಿ20 ತಂಡದ ನಾಯಕನಾಗಿ ಪಾಂಡ್ಯ ಅವರೇ ಮುಂದುವರಿಯುವ ಸಾಧ್ಯತೆ ಎದ್ದು ಕಾಣುತ್ತಿದೆ ಎಂದು ಹಿರಿಯ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದಾರೆ.