Tag: t20 cricket

  • ರೋಚಕ ಲಾಸ್ಟ್ ಓವರ್‍ನಲ್ಲಿ ಪಾಂಡ್ಯಾ ಕೊಹ್ಲಿಗೆ ಹೇಳಿದ್ದೇನು?

    ರೋಚಕ ಲಾಸ್ಟ್ ಓವರ್‍ನಲ್ಲಿ ಪಾಂಡ್ಯಾ ಕೊಹ್ಲಿಗೆ ಹೇಳಿದ್ದೇನು?

    ತಿರುವನಂತಪುರ: `ನಾನು ಉತ್ತಮ ಬೌಲಿಂಗ್ ಮಾಡುತ್ತೇನೆ, ನೀವು ಚೀತಸಬೇಡಿ’ ಎಂದು ಪಾಂಡ್ಯಾ ನಾಯಕ ಕೊಹ್ಲಿಗೆ ಭರವಸೆ ನೀಡಿ, ನಿರ್ಣಾಯಕ ಓವರ್‍ ನಲ್ಲಿ ಕೇವಲ 12 ರನ್‍ಗಳನ್ನು ನೀಡುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

    ಪಂದ್ಯದ ಮುಕ್ತಾಯದ ನಂತರ ಮಾತನಾಡಿದ ಕೊಹ್ಲಿ, ಪಾಂಡ್ಯಾ ಅಂತಿಮ ಓವರ್‍ನಲ್ಲಿ ಹೇಳಿದ ಮಾತನ್ನು ಬಿಚ್ಚಿಟ್ಟರು. ಪಂದ್ಯದ ನಿರ್ಣಾಯಕ ಒವರ್‍ನಲ್ಲಿ ಬೌಲರ್‍ಗೆ ಧೈರ್ಯ ತುಂಬುವುದು ನಾಯಕನ ಕರ್ತವ್ಯ ಆದ್ದರಿಂದಲೇ ನಾನು ಪಾಂಡ್ಯಾಗೆ ಸಲಹೆ ನೀಡಲು ತೆರಳಿದೆ. ಈ ವೇಳೆ ಪಾಂಡ್ಯಾ ತಮ್ಮದೇ ಶೈಲಿಯಲ್ಲಿ `ನಾನು ಉತ್ತಮ ಬೌಲಿಂಗ್ ಮಾಡುತ್ತೇನೆ, ನೀವು ಚಿಂತಿಸಬೇಡಿ’ ಎಂದರು. ತಂಡದ ನಾಯಕನಿಗೆ ಬೌಲರ್ ಇಷ್ಟು ಭರವಸೆ ನೀಡಿದರೆ ಸಾಕು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಪಾಂಡ್ಯಾ ಅವರ ಬೌಲಿಂಗ್ ಮೇಲಿನ ವಿಶ್ವಾಸದಿಂದಲೇ ಅವರಿಗೆ ಬಾಲ್ ನೀಡಿದೆ. ಪಾಂಡ್ಯಾರ ಆಫ್ ಕಟ್ ಸ್ವಿಂಗ್ ಉತ್ತಮ ಫಲಿತಾಂಶವನ್ನು ನೀಡಿತು. ಇನ್ನೂಳಿದಂತೆ ಬೂಮ್ರಾ ಅವರ ಶಿಸ್ತುಬದ್ಧ ದಾಳಿ ನ್ಯೂಜಿಲೆಂಡ್ ಆಟಗಾರರನ್ನು ಒತ್ತಡದಲ್ಲಿ ಸಿಲುಕಿಸಿತು ಎಂದರು.

    ಒಟ್ಟಾರೆ ತಂಡದ ಸಾಂಘಿಕ ಹೋರಾಟದಿಂದ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

    ಕೊನೆಯ ಆ ಓವರ್: ನ್ಯೂಜಿಲೆಂಡ್ ಗೆಲ್ಲಲು ಕೊನೆಯ ಓವರ್ ನಲ್ಲಿ 19 ರನ್ ಬೇಕಾಗಿತ್ತು. ಮೊದಲ ಎಸೆತದಲ್ಲಿ 1 ರನ್ ಬಂದರೆ 2ನೇ ಎಸೆತದಲ್ಲಿ ಯಾವುದೇ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಈ ವೇಳೆ ಬಾಲ್ ಪಾಂಡ್ಯಾ ಎಡಕೈಗೆ ತಗುಲಿತ್ತು. ತಕ್ಷಣ ಟೀಂ ಫಿಸಿಯೋ ಬಂದು ನೋವು ನಿವಾರಕ ಸ್ಪ್ರೇ ಹಾಕಿದರು. ಬಳಿಕ ಬೌಲಿಂಗ್ ಆರಂಭಿಸಿದ ಪಾಂಡ್ಯಾ 3ನೇ ಎಸೆತದಲ್ಲಿ ಗ್ರಾಂಡ್ ಹೋಮ್ ಸಿಕ್ಸರ್ ಬಾರಿಸಿದಾಗ ಸ್ಟೇಡಿಯಂನಲ್ಲಿ ನೀರವ ಮೌನ. ನಂತರದ ಬಾಲ್ ನಲ್ಲಿ ಪಾಂಡ್ಯಾ ವೈಡ್ ಎಸೆದರು. 4ನೇ ಎಸೆತದಲ್ಲಿ ಕೇವಲ 1 ರನ್ ಮಾತ್ರ ಬಂತು. 5 ನೇ ಎಸೆತದಲ್ಲಿ 2 ರನ್ ಬಂದಿತ್ತು. ಅಷ್ಟರಲ್ಲಾಗಲೇ ಟೀಂ ಇಂಡಿಯಾ ಗೆಲುವು ಖಚಿತವಾಗಿತ್ತು. ಯಾಕೆಂದರೆ ಬಾಕಿ ಉಳಿದಿದ್ದ 1 ಎಸೆತದಲ್ಲಿ 8 ರನ್ ಬೇಕಾಗಿತ್ತು. ಆದರೆ ಕೊನೆಯ ಎಸೆತದಲ್ಲಿ ನ್ಯೂಜಿಲೆಂಡ್ ಆಟಗಾರರು ಕೇವಲ 1 ರನ್ ಗಳಿಸಲು ಮಾತ್ರ ಸಾಧ್ಯವಾಯಿತು. ಈ ಮೂಲಕ ಟೀಂ ಇಂಡಿಯಾ 6 ರನ್ ಗಳ ಗೆಲುವು ಸಾಧಿಸಿತ್ತು.

  • 36 ರನ್ ಗೆ ಆಲೌಟಾಗಿದ್ದ ಕ್ರೀಡಾಂಗಣದಲ್ಲಿ ಇಂದು ಟಿ20 – ಸತತ 8ನೇ ಗೆಲುವಿನತ್ತ ಟೀಂ ಇಂಡಿಯಾ

    36 ರನ್ ಗೆ ಆಲೌಟಾಗಿದ್ದ ಕ್ರೀಡಾಂಗಣದಲ್ಲಿ ಇಂದು ಟಿ20 – ಸತತ 8ನೇ ಗೆಲುವಿನತ್ತ ಟೀಂ ಇಂಡಿಯಾ

    ಗುವಾಹಟಿ: ಆಸೀಸ್ ವಿರುದ್ಧದ ಟಿ20 ಸರಣಿಯ 2ನೇ ಪಂದ್ಯ ಇಂದು ಇಲ್ಲಿನ ಬರ್ಸಪಾರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಈಗಾಗಲೇ ಟೀಂ ಇಂಡಿಯಾ 1-0 ಅಂತರದ ಮುನ್ನಡೆ ಸಾಧಿಸಿದೆ.

    ಟೀಂ ಇಂಡಿಯಾ ಈ ಪಂದ್ಯಕ್ಕಾಗಿ ಉತ್ತಮ ಅಭ್ಯಾಸವನ್ನೇ ನಡೆಸಿದೆ. ಪ್ರಾಕ್ಟೀಸ್ ವೇಳೆ ಟೀಂ ಇಂಡಿಯಾ ಆಟಗಾರರು ಫುಟ್ಬಾಲ್ ಆಡಿ ಗಮನ ಸೆಳೆದರು.

    ಸತತ 7 ವರ್ಷದ ಬಳಿಕ ಇಂದು ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ. ಹೀಗಾಗಿ ಈ ಪಿಚ್ ಯಾವ ರೀತಿ ವರ್ತಿಸುತ್ತದೆ ಎಂದು ಹೇಳುವುದು ಕಷ್ಟ ಎಂದು ಕ್ರಿಕೆಟ್ ತಜ್ಞರು ಹೇಳಿದ್ದಾರೆ. ಈ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯ ಇದಾಗಲಿದೆ.

    ಆಸೀಸ್ ಆಟಗಾರರಿಗೆ ಟೀಂ ಇಂಡಿಯಾದ ಸ್ಪಿನ್ ಬೌಲರ್ ಗಳಾದ ಕುಲದೀಪ್ ಯಾದವ್ ಹಾಗೂ ಚಾಹಲ್ ಸಿಂಹಸ್ವಪ್ನವಾಗಿ ಕಾಡುತ್ತಿದ್ದಾರೆ. ಅದರಲ್ಲೂ ಚಾಹಲ್ ಗ್ಲೆನ್ ಮ್ಯಾಕ್ಸ್ ವೆಲ್ ಅವರನ್ನು ಈ ಪ್ರವಾಸದಲ್ಲಿ 4 ಬಾರಿ ಔಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

    ಕಳೆದ ಸೀಸನ್ ನಲ್ಲಿ ನಡೆದ ರಣಜಿ ಪಂದ್ಯಾವಳಿಯಲ್ಲಿ ಹೈದರಾಬಾದ್ ತಂಡ ಇದೇ ಕ್ರೀಡಾಂಗಣದಲ್ಲಿ 36 ರನ್ ಗಳಿಗೆ ಆಲೌಟಾಗಿತ್ತು. 2010ರ ನವೆಂಬರ್ 28ರಂದು ಇಲ್ಲಿ ಕೊನೆಯ ಬಾರಿಗೆ ಭಾರತ ನ್ಯೂಜಿಲೆಂಡ್ ವಿರುದ್ಧ ಸೆಣಸಾಡಿತ್ತು. ಆ ಪಂದ್ಯದಲ್ಲಿ ಭಾರತ 40 ರನ್ ಗಳ ಗೆಲುವು ಸಾಧಿಸಿತ್ತು.

    ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇದುವರೆಗೆ ಒಟ್ಟು 14 ಟಿ20 ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ 10 ಹಾಗೂ ಆಸ್ಟ್ರೇಲಿಯಾ 4 ಪಂದ್ಯಗಳನ್ನು ಗೆದ್ದಿವೆ. 2012ರ ನವೆಂಬರ್ 28ರ ನಂತರ ಭಾರತ ವಿರುದ್ಧ ನಡೆದ ಎಲ್ಲಾ ಟಿ20 ಪಂದ್ಯಗಳಲ್ಲೂ ಭಾರತವೇ ಗೆಲುವು ಸಾಧಿಸಿದೆ.

     

  • ನೆಹ್ರಾ, ಜಡೇಜಾ, ಇರ್ಫಾನ್, ಯುವರಾಜ್ ಸಿಂಗ್ ಹಿಂದಿಕ್ಕಿ ಬೂಮ್ರಾ ದಾಖಲೆ!

    ನೆಹ್ರಾ, ಜಡೇಜಾ, ಇರ್ಫಾನ್, ಯುವರಾಜ್ ಸಿಂಗ್ ಹಿಂದಿಕ್ಕಿ ಬೂಮ್ರಾ ದಾಖಲೆ!

    ಬೆಂಗಳೂರು: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದ 2ನೇ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಬೂಮ್ರಾ ಆಶಿಷ್ ನೆಹ್ರಾ, ರವೀಂದ್ರ ಜಡೇಜಾ, ಇರ್ಫಾನ್ ಪಠಾಣ್, ಯುವರಾಜ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಸದ್ಯ ಸ್ಪಿನ್ನರ್ ಆರ್.ಅಶ್ವಿನ್ ಹೆಸರಲ್ಲಿದೆ. ಇದುವರೆಗೆ 52 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ ಅಶ್ವಿನ್.

    ಟಾಪ್ 5 ಬೌಲರ್: ಆರ್.ಅಶ್ವಿನ್ – 52 ವಿಕೆಟ್, ಜಸ್ಪ್ರೀತ್ ಬೂಮ್ರಾ – 36 ವಿಕೆಟ್, ಆಶಿಷ್ ನೆಹ್ರಾ – 34, ರವೀಂದ್ರ ಜಡೇಜಾ 31, ಇರ್ಫಾನ್ ಪಠಾಣ್ ಮತ್ತು ಯುವರಾಜ್ ಸಿಂಗ್ ತಲಾ 28 ವಿಕೆಟ್ ಪಡೆದು ಮೊದಲ ಐದು ಸ್ಥಾನದಲ್ಲಿದ್ದಾರೆ.

    ರಾಂಚಿಯಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಬೂಮ್ರಾ ಈ ದಾಖಲೆ ಮಾಡಿದ್ದಾರೆ. ಈ ಪಂದ್ಯದಲ್ಲಿ 3 ಓವರ್ ನಲ್ಲಿ 17 ರನ್ ನೀಡಿ 3 ವಿಕೆಟ್ ಪಡೆದಿದ್ದಾರೆ. ಇದುವರೆಗೆ ಬೂಮ್ರಾ ಒಟ್ಟು 26 ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ್ದು 36 ವಿಕೆಟ್ ಪಡೆದಿದ್ದಾರೆ. ಆಸೀಸ್ ವಿರುದ್ಧ 5 ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ ಬೂಮ್ರಾ.