Tag: T20 Series

  • ಇಂದಿನಿಂದ ಭಾರತ VS ಇಂಗ್ಲೆಂಡ್‌ ಟಿ20 ಕದನ – ಶುಭಾರಂಭದ ನಿರೀಕ್ಷೆಯಲ್ಲಿ ಸೂರ್ಯನ ಸೈನ್ಯ

    ಇಂದಿನಿಂದ ಭಾರತ VS ಇಂಗ್ಲೆಂಡ್‌ ಟಿ20 ಕದನ – ಶುಭಾರಂಭದ ನಿರೀಕ್ಷೆಯಲ್ಲಿ ಸೂರ್ಯನ ಸೈನ್ಯ

    ಮುಂಬೈ: ಇಂದಿನಿಂದ (ಜ.22) ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಬಳಿಕ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಪ್ರಸಕ್ತ ವರ್ಷದಲ್ಲಿ ಭಾರತ ತಂಡಕ್ಕೆ ಇದು ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಾಗಿದ್ದು, ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಟೀಂ ಇಂಡಿಯಾ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದೆ.

    ಜ.22ರಿಂದ ಫೆಬ್ರವರಿ 2ರ ವರೆಗೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಬಳಿಕ ಫೆಬ್ರವರಿ 6 ರಿಂದ 12ರ ವರೆಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ಸರಣಿಗೆ ಮಿಸ್ಟರ್-360 ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡವನ್ನು ಪ್ರಕಟಿಸಿರುವ ಬಿಸಿಸಿಐ, ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನ ಪ್ರಕಟಿಸಿದೆ.

    ಭಾರತ ಮತ್ತು ಇಂಗ್ಲೆಂಡ್‌ ಈವರೆಗೆ 24 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 13 ಪಂದ್ಯಗಳಲ್ಲಿ ಭಾರತ ಹಾಗೂ 11 ಪಂದ್ಯಗಳಲ್ಲಿ ಇಂಗ್ಲೆಂಡ್‌ ಗೆಲುವು ಸಾಧಿಸಿದೆ.

    2019ರ ಬಳಿಕ ತವರಲ್ಲಿ ಸೋಲೇ ಕಂಡಿಲ್ಲ:
    2019ರಿಂದ ಈವರೆಗೆ ತವರಿನಲ್ಲಿ 16 ಸರಣಿಗಳನ್ನಾಡಿರುವ ಟೀಂ ಇಂಡಿಯಾ 14 ಸರಣಿಗಳಲ್ಲಿ ಗೆಲುವು ಸಾಧಿಸಿದ್ದು, 2 ಸರಣಿಗಳನ್ನು ಡ್ರಾ ಮಾಡಿಕೊಂಡಿದೆ. 2019ರಲ್ಲಿ ಕೊನೆಯಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಭಾರತ ಸರಣಿ ಸೋತಿತ್ತು.

    ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಂ.1:
    2023ರ ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ ನಂ.1 ಪಟ್ಟಕ್ಕೇರಿದ ಭಾರತ, ದೀರ್ಘಕಾಲದಿಂದಲೂ ಅಗ್ರಸ್ಥಾನವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಕಳೆದ 1 ವರ್ಷದಲ್ಲಿ 70 ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ 18,747 ಅಂಕಗಳು ಹಾಗೂ 268 ರೇಟಿಂಗ್ಸ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನುಳಿದಂತೆ ಆಸ್ಟ್ರೇಲಿಯಾ (259 ರೇಟಿಂಗ್ಸ್), ಇಂಗ್ಲೆಂಡ್ (255 ರೇಟಿಂಗ್ಸ್), ವೆಸ್ಟ್ ಇಂಡೀಸ್ (247 ರೇಟಿಂಗ್ಸ್), ನ್ಯೂಜಿಲೆಂಡ್ (247 ರೇಟಿಂಗ್ಸ್) ಕ್ರಮವಾಗಿ 2, 3, 4, 5ನೇ ಸ್ಥಾನಗಳಲ್ಲಿವೆ.

    ಟಿ20 ಪಂದ್ಯಗಳು ಎಲ್ಲಿ – ಯಾವಾಗ?
    ಪ್ರತಿ ಪಂದ್ಯ ಸಂಜೆ 7:00 ಗಂಟೆಗೆ ಶುರುವಾಗಲಿದೆ

    • ಜ.22 – ಮೊದಲ ಪಂದ್ಯ – ಕೋಲ್ಕತ್ತಾ (ಈಡನ್ ಗಾರ್ಡನ್)
    • ಜ.25 – 2ನೇ ಪಂದ್ಯ – ಚೆನ್ನೈ (ಚೆಪಾಕ್)
    • ಜ.28 – 3ನೇ ಪಂದ್ಯ – ರಾಜ್‌ಕೋಟ್ (ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್)
    • ಜ.31 – 4ನೇ ಪಂದ್ಯ – ಪುಣೆ (ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್)
    • ಫೆ.02 – 5ನೇ ಪಂದ್ಯ – ಮುಂಬೈ (ವಾಂಖೆಡೆ)

    ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ:
    ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯಿ, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).

  • ಜ.22ರಿಂದ ಭಾರತ Vs ಇಂಗ್ಲೆಂಡ್‌ ಹೈವೋಲ್ಟೇಜ್‌ ಸರಣಿ – ಇಲ್ಲಿದೆ ಡಿಟೇಲ್ಸ್

    ಜ.22ರಿಂದ ಭಾರತ Vs ಇಂಗ್ಲೆಂಡ್‌ ಹೈವೋಲ್ಟೇಜ್‌ ಸರಣಿ – ಇಲ್ಲಿದೆ ಡಿಟೇಲ್ಸ್

    ಮುಂಬೈ: ಇದೇ ಜನವರಿ 22 ರಿಂದ ಭಾರತ ಮತ್ತು ಇಂಗ್ಲೆಂಡ್‌ (Ind vs Eng) ನಡುವೆ ಐದು ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಪ್ರಸಕ್ತ ವರ್ಷದಲ್ಲಿ ಭಾರತ ತಂಡಕ್ಕೆ ಇದು ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಾಗಿದೆ.

    ಜ.22ರಿಂದ ಫೆಬ್ರವರಿ 2ರ ವರೆಗೆ 5 ಪಂದ್ಯಗಳ ಟಿ20 ಸರಣಿ (T20 Series) ನಡೆಯಲಿದ್ದು, ಬಳಿಕ ಫೆಬ್ರವರಿ 6 ರಿಂದ 12ರ ವರೆಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ಸರಣಿಗೆ ಮಿಸ್ಟರ್‌-360 ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕತ್ವದಲ್ಲಿ ಭಾರತ ತಂಡವನ್ನು ಪ್ರಕಟಿಸಿರುವ ಬಿಸಿಸಿಐ (BCCI), ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನ ಪ್ರಕಟಿಸಿದೆ.

    ತವರಿನಲ್ಲಿ ಅತ್ಯಧಿಕ ಸರಣಿ ಗೆಲುವು:
    2019ರಿಂದ ಈವರೆಗೆ ತವರಿನಲ್ಲಿ 16 ಸರಣಿಗಳನ್ನಾಡಿರುವ ಟೀಂ ಇಂಡಿಯಾ (Team India) 14 ಸರಣಿಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲಿ ಅತಿಹೆಚ್ಚು ಸರಣಿ ಗೆದ್ದ ತಂಡವಾಗಿಯೂ ಟೀಂ ಇಂಡಿಯಾ ಹೊರಹೊಮ್ಮಿದೆ.

    ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಂ.1:
    2023ರ ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ ನಂ.1 ಪಟ್ಟಕ್ಕೇರಿದ ಭಾರತ, ದೀರ್ಘಕಾಲದಿಂದಲೂ ಅಗ್ರಸ್ಥಾನವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಕಳೆದ 1 ವರ್ಷದಲ್ಲಿ 70 ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ 18,747 ಅಂಕಗಳು ಹಾಗೂ 268 ರೇಟಿಂಗ್ಸ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನುಳಿದಂತೆ ಆಸ್ಟ್ರೇಲಿಯಾ (259 ರೇಟಿಂಗ್ಸ್‌), ಇಂಗ್ಲೆಂಡ್‌ (255 ರೇಟಿಂಗ್ಸ್‌), ವೆಸ್ಟ್‌ ಇಂಡೀಸ್‌ (247 ರೇಟಿಂಗ್ಸ್‌), ನ್ಯೂಜಿಲೆಂಡ್‌ (247 ರೇಟಿಂಗ್ಸ್‌) ಕ್ರಮವಾಗಿ 2, 3, 4, 5ನೇ ಸ್ಥಾನಗಳಲ್ಲಿವೆ.

    ಟಿ20 ಪಂದ್ಯಗಳು ಎಲ್ಲಿ – ಯಾವಾಗ?
    ಪ್ರತಿ ಪಂದ್ಯ ಸಂಜೆ 7:00 ಗಂಟೆಗೆ ಶುರುವಾಗಲಿದೆ

    • ಜ.22 – ಮೊದಲ ಪಂದ್ಯ – ಕೋಲ್ಕತ್ತಾ (ಈಡನ್‌ ಗಾರ್ಡನ್‌)
    • ಜ.25 – 2ನೇ ಪಂದ್ಯ – ಚೆನ್ನೈ (ಚೆಪಾಕ್‌)
    • ಜ.28 – 3ನೇ ಪಂದ್ಯ – ರಾಜ್‌ಕೋಟ್‌ (ಸೌರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌)
    • ಜ.31 – 4ನೇ ಪಂದ್ಯ – ಪುಣೆ (ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌)
    • ಫೆ.02 – 5ನೇ ಪಂದ್ಯ – ಮುಂಬೈ (ವಾಂಖೆಡೆ)

    ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾ:
    ಸೂರ್ಯಕುಮಾರ್‌ ಯಾದವ್‌, ಸಂಜು ಸ್ಯಾಮ್ಸನ್‌ (ವಿಕೆಟ್‌ ಕೀಪರ್‌), ಅಭಿಷೇಕ್‌ ಶರ್ಮಾ, ತಿಲಕ್‌ ವರ್ಮಾ, ಹಾರ್ದಿಕ್‌ ಪಾಂಡ್ಯ, ರಿಂಕು ಸಿಂಗ್‌, ನಿತೀಶ್‌ ಕುಮಾರ್‌ ರೆಡ್ಡಿ, ಅಕ್ಷರ್‌ ಪಟೇಲ್‌, ಹರ್ಷಿತ್‌ ರಾಣಾ, ಅರ್ಷ್‌ದೀಪ್‌ ಸಿಂಗ್‌, ಮೊಹಮ್ಮದ್‌ ಶಮಿ, ವರುಣ್‌ ಚಕ್ರವರ್ತಿ, ರವಿ ಬಿಷ್ಣೋಯಿ, ವಾಷಿಂಗ್ಟನ್‌ ಸುಂದರ್‌, ಧ್ರುವ್‌ ಜುರೆಲ್‌ (ವಿಕೆಟ್‌ ಕೀಪರ್‌).

  • ಅಫ್ಘಾನ್‌ ವಿರುದ್ಧ T20 ಸರಣಿಗೆ‌ ಬಲಿಷ್ಠ ತಂಡ ಪ್ರಕಟ – ಟೀಂ ಇಂಡಿಯಾಕ್ಕೆ ರೋಹಿತ್‌ ಸಾರಥಿ, ಕೊಹ್ಲಿ ಕಂಬ್ಯಾಕ್‌

    ಅಫ್ಘಾನ್‌ ವಿರುದ್ಧ T20 ಸರಣಿಗೆ‌ ಬಲಿಷ್ಠ ತಂಡ ಪ್ರಕಟ – ಟೀಂ ಇಂಡಿಯಾಕ್ಕೆ ರೋಹಿತ್‌ ಸಾರಥಿ, ಕೊಹ್ಲಿ ಕಂಬ್ಯಾಕ್‌

    ಮುಂಬೈ: ಅಫ್ಘಾನಿಸ್ತಾನ (Afghanistan) ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ (T20 Series) ಭಾರತ ತಂಡವನ್ನು ಬಿಸಿಸಿಐ ಭಾನುವಾರ (ಜ.7) ಪ್ರಕಟಿಸಿದೆ. ವಿಶೇಷವೆಂದರೆ 2023ರ ಏಕದಿನ ವಿಶ್ವಕಪ್‌ ಬಳಿಕ ಟಿ20 ಪಂದ್ಯಗಳಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದ ನಾಯಕ ರೋಹಿತ್‌ ಶರ್ಮಾ ಅವರಿಗೆ ಮತ್ತೆ ಟಿ20 ಪಂದ್ಯಗಳಿಗೆ ನಾಯಕತ್ವದ ಹೊಣೆ ನೀಡಲಾಗಿದೆ.

    ರೋಹಿತ್‌ (Rohit Sharma) ಮತ್ತು ವಿರಾಟ್‌ ಕೊಹ್ಲಿ (Virat Kohli) ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ನಿರಂತರವಾಗಿ ಆಡುತ್ತಿದ್ದರು. ಹಲವು ತಿಂಗಳಿನಿಂದ ಟಿ20 ಪಂದ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ವರ್ಷದ ಜೂನ್‌ನಲ್ಲಿ ಟಿ20 ವಿಶ್ವಕಪ್‌ (T20 WorldCup) ಟೂರ್ನಿ ಆಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ಚುಟುಕು ಸ್ವರೂಪದ ಟೂರ್ನಿಗೆ ಇಬ್ಬರು ಎಂಟ್ರಿಕೊಟ್ಟಿದ್ದಾರೆ. ಇದನ್ನೂ ಓದಿ: ಸೇರ್ಪಡೆಯಾದ 10 ದಿನದಲ್ಲೇ ವೈಎಸ್‌ಆರ್‌ ಕಾಂಗ್ರೆಸ್‌ಗೆ ಅಂಬಟಿ ರಾಯಡು ಗುಡ್‌ಬೈ

    ಚುಟುಕು ಸ್ವರೂಪಕ್ಕೆ ಇವರಿಬ್ಬರನ್ನು ಆಯ್ಕೆ ಮಾಡುವ ಕುರಿತು ಸಾಕಷ್ಟು ಊಹಾಪೋಹಗಳು ಇದ್ದವು. ಈ ನಡುವೆ ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಇಬ್ಬರೂ ಗಾಯದಿಂದಾಗಿ ಆಯ್ಕೆಗೆ ಲಭ್ಯರಿಲ್ಲ. ಹೀಗಾಗಿ ರೋಹಿತ್ ಮತ್ತು ಕೊಹ್ಲಿಯನ್ನು ತಂಡದಲ್ಲಿ ಹಿರಿಯ ಬ್ಯಾಟರ್‌ಗಳಾಗಿ ಬಿಸಿಸಿಐ (BCCI) ತಂಡಕ್ಕೆ ವಾಪಸ್ ಕರೆಸಿಕೊಂಡಿದೆ. ಇದನ್ನೂ ಓದಿ: T20 World Cup 2024 ವೇಳಾಪಟ್ಟಿ ಬಿಡುಗಡೆ; ಜೂ.9ಕ್ಕೆ ನ್ಯೂಯಾರ್ಕ್‌ನಲ್ಲಿ ಇಂಡೋ-ಪಾಕ್‌ ಕದನ

    ಸಂಜುಗೆ ಮತ್ತೆ ಚಾನ್ಸ್‌: 
    ಯುವ ಆರಂಭಿಕರಾದ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಸಾಮರ್ಥ್ಯ ತೋರಿ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಂಡಿದ್ದಾರೆ. ಆದರೆ ಇಶಾನ್ ಕಿಶನ್ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಸಂಜು ಸ್ಯಾಮ್ಸನ್ ತಮ್ಮ ಸ್ಥಾನಕ್ಕೆ ಮರಳಿದ್ದು, ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ 3ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ವಿಕೆಟ್‌ ಕೀಪರ್ ಹಾಗೂ ಬ್ಯಾಟರ್ ಚುಟುಕು ಸ್ವರೂಪದಲ್ಲೂ ಅಬ್ಬರಿಸುವ ನಿರೀಕ್ಷೆ ಇದೆ. ಮತ್ತೋರ್ವ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಕೂಡ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.

    ಅಫ್ಘಾನ್‌ ವಿರುದ್ಧ ಭಾರತ ತಂಡ ಹೀಗಿದೆ:
    ರೋಹಿತ್ ಶರ್ಮಾ (ನಾಯಕ), ಶುಭಮನ್‌ ಗಿಲ್‌, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಶಿವಂ ದುಬೆ, ವಾಷಿಂಗ್ಟನ್‌ ಸುಂದರ್‌, ಅಕ್ಷರ್‌ ಪಟೇಲ್, ರವಿ ಬಿಷ್ಣೋಯಿ, ಕುಲ್ದೀಪ್‌ ಯಾದವ್, ಅರ್ಷ್‌ದೀಪ್‌ ಸಿಂಗ್‌, ಅವೇಶ್‌ ಖಾನ್‌, ಮುಕೇಶ್‌ ಕುಮಾರ್‌. ಇದನ್ನೂ ಓದಿ: ಭಾರತವನ್ನು ನಂ.1 ಪಟ್ಟದಿಂದ ಕೆಳಗಿಳಿಸಿದ ಆಸ್ಟ್ರೇಲಿಯಾ – ಪ್ಯಾಟ್‌ ಕಮ್ಮಿನ್ಸ್‌ ನಾಯಕತ್ವಕ್ಕೆ ಮೆಚ್ಚುಗೆ!

    ಸರಣಿ ಯಾವಾಗ?
    ಇದೇ ಜನವರಿ 11 ರಿಂದ ಸರಣಿ ಪ್ರಾರಂಭವಾಗಲಿದ್ದು, ಮೊದಲ ಟಿ20 ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಜ.14 ರಂದು ಇಂದೋರ್‌ನ ಹೋಳ್ಕರ್‌ ಮೈದಾನದಲ್ಲಿ 2ನೇ ಪಂದ್ಯ ನಡೆಯಲಿದೆ. ಜನವರಿ 17 ರಂದು ಅಂತಿಮ‌ ಟಿ20 ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಇದು ಭಾರತ ತಂಡಕ್ಕೆ ಕೊನೆಯ ಚುಟುಕು ಅಂತಾರಾಷ್ಟ್ರೀಯ ಸರಣಿಯಾಗಿರಲಿದೆ.‌ ಹಾಗಾಗಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಧೋನಿಗೆ 15 ಕೋಟಿ ರೂ. ದೋಖಾ – ಮಾಜಿ ಪಾಲುದಾರರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಮಹಿ

    ಅಫ್ಘಾನ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷರ ಸಂಸತ:
    ಮೂರು‌‌ ಪಂದ್ಯಗಳ‌ ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಳ್ಳುತ್ತಿರುವುದು ಅತೀವ ಖುಷಿ ನೀಡುತ್ತಿದೆ. ಭಾರತ ತಂಡದ ವಿಶ್ವದ ಅಗ್ರಮಾನ್ಯ ತಂಡ. ಅಂತಹ ತಂಡದ ವಿರುದ್ಧ ಸ್ಫರ್ಧಿಸುವುದು ಕಷ್ಟದ ವಿಷಯ. ಅಫ್ಘಾನಿಸ್ತಾನ ತಂಡವೂ ಇತ್ತೀಚೆಗೆ ‌ಉತ್ತಮ ಸಾಧನೆ ಮಾಡುತ್ತಿದೆ ಎಂದು ನಾ‌ನು ನಂಬುತ್ತೇನೆ. ಭಾರತದ ವಿರುದ್ಧ ಹೆಚ್ಚು ಸ್ಪರ್ಧಾತ್ಮಕ ಸರಣಿಯನ್ನು ನೋಡುತ್ತಿದ್ದೇವೆ ಎಂದು ಅಫ್ಘಾನ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಮಿರ್ಮೈಸ್ ಅಶ್ರಫ್ ಹೇಳಿದ್ದಾರೆ.

  • ಇಂಡೋ-ಆಸೀಸ್‌ ಕದನಕ್ಕೆ ಮಳೆ ಭೀತಿ – ಸತತ 2ನೇ ಜಯಕ್ಕೆ ಭಾರತ ತವಕ

    ಇಂಡೋ-ಆಸೀಸ್‌ ಕದನಕ್ಕೆ ಮಳೆ ಭೀತಿ – ಸತತ 2ನೇ ಜಯಕ್ಕೆ ಭಾರತ ತವಕ

    – ಭಾರತಕ್ಕೆ ಬೇಕಿದೆ ಬೌಲಿಂಗ್‌ ಬಲ
    – ಇತ್ತಂಡಗಳ ಪ್ಲೇಯಿಂಗ್‌-11ನಲ್ಲಿ ಬದಲಾವಣೆ ಸಾಧ್ಯತೆ

    ತಿರುವನಂತಪುರಂ: ಭಾರತ ಮತ್ತು ಆಸ್ಟ್ರೇಲಿಯಾ (Ind vs Aus) ನಡುವಿನ 5 ಪಂದ್ಯಗಳ ಟಿ20 ಸರಣಿ ಆರಂಭಗೊಂಡಿದ್ದು, ಮೊದಲ ಪಂದ್ಯದಲ್ಲಿ ಭಾರತ ದಾಖಲೆಯ ಜಯ ಸಾಧಿಸಿದೆ. 2ನೇ T20 ಪಂದ್ಯವು (T20 Match) ಇಂದು (ನ.26) ಕೇರಳದ ತಿರುವನಂತಪುರಂ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮಳೆ ಅಡ್ಡಿಯುಂಟುಮಾಡುವ ಆತಂಕ ಎದುರಾಗಿದೆ.

    ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು, 55% ಮಳೆ (Rain) ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗರಿಷ್ಠ ತಾಪಮಾನ 32 ಡಿಗ್ರಿ ಸಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಇದನ್ನೂ ಓದಿ: IPL 2024 Auction: ಮತ್ತೆ ಮುಂಬೈ ಸೇರಲಿದ್ದಾರೆ ಪಾಂಡ್ಯ?

    ಮೊದಲ ಪಂದ್ಯದಲ್ಲಿ 209ರನ್‌ ಬಾರಿಸಿ ದಾಖಲೆಯ ಜಯ ಸಾಧಿಸಿರುವ ಭಾರತಕ್ಕೆ ಬೌಲಿಂಗ್‌ (Bowling) ಚಿಂತೆ ಎದುರಾಗಿದೆ. ಮೊದಲ ಪಂದ್ಯದಲ್ಲಿ ಪ್ರಸಿದ್ಧ್‌ ಕೃಷ್ಣ (Prasidh Krishna) 4 ಓವರ್‌ಗಳಲ್ಲಿ 50 ರನ್‌, ರವಿ ಬಿಷ್ಣೋಯಿ (Ravi Bishnoi) 4 ಓವರ್‌ಗಳಲ್ಲಿ 54 ರನ್‌ ಚಚ್ಚಿಸಿಕೊಂಡಿದ್ದರು. ಅಲ್ಲದೇ ಅರ್ಷ್‌ದೀಪ್‌ ಸಿಂಗ್‌ ಸಹ 41 ರನ್‌ ಹೊಡೆಸಿಕೊಂಡಿದ್ದರು. ಬ್ಯಾಟಿಂಗ್‌ನಲ್ಲಿ ನಾಯಕ ಸೂರ್ಯಕುಮಾರ್‌ ಯಾದವ್‌, ಇಶಾನ್‌ ಕಿಶನ್‌, ರಿಂಕು ಸಿಂಗ್‌ ಅವರ ಜವಾಬ್ದಾರಿ ಇನ್ನಿಂಗ್ಸ್‌ನಿಂದ ಗೆಲುವು ಸಾಧ್ಯವಾಗಿತ್ತು.

    2ನೇ ಪಂದ್ಯದಲ್ಲಿ ಭಾರತ ಬೌಲಿಂಗ್‌ ಸುಧಾರಣೆ ಕಂಡುಕೊಳ್ಳಬೇಕಿದೆ. ಹಾಗಾಗಿ ಮೊದಲ ಪಂದ್ಯದಲ್ಲಿ ಪ್ಲೇಯಿಂಗ್‌-11 ನಿಂದ ಹೊರಗುಳಿದಿದ್ದ ವಾಷಿಂಗ್ಟನ್‌ ಸುಂದರ್‌ ಮತ್ತು ಶಿವಂ ದುಬೆಗೆ ತಂಡಕ್ಕೆ ಮರಳುವ ಸಾಧ್ಯತೆಯಿದೆ. ಇನ್ನೂ ಆರಂಭಿಕ ಯಶಸ್ವಿ ಜೈಸ್ವಾಲ್‌, ಋತುರಾಜ್‌ ಗಾಯಕ್ವಾಡ್, ಮಧ್ಯಮ ಕ್ರಮಾಂಕದಲ್ಲಿ ತಿಲಕ್‌ ವರ್ಮಾ ಜವಾಬ್ದಾರಿಯನ್ನರಿತು ಆಡಬೇಕಿದೆ. ಇದನ್ನೂ ಓದಿ: T20 ಕದನಕ್ಕೆ ವಿಶ್ವಕಪ್‌ ದಾಖಲೆ ಉಡೀಸ್‌ – ಏಕಕಾಲಕ್ಕೆ ಕರ್ನಾಟಕದ ಜನಸಂಖ್ಯೆಗಿಂತಲೂ ಅಧಿಕ ಮಂದಿ ವೀಕ್ಷಣೆ

    ಮತ್ತೆ ಹೆಡ್ಡೇಕ್‌ ಆಗುತ್ತಾ?
    ಮೊದಲ ಪಂದ್ಯದಲ್ಲಿ ಆಸೀಸ್‌ ತಂಡ ವಿರೋಚಿತ ಸೋಲನುಭವಿಸಿದ ಬಳಿಕ ಆಸೀಸ್‌ ತಂಡ ಬದಲಾವಣೆ ತರಲು ಮುಂದಾಗಿದೆ. ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 137 ರನ್‌ ಸಿಡಿಸಿ ಭಾರತದ ಗೆಲುವಿಗೆ ಅಡ್ಡಗೋಡೆಯಾಗಿದ್ದ ಟ್ರಾವಿಸ್‌ ಹೆಡ್‌ ಪ್ಲೇಯಿಂಗ್‌-11ನಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಜೊತೆಗೆ ಸ್ಪಿನ್‌ ಮಾಂತ್ರಿಕ ಆಡಂ ಝಂಪಾ ಕೂಡ ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • Justice For Rinku Singh – ಟೀಂ ಇಂಡಿಯಾದಲ್ಲಿ ಸ್ಥಾನ ನೀಡುವಂತೆ ಫ್ಯಾನ್ಸ್ ಆಗ್ರಹ

    Justice For Rinku Singh – ಟೀಂ ಇಂಡಿಯಾದಲ್ಲಿ ಸ್ಥಾನ ನೀಡುವಂತೆ ಫ್ಯಾನ್ಸ್ ಆಗ್ರಹ

    – ಯಶಸ್ವಿ ಜೈಸ್ವಾಲ್‌ಗೆ ಡಬಲ್ ಧಮಾಕ

    ಮುಂಬೈ: ಆಗಸ್ಟ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದಲ್ಲಿ (Team India) ಸ್ಥಾನ ಪಡೆಯುವ ಅವಕಾಶವನ್ನು KKR ತಂಡದ ಫಿನಿಷರ್ ಖ್ಯಾತಿಯ ರಿಂಕು ಸಿಂಗ್ ಕಳೆದುಕೊಂಡಿದ್ದಾರೆ. ಹಾಗಾಗಿ ರಿಂಕು ಸಿಂಗ್ ಪರ ಧ್ವನಿ ಎತ್ತಿರುವ ಫ್ಯಾನ್ಸ್ ಟೀಂ ಇಂಡಿಯಾದ T20 ತಂಡದಲ್ಲಿ ಸ್ಥಾನ ನೀಡುವಂತೆ ಒತ್ತಾಯಿಸಿ #ಜಸ್ಟೀಸ್ ಫಾರ್ ರಿಂಕು ಸಿಂಗ್ (#JusticeForRinkuSingh) ಕ್ಯಾಂಪೇನ್ ಆರಂಭಿಸಿದ್ದಾರೆ.

    ಹೌದು. ಆಗಸ್ಟ್ 3 ರಿಂದ ಆಗಸ್ಟ್ 13ರ ವರೆಗೆ 5 ಪಂದ್ಯಗಳ T20 ಸರಣಿ ನಡೆಯಲಿದೆ. ವೆಸ್ಟ್ ಇಂಡೀಸ್ ಪ್ರವಾಸದ 5 ಪಂದ್ಯಗಳ ಟಿ20ಐ ಕ್ರಿಕೆಟ್ ಸರಣಿಗೆ 15 ಸದಸ್ಯರ ಭಾರತ ತಂಡವನ್ನು BCCI ಪ್ರಕಟಿಸಿದೆ. ಈ ತಂಡದಲ್ಲಿ 2023ರ ಐಪಿಎಲ್ ಟೂರ್ನಿಯಲ್ಲಿ ಮಿಂಚಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಹಾಗೂ ತಿಲಕ್ ವರ್ಮಾ ಚೊಚ್ಚಲ ಅವಕಾಶ ಪಡೆದುಕೊಂಡಿದ್ದಾರೆ. ಆದ್ರೆ ಕೆಕೆಆರ್‌ನಲ್ಲಿ ಫಿನಿಷರ್ ಎಂದೇ ಗುರುತಿಸಿಕೊಂಡಿದ್ದ ರಿಂಕು ಸಿಂಗ್ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

    ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿರುವ ಉಮೇಶ್ ಯಾದವ್ ಅವರನ್ನು T20 ತಂಡದಿಂದ ಕೈಬಿಡಲಾಗಿದ್ದರೂ ರಿಂಕು ಸಿಂಗ್ ಸಿಂಗ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಆದ್ರೆ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಅವಕಾಶ ಪಡೆದುಕೊಂಡಿದ್ದ ಯಶಸ್ವಿ ಜೈಸ್ವಾಲ್, ಇದೀಗ T20 ತಂಡದಲ್ಲೂ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

    ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅನುಭವಿ ಆಟಗಾರರಿಗೆ ಕೊಕ್ ನೀಡಲಾಗಿದ್ದು, ಹಾರ್ದಿಕ್ ಪಾಂಡ್ಯ (Hardik Pandya) ಟಿ20 ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ಉಪನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಇದನ್ನೂ ಓದಿಪೂಜಾರ ಔಟ್‌, ಯಶಸ್ವಿ ಇನ್‌ – ವಿಂಡೀಸ್‌ ಸರಣಿಗೆ ಭಾರತ ಟೆಸ್ಟ್‌, ಏಕದಿನ ತಂಡ ಪ್ರಕಟ

    2023ರ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ರಿಂಕು ಸಿಂಗ್ 14 ಪಂದ್ಯಗಳಲ್ಲಿ 59.25ರ ಸರಾಸರಿಯಲ್ಲಿ 474 ರನ್‌ಗಳನ್ನು ಗಳಿಸಿದ್ದರು. ಅಷ್ಟೇ ಅಲ್ಲದೆ 149.52ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ್ದು ಎಲ್ಲರ ಗಮನ ಸೆಳೆದಿತ್ತು. ಮುಖ್ಯವಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರೋಚಕ ಘಟ್ಟದಲ್ಲಿದ್ದಾಗ ಯಶ್ ದಯಾಳ್ ಬೌಲಿಂಗ್‌ಗೆ ಒಂದೇ ಓವರ್‌ನಲ್ಲಿ 5 ಭರ್ಜರಿ ಸಿಕ್ಸರ್ ಸಿಡಿಸಿ ರಿಂಕು ಎಲ್ಲರ ಗಮನ ಸೆಳೆದಿದ್ದರು.

    ಭಾರತ ಟಿ20 ತಂಡ:

    ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ರವಿ ಬಿಷ್ಣೋಯಿ, ಅರ್ಷ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

    ಭಾರತ ಟೆಸ್ಟ್ ತಂಡ:

    ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

    ಭಾರತ ಏಕದಿನ ತಂಡ:

    ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

    ಟಿ20 ಪಂದ್ಯಗಳು ಎಲ್ಲಿ ಯಾವಾಗ..?

    ಮೊದಲನೇ ಟಿ20: ಆಗಸ್ಟ್ 3, ಬ್ರಿಯಾನ್ ಲಾರಾ ಸ್ಟೇಡಿಯಂ, ಟ್ರಿನಿಡಾಡ್
    2ನೇ ಟಿ20: ಆಗಸ್ಟ್ 6, ಪ್ರಾವಿಡೆನ್ಸ್ ಸ್ಟೇಡಿಯಂ, ಗಯಾನ
    2ನೇ ಟಿ20: ಆಗಸ್ಟ್ 8, ಪ್ರಾವಿಡೆನ್ಸ್ ಸ್ಟೇಡಿಯಂ, ಗಯಾನ
    4ನೇ ಟಿ20: ಆಗಸ್ಟ್ 12, ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂ, ಲಾಡರ್ಹಿಲ್, ಫ್ಲೋರಿಡಾ
    4ನೇ ಟಿ20: ಆಗಸ್ಟ್ 13, ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂ, ಲಾಡರ್ಹಿಲ್, ಫ್ಲೋರಿಡಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊನೆಯ 3 ಓವರ್‌ಗಳಲ್ಲಿ 59 ರನ್ ಚಚ್ಚಿ ದಾಖಲೆಯ ಚೇಸಿಂಗ್ – ಲಂಕಾ ತಂಡದ ಹೀರೋ ಆದ ಶನಕ

    ಕೊನೆಯ 3 ಓವರ್‌ಗಳಲ್ಲಿ 59 ರನ್ ಚಚ್ಚಿ ದಾಖಲೆಯ ಚೇಸಿಂಗ್ – ಲಂಕಾ ತಂಡದ ಹೀರೋ ಆದ ಶನಕ

    ಕೊಲಂಬೊ: ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವಿನ 3 ಟಿ-20 ಸರಣಿಯ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ತಂಡವು ಚೇಸಿಂಗ್‍ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೆಚ್ಚೆದೆಯ ದಾಖಲೆಯ ಚೇಸಿಂಗ್ ಮೂಲಕ ಪಂದ್ಯದ ಕೊನೆಯ ಒಂದು ಬಾಲ್ ಬಾಕಿ ಇರುವಾಗಲೇ ಗೆಲ್ಲುವ ಮೂಲಕ ವೈಟ್ ವಾಶ್ ಮುಖಭಂಗವನ್ನು ತಪ್ಪಿಸಿಕೊಂಡಿದೆ.

    3 ಪಂದ್ಯಗಳ ಟಿ-20 ಸರಣಿಯಲ್ಲಿ 2-1ರಲ್ಲಿ ಕಾಂಗರೂ ಪಡೆ ಸರಣಿಯನ್ನು ವಶಪಡಿಸಿಕೊಂಡಿದೆ. ಪಲ್ಲೆಕೆಲೆಯ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟಿ-20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿ ಆತಿಥೇಯ ಶ್ರೀಲಂಕಾ ತಂಡಕ್ಕೆ 177 ರನ್‍ಗಳ ಕಠಿಣ ಗುರಿಯನ್ನು ನೀಡಿತ್ತು.

    ಇತ್ತ ಮೊದಲೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋತು ವೈಟ್ ವಾಶ್ ಮುಖಭಂಗದ ಒತ್ತಡದೊಂದಿಗೆ ಕಣಕ್ಕಿಳಿದಿದ್ದ ಶ್ರೀಲಂಕಾ ತಂಡದ ನಾಯಕ ದಾಸನ್ ಶನಕ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 19.5 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿ 4 ವಿಕೆಟ್‍ಗಳ ರೋಚಕ ಜಯ ಸಾಧಿಸಿ ಮುಖಭಂಗದಿಂದ ಪಾರಾಗಿದೆ.

    ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದಾಸನ್ ಶನಕ ಹೇಜಲ್ ವುಡ್ ಎಸೆದ 18ನೇ ಓವರ್‌ನಲ್ಲಿ 2 ಸಿಕ್ಸರ್ ಮತ್ತು 2 ಬೌಂಡರಿ ಬಾರಿಸುವದರ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸಿಬಿಟ್ಟರು. ಆ ಒಂದು ಓವರ್‍ನಲ್ಲಿಯೇ 22 ರನ್ ಹರಿದು ಬಂದ ಕಾರಣ ಆಸ್ಟ್ರೇಲಿಯಾ ಪರ ಇದ್ದ ಪಂದ್ಯ ತಿರುವು ಪಡೆದುಕೊಂಡಿತು.

    17 ನೇ ಓವರ್‌ಗೂ ಮುನ್ನ 18 ಎಸೆತಗಳಿಗೆ 59 ರನ್ ಅಗತ್ಯವಿತ್ತು ಆದರೆ ಓವರ್ ಮುಕ್ತಾಯದ ನಂತರ 12 ಎಸೆತಗಳಿಗೆ 37 ರನ್ ಬಾರಿಸಬೇಕಾದ ಅಗತ್ಯ ಎದುರಾಯಿತು. ನಂತರ 19ನೇ ಓವರ್‌ನಲ್ಲಿಯೂ ಅಬ್ಬರಿಸಿದ ಶನಕ ಜೇ ರಿಚರ್ಡ್ ಸನ್ ಎಸೆತಗಳಿಗೆ 1 ಸಿಕ್ಸರ್ ಮತ್ತು 1 ಬೌಂಡರಿ ಹಾಗೂ ಕರುಣರತ್ನೆ ಸಹ 1 ಬೌಂಡರಿ ಚಚ್ಚಿದ್ದರು. ಈ ಮೂಲಕ ಅಂತಿಮ 6 ಎಸೆತಗಳಲ್ಲಿ ತಂಡಕ್ಕೆ ಗೆಲ್ಲಲು 19 ರನ್ ಬೇಕಾಗಿತ್ತು.

    ಈ ಸಂದರ್ಭದಲ್ಲಿ ಶನಕ ಓವರ್‌ನ ಮೂರನೇ ಎಸೆತಕ್ಕೆ ಬೌಂಡರಿ, ನಾಲ್ಕನೇ ಎಸೆತಕ್ಕೆ ಬೌಂಡರಿ ಮತ್ತು 5ನೇ ಎಸೆತಕ್ಕೆ ಸಿಕ್ಸರ್ ಚಚ್ಚಿದರು. ಈ ಮೂಲಕ ಲಂಕಾಗೆ ಕೊನೆಯ ಎಸೆತದಲ್ಲಿ ಗೆಲ್ಲಲು 1 ರನ್ ಬೇಕಿತ್ತು ಹಾಗೂ ಕೇನ್ ರಿಚರ್ಡ್ ಸನ್ ವೈಡ್ ಎಸೆದ ಪರಿಣಾಮ ಲಂಕಾ ಜಯದ ನಗೆ ಬೀರಿತು. ಹೀಗೆ ಎಲ್ಲಿಯೂ ಎದೆಗುಂದದೆ ಮುಂದೆ ನಿಂತು ಹೋರಾಡಿದ ದಾಸನ್ ಶನಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸರಣಿಯುದ್ದಕ್ಕೂ ಉತ್ತಮ ಆಟವಾಡಿದ ಆಸ್ಟ್ರೇಲಿಯಾದ ನಾಯಕ ಆರನ್ ಫಿಂಚ್ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

  • 22 ಬಾಲಿಗೆ 42 ರನ್ – ಪಾಂಡ್ಯ ಸ್ಫೋಟಕ ಆಟ,  ಭಾರತಕ್ಕೆ ಸರಣಿ

    22 ಬಾಲಿಗೆ 42 ರನ್ – ಪಾಂಡ್ಯ ಸ್ಫೋಟಕ ಆಟ, ಭಾರತಕ್ಕೆ ಸರಣಿ

    – 6 ವಿಕೆಟ್‍ಗಳಿಂದ ಎರಡನೇ ಪಂದ್ಯ ಗೆದ್ದು ಬೀಗಿದ ಇಂಡಿಯಾ

    ಸಿಡ್ನಿ: ಇಂದು ನಡೆದ ಭಾರತ ವರ್ಸಸ್ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಭಾರತ ತಂಡ 6 ವಿಕೆಟ್‍ಗಳಿಂದ ಗೆದ್ದು ಬೀಗಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಮೊದಲ ಎರಡು ಪಂದ್ಯ ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದೆ.

    ಇಂದು ಸಿಡ್ನಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ ನಾಯಕ ಮ್ಯಾಥ್ಯೂ ವೇಡ್ ಮತ್ತು ಸ್ಟೀವ್ ಸ್ಮಿತ್ ಅವರು ಭರ್ಜರಿ ಬ್ಯಾಟಿಂಗ್‍ನಿಂದ ನಿಗಧಿತ 20 ಓವರಿನಲ್ಲಿ ಭರ್ಜರಿ 194 ರನ್ ಸಿಡಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ಇಂಡಿಯಾ ತಂಡ ಹಾರ್ದಿಕ್ ಪಾಂಡ್ಯ ಮತ್ತು ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್‍ನಿಂದ ಇನ್ನೂ ಎರಡು ಬಾಲ್ ಉಳಿದಂತೆ 195 ರನ್ ಹೊಡೆದು ಜಯ ಸಾಧಿಸಿತು.

    ಪಾಂಡ್ಯ ಸ್ಫೋಟಕ
    ಇಂದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸೂಪರ್ ಆಗಿ ಬ್ಯಾಟ್ ಬೀಸಿದರು. ಕೊಹ್ಲಿ ಔಟ್ ಆದ ಬಳಿಕ ಬ್ಯಾಟಿಂಗ್ ಬಂದ ಪಾಂಡ್ಯ, 22 ಬಾಲಿನಲ್ಲಿ 3 ಬೌಂಡರಿ ಮತ್ತು ಎರಡು ಸಿಕ್ಸರ್ ಸಮೇತ 42 ರನ್ ಸಿಡಿಸಿದರು. ಕೊನೆಯ ಓವರಿನಲ್ಲಿ 14 ರನ್ ಬೇಕಿದ್ದಾಗ ಸಿಕ್ಸರ್ ಸಿಡಿಸಿ ಭಾರತಕ್ಕೆ ಗೆಲುವನ್ನು ತಂದಿಟ್ಟರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಕೂಡ ಉತ್ತಮವಾಗಿ ಬ್ಯಾಟ್ ಬೀಸಿದರು.

    ಆಸ್ಟ್ರೇಲಿಯಾ ನೀಡಿದ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾಗೆ ಆರಂಭಿಕರಾದ ಕೆ.ಎಲ್. ರಾಹುಲ್ ಮತ್ತು ಶಿಖರ್ ಧವನ್ ಉತ್ತಮ ಅಡಿಪಾಯ ಹಾಕಿಕೊಟ್ಟರು. ಮೊದಲ ವಿಕೆಟ್‍ಗೆ ಈ ಜೋಡಿ ಅರ್ಧಶತಕದ ಜೊತೆಯಾಟವಾಡಿತು. ಈ ವೇಳೆ ಐದನೇ ಓವರ್ ಎರಡನೇ ಬಾಲಿಗೆ 22 ಬಾಲಿಗೆ 30 ರನ್ ಸಿಡಿಸಿದ್ದ ಕೆಎಲ್ ರಾಹುಲ್ ಅವರು ಆಂಡ್ರ್ಯೂ ಟೈ ಅವರಿಗೆ ಔಟ್ ಅದರು. ಈ ವೇಳೆ 9 ಓವರಿಗೆ ಇಂಡಿಯಾ ಒಂದು ವಿಕೆಟ್ ಕಳೆದುಕೊಂಡು 81 ರನ್ ಗಳಸಿತ್ತು.

    ನಂತರ ನಾಯಕ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಸ್ಫೋಟಕ ಆಟಕ್ಕೆ ಮುಂದಾದರು. ಆದರೆ ಅರ್ಧಶತಕ ಸಿಡಿಸಿ ಮುನ್ನುಗುತ್ತಿದ್ದ ಶಿಖರ್ ಧವನ್ ಅವರು 36 ಬಾಲಿಗೆ 52 ರನ್ ಸಿಡಿಸಿ ಔಟ್ ಅದರು. ಶಿಖರ್ ಧವನ್ ನಂತರ ಬಂದು ಭರ್ಜರಿಯಾಗಿ ಬ್ಯಾಟ್ ಬೀಸಿದ ಸಂಜು ಸ್ಯಾಮ್ಸನ್ 10 ಬಾಲಿಗೆ 15 ರನ್ ಹೊಡೆದು ಔಟ್ ಅದರು. ನಂತರ ವಿರಾಟ್ ಕೊಹ್ಲಿಯವರು ಕೂಡ 24 ಬಾಲಿಗೆ 40 ರನ್ ಸಿಡಿಸಿ ಪೆವಿಲಿಯನ್ ಸೇರಿದರು.

    ಆ ನಂತರ ಜೊತೆಯಾದ ಶ್ರೇಯಸ್ ಅಯ್ಯರ್ ಮತ್ತು ಹಾರ್ದಿಕ್ ಪಾಂಡ್ಯ ತಾಳ್ಮೆಯ ಆಟಕ್ಕೆ ಮುಂದಾಗಿ ಭಾರತವನ್ನು ಗೆಲುವಿನ ಹಂತಕ್ಕೆ ತಂದರು. ಕೊನೆಯ ಎರಡು ಓವರಿನಲ್ಲಿ 26 ರನ್‍ಗಳ ಅವಶ್ಯಕತೆ ಇತ್ತು. ಆಗ ಹಾರ್ದಿಕ್ ಪಾಂಡ್ಯ ಎರಡು ಬೌಂಡರಿ ಸಿಡಿಸಿ 19ನೇ ಓವರಿನಲ್ಲಿ 12 ರನ್ ಬಂದಿತ್ತು. ಕೊನೆಯ ಓವರಿನಲ್ಲಿ 14 ರನ್ ಬೇಕಿತ್ತು. ಆ ಓವರಿನಲ್ಲಿ ಎರಡು ಸಿಕ್ಸರ್ ಸಿಡಿಸಿದ ಪಾಂಡ್ಯ ಇನ್ನೂ ಎರಡು ಬಾಲ್ ಉಳಿದಂತೆ ಭಾರತಕ್ಕೆ ಗೆಲುವು ತಂದಿತ್ತರು.

  • ಅಸೀಸ್ ವಿರುದ್ಧ ಟಿ-20 ಸರಣಿ ವಶಪಡಿಸಿಕೊಳ್ಳಲು ಭಾರತಕ್ಕೆ 195ರನ್‍ಗಳ ಗುರಿ

    ಅಸೀಸ್ ವಿರುದ್ಧ ಟಿ-20 ಸರಣಿ ವಶಪಡಿಸಿಕೊಳ್ಳಲು ಭಾರತಕ್ಕೆ 195ರನ್‍ಗಳ ಗುರಿ

    ಸಿಡ್ನಿ: ಇಂದು ನಡೆಯುತ್ತಿರುವ ಇಂಡಿಯಾ ವರ್ಸಸ್ ಆಸ್ಟ್ರೇಲಿಯಾ ನಡುವಿನ ಎರಡನೇ ಟಿ-20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ ಇಂಡಿಯಾಗೆ 195ರನ್‍ಗಳ ಟಾರ್ಗೆಟ್ ನೀಡಿದೆ.

    ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ನಾಯಕ ಮ್ಯಾಥ್ಯೂ ವೇಡ್ ಮತ್ತು ಡಿ ಆರ್ಸಿ ಶಾರ್ಟ್ ಉತ್ತಮ ಆರಂಭ ನೀಡಿದರು. ಆದರೆ 9 ರನ್ ಗಳಸಿದ್ದ ಡಿ ಆರ್ಸಿ ಶಾರ್ಟ್ ಟಿ ನಟರಾಜನ್ ಅವರ ಬೌಲಿಂಗ್‍ನಲ್ಲಿ ಐಯ್ಯರ್ ಗೆ ಕ್ಯಾಚ್ ನೀಡಿ ಹೊರನಡೆದರು. ಇದಾದ ನಂತರ ಭರ್ಜರಿಯಾಗಿ ಬ್ಯಾಟ್ ಬೀಸಿದ ವೇಡ್ 25 ಬಾಲಿಗೆ ಅರ್ಧಶತಕ ಸಿಡಿಸಿ ಮಿಂಚಿದರು. ನಂತರ ಕ್ಯಾಚ್ ಬಿಟ್ಟು ಕೊಹ್ಲಿ ಹೊಡೆದ ರನ್ ಔಟ್‍ಗೆ ವೇಡ್ 58 ರನ್‍ ಗಳಸಿ ಔಟ್ ಆದರು.

    ನಂತರ ಜೊತೆಯಾದ ಸ್ಟೀವನ್ ಸ್ಮಿತ್ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ ಅಬ್ಬರ ಆಟಕ್ಕೆ ಮುಂದಾದರು. ಫೋರ್ ಸಿಕ್ಸರ್ ಗಳ ಸುರಿಮಳೆಗೈಯುತ್ತಿದ್ದ ಈ ಜೋಡಿಗೆ 12ನೇ ಓವರ್ ನಾಲ್ಕನೇ ಬಾಲಿನಲ್ಲಿ ಶಾರ್ದೂಲ್ ಠಾಕೂರ್ ಶಾಕ್ ನೀಡಿದರು. 13 ಬಾಲಿಗೆ 22 ರನ್ ಗಳಸಿದ್ದ ಸ್ಫೋಟಕ ಬ್ಯಾಟ್ಸ್ ಮ್ಯಾನ್ ಮ್ಯಾಕ್ಸ್ ವೆಲ್ ಅವರನ್ನು ಔಟ್ ಮಾಡಿದರು. ಈ ನಂತರ 38 ಬಾಲಿಗೆ 46 ರನ್ ಸಿಡಿಸಿದ್ದ ಸ್ಟೀವನ್ ಸ್ಮಿತ್ ಚಹಲ್ ಅವರ ಬೌಲಿಂಗ್‍ನಲ್ಲಿ ಪಾಂಡ್ಯಗೆ ಕ್ಯಾಚ್ ಕೊಟ್ಟು ಹೊರನಡೆದರು.

    18ನೇ ಓವರಿನಲ್ಲಿ ದಾಳಿಗೆ ಬಂದ ನಟರಾಜನ್ ಅವರು ಮೂರನೇ ಬಾಲಿನಲ್ಲಿ 18 ಬಾಲಿಗೆ 26 ರನ್ ಗಳಿಸಿದ್ದ ಮೊಯಿಸಸ್ ಹೆನ್ರಿಕ್ಸ್ ಅವರನ್ನು ಬಲಿ ಪಡೆದುಕೊಂಡರು. ಆ ನಂತರ ಬಂದ ಯಾವುದೇ ಬ್ಯಾಟ್ಸ್ ಮ್ಯಾನ್ ಅಕ್ರಮಣಕಾರಿಯಾಗಿ ಬ್ಯಾಟ್ ಬೀಸಲಿಲ್ಲ. ಹೀಗಾಗಿ ಒಂದು ಹಂತದಲ್ಲಿ 200 ರನ್ ಗಡಿ ದಾಟುವ ಸನಿಹದಲ್ಲಿದ್ದ ಆಸೀಸ್ ಭಾರತ ಬಿಗಿ ಬೌಲಿಂಗ್ ದಾಳಿಯಿಂದ 194 ರನ್ ಗಳಸಿತು.

  • ಬುಮ್ರಾ, ಧವನ್ ಬ್ಯಾಕ್, ರೋಹಿತ್‍ಗೆ ವಿಶ್ರಾಂತಿ – ಲಂಕಾ, ಆಸಿಸ್ ಸರಣಿಗೆ ಭಾರತ ಆಟಗಾರ ಪಟ್ಟಿ ಬಿಡುಗಡೆ

    ಬುಮ್ರಾ, ಧವನ್ ಬ್ಯಾಕ್, ರೋಹಿತ್‍ಗೆ ವಿಶ್ರಾಂತಿ – ಲಂಕಾ, ಆಸಿಸ್ ಸರಣಿಗೆ ಭಾರತ ಆಟಗಾರ ಪಟ್ಟಿ ಬಿಡುಗಡೆ

    ನವದೆಹಲಿ: ಮುಂಬರುವ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ-20 ಮತ್ತು ಏಕದಿನ ಸರಣಿಗೆ ಭಾರತ ತಂಡವನ್ನು ಇಂದು ಆಯ್ಕೆ ಮಾಡಿದ್ದು, ಕಳೆದ ನಾಲ್ಕು ತಿಂಗಳಿಂದ ತಂಡದಿಂದ ಹೊರಗಡೆಯಿದ್ದ ಬೌಲರ್ ಜಸ್ಪ್ರಿತ್ ಬುಮ್ರಾ ಅವರು ಭಾರತದ ತಂಡಕ್ಕೆ ವಾಪಸ್ ಆಗಿದ್ದಾರೆ.

    ಬುಮ್ರಾ ಅವರ ಜೊತೆಗೆ ಕಳೆದ ವೆಸ್ಟ್ ಇಂಡೀಸ್ ಸರಣಿಯಲ್ಲಿ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಬಿದ್ದಿದ್ದ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಟಿ-20 ಮತ್ತು ಏಕದಿನ ಎರಡು ತಂಡಗಳಿಗೆ ಮರಳಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಸಿಡಿಸಿರುವ ರೋಹಿತ್ ಶರ್ಮಾ ಅವರಿಗೆ ಶ್ರೀಲಂಕಾ ವಿರುದ್ಧದ ಟಿ-20 ಸರಣಿಗೆ ರೆಸ್ಟ್ ನೀಡಲಾಗಿದೆ. ಇವರ ಜೊತೆಗೆ ವೇಗಿ ಮೊಹಮ್ಮದ್ ಶಮಿ ಅವರಿಗೂ ರೆಸ್ಟ್ ನೀಡಲಾಗಿದೆ.

    ಬೆನ್ನು ನೋವಿನ ಸಮಸ್ಯೆಯಿಂದ ಶಸ್ತ್ರಚಿಕೆತ್ಸೆಗೆ ಒಳಗಾಗಿದ್ದ ಬುಮ್ರಾ ಅವರು ನಾಲ್ಕು ತಿಂಗಳ ನಂತರ ಭಾರತ ತಂಡಕ್ಕೆ ವಪಾಸ್ ಆಗಿದ್ದಾರೆ. ಅವರು ಕಳೆದ ಆಗಸ್ಟ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತನ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದಾದ ನಂತರ ವಿಶಾಖಪಟ್ಟಣದಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನೆಟ್‍ನಲ್ಲಿ ಬೌಲಿಂಗ್ ಮಾಡಿ ತಮ್ಮ ಫಿಟ್ನೆಸ್ ಸಾಬೀತು ಮಾಡಿದ್ದರು.

    ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ-20 ಸರಣಿಗೆ ಗಾಯದ ಸಮಸ್ಯೆಯಿಂದ ಹೊರಬಿದ್ದಿದ್ದ ಶಿಖರ್ ಧವನ್ ಅವರು ಮತ್ತೆ ತಂಡಕ್ಕೆ ಮರಳಿದ್ದಾರೆ. ಈ ವರ್ಷ ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ಭಾರತವನ್ನು ಮುನ್ನಡೆಸಿದ ರೋಹಿತ್ ಶರ್ಮಾ ಅವರಿಗೆ ಕೊಂಚ ಬ್ರೇಕ್ ನೀಡಲಾಗಿದ್ದು, ಎಂದಿನಂತೆ ನಾಯಕ ಕೊಹ್ಲಿ ಜನವರಿ 5 ರಿಂದ ಆರಂಭವಾಗುವ ಶ್ರೀಲಂಕಾ ವಿರುದ್ಧದ 3 ಟಿ-20 ಸರಣಿ ಮತ್ತು ಜನವರಿ 14 ರಿಂದ ಆರಂಭವಾಗುವ ಆಸ್ಟ್ರೇಲಿಯಾದ ವಿರುದ್ಧದ 3 ಏಕದಿನ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ.

    ಎಂಎಸ್‍ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿಯು ನವದೆಹಲಿಯಲ್ಲಿ ಈ ಎರಡು ಸರಣಿಗೆ ಆಟಗಾರರನ್ನು ಆಯ್ಕೆ ಮಾಡಿದೆ. ಸಭೆಯ ನಂತರ ಮಾತನಾಡಿದ ಎಂಎಸ್‍ಕೆ ಪ್ರಸಾದ್ ರಿಷಭ್ ಪಂತ್ ಅವರಿಗೆ ವಿಕೆಟ್ ಕೀಪಿಂಗ್ ಕೌಶಲ್ಯವನ್ನು ಸುಧಾರಿಸಲು ಒಳ್ಳೆಯ ವಿಕೆಟ್ ಕೀಪಿಂಗ್ ಕೋಚ್ ಅನ್ನು ನೇಮಕ ಮಾಡಲಾಗುತ್ತದೆ. ಅವರು ಕೀಪಿಂಗ್ ಅಲ್ಲಿ ಸ್ವಲ್ಪ ಸುಧಾರಿಸಬೇಕಿದೆ ಹಾಗಾಗಿ ತಜ್ಞ ತರಬೇತುದಾರನನ್ನು ನೇಮಕ ಮಾಡುತ್ತೇವೆ ಎಂದು ತಿಳಿಸಿದರು.

    ಶ್ರೀಲಂಕಾ ಟಿ-20 ಸರಣಿ:
    ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಿವಂ ದುಬೆ, ಯುಜ್ವೇಂದ್ರ ಚಹಲ್, ಕುಲದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ನವದೀಪ್ ಸೈನಿ, ಶಾರ್ದುಲ್ ಠಾಕೂರ್, ಮನೀಶ್ ಪಾಂಡೆ, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್.

    ಆಸ್ಟ್ರೇಲಿಯಾ ಏಕದಿನ ಸರಣಿ:
    ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಕೇದಾರ್ ಜಾಧವ್, ಶಿವಂ ದುಬೆ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯುಜ್ವೇಂದ್ರ ಚಹಲ್, ನವದೀಪ್ ಸೈನಿ, ಶಾರ್ದುಲ್ ಠಾಕೂರ್, ಜಸ್ಪ್ರಿತ್ ಬುಮ್ರಾ.

  • ದ.ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಧೋನಿ, ಬುಮ್ರಾಗೆ ವಿಶ್ರಾಂತಿ

    ದ.ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಧೋನಿ, ಬುಮ್ರಾಗೆ ವಿಶ್ರಾಂತಿ

    – ತಂಡ ಸೇರಿದ ಹಾರ್ದಿಕ್ ಪಾಂಡ್ಯ

    ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ಆಟಗಾರ ಪಟ್ಟಿ ಪ್ರಕಟವಾಗಿದ್ದು, ಮಾಜಿ ನಾಯಕ ಎಂ.ಎಸ್.ಧೋನಿ, ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಕೈ ಬಿಡಲಾಗಿದೆ.

    ವಿಂಡೀಸ್ ಸರಣಿಯ ವೇಳೆ ವಿಶಾಂತ್ರಿಯಲ್ಲಿದ್ದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಿದ್ದಾರೆ. ಇತ್ತ ಮಹೇಂದ್ರ ಸಿಂಗ್ ಧೋನಿ ಅವರಿಗೆ ವಿಶ್ರಾಂತಿ ನೀಡಿ, ವಿಕೆಟ್ ಕೀಪರ್ ಸ್ಥಾನಕ್ಕೆ ರಿಷಬ್ ಪಂತ್ ಅವರನ್ನು ಮುಂದುವರಿಸಲಾಗಿದೆ.

    ವೆಸ್ಟ್ ಇಂಡೀಸ್ ವಿರುದ್ಧ ಮೂರು ಮಾದರಿಯ ಪಂದ್ಯದಲ್ಲಿಯೂ ತಂಡವನ್ನು ವಿರಾಟ್ ಕೊಹ್ಲಿ ಸಮರ್ಥವಾಗಿ ಮುನ್ನಡೆಸಿದ್ದಾರೆ. ಈ ಪ್ರಸಾದ ಬಳಿಕ ಕೊಹ್ಲಿ ವಿಶ್ರಾಂತಿ ಪಡೆಯದೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲೂ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಉಪನಾಯಕನ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

    ಹಾರ್ದಿಕ್ ಪಾಂಡ್ಯ ಸ್ಥಾನ ನೀಡಿರು ಆಯ್ಕೆ ಸಮೀತಿಯು ಭುವನೇಶ್ವರ್ ಕುಮಾರ್ ಅವರಿಗೆ ವಿಶ್ರಾಂತಿ ನೀಡಿದೆ. ಉಳಿದಂತೆ ವೆಸ್ಟ್ ಇಂಡೀಸ್ ಸರಣಿಯಲ್ಲಿದ್ದ ಆಟಗಾರರಾದ ಶಿಖರ್ ಧವನ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರವೀಂದ್ರ ಜಡೇಜಾ, ಕೃಣಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಹಾಗೂ ನವದೀಪ್ ಸೈನಿ ಸ್ಥಾನಗಳನ್ನು ಭದ್ರಪಡಿಸಿಕೊಂಡಿದ್ದಾರೆ.

    ತಂಡ ಇಂತಿದೆ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕೃಣಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಮತ್ತು ನವದೀಪ್ ಸೈನಿ.