Tag: T20 World Cup

  • T20 ವಿಶ್ವಕಪ್‌ಗೂ ಮುನ್ನ ರೋಹಿತ್ – ಪಾಂಡ್ಯ ಐಪಿಎಲ್ ಮುನಿಸು ಕೊನೆಗೊಂಡಿದ್ದು ಹೇಗೆ..?

    T20 ವಿಶ್ವಕಪ್‌ಗೂ ಮುನ್ನ ರೋಹಿತ್ – ಪಾಂಡ್ಯ ಐಪಿಎಲ್ ಮುನಿಸು ಕೊನೆಗೊಂಡಿದ್ದು ಹೇಗೆ..?

    – ಮೊದಲ ದಿನ ಇಬ್ಬರೂ ಮಾತನಾಡಿರಲಿಲ್ಲ!

    ಮುಂಬೈ: 2024ರ ಐಪಿಎಲ್‌ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ತಂಡದ ಕ್ಯಾಪ್ಟನ್ಸಿ ವಿಚಾರವಾಗಿ ರೋಹಿತ್‌-ಹಾರ್ದಿಕ್‌ ಪಾಂಡ್ಯ ನಡುವಿನ ಕಿತ್ತಾಟ ಚರ್ಚೆಗೆ ಗ್ರಾಸವಾಗಿತ್ತು. ಇವರಿಬ್ಬರ ಕಿತ್ತಾಟ ಟಿ20 ವಿಶ್ವಕಪ್‌ನಲ್ಲೂ (T20 World Cup 2024) ಮುಂದುವರಿಯಲಿದೆ ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದ್ರೆ ಅದಕ್ಕೆ ವಿರುದ್ಧವಾಗಿ ನಡೆದುಕೊಂಡ ಪಾಂಡ್ಯ-ರೋಹಿತ್‌ ಟ್ರೋಫಿ ಗೆದ್ದು ತರುವಲ್ಲಿ ಯಶಸ್ವಿಯಾದರು. ಅಷ್ಟಕ್ಕೂ ಇವರಿಬ್ಬರ ಮುನಿಸು ಕೊನೆಗೊಂಡಿದ್ದು ಹೇಗೆ? ಅನ್ನೋ ಆಸಕ್ತಿದಾಯಕ ವಿಚಾರವನ್ನ ಹಿರಿಯ ಪತ್ರಕರ್ತ ವಿಮಲ್ ಕುಮಾರ್ ರಿವೀಲ್‌ ಮಾಡಿದ್ದಾರೆ.

    ಹೌದು. 2024ರ ಐಪಿಎಲ್‌ ಆವೃತ್ತಿಯಲ್ಲಿ ಗುಜರಾತ್‌ ಟೈಟಾನ್ಸ್‌ನಲ್ಲಿದ್ದ ಪಾಂಡ್ಯ (Hardik Pandya) ಅವರನ್ನು ಕರೆ ತಂದು ಮುಂಬೈ ತಂಡದ ನಾಯಕತ್ವದ ಹೊಣೆ ನೀಡಲಾಯಿತು. ಆದ್ರೆ‌ 13 ವರ್ಷಗಳಿಂದ ತಂಡಕ್ಕೆ 5 ಬಾರಿ ಟ್ರೋಫಿ ತಂದುಕೊಟ್ಟ ರೋಹಿತ್‌ (Rohit Sharma) ಅವರನ್ನ ನಾಯಕ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಅಭಿಮಾನಿಗಳು ಆಕ್ರೋಶಗೊಂಡಿದ್ದರು. ಪಾಂಡ್ಯ ವಿರುದ್ಧ ಮುಗಿಬಿದ್ದಿದ್ದರು, ಮೈದಾನದಲ್ಲಿ ನಾಯಿಯೊಂದು ಪ್ರವೇಶಿಸಿದಾಗ ಹಾರ್ದಿಕ್‌ ಹಾರ್ದಿಕ್‌ ಅಂತ ಕೂಗಿ ಅವಮಾನಿಸಿದ್ದರು. ಇದನ್ನೂ ಓದಿ: IPL 2025 | ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ?

    ಇಷ್ಟೆಲ್ಲಾ ಆಗಿದ್ದರೂ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಪಾಂಡ್ಯ ನಿರ್ಣಾಯಕ ಪಾತ್ರ ವಹಿಸಿದರು. ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಭಾರತ ಟಿ20 ವಿಶ್ವಕಪ್‌ ಗೆಲ್ಲಲು ಸಹಕಾರಿಯಾದರು. ಆದರೀಗ ರೋಹಿತ್‌-ಪಾಂಡ್ಯ ಅವರ ಮುನಿಸು ಕೊನೆಗೊಂಡಿದ್ದು ಹೇಗೆ ಅನ್ನುವ ಆಸಕ್ತಿದಾಯಕ ವಿಚಾರವನ್ನು ಹಿರಿಯ ಪತ್ರಕರ್ತ ವಿಮಲ್‌ ಕುಮಾರ್‌ (Vimal Kumar) ಹಂಚಿಕೊಂಡಿದ್ದಾರೆ.

    ಸಂವಾದವೊಂದರಲ್ಲಿ ಮಾತನಾಡಿದ ವಿಮಲ್‌ ಕುಮಾರ್‌, ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯದ ವೇಳೆ ನೆಟ್ಸ್‌ಗೆ ಹೋದಾಗ ಹಾರ್ದಿಕ್‌ ಮತ್ತು ರೋಹಿತ್‌ ಮಧ್ಯೆ ಏನು ನಡೆಯುತ್ತಿದೆ ಎಂಬುದನ್ನು ಗಮನಿಸಿದೆ. ಮೊದಲ ದಿನ ಅವರಿಬ್ಬರೂ ಮಾತನಾಡಿದ್ದು ಕಂಡುಬರಲಿಲ್ಲ. ಆದ್ರೆ 2ನೇ ದಿನ ಅವರಿಬ್ಬರು ಸಂಭಾಷಣೆ ನಡೆಸುತ್ತಿದ್ದ ರೀತಿ ನೋಡಿ ನನಗೆ ತುಂಬಾ ಖುಷಿ ಆಯ್ತು. ಹಾರ್ದಿಕ್‌ ಪಾಂಡ್ಯ, ರೋಹಿತ್‌ ಜೊತೆಗೆ ಮಾತನಾಡುತ್ತಿದ್ದ ರೀತಿ ನೋಡಿ ನನ್ನ ಕಣ್ಣನ್ನು ನಾನೇ ನಂಬಲು ಸಾಧ್ಯವಾಗಲಿಲ್ಲ. ಇಬ್ಬರೂ ಒಬ್ಬರಿಗೊಬ್ಬರು ಸಲಹೆ ನೀಡುತ್ತಿದ್ದರು. ಆಗ ತಂಡದ ಪ್ರದರ್ಶನದ ಬಗ್ಗೆ ಸಂಪೂರ್ಣ ವಿಶ್ವಾಸ ಮೂಡಿತು ಅಂತ ಭಾವುಕರಾಗಿದ್ದಾರೆ.

    ಒಬ್ಬರಿಗೊಬ್ಬರು ಸಲಹೆ ನೀಡುತ್ತಾ ಇಬ್ಬರೂ ತಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುತ್ತಿದ್ದರು. ಅಲ್ಲದೇ ಡ್ರೆಸ್ಸಿಂಗ್ ರೂಮ್‌ನ ವಾತಾವರಣವೂ ಸಹ ಇದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಒಟ್ಟಿನಲ್ಲಿ ಭಾರತ ತಂಡದ ಸಲುವಾಗಿ ಇವರಿಬ್ಬರು ಒಂದಾದರು. ಇದರ ಕ್ರೆಡಿಟ್‌ ಏನಿದ್ದರೂ ಅಂದಿನ ಕೋಚ್‌ ರಾಹುಲ್‌ ದ್ರಾವಿಡ್‌ ಅವರಿಗೆ ಸೇರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: IPL 2025 | ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ನೂತನ ಮೆಂಟರ್‌ ಆಗಿ ಜಹೀರ್‌ ಖಾನ್‌ ನೇಮಕ

    ಮ್ಯಾಚ್‌ಗೆ ಇನ್ನೂ ಮೂರು ದಿನ ಬಾಕಿಯಿರುವಂತೆಯೇ ಅವರಿಬ್ಬರ ಮುನಿಸು ಕೊನೆಗೊಂಡಿತು. ಬಳಿಕ ಸಮಾನಾಂತರವಾಗಿ ಇಬ್ಬರು ಬ್ಯಾಟ್‌ ಬೀಸಲು ಶುರು ಮಾಡಿದರು. ರೋಹಿತ್‌ ಬ್ಯಾಟಿಂಗ್‌ನಲ್ಲಿ, ಪಾಂಡ್ಯ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಗಮನ ಸೆಳೆದರು. ಆ ವಾತಾವರಣವನ್ನು ನಾನು ನೋಡಿ ಬಹಳ ಖುಷಿಪಟ್ಟೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಶಕೀಬ್‌ ಬ್ಯಾನ್‌ ಮಾಡಿ – ಬಾಂಗ್ಲಾ ಕ್ರಿಕೆಟ್ ‌ಮಂಡಳಿಗೆ ನೋಟಿಸ್‌

    2025ರ ಐಪಿಎಲ್‌ ಮೊದಲ ಪಂದ್ಯಕ್ಕೆ ಪಾಂಡ್ಯ ಬ್ಯಾನ್‌:
    2024ರ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧದ ಲೀಗ್‌ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ ಕಾರಣ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್‌ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ 1 ಪಂದ್ಯದಿಂದ ನಿಷೇಧ ಶಿಕ್ಷೆಗೆ ಗುರಿಯಾಗಿದ್ದಾರೆ. ಇದರ ಜೊತೆಗೆ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಿಗೆ 12 ಲಕ್ಷ ರೂ. ದಂಡ ಅಥವಾ ಪಂದ್ಯದ ಸಂಭಾವನೆಯಲ್ಲಿ ಶೇ.50 ರಷ್ಟು ದಂಡವನ್ನು ವಿಧಿಸಲಾಗಿದೆ. ಆದ್ದರಿಂದ 2025ರ ಐಪಿಎಲ್‌ ಆವೃತ್ತಿಯ ಮೊದಲ ಪಂದ್ಯದಿಂದ ಪಾಂಡ್ಯ ಹೊರಗುಳಿಯಲಿದ್ದಾರೆ.

  • ಟಿ20 ವಿಶ್ವಕಪ್ ಗೆಲುವು; ಕನ್ನಡಿಗ ದ್ರಾವಿಡ್‍ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ!

    ಟಿ20 ವಿಶ್ವಕಪ್ ಗೆಲುವು; ಕನ್ನಡಿಗ ದ್ರಾವಿಡ್‍ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ!

    ಬೆಂಗಳೂರು: 2024ರ ಟಿ20 ವಿಶ್ವಕಪ್ (T20 World Cup) ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರಿಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಯಿತು.

    ಬಿಜೆಪಿ (BJP) ಶಾಸಕ ಸುರೇಶ್ ಕುಮಾರ್, ಭಾರತ ಟಿ20 ವಿಶ್ವಕಪ್ ಗೆಲುವಿನ ವೇಳೆ ಟೀಂ ಇಂಡಿಯಾದ (Team India) ಮುಖ್ಯಕೋಚ್ ಆಗಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಸನ್ಮಾನಿಸುವಂತೆ ಮನವಿ ಮಾಡಿದರು. ಈ ಮನವಿಯನ್ನು ಸದನದ ಎಲ್ಲಾ ಸದಸ್ಯರು ಸ್ವಾಗತಿಸಿದರು. ಬಳಿಕ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್ ಕರ್ನಾಟಕದ ಜನತೆ ಪರವಾಗಿ ದ್ರಾವಿಡ್ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!

    ಕಳೆದ ಜೂ.29 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‍ಗಳ ರೋಚಕ ಗೆಲುವು ಸಾಧಿಸಿ ಭಾರತ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಈ ಮೂಲಕ ಭಾರತ 17 ವರ್ಷಗಳ ನಂತರ ಟಿ 20 ವಿಶ್ವಕಪ್ ಹಾಗೂ 13 ವರ್ಷಗಳ ನಂತರ ಐಸಿಸಿ ಟ್ರೋಫಿ ಬರವನ್ನು ಭಾರತ ನೀಗಿಸಿಕೊಂಡಿತು.

    ಫೈನಲ್ ಪಂದ್ಯದಲ್ಲಿ ಗೆಲುವಿಗೆ 177 ರನ್ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡ 20 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ ಸೋಲೊಪ್ಪಿಕೊಂಡಿತ್ತು. ಅಲ್ಲದೇ `ಚೋಕರ್ಸ್’ ಹಣೆಪಟ್ಟಿಯೊಂದಿಗೆ ತವರಿಗೆ ಮರಳಿತು. ಇದನ್ನೂ ಓದಿ: ಸೆಟ್ಟೇರಿತು ‘ಅರಸು’ ಡೈರೆಕ್ಟರ್ ಹೊಸ ಸಿನಿಮಾ- ಸ್ಮೈಲ್ ಗುರು ರಕ್ಷಿತ್ ಚಿತ್ರಕ್ಕೆ ಲವ್ಲಿ ಸ್ಟಾರ್ ಪ್ರೇಮ್ ಸಾಥ್

  • 2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್‌ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ!

    2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್‌ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ!

    ಬೆಂಗಳೂರು: ಟೀಂ ಇಂಡಿಯಾದ ನಿರ್ಗಮಿತ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ (Rahul Dravid) ಮತ್ತೆ ಕ್ರೀಡಾ ಸಾರ್ಥಕತೆ ಮೆರೆದಿದ್ದಾರೆ. 2024ರ ಟಿ20 ವಿಶ್ವಕಪ್‌ ಟೂರ್ನಿ ಗೆದ್ದ ಹಿನ್ನೆಲೆಯಲ್ಲಿ ಬಿಸಿಸಿಐ ನೀಡಿದ ಬಹುಮಾನ (BCCI PrizeMoney) ಮೊತ್ತದಲ್ಲಿ 2.5 ಕೋಟಿ ರೂ. ಹಿಂದಿರುಗಿಸಿ, ಮಾದರಿಯಾಗಿದ್ದಾರೆ. ಸಹಾಯ ಕೋಚ್‌ ಸಿಬ್ಬಂದಿಯಂತೆ (Coachig Staff) ತಾವೂ 2.5 ಕೋಟಿ ರೂ.ಗಳನ್ನು ಮಾತ್ರ ಪಡೆಯಲಿದ್ದು, ಉಳಿದ ಹಣವನ್ನು ಹಿಂತಿರುಗಿಸಿ ಸಮಾನತೆ ಸಾರಿದ್ದಾರೆ. ಕನ್ನಡಿಗ ರಾಹುಲ್‌ ದ್ರಾವಿಡ್‌ ಅವರ ಈ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

    ಟಿ20 ವಿಶ್ವಕಪ್‌ ಕಪ್‌ ಗೆದ್ದಬೆನ್ನಲೇ ಬಿಸಿಸಿಐ (BCCI) ಘೋಷಿಸಿದ್ದ 125 ಕೋಟಿ ರೂ. ನಗದು ಬಹುಮಾನದಲ್ಲಿ ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋಡ್‌, ಫೀಲ್ಡಿಂಗ್‌ ಕೋಚ್‌ ಟಿ.ದಿಲೀಪ್‌ ಕುಮಾರ್‌ ಹಾಗೂ ಬೌಲಿಂಗ್‌ ಕೋಚ್‌ ಪಾರಸ್‌ ಮಾಂಬ್ರೆ ಸೇರಿದಂತೆ ಕೋಚಿಂಗ್‌ ಸಿಬ್ಬಂದಿಗೆ ತಲಾ 2.5 ಕೋಟಿ ರೂ. ಬಹುಮಾನ ಸಿಗಲಿದೆ. ಆದ್ರೆ ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌ ಅವರಿಗೆ 5 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಆದ್ರೆ ರಾಹುಲ್‌ ದ್ರಾವಿಡ್‌ 2.5 ಕೋಟಿ ರೂ. ಹೆಚ್ಚುವರಿ ಹಣವನ್ನು ಹಿಂದಿರುಗಿಸಿ, ಎಲ್ಲ ಕೋಚಿಂಗ್‌ ಸಿಬ್ಬಂದಿ ಪಡೆದಷ್ಟೇ ಹಣವನ್ನು ಪಡೆದುಕೊಂಡಿದ್ದಾರೆ, ಹೀಗಾಗಿ ಅವರ ಭಾವನೆಯನ್ನು ಬಿಸಿಸಿಐ ಗೌರವಿಸುವುದಾಗಿ ಮೂಲಗಳು ತಿಳಿಸಿವೆ.

    ಬಿಸಿಸಿಐ ಘೋಷಿಸಿದ್ದೆಷ್ಟು – ಆಟಗಾರರಿಗೆ ಸಿಕ್ಕಿದ್ದೆಷ್ಟು?
    ಬಿಸಿಸಿಐ ಘೋಷಿಸಿದ್ದ 125 ಕೋಟಿ ರೂ. ನಗದು ಬಹುಮಾನ ಮೊತ್ತದಲ್ಲಿ ವಿಶ್ವಕಪ್‌  (T20 World Cup) ತಂಡಕ್ಕೆ ಆಯ್ಕೆಯಾದ 15 ಆಟಗಾರರು ತಲಾ 5 ಕೋಟಿ ರೂ. ಬಹುಮಾನ ಸ್ವೀಕರಿಸಲಿದ್ದಾರೆ. ಈ ಪೈಕಿ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಸಹ ಸೇರಿದ್ದಾರೆ. ಅಲ್ಲದೇ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದ ರಿಂಕು ಸಿಂಗ್‌, ಶುಭಮನ್‌ ಗಿಲ್‌, ಅವೇಶ್‌ ಖಾನ್‌ ಹಾಗೂ ಖಲೀಲ್‌ ಅಹ್ಮದ್‌ ಅವರಿಗೂ ತಲಾ 1 ಕೋಟಿ ರೂ. ಬಹುಮಾನ ಸಿಗಲಿದೆ.

    ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋಡ್‌, ಫೀಲ್ಡಿಂಗ್‌ ಕೋಚ್‌ ಟಿ.ದಿಲೀಪ್‌ ಕುಮಾರ್‌ ಹಾಗೂ ಬೌಲಿಂಗ್‌ ಕೋಚ್‌ ಪಾರಸ್‌ ಮಾಂಬ್ರೆ ಸೇರಿದಂತೆ ಕೋಚಿಂಗ್‌ ಸಿಂಬ್ಬಂದಿಗೆ ತಲಾ 2.5 ಕೋಟಿ ರೂ. ಬಹುಮಾನ ಸಿಗಲಿದೆ. ಇನ್ನೂ ಮುಖ್ಯಸ್ಥ ಅಜಿತ್ ಅಗರ್ಕರ್ ಸೇರಿದಂತೆ ಆಯ್ಕೆ ಸಮಿತಿಯ ಸದಸ್ಯರಿಗೆ ತಲಾ 1 ಕೋಟಿ ರೂ. ವಿತರಿಸಲಾಗುತ್ತದೆ.

    ಟೀಂ ಇಂಡಿಯಾ ಫಿಸಿಯೋಥೆರಪಿಸ್ಟ್‌ಗಳಾದ ಕಮಲೇಶ್ ಜೈನ್, ಯೋಗೇಶ್ ಪರ್ಮಾರ್ ಮತ್ತು ತುಳಸಿ ರಾಮ್ ಯುವರಾಜ್​ಗೆ ತಲಾ 2 ಕೋಟಿ ರೂ., ಭಾರತ ತಂಡ ಥ್ರೋಡೌನ್ ಸ್ಪೆಷಲಿಸ್ಟ್​ಗಳಾದ ರಾಘವಿಂದ್ರ ದಿವಿಗಿ, ನುವಾನ್ ಉದೆನೆಕೆ ಮತ್ತು ದಯಾನಂದ್ ಗರಾನಿಗೆ ತಲಾ 2 ಕೋಟಿ ರೂ., ಟೀಂ ಇಂಡಿಯಾ ಮಸಾಜ್ ಥೆರಪಿಸ್ಟ್‌ಗಳಾದ ರಾಜೀವ್ ಕುಮಾರ್ ಮತ್ತು ಅರುಣ್ ಕಾನಡೆಗೆ ತಲಾ 2 ಕೋಟಿ ರೂ., ಭಾರತ ತಂಡದ ಸ್ಟ್ರೆಂಗ್ತ್ ಅ್ಯಂಡ್ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿಗೆ 2 ಕೋಟಿ ರೂ. ನೀಡಲಾಗುತ್ತದೆ ಎಂದು ವರದಿಗಳು ಹೇಳಿವೆ.

    ಭಾರತ ವಿಶ್ವ ಚಾಂಪಿಯನ್‌:
    ಕಳೆದ ಜೂನ್‌ 29ರಂದು ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಗೆಲುವು ಸಾಧಿಸಿ ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿಯಿತು. 17 ವರ್ಷಗಳ ಬಳಿಕ ಟಿ20 ವಿಶ್ವಕಪ್‌ ಎತ್ತಿ ಹಿಡಿದ ಭಾರತ ತಂಡ 20 ಕೋಟಿ ರೂ. ಬಹುಮಾನವನ್ನೂ ಬಾಚಿಕೊಂಡಿತು. ಈ ಬೆನ್ನಲ್ಲೇ ಬಿಸಿಸಿಐ 125 ಕೋಟಿ ರೂ. ಬಹುಮಾನ ಘೋಷಣೆ ಮಾಡಿತ್ತು. ಜೊತೆಗೆ ತವರಿಗೆ ಮರಳಿದ ಬಳಿಕ ಟೀಂ ಇಂಡಿಯಾಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರದ ವತಿಯಿಂದ 11 ಕೋಟಿ ರೂ. ಬಹುಮಾನ ಘೋಷಿಸಿದರು.

  • ವಿಶ್ವ ಚಾಂಪಿಯನ್ಸ್‌ಗೆ 125 ಕೋಟಿ ರೂ. ಬಹುಮಾನ – ರೋಹಿತ್‌, ಕೊಹ್ಲಿ, ದ್ರಾವಿಡ್‌ಗೆ ಸಿಕ್ಕಿದ್ದೆಷ್ಟು?

    ವಿಶ್ವ ಚಾಂಪಿಯನ್ಸ್‌ಗೆ 125 ಕೋಟಿ ರೂ. ಬಹುಮಾನ – ರೋಹಿತ್‌, ಕೊಹ್ಲಿ, ದ್ರಾವಿಡ್‌ಗೆ ಸಿಕ್ಕಿದ್ದೆಷ್ಟು?

    ಮುಂಬೈ: 2024ರ ಟಿ20 ವಿಶ್ವಕಪ್‌ (T20 World Cup 2024) ವಿಜೇತ ಭಾರತ ತಂಡಕ್ಕೆ ಬಿಸಿಸಿಐ ನೀಡಿದ್ದ 125 ಕೋಟಿ ರೂ. ನಗದು ಬಹುಮಾನ (BCCI Prize Money) ಹಂಚಿಕೆ ಮಾಡಲಾಗಿದೆ.

    ಟಿ20 ವಿಶ್ವಕಪ್‌ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದ 15 ಆಟಗಾರರು, ಮೀಸಲು ಆಟಗಾರರು, ಕೋಚ್‌ ಹಾಗೂ ಸಹಾಯಕ ಸಿಬ್ಬಂದಿ ಸೇರಿದಂತೆ ಒಟ್ಟು 42 ಸದಸ್ಯರಿಗೆ ಬಿಸಿಸಿಐ ನಗದು ಬಹುಮಾನ ಪಡೆಯಲಿದ್ದಾರೆ. ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌ (Rahul Dravid) ಸೇರಿದಂತೆ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯ ಆಟದ ಆಟಗಾರರಿಗೂ ನಗದು ಬಹುಮಾನ ವಿತರಿಸಲಾಗುವುದು ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದನ್ನೂ ಓದಿ: ಹ್ಯಾಟ್ರಿಕ್‌ ಸಿಕ್ಸರ್‌ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ!

    ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌, ವಿಶ್ವಕಪ್‌ ತಂಡಕ್ಕೆ ಆಯ್ಕೆಯಾದ 15 ಆಟಗಾರರು ತಲಾ 5 ಕೋಟಿ ರೂ. ಬಹುಮಾನ ಸ್ವೀಕರಿಸಿದ್ದಾರೆ. ಈ ಪೈಕಿ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಸಹ ಸೇರಿದ್ದಾರೆ. ಅಲ್ಲದೇ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದ ರಿಂಕು ಸಿಂಗ್‌, ಶುಭಮನ್‌ ಗಿಲ್‌, ಅವೇಶ್‌ ಖಾನ್‌ ಹಾಗೂ ಖಲೀಲ್‌ ಅಹ್ಮದ್‌ ಅವರಿಗೂ ತಲಾ 1 ಕೋಟಿ ರೂ. ಬಹುಮಾನ ಸಿಗಲಿದೆ.

    ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋಡ್‌, ಫೀಲ್ಡಿಂಗ್‌ ಕೋಚ್‌ ಟಿ.ದಿಲೀಪ್‌ ಕುಮಾರ್‌ ಹಾಗೂ ಬೌಲಿಂಗ್‌ ಕೋಚ್‌ ಪಾರಸ್‌ ಮಾಂಬ್ರೆ ಸೇರಿದಂತೆ ಕೋಚಿಂಗ್‌ ಸಿಂಬ್ಬಂದಿಗೆ ತಲಾ 2.5 ಕೋಟಿ ರೂ. ಬಹುಮಾನ ಸಿಗಲಿದೆ. ಇನ್ನೂ ಮುಖ್ಯಸ್ಥ ಅಜಿತ್ ಅಗರ್ಕರ್ ಸೇರಿದಂತೆ ಆಯ್ಕೆ ಸಮಿತಿಯ ಸದಸ್ಯರಿಗೆ ತಲಾ 1 ಕೋಟಿ ರೂ. ವಿತರಿಸಲಾಗುತ್ತದೆ. ಇದನ್ನೂ ಓದಿ: T20 ಏಷ್ಯಾಕಪ್‌ ಟೂರ್ನಿಗೆ ಭಾರತ ಮಹಿಳಾ ತಂಡ ಪ್ರಕಟ – ಕನ್ನಡತಿ ಶ್ರೇಯಾಂಕಾಗೆ ಸ್ಥಾನ!

    ಟೀಂ ಇಂಡಿಯಾ ಫಿಸಿಯೋಥೆರಪಿಸ್ಟ್‌ಗಳಾದ ಕಮಲೇಶ್ ಜೈನ್, ಯೋಗೇಶ್ ಪರ್ಮಾರ್ ಮತ್ತು ತುಳಸಿ ರಾಮ್ ಯುವರಾಜ್​ಗೆ ತಲಾ 2 ಕೋಟಿ ರೂ., ಭಾರತ ತಂಡ ಥ್ರೋಡೌನ್ ಸ್ಪೆಷಲಿಸ್ಟ್​ಗಳಾದ ರಾಘವಿಂದ್ರ ದಿವಿಗಿ, ನುವಾನ್ ಉದೆನೆಕೆ ಮತ್ತು ದಯಾನಂದ್ ಗರಾನಿಗೆ ತಲಾ 2 ಕೋಟಿ ರೂ., ಟೀಂ ಇಂಡಿಯಾ ಮಸಾಜ್ ಥೆರಪಿಸ್ಟ್‌ಗಳಾದ ರಾಜೀವ್ ಕುಮಾರ್ ಮತ್ತು ಅರುಣ್ ಕಾನಡೆಗೆ ತಲಾ 2 ಕೋಟಿ ರೂ., ಭಾರತ ತಂಡದ ಸ್ಟ್ರೆಂಗ್ತ್ ಅ್ಯಂಡ್ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿಗೆ 2 ಕೋಟಿ ರೂ. ನೀಡಲಾಗುತ್ತದೆ ಎಂದು ವರದಿಗಳು ಹೇಳಿವೆ.

    ಭಾರತ ವಿಶ್ವ ಚಾಂಪಿಯನ್‌:
    ಕಳೆದ ಜೂನ್‌ 29ರಂದು ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಗೆಲುವು ಸಾಧಿಸಿ ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿಯಿತು. 17 ವರ್ಷಗಳ ಬಳಿಕ ಟಿ20 ವಿಶ್ವಕಪ್‌ ಎತ್ತಿ ಹಿಡಿದ ಭಾರತ ತಂಡ 20 ಕೋಟಿ ರೂ. ಬಹುಮಾನವನ್ನೂ ಬಾಚಿಕೊಂಡಿತು. ಈ ಬೆನ್ನಲ್ಲೇ ಬಿಸಿಸಿಐ 125 ಕೋಟಿ ರೂ. ಬಹುಮಾನ ಘೋಷಣೆ ಮಾಡಿತ್ತು. ಜೊತೆಗೆ ತವರಿಗೆ ಮರಳಿದ ಬಳಿಕ ಟೀಂ ಇಂಡಿಯಾಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರದ ವತಿಯಿಂದ 11 ಕೋಟಿ ರೂ. ಬಹುಮಾನ ಘೋಷಿಸಿದರು. ಇದನ್ನೂ ಓದಿ: ಅಂದು ಅವಮಾನ, ಇಂದು ಸನ್ಮಾನ – ಟೀಕಿಸಿದ್ದ ಜನರೇ ಜೈಕಾರ ಕೂಗಿದ್ರು; ಭಾವುಕನಾದ ಪಾಂಡ್ಯ

  • ಬಿಸಿಸಿಐ ಬಳಿಕ ಮಹಾರಾಷ್ಟ್ರ ಸರ್ಕಾರದಿಂದಲೂ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ ಗಿ‌ಫ್ಟ್‌!

    ಬಿಸಿಸಿಐ ಬಳಿಕ ಮಹಾರಾಷ್ಟ್ರ ಸರ್ಕಾರದಿಂದಲೂ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ ಗಿ‌ಫ್ಟ್‌!

    ಮುಂಬೈ: 2024ರ ಟಿ20 ವಿಶ್ವಕಪ್‌ ವಿಜೇತ ಭಾರತ ತಂಡಕ್ಕೆ (Team India) ಬಿಸಿಸಿಐ 125 ಕೋಟಿ ರೂ. ನಗದು ಬಹುಮಾನ ನೀಡಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರವೂ (Maharashtra Government) ಭರ್ಜರಿ ಉಡುಗೊರೆ ಘೋಷಿಸಿದೆ.

    ಶುಕ್ರವಾರ ಇಲ್ಲಿನ ವಿಧಾನ ಭವನದ ಸೆಂಟ್ರಲ್ ಹಾಲ್‌ನಲ್ಲಿ (ರಾಜ್ಯ ಶಾಸಕಾಂಗ ಸಂಕೀರ್ಣ) ನಡೆದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ (Eknath Shinde), ಸರ್ಕಾರದ ವತಿಯಿಂದ 11 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ.

    ಇದಕ್ಕೂ ಮುನ್ನ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತಿತರರ ಆಟಗಾರರನ್ನು ಏಕನಾಥ್ ಶಿಂಧೆ ಸನ್ಮಾನಿಸಿದರು. ದಕ್ಷಿಣ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸ ವರ್ಷಾ ಬಂಗಲೆಯಲ್ಲಿ ರೋಹಿತ್ ಶರ್ಮಾ (Rohit Sharma) ಸೇರಿದಂತೆ ಸಹ ಆಟಗಾರರಾದ ಯಶಸ್ವಿ ಜೈಸ್ವಾಲ್, ಶಿವಂ ದುಬೆ ಮತ್ತು ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನ ಸನ್ಮಾನಿಸಿದರು. ಜೊತೆಗೆ ವಿಘ್ನೇಶ್ವರ ಮೂರ್ತಿ ನೀಡಿ ಗೌರವಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಶಿಂಧೆ, ಅದ್ಭುತ ಮ್ಯಾಚ್, ಡಿಫೈನಿಂಗ್ ಕ್ಯಾಚ್‌ಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಶ್ಲಾಘಿಸಿದರು.

    ನಂತರ ಮುಂಬೈನ ಮಹಾರಾಷ್ಟ್ರ ವಿಧಾನ ಭವನದ ಸಂಕೀರ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ಆಟಗಾರರನ್ನು ಸನ್ಮಾನಿಸಲಾಯಿತು. ಈ ವೇಳೆ ಶಿಂಧೆ ಅವರು ರೋಹಿತ್‌ ಶರ್ಮಾಗೆ ಶಿವಾಜಿ ಮಹರಾಜ್‌ ಮೂರ್ತಿ ನೀಡಿ ಗೌರವಿಸಲಾಯಿತು.

    ಈ ಬಾರಿ ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿ ನಡೆಯಿತು. ಆರಂಭದಿಂದಲೂ ಒಂದೇ ಒಂದು ಪಂದ್ಯವನ್ನೂ ಸೋಲದ ಭಾರತ ಫೈನಲ್‌ನಲ್ಲಿಯೂ ದಕ್ಷಿಣ ಆಫ್ರಿಕಾ ವಿರುದ್ಧ ಬಾರ್ಬಡೋಸ್‌ನಲ್ಲಿ ರೋಚಕ ಗೆಲುವು ಸಾಧಿಸಿತು.

  • ಟಿ20 ವಿಶ್ವಕಪ್‌ ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸಿದ ರೋಹಿತ್‌ – ವೇದಿಕೆಯಲ್ಲಿ ಕೊಹ್ಲಿ ಭಾವುಕ!

    ಟಿ20 ವಿಶ್ವಕಪ್‌ ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸಿದ ರೋಹಿತ್‌ – ವೇದಿಕೆಯಲ್ಲಿ ಕೊಹ್ಲಿ ಭಾವುಕ!

    ಬೆಂಗಳೂರು: 2024ರ ಟಿ20 ವಿಶ್ವಕಪ್‌ (T20 World Cup 2024) ವಿಜೇತ ಭಾರತ ತಂಡಕ್ಕೆ ಗೌರವಿಸುವ ಸಲುವಾಗಿ ವಾಂಖೆಡೆ ಮೈದಾನದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮವು ಅನೇಕ ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ಟೀಂ ಇಂಡಿಯಾದ ಪ್ರತಿಯೊಬ್ಬ ಆಟಗಾರರು ಮಾತನಾಡಿ ಹಂಚಿಕೊಂಡರು. ಈ ವೇಳೆ ಟಿ20 ವಿಶ್ವಕಪ್‌ ಪ್ರಶಸ್ತಿಯನ್ನು ರೋಹಿತ್‌ ಶರ್ಮಾ ಇಡೀ ದೇಶಕ್ಕೆ ಸಮರ್ಪಿಸಿದರು.

    ನಾಯಕ ರೋಹಿತ್‌ ಶರ್ಮಾ ಮಾತನಾಡಿ ಮುಂಬೈ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದರು. ಜೊತೆಗೆ ತಂಡದ ಪ್ರತಿಯೊಬ್ಬ ಆಟಗಾರನ ಶ್ರಮವನ್ನು ಗುಣಗಾನ ಮಾಡಿದರು. ಅಷ್ಟೇ ಅಲ್ಲದೇ ಈ ಗೆಲುವಿನಲ್ಲಿ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರ ಕೊಡುಗೆಯನ್ನು ಸ್ಮರಿಸಿದರು. ಇದನ್ನು ಕೇಳಿದ ಪಾಂಡ್ಯ ಮೈದಾನದಲ್ಲೇ ಕಣ್ಣೀರಿಟ್ಟರು. ಕೊನೇ ಓವರ್‌ನ ಮೊದಲ ಎಸೆತದಲ್ಲಿ ಡೇವಿಡ್‌ ಮಿಲ್ಲರ್‌ ಅವರನ್ನು ಔಟ್‌ ಮಾಡಿದ್ದೇ ಗೆಲುವಿಗೆ ದೊಡ್ಡ ತಿರುವು ಕೊಟ್ಟಿತು ಎಂದು ರೋಹಿತ್‌ ಗುಣಗಾನ ಮಾಡಿದರು.

    ಅಷ್ಟೇ ಅಲ್ಲ, ಭಾರತೀಯ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಅವರು ಈ ಟಿ20 ವಿಶ್ವಕಪ್ ಪ್ರಶಸ್ತಿಗಾಗಿ ಆಟಗಾರರಂತೆ ಹಪಹಪಿಸುತ್ತಿದ್ದರು. ಇಂದು ಎಲ್ಲರ ಕನಸು ನನಸಾಗಿದೆ. ಈ ವಿಶ್ವಕಪ್‌ ನಮ್ಮ ಗೆಲುವಲ್ಲ, ದೇಶದ ಗೆಲುವು, ದೇಶದ ಪ್ರತಿಯೊಬ್ಬರಿಗೂ ಸೇರಿದ್ದು ಎಂದು ಭಾವುಕರಾದರು.

    ಇದೇ ವೇಳೆ ಮಾತನಾಡಿದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್, ನಾನು ಈ ಪ್ರೀತಿಯನ್ನು ಕಳೆದುಕೊಳ್ಳಲಿದ್ದೇನೆ, ರಾತ್ರಿ ಬೀದಿಗಳಲ್ಲಿ ನಾನು ಕಂಡದ್ದನ್ನು ನಾನು ಮರೆಯುವುದಿಲ್ಲ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

    ಕೊಹ್ಲಿಯೂ ಭಾವುಕ:
    ರೋಹಿತ್‌ ಬಳಿಕ ಮಾತನಾಡಿದ ಕಿಂಗ್‌ ಕೊಹ್ಲಿ, ನನ್ನ 15 ವರ್ಷಗಳ ವೃತ್ತಿಜೀವನದಲ್ಲಿ ರೋಹಿತ್ ಇಷ್ಟೊಂದು ಭಾವುಕರಾಗಿರುವುದನ್ನು ನಾನು ನೋಡಿಲ್ಲ. ನಾನು ಡ್ರೆಸ್ಸಿಂಗ್ ರೂಮ್‌ಗೆ ಹೋಗುತ್ತಿದ್ದೆ ಮತ್ತು ರೋಹಿತ್ ಹೊರಗೆ ಬರುತ್ತಿದ್ದರು. ಇಬ್ಬರೂ ಭಾವುಕರಾಗಿ ಪರಸ್ಪರ ಅಪ್ಪಿಕೊಂಡೆವು. ಆ ಕ್ಷಣ ನನಗೆ ವಿಶೇಷವಾಗಿತ್ತು ಎಂದು ಹೇಳಿದರು.

    2007 ಅಥವಾ 2011ರಲ್ಲಿ ನಾವು ವಿಶ್ವಕಪ್ ಗೆದ್ದಾಗ ಹಿರಿಯ ಆಟಗಾರರು ತುಂಬಾ ಅಳುತ್ತಿದ್ದರು. ಆದರೆ ನಾನು ಅವರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಲಿಲ್ಲ. ಖುಷಿಯ ಸಂದರ್ಭದಲ್ಲಿ ಅವರೆಲ್ಲಾ ಯಾಕೆ ಇಷ್ಟೊಂದು ಭಾವುಕರಾಗುತ್ತಿದ್ದಾರೆ ಎಂದು ಆಶ್ಚರ್ಯ ಪಡುತ್ತಿದ್ದೆ. ಆದರೆ ಈಗ ನನಗೆ ಅರ್ಥವಾಯಿತು. ನಾನಿರಲಿ ಅಥವಾ ರೋಹಿತ್ ಆಗಿರಲಿ, ಇಬ್ಬರೂ ಬಹುಕಾಲ ಟ್ರೋಫಿ ಗೆಲ್ಲುವುದರಲ್ಲಿ ನಿರತರಾಗಿದ್ದರು. ಮೊದಲು ನನ್ನ ನಾಯಕತ್ವದಲ್ಲಿ ಮತ್ತು ನಂತರ ರೋಹಿತ್ ನಾಯಕತ್ವದಲ್ಲಿ. ನಾವಿಬ್ಬರೂ ಈ ಟ್ರೋಫಿ ಗೆಲ್ಲಲು ಹತಾಶರಾಗಿದ್ದೆವು. ಈಗ ನಾವು ಗೆದ್ದಿರುವುದು ನಮಗೆ ವಿಶೇಷ. ಗೆದ್ದು ಮತ್ತೆ ವಾಂಖೆಡೆಗೆ ಬರುವುದು ನಮ್ಮ ಪಾಲಿಗೆ ವಿಶೇಷವಾಗಿದೆ ಎಂದು ಹಳೆಯ ನೆನಪುಗಳನ್ನು ಮೆಲುಕುಹಾಕಿದರು.

  • ಅಂದು ಅವಮಾನ, ಇಂದು ಸನ್ಮಾನ – ಟೀಕಿಸಿದ್ದ ಜನರೇ ಜೈಕಾರ ಕೂಗಿದ್ರು; ಭಾವುಕನಾದ ಪಾಂಡ್ಯ

    ಅಂದು ಅವಮಾನ, ಇಂದು ಸನ್ಮಾನ – ಟೀಕಿಸಿದ್ದ ಜನರೇ ಜೈಕಾರ ಕೂಗಿದ್ರು; ಭಾವುಕನಾದ ಪಾಂಡ್ಯ

    ಮುಂಬೈ: ಇಲ್ಲಿನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ನಡೆದ ವಿಶೇಷ ಸನ್ಮಾನ ಕಾರ್ಯಕ್ರಮದಲ್ಲಿ ಭಾರತೀಯ ಆಟಗಾರರ ಪರ ಅಭಿಮಾನಿಗಳು ಜೈಕಾರ ಕೂಗಿದರು. ಇದರಲ್ಲಿ ವಿಶೇಷ ಅನಿಸಿದ್ದು ಹಾರ್ದಿಕ್‌ ಪಾಂಡ್ಯ. ಏಕೆಂದರೆ 2024ರ ಐಪಿಎಲ್‌ ಟೂರ್ನಿ ವೇಳೆ ಇದೇ ಮೈದಾನದಲ್ಲಿ ಪಾಂಡ್ಯ ಪ್ರೇಕ್ಷಕರು ಹಾಗೂ ರೋಹಿತ್‌ ಅಭಿಮಾನಿಗಳಿಂದ ಭಾರೀ ಟೀಕೆಗೆ ಗುರಿಯಾಗಿದ್ದರು. ಅಂದು ಅವಮಾನಿಸಿದ್ದ ಜಾಗದಲ್ಲೇ ಇಂದು ಸನ್ಮಾನ ದೊರೆಯಿತು. ಟೀಕಿಸಿದ್ದ ಅಭಿಮಾನಿಗಳೇ ಜೈಕಾರ ಕೂಗಿದ್ದನ್ನು ಕಂಡು ಹಾರ್ದಿಕ್‌ ಭಾವುಕರಾದರು.

    ಹೌದು. 2024ರ ಐಪಿಎಲ್‌ ಆವೃತ್ತಿಯಲ್ಲಿ ಮುಂಬೈ ಫ್ರಾಂಚೈಸಿ ಹೊಸ ನಾಯಕತ್ವ ತರಲು ಬಯಸಿತ್ತು. ಅದಕ್ಕಾಯೇ ಗುಜರಾತ್‌ ಟೈಟಾನ್ಸ್‌ ತಂಡದಿಂದ ಹಾರ್ದಿಕ್‌ ಪಾಂಡ್ಯ ಅವರನ್ನು ಮತ್ತೆ ತವರು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು. ಟಿ20 ವಿಶ್ವಕಪ್‌ ಒತ್ತಡವನ್ನೂ ನಿಭಾಯಿಸಬೇಕಿದ್ದ ಕಾರಣ,‌ 5 ಬಾರಿ ಚಾಂಪಿಯನ್‌ ಪಟ್ಟ ಗೆದ್ದುಕೊಟ್ಟ ರೋಹಿತ್‌ ಶರ್ಮಾರನ್ನು ಬಿಟ್ಟು ಹಾರ್ದಿಕ್‌ ಪಾಂಡ್ಯಗೆ ನಾಯಕತ್ವ ನೀಡಲಾಯಿತು. ಆದ್ರೆ ನಾಯಕತ್ವದ ಹೊಣೆ ಹೊತ್ತ ಭರದಲ್ಲಿ ಹಾರ್ದಿಕ್‌ ಪಾಂಡ್ಯ ಅವರು ಫೀಲ್ಡ್‌ನಲ್ಲಿ ರೋಹಿತ್‌ರನ್ನು ನಡೆಸಿಕೊಂಡ ರೀತಿ ಭಾರೀ ಟೀಕೆಗೆ ಗುರಿಯಾಗುವಂತೆ ಮಾಡಿತ್ತು.

    ಒಂದೊಮ್ಮೆ ಪಂದ್ಯದ ಮಧ್ಯದಲ್ಲೇ ನಾಯಿಯೊಂದು ಮೈದಾನ ಪ್ರವೇಶಿಸಿತ್ತು, ಈ ವೇಳೆ ಪ್ರೇಕ್ಷಕರು ಅದನ್ನು ಹಾರ್ದಿಕ್‌, ಹಾರ್ದಿಕ್‌ ಎಂದು ಕೂಗಿ ಅವಮಾನಿಸಿದ್ದರು. ಇದ್ಯಾ‌ವುದಕ್ಕೂ ಕುಗ್ಗದ ಪಾಂಡ್ಯ ತಮ್ಮ ಪ್ರದರ್ಶನ ಮುಂದುವರಿಸಿದರು. ಆದ್ರೆ ಸತತ ಸೋಲುಗಳಿಂದಾಗಿ ಮುಂಬೈ ತಂಡ ಲೀಗ್‌ ಸುತ್ತಿನಲ್ಲಿ ಹೊರಬಿದ್ದಿತು. ಇದರಿಂದ ಪಾಂಡ್ಯ ನಾಯಕತ್ವದ ಬಗ್ಗೆಯೂ ಭಾರೀ ಟೀಕೆ ವ್ಯಕ್ತವಾಗಿತ್ತು. ಇಂದು ಅದೇ ಮೈದಾನದಲ್ಲಿ ಪಾಂಡ್ಯ ಸನ್ಮಾನ ಸ್ವೀಕರಿಸಿದ್ದಾರೆ.

    ಟಿ20 ವಿಶ್ವಕಪ್‌ ಟೂರ್ನಿಯ ಅಂತಿಮ ಓವರ್‌ನಲ್ಲಿ ಪಾಂಡ್ಯ ಅವರ ಚಾಣಾಕ್ಷ ಬೌಲಿಂಗ್‌ ಭಾರತಕ್ಕೆ ಗೆಲುವು ತಂದುಕೊಟ್ಟಿತು. ನಿರ್ಣಾಯಕ ಸಮಯದಲ್ಲಿ ಹೆನ್ರಿಕ್‌ ಕ್ಲಾಸೆನ್‌, ಡೇವಿಡ್‌ ಮಿಲ್ಲರ್‌ ಅವರ ವಿಕೆಟ್‌ಗಳನ್ನು ಪಡೆಯುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು. ಹೀಗಾಗಿ ಭಾರತದ ಟಿ 20 ವಿಶ್ವಕಪ್ ಗೆಲುವಿನ ನಂತರ ಪಾಂಡ್ಯ ಅವರ ಜೀವನವು ಅನೇಕ ರೀತಿಯಲ್ಲಿ ಬದಲಾವಣೆ ಕಂಡಿತು.

    ಕಠಿಣ ದಿನಗಳನ್ನು ನೆನಪಿಸಿಕೊಂಡ ಪಾಂಡ್ಯ
    ಪಂದ್ಯದ ಬಳಿಕ ಮಾತನಾಡಿದ್ದ ಪಾಂಡ್ಯ ಕಠಿಣ ದಿನಗಳನ್ನು ನೆನಪಿಸಿಕೊಂಡಿದ್ದರು. ಇದು ತುಂಬಾ ಭಾವನಾತ್ಮಕ ಕ್ಷಣ. ನಾವು ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಇಂದು ಇಡೀ ರಾಷ್ಟ್ರವು ಬಯಸಿದ್ದನ್ನ ನಾವು ಪೂರೈಸಿದ್ದೇವೆ. ಇದು ನನಗೆ ಹೆಚ್ಚು ವಿಶೇಷವಾಗಿದೆ. ಏಕೆಂದರೆ ನನ್ನ ಕೊನೆಯ 6 ತಿಂಗಳು ಕಷ್ಟಕರವಾಗಿದ್ದವು ಎಂದು ನೆನಪಿಸಿಕೊಂಡು ಕಣ್ಣೀರಿಟ್ಟಿದ್ದರು.

  • Champions: ವಿಶ್ವ ಚಾಂಪಿಯನ್ಸ್‌ಗೆ ಬಂಪರ್‌ ಗಿಫ್ಟ್‌ – 125 ಕೋಟಿ ರೂ. ಬಹುಮಾನ ಚೆಕ್‌ ವಿತರಣೆ

    Champions: ವಿಶ್ವ ಚಾಂಪಿಯನ್ಸ್‌ಗೆ ಬಂಪರ್‌ ಗಿಫ್ಟ್‌ – 125 ಕೋಟಿ ರೂ. ಬಹುಮಾನ ಚೆಕ್‌ ವಿತರಣೆ

    ಮುಂಬೈ: 2024ರ ಟಿ20 ವಿಶ್ವಕಪ್‌ (T20 World Cup 2024) ವಿಜೇತ ಭಾರತ ತಂಡ ಅದ್ಧೂರಿ ವಿಜಯಯಾತ್ರೆ ಮುಗಿಸಿದ ಬೆನ್ನಲ್ಲೇ ಬಿಸಿಸಿಐ ಭರ್ಜರಿ ಉಡುಗೊರೆ ನೀಡಿ ಸನ್ಮಾನಿಸಿದೆ.

    ತಾಯ್ನಾಡಿಗೆ ಮರಳಿದ್ದ ಟೀಂ ಇಂಡಿಯಾ ಆಟಗಾರರಿಗೆ ಮುಂಬೈನಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಮುಂಬೈ ಕಡಲತೀರ ನಾರೀಮನ್ ಪಾಯಿಂಟ್‌ನಿಂದ ಆರಂಭಗೊಂಡ ಅದ್ಧೂರಿ ಯಾತ್ರೆ ವಾಂಖೆಡೆ ಕ್ರೀಡಾಂಗಣ ತಲುಪಿತು. ಬಳಿಕ ಟೀಂ ಇಂಡಿಯಾ ಆಟಗಾರರು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿದ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತದ (BCCI Prizemoney) ಚೆಕ್‌ ವಿತರಣೆ ಮಾಡಿತು. ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್‌ ಶಾ, ಆಟಗಾರರಿಗೆ ಚೆಕ್‌ ವಿತರಣೆ ಮಾಡಿದರು. ಇದಕ್ಕೂ ಮುನ್ನ ಟೀಂ ಇಂಡಿಯಾ (Team India) ಆಟಗಾರರು ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದರು. ಇದನ್ನೂ ಓದಿ: ಅಂದು ಅವಮಾನವಾಗಿದ್ದ ಜಾಗದಲ್ಲೇ ಸನ್ಮಾನ – ನೆನಪಿದೆಯಾ 2007ರ ರೋಮಾಂಚನಕಾರಿ ಕ್ಷಣ!

    ರೋ-ಕೊ ಜೋಡಿ ಕಮಾಲ್:‌
    ಮುಂಬೈನಲ್ಲಿ ನಡೆದ ಅದ್ಧೂರಿ ವಿಜಯಯಾತ್ರೆಯಲ್ಲಿ ನಾಯಕ ರೋಹಿತ್‌ ಶರ್ಮಾ (Rohit Sharma), ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಭರ್ಜರಿ ಕಮಾಲ್‌ ಮಾಡಿದರು. ವಿಜಯೋತ್ಸವ ಪರೇಡ್‌ ವೇಳೆ ಆಟಗಾರರ ಮಧ್ಯೆ ನಿಂತು ಸಂಭ್ರಮದ ಕಡಲಲ್ಲಿ ತೇಲುತ್ತಿದ್ದ ರೋಹಿತ್‌ ಶರ್ಮಾರ ಹೆಗಲ ಮೇಲೆ ಕೈಹಾಕಿಕೊಂಡು ಕೊಹ್ಲಿ ಬಸ್‌ ಮುಂಭಾಗಕ್ಕೆ ಕರೆತಂದರು. ಬಳಿಕ ಇಬ್ಬರೂ ಟ್ರೋಫಿ ಎತ್ತಿ ಹಿಡಿದು ಜೋರಾಗಿ ಘರ್ಜಿಸಿದರು. ಈ ದೃಶ್ಯದ ವೀಡಿಯೋ ತುಣುಕು ಕೆಲವೇ ಕ್ಷಣಗಳಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿತು. ಇದನ್ನೂ ಓದಿ: ವಿಜಯಯಾತ್ರೆ ಶುರು – ʻವಿಶ್ವʼಗೆದ್ದ ವೀರರನ್ನು ಕಣ್ತುಂಬಿಕೊಂಡ ಅಭಿಮಾನಿಗಳು!

    ನಂಬಿಕೆ ಉಳಿಸಿಕೊಂಡ ಕೊಹ್ಲಿ:
    ವಿಶ್ವಕಪ್‌ ಟೂರ್ನಿಯ ಆರಂಭದಿಂದಲೂ ʻರೋ-ಕೊʼ ಆರಂಭಿಕ ಜೋಡಿ ಭರ್ಜರಿ ಕಮಾಲ್‌ ಮಾಡಿತ್ತು. ಆದ್ರೆ ಆರಂಭಿಕ ಪಂದ್ಯದಿಂದಲೂ ಫಾರ್ಮ್‌ ಕಳೆದುಕೊಂಡಿದ್ದ ಕಿಂಗ್‌ ಕೊಹ್ಲಿ ಬಗ್ಗೆ ಅನೇಕರಿಂದ ಟೀಕೆಗಳು ವ್ಯಕ್ತವಾಗುತ್ತಿತ್ತು. ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ನಾಯಕ ರೋಹಿತ್‌, ವಿರಾಟ್‌ ಪರವಾಗಿಯೇ ಮಾತನಾಡುತ್ತಾ ಬಂದಿದ್ದರು. ಬಹುಶಃ ವಿರಾಟ್‌ ತಮ್ಮ ಆಟವನ್ನು ಫೈನಲ್‌ಗೆ ಉಳಿಸಿಕೊಂಡಿದ್ದಾರೆ ಎಂದು ವಿಶ್ವಾಸದ ನುಡಿಗಳನ್ನಾಡಿದ್ದರು. ಅದರಂತೆ ರೋಹಿತ್‌ ಶರ್ಮಾ ಅವರ ನಂಬಿಕೆಯನ್ನು ಕೊಹ್ಲಿ ಸುಳ್ಳಾಗಿಸಲಿಲ್ಲ. ಸ್ಫೋಟಕ ಪ್ರದರ್ಶನದೊಂದಿಗೆ ತಾಳ್ಮೆಯ ಆಟವಾಡಿದ ಕೊಹ್ಲಿ 59 ಎಸೆತಗಳಲ್ಲಿ 76 ರನ್‌ ಗಳಿಸಿದ್ದರು. ಇದು ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ 170 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಅಲ್ಲದೇ ವಿಶ್ವಕಪ್‌ ಇತಿಹಾಸದಲ್ಲೇ ತಂಡದವೊಂದರ ಗರಿಷ್ಠ ರನ್‌ ಮೊತ್ತವೂ (176) ಆಯಿತು.

    ʻವಿಶ್ವʼ ವಿಜೇತರಿಗೆ ನಮೋ ಅಭಿನಂದನೆ:
    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು. ಇದನ್ನೂ ಓದಿ: T20 ವಿಶ್ವಕಪ್‌ ಗೆಲುವಿನ ಸಂಭ್ರಮ – ಬಿಸಿಸಿಐನಿಂದ ಮೋದಿಗೆ ʻನಮೋ ನಂ.1ʼ ಟೀ ಶರ್ಟ್‌ ಗಿಫ್ಟ್‌!

  • ವಿಶ್ವಕಪ್‌ ಟ್ರೋಫಿ ಹಿಡಿದು ಘರ್ಜಿಸಿದ ʻರೋ-ಕೊʼ – ವಾಂಖೆಡೆ ಮೈದಾನ ತಲುಪಿದ ವಿಜಯಯಾತ್ರೆ!

    ವಿಶ್ವಕಪ್‌ ಟ್ರೋಫಿ ಹಿಡಿದು ಘರ್ಜಿಸಿದ ʻರೋ-ಕೊʼ – ವಾಂಖೆಡೆ ಮೈದಾನ ತಲುಪಿದ ವಿಜಯಯಾತ್ರೆ!

    ಮುಂಬೈ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್‌ (T20 World Cup) ಗೆದ್ದು ತಂದ ಟೀಂ ಇಂಡಿಯಾ ಕ್ರಿಕೆಟ್‌ ಆಟಗಾರರನ್ನು ಗೌರವಿಸುವ ಸಲುವಾಗಿ ಮುಂಬೈನಲ್ಲಿಂದು ಅದ್ಧೂರಿ ವಿಜಯಯಾತ್ರೆ ನಡೆಯಿತು. ಮುಂಬೈ (Mumbai) ಕಡಲತೀರ ನಾರೀಮನ್ ಪಾಯಿಂಟ್‌ನಿಂದ ಆರಂಭಗೊಂಡ ಅದ್ಧೂರಿ ಯಾತ್ರೆ ಸುಮಾರು 2 ಕಿಮೀ ತಲುಪಿತು. ವಿಜಯಯಾತ್ರೆಯಲ್ಲಿ ನಾಯಕ ರೋಹಿತ್‌ ಶರ್ಮಾ, ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ (Virat Kohli) ಇಬ್ಬರು ನೆರೆದಿದ್ದ ಅಭಿಮಾನಿಗಳ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸುವ ಕೆಲಸ ಮಾಡಿದರು.

    ವಿಜಯೋತ್ಸವ ಪರೇಡ್‌ ವೇಳೆ ಆಟಗಾರರ ಮಧ್ಯೆ ನಿಂತು ಸಂಭ್ರಮದ ಕಡಲಲ್ಲಿ ತೇಲುತ್ತಿದ್ದ ರೋಹಿತ್‌ ಶರ್ಮಾರ (Rohit Sharma) ಹೆಗಲ ಮೇಲೆ ಕೈಹಾಕಿಕೊಂಡು ಕೊಹ್ಲಿ ಬಸ್‌ ಮುಂಭಾಗಕ್ಕೆ ಕರೆತಂದರು. ಬಳಿಕ ಇಬ್ಬರೂ ಟ್ರೋಫಿಯನ್ನು ಎತ್ತಿ ಹಿಡಿದು ಜೋರಾಗಿ ಕೇಕೆ ಹಾಕಿದರು. ಈ ದೃಶ್ಯದ ವೀಡಿಯೋ ತುಣುಕು ಕೆಲವೇ ಕ್ಷಣಗಳಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಅಂದು ಅವಮಾನವಾಗಿದ್ದ ಜಾಗದಲ್ಲೇ ಸನ್ಮಾನ – ನೆನಪಿದೆಯಾ 2007ರ ರೋಮಾಂಚನಕಾರಿ ಕ್ಷಣ!

    ನಾಯಕನ ನಂಬಿಕೆ ಎತ್ತಿ ಹಿಡಿದ ಕಿಂಗ್‌ ಕೊಹ್ಲಿ:
    ವಿಶ್ವಕಪ್‌ ಟೂರ್ನಿಯ ಆರಂಭದಿಂದಲೂ ʻರೋ-ಕೊʼ ಆರಂಭಿಕ ಜೋಡಿ ಭರ್ಜರಿ ಕಮಾಲ್‌ ಮಾಡಿತ್ತು. ಆದ್ರೆ ಆರಂಭಿಕ ಪಂದ್ಯದಿಂದಲೂ ಫಾರ್ಮ್‌ ಕಳೆದುಕೊಂಡಿದ್ದ ಕಿಂಗ್‌ ಕೊಹ್ಲಿ ಬಗ್ಗೆ ಅನೇಕರಿಂದ ಟೀಕೆಗಳು ವ್ಯಕ್ತವಾಗುತ್ತಿತ್ತು. ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ನಾಯಕ ರೋಹಿತ್‌, ವಿರಾಟ್‌ ಪರವಾಗಿಯೇ ಮಾತನಾಡುತ್ತಾ ಬಂದಿದ್ದರು. ಬಹುಶಃ ವಿರಾಟ್‌ ತಮ್ಮ ಆಟವನ್ನು ಫೈನಲ್‌ಗೆ ಉಳಿಸಿಕೊಂಡಿದ್ದಾರೆ ಎಂದು ವಿಶ್ವಾಸದ ನುಡಿಗಳನ್ನಾಡಿದ್ದರು. ಅದರಂತೆ ರೋಹಿತ್‌ ಶರ್ಮಾ ಅವರ ನಂಬಿಕೆಯನ್ನು ಕೊಹ್ಲಿ ಸುಳ್ಳಾಗಿಸಲಿಲ್ಲ. ಸ್ಫೋಟಕ ಪ್ರದರ್ಶನದೊಂದಿಗೆ ತಾಳ್ಮೆಯ ಆಟವಾಡಿದ ಕೊಹ್ಲಿ 59 ಎಸೆತಗಳಲ್ಲಿ 76 ರನ್‌ ಗಳಿಸಿದ್ದರು. ಇದು ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ 170 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಅಲ್ಲದೇ ವಿಶ್ವಕಪ್‌ ಇತಿಹಾಸದಲ್ಲೇ ತಂಡದವೊಂದರ ಗರಿಷ್ಠ ರನ್‌ ಮೊತ್ತವೂ (176) ಆಯಿತು.

    ವಿಜಯಯಾತ್ರೆ ಮುಕ್ತಾಯ:
    ಟಿ-20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಜಕ ಜಯ ಸಾಧಿಸಿ, 17 ವರ್ಷಗಳ ಬಳಿಕ ಚಾಂಪಿಯನ್ ಆದ ಟೀಂ ಇಂಡಿಯಾಗೆ ಸ್ವದೇಶದಲ್ಲಿ ಅದ್ಧೂರಿ, ವೈಭವೋಪೇತ ಸ್ವಾಗತ ಸಿಕ್ಕಿದೆ. ಮುಂಬೈನ ಕಡಲ ಕಿನಾರೆಯಲ್ಲಿ 2 ಕಿಮೀ ರೋಡ್ ಶೋನಲ್ಲಿ ಅಬ್ಬಬ್ಬಾ… ಎನಿಸುವಷ್ಟು ಜನಸಾಗರ ಜಮಾಯಿಸಿ ಬರಮಾಡಿಕೊಂಡಿದೆ. ಸದ್ಯ ರೋಡ್‌ ಶೋ ಮುಕ್ತಾಯಗೊಂಡು ಮುಂಬೈನ ವಾಂಖೆಡೆ ಕ್ರೀಡಾಂಗಣ ತಲುಪಿದೆ. ಕೆಲವೇ ಕ್ಷಣದಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರು ಹಾಗೂ ಬಿಸಿಸಿಐ ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನು ಆಟಗಾರರಿಗೆ ಪ್ರದಾನ ಮಾಡಲಾಗುತ್ತದೆ. ಇದನ್ನೂ ಓದಿ: ವಿಜಯಯಾತ್ರೆ ಶುರು – ʻವಿಶ್ವʼಗೆದ್ದ ವೀರರನ್ನು ಕಣ್ತುಂಬಿಕೊಂಡ ಅಭಿಮಾನಿಗಳು!

    ವಿಜಯೋತ್ಸವಕ್ಕೆ ಆಹ್ವಾನಿಸಿದ್ದ ರೋಹಿತ್‌:
    ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ವಾಂಖೆಡೆ ಮೈದಾನಕ್ಕೆ ಉಚಿತ ಪ್ರವೇಶ ಕಲ್ಪಿಸಿದ್ದರಿಂದ ಮೈದಾನದ ತುಂಬಾ ಅಭಿಮಾನಿಗಳು ಕಿಕ್ಕಿರಿದಿದ್ದರು. ಇದನ್ನೂ ಓದಿ: ʻವಿಶ್ವʼ ವಿಜಯಯಾತ್ರೆಗೆ ಕ್ಷಣಗಣನೆ – ಕ್ರಿಕೆಟ್‌ ಅಭಿಮಾನಿಗಳಿಂದ ʻಮೋದಿ ಮೋದಿʼ ಘೋಷಣೆ!

    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

  • ಅಂದು ಅವಮಾನವಾಗಿದ್ದ ಜಾಗದಲ್ಲೇ ಸನ್ಮಾನ – ನೆನಪಿದೆಯಾ 2007ರ ರೋಮಾಂಚನಕಾರಿ ಕ್ಷಣ!

    ಅಂದು ಅವಮಾನವಾಗಿದ್ದ ಜಾಗದಲ್ಲೇ ಸನ್ಮಾನ – ನೆನಪಿದೆಯಾ 2007ರ ರೋಮಾಂಚನಕಾರಿ ಕ್ಷಣ!

    – ಅದು ಚುಟುಕು ಕ್ರಿಕೆಟ್ ಯುಗಾರಂಭ – ಚೊಚ್ಚಲ ಆವೃತ್ತಿಯಲ್ಲೇ ಭಾರತ ಚಾಂಪಿಯನ್!

    ಚೊಚ್ಚಲ ಟಿ20 ವಿಶ್ವಕಪ್ ಆರಂಭ: 2007
    ಆತಿಥ್ಯ: ದಕ್ಷಿಣ ಆಫ್ರಿಕಾ
    ವಿಶ್ವಕಪ್ ವಿಜೇತ ತಂಡ: ಭಾರತ
    ರನ್ನರ್‌ಅಪ್: ಪಾಕಿಸ್ತಾನ

    2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ (T20 World Cup) ಟೂರ್ನಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ನೆನಪಿನಲ್ಲಿಡಬೇಕಾದ ವರ್ಷ. ಏಕೆಂದರೆ ಆಗಷ್ಟೇ ಮಹತ್ವ ಪಡೆದುಕೊಳ್ಳುತ್ತಿದ್ದ ಮೊಟ್ಟ ಮೊದಲ ಚುಟುಕು ಕ್ರಿಕೆಟ್‌ಗೆ ಬುನಾದಿ ಹಾಕಿಕೊಟ್ಟ ಟೂರ್ನಿ ಅದಾಗಿತ್ತು. ಅಲ್ಲದೇ ಎಂ.ಎಸ್ ಧೋನಿ ( MS Dhoni) ಅವರಂತಹ `ಮಹಾನಾಯಕ’ ಉದಯಕ್ಕೆ ಸಾಕ್ಷಿಯಾದ ಟೂರ್ನಿಯೂ ಅದಾಗಿತ್ತು.

    2007ರಲ್ಲಿ ಅದೇ ವರ್ಷ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ (2007 ODI World Cup) ಟೂರ್ನಿಯೂ ನಡೆದಿತ್ತು. ಆ ಆವೃತ್ತಿಯಲ್ಲಿ ಟೀಂ ಇಂಡಿಯಾ (Team India) ಲೀಗ್‌ ಹಂತದಲ್ಲೇ ಹೀನಾಯ ಸೋಲು ಕಂಡು ಹೊರಬಿದ್ದಿತ್ತು. ಇದಾದ ಬಳಿಕ ದೇಶಾದ್ಯಂತ ಪ್ರತಿಭಟನೆ ನಡೆದು, ಪ್ರಮುಖ ಆಟಗಾರರ ಮನಗಳ ಮೇಲೆ ಕಲ್ಲು ತೂರಾಟವೂ ನಡೆದಿತ್ತು. ರಸ್ತೆಯಲ್ಲೇ ಆಟಗಾರರ ಭಾವಚಿತ್ರಗಳಿಗೆ ಬೆಂಕಿಯಿಟ್ಟು ಆಕ್ರೋಶ ಹೊರಹಾಕಿದ್ದರು. ಇದಾದ ಕೆಲವೇ ದಿನಗಳಲ್ಲಿ ಟಿ20 ವಿಶ್ವಕಪ್ ಟೂರ್ನಿಯೂ ನಿಗದಿಯಾಗಿತ್ತು. ಏಕದಿನ ಕ್ರಿಕೆಟ್‌ನಲ್ಲಿ ಆಡಿದ್ದ ಖ್ಯಾತನಾಮರು ಟಿ20 ಆಡಲು ಹಿಂದೇಟು ಹಾಕಿದ್ದ ಕಾರಣ ವಿಕೆಟ್ ಕೀಪರ್ ಮತ್ತು ಬ್ಯಾಟರ್ ಎಂ.ಎಸ್ ಧೋನಿ ಅವರಿಗೆ ನಾಯಕತ್ವದ ಹೊಣೆ ನೀಡಲಾಯಿತು.

    ಟಿ20 ಚುಟುಕು ಕ್ರಿಕೆಟ್ (T20 Cricket) ಆಗಿನ್ನು ಜನಪ್ರಿಯವಾಗಿರಲಿಲ್ಲ. ಇದರಿಂದ ಬಹಳಷ್ಟು ಜನರು ಇದನ್ನು ಟೀಕಿಸಿದ್ದರು. ಆದ್ರೆ ರಾಂಚಿ ಮೂಲದ ಎಂ.ಎಸ್ ಧೋನಿ ಅವರು ಆ ಟೂರ್ನಿಯಲ್ಲಿ ಕೈಗೊಂಡ ನಿರ್ಧಾರಗಳಿಂದ ಟೀಂ ಇಂಡಿಯಾ, ಚೊಚ್ಚಲ ಆವೃತ್ತಿಯಲ್ಲೇ ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

    ಪಾಕ್ ವಿರುದ್ಧ ಗೆದ್ದು ಬೀಗಿದ್ದೇ ರೋಚಕ:
    ಚೊಚ್ಚಲ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಫೈನಲ್ ಪಂದ್ಯ ಕೊನೆಯವರೆಗೂ ರೋಚಕತೆಯಿಂದ ಕೂಡಿತ್ತು. ಅಂದು ಇಡೀ ಭಾರತವೇ ಈ ಪಂದ್ಯವನ್ನು ಕುತೂಹಲದಿಂದ ನೋಡುತ್ತಿತ್ತು.

    ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 157 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡದ ಗೆಲುವಿಗೆ ಕೊನೆಯ ಓವರ್‌ನಲ್ಲಿ 12 ರನ್ ಮಾತ್ರವೇ ಬೇಕಿತ್ತು. ಪಾಕ್ ಮೊದಲೇ 9 ವಿಕೆಟ್ ಕಳೆದುಕೊಂಡಿದ್ದರಿಂದ ಭಾರತದ ಗೆಲುವಿಗೆ ಒಂದು ವಿಕೆಟ್ ಅಗತ್ಯವಿತ್ತು. ಹಾಗಾಗಿ ಕೊನೇ ಕ್ಷಣದ ವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯವನ್ನು ದೇಶದ ಕೋಟ್ಯಂತರ ಜನ ಕಣ್ಣು ಮಿಟುಕಿಸದಂತೆ ನೋಡುತ್ತಿದ್ದರು. ಪ್ರಮುಖ ಬೌಲರ್‌ಗಳು ತಮ್ಮ ಓವರ್ ಮುಕ್ತಾಯ ಗೊಳಿಸಿದ್ದರಿಂದ ಮಹಿ, ಜೋಗಿಂದರ್ ಶರ್ಮಾ ಅವರಿಗೆ ಬೌಲಿಂಗ್ ನೀಡಿದರು. ಪಾಕ್‌ನ ಸ್ಫೋಟಕ ಬ್ಯಾಟರ್ ಮಿಸ್ಬಾ ಉಲ್ ಹಕ್ ಸ್ಟ್ರೈಕ್‌ನಲ್ಲಿದ್ದರು.

    ಮೊದಲಿಗೆ ವೈಡ್ ರನ್ ಬಿಟ್ಟುಕೊಟ್ಟ ಜೋಗಿಂದರ್ ಶರ್ಮಾ ಮೊದಲ ಎಸೆತದಲ್ಲಿ ಹಿಡಿತ ಸಾಧಿಸಿದರು. ಆದ್ರೆ 2ನೇ ಎಸೆತದಲ್ಲಿ ಮಿಸ್ಬಾ ಉಲ್ ಹಕ್‌ ಭರ್ಜರಿ ಸಿಕ್ಸರ್ ಸಿಡಿಸಿದಾಗ ಪಾಕ್‌ತಂಡ ಗೆದ್ದೇಬಿಟ್ಟೆವು ಎಂಬ ಸಂತಸದಲ್ಲಿ ಕುಣಿದು ಕುಪ್ಪಳಿಸಿತ್ತು, ಪಾಕ್ ಅಭಿಮಾನಿಗಳು ಕೇಕೆ ಹಾಕಲು ಶುರು ಮಾಡಿದ್ದರು. ಮರು ಎಸೆತದಲ್ಲಿ ಆನ್‌ಸ್ಟಂಪ್ ಮೂಲಕ ಶಾರ್ಟ್ ಫೈನ್‌ಲೆಗ್ ಶಾರ್ಟ್ ಪ್ರಯತ್ನಿಸಿದ ಮಿಸ್ಬಾ, ಶ್ರೀಶಾಂತ್‌ಗೆ ಕ್ಯಾಚ್ ನೀಡಿ ಔಟಾದರು. ಪಾಕ್ ಮೊದಲೇ 9 ವಿಕೆಟ್ ಕಳೆದುಕೊಂಡಿದ್ದ ಪರಿಣಾಮ ಪಾಕಿಸ್ತಾನ ತಂಡ ಆಲೌಟ್ ಆಗಿ ಟೀಂ ಇಂಡಿಯಾ ಎದುರು ಮಂಡಿಯೂರಿತು. ಅಂತಿಮವಾಗಿ ಭಾರತ 5 ರನ್‌ಗಳ ರೋಚಕ ಜಯ ಸಾಧಿಸಿತು. ಕುತೂಹಲದಿಂದ ನೋಡುತ್ತಿದ್ದ ಇಡೀ ಭಾರತ ಸಂಭ್ರಮದಲ್ಲಿ ತೇಲಿತು.