Tag: tagaru film

  • ‘ಟಗರು’ ಬ್ಯೂಟಿ ಮಾನ್ವಿತಾ ಮದುವೆಯ ಸುಂದರ ಫೋಟೋಗಳು

    ‘ಟಗರು’ ಬ್ಯೂಟಿ ಮಾನ್ವಿತಾ ಮದುವೆಯ ಸುಂದರ ಫೋಟೋಗಳು

    ಸ್ಯಾಂಡಲ್‌ವುಡ್ (Sandalwood) ನಟಿ ಮಾನ್ವಿತಾ ಕಾಮತ್ (Manvita Kamath) ಮೇ 1ರಂದು ಚಿಕ್ಕಮಗಳೂರಿನ ಕಳಸದ ದೇವಸ್ಥಾನವೊಂದರಲ್ಲಿ ಅದ್ಧೂರಿಯಾಗಿ ಮದುವೆ ಜರುಗಿದೆ. ಟಗರು ನಟಿಯ ಮದುವೆ ಸುಂದರ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದೆ.

    ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಕೊಂಕಣಿ ಸಾಂಪ್ರದಾಯದಂತೆ ಮಾನ್ವಿತಾ- ಅರುಣ್ ಕುಮಾರ್ (Arun Kumar) ಮದುವೆ ಜರುಗಿದೆ. ಮಾನ್ವಿತಾರ ಕುಟುಂಬಸ್ಥರು ಮತ್ತು ಆಪ್ತರಷ್ಟೇ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ

    ಮಾನ್ವಿತಾ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದಾರೆ. ವರ ಅರುಣ್ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಕಂಗೊಳಿಸಿದ್ದಾರೆ. ಸಿಂಪಲ್ ಮೇಕಪ್‌ನಲ್ಲಿ ನಟಿ ಕಂಗೊಳಿಸಿದ್ದಾರೆ.

    ಮದುವೆ ಸಂಭ್ರಮದಲ್ಲಿ ನಿಧಿ ಸುಬ್ಬಯ್ಯ, ಶ್ರುತಿ ಹರಿಹರನ್, ಅನುಶ್ರೀ, ನಿರಂಜನ್ ದೇಶಪಾಂಡೆ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಇದನ್ನೂ ಓದಿ:‘ರುದ್ರ ಗರುಡ ಪುರಾಣ’ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

    ಅಂದಹಾಗೆ, ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು.

    ಆಗ ಅರುಣ್ ತಾಯಿಗೆ ನಮ್ಮ ತಾಯಿ ನಿಧನದ ಬಗ್ಗೆ ತಿಳಿದಿರಲಿಲ್ಲ. ಅವರು ನಮ್ಮನ್ನು ತಲುಪಲು ತುಂಬ ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೊನೆಗೆ ಅವರು ನನ್ನ ನಂಬರ್ ಪಡೆದುಕೊಂಡು ಕರೆ ಮಾಡಿದ್ದಾರೆ. ಈಗ ಇದೆಲ್ಲವೂ ಸಾಧ್ಯವಾಗಿದೆ ಎಂದು ಖುಷಿಯಿಂದ ಹೇಳಿದ್ದರು ಮಾನ್ವಿತಾ. ಮದುವೆ ಸುದ್ದಿ ಸಂಭ್ರಮದ ನಡುವೆ ಮತ್ತೊಂದು ವಿಶೇಷ ಅಂದರೆ, ಮಾನ್ವಿತಾ ತಾಯಿ ಸುಜಾತಾ ಅವರ ಹುಟ್ಟುಹಬ್ಬ ಅಕ್ಟೋಬರ್ 14 ಅದೇ ದಿನ ಅರುಣ್ ಹುಟ್ಟುಹಬ್ಬವಂತೆ. ಇಲ್ಲಿಂದ ಪಾಸಿಟಿವ್ ಸೂಚನೆ ಸಿಕ್ಕಿದೆ. ಅಂದಹಾಗೆ, ನಿಧನಕ್ಕೂ ಮುನ್ನವೇ ಮಾನ್ವಿತಾ ಅವರ ತಾಯಿ ಸುಜಾತಾ ಅವರು ಅರುಣ್ ತಾಯಿಯೊಂದಿಗೆ ಮಾತನಾಡಿದ್ದರು.

  • ಮದುವೆ ತಯಾರಿಯಲ್ಲಿ ಮಾನ್ವಿತಾ ಬ್ಯುಸಿ- ಆಮಂತ್ರಣ ಪತ್ರಿಕೆ ರಿವೀಲ್ ಮಾಡಿದ ನಟಿ

    ಮದುವೆ ತಯಾರಿಯಲ್ಲಿ ಮಾನ್ವಿತಾ ಬ್ಯುಸಿ- ಆಮಂತ್ರಣ ಪತ್ರಿಕೆ ರಿವೀಲ್ ಮಾಡಿದ ನಟಿ

    ಸ್ಯಾಂಡಲ್‌ವುಡ್ ನಟಿ ಮಾನ್ವಿತಾ ಕಾಮತ್ (Manvita Kamath) ಇದೇ ಮೇ 1ರಂದು ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮೈಸೂರು ಮೂಲದ ಸಂಗೀತ ನಿರ್ದೇಶಕ ಅರುಣ್ ಕುಮಾರ್ (Arun Kumar) ಜೊತೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಇದೀಗ ಮದುವೆ ತಯಾರಿ ಬಗ್ಗೆ ಮತ್ತು ಆಮಂತ್ರಣ ಪತ್ರಿಕೆಯನ್ನು ನಟಿ ಸೋಶಿಯಲ್‌ ಮೀಡಿಯಾದಲ್ಲಿ ರಿವೀಲ್‌  ಮಾಡಿದ್ದಾರೆ.

    ಮದುವೆಗೆ ಕೆಲವೇ ಕೆಲವು ದಿನಗಳು ಬಾಕಿಯಿದೆ. ಚಿಕ್ಕಮಗಳೂರಿನ ಕಳಸ ಮನೆಯಲ್ಲಿ ಇಂದು (ಏ.22) ನಾಂದಿ ಪೂಜೆ ಮಾಡುವ ಮೂಲಕ ಮದುವೆಯ ತಯಾರಿ ಶುರುವಾಗಿದೆ. ತಯಾರಿ ವೇಳೆ, ನಟಿಯ ಲುಕ್ ಮತ್ತು ಮದುವೆ ಆಮಂತ್ರಣ ಪತ್ರಿಕೆ ಹೇಗಿದೆ ಎಂಬುದನ್ನು ಇನ್ಸ್ಟಾಗ್ರಾಂನಲ್ಲಿ ನಟಿ ರಿವೀಲ್ ಮಾಡಿದ್ದಾರೆ. ಮದುವೆಯ ದಿನ ಮುಹೂರ್ತದ ವೇಳೆ ಕೆಂಪು ಸೀರೆಯನ್ನು ಉಡಲಿದ್ದಾರೆ. ಅದನ್ನು ನಟಿ ತಿಳಿಸಿದ್ದಾರೆ. ಸದ್ಯ ಪತ್ರಿಕೆಯ ಲುಕ್ ಇದೀಗ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಆಪ್ತರಿಗೆ ಮದುವೆ ಆಹ್ವಾನ ನೀಡುವುದರಲ್ಲಿ ನಟಿ ಬ್ಯುಸಿಯಾಗಿದ್ದಾರೆ.

    ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು.

    ಆಗ ಅರುಣ್ ತಾಯಿಗೆ ನಮ್ಮ ತಾಯಿ ನಿಧನದ ಬಗ್ಗೆ ತಿಳಿದಿರಲಿಲ್ಲ. ಅವರು ನಮ್ಮನ್ನು ತಲುಪಲು ತುಂಬ ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೊನೆಗೆ ಅವರು ನನ್ನ ನಂಬರ್ ಪಡೆದುಕೊಂಡು ಕಾಂಟಾಕ್ಟ್ ಮಾಡಿದ್ದಾರೆ. ಈಗ ಇದೆಲ್ಲವೂ ಸಾಧ್ಯವಾಗಿದೆ ಎಂದು ಖುಷಿಯಿಂದ ಹೇಳಿದ್ದಾರೆ ಮಾನ್ವಿತಾ. ಇದನ್ನೂ ಓದಿ:ಖ್ಯಾತ ಕಿರುತೆರೆ ನಟಿ ದಿವ್ಯಾಂಕಾಗೆ ಅಪಘಾತ: ಕಾಲಿಗೆ ಶಸ್ತ್ರ ಚಿಕಿತ್ಸೆ

    ಮದುವೆ ಸುದ್ದಿ ಸಂಭ್ರಮದ ನಡುವೆ ಮತ್ತೊಂದು ವಿಶೇಷ ಅಂದರೆ, ಮಾನ್ವಿತಾ ತಾಯಿ ಸುಜಾತಾ ಅವರ ಹುಟ್ಟುಹಬ್ಬ ಅಕ್ಟೋಬರ್ 14 ಅದೇ ದಿನ ಅರುಣ್ ಹುಟ್ಟುಹಬ್ಬವಂತೆ. ಇಲ್ಲಿಂದ ಪಾಸಿಟಿವ್ ಸೂಚನೆ ಸಿಕ್ಕಿದೆ. ಅಂದಹಾಗೆ, ನಿಧನಕ್ಕೂ ಮುನ್ನವೇ ಮಾನ್ವಿತಾ ಅವರ ತಾಯಿ ಸುಜಾತಾ ಅವರು ಅರುಣ್ ತಾಯಿಯೊಂದಿಗೆ ಮಾತನಾಡಿದ್ದರು.

    ಮಾನ್ವಿತಾ ಮತ್ತು ಅವರ ಚಿಕ್ಕಮ್ಮ ಮೈಸೂರಿನಲ್ಲಿರುವ ಅರುಣ್ ಮನೆಗೆ ಭೇಟಿ ನೀಡಿದ್ದಾರೆ. ಅಲ್ಲಿಂದ ಮದುವೆ ಮಾತುಕತೆಯಾಗಿ ಈಗ ಮದುವೆಗೆ ವೇದಿಕೆ ಸಜ್ಜಾಗಿದೆ. ಅರುಣ್ ಕುಟುಂಬದವರು ತುಂಬ ಒಳ್ಳೆಯವರು. ಅರುಣ್ ಕೂಡ ಅದ್ಭುತ ವ್ಯಕ್ತಿ. ನನ್ನ ತಾಯಿ ಹುಡುಕಿದ ಸಂಬಂಧ ಕೂಡಿ ಬಂದಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಮಾನ್ವಿತಾ ತಿಳಿಸಿದ್ದಾರೆ. ಅಲ್ಲದೆ, ಸಂಗೀತ ಪ್ರೇಮಿಯಾಗಿರುವ ಮಾನ್ವಿತಾಗೆ ಮೈಸೂರು ಮೂಲದ ಮ್ಯೂಸಿಕ್ ಡೈರೆಕ್ಟರ್ ಆಗಿರುವ ಅರುಣ್ ಕುಮಾರ್ ಪತಿಯಾಗಿ ಸಿಗುತ್ತಿರುವುದು ಖುಷಿಯಿದೆ ಎಂದು ಮಾನ್ವಿತಾ ಮಾತನಾಡಿದ್ದಾರೆ.

    ಮ್ಯೂಸಿಕ್ ಪ್ರೋಡ್ಯೂಸರ್ ಅರುಣ್ ಕುಮಾರ್ ಜೊತೆ ಮಾನ್ವಿತಾ ಮದುವೆ ಕೊಂಕಣಿ ಸಾಂಪ್ರದಾಯದಂತೆ ಮೇ 1ರಂದು ಚಿಕ್ಕಮಗಳೂರಿನ ಕಳಸದಲ್ಲಿ ನಡೆಯಲಿದೆ. ಹಳದಿ ಶಾಸ್ತ್ರವು ಏಪ್ರಿಲ್ 29ರಂದು ನಡೆಯಲಿದೆ ಮತ್ತು ಸಂಗೀತ್ ಶಾಸ್ತ್ರ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ. ಮದುವೆಗೆ ಸ್ಯಾಂಡಲ್ವುಡ್ ನಟ, ನಟಿಯರು ಭಾಗಿಯಾಗಲಿದ್ದಾರೆ.

  • ಕೆಂಪು ಬಣ್ಣದ ಸೀರೆಯಲ್ಲಿ ಗ್ಲ್ಯಾಮರಸ್ ಆಗಿ ಮಿಂಚಿದ ಮಾನ್ವಿತಾ

    ಕೆಂಪು ಬಣ್ಣದ ಸೀರೆಯಲ್ಲಿ ಗ್ಲ್ಯಾಮರಸ್ ಆಗಿ ಮಿಂಚಿದ ಮಾನ್ವಿತಾ

    ಸ್ಯಾಂಡಲ್‌ವುಡ್ ನಟಿ ಮಾನ್ವಿತಾ ಕಾಮತ್ (Manvitha Kamath) ಅವರು ಮತ್ತೆ ನಟನೆ, ಫೋಟೋಶೂಟ್ ಅಂತಾ ಆಕ್ಟೀವ್ ಆಗಿದ್ದಾರೆ. ಹೊಸ ಫೋಟೋಶೂಟ್‌ನಲ್ಲಿ ಸಖತ್ ಹಾಟ್ & ಗ್ಲ್ಯಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ‘ಟಗರು’ (Tagaru) ಪುಟ್ಟಿಯ ನಯಾ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಇದನ್ನೂ ಓದಿ:ಉಪೇಂದ್ರ UI ಚಿತ್ರದಲ್ಲಿ ‘ವೇದ’ ನಟಿ ವೀಣಾ ಪೊನ್ನಪ್ಪ

    ಆರ್‌ಜೆ ಆಗಿದ್ದ ಮಾನ್ವಿತಾ, ‘ಕೆಂಡಸಂಪಿಗೆ’ (Kendasampige) ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ (Sandalwood)  ನಾಯಕಿಯಾಗಿ ಎಂಟ್ರಿ ಕೊಟ್ಟರು. ತಮಗೆ ಸಿಕ್ಕ ಮೊದಲ ಸಿನಿಮಾ ಅವಕಾಶವನ್ನ ಸರಿಯಾಗಿ ಸದುಪಯೋಗಪಡಿಸಿಕೊಂಡು ಭರವಸೆಯ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಟಗರು, ಚೌಕ, ಶಿವ 143 ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದರು.

    ಇತ್ತೀಚಿಗೆ ಮಾನ್ವಿತಾ, ತಾಯಿ ಸುಜಾತ ಕಾಮತ್ ಅವರು ಕಿಡ್ನಿ ವೈಪಲ್ಯದಿಂದ ನಿಧನರಾದರು. ಇದೀಗ ನಿಧಾನಕ್ಕೆ ಆ ನೋವಿನಿಂದ ಹೊರಬರುತ್ತಿದ್ದಾರೆ. ಅಮ್ಮನ ಆಸೆಯಂತೆಯೇ ಸಿನಿಮಾಗಳಲ್ಲಿ ನಟಿಸುವ ಜೊತೆಗೆ ತಮ್ಮದೇ ‘ಸ್ಟುಡಿಯೋ ಮ್ಯಾನ್‌ಕಿನ್’ (Studio Manekin) ಎಂಬ ಆ್ಯನಿಮೇಷನ್ ಸ್ಟುಡಿಯೋವೊಂದನ್ನ ತೆರೆದಿದ್ದಾರೆ. ಇತ್ತೀಚಿಗೆ ಮಾನ್ವಿತಾ, ಹೊಸ ಆಫೀಸ್‌ಗೆ ಲಗ್ಗೆ ಇಟ್ಟಿದ್ದಾರೆ. 2 ವರ್ಷಗಳ ಹಿಂದೆಯೇ ಈ ಬಗ್ಗೆ ನಟಿ ಹೇಳಿದ್ದರು. ಇದೀಗ ಹೊಸ ಕಾರ್ಯಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ.

    ಒಂದು ಚಿತ್ರಕ್ಕೆ ಬೇಕಾದ ಸ್ಟೋರಿ ಬೋರ್ಡ್ ಅನ್ನು ಆ್ಯನಿಮೇಷನ್ ರೂಪದಲ್ಲಿ ಮಾಡಿಕೊಡುವುದು. ಹಾಲಿವುಡ್‌ನಲ್ಲಿ ಸ್ಟೋರಿ ಬೋರ್ಡ್ ಇಲ್ಲದೇ ಯಾವ ಚಿತ್ರವೂ ಶೂಟಿಂಗ್ ಮಾಡಲ್ಲ. ಕನ್ನಡದಲ್ಲಿ ಸ್ಟೋರಿ ಬೋರ್ಡ್‌ಗಳ ಬಗ್ಗೆ ತಿಳುವಳಿಕೆ ಇದ್ದರೂ ಅದರ ಸೌಲಭ್ಯಗಳು ಇಲ್ಲ. ಹಾಗಾಗಿ ನಟಿ ಮಾನ್ವಿತಾ ಕಾಮತ್ ಅವರು ‘ಸ್ಟುಡಿಯೋ ಮ್ಯಾನ್‌ಕಿನ್ʼ ಮೂಲಕ ಚಿತ್ರಗಳಿಗೆ ಬೇಕಾಗುವ ಸ್ಟೋರಿ ಬೋರ್ಡ್‌ ಆ್ಯನಿಮೇಷನ್ ರೂಪದಲ್ಲಿ ಮಾಡಿಕೊಡುತ್ತಾರೆ. ಈ ಮೂಲಕ ಹೊಸದೊಂದು ಪ್ರಯತ್ನಕ್ಕೆ ನಟಿ ಕೈ ಹಾಕಿದ್ದಾರೆ.

    ಇದೆಲ್ಲದರ ನಡುವೆ ಮಾನ್ವಿತಾ ಕಾಮತ್ ಹೊಸ ಫೋಟೋಶೂಟ್‌ನಲ್ಲಿ ಗ್ಲ್ಯಾಮರಸ್ ಆಗಿ ಮಿಂಚಿದ್ದಾರೆ. ಕೆಂಪು ಬಣ್ಣದ ಸೀರೆಯಲ್ಲಿ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಮತ್ತಷ್ಟು ಫಿಟ್ ಆಗಿರುವ ಮಾನ್ವಿತಾ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸ್ಟೈಲ್‌ಗೆ ತಕ್ಕಂತೆ ಚೆಂದದ ಬ್ಯಾಗ್ ಕೂಡ ಹಿಡಿದು ಕ್ಯಾಮೆರಾಗೆ ಮಾನ್ವಿತಾ ಮುದ್ದಾಗಿ ಪೋಸ್ ನೀಡಿದ್ದಾರೆ. ಅಂದಹಾಗೆ, ವೇಣು ಕ್ರಿಷ್‌ ಕ್ಯಾಮೆರಾ ಕಣ್ಣಿನಲ್ಲಿ ಈ ಅದ್ಭುತವಾಗಿ ಫೋಟೋಶೂಟ್‌ ಮೂಡಿ ಬಂದಿದೆ.