ಕನ್ನಡ ಸಿನಿಮಾ ಪ್ರೇಮಿಗಳಿಗೆ ಸದಾಭಿರುಚಿ ಸಿನಿಮಾಗಳನ್ನು ಕೊಡುತ್ತಿರುವ ಡಾಲಿ (Dolly Dhananjay) ಪಿಕ್ಚರ್ಸ್ ನ ಮೂರನೇ ಕೊಡುಗೆ ಟಗರು ಪಲ್ಯ ಕಿರುತೆರೆಯಲ್ಲಿಯೂ ದೊಡ್ಡ ಮಟ್ಟದ ಹಿಟ್ ಕಂಡಿದೆ. ಬೆಳ್ಳಿಪರದೆ ಹಾಗೂ ಅಮೇಜಾನ್ ಪ್ರೈಮ್ ನಲ್ಲಿಯೂ ಫ್ಯಾಮಿಲಿ ಆಡಿಯನ್ಸ್ ಮನಸೂರೆಗೊಳಿಸಿರುವ ಈ ಚಿತ್ರ ನಾಟಿ ಹಿಟ್ ಎನಿಸಿಕೊಂಡಿದೆ. ಥಿಯೇಟರ್ ಹಾಗೂ ಒಟಿಟಿ ಎರಡು ವೇದಿಕೆಯಲ್ಲಿಯೂ ಗೆದ್ದಿರುವ ಟಗರು ಪಲ್ಯ (Tagaru Palya) ಕಿರುತೆರೆ ಪ್ರೇಕ್ಷಕ ವರ್ಗಕ್ಕೂ ರುಚಿಸಿದೆ.
ಎರಡು ವಾರದ ಹಿಂದಷ್ಟೇ ಅಂದರೆ ಜ.7ರಂದು ಡಾಲಿ ಧನಂಜಯ್ ನಿರ್ಮಾಣದ ಟಗರು ಪಲ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ತೆರೆಕಂಡಿತ್ತು. ಕಿರುತೆರೆಗೆ ಅಪ್ಪಳಿಸಿದ್ದ ಈ ಚಿತ್ರ ಟಿಆರ್ ಪಿಯಲ್ಲಿ ಧೂಳ್ ಎಬ್ಬಿ ಸಿದೆ. 7.2 ಟಿಆರ್ ಪಿ ಟಗರು ಪಲ್ಯ ಸಿನಿಮಾಗೆ ದಕ್ಕಿದೆ. ಹೊಸಬರ ಸಿನಿಮಾಗೆ ಇಷ್ಟು ಟಿಆರ್ ಪಿ ಬಂದಿರೋದು ನಿಜಕ್ಕೂ ದಾಖಲೆಯೇ ಸರಿ..ಈ ಹಿಂದೆ ಡಾಲಿ ಪಿಕ್ಚರ್ಸ್ ನಿರ್ಮಾಣ ಮಾಡಿದ್ದ ಚೊಚ್ಚಲ ಸಿನಿಮಾ ಬಡವ ರಾಸ್ಕಲ್ ಕೂಡ ಕಲರ್ಸ್ ಕನ್ನಡ ವಾಹಿನಿಯಲ್ಲಿ ದೊಡ್ಡ ಮಟ್ಟದ ಹಿಟ್ ಕಂಡಿತ್ತು. ಕಲರ್ಸ್ ಕನ್ನಡ ವಾಹಿನಿಗೆ ಎರಡು ಅದ್ಭುತ ಚಿತ್ರಗಳನ್ನು ನೀಡಿದೆ ಡಾಲಿ ಪಿಕ್ಚರ್ಸ್…
ಧನಂಜಯ್ ನಿರ್ಮಾಣದ ಟಗರು ಪಲ್ಯಕ್ಕೆ ಉಮೇಶ್ ಕೆ. ಕೃಪಾ ಆಕ್ಷನ್ ಕಟ್ ಹೇಳಿದ್ದರು. ಇದು ಇವರ ಮೊದಲ ಪ್ರಯತ್ನ. ಕನ್ನಡ ಸಿನಿಮಾರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡಿದ್ದ ನಟ ನಾಗಭೂಷಣ ಮತ್ತು ಅಮೃತಾ ಪ್ರೇಮ್ ‘ಟಗರು ಪಲ್ಯ’ ದ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ವಾಸುಕಿ ವೈಭವ್, ಚಿತ್ರಾ ಶೆಣೈ ಮತ್ತು ವೈಜನಾಥ್ ಬಿರಾದಾರ್ ಪೋಷಕ ಪಾತ್ರಗಳಿಗೆ ಜೀವ ತುಂಬಿದ್ದರು. ವಾಸುಕಿ ವೈಭವ್ ಸಂಗೀತ ಸಂಯೋಜಿಸುವ ಜೊತೆಗೆ ಒಂದು ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಟಗರು ಪಲ್ಯ ಚಿತ್ರದ ಮೂಲಕ ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ವರ್ಷದ ಅಕ್ಟೋಬರ್ 27 ರಂದು ಈ ಸಿನಿಮಾ ತೆರೆ ಕಂಡಿತ್ತು.
ಟಗರು ಪಲ್ಯ (Tagaru Palya) ಸಿನಿಮಾ ನೋಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರಿಗೆ ಮನವಿ ಮಾಡಿದ್ದಾರೆ ನಟ ಡಾಲಿ ಧನಂಜಯ್ (Dolly Dhananjay). ನಿನ್ನೆಯಷ್ಟೇ ಸಿಎಂ ಅವರನ್ನು ಭೇಟಿ ಮಾಡಿದ ಡಾಲಿ ಮತ್ತು ನಟಿ ತಾರಾ (Tara), ಚಿತ್ರದ ಟ್ರೈಲರ್ ತೋರಿಸಿ ಪ್ರದರ್ಶನಕ್ಕೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ಸ್ವತಃ ಸಿಎಂ ಅವರೇ ತಮ್ಮ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಟ್ರೇಲರ್ ಬಿಡುಗಡೆ
ಡಾಲಿ ಧನಂಜಯ್ ನಿರ್ಮಾಣ ಮಾಡಿರುವ ಮೂರನೇ ಸಿನಿಮಾ ಟಗರು ಪಲ್ಯದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಕಲಾವಿದರ ಸಂಘದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಆಕರ್ಷಕ ಬಿಂದು ಡಿಬಾಸ್.. ಡಾಲಿ ನಿರ್ಮಾಣದ ಟಗಲು ಪಲ್ಯ ಟ್ರೇಲರ್ ರಿಲೀಸ್ ಮಾಡಿದ ದಚ್ಚು ಇಡೀ ತಂಡಕ್ಕೆ ಶುಭ ಹಾರೈಸಿದರು. ತಾರಾ, ರಂಗಾಯಣ ರಘು, ಅಮೃತಾ, ನಾಗಭೂಷಣ್ ಸೇರಿದಂತೆ ನೀನಾಸಂ ಸತೀಶ್ ಹಾಗೂ ನೆನಪಿರಲಿ ಪ್ರೇಮ್ ಇವೆಂಟ್ ನಲ್ಲಿ ಭಾಗಿಯಾಗಿದ್ದರು. ಟ್ರೇಲರ್ ಬಿಡುಗಡೆ ಮಾಡಿ ಮಾತಿಗಿಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡಿ, ಟಗರು ಪಲ್ಯ ತಂಡಕ್ಕೆ ಶುಭಾಶಯ. ಟ್ರೇಲರ್ ನೋಡಿದಾಗ ಖುಷಿ ಆಯಿತು. 7 ಸ್ಟಾರ್ ಸುಲ್ತಾನ್ ಚೆನ್ನಾಗಿ ಆಕ್ಟ್ ಮಾಡಿದೆ. ಅಮೃತಾ ಅವರಿಗೆ ಸ್ವಾಗತ. ನಮ್ಮದು ಚಿಕ್ಕ ಇಂಡಸ್ಟ್ರೀ. ನೀಟ್ ಇಂಡಸ್ಟ್ರೀ. ಇದು ನಮ್ಮಮಣ್ಣಿನ ಸೊಗಡಿನ ಸಿನಿಮಾ. ಟ್ರೇಲರ್ ನಲ್ಲಿ ಸಿನಿಮಾ ಏನೋ ಅನ್ನೋದು ಹೇಳಬಹುದು. ಪ್ರತಿ ಒಂದು ಸೀನು. ನಗಲು ಏನು ಬೇಕು ಎಲ್ಲವೂ ಇದೆ. ಸಿನಿಮಾ ಚೆನ್ನಾಗಿ ಆಗಲಿ. ಹೀರೋಗಳು ಏನು ಮಾಡುತ್ತಿದ್ದಾರಯ್ಯ ಅಂತಾ ತುಂಬಾ ಜನ ಕೇಳುತ್ತಾರೆ. ನಾವು ಪ್ರೊಡ್ಯೂಸ್ ಮಾಡ್ತೀವೆ. ಈ ಸಾಲಿನಲ್ಲಿ ಡಾಲಿ ಅವರು ಮೊದಲು ನಿಲ್ಲುತ್ತಾರೆ. ಇದು ಧನಂಜಯ್ ನಿರ್ಮಾಣದ ಮೂರನೇ ಸಿನಿಮಾ. ಆತ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಬಡವರ ಮಕ್ಕಳು ದೊಡ್ಡವರು ಆಗಬೇಕು. ಡಾಲಿ ಪಿಕ್ಚರ್ಸ್ ದೊಡ್ಡ ಪ್ರೊಡಕ್ಷನ್ ಆಗಿ ಬೆಳೆಯಲಿ. ನಾಗಭೂಷಣ್ ಫ್ಯಾನ್ ನಾನು. ನಾವು ಚಿಕ್ಕ ಕಲಾವಿದರು ನಿಮ್ಮ ಬ್ಯಾನರ್ ನಡಿ ನನಗೂ ಅವಕಾಶ ಕೊಡಿ ಎಂದು ಧನಂಜಯ್ ಕಾಲೆಳೆದರು.
ಡಾಲಿ ಧನಂಜಯ್ ಮಾತನಾಡಿ, ಎಲ್ಲಾ ಸಂಬಂಧಗಳನ್ನು ನೆನಪಿಸುವ ಸಿನಿಮಾವೇ ಟಗರು ಪಲ್ಯ. ಇಡೀ ತಂಡಕ್ಕೆ ಧನ್ಯವಾದ ಹೇಳಬೇಕು. ನನಗೆ ಉಮೇಶ್ ಅವರು ಕಥೆ ಹೇಳಿದಾಗ ತುಂಬಾ ಇಷ್ವವಾಯಿತು. ಒಳ್ಳೆ ಪ್ರತಿಭೆಗಳಿಗೆ ಬಂಡವಾಳ ಹಾಕುವುದು ಖುಷಿ ನನಗೆ ಇದೆ. ಅವರವರ ಪ್ರತಿಭೆಗಳು ಅವರನ್ನ ಮೇಲೆ ಕರೆದುಕೊಂಡು ಬರುತ್ತಿದೆ. ಇಡೀ ತಂಡ ನನಗೆ ಅದ್ಭುತವಾಗಿ ಕೋ ಆಪರೇಟಿಂಗ್ ಮಾಡಿದರು. ನಾಗಭೂಷಣ್ ಯಾವುದೇ ಪಾತ್ರ ಕೊಟ್ಟರು ತೂಗಿಸಿಕೊಂಡು ಹೋಗುವ ನಟ. ಟಗರು ಪಲ್ಯದಲ್ಲಿ ನೀವು ಬೇರೆ ನಾಗಭೂಷಣ್ ನೋಡಬಹುದು. ಅಮೃತಾ ಲುಕ್ ಟೆಸ್ಟ್ ಮಾಡಿದಾಗ ಸ್ಯಾಂಡಲ್ ವುಡ್ ಮಹಾಲಕ್ಷ್ಮೀ ತರ ಕಾಣಿಸ್ತಾರೆ. ಚಿತ್ರರಂಗದ ಮಹಾಲಕ್ಷ್ಮಿ ಆಗಿ ಬೆಳಗಲಿ ಎಂದು ಹಾರೈಸಿದ್ದೇವು. ಖಂಡಿತ. ಹಾಗೇ ಆಗುತ್ತಿದೆ. ಸೂರ್ಯಕಾಂತಿ ಸಾಂಗ್ ಹಿಟ್ ಆಗಿದೆ. ನನ್ನ ಬೆನ್ನು ತಟ್ಟಲು ಇವತ್ತು ಒಬ್ಬರು ಅಣ್ಣ ಬಂದಿದ್ದಾರೆ. ಯಾವಾಗ ಸಿಕ್ಕರು ಖುಷಿಯಿಂದ ತಬ್ಬಿಕೊಂಡು ಚೆನ್ನಾಗಿ ಕೆಲಸ ಮಾಡುತ್ತಿದ್ದೀಯಾ.. ಮಾಡು ಖುಷಿಪಡುತ್ತೇನೆ ಎನ್ನುತ್ತಾರೆ ಎಂದು ದರ್ಶನ್ ಅವರ ಬಗ್ಗೆ ಹೇಳಿದರು.
ನಟ ನಾಗಭೂಷಣ್ ಮಾತನಾಡಿ, ನಾನು ಲೀಡ್ ಕ್ಯಾರೆಕ್ಟರ್ ಮಾಡಬೇಕು ಎಂದು ಇಂಡಸ್ಟ್ರೀಗೆ ಬಂದವನಲ್ಲ. ಕ್ಯಾರೆಕ್ಟರ್ ಆರ್ಟಿಸ್ಟ್ ಆಗಬೇಕು ಎಂದು ಬಂದವನು. ನನ್ನ ಪುಣ್ಯ. ಅಂದು ಇಕ್ಕಟ್ ಸಿನಿಮಾ. ಈಗ ಟಗರು ಪಲ್ಯ ಸಿಕ್ಕಿದೆ. ಟಗರು ಪಲ್ಯ ಸಿನಿಮಾದ ಪಾತ್ರ ನನಗೆ ತೃಪ್ತಿ ಕೊಟ್ಟ ಪಾತ್ರ. ನಾನು ಒಬ್ಬ ಹಳ್ಳಿ ಹುಡುಗ. ನಾನು ಬೆಳೆದು ಬಂದ ಪರಿಸರವನ್ನು ಪ್ರತಿನಿಧಿಸುವುದು, ನಮ್ಮೂರು ಕಥೆ ಇರುವುದರಿಂದ ಈ ಸಿನಿಮಾ ಮತ್ತಷ್ಟು ಕನೆಕ್ಟ್ ಆಗಿದೆ. ಹಲವು ವರ್ಷಗಳಿಂದ ಒಂದು ಮಾತು ಹೇಳುತ್ತಿದ್ದೀರಾ.. ಬೇರೆ ಭಾಷೆಯಲ್ಲಿ ಕಡಿಮೆ ಬಜೆಟ್ ನಲ್ಲಿ, ಒಳ್ಳೊಳ್ಳೆ ಕಂಟೆಂಟ್ ಸಿನಿಮಾ ಬರ್ತಿಲ್ಲ ಎನ್ನುತ್ತಿದ್ದರು. ಅದಕ್ಕೆಲ್ಲ ಉತ್ತರ ಟಗರು ಪಲ್ಯ ಎಂದರು.
ನಟಿ ಅಮೃತಾ ಪ್ರೇಮ್ ಮಾತನಾಡಿ, ದರ್ಶನ್ ಸರ್ ಕಡೆಯಿಂದ ನನ್ನ ಮೊದಲ ಟ್ರೇಲರ್ ಬಿಡುಗಡೆಯಾಗಿರುವುದು ಬಹಳ ಖುಷಿ ಇದೆ. ಈ ಕ್ಷಣ ನನಗೆ ಲೈಫ್ ಲಾಂಗ್ ನೆನಪು ಇರುತ್ತದೆ. ಡಾಲಿ ಪಿಕ್ಚರ್ಸ್ ನಡಿ ನನಗೆ ಅವಕಾಶ ಸಿಕ್ಕಿರುವುದು ಎಷ್ಟು ಖುಷಿ ಇದೆಯೋ, ಅದರ ಜೊತೆ ದರ್ಶನ್ ಸರ್ ಟ್ರೇಲರ್ ಲಾಂಚ್ ಮಾಡಿರುವುದು ತುಂಬಾನೇ ಖುಷಿ ಇದೆ. ದರ್ಶನ್ ಸರ್ ನಮ್ಮ ಫ್ಯಾಮಿಲಿಗೆ ಹತ್ತಿರ ಆದವರು. ಅಪ್ಪನ ಸಿನಿಮಾ ಜರ್ನಿಯಿಂದ ಜೊತೆಯಲಿ ಇದ್ದಾರೆ. ನನಗೆ ಮೊದಲ ಸಿನಿಮಾದ ಟ್ರೇಲರ್ ಲಾಂಚ್ ಬಂದಿದ್ದಾರೆ. ಈ ಪಾತ್ರಕ್ಕೆ ಚ್ಯೂಸ್ ಮಾಡಿದ ನಿರ್ದೇಶಕರಿಗೆ, ಡಾಲಿ ಸರ್ ಗೆ ಧನ್ಯವಾದ. ಡಾಲಿ ಪಿಕ್ಚರ್ಸ್… ಈ ಪ್ರೊಡಕ್ಷನ್ ಬಗ್ಗೆ ಹೇಳೋದಾದರೆ, ಎಷ್ಟೇ ಹೊಸಬರು ಬರುವಾಗ ಡಾಲಿ ಪಿಕ್ಚರ್ಸ್ ಎಂದು ಬರುತ್ತಾರೆ . ಹೋಗುವಾಗ ನಮ್ಮದೇ ಪಿಕ್ಚರ್ಸ್ ಎಂದು ಹೋಗುತ್ತಾರೆ. ಆ ರೀತಿ ಎಲ್ಲರನ್ನೂ ರೀಸಿವ್ ಮಾಡಿಕೊಳ್ಳುತ್ತಾರೆ ಎಂದರು.
ಡಾಲಿ ಪಿಕ್ಚರ್ಸ್ ಬ್ಯಾನರ್ನಲ್ಲಿ ಡಾಲಿ ಧನಂಜಯ್ ನಿರ್ಮಿಸುತ್ತಿರುವ ‘ಟಗರು ಪಲ್ಯ’ ಸಿನಿಮಾಗೆ ಉಮೇಶ್ ಕೆ ಕೃಪ ಆಕ್ಷನ್ ಕಟ್ ಹೇಳಿದ್ದಾರೆ. ನಾಗಭೂಷಣ, ಅಮೃತಾ ಪ್ರೇಮ್ ಜೊತೆಗೆ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ, ವೈಜನಾಥ್ ಬಿರಾದಾರ್, ವಾಸುಕಿ ವೈಭವ್ ಸೇರಿದಂತೆ ದೊಡ್ಡ ತಾರಾಬಳಗವಿದೆ.
ನಟರಾಕ್ಷಸ ಡಾಲಿ ಧನಂಜಯ್ (Dhananjay) ನಟನೆಯಲ್ಲಿ ಮಾತ್ರವಲ್ಲ, ನಿರ್ಮಾಣದಲ್ಲೂ ಪ್ರಯೋಗಾತ್ಮಕ ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಉದ್ದೇಶದೊಂದಿಗೆ ಅವರು ‘ಡಾಲಿ ಪಿಕ್ಚರ್ಸ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂರನೇ ಪ್ರಯತ್ನವೇ ‘ಟಗರು ಪಲ್ಯ’ (Tagaru Palya). ಸೆಟ್ಟೇರಿದ ದಿನದಿಂದಲೂ ಭಾರೀ ಸದ್ದು ಮಾಡುತ್ತಿರುವ ಟಗರು ಪಲ್ಯ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ.
ಈಗಾಗಲೇ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಗೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಇದೀಗ ಚಿತ್ರತಂಡ ಸೂರ್ಯಕಾಂತಿ ನಾನು ಎಂಬ ಮೆಲೋಡಿ ಹಾಡನ್ನು ಅನಾವರಣ ಮಾಡಿದೆ. ಸ್ವತಃ ಧನಂಜಯ್ ಅವರೇ ಕ್ಯಾಚಿ ಮ್ಯಾಚಿ ಪದಗಳನ್ನು ಪೊಣಿಸಿ ಸಾಹಿತ್ಯ ಬರೆದಿದ್ದು, ಮಾಧುರಿ ಶೇಷಾದ್ರಿ ಕಂಠ ಕುಣಿಸಿದ್ದು, ವಾಸುಕಿ ವೈಭವ್ ಟ್ಯೂನ್ ಹಾಕಿದ್ದಾರೆ. ಹಳ್ಳಿ ಸೊಗಡಿನ ಕಂಪು ಹೊಂದಿರುವ ಈ ಮೆಲೋಡಿ ಹಾಡಿಗೆ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ (Amrita Prem) ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ: Exclusive: ಸ್ಪಂದನಾ ಇಲ್ಲ ಅನ್ನೋ ರಾಘು ನೋವು ಮಾಯ ಆಗಲ್ಲ- ನವೀನ್ ಕೃಷ್ಣ ಭಾವುಕ
ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ‘ಟಗರು ಪಲ್ಯ’ ಚಿತ್ರಕ್ಕೆ ಉಮೇಶ್ ಕೆ ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಅನೇಕ ಹೊಸಬರಿಗೆ ಅವಕಾಶ ಸಿಕ್ಕಿದೆ. ಈ ಸಿನಿಮಾ ಮೂಲಕ ನಟಿಯಾಗಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ವಿಭಿನ್ನ ಪಾತ್ರಗಳನ್ನ ಆಯ್ಕೆ ಮಾಡಿಕೊಂಡು, ಕನ್ನಡ ಸಿನಿಮಾ ಪ್ರೇಕ್ಷಕರನ್ನು ರಂಜಿಸುತ್ತಿರುವ ನಾಗಭೂಷಣ್ ಟಗರು ಪಲ್ಯದ ನಾಯಕ.
‘ಟಗರು ಪಲ್ಯ’ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದ್ದು ಕೂತೂಹಲ ದುಪ್ಪಟ್ಟಾಗಿದೆ. ಹಿರಿಯ ಕಲಾವಿದರಾದ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್ ಚಿತ್ರಕ್ಕೆ ಸಾಥ್ ಕೊಟ್ಟಿದೆ. ಹಾಗೇ ವಾಸುಕಿ ವೈಭವ್ ಸಂಗೀತವಿದೆ ಇನ್ನು ಎಸ್.ಕೆ.ರಾವ್ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಪ್ರಚಾರ ಕಾರ್ಯ ಆರಂಭಿಸಿರುವ ಟಗರು ಪಲ್ಯ ತಂಡ ಇದೇ ವರ್ಷದ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್ ಮಾಡಲು ಸಕಲ ಸಿದ್ಧತೆ ನಡೆಸುತ್ತಿದೆ.
ಇಕ್ಕಟ್, ಬಡವ ರಾಸ್ಕಲ್ (Badava Rascal) ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ (Nagabhushan) ಅವರಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ‘ಟಗರು ಪಲ್ಯ’ (Tagaru Palya) ಸಿನಿಮಾ ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಡಾಲಿ ಧನಂಜಯ್ (Daali Dhananjay) ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಮೂರನೇ ಚಿತ್ರ ಟಗರು ಪಲ್ಯ ಟೈಟಲ್ ಟ್ರ್ಯಾಕ್ ಅನ್ನು ನಾಯಕ ನಾಗಭೂಷಣ್ ಬರ್ತ್ಡೇ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಧನಂಜಯ್ ಕ್ಯಾಚಿ ಮ್ಯಾಚಿ ಪದಗಳನ್ನು ಸೇರಿಸಿ ಸಾಹಿತ್ಯ ರಚಿಸಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಹಾಡಿಗೆ ಕಂಠ ಕುಣಿಸಿದ್ದಾರೆ.
ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ಟಗರು ಪಲ್ಯ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ (Amrutha Prem) ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ. ಇದನ್ನೂ ಓದಿ:ನಿರ್ದೇಶಕನಾದ ‘ಗೊಂಬೆಗಳ ಲವ್’ ಹೀರೋ ಅರುಣ್
ಹಿರಿಯ ಕಲಾವಿದರಾದ ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾಬಳಗವಿರುವ ಟಗರು ಪಲ್ಯ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಟೈಟಲ್ ಟ್ರ್ಯಾಕ್ ಮೂಲಕ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾವನ್ನು ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ.
ಮೊದಲ ಬಾರಿಗೆ ಅಮೃತಾ ಪ್ರೇಮ್- ನಾಗಭೂಷಣ್ (Nagabhushan) ಜೋಡಿಯಾಗಿ ಅಭಿನಯಿಸಿರುವ ‘ಟಗರು ಪಲ್ಯ’ (Tagaru Palya) ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆಯಿದೆ. ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.
ಬಾಗಲಕೋಟೆ: ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿರುವ ʻ7 ಸ್ಟಾರ್ ಸುಲ್ತಾನ್ ಖಾನ್ʼ ಎಂಬ ಟಗರನ್ನ (Tagaru) ಕುರ್ಬಾನಿಗೆ ಮಾಡಲು ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಬಾಗಲಕೋಟೆ (Bagalkote) ತಾಲೂಕಿನ ಸುತಗುಂಡಾರ್ ಗ್ರಾಮದ ಯುನೀಸ್ ಗಡೇದ್ ಎಂಬ ವ್ಯಕ್ತಿ, ಬಕ್ರೀದ್ ಹಬ್ಬಕ್ಕೆ (Bakrid Festival) ಕುರ್ಬಾನಿಗಾಗಿ ಎರಡೂವರೆ ವರ್ಷದ ಹಿಂದೆ ರಾಂಪುರ್ ಗ್ರಾಮದ ಬಸು ಎಂಬುವರಿಂದ 1.88 ಲಕ್ಷ ರೂ. ನೀಡಿ ಈ ಟಗರನ್ನ ಖರೀದಿಸಿದ್ದರು. ಆದ್ರೆ ಕುರ್ಬಾನಿ ಕೊಡೋ ಮುನ್ನ ಆ ಟಗರನ್ನ ಕಾಳಗಕ್ಕೆ ಇಳಿಸಿದ್ದರು. ಕಾಳಗದಲ್ಲಿ ಟಗರು ಜಯಭೇರಿ ಬಾರಿಸಿತ್ತು. ಇದನ್ನೂ ಓದಿ: 2ನೇ ವೀಕೆಂಡ್ನಲ್ಲೂ ಮಹಿಳೆಯರ ‘ಶಕ್ತಿ’ ಪ್ರದರ್ಶನ – ಯಾವ ಬಸ್ನಲ್ಲಿ ಎಷ್ಟು ಮಂದಿ ಪ್ರಯಾಣ?
ಆ ನಂತರ ಯುನೀಸ್ ಎಲ್ಲ ಕಾಳಗಗಳಿಗೂ ಟಗರನ್ನ ಇಳಿಸಲು ಮುಂದಾರು. ಟಗರು ಹೋದಲೆಲ್ಲಾ ಜಯಭೇರಿ ಬಾರಿಸುತ್ತಾ ತನ್ನದೇ ಅಭಿಮಾನಿ ವರ್ಗವನ್ನ ಸೃಷ್ಟಿಸಿಕೊಂಡಿತು. ಆದ್ದರಿಂದ ಮಾಲೀಕ ಯುನೀಸ್ ಈ ಟಗರಿಗೆ ಪ್ರೀತಿಯಿಂದ ʻ7 ಸ್ಟಾರ್ ಸುಲ್ತಾನ್ʼ ಎಂಬ ಹೆಸರನ್ನಿಟ್ಟರು. ಇಲ್ಲಿಯ ವರೆಗೆ ಈ ಸೆವನ್ ಸ್ಟಾರ್ ಸುಲ್ತಾನ್ ಟಗರು 34 ಕಾಳಗದಲ್ಲಿ ಜಯ ಸಾಧಿಸಿ, 20 ಲಕ್ಷಕ್ಕೂ ಹೆಚ್ಚು ಹಣವನ್ನ ಸಂಪಾದಿಸಿಕೊಟ್ಟಿದೆ. ಅಷ್ಟು ಸಾಲದೆಂಬಂತೆ 3 ಎಚ್ಎಫ್ ಡೀಲಕ್ಸ್ ಬೈಕ್ ಇನ್ನೂ ಅನೇಕ ಬಹುಮಾನಗಳನ್ನ ಗೆದ್ದುಕೊಟ್ಟಿದೆ. ಇದನ್ನೂ ಓದಿ: 1,500 ಮಹಿಳೆಯರಿಂದ ಸೇನಾ ವಾಹನಗಳಿಗೆ ಮುತ್ತಿಗೆ – 12 ದಾಳಿಕೋರರ ಬಿಡುಗಡೆ
ಅಲ್ಲದೇ ತೆರೆ ಕಾಣದ ಡಾಲಿ ಧನಂಜಯ್ ಅಭಿನಯದ ʻಟಗರು ಪಲ್ಯʼ ಚಿತ್ರದಲ್ಲಿ ಅಭಿನಯಿಸಿ, ಈ ಸೆವನ್ ಸ್ಟಾರ್ ಸುಲ್ತಾನ್ ಮತ್ತಷ್ಟು ಸುದ್ದಿಯಾಗಿತ್ತು. ಇದೀಗ ಯುನೀಸ್ ಗಡೇದ್ ಈ ಬಾರಿಯ ಬಕ್ರೀದ್ ಹಬ್ಬಕ್ಕೆ ಟಗರನ್ನ ಕುರ್ಬಾನಿ ಮಾಡಲು ನಿರ್ಧರಿಸಿದ್ದಾರೆ. ಇದು ಸುಲ್ತಾನ್ ಟಗರು ಅಭಿಮಾನಿಗಳಿಗೆ ಬೇಸರ ತರಿಸಿದೆ. ಹೀಗಾಗಿ ಈ ಸುಲ್ತಾನ್ ಅಭಿಮಾನಿಗಳು ಸಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮೂಲಕ ಟಗರನ್ನ ಕುರ್ಬಾನಿ ಮಾಡದಂತೆ ಮನವಿ ಮಾಡುವ ಅಭಿಯಾನ ಶುರುಮಾಡಿಕೊಂಡಿದ್ದಾರೆ.
ನಟರಾಕ್ಷಸ ಡಾಲಿ ಧನಂಜಯ್ (Dolly Dhananjay) ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ (Tagaru Palya). ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿದಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕಳೆದ ನವೆಂಬರ್ ನಲ್ಲಿ ಸೆಟ್ಟೇರಿದ ಟಗರು ಪಲ್ಯ ಸಿನಿಮಾಗೆ ಕುಂಬಳಕಾಯಿ ಪ್ರಾಪ್ತಿಯಾಗಿದೆ.
ಮಂಡ್ಯ, ಮಳವಳ್ಳಿ, ಮುತತ್ತಿ ಹಾಗೂ ಶಿಂಶ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ ಚಿತ್ರ ನಿರ್ಮಿಸಲು ಧನಂಜಯ್ ಪ್ರಾರಂಭಿಸುವ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಮೂರನೇ ಕೊಡುಗೆ ಈ ಸಿನಿಮಾ. ಇದನ್ನೂ ಓದಿ:ಪಿಎಚ್ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್
ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ನಾಗಭೂಷಣ್ (Nagabhushan) ನಾಯಕನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ (Amrutha Prem) ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ.
ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾಬಳಗವಿರುವ ಟಗರು ಪಲ್ಯ ಸಿನಿಮಾಗೆ ವಾಸುಕಿ ವೈಭವ್ ಟ್ಯೂನ್ ಹಾಕಿದ್ದು, ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.
ಡಾಲಿ ಪಿಕ್ಚರ್ಸ್ (Dolly Dhananjay) ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ನೆನಪಿರಲಿ ಪ್ರೇಮ್ ಪುತ್ರಿ ಅಮೃತ ಪ್ರೇಮ್ (Amrita Prem) ಎಂಟ್ರಿ ಕೊಟ್ಟಿದ್ದಾರೆ. ಉಮೇಶ್ ಕೆ ಕೃಪ ನಿರ್ದೇಶನದ ‘ಟಗರು ಪಲ್ಯ’ ಸಿನಿಮಾ ಮೂಲಕ ಕರುನಾಡ ಜನರ ಮುಂದೆ ನಾಯಕ ನಟಿಯಾಗಿ ಅಮೃತ ಪ್ರೇಮ್ ಪರಿಚಿತಗೊಳ್ಳುತ್ತಿದ್ದಾರೆ. ಈಗಾಗಲೇ ‘ಟಗರು ಪಲ್ಯ’ (Tagaru Palya) ಲುಕ್ ನಲ್ಲಿ ಸಿನಿ ಪ್ರೇಕ್ಷಕರಿಂದ ಅಪಾರ ಪ್ರೀತಿ ಪಡೆದುಕೊಂಡಿರುವ ಅಮೃತಾ ಪ್ರೇಮ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಕಲಾವಿದೆಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರೋದು ಈ ಬಾರಿಯ ವಿಶೇಷ. ಚಿತ್ರತಂಡ ಕೂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿ ನಾಯಕ ನಟಿಗೆ ಶುಭ ಕೋರಿದೆ.
‘ಟಗರು ಪಲ್ಯ’ ಚಿತ್ರದಲ್ಲಿ ಅಮೃತ ಪ್ರೇಮ್ ಹಳ್ಳಿ ಹುಡುಗಿ ಪಾತ್ರವನ್ನು ನಿಭಾಯಿಸಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು, ವರ್ಕ್ ಶಾಪ್ ಮೂಲಕ ಸಾಕಷ್ಟು ಕಲಿತು ಹಳ್ಳಿ ಹುಡುಗಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮಂಡ್ಯ ಭಾಗದ ಕಥೆಯನ್ನೊಳ್ಳಗೊಂಡ ಈ ಚಿತ್ರದಲ್ಲಿ ಅಲ್ಲಿನ ಸೊಗಡಿನ ಭಾಷೆ ಕಲಿತು ಅಷ್ಟೇ ಚೆನ್ನಾಗಿ ಅಭಿನಯಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ ಉಮೇಶ್ ಕೆ ಕೃಪ ಹಳ್ಳಿ ಹುಡುಗಿ ಪಾತ್ರ ಅಂದ್ರೆ ಸುಲಭದ ವಿಷಯವಲ್ಲ. ಅದಕ್ಕೆ ಆದಷ್ಟು ಬೇಗ ಒಗ್ಗಿಕೊಂಡು ಆ ನಯ ನಾಜೂಕನ್ನು ಬಹಳ ಬೇಗ ಅರ್ಥಮಾಡಿಕೊಂಡು ಅಮೃತ ನಟಿಸಿದ್ದಾರೆ. ಭಾಷೆ ಮೇಲೆ ಅವರಿಗೆ ಹಿಡಿತ ಇದೆ. ಮಂಡ್ಯ ಸ್ಲ್ಯಾಂಗ್ ತುಂಬಾ ಚೆನ್ನಾಗಿ ಮಾತನಾಡಿದ್ದಾರೆ. ಈಗಾಗಲೇ ಎರಡು ಶೆಡ್ಯೂಲ್ ಕಂಪ್ಲೀಟ್ ಆಗಿದ್ದು ಬಹಳ ಬೇಗ ಎಲ್ಲವನ್ನು ಕಲಿತುಕೊಂಡು ಅಭಿನಯ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಡಾಲಿ ಧನಂಜಯ್ ನಿರ್ಮಾಣ ಸಂಸ್ಥೆ ಡಾಲಿ ಪಿಕ್ಚರ್ಸ್ ನಡಿ ನಿರ್ಮಾಣವಾಗುತ್ತಿರುವ ಮೂರನೇ ಸಿನಿಮಾ ‘ಟಗರು ಪಲ್ಯ’. ಈ ಬಾರಿ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆಯಾಗಿದೆ. ‘ಇಕ್ಕಟ್’ ಖ್ಯಾತಿಯ ನಾಗಭೂಷಣ್, ನೆನಪಿರಲಿ ಪ್ರೇಮ್ ಪುತ್ರಿ ಅಮೃತ ಪ್ರೇಮ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರವನ್ನು ಉಮೇಶ್. ಕೆ. ಕೃಪ ಚೊಚ್ಚಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಇದನ್ನೂ ಓದಿ: ಮದುವೆ ಬಳಿಕ ಮಕ್ಕಳನ್ನು ಕರೆದುಕೊಂಡು ಬರುತ್ತೇನೆ, ಪಾಪಾರಾಜಿಗಳಿಗೆ ಸುನೀಲ್ ಶೆಟ್ಟಿ ಅಭಯ
‘ಟಗರು ಪಲ್ಯ’ ಕಟೆಂಟ್ ಆಧಾರಿತ ಸಿನಿಮಾವಾಗಿದ್ದು, ವಾಸುಕಿ ವೈಭವ್ ಸಂಗೀತ ನಿರ್ದೇಶನ, ಎಸ್. ಕೆ. ರಾವ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ನಾಗಭೂಷಣ್, ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.
Live Tv
[brid partner=56869869 player=32851 video=960834 autoplay=true]
ಸ್ಯಾಂಡಲ್ವುಡ್ಗೆ (Sandalwood) ಇದೀಗ ಸ್ಟಾರ್ ಕಿಡ್ಗಳ ಹಾವಳಿ ಜೋರಾಗಿದೆ. `ನೆನಪಿರಲಿ’ ಪ್ರೇಮ್ (Nenapirali Prem) ಅವರ ಮುದ್ದು ಮಗಳು ಚಂದನವನಕ್ಕೆ ಪಾದಾರ್ಪಣೆ ಮಾಡ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಯುವ ನಟಿಯ ಸಂಭಾವನೆ ಕೇಳಿದ್ರೆ ನಿಜಕ್ಕೂ ನೀವು ಅಚ್ಚರಿಪಡ್ತೀರಾ.
ಗಾಂಧಿನಗರದಲ್ಲಿ ಇದೀಗ ಮುದ್ದು ಕಲಾವಿದೆಯ ಪಾದಾರ್ಪಣೆಯಾಗುತ್ತಿದೆ. ಡಾಲಿ ನಿರ್ಮಾಣದ `ಟಗರು ಪಲ್ಯ’ (Tagaru Palya) ಚಿತ್ರದ ಮೂಲಕ ನೆನಪಿರಲಿ ಪ್ರೇಮ್ ಮಗಳು ಅಮೃತಾ (Amrutha Prem) ನಟ ನಾಗಭೂಷಣಗೆ ನಾಯಕಿಯಾಗಿ ಬರುತ್ತಿದ್ದಾರೆ. ಸಾಮಾನ್ಯವಾಗಿ ಮೊದಲ ಚಿತ್ರಕ್ಕೆ ಅವಕಾಶ ಕೊಡುವುದೇ ದೊಡ್ಡ ವಿಚಾರ. ನಟಿಯ ಮೊದಲ ಚಿತ್ರದ ಸಂಭಾವನೆ ಕೇಳಿದ್ರೆ ಬೆಚ್ಚಿ ಬೀಳುವಂತಿದೆ. ಚೊಚ್ಚಲ ಚಿತ್ರಕ್ಕೆ ಅಮೃತಾ ಪ್ರೇಮ್ಗೆ 10 ಲಕ್ಷ ರೂ. ಸಂಭಾವನೆ ಕೊಟ್ಟಿದ್ದಾರಂತೆ ಡಾಲಿ. ಇದನ್ನೂ ಓದಿ: ಅಕ್ಷಯ್ ಕುಮಾರ್ ನಟನೆಯ ಮರಾಠಿ ಚಿತ್ರದ ಫಸ್ಟ್ ಲುಕ್ ರಿಲೀಸ್
ಡಾಲಿ ನಿರ್ಮಾಣದ ಮೂರನೇ ಸಿನಿಮಾ `ಟಗರುಪಲ್ಯ’ ಚಿತ್ರಕ್ಕೆ ಅಮೃತಾಗೆ 10 ಲಕ್ಷ ರೂ. ಸಂಭಾವನೆ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ನಟನೆಯ ಯಾವುದೇ ಅನುಭವವಿಲ್ಲದ ಹೊಸ ಪ್ರತಿಭೆಗೆ ಇಷ್ಟೊಂದು ಸಂಭಾವನೆನಾ ಎಂಬ ಚರ್ಚೆ ಗಾಂಧಿನಗರದಲ್ಲಿ ಜೋರಾಗಿದೆ. ಇನ್ನೂ ತಮ್ಮ ಚೊಚ್ಚಲ ಚಿತ್ರದ ಮೂಲಕ ಮುಂದಿನ ದಿನಗಳಲ್ಲಿ ಗಟ್ಟಿ ನಾಯಕಿಯಾಗಿ ನಿಲ್ಲುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.
Live Tv
[brid partner=56869869 player=32851 video=960834 autoplay=true]
ನಟ ಡಾಲಿ ಧನಂಜಯ್ ಈ ಹಿಂದೆ ‘ಬಡವರ ಮಕ್ಳು ಬೆಳಿಬೇಕು ಕಣ್ರಯ್ಯ’ ಎಂದು ಡೈಲಾಗ್ ಹೊಡೆದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅದು ಸಖತ್ ವೈರಲ್ ಕೂಡ ಆಗಿತ್ತು. ಬಡ ಪ್ರತಿಭಾವಂತರು ಯಾರೇ ಕಂಡರೂ, ಅವರಿಗೆ ಈ ಟ್ಯಾಗ್ ಹಾಕಿವೆ ಪೋಸ್ಟ್ ಮಾಡುವಂತಹ ಪರಿಹಾಠ ಬೆಳೆದಿತ್ತು. ಕೆಲ ವಿಷಯಗಳಲ್ಲಿ ಸ್ವತಃ ಡಾಲಿ ಅವರನ್ನೇ ಈ ಟ್ಯಾಗ್ ಹಾಕಿ ಟ್ರೋಲ್ ಮಾಡಿದ್ದು ಇದೆ. ಇದೀಗ ಈ ಮಾತನ್ನೇ ಇಟ್ಟುಕೊಂಡು ಕೆಲವರು ಧನಂಜಯ್ ಮೇಲೆ ಮುಗಿಬಿದ್ದಿದ್ದಾರೆ. ಕಾರಣ ಟಗರು ಪಲ್ಯ ಸಿನಿಮಾ.
ಟಗರು ಪಲ್ಯ ಸಿನಿಮಾದ ಮೂಲಕ ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಅವರನ್ನು ಸಿನಿಮಾ ರಂಗಕ್ಕೆ ಪರಿಚಯಿಸುತ್ತಿದ್ದಾರೆ. ಮೊದಲ ಚಿತ್ರಕ್ಕೆ ಈ ಹುಡುಗಿಗೆ ಹತ್ತು ಲಕ್ಷ ರೂಪಾಯಿ ಸಂಭಾವನೆ ನೀಡಲಾಗಿದೆ ಎನ್ನುವ ಸುದ್ದಿಯೂ ಇದೆ. ಈ ಆಯ್ಕೆಯನ್ನೇ ಹಲವರು ಧನಂಜಯ್ ಅವರಿಗೆ ಪ್ರಶ್ನೆ ಮಾಡಿದ್ದಾರೆ. ಬಡವರು ಮಕ್ಳು ಬೆಳಿಬೇಕು ಅಂತ ಹೇಳಿದ ನೀವೇ, ನಟನೊಬ್ಬನ ಪುತ್ರಿಗೆ ಅವಕಾಶ ಕೊಟ್ಟಿದ್ದೀರಿ. ಬಡವರ ಮಕ್ಕಳನ್ನು ಯಾಕೆ ಆಯ್ಕೆ ಮಾಡಲಿಲ್ಲ ಎಂದು ಕೇಳಿದ್ದಾರೆ. ನೀವು ನೆಪೊಟಿಸಮ್ ಅನ್ನು ಬೆಂಬಲಿಸುತ್ತಿದ್ದೀರಿ ಎಂದೂ ಕೇಳಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ಎರಡು ದಿನ ಟೆಲಿವಿಷನ್ ಕ್ರಿಕೆಟ್ ಲೀಗ್
ಈ ಪ್ರಶ್ನೆ ಡಾಲಿ ಖಡಕ್ಕಾಗಿಯೇ ಉತ್ತರ ನೀಡಿದ್ದಾರೆ. ಈ ಸಿನಿಮಾದ ನಿರ್ದೇಶಕರು ಸೆಟ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಹಂತ ಹಂತವಾಗಿ ಈ ಮಟ್ಟಕ್ಕೆ ಬಂದಿದ್ದಾರೆ. ಇದು ಅವರ ಮೊದಲ ಸಿನಿಮಾ ಎಂದು ಹೇಳುವ ಮೂಲಕ, ನೋಡುವ ನಿಮ್ಮ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳಿ ಎನ್ನುವ ಪರೋಕ್ಷ ಉತ್ತರ ನೀಡಿದ್ದಾರೆ. ಟಗರು ಪಲ್ಯ ಸಿನಿಮಾದ ನಿರ್ದೇಶಕ ಉಮೇಶ್ ಕೃಪಾ ಈ ಹಿಂದೆ ಹಲವು ಸಿನಿಮಾಗಳಲ್ಲಿ ಸೆಟ್ ಬಾಯ್ ಆಗಿ ಕೆಲಸ ಮಾಡಿದ್ದಾರಂತೆ. ಅಂತಹ ಪ್ರತಿಭಾವಂತನಿಗೆ ಡಾಲಿ ಅವಕಾಶ ನೀಡಿದ್ದಾರೆ.
ಅಂದಹಾಗೆ ಈ ಸಿನಿಮಾದಲ್ಲಿ ಅಮೃತಾ ಪ್ರೇಮ್ ನಾಯಕಿಯಾಗಿ ನಟಿಸುತ್ತಿದ್ದರೆ, ನಾಗಭೂಷಣ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ತಾರಾ ನಾಯಕನ ತಾಯಿ ಪಾತ್ರ ಮಾಡಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾಗೆ ಮುಹೂರ್ತ ಕೂಡ ನಡೆದಿದೆ. ಸದ್ಯ ಶೂಟಿಂಗ್ ನಲ್ಲಿ ಚಿತ್ರತಂಡ ತೊಡಗಿಕೊಂಡಿದೆ.
Live Tv
[brid partner=56869869 player=32851 video=960834 autoplay=true]
ಗಾಂಧಿನಗರದಲ್ಲಿ ಸೂಪರ್ ಸ್ಟಾರ್ಗಳ ಮಕ್ಕಳ ಎಂಟ್ರಿಯಾಗುತ್ತಿದೆ. `ನೆನಪಿರಲಿ’ ಪ್ರೇಮ್ (Nenapirali Prem) ಪುತ್ರಿ ಅಮೃತಾ (Amrutha Prem) ನಟನೆಗೆ ಎಂಟ್ರಿ ಕೊಡ್ತಿರುವ ಬೆನ್ನಲ್ಲೇ ರಿಯಲ್ ಸ್ಟಾರ್ ಉಪೇಂದ್ರ (Real Star Upendra) ಮಗಳು ಐಶ್ವರ್ಯ ಎಂಟ್ರಿಯ ಬಗ್ಗೆ ಗುಸು ಗುಸು ಶುರುವಾಗಿದೆ.
ಇತ್ತೀಚೆಗಷ್ಟೇ ಡಾಲಿ ಪಿಕ್ಚರ್ಸ್ ನಿರ್ಮಾಣದ `ಟಗರು ಪಲ್ಯ’ (Tagaru Palya) ಚಿತ್ರದಲ್ಲಿ ಅಮೃತಾ ಪ್ರೇಮ್ (Amrutha) ನಾಯಕಿಯಾಗಿರುವ ಬೆನ್ನಲ್ಲೇ ನಟ ಉಪೇಂದ್ರ ಮಗಳ ಬರುವಿಕೆಗೆ ಕೌಂಟ್ಡೌನ್ ಶುರುವಾಗಿದೆ. ಸ್ಟಾರ್ ನಟ ನಟಿಯರ ಮಕ್ಕಳು ಚಿತ್ರರಂಗಕ್ಕೆ ಹೆಜ್ಜೆ ಇಡ್ತಿದ್ದಾರೆ. ಇದನ್ನೂ ಓದಿ: `ಕೆಜಿಎಫ್’ ತಾತ ಕೃಷ್ಣ ಜಿ. ರಾವ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಪ್ರತಿಷ್ಠಿತ ಸಂಸ್ಥೆ ಹೊಂಬಾಳೆ ಬ್ಯಾನರ್ ರಾಘವೇಂದ್ರ ರಾಜ್ಕುಮಾರ್ ಅವರ ಪುತ್ರ ಯುವರಾಜ್ಕುಮಾರ್ ಅವರನ್ನ ಲಾಂಚ್ ಮಾಡ್ತಿರುವ ವಿಚಾರ ಎಲ್ಲರಿಗೂ ಗೊತ್ತೆ ಇದೆ. ಸಂತೋಷ್ ಆನಂದ್ರಾಮ್ ನಿರ್ದೇಶನದ ಹೊಸ ಚಿತ್ರದಲ್ಲಿ ಯುವಗೆ ನಾಯಕಿಯಾಗಿ ಐಶ್ವರ್ಯ ಉಪೇಂದ್ರ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಹೊಂಬಾಳೆ ಸಂಸ್ಥೆಯಡಿ ನಾಯಕಿಯಾಗಿ ನಟಿಸುವಂತೆ ಉಪ್ಪಿ ಪುತ್ರಿಗೆ ಆಫರ್ ನೀಡಲಾಗಿದೆಯಂತೆ. ಮಗಳ ಸಿನಿ ಜರ್ನಿಗೆ ಉಪ್ಪಿ ಕುಟುಂಬ ಗ್ರೀನ್ ಸಿಗ್ನಲ್ ಕೊಡ್ತಾರಾ ಎಂಬುದನ್ನ ಕಾದುನೋಡಬೇಕಿದೆ.
Live Tv
[brid partner=56869869 player=32851 video=960834 autoplay=true]