Tag: Tagaru Palya

  • ಸೆಟ್ಟೇರಿತು ಡಾಲಿ ಪಿಕ್ಚರ್ಸ್ ನಿರ್ಮಾಣದ ಮೂರನೇ ಸಿನಿಮಾ

    ಸೆಟ್ಟೇರಿತು ಡಾಲಿ ಪಿಕ್ಚರ್ಸ್ ನಿರ್ಮಾಣದ ಮೂರನೇ ಸಿನಿಮಾ

    ಟ ಡಾಲಿ ಧನಂಜಯ್  ನಿರ್ಮಾಣ ಸಂಸ್ಥೆ ಡಾಲಿ ಪಿಕ್ಚರ್ಸ್ ನಡಿ ನಿರ್ಮಾಣವಾಗುತ್ತಿರುವ ಮೂರನೇ ಸಿನಿಮಾ ಟಗರು ಪಲ್ಯ. ಈ ಬಾರಿ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆಯಾಗಿದೆ. ‘ಇಕ್ಕಟ್’ ಖ್ಯಾತಿಯ ನಾಗಭೂಷಣ್, ನೆನಪಿರಲಿ ಪ್ರೇಮ್ ಪುತ್ರಿ ಅಮೃತ ಪ್ರೇಮ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರವನ್ನು ಉಮೇಶ್. ಕೆ. ಕೃಪ ಚೊಚ್ಚಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಇಂದು ‘ಟಗರು ಪಲ್ಯ’ ಸಿನಿಮಾ ಮುಹೂರ್ತ ಆಚರಿಸಿಕೊಂಡಿದ್ದು, ಡಿಸೆಂಬರ್ ಮೊದಲ ವಾರದಿಂದ ಚಿತ್ರೀಕರಣ ಆರಂಭಿಸಲಿದೆ.

    ಇದು ನನ್ನ ಮೊದಲ ಸಿನಿಮಾ. ಕಂಟೆಂಟ್ ಆಧಾರಿತ ಸಿನಿಮಾವಾಗಿದ್ದು, ಒಂದೊಳ್ಳೆ ಮನರಂಜನೆಯನ್ನು ಪ್ರೇಕ್ಷಕರಿಗೆ ನೀಡಲಿದೆ. ಸಿನಿಮಾ ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಡಿಸೆಂಬರ್ ಮೊದಲ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ಮೂಲಕ ಲವ್ ಲಿ ಸ್ಟಾರ್ ಪ್ರೇಮ್ ಪುತ್ರಿ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ ಎಂದು ನಿರ್ದೇಶಕ ಉಮೇಶ್ ಕೆ ಕೃಪ ತಿಳಿಸಿದ್ದಾರೆ. ಡಾಲಿ ಧನಂಜಯ್ ಮಾತನಾಡಿ ಡಾಲಿ ಪಿಕ್ಚರ್ಸ್ ಮೂಲಕ ಹೊಸ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲಾಗುತ್ತೆ ಎಂದು ನಾನು ಹಿಂದೆಯೇ ಹೇಳಿದ್ದೆ. ಉಮೇಶ್ ಕೆ ಕೃಪ ‘ಟಗರು ಪಲ್ಯ’ ಕಥೆ ಎಳೆ ಹೇಳಿದಾಗ ತುಂಬಾ ಖುಷಿ ಆಯ್ತು. ಅದ್ಭುತವಾದ ರೈಟರ್. ಸೆಟ್ ಹುಡುಗ ಆಗಿ ಕೆಲಸ ಆರಂಭಿಸಿ, ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿ ಈಗ ನಿರ್ದೇಶಕನಾಗುತ್ತಿದ್ದಾರೆ. ಬಡ ಕುಟುಂಬದಿಂದ ಬಂದು ನಿರ್ದೇಶಕನಾಗುತ್ತಿದ್ದಾರೆ. ಚಿತ್ರರಂಗಕ್ಕೆ ಒಳ್ಳೆ ಗಿಫ್ಟ್ ಆಗೋ ಎಲ್ಲಾ ಲಕ್ಷಣಗಳು ಅವರಲ್ಲಿದೆ.  ನಮ್ಮ ಬ್ಯಾನರ್ ನಿಂದ ಒಳ್ಳೆಯ ನಿರ್ದೇಶಕರು ಬರಲಿ ಎಂದು ಈ ಸಿನಿಮಾ ಆರಂಭಿಸಿದ್ವಿ ಎಂದು ನಿರ್ದೇಶಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ರು. ಇದನ್ನೂ ಓದಿ: ತಮಿಳು ಸೀರಿಯಲ್‌ನಿಂದ ಹೊರನಡೆದ `ಪಾರು’ ನಟಿ ಮೋಕ್ಷಿತಾ ಪೈ

    ಇಡೀ ಕಥೆ ಮಂಡ್ಯದ ಹಳ್ಳಿಯಲ್ಲಿ ನಡೆಯುವ ಆಚರಣೆ ಸುತ್ತ ನಡೆಯುವ ಕಥಾಹಂದರ ಒಳಗೊಂಡಿದೆ. ಎಮೋಶನಲ್ ಎಂಟಟೈನ್ಮೆಂಟ್ ಸಿನಿಮಾವಿದು. ನಾಗಭೂಷಣ್ ಈಗಾಗಲೇ ಇಕ್ಕಟ್, ಹನಿಮೂನ್, ಬಡವ ರಾಸ್ಕಲ್ ಸಿನಿಮಾದಲ್ಲಿ ತಮ್ಮ ಪ್ರತಿಭೆ ಪ್ರೂವ್ ಮಾಡಿದ್ದಾರೆ. ಪ್ರೇಮ್ ಸರ್ ಮಗಳನ್ನು ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಇಂಟ್ರಡ್ಯೂಸ್ ಮಾಡುತ್ತಿದ್ದೇವೆ. ತುಂಬಾ ದೊಡ್ಡ ಜವಾಬ್ದಾರಿ ಇದು. ಕನ್ನಡ ಚಿತ್ರರಂಗದ ಮಹಾಲಕ್ಷ್ಮೀ ಆಗಿ ಅಮೃತ ಬೆಳಗಲಿ ಎಂದು ಧನಂಜಯ್ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು. ನೆನಪಿರಲಿ ಪ್ರೇಮ್ ಮಾತನಾಡಿ ನನ್ನ ಮಗಳಿಗೆ ಒಳ್ಳೆ ಕಥೆ ಬಂದಿದೆ ಸಿನಿಮಾದಲ್ಲಿ ಆಕ್ಟ್ ಮಾಡ್ತಿಯ ಎಂದು ಕೇಳಿದೆ ಇಷ್ಟು ದಿನ ಮಾಡಲ್ಲ ಅಂತಿದ್ದವಳು ಒಂದೇ ಸರಿ ಒಕೆ ಅಂದ್ಲು. ಕಥೆ ಓದಿದೆ ನನಗೂ ಹಾಗೂ ಮಗಳಿಗೂ ತುಂಬಾ ಇಷ್ಟವಾಯ್ತು ಒಕೆ ಅಂದ್ವಿ. ಡಾಲಿ ಪ್ರೊಡಕ್ಷನ್ ಮಾಡ್ತಿದ್ದಾನೆ ಎಂದು ಗೊತ್ತಾಗಿ ತುಂಬಾ ಖುಷಿ ಆಯ್ತು. ಇಲ್ಲಿವರೆಗೆ ನಮ್ಮನ್ನು ಬೆಳೆಸಿದ್ದೀರಾ ನನ್ನ ಮಗಳಿಗೂ ಪ್ರೋತ್ಸಾಹ ನೀಡಿ ಎಂದು ಪ್ರೇಮ್ ಸಂತಸ ಹಂಚಿಕೊಂಡ್ರು.

    ಇದು ನನಗೆ ದೊಡ್ಡ ಜವಾಬ್ದಾರಿ ಖಂಡಿತಾ ನಾನು ಪ್ರೂವ್ ಮಾಡ್ತೇನೆ. ಕಥೆ ಹಾಗೂ ಇದ್ರಲ್ಲಿರೋ ಮೆಸೇಜ್ ತುಂಬಾ ಇಷ್ಟ ಆಯ್ತು ಆದ್ರಿಂದ ಒಪ್ಪಿಕೊಂಡೆ. ಅವಕಾಶ ಕೊಟ್ಟಿದ್ದಕ್ಕೆ  ಧನಂಜಯ್ ಸರ್ ಗೆ ಧನ್ಯವಾದಗಳು. ಆಕ್ಟಿಂಗ್ ಫೀಲ್ಡ್ ಗೆ ಬರ್ತಿನಿ ಅಂತ ಯೋಚನೆ ಮಾಡಿರಲಿಲ್ಲ. ಈ ಸಿನಿಮಾ ಕಥೆ ಬಂದಾಗ ಅಪ್ಪ ನನಗೆ ಒಂದೇ ಮಾತು ಹೇಳಿದ್ದು ಕಲಿಬೇಕು ಅಂತ ಇಂಟ್ರಸ್ಟ್ ಇದ್ರೆ ಯಾವುದು ಬೇಕಾದ್ರು ಸಾಧ್ಯ ಎಂದು ಆದ್ರಿಂದ ಒಪ್ಪಿಕೊಂಡೆ. ಖಂಡಿತಾ ನನ್ನ ಬೆಸ್ಟ್ ಈ ಸಿನಿಮಾಗೆ ನೀಡುತ್ತೇನೆ ಎಂದು ಅಮೃತ ಪ್ರೇಮ್ ಮೊದಲ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು.

    ನಾಯಕ ನಾಗಭೂಷಣ್ ಮಾತನಾಡಿ ನನ್ನ ಊರ ಹೆಸರು ಟಗರು ಪುರ ಎಂದು ಕಾಕತಾಳೀಯವೇನೋ ಎಂಬಂತೆ ನನ್ನ ಸಿನಿಮಾ ಹೆಸರು ಟಗರು ಪಲ್ಯ ಎಂದು ತುಂಬಾ ಖುಷಿ ಆಯ್ತು. ಈ ಕಾಲಘಟ್ಟಕ್ಕೆ ‘ಟಗರು ಪಲ್ಯ’ ತುಂಬಾ ರಿಲೆವೆಂಟ್ ಆಗಿದೆ. ಹಳ್ಳಿಯಲ್ಲಿ ಇರುವ ನಂಬಿಕೆ, ಆಚರಣೆ ಸುತ್ತ ನಡೆಯೋ ಕಥೆ ಇದು. ಈ ಸಿನಿಮಾ ಭಾಗವಾಗಿರೋದು ತುಂಬಾ ಖುಷಿ ಇದೆ ಎಂದ್ರು.  ಟಗರು ಪಲ್ಯಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನನ, ಎಸ್. ಕೆ. ರಾವ್ ಕ್ಯಾಮೆರಾ ವರ್ಕ್, ವಿನೋದ್ ಮಾಸ್ಟರ್ ಸಾಹಸ ನಿರ್ದೇಶನವಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

     

     

    Live Tv
    [brid partner=56869869 player=32851 video=960834 autoplay=true]

  • ನೆನಪಿರಲಿ ಪ್ರೇಮ್ ಪುತ್ರಿ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ: ಹೀರೋ ಯಾರು?

    ನೆನಪಿರಲಿ ಪ್ರೇಮ್ ಪುತ್ರಿ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ: ಹೀರೋ ಯಾರು?

    ಮೊನ್ನೆಯಷ್ಟೇ ನಟಿ ಮಾಲಾಶ್ರೀ ಮಗಳು ಚಿತ್ರೋದ್ಯಮಕ್ಕೆ ಪ್ರವೇಶ ಮಾಡಿದ್ದರು. ಈ ಬೆನ್ನಲ್ಲೇ ಮತ್ತೋರ್ವ ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಸ್ಯಾಂಡಲ್ ವುಡ್ ಪ್ರವೇಶ ಮಾಡುತ್ತಿದ್ದಾರೆ. ಇವರನ್ನು ಚಿತ್ರೋದ್ಯಮಕ್ಕೆ ಪರಿಚಯ ಮಾಡುತ್ತಿರುವುದು ಡಾಲಿ ಧನಂಜಯ್ ಎನ್ನುವುದು ವಿಶೇಷ. ಡಾಲಿ ಪಿಕ್ಚರ್ ನಲ್ಲಿ ಮೂಡಿ ಬರುತ್ತಿರುವ ಸಿನಿಮಾದ ಮೂಲಕ ಅಮೃತಾ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರೇಮ್, ‘ನನ್ನ ಮಗುವನ್ನು ನಿಮ್ಮ ಮಡಿಲಿಗೆ ಹಾಕುತ್ತಿದ್ದೇನೆ, ನಿಮ್ಮ ಆಶೀರ್ವಾದ ಪ್ರೀತಿ , ಪ್ರೋತ್ಸಾಹ ಅಭಿಮಾನವಿರಲಿ’ ಎಂದು ಬರೆದುಕೊಂಡಿದ್ದಾರೆ. ಡಾಲಿ ಧನಂಜಯ್ ನಿರ್ಮಾಣದಲ್ಲಿ  ಈ ಸಿನಿಮಾ ಮೂಡಿ ಬರುತ್ತಿರುವುದರಿಂದ, ವಿಭಿನ್ನ ಪಾತ್ರದ ಮೂಲಕವೇ ಪ್ರೇಮ್ ಪುತ್ರಿ ಸಿನಿಮಾ ರಂಗ ಪ್ರವೇಶ ಮಾಡುತ್ತಿರುವುದು ವಿಶೇಷ. ಅಂದಹಾಗೆ ಈ ಸಿನಿಮಾಗೆ ಟಗರು ಪಲ್ಯ ಎಂದು ಹೆಸರಿಡಲಾಗಿದೆ. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ

    ಗರು ಸಿನಿಮಾ ಮೂಲಕ ಖ್ಯಾತಿ ಗಳಿಸಿದ ನಟ ಡಾಲಿ ಧನಂಜಯ್ ಸ್ಯಾಂಡಲ್ ವುಡ್ ಅಂಗಳದ ಬಹು ಬೇಡಿಕೆಯ ನಟ. ಆದ್ರೆ ಕೇವಲ ನಟನಾಗಿ ಮಾತ್ರ ಉಳಿಯದೇ ನಿರ್ಮಾಪಕನಾಗಿಯೂ ಡಾಲಿ ಗಮನ ಸೆಳೆಯುತ್ತಿದ್ದಾರೆ. ಡಾಲಿ ಪಿಕ್ಚರ್ಸ್ ಮೂಲಕ ಸಿನಿಮಾ ನಿರ್ಮಾಣವನ್ನು ಮಾಡುತ್ತಿದ್ದು ಮೊದಲೆರಡು ಸಿನಿಮಾವಾಗಿ ‘ಬಡವ ರಾಸ್ಕಲ್’ ಹಾಗೂ ‘ಹೆಡ್ ಬುಶ್’ ನಿರ್ಮಾಣ ಮಾಡಲಾಗಿತ್ತು. ಇತ್ತೀಚೆಗೆ ಡಾಲಿ ಪಿಕ್ಚರ್ಸ್ ಮೂರನೇ ಸಿನಿಮಾ ‘ಟಗರು ಪಲ್ಯ’ ಅನೌನ್ಸ್ ಆಗಿತ್ತು. ಮೋಷನ್ ಪೋಸ್ಟರ್ ಮೂಲಕ ಸುದ್ದಿಯಾಗಿದ್ದ ‘ಟಗರು ಪಲ್ಯ’ ಇದೀಗ ಸೆಟ್ಟೇರೋಕೆ ರೆಡಿಯಾಗಿದೆ.

    ‘ಟಗರು ಪಲ್ಯ’ ಮೂಲಕ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆ ಮಾಡಿಕೊಟ್ಟಿದೆ. ಚಿತ್ರದಲ್ಲಿ ನಾಗಭೂಷಣ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಮೂಲಕ ಉಮೇಶ್ ಕೆ ಕೃಪ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಯೋಗರಾಜ್ ಭಟ್ ಸೇರಿದಂತೆ ಹಲವು ನಿರ್ದೇಶಕರ ಜೊತೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. ‘ಟಗರು ಪಲ್ಯ’ ಕಂಟೆಂಟ್ ಆಧಾರಿತ ಸಿನಿಮಾವಾಗಿದ್ದು, ಒಂದೊಳ್ಳೆ ಮನರಂಜನೆಯನ್ನು ಪ್ರೇಕ್ಷಕರಿಗೆ ನೀಡಲಿದೆ. ಸಿನಿಮಾ ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಸಿನಿಮಾ ಸೆಟ್ಟೇರಲಿದೆ ಎಂದು ನಿರ್ದೇಶಕ ಉಮೇಶ್ ಕೆ ಕೃಪ ತಿಳಿಸಿದ್ದಾರೆ.

    ವಾಸುಕಿ ವೈಭವ್ ಸಂಗೀತ ನಿರ್ದೇಶನ, ಎಸ್. ಕೆ. ರಾವ್ ಕ್ಯಾಮೆರಾ ವರ್ಕ್, ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.  ಅಮೃತಾ ಸಿನಿಮಾದ ನಾಯಕಿಯಾದರೆ, ರಂಗಾಯಣ ರಘು, ನಾಗಭೂಷಣ್, ತಾರಾ, ಶರತ್ ಲೋಹಿತಾಶ್ವ ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

    Live Tv
    [brid partner=56869869 player=32851 video=960834 autoplay=true]

  • ಡಿಸೆಂಬರ್‌ನಲ್ಲಿ ಡಾಲಿ ಧನಂಜಯ್ ನಿರ್ಮಾಣದ ‘ಟಗರು ಪಲ್ಯ’ ಚಿತ್ರಕ್ಕೆ ಚಾಲನೆ

    ಡಿಸೆಂಬರ್‌ನಲ್ಲಿ ಡಾಲಿ ಧನಂಜಯ್ ನಿರ್ಮಾಣದ ‘ಟಗರು ಪಲ್ಯ’ ಚಿತ್ರಕ್ಕೆ ಚಾಲನೆ

    ಗರು ಸಿನಿಮಾ ಮೂಲಕ ಖ್ಯಾತಿ ಗಳಿಸಿದ ನಟ ಡಾಲಿ ಧನಂಜಯ್ ಸ್ಯಾಂಡಲ್ ವುಡ್ ಅಂಗಳದ ಬಹು ಬೇಡಿಕೆಯ ನಟ. ಆದ್ರೆ ಕೇವಲ ನಟನಾಗಿ ಮಾತ್ರ ಉಳಿಯದೇ ನಿರ್ಮಾಪಕನಾಗಿಯೂ ಡಾಲಿ ಗಮನ ಸೆಳೆಯುತ್ತಿದ್ದಾರೆ. ಡಾಲಿ ಪಿಕ್ಚರ್ಸ್ ಮೂಲಕ ಸಿನಿಮಾ ನಿರ್ಮಾಣವನ್ನು ಮಾಡುತ್ತಿದ್ದು ಮೊದಲೆರಡು ಸಿನಿಮಾವಾಗಿ ‘ಬಡವ ರಾಸ್ಕಲ್’ ಹಾಗೂ ‘ಹೆಡ್ ಬುಶ್’ ನಿರ್ಮಾಣ ಮಾಡಲಾಗಿತ್ತು. ಇತ್ತೀಚೆಗೆ ಡಾಲಿ ಪಿಕ್ಚರ್ಸ್ ಮೂರನೇ ಸಿನಿಮಾ ‘ಟಗರು ಪಲ್ಯ’ ಅನೌನ್ಸ್ ಆಗಿತ್ತು. ಮೋಷನ್ ಪೋಸ್ಟರ್ ಮೂಲಕ ಸುದ್ದಿಯಾಗಿದ್ದ ‘ಟಗರು ಪಲ್ಯ’ ಇದೀಗ ಸೆಟ್ಟೇರೋಕೆ ರೆಡಿಯಾಗಿದೆ.

    ‘ಟಗರು ಪಲ್ಯ’ ಮೂಲಕ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆ ಮಾಡಿಕೊಟ್ಟಿದೆ. ಚಿತ್ರದಲ್ಲಿ ನಾಗಭೂಷಣ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಮೂಲಕ ಉಮೇಶ್ ಕೆ ಕೃಪ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಯೋಗರಾಜ್ ಭಟ್ ಸೇರಿದಂತೆ ಹಲವು ನಿರ್ದೇಶಕರ ಜೊತೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. ‘ಟಗರು ಪಲ್ಯ’ ಕಂಟೆಂಟ್ ಆಧಾರಿತ ಸಿನಿಮಾವಾಗಿದ್ದು, ಒಂದೊಳ್ಳೆ ಮನರಂಜನೆಯನ್ನು ಪ್ರೇಕ್ಷಕರಿಗೆ ನೀಡಲಿದೆ. ಸಿನಿಮಾ ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಸಿನಿಮಾ ಸೆಟ್ಟೇರಲಿದೆ ಎಂದು ನಿರ್ದೇಶಕ ಉಮೇಶ್ ಕೆ ಕೃಪ ತಿಳಿಸಿದ್ದಾರೆ. ಇದನ್ನೂ ಓದಿ: EXCLUSIVE:ಆಗಿದ್ದು ಎಂಗೇಜ್‌ಮೆಂಟ್ ಅಲ್ಲ, ನಾನಿನ್ನೂ ಒಪ್ಪಿಲ್ಲ: ವೈಷ್ಣವಿ

    ವಾಸುಕಿ ವೈಭವ್ ಸಂಗೀತ ನಿರ್ದೇಶನ, ಎಸ್. ಕೆ. ರಾವ್ ಕ್ಯಾಮೆರಾ ವರ್ಕ್, ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರಕ್ಕೆ ನಾಯಕಿ ಯಾರೆಂಬುದು ಸದ್ಯದಲ್ಲೇ ರಿವೀಲ್ ಆಗಲಿದ್ದು, ರಂಗಾಯಣ ರಘು, ನಾಗಭೂಷಣ್, ತಾರಾ, ಶರತ್ ಲೋಹಿತಾಶ್ವ ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

    Live Tv
    [brid partner=56869869 player=32851 video=960834 autoplay=true]