Tag: tahasildar

  • ಹಾಸನ ತಹಶೀಲ್ದಾರ್ ಶ್ವೇತಾ ವರ್ಗಾವಣೆಗೆ ಕೆಎಟಿ ತಡೆ

    ಹಾಸನ ತಹಶೀಲ್ದಾರ್ ಶ್ವೇತಾ ವರ್ಗಾವಣೆಗೆ ಕೆಎಟಿ ತಡೆ

    ಹಾಸನ: ಇಲ್ಲಿನ ತಹಶೀಲ್ದಾರ್ (Tahasildar) ಆಗಿದ್ದ ಶ್ವೇತಾ ಅವರ ವರ್ಗಾವಣೆಗೆ (Transfer) ಕೆಎಟಿ (Karnataka Adminstration Tribunal) ತಡೆ ನೀಡಿದೆ. ಅಧಿಕಾರಿ ಶ್ವೇತಾ ಸೇರಿದಂತೆ ಇತ್ತೀಚೆಗೆ ಹದಿಮೂರು ಮಂದಿ ತಹಶೀಲ್ದಾರ್‍ರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶದ ವಿರುದ್ಧ ಶ್ವೇತಾ ಅವರು, ಇಲ್ಲಿ ಅಧಿಕಾರ ವಹಿಸಿಕೊಂಡು ಕೇವಲ ಎಂಟು ತಿಂಗಳಾಗಿವೆ. ಒಂದು ವರ್ಷ ಪೂರ್ಣಗೊಳ್ಳುವ ಮೊದಲೇ ವರ್ಗಾವಣೆ ಮಾಡಲಾಗಿದೆ ಎಂದು ಕೆಎಟಿ ಮೊರೆ ಹೋಗಿದ್ದರು.

    ಶ್ವೇತಾ ಅವರು ಗ್ರೇಡ್-1 ತಹಶೀಲ್ದಾರ್ ಆಗಿದ್ದು, ಅವರ ಸ್ಥಾನಕ್ಕೆ ಗ್ರೇಡ್-2 ತಹಸೀಲ್ದಾರ್‍ರನ್ನು ನಿಯೋಜನೆ ಮಾಡಿರುವುದು ಎಷ್ಟು ಸರಿ? ಇದು ಊರ್ಜಿತವೇ? ಎಂದು ಶ್ವೇತಾ ಅವರ ಪರ ವಕೀಲರು ಕರ್ನಾಟಕ ನ್ಯಾಯಾಧಿಕರಣದ ಮುಂದೆ ವಾದ ಮಂಡಿಸಿದ್ದರು. ಈ ವಾದ ಹಾಗೂ ಮನವಿಯನ್ನು ಪುರಸ್ಕರಿಸಿದ ನ್ಯಾಯಮಂಡಳಿ ಶ್ವೇತಾ ಅವರ ವರ್ಗಾವಣೆಗೆ ತಡೆ ನೀಡಿದೆ. ಇದನ್ನೂ ಓದಿ: ಮುಸ್ಲಿಂ ಸಮುದಾಯದ 4% ಮೀಸಲಾತಿಯನ್ನೂ ತೆಗೆದುಹಾಕ್ತೀವಿ – ಅಮಿತ್‌ ಶಾ

    ಕೆಎಟಿ ಆದೇಶದ ಪ್ರತಿ ರಾತ್ರಿ ಕೈ ಸೇರುವ ಸಾಧ್ಯತೆ ಇದ್ದು, ಅದನ್ನು ಪಡೆದ ನಂತರ ವರದಿ ಮಾಡಿಕೊಳ್ಳುವುದಾಗಿ ಶ್ವೇತಾ ಅವರು ತಿಳಿಸಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಚನ್ನರಾಯಪಟ್ಟಣ ತಹಸೀಲ್ದಾರ್ ಆಗಿದ್ದ ಗೋವಿಂದರಾಜು ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಅವರ ಸ್ಥಾನಕ್ಕೆ ಗೀತಾ ಎಂಬುವವರನ್ನು ನಿಯೋಜನೆ ಮಾಡಲಾಗಿತ್ತು. ನಂತರ ಗೋವಿಂದರಾಜು ಕೆಎಟಿ ಮೊರೆ ಹೋದ ನಂತರ ಅವರ ಪರವೇ ತೀರ್ಪು ಹೊರ ಬಿದ್ದಿತ್ತು. ಅದೇ ಸನ್ನಿವೇಶ ಹಾಸನದಲ್ಲೂ ಮರುಕಳಿಸಿದೆ.

    ಶ್ವೇತಾ ಅವರ ಸ್ಥಾನಕ್ಕೆ ವರ್ಗಾವಣೆಯಾಗಿದ್ದ ಗ್ರೇಡ್-2 ತಹಸೀಲ್ದಾರ್ ಎಸ್.ನವೀನ್ ಕುಮಾರ್, ಇಂದು ಬೆಳಿಗ್ಗೆ ಹಾಸನ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಜಿಲ್ಲಾ ಪಂಚಾಯ್ತಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ತ್ರೈ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: 200 ಮಕ್ಕಳನ್ನು ಶಾಲೆಗೆ ಕಳಿಸದೇ ಇಸ್ಲಾಮಿಕ್ ಶಿಕ್ಷಣ – ಬೆಂಗಳೂರಿನ ಅನಾಥಾಶ್ರಮದ ಮೇಲೆ NCPCR ದಾಳಿ

  • ತಹಶೀಲ್ದಾರ್ ಮೇಲೆ ಹಲ್ಲೆ: 15 ಕ್ಕೂ ಹೆಚ್ಚು ನಿರಾಶ್ರಿತರು ಅರೆಸ್ಟ್

    ತಹಶೀಲ್ದಾರ್ ಮೇಲೆ ಹಲ್ಲೆ: 15 ಕ್ಕೂ ಹೆಚ್ಚು ನಿರಾಶ್ರಿತರು ಅರೆಸ್ಟ್

    ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದ ನಿರಾಶ್ರಿತ ಕೇಂದ್ರದಲ್ಲಿ ತಹಶೀಲ್ದಾರ್ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ 15 ಕ್ಕೂ ಹೆಚ್ಚು ನಿರಾಶ್ರಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಕುಶಾಲನಗರದ ವಾಲ್ಮೀಕಿ ಭವನದಲ್ಲಿ ತೆರೆಯಲಾಗಿದ್ದ ನಿರಾಶ್ರಿತ ಕೇಂದ್ರದಲ್ಲಿ ಸೂಕ್ತ ಸೌಲಭ್ಯ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಿರಾಶ್ರಿತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ತಹಶೀಲ್ದಾರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದರಿಂದ ಸಿಟ್ಟಿಗೆದ್ದ ಉದ್ರಿಕ್ತರು ತಹಶೀಲ್ದಾರ್ ಮೇಲೆಯೇ ಹಲ್ಲೆ ನಡೆಸಿದ್ದರು. ಈ ವೇಳೆ ತಲೆಗೆ ಪೆಟ್ಟು ಬಿದ್ದಿದ್ದ ತಹಶೀಲ್ದಾರ್ ಆಸ್ಪತ್ರೆಗೆ ದಾಖಲಾಗಿದ್ದರು.

    ಕೈ ಕೈ ಮಿಲಾಯಿಸುವ ವೇಳೆ ಕೆಲ ನಿರಾಶ್ರಿತರು ಸಹ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಗಳಿಂದ ದೂರು ದಾಖಲಾಗಿತ್ತು. ಗುರುವಾರ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು, ಇಂದು ಮುಂಜಾನೆ ಏಕಾಏಕಿ ನಿರಾಶ್ರಿತ ಕೇಂದ್ರಕ್ಕೆ ತೆರಳಿ ಹಲ್ಲೆ ಆರೋಪ ಸಂಬಂಧ 15 ಕ್ಕೂ ಹೆಚ್ಚು ನಿರಾಶ್ರಿತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಕಳೆದ 15 ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಕೊಡಗು ತತ್ತರಿಸಿ ಹೋಗಿತ್ತು. ಪ್ರವಾಹದಿಂದಾಗಿ ಅನೇಕರು ಬೀದಿಪಾಲಾಗಿದ್ದರು. ನಿರಾಶ್ರಿತರಾಗಿದ್ದ ಜನರನ್ನು ಸರ್ಕಾರ ನಿರಾಶ್ರಿತ ಕೇಂದ್ರಗಳಲ್ಲಿ ತಂಗುವಂತೆ ವ್ಯವಸ್ಥೆ ಮಾಡಿಕೊಟ್ಟಿತ್ತು. ಆದರೆ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ತೆರೆಯಲಾಗಿದ್ದ ನಿರಾಶ್ರಿತ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸದೇ ಇದ್ದರಿಂದ ಸಾರ್ವಜನಿಕರು ರೊಚ್ಚಿಗೆದ್ದಿದ್ದರು. ನಿರಾಶ್ರಿತ ಕೇಂದ್ರದಲ್ಲಿ ಶೌಚಾಲಯ ವ್ಯವಸ್ಥೆಯಿಲ್ಲ ಹಾಗೂ ಸರಿಯಾದ ಸಮಯಕ್ಕೆ ಊಟವನ್ನು ನೀಡುತ್ತಿಲ್ಲವೆಂದು ನಿರಾಶ್ರಿತರು ಗಂಭೀರವಾಗಿ ಆರೋಪಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಿರಾಶ್ರಿತ ಕೇಂದ್ರದಲ್ಲಿ ತಹಶೀಲ್ದಾರ್ ವಿರುದ್ಧ ಸಂತ್ರಸ್ತರು ಕಿಡಿ

    ನಿರಾಶ್ರಿತ ಕೇಂದ್ರದಲ್ಲಿ ತಹಶೀಲ್ದಾರ್ ವಿರುದ್ಧ ಸಂತ್ರಸ್ತರು ಕಿಡಿ

    ಕೊಡಗು: ಪ್ರವಾಹಕ್ಕೆ ತತ್ತರಿಸಿ ನಿರಾಶಿತ್ರ ಕೇಂದ್ರ ಸೇರಿದ್ದ ಸಂತ್ರಸ್ತರನ್ನು ತಹಶೀಲ್ದಾರ್ ಕೀಳಾಗಿ ಕಾಣುತ್ತಿದ್ದಾರೆ ಎನ್ನುವ ಕಾರಣಕ್ಕೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದ ವಾಲ್ಮೀಕಿ ಭವನದ ಮುಂದೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕುಶಾಲನಗರದ ವಾಲ್ಮೀಕಿ ಭವನದಲ್ಲಿ ನಿರಾಶ್ರಿತ ಕೇಂದ್ರ ಶುರುವಾದ ದಿನದಿಂದಲೂ ಒಂದಿಲ್ಲೊಂದು ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ಮಂಗಳವಾರ ತಡರಾತ್ರಿಯು ಸಹ ಸಂತ್ರಸ್ತರು ತಹಶೀಲ್ದಾರ್ ಮಹೇಶ್ ವಿರುದ್ಧ ರೊಚ್ಚಿಗೆದ್ದು, ಪತ್ರಿಭಟನೆ ನಡೆಸುತ್ತಿದ್ದರು. ಅಲ್ಲದೇ ನಿರಾಶ್ರಿತ ಕೇಂದ್ರದಲ್ಲಿ ಶೌಚಾಲಯ ವ್ಯವಸ್ಥೆಯಿಲ್ಲ. ಸರಿಯಾಗಿ ಊಟ ನೀಡುತ್ತಿಲ್ಲ ಹಾಗೂ ಎಲ್ಲಾ ಅಧಿಕಾರಿಗಳು ನಮ್ಮನ್ನು ಭಿಕ್ಷುಕರಂತೆ ನೋಡುತ್ತಾರೆ ಎಂದು ಆರೋಪಿಸಿದ್ದರು.

    ಈ ವೇಳೆ ತಹಶೀಲ್ದಾರ್ ಮಹೇಶ್‍ರವರು ಮಹಿಳೆಯೊಬ್ಬರ ಮೈಯನ್ನ ಮುಟ್ಟಿದರು ಎಂದು ಆರೋಪಿಸಿ ಅವರ ಮೇಲೆ ಮುತ್ತಿಗೆ ಹಾಕುವ ಯತ್ನ ಮಾಡಿದರು. ಕೂಡಲೇ ಪ್ರತಿಭಟನಾಕಾರರಿಂದ ತಪ್ಪಿಸಿಕೊಂಡು ತಹಶೀಲ್ದಾರ್ ಕೋಣೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡು, ನಾನು ಏನು ತಪ್ಪು ಮಾಡಿಲ್ಲ ಅಂತ ಕ್ಷಮೆಯಾಚಿಸಿದರು.

    ಸುಮಾರು 400 ಜನರು ಇರುವ ನಿರಾಶ್ರಿತ ಕೇಂದ್ರದಲ್ಲಿ ಕೇವಲ ಮೂರೇ ಮೂರು ಶೌಚಾಲಯ. ಶೌಚಾಲಯದ ವ್ಯವಸ್ಥೆ ಸರಿಪಡಿಸಿ ಹಾಗೂ ಊಟವನ್ನು ಸರಿಯಾಗಿ ನೀಡಿ ಎಂದು ಪ್ರಾರಂಭವಾದಗಿನಿಂದಲೂ ಹೇಳುತ್ತಲೆ ಬಂದಿದ್ದರು. ಸಮಸ್ಯೆಗಳನ್ನು ಪರಿಹರಿಸದೇ ಕೀಳಾಗಿ ನೋಡಿದ್ದರಿಂದ ರೊಚ್ಚಿಗೆದ್ದು ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಂತ್ರಸ್ತ ಕೇಂದ್ರದಲ್ಲಿ ಪ್ರತಿಭಟನೆ ಜೋರಾದಾಗ ಪೊಲೀಸರು ಮಧ್ಯ ಪ್ರವೇಶಿಸಿದರು. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗುವ ಲಕ್ಷಣ ಗೋಚರಿದ ತಕ್ಷಣ ಜಿಲ್ಲಾಧಿಕಾರಿ ಶ್ರೀವಿದ್ಯಾರವರು ತಡರಾತ್ರಿ 12.15ಕ್ಕೆ ಆಗಮಿಸಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೇ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ, ಸರಿಯಾಗಿ ವ್ಯವಸ್ಥೆ ಕೈಗೊಳ್ಳುತ್ತೇನೆ. ಒಂದು ವೇಳೆ ತಹಶೀಲ್ದಾರ್ ವಿರುದ್ಧ ತಪ್ಪು ಕಂಡುಬಂದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೀನಿ ಎನ್ನುವ ಭರವಸೆ ನೀಡಿದ ಮೇಲೆ ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ಕೈ ಬಿಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಕ್ರಮ ಮರಳುಗಾರಿಕೆ ಮೇಲೆ ದಾಳಿ- 20 ಕಿ.ಮೀ ಚೇಸ್ ಮಾಡಿ ಟಿಪ್ಪರ್ ವಶಪಡಿಸಿಕೊಂಡ ತಹಶೀಲ್ದಾರ್

    ಅಕ್ರಮ ಮರಳುಗಾರಿಕೆ ಮೇಲೆ ದಾಳಿ- 20 ಕಿ.ಮೀ ಚೇಸ್ ಮಾಡಿ ಟಿಪ್ಪರ್ ವಶಪಡಿಸಿಕೊಂಡ ತಹಶೀಲ್ದಾರ್

    ರಾಯಚೂರು: ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಟಿಪ್ಪರ್‍ನನ್ನ ಸುಮಾರು 20 ಕಿ.ಮೀ ಹಿಂಬಾಲಿಸಿ ರಾಯಚೂರಿನ ದೇವದುರ್ಗ ತಹಶೀಲ್ದಾರ್ ಹಿಡಿದಿದ್ದಾರೆ.

    ದೇವದುರ್ಗದ ಜಾಲಹಳ್ಳಿಯಲ್ಲಿ ಘಟನೆ ನಡೆದಿದ್ದು ತಹಶೀಲ್ದಾರ್ ಕೆ.ಶಿವಶರಣಪ್ಪ ಟಿಪ್ಪರ್ ವಶಕ್ಕೆ ಪಡೆದಿದ್ದಾರೆ. ನಂಬರ್ ಪ್ಲೇಟ್ ಸಹ ಇಲ್ಲದೆ ಅಕ್ರಮ ದಂಧೆಯಲ್ಲಿ ತೊಡಗಿದ್ದ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.

    ಕೃಷ್ಣ ನದಿ ತೀರದ ಬಾಗೂರು, ಹೆರುಂಡಿ, ನಿಲವಂಜಿ, ಲಿಂಗದಹಳ್ಳಿಯಿಂದ ರಾತ್ರಿ-ಹಗಲು ಅಕ್ರಮ ಮರಳುಗಾರಿಕೆ ನಡೆದಿದೆ. ಇಲ್ಲಿಂದ ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿದೆ. ಘಟನೆ ಹಿನ್ನೆಲೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.