ನವದೆಹಲಿ: ಮುಂಬೈ ದಾಳಿಯ (Mumbai Attack) ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ತಹವ್ವೂರ್ ಹುಸೇನ್ ರಾಣಾ (Tahawwur Rana) 2008 ರ ಕೃತ್ಯದಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿದ್ದಾನೆ ಮತ್ತು ತಾನು ಪಾಕಿಸ್ತಾನಿ ಸೇನೆಯ (Pakistan Army) ವಿಶ್ವಾಸಾರ್ಹ ಏಜೆಂಟ್ ಎಂದು ಹೇಳಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯ ತಿಹಾರ್ ಜೈಲಿನಲ್ಲಿ (Tihar Jail) ರಾಷ್ಟ್ರೀಯ ತನಿಖಾ ದಳದ (NIA) ವಶದಲ್ಲಿರುವ ರಾಣಾನನ್ನು ಮುಂಬೈ ಕ್ರೈಂ ಬ್ರ್ಯಾಂಚ್ ವಿಚಾರಣೆಯ ಸಂದರ್ಭದಲ್ಲಿ ತಾನು ಮತ್ತು ತನ್ನ ಸ್ನೇಹಿತ ಮತ್ತು ಸಹಾಯಕ ಡೇವಿಡ್ ಕೋಲ್ಮನ್ ಹೆಡ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ( Lashkar-e-Taiba) ಜೊತೆ ಹಲವಾರು ತರಬೇತಿ ಕಾರ್ಯ ನಡೆಸಿದ್ದೇವೆ ಎಂದು ತಿಳಿಸಿದ್ದಾನೆ. ಇದನ್ನೂಓದಿ: Mumbai Attack| ರಾಣಾ ವಿರುದ್ಧ ಸಾಕ್ಷಿ ನುಡಿಯಲಿದ್ದಾರೆ ನಿಗೂಢ ವ್ಯಕ್ತಿಗಳು!
ದಾಳಿಗೂ ಮೊದಲು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ನಂತಹ ಸ್ಥಳಗಳನ್ನು ಪರಿಶೀಲಿಸಿದ್ದೆ. ಮುಂಬೈ ದಾಳಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಸಹಯೋಗದೊಂದಿಗೆ ನಡೆಸಲಾಗಿದೆ ಎಂದು ರಾಣಾ ಒಪ್ಪಿಕೊಂಡಿದ್ದಾನೆ.
ಗಲ್ಫ್ ಯುದ್ಧದ ಸಮಯದಲ್ಲಿ ಪಾಕಿಸ್ತಾನಿ ಸೇನೆಯು ತನ್ನನ್ನು ಸೌದಿ ಅರೇಬಿಯಾಕ್ಕೆ ಕಳುಹಿಸಿತ್ತು ಎಂದು 64 ವರ್ಷದ ರಾಣಾ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
– ತಹವ್ವೂರ್ ರಾಣಾಗೆ ಎನ್ಐಎ ಕೇಳಿದ ಆ 18 ಪ್ರಶ್ನೆಗಳು ಯಾವುವು?
– ಭಾರತ ಹಸ್ತಾಂತರ ತಡೆಯಲು 32 ಆರೋಗ್ಯ ಸಮಸ್ಯೆ ಕಾರಣ ನೀಡಿದ್ದ ರಾಣಾ ಪರ ವಕೀಲ
ನವದೆಹಲಿ: 2008ರ ಮುಂಬೈ ದಾಳಿ (Mumbai Attack) ಪ್ರಕರಣದ ಉಗ್ರ ತಹವ್ವೂರ್ ಹುಸೇನ್ ರಾಣಾ (Tahawwur Hussain Rana) ವಿಚಾರಣೆ ಆರಂಭಿಸಿರುವ ರಾಷ್ಟ್ರೀಯ ತನಿಖಾ ದಳ (NIA) ಸಾಕ್ಷ್ಯ ಕಲೆಹಾಕಲು ನಿಗೂಢ ಮಹಿಳೆಯ ಹಿಂದೆ ಬಿದ್ದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ರಾಣಾ ಭಾರತದಲ್ಲಿದ್ದ ವೇಳೆ ಆತನ ಜೊತೆಗಿದ್ದ ಮಹಿಳೆಯನ್ನು ಪತ್ತೆಹಚ್ಚಲು ಎನ್ಐಎ ತನಿಖಾಧಿಕಾರಿಗಳ ತಂಡ ಮುಂದಾಗಿದೆ. ಆಕೆಯ ಗುರುತು ಇನ್ನೂ ಸ್ಪಷ್ಟವಾಗಿಲ್ಲ. ಆದ್ರೆ ಈ ಮಹಿಳೆ ರಾಣಾ ನಡೆಸಿದ ಪಿತೂರಿಯ ಭಾಗವಾಗಿರಬಹುದು ಅಥವಾ ರಾಣಾ ಸಂಪರ್ಕದ ಬಗ್ಗೆ ಪ್ರಮುಖ ಮಾಹಿತಿಯನ್ನೂ ಹೊಂದಿರಬಹುದು ಶಂಕಿಸಲಾಗಿದೆ. ಆ ಮಹಿಳೆ ರಾಣಾ ಭಾರತದಲ್ಲಿ ಇದ್ದಷ್ಟು ದಿನ ಅವನ ಪತ್ನಿ ಎಂದೇ ಹೇಳಿಕೊಂಡಿದ್ದಳು. ಈಕೆಯನ್ನ ಪತ್ತೆಹಚ್ಚಿದ್ರೆ, ಇನ್ನಷ್ಟು ರಹಸ್ಯಗಳನ್ನ ಬಯಲಿಗೆಳೆಯಬಹುದು ಎಂದು ಅಧಿಕಾರಿಗಳು ಮಹಿಳೆಯ ಹುಡುಕಾಟಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಣಾಗೆ 18ರ ಕಂಟಕ
ಈಗಾಗಲೇ ಮೊದಲ ಸುತ್ತಿನ ವಿಚಾರಣೆ ನಡೆಸಿರುವ ಎನ್ಐಎ ರಾಣಾಗೆ 18 ಪ್ರಮುಖ ಪ್ರಶ್ನೆಗಳನ್ನ ಕೇಳಿದೆ. ವಿಚಾರಣೆ ವೇಳೆ ಪಾಕ್ ಗುಪ್ತಚರ ಸಂಸ್ಥೆ ಐಎಸ್ಐ ಹಾಗೂ ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ ಬಗ್ಗೆ ಹಲವು ರಹಸ್ಯಗಳನ್ನ ಬಾಯ್ಬಿಟ್ಟಿದ್ದಾನೆ. ಈ ಪ್ರಶ್ನೆಗಳು ಮಾಧ್ಯಮಗಳಿಗೆ ಉನ್ನತ ಮೂಲಗಳಿಂದ ಲಭ್ಯವಾಗಿದೆ. ಎನ್ಐಎ ಕೇಳಿದ 18 ಪ್ರಶ್ನೆಗಳು ಯಾವುದು ಅಂತ ನೋಡೋದಾದ್ರೆ..
1. 2008ರ ನವೆಂಬರ್ 26ರಂದು ನೀವು ಎಲ್ಲಿದ್ರಿ?
2. ನೀವು ಭಾರತದಲ್ಲಿದ್ದ ಸಮಯದಲ್ಲಿ ಯಾರ್ಯಾರನ್ನ ಎಲ್ಲೆಲ್ಲಿ ಭೇಟಿ ಮಾಡಿದ್ದೀರಿ?
3. ಡೇವಿಡ್ ಕೋಲ್ಮನ್ ಹೆಡ್ಲಿ ನಿಮಗೆ ಎಷ್ಟು ದಿನಗಳಿಂದ ಗೊತ್ತು? ನಕಲಿ ವೀಸಾ ನೀಡಿ ಭಾರತಕ್ಕೆ ಕಳುಹಿಸಿದ್ದು ಏಕೆ?
4. ಹೆಡ್ಲಿಯನ್ನ ಭಾರತದಲ್ಲಿ ಭೇಟಿ ನೀಡಿದ ಸ್ಥಳಗಳ ಬಗ್ಗೆ ನಿಮಗೆ ಏನು ಹೇಳಿದರು?
5. ಮುಂಬೈ ದಾಳಿಯಲ್ಲಿ ನಿಮ್ಮ ಮತ್ತು ಹೆಡ್ಲಿಯ ಪಾತ್ರವೇನು?
6. ಡೇವಿಡ್ ಕೋಲ್ಮನ್ ಹೆಡ್ಲಿಗೆ ಭಾರತೀಯ ವೀಸಾ ಪಡೆಯಲು ನೀವು ಹೇಗೆ ಸಹಾಯ ಮಾಡಿದ್ದೀರಿ?
7. ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ ನಿಮಗೆ ಹೇಗೆ ಗೊತ್ತು? ನೀವು ಯಾವಾಗ ಮತ್ತು ಎಲ್ಲಿ ಅವನನ್ನ ಮೊದಲ ಬಾರಿಗೆ ಭೇಟಿ ಮಾಡಿದ್ರಿ?
8. ಹಫೀಜ್ ಸಯೀದ್ ಜೊತೆಗೆ ನಿಮ್ಮ ನಂಟೇನು?
9. ಲಷ್ಕರ್-ಎ-ತೈಬಾಗೆ ನೀವು ಹೇಗೆ ಸಹಾಯ ಮಾಡಿದ್ದೀರಿ? ನಿನ್ನ ಸಹಾಯಕ್ಕೆ ಪ್ರತಿಯಾಗಿ ಲಷ್ಕರ್ ನಿನಗೆ ಏನು ಕೊಟ್ಟನು?
10. ಲಷ್ಕರ್-ಎ-ತೊಯ್ಬಾದಲ್ಲಿ ಎಷ್ಟು ಜನರಿದ್ದಾರೆ? ಅದರ ರಚನೆ ಹೇಗಿದೆ? ನೇಮಕಾತಿ ಹೇಗೆ ನಡೆಯುತ್ತದೆ? ಯಾರು ಮಾಡುತ್ತಾರೆ?
11. ಲಷ್ಕರ್ ನಡೆಸಲು ನಿಧಿ ಎಲ್ಲಿಂದ ಬರುತ್ತದೆ? ಹೆಚ್ಚು ನಿಧಿ ಸಂಗ್ರಹ ಮಾಡುವವರು ಯಾರು?
12. ಶಸ್ತ್ರಾಸ್ತ್ರಗಳನ್ನು ಯಾರು ಪೂರೈಸುತ್ತಾರೆ? ನೀವು ಯಾವ ದೇಶಗಳಿಂದ ಶಸ್ತ್ರಾಸ್ತ್ರಗಳನ್ನು ಪಡೆಯುತ್ತೀರಿ?
13. ಪಾಕಿಸ್ತಾನಿ ಸೇನೆ ಮತ್ತು ISI ನಿಮಗೆ ಹೇಗೆ ಸಹಾಯ ಮಾಡುತ್ತದೆ?
14. ದಾಳಿ ಮಾಡಲು ನೀವು ಗುರಿಗಳನ್ನು ಹೇಗೆ ಆರಿಸುತ್ತೀರಿ? ಗುರಿಯ ಮೇಲೆ ದಾಳಿ ಮಾಡಲು ISI ನಿಮಗೆ ಸೂಚನೆಗಳನ್ನು ನೀಡುತ್ತದೆಯೇ?
15. ISIಯ ಯೋಜನೆ ಏನು? ಭಾರತದ ನಿಮ್ಮ ಗುರಿ ಸಾಧಿಸಲು ಸಾಧ್ಯವಾಗಲಿಲ್ಲವೇ?
16. ಐಎಸ್ಐ ಹೊರತಾಗಿ ಪಾಕಿಸ್ತಾನ ಸರ್ಕಾರಕ್ಕೂ ಭಯೋತ್ಪಾದಕ ದಾಳಿಯ ಮಾಹಿತಿ ಸಿಗುತ್ತದೆಯೇ?
17. ದಾಳಿಯ ಸಮಯದಲ್ಲಿ ಭಯೋತ್ಪಾದಕರಿಗೆ ಯಾರು ಸೂಚನೆಗಳನ್ನು ನೀಡುತ್ತಾರೆ?
18. ಆತ್ಮಹತ್ಯಾ ದಾಳಿಗಳಿಗೆ ಹುಡುಗರನ್ನು ಹೇಗೆ ಸಿದ್ಧಪಡಿಸ್ತಾರೆ, ಅವರಿಗೆ ಏನು ಉಪದೇಶ ಕೊಡ್ತಾರೆ?
32 ಆರೋಗ್ಯ ಸಮಸ್ಯೆ ಕಾರಣ ನೀಡಿದ್ದ ರಾಣಾ:
ಇನ್ನೂ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ರಾಣಾ ಎಲ್ಲಾ ರೀತಿಯ ಪ್ರಯತ್ನಗಳನ್ನೂ ಮಾಡಿದ್ದ ಅನ್ನೋ ಹೊಸ ವಿಚಾರ ಸಹ ಬೆಳಕಿಗೆ ಬಂದಿದೆ. ಈ ಮಾಹಿತಿಯು ಅಮೆರಿಕ ತನಿಖಾ ಏಜೆನ್ಸಿಗಳಿಗೆ ನೀಡಿದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಣಾನನ್ನ ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ರಾಣಾ ಪರ ವಕೀಲ ಅಮೆರಿಕದ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯಲ್ಲಿ 32 ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿದ್ದರು. ಅಲ್ಲದೇ ತನ್ನ ಕಕ್ಷಿಗಾರನಿಗೆ ಭಾರತದ ಜೈಲುಗಳಲ್ಲಿ ಚಿತ್ರಹಿಂಸೆ ನೀಡಬಹುದು, ಇದರಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ರಾಣಾ ಜೀವನ ಬೇಗ ಅಂತ್ಯವಾಗಲಿದೆ. ಆದ್ದರಿಂದ ಭಾರತಕ್ಕೆ ಹಸ್ತಾಂತರಿಸದಂತೆ ಕೋರ್ಟ್ಗೆ ಮನವಿ ಮಾಡಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.
ನವದೆಹಲಿ: ಮುಂಬೈ ದಾಳಿ (Mumbai Attack) ಪ್ರಕರಣ ಉಗ್ರ ತಹವ್ವೂರ್ ರಾಣಾನ (Tahawwur Hussain Rana) ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ದಳ (NIA) ಆರಂಭಿಸಿದೆ. ಈ ವಿಚಾರಣೆಯ ಸಂದರ್ಭದಲ್ಲಿ ರಾಣಾ ವಿರುದ್ಧ ಸಾಕ್ಷ್ಯ ನುಡಿಯಲು ನಿಗೂಢ ವ್ಯಕ್ತಿಗಳು ಸಾಲುಗಟ್ಟಿ ನಿಂತಿದ್ದಾರೆ ಎಂದು ಎನ್ಐಎ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಉಗ್ರ ಡೇವಿಡ್ ಹೆಡ್ಲಿ (David Headley) ಅಮೆರಿಕ ಪ್ರಜೆಯಾಗಿದ್ದರೆ ರಾಣಾ ಕೆನಡಾದ (Canada) ಪ್ರಜೆಯಾಗಿದ್ದಾನೆ. ಹೀಗಿದ್ದರೂ ಅವರು ಭಾರತಕ್ಕೆ (India) ಆಗಾಗ ಬರುತ್ತಿದ್ದರು. ಇವರು ಬರುವ ವೇಳೆ ಇವರನ್ನು ಸ್ವೀಕರಿಸಿದ ಮತ್ತು ವಸತಿ ವ್ಯವಸ್ಥೆ ಮಾಡಿದ ವ್ಯಕ್ತಿಗಳು ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಾಗುತ್ತಾರೆ. ಇವರು ತಿಳಿಸುವ ಮಾಹಿತಿಗಳು ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.
ಈ ಮೊದಲೇ ಈ ಸಾಕ್ಷಿಗಳು ಹೇಳಿಕೆ ನೀಡಿದ್ದು ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ. ಭವಿಷ್ಯದಲ್ಲಿ ಲಷ್ಕರ್-ಎ-ತೈಬಾ (LeT) ಸೇರಿದಂತೆ ಯಾವುದೇ ಉಗ್ರ ಸಂಘಟನೆಯಿಂದ ಇವರಿಗೆ ಸಮಸ್ಯೆಯಾಗದೇ ಇರಲು ನ್ಯಾಯಾಲಯದ ದಾಖಲೆಗಳಲ್ಲಿಯೂ ಸಹ ಈ ವ್ಯಕ್ತಿಗಳ ಗುರುತನ್ನು ಗೌಪ್ಯವಾಗಿಡಲಾಗಿತ್ತು. ಇದನ್ನೂ ಓದಿ: ರಾಣಾ ಇರೋ ಸೆಲ್ಗೆ 12 ಅಧಿಕಾರಿಗಳಿಗೆ ಮಾತ್ರ ಪ್ರವೇಶ – ಕೋಟೆಯಾಗಿ ಬದಲಾದ NIA ಕಚೇರಿ
ಭಾರತೀಯ ತನಿಖಾಧಿಕಾರಿಗಳು ರಾಣಾನನ್ನು ವಿಚಾರಣೆ ನಡೆಸುತ್ತಿರುವುದು ಇದೇ ಮೊದಲು. ಜೂನ್ 2010 ರಲ್ಲಿ ಎನ್ಐಎ ಅಮೆರಿಕದಲ್ಲಿ ರಾಣಾನ ಬಾಲ್ಯ ಸ್ನೇಹಿತ ಡೇವಿಡ್ ಹೆಡ್ಲಿಯನ್ನು ವಿಚಾರಣೆ ನಡೆಸಿತ್ತು. ಈ ನಿಗೂಢ ಸಾಕ್ಷಿ ರಾಣಾ ಮತ್ತು ಡೇವಿಡ್ ಹೆಡ್ಲಿಯೊಂದಿಗೆ ಸಂಬಂಧ ಹೊಂದಿದ್ದು, ರಾಣಾನ ಪಾತ್ರವನ್ನು ಪತ್ತೆಹಚ್ಚುವಲ್ಲಿ ಸಾಕ್ಷಿಯ ಹೇಳಿಕೆ ಪ್ರಮುಖ ಪಾತ್ರವಹಿಸಲಿದೆ ಮೂಲಗಳು ತಿಳಿಸಿವೆ.
ಎನ್ಐಎ ತನಿಖಾ ವಿವರಗಳ ಪ್ರಕಾರ 2006ರ ವೇಳೆಗೆ ದಾಳಿಯ ಯೋಜನೆ ನಡೆಯುತ್ತಿದ್ದಾಗ, ಹೆಡ್ಲಿ ಮೊದಲು ಎಲ್ಇಟಿ ನಾಯಕರು ಮತ್ತು ಇತರ ಸಹ ಸಂಚುಕೋರರನ್ನು ಭೇಟಿ ಮಾಡಲು ಪಾಕಿಸ್ತಾನಕ್ಕೆ ಹೋಗಿದ್ದ. ಈ ವೇಳೆ ಆತನಿಗೆ ತಾಜ್ ಮಹಲ್ ಹೋಟೆಲ್ ಸೇರಿದಂತೆ ಮುಂಬೈನ ಸಾಮಾನ್ಯ ವಿಡಿಯೋಗಳನ್ನು ತೆಗೆದುಕೊಂಡು ಬರುವಂತೆ ಸೂಚನೆ ಸಿಕ್ಕಿತ್ತು.
ಈ ಸೂಚನೆಯಂತೆ ಸೆಪ್ಟೆಂಬರ್ 2006 ರಲ್ಲಿ ಹೆಡ್ಲಿ ಭಾರತಕ್ಕೆ ಆಗಮಿಸಿದ್ದ ಮತ್ತು ಪಾಕಿಸ್ತಾನ ಉಗ್ರರು ಕೇಳಿದ್ದ ವಿಡಿಯೋಗಳನ್ನು ಚಿತ್ರೀಕರಿಸಿದ್ದ. ಈ ಭೇಟಿಯ ಸಮಯದಲ್ಲಿ ರಾಣಾನ ಆಪ್ತ ವ್ಯಕ್ತಿಯೊಬ್ಬರು ಹೆಡ್ಲಿಯನ್ನು ಸ್ವಾಗತಿಸಿದ್ದರು. ಆ ವ್ಯಕ್ತಿಗೆ ರಾಣಾನಿಂದ ಕರೆ ಬಂದಿತ್ತು. ಈ ಕರೆಯ ನಂತರ ಆ ವ್ಯಕ್ತಿ ಹೆಡ್ಲಿ ಮತ್ತು ಇತರ ಇತರ ಲಾಜಿಸ್ಟಿಕ್ಸ್ ವ್ಯವಸ್ಥೆ ಮಾಡಿದ್ದರು.
ರಾಣಾ ಶೀಘ್ರದಲ್ಲೇ ಸಾಕ್ಷಿಯೊಂದಿಗೆ ಭಾರತದಲ್ಲಿನ ಆತನ ಸಂಪರ್ಕಗಳು ಮತ್ತು ಹೆಡ್ಲಿ ಭೇಟಿ ನೀಡಿದ ಸ್ಥಳಗಳು ಮತ್ತು 2006 ಮತ್ತು 2009 ರ ನಡುವೆ ಭಾರತಕ್ಕೆ ಹಲವಾರು ಬಾರಿ ಭೇಟಿ ನೀಡಿದಾಗ ಆತ ಯಾರನ್ನು ಸಂಪರ್ಕ ಮಾಡಿದ್ದ? ಆ ವ್ಯಕ್ತಿಗಳನ್ನೂ ಎನ್ಐಎ ವಿಚಾರಣೆ ನಡೆಸಲಿದೆ.
ರಾಣಾ ಪಾಕಿಸ್ತಾನದಲ್ಲಿದ್ದ ಹೆಡ್ಲಿಯ ದಾಳಿಯ ರೂವಾರಿಗಳ ಜೊತೆ ಕೆಲಸ ನೇರವಾಗಿ ಸಂವಹನ ಮಾಡುತ್ತಿದ್ದ. ಹೀಗಾಗಿ ಆರಂಭಿಕ ಹಂತದ ವಿಚಾರಣೆಯಲ್ಲಿ ರಾಣಾ ಮತ್ತು ಹೆಡ್ಲಿ ನಡುವಿನ ಸಂಬಂಧದ ಬಗ್ಗೆ ಕೇಳಲಾಗುತ್ತದೆ.
ವಿಶೇಷ ನ್ಯಾಯಾಲಯ 18 ದಿನಗಳ ಕಾಲ ಕಸ್ಟಡಿಗೆ ನೀಡಿದ ಬಳಿಕ ಮುಂಬೈ ದಾಳಿ (Mumbai Attack) ಪ್ರಕರಣ ಆರೋಪಿ ಉಗ್ರ ತಹವ್ವೂರ್ ಹುಸೇನ್ ರಾಣಾನನ್ನು ದೆಹಲಿಯಲ್ಲಿರುವ ರಾಷ್ಟ್ರೀಯ ತನಿಖಾ ದಳದ (NIA) ಪ್ರಧಾನ ಕಚೇರಿಯಲ್ಲಿ ಬಂಧಿಸಿ ಇಡಲಾಗಿದೆ.
ಎನ್ಐಎ ಕಟ್ಟಡದ ನೆಲ ಮಹಡಿಯಲ್ಲಿರುವ 14*14 ಅಡಿ ಅಳತೆಯ ಕೋಣೆಗೆ ಸಿಸಿಟಿವಿ (CCTV) ಹಾಕಲಾಗಿದ್ದು ಪ್ರತಿಯೊಂದು ಚಲನವಲನಗಳನ್ನು ಗಮನಿಸಲಾಗುತ್ತದೆ. ಈ ಕೊಠಡಿಯಲ್ಲೇ ಎಲ್ಲಾ ತನಿಖಾ ಸಂಸ್ಥೆಗಳು ರಾಣಾನನ್ನು ವಿಚಾರಣೆಗೆ ಒಳಪಡಿಸಲಿವೆ.
ನವದೆಹಲಿ: ವಿಶೇಷ ನ್ಯಾಯಾಲಯ 18 ದಿನಗಳ ಕಾಲ ಕಸ್ಟಡಿಗೆ ನೀಡಿದ ಬಳಿಕ ಮುಂಬೈ ದಾಳಿ (Mumbai Attack) ಪ್ರಕರಣ ಆರೋಪಿ ಉಗ್ರ ತಹವ್ವೂರ್ ಹುಸೇನ್ ರಾಣಾನನ್ನು (Tahawwur Rana) ದೆಹಲಿಯಲ್ಲಿರುವ ರಾಷ್ಟ್ರೀಯ ತನಿಖಾ ದಳದ (NIA) ಪ್ರಧಾನ ಕಚೇರಿಯಲ್ಲಿ ಬಂಧಿಸಿ ಇಡಲಾಗಿದೆ.
ಎನ್ಐಎ ಕಟ್ಟಡದ ನೆಲ ಮಹಡಿಯಲ್ಲಿರುವ 14*14 ಅಡಿ ಅಳತೆಯ ಕೋಣೆಗೆ ಸಿಸಿಟಿವಿ (CCTV) ಹಾಕಲಾಗಿದ್ದು ಪ್ರತಿಯೊಂದು ಚಲನವಲನಗಳನ್ನು ಗಮನಿಸಲಾಗುತ್ತದೆ. ಈ ಕೊಠಡಿಯಲ್ಲೇ ಎಲ್ಲಾ ತನಿಖಾ ಸಂಸ್ಥೆಗಳು ರಾಣಾನನ್ನು ವಿಚಾರಣೆಗೆ ಒಳಪಡಿಸಲಿವೆ.
ಮೂಲಗಳ ಪ್ರಕಾರ ಶುಕ್ರವಾರ ವಿಚಾರಣೆ ಆರಂಭವಾಗಿದ್ದು ಇಂದಿನಿಂದ ರಾಣಾನನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತದೆ. ಡ್ಯುಯಲ್ ಕ್ಯಾಮೆರಾ ಕಣ್ಗಾವಲಿನಲ್ಲಿ ಬಂಧಿಯಾಗಿರುವ ಕೊಠಡಿಯಲ್ಲೇ ವಿಚಾರಣೆ ನಡೆಯಲಿದೆ. ಎಂಟು ಕೇಂದ್ರ ತನಿಖಾ ಮತ್ತು ಗುಪ್ತಚರ ಸಂಸ್ಥೆಗಳು ರಾಣಾನನ್ನು ವಿಚಾರಣೆಗೆ ಒಳಪಡಿಸಲು ಅವಕಾಶ ಕೋರಿವೆ ಎಂದು ವರದಿಯಾಗಿದೆ.
ಅಮೆರಿಕದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ಕರೆ ತಂದ ನಂತರ ರಾಣಾನನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಕೋರ್ಟ್ 18 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿದ ಬಳಿಕ ರಾಣಾನನ್ನು ಈ ವಿಶೇಷ ಸೆಲ್ನಲ್ಲಿ ಬಂಧಿಸಿ ಇಡಲಾಗಿದೆ.
ನವದೆಹಲಿ: ಉಗ್ರ ತಹವ್ವೂರ್ ರಾಣಾನ ಹಸ್ತಾಂತರವು 26/11 ಸಂತ್ರಸ್ತರಿಗೆ ಒದಗಿಸಿದ ನ್ಯಾಯದಲ್ಲಿ ದೊಡ್ಡ ಹೆಜ್ಜೆಯಾಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಜೈಶಂಕರ್, ನಮ್ಮ ಉಭಯ ದೇಶಗಳ ನಡುವಿನ ಭಯೋತ್ಪಾದನಾ ನಿಗ್ರಹದ ಸಹಕಾರವನ್ನು ಪ್ರಶಂಸಿಸಿ. ಇದು ನಿಜಕ್ಕೂ 26/11 ದಾಳಿಯ ಬಲಿಪಶುಗಳಿಗೆ ನ್ಯಾಯವನ್ನು ಖಾತ್ರಿಪಡಿಸುವ ಒಂದು ದೊಡ್ಡ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.
ಜೈಶಂಕರ್ ಪೋಸ್ಟ್ಗೆ ಕಾಮೆಂಟ್ ಮಾಡಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, 2008 ರ ಭೀಕರ ಮುಂಬೈ ಭಯೋತ್ಪಾದಕ ದಾಳಿಯನ್ನು ಯೋಜಿಸುವಲ್ಲಿ ಪಾತ್ರ ವಹಿಸಿದ ಆರೋಪಗಳನ್ನು ಎದುರಿಸುತ್ತಿರುವ ತಹವ್ವೂರ್ ಹುಸೇನ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಿದ್ದೇವೆ. ಈ ದಾಳಿಗಳಲ್ಲಿ ಪ್ರಾಣ ಕಳೆದುಕೊಂಡ 6 ಅಮೆರಿಕನ್ನರು ಸೇರಿದಂತೆ 166 ಜನರಿಗೆ ನ್ಯಾಯಕ್ಕಾಗಿ ನಾವು ಭಾರತದೊಂದಿಗೆ ಬಹಳ ಹಿಂದಿನಿಂದಲೂ ಪ್ರಯತ್ನಿಸುತ್ತಿದ್ದೇವೆ. ಆ ದಿನ ಬಂದಿದ್ದಕ್ಕೆ ನನಗೆ ಸಂತೋಷವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
64 ವರ್ಷದ ಪಾಕಿಸ್ತಾನ ಮೂಲದ ಕೆನಡಾದ ಪ್ರಜೆ ರಾಣಾನನ್ನು ಅಮೆರಿಕ ಗುರುವಾರ ಭಾರತಕ್ಕೆ ಹಸ್ತಾಂತರಿಸಿತು. ವಿಮಾನ ನಿಲ್ದಾಣದಲ್ಲಿಯೇ ಉಗ್ರನನ್ನು ಬಂಧಿಸಿದ ಎನ್ಐಎ ವಿಚಾರಣೆಗೆ ಒಳಪಡಿಸಿದೆ.
ನವದೆಹಲಿ: 2008ರ ಮುಂಬೈ ದಾಳಿಯ (Mumbai Attack) ಸಂಚುಕೋರ ತಹವ್ವೂರ್ ರಾಣಾನನ್ನ (Tahawwur Rana) 18 ದಿನಗಳ ಕಾಲ ಎನ್ಐಎ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಶುರು ಮಾಡಿದೆ. ಸದ್ಯ ಎನ್ಐಎ ಮುಖ್ಯಕಚೇರಿಯ ಪ್ರತ್ಯೇಕ ಸೆಲ್ನಲ್ಲಿ ರಾಣಾನನ್ನು ಸದಾನಂದ ದಾತೆ ನೇತೃತ್ವದ 12 ಅಧಿಕಾರಿಗಳ ಸ್ಪೆಷಲ್ ಟೀಂ ವಿಚಾರಣೆಗೆ ಒಳಪಡಿಸಿದೆ. ಅದರಂತೆ ರಾಣಾನನ್ನ ದೇಶದ ವಿವಿಧ ಭಾಗಗಳಿಗೆ ಕರೆದೊಯ್ಯುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.
ದಿನದ 24 ಗಂಟೆಯೂ ನಿಗಾ
ಸದ್ಯ ರಾಣಾನನ್ನ ಸುರಕ್ಷಿತವಾಗಿಡಲು 14*14 ಅಡಿಯ ಸೆಲ್ ವ್ಯವಸ್ಥೆ ಮಾಡಲಾಗಿದೆ. ಈ ಸೆಲ್ ಸಿಜಿಒ ಕಾಂಪ್ಲೆಕ್ಸ್ನಲ್ಲಿರುವ (CGO Complex) ಎನ್ಐಎ (NIA) ಕಚೇರಿಯ ಗ್ರೌಂಡ್ಫ್ಲೋರ್ನಲ್ಲಿ ಇದೆ. ಜೊತೆಗೆ ರಾತ್ರಿ ವೇಳೆಯೂ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ದೆಹಲಿ ಪೊಲೀಸರು ಹಾಗೂ ಅರೆಸೇನಾ ಪಡೆ ಸಿಬ್ಬಂದಿಯನ್ನ ಹೊರಾಂಗಣದಲ್ಲಿ ನಿಯೋಜಿಸಲಾಗಿದೆ. ರಾಣಾ ಕೊಠಡಿ ಪ್ರವೇಶಿಸಲು ಮೂರ್ನಾಲ್ಕು ಹಂತಗಳಲ್ಲಿ ಡಿಜಿಟಲ್ ಸುರಕ್ಷತಾ ಪದರಗಳ ವ್ಯವಸ್ಥೆ ಮಾಡಲಾಗಿದೆ. ದಿನದ 24 ಗಂಟೆಯೂ ನಿಗಾ ವಹಿಸಲು ಇಂಚಿಂಚಿಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. 12 ಅಧಿಕಾರಿಗಳ ಸ್ಪೆಷಲ್ ಟೀಂಗೆ ಹೊರತುಪಡಿಸಿ ಉಳಿದವರು ಯಾರಿಗೂ ಇಲ್ಲಿ ಪ್ರವೇಸಿಸಲು ಅವಕಾಶ ಇಲ್ಲ ಎಂದು ಎನ್ಐಎ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ನೆಲದ ಮೇಲೆಯೇ ಬಾತ್ ರೂಂ
ಇನ್ನೂ ರಾಣಾಗೆ ವ್ಯವಸ್ಥೆ ಮಾಡಲಾದ ಈ ಸೆಲ್ (Speical Cell) ಒಂದು ಭದ್ರಕೋಟೆಯಂತಿದೆ. ನೆಲದ ಮೇಲೆಯೇ ಮಲಗಲು ರಾಣಾಗೆ ಒಂದು ಹಾಸಿಗೆ ಹಾಗೂ ಸ್ನಾನ ಗೃಹದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಊಟ, ಕುಡಿಯುವ ನೀರು, ವೈದ್ಯಕೀಯ ತಪಾಸಣೆ ಎಲ್ಲದಕ್ಕೂ ಆ 14*14 ಅಡಿಯ ಸೆಲ್ನಲ್ಲೇ ವ್ಯವಸ್ಥೆ ಮಾಡಲಾಗಿದೆ.
2008ರ ಮುಂಬೈ ದಾಳಿಯ ಉಗ್ರ ತಹವ್ವೂರ್ ರಾಣಾನನ್ನ ಗುರುವಾರ ವಿಶೇಷ ವಿಮಾನದ ಮೂಲಕ ಅಮೆರಿಕದಿಂದ ಭಾರತಕ್ಕೆ ಕರೆತರಲಾಯಿತು. ದೆಹಲಿಯ ಪಾಲಂ ಏರ್ಪೋರ್ಟ್ಗೆ ಬಂದಿಳಿಯುತ್ತಿದ್ದಂತೆ ರಾಣಾನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಪಟಿಯಾಲ ಕೋರ್ಟ್ಗೆ ಹಾಜರುಪಡಿಸಿ ಆತನನ್ನ 18 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿತು.
ಸತ್ತ 9 ಲಷ್ಕರ್ ಉಗ್ರರಿಗೆ ಪಾಕ್ ಅವಾರ್ಡ್ ಕೊಡಬೇಕಿತ್ತು:
ಎನ್ಐಎ ಅಧಿಕಾರಿಗಳ ತಂಡ ರಾಣಾ ವಿಚಾರಣೆ ನಡೆಸುತ್ತಿರುವ ಹೊತ್ತಿನಲ್ಲೇ ರಾಣಾ ಹಿಂದೆ ನೀಡಿದ್ದ ಹೇಳಿಕೆಯೊಂದು ಬೆಳಕಿಗೆ ಬಂದಿದೆ. ʻʻಮುಂಬೈನಲ್ಲಿ ನರಮೇಧ ನಡೆಸಿ, ಭಾರತೀಯ ಪಡೆಗಳ ಗುಂಡಿಗೆ ಬಲಿಯಾದ 9 ಲಷ್ಕರ್ ಉಗ್ರರಿಗೆ ಪಾಕ್ ಸೈನಿಕರಿಗೆ ನೀಡುವ ʻನಿಶಾನ್ ಎ ಹೈದರ್ʼ ಪ್ರಶಸ್ತಿ ನೀಡಬೇಕುʼʼ ಎಂದು ದಾಳಿಯ ಮಾಸ್ಟರ್ಮೈಂಡ್ ಡೇವಿಡ್ ಕೋಲ್ಮನ್ ಹೆಡ್ಲಿ ಜೊತೆ ತಹಾವೂರ್ ರಾಣಾ ಹೇಳಿದ್ದ ಎಂಬ ವಿಚಾರ ಈಗ ಬಯಲಾಗಿದೆ.
ಅಷ್ಟೇ ಅಲ್ಲ, ದಾಳಿಯಿಂದಾದ ಅನಾಹುತಗಳ ಬಗ್ಗೆ ಹೆಡ್ಲಿ ಪ್ರಸ್ತಾಪ ಮಾಡಿದಾಗ, ಭಾರತೀಯರಿಗೆ ಹಾಗೇ ಆಗಬೇಕಿತ್ತು ಎಂದು ರಾಣಾ ನಾಲಗೆ ಹರಿಬಿಟ್ಟಿದ್ದ. ಹಸ್ತಾಂತರದ ವೇಳೆ ಅಮೆರಿಕ ಕಾನೂನು ವಿಭಾಗ ನೀಡಿದ ಪ್ರಕಟಣೆಯಲ್ಲಿ ಈ ಎಲ್ಲಾ ವಿಚಾರ ಅಡಕವಾಗಿದೆ ಎಂದು ತಿಳಿದುಬಂದಿದೆ.
– ರಾಣಾ ಹಸ್ತಾಂತರ ಪ್ರಕ್ರಿಯೆ ಕಾಂಗ್ರೆಸ್ ಆಡಳಿತದಲ್ಲೇ ನಡೆದಿತ್ತು: ರಾವತ್
– ಜನರ ಗಮನ ಬೇರೆಡೆ ಸೆಳೆಯುವ ಬಿಜೆಪಿ ಕುತಂತ್ರ: ಕನ್ಹಯ್ಯಾ
ಪಾಟ್ನಾ: 2008ರ ಮುಂಬೈ ದಾಳಿಯ (Mumbai Attack) ಪ್ರಮುಖ ಸೂತ್ರಧಾರಿ ಲಷ್ಕರ್ ಉಗ್ರ ತಹವ್ವೂರ್ ರಾಣಾನನ್ನು (Tahawwur Rana) ಕೊನೆಗೂ ಭಾರತಕ್ಕೆ ಕರೆತರಲಾಗಿದೆ. ಈಗಾಗಲೇ ರಾಣಾನನ್ನ ಕೋರ್ಟ್ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ (NIA) ಕಸ್ಟಡಿಗೆ ನೀಡಿದ್ದು, ಎನ್ಐಎ ಮುಂದಿನ ವಿಚಾರಣೆ ಕೈಗೊಂಡಿದೆ. ದೇಶದ ಹಲವು ಭಾಗಗಳಿಗೆ ರಾಣಾನನ್ನ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ರಾಜಕೀಯ ಜಟಾಪಟಿಯೂ ನಡೆದಿದೆ.
ಕ್ರೆಡಿಟ್ ತೆಗೆದುಕೊಳ್ಳುವ ಅಗತ್ಯವಿಲ್ಲ
ರಾಣಾನನ್ನು ಭಾರತಕ್ಕೆ ಕರೆತರಲು 16 ವರ್ಷ ಬೇಕಾಯಿತು. ಆದ್ರೆ ಅವನನ್ನು ಹಸ್ತಾಂತರಿಸುವ ಪ್ರಕ್ರಿಯೆ ಕಾಂಗ್ರೆಸ್ ಆಡಳಿತದಲ್ಲೇ ಪ್ರಾರಂಭವಾಯಿತು. ಆದ್ದರಿಂದ ಅವನನ್ನು ಮರಳಿ ಕರೆತಂದ ಕ್ರೆಡಿಟ್ ದೇಶಕ್ಕೆ ಸಲ್ಲುತ್ತದೆ. ಯಾರೂ ವೈಯಕ್ತಿಕವಾಗಿ ಕ್ರೆಡಿಟ್ ತೆಗೆದುಕೊಳ್ಳುವ ಅವಶ್ಯಕತೆಯಿಲ್ಲ. ಅಲ್ಲದೇ ತಹವ್ವೂರ್ ರಾಣಾ ಭಾರತಕ್ಕೆ ಹಸ್ತಾಂತರಿಸಲಾದ ಮೊದಲ ಆರೋಪಿಯಲ್ಲ. ಇದಕ್ಕೂ ಮುನ್ನ 1993ರ ಸರಣಿ ಸ್ಫೋಟದ ಆರೋಪಿ ಅಬು ಸಲೇಂನನ್ನು ಕೂಡ ಭಾರತಕ್ಕೆ ಹಸ್ತಾಂತರಿಸಲಾಗಿತ್ತು ಎಂದು ನುಡಿದಿದ್ದಾರೆ. ಇದನ್ನೂ ಓದಿ: 18 ದಿನಗಳ ಕಾಲ NIA ಕಸ್ಟಡಿಗೆ ರಾಣಾ – ಮಧ್ಯರಾತ್ರಿ ಕೋರ್ಟ್ನಲ್ಲಿ ವಾದ ಏನಿತ್ತು?
ಇದೇ ವೇಳೆ ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಮಾತನಾಡಿ, ತಹವ್ವೂರ್ ರಾಣಾ ಹಸ್ತಾಂತರ ರಾಜತಾಂತ್ರಿಕ ಯಶಸ್ಸಲ್ಲ. ಸಾರ್ವಜನಿಕ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಬಿಜೆಪಿಯ ಕುತಂತ್ರವಾಗಿದೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಮುಂಬೈ ದಾಳಿ ಮಾಸ್ಟರ್ಮೈಂಡ್ ತಹವ್ವೂರ್ ರಾಣಾ ಅರೆಸ್ಟ್
– ಉಗ್ರನನ್ನು ಕರೆತರಲು ಬಹಳ ಎಚ್ಚರಿಕೆ ವಹಿಸಿದ್ದ ಭಾರತ – ವಿಮಾನದ ಮಧ್ಯದಲ್ಲಿ ಕುಳಿತಿದ್ದ ರಾಣಾ
ನವದೆಹಲಿ: ಮುಂಬೈ ದಾಳಿಕೋರ ತಹಾವ್ವೂರ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ವಿಶೇಷ ವಿಮಾನದಲ್ಲಿ (Tahawwur Rana) ಕರೆತರಲಾಗಿದೆ. ಈ ಕರೆ ತರುವ ಪ್ರಕ್ರಿಯೆ ಬಹಳ ರಹಸ್ಯವಾಗಿತ್ತು. ಈ ಕರೆ ತರುವ ಕಾರ್ಯಾಚರಣೆಗೆ ಬಳಸಲಾದ ವಿಮಾನಕ್ಕೆ ಡಮ್ಮಿ ಕೋಡ್ (Dummy Code) ನೀಡಲಾಗಿತ್ತು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.
ಹೌದು. ವಿಮಾನವು ಪಾಲಂ ವಿಮಾನ ನಿಲ್ದಾಣದ ತಾಂತ್ರಿಕ ಪ್ರದೇಶದಲ್ಲಿ ಇಳಿಯುವವರೆಗೂ ವಿಧ್ವಂಸಕ ಕೃತ್ಯಗಳು ನಡೆಯವ ಸಾಧ್ಯತೆ ಇದ್ದ ಕಾರಣ ಹಸ್ತಾಂತರ ಪ್ರಕ್ರಿಯೆ ಬಹಳ ಸವಾಲಿನಿಂದ ಕೂಡಿತ್ತು. ಗೃಹ ಸಚಿವಾಲಯ, NSA ಕಚೇರಿ, ಗುಪ್ತಚರ ಇಲಾಖೆ ರಾಣಾನನ್ನು ಕರೆದುಕೊಂಡು ಬರುವ ವಿಮಾನವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿತ್ತು. ಇದನ್ನೂ ಓದಿ: 18 ದಿನಗಳ ಕಾಲ NIA ಕಸ್ಟಡಿಗೆ ರಾಣಾ – ಮಧ್ಯರಾತ್ರಿ ಕೋರ್ಟ್ನಲ್ಲಿ ವಾದ ಏನಿತ್ತು?
ರಾಣಾನನ್ನು ಕರೆತಂದ ಗಲ್ಫ್ಸ್ಟ್ರೀಮ್ G550 (Gulfstream) ವಿಮಾನ ಸಾರ್ವಜನಿಕ ವಿಮಾನ ಟ್ರ್ಯಾಕರ್ಗಳಲ್ಲಿ ಪತ್ತೆಯಾಗುವುದನ್ನು ತಪ್ಪಿಸಲು ಮತ್ತು ಯಾವುದೇ ದಾಳಿ ಆಗದೇ ಇರಲು ಈ ಚಾರ್ಟರ್ಡ್ ವಿಮಾನಕ್ಕೆ ನಕಲಿ ಕೋಡ್ ನೀಡಲಾಗಿತ್ತು. ಹೀಗಾಗಿ ಯಾವ ವಿಮಾನದಲ್ಲಿ ರಾಣಾನನ್ನು ಕರೆತರಲಾಗುತ್ತಿದೆ? ಎಷ್ಟು ಗಂಟೆಗೆ ದೆಹಲಿಗೆ ವಿಮಾನ ಲ್ಯಾಂಡ್ ಆಗುತ್ತಿದೆ ಎಂಬ ವಿಚಾರ ಯಾರಿಗೂ ತಿಳಿದಿರಲಿಲ್ಲ.
ಇನ್ನೊಂದು ಮುಖ್ಯವಾದ ವಿಚಾರ ಏನೆಂದರೆ ಅಮೆರಿಕದ ಸುಪ್ರೀಂ ಕೋರ್ಟ್ ರಾಣಾನನ್ನು ಗಡಿಪಾರು ಮಾಡುವಾಗ ಹಲವಾರು ಷರತ್ತುಗಳನ್ನು ವಿಧಿಸಿತ್ತು. ಒಂದು ವೇಳೆ ರಾಣಾ ಕರೆತರುವಾಗ ಏನಾದರೂ ಹೆಚ್ಚು ಕಡಿಮೆಯಾದರೂ ಭಾರತದ ರಕ್ಷಣಾ ಸಂಸ್ಥೆಗಳಿಗೆ ಕಪ್ಪು ಚುಕ್ಕೆ ಬರುತ್ತಿತ್ತು. ಅಷ್ಟೇ ಅಲ್ಲದೇ ಭವಿಷ್ಯದಲ್ಲಿ ಬೇರೆ ದೇಶದಿಂದ ಉಗ್ರರನ್ನು ಕರೆ ತರುವ ಕಾರ್ಯಾಚರಣೆಗೂ ಅಡ್ಡಿಯಾಗುತ್ತಿತ್ತು. ಈ ಕಾರಣಕ್ಕೆ ಬಹಳ ಎಚ್ಚರಿಕೆ ವಹಿಸಿ ವಿಶೇಷ ವಿಮಾನದ ಮೂಲಕ ರಾಣಾನನ್ನು ಭಾರತಕ್ಕೆ ಕರೆತರಲಾಗಿದೆ.
ಭಾರತಕ್ಕೆ ಹಿಂದಿರುಗುವ ವಿಮಾನದಲ್ಲಿ, ರಾಣಾ ಮಧ್ಯದಲ್ಲಿ ಕುಳಿತಿದ್ದ ಮತ್ತು ಆತನ ಸುತ್ತಲಿನ ಎಲ್ಲಾ ಆಸನಗಳಲ್ಲಿ NSG ಕಮಾಂಡೋಗಳು ಇದ್ದರು. ನಂತರ ಹಿರಿಯ NIA ಅಧಿಕಾರಿಗಳು ಇದ್ದರು.
ವಿಮಾನದಲ್ಲಿ ಇರುತ್ತೆ ಟ್ರಾನ್ಸ್ಪಾಂಡರ್ ಕೋಡ್
ಆಕಾಶದಲ್ಲಿ ಹಾರಾಡುವ ಪ್ರತಿ ವಿಮಾನಕ್ಕೆ ಟ್ರಾನ್ಸ್ಪಾಂಡರ್ ಕೋಡ್ ಇರುತ್ತದೆ. ಟ್ರಾನ್ಸ್ಪಾಂಡರ್ ಕೋಡ್ ಮೂಲಕ ವಿಮಾನವನ್ನು ಗುರುತಿಸಲಾಗುತ್ತದೆ ಮತ್ತು ಟ್ರ್ಯಾಕ್ ಮಾಡಲಾಗುತ್ತದೆ. ಹಲವಾರು ಸಂಸ್ಥೆಗಳು ಈ ಕೋಡ್ ಬಳಸಿಕೊಂಡು ಆ ವಿಮಾನ ಸದ್ಯ ಯಾವ ಸ್ಥಳದಲ್ಲಿ ಹಾರಾಡುತ್ತಿದೆ ಎಂಬ ಕ್ಷಣ ಕ್ಷಣದ ಮಾಹಿತಿಯನ್ನು ಅಪ್ಡೇಟ್ ಮಾಡುತ್ತಿರುತ್ತದೆ.
ಈ ಕೋಡ್ಗಳನ್ನು ವಾಯು ಸಂಚಾರ ನಿಯಂತ್ರಣದಿಂದ (ATC) ವಿಮಾನಗಳಿಗೆ ನಿಯೋಜಿಸಲಾಗುತ್ತದೆ. ಅವುಗಳನ್ನು ವಿಮಾನದ ಟ್ರಾನ್ಸ್ಪಾಂಡರ್ನೊಂದಿಗೆ ಬಳಸಲಾಗುತ್ತದೆ. ಈ ಕೋಡ್ ಮೂಲಕವೇ ನಿರ್ದಿಷ್ಟ ವಿಮಾನವನ್ನು ಗುರುತಿಸಲು, ಅದರ ಹಾರಾಟದ ಮಾರ್ಗ, ಎತ್ತರ ಮತ್ತು ಇತರ ಸಂಬಂಧಿತ ಮಾಹಿತಿಯನ್ನು ಟ್ರ್ಯಾಕ್ ಮಾಡಲಾಗುತ್ತದೆ.
ವಿಮಾನ ತರಬೇತಿ ಸಮಯ ಅಥವಾ ರಾಡಾರ್ ವ್ಯವಸ್ಥೆಗಳನ್ನು ಪರೀಕ್ಷಿಸಲು ಡಮ್ಮಿ ಕೋಡ್ಗಳನ್ನು ಬಳಸಲಾಗುತ್ತದೆ. ಆದರೆ ಅವುಗಳನ್ನು ನೈಜ ಹಾರಾಟ ಕಾರ್ಯಾಚರಣೆಗಳಿಗೆ ಬಳಸಲಾಗುವುದಿಲ್ಲ.
ನವದೆಹಲಿ: 2008ರ ಮುಂಬೈ ದಾಳಿಯ (Mumbai Attack) ಪ್ರಮುಖ ಸೂತ್ರಧಾರಿ ಲಷ್ಕರ್ ಉಗ್ರ ತಹಾವ್ವೂರ್ ರಾಣಾನನ್ನು (Tahawwur Rana) ಕೋರ್ಟ್ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ (NIA) ಕಸ್ಟಡಿಗೆ ನೀಡಿದೆ.
ಈ ವೇಳೆ ಎನ್ಐಎ ಪರ ವಕೀಲರು, ಮುಂಬೈ ದಾಳಿಯ ಪಿತೂರಿಗ ಸಂಬಂಧಿಸಿದಂತೆ ಉಗ್ರ ಹೆಡ್ಲಿ (David Headley) ಮತ್ತು ರಾಣಾ ನಡುವಿನ ಇಮೇಲ್ ಪುರಾವೆಗಳನ್ನು ಉಲ್ಲೇಖಿಸಿದರು. ಕ್ರಿಮಿನಲ್ ಪಿತೂರಿಯ ಭಾಗವಾಗಿ ಡೇವಿಡ್ ಹೆಡ್ಲಿ ಭಾರತಕ್ಕೆ ಭೇಟಿ ನೀಡುವ ಮೊದಲು ತಹವ್ವೂರ್ ರಾಣಾನ ಜೊತೆ ಸಂಪೂರ್ಣ ಕಾರ್ಯಾಚರಣೆಯ ಬಗ್ಗೆ ಚರ್ಚಿಸಿದ್ದ. ಹೀಗಾಗಿ ಆತನನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಈ ವಾದವನ್ನು ಪುರಸ್ಕರಿಸಿದ ಕೋರ್ಟ್ 18 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿತು.
ಕ್ರಿಮಿನಲ್ ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ನಡೆಸುವುದು, ಕೊಲೆ ಮತ್ತು ನಕಲಿ ದಾಖಲೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (UAPA) ಕಾಯ್ದೆಯಡಿಯಲ್ಲಿ ರಾಣಾ ಮೇಲೆ ಆರೋಪ ಹೊರಿಸಲಾಗಿದೆ. 64 ವರ್ಷದ ತಹವ್ವೂರ್ ರಾಣಾನನ್ನು ವಿಚಾರಣೆ ಎದುರಿಸಲು ಮುಂಬೈಗೆ ಸ್ಥಳಾಂತರಿಸಬಹುದು ಎಂದು ಮೂಲಗಳು ತಿಳಿಸಿವೆ.
NIA Takes Custody of 26/11 Mumbai Terror Attack Mastermind Tahawwur Rana Following Special Courts Orders pic.twitter.com/5A3rwETNx8
ಹಿರಿಯ ವಕೀಲ ದಯಾನ್ ಕೃಷ್ಣನ್ ಮತ್ತು ವಿಶೇಷ ಸಾರ್ವಜನಿಕ ಅಭಿಯೋಜಕ ನರೇಂದರ್ ಮಾನ್ ಎನ್ಐಎ ಪರ ವಾದಿಸಿದರು. ದೆಹಲಿ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲ ಪಿಯೂಷ್ ಸಚ್ದೇವ ತಹವ್ವೂರ್ ರಾಣಾ ಪರ ವಾದಿಸಿದರು.
ತಹವ್ವೂರ್ ರಾಣಾನ ಯಶಸ್ವಿ ಹಸ್ತಾಂತರದ ಬಗ್ಗೆ ಮಾತನಾಡಿದ ಅಮೆರಿಕದ ವಕ್ತಾರ ಟ್ಯಾಮಿ ಬ್ರೂಸ್, ಜಾಗತಿಕ ಭಯೋತ್ಪಾದನೆಯನ್ನು ಎದುರಿಸಲು ಎರಡೂ ದೇಶಗಳು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತಿರುವುದರಿಂದ ಅವುಗಳ ನಡುವಿನ ಕ್ರಿಯಾಶೀಲತೆಯ ಬಗ್ಗೆ ಯುಎಸ್ ಹೆಮ್ಮೆಪಡುತ್ತದೆ ಎಂದು ಹೇಳಿದರು.
ನವದೆಹಲಿ: ಮುಂಬೈ ದಾಳಿಯ (Mumbai Attack) ಸಂಚುಕೋರ, 64 ವರ್ಷ ವಯಸ್ಸಿನ ತಹವ್ವೂರ್ ರಾಣಾನ (Tahawwur Rana) ಫೋಟೊ ರಿಲೀಸ್ ಆಗಿದೆ. ಎನ್ಐಎ ಅಧಿಕಾರಿಗಳ ಜೊತೆ ರಾಣಾ ಇರುವ ಫೋಟೊ ಬಹಿರಂಗಗೊಂಡಿದೆ.
26/11 ಭಯೋತ್ಪಾದಕ ದಾಳಿಯ ಸಂಚುಕೋರ, ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ತಹವ್ವೂರ್ ಹುಸೇನ್ ರಾಣಾನನ್ನು ಗುರುವಾರ ದೆಹಲಿಯ ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು. ಬುಧವಾರ ವಿಶೇಷ ವಿಮಾನದಲ್ಲಿ ಅಮೆರಿಕದಿಂದ ಆತನನ್ನು ಗಡೀಪಾರು ಮಾಡಲಾಗಿತ್ತು.
ಭಯೋತ್ಪಾದಕ ರಾಣಾನನ್ನು ದೆಹಲಿಯ ಹೆಚ್ಚಿನ ಭದ್ರತೆ ಕಲ್ಪಿಸಲಾಗಿರುವ ತಿಹಾರ್ ಜೈಲಿನಲ್ಲಿ ಇರಿಸಬಹುದು. ಅಂತಿಮವಾಗಿ ವಿಚಾರಣೆಯನ್ನು ಎದುರಿಸಲು ಮುಂಬೈಗೆ ಸ್ಥಳಾಂತರಿಸಬಹುದು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುಂಬೈ ದಾಳಿ ಮಾಸ್ಟರ್ಮೈಂಡ್ ತಹವ್ವೂರ್ ರಾಣಾ ಅರೆಸ್ಟ್
ಉಗ್ರನ ಮೇಲೆ ಕ್ರಿಮಿನಲ್ ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ಸಾರುವುದು, ಕೊಲೆ ಮತ್ತು ನಕಲಿ ದಾಖಲೆ ಸೃಷ್ಟಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.