Tag: Tail

  • ನಾಯಿಮರಿಗಳ ಬಾಲ, ಕಿವಿ ಕತ್ತರಿಸಿ ಸ್ನ್ಯಾಕ್ಸ್ ಮಾಡಿ ತಿಂದ ಕುಡುಕ

    ನಾಯಿಮರಿಗಳ ಬಾಲ, ಕಿವಿ ಕತ್ತರಿಸಿ ಸ್ನ್ಯಾಕ್ಸ್ ಮಾಡಿ ತಿಂದ ಕುಡುಕ

    ಲಕ್ನೋ: ಕುಡುಕನೊಬ್ಬ ಮದ್ಯ (alcohol) ಸೇವಿಸಿದ ಅಮಲಿನಲ್ಲಿ 2 ನಾಯಿಮರಿಗಳ (Puppy) ಬಾಲ (Tail) ಮತ್ತು ಕಿವಿಗೆ (Ear) ಉಪ್ಪು ಸವರಿ ಸ್ನ್ಯಾಕ್ಸ್ ತಿಂದ ಅಮಾನವೀಯ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

    ಬರೇಲಿ ಜಿಲ್ಲೆಯ ಫರೀದ್‍ಪುರ ಪ್ರದೇಶದ ಎಸ್‍ಡಿಎಂ ಕಾಲೋನಿಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ ಮುಖೇಶ್ ವಾಲ್ಮೀಕಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಮದ್ಯಪಾನ ಮಾಡುತ್ತಿದ್ದಾಗ ಈ ಅಮಾನವೀಯ ಕೃತ್ಯ ಎಸಗಿದ್ದಾನೆ.

    ALCOHOL

    ಕುಡುಕ ಮುಖೇಶ್ 2 ನಾಯಿ ಮರಿಗಳ ಒಂದು ಕಿವಿ ಹಾಗೂ ಬಾಲವನ್ನು ಕತ್ತರಿಸಿ ಮದ್ಯದೊಂದಿಗೆ ಸೇವಿಸಿದ್ದಾನೆ. ಇದರಿಂದಾಗಿ 2 ನಾಯಿ ಮರಿಗಳ ಸ್ಥಿತಿ ಚಿಂತಾಜನಕವಾಗಿದ್ದು, ಅವೆರೆಡು ಸದ್ಯಕ್ಕೆ ಚಿಕಿತ್ಸೆ ಪಡೆಯುತ್ತಿವೆ. ಇದನ್ನೂ ಓದಿ: ಮದ್ಯಕ್ಕೆ ಸಾಲ ಕೊಡಲ್ಲ ಎಂದಿದ್ದಕ್ಕೆ ಮಹಿಳೆಯನ್ನು ಕೊಲೆ ಮಾಡಿದ ನೆರೆಮನೆಯಾತ

    ಘಟನೆಗೆ ಸಂಬಂಧಿಸಿ ಪೀಪಲ್ ಫಾರ್ ಅನಿಮಲ್ಸ್ ಸಂಘಟನೆಯ ಸದಸ್ಯ ಧೀರಜ್ ಪಾಠಕ್ ಎಂಬಾತ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳ ಕುಟ್ಟಿ ಫೋಟೋಗೆ ಮನಸೋತ ಶಿಕ್ಷಕ – ಮ್ಯಾಟ್ರಿಮೊನಿ ಹೆಸರಲ್ಲಿ ಲಕ್ಷ ಲಕ್ಷ ಪೀಕಿದ ಯುವತಿ

    Live Tv
    [brid partner=56869869 player=32851 video=960834 autoplay=true]

  • ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ ಅಂತಾ ಭಾರತಕ್ಕೆ ಯಾವ ದೇಶವೂ ಹೇಳಿಲ್ಲ: ಹರ್ದೀಪ್ ಸಿಂಗ್ ಪುರಿ

    ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ ಅಂತಾ ಭಾರತಕ್ಕೆ ಯಾವ ದೇಶವೂ ಹೇಳಿಲ್ಲ: ಹರ್ದೀಪ್ ಸಿಂಗ್ ಪುರಿ

    ನವದೆಹಲಿ: ಭಾರತ ಎಲ್ಲಿಂದ ಬೇಕಾದರೂ ತೈಲವನ್ನು ಖರೀದಿಸುತ್ತದೆ. ಆದರೆ ಈ ರೀತಿಯ ವಿಚಾರಗಳನ್ನು ಭಾರತ ಜನರವರೆಗೂ ಕೊಂಡೊಯ್ಯುವುದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಹೇಳಿದ್ದಾರೆ.

    RUSSIA OIL

    ರಷ್ಯಾ ಮತ್ತು ಉಕ್ರೇನ್ (Russia-Ukraine) ನಡುವಿನ ಸಂಘರ್ಷದಿಂದ ಇಂಧನ ಪೂರೈಕೆಗೆ ಅಡ್ಡಿಯುಂಟಾಗಿ ತೈಲ ಬೆಲೆ ಭಾರೀ ಏರಿಕೆಯಾಯಿತು. ಇದರಿಂದ ಜಾಗತಿಕವಾಗಿ ಇಂಧನ ವ್ಯವಸ್ಥೆ ಮೇಲೆ ಅಡ್ಡಪರಿಣಾಮ ಬೀರಿತು. ಈ ಬಿಕ್ಕಟ್ಟಿನ ಮಧ್ಯೆ ಹರ್ದೀಪ್ ಸಿಂಗ್ ಪುರಿ ಅವರು, ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವಂತೆ ಯಾವುದೇ ದೇಶ ಭಾರತಕ್ಕೆ ಹೇಳಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅರುಣಾಚಲ ಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಥುಪ್ಟೆನ್ ಟೆಂಪಾ ನಿಧನ

    “ಭಾರತದಲ್ಲಿ ಹೆಚ್ಚಿನ ಜನಸಂಖ್ಯೆಯಿರುವುದರಿಂದ ತೈಲವನ್ನು ಖರೀದಿಸಲಾಗಿದೆ ಎಂಬ ಚರ್ಚೆಗಳು ಬೇಡ. ಭಾರತ ಎಲ್ಲಿಂದ ಬೇಕಾದರೂ ತೈಲವನ್ನು ಖರೀದಿಸುತ್ತದೆ. ರಷ್ಯಾದ ತೈಲವನ್ನು ಖರೀದಿಸುವುದನ್ನು ನಿಲ್ಲಿಸುವಂತೆ ನಮಗೆ ಯಾರೂ ಹೇಳಿಲ್ಲ. ಭಾರತ ಸರ್ಕಾರವು ತನ್ನ ನಾಗರಿಕರಿಗೆ ಇಂಧನವನ್ನು ಒದಗಿಸುವ ನೈತಿಕ ಜವಾಬ್ದಾರಿ ಹೊಂದಿದೆ. ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವಂತೆ ಭಾರತಕ್ಕೆ ಯಾವ ದೇಶವೂ ಹೇಳಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಹಿಂದೂಗಳಿಂದ ಅಲ್ಪಸಂಖ್ಯಾತರಿಗೆ ಅಪಾಯವಿಲ್ಲ; ನೀವು ಭಯಪಡಬೇಕಾಗಿಲ್ಲ – ಮೋಹನ್‌ ಭಾಗವತ್‌

    ಭಾರತವು ರಷ್ಯಾದಿಂದ ಇಂಧನ ಆಮದು ಮಾಡಿಕೊಳ್ಳುತ್ತಿರುವುದನ್ನು ಯುಕೆ (UK) ಮತ್ತು ಯುಎಸ್ (US) ಟೀಕಿಸಿದೆ. ರಷ್ಯಾ ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ರಫ್ತಿನ ಮೇಲೆ ಯುರೋಪಿಯನ್ ದೇಶಗಳು ನಿರ್ಬಂಧ ಹೇರಿತ್ತು. ಭಾರತಕ್ಕೂ ರಷ್ಯಾದಿಂದ ಇಂಧನ ಖರೀದಿಸದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ (US President Joe Biden) ಮನವಿ ಮಾಡಿದರು. ಹಾಗೆ ಮಾಡುವುದು ಭಾರತದ ಹಿತಾಸಕ್ತಿಗೆ ಒಳಪಡುವುದಿಲ್ಲ ಎಂದು ಮೋದಿ ತಿಳಿಸಿದ್ದರು. ಉಕ್ರೇನ್ ಮೇಲೆ ನಡೆದ ದಾಳಿಯನ್ನು ಅಮೆರಿಕ ಖಂಡಿಸಿದೆ.

    Live Tv
    [brid partner=56869869 player=32851 video=960834 autoplay=true]