Tag: Talacauvery

  • ಲೋಕ ಕಲ್ಯಾಣಕ್ಕಾಗಿಯೇ ಜನ್ಮ ತಾಳಿದ ಮಹಾನದಿ ಈ‌ ಕಾವೇರಿ – ಪುರಾಣ ಪುಣ್ಯಕಥೆ ನಿಮಗೆ ಗೊತ್ತೆ?

    ಲೋಕ ಕಲ್ಯಾಣಕ್ಕಾಗಿಯೇ ಜನ್ಮ ತಾಳಿದ ಮಹಾನದಿ ಈ‌ ಕಾವೇರಿ – ಪುರಾಣ ಪುಣ್ಯಕಥೆ ನಿಮಗೆ ಗೊತ್ತೆ?

    ಮಾತೆ ಕಾವೇರಿ ತಲಕಾವೇರಿಯಲ್ಲಿ (Talacauvery) ಹುಟ್ಟಿ ಲೋಕ ಕಲ್ಯಾಣಕ್ಕಾಗಿ ನದಿಯಾಗಿ ಹೇಗೆ ಹರಿದಳು ಎಂಬುದರ ಬಗ್ಗೆ ‌ಹಲವರಿಗೆ ಇಂದಿಗೂ ಕುತೂಹಲ ಇದೆ. ಕಾವೇರಿ ಜನ್ಮ ತಾಳಿದ ಹಿನ್ನೆಲೆ ನೋಡುವುದಾದ್ರೆ ಅದಕ್ಕೊಂದು ಪೌರಾಣಿಕ ಕಥೆ ಇದೆ. ಬನ್ನಿ ತಿಳಿಯೋಣ…

    ಪುರಾಣ ಹೇಳುವಂತೆ, ತಲಕಾವೇರಿ ಸಮೀಪದ ಬ್ರಹ್ಮಗಿರಿ ಬೆಟ್ಟದಲ್ಲಿ (Brahmagiri Hill) ಕವೇರನೆಂಬ ಮುನಿ ವಾಸವಾಗಿದ್ದಋಂತೆ. ಅವನಿಗೊಬ್ಬಳು ಪುತ್ರಿ ಬೇಕೆಂಬ ಅಭಿಲಾಷೆ ಉಂಟಾಗಿ ಬ್ರಹ್ಮನನ್ನ ಕುರಿತು ತಪಸ್ಸು ಮಾಡುತ್ತಿದ್ದರ ಮಾಡತೊಡಗಿದ. ತಪಸ್ಸಿಗೆ ಮೆಚ್ಚಿದ ಬ್ರಹ್ಮ ತನ್ನ ಮಾನಸ ಪುತ್ರಿ ಲೋಪಾಮುದ್ರೆಯನ್ನ ದತ್ತು ಮಗಳಾಗಿ ನೀಡಿದರಂತೆ. ಲೋಪಾಮುದ್ರೆ ಕವೇರ ಮುನಿಯ ಆಶ್ರಮದಲ್ಲಿ ಬೆಳೆಯತೊಡಗಿದಳು. ಹೀಗೆ ಕವೇರ ಮುನಿಯ ಆಶ್ರಮದಲ್ಲಿ ಬೆಳೆದಿದ್ದರಿಂದ ಆಕೆ ಕಾವೇರಿಯಾದಳು.

    ಒಮ್ಮೆ ಕವೇರನ ಆಶ್ರಮಕ್ಕೆ ಬಂದ ಅಗಸ್ತ್ಯ ಮುನಿಗಳು ಕಾವೇರಿಯನ್ನು ಕಂಡು ಮನಸೋತು ಆಕೆಯನ್ನು ವಿವಾಹವಾಗುವ ಇಚ್ಛೆ ವ್ಯಕ್ತಪಡಿಸಿದ್ದರಂತೆ. ನನ್ನನ್ನು ನೀವು ಉಪೇಕ್ಷಿಸಿ ಎಲ್ಲೂ ಹೋಗಬಾರದು ಹಾಗೊಂದು ವೇಳೆ ನನ್ನನ್ನ ಒಬ್ಬಂಟಿಯಾಗಿ ಬಿಟ್ಟು ಹೋದದ್ದೇ ಆದರೆ ನಾನು ನದಿಯಾಗಿ ಹರಿದುಹೋಗುವುದಾಗಿ ಹೇಳಿದ್ದಳು. ಕಾವೇರಿಯ (Maa Cauvery) ಷರತ್ತಿಗೆ ಒಪ್ಪಿದ ಅಗಸ್ತ್ಯ ಮುನಿಗಳು ಆಕೆಯನ್ನ ವಿವಾಹವಾಗಿ ತನ್ನ ಆಶ್ರಮಕ್ಕೆ ಕರೆದೊಯ್ದಿದ್ದರು.

    ಒಂದು ದಿನ ಬೇಗ ಎದ್ದ ಅಗಸ್ತ್ಯ ಮುನಿಗಳು ನಿದ್ದೆಯಲ್ಲಿದ್ದ ಕಾವೇರಿಯನ್ನು ಹಾಗೇ ಬಿಟ್ಟು ಕನ್ನಿಕೆ ನದಿಯಲ್ಲಿ ಸ್ನಾನ ಮಾಡಲೆಂದು ಹೋಗಿದ್ದರು. ಆದರೆ, ಎಚ್ಚರವಾದಾಗ ಸನಿಹದಲ್ಲಿ ಪತಿ ಇಲ್ಲದಿರುವುದನ್ನ ಕಂಡು ಕೋಪಗೊಂಡ ಕಾವೇರಿ, ಷರತ್ತು ಮೀರಿದ ಪತಿಯಿಂದ ದೂರವಾಗಿ ಅಲ್ಲೇ ಇದ್ದ ಕೊಳಕ್ಕೆ ಧುಮುಕಿ ಗುಪ್ತಗಾಮಿನಿಯಾಗಿ ಹರಿದು ಭಾಗಮಂಡಲ ಸೇರಿ, ಅಲ್ಲಿ ಕನ್ನಿಕೆ, ಸುಜ್ಯೋತಿ ನದಿಗಳೊಂದಿಗೆ ಸಂಗಮವಾಗಿ ಮುಂದೆ ಹರಿದಳು ಎಂಬ ಪ್ರತೀತಿ ಇದೆ. ಹೀಗೆ ಲೋಕಕಲ್ಯಾಣಕ್ಕೆ ಹೊರಟ ಕಾವೇರಿ ಪ್ರತಿವರ್ಷ ತುಲಾ ಸಂಕ್ರಮಣದಂದು ಬ್ರಹ್ಮಕುಂಡಿಕೆಯಲ್ಲಿ ಜಲರೂಪಿಣಿಯಾಗಿ ದರ್ಶನ ನೀಡುತ್ತಾ ಬಂದಿದ್ದಾಳಂತೆ.

    ತಲಕಾವೇರಿಯಲ್ಲಿ ಉಗಮವಾಗಿ ಭಾಗಮಂಡಲ, ಬಲಮುರಿ, ಗುಹ್ಯ, ಕಣಿವೆ ಮೂಲಕ ಕೊಡಗಿನಿಂದ ಹೊರ ಹರಿದು ಬಳಿಕ ರಾಜ್ಯದಲ್ಲಿ ಸುಮಾರು 381 ಕಿಮೀ ಹರಿದು ಆ ನಂತರ ತಮಿಳುನಾಡು, ಪಾಂಡಿಚೇರಿ ಮೂಲಕ 802 ಕಿಮೀ ಕ್ರಮಿಸಿ ಕಾವೇರಿ ಪಟ್ಟಣಂನಲ್ಲಿ ಬಂಗಾಳಕೊಲ್ಲಿಯನ್ನು ಸೇರುತ್ತಾಳೆ. ತಲಕಾವೇರಿಯಲ್ಲಿ ಬ್ರಹ್ಮಕುಂಡಿಕೆಯ ಪಕ್ಕದಲ್ಲಿಯೇ ಸ್ನಾನಕೊಳವಿದ್ದು, ನೂತನವಾಗಿ ವಿವಾಹವಾದವರು ಈ ಸ್ನಾನಕೊಳದಲ್ಲಿ ಕೈಕೈ ಹಿಡಿದು ನೀರಿನಲ್ಲಿ ಮೂರು ಬಾರಿ ಮುಳುಗಿ ತಲೆಗೆ ಪವಿತ್ರ ಜಲ ಹಾಕಿಸಿಕೊಂಡ್ರೆ ಜೀವನ ಪಾವನವಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

    ಅಗಸ್ತ್ಯೇಶ್ವರ ದೇವಾಲಯದ ಎಡಭಾಗದಲ್ಲಿರುವ ಬ್ರಹ್ಮಗಿರಿ ಬೆಟ್ಟವನ್ನೇರಲು ಸುಮಾರು 500 ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ. ಈ ಮೆಟ್ಟಿಲೇರಿದ್ರೆ ಬ್ರಹ್ಮಗಿರಿಯ ಬೆಟ್ಟದ ಮೇಲ್ಭಾಗವನ್ನ ತಲುಪಬಹುದು. ಇಲ್ಲಿಂದ ನಿಂತು ನೋಡಿದ್ರೆ ಕಂಡುಬರುವ ನಿಸರ್ಗದ ಸುಂದರ ದೃಶ್ಯ ಮನಸ್ಸಿಗೆ ಉಲ್ಲಾಸ ನೀಡುತ್ತದೆ. ಅಲ್ಲದೇ ಎದುರಿನ ಬಾಪುರೆ ಬೆಟ್ಟದಲ್ಲಿ ಕೆಟ್ಟು ನಿಂತ ಬೃಹತ್‌ಗಾಳಿ ಯಂತ್ರಗಳು ಸೋಜಿಗವನ್ನುಂಟು ಮಾಡುತ್ತವೆ. ಇನ್ನು ಭಾಗಮಂಡಲದಿಂದ ತಲಕಾವೇರಿಗೆ ತೆರಳುವ ರಸ್ತೆಯಲ್ಲಿ ಸಿಗುವ ವ್ಯೂ ಪಾಯಿಂಟ್, ಭೀಮನಕಲ್ಲು, ಸಲಾಂಕಟ್ಟೆ ಎಲ್ಲವೂ ಇತಿಹಾಸದ ಕಥೆ ಹೇಳುತ್ತವೆ.

    ತೀರ್ಥೋದ್ಭವದ ಸಂದರ್ಭ ಹಿರಿಯರಿಗೆ ಪಿಂಡ ಪ್ರದಾನ ಮಾಡುವ ಕಾರ್ಯವೂ ನಡೆಯುತ್ತದೆ. ತುಲಾಸಂಕ್ರಮಣದ ಒಂದು ತಿಂಗಳ ಕಾಲ ಭಗಂಡೇಶ್ವರ ದೇವಾಲಯದ ಕೊಠಡಿಯೊಂದರಲ್ಲಿ ನಂದಾದೀಪ ಉರಿಸಲಾಗುತ್ತದೆ. ಭಕ್ತರು ತಾವು ತರುವ ತುಪ್ಪವನ್ನು ಈ ದೀಪಕ್ಕೆ ಹಾಕುತ್ತಾರೆ. ಹಾಗೆಯೇ ಅಕ್ಕಿಯನ್ನು ಕೂಡ ಇಲ್ಲಿನ ಅಕ್ಷಯ ಭಂಡಾರಕ್ಕೆ ಹಾಕಿ ತಮ್ಮ ಮನೆಯ ಕಣಜದಲ್ಲಿ ಸದಾ ಭತ್ತ ತುಂಬಿರುವಂತೆ ಬೇಡಿಕೊಳ್ಳುತ್ತಾರೆ. ಕಾವೇರಿ ತೀರ್ಥೋದ್ಭವದ ತುಲಾ ಸಂಕ್ರಮಣ ಜಾತ್ರೆಯಲ್ಲಿ ಎಲ್ಲರೂ ಭಾಗಿಯಾಗಿ ಸಂಭ್ರಮಿಸುತ್ತಾರೆ.

    ಕೊಡಗಿನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ವರ್ಷಕ್ಕೊಮ್ಮೆ ತುಲಾ ಸಂಕ್ರಮಣದ ಪುಣ್ಯಕಾಲದಲ್ಲಿ ತೀರ್ಥರೂಪಿಣಿಯಾಗಿ ಉದ್ಭವಿಸಿ ತುಂಬಿ ಹರಿಯುವ ಕಾವೇರಿ ಮಾತೆಗೆ ವಿಶೇಷ ಮಹತ್ವ ಇದೆ. ಇದು ಕಾವೇರಿ ತುಲಾ ಸಂಕ್ರಮಣ ಜಾತ್ರೆ ಎಂದೇ ಜನಪ್ರಿಯ. ಕೊಡಗಿನವರಷ್ಟೇ ಅಲ್ಲದೆ ನಾಡಿನ ಹಾಗೂ ದೇಶ-ವಿದೇಶಗಳ ಜನರೆಲ್ಲಾ ಇಲ್ಲಿ ಆಗಮಿಸಿ ಕಾವೇರಿ ತೀರ್ಥದಲ್ಲಿ ಮುಳುಗೆದ್ದು ಪುನೀತರಾಗುವ ತುಲಾ ಸಂಕ್ರಮಣ ಜಾತ್ರೆಯನ್ನು ನೋಡುವುದೇ ಆನಂದ.

    ಹಸಿರು ಕಾನನ, ಬೆಟ್ಟಗುಡ್ಡಗಳಿಂದ ಆವೃತಗೊಂಡು ಸದಾ ಮಂಜಿನ ಮುಸುಕಿನೊಂದಿಗೆ ಆಸ್ತಿಕ-ನಾಸ್ತಿಕರೆನ್ನದೆ ಎಲ್ಲರನ್ನೂ ತನ್ನತ್ತ ಕೈಬೀಸಿ ಕರೆಯುವ ತಲಕಾವೇರಿಯ ಪ್ರಕೃತಿಯ ತಾಣದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಹರಿಯುವ ಮೂಲಕ ಭಕ್ತರನ್ನ ಪುನೀತಗೊಳಿಸುತ್ತಾಳೆ. ಮಡಿಕೇರಿಯಿಂದ 42 ಕಿ.ಮೀ. ದೂರದಲ್ಲಿರುವ ತಲಕಾವೇರಿ ಬ್ರಹ್ಮಗಿರಿ ಪರ್ವತ ಶ್ರೇಣಿಯಲ್ಲಿದ್ದು ಸಮುದ್ರ ಮಟ್ಟದಿಂದ ಸುಮಾರು ಐದು ಸಾವಿರ ಅಡಿ ಎತ್ತರದಲ್ಲಿದೆ.

  • ತಲಕಾವೇರಿ | ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ಕೊಟ್ಟ ಕಾವೇರಿ ಮಾತೆ!

    ತಲಕಾವೇರಿ | ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ಕೊಟ್ಟ ಕಾವೇರಿ ಮಾತೆ!

    ಮಡಿಕೇರಿ: ಕೊಡಗಿನ (Kodagu) ಕುಲದೇವಿ, ನಾಡಿನ ಜೀವನದಿ ಮಾತೆ ಕಾವೇರಿ (Cauvery Theerthodbhava) ನಿಗಧಿಯಂತೆ ಮಕರ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಸಾವಿರಾರು ಭಕ್ತರಿಗೆ ದರ್ಶನ ನೀಡಿದಳು.

    ಬೆಳಗ್ಗೆ 11:30 ಗಂಟೆಯಿಂದಲೇ ಪ್ರಧಾನ ಅರ್ಚಕ ಗುರುರಾಜ್ ಆಚಾರ್ ಅವರ ನೇತೃತ್ವದಲ್ಲಿ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ ಮತ್ತು ಕುಂಕುಮಾರ್ಚನೆ ನೆರವೇರಿಸಿದರು. ಮತ್ತೊಂದೆಡೆ ಕಾವೇರಿ ತೀರ್ಥೋದ್ಭವ (Theerthodbhava) ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಭಾಗಮಂಡಲದಿಂದ 8 ಕಿಮೀ ದೂರದ ತಲಕಾವೇರಿಗೆ ಕಾಲ್ನಡಿಗೆಯಲ್ಲಿ ಆಗಮಿಸಿದ್ರು. ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟ ಭಕ್ತರು (Devotees) ಕಾವೇರಿ ಮಾತೆಯನ್ನ ನೆನೆಯುತ್ತಾ ತಲಕಾವೇರಿ ತಲುಪಿದರು. ಕೊಡಗು ಅಷ್ಟೇ ಅಲ್ಲದೇ ಹೊರ ಜಿಲ್ಲೆ ಮತ್ತು ಹೊರ ರಾಜ್ಯ ತಮಿಳುನಾಡಿನಿಂದಲೂ ಅಪಾರ ಸಂಖ್ಯೆಯ ಭಕ್ತರು ತಲಕಾವೇರಿಗೆ ಆಗಮಿಸಿದ್ದರು.

    ತೀರ್ಥೋದ್ಭವದ ಸಮಯ ಹತ್ತಿರವಾಗಿತ್ತಿದ್ದಂತೆ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಭಕ್ತರೆಲ್ಲರೂ ʻಉಕ್ಕಿ ಬಾ ತಾಯೆʼ ಎಂದು ಕಾವೇರಿ ಮಾತೆಯನ್ನ ಜಪಿಸುತ್ತಿದ್ದರು. ನಿಗದಿತೆ ಮಕರ ಲಗ್ನದಲ್ಲಿ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸರಿಯಾಗಿ ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಬಳಿಕ ಅರ್ಚಕರು ಭಕ್ತರಿಗೆ ಕಾವೇರಿ ತೀರ್ಥ ಪ್ರೋಕ್ಷಣೆ ಮಾಡಿದರು. ಕಾವೇರಿ ಮಾತೆಯನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು ಭಕ್ತಿಭಾವ ಮೆರೆದು ಪುನೀತರಾದರು.

    ಇದೇ ಸಂದರ್ಭದಲ್ಲಿ ಮಾತಾನಾಡಿದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಕಾವೇರಿ ಸಂಕ್ರಮಣ ಕೊಡಗಿನಲ್ಲಿ ಎಲ್ಲಕ್ಕಿಂತ ವಿಶೇಷ ಹಬ್ಬ ನಾಡಿನ‌ ಜನರಿಗೆ ಆರೋಗ್ಯ ಆಯಸು ಕರುಣಿಸಲೆಂದು ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದ್ದೇವೆ. ಕಾವೇರಮ್ಮ ಆಶೀರ್ವಾದ ಪಡೆಯಲು ಇಲ್ಲಿಗೆ ಆಗಮಿಸಿದೆ. ಅರಸು ಸಮುದಾಯದಿಂದ ಸಾಂಸ್ಕೃತಿಕ ಉಡುಪು ಹಾಕಿಕೊಂಡು ತಲಕಾವೇರಿಗೆ ಅಗಮಿಸಿದೇನೆ ಎಂದರು.

    ಕಾವೇರಿ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ, ಮಡಿಕೇರಿ ಶಾಸಕ ಮಂಥರ್ ಗೌಡ, ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡು ತೀರ್ಥ ಕುಂಡಿಕೆಯ ಬಳಿ ನಿಂತು ಪೂಜೆ ನೆರವೇರಿಸಿದರು.

  • ಮಡಿಕೇರಿ | ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

    ಮಡಿಕೇರಿ | ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

    ಮಡಿಕೇರಿ: ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಮಡಿಕೇರಿ (Madikeri) ತಾಲೂಕಿನ ತಲಕಾವೇರಿ (Talacauvery) ಕ್ಷೇತ್ರದಲ್ಲಿ ಅಕ್ಟೋಬರ್ 17ರಂದು ಕಾವೇರಿ ತೀರ್ಥೋದ್ಭವ (Cauvery Tirthodbhava) ನಡೆಯಲಿದೆ.

    ಅಕ್ಟೋಬರ್ 17ರಂದು ಮಧ್ಯಾಹ್ನ 1:44ಕ್ಕೆ ಸಲ್ಲುವ ಮಕರ ಲಗ್ನದಲ್ಲಿ ತೀರ್ಥೋದ್ಭವ ಸಂಭವಿಸಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ಇದನ್ನೂ ಓದಿ: ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟನೆ

    ಸೆ.26ರ ಬೆಳಗ್ಗೆ 9:31ಕ್ಕೆ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅಕ್ಟೋಬರ್ 4ರ ಬೆಳಗ್ಗೆ 8:33ರ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.14ರ ಬೆಳಗ್ಗೆ 11:45ಕ್ಕೆ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಅ.14ರ ಸಂಜೆ 4:45ಕ್ಕೆ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿ ಇರಿಸುವುದು, ಅ.17ರ ಮಧ್ಯಾಹ್ನ 1:44 ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ನಡೆಯಲಿದೆ ಎಂದು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಇದನ್ನೂ ಓದಿ: ಬೆಳೆ ಪರಿಹಾರ ಆದಷ್ಟು ಬೇಗ ಕೊಡ್ತೀವಿ, ದುಡ್ಡಿಗೆ ಕೊರತೆ ಇಲ್ಲ: ಸಿಎಂ

  • ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ

    ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ

    – ತಲಕಾವೇರಿಯಲ್ಲಿ ತೀರ್ಥೋದ್ಭವ

    ಮಡಿಕೇರಿ: ತಲಕಾವೇರಿ (TalaCauvery) ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕಾವೇರಿ ಪವಿತ್ರ ತೀರ್ಥೋದ್ಭವ ನೆರವೇರಿತು. ಭಕ್ತರಿಗೆ ತೀರ್ಥರೂಪಿಣಿಯಾಗಿ ಕಾವೇರಿ (Cauvery) ದರ್ಶನ ನೀಡಿದಳು.

    ಕೊಡಗು ಜಿಲ್ಲೆಯ (Kodagu) ಮಡಿಕೇರಿ (Madikeri) ತಾಲೂಕಿನ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ 7 ಗಂಟೆ 40 ನಿಮಿಷ ತುಲಾ ಲಗ್ನದಲ್ಲಿ ತೀರ್ಥೋದ್ಭವವಾಯಿತು. ವರ್ಷಕ್ಕೊಮ್ಮೆ ಜರುಗುವ ದೇಶದ ಪವಿತ್ರ ತೀರ್ಥೋದ್ಭವ ಸಂಭ್ರಮ ಇಂದು ನಡೆಯಿತು. ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನವಾದಳು.ಇದನ್ನೂ ಓದಿ: ಬೆಳಗಾವಿ| ತಂದೆಯ ಸಾವಿನ ಬಗ್ಗೆ ಮಗಳ ಅನುಮಾನ – ಹೂತಿದ್ದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

    ನಿಗದಿಯಂತೆ 7:40ಕ್ಕೆ ಸೂರ್ಯ ಕನ್ಯಾ ಲಗ್ನದಿಂದ ತುಲಾ ಲಗ್ನಕ್ಕೆ ಪ್ರವೇಶಿಸುತ್ತಿದ್ದಂತೆ ತೀರ್ಥೋದ್ಭವ ನೆರವೇರಿತು. ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿ, ಮೂರು ಬಾರಿ ಉಕ್ಕಿ ಬಂದಳು. ಬಳಿಕ ಅರ್ಚಕರು ನೆರೆದಿರುವ ಭಕ್ತರಿಗೆ ಬ್ರಹ್ಮಕುಂಡಿಕೆಯಿಂದ ತೀರ್ಥ ಪ್ರೋಕ್ಷಣೆ ಮಾಡಿದರು.

    ತೀರ್ಥೋದ್ಭವಕ್ಕೆ ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ (Ponnanna) ಆಗಮಿಸಿದ್ದರು.

    ಬೆಳಗ್ಗೆ 7 ಗಂಟೆ 40 ನಿಮಿಷಕ್ಕೂ ಮೊದಲು ಒಂದು ಗಂಟೆಯಿಂದ ನಿರಂತರವಾಗಿ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ವಿಶೇಷ ಪೂಜಾ ಪುನಸ್ಕಾರಗಳು ನಡೆದವು. ಜೊತೆಗೆ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಅರ್ಚಕರ ತಂಡ ಬ್ರಹ್ಮಕುಂಡಿಕೆಯ ಬಳಿ ಕಾವೇರಿ ತೀರ್ಥೋದ್ಭವಕ್ಕೆ ಪೂಜೆ ನಡೆಸಿದರು. ಕಾವೇರಿ ಮಾತೆಯನ್ನು ಆಹ್ವಾನಿಸಲು ವಿವಿಧ ಪೂಜಾ ಕೈಂಕಾರ್ಯಗಳನ್ನು ಅರ್ಚಕರ ತಂಡ ಕೈಗೊಂಡಿತ್ತು.

    ರಾಜ್ಯದ ಬೇರೆ ಬೇರೆ ಭಾಗಗಳಿಂದ ಮಂಡ್ಯ, ಮೈಸೂರು, ಹಾಸನ ಹಾಗೂ ಬೇರೆ ರಾಜ್ಯಗಳಾದ ತಮಿಳುನಾಡು, ಕೇರಳದಿಂದ ಸಹಸ್ರ ಸಂಖ್ಯೆಯಲ್ಲಿ ಭಕ್ತರ ಆಗಮಿಸಿದ್ದರು. ಇನ್ನೂ ತೀರ್ಥ ರೂಪಿಣಿ ಕಾವೇರಿ ಮಾತೆಯನ್ನು ಕಣ್ತುಂಬಿಕೊಳ್ಳಲು ಭಕ್ತಗಣ ಕಾತುರದಿಂದ ಕಾದು, ಉಕ್ಕಿ ಬಾ ಕಾವೇರಮ್ಮೆ, ಕಾವೇರಿ ಬಾಳು ಎಂದು ಭಜಿಸುತ್ತಿದ್ದರು. ಬ್ರ‍್ರಹ್ಮಕುಂಡಿಕೆಯ ಬಳಿ ಸಾವಿರಾರು ಜನ ಭಕ್ತರು ನೆರೆದಿದ್ದರು. ಕೊಡವ ಧಿರಿಸಿನಲ್ಲಿ ಬಂದ ಭಕ್ತರು ದುಡಿಕೊಟ್ಟು ಪಾಟ್ ಬಡಿಯುತ್ತಾ ಕಾವೇರಿ ಸ್ಮರಣೆ ಮಾಡಿದರು.ಇದನ್ನೂ ಓದಿ: ಡಿವೈಡರ್‌ಗೆ ಡಿಕ್ಕಿ ಹೊಡೆದು ಸೆಲ್ಫ್ ಆಕ್ಸಿಡೆಂಟ್ – ಇಬ್ಬರು ಸ್ಥಳದಲ್ಲೇ ಸಾವು

  • ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್‌

    ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್‌

    ಮಡಿಕೇರಿ: ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯ ತಲಕಾವೇರಿಯಲ್ಲಿ (Talacauvery) ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ (Cauvery Theerthodbhava) ಮುಹೂರ್ತ ಫಿಕ್ಸ್ ಆಗಿದೆ.

    ಕೊಡಗಿನ (Kodagu) ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅ.17 ರಂದು ಗುರುವಾರ ಬೆಳಗ್ಗೆ 7:40 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಇದನ್ನೂ ಓದಿ: ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜೊತೆ ಚರ್ಚೆ: ಕುಮಾರಸ್ವಾಮಿ ಭರವಸೆ

    ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ‌ಸಿದ್ಧತೆ ಕಾರ್ಯಗಳ ಚರ್ಚೆ ನಡೆಸಲಾಗುತ್ತಿದೆ.

    ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.26 ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್‌ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ. ಇದುವರೆಗೂ ಕಾವೇರಿ ಭಕ್ತರ ಉತ್ಸಾಹಕ್ಕೆ ಯಾವುದೇ ಅಡ್ಡಿಯಾಗಿರಲಿಲ್ಲ. ಈ ಬಾರಿ ಬೆಳಗ್ಗೆ ತೀರ್ಥೋದ್ಭವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಗಣೇಶನನ್ನು ಕಾಂಗ್ರೆಸ್‌ ಸರ್ಕಾರ ಪೊಲೀಸ್‌ ವ್ಯಾನ್ ಕಂಬಿ ಹಿಂದೆ ಹಾಕಿದೆ:‌ ಮೋದಿ ವಾಗ್ದಾಳಿ

  • ಮಧ್ಯರಾತ್ರಿ ತೀರ್ಥರೂಪಿಣಿಯಾಗಿ ಕಾವೇರಿಯ ದರ್ಶನ – 1 ನಿಮಿಷ ಮೊದಲೇ ತೀರ್ಥೋದ್ಭವ

    ಮಧ್ಯರಾತ್ರಿ ತೀರ್ಥರೂಪಿಣಿಯಾಗಿ ಕಾವೇರಿಯ ದರ್ಶನ – 1 ನಿಮಿಷ ಮೊದಲೇ ತೀರ್ಥೋದ್ಭವ

    ಮಡಿಕೇರಿ: ಕೊಡಗಿನ ಕುಲದೇವಿ ನಾಡಿನ ಜೀವನದಿ ಕಾವೇರಿ (Cauvery) ನಿಗದಿಯಂತೆ ಕರ್ಕಾಟಕ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ದರ್ಶನ ನೀಡಿದ್ದಾಳೆ.

    ಮಂಗಳವಾರ ರಾತ್ರಿ 11 ಗಂಟೆಯಿಂದಲೇ ತಲಕಾವೇರಿಯ (Talacauvery) ಪ್ರಧಾನ ಅರ್ಚಕ ಗುರುರಾಜ್ ಆಚಾರ್ ಅವರ ನೇತೃತ್ವದಲ್ಲಿ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ ಮತ್ತು ಕುಂಕುಮಾರ್ಚನೆ ನಡೆಯಿತು. ತೀರ್ಥೋದ್ಭವದ ಸಮಯ ಹತ್ತಿರವಾಗುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಹೆಚ್ಚುತ್ತಲೇ ಇತ್ತು.   ಇದನ್ನೂ ಓದಿ: ಬ್ಯಾಟರಿ ಉತ್ಪಾದನಾ ಹಬ್ ಆಗಿ ಕರ್ನಾಟಕ – ಎನ್‌ಶ್ಯೂರ್‌ನಿಂದ 1,050 ಕೋಟಿ ರೂ. ಹೂಡಿಕೆ

    “ಉಕ್ಕಿ ಬಾ ತಾಯಿ” ಎಂದು ಕಾವೇರಿ ಮಾತೆಯನ್ನು ನೆನೆಯುತ್ತಾ ಭಜಿಸುತ್ತಿದ್ದರು. ನಿಗದಿತ ಸಮಯದ ಒಂದು ನಿಮಿಷದ ಮೊದಲೇ ಕರ್ಕಾಟಕ ಲಗ್ನದಲ್ಲಿ ರಾತ್ರಿ 1 ಗಂಟೆ 26 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ (Brahma Kundike) ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ತೀರ್ಥೋದ್ಭವಾಗುತ್ತಿದ್ದಂತೆ ತೀರ್ಥರೂಪಿಣಿಯಾದ ಕಾವೇರಿ ಮಾತೆಯನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಸ್ಥಳದಲ್ಲಿದ್ದ ಅರ್ಚಕರು ಭಕ್ತರಿಗೆ ಕಾವೇರಿ ತೀರ್ಥವನ್ನು ಪ್ರೋಕ್ಷಣೆ ಮಾಡಿದರು.

    ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಭಾಗಮಂಡಲದಿಂದ 8 ಕಿ.ಮೀ ದೂರದ ತಲಕಾವೇರಿವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿದರು. ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟ ಭಕ್ತರು ಕಾವೇರಿ ಮಾತೆಯನ್ನು ನೆನೆಯುತ್ತಾ ತಲಕಾವೇರಿ ತಲುಪಿದರು. ಕೊಡಗು ಅಷ್ಟೇ ಅಲ್ಲದೇ ಹೊರ ಜಿಲ್ಲೆ ಮತ್ತು ಹೊರ ರಾಜ್ಯ ತಮಿಳುನಾಡಿನಿಂದಲೂ ಅಪಾರ ಸಂಖ್ಯೆಯ ಭಕ್ತರು ತಲಕಾವೇರಿಗೆ ಆಗಮಿಸಿದ್ದರು.

    ಕೊಡಗು ಉಸ್ತುವಾರಿ ಸಚಿವ ಬೋಸರಾಜ್, ಮಡಿಕೇರಿ ಶಾಸಕ ಮಂಥರ್ ಗೌಡ, ವಿರಾಜಪೇಟೆ ಶಾಸಕ ಎಎಸ್ ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ ಈ ವೇಳೆ ಭಾಗಿಯಾಗಿ ತೀರ್ಥ ಕುಂಡಿಕೆಯ ಬಳಿ ನಿಂತು ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಸಚಿವ ಬೋಸರಾಜ್, ‌ ಕಾವೇರಿ ಮಾತೆ ಕೊಡಗು ಕರ್ನಾಟಕಕ್ಕೆ ಅಷ್ಟೇ ಅಲ್ಲ. ತಮಿಳುನಾಡಿಗೂ ಅನ್ನ ನೀರು ಒದಗಿಸುತ್ತಿದ್ದಾಳೆ. ಈ ಬಾರಿ ರಾಜ್ಯಕ್ಕೆ ಸಮೃದ್ಧಿ ನೀಡಲೆಂದು ಪ್ರಾರ್ಥಿಸಲಾಗಿದೆ ಎಂದರು.

    ಪ್ರತಾಪ್ ಸಿಂಹ ಮಾತಾನಾಡಿ, ಕಾವೇರಿ ಮಾತೆ ನಿಗದಿತ ಸಮಯದಲ್ಲಿ ತೀರ್ಥ ರೂಪಿಣಿಯಾಗಿ ಹರಿದ್ದಾಳೆ. ಕಾವೇರಿ ಮಾತೆ ಮತ್ತೊಂದು ಬಾರಿ ಉಕ್ಕಿ ಹರಿಯಬೇಕು. ಆಗ ಮಾತ್ರ ರಾಜ್ಯ ಸಮೃದ್ಧಿಯಾಗಿ ಇರುತ್ತದೆ ಎಂದು ತಿಳಿಸಿದರು.

    ಚಿತ್ರನಟಿ ಹರ್ಷಿಕಾ ಪೂಣಚ್ಚ, ಭುವನ್ ಪೋನ್ನಣ್ಣ ,ವಿರಾಜಪೇಟೆ ಶಾಸಕ ಎಎಸ್ ಪೊನ್ನಣ್ಣ ಭಾಗಮಂಡಲದಿಂದ ಕಾಲ್ನಡಿಗೆಯಲ್ಲಿ ತಲಕಾವೇರಿ ಗೆ ಅಗಮಿಸಿ ಕಾವೇರಿ ಮಾತೆಯ ದರ್ಶನ ಪಡೆದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅ.17ರ ಮಧ್ಯರಾತ್ರಿ 1:27ಕ್ಕೆ ತಲಕಾವೇರಿಯಲ್ಲಿ ತೀರ್ಥೋದ್ಭವ

    ಅ.17ರ ಮಧ್ಯರಾತ್ರಿ 1:27ಕ್ಕೆ ತಲಕಾವೇರಿಯಲ್ಲಿ ತೀರ್ಥೋದ್ಭವ

    ಮಡಿಕೇರಿ: ತಲಕಾವೇರಿಯಲ್ಲಿ (Talacauvery) ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ (Theerthodbhava) ಮುಹೂರ್ತ ಫಿಕ್ಸ್ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.

    ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ (Cauvery) ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಜೀವ ನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ‌ಸಿದ್ದತೆ ಕಾರ್ಯಗಳ ಚರ್ಚೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಹಳೆ ಸಂಸತ್‌ ಭವನದ ಮುಂದಿನ ಕಥೆ ಏನು?

    ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.27ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್‌ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ. ಇದುವರೆಗೂ ಕಾವೇರಿ ಭಕ್ತರ ಉತ್ಸಾಹಕ್ಕೆ ಯಾವುದೇ ಅಡ್ಡಿಯಾಗಿರಲಿಲ್ಲ. ಈ ಬಾರಿ ರಾತ್ರಿ ತೀರ್ಥೋದ್ಬವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೀವನದಿ ಕಾವೇರಿ ತೀರ್ಥ ಪ್ರಸಾದ ಇನ್ಮುಂದೆ ಭಕ್ತರ ಮನೆ ಬಾಗಿಲಿಗೆ

    ಜೀವನದಿ ಕಾವೇರಿ ತೀರ್ಥ ಪ್ರಸಾದ ಇನ್ಮುಂದೆ ಭಕ್ತರ ಮನೆ ಬಾಗಿಲಿಗೆ

    ಮಡಿಕೇರಿ: ಕನ್ನಡ ನಾಡಿನ ಜೀವನದಿ ತಲಕಾವೇರಿ (Talacauvery) ಪವಿತ್ರ ತೀರ್ಥವನ್ನು ಪಡೆಯಲು ರಾಜ್ಯ, ದೇಶದ ನಾನಾ ಭಾಗಗಳಿಂದ ಬರುವ ಭಕ್ತರಿಗೆ ಇದೀಗ ದೇವಾಲಯ ಅಡಳಿತ ಮಂಡಳಿ ಗುಡ್ ನ್ಯೂಸ್ ನೀಡಿದೆ. ಇನ್ಮುಂದೆ ಕಾವೇರಿ ಭಕ್ತರು ಕಾವೇರಿ (Cauvery) ತೀರ್ಥ ಪ್ರಸಾದವನ್ನು ಮನೆಯಲ್ಲೇ ಕುಳಿತು ಪಡೆಯಲು ಅವಕಾಶ ಕಲ್ಪಿಸಿದೆ.

    ಕರ್ನಾಟಕ, ತಮಿಳುನಾಡು ರೈತರ‌ ಪಾಲಿನ ವರದಾತೆ ಕಾವೇರಿ ಮಾತೆಗೆ ನಮಿಸಲು ಪ್ರತಿನಿತ್ಯ ರಾಜ್ಯ ಹಾಗೂ ದೇಶದ ನಾನಾ ಭಾಗಗಳಿಂದ ಅಗಮಿಸುವ ಭಕ್ತರು ಹಲವು ದಿನಗಳಿಂದ ಬೇಡಿಕೆಯೊಂದನ್ನು ಸಲ್ಲಿಸಿದ್ದರು. ಕಾವೇರಿ ಮಾತೆ ತೀರ್ಥ ಪ್ರಸಾದವನ್ನು ತಮ್ಮ ಮನೆಯಲ್ಲೇ ಸಿಕ್ಕುವಂತೆ ಮಾಡಿ ಎಂದು ಕೇಳಿಕೊಂಡಿದ್ದರು. ಇದೀಗ ತಲಕಾವೇರಿ ಹಾಗೂ ಭಗಂಡೇಶ್ವರ ದೇವಾಲಯ ಅಡಳಿತ ಮಂಡಳಿ ಕಾವೇರಿ ಭಕ್ತರಿಗೆ ತೀರ್ಥ ಪ್ರಸಾದವನ್ನು ಅನ್‌ಲೈನ್ ಮೂಲಕ ಭಕ್ತರ ಮನೆ ಬಾಗಿಲಿಗೆ ತಲುಪಿಸಲು ನಿರ್ಧಾರ ಮಾಡಿದೆ. ಇನ್ಮುಂದೆ ಕಾವೇರಿ ಭಕ್ತರು ಮನೆಯಲ್ಲೇ ಕುಳಿತು www.indiapost.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರಸಾದಕ್ಕೆ ಬುಕ್ ಮಾಡಿಕೊಳ್ಳಬಹುದಾಗಿದೆ ಎಂದು ಕೊಡಗು (Kodagu) ಜಿಲ್ಲಾಧಿಕಾರಿ ಸತೀಶ ಪ್ರಸಾದದ ಬೇಡಿಕೆ ಬಗ್ಗೆ ಮಾಹಿತಿ ‌ನೀಡಿದರು. ಇದನ್ನೂ ಓದಿ: ಮಂಡ್ಯ ಕೈ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್ ಕಾರಿಗೆ ಮೊಟ್ಟೆ ಎಸೆದ ಕಾರ್ಯಕರ್ತರು

    ಈ ಪ್ರಸಾದಕ್ಕೆ ದೇವಾಲಯ ಅಡಳಿತ ಮಂಡಳಿಯಿಂದ 300 ರೂ. ದರ ನಿಗದಿ ಮಾಡಲಾಗಿದೆ. ಪ್ರಸಾದದಲ್ಲಿ 100 ಎಂಎಲ್ ಕಾವೇರಿ ತೀರ್ಥ, 100 ಗ್ರಾಂ ಪಂಚಕಜ್ಜಾಯ, ತಲಕಾವೇರಿ ಕ್ಷೇತ್ರದ ಕುಂಕುಮ, ಭಗಂಡೇಶ್ವರ ದೇವಾಲಯದಿಂದ ಗಂಧ ಪ್ರಸಾದವನ್ನು ನೀಡಲಾಗುತ್ತದೆ. ದೇಶದಲ್ಲಿ ಎಲ್ಲೇ ಕಾವೇರಿ ಭಕ್ತರು ನೆಲೆಸಿದ್ದರೂ ಪೋಸ್ಟ್ ಆಫೀಸ್​ನಲ್ಲಿ ಈ ಪೇಮೆಂಟ್ ಮುಖಾಂತರ ಬುಕ್​ ಮಾಡಬಹುದಾಗಿದೆ. ಸ್ಪೀಡ್ ಪೋಸ್ಟ್ ಮೂಲಕ ಪ್ರಸಾದ ಡೆಲಿವರಿ ಮಾಡಲಾಗುತ್ತದೆ. ಹೆಚ್ಚಾಗಿ ಕಾವೇರಿ ನದಿಯನ್ನು ಆಶ್ರಯಿಸಿಕೊಂಡು ಇರುವ ಕರ್ನಾಟಕ, ತಮಿಳುನಾಡಿನ ಭಕ್ತರು ದೇವಾಲಯದ ಪ್ರಸಾದಕ್ಕೆ ಬೇಡಿಕೆ ಇಟ್ಟಿದ್ದರು. ಇದೀಗ ಕಾವೇರಿ ಭಕ್ತರಿಗೆ ತೀರ್ಥ ಪ್ರಸಾದ ಮನೆಯ ಅಂಗಳಕ್ಕೆ ಬರಲು ಸಿದ್ಧವಾಗಿದೆ.

    ದೇಶದ ‌ನಾನಾ ಭಾಗಗಳಲ್ಲಿ ನೆಲೆಸಿರುವ ಕಾವೇರಿ ಭಕ್ತರಿಗೆ ದೇವಾಲಯ ಅಡಳಿತ ಮಂಡಳಿಯಿಂದ ಆನ್‌ಲೈನ್ ಮೂಲಕ ಈ ಪ್ರಸಾದ ಡೆಲಿವರಿ ವ್ಯವಸ್ಥೆ ‌ಮಾಡಿರುವುದರಿಂದ, ಕಾವೇರಿ ಭಕ್ತರು ಜಿಲ್ಲಾಡಳಿತ ಹಾಗೂ ದೇವಾಲಯದ ಅಡಳಿತ ಮಂಡಳಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು: ಪ್ರತಾಪ್ ಸಿಂಹಗೆ ಸಿದ್ದು ಟಾಂಗ್

  • ಕೊಡಗಿನಲ್ಲಿ ಕಾವೇರಿ ತೀರ್ಥೋದ್ಭವ ಸಂಭ್ರಮ

    ಕೊಡಗಿನಲ್ಲಿ ಕಾವೇರಿ ತೀರ್ಥೋದ್ಭವ ಸಂಭ್ರಮ

    ಮಡಿಕೇರಿ: ಕೊಡಗಿನ (Kodagu) ಕುಲದೇವಿ ನಾಡಿನ ಜೀವನದಿ ಮಾತೆ ಕಾವೇರಿ (Cauvery) ನಿಗದಿಯಂತೆ ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ದರುಶನ ನೀಡಿದಳು. ಸಂಜೆ 5 ಯಿಂದಲೇ ಪ್ರಧಾನ ಅರ್ಚಕ ಗುರುರಾಜ್ ಆಚಾರ್ ಅವರ ನೇತೃತ್ವದಲ್ಲಿ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ ಮತ್ತು ಕುಂಕುಮಾರ್ಚನೆ ನೆರವೇರಿತು.

    ಮತ್ತೊಂದೆಡೆ ಕಾವೇರಿ ತೀರ್ಥೋದ್ಭವವನ್ನು (Theerthodbhava) ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಭಾಗಮಂಡಲದಿಂದ 8 ಕಿಮೀ ದೂರದ ತಲಕಾವೇರಿವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿದ್ರು. ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟ ಭಕ್ತರು ಕಾವೇರಿ ಮಾತೆಯನ್ನು ನೆನೆಯುತ್ತಾ ತಲಕಾವೇರಿ (Talacauvery) ತಲುಪಿದರು. ಕೊಡಗು ಅಷ್ಟೇ ಅಲ್ಲದೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯ ತಮಿಳುನಾಡಿನಿಂದಲೂ ಅಪಾರ ಸಂಖ್ಯೆಯ ಭಕ್ತರು (Devotees) ತಲಕಾವೇರಿಗೆ ಆಗಮಿಸಿದ್ದರು. ಇದನ್ನೂ ಓದಿ: AICC ಅಧ್ಯಕ್ಷೀಯ ಚುನಾವಣೆಯಲ್ಲಿ 96ರಷ್ಟು ಮತದಾನ- ಕನ್ನಡಿಗ ಖರ್ಗೆ ಪಟ್ಟಕ್ಕೇರೋದು ಫಿಕ್ಸ್

    ತೀರ್ಥೋದ್ಭವದ ಸಮಯ ಹತ್ತಿರವಾದಂತೆ ಭಕ್ತರ ಹರ್ಷೋದ್ಘಾರ ಹೆಚ್ಚುತ್ತಲೇ ಇತ್ತು. ಉಕ್ಕಿ ಬಾ ತಾಯೆ ಎಂದು ಕಾವೇರಿ ಮಾತೆಯನ್ನು ನೆನೆಯುತ್ತಾ ಭಜಿಸುತ್ತಿದ್ದರು. ನಿಗದಿತ ಸಮಯದಂತೆ ಕಾವೇರಿ ಮಾತೆ ಮೇಷ ಲಗ್ನದಲ್ಲಿ ಸಂಜೆ 7 ಗಂಟೆ 22 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ತೀರ್ಥೋದ್ಭವಾಗುತ್ತಿದ್ದಂತೆ ತೀರ್ಥರೂಪಿಣಿಯಾದ ಕಾವೇರಿ ಮಾತೆಯನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಸ್ಥಳದಲ್ಲಿದ್ದ ಅರ್ಚಕರು ಭಕ್ತರಿಗೆ ಕಾವೇರಿ ತೀರ್ಥವನ್ನು ಪ್ರೋಕ್ಷಣೆ ಮಾಡಿದರು. ಕಾವೇರಿ ಮಾತೆಯನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು ಭಕ್ತಿಭಾವ ಮೆರೆದು ಪುನೀತರಾದರು.

    ಕಾವೇರಿ ತೀರ್ಥೋದ್ಭವಕ್ಕೆ ಕೊಡಗು ಉಸ್ತುವಾರಿ ಸಚಿವ ಬಿಸಿ ನಾಗೇಶ್, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಅವರು ಕಾವೇರಿ ತೀರ್ಥೋದ್ಭವದಲ್ಲಿ ಭಾಗವಹಿಸಿದರು. ತೀರ್ಥ ಕುಂಡಿಕೆಯ ಬಳಿ ನಿಂತು ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಸಚಿವ ಬಿಸಿ ನಾಗೇಶ್, ಕಾವೇರಿ ಮಾತೆ ಕೊಡಗು ಕರ್ನಾಟಕಕ್ಕೆ ಅಷ್ಟೇ ಅಲ್ಲ. ತಮಿಳುನಾಡಿಗೂ ಅನ್ನ ನೀರು ಒದಗಿಸುತ್ತಿದ್ದಾಳೆ. ಇದನ್ನೂ ಓದಿ: Rx ಬದಲಿಗೆ ಪ್ರಿಸ್ಕ್ರಿಪ್ಷನ್‍ನಲ್ಲಿ ‘ಶ್ರೀ ಹರಿ’ ಅಂತ ಹಿಂದಿಯಲ್ಲಿ ಬರೆದ ವೈದ್ಯ

    ನಮ್ಮ ರಾಜ್ಯ ಮಾತ್ರವಲ್ಲದೆ ಪಕ್ಕದ ರಾಜ್ಯದ ಕೇರಳ ಹಾಗೂ ತಮಿಳುನಾಡಿಗೂ ನೀರು ಹರಿಸುತ್ತಾಳೆ. ಹತ್ತಿರದಿಂದ ಈ ಬಾರೀ ಕಾವೇರಿಯ ತೀರ್ಥೋದ್ಬವ ನೋಡಿ ಖುಷಿಯಾಗಿದೆ. ಕಳೆದ ಹಲವು ವರ್ಷಗಳ ಮಳೆಯಿಂದ ಸಾಕಷ್ಟು ಅನಾಹುತ ಅಗಿತ್ತು. ಆದರೆ ಈ ಬಾರಿ ಶಾಂತ ರೀತಿಯಲ್ಲಿ ಮಳೆ ಕಡಿಮೆ ಅಗಿರುವುದರಿಂದ ಕೊಡಗಿನಲ್ಲಿ ಯಾವುದೇ ಅನಾಹುತ ಇಲ್ಲದೇ ಮಳೆಗಾಲ ಕಳೆದಿದೆ. ಇನ್ನೂ ಮುಂದೆಯು ಇದೇ ರೀತಿ ಶಾಂತ ರೀತಿಯಲ್ಲಿ ಇರಲಿ ಎಂದು ಮಾತೆ ಕಾವೇರಿಯಲ್ಲಿ ಬೇಡಿಕೊಂಡಿರುವುದಾಗಿ ತಿಳಿಸಿದರು.

    ಭಕ್ತರ ಹರ್ಷಕ್ಕೆ ಪಾರವೇ ಇರಲಿಲ್ಲ. ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಂದಾಗಿ ತೀರ್ಥೋದ್ಭವದಲ್ಲಿ ಭಾಗವಹಿಸಲು ಭಕ್ತರಿಗೆ ಅವಕಾಶ ಇರಲಿಲ್ಲ. ಈ ಬಾರಿ ಜಿಲ್ಲಾಡಳಿತ ಕಾವೇರಿ ಕುಡಿಕೆ ಬಳಿ ಇರುವ ಕಲ್ಯಾಣಿಯಲ್ಲಿ ಸ್ನಾನ ಮಾಡುವುದಕ್ಕೆ ಮುಕ್ತ ಅವಕಾಶ ನೀಡಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

    ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

    ಮಡಿಕೇರಿ: ಪ್ರತೀ ವರ್ಷದಂತೆ ಈ ವರ್ಷವೂ ಜಿಲ್ಲೆಯ ತಲಕಾವೇರಿಯಲ್ಲಿ(Talacauvery) ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ(Theerthodbhava) ಮುಹೂರ್ತ ಫಿಕ್ಸ್ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ಬ್ರಹ್ಮಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಸೋಮವಾರ ರಾತ್ರಿ 7:21ಕ್ಕೆ ಮೇಷ ಲಗ್ನದಲ್ಲಿ ಕಾವೇರಿ(Cauvery) ತೀರ್ಥ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾಳೆ.

    ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ‌ಸಿದ್ದತೆ ಕಾರ್ಯಗಳ ಚರ್ಚೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮೋದಿ ಹುಟ್ಟುಹಬ್ಬ – ನಾಳೆ ಹುಟ್ಟುವ ಮಕ್ಕಳಿಗೆ ಚಿನ್ನದುಂಗುರ ನೀಡಲಿದೆ ಬಿಜೆಪಿ

    ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.27ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್‌ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ.

    ಇಲ್ಲಿಯವರೆಗೆ ಕಾವೇರಿ ಭಕ್ತರ ಉತ್ಸಾಹಕ್ಕೆ ಯಾವುದೇ ಅಡ್ಡಿಯಾಗಿರಲಿಲ್ಲ. ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾದಿಂದ ಕಾವೇರಿ ಜಾತ್ರೆ ಸಂಪೂರ್ಣ ಕಳೆಗುಂದಿತ್ತು. ಹೆಚ್ಚಿನ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿರಲಿಲ್ಲ. ಆದರೆ ಈ ಬಾರಿ ರಾತ್ರಿ ತೀರ್ಥೋದ್ಬವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ.

    Live Tv
    [brid partner=56869869 player=32851 video=960834 autoplay=true]