ಕಾಬೂಲ್: ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಪಾಕಿಸ್ತಾನದ (Pakistan) 58 ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದು ಅಫ್ಘಾನಿಸ್ತಾನ (Afgainistan) ಹೇಳಿಕೊಂಡಿದೆ.
ಇಸ್ಲಾಮಿಕ್ ಎಮಿರೇಟ್ ಪಡೆಗಳು ವಿವಾದಿತ ಡುರಾಂಡ್ ಗಡಿ ರೇಖೆಯ ಉದ್ದಕ್ಕೂ ಪಾಕಿಸ್ತಾನಿ ಭದ್ರತಾ ಪಡೆಗಳ ವಿರುದ್ಧ ಕಾರ್ಯಾಚರಣೆ ನಡೆಸಿವೆ. ಇದರಿಂದಾಗಿ ಗಮನಾರ್ಹ ಸಾವುನೋವುಗಳು ಸಂಭವಿಸಿವೆ ಎಂದು ಅಫ್ಘಾನಿಸ್ತಾನ ತಾಲಿಬಾನ್ (Taliban) ವಕ್ತಾರ ಜಬಿಹುಲ್ಲಾ ಮುಜಾಹಿದ್ ಭಾನುವಾರ ಹೇಳಿದ್ದಾರೆ.
ಕಾರ್ಯಾಚರಣೆಯ ಸಮಯದಲ್ಲಿ 58 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ. ಹಲವಾರು ಶಸ್ತ್ರಾಸ್ತ್ರಗಳನ್ನು ತಾತ್ಕಾಲಿಕವಾಗಿ ವಶಪಡಿಸಿಕೊಳ್ಳಲಾಗಿದೆ ಮತ್ತು 20 ಪಾಕಿಸ್ತಾನಿ ಭದ್ರತಾ ಠಾಣೆಗಳನ್ನು ನಾಶಪಡಿಸಲಾಗಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: 12 ಪಾಕ್ ಸೈನಿಕರನ್ನು ಹತ್ಯೆ – ಅಫ್ಘಾನ್ ಮೇಲೆ ಮತ್ತೆ ಏರ್ಸ್ಟ್ರೈಕ್
د افغانستان اسلامي امارت ویاند، ذبیح الله مجاهد وايي، د تېرې شپې په عملیاتو کې یې ۵۸ پاکستاني پوځيان وژلي او ۳۰ نور یې ټپیان کړي دي.#طلوعنیوزpic.twitter.com/eoBJ57dSNS
ಅಫ್ಘಾನ್ ಕಡೆಯಿಂದ ಒಂಬತ್ತು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 16 ಜನರು ಗಾಯಗೊಂಡಿದ್ದಾರೆ. ಕತಾರ್ ಮತ್ತು ಸೌದಿ ಅರೇಬಿಯಾದ ಮನವಿಯ ಮೇರೆಗೆ ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆಯನ್ನು ನಿಲ್ಲಿಸಲಾಯಿತು ಎಂದು ಅವರು ಹೇಳಿದರು.
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯವು ಇಸ್ಲಾಮಿಕ್ ಸ್ಟೇಟ್ ಅಂಗಸಂಸ್ಥೆ ಐಸಿಸ್-ಕೆಗಾಗಿ ತರಬೇತಿ ಕೇಂದ್ರಗಳನ್ನು ಹೊಂದಿದೆ ಎಂದು ಮುಜಾಹಿದ್ ಆರೋಪಿಸಿದ್ದಾರೆ.
ಇರಾನ್ ಮತ್ತು ಮಾಸ್ಕೋದಲ್ಲಿ ದಾಳಿಗಳನ್ನು ಈ ಕೇಂದ್ರಗಳಿಂದಲೇ ನಡೆದಿದೆ ಎಂದು ನಮ್ಮ ತನಿಖೆಯಿಂದ ತಿಳಿದುಬಂದಿದೆ. ಅಫ್ಘಾನಿಸ್ತಾನದಲ್ಲಿ ಇತ್ತೀಚಿನ ದಾಳಿಗಳನ್ನು ಸಹ ಈ ನೆಲೆಗಳಿಂದಲೇ ಯೋಜಿಸಲಾಗಿತ್ತು. ಪ್ರಮುಖ ಐಸಿಸ್-ಕೆ ಸದಸ್ಯರನ್ನು ನಮಗೆ ಹಸ್ತಾಂತರಿಸುವಂತೆ ಪಾಕಿಸ್ತಾನ ಸರ್ಕಾರಕ್ಕೆ ಸೂಚಿಸಿದರು.
ಪಾಕಿಸ್ತಾನವು ಕಾಬೂಲ್ಗೆ ನಿಯೋಗವನ್ನು ಕಳುಹಿಸಲು ಪ್ರಯತ್ನಿಸಿತ್ತು. ಆದರೆ ಗುರುವಾರ ರಾತ್ರಿ ನಡೆಸಿದ ಪಾಕಿಸ್ತಾನಿ ವೈಮಾನಿಕ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇಸ್ಲಾಮಿಕ್ ಎಮಿರೇಟ್ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ ಎಂದು ತಾಲಿಬಾನ್ ವಕ್ತಾರರು ಹೇಳಿದ್ದಾರೆ.
– ಉಗ್ರರ ಗುಂಪುಗಳನ್ನು ಅಫ್ಘಾನಿಸ್ತಾನ ನಿರ್ನಾಮ ಮಾಡಿದೆ ಎಂದ ಮುತ್ತಕಿ
ನವದೆಹಲಿ: ಭಯೋತ್ಪಾದಕ ಗುಂಪುಗಳನ್ನು ಅಫ್ಘಾನಿಸ್ತಾನ ನಿರ್ನಾಮ ಮಾಡಿದೆ. ಪಾಕಿಸ್ತಾನ ಕೂಡ ಅದೇ ಶಾಂತಿಯ ಮಾರ್ಗವನ್ನು ಅನುಸರಿಸಬೇಕು ಎಂದು ಭಾರತದ ನೆಲದಿಂದ ಪಾಕ್ಗೆ ತಾಲಿಬಾನ್ (Taliban) ಸಲಹೆ ನೀಡಿದೆ.
ಅಫ್ಘಾನಿಸ್ತಾನದ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಶುಕ್ರವಾರ ಭಾರತಕ್ಕೆ ಭೇಟಿ ನೀಡಿದ್ದರು. ಇದೇ ವೇಳೆ, ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ನಂತಹ ಭಯೋತ್ಪಾದಕ ಗುಂಪುಗಳು ಅಫ್ಘಾನ್ ನೆಲದಿಂದ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿವೆ. ಆದರೆ, ಕಳೆದ ನಾಲ್ಕು ವರ್ಷಗಳಲ್ಲಿ ತಾಲಿಬಾನ್ ಎಲ್ಲಾ ಭಯೋತ್ಪಾದಕರನ್ನು ನಿರ್ನಾಮ ಮಾಡಿದೆ ಎಂದು ಮುತ್ತಕಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಬೂಲ್ ರಾಯಭಾರ ಕಚೇರಿ 4 ವರ್ಷದ ಬಳಿಕ ಪುನಾರಂಭಕ್ಕೆ ಭಾರತ ನಿರ್ಧಾರ – ಎಸ್.ಜೈಶಂಕರ್ ಘೋಷಣೆ
ಭಯೋತ್ಪಾದಕರಲ್ಲಿ ಒಬ್ಬರೂ ಅಫ್ಘಾನಿಸ್ತಾನದಲ್ಲಿಲ್ಲ. ಅಫ್ಘಾನಿಸ್ತಾನದಲ್ಲಿ ಒಂದು ಇಂಚು ಭೂಮಿಯೂ ಅವರ ನಿಯಂತ್ರಣದಲ್ಲಿಲ್ಲ. ನಾವು (2021 ರಲ್ಲಿ) ಕಾರ್ಯಾಚರಣೆ ನಡೆಸಿದ ಅಫ್ಘಾನಿಸ್ತಾನವು ಬದಲಾಗಿದೆ ಎಂದು ಪಾಕಿಸ್ತಾನಿ ಭಯೋತ್ಪಾದಕ ಗುಂಪುಗಳು ಈ ಹಿಂದೆ ಅಫ್ಘಾನ್ ಮಣ್ಣನ್ನು ಕಾರ್ಯಾಚರಣೆಗೆ ಬಳಸುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಮುತ್ತಕಿ ಪ್ರತಿಕ್ರಿಯಿಸಿದ್ದಾರೆ.
ಗಡಿಯಾಚೆಗಿನ ಭಯೋತ್ಪಾದನೆಯ ಬಲಿಪಶುವಾಗಿರುವ ಭಾರತೀಯ ನೆಲದಿಂದ ಅವರು ಪಾಕಿಸ್ತಾನಕ್ಕೆ ಮುತ್ತಕಿ ಒಂದು ಸಂದೇಶವನ್ನು ನೀಡಿದ್ದಾರೆ. ‘ಶಾಂತಿಗಾಗಿ ಅಫ್ಘಾನಿಸ್ತಾನ ಮಾಡಿದಂತೆ ಇತರ ದೇಶಗಳು ಸಹ ಅಂತಹ ಭಯೋತ್ಪಾದಕ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳಲಿ’ ಎಂದು ಕರೆ ನೀಡಿದ್ದಾರೆ.
ಭಾರತಕ್ಕೆ ಮುತ್ತಕಿ ಅವರ ಭೇಟಿಯು ಉಭಯ ದೇಶಗಳ ರಾಜತಾಂತ್ರಿಕ ಸಂಬಂಧಗಳನ್ನು ಪುನಸ್ಥಾಪಿಸಲು ಸಹಕಾರಿಯಾಗಿದೆ. ಭಾರತವು ಕಾಬೂಲ್ನಲ್ಲಿರುವ ತನ್ನ ತಾಂತ್ರಿಕ ಮಿಷನ್ ಅನ್ನು ರಾಯಭಾರ ಕಚೇರಿಯಾಗಿ ಮೇಲ್ದರ್ಜೆಗೇರಿಸಲಿದೆ ಎಂದು ಮುತ್ತಕಿ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಜೈಶಂಕರ್ ತಿಳಿಸಿದ್ದಾರೆ.
– ಅಫ್ಘಾನ್ನಲ್ಲಿ ತಾಲಿಬಾನ್ ಅಧಿಕಾರಕ್ಕೆ ಏರಿದ ಬಳಿಕ ಮೊದಲ ಭೇಟಿ
ನವದೆಹಲಿ: ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ (Amir Khan Muttaqi) ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ (Afghanistan) ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತಾಕಿ ಅವರಿಗೆ ಅಂತರರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಿದ್ದರಿಂದ ಮುತ್ತಕಿ ಭಾರತಕ್ಕೆ ಬಂದಿದ್ದಾರೆ. ಭದ್ರತಾ ಮಂಡಳಿ ಅ.9 ಮತ್ತು 16 ರ ನಡುವೆ ಭಾರತಕ್ಕೆ (India) ಭೇಟಿ ನೀಡಲು ಅವಕಾಶ ನೀಡಿದೆ.
2021ರ ಆಗಸ್ಟ್ನಲ್ಲಿ ತಾಲಿಬಾನ್ (Taliban) ಅಧಿಕಾರ ವಶಪಡಿಸಿಕೊಂಡ ನಂತರ ಮೊದಲ ಉನ್ನತ ಮಟ್ಟದ ಸಭೆ ನಡೆಯಲಿರುವ ಕಾರಣ ಭಾರತ-ಅಫ್ಘಾನ್ ಸಂಬಂಧದ ಹೊಸ ಅಧ್ಯಾಯ ತೆರೆಯಲಿದೆ.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಹಿರಿಯ ಐಎಫ್ಎಸ್ ಅಧಿಕಾರಿ ಜೆ.ಪಿ. ಸಿಂಗ್ ಸೇರಿದಂತೆ ಭಾರತೀಯ ಅಧಿಕಾರಿಗಳು ಮುತ್ತಕಿ ಮತ್ತು ಇತರ ತಾಲಿಬಾನ್ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಆಗಾಗ ದುಬೈನಂತಹ ತಟಸ್ಥ ಸ್ಥಳಗಳಲ್ಲಿ ಭೇಟಿಯಾಗುತ್ತಿದ್ದರು.
ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ದುಬೈನಲ್ಲಿ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರನ್ನು ಭೇಟಿಯಾಗಿದ್ದರು. ಭಾರತವು ಅಫ್ಘಾನಿಸ್ತಾನಕ್ಕೆ ನೀಡುತ್ತಿರುವ ಮಾನವೀಯ ನೆರವು, ವಿಶೇಷವಾಗಿ ಆರೋಗ್ಯ ವಲಯವನ್ನು ಬಲಪಡಿಸುವುದು ಮತ್ತು ನಿರಾಶ್ರಿತರ ಪುನರ್ವಸತಿಯನ್ನು ಬೆಂಬಲಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.
ಕೋವಿಡ್ ಸಮಯದಲ್ಲಿ ಭಾರತ ಉಚಿತವಾಗಿ ಲಸಿಕೆಯನ್ನು ನೀಡಿತ್ತು. ಈಗಲೂ ಭಾರತ ಅಫ್ಘಾನಿಸ್ತಾನಕ್ಕೆ ಆಹಾರ ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ.
ಭಾರತವು ಪಾಕಿಸ್ತಾನದ ವಿರುದ್ಧ ಯಶಸ್ವಿಯಾಗಿ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ಮೇ 15 ರಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮುತ್ತಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಇದು 2021 ರ ನಂತರದ ಮೊದಲ ಸಚಿವ ಮಟ್ಟದ ಸಂಪರ್ಕವಾಗಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ತಾಲಿಬಾನ್ ಖಂಡಿಸಿದ್ದಕ್ಕಾಗಿ ಜೈಶಂಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಭಾರತ ಮತ್ತು ಅಫ್ಘಾನ್ ಜನರೊಂದಿಗಿನ ಸಾಂಪ್ರದಾಯಿಕ ಸ್ನೇಹವನ್ನು ಪುನರುಚ್ಚರಿಸಿದರು.
ಕಾಬೂಲ್: ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಇದೇ ಅ.9 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ.
2021ರ ಆಗಸ್ಟ್ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಶಪಡಿಸಿಕೊಂಡ ನಂತರ ಭಾರತಕ್ಕೆ ಮೊದಲ ಉನ್ನತ ಮಟ್ಟದ ಭೇಟಿಯಾಗಲಿದೆ. ಇದು ಭಾರತ-ತಾಲಿಬಾನ್ ಸಂಬಂಧದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಿದೆ.
ಮುತಾಕಿ ಅವರಿಗೆ ಅಂತರರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಲಾಗಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ದೃಢಪಡಿಸಿದೆ. ಇದರಿಂದಾಗಿ ಅವರು ಅ.9 ಮತ್ತು 16 ರ ನಡುವೆ ಭಾರತಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ಭಾರತೀಯ ರಾಜತಾಂತ್ರಿಕ ವಲಯಗಳು ತಿಂಗಳುಗಳಿಂದ ಈ ಕ್ಷಣಕ್ಕಾಗಿ ತಯಾರಿ ನಡೆಸುತ್ತಿವೆ. ಜನವರಿಯಿಂದ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಹಿರಿಯ ಐಎಫ್ಎಸ್ ಅಧಿಕಾರಿ ಜೆ.ಪಿ. ಸಿಂಗ್ ಸೇರಿದಂತೆ ಭಾರತೀಯ ಅಧಿಕಾರಿಗಳು ಮುತ್ತಕಿ ಮತ್ತು ಇತರ ತಾಲಿಬಾನ್ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಆಗಾಗ್ಗೆ ದುಬೈನಂತಹ ತಟಸ್ಥ ಸ್ಥಳಗಳಲ್ಲಿ ಭೇಟಿಯಾಗುತ್ತಾರೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ದುಬೈನಲ್ಲಿ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರನ್ನು ಭೇಟಿಯಾಗಿದ್ದರು. ಭಾರತವು ಅಫ್ಘಾನಿಸ್ತಾನಕ್ಕೆ ನೀಡುತ್ತಿರುವ ಮಾನವೀಯ ನೆರವು, ವಿಶೇಷವಾಗಿ ಆರೋಗ್ಯ ವಲಯವನ್ನು ಬಲಪಡಿಸುವುದು ಮತ್ತು ನಿರಾಶ್ರಿತರ ಪುನರ್ವಸತಿಯನ್ನು ಬೆಂಬಲಿಸುವ ಬಗ್ಗೆ ಚರ್ಚೆ ನಡೆಸಲಾಯಿತು.
ಭಾರತವು ಪಾಕಿಸ್ತಾನದ ವಿರುದ್ಧ ಯಶಸ್ವಿಯಾಗಿ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ಮೇ 15 ರಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮುತ್ತಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಇದು 2021 ರ ನಂತರದ ಮೊದಲ ಸಚಿವ ಮಟ್ಟದ ಸಂಪರ್ಕವಾಗಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ತಾಲಿಬಾನ್ ಖಂಡಿಸಿದ್ದಕ್ಕಾಗಿ ಜೈಶಂಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಭಾರತ ಮತ್ತು ಅಫ್ಘಾನ್ ಜನರೊಂದಿಗಿನ ಸಾಂಪ್ರದಾಯಿಕ ಸ್ನೇಹವನ್ನು ಪುನರುಚ್ಚರಿಸಿದರು.
ಮುಖ್ಯಾಂಶಗಳು * ಕಂದಹಾರ್ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅಮೆರಿಕಕ್ಕೆ ಬಾಗ್ರಾಮ್ ವಾಯುನೆಲೆಯನ್ನು ಮರಳಿ ನೀಡಲು ತಾಲಿಬಾನ್ ನಿರಾಕರಿಸಿದೆ. * ಬಾಗ್ರಾಮ್ನ್ನು ಮರಳಿ ಪಡೆಯಲು ಪ್ರಯತ್ನಿಸಿದರೆ ಯುದ್ಧಕ್ಕೆ ಸಂಪೂರ್ಣವಾಗಿ ಸಿದ್ಧರಾಗುವುದಾಗಿ ತಾಲಿಬಾನ್ ಪ್ರತಿಜ್ಞೆ ಮಾಡಿದೆ. * ಪಾಕಿಸ್ತಾನ, ಅಮೆರಿಕಕ್ಕೆ ಸಹಕರಿಸಿದರೆ ʻಶತ್ರು ರಾಷ್ಟ್ರʼ ಪಟ್ಟಿಗೆ ಸೇರಿಸುವ ಎಚ್ಚರಿಕೆ * ಬಾಗ್ರಾಮ್ ವಿಚಾರದಲ್ಲಿ ಟ್ರಂಪ್ ಬೆದರಿಕೆ ಉದ್ವಿಗ್ನ ಪರಿಸ್ಥಿತಿ ಉಂಟುಮಾಡುವ ಸಾಧ್ಯತೆ ಇದೆ. * ಇದೆಲ್ಲದರ ನಡುವೆ ದೋಹಾ ಒಪ್ಪಂದವನ್ನುಅಮೆರಿಕಕ್ಕೆ ತಾಲಿಬಾನ್ ನೆನಪಿಸಿದೆ.
ದುರ್ಯೋದನ ಪಾಂಡವರಿಗೆ ಐದು ಸೂಜಿ ಮೊನೆ ಚುಚ್ಚುವಷ್ಟು ಜಾಗವನ್ನೂ ಕೊಡಲ್ಲ ಎಂದ ಹಾಗೇ ಬಾಗ್ರಾಮ್ ವಾಯುನೆಲೆ (Bagram Air Base) ಕೇಳಿದ ಅಮೆರಿಕ ಅಧ್ಯಕ್ಷ ಟ್ರಂಪ್ಗೆ (Donald Trump) ತಾಲಿಬಾನ್ ಸರ್ಕಾರ ಒಂದಿಂಚೂ ಜಾಗವನ್ನು ಕೊಡಲ್ಲ ಎಂದು ಎಚ್ಚರಿಸಿದೆ. ಈ ಮೂಲಕ ವಿಶ್ವ ಮಟ್ಟದಲ್ಲಿ ದೊಡ್ಡಣ್ಣ ಎಂದು ಬೀಗುತ್ತಿರುವ ಅಮೆರಿಕಕ್ಕೆ ತೀವ್ರ ಮುಖಭಂಗವಾಗಿದೆ. ಇದರ ಬೆನ್ನಲ್ಲೇ ಅಮೆರಿಕ ಏನಾದ್ರೂ ಕೆಣಕಿದ್ರೆ ಅದಕ್ಕೂ ಸೈ ಎನ್ನುವಂತೆ ಯುದ್ಧಕ್ಕೂ ತಾಲಿಬಾನ್ ಸಿದ್ಧವಾಗಿಯೇ ಇದೆ.
ವಾಯುನೆಲೆ ಕೇಳಿದ ಅಮೆರಿಕಕ್ಕೆ ಅಫ್ಘಾನಿಸ್ತಾನದ (Afghanistan) ತಾಲಿಬಾನ್ ಸರ್ಕಾರದ (Taliban Government) ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ (Aamir Khan Muttaki) ಅವರು, ತಮ್ಮ ದೇಶದ ಸಾರ್ವಭೌಮತ್ವದ ವಿಷಯದಲ್ಲಿ ಯಾವುದೇ ರಾಜಿಗೂ ಸಿದ್ಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾವು ನಮ್ಮ ಭೂಮಿಯ ಒಂದೇ ಒಂದು ತುಂಡನ್ನೂ ಯಾರಿಗೂ ಬಿಟ್ಟುಕೊಡುವುದಿಲ್ಲ ಎನ್ನುವ ಮೂಲಕ ಟ್ರಂಪ್ ವಿರುದ್ಧ ಗುಡುಗಿದ್ದಾರೆ. ಇದರ ಜೊತೆ ಪಾಕಿಸ್ತಾನವೇನಾದ್ರೂ ಅಮೆರಿಕದ ಜೊತೆ ಕೈಜೊಡಿಸಿದ್ರೆ ಅದನ್ನು ಶತ್ರು ದೇಶವಾಗಿ ಘೋಷಿಸುವುದಾಗಿ ಅಫ್ಘಾನ್ ಎಚ್ಚರಿಸಿದೆ. ಇದನ್ನೂ ಓದಿ: ಒಂದಿಂಚು ಜಾಗವನ್ನೂ ಬಿಡಲ್ಲ – ಬಾಗ್ರಾಮ್ ವಾಯುನೆಲೆ ಹಿಂದಿರುಗಿಸುವ ಟ್ರಂಪ್ ಬೇಡಿಕೆ ತಿರಸ್ಕರಿಸಿದ ತಾಲಿಬಾನ್
ಅಫ್ಘಾನಿಸ್ತಾನದಿಂದ ಸೇನೆ ಹಿಂಪಡೆದ ಬಳಿಕ ಬಾಗ್ರಾಮ್ ವಾಯುನೆಲೆಯನ್ನು ಮರಳಿ ಪಡೆಯಲು ಅಮೆರಿಕ ಅಧ್ಯಕ್ಷ ಟ್ರಂಪ್ ಮುಂದಾಗಿದ್ದಾರೆ. ಈ ನೆಲೆಯನ್ನು ಮರಳಿಸದಿದ್ದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಅಮೆರಿಕದ ಬೆದರಿಕೆಗೆ ತಾಲಿಬಾನ್ ಯಾವುದೇ ಸೊಪ್ಪು ಹಾಕದೇ, ಮುಲಾಜಿಲ್ಲದೇ ಕೊಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಅಮೆರಿಕಕ್ಕೆ ಈ ವಾಯುನೆಲೆ ಏಕೆ ಮುಖ್ಯ? ಈ ವಾಯುನೆಲೆಯನ್ನು ಅಮೆರಿಕ ನಿರ್ಮಾಣ ಮಾಡಿದ್ದು, ವಿಶ್ವದ ಶಕ್ತಿಶಾಲಿ ಪ್ರಮುಖ ವಾಯುನೆಲೆಗಳಲ್ಲಿ ಒಂದಾಗಿದೆ. ಇಲ್ಲಿ ಸೇನೆಗೆ ಬೇಕಾದ ಎಲ್ಲಾ ಮೂಲ ಸೌಕರ್ಯಗಳು ಇದ್ದು, ರಷ್ಯಾ ಮತ್ತು ಚೀನಾ ಮೇಲೆ ಅಮೆರಿಕಕ್ಕೆ ಕಣ್ಣಿಡಲು ಇದು ಮುಖ್ಯವಾಗಿದೆ.
ಸುಮಾರು 20 ವರ್ಷಗಳ ಕಾಲ ಅಮೆರಿಕ ಇಲ್ಲಿ ಮಿಲಿಟರಿಯನ್ನು ಇರಿಸಿ ನಿಯಂತ್ರಣದಲ್ಲಿಟ್ಟುಕೊಂಡಿತ್ತು. ತನ್ನ ಸೇನಾ ಪಡೆಯನ್ನು ಸಂಪೂರ್ಣವಾಗಿ ಹಿಂಪಡೆದುಕೊಂಡಿದ್ದ ಅಮೆರಿಕ ಮತ್ತೆ ವಾಯುನೆಲೆಯನ್ನು ಮರಳಿ ಕೇಳುತ್ತಿದೆ. ಈ ಬೇಡಿಕೆಯನ್ನು ತಾಲಿಬಾನ್ ಸಾರಾಸಗಟಾಗಿ ತಿರಸ್ಕರಿಸಿದೆ. ಇದು ಅಮೆರಿಕ ಹಾಗೂ ತಾಲಿಬಾನ್ ಮಧ್ಯೆ ಯುದ್ಧದ ಭೀತಿಯನ್ನು ಹೆಚ್ಚಿಸಿದೆ. ಆದರೂ ಸಹ ತಾಲಿಬಾನ್ ಮಾತ್ರ ಇಟ್ಟ ಹೆಜ್ಜೆ ಹಿಂದಿಡಲ್ಲ ಎಂದು ಧೈರ್ಯವಾಗಿ ಹೇಳಿಕೊಂಡಿದೆ.
ಟ್ರಂಪ್ ತಾಲಿಬಾನ್ಗೆ ಹೇಳಿದ್ದೇನು? ವಾಯುನೆಲೆಯನ್ನು ಶೀಘ್ರದಲ್ಲೇ ಮರಳಿ ಪಡೆಯಲು ಬಯಸಿದ್ದೇವೆ. ಒಂದು ವೇಳೆ ಇದಕ್ಕೆ ತಾಲಿಬಾನ್ ಒಪ್ಪದಿದ್ದರೆ ನಾನು ಏನು ಮಾಡಲಿದ್ದೇನೆ ಎಂಬುದನ್ನು ನೀವೇ ನೋಡಲಿದ್ದೀರಿ ಎಂದು ಟ್ರಂಪ್ ಬೆದರಿಕೆ ಹಾಕಿದ್ದಾರೆ.
ಅಮೆರಿಕದ ಪ್ರಭಾವ ಮರುಸ್ಥಾಪನೆಗೆ ಬಾಗ್ರಾಮ್ ಏಕೆ ಮುಖ್ಯ? ಬಾಗ್ರಾಮ್ ವಾಯುನೆಲೆ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಸಮೀಪವೇ ಇದೆ. ಇದು ಇರಾನ್, ಪಾಕಿಸ್ತಾನ, ಚೀನಾದ ಕ್ಸಿನ್ಜಿಯಾಂಗ್ ಪ್ರಾಂತ್ಯ ಮತ್ತು ಮಧ್ಯ ಏಷ್ಯಾದ ನಡುವಿನ ಪ್ರಮುಖ ಕೇಂದ್ರವಾಗಿದೆ. ಈ ಪ್ರದೇಶದಲ್ಲಿ ತನ್ನ ಹಿಡಿತದಲ್ಲಿದ್ದರೆ ಅಮೆರಿಕದ ಪ್ರಭಾವ ಮರುಸ್ಥಾಪನೆಗೊಳ್ಳಲಿದೆ ಎಂಬುದು ಟ್ರಂಪ್ ಲೆಕ್ಕಾಚಾರ.
ದೋಹಾ ಒಪ್ಪಂದ ಇದೆಲ್ಲದರ ನಡುವೆ ತಾಲಿಬಾನ್ ಸರ್ಕಾರ ಅಮೆರಿಕಕ್ಕೆ ದೋಹಾ ಒಪ್ಪಂದವನ್ನು ನೆನಪಿಸಿದೆ. 2020ರಲ್ಲಿ ಅಮೆರಿಕ ಮತ್ತು ತಾಲಿಬಾನ್ ನಡುವೆ ನಡೆದ ಒಪ್ಪಂದದ ಪ್ರಕಾರ, ಅಮೆರಿಕವು ಅಫ್ಘಾನಿಸ್ತಾನದ ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವುದಾಗಿ ಮತ್ತು ಅದರ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಒಪ್ಪಿಕೊಂಡಿತ್ತು.
ಪಾಕ್ಗೂ ಎಚ್ಚರಿಕೆ ನೀಡಿದ ತಾಲಿಬಾನ್ ಬಾಗ್ರಾಮ್ ವಾಯುನೆಲೆ ವಿಚಾರವಾಗಿ ಅಮೆರಿಕಕ್ಕೆ ಪಾಕಿಸ್ತಾನವೇನಾದರೂ ಸಹಾಯ ಮಾಡಿದರೆ ಅದನ್ನು ಶತ್ರುರಾಷ್ಟ್ರವೆಂದು ಪರಿಗಣಿಸುವುದಾಗಿ ತಾಲಿಬಾನ್ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ ಹಾಗೂ ಅಮೆರಿಕ ನಡುವಿನ ಸಂಬಂಧ ವೃದ್ಧಿಗೊಂಡಿದೆ. ಇದು ಅಲ್ಲಿನ ಖನಿಜ ಮತ್ತು ಕಚ್ಚಾ ತೈಲದ ಮೇಲೆ ಅಮೆರಿಕ ಕಣ್ಣಿಟ್ಟಿದ್ದಕ್ಕೆ ಮಾಡಿಕೊಂಡ ಸಂಬಂಧ ಎನ್ನಲಾಗುತ್ತಿದೆ. ಆದರೂ ಈ ಸಂಬಂಧ ಭಾರತ ಸೇರಿದಂತೆ ಬೇರೆ ರಾಷ್ಟ್ರಗಳಿಗೂ ಸಮಸ್ಯೆಯೇ ಆಗಿ ಕಾಣುತ್ತಿದೆ. ಇದನ್ನೂ ಓದಿ: ಅಮೆರಿಕ ವಿರೋಧದ ನಡ್ವೆ ಪ್ಯಾಲೆಸ್ಟೀನ್ಗೆ ದೇಶದ ಮಾನ್ಯತೆ ನೀಡಲು ಬ್ರಿಟನ್ ಸಿದ್ಧತೆ
ಕಾಬೂಲ್: ಅಫ್ಘಾನಿಸ್ತಾನದಿಂದ (Afghanistan) ತನ್ನ ಸೇನಾ ಪಡೆಯನ್ನು ಸಂಪೂರ್ಣವಾಗಿ ಹಿಂಪಡೆದುಕೊಂಡಿರುವ ಅಮೆರಿಕ ಇದೀಗ ಮತ್ತೆ ಅಫ್ಫಾನಿಸ್ತಾನದ ಮೇಲೆ ಕಣ್ಣಿಟ್ಟಿದೆ. ಅಫ್ಘಾನಿಸ್ತಾನದ ಬಾಗ್ರಾಮ್ ವಾಯುನೆಲೆಯ ನಿಯಂತ್ರಣವನ್ನು ಅಮೆರಿಕ ಮರಳಿ ಪಡೆಯಬೇಕು ಎಂಬ ಬೇಡಿಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭಾನುವಾರ ಪುನರುಚ್ಚರಿಸಿದ್ದಾರೆ. ಆದ್ರೆ ಈ ಬೇಡಿಕೆಯನ್ನು ತಾಲಿಬಾನ್ ನಿರಾಕರಿಸಿದೆ.
ಅಮೆರಿಕದ ಯಾವ್ದೇ ಬೆದೆರಿಕೆಗೂ ನಾವು ಹೆದರಲ್ಲ ಎಂದಿದೆ. ಅಲ್ಲದೇ ಒಂದೇ ಒಂದಿಂಚು ಜಾಗವನ್ನೂ ಬಿಡಲ್ಲ ಎಂದು ತಿರುಗೇಟು ನೀಡಿದೆ. ಇದು ಅಮೆರಿಕ ಹಾಗೂ ತಾಲಿಬಾನ್ ಮಧ್ಯೆ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಸಾಧ್ಯತೆ ದಟ್ಟವಾಗಿದೆ.
ಅಫ್ಘಾನ್ಗೆ ಟ್ರಂಪ್ ಎಚ್ಚರಿಕೆ
ಟ್ರಂಪ್ ಆಡಳಿತವು ಪ್ರಸ್ತುತ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದೊಂದಿಗೆ ವಾಯುನೆಲೆಯನ್ನು ಅಮೆರಿಕದ ನಿಯಂತ್ರಣಕ್ಕೆ ತರುವ ಸಾಧ್ಯತೆಗಳ ಕುರಿತು ಚರ್ಚಿಸುತ್ತಿದೆ. ನಾವು ಶೀಘ್ರದಲ್ಲೇ ವಾಯುನೆಲೆಯನ್ನು ಮರಳಿ ಪಡೆಯಲು ಬಯಸಿದ್ದೇವೆ. ಒಂದು ವೇಳೆ ಇದಕ್ಕೆ ಒಪ್ಪದಿದ್ದರೆ ನಾನು ಏನು ಮಾಡಲಿದ್ದೇನೆ ಎಂಬುದನ್ನು ನೀವು ಕಂಡುಕೊಳ್ಳುತ್ತೀರಿ. ಅಫ್ಘಾನಿಸ್ತಾನವು ಬಾಗ್ರಾಮ್ ವಾಯುನೆಲೆಯನ್ನು ಅದನ್ನು ನಿರ್ಮಿಸಿದವರಿಗೆ ಮರಳಿ ನೀಡದಿದ್ದರೆ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗಲಿದೆ ಎಂದು ಟ್ರಂಪ್ ಅವರು ತಾಲಿಬಾನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ವಾಯುನೆಲೆ ಮೇಲೆ ಟ್ರಂಪ್ ಕಣ್ಣೇಕೆ?
ಬಾಗ್ರಾಮ್ ಏರ್ ಬೇಸ್ (Bagram Air Base) 2021ರಲ್ಲಿ ಅಮೆರಿಕ ಸೇನೆ ಅಫ್ಘಾನಿಸ್ತಾನದಿಂದ ಹಿಂತೆಗೆದುಕೊಂಡ ನಂತರ ತಾಲಿಬಾನ್ ನಿಯಂತ್ರಣಕ್ಕೆ ಬಂದಿತ್ತು. ಜುಲೈ 2021 ರಲ್ಲಿ ಬಾಗ್ರಾಮ್ ವಾಯುನೆಲೆಯನ್ನು ಅಧಿಕೃತವಾಗಿ ಖಾಲಿ ಮಾಡಿದ ಅಮೆರಿಕ ಪಡೆಗಳು ಅಫ್ಘಾನಿಸ್ತಾನದಲ್ಲಿ ಅಮೆರಿಕದ 20 ವರ್ಷಗಳ ಮಿಲಿಟರಿ ಉಪಸ್ಥಿತಿಯ ಸಾಂಕೇತಿಕ ಅಂತ್ಯವೆಂದು ಪರಿಗಣಿಸಲಾಯಿತು. ನೆಲೆಯ ಮೇಲಿನ ಅಮೆರಿಕದ ನಿಯಂತ್ರಣವನ್ನು ತ್ಯಜಿಸಿರುವುದನ್ನು ಟ್ರಂಪ್ ಹಲವಾರು ಸಂದರ್ಭಗಳಲ್ಲಿ ಟೀಕಿಸಿದ್ದಾರೆ. ಜೊತೆಗೆ ದೇಶದಿಂದ ಸೈನ್ಯವನ್ನು ಹಿಂತೆಗೆದುಕೊಳ್ಳುವ ಮಾಜಿ ಅಧ್ಯಕ್ಷ ಜೋ ಬಿಡೆನ್ ಸರ್ಕಾರದ ನಿರ್ಧಾರವನ್ನು ʻಸಂಪೂರ್ಣ ದುರಂತʼ ಎಂದು ಕರೆದಿದ್ದಾರೆ. ನಾವು ಅದನ್ನು ಅವರಿಗೆ ವ್ಯರ್ಥವಾಗಿ ನೀಡಿದ್ದೇವೆ. ನಾವು ಆ ನೆಲೆಯನ್ನು ಮರಳಿ ಬಯಸುತ್ತೇವೆ ಎಂದು ಟ್ರಂಪ್ ತಮ್ಮ ಟ್ರುತ್ ಸೋಷಿಯಲ್ನಲ್ಲಿ ಬರೆದುಕೊಂಡಿದ್ದಾರೆ.
ಅಫ್ಘಾನ್ ಖಡಕ್ ರಿಯಾಕ್ಷನ್ ಏನು?
ಟ್ರಂಪ್ ಹೇಳಿಕೆಗೆ ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯದ ಮುಖ್ಯಸ್ಥ ಫಸಿಹುದ್ದೀನ್ ಫಿತ್ರಾತ್ ಪ್ರತಿಕ್ರಿಯಿಸಿದ್ದು, ಕೆಲವರು ರಾಜಕೀಯ ಒಪ್ಪಂದದ ಮೂಲಕ ವಾಯುನೆಲೆಯನ್ನು ಹಿಂದಕ್ಕೆ ಪಡೆಯಲು ಬಯಸುತ್ತಿದ್ದಾರೆ. ಬಾಗ್ರಾಮ್ ವಾಯುನೆಲೆಯನ್ನ ವಾಪಸ್ ಪಡೆಯಲು ಅಫ್ಘಾನಿಸ್ತಾನದೊಂದಿಗೆ ಮಾತುಕತೆ ನಡೆಸಿದ್ದಾರೆ. ಆದ್ರೆ ಅಫ್ಘಾನಿಸ್ತಾನದ ಒಂದು ಇಂಚು ಮಣ್ಣನ್ನೂ ನಾವು ಬಿಟ್ಟುಕೊಡಲ್ಲ. ನಮಗೆ ಅದರ ಅಗತ್ಯವೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ನವದೆಹಲಿ: ಆರ್ಎಸ್ಎಸ್ (RSS) ಭಾರತದ ತಾಲಿಬಾನ್ (Taliban) ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ (BK Hariprasad) ಕಿಡಿಕಾರಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ಆರ್ಎಸ್ಎಸ್ ಸಂಘಟನೆಯನ್ನು ಮೋದಿ (Narendra Modi) ಹೊಗಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಆರ್ಎಸ್ಎಸ್ ದೇಶದದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಶಾಂತಿ ಕದಡುವ ಆರ್ಎಸ್ಎಸ್ ಭಾರತದ ತಾಲಿಬಾನ್ಗಳು ಎಂದು ವಾಗ್ದಾಳಿ ನಡೆಸಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಯಾರಾದರೂ ಸಂಘಿಗಳು ಭಾಗವಹಿಸಿದ್ದಾರಾ? ಆರ್ಎಸ್ಎಸ್ ನೋಂದಾಯಿತ ಸಂಘಟನೆಯಲ್ಲದಿರುವುದು ನಾಚಿಕೆಗೇಡಿನ ಸಂಗತಿ. ಅವರಿಗೆ ಎಲ್ಲಿಂದ ಹಣ ಸಿಗುತ್ತದೆ ಎಂದು ನಮಗೆ ತಿಳಿದಿಲ್ಲ. ದೇಶದಲ್ಲಿ ಕೆಲಸ ಮಾಡಲು ಬಯಸುವ ಯಾವುದೇ ಎನ್ಜಿಒ ಸಂವಿಧಾನದ ಪ್ರಕಾರ ನೋಂದಾಯಿಸಿಕೊಳ್ಳಬೇಕು ಎಂದರು. ಇದನ್ನೂಓದಿ: ಈ ವರ್ಷದಅಂತ್ಯಕ್ಕೆಮಾರುಕಟ್ಟೆಗೆಬರಲಿದೆಮೇಡ್ ಇನ್ ಇಂಡಿಯಾಚಿಪ್: ಮೋದಿಘೋಷಣೆ
ಮುಹಮ್ಮದ್ ಅಲಿ ಜಿನ್ನಾ, ಕಾಂಗ್ರೆಸ್ ಮತ್ತು ಆಗಿನ ವೈಸ್ರಾಯ್ ಲಾರ್ಡ್ ಮೌಂಟ್ಬ್ಯಾಟನ್ ಅವರು ದೇಶ ವಿಭಜನೆಗೆ ಕಾರಣ ಎಂದು ಎನ್ಸಿಇಆರ್ಟಿ ಪಠ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಮತ್ತು ಆರ್ಎಸ್ಎಸ್ ಇತಿಹಾಸವನ್ನು ತಿರುಚುವ ಮಾಸ್ಟರ್ಸ್ ಎಂದು ತಿರುಗೇಟು ನೀಡಿದರು.
ವಿಭಜನೆಗಾಗಿ ಬಂಗಾಳದಲ್ಲಿ ಮೊದಲ ನಿರ್ಣಯವನ್ನು ಮಂಡಿಸಿದವರು ಫಜ್ಲುಲ್ ಹಕ್ ಮತ್ತು ಶ್ಯಾಮ ಪ್ರಸಾದ್ ಮುಖರ್ಜಿ. ಜಿನ್ನಾ ಮತ್ತು ಸಾವರ್ಕರ್ ಎರಡೂ ಧರ್ಮಗಳಿಗೆ ಪ್ರತ್ಯೇಕ ರಾಜ್ಯ ಬೇಕು ಎಂದು ಅಭಿಪ್ರಾಯಪಟ್ಟರು. ಅವರು ಅದಕ್ಕೆ ಕಾಂಗ್ರೆಸ್ ಅನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕಾಬೂಲ್: ಅಫ್ಘಾನಿಸ್ತಾನದ (Afghanistan) ಹೆಲ್ಮಂಡ್ ಪ್ರಾಂತ್ಯದಲ್ಲಿ 45 ವರ್ಷದ ವ್ಯಕ್ತಿಯೊಬ್ಬ ಆರು ವರ್ಷದ ಬಾಲಕಿಯನ್ನು ಮದುವೆಯಾಗಿದ್ದಾನೆ. ಆದರೆ, ಆಕೆಗೆ 9 ವರ್ಷ ತುಂಬುವವರೆಗೂ ಮದುವೆಯಾದವನ ಮನೆಗೆ ಕಳುಹಿಸದಂತೆ ತಾಲಿಬಾನ್ ಸೂಚನೆ ನೀಡಿದೆ.
ಈಗಾಗಲೇ ಇಬ್ಬರು ಹೆಂಡತಿಯರನ್ನು ಹೊಂದಿರುವ ಆ ವ್ಯಕ್ತಿ, ಹುಡುಗಿಯ ಕುಟುಂಬಕ್ಕೆ ಆಕೆಯನ್ನು ಮಾರಾಟ ಮಾಡುವಂತೆ ಹಣವನ್ನು ಪಾವತಿಸಿದ್ದಾನೆ. ಈ ಸಮಾರಂಭವು ಮಾರ್ಜಾ ಜಿಲ್ಲೆಯಲ್ಲಿ ನಡೆದಿದೆ.
2021 ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಮರಳಿದ ನಂತರ, ಬಾಲ್ಯ ವಿವಾಹ ಮತ್ತು ಬಲವಂತದ ವಿವಾಹಗಳಲ್ಲಿ ಹೆಚ್ಚಳವಾಗಿದೆ. ಅಫ್ಘಾನಿಸ್ತಾನದಲ್ಲಿ ಈಗಾಗಲೇ ವ್ಯಾಪಕವಾಗಿರುವ ಬಾಲ್ಯ ವಿವಾಹವು, ಮಹಿಳಾ ಶಿಕ್ಷಣ ಮತ್ತು ಉದ್ಯೋಗದ ಮೇಲೆ ತಾಲಿಬಾನ್ ಹೇರಿದ ನಿಷೇಧದ ಅಡಿಯಲ್ಲಿ ಹೆಚ್ಚು ತೀವ್ರವಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಬ್ರೆಜಿಲ್ನ ಅತ್ಯುನ್ನತ ನಾಗರಿಕ ಗೌರವ
ಈ ನಿರ್ಬಂಧಗಳಿಂದಾಗಿ ದೇಶಾದ್ಯಂತ ಬಾಲ್ಯವಿವಾಹಗಳಲ್ಲಿ ಶೇ.25 ರಷ್ಟು ಹೆಚ್ಚಳ ಮತ್ತು ಮಕ್ಕಳ ಜನನದಲ್ಲಿ ಶೇ.45 ರಷ್ಟು ಹೆಚ್ಚಳವಾಗಿದೆ ಎಂದು ಯುಎನ್ ಮಹಿಳೆಯರು ಕಳೆದ ವರ್ಷ ವರದಿ ಮಾಡಿದ್ದಾರೆ. ಯುನಿಸೆಫ್ ಪ್ರಕಾರ, ಅಫ್ಘಾನಿಸ್ತಾನವು ಜಾಗತಿಕವಾಗಿ ಅತಿ ಹೆಚ್ಚು ಬಾಲವಧುಗಳ ಸಂಖ್ಯೆಯನ್ನು ಹೊಂದಿದೆ.
ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಮತ್ತು ಹುಡುಗಿಯರ ಮೇಲೆ ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಎಸಗಿದ ಆರೋಪ ಹೊರಿಸಿ, ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯವು ಇಬ್ಬರು ಹಿರಿಯ ತಾಲಿಬಾನ್ ನಾಯಕರ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.
ಬೀಜಿಂಗ್: ಭಾರತದ ವಿದೇಶಾಂಗ ಸಚಿವ ಜೈಶಂಕರ್ (S. Jaishankar) ಅವರು ತಾಲಿಬಾನ್ನ (Taliban) ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಜೊತೆ ಮಾತನಾಡಿದ ಬೆನ್ನಲ್ಲೇ ಚೀನಾ (China) ಈಗ ಅವರನ್ನೇ ಬೀಜಿಂಗ್ ಕರೆಸಿ ಮಾತುಕತೆ ನಡೆಸಿದೆ. ಅಷ್ಟೇ ಅಲ್ಲದೇ ಪಾಕ್ ವಿದೇಶಾಂಗ ಸಚಿವರನ್ನು ಆಹ್ವಾನಿಸಿ ತ್ರಿಪಕ್ಷೀಯ ಸಭೆ ನಡೆಸಿದೆ.
ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರ ನೇತೃತ್ವದಲ್ಲಿ ನಡೆದ ಅನೌಪಚಾರಿಕ ಸಭೆಯಲ್ಲಿ, ಪಾಕಿಸ್ತಾನ (Pakistan) ಮತ್ತು ಅಫ್ಘಾನಿಸ್ತಾನ ಎರಡೂ ಸಾಧ್ಯವಾದಷ್ಟು ಬೇಗ ಪರಸ್ಪರ ರಾಯಭಾರಿಗಳನ್ನು ಕಳುಹಿಸಲು ತಾತ್ವಿಕವಾಗಿ ಒಪ್ಪಿಕೊಂಡಿವೆ ಎಂದು ಚೀನಾ ವಿದೇಶಾಂಗ ಸಚಿವಾಲಯ ತಿಳಿಸಿದೆ.
ತ್ರಿಪಕ್ಷೀಯ ಸಭೆಗೂ ಮೊದಲು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಅಫ್ಘಾನಿಸ್ತಾನದ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರೊಂದಿಗೆ ಪ್ರತ್ಯೇಕವಾಗಿ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದರು. ಇದನ್ನೂ ಓದಿ: ಮನೆಯ ಒಳಗಡೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಲಷ್ಕರ್ ಉಗ್ರನಿಗೆ ಗುಂಡೇಟು!
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ವ್ಯಾಪಾರ ವಿಸ್ತರಿಸಲು ಸಿದ್ಧವಾಗಿವೆ. ಭಯೋತ್ಪಾದಕ ಶಕ್ತಿಗಳ ವಿರುದ್ಧ ಹೋರಾಡುವುದು ಮತ್ತು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುವ ಬಗ್ಗೆ ಎರಡೂ ದೇಶಗಳು ಒಪ್ಪಿಕೊಂಡಿವೆ ಎಂದು ವಾಂಗ್ ಹೇಳಿದ್ದಾರೆ.
ಪಾಕಿಸ್ತಾನ ಸಾವಿರಾರು ಸಂಖ್ಯೆಯಲ್ಲಿ ನಿರಾಶ್ರಿತರನ್ನು ಗಡೀಪಾರು ಮಾಡುತ್ತಿರುವುದಕ್ಕೆ ಅಫ್ಘಾನಿಸ್ತಾನ ವಿರೋಧ ವ್ಯಕ್ತಪಡಿಸುತ್ತಿದೆ. ಇದರ ಜೊತೆ ಡಿಸೆಂಬರ್ 2024 ರಲ್ಲಿ ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಪ್ರಾಂತ್ಯದಲ್ಲಿ ಬಾಂಬ್ ದಾಳಿ ಮಾಡಿದ ನಂತರ ಸುಮಾರು 50 ಜನರು ಮೃತರಾದ ಬಳಿಕ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹಾಳಾಗಿದೆ.
ಅಫ್ಘಾನಿಸ್ತಾನ ಭಯೋತ್ಪಾದಕರಿಗೆ ಸ್ವರ್ಗ ಎಂದು ಪಾಕ್ ಆರೋಪಿಸಿದೆ. ಆದರೆ ಈ ಆರೋಪವನ್ನು ಅಫ್ಘಾನಿಸ್ತಾನ ತಿರಸ್ಕರಿಸಿದೆ.
ಕಳೆದ ವಾರ ಜೈಶಂಕರ್ ತಾಲಿಬಾನ್ನ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಮೊದಲ ಬಾರಿಗೆ ದೂರವಾಣಿಯಲ್ಲಿ ಮಾತನಾಡಿದ್ದರು. ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ಜೊತೆ ಭಾರತವು ನಡೆಸಿದ ಮೊದಲ ಸಚಿವ ಮಟ್ಟದ ಸಂಪರ್ಕ ಇದಾಗಿತ್ತು.
ನವದೆಹಲಿ: ಇತಿಹಾಶದಲ್ಲೇ ಮೊದಲ ಬಾರಿಗೆ ತಾಲಿಬಾನ್ (Taliban) ವಿದೇಶಾಂಗ ಸಚಿವರ ಜೊತೆ ಎಸ್.ಜೈಶಂಕರ್ (S.Jaishankar) ಮಾತುಕತೆ ನಡೆಸಿದ್ದಾರೆ.
ಪ್ರಾದೇಶಿಕ ಚಲನಶೀಲತೆಯಲ್ಲಿ ಹೊಸ ಅಧ್ಯಾಯ ಇದು ಎನ್ನಲಾಗಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಗುರುವಾರ ತಾಲಿಬಾನ್ನ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ್ದಾರೆ. ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ಜೊತೆ ಭಾರತವು ನಡೆಸಿದ ಮೊದಲ ಸಚಿವ ಮಟ್ಟದ ಸಂಪರ್ಕ ಇದಾಗಿರುವುದರಿಂದ ಈ ಕರೆ ಮಹತ್ವದ್ದಾಗಿದೆ. ಇದನ್ನೂ ಓದಿ: ಕೊನೆಗೂ ಭಾರತದ ಮುಂದೆ ಮಂಡಿಯೂರಿದ ಪಾಕ್ – ಶಾಂತಿ ಮಾತುಕತೆಗೆ ಪಾಕ್ ಪ್ರಧಾನಿ ಆಹ್ವಾನ
ಜಮ್ಮು ಮತ್ತು ಕಾಶ್ಮೀರದಲ್ಲಿ ಧಾರ್ಮಿಕ ಪ್ರೇರಿತ ದಾಳಿಯಲ್ಲಿ ಪಾಕಿಸ್ತಾನದ ನಂಟು ಹೊಂದಿರುವ ಭಯೋತ್ಪಾದಕರು, 26 ನಾಗರಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪಹಲ್ಗಾಮ್ ದಾಳಿಯನ್ನು ಅಫ್ಘಾನಿಸ್ತಾನ ಖಂಡಿಸಿದೆ.
ಇಂದು ಸಂಜೆ ಅಫ್ಘಾನ್ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಲಾಯಿತು. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಅವರು ಖಂಡಿಸಿದ್ದಕ್ಕೆ ನಮ್ಮ ಹೃದಯಪೂರ್ವಕ ಧನ್ಯವಾದಗಳು. ಚರ್ಚೆಯ ಸಮಯದಲ್ಲಿ ಅವರು ಅಫ್ಘಾನ್ ಜನರೊಂದಿಗಿನ ನಮ್ಮ (ಭಾರತದ) ಸಾಂಪ್ರದಾಯಿಕ ಸ್ನೇಹ ಮತ್ತು ಅವರ ಅಭಿವೃದ್ಧಿ ಅಗತ್ಯಗಳಿಗೆ ನಿರಂತರ ಬೆಂಬಲವನ್ನು ಒತ್ತಿ ಹೇಳಿದರು. ಸಹಕಾರವನ್ನು ಮುಂದಕ್ಕೆ ಕೊಂಡೊಯ್ಯುವ ಮಾರ್ಗಗಳು ಮತ್ತು ವಿಧಾನಗಳ ಬಗ್ಗೆ ಚರ್ಚಿಸಲಾಯಿತು ಎಂದು ಎಕ್ಸ್ನಲ್ಲಿ ಜೈಶಂಕರ್ ಪೋಸ್ಟ್ ಹಾಕಿದ್ದಾರೆ. ಇದನ್ನೂ ಓದಿ: ಡಮ್ಮಿ ಜೆಟ್, 15 ಬ್ರಹ್ಮೋಸ್ ಕ್ಷಿಪಣಿ ದಾಳಿ, 11 ಏರ್ಬೇಸ್ ಧ್ವಂಸ – ಪಾಕ್ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ
ಜಮ್ಮು ಮತ್ತು ಕಾಶ್ಮೀರದ ಘಟನೆಗಳಿಗೆ ತಾಲಿಬಾನ್ ಕಾರಣ ಎಂಬ ಪಾಕಿಸ್ತಾನ ಸುಳ್ಳು ಸುದ್ದಿ ಹರಡಿದೆ ಎಂದು ಜೈಶಂಕರ್ ಇದೇ ವೇಳೆ ತಿಳಿಸಿದ್ದಾರೆ. ಪಾಕಿಸ್ತಾನಿ ಮಾಧ್ಯಮಗಳಲ್ಲಿ ಸುಳ್ಳು ಮತ್ತು ಆಧಾರರಹಿತ ವರದಿಗಳ ಮೂಲಕ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಅಪನಂಬಿಕೆಯನ್ನು ಸೃಷ್ಟಿಸುವ ಇತ್ತೀಚಿನ ಪ್ರಯತ್ನಗಳನ್ನು ಮುತಾಕಿ ದೃಢವಾಗಿ ತಿರಸ್ಕರಿಸಿದ್ದಾರೆ ಎಂದು ಬರೆದಿದ್ದಾರೆ.