Tag: Taliban

  • ಭಾರತದ ಗೋಧಿ ಚೆನ್ನಾಗಿದೆ, ನಿಮ್ಮದು ಕಳಪೆಯಾಗಿದೆ: ಪಾಕಿಸ್ತಾನ ವಿರುದ್ಧ ತಾಲಿಬಾನ್ ಕಿಡಿ

    ಭಾರತದ ಗೋಧಿ ಚೆನ್ನಾಗಿದೆ, ನಿಮ್ಮದು ಕಳಪೆಯಾಗಿದೆ: ಪಾಕಿಸ್ತಾನ ವಿರುದ್ಧ ತಾಲಿಬಾನ್ ಕಿಡಿ

    ಕಾಬೂಲ್‌: ತಿನ್ನಲಾಗದ ಕಳಪೆ ಗುಣಮಟ್ಟದ ಗೋಧಿಯನ್ನು ನೀಡಿದ ಪಾಕಿಸ್ತಾನದ ವಿರುದ್ಧ ತಾಲಿಬಾನ್ ಅಧಿಕಾರಿಯೊಬ್ಬರು ಕಿಡಿಕಾರಿದ್ದಾರೆ.

    ಕಳಪೆ ಗುಣಮಟ್ಟದ ಗೋಧಿಯನ್ನು ಪಾಕಿಸ್ತಾನ ನೀಡಿದೆ. ಇದು ಸೇವಿಸಲು ಯೋಗ್ಯವಾಗಿಲ್ಲ. ಆದರೆ ಭಾರತೀಯ ಸರ್ಕಾರ ಕಳುಹಿಸಿದ 50,000 ಮೆಟ್ರಿಕ್ ಟನ್ ಗೋಧಿ ತುಂಬ ಚೆನ್ನಾಗಿದೆ ಎಂದು ಬರೆದು, ಗೋಧಿಯ ಗುಣಮಟ್ಟದ ಬಗ್ಗೆ ದೂರು ನೀಡುತ್ತಿರುವ ವೀಡಿಯೋವನ್ನು ಟ್ವೀಟ್ ಮಾಡಲಾಗಿದೆ. ಈ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಮೈಸೂರಿನಲ್ಲಿದೆ ಕಾಡುವ ಕಥನ: ಕೇವಲ ಪ್ರೀತಿಕಥೆಯಲ್ಲ ರೋಚಕತೆಯೂ ಇಲ್ಲುಂಟು

    ಉತ್ತಮ ಗುಣಮಟ್ಟದ ಗೋಧಿ ಕಳುಹಿಸಿದ್ದಕ್ಕಾಗಿ ಭಾರತಕ್ಕೆ ಧನ್ಯವಾದ ಅರ್ಪಿಸಲಾಗಿದೆ. ಆಫ್ಘಾನ್ ಜನರಿಗೆ ನಿರಂತರ ಬೆಂಬಲ ನೀಡುತ್ತಿರುವುದಕ್ಕಾಗಿ ಭಾರತಕ್ಕೆ ಧನ್ಯವಾದಗಳು. ನಮ್ಮ ಸಾರ್ವಜನಿಕ ಮತ್ತು ಸಾರ್ವಜನಿಕ ಸ್ನೇಹಿ ಸಂಬಂಧ ಶಾಶ್ವತವಾಗಿರುತ್ತದೆ. `ಜೈ ಹಿಂದ್’ ಎಂದು ಹಮ್ದುಲ್ಲಾ ಅರ್ಬಾಬ್ ಟ್ವೀಟ್ ಮಾಡಿದ್ದಾರೆ. ವೈರಲ್ ವೀಡಿಯೋ ಪಾಕಿಸ್ತಾನದ ಪರವಾದ ಆಫ್ಘಾನ್ ಸರ್ಕಾರವನ್ನು ಕೆರಳಿಸಿದೆ. ಈ ಹೇಳಿಕೆ ನೀಡಿದ ತಾಲಿಬಾನ್ ಅಧಿಕಾರಿಯನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

    ಕಳೆದ ತಿಂಗಳು, ಭಾರತವು ಆಫ್ಘಾನ್ ಜನರ ಸಹಾಯಕ್ಕಾಗಿ ಗೋಧಿಯನ್ನು ರವಾನಿಸಿತ್ತು. 2000 ಮೆಟ್ರಿಕ್ ಟನ್ ಗೋಧಿಯನ್ನು ಹೊತ್ತ ವಾಹನಗಳು ಅಮೃತಸರದ ಅಟ್ಟಾರಿಯಿಂದ ಜಲಾಲಾಬಾದ್, ಅಫ್ಘಾನಿಸ್ತಾನಕ್ಕೆ ಹೊರಟಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿತ್ತು. ಇದನ್ನೂ ಓದಿ: ಮೈಸೂರಿನಲ್ಲಿದೆ ಕಾಡುವ ಕಥನ: ಕೇವಲ ಪ್ರೀತಿಕಥೆಯಲ್ಲ ರೋಚಕತೆಯೂ ಇಲ್ಲುಂಟು

    ಭಾರತವು ಅಫ್ಘಾನಿಸ್ತಾನದ ಜನರೊಂದಿಗೆ ತನ್ನ ವಿಶೇಷ ಸಂಬಂಧಕ್ಕೆ ಬದ್ಧವಾಗಿದೆ ಎಂದು ಎಂಇಎ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ, ಭಾರತವು 50,000 ಮೆಟ್ರಿಕ್ ಟನ್ ಗೋಧಿಯನ್ನು ಪಾಕಿಸ್ತಾನದ ಮೂಲಕ ಅಫ್ಘಾನಿಸ್ತಾನಕ್ಕೆ ಕಳುಹಿಸುವುದಾಗಿ ಘೋಷಿಸಿತ್ತು.

  • ಶಾಂತಿಯುತವಾಗಿ ಬಿಕ್ಕಟ್ಟು ಪರಿಹರಿಸಿಕೊಳ್ಳಿ: ಉಕ್ರೇನ್‌, ರಷ್ಯಾಗೆ ತಾಲಿಬಾನ್‌ ಸಲಹೆ

    ಶಾಂತಿಯುತವಾಗಿ ಬಿಕ್ಕಟ್ಟು ಪರಿಹರಿಸಿಕೊಳ್ಳಿ: ಉಕ್ರೇನ್‌, ರಷ್ಯಾಗೆ ತಾಲಿಬಾನ್‌ ಸಲಹೆ

    ಕಾಬೂಲ್:‌ ರಷ್ಯಾ ಹಾಗೂ ಉಕ್ರೇನ್‌ ದೇಶಗಳು ತಮ್ಮ ನಡುವಿನ ಬಿಕ್ಕಟ್ಟನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ತಾಲಿಬಾನ್‌ ಸಲಹೆ ನೀಡಿದೆ.

    ಸಂವಾದ ಮತ್ತು ಶಾಂತಿಯುತ ವಿಧಾನಗಳ ಮೂಲಕ ಬಿಕ್ಕಟ್ಟನ್ನು ಪರಿಹರಿಸಿಕೊಳ್ಳಬೇಕು. ಹಿಂಸಾಚಾರವನ್ನು ತೀವ್ರಗೊಳಿಸುವ ನಿಲುವು ತೆಗೆದುಕೊಳ್ಳುವುದನ್ನು ಎಲ್ಲಾ ದೇಶಗಳು ತ್ಯಜಿಸಬೇಕಾಗಿದೆ ಎಂದು ತಾಲಿಬಾನ್‌ ಕರೆ ನೀಡಿದೆ. ಇದನ್ನೂ ಓದಿ: ರಷ್ಯಾ ವಿರುದ್ಧದ UNSC ನಿರ್ಣಯದಿಂದ ದೂರ ಉಳಿದ ಭಾರತ – ಧನ್ಯವಾದ ತಿಳಿಸಿದ ರಷ್ಯಾ

    ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ಅಫ್ಘಾನಿಸ್ತಾನದ ಇಸ್ಲಾಮಿಕ್‌ ಎಮಿರೇಟ್ಸ್‌ ನಿಕಟವಾಗಿ ಗಮನಿಸುತ್ತಿದೆ. ನಾಗರಿಕರ ಸಾವು-ನೋವುಗಳ ಸಾಧ್ಯತೆಗಳ ಬಗ್ಗೆ ಕಳವಳ ಇದೆ. ಎರಡೂ ರಾಷ್ಟ್ರಗಳು ಸಂಯಮದಿಂದ ಇರುವುದು ಒಳಿತು ಎಂದು ತಾಲಿಬಾನ್‌ ತಿಳಿಸಿದೆ.

    ಅಫ್ಘಾನ್‌ ವಿದ್ಯಾರ್ಥಿಗಳು ಮತ್ತು ಉಕ್ರೇನ್‌ನಲ್ಲಿರುವ ವಲಸಿಗರ ಸುರಕ್ಷತೆಗಾಗಿ ಉಕ್ರೇನ್‌ ಮತ್ತು ರಷ್ಯಾ ದೇಶಗಳಿಗೆ ತಾಲಿಬಾನ್‌ ಮನವಿ ಮಾಡಿದೆ. ಇದನ್ನೂ ಓದಿ: ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

    ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧದ ಯುಎನ್‌ಎಸ್‌ಸಿ ನಿರ್ಣಯದಿಂದ ಸಂಯುಕ್ತ ಅರಬ್‌ ಒಕ್ಕೂಟ (ಯುಎಇ) ಕೂಡ ದೂರ ಉಳಿದಿದೆ. ಆದರೆ ಬಿಕ್ಕಟ್ಟನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಮಗಳಿಂದ ವಾಯ್ಸ್ ಮೆಸೇಜ್- ಪೋಷಕರಲ್ಲಿ ಆತಂಕ

  • ಮಹಿಳೆಯರಿಗೆ ಮತ್ತೆ ವಿಶ್ವವಿದ್ಯಾಲಯಗಳನ್ನು ತೆರೆದ ತಾಲಿಬಾನ್

    ಕಾಬೂಲ್: ಅಫ್ಘಾನಿಸ್ತಾನದ 34 ಪ್ರಾಂತ್ಯಗಳ ಪೈಕಿ 6 ಪ್ರಾಂತ್ಯಗಳಲ್ಲಿ ಮಹಿಳಾ ವಿದ್ಯಾರ್ಥಿಗಳಿಗೆ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ತೆರೆಯಲಾಗಿದೆ ಎಂದು ತಾಲಿಬಾನ್ ಬುಧವಾರ ತಿಳಿಸಿದೆ.

    ಕಳೆದ ವರ್ಷ ಆಗಸ್ಟ್ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನನ್ನು ವಶಪಡಿಸಿಕೊಂಡ ಬಳಿಕ ತಮ್ಮ ಆಳ್ವಿಕೆಯಲ್ಲಿ ದೇಶಾದ್ಯಂತ ಕಠಿಣ ಕ್ರಮಗಳನ್ನು ವಿಧಿಸುತ್ತಿದೆ. ಮುಖ್ಯವಾಗಿ ಹುಡುಗಿಯರನ್ನು ಶಿಕ್ಷಣದಿಂದ ಹಾಗೂ ಮಹಿಳೆಯರನ್ನು ಸಾರ್ವಜನಿಕ ಜೀವನ ಮತ್ತು ಕೆಲಸದಿಂದ ವಂಚಿಸುತ್ತಲೇ ಇದೆ. 1990ರ ಕಾಲದಲ್ಲೂ ಇದೇ ರೀತಿಯ ಸಂದರ್ಭ ಏರ್ಪಟ್ಟಿತ್ತು.

    ತಾಲಿಬಾನ್ ವಿಧಿಸಿರುವ ನಿರ್ಬಂಧಗಳಲ್ಲಿ ಹೆಚ್ಚಿನವು ಮಹಿಳೆಯರ ಮೇಲೆ ಪ್ರಭಾವ ಬೀರುತ್ತದೆ. ಮಹಿಳೆಯರನ್ನು ಆರೋಗ್ಯ ಹಾಗೂ ಬೋಧನಾ ವಲಯಗಳನ್ನು ಹೊರತು ಪಡಿಸಿ ಇತರ ಉದ್ಯೋಗಗಳಿಂದ ನಿರ್ಬಂಧಿಸಿದೆ. ಹುಡುಗಿಯರು 6ನೇ ತರಗತಿಯ ಬಳಿಕ ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಮಹಿಳೆಯರಿಗೆ ಹಿಜಬ್ ಧರಿಸಲು ಒತ್ತಾಯಿಸುತ್ತಿದೆ. ಆದರೆ ಬುರ್ಖಾ ಹೇರಿಕೆಯ ಬಗ್ಗೆ ಸ್ವಲ್ಪ ವಿರಾಮ ದೊರಕಿದೆ. ಇದನ್ನೂ ಓದಿ: ತೈಲ ಖರೀದಿಸಲು ಶ್ರೀಲಂಕಾಗೆ 3 ಸಾವಿರ ಕೋಟಿ ಸಾಲ ನೀಡಿದ ಭಾರತ

    ತಾಲಿಬಾನ್ ಸಂಸ್ಕೃತಿ ಹಾಗೂ ಮಾಹಿತಿ ಸಚಿವಾಲಯ ಬುಧವಾರ ತಿಳಿಸಿರುವ ಮಾಹಿತಿಯ ಪ್ರಕಾರ ನಂಗರ್‌ಹಾರ್, ಕಂದಹಾರ್, ಹೆಲ್ಮಂಡ್, ಫರಾಹ್, ನಿಮ್ರೋಜ್ ಹಾಗೂ ಲಗ್ಮನ್ ಪ್ರಾಂತ್ಯಗಳಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ಮಹಿಳೆಯರಿಗೂ ತೆರೆಯಲಾಗಿದೆ ಎಂದು ತಿಳಿಸಿದೆ.

    ಅಫ್ಘಾನಿಸ್ತಾನದ ಈ ಆರು ಪ್ರಾಂತ್ಯಗಳು ಇತರ ಪ್ರದೇಶಗಳಿಗಿಂತ ಬೆಚ್ಚನೆಯ ಹವಾಮಾನ ಹೊಂದಿದೆ ಹೀಗಾಗಿ ಈ ಪ್ರಾಂತ್ಯಗಳಲ್ಲಿ ವಿಶ್ವವಿದ್ಯಾಲಯಗಳನ್ನು ಮತ್ತೆ ತೆರೆಯಲಾಗಿದೆ. ಪುರುಷರು ಬೆಳಗ್ಗೆ ಹಾಗೂ ಮಹಿಳೆಯರು ಮಧ್ಯಾಹ್ನ ತರಗತಿಗಳಿಗೆ ಹಾಜರಾಗಬಹುದು ಎಂದು ತಿಳಿಸಿದೆ. ಇದನ್ನೂ ಓದಿ: ಅಜ್ಮೀರ್ ದರ್ಗಾಕ್ಕೆ ಚಾದರ ಕಳಿಸಿಕೊಟ್ಟ ಪ್ರಧಾನಿ ಮೋದಿ

    ಹೆಣ್ಣುಮಕ್ಕಳ ಶಿಕ್ಷಣವನ್ನು ನಿರಾಕರಿಸಿದ್ದಕ್ಕೆ ಭಾರೀ ಟೀಕೆಗೆ ಒಳಗಾಗಿದ್ದೇವೆ. ಅಫ್ಘಾನಿಸ್ತಾನದಲ್ಲಿ ಮಾರ್ಚ್ ಅಂತ್ಯದ ವೇಳೆ ಎಲ್ಲಾ ಹೆಣ್ಣು ಮಕ್ಕಳು ಶಾಲೆಗೆ ಮರಳಲಿದ್ದಾರೆ ಎಂದು ತಾಲಿಬಾನ್ ಭರವಸೆ ನೀಡಿದೆ.

  • ಅಫ್ಘಾನಿಸ್ತಾನಕ್ಕೆ ಭಾರತ ವೈದ್ಯಕೀಯ ನೆರವು – 3 ಟನ್ ಔಷಧಿ ರವಾನೆ

    ನವದೆಹಲಿ: ತಾಲಿಬಾನ್ ಆಡಳಿತದಿಂದಾಗಿ ತತ್ತರಿಸುವ ಅಫ್ಘಾನಿಸ್ತಾನಕ್ಕೆ ಭಾರತ ನೆರವು ನೀಡಲು ಮುಂದಾಗಿದೆ ಸತತ ನಾಲ್ಕನೇ ಬಾರಿಗೆ ಅಪ್ಘಾನಿಸ್ತಾನಕ್ಕೆ ಭಾರತ ವೈದ್ಯಕೀಯ ನೆರವು ನೀಡಿದೆ. ಶನಿವಾರ ಭಾರತ ಅಫ್ಘಾನಿಸ್ತಾನಕ್ಕೆ ಮೂರು ಟನ್‍ಗಳಷ್ಟು ಅಗತ್ಯ ಜೀವರಕ್ಷಕ ಔಷಧಿಗಳನ್ನು ಕಳುಹಿಸಿದೆ.

    ಯುದ್ಧ ಪೀಡಿತ ದೇಶಕ್ಕೆ ಭಾರತ ನಾಲ್ಕನೇ ಬ್ಯಾಚ್‍ನಲ್ಲಿ 3 ಟನ್‍ಗಳಷ್ಟು ವೈದ್ಯಕೀಯ ನೆರವನ್ನು ನೀಡಿದೆ. ಮುಂದಿನ ವಾರಗಳಲ್ಲಿ ಅಲ್ಲಿನ ಜನರಿಗೆ ಔಷಧ ಹಾಗೂ ಆಹಾರ ಧಾನ್ಯಗಳ ರೂಪದಲ್ಲಿ ಇನ್ನಷ್ಟು ಸಹಾಯ ಮಾಡಲಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಶನಿವಾರ ತಿಳಿಸಿದೆ. ಇದನ್ನೂ ಓದಿ: ಆಕಾಶ ಬೆಳಗಿದವು 1,000 ಮೇಡ್ ಇನ್ ಇಂಡಿಯಾ ಡ್ರೋನ್‍ಗಳು

    ಅಫ್ಘಾನಿಸ್ತಾನ ಜನರೊಂದಿಗೆ ವಿಶೇಷ ಸಂಬಂಧವನ್ನು ಮುಂದುವರಿಸಲು ಹಾಗೂ ಮಾನವೀಯ ನೆರವನ್ನು ನೀಡಲು ಭಾರತ ಬದ್ಧವಾಗಿದೆ. ಮಾನವೀಯ ನೆರವಿನ ಭಾಗವಾಗಿ ಭಾರತ ಅಫ್ಘಾನಿಸ್ತಾನಕ್ಕೆ 3 ಟನ್‍ಗಳಷ್ಟು ಔಷಧಿಗಳನ್ನು ಒಳಗೊಂಡಿರುವ ನಾಲ್ಕನೇ ಬ್ಯಾಚ್ ವೈದ್ಯಕೀಯ ನೆರವನ್ನು ಪೂರೈಸಿದೆ. ಅದನ್ನು ಕಾಬೂಲ್‍ನ ಇಂದಿರಾ ಗಾಂಧಿ ಆಸ್ಪತ್ರೆಗೆ ಹಸ್ತಾಂತರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

    ಇದಕ್ಕೂ ಮೊದಲು ಭಾರತ ಅಫ್ಘಾನಿಸ್ತಾನಕ್ಕೆ ಕೋವಿಡ್-19 ಲಸಿಕೆಯ 5 ಲಕ್ಷ ಡೋಸ್‍ಗಳನ್ನು ಸರಬರಾಜು ಮಾಡಿತ್ತು. ಇದರೊಂದಿಗೆ 2 ಬಾರಿ ಇತರ ಅಗತ್ಯ ಔಷಧಗಳ ಸರಬರಾಜನ್ನೂ ಭಾರತ ಮಾಡಿತ್ತು. ಅದನ್ನು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕಾಬೂಲ್‍ನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ಹಸ್ತಾಂತರಿಸಲಾಗಿತ್ತು. ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ಭಾರತದ ನೆರವು – ಇರಾನ್ ಸಹಾಯ

    ಭಾರತ, ಪಾಕಿಸ್ತಾನದ ಮೂಲಕ ರಸ್ತೆಯ ಮಾರ್ಗವಾಗಿ ಅಫ್ಘಾನಿಸ್ತಾನಕ್ಕೆ 50 ಸಾವಿರ ಟನ್ ಗೋಧಿ ಹಾಗೂ ಔಷಧಿಗಳನ್ನು ಕಳುಹಿಸುವುದಾಗಿ ಘೋಷಿಸಿದೆ. ಇದಕ್ಕೆ ಇರಾನ್ ಸಹಾಯ ಮಾಡಿವುದಾಗಿಯೂ ತಿಳಿಸಿತ್ತು.

  • ಆಹಾರಕ್ಕಾಗಿ ಅಪ್ಘಾನ್‌ ಜನರಿಂದ ಮಕ್ಕಳು, ದೇಹದ ಅಂಗಾಂಗಗಳ ಮಾರಾಟ

    ಆಹಾರಕ್ಕಾಗಿ ಅಪ್ಘಾನ್‌ ಜನರಿಂದ ಮಕ್ಕಳು, ದೇಹದ ಅಂಗಾಂಗಗಳ ಮಾರಾಟ

    ಕಾಬೂಲ್‌: ತಾಲಿಬಾನಿಗಳು ಸರ್ಕಾರವನ್ನು ಸ್ಥಾಪಿಸಿದ ನಂತರ ಅಫ್ಘಾನಿಸ್ತಾನದಲ್ಲಿ ಮಾನವೀಯ ಬಿಕ್ಕಟ್ಟು ತಲೆದೋರಿದೆ. ಇಲ್ಲಿನ ಜನರು ಆಹಾರಕ್ಕಾಗಿ ತಮ್ಮ ಮಕ್ಕಳನ್ನು ಮಾರುತ್ತಿದ್ದಾರೆ. ಅಲ್ಲದೇ ತಮ್ಮ ದೇಹದ ಅಂಗಾಂಗಗಳನ್ನು ಮಾರುತ್ತಿದ್ದಾರೆ ಎಂದು ವಿಶ್ವ ಆಹಾರ ಕಾರ್ಯಕ್ರಮದ (ಡಬ್ಲ್ಯೂಎಫ್‌ಪಿ) ಯುಎನ್‌ ಮುಖ್ಯಸ್ಥ ಕಳವಳ ವ್ಯಕ್ತಪಡಿಸಿದ್ದಾರೆ.

    ಡಬ್ಲ್ಯೂಎಫ್‌ಪಿ ಮುಖ್ಯಸ್ಥ ಡೇವಿಡ್‌ ಬೇಸ್ಲಿ, ಅಫ್ಘಾನಿಸ್ತಾನದಲ್ಲಿ ಅರ್ಧದಷ್ಟು ಜನಸಂಖ್ಯೆಯು ಹಸಿವಿನಿಂದ ಬಳಲುತ್ತಿರುವುದರಿಂದ ಜಾಗತಿಕ ಸಮುದಾಯವು ನೆರವು ನೀಡಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಾಗ್ದಾದ್ ವಿಮಾನ ನಿಲ್ದಾಣದ ಬಳಿ 3 ರಾಕೆಟ್‍ಗಳ ದಾಳಿ

    ಬರ, ಸಾಂಕ್ರಾಮಿಕ, ಆರ್ಥಿಕ ಕುಸಿತ, ನಿರಂತರ ಸಂಘರ್ಷಗಳ ನಡುವೆ ಅಫ್ಘಾನಿಸ್ತಾನದ ಜನರು ದಿಕ್ಕೆಟ್ಟಿದ್ದಾರೆ. ಈ ಗಂಭೀರ ಸಮಸ್ಯೆಗಳ ವಿರುದ್ಧ ಸಂಘರ್ಷ ನಡೆಸುತ್ತಿದ್ದಾರೆ. ದೇಶದಲ್ಲಿ ಸುಮಾರು 2.4 ಕೋಟಿ ಜನರು ಆಹಾರ ಅಭದ್ರತೆಯಿಂದ ನರಳುತ್ತಿದ್ದಾರೆ. ಚಳಿಗಾಲದ ಪರಿಸ್ಥಿತಿಯಲ್ಲಿ ದೇಶದ ಅರ್ಧದಷ್ಟು ಜನರು ಕ್ಷಾಮವನ್ನು ಎದುರಿಸುತ್ತಿದ್ದಾರೆ. ಈ ವರ್ಷದ ಅಂತ್ಯದ ವೇಳೆಗೆ ಶೇ.97ರಷ್ಟು ಮಂದಿ ಬಡತನ ರೇಖೆಗಿಂತ ಕೆಳಗೆ ಬೀಳಬಹುದು.

    ತಾಲಿಬಾನ್‌ ಸಂಘರ್ಷದಿಂದಾಗಿ ಕಳೆದ 20 ವರ್ಷಗಳಿಂದಲೂ ವಿಶ್ವದಲ್ಲೇ ಅತ್ಯಂತ ಬಡರಾಷ್ಟ್ರವಾಗಿ ಅಫ್ಘಾನಿಸ್ತಾನ ಗುರುತಿಸಿಕೊಂಡಿದೆ. ಇದನ್ನೂ ಓದಿ: ಹೊಸ ವೈರಸ್‌ NeoCoV ಬಗ್ಗೆ ಚೀನಾ ಎಚ್ಚರ – ಮೂವರು ಸೋಂಕಿತರಲ್ಲಿ ಒಬ್ಬರು ಸಾವು!

    ಕಳೆದ ವರ್ಷ ಆಗಸ್ಟ್‌ನಲ್ಲಿ ಅಮೆರಿಕ ಮತ್ತು ಮಿತ್ರರಾಷ್ಟ್ರಗಳು ಅಪ್ಘಾನಿಸ್ತಾನದಿಂದ ತಮ್ಮ ಸೇನಾಪಡೆಯನ್ನು ವಾಪಸ್‌ ಕರೆಸಿಕೊಂಡವು. ಪರಿಣಾಮವಾಗಿ ತಾಲಿಬಾನ್‌ ಸುಲಭವಾಗಿ ದೇಶದಲ್ಲಿ ತನ್ನ ಪ್ರಾಬಲ್ಯ ಸ್ಥಾಪಿಸಿತು. ಪ್ರಸ್ತುತ ದೇಶದಲ್ಲಿ ಮಾನವೀಯ ಬಿಕ್ಕಟ್ಟು ಏರ್ಪಟ್ಟಿದೆ. ಆದರೂ ಕೆಲವು ಅಂತಾರಾಷ್ಟ್ರೀಯ ದತ್ತಿಗಳು ಮತ್ತು ಸಹಾಯ ಗುಂಪುಗಳು, ಸ್ಥಳೀಯ ಜನರಿಗೆ ಸಹಾಯ ಹಸ್ತ ನೀಡುತ್ತಿವೆ.

  • ತಾಲಿಬಾನ್ ಆಡಳಿತ – ಉದ್ಯೋಗ ಕಳೆದುಕೊಂಡು 5 ಲಕ್ಷ ಅಫ್ಘಾನಿಸ್ತಾನಿಯರು ಕಂಗಾಲು

    ತಾಲಿಬಾನ್ ಆಡಳಿತ – ಉದ್ಯೋಗ ಕಳೆದುಕೊಂಡು 5 ಲಕ್ಷ ಅಫ್ಘಾನಿಸ್ತಾನಿಯರು ಕಂಗಾಲು

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ನಂತರ ಸುಮಾರು 5 ಲಕ್ಷದಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಯುಎನ್ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್‌ಒ) ತಿಳಿಸಿದೆ.

    ದೇಶದಲ್ಲಿ ಆರ್ಥಿಕತೆಗೆ ಪಾರ್ಶ್ವವಾಯು ಹಿಡಿದಿದ್ದು, ಜನರು ಉದ್ಯೋಗವಿಲ್ಲದೇ ಕಂಗಾಲಾಗಿದ್ದಾರೆ. ಮುಖ್ಯವಾಗಿ ಮಹಿಳೆಯರು ಹೆಚ್ಚು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಐಎಲ್‌ಒ ವಿಶ್ಲೇಷಿಸಿದೆ. ಇದನ್ನೂ ಓದಿ: ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಯ್ತು ಅಪರೂಪದ ಕಪ್ಪು ವಜ್ರ

    ಅಫ್ಘಾನಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಮೇಲೆ ನಿರ್ಬಂಧ ವಿಧಿಸಲಾಗುತ್ತಿದೆ. ಪರಿಣಾಮವಾಗಿ ಈ ವರ್ಷದ ಮಧ್ಯಭಾಗದಲ್ಲಿ ಉದ್ಯೋಗ ನಷ್ಟ ಸುಮಾರು 7 ಲಕ್ಷಕ್ಕೆ ಹೆಚ್ಚಾಗುವ ನಿರೀಕ್ಷೆ ಇದೆ. ಮುಂದೆ ಈ ಪ್ರಮಾಣ 9 ಲಕ್ಷಕ್ಕೆ ತಲುಪಲಿದೆ.

    ಜಾಗತಿಕ ಮಾನದಂಡಗಳ ಪ್ರಕಾರ ಮಹಿಳೆಯರ ಉದ್ಯೋಗ ಪ್ರಮಾಣ ಈಗಾಗಲೇ ತೀರಾ ಕಡಿಮೆಯಾಗಿದೆ. 2021ರ ಮೂರನೇ ತ್ರೈಮಾಸಿಕದಲ್ಲಿ ಶೇ.16ರಷ್ಟು ಕುಸಿದಿತ್ತು. 2022ರ ಮಧ್ಯದ ವೇಳೆಗೆ ಆ ಪ್ರಮಾಣ ಶೇ.21ರಿಂದ 28ಕ್ಕೆ ಕುಸಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಹಾಂಕಾಂಗ್‌ನಲ್ಲಿ 2000 ಪ್ರಾಣಿಗಳನ್ನು ಕೊಲ್ಲಲು ಆದೇಶ!

    ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿಯು ಗಂಭೀರವಾಗಿದೆ. ಆರ್ಥಿಕತೆಯ ಚೇತರಿಕೆಗೆ ತಕ್ಷಣದ ಬೆಂಬಲ ಅಗತ್ಯವಿದೆ ಎಂದು ಐಎಲ್‌ಒ ಹಿರಿಯ ಸಂಯೋಜಕ ರಮಿನ್ ಬೆಹ್ವಾದ್ ಅಭಿಪ್ರಾಯಪಟ್ಟಿದ್ದಾರೆ.

    ನಿರ್ಮಾಣ ವಲಯದ ಕಾರ್ಮಿಕರು ಕಂಗಾಲಾಗಿದ್ದಾರೆ. ಪ್ರಮುಖ ಮೂಲಸೌಕರ್ಯ ಯೋಜನೆಗಳು ಸ್ಥಗಿತಗೊಂಡಿವೆ. ತಾಲಿಬಾನ್ ಆಕ್ರಮಣದ ನಂತರ ಆಫ್ಘನ್ ಭದ್ರತಾ ಪಡೆ ಸದಸ್ಯರು ಕೆಲಸ ಕಳೆದುಕೊಂಡಿದ್ದಾರೆ. ಆರ್ಥಿಕತೆಯಲ್ಲಿ ನಗದು ಕೊರತೆಯಿಂದಾಗಿ ಶಿಕ್ಷಕರು ಮತ್ತು ಆರೋಗ್ಯ ಕಾರ್ಯಕರ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂತಾರಾಷ್ಟ್ರೀಯ ದಾನಿಗಳ ಬೆಂಬಲವೂ ಕುಸಿಯುತ್ತಿದೆ ಎಂದು ಐಎಲ್‌ಒ ತಿಳಿಸಿದೆ.

  • ಅಫ್ಘಾನ್‍ನಲ್ಲಿ ಮಕ್ಕಳ ಅಂಗಾಂಗ ಮಾರಾಟ!

    ಅಫ್ಘಾನ್‍ನಲ್ಲಿ ಮಕ್ಕಳ ಅಂಗಾಂಗ ಮಾರಾಟ!

    ಕಾಬೂಲ್: ಜೀವನ ಸಾಗಿಸಲು ಅಫಾಸ್ಘಾನಿಯರು ಮಕ್ಕಳ ಅಂಗಾಂಗವನ್ನು ಮಾರಾಟ ಮಾಡುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.

    ತಾಲಿಬಾನ್ ಆಡಳಿತಕ್ಕೆ ಬಂದ ನಂತರ ಅಲ್ಲಿನ ಜನರ ಬದುಕು ತೀರಾ ದುಸ್ತರವಾಗಿದೆ. ಮೊದಲೇ ಸಂಕಷ್ಟದಲ್ಲಿದ್ದ ಅಫ್ಘಾನಿಸ್ತಾನ್ ಜನತೆ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಹೀಗಾಗಿ ಮಕ್ಕಳ ಅಂಗಾಗಂಗವನ್ನು ಮಾರಾಟ ಮಾಡುತ್ತಿದ್ದಾರೆ.

    ಜೀವನ ಸಾಗಿಸಲು ಅಲ್ಲಿರುವ ಜನರು ಮಕ್ಕಳನ್ನೇ ಮಾರಾಟ ಮಾಡುತ್ತಿದ್ದಾರೆ. ಅಲ್ಲದೇ ತಮ್ಮದೇಹದ ಅಂಗಾಂಗಳನ್ನು ಮಾರಲು ಮುಂದಾಗಿದ್ದಾರೆ ಎಂದು ಅಲ್ಲಿನ ಮಾಧ್ಗಮವೊಂದು ವರದಿ ಮಾಡಿದೆ. ಒಂದು ಮಗುವನ್ನು 1 ಲ್ಷದವರೆಗೆ ಮಾರಲಾಗುತ್ತದೆ. ಮೂತ್ರಪಿಂಡದ ಬೆಲೆ150.000 ರಿಂದ 220,000 ರೂಪಾಯಿವರೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವುದಾಗಿ ಸುದ್ದಿಯಾಗಿದೆ. ಇದನ್ನೂ ಓದಿ: ಸಿಗರೇಟ್‌ನಿಂದ ಸುಟ್ಟು ಸಾಮೂಹಿಕ ಅತ್ಯಾಚಾರ- ಪತಿ, ಆತನ ಸ್ನೇಹಿತರು ಅರೆಸ್ಟ್‌

    ಅಫ್ಘಾನ್‍ನಲ್ಲಿ ನೆಲೆಸಿರುವ ವಲಸಿಗರನ್ನು ಟಾಗೇಟ್ ಮಾಡಲಾಗುತ್ತಿದೆ. ಬಲಂತವಾಗಿ ಮಕ್ಕಳನ್ನು ಮಾರಾಟ ಮಾಡಲು ಹಾಗೂ ಅಂಗಾಂಗಳನ್ನು ದಾನ ಮಾಡೋದಕ್ಕೆ ಪ್ರಚೋದನೆ ನೀಡಲಾಗುತ್ತದೆ. ಇದನ್ನೂ ಓದಿ: ಶಲ್ಯ ಮುಖಕ್ಕೆ ಕಟ್‌ಕೊಂಡಿನ್ರೀ ಮತ್ ಮಾಸ್ಕ್ ಯಾಕ್ ಹಾಕಬೇಕು: ವ್ಯಕ್ತಿಯ ಕಿರಿಕ್

    ಬಡತನ, ದೇಶದಲ್ಲಿನ ಆರ್ಥಿಕ ಸಮಸ್ಯೆಗಳು ಮತ್ತು ಕೊರೊನಾ ಕಾರಣದಿಂದ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಕುಟುಂಗಳಿಗೆ ಒತ್ತಾಯಿಸಲಾಯಿಸಲಾಗುತ್ತಿದೆ. ಪ್ರತಿ ಕುಟುಂಬವು ಸುಮಾರು ಎರಡರಿಂದ ಏಳು ಮಕ್ಕಳನ್ನು ಹೊಂದಿದ್ದಾರೆ. ಮಕ್ಕಳು ಮತ್ತು ಮೂತ್ರಪಿಂಡಗಳನ್ನು ಮಾರಾಟ ಮಾಡುವುದನ್ನು ತಡೆಯಲು ದತ್ತಿ ಸಮಿತಿಯು ಸಹಾಯ ಮಾಡಿತು. ದತ್ತಿ ಸಮಿತಿಯು ಮಜಾರ್-ಎ-ಷರೀಫ್‍ನಲ್ಲಿ ಸಾವಿರಾರು ಸ್ಥಳಾಂತರಗೊಂಡ ಮತ್ತು ದುರ್ಬಲ ಜನರಿಗೆ ನಗದು ನೆರವು ಮತ್ತು ಆಹಾರವನ್ನು ಒದಗಿಸಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಮಾರ್ಚ್‍ನಿಂದ ಶಾಲೆ, ವಿಶ್ವವಿದ್ಯಾಲಯ ಪುನಾರಂಭ

  • ಅಫ್ಘಾನಿಸ್ತಾನದಲ್ಲಿ ಮಾರ್ಚ್‍ನಿಂದ ಶಾಲೆ, ವಿಶ್ವವಿದ್ಯಾಲಯ ಪುನಾರಂಭ

    ಅಫ್ಘಾನಿಸ್ತಾನದಲ್ಲಿ ಮಾರ್ಚ್‍ನಿಂದ ಶಾಲೆ, ವಿಶ್ವವಿದ್ಯಾಲಯ ಪುನಾರಂಭ

    ಕಾಬೂಲ್: ಬಾಲಕಿಯರು ಮತ್ತು ಬಾಲಕರಿಗೆ ಶಾಲೆಗಳು ಹಾಗೂ ವಿಶ್ವವಿದ್ಯಾಲಯಗಳನ್ನು 2022ರ ಮಾರ್ಚ್‍ನಿಂದ ಮತ್ತೆ ತೆರೆಯಲಾಗುತ್ತದೆ ಎಂದು ತಾಲಿಬಾನ್ ತಿಳಿಸಿದೆ.

    ಮಾಹಿತಿ ಮತ್ತು ಸಂಸ್ಕೃತಿಯ ಉಪಮಂತ್ರಿ ಮತ್ತು ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್‍ನ ವಕ್ತಾರ ಜಬೀವುಲ್ಲಾ ಮುಜಾಹಿದ್ ಈ ಕುರಿತಂತೆ ಮಾತನಾಡಿ, ತಾಲಿಬಾನ್ ಶಿಕ್ಷಣದ ವಿರುದ್ಧವಲ್ಲ. ಆದರೆ ಹುಡುಗರು ಮತ್ತು ಹುಡುಗಿಯರಿಗೆ ಶಾಲೆಗಳಲ್ಲಿ ಪ್ರತ್ಯೇಕವಾಗಿ ತರಗತಿ ನಡೆಸಬೇಕು ಎಂದಿದ್ದಾರೆ. ಇದನ್ನೂ ಓದಿ: ಸಿಗರೇಟ್‌ನಿಂದ ಸುಟ್ಟು ಸಾಮೂಹಿಕ ಅತ್ಯಾಚಾರ- ಪತಿ, ಆತನ ಸ್ನೇಹಿತರು ಅರೆಸ್ಟ್‌

    ಎರಡು ತಿಂಗಳಲ್ಲಿ ಉನ್ನತ ಶಾಲೆಗಳು ಮತ್ತು ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ಪುನಃ ತೆರೆಯಲು ಶಿಕ್ಷಣ ಸಚಿವಾಲಯ ಮತ್ತು ಉನ್ನತ ಶಿಕ್ಷಣ ಸಚಿವಾಲಯವು ಶ್ರಮಿಸುತ್ತಿದೆ. ಅನೇಕ ಪ್ರದೇಶಗಳಲ್ಲಿ ಪ್ರೌಢ ಶಾಲೆಗಳನ್ನು ಪುನಃ ತೆರೆಯಲಾಗಿದೆ ಮತ್ತು ಕೆಲವು ಭಾಗಗಳಲ್ಲಿ ಆರ್ಥಿಕ ಸಮಸ್ಯೆಗಳಿಂದ ಇನ್ನೂ ಶಾಲೆಯನ್ನು ಮುಚ್ಚಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಲ್ಯ ಮುಖಕ್ಕೆ ಕಟ್‌ಕೊಂಡಿನ್ರೀ ಮತ್ ಮಾಸ್ಕ್ ಯಾಕ್ ಹಾಕಬೇಕು: ವ್ಯಕ್ತಿಯ ಕಿರಿಕ್

    ಹುಡುಗರು ಮತ್ತು ಹುಡುಗಿಯರಿಗೆ ಪ್ರತ್ಯೇಕವಾಗಿ ತರಗತಿಗಳನ್ನು ನಡೆಸಲಾಗುತ್ತದೆ ಮತ್ತು ಅಫ್ಘಾನಿಸ್ತಾನದ ಸುತ್ತಲೂ ಹೆಣ್ಣುಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್‍ಗಳನ್ನು ನಿರ್ಮಿಸುವ ಕೆಲಸಗಳು ನಡೆಯುತ್ತಿದೆ. ಅಫ್ಘಾನಿಸ್ತಾನದಾದ್ಯಂತ 150 ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದ್ದು, 40 ಖಾಸಗಿ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಸಾರ್ವಜನಿಕ ಶಾಲೆಗಳಲ್ಲಿ ಹುಡುಗಿಯರಿಗೆ ಆರನೇ ತರಗತಿಯವರೆಗೂ ತರಗತಿಗೆ ಹಾಜರಾಗಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದಿದ್ದಾರೆ.

    ಕಳೆದ ವರ್ಷ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಅಫ್ಘಾನಿಸ್ತಾನದ ಹಲವೆಡೆ ಹೆಣ್ಣು ಮಕ್ಕಳಿಗೆ 7ನೇ ತರಗತಿಯ ನಂತರ ಶಾಲೆಗೆ ಹೋಗಲು ಅನುಮತಿ ನೀಡಲಾಗಿಲ್ಲ. ಅಲ್ಲದೇ ದೇಶದಲ್ಲಿ ಬಾಲಕಿಯರ ಶಾಲೆಗಳನ್ನು ಮುಚ್ಚುತ್ತಿರುವುದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

  • ಆಫ್ಘಾನ್ ಸಂಗೀತಗಾರನ ಮುಂದೆಯೇ ವಾದ್ಯ ಸುಟ್ಟ ತಾಲಿಬಾನಿಗಳು

    ಆಫ್ಘಾನ್ ಸಂಗೀತಗಾರನ ಮುಂದೆಯೇ ವಾದ್ಯ ಸುಟ್ಟ ತಾಲಿಬಾನಿಗಳು

    ಕಾಬೂಲ್: ಆಫ್ಘಾನ್ ಸಂಗೀತಗಾರನ ಮುಂದೆಯೇ ತಾಲಿಬಾನ್ ಸಿಬ್ಬಂದಿ ಆತನ ವಾದ್ಯವನ್ನು ಸುಟ್ಟುಹಾಕಿದ್ದಾನೆ.

    ಅಫ್ಘಾನಿಸ್ತಾನದಲ್ಲಿ ಸಂಗೀತಗಾರನ ಮುಂದೆಯೇ ತಾಲಿಬಾನ್ ಸಂಗೀತ ವಾದ್ಯವನ್ನು ಸುಟ್ಟು ಹಾಕಿರುವುದರ ಕುರಿತ ವೀಡಿಯೋವನ್ನು ಅಲ್ಲಿನ ವರದಿಗಾರ ಟ್ವಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಸಂಗೀತ ವಾದ್ಯ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ. ಇದನ್ನು ನೋಡಿ ಸಂಗೀತಗಾರ ಅಳುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.

    ಅಫ್ಘಾನಿಸ್ತಾನದ ಹಿರಿಯ ವರದಿಗಾರ ಅಬ್ದುಲ್ಹಕ್ ಒಮೆರಿ ಟ್ವಿಟ್ಟರ್ ನಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಂದೂಕು ಹಿಡಿದ ಸಿಬ್ಬಂದಿ, ಅಳುತ್ತಿದ್ದ ಸಂಗೀತಗಾರನನ್ನು ನೋಡಿ ನಗುತ್ತಿರುವ ದೃಶ್ಯ ಸಹ ಸೆರೆಯಾಗಿದೆ. ಇದನ್ನು ನೋಡಿದ ನೆಟ್ಟಿಗರು ತಾಲಿಬಾನ್ ಕ್ರೂರತೆ ಎಷ್ಟರ ಮಟ್ಟಿಗೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ವಾರಪೂರ್ತಿ ಜನಜಾತ್ರೆ, ವಾರಾಂತ್ಯದಲ್ಲಿ ಕರ್ಫ್ಯೂ – ಆತಂಕದಲ್ಲಿ ಕಾಫಿನಾಡು ಜನತೆ

    ಸಂಗೀತಗಾರ ಎಷ್ಟೇ ಕೇಳಿಕೊಂಡರೂ, ಅತ್ತರೂ ಆತನ ಕಡೆ ಗಮನಕೊಡದೆ ಸಿಬ್ಬಂದಿ ಸಂಗೀತಗಾರನ ಸಂಗೀತ ವಾದ್ಯವನ್ನು ಸುಟ್ಟುಹಾಕಿದರು. ಇದನ್ನು ನೋಡಿದ ಸಂಗೀತಗಾರನ ಅಳು ಮುಗಿಲು ಮುಟ್ಟಿತ್ತು. ಈ ಘಟನೆಯು ಅಫ್ಘಾನಿಸ್ತಾನದ ಝಜೈಅರುಬ್ ಜಿಲ್ಲೆಯಲ್ಲಿ ನಡೆದಿದೆ ಎಂದು ಒಮೆರಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಈ ಹಿಂದೆ ತಾಲಿಬಾನಿಗಳು ವಾಹನಗಳಲ್ಲಿ ಸಂಗೀತ ಪ್ರದರ್ಶನ ಹಾಗೂ ಮದುವೆಗಳಲ್ಲಿ ಲೈವ್ ಸಂಗೀತವನ್ನು ನಿಷೇಧಿಸಿದೆ.

    ಇದರ ಜೊತೆಗೆ ತಾಲಿಬಾನಿಗಳು ಷರಿಯಾ ಕಾನೂನನ್ನು ಸಹ ಜಾರಿಗೆ ತಂದಿದ್ದು, ಅಫ್ಘಾನಿಸ್ತಾನದ ಹೆರಾತ್ ಪ್ರಾಂತ್ಯದ ಬಟ್ಟೆ ಅಂಗಡಿಗಳಲ್ಲಿ ಇದ್ದ ಹೆಣ್ಣು ಗೊಂಬೆಗಳ ಶಿರಚ್ಛೇದ ಮಾಡಲಾಗುತ್ತಿದೆ. ಇದನ್ನೂ ಓದಿ: ಗಾಳಿಪಟ ಹಾರಿಸುವಾಗ ಬಿದ್ದು ಒಂದೇ ದಿನ 63ಕ್ಕೂ ಹೆಚ್ಚು ಮಂದಿಗೆ ಗಾಯ

    ಬಟ್ಟೆ ಅಂಗಡಿಯಲ್ಲಿ ಹೆಣ್ಣು ಗೊಂಬೆಗಳನ್ನು ಬಳಸುವುದು ಷರಿಯಾ ಕಾನೂನಿನ ಉಲ್ಲಂಘನೆ ಎಂದು ತಾಲಿಬಾನ್ ತಿಳಿಸಿದೆ. ಈ ಹೊಸ ಮಾರ್ಗಸೂಚಿಗಳನ್ನು ನಾವು ಅನುಸರಿಸುವುದಿಲ್ಲ ಎಂದು ಕೆಲವು ಗುಂಪುಗಳು ವಿರೋಧವನ್ನು ವ್ಯಕ್ತಪಡಿಸಿವೆ.

  • ಮನುಷ್ಯಾಕೃತಿ ಬೊಂಬೆಗಳ ತಲೆಯನ್ನು ಕತ್ತರಿಸಿ – ತಾಲಿಬಾನ್ ಆದೇಶ

    ಮನುಷ್ಯಾಕೃತಿ ಬೊಂಬೆಗಳ ತಲೆಯನ್ನು ಕತ್ತರಿಸಿ – ತಾಲಿಬಾನ್ ಆದೇಶ

    ಕಾಬುಲ್: ಅಫ್ಘಾನಿಸ್ತಾನದ ಅಂಗಡಿ ಮಾಲೀಕರಿಗೆ ತಾಲಿಬಾನ್ ಮನುಷ್ಯಾಕೃತಿಯ ಬೊಂಬೆ ತಲೆಗಳನ್ನು ತೆಗೆದು ಹಾಕುವಂತೆ ಸೂಚಿಸಿದೆ. ಮನುಷ್ಯಾಕೃತಿಯ ಬೊಂಬೆಗಳು ಇಸ್ಲಾಮಿಕ್ ಧರ್ಮಕ್ಕೆ ವಿರೋಧವಾದುದು ಎಂಬ ಕಾರಣಕ್ಕೆ ಈ ಹೊಸ ವಿಲಕ್ಷಣ ಆದೇಶವನ್ನು ಜಾರಿಗೊಳಿಸಿದೆ.

    ಕಳೆದ ವರ್ಷ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಮಹಿಳೆಯರ ಸ್ವಾತಂತ್ರವನ್ನು ಮೊಟಕುಗೊಳಿಸುತ್ತಿದೆ. ಮಹಿಳೆಯರಿಗೆ ಹಿಜಾಬ್ ಕಡ್ಡಾಯಗೊಳಿಸಿರುವುದರಿಂದ ಹಿಡಿದು ಹದಿಹರೆಯದ ಹೆಣ್ಣು ಮಕ್ಕಳು ಶಾಲೆಗೆ ಹೋಗುವುದನ್ನು ತಡೆಯುವವರೆಗೆ ತಾಲಿಬಾನ್ ಅಮಾನವೀಯ ನೀತಿಗಳನ್ನು ಜಾರಿಗೊಳಿಸಿದೆ. ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ಭಾರತದ ನೆರವು – ಇರಾನ್ ಸಹಾಯ

    ಇದೀಗ ತಾಲಿಬಾನ್ ಸರ್ಕಾರ ಅಂಗಡಿಗಳಲ್ಲಿ ಬಳಕೆಯಾಗುವ ಮನುಷ್ಯಾಕೃತಿಗಳ ಬೊಂಬೆಗಳ ತಲೆಗಳನ್ನು ತೆಗೆದುಹಾಕುವಂತೆ ಅಫ್ಘಾನಿಸ್ತಾನದ ಜನರಿಗೆ ಸೂಚಿಸಿದೆ. ಮನುಷ್ಯಾಕೃತಿ ಅಥವಾ ಪ್ರತಿಮೆಗಳು ಇಸ್ಲಾಂ ಧರ್ಮಕ್ಕೆ ವಿರುದ್ಧವಾಗಿವೆ. ಇವುಗಳನ್ನು ವಿರೂಪಗೊಳಿಸಬೇಕು ಎಂದು ಹೆರಾತ್ ಪ್ರಾಂತ್ಯ ಸಚಿವಾಲಯ ಮುಖ್ಯಸ್ಥರಾದ ಅಜೀಜ್ ರಹಮಾನ್ ಹೇಳಿದ್ದಾರೆ. ಇದನ್ನೂ ಓದಿ: ಯಾವುದೇ ಆರೋಪವಿಲ್ಲದಿದ್ರೂ 3 ವರ್ಷ ಜೈಲುವಾಸ ಅನುಭವಿಸಿದ ಸೌದಿ ರಾಜಕುಮಾರಿ!

    ಮೂಲಗಳ ಪ್ರಕಾರ ಕೆಲವು ಅಂಗಡಿ ಮಾಲೀಕರು ಬೊಂಬೆಗಳ ತಲೆಯನ್ನು ಬಟ್ಟೆಗಳಿಂದ ಮುಚ್ಚಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಇದನ್ನು ಬಯಲು ಮಾಡುತ್ತಲೇ ದೊಡ್ಡ ಮೊತ್ತದ ದಂಡವನ್ನು ಹಲವು ಅಂಗಡಿ ಮಾಲೀಕರಿಗೆ ವಿಧಿಸಿದೆ.