Tag: Taliban

  • ಮಹಿಳಾ ಸಚಿವಾಲಯವನ್ನೇ ತೆಗೆದ ತಾಲಿಬಾನ್ ಸರ್ಕಾರ

    ಮಹಿಳಾ ಸಚಿವಾಲಯವನ್ನೇ ತೆಗೆದ ತಾಲಿಬಾನ್ ಸರ್ಕಾರ

    ಕಾಬೂಲ್: ತಾಲಿಬಾನ್ ಸರ್ಕಾರ ಮಹಿಳಾ ಸಚಿವಾಲಯವನ್ನೇ ತೆಗೆದು ಹಾಕಿದ್ದು, ಸದ್ಗುಣ ಸಚಿವಾಲಯ ಎಂದು ಬದಲಿಸಿದೆ. ಈ ಮೂಲಕ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಭರವಸೆಗೆ ವಿರುದ್ಧವಾಗಿ ವರ್ತಿಸುತ್ತಿದೆ.

    ದೇಶದ ಮಹಿಳಾ ಸಚಿವಾಲಯವನ್ನು ತಾಲಿಬಾನ್‍ನ ನೈತಿಕ ಪೊಲೀಸ್‍ಗೆ ಬದಲಿಸುವುದಕ್ಕೆ ಸಹಿ ಹಾಕಿದೆ ಎಂದು ವರದಿಯಾಗಿದೆ. ಅಲ್ಲದೆ ಇಲಾಖೆಯ ಮಹಿಳಾ ಉದ್ಯೋಗಿಗಳನ್ನು ಕಟ್ಟಡದಿಂದ ಹೊರಗೆ ಹಾಕಲಾಗಿದೆ. ಮಹಿಳಾ ಸಚಿವಾಲಯವನ್ನು ಪ್ರಾರ್ಥನೆ, ಮಾರ್ಗದರ್ಶನ ಹಾಗೂ ಸದ್ಗುಣಗಳ ಪ್ರಚಾರ, ದುರಾಚಾರ ತಡೆ ಸಚಿವಾಲಯ ಎಂದು ಬದಲಿಸಲಾಗಿದೆ. ಇದನ್ನೂ ಓದಿ: ಆಡಿದ್ರೆ ದೇಹ ಪ್ರದರ್ಶನವಾಗುತ್ತೆ – ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಕ್ರೀಡೆ ನಿಷೇಧ

    ಮಹಿಳೆಯರು ಕೆಲಸ ಮಾಡಲು ಅವಕಾಶ ನಿಡುವುದಿಲ್ಲ ಎಂದು ತಾಲಿಬಾನ್ ಈಗಾಗಲೇ ಘೋಷಿಸಿದೆ. ಆದರೆ ಶಿಕ್ಷಣ ಪಡೆಯಬಹುದು ಎಂದು ಹೇಳಿದೆ. ಹೀಗಾಗಿ ಇದೀಗ ಮಹಿಳಾ ಸಚಿವಾಲಯದ ಉದ್ಯೋಗಿಗಳನ್ನು ಸಹ ಕಚೇರಿಯಿಂದ ಹೊರಗೆ ಹಾಕಲಾಗಿದೆ. ಮಹಿಳೆಯರು ಕೆಲಸ ಮಾಡುವುದನ್ನು ಅನುಮತಿಸುತ್ತಿಲ್ಲ. ಮಹಿಳೆಯರು ಕೆಲಸಕ್ಕೆ ತೆರಳಲು ಪ್ರಯತ್ನಿಸಿದಾಗ ವಾಪಸ್ ಮನೆಗೆ ಕಳುಹಿಸಲಾಗುತ್ತಿದೆ. ಇದನ್ನೂ ಓದಿ: ತಾಲಿಬಾನ್ ಸರ್ಕಾರ ವಿರುದ್ಧ ಸಿಡಿದ ಅಫ್ಘಾನ್ ಮಹಿಳೆಯರು

    ಮಹಿಳೆಯರು ಕೆಲಸಕ್ಕಾಗಿ ಕಚೇರಿಗೆ ತೆರಳುವುಕ್ಕೆ ನಿರ್ಬಂಧ ವಿಧಿಸಿದ ಬಳಿಕ ಸಚಿವಾಲಯದ ಬಹುತೇಕ ಮಹಿಳಾ ಉದ್ಯೋಗಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮ ಕುಟುಂಬದಲ್ಲಿ ನಾನೊಬ್ಬಳೇ ಕೆಲಸ ಮಾಡುವುದು, ಯಾವುದೇ ಸಚಿವಾಲಯದಲ್ಲಿ ಕೆಲಸವಿಲ್ಲದಿದ್ದಾಗ ಅಫ್ಘಾನ್ ಮಹಿಳೆಯರು ಏನು ಮಾಡಬೇಕು ಎಂದು ಅಳಲು ತೋಡಿಕೊಂಡಿದ್ದಾರೆ.

  • ತಾಲಿಬಾನ್ ಸರ್ಕಾರ ವಿರುದ್ಧ ಸಿಡಿದ ಅಫ್ಘಾನ್ ಮಹಿಳೆಯರು

    ತಾಲಿಬಾನ್ ಸರ್ಕಾರ ವಿರುದ್ಧ ಸಿಡಿದ ಅಫ್ಘಾನ್ ಮಹಿಳೆಯರು

    ಕಾಬೂಲ್: ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಮಹಿಳೆಯರಿಗೆ ಅಪಾಯಕಾರಿ ದೇಶವಾಗಿದೆ. ತಾಲಿಬಾನ್ ಆಡಳಿತದಲ್ಲಿ ಮಹಿಳೆಯರು ಅನೇಕ ಕ್ರೂರ ನಿರ್ಬಂಧಗಳನ್ನು ಎದುರಿಸುತ್ತಿದ್ದಾರೆ.

    ತಾಲಿಬಾನ್ ಸರ್ಕಾರ ಅಫ್ಘಾನಿಸ್ತಾನದಲ್ಲಿರುವ ಮಹಿಳೆಯರಿಗೆ ಬುರ್ಕಾ ಧರಿಸುವಂತೆ ಆದೇಶ ಹೊರಡಿಸಿದೆ. ಅಲ್ಲದೇ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುವವರು ಮುಖ ಕಾಣದಂತೆ ವಸ್ತ್ರ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಇದನ್ನೂ ಓದಿ:  ಇಎಸ್‍ಐಯಿಂದ ಹೃದ್ರೋಗ ವಿಭಾಗದ ಸ್ಥಳಾಂತರ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು: ಬಿ.ಟಿ.ನಾಗಣ್ಣ

    ಈ ನಿಯಮವನ್ನು ವಿರೋಧಿಸಿ ಮಹಿಳೆಯರು ಅಫ್ಘಾನಿಸ್ತಾನದ ಸಾಂಪ್ರದಾಯಿಕ ಉಡುಪು ಧರಿಸಿ ಫೋಟೋ ಕ್ಲಿಕ್ಕಿಸಿಕೊಂಡು ಪೋಸ್ಟ್ ಮಾಡುವ ಮೂಲಕ ಆನ್‍ಲೈನ್‍ನಲ್ಲಿ ಅಭಿಯಾನ ಆರಂಭಿಸಿದ್ದಾರೆ. #DoNotTouchMyClothes #AfghanistanCulture ಎಂಬ ಹ್ಯಾಶ್ ಟ್ಯಾಗ್ ಮೂಲಕ ತಮ್ಮ ಸಂಸ್ಕೃತಿಯ ಶ್ರೀಮಂತಿಕೆಯನ್ನು ಮರೆಸುತ್ತಿದ್ದಾರೆ. ಇದನ್ನೂ ಓದಿ:  ಕೊಯ್ನಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ

    ಸದ್ಯ ಈ ನಿಯಮಗಳನ್ನು ವಿರೋಧಿಸಿ, ಈ ಅಭಿಯಾನಕ್ಕೆ ದಿನೇ ದಿನೇ ಹಲವಾರು ಮಹಿಳೆಯರು ಕೈ ಜೋಡಿಸುತ್ತಿದ್ದಾರೆ ಮತ್ತು ಸಂಪ್ರದಾಯಿಕ ಕಪ್ಪು ಬುರ್ಖಾಕ್ಕೆ ಅಫ್ಘಾನಿಸ್ತಾನದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

  • ಪ್ರಮಾಣವಚನ ಸ್ವೀಕಾರ ಸಮಾರಂಭವನ್ನೇ ರದ್ದುಗೊಳಿಸಿದ ತಾಲಿಬಾನ್ ಸರ್ಕಾರ

    ಪ್ರಮಾಣವಚನ ಸ್ವೀಕಾರ ಸಮಾರಂಭವನ್ನೇ ರದ್ದುಗೊಳಿಸಿದ ತಾಲಿಬಾನ್ ಸರ್ಕಾರ

    ಕಾಬೂಲ್: ತಾಲಿಬಾನ್ ಸರ್ಕಾರ ರಚನೆಯಾಗಿದ್ದು, ಸೆಪ್ಟೆಂಬರ್ 11ಕ್ಕೆ ಪ್ರಮಾಣವಚನ ಸಮಾರಂಭ ನಡೆಯಲಿದೆ ಎನ್ನಲಾಗಿತ್ತು. ಆದರೆ ತಾಲಿಬಾನ್ ಸರ್ಕಾರ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ರದ್ದುಗೊಳಿಸಿದೆ. ಸಂಪನ್ಮೂಲ ಹಾಗೂ ಹಣ ವ್ಯರ್ಥವಾಗುವ ಹಿನ್ನೆಲೆ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದಾಗಿ ತಾಲಿಬಾನ್ ತಿಳಿಸಿದೆ.

    ಪ್ರಮಾಣವಚನ ಸಮಾರಂಭ ನಡೆಸಿದರೆ ಸಂಪನ್ಮೂಲ ಹಾಗೂ ಹಣ ವ್ಯರ್ಥವಾಗುತ್ತದೆ ಎಂಬ ಉದ್ದೇಶದಿಂದ ರದ್ದುಗೊಳಿಸಲಾಗಿದೆ ಎಂದು ತಾಲಿಬಾನ್ ಸರ್ಕಾರ ತಿಳಿಸಿದೆ. ಸೆಪ್ಟೆಂಬರ್ 11ರಂದು ಅಫ್ಘಾನಿಸ್ತಾನದಲ್ಲಿನ ನೂತನ ತಾಲಿಬಾನ್ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದರೆ ಇದೀಗ ರದ್ದುಗೊಳಿಸಿರುವುದಾಗಿ ತಾಲಿಬಾನ್ ತಿಳಿಸಿದೆ. ಇದನ್ನೂ ಓದಿ: ತಾಲಿಬಾನಿಗಳ ಕ್ರೂರತ್ವ- ಮನೆ, ಮನೆಗೆ ನುಗ್ಗಿ ಯುವಕರ ಬರ್ಬರ ಹತ್ಯೆ

    ಇತ್ತ ಪಾಕಿಸ್ತಾನ ಇಂಟರ್‍ನ್ಯಾಷನಲ್ ಏರ್‍ಲೈನ್ಸ್ ಕಾಬೂಲ್‍ಗೆ ವಿಮಾನ ಹಾರಾಟವನ್ನು ಮುಂದಿನ ವಾರ ಆರಂಭಿಸುತ್ತಿದೆ. ಇಸ್ಲಾಮಾಬಾದ್‍ನಿಂದ ಕಾಬೂಲ್‍ಗೆ ಮುಂದಿನ ವಾರ ಪಾಕಿಸ್ತಾನ ವಿಮಾನಗಳು ಹಾರಾಟ ನಡೆಸಲಿವೆ ಎಂದು ಪಾಕಿಸ್ತಾನ ವಕ್ತಾರರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಈ ಮೂಲಕ ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಮೊದಲ ಬಾರಿಗೆ ವಿದೇಶಿ ವಾಣಿಜ್ಯ ಸೇವೆಯನ್ನು ಆರಂಭಿಸಿದಂತಾಗುತ್ತದೆ.

    ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದಂತೆ ಶೇ.97ರಷ್ಟು ಆಫ್ಘನ್ನರು 2022ರ ಮಧ್ಯದಲ್ಲಿ ಬಡತನದಲ್ಲಿ ಸಿಲುಕಬಹುದು. ಅಲ್ಲದೆ ಅಫ್ಘಾನಿಸ್ತಾನದ ನೈಜ ಜಿಡಿಪಿ ಶೇ.13.2ರಷ್ಟು ಸಂಕುಚಿತಗೊಳ್ಳಬಹುದು ಎಂದು ವಿಶ್ವಸಂಸ್ಥೆ ಅಂದಾಜಿಸಿದೆ. ಇದನ್ನೂ ಓದಿ: ಆಡಿದ್ರೆ ದೇಹ ಪ್ರದರ್ಶನವಾಗುತ್ತೆ – ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಕ್ರೀಡೆ ನಿಷೇಧ

  • ತಾಲಿಬಾನಿಗಳ ಕ್ರೂರತ್ವ- ಮನೆ, ಮನೆಗೆ ನುಗ್ಗಿ ಯುವಕರ ಬರ್ಬರ ಹತ್ಯೆ

    ತಾಲಿಬಾನಿಗಳ ಕ್ರೂರತ್ವ- ಮನೆ, ಮನೆಗೆ ನುಗ್ಗಿ ಯುವಕರ ಬರ್ಬರ ಹತ್ಯೆ

    -ಅಮರುಲ್ಲಾ ಸಲೇಹ್ ಸಹೋದರ ವಶ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಕ್ರೂರತ್ವ ಮಿತಿಮೀರಿ ಹೋಗುತ್ತಿದೆ. ಪಂಜ್‍ಶೀರ್ ಪ್ರಾಂತ್ಯದಲ್ಲಿ ತಾಲಿಬಾನ್ ವಿರೋಧಿ ನಾರ್ದನ್ ಅಲಯನ್ಸ್ ಯೋಧರು ದಿಟ್ಟ ಹೋರಾಟದ ನಡುವೆಯೂ ತಾಲಿಬಾನಿಗಳು ಪಂಜ್‍ಶೀರ್‍ ಗೆ ನುಗ್ಗಿದ್ದಾರೆ. ಅಲ್ಲದೆ ಮನೆ, ಮನೆಗೆ ನುಗ್ಗಿ ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿ ಮಾರಣಹೋಮ ನಡೆಸುತ್ತಿದ್ದಾರೆ.

    ತಾಲಿಬಾನಿಗಳಿಂದ ತಪ್ಪಿಸಿಕೊಳ್ಳಲು ಅಲ್ಲಿಯ ಜನರು ಗ್ರಾಮಗಳನ್ನು ತೊರೆಯುತ್ತಿದ್ದಾರೆ. ಹಂಗಾಮಿ ಉಪಾಧ್ಯಕ್ಷ, ನಾರ್ದನ್ ಅಲಯನ್ಸ್ ಅನ್ನು ಮುನ್ನಡೆಸುತ್ತಿರುವ ಅಮರುಲ್ಲಾ ಸಲೇಹ್ ಸದ್ಯ ಪಂಜ್‍ಶೀರ್ ಅನ್ನು ತೊರೆದಿದ್ದಾರೆ. ಅಲ್ಲಿ ಸಿಕ್ಕ ಸಲೇಹ್ ಸಹೋದರ ರೋಹುಲ್ಲಾ ಸಲೇಹ್ ರನ್ನು ವಶಕ್ಕೆ ಪಡೆದ ತಾಲಿಬಾನಿಗಳು ಚಿತ್ರಹಿಂಸೆ ನೀಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಆಡಿದ್ರೆ ದೇಹ ಪ್ರದರ್ಶನವಾಗುತ್ತೆ – ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಕ್ರೀಡೆ ನಿಷೇಧ

    ಇಂದು ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ. 2001 ಇದೇ ದಿನ ಅಮೆರಿಕಾ ಮೇಲೆ ಅಲ್‍ಕೈದಾ ದಾಳಿ ನಡೆಸಿತ್ತು. ಹೀಗಾಗಿ ಅಮೆರಿಕಾಗೆ ಠಕ್ಕರ್ ಕೊಡುವುದಕ್ಕಾಗಿ ಅಫ್ಘಾನ್‍ನಲ್ಲಿ ತಾಲಿಬಾನ್ ಸರ್ಕಾರ ಅಸ್ತಿತ್ವಕ್ಕೆ ಇಂದೇ ಬರುವ ನಿರೀಕ್ಷೆ ಇದೆ. ಇದನ್ನೂ ಓದಿ: ತಾಲಿಬಾನ್‍ನಲ್ಲಿ ಸರ್ಕಾರ ಘೋಷಣೆ – ಮೋಸ್ಟ್ ವಾಂಟೆಡ್ ಉಗ್ರ ಈಗ ಆಂತರಿಕ ಸಚಿವ

    ಪದವಿಗಳಿಗೆ ಬೆಲೆ ಇಲ್ಲ:
    ತಾಲಿಬಾನ್ ಆಡಳಿತದಲ್ಲಿ ಪಿಹೆಚ್‍ಡಿಗಳಿಗೆ, ಪದವಿಗಳಿಗೆ ಬೆಲೆ ಇಲ್ಲ. ಇದನ್ನು ಅಲ್ಲಿನ ಶಿಕ್ಷಣ ಮಂತ್ರಿಯೇ ಅಧಿಕೃತವಾಗಿ ಘೋಷಿಸಿದ್ದಾರೆ. ನೀವೇ ನೋಡಿ ಅಧಿಕಾರ ನಡೆಸ್ತಿರುವ ಮುಲ್ಲಾಗಳು, ತಾಲಿಬಾನಿಗಳಿಗೆ ಪಿಹೆಚ್‍ಡಿಯ ಕೋಡು ಇವೆಯಾ? ಅವರಿಗೆ ಕನಿಷ್ಠ ಹೈಸ್ಕೂಲ್ ಶಿಕ್ಷಣ ಕೂಡ ಇಲ್ಲ. ಆದ್ರೂ ಎಲ್ಲರಿಗಿಂತ ಉತ್ತಮ ಆಡಳಿತ ನೀಡ್ತಿದ್ದು, ಅವರೇ ಎಲ್ಲರಿಗಿಂತ ಶ್ರೇಷ್ಠ ಎಂದು ತಾಲಿಬಾನ್ ಸರ್ಕಾರದ ಶಿಕ್ಷಣ ಮಂತ್ರಿ ಶೇಖ್ ಮೌಲ್ವಿ ನೂರಲ್ಲಾ ಹೇಳಿದ್ದಾರೆ.

  • ಆಡಿದ್ರೆ ದೇಹ ಪ್ರದರ್ಶನವಾಗುತ್ತೆ – ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಕ್ರೀಡೆ ನಿಷೇಧ

    ಆಡಿದ್ರೆ ದೇಹ ಪ್ರದರ್ಶನವಾಗುತ್ತೆ – ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಕ್ರೀಡೆ ನಿಷೇಧ

    ಕಾಬೂಲ್: ಅಫ್ಘಾನಿಸ್ತಾನದ ಹೆಸರನ್ನು ಇಸ್ಲಾಮಿಕ್ ಎಮಿರೇಟ್ಸ್ ಆಫ್ ಅಫ್ಘಾನಿಸ್ತಾನ ಎಂದು ಬದಲಾಯಿಸಿ ಮಧ್ಯಂತರ ಸರ್ಕಾರ ರಚಿಸಿರುವ ತಾಲಿಬಾನ್ ಉಗ್ರರು ಈಗ ಪೂರ್ಣ ಪ್ರಮಾಣದಲ್ಲಿ ಷರಿಯಾ ಕಾನೂನು ಜಾರಿಗೊಳಿಸಿ ಮಹಿಳೆಯರಿಗೆ ಕ್ರೀಡೆಯನ್ನು ನಿಷೇಧಿಸಿದ್ದಾರೆ.

    ಈ ಸಂಬಂಧ ತಾಲಿಬಾನ್ ಸುಪ್ರೀಂ ಲೀಡರ್ ಮೌಲ್ವಿ ಹೈಬತುಲ್ಲಾ ಅಖುಂಡ್‍ಜಾದಾ ಹೆಸರಿನಲ್ಲಿ ಆಡಳಿತ ವಿಧಾನವನ್ನು ಪ್ರಕಟಿಸಿದೆ. ಯಾರು ಭವಿಷ್ಯದ ಬಗ್ಗೆ ಆತಂಕ ಪಡಬೇಕಿಲ್ಲ. ಎಲ್ಲಾ ಸಮಸ್ಯೆಗಳಿಗೂ ಸರಿಯಾದ ಪರಿಹಾರ ಹುಡುಕುತ್ತೇವೆ ಎಂದಿದೆ.

    ಷರಿಯತ್ ಕಾನೂನು ಅನುಸಾರವಾಗಿ ಅಫ್ಘಾನಿಗಳ ಜೀವನವನ್ನು ರೂಪಿಸುತ್ತೇವೆ. ಇದಕ್ಕೆ ಅಫ್ಘಾನ್ ಪ್ರಜೆಗಳು ತಾಲಿಬಾನ್ ಸರ್ಕಾರವನ್ನು ಬೆಂಬಲಿಸಬೇಕು. ತಜ್ಞರು ದೇಶ ಬಿಟ್ಟು ಹೋಗಬಾರದು ಎಂದು ಕೋರಿದೆ. ಇದನ್ನೂ ಓದಿ: ಕಾರವಾರದ ಕಡಲತೀರದಲ್ಲಿ ಅಪ್ರಾಪ್ತ ಪ್ರೇಮಿಗಳ ಕಾಮಕೇಳಿ ಆಟ- ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ 

    ತಾಲಿಬಾನ್ ಆಡಳಿತದಲ್ಲಿ ಪಿಹೆಚ್‍ಡಿಗಳಿಗೆ, ಪದವಿಗಳಿಗೆ ಬೆಲೆ ಇಲ್ಲ. ಇದನ್ನು ಅಲ್ಲಿನ ಶಿಕ್ಷಣ ಮಂತ್ರಿಯೇ ಅಧಿಕೃತವಾಗಿ ಘೋಷಿಸಿದ್ದಾರೆ. ನೀವೇ ನೋಡಿ ಅಧಿಕಾರ ನಡೆಸ್ತಿರುವ ಮುಲ್ಲಾಗಳು, ತಾಲಿಬಾನಿಗಳಿಗೆ ಪಿಹೆಚ್‍ಡಿಯ ಕೋಡು ಇವೆಯಾ? ಅವರಿಗೆ ಕನಿಷ್ಠ ಹೈಸ್ಕೂಲ್ ಶಿಕ್ಷಣ ಕೂಡ ಇಲ್ಲ. ಆದ್ರೂ ಎಲ್ಲರಿಗಿಂತ ಉತ್ತಮ ಆಡಳಿತ ನೀಡ್ತಿದ್ದು, ಅವರೇ ಎಲ್ಲರಿಗಿಂತ ಶ್ರೇಷ್ಠ ಎಂದು ತಾಲಿಬಾನ್ ಸರ್ಕಾರದ ಶಿಕ್ಷಣ ಮಂತ್ರಿ ಶೇಖ್ ಮೌಲ್ವಿ ನೂರಲ್ಲಾ ಹೇಳಿದ್ದಾರೆ. ಇದನ್ನೂ ಓದಿ: ಕುಕ್ಕೆ, ಧರ್ಮಸ್ಥಳದಲ್ಲಿ ತೀರ್ಥ, ಪ್ರಸಾದ, ಅನ್ನ ಸಂತರ್ಪಣೆ ಆರಂಭ

    ಮಹಿಳೆಯರಿಗೆ ಟಫ್ ರೂಲ್ಸ್
    ಕ್ರಿಕೆಟ್‍ನಂತಹ ಕ್ರೀಡೆ ಸೇರಿದಂತೆ ಯಾವುದೇ ಕ್ರೀಡೆಗಳಲ್ಲಿ ಮಹಿಳೆಯರು ಭಾಗಿಯಾಗಲು ಅನುಮತಿಯಿಲ್ಲ. ಕ್ರೀಡೆಗಳಲ್ಲಿ ಇಸ್ಲಾಮಿಕ್ ಡ್ರೆಸ್ ಕೋಡ್ ಪಾಲನೆ ಆಗುವುದಿಲ್ಲ. ಕ್ರೀಡೆಗಳಲ್ಲಿ ಪಾಲ್ಗೊಂಡರೆ ದೇಹ ಪ್ರದರ್ಶನವಾಗುತ್ತದೆ. ಇದರಿಂದಾಗಿ ಮಹಿಳಾ ಕ್ರೀಡಾಪಟುಗಳಿಗೆ ಮುಖ, ಶರೀರ ಮುಚ್ಚಿಕೊಳ್ಳಲು ಸಾಧ್ಯವಿಲ್ಲ.

  • ತಾಲಿಬಾನ್‍ನಲ್ಲಿ ಸರ್ಕಾರ ಘೋಷಣೆ – ಮೋಸ್ಟ್ ವಾಂಟೆಡ್ ಉಗ್ರ ಈಗ ಆಂತರಿಕ ಸಚಿವ

    ತಾಲಿಬಾನ್‍ನಲ್ಲಿ ಸರ್ಕಾರ ಘೋಷಣೆ – ಮೋಸ್ಟ್ ವಾಂಟೆಡ್ ಉಗ್ರ ಈಗ ಆಂತರಿಕ ಸಚಿವ

    ಕಾಬೂಲ್: ಅಧಿಕಾರಕ್ಕಾಗಿ ತಾಲಿಬಾನಿಗಳ ನಡುವೆ ಕಿತ್ತಾಟ, ಅಸಮಾಧಾನದ ನಡುವೆಯೇ ಹೊಸ ಸರ್ಕಾರದ ಘೋಷಣೆ ಆಗಿದೆ. ತಾಲಿಬಾನ್ ಸರ್ಕಾರದ ಹಂಗಾಮಿ ಪ್ರಧಾನಿಯಾಗಿ ಮುಲ್ಲಾ ಮೊಹಮ್ಮದ್ ಹಸನ್ ಅಖುಂಡ್, ಉಪಪ್ರಧಾನಿಯಾಗಿ ಮುಲ್ಲಾ ಬರಾದರ್ ನೇಮಕವಾಗಿದ್ದಾರೆ.

    ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹೆದ್ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ರಚನೆಯ ಮಾಹಿತಿಯನ್ನು ನೀಡಿದ್ದಾರೆ. ಎರಡನೇ ಉಪಪ್ರಧಾನಿಯಾಗಿ ಮುವಾಲ್ವಿ ಹನ್ನಾಪಿ, ರಕ್ಷಣಾ ಸಚಿವರಾಗಿ ಮುಲ್ಲಾ ಯಾಕೂಬ್, ಆಂತರಿಕ ಸಚಿವರಾಗಿ ಹಕ್ಕಾನಿ ನೆಟ್‍ವರ್ಕ್‍ನ ಅಂತಾರಾಷ್ಟ್ರೀಯ ಉಗ್ರ ಸಿರಾಜುದ್ದೀನ್ ಹಕ್ಕಾನಿ ಸೇರಿ 33 ಮಂದಿಯನ್ನು ನೇಮಕ ಮಾಡಲಾಗಿದೆ. ಅಮೆರಿಕದ ಗುಪ್ತಚರ ಸಂಸ್ಥೆ ಎಫ್‍ಬಿಐ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಸಿರಾಜುದ್ದೀನ್ ಹಕ್ಕಾನಿಗೆ ಆಂತರಿಕ ಸಚಿವ ಸ್ಥಾನ ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

    ತಾಲಿಬಾನ್‍ನ ಅತ್ಯುನ್ನತ ಮಂಡಳಿ `ರೆಹಬರಿ ಷುರಾ’ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪಾಕ್ ಆಪೇಕ್ಷೆಯಂತೆ ಬರಾದಾರ್ ಹೆಸರನ್ನು ಪ್ರಧಾನಿ ಹುದ್ದೆಗೆ ಪರಿಗಣಿಸಿಲ್ಲ. ಜೊತೆಗೆ ಉಗ್ರರ ಸರ್ಕಾರದಲ್ಲಿ ಮಹಿಳೆಯರಿಗೆ ಸ್ಥಾನ ಕಲ್ಪಿಸಿಲ್ಲ. ಇದನ್ನೂ ಓದಿ: ಪತಿ, ಮಕ್ಕಳ ಮುಂದೆಯೇ 8 ತಿಂಗಳ ಗರ್ಭಿಣಿ ಪೊಲೀಸ್ ಅಧಿಕಾರಿಯ ಹತ್ಯೆಗೈದ್ರು! 

    ಸೆಪ್ಟೆಂಬರ್ 11ರಂದು ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ. 2001 ಇದೇ ದಿನ ಅಮೆರಿಕ ಮೇಲೆ ಅಲ್‍ಕೈದಾ ದಾಳಿ ನಡೆಸಿತ್ತು. ಕಳೆದ ಶುಕ್ರವಾರ ನಡೆದ ಗದ್ದುಗೆ ಗಲಾಟೆಯಲ್ಲಿ ತಾಲಿಬಾನ್ ಸಹಸಂಸ್ಥಾಪಕ ಮುಲ್ಲಾ ಬರಾದಾರ್ ಮೇಲೆ ಹಕ್ಕಾನಿ ಗುಂಪು ಹಲ್ಲೆ ಮಾಡಿ ಗಾಯಗೊಳಿಸಿದೆ ಎಂದು ವರದಿಯಾಗಿತ್ತು. ಪರಿಸ್ಥಿತಿ ಮೀರಬಹುದು ಎಂದು ಅಂದಾಜಿಸಿದ ಪಾಕಿಸ್ತಾನದ ಐಎಸ್‍ಐ ಮುಖ್ಯಸ್ಥ ಫಯಾಜ್ ಹಮೀದ್ ಕೂಡಲೇ ಕಾಬೂಲ್‍ಗೆ ತೆರಳಿದ್ದರು. ಇದನ್ನೂ ಓದಿ: ಅಂದು ಗಾಳಿಯಲ್ಲಿ ಗುಂಡು ಹಾರಿಸಿ ತಾಲಿಬಾನಿಗಳ ಸಂಭ್ರಮ – ಇಂದು ಅಮೆರಿಕದ ವಿರುದ್ಧ ಸಿಟ್ಟು

  • ಅಫ್ಘಾನಿಸ್ತಾನದ ಪಂಜಶೀರ್ ವಶಪಡಿಸಿಕೊಂಡ ತಾಲಿಬಾನ್

    ಅಫ್ಘಾನಿಸ್ತಾನದ ಪಂಜಶೀರ್ ವಶಪಡಿಸಿಕೊಂಡ ತಾಲಿಬಾನ್

    ಕಾಬೂಲ್: ತಾಲಿಬಾನ್ ಪಂಜ್‍ಶೀರ್ ವಶಪಡಿಸಿಕೊಂಡಿದೆ ಎಂದು ಹೇಳಿಕೊಂಡಿದೆ. ಪಂಜ್‍ಶೀರ್ ಪ್ರಾಂತ್ಯದ ಹೋರಾಟಗಾರರ ನ್ಯಾಶನಲ್ ರೆಸಿಸ್ಟೆನ್ಸ್ ಫ್ರಂಟ್ ಆಫ್ ಅಫ್ಘಾನಿಸ್ತಾನ ಪಡೆ ನೀಡಿದ್ದ ಕದನ ವಿರಾಮ ಕರೆಯನ್ನು ತಾಲಿಬಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ.

    ತಾಲಿಬಾನ್ ಅದಾಗಲೇ ತಾವು ಪಂಜ್‍ಶೀರ್ ಪ್ರಾಂತ್ಯವನ್ನು ಸಂಪೂರ್ಣವಾಗಿ ವಶಕ್ಕೆ ಪಡಿಸಿಕೊಂಡಿದ್ದೇವೆ ಎಂದು ಪ್ರತಿಪಾದಿಸಿದೆ. ಯುದ್ಧ ಮಾಡುವುದೇನೂ ಇಲ್ಲ. ಪಂಜ್‍ಶೀರ್ ನಮ್ಮ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಿದ್ದಲ್ಲದೆ, ಪಂಜಶಿರ್ ಪ್ರಾಂತ್ಯದ ಗವರ್ನರ್ ಕಚೇರಿ ಮೇಲೆ ತಾಲಿಬಾನ್ ಧ್ವಜ ಹಾರಿಸಿದ್ದಾಗಿ ಸ್ಥಳೀಯ ನ್ಯೂಸ್ ವರದಿ ಮಾಡಿದೆ.

    ತಾಲಿಬಾನಿಗಳ ಹೇಳಿಕೆಯನ್ನು ಸ್ಥಳೀಯ ಹೋರಾಟ ಪಡೆಗಳು ಅಲ್ಲಗಳೆದಿದ್ದವು. ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಾಲೇಹ್ ಆಪ್ತವಲಯದ ಪ್ರತಿನಿಧಿಯೊಬ್ಬರು ಮಾತನಾಡಿ, ಪಂಜ್‍ಶೀರ್ ನಮ್ಮ ವಶದಲ್ಲೇ ಇದೆ. ಇಲ್ಲಿನ ಗುಡ್ಡಗಾಡುಗಳೆಲ್ಲ ನಮ್ಮ ಜನರೇ ಇದ್ದಾರೆ. ಆದರೆ ತಾಲಿಬಾನ್ ಪಾಕಿಸ್ತಾನದ ಡ್ರೋನ್ ನೆರವಿನಿಂದ ಬಾಂಬ್ ದಾಳಿ ನಡೆಸುತ್ತಿದೆ ಎಂದು ಹೇಳಿದ್ದರು. ಇದನ್ನೂ ಓದಿ:  ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠಕ್ಕೆ ಸುಧಾಮೂರ್ತಿ ಭೇಟಿ

    ಹೋರಾಟ ನಿಲ್ಲಿಸುವುದಿಲ್ಲ ಮತ್ತು ನಮ್ಮ ಸೈನ್ಯವನ್ನು ಪಂಜಶಿರ್ ಕಣಿವೆಯಿಂದ ವಾಪಸ್ ಪಡೆಯುವುದಿಲ್ಲ ಎಂದು ತಾಲಿಬಾನಿ ಗಳು ಹೇಳಿದ್ದಾರೆ. ಪಂಜ್‍ಶೀರ್  ಉಳಿಸಿಕೊಳ್ಳುವ ಹೋರಾಟದಲ್ಲಿ ಎನ್‍ಆರ್‍ಎಫ್ ಪಡೆ ನಿನ್ನೆ ರಾತ್ರಿ ವಕ್ತಾರ ಫಾಹಿಮ್ ದಷ್ಟಿ ಸೇರಿ ಮೂವರು ಪ್ರಮುಖ ನಾಯಕರನ್ನು ಕಳೆದುಕೊಂಡಿದೆ. ಅದರ ಬೆನ್ನಲ್ಲೇ ಸಂಘಟನೆ ಮುಖ್ಯಸ್ಥ ಅಹ್ಮದ್ ಮಸೂದ್ ಕದನ ವಿರಾಮಕ್ಕೆ ಕರೆ ನೀಡಿದ್ದರು. ಶಾಂತಿಯುತ ಮಾತುಕತೆಗೆ ನಾವು ಸಿದ್ಧರಿದ್ದೇವೆ, ತಾಲಿಬಾನ್ ತನ್ನ ಸೈನಿಕರನ್ನು ಹಿಂಪಡೆದರೆ ನಾವೂ ಸುಮ್ಮನಾಗುತ್ತೇವೆ ಎಂದು ಹೇಳಿದ್ದರು. ಆದರೆ ಅಹ್ಮದ್ ಮಸೂದ್ ಮನವಿಯನ್ನು ತಾಲಿಬಾನಿಗಳು ಸಾರಾಸಗಾಟವಾಗಿ ತಿರಸ್ಕರಿಸಿದ್ದಾರೆ.

    ಶಾಂತಿ ಮಾತುಕತೆಗೆ ಮುಂದಾದಾಗ ಅಹ್ಮದ್ ಮಸೂದ್ ಅದನ್ನು ಒಪ್ಪದೆ, ಹೋರಾಟ ಮುಂದುವರಿಸಿದ್ದರು. ಈಗ ನಾವ್ಯಾಕೆ ಅವರ ಕದನ ವಿರಾಮ ಮನವಿ ಒಪ್ಪಬೇಕು. ನಮಗೆ ಅಹ್ಮದ್ ಜೊತೆ ಮಾತನಾಡಲು ಏನೂ ಇಲ್ಲ ಎಂದು ತಾಲಿಬಾನಿಗಳು ಸ್ಪಷ್ಟಪಡಿಸಿದ್ದಾಗಿ ಮಾಧ್ಯಮವೊಂದು ವರದಿ ಮಾಡಿದೆ.

  • ಪತಿ, ಮಕ್ಕಳ ಮುಂದೆಯೇ 8 ತಿಂಗಳ ಗರ್ಭಿಣಿ ಪೊಲೀಸ್ ಅಧಿಕಾರಿಯ ಹತ್ಯೆಗೈದ್ರು!

    ಪತಿ, ಮಕ್ಕಳ ಮುಂದೆಯೇ 8 ತಿಂಗಳ ಗರ್ಭಿಣಿ ಪೊಲೀಸ್ ಅಧಿಕಾರಿಯ ಹತ್ಯೆಗೈದ್ರು!

    ಕಾಬೂಲ್: ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ತಮ್ಮ ವಶಕ್ಕೆ ಪಡೆದುಕೊಂಡ ಬಳಿಕ ಪ್ರತಿನಿತ್ಯ ಹಿಂಸಾತ್ಮಕ ಘಟನೆಗಳನ್ನು ನಡೆಸುತ್ತಲೇ ಇದ್ದಾರೆ. ಇದೀಗ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಆಕೆಯ ಪತಿ ಹಾಗೂ ಮಕ್ಕಳ ಎದುರೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

    ಈ ಘಟನೆ ಅಫ್ಘಾನಿಸ್ತಾನದ ಘೋರ್ ಪ್ರಾಂತ್ಯದ ಕೇಂದ್ರ ನಗರದ ಫಿರೋಜ್ಕೋಹ್ ನಲ್ಲಿ ನಡೆದಿದೆ. ಮೃತ ಮಹಿಳಾ ಅಧಿಕಾರಿಯನ್ನು ಬಾನು ನೆಗರ್ ಎಂದು ಗುರುತಿಸಲಾಗಿದೆ. ಈಕೆ ಸ್ಥಳೀಯ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, 8 ತಿಂಗಳ ಗರ್ಭಿಣಿಯಾಗಿದ್ದರು.

    ಮಹಿಳಾ ಅಧಿಕಾರಿಯನ್ನು ತಾಲಿಬಾನಿಗಳು ಗುಂಡಿಟ್ಟು ಕೊಂದು ಬಳಿಕ ಆಕೆಯ ಮುಖವನ್ನು ವಿರೂಪಗೊಳಿಸಿದ್ದಾರೆ. ಸದ್ಯ ಸ್ಥಳೀಯ ತಾಲಿಬಾನ್ ಈ ಗಟನೆಯ ಕುರಿತು ತನಿಖೆ ನಡೆಸುವ ಭರವಸೆ ನೀಡಿದೆ ಎಂದು ಕುಟುಂಬ ಹೇಳಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಹೊಸ ಸರ್ಕಾರ ರಚನೆ- ಎರಡು ವಾರಗಳ ಬಳಿಕ ಆಡಳಿತ ಆರಂಭ?

    ಅಫ್ಘಾನಿಸ್ತಾನ ತಮ್ಮ ವಶವಾದ ಬಳಿಕ ತಾಲಿಬಾನಿಗಳು ಉದಾರವಾದಿಗಳೆಂದು ಬಿಂಬಿಸುಲು ಪ್ರಯತ್ನಿಸುತ್ತಿದ್ದಾರೆ. ಆದರೂ ಕಾಬೂಲ್ ನಲ್ಲಿ ಉಗ್ರರ ಗುಂಪು ತಮ್ಮ ವಿರೋಧಿಗಳನ್ನು ಸಿಕ್ಕ ಸಿಕ್ಕಲ್ಲಿ ಕೊಲೆ ಮಾಡುತ್ತಿರುವುದಲ್ಲದೇ, ಅಮಾಯಕರನ್ನು ಕೂಡ ಬಲಿ ತೆಗೆದುಕೊಳ್ಳುವ ಮೂಲಕ ರಾಕ್ಷಸ ಕ್ರೌರ್ಯ ಮೆರೆಯುತ್ತಿದ್ದಾರೆ.

  • ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಹೊಸ ಸರ್ಕಾರ ರಚನೆ- ಎರಡು ವಾರಗಳ ಬಳಿಕ ಆಡಳಿತ ಆರಂಭ?

    ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಹೊಸ ಸರ್ಕಾರ ರಚನೆ- ಎರಡು ವಾರಗಳ ಬಳಿಕ ಆಡಳಿತ ಆರಂಭ?

    ಕಾಬೂಲ್: ಅಘ್ಘಾನಿಸ್ತಾನದಲ್ಲಿ ಇಂದು ತಾಲಿಬಾನ್ ಸರ್ಕಾರ ರಚನೆಯಾಗುವ ಸಾಧ್ಯತೆಯಿದ್ದು, ಈ ಮೂಲಕ ಅಫ್ಘಾನ್ ವಶಪಡಿಸಿಕೊಂಡ ಎರಡು ವಾರಗಳ ಬಳಿಕ ಆಡಳಿತ ಆರಂಭಿಸುವ ನಿರೀಕ್ಷೆ ಇದೆ.

    ಇಂದು ತಾಲಿಬಾನ್ ಮುಖ್ಯಸ್ಥರಿಂದ ಅಧಿಕೃತ ಘೋಷಣೆ ಸಾಧ್ಯತೆ ಇದ್ದು, ನಿನ್ನೆಯೇ ಘೋಷಣೆಯಾಗಬೇಕಿದ್ದ ಸರ್ಕಾರ ರಚನೆ ಕಡೆಯ ಕ್ಷಣದಲ್ಲಿ ತಾಲಿಬಾನ್ ರದ್ದುಗೊಳಿಸಿತ್ತು. ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರದಾರ್ ಪ್ರಧಾನಿ ಹುದ್ದೆಗೆ ಹೆಸರು ಕೇಳಿಬರುತ್ತಿದ್ದು, ಅಫ್ಘಾನ್ ನಲ್ಲಿ ಇರಾನ್ ಮಾದರಿಯ ಅಧ್ಯಕ್ಷೀಯ ಸರ್ಕಾರದ ರಚನೆ ಚಿಂತನೆ ನಡೆದಿದೆ. ಇದನ್ನೂ ಓದಿ: ಪಂಜ್‍ಶೀರ್ ವಶಕ್ಕೆ ಪಡೆದ ತಾಲಿಬಾನಿಗಳಿಂದ ಗಾಳಿಯಲ್ಲಿ ಗುಂಡು!

    ಅಫ್ಘಾನ್ ಅಧ್ಯಕ್ಷರಾಗಲು ತಾಲಿಬಾನ್ ಸರ್ವೋಚ್ಚ ನಾಯಕ ಮುಲ್ಲಾ ಹೆಬತುಲ್ಲಾಹ್ ಅಖುನ್ದಝದ ಸಿದ್ಧರಾಗಿದ್ದು, ಈ ನಿರ್ಧಾರವನ್ನು ಕೈಗೊಳ್ಳಲು ದೋಹಾ ತಾಲಿಬಾನ್ ನಾಯಕರು ನಿರ್ಣಾಯಕ ಪಾತ್ರವಹಿಸಲಿದ್ದಾರೆ. ತಾಲಿಬಾನ್ ಸರ್ಕಾರದಲ್ಲಿ ಶೇ.80ರಷ್ಟು ಪ್ರಾತಿನಿಧ್ಯ ಹೊಂದುವ ನಿರೀಕ್ಷೆ ಇದ್ದು, ಸರ್ಕಾರದಲ್ಲಿ ಮಹಿಳೆಯರ ಪಾತ್ರ ಅನುಮಾನ, ಮಹಿಳೆಯರಿಗೆ ಸರ್ಕಾರದಲ್ಲಿ ಸ್ಥಾನ ಮಾನ ನೀಡದಿರಲು ನಿರ್ಧಾರ ಕೈಗೊಂಡಿದೆ.

    ಈಗಾಗಲೇ ಸಂವಿಧಾನವನ್ನು ರಚನೆ ಮಾಡಿರುವ ತಾಲಿಬಾನ್ ಸರ್ಕಾರ, ರಾಷ್ಟ್ರಗೀತೆ ಮತ್ತು ರಾಷ್ಟ್ರ ಧ್ವಜದ ಬಗ್ಗೆ ನಿರ್ಧಾರ ಮಾಡಿದೆ. ಈಗಾಗಲೇ ಪೊಲೀಸ್ ಮುಖ್ಯಸ್ಥರು, ರಾಜ್ಯಪಾಲರ ಆಯ್ಕೆ ಮಾಡಿರುವ ತಾಲಿಬಾನ್ ನಾಯಕರು, ಇಂದು ಸರ್ಕಾರದ ಘೋಷಣೆ ಮಾಡುವ ನಿರೀಕ್ಷೆ ಇದ್ದು, ಅಫ್ಘಾನ್ ವಶಪಡಿಸಿಕೊಂಡ ಎರಡು ವಾರಗಳ ಬಳಿಕ ಅಫ್ಘಾನ್ ನಲ್ಲಿ ತಾಲಿಬಾನ್ ಆಡಳಿತ ಆರಂಭಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ಇದನ್ನೂ ಓದಿ: ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು

  • ನಾವು ಕಾಶ್ಮೀರಿ ಮುಸ್ಲಿಮರಿಗಾಗಿ ದನಿ ಎತ್ತುತ್ತೇವೆ: ತಾಲಿಬಾನ್

    ನಾವು ಕಾಶ್ಮೀರಿ ಮುಸ್ಲಿಮರಿಗಾಗಿ ದನಿ ಎತ್ತುತ್ತೇವೆ: ತಾಲಿಬಾನ್

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಉಗ್ರಾಡಳಿತವನ್ನು ಜಾರಿಗೆ ತಂದಿರುವ ತಾಲಿಬಾನಿಗಳ ಕೆಟ್ಟ ಕಣ್ಣು ಈಗ ಭಾರತದ ಕಾಶ್ಮೀರದ ಮೇಲೆ ಬಿದ್ದಿದೆ. ನಾವು ಕಾಶ್ಮೀರಿ ಮುಸ್ಲಿಮರಿಗಾಗಿ ಧ್ವನಿ ಎತ್ತುತ್ತೇವೆ ಎಂದು ತಾಲಿಬಾನ್ ಬಹಿರಂಗವಾಗಿ ಹೇಳಿಕೊಂಡಿದೆ.

     

    ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ಪ್ರತ್ಯೇಕ ಸ್ಥಾನಮಾನವನ್ನು ಭಾರತ ಸರ್ಕಾರ ಹಿಂಪಡೆದ ನಂತರ ಅಲ್ಲಿನ ಮುಸ್ಲಿಮರು ಸಿಟ್ಟಾಗಿದ್ದಾರೆ. ಅವರಿಗೆ ಧ್ವನಿಯಾಗುವ ಕೆಲಸ ಮಾಡುತ್ತೇವೆ, ಹೋರಾಡುತ್ತೇವೆ ಎಂದು ಹೇಳಿದೆ. ಕೆಳದಿನಗಳ ಹಿಂದೆ ಪಾಕ್ ಟಿವಿ ಚಾನಲ್ ಒಂದರ ಚರ್ಚೆಯಲ್ಲಿ ಆಡಳಿತ ಪಕ್ಷ ಪಿಟಿಐ ಪ್ರತಿನಿಧಿ, ತಾಲಿಬಾನ್ ನಮ್ಮ ಬೆಂಬಲಕ್ಕೆ ಇದೆ ಎಂದು ಘಂಟಾಘೋಷವಾಗಿ ಸಾರಿದ್ದರು. ಕಾಶ್ಮಿರದ ವಿಮುಕ್ತಿಗಾಗಿ ಅವರು ನಮಗೆ ನೆರವು ನೀಡುತ್ತಾರೆ ಎಂದಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರವಾಗಿದೆ. ಇದನ್ನೂ ಓದಿ: ಅಂದು ಗಾಳಿಯಲ್ಲಿ ಗುಂಡು ಹಾರಿಸಿ ತಾಲಿಬಾನಿಗಳ ಸಂಭ್ರಮ – ಇಂದು ಅಮೆರಿಕದ ವಿರುದ್ಧ ಸಿಟ್ಟು

    ಅಫ್ಘಾನಿಸ್ತಾನದಲ್ಲಿ ಅಧಿಕೃತವಾಗಿ ಉಗ್ರಾಡಳಿತ ಆರಂಭವಾಗಲು ಕೌಂಟ್‍ಡೌನ್ ಶುರುವಾಗಿದೆ. ಇರಾನ್ ಮಾದರಿಯಲ್ಲಿ ಅಫ್ಘಾನಿಸ್ತಾನದ ಸರ್ವೋಚ್ಛ ನಾಯಕರನ್ನಾಗಿ ತಾಲಿಬಾನ್ ಸುಪ್ರೀಂ ಅಖುಂಡಾಜಾದ್ ಹೆಸರನ್ನು ಘೋಷಿಸುವ ಸಂಭವ ಇದೆ. ತಾಲಿಬಾನ್ ಸರ್ಕಾರದ ಮುಖ್ಯಸ್ಥನನ್ನಾಗಿ ಮುಲ್ಲಾ ಬರಾದರ್ ಹೆಸರನ್ನು ಅಯ್ಕೆ ಮಾಡಲಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ತಾಲಿಬಾನ್ ಸಂಸ್ಥಾಪಕ ಮುಲ್ಲಾ ಒಮರ್ ಮಗ ಮುಲ್ಲಾ ಯಾಕೂಬ್, ಸಿರಾಜುದ್ದೀನ್ ಹಕ್ಕಾನಿ ಮತ್ತು ಷೇರ್ ಮಹಮ್ಮದ್ ಸ್ಟಾನ್ಜಾಯ್‍ಗೂ ಪ್ರಮುಖ ಜವಾಬ್ದಾರಿಗಳು ಸಿಗಲಿದೆ ಎನ್ನಲಾಗಿದೆ. ಇದನ್ನೂ ಓದಿ: ಶುಕ್ರವಾರದ ನಮಾಜ್ ಬಳಿಕ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆ

     

     

    ಮಹಿಳೆಯರನ್ನು ಸರ್ಕಾರದಿಂದ ಹೊರಗಿಡಲು ತಾಲಿಬಾನ್ ತೀರ್ಮಾನಿಸಿದೆ. ಆದರೆ ಇದನ್ನು ಪ್ರಶ್ನಿಸಿ ಮಹಿಳೆಯರು ಕಾಬೂಲ್‍ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಹಿಳೆಯರ ಉದ್ಯೋಗ ಮತ್ತು ಶಿಕ್ಷಣದ ಬಗ್ಗೆ ಭರವಸೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಮತ್ತೊಂದೆಡೆ, ಪಂಜಶೀರ್ ಪ್ರಾಂತ್ಯ ತಾಲಿಬಾನಿಗಳ ಪಾಲಿಗೆ ಕೈಗೆಟುಕದ ದ್ರಾಕ್ಷಿಯಂತಾಗಿದೆ. ತಾಲಿಬಾನ್ ವಶದಲ್ಲಿದ್ದ ಎರಡು ಪ್ರದೇಶಗಳನ್ನು ವಶಪಡಿಸಿಕೊಂಡಿದೆ. ಹೀಗಾಗಿ ತಾಲಿಬಾನ್ ರಾಕೆಟ್ ದಾಳಿ ನಡೆಸುತ್ತಿದೆ. ಚರಿಕಾರ್ ನಗರದಲ್ಲಿ ಭಾರೀ ಸ್ಫೋಟ ಉಂಟಾಗಿದೆ. ಆದರೆ ಇದಕ್ಕೆಲ್ಲ ಜಗ್ಗದ ಉತ್ತರದ ಪ್ರತಿರೋಧ ಪಡೆ, ನಮ್ಮ ಕಣಿವೆ ಅತಿಕ್ರಮಿಸಲು ಬಂದರೆ ತಾಲಿಬಾನಿಗಳನ್ನು ನೇರ ನರಕಕ್ಕೆ ಕಳಿಸೋದಾಗಿ ಅಬ್ಬರಿಸಿದೆ.