Tag: Taliban

  • ಕಾಬೂಲ್ ದಾಳಿಯ ಹೊಣೆ ಹೊತ್ತ ISKP ಸಂಘಟನೆ

    ಕಾಬೂಲ್ ದಾಳಿಯ ಹೊಣೆ ಹೊತ್ತ ISKP ಸಂಘಟನೆ

    ಕಾಬೂಲ್: ಅಘ್ಘಾನಿಸ್ತಾನದಲ್ಲಿ ನೆತ್ತರಕೋಡಿ ಹರಿಸಿದ್ದು ನಾವೇ ಎಂದು ಇಸ್ಲಾಮಿಕ್ ಸ್ಟೇಟ್ ಐಎಸ್‍ಕೆಪಿ(ISKP) ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ.

    ಅಮೆರಿಕ ನೇತೃತ್ವದಲ್ಲಿ ಸೇನಾ ಪಡೆಗಳ ಹಿಂತೆಗೆತ ಕಾರ್ಯಾಚರಣೆ ವೇಳೆ ಅಘ್ಘಾನಿಸ್ತಾನದಲ್ಲಿ ಏಳು ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಬಳಿಕ ರಾತ್ರಿಯಿಡಿ ನೆತ್ತರು ಹರಿಸಿದ ಪಾಪಿಗಳು ನಾವು ಎಲ್ಲಾ ಭದ್ರತಾ ತಡೆಗೋಡೆಗಳನ್ನೂ ದಾಟಿ ಅಮೆರಿಕ ಭದ್ರತಾ ಪಡೆಗಳಿರುವ ಪ್ರದೇಶಕ್ಕಿಂತ 16 ಅಡಿ ದೂರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಕ್ಕೆ ಒಬ್ಬ ಬಾಂಬರ್‍ ನಿಂದ ಸಾಧ್ಯವಾಗಿದೆ, ಎಂದು ದಾಳಿಯ ಹೊಣೆ ಹೊತ್ತ ಐಎಸ್‍ಕೆಪಿ ಸಂಘಟನೆ ಪ್ರಚಾರ ಪಡೆದುಕೊಂಡಿದೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು: ಭಾರತ

    ಐಎಸ್‍ಕೆಪಿ ಸಂಘಟನೆ ಅಥವಾ ಐಎಸ್‍ಐಎಸ್-ಕೆ ಇಸ್ಲಾಮಿಕ್ ಸ್ಟೇಟ್ ಖೋರಸಾನ್ ಪ್ರಾಂತ್ಯದ ಐಸಿಸ್ ಉಗ್ರ ಸಂಘಟನೆಯ ಪ್ರಾಂತೀಯ ಸಂಘಟನೆಯಾಗಿದೆ. 2015 ಜನವರಿಯಲ್ಲಿ ಈ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ಐಎಸ್‍ಕೆಪಿ ಸಂಘಟನೆಯು ಆಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ಸಕ್ರಿಯವಾಗಿದೆ ಎಂಬ ಬಗ್ಗೆ ಮಾಹಿತಿ ಇದೆ. ಇದನ್ನೂ ಓದಿ: ಐಸಿಸ್-ಕೆ ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುಡುಗು

    ಜಿಹಾದಿ ಸಂಘಟನೆಗಳಲ್ಲೇ ಅತೀ ಕ್ರೂರವಾದ ಸಂಘಟನೆಯಾಗಿ ಗುರುತಿಸಿಕೊಂಡಿರುವ ಐಎಸ್‍ಕೆಪಿ, ತಾಲಿಬಾನ್ ಮತ್ತು ಅಮೆರಿಕ ಸೇನೆಯನ್ನು ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸಿರುವುದು ಸ್ಪಷ್ಟವಾಗಿದೆ. ತಾಲಿಬಾನ್, ಹಕ್ಕಾನಿ ಸಂಘಟನೆಗಿಂತಲೂ ಐಎಸ್‍ಕೆಪಿ ಸಂಘಟನೆ ಬಲಿಷ್ಠವಾಗಿದ್ದು, ತಾಲಿಬಾನ್‍ನಿಂದ ಹೊರಬಿದ್ದವರೇ ಐಎಸ್‍ಕೆಪಿ ಜೊತೆ ಸೇರಿಕೊಂಡು ಉಗ್ರರಾಗಿದ್ದಾರೆ. ಈ ಪಾಪಿಗಳು ಶಾಲಾ ಮಕ್ಕಳು, ಗರ್ಭಿಣಿ, ಹಸುಗೂಸುಗಳಿಗೂ ಗುಂಡಿಕ್ಕಿದ್ದು, ಆಸ್ಪತ್ರೆಗಳಿಗೂ ನುಗ್ಗಿ ರಕ್ತ ಹರಿಸಿರುವ ಚರಿತ್ರೆಯನ್ನು ಐಎಸ್‍ಕೆಪಿ ಹೊಂದಿದೆ.

  • ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು: ಭಾರತ

    ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು: ಭಾರತ

    ನವದೆಹಲಿ: ಅಘ್ಘಾನಿಸ್ತಾನದಲ್ಲಿ ದಾಳಿ ನಡೆಸಿರುವ ಐಸಿಸ್-ಕೆ ಉಗ್ರರ ಸಂಘಟನೆ ವಿರುದ್ಧ ಭಾರತ ಕಿಡಿಕಾರಿದೆ. ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು ಎಂದು ಕರೆ ನೀಡಿದೆ.

    ಅಘ್ಘಾನಿಸ್ತಾನದ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆಯಿಂದ ಮಧ್ಯರಾತ್ರಿವರೆಗೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಭೀಕರ ಭಯೋತ್ಪಾದಕ ದಾಳಿಗೆ ಭಾರತ ಖಂಡನೆ ಸೂಚಿಸಿದೆ. ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು. ಉಗ್ರರಿಗೆ ಆಶ್ರಯ ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ವಿದೇಶಾಂಗ ಸಚಿವಾಲಯದಿಂದ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಕಾಬೂಲ್‍ನಲ್ಲಿ 7 ಸರಣಿ ಬಾಂಬ್ ಸ್ಫೋಟ – 90ಕ್ಕೂ ಹೆಚ್ಚು ಬಲಿ, 150ಕ್ಕೂ ಹೆಚ್ಚು ಮಂದಿಗೆ ಗಾಯ

    ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ಸರ್ವಪಕ್ಷ ಸಭೆ ಕರೆದು ಮಾತನಾಡಿದ್ದು, ಅಘ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಸ್ಥಿತಿಗತಿಗಳನ್ನು ಭಾರತ ಗಮನಿಸುತ್ತಿದೆ. ಅಘ್ಘಾನಿಸ್ತಾನದಲ್ಲಿ ತಾಲಿಬಾನಿಗಳು ನಡೆಸುತ್ತಿರುವ ದಬ್ಬಾಳಿಕೆ ಗಮನಿಸುತ್ತಿದ್ದು, ಕಾಬೂಲ್‍ನಲ್ಲಿ ಹಲವು ಘಟನೆಗಳು ಸಂಭವಿಸುತ್ತಿದೆ. ಅಲ್ಲಿನ ಜನ ದೇಶ ಬಿಟ್ಟು ತೆರಳಲು ಕಾತರರಾಗಿದ್ದಾರೆ. ಭಾರತ, ಅಮೆರಿಕ ಸಹಿತ ಇತರ ದೇಶ ಕಾಬೂಲ್‍ನಲ್ಲಿ ಐಸಿಸ್ ಸಂಘಟನೆಯ ದಾಳಿಯನ್ನು ಖಂಡಿಸಿದೆ ಮತ್ತು ಎಚ್ಚರಿಕೆ ನೀಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಐಸಿಸ್-ಕೆ ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುಡುಗು

  • ಕಾಬೂಲ್‍ನಲ್ಲಿ 7 ಸರಣಿ ಬಾಂಬ್ ಸ್ಫೋಟ – 90ಕ್ಕೂ ಹೆಚ್ಚು ಬಲಿ, 150ಕ್ಕೂ ಹೆಚ್ಚು ಮಂದಿಗೆ ಗಾಯ

    ಕಾಬೂಲ್‍ನಲ್ಲಿ 7 ಸರಣಿ ಬಾಂಬ್ ಸ್ಫೋಟ – 90ಕ್ಕೂ ಹೆಚ್ಚು ಬಲಿ, 150ಕ್ಕೂ ಹೆಚ್ಚು ಮಂದಿಗೆ ಗಾಯ

    ಕಾಬೂಲ್: ತಾಲಿಬಾನ್ ತೆಕ್ಕೆಗೆ ಹೋಗಿರುವ ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಆತ್ಮಾಹುತಿ ದಾಳಿಗಳಿಂದ ತತ್ತರಿಸಿದೆ. ಭಯೋತ್ಪಾದಕರ ನಗರದಲ್ಲಿನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆಯಿಂದ ಮಧ್ಯರಾತ್ರಿವರೆಗೆ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿವೆ.

    ಕಾಬೂಲ್ ನಗರದಲ್ಲಿ ಮೂರು ಕಡೆ ಸೇರಿ ಒಟ್ಟು ಏಳು ಕಡೆ ಬಾಂಬ್ ಸ್ಫೋಟ ಸಂಭವಿಸಿದ್ದು, ಈವರೆಗೂ ಮಹಿಳೆಯರು, ಮಕ್ಕಳು ಸೇರಿ 90ಕ್ಕೂ ಹೆಚ್ಚು ಮಂದಿ ಬಲಿ ಆಗಿದ್ದಾರೆ. ಇದರಲ್ಲಿ 13 ಅಮೆರಿಕನ್ ಯೋಧರು ಸೇರಿದ್ದಾರೆ. 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಂಭವ ಇದೆ. ಬಾಂಬ್ ಸ್ಫೋಟ ನಡೆದ ಸ್ಥಳದಲ್ಲಿನ ದೃಶ್ಯಗಳು ಬಲು ಭೀಕರವಾಗಿವೆ. ರಕ್ತದ ಕೋಡಿ ಹರಿದಿದೆ. ಇದನ್ನೂ ಓದಿ: ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ – 11 ಮಂದಿ ಸಾವು

    ಮೃತರ ದೇಹಗಳು ಛಿದ್ರ-ಛಿದ್ರವಾಗಿವೆ. ಎಲ್ಲೆಲ್ಲೂ ಆಕ್ರಂದನ ಮುಗಿಲುಮುಟ್ಟಿದೆ. ಇದು ತಮ್ಮ ಕೃತ್ಯ ಎಂದು ಐಎಸ್‍ಕೆಪಿ(ISKP) ಹೇಳಿಕೊಂಡಿದೆ. ಇದು ತಾಲಿಬಾನ್ ಮತ್ತು ಅಮೆರಿಕ ಸೇನೆಯನ್ನು ಟಾರ್ಗೆಟ್ ಮಾಡಿಕೊಂಡು ಐಎಸ್‍ಕೆಪಿ ಈ ದಾಳಿ ನಡೆಸಿರೋದು ಸ್ಪಷ್ಟವಾಗಿದೆ. ಸರಣಿ ಸ್ಫೋಟಗಳು ನಡೆಯುವ ಕೆಲವೇ ಗಂಟೆ ಮೊದಲು ಸಂಭಾವ್ಯ ಆತ್ಮಾಹುತಿ ದಾಳಿ ಕುರಿತಂತೆ ಬ್ರಿಟನ್, ಅಮೆರಿಕ, ಆಸ್ಟ್ರೇಲಿಯಾ ಎಚ್ಚರಿಕೆ ನೀಡಿತ್ತು. ಇದನ್ನೂ ಓದಿ: ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

    ಅಫ್ಘನ್ ತೊರೆಯಲು ಮುಂದಾದವರ ಮೇಲೆ ಭಯೋತ್ಪಾದಕ ದಾಳಿಗಳು ನಡೆಯುವ ಸಂಭವ ಇದೆ. ಕೂಡಲೇ ಸುರಕ್ಷಿತ ಪ್ರಾಂತ್ಯಗಳಿಗೆ ಜನತೆ ತೆರಳಬೇಕೆಂದು ಎಚ್ಚರಿಕೆ ನೀಡಿತ್ತು. ಆದರೆ ಅಷ್ಟರಲ್ಲೇ ಐಎಸ್‍ಕೆಪಿ ಉಗ್ರರು ಈ ಭಯಾನಕ ದಾಳಿ ನಡೆಸಿದ್ದಾರೆ. ಈ ದಾಳಿಯನ್ನು ತಾಲಿಬಾನ್ ಖಂಡಿಸಿರೋದು ವಿಶೇಷ.  ಇದನ್ನೂ ಓದಿ :ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆದ ಅಫ್ಘಾನ್ ಮಾಜಿ ಸಚಿವ! 

  • ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ – 11 ಮಂದಿ  ಸಾವು

    ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ – 11 ಮಂದಿ ಸಾವು

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಒಂದು ಕಡೆ ತಾಲಿಬಾನಿಗಳ ಹಿಂಸೆ ನಡುವೆ, ಕಾಬೂಲ್ ವಿಮಾನ ನಿಲ್ದಾಣದ ಪ್ರವೇಶದ್ವಾರವೊಂದರಲ್ಲಿ ಆತ್ಮಾಹುತಿ ದಾಳಿ ಸಂಭವಿಸಿದೆ.

    ಪ್ರಾಥಮಿಕ ವರದಿಗಳ ಪ್ರಕಾರ 11 ಮಂದಿ ಮೃತಪಟ್ಟಿದ್ದಾರೆ. ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.ತಾಲಿಬಾನಿ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಬ್ರಿಟನ್ ಎಚ್ಚರಿಕೆ ನೀಡಿತ್ತು. ಅಮೆರಿಕ ಕೂಡ ಕಾಬೂಲ್ ಏರ್‍ಪೋರ್ಟ್‍ನಿಂದ ದೂರ ಇರುವಂತೆ ಎಚ್ಚರಿಸಿತ್ತು. ಈ ಬೆನ್ನಲ್ಲೇ ಆತ್ಮಾಹುತಿ ದಾಳಿ ನಡೆದಿದೆ.  ಇದನ್ನೂ ಓದಿ :ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆದ ಅಫ್ಘಾನ್ ಮಾಜಿ ಸಚಿವ! 

    ಯಾರೂ ದೇಶಬಿಟ್ಟು ಹೋಗಬೇಡಿ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ರಚನೆಯಾಗಲಿದೆ ಎಂದು ತಾಲಿಬಾನಿಗಳು ಆಫ್ಘನ್ ಪ್ರಜೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

    ಸಾವಿರಾರು ಜನರು ವಿದೇಶಕ್ಕೆ ತೆರಳಲು ಕಾಬೂಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿರುವ ಹಿನ್ನೆಲೆಯಲ್ಲಿ ಭಯ ಹುಟ್ಟಿಸಲು ಉಗ್ರರು ಈ ಬಾಂಬ್ ದಾಳಿ ನಡೆಸಿದ್ದಾರೆ.

    https://twitter.com/BarzanSadiq/status/1430901687544279043

    ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ದಾಳಿ ಆಗಿರುವುದನ್ನು ಅಮೆರಿಕ ದೃಢಪಡಿಸಿದೆ. ಈ ಸಮಯದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ ಎಂದು ಪೆಂಟಗನ್ ತಿಳಿಸಿದೆ.

  • ತಾಲಿಬಾನಿಗಳು ಉದ್ಧಟತನ ಪ್ರದರ್ಶಿಸಿದರೆ ಮುಲಾಜಿಲ್ಲದೆ ಉತ್ತರ- ಬಿಪಿನ್ ರಾವತ್

    ತಾಲಿಬಾನಿಗಳು ಉದ್ಧಟತನ ಪ್ರದರ್ಶಿಸಿದರೆ ಮುಲಾಜಿಲ್ಲದೆ ಉತ್ತರ- ಬಿಪಿನ್ ರಾವತ್

    ನವದೆಹಲಿ: ತಾಲಿಬಾನಿಗಳು ಉದ್ಧಟತನ ಪ್ರದರ್ಶಿಸಿದರೆ ಮುಲಾಜಿಲ್ಲದೆ ಭಾರತೀಯ ಸೇನೆ ತಕ್ಕ ಉತ್ತರ ನೀಡಲಿದೆ ಎಂದು ಭಾರತದ ಸೇನಾ ಮುಖ್ಯಸ್ಥ    ಜನರಲ್ ಬಿಪಿನ್ ರಾವತ್ ಎಚ್ಚರಿಕೆ ನೀಡಿದ್ದಾರೆ.

    ಈ ಕುರಿತು ದೆಹಲಿಯಲ್ಲಿ ಮಾತನಾಡಿರುವ ಅವರು, ನುಸುಳುವಿಕೆ ಸೇರಿದಂತೆ ಅಫ್ಘಾನಿಸ್ತಾನದ ಕಡೆಯಿಂದ ಯಾವುದೇ ಚಟುವಟಿಕೆ ನಡೆದರೆ ತಕ್ಕ ಉತ್ತರ ನೀಡಲಾಗುವುದು. ನುಸುಳುವಿಕೆಯನ್ನು ನಾವು ಭಯೋತ್ಪಾದನೆಯ ರೀತಿಯಲ್ಲೇ ಉತ್ತರಿಸುತ್ತೇವೆ ಎಂದು ಈಗಾಗಲೇ ಖಚಿತಪಡಿಸಲಾಗಿದೆ. ತಾಲಿಬಾನಿಗಳು ಉದ್ಧಟತನ ಪ್ರದರ್ಶಿಸಿದರೆ ಭಾರತೀಯ ಸೇನೆ ತಕ್ಕ ಉತ್ತರ ನೀಡಲಿದೆ ಎಂದು ಅವರು ಎಚ್ಚರಿಸಿದರು. ಇದನ್ನೂ ಓದಿ: ದೇಶ ಬಿಟ್ಟು ತೆರಳಬೇಡಿ- ತಾಲಿಬಾನ್ ಬೆದರಿಕೆ

    ಇದೇ ವೇಳೆ ಭಯೋತ್ಪಾದನೆಯ ವಿರುದ್ಧ ಜಾಗತಿಕ ಯುದ್ಧದ ಬಗ್ಗೆ ಚರ್ಚೆ ನಡೆಯುತ್ತಿರುವುದರ ಕುರಿತು ಪ್ರತಿಕ್ರಿಯಿಸಿದ್ದಾರೆ. ಸಮನ್ವಯತೆಯಿಂದ ಯಾರೇ ಬೆಂಬಲ ನೀಡಿದರೂ, ಭಯೋತ್ಪಾದನೆಯನ್ನು ಗುರುತಿಸುವುದು, ಭಯೋತ್ಪಾದನೆಯ ವಿರುದ್ಧ ಜಾಗತಿಕ ಯುದ್ಧದ ಕುರಿತು ಯಾವುದೇ ಮಾಹಿತಿ ಬಂದರೂ ಸ್ವಾಗತಾರ್ಹ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

    ಇಂಡೋ-ಪೆಸಿಫಿಕ್ ಮತ್ತು ಅಫ್ಘಾನ್ ಪರಿಸ್ಥಿತಿಯನ್ನು ಒಂದೇ ರೀತಿ ನೋಡಬಾರದು. ಇವು ಎರಡು ವಿಭಿನ್ನ ಸಮಸ್ಯೆಗಳಾಗಿವೆ. ಎರಡೂ ಪ್ರದೇಶಗಳಲ್ಲಿ ಭದ್ರತೆಯ ಸವಾಲುಗಳಿವೆ. ಆದರೆ ಎರಡೂ ಬೇರೆ ಬೇರೆ ರೀತಿಯ ಸಮಸ್ಯೆಗಳನ್ನು ಹೊಂದಿವೆ ಎಂದು ಹೇಳಿದರು.

    ಈ ಪ್ರದೇಶಗಳಲ್ಲಿ ಎಲ್ಲಿ ಏನಾಗುತ್ತದೋ ಎಂಬುದರ ಕುರಿತು ನಾವು ಚಿಂತಾಕ್ರಾಂತರಾಗಿದ್ದೇವೆ. ಕೇವಲ ಉತ್ತರದ ನೆರೆಯವರಲ್ಲ, ಪಶ್ಚಿಮದವರು ಸಹ ಪರಮಾಣು ಶಸ್ತ್ರಾಸ್ತ್ರ ವ್ಯವಸ್ಥೆ ಹೊಂದಿದ್ದಾರೆ. ಕಾರ್ಯತಂತ್ರದ ಆಯುಧಗಳನ್ನು ಹೊಂದಿದ ಇಬ್ಬರು ನೆರೆಯವರು ನಮ್ಮನ್ನು ಸುತ್ತುವರಿದಿದ್ದಾರೆ ಎಂದು ವಿವರಿಸಿದರು.

    ಇದಕ್ಕೆ ತಕ್ಕಂತೆ ನಾವೂ ನಮ್ಮ ತಂತ್ರಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ನಮ್ಮ ನೆರೆಹೊರೆಯವರ ಉದ್ದೇಶಗಳನ್ನು ಅಧ್ಯಯನ ಮಾಡುತ್ತಿದ್ದೇವೆ. ನಮ್ಮ ಸಾಮಥ್ರ್ಯವನ್ನು ಸಹ ಅಭಿವೃದ್ಧಿಪಡಿಸಿಕೊಳ್ಳುತ್ತಿದ್ದೇವೆ. ಅದಕ್ಕೆ ತಕ್ಕಂತೆ ಅಭಿವೃದ್ಧಿ ಹೊಂದುತ್ತಿದ್ದೇವೆ. ಸಾಂಪ್ರದಾಯಿಕ ನಾವು ತುಂಬಾ ಬಲಶಾಲಿಯಾಗಿದ್ದೇವೆ. ನಮ್ಮ ಸಾಂಪ್ರದಾಯಿಕ ಪಡೆಗಳೊಂದಿಗೆ ಎದುರಾಳಿಗಳನ್ನು ಎದುರಿಸಲು ಸಮರ್ಥರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

  • ದೇಶ ಬಿಟ್ಟು ತೆರಳಬೇಡಿ- ತಾಲಿಬಾನ್ ಬೆದರಿಕೆ

    ದೇಶ ಬಿಟ್ಟು ತೆರಳಬೇಡಿ- ತಾಲಿಬಾನ್ ಬೆದರಿಕೆ

    ಕಾಬೂಲ್: ಅಫ್ಘಾನ್ ನಾಗರಿಕರು ದೇಶ ಬಿಟ್ಟು ತೆರಳದಂತೆ ತಾಲಿಬಾನ್ ಉಗ್ರರು ಕಟ್ಟಪ್ಪಣೆ ಹೊರಡಿಸಿದ್ದಾರೆ. ಈನಿಟ್ಟಿನಲ್ಲಿ ಕಾಬೂಲ್ ವಿಮಾನ ನಿಲ್ದಾಣಕ್ಕೆ ಹೋಗದಂತೆ ತಡೆಯೊಡ್ಡುತ್ತಿರುವುದರಿಂದ ಅಫ್ಘಾನ್ ನಾಗರಿಕರು ಕಂಗಾಲಾಗಿದ್ದಾರೆ.

    ಕಾಬೂಲ್ ವಿಮಾನ ನಿಲ್ದಾಣದಿಂದ ವಿದೇಶಿ ಪ್ರಜೆಗಳು ತೆರಳಬಹುದಾಗಿದೆ ಎಂದು ತಾಲಿಬಾನ್ ಉಗ್ರ ಸಂಘಟನೆಯ ವಕ್ತಾರ ಜಬೀವುಲ್ಲಾ ಮಜಾಹಿದ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದು, ಅಫ್ಘಾನಿಸ್ತಾನ್ ಪ್ರಜೆಗಳು ದೇಶ ಬಿಟ್ಟು ತೆರಳದಂತೆ ತಡೆಯೊಡ್ಡಲು ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಆದರೆ ವಿದೇಶಿ ಪ್ರಜೆಗಳು ಈ ರಸ್ತೆಯಲ್ಲಿ ತೆರಳಬಹುದಾಗಿದೆ. ಇದನ್ನೂ ಓದಿ: ಅಘ್ಘಾನ್ ಪ್ರಜೆಗಳಲ್ಲಿ ಇ-ವೀಸಾವಿದ್ದರೆ ಮಾತ್ರ ಭಾರತ ಪ್ರವೇಶ

    ಅಫ್ಘಾನ್ ನಾಗರಿಕರಿಗೆ ತಾಲಿಬಾನ್ ನಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಭರವಸೆ ನೀಡಿರುವುದಾಗಿ ಜಬೀವುಲ್ಲಾ ತಿಳಿಸಿದ್ದು, ಯಾವುದೇ ಕಾರಣಕ್ಕೂ ವೈದ್ಯರು, ಉನ್ನತ ವ್ಯಾಸಂಗ ಮಾಡುವವರು ದೇಶ ಬಿಟ್ಟು ತೆರಳದಂತೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ತಾಲಿಬಾನಿಗಳು ಹುಡುಕುತ್ತಾ ನನ್ನ ಮನೆಗೆ ಬಂದ್ರು: ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್

    ಈಗಾಗಲೇ ಅಮೆರಿಕ ಘೋಷಿಸಿರುವಂತೆ ಅಗಸ್ಟ್ 31ರೊಳಗೆ ಕಾಬೂಲ್ ವಿಮಾನ ನಿಲ್ದಾಣದಿಂದ ಜನರನ್ನು ಏರ್‍ಲಿಫ್ಟ್ ಮಾಡಬೇಕು. ಅಲ್ಲದೇ ಸೇನೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು. ಅಷ್ಟೇ ಅಲ್ಲದೆ ಅಂತಿಮ ಗಡುವನ್ನು ವಿಸ್ತರಿಸುವುದಿಲ್ಲ ಎಂದು ತಾಲಿಬಾನ್ ತಿಳಿಸಿದೆ.

    ಅಗಸ್ಟ್ 31ರ ಬಳಿಕ ಜನರ ಸ್ಥಳಾಂತರಕ್ಕೆ ನಾವು ಅವಕಾಶ ನೀಡುವುದಿಲ್ಲ. ವೈದ್ಯರು, ತಂತ್ರಜ್ಞರು ದೇಶದಲ್ಲಿಯೇ ಇದ್ದು ತಮ್ಮ ಕೆಲಸವನ್ನು ಮುಂದುವರಿಸಬೇಕು ಎಂದು ತಾಲಿಬಾನ್ ಕಟ್ಟಪ್ಪಣೆ ಹೊರಡಿಸಿದೆ.

  • ತಾಲಿಬಾನಿಗಳ ಮೇಲೆ ಗುಂಡಿನ ಮಳೆ – ನಾರ್ಥರ್ನ್ ಅಲಯನ್ಸ್‌ಗೆ ತಜಕಿಸ್ತಾನ ಬೆಂಬಲ

    ತಾಲಿಬಾನಿಗಳ ಮೇಲೆ ಗುಂಡಿನ ಮಳೆ – ನಾರ್ಥರ್ನ್ ಅಲಯನ್ಸ್‌ಗೆ ತಜಕಿಸ್ತಾನ ಬೆಂಬಲ

    ಕಾಬೂಲ್: ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ತಾಲಿಬಾನ್ ಉಗ್ರರಿಗೆ ಈಗ ಉತ್ತರ ಸೇನೆ ಬಲವಾದ ಪ್ರತಿರೋಧ ನೀಡುತ್ತಿದೆ. ಈಗ ಉತ್ತರ ಸೇನೆಗೆ ತಜಕಿಸ್ತಾನ ಸಹ ಬೆಂಬಲ ನೀಡಿದೆ ಎಂಬ ಮಾಹಿತಿಗಳು ಲಭ್ಯವಾಗಿದೆ.

    ದೇಶದ ಗದ್ದುಗೆ ಏರಿದರೂ `ಪಂಜ್‍ಶಿರ್’ ಕಣಿವೆ ಇನ್ನೂ ತಾಲಿಬಾನಿಗಳ ಕೈವಶ ಆಗಿಲ್ಲ. ಹೀಗಾಗಿ ಪಂಜ್‍ಶೀರ್ ಮೂರು ಪ್ರಾಂತ್ಯಗಳನ್ನು ವಶ ಪಡೆಯಲು ತಾಲಿಬಾನ್ ಕಣ್ಣು ಹಾಕಿದೆ. ಇದಕ್ಕೆ ನಾರ್ಥರ್ನ್  ಅಲಯನ್ಸ್‌ ಉಗ್ರ ಹೋರಾಟ ಮಾಡುತ್ತಿದೆ. ಈ ಹೋರಾಟದ ಬೆನ್ನಲ್ಲೇ ಪಂಜ್‍ಶೀರ್ ನಲ್ಲಿ ತಜಕಿಸ್ತಾನದ ಹೆಲಿಕಾಪ್ಟರ್ ಗಳ ಹಾರಾಟ ನಡೆಸಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಆ. 31ರೊಳಗೆ ನಿಮ್ಮ ಸೇನೆ ಇಲ್ಲಿಂದ ಕಾಲ್ಕಿತ್ತಬೇಕು- ಅಮೆರಿಕಾಗೆ ತಾಲಿಬಾನಿಗಳ ಬೆದರಿಕೆ

    ಉತ್ತರ ಸೇನೆಯ ಹೋರಾಟದ ಬಗ್ಗೆ ವಿವರ ನೀಡುವ ನಾರ್ಥರ್ನ್ ಅಲಯನ್ಸ್‌ ಟ್ವಿಟ್ಟರ್ ಖಾತೆ, ಇಂದು ಮುಂಜಾನೆ, ನಮ್ಮ ಹೋರಾಟಕ್ಕೆ ತಜಾಕಿಸ್ತಾನ್ ಹೆಲಿಕಾಪ್ಟರ್ ಗಳಿಂದ ಮೊದಲ ಬೆಂಬಲ ಸಿಕ್ಕಿದೆ. ಸಾಕಷ್ಟು ಸಲಕರಣೆಗಳು, ಬಂದೂಕುಗಳು, ಸಂಪೂರ್ಣ ಮದ್ದುಗುಂಡುಗಳು ಮತ್ತು ಆಹಾರಗಳನ್ನು ಆಮದು ಮಾಡಿಕೊಂಡಿವೆ. ಪ್ರತಿರೋಧದ ಮನೋಬಲ ಹೆಚ್ಚಾಗಿದೆ. ಆರಂಭದಿಂದಲೂ ನಮ್ಮ ನೆರೆಹೊರೆಯವರು ನೀಡಿದ ಎಲ್ಲಾ ಬೆಂಬಲಕ್ಕಾಗಿ ನಾವು ಕೃತಜ್ಞರಾಗಿರುತ್ತೇವೆ ಎಂದು ಹೇಳಿದೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

    ಈಗ ಬಂದಿರುವ ಮಾಹಿತಿಗಳ ಪ್ರಕಾರ ಬಲ್ಘಾನ್‍ನಲ್ಲಿ 300 ತಾಲಿಬಾನಿಗಳನ್ನು ಉತ್ತರ ಸೇನೆ ಹತ್ಯೆ ಮಾಡಿದೆ. ಫುಜ್ ಏರಿಯಾದಲ್ಲಿ 50ಕ್ಕೂ ಹೆಚ್ಚು ತಾಲಿಬಾನಿಗಳ ಹತ್ಯೆ ಮಾಡಿದ್ದರೆ ಬಾನು ಜಿಲ್ಲೆಯಲ್ಲಿ ತಾಲಿಬಾನ್ ಮುಖ್ಯಸ್ಥನನ್ನೇ ನಿರ್ನಾಮ ಮಾಡಿದ್ದಾರೆ ಎಂದು ವರದಿಯಾಗಿದೆ.

    ನಾರ್ಥರ್ನ್ ಅಲಯನ್ಸ್‌ ತಾಲಿಬಾನಿ ಉಗ್ರರ ಮೇಲೆ ಗುಂಡಿನ ಮಳೆ ಸುರಿಸುತ್ತಿರುವ ವಿಡಿಯೋವನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ  ಅಪ್ಲೋಡ್ ಮಾಡಿದೆ.

  • ಆರ್‌ಎಸ್‌ಎಸ್‌ ಕೂಡಾ ತಾಲಿಬಾನ್ ಸಂಘಟನೆಯಂತೆ: ಧ್ರುವ ನಾರಾಯಣ್

    ಆರ್‌ಎಸ್‌ಎಸ್‌ ಕೂಡಾ ತಾಲಿಬಾನ್ ಸಂಘಟನೆಯಂತೆ: ಧ್ರುವ ನಾರಾಯಣ್

    ಮೈಸೂರು: ತಾಲಿಬಾನ್ ಮತ್ತು ಆರ್‌ಎಸ್‌ಎಸ್‌ ಸಂಘಟನೆ ನಡುವೆ ಕೆಲವು ಹೋಲಿಕೆ ಇದೆ. ಹೀಗಾಗಿ ಆರ್‌ಎಸ್‌ಎಸ್‌ ಕೂಡಾ ತಾಲಿಬಾನ್ ಸಂಘಟನೆಯಂತೆ’ ಎಂದು ಚಾಮರಾಜ ನಗರ ಮಾಜಿ ಸಂಸದ ಕೆ.ಪಿ.ಸಿ.ಸಿ. ಕಾರ್ಯಧ್ಯಕ್ಷ ಧ್ರುವ ನಾರಾಯಣ್ ಹೇಳಿಕೆ ನೀಡಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, `ಆರ್‌ಎಸ್‌ಎಸ್‌ನಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಇಲ್ಲ. ಧರ್ಮ ಇಟ್ಕೊಂಡು ಆರ್‌ಎಸ್‌ಎಸ್‌, ತಾಲಿಬಾನ್ ಕೆಲಸ ಮಾಡುತ್ತಿದೆ. ನನ್ನ ವಿರುದ್ಧ ಆರ್‌ಎಸ್‌ಎಸ್‌, ಬಿಜೆಪಿಯವರು ಏನೇ ಹೋರಾಟ ಮಾಡಿದರೂ ನನ್ನ ಹೇಳಿಕೆಗೆ ನಾನು ಬದ್ಧ’ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ನಾನು ಖಾಯಂ ಮುಖ್ಯಮಂತ್ರಿ, ಯಾರು ಏನೇ ಅಂದ್ರು ನನ್ನ ಪದವಿಗೆ ಧಕ್ಕೆ ಆಗಲ್ಲ-ಮುಖ್ಯಮಂತ್ರಿ ಚಂದ್ರು

    ಬೆಂಗಳೂರು-ಮೈಸೂರು ಹೈವೆ ಶ್ರೇಯಸ್ಸು ಎಲ್ಲಾ ಜನಪ್ರತಿನಿಧಿಗಳೂ ಸೇರುತ್ತದೆ. 2013ರಲ್ಲೇ ಅದರ ಪ್ರಾಜೆಕ್ಟ್ ರೆಡಿಯಾಗಿತ್ತು. ಆಗ ರಾಜ್ಯದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಸಿದ್ದರಾಮಯ್ಯ ಹಾಗೂ ಮಹಾದೇವಪ್ಪ ಸೇರಿ ಆಸ್ಕರ್ ಫರ್ನಾಂಡಿಸ್ ಜೊತೆ ಪ್ರಯತ್ನ ಮಾಡಿದ್ದರು. ವಿಶ್ವನಾಥ್ ಅವರ ಜೊತೆಗೂಡಿ ನಾನೂ ಕೂಡಾ ಆ ಪ್ರಯತ್ನದಲ್ಲಿ ಇದ್ದೆ. ನಂತರ ಎನ್‍ಡಿಎ ಸರ್ಕಾರ ಬಂತು. ಪ್ರತಾಪ್ ಸಿಂಹ ಕೂಡಾ ಅದರ ಪ್ರಯತ್ನ ಮಾಡಿದ್ದಾರೆ. ಹಾಗಾಗಿ ಈ ಹೈವೆಯ ಶ್ರೇಯಸ್ಸು ಎಲ್ಲಾ ಜನಪ್ರತಿನಿಧಿಗಳಿಗೂ ಸೇರುತ್ತದೆ ಎಂದರು. ಇದನ್ನೂ ಓದಿ: ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ

    ಆರ್‌ಎಸ್‌ಎಸ್‌-ತಾಲಿಬಾನ್ ಸಂಘಟನೆಯಂತೆ ಎಂದಿದ್ದ ಧ್ರುವ ನಾರಾಯಣ್ ಹೇಳಿಕೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು. ಮೈಸೂರಿನಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

  • ಕಾಬೂಲ್‍ನಿಂದ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿದ ಪಾಕ್ – ಕಾರಣ ಏನು ಗೊತ್ತಾ?

    ಕಾಬೂಲ್‍ನಿಂದ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿದ ಪಾಕ್ – ಕಾರಣ ಏನು ಗೊತ್ತಾ?

    ಕಾಬೂಲ್: ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಡಾಂಬರಿನ ಮೇಲಿನ ಕಸದ ರಾಶಿಯನ್ನು ಉಲ್ಲೇಖಿಸಿ ಭಾನುವಾರ ಅಫ್ಘಾನಿಸ್ತಾನದಿಂದ ಪಾಕಿಸ್ತಾನ ಅಂತರಾಷ್ಟ್ರೀಯ ವಿಮಾನಗಳ ಮೂಲಕ ವಿದೇಶಿ ಪ್ರಜೆಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

    ಕಳೆದ ವಾರ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಯುದ್ಧ-ಪೀಡಿತ ರಾಷ್ಟ್ರದಿಂದ ವಿದೇಶಿ ಪ್ರಜೆಗಳನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ಕೆಲವು ದಿನಗಳಿಂದ ಕಾಬೂಲ್‍ಗೆ ಹೊರಗಿನ ವಿಮಾನಗಳನ್ನು ಕಳುಹಿಸಿಕೊಡುತ್ತಿದ್ದ ಏಕೈಕ ವಾಣಿಜ್ಯ ವಿಮಾನಯಾನ ಸಂಸ್ಥೆ ಪಾಕಿಸ್ತಾನ ಅಂತರಾಷ್ಟ್ರೀಯ ಏರ್ ಲೈನ್ಸ್ ಆಗಿದೆ. ಇದನ್ನೂ ಓದಿ:ಕಾಬೂಲ್‍ನಿಂದ ಭಾರತಕ್ಕೆ ಮರಳ್ತಿದ್ದಂತೆ ತಮ್ಮನಿಗೆ ಕಿಸ್ ಕೊಟ್ಟ ಅಕ್ಕ- ಭಾವನಾತ್ಮಕ ವೀಡಿಯೋ ವೈರಲ್

    ಪಾಕಿಸ್ತಾನ ಕಾಬೂಲ್‍ನ ಹಮೀದ್ ಕರ್ಜೈ ಅಂತರಾಷ್ಟ್ರೀಯವಿಮಾನ ನಿಲ್ದಾಣದ ಡಾಮ್ರ್ಯಾಕ್‍ನಲ್ಲಿನ ಕಸ ರಾಶಿ ಮತ್ತು ಸೌಲಭ್ಯಗಳ ಕೊರತೆಯಿಂದಾಗಿ ಕಾಬೂಲ್ ವಿಮಾನ ಕಾರ್ಯಾಚರಣೆಯನು ಪಾಕಿಸ್ತಾನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸದ್ಯ ಕಾಬೂಲ್ ವಿಮಾನ ನಿಲ್ದಾಣಕ್ಕೆ ಯುಎಸ್ ಮಿಲಿಟರಿಗಳನ್ನು ನಿಯೋಜಿಸಿದ್ದು, ಭದ್ರತೆ ಒದಗಿಸುತ್ತಿದೆ. ಇದನ್ನೂ ಓದಿ:ಪಾರ್ಕ್‍ಗೆ ಬಾ ಅಂತಿದ್ಳು – ಅಂಕಲ್‍ಗಳೇ ಈಕೆಯ ಟಾರ್ಗೆಟ್!

  • ಕಾಬೂಲ್‍ನಿಂದ ಭಾರತಕ್ಕೆ ಮರಳ್ತಿದ್ದಂತೆ ತಮ್ಮನಿಗೆ ಕಿಸ್ ಕೊಟ್ಟ ಅಕ್ಕ- ಭಾವನಾತ್ಮಕ ವೀಡಿಯೋ ವೈರಲ್

    ಕಾಬೂಲ್‍ನಿಂದ ಭಾರತಕ್ಕೆ ಮರಳ್ತಿದ್ದಂತೆ ತಮ್ಮನಿಗೆ ಕಿಸ್ ಕೊಟ್ಟ ಅಕ್ಕ- ಭಾವನಾತ್ಮಕ ವೀಡಿಯೋ ವೈರಲ್

    ನೋಯ್ಡಾ: ಅಫ್ಘಾನಿಸ್ತಾನದಿಂದ ಭಾನುವಾರ ಸುಮಾರು 168 ಮಂದಿ ಗಾಜಿಯಾಬಾದ್‍ನ ಹಿಂಡನ್ ವಾಯುನೆಲೆಗೆ ಬಂದಿಳಿದರು. ಇದರಲ್ಲಿ ಮಕ್ಕಳು ಸಹ ಇದ್ದು, ಇದೀಗ ಇಬ್ಬರು ಮಕ್ಕಳು ನೆಟ್ಟಿಗರ ಗಮನ ಸೆಳೆದಿದ್ದಾರೆ. ತಾಯಿಯ ಮಡಿಲಲ್ಲಿದ್ದ ಪುಟ್ಟ ಕಂದಮ್ಮನಿಗೆ ಆತನ ಅಕ್ಕ ಮುತ್ತಿಟ್ಟ ಭಾವನಾತ್ಮಕ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ವೀಡಿಯೋದಲ್ಲಿ, ಜನರ ಮಧ್ಯೆ ತಾಯಿಯೊಬ್ಬಳು ತನ್ನ ಪುಟ್ಟ ಕಂದಮ್ಮನನ್ನು ಮಡಿಲಲ್ಲಿ ಕೂರಿಸಿಕೊಂಡಿದ್ದಾಳೆ. ಈ ವೇಳೆ ಅಲ್ಲೆ ಇದ್ದ ಪುಟ್ಟ ಹುಡುಗಿಯೊಬ್ಬಳು ಆ ಮಗುವಿನ ಮುಂದೆ ಕುಣಿಯುತ್ತಾ ಕಿಸ್ ಕೊಡುತ್ತಾ ಮುದ್ದಾಡುತ್ತಿರುವುದನ್ನು ಕಾಣಬಹುದಾಗಿದೆ. ಮೇಲ್ನೋಟಕ್ಕೆ ಪುಟ್ಟ ಹುಡುಗಿ ಕಂದಮ್ಮನ ಸಹೋದರಿಯಂತೆ ಕಾಣುತ್ತದೆ. ಸದ್ಯ ಈ ಹೃದಯಸ್ಪರ್ಶಿ ವೀಡಿಯೋಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

    ಈ ವೀಡಿಯೋವನ್ನು ಸರಿಯಾಗಿ ಗಮನಿಸಿದಾಗ ಮಹಿಳೆ, ಕಳೆದ ಏಳು ದಿನಗಳಿಂದ ಅನುಭವಿಸುತ್ತಿರುವ ನರಕಯಾತನೆಯ ಬಗ್ಗೆ ಮಾತನಾಡುವುದನ್ನು ಸಹ ಕೇಳಬಹುದಾಗಿದೆ. ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ಅಲ್ಲಿ ನೆಲೆಸಿದ್ದ ಸಾವಿರಾರು ಮಂದಿ ನರಕಯಾತನೆ ಅನುಭವಿಸಿದ್ದಾರೆ. ಅನೇಕರು ದೇಶ ಬಿಟ್ಟು ತೆರಳಿದ್ದಾರೆ. ಇತ್ತ ಕನ್ನಡಿಗರನ್ನು ಭಾರತಕ್ಕೆ ಕರೆತರುವ ಪ್ರಯತ್ನವೂ ನಡೆಯುತ್ತಿದ್ದು, ಈಗಾಗಲೇ ಹಲವಾರು ಮಂದಿ ತಮ್ಮ ತಾಯ್ನಾಡಿಗೆ ವಾಪಸ್ ಆಗಿದ್ದಾರೆ.  ಇದನ್ನೂ ಓದಿ: ನೀನು ಮಹಿಳೆ ಉದ್ಯೋಗ ಮಾಡುವಂತಿಲ್ಲ, ಮನೆಗೆ ತೆರಳು – ಮಹಿಳಾ ಪತ್ರಕರ್ತೆಗೆ ಗೇಟ್‍ಪಾಸ್

    ಉಗ್ರರು ದೇಶವನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ತಮ್ಮ ಕಣ್ಣ ಮುಂದೆ ನಡೆದಿದ್ದ ಘಟನೆಯನ್ನು ವಿವರಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಮಹಿಳೆಯೊಬ್ಬರ ಆರ್ತನಾದ ಕೇಳಲಾಗದೇ ಏರ್‍ಪೋರ್ಟ್‍ನ ಮುಳ್ಳುತಂತಿ ಗೋಡೆಯ ಮೇಲೆ ಹತ್ತಿದ ಅಮೆರಿಕ ಸೈನಿಕರು, ಆ ಮಹಿಳೆ ಮತ್ತು ಮಗುವೊಂದನ್ನು ಏರ್‍ಪೋರ್ಟ್ ಒಳಗೆ ಎಳೆದುಕೊಂಡಿದ್ದರು. ಕೆಲ ಪೋಷಕರು ತಮ್ಮ ಮುಂದಿನ ತಲೆಮಾರಾದ್ರೂ ತಾಲಿಬಾನಿಗಳ ಕ್ರೂರದೃಷ್ಟಿಗೆ ಬೀಳದಿರಲಿ ಎಂದು ಏರ್‍ಪೋರ್ಟ್ ಕಾಂಪೌಂಡ್ ಬಳಿ ನಿಂತು ಮಕ್ಕಳನ್ನು ಒಳಗೆ ಎಸೆದಿದ್ದು, ಹೀಗೆ ಎಸೆಯುವಾಗ ಕೆಲ ಮಕ್ಕಳು ಮುಳ್ಳಿನ ತಂತಿಗೆ ಸಿಲುಕಿ ಒದ್ದಾಡೋದನ್ನು ನೋಡಲು ಆಗ್ತಿಲ್ಲ ಎಂದು ಅಧಿಕಾರಿಯೊಬ್ಬರು ಕಣ್ಣೀರು ಇಟ್ಟಿದ್ದರು. ಇದನ್ನೂ ಓದಿ: ತಾನು ಸೆಲೆಕ್ಟ್ ಮಾಡಿದ ಹಾಡು ಹಾಕೋವರೆಗೂ ಮದುವೆ ಹಾಲ್‍ಗೆ ತೆರಳಲು ನಿರಾಕರಿಸಿದ ವಧು!

    https://twitter.com/ANI/status/1429324388420112384