Tag: Taliban

  • ಕಾಬೂಲ್ ಗುರುದ್ವಾರ ದಾಳಿ: 3 ಗಂಟೆಗಳ ಕಾಲ ದೇವಾಲಯ ರಕ್ಷಿಸಲು ಹೋರಾಡಿದ ತಾಲಿಬಾನ್

    ಕಾಬೂಲ್ ಗುರುದ್ವಾರ ದಾಳಿ: 3 ಗಂಟೆಗಳ ಕಾಲ ದೇವಾಲಯ ರಕ್ಷಿಸಲು ಹೋರಾಡಿದ ತಾಲಿಬಾನ್

    ಕಾಬೂಲ್: ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ(ISKP) ಕಾಬೂಲ್‍ನ ಗುರುದ್ವಾರವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲು ಪ್ರಯತ್ನಿಸಿದೆ. ಈ ವೇಳೆ ತಾಲಿಬಾನ್ ಯೋಧರು ಅವರ ಜೊತೆ 3 ಗಂಟೆಗಳ ಕಾಲ ಹೋರಾಡಿದ್ದಾರೆ.

    ನಮ್ಮ ಪ್ರವಾದಿಯನ್ನು ಅವಮಾನಿಸಿದ ಭಾರತೀಯ ರಾಜಕಾರಣಿಗಳಿಗೆ ಪ್ರತಿಕ್ರಿಯೆ ಎಂದು ಎಎಸ್‍ಕೆಪಿ ಹೇಳಿಕೊಂಡು ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡುತ್ತಿದೆ. ಈ ವೇಳೆ ಕಾಬೂಲ್‍ನಲ್ಲಿರುವ ಗುರುದ್ವಾರದ ಮೇಲೆ ಎಎಸ್‍ಕೆಪಿ ದಾಳಿ ಮಾಡಲು ಬಂದಿದ್ದು, ಅವರ ಜೊತೆ ತಾಲಿಬಾನ್ ಯೋಧರು ಮೂರು ಗಂಟೆಗಳ ಕಾಲ ದೇವಾಲಯವನ್ನು ರಕ್ಷಿಸಲು ಹೋರಾಡಿದ್ದಾರೆ. ಆದರೆ ಈ ವೇಳೆ ಉಗ್ರರು ಬಳಸಿದ ಸ್ಫೋಟಕಗಳಿಂದ ಯೋಧರಿಗೆ ಗಂಭೀರವಾಗಿ ಗಾಯವಾಗಿದೆ. ಇದನ್ನೂ ಓದಿ: ಅಗ್ನಿಪಥ್ ಪ್ರತಿಭಟನೆಗಳ ನಡುವೆ, ಅಗ್ನಿವೀರರಿಗೆ ಆನಂದ್ ಮಹೀಂದ್ರಾ ಕೊಟ್ರು ಬಿಗ್ ಆಫರ್ 

    ಈ ದಾಳಿಗೆ ಇಂಗಿಮಾಸಿ ಅಬು ಮೊಹಮ್ಮದ್ ಅಲ್-ತಾಜಿಕಿ ನೇತೃತ್ವ ವಹಿಸಿದೆ ಎಂದು ತಿಳಿದುಬಂದಿದೆ. ದೇವಾಲಯವನ್ನು ರಕ್ಷಣೆಗೆ ಮಧ್ಯಪ್ರವೇಶಿಸಲು ಯತ್ನಿಸಿದ ತಾಲಿಬಾನ್ ಯೋಧರೊಂದಿಗೆ ಉಗ್ರಗಾಮಿಗಳು ಮೂರು ಗಂಟೆಗಳಿಗೂ ಹೆಚ್ಚು ಕಾಲ ಹೋರಾಡಿದರು. ನಾಲ್ಕು ಸ್ಫೋಟಕ ಸಾಧನಗಳು ಮತ್ತು ಕಾರ್ ಬಾಂಬ್‍ಗಳನ್ನು ಬಳಸಿ ಯೋಧರಿಗೆ ಹಾನಿ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭಯೋತ್ಪಾದಕ ಗುಂಪು ಕಾಬೂಲ್‍ನಲ್ಲಿ ಹಿಂದೂ ಮತ್ತು ಸಿಖ್ ದೇವಾಲಯಕ್ಕೆ ನುಗ್ಗಿ ಅಲ್ಲಿರುವ ಕಾವಲುಗಾರನನ್ನು ಕೊಲೆ ಮಾಡುತ್ತಿದೆ. ನಂತರ ದೇವಾಲಯದ ಒಳಗಿರುವ ಭಕ್ತರ ಮೇಲೆ ತನ್ನ ಮೆಷಿನ್ ಗನ್ ಮತ್ತು ಹ್ಯಾಂಡ್ ಗ್ರೆನೇಡ್‍ಗಳಿಂದ ಗುಂಡು ಹಾರಿಸಿ ಸಾಯಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಆತ್ಮಹತ್ಯೆಗೆ ಶರಣಾದ ಬೆಂಗಳೂರಿಗೆ ಸಬ್‍ ಇನ್ಸ್‌ಪೆಕ್ಟರ್

    ಶನಿವಾರ ಕಾಬೂಲ್‍ನ ಬಾಗ್-ಎ ಬಾಲಾ ಪಕ್ಕದಲ್ಲಿದ್ದ ಗುರುದ್ವಾರ ಪರ್ವಾನ್‍ನಲ್ಲಿ ಹಲವಾರು ಸ್ಫೋಟಗಳನ್ನು ಸಂಗ್ರಹಿಸಲಾಗಿತ್ತು. ಆದರೆ ಅಫ್ಘಾನ್ ಭದ್ರತಾ ಸಿಬ್ಬಂದಿ ಸ್ಫೋಟಕ ತುಂಬಿದ ವಾಹನವನ್ನು ತಡೆದು ನಿಲ್ಲಿಸುವ ಮೂಲಕ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ.

    Live Tv

  • ಗುರುದ್ವಾರದ ಮೇಲೆ ದಾಳಿ: 100ಕ್ಕೂ ಹೆಚ್ಚು ಸಿಖ್ಖರು, ಹಿಂದೂಗಳಿಗೆ E-Visa

    ಗುರುದ್ವಾರದ ಮೇಲೆ ದಾಳಿ: 100ಕ್ಕೂ ಹೆಚ್ಚು ಸಿಖ್ಖರು, ಹಿಂದೂಗಳಿಗೆ E-Visa

    ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿಯಲ್ಲಿರುವ ಕಾರ್ತೆ ಪರ್ವಾನ್ ಗುರುದ್ವಾರದಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಭಯೋತ್ಪಾದಕರು ದಾಳಿ ನಡೆಸಿದ ನಂತರ ಭಾರತ ಸರ್ಕಾರ ಅಲ್ಲಿನ ಸಿಖ್ಖರು ಹಾಗೂ ಹಿಂದೂಗಳನ್ನು ರಕ್ಷಿಸಲು ಮುಂದಾಗಿದೆ.

    ಆಫ್ಘನ್‌ನಲ್ಲಿರುವ 100ಕ್ಕೂ ಹೆಚ್ಚು ಸಿಖ್ಖರು ಹಾಗೂ ಹಿಂದೂಗಳಿಗೆ ಇ-ವೀಸಾ ನೀಡುತ್ತಿದೆ. ನಿನ್ನೆ ತಡರಾತ್ರಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ. ಇದನ್ನೂ ಓದಿ: ಲಾಲೂ ಯಾದವ್ ಪಕ್ಷದ ಬೆಂಬಲದೊಂದಿಗೆ ಅಗ್ನಿಪಥ್ ವಿರೋಧಿಸಿ ಇಂದು ಬಿಹಾರ್ ಬಂದ್

    ಗುರುದ್ವಾರದ ಮೇಲಿನ ದಾಳಿಯ ಹೊಣೆಯನ್ನು ಇಸ್ಲಾಮಿಕ್ಸ್ ಸ್ಟೇಟ್ಸ್ ಖೊರಾಸನ ಪ್ರಾಂತ್ಯ (ISKP) ಹೊತ್ತಿದ್ದು, `ಅಬು ಮೊಹಮ್ಮದ್ ಅಲ್ ತಾಜಕಿ’ ಮುಸ್ಲಿಂ ಸಂಘಟನೆ ಮೂರು ಗಂಟೆಗಳ ಕಾಲ ದಾಳಿ ನಡೆಸಿದೆ. ಇಬ್ಬರು ಭದ್ರತಾ ಸಿಬ್ಬಂದಿಯನ್ನೂ ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದೆ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧದ ನಡುವೆ ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ 

    ದಾಳಿ ನಡೆದ ಕೆಲವೇ ಗಂಟೆಗಳಲ್ಲಿ ಕಾರ್ತೆ ಪರ್ವಾನ್ ಪ್ರದೇಶವನ್ನು ಸುತ್ತುವರಿದಿದ್ದ ಸೇನಾ ಪಡೆಗಳು ಹಲವು ದಾಳಿಕೋರರನ್ನು ಕೊಂದಿದೆ. ಆದರೆ ನಿಖರ ಅಂಕಿ-ಅಂಶಗಳು ಸಿಕ್ಕಿಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

    ಏನಿದು ಘಟನೆ?
    ಅಫ್ಘಾನಿಸ್ತಾನದ ರಾಜಧಾನಿಯಲ್ಲಿರುವ ಕಾರ್ತೆ ಪರ್ವಾನ್ ಗುರುದ್ವಾರದಲ್ಲಿ ನಿನ್ನೆ ಇಸ್ಲಾಮಿಕ್ ಸ್ಟೇಟ್ಸ್ ಭಯೋತ್ಪಾದಕರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. ಹಲವು ಸ್ಫೋಟಗಳಿಂದ ಸಾವು ನೋವುಗಳಾಗಿದ್ದವು. ದಾಳಿಯಲ್ಲಿ ಸಿಖ್ಖ್ ವ್ಯಕ್ತಿ ಹಾಗೂ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು. ಈ ದಾಳಿಯ ಹಿಂದೆ ಐಸಿಸ್ ಖೊರಾಸನ್ ಕೈವಾಡವಿದೆ ಎಂದು ಶಂಕಿಸಲಾಗಿತ್ತು. ಅಫ್ಘಾನಿಸ್ತಾನದ ಭದ್ರತಾಪಡೆಗಳು ಈ ಪ್ರದೇಶವನ್ನು ಸುತ್ತುವರಿದು ಭಯೋತ್ಪಾದಕರ ವಿರುದ್ಧ ಹೋರಾಟ ಮುಂದುವರಿಸಿದ್ದವು. ಇದರಿಂದ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪರಿಸ್ಥಿತಿಯ ಮೇಲೆ ನಿಗಾ ಇರಿಸಿತ್ತು. ಇಂದು ಅಲ್ಲಿನ ಸಿಖ್ಖ್ ಹಾಗೂ ಹಿಂದೂಗಳಿಗೆ ಆದ್ಯತೆ ಮೇರೆಗೆ ಇ-ವೀಸಾ ನೀಡಲು ಸರ್ಕಾರ ಮುಂದಾಗಿದೆ.

    Live Tv

  • ಗುರುದ್ವಾರದ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ – ಭದ್ರತಾ ಸಿಬ್ಬಂದಿ ಸಾವು

    ಗುರುದ್ವಾರದ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ – ಭದ್ರತಾ ಸಿಬ್ಬಂದಿ ಸಾವು

    ಕಾಬೂಲ್: ಅಫ್ಘಾಸ್ತಾನದ ರಾಜಧಾನಿಯಲ್ಲಿರುವ ಕಾರ್ತೆ ಪರ್ವಾನ್ ಗುರುದ್ವಾರದಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಭಯೋತ್ಪಾದಕರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಹಲವು ಸ್ಫೋಟಗಳಿಂದ ಸಾವು ನೋವುಗಳಾಗಿದ್ದು, ಈ ದಾಳಿಯ ಹಿಂದೆ ಐಸಿಸ್ ಖೊರಾಸನ್ ಕೈವಾಡವಿದೆ ಎಂದು ಶಂಕಿಸಲಾಗಿದೆ.

    Kabul Bomb Blast (4)

    ಮೂಲಗಳ ವರದಿಯ ಪ್ರಕಾರ ಅಪರಿಚಿತ ಶಸ್ತ್ರಾಸ್ತ್ರಧಾರಿಯೊಬ್ಬ ಇಂದು ಮುಂಜಾನೆ ಗುರುದ್ವಾರಕ್ಕೆ ಪ್ರವೇಶಿಸಿದ್ದ ಎನ್ನಲಾಗಿದ್ದು, ಗುರುದ್ವಾರದಲ್ಲಿರುವವರೆಲ್ಲರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗುರುದ್ವಾರದ ದಾಳಿಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಇದರ ಹೊರತಾಗಿ ಸಾವು-ನೋವುಗಳ ಬಗ್ಗೆ ಇನ್ನೂ ದೃಢೀಕೃತ ಮಾಹಿತಿಯಿಲ್ಲ. ಭದ್ರತಾಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದು, ಭಯೋತ್ಪಾದಕರ ವಿರುದ್ಧ ಹೋರಾಟ ಮುಂದುವರಿದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧದ ನಡುವೆ ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ

    ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಗುರುದ್ವಾರ ಕಾರ್ತೆ ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಅಫ್ಘಾನಿಸ್ತಾನದಲ್ಲಿರುವ ಸಿಖ್ಖರಿಗೆ ಜಾಗತಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದಾರೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವೂ ಘಟನೆಯ ಬೆಳವಣಿಗೆಗಳ ಬಗ್ಗೆ ಗಮನ ಹರಿಸುತ್ತಿದೆ. ಜೊತೆಗೆ ಕಾರ್ತೆ ಪರ್ವಾನ್‌ನಲ್ಲಿರುವ ಸಿಖ್ಖರನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ. ಇದನ್ನೂ ಓದಿ: ಲಾಲೂ ಯಾದವ್ ಪಕ್ಷದ ಬೆಂಬಲದೊಂದಿಗೆ ಅಗ್ನಿಪಥ್ ವಿರೋಧಿಸಿ ಇಂದು ಬಿಹಾರ್ ಬಂದ್

    ಹಿನ್ನೆಲೆ ಏನು?
    ಇಸ್ಲಾಮಿಕ್ ಸ್ಟೇಟ್ಸ್ ಭಯೋತ್ಪಾದಕ ಸಂಘಟನೆಯ ಖೊರಾಸನ್ ಪ್ರಾಂತ್ಯದ ಮಾಧ್ಯಮ ವಿಭಾಗವು 2020ರ ಗುರುದ್ವಾರದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕುವ ವೀಡಿಯೋವನ್ನು ಬಿಡುಗಡೆ ಮಾಡಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ. 2020ರ ದಾಳಿಯಲ್ಲಿ ಸುಮಾರು 27 ಸಿಖ್ಖರು ಮೃತಪಟ್ಟಿದ್ದರು, ಹಲವರು ಗಾಯಗೊಂಡಿದ್ದರು. 2021ರಲ್ಲಿ ತಾಲಿಬಾನ್, ಅಫ್ಘಾನಿಸ್ತಾನವನ್ನು ಹಿಡಿತಕ್ಕೆ ತೆಗೆದುಕೊಂಡ ನಂತರ ಸಿಖ್ ಸಮುದಾಯವು ಭಯೋತ್ಪಾದಕ ಸಂಘಟನೆಗಳ ಮಾರಣಾಂತಿಕ ದಾಳಿಗಳಿಂದ ಹೆಚ್ಚು ದುರ್ಬಲವಾಗಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

    Live Tv

  • ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರಿಯಾದ ಅಫ್ಘಾನಿಸ್ತಾನದ ಫೇಮಸ್ ಟಿವಿ ಆ್ಯಂಕರ್

    ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರಿಯಾದ ಅಫ್ಘಾನಿಸ್ತಾನದ ಫೇಮಸ್ ಟಿವಿ ಆ್ಯಂಕರ್

    ಕಾಬೂಲ್: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕವಂತೂ ಅಲ್ಲಿನ ಜನರ ಪರಿಸ್ಥಿತಿ ಹೇಳ ತೀರದಂತಾಗಿದೆ. ಮಹಿಳೆಯರ ಮೇಲೆ ಅಲ್ಲಿನ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ, ಪುರುಷರೂ ಅಲ್ಲಿನ ಸಂಕಷ್ಟಕ್ಕೆ ಹೊರತಾಗಿಲ್ಲ. ಈ ಪರಿಸ್ಥಿತಿಗೆ ಸಾಕ್ಷಿ ಎಂಬಂತೆ ಪತ್ರಕರ್ತನೊಬ್ಬನ ಫೋಟೋಗಳು ವೈರಲ್ ಆಗಿವೆ.

    ವಿವಿಧ ಟಿವಿ ಚಾನೆಲ್‌ಗಳಲ್ಲಿ ಆ್ಯಂಕರ್ ಹಾಗೂ ವರದಿಗಾರನಾಗಿ ಹಲವು ವರ್ಷಗಳಿಂದ ಕೆಲಸ ಮಾಡಿದ್ದ ಅಫ್ಘಾನಿಸ್ತಾನದ ಮೂಸಾ ಮೊಹಮ್ಮದಿ ಈಗ ತನ್ನ ಒಂದು ಹೊತ್ತಿನ ಊಟಕ್ಕೂ ಕಷ್ಟ ಪಡಬೇಕಾದ ಸಂದರ್ಭ ಬಂದೊದಗಿದೆ. ಅಫ್ಘಾನಿಸ್ತಾನದ ಭೀಕರ ಬಡತನದಿಂದಾಗಿ ಮೊಹಮ್ಮದಿಯೂ ಬೀದಿಪಾಲಾಗಿದ್ದು, ತನ್ನ ಕುಟುಂಬವನ್ನು ಪೋಷಿಸಲು ಇದೀಗ ಬೀದಿ ಬೀದಿಗಳಲ್ಲಿ ಆಹಾರವನ್ನು ಮಾರಾಟ ಮಾಡುತ್ತಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸದಿದ್ದರೆ ಮಹಿಳೆಯರು ಪ್ರಾಣಿಗಳಂತೆ ಕಾಣ್ತಾರೆ: ತಾಲಿಬಾನ್

    ಈ ಫೋಟೋವನ್ನು ಟ್ವಿಟ್ಟರ್ ಬಳಕೆದಾರ ಕಬೀರ್ ಹಕ್ಮಲ್ ಫೋಸ್ಟ್ ಮಾಡಿದ್ದು, ಶೀರ್ಷಿಕೆಯಲ್ಲಿ ಇಲ್ಲಿನ ಗಣರಾಜ್ಯ ಪತನವಾದ ಬಳಿಕ ಅಫ್ಘನ್ನರು ಭೀಕರ ಬಡತನವನ್ನು ಅನುಭವಿಸುತ್ತಿದ್ದಾರೆ. ವಿವಿಧ ಟಿವಿ ಚಾನೆಲ್‌ಗಳಲ್ಲಿ ಆ್ಯಂಕರ್ ಹಾಗೂ ವರದಿಗಾರನಾಗಿ ವರ್ಷಗಳಿಂದ ಕೆಲಸ ಮಾಡಿದ ಮೂಸಾ ಮೊಹಮ್ಮದಿ ಈಗ ತಮ್ಮ ಕುಟುಂಬವನ್ನು ಮುನ್ನಡೆಸಲು ಕೈಯಲ್ಲಿ ಹಣವಿಲ್ಲ. ಅಲ್ಪ ಸ್ವಲ್ಪ ಹಣ ಗಳಿಸಲು ಈಗ ಅವರು ಬೀದಿಗಳಲ್ಲಿ ಆಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಪ್ರವಾದಿ ಕುರಿತ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿದ ಅಮೆರಿಕ

    ಮೂಸಾ ಮೊಹಮ್ಮದಿ ಅವರ ಫೋಟೋಗಳು ವೈರಲ್ ಆದ ಬಳಿಕ ಇದು ಅಫ್ಘಾನಿಸ್ತಾನದ ರಾಷ್ಟ್ರೀಯ ರೇಡಿಯೋ ಹಾಗೂ ದೂರದರ್ಶನ ಮಹಾನಿರ್ದೇಶಕ ಅಹ್ಮದುಲ್ಲಾ ವಾಸಿಕ್ ಅವರ ಗಮನಕ್ಕೆ ಬಂದಿದೆ. ಮಾಜಿ ದೂರದರ್ಶನದ ಆ್ಯಂಕರ್ ಹಾಗೂ ವರದಿಗಾರನನ್ನು ತಮ್ಮ ಏಜೆನ್ಸಿಗೆ ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

    Live Tv

  • ಹಿಜಬ್ ಧರಿಸದಿದ್ದರೆ ಮಹಿಳೆಯರು ಪ್ರಾಣಿಗಳಂತೆ ಕಾಣ್ತಾರೆ: ತಾಲಿಬಾನ್

    ಹಿಜಬ್ ಧರಿಸದಿದ್ದರೆ ಮಹಿಳೆಯರು ಪ್ರಾಣಿಗಳಂತೆ ಕಾಣ್ತಾರೆ: ತಾಲಿಬಾನ್

    ಕಾಬೂಲ್: ತಮ್ಮ ದೇಹವನ್ನು ಸಂಪೂರ್ಣವಾಗಿ ಮುಚ್ಚುವ ಇಸ್ಲಾಮಿಕ್ ಹಿಜಬ್ ಧರಿಸದ ಮುಸ್ಲಿಂ ಮಹಿಳೆಯರು ಪ್ರಾಣಿಗಳಂತೆ ಕಾಣಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ತಾಲಿಬಾನ್‍ನ ಧಾರ್ಮಿಕ  ಪೊಲೀಸರು ದಕ್ಷಿಣ ಅಫ್ಘಾನಿಸ್ತಾನದ ಕಂದಹಾರ್ ನಗರದಾದ್ಯಂತ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕಳೆದ ವರ್ಷ ಆಗಸ್ಟ್‌ನಲ್ಲಿ ಆಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ, ಅಫ್ಘಾನ್ ಮಹಿಳೆಯರ ಮೇಲೆ ತಾಲಿಬಾನ್ ಕಠಿಣ ನಿರ್ಬಂಧಗಳನ್ನು ಹೇರಿದೆ. ಮೇ ತಿಂಗಳಲ್ಲಿ ತಾಲಿಬಾನ್ ಮುಖ್ಯಸ್ಥ ಹಿಬತುಲ್ಲಾ ಅಖುಂಡ್ಜಾದಾ, ಮಹಿಳೆಯರು ಮನೆಯಲ್ಲಿಯೇ ಇರಬೇಕು. ಒಂದು ವೇಳೆ ಮನೆಯಿಂದ ಹೊರಗೆ ಹೋಗಬೇಕಾದರೆ, ತಮ್ಮ ಮುಖ ಸೇರಿದಂತೆ ದೇಹವನ್ನು ಸಂಪೂರ್ಣವಾಗಿ ಮುಚ್ಚುವ ಹಿಜಬ್ ಧರಿಸಿ ಹೋಗಬೇಕು ಎಂದು ಆದೇಶ ಹೊರಡಿಸಿದ್ದರು. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧ- ಮತ್ತೇ ಪ್ಯಾಸೆಂಜರ್ ರೈಲಿನ 2 ಬೋಗಿಗೆ ಬೆಂಕಿ

    ಇದೀಗ ತಾಲಿಬಾನ್‍ನ ಸಚಿವಾಲಯವು ಇಸ್ಲಾಂ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವ ಮೂಲಕ ಕಂದಹಾರ್ ನಗರದಾದ್ಯಂತ ಪೋಸ್ಟರ್‌ಗಳನ್ನು ಹಾಕಿದೆ. ಪೋಸ್ಟರ್‌ನಲ್ಲಿ ಮಹಿಳೆಯರ ದೇಹವನ್ನು ತಲೆಯಿಂದ ಕಾಲಿನವರೆಗೂ ಮುಚ್ಚಲ್ಪಡುವ ಬುರ್ಖಾಗಳ ಫೋಟೋಗಳನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಚನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿದ ರಾಜ್ಯಪಾಲ ಗೆಹ್ಲೋಟ್

    ಪೋಸ್ಟರ್ ಕೆಳಗಡೆ ಹಿಜಬ್ ಧರಿಸದ ಮುಸ್ಲಿಂ ಮಹಿಳೆಯರು ಪ್ರಾಣಿಗಳಂತೆ ಕಾಣಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಬರೆಯಲಾಗಿದೆ. ಈ ಪೋಸ್ಟರ್‌ಗಳನ್ನು ಅನೇಕ ಕೆಫೆಗಳು, ಅಂಗಡಿಗಳ ಮೇಲೆ ಮತ್ತು ತಾಲಿಬಾನ್‍ನ ವಾಸ್ತವಿಕ ಶಕ್ತಿ ಕೇಂದ್ರವಾದ ಕಂದಹಾರ್‌ನಾದ್ಯಂತ ಜಾಹೀರಾತು ಹೋರ್ಡಿಂಗ್‍ಗಳ ಮೇಲೆ ಹಾಕಲಾಗಿದೆ.

    Live Tv

  • ಅಫ್ಘಾನಿಸ್ತಾನಲ್ಲಿ ಭಾರತ – ತಾಲಿಬಾನ್ ಆಡಳಿತದ ಜೊತೆ ಮೊದಲ ಮಾತುಕತೆ

    ಅಫ್ಘಾನಿಸ್ತಾನಲ್ಲಿ ಭಾರತ – ತಾಲಿಬಾನ್ ಆಡಳಿತದ ಜೊತೆ ಮೊದಲ ಮಾತುಕತೆ

    ಕಾಬೂಲ್: ಅಫ್ಘಾನಿಸ್ತಾನವನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ತಾಲಿಬಾನ್ ವಶಪಡಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಭಾರತದ ನಿಯೋಗ ಹಾಗೂ ತಾಲಿಬಾನ್ ಶುಕ್ರವಾರ ಭೇಟಿಯಾಗಿವೆ.

    ಅಫ್ಘಾನಿಸ್ತಾನದಲ್ಲಿ ಹಳೆ ಸರ್ಕಾರ ಪತನಗೊಂಡು ತಾಲಿಬಾನ್ ಹಿಡಿತ ಸಾಧಿಸಿದ ಸಂದರ್ಭ ಭಾರತೀಯ ಮಿಷನ್ ಸಿಬ್ಬಂದಿ ಅಲ್ಲಿಂದ ಭಾರತಕ್ಕೆ ಹಿಂತಿರುಗಿದ್ದರು.

    ಇಂದು ಹಿರಿಯ ರಾಜತಾಂತ್ರಿಕ ಜೆಪಿ ಸಿಂಗ್ ನೇತೃತ್ವದ ತಂಡ ಕಾಬೂಲ್‌ನಲ್ಲಿ ಹಿರಿಯ ತಾಲಿಬಾನ್ ನಾಯಕ ಅಮೀರ್ ಖಾನ್ ಮೊಟ್ಟಕಿ ಅವರನ್ನು ಭೇಟಿಯಾದರು. ಮೂಲಭೂತ ಅಗತ್ಯಗಳಿಗಾಗಿ ಹೆಣಗಾಡುತ್ತಿದ್ದ ಅಫ್ಘಾನಿಸ್ತಾನದ ಜನರಿಗೆ ಭಾರತ ನೀಡುವ ಮಾನವೀಯ ನೆರವಿನ ಬಗ್ಗೆ ಚರ್ಚೆ ನಡೆದಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ 2 ಪ್ರತ್ಯೇಕ ಸ್ಥಳಗಳಲ್ಲಿ ಗುಂಡಿನ ದಾಳಿ- ಮೂವರು ಸಾವು

    ಭಾರತ ತನ್ನ ಸ್ಥಗಿತಗೊಳಿಸಿದ ಯೋಜನೆಗಳನ್ನು ಪುನರಾರಂಭಿಸಲು, ರಾಜತಾಂತ್ರಿಕ ಉಪಸ್ಥಿತಿಯನ್ನು ಮತ್ತೆ ಸಕ್ರಿಯಗೊಳಿಸಲು ಹಾಗೂ ಅಫ್ಘಾನಿಸ್ತಾನದ ಜನರಿಗೆ, ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ರೋಗಿಗಳಿಗೆ ಸೇವೆಗಳನ್ನು ನೀಡಲು ಬಯಸುತ್ತದೆ. ವ್ಯಾಪಾರದಲ್ಲಿಯೂ ಅಫ್ಘಾನಿಸ್ತಾನದೊಂದಿಗೆ ಕೆಲಸ ಮಾಡಲು ತಾಲಿಬಾನ್ ಭಾರತವನ್ನು ಕೇಳಿಕೊಂಡಿದೆ ಎಂದು ಹೇಳಿದರು.

    ಅಫ್ಘಾನಿಸ್ತಾನದಲ್ಲಿ ಹದಗೆಡುತ್ತಿದ್ದ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 15 ರ ಬಳಿಕ ಭಾರತ ಮೂಲದ ಅಧಿಕಾರಿಗಳನ್ನು ಮರಳಿ ಕರೆತರಲು ನಿರ್ಧರಿಸಲಾಯಿತು. ಆದರೂ ಸ್ಥಳೀಯ ಸಿಬ್ಬಂದಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿ, ಅಲ್ಲಿನ ಸರಿಯಾದ ನಿರ್ವಹಣೆ ಬಗ್ಗೆ ಮಾಹಿತಿ ನೀಡುತ್ತಿದ್ದರು ಎಂದು ಬಾಗ್ಚಿ ತಿಳಿಸಿದರು. ಇದನ್ನೂ ಓದಿ: ತಿಂಗಳ ಅಂತ್ಯದಲ್ಲಿ ಸೌದಿಗೆ ಭೇಟಿ ನೀಡಲಿದ್ದಾರೆ ಬೈಡನ್

    ಅಫ್ಘಾನಿಸ್ತಾನದಲ್ಲಿ ಭಾರತದ ನೆರವಿನ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿರುವ ಹಲವಾರು ಸ್ಥಳಗಳಿಗೆ ಭೇಟಿ ನೀಡಲು ಭಾರತೀಯ ತಂಡ ಪ್ರಯತ್ನಿಸಲಿದೆ. ಆದರೆ ತಂಡದ ಸಂಯೋಜನೆ, ಪ್ರವಾಸದ ಅವಧಿ, ಭೇಟಿ ನೀಡಬೇಕಾದ ಸ್ಥಳಗಳು ಮತ್ತು ನಿಗದಿತ ಸಭೆಗಳ ವಿವರಗಳನ್ನು ನೀಡಿಲ್ಲ.

  • ಅಫ್ಘಾನ್ ಮಹಿಳೆಯರ ಮೇಲೆ ಕಠಿಣ ಕ್ರಮ – ವಿಶ್ವಸಂಸ್ಥೆಯ ಕರೆಗೆ ಕ್ಯಾರೇ ಅನ್ನದ ತಾಲಿಬಾನ್

    ಅಫ್ಘಾನ್ ಮಹಿಳೆಯರ ಮೇಲೆ ಕಠಿಣ ಕ್ರಮ – ವಿಶ್ವಸಂಸ್ಥೆಯ ಕರೆಗೆ ಕ್ಯಾರೇ ಅನ್ನದ ತಾಲಿಬಾನ್

    ವಾಷಿಂಗ್ಟನ್: ಅಫ್ಘಾನಿಸ್ತಾನದ ಮಹಿಳೆಯರ ಮೇಲೆ ತಾಲಿಬಾನ್ ವಿಧಿಸುತ್ತಿರುವ ಕಠಿಣ ನಿಯಮಗಳನ್ನು ತೆಗೆದು ಹಾಕಬೇಕೆಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ(ಯುಎನ್‌ಎಸ್‌ಸಿ) ಕರೆಯನ್ನು ತಾಲಿಬನ್ ತಿರಸ್ಕರಿಸಿದೆ

    ಅಫ್ಘಾನಿಸ್ತಾನದ ಮಹಿಳೆಯರ ಮೇಲೆ ತಾಲಿಬಾನ್ ವಿಧಿಸುತ್ತಿರುವ ಕಟ್ಟುನಿಟ್ಟಿನ ಕ್ರಮಗಳಿಗೆ ಯುಎನ್‌ಎಸ್‌ಸಿ ಕಳವಳ ವ್ಯಕ್ತಪಡಿಸಿದ್ದು, ಇದನ್ನು ತಾಲಿಬಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿರಸ್ಕರಿಸಿದೆ ಎಂದು ವರದಿಯಾಗಿದೆ.

    ಅಫ್ಘಾನಿಸ್ತಾನದ ಜನರು ಪ್ರಧಾನವಾಗಿ ಮುಸ್ಲಿಮರಾಗಿರುವುದರಿಂದ ನಮ್ಮ ಸರ್ಕಾರ ಇಸ್ಲಾಮಿಕ್ ಹಿಜಬ್ ಅನ್ನು ಸಮಾಜದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳಿಗೆ ಅನುಗುಣವಾಗಿ ಪರಿಗಣಿಸುತ್ತದೆ ಎಂದು ತಾಲಿಬಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ದುಲ್ ಕಹರ್ ಬಾಲ್ಖಿ ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಿಂದ ಬಂದ ಶೇ.87 ಮಂದಿಗೆ ಭಾರತದ ಪೌರತ್ವ

    ಇತ್ತೀಚೆಗೆ ಭದ್ರತಾ ಮಂಡಳಿ ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಮೂಲಭೂತ ಹಕ್ಕುಗಳನ್ನು ನಿರ್ಬಂಧಿಸುವ ನೀತಿಗಳನ್ನು ತಕ್ಷಣವೇ ತೆಗೆದುಹಾಕುವಂತೆ ತಾಲಿಬಾನ್‌ಗೆ ಸೂಚಿಸಿತ್ತು.

    ಅಫ್ಘಾನ್ ಮಹಿಳೆಯರ ಶಿಕ್ಷಣ, ಉದ್ಯೋಗ, ಚಳುವಳಿಯ ಸ್ವಾತಂತ್ರ್ಯ ಹಾಗೂ ಸಾರ್ವಜನಿಕ ಜೀವನದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಮೇಲೆ ತಾಲಿಬಾನ್ ವಿಧಿಸಿರುವ ನಿರ್ಬಂಧಗಳನ್ನು ಅನುಸರಿಸಿ ಅಲ್ಲಿನ ಹುಡುಗಿಯರು ಹಾಗೂ ಮಹಿಳೆಯರ ಬಗ್ಗೆ ಆಳವಾಗಿ ಕಳವಳ ವ್ಯಕ್ತಪಡಿಸಿರುವುದಾಗಿ ತಿಳಿಸಿತ್ತು. ಇದನ್ನೂ ಓದಿ: 1991ರ ಕಾಯಿದೆ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮತ್ತೊಂದು ಅರ್ಜಿ

    ಇತ್ತೀಚೆಗೆ ತಾಲಿಬಾನ್ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೇರಿದ ನಿರ್ಬಂಧ, ಕಟ್ಟುನಿಟ್ಟಿನ ಹಿಜಬ್ ಜಾರಿ ಹಾಗೂ ರಾಜಕೀಯರಂಗದಿಂದ ಮಹಿಳೆಯರನ್ನು ದೂರ ಉಳಿಸಿದ ಸಂದರ್ಭದಲ್ಲಿ ಭದ್ರತಾ ಮಂಡಳಿ ತಕ್ಷಣವೇ ವಿದ್ಯಾರ್ಥಿನಿಯರಿಗೆ ಶಾಲೆಗಳನ್ನು ತೆರೆಯಲು ಸೂಚನೆ ನೀಡಿತ್ತು.

  • ಅಫ್ಘಾನಿಸ್ತಾನದ ವಿಮಾನ ಕಾರ್ಯಾಚರಣೆಗೆ ಯುಎಇ ಜೊತೆ ತಾಲಿಬಾನ್ ಒಪ್ಪಂದ

    ಅಫ್ಘಾನಿಸ್ತಾನದ ವಿಮಾನ ಕಾರ್ಯಾಚರಣೆಗೆ ಯುಎಇ ಜೊತೆ ತಾಲಿಬಾನ್ ಒಪ್ಪಂದ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ವಿಮಾನ ಕಾರ್ಯಾಚರಣೆ ಹಾಗೂ ವಿಮಾನ ನಿಲ್ದಾಣ ನಿರ್ವಹಣೆ ಕುರಿತು ತಾಲಿಬಾನ್, ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

    ತಾಲಿಬಾನ್ ಯುಎಇ, ಟರ್ಕಿ ಹಾಗೂ ಕತಾರ್‌ನೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದು, ಮಂಗಳವಾರ ಒಪ್ಪಂದಕ್ಕೆ ಸಹಿ ಹಾಕಿದೆ.

    ತಾಲಿಬಾನ್‌ನ ಸಾರಿಗೆ ಮತ್ತು ನಾಗರಿಕ ವಿಮಾನಯಾನದ ಉಪ ಮಂತ್ರಿ ಗುಲಾಮ್ ಜೈಲಾನಿ ವಫಾ ಅವರು ಮೊದಲ ಉಪ ಪ್ರಧಾನಮಂತ್ರಿ ಮುಲ್ಲಾ ಅಬ್ದುಲ್ ಘನಿ ಬರಾದರ್ ಅವರ ಸಮ್ಮುಖದಲ್ಲಿ ಮಂಗಳವಾರ ಜಿಎಎಸಿ ನಿಗಮದ ಪ್ರತಿನಿಧಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದರು. ಇದನ್ನೂ ಓದಿ: ಹೆಚ್‍ಡಿಕೆ ಮನೆಯಲ್ಲಿನ ದೇವಸ್ಥಾನ ಪುಡಿ ಮಾಡಿದ್ರೆ ಸುಮ್ಮನಿರುತ್ತಿದ್ದರಾ?- ಈಶ್ವರಪ್ಪ

    ಒಪ್ಪಂದಕ್ಕೆ ಸಹಿ ಹಾಕುವ ವೇಳೆ ಮಾತನಾಡಿದ ಮುಲ್ಲಾ ಬರದಾರ್, ದೇಶದ ಭದ್ರತೆ ಬಲವಾಗಿದೆ ಹಾಗೂ ಇಸ್ಲಾಮಿಕ್ ಎಮಿರೇಟ್ಸ್, ವಿದೇಶಿ ಹೂಡಿಕೆದಾರರೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ. ಎಲ್ಲಾ ವಿದೇಶೀ ವಿಮಾನಯಾನ ಸಂಸ್ಥೆಗಳು ಅಫ್ಘಾನಿಸ್ತಾನಕ್ಕೆ ಸುರಕ್ಷಿತವಾಗಿ ಹಾಗೂ ವಿಶ್ವಾಸಾರ್ಹವಾಗಿ ಹಾರಾಟ ಪ್ರಾರಂಭಿಸಬಹುದು ಎಂದು ಭರವಸೆ ನಿಡಿದರು. ಇದನ್ನೂ ಓದಿ: ಮಹಾರಾಷ್ಟ್ರ ಸಚಿವ ಅನಿಲ್ ಪರಬ್ ಮನೆ, ಕಚೇರಿ ಮೇಲೆ ಇಡಿ ದಾಳಿ

    ಆಗಸ್ಟ್ 2021ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡಿತು ಹಾಗೂ ಹಿಂದಿನ ಸರ್ಕಾರ ಪತನವಾಯಿತು. 2021ರ ಡಿಸೆಂಬರ್‌ನಲ್ಲಿ ಟರ್ಕಿಶ್ ಹಾಗೂ ಕತಾರಿ ಕಂಪನಿಗಳು ಕಾಬೂಲ್ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಜ್ಞಾಪಕ ಪತ್ರಕ್ಕೆ ಸಹಿ ಹಾಕಿದವು. ಅಫ್ಘಾನಿಸ್ತಾನದಲ್ಲಿ ತೀವ್ರ ಆರ್ಥಿಕ ಪರಿಸ್ಥಿತಿ ಇರುವುದರಿಂದ ಈಗಲೂ ಬಾಲ್ಖ್, ಹೆರಾತ್, ಕಂದಹಾರ್ ಹಾಗೂ ಖೋಸ್ಟ್ ನಗರಗಳ ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸಲು ಹೆಣಗಾಡುತ್ತಿವೆ.

  • ದೂರದರ್ಶನ ನಿರೂಪಕಿಯರೇ, ಮುಖ ಮುಚ್ಚಿ ನಿರೂಪಣೆ ಮಾಡಿ: ತಾಲಿಬಾನ್

    ದೂರದರ್ಶನ ನಿರೂಪಕಿಯರೇ, ಮುಖ ಮುಚ್ಚಿ ನಿರೂಪಣೆ ಮಾಡಿ: ತಾಲಿಬಾನ್

    ಕಾಬೂಲ್: ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ದಿನೇ ದಿನೇ ಮಹಿಳೆಯರ ಸ್ವತಂತ್ರ್ಯವನ್ನು ಕಸಿದುಕೊಳ್ಳುತ್ತಲೇ ಇದೆ. ಚಾಲನಾ ಪರವಾನಗಿ ಕಸಿದುಕೊಂಡಾಯ್ತು, ಪುರುಷರೊಂದಿಗೆ ಉದ್ಯಾನವನ, ಉಪಹಾರಗೃಹಕ್ಕೆ ಹೋಗುವುದನ್ನೂ ನಿಷೇಧಿಸಿತು. ಇದೀಗ ದೂರದರ್ಶನಗಳಲ್ಲಿ ಕೆಲಸ ಮಾಡುವ ನಿರೂಪಕಿಯರಿಗೂ ತಮ್ಮ ಮುಖವನ್ನು ಸಂಪೂರ್ಣವಾಗಿ ಮುಚ್ಚಿಕೊಳ್ಳುವಂತೆ ಆದೇಶಿಸಿದೆ.

    ದೂರದರ್ಶನ, ಸುದ್ದಿ ವಾಹಿನಿಗಳಲ್ಲಿ ಮಹಿಳಾ ನಿರೂಪಕಿಯರು ಸುದ್ದಿ ಪ್ರಸಾರ ಮಾಡುವ ಸಂದರ್ಭ ತಮ್ಮ ಮುಖವನ್ನು ಮುಚ್ಚಿಕೊಳ್ಳುವಂತೆ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ದೂರದರ್ಶನ ಅಧಿಕಾರಿಗಳನ್ನು ಕೇಳಿದ್ದಾರೆ ಎಂದು ಗುರುವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸೆಕ್ಸ್‌ನಿಂದಲೂ ಹರಡಬಹುದು ಮಂಕಿಪಾಕ್ಸ್- ತಜ್ಞರಿಂದ ಎಚ್ಚರಿಕೆ

    ಕೆಲವು ದಿನಗಳ ಹಿಂದೆ ತಾಲಿಬಾನ್ ಅಫ್ಘಾನಿಸ್ತಾನದ ಎಲ್ಲಾ ಮಹಿಳೆಯರೂ ಅಡಿಯಿಂದ ಮುಡಿ ವರೆಗೆ ತಮ್ಮ ದೇಹವನ್ನು ಮುಚ್ಚಿಕೊಳ್ಳಬೇಕಾಗಿ ಆದೇಶ ನೀಡಿತ್ತು. ಇದೀಗ ಸುದ್ದಿ ನಿರೂಪಕಿಯರಿಗೂ ಮುಖ ಮುಚ್ಚಿಕೊಳ್ಳುವಂತೆ ಹೇಳಿದ್ದು, ಮೇ 21ರ ಒಳಗಾಗಿ ಎಲ್ಲಾ ನಿರೂಪಕಿಯರೂ ಈ ನಿಯಮವನ್ನು ಪಾಲಿಸಬೇಕಾಗಿ ಗಡುವು ನೀಡಿದೆ. ಇದನ್ನೂ ಓದಿ: ರಾಜ್ಯದಲ್ಲಿ 124 ಮಂದಿಗೆ ಕೊರೊನಾ -159 ಮಂದಿ ಡಿಸ್ಚಾರ್ಜ್

    ತಾಲಿಬಾನ್ ಮತ್ತೆ ಈ ಹಿಂದೆ ವಿಧಿಸುತ್ತಿದ್ದ ಕಠಿಣ ಕ್ರಮಗಳನ್ನು ಮುಂದುವರಿಸಲಾರಂಭಿಸಿದೆ. ತಾಲಿಬಾನ್‌ನ ಈ ಕಠಿಣ ನಿಯಮಗಳಿಂದ ಅಫ್ಘಾನಿಸ್ತಾನ ಮಾತ್ರವಲ್ಲದೇ ವಿದೇಶಗಳಲ್ಲೂ ಜನರು ಕೆಂಗಣ್ಣು ತೋರಿದ್ದಾರೆ. ಮುಖ್ಯವಾಗಿ ಮಹಿಳೆಯರ ಸ್ವತಂತ್ರ್ಯವನ್ನು ಕಿವುಚಿ ಹಾಕುತ್ತಿರುವ ತಾಲಿಬಾನ್ ಬಗ್ಗೆ ಎಲ್ಲೆಲ್ಲೂ ಟೀಕೆಗಳು ಗ್ರಾಸವಾಗುತ್ತಿವೆ.

  • ಪುರುಷ-ಮಹಿಳೆ ರೆಸ್ಟೋರೆಂಟ್‌ನಲ್ಲಿ ಒಟ್ಟಿಗೆ ಕುಳಿತು ಊಟ ಮಾಡುವಂತಿಲ್ಲ, ಪಾರ್ಕ್‌ಗೆ ಹೋಗುವಂತಿಲ್ಲ: ತಾಲಿಬಾನ್‌

    ಪುರುಷ-ಮಹಿಳೆ ರೆಸ್ಟೋರೆಂಟ್‌ನಲ್ಲಿ ಒಟ್ಟಿಗೆ ಕುಳಿತು ಊಟ ಮಾಡುವಂತಿಲ್ಲ, ಪಾರ್ಕ್‌ಗೆ ಹೋಗುವಂತಿಲ್ಲ: ತಾಲಿಬಾನ್‌

    ಕಾಬೂಲ್‌: ಪಶ್ಚಿಮ ಆಫ್ಘಾನಿಸ್ತಾನದ ಹೆರಾತ್‌ ನಗರದಲ್ಲಿ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಕುಳಿತು ಊಟ ಮಾಡುವುದು ಹಾಗೂ ಉದ್ಯಾನಗಳಿಗೆ ಭೇಟಿ ನೀಡುವುದನ್ನು ತಾಲಿಬಾನ್‌ ನಿಷೇಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಆಫ್ಘಾನಿಸ್ತಾನವು ಸಂಪ್ರದಾಯವಾದಿ ಮತ್ತು ಪಿತೃಪ್ರಭುತ್ವದ ರಾಷ್ಟ್ರವಾಗಿದೆ. ಆದರೆ ರೆಸ್ಟೋರೆಂಟ್‌ಗಳಲ್ಲಿ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಕುಳಿತು ಊಟ ಮಾಡುವುದನ್ನು ಸಾಮಾನ್ಯ ಎನ್ನುವಂತಾಗಿದೆ. ಮುಖ್ಯವಾಗಿ ಆಫ್ಘಾನ್‌ ಮಾನದಂಡಗಳನ್ನು ಮೀರಿ ಉದಾರವಾದಿ ನಗರ ಎನಿಸಿರುವ ಹೆರಾತ್‌ನಲ್ಲಿ ಇಂತಹ ದೃಶ್ಯಗಳು ಸಾಮಾನ್ಯವಾಗಿದೆ. ಇಲ್ಲೂ ಸಹ ತಾಲಿಬಾನ್‌ ಕಠಿಣ ನಿಯಮಗಳನ್ನು ವಿಧಿಸಿದೆ. ಇದನ್ನೂ ಓದಿ: ಮಹಿಳೆಯರ ಮೇಲೆ ತಾಲಿಬಾನ್ ವಿಧಿಸುತ್ತಿರುವ ನಿರ್ಬಂಧ ಖಂಡಿಸಿದ G7

    ಆಗಸ್ಟ್‌ನಲ್ಲಿ ಆಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಮರಳಿದ ನಂತರ ತಾಲಿಬಾನ್‌, ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕಿಸುವ ನಿರ್ಬಂಧಗಳನ್ನು ವಿಧಿಸುತ್ತಿದೆ.

    ಹೆರಾತ್‌ನಲ್ಲಿ ಸದ್ಗುಣ ಪ್ರಚಾರ ಮತ್ತು ದುರಾಚಾರ ತಡೆಗಟ್ಟುವಿಕೆ ಸಚಿವಾಲಯದ ತಾಲಿಬಾನ್ ಅಧಿಕಾರಿ ರಿಯಾಜುಲ್ಲಾ ಸೀರತ್, ರೆಸ್ಟೋರೆಂಟ್‌ಗಳಲ್ಲಿ ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ನಿಯಮ ಕೇವಲ ಪುರುಷ ಮತ್ತು ಮಹಿಳೆಯರಿಗಷ್ಟೇ ಅಲ್ಲ, ಗಂಡ-ಹೆಂಡತಿಗೂ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಶಿಕ್ಷಣ ನಿಷೇಧಿಸಿ ತನ್ನ ಪುತ್ರಿಯರನ್ನು ಶಾಲೆಗೆ ಸೇರಿಸಿದ ತಾಲಿಬಾನ್‌ ವಕ್ತಾರ

    ಹೆರಾತ್ ರೆಸ್ಟೋರೆಂಟ್‌ನಲ್ಲಿ ಪ್ರತ್ಯೇಕವಾಗಿ ಕುಳಿತುಕೊಳ್ಳುವಂತೆ ನನಗೆ ಮತ್ತು ನನ್ನ ಪತಿಗೆ ಮ್ಯಾನೇಜರ್‌ ಹೇಳಿದ್ದರು ಎಂದು ಹೆಸರು ಹೇಳಲಿಚ್ಛಿಸದ ಮಹಿಳೆಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

    ರೆಸ್ಟೋರೆಂಟ್‌ ಮಾಲೀಕ ಸಫೀವುಲ್ಲಾ ಅವರು ತಾಲಿಬಾನ್‌ ಕಠಿಣ ನಿಯಮ ವಿಧಿಸಿರುವುದನ್ನು ಖಚಿತಪಡಿಸಿದ್ದಾರೆ. ನಾವು ಆದೇಶವನ್ನು ಅನುಸರಿಸಬೇಕು. ಆದರೆ ಇದು ನಮ್ಮ ವ್ಯವಹಾರದ ಮೇಲೆ ಬಹಳ ಋಣಾತ್ಮಕ ಪರಿಣಾಮ ಬೀರುತ್ತದೆ ಎಂದು ಸಫೀವುಲ್ಲಾ ತಿಳಿಸಿದ್ದಾರೆ.