Tag: Taluk Office

  • ಹಾಸನ | ತಾಲೂಕು ಕಚೇರಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಪತ್ನಿ, ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ

    ಹಾಸನ | ತಾಲೂಕು ಕಚೇರಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಪತ್ನಿ, ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ

    ಹಾಸನ: ತಾಲೂಕು ಕಚೇರಿ ಸಿಬ್ಬಂದಿ (Taluk Office Staff) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ನಗರದ (Hassan City) ಚನ್ನಪಟ್ಟಣ ಬಡಾವಣೆಯಲ್ಲಿ ನಡೆದಿದೆ.

    ಹೊಳೆನರಸೀಪುರ ತಾಲ್ಲೂಕು ಕಚೇರಿಯ ರೆಕಾರ್ಡ್ ರೂಂ ಸಿಬ್ಬಂದಿ (Record Room Staff) ಸತೀಶ್ (43) ಮೃತ ವ್ಯಕ್ತಿ. ಹದಿನೈದು ವರ್ಷಗಳ ಹಿಂದೆ ಹಾಸನದ ವಿದ್ಯಾ ಎಂಬುವವರ ಜೊತೆ ಮದುವೆಯಾಗಿದ್ದರು. ಇದನ್ನೂ ಓದಿ: ವಕೀಲರ ನೇಮಿಸಿಕೊಳ್ಳದ ಪ್ರಜ್ವಲ್‌ಗೆ ಉಚಿತ ಕಾನೂನು ಸೇವೆ – ಕೋರ್ಟ್‌ನಿಂದಲೇ ವಕೀಲರ ನೇಮಕ

    ಪತಿ-ಪತ್ನಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿದ್ದು ಹಲವು ಬಾರಿ ಕುಟುಂಬಸ್ಥರು ರಾಜೀ ಸಂಧಾನ ಮಾಡಿದ್ದರು. ಆದರೂ ಗಂಡ-ಹೆಂಡತಿ ನಡುವೆ ಜಗಳ, ವೈಮನಸ್ಸು ಸರಿಯಾಗಿರಲಿಲ್ಲ. ನಿನ್ನೆ (ಏ.28) ಬೆಳಗ್ಗೆ ಮನೆಯಲ್ಲೇ ಸತೀಶ್ ಮೃತಪಟ್ಟಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದನ್ನೂ ಓದಿ: ಭಯೋತ್ಪಾದಕರು ಎಂದಿಗೂ ಕಾಶ್ಮೀರದ ಪ್ರಗತಿ ನೋಡಲು ಬಯಸುವುದಿಲ್ಲ: ಸುನೀಲ್ ಶೆಟ್ಟಿ

    ಇನ್ನೂ ಪತ್ನಿ ಮತ್ತು ಅವರ ಕಡೆಯವರೇ ಸೇರಿ ನನ್ನ ಮಗನನ್ನ ಕೊಲೆ ಮಾಡಿದ್ದಾರೆ ಎಂದು ಮೃತ ಸತೀಶ್‌ ಕುಟುಂಬಸ್ಥರು ಆರೋಪಿಸಿದ್ದಾರೆ. ಸತೀಶ್‌ ತಲೆಗೆ ಪೆಟ್ಟಾಗಿರುವುದು ಮೇಲ್ನೋಟಕ್ಕೆ ಕಂದುಬಂದಿರುವುದು ಇದಕ್ಕೆ ಪುಷ್ಟಿ ನೀಡಿದಂತಿದೆ.

    ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ‌. ಸ್ಥಳಕ್ಕೆ ಹಾಸನ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಉಗ್ರರ ದಾಳಿ ಹಿಂದೆ ಪಾಕ್, ಐಎಸ್‌ಐ ನಂಟು – ಪಾಕ್ ಪ್ಯಾರಾ ಕಮಾಂಡೋ ಆಗಿದ್ದ ಹಾಶೀಮ್ ಮೂಸಾ!

  • ತಾಲೂಕು ಕಚೇರಿಯಲ್ಲಿ ಕುಸಿದು ಬೀಳುತ್ತಿದೆ ಮೇಲ್ಛಾವಣಿ

    ತಾಲೂಕು ಕಚೇರಿಯಲ್ಲಿ ಕುಸಿದು ಬೀಳುತ್ತಿದೆ ಮೇಲ್ಛಾವಣಿ

    ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕು ಕಚೇರಿಯ ಮೊದಲನೇ ಮಹಡಿಯ ಮೇಲ್ಛಾವಣಿ ಕುಸಿದು ಬೀಳುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಕಚೇರಿಯ ಆವರಣದಲ್ಲಿರುವ ಗಣೇಶನ ದೇವಾಲಯದ ಕಟ್ಟಡ ಸಂಪೂರ್ಣ ಬಿರುಕು ಬಿಟ್ಟಿದೆ. ತಾಲೂಕು ಕಚೇರಿಯ ಕಟ್ಟಡ ಕೂಡ ಕುಸಿಯುವ ಹಂತ ತಲುಪಿದ್ದು, ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಪ್ರತಿನಿತ್ಯ ತಾಲೂಕು ಕಚೇರಿಗೆ ನಾನಾ ಕೆಲಸ ಕಾರ್ಯಗಳಿಗೆ ರೈತರು, ಸಾರ್ವಜನಿಕರು, ವಿದ್ಯಾರ್ಥಿಗಳು, ಅಂಗವಿಕಲರು, ವೃದ್ಧರು ಹೀಗೆ ಸಾಕಷ್ಟು ಜನರು ಬರುತ್ತಿರುತ್ತಾರೆ. ಹಾಗಾಗಿ ಇದು ಅಪಾಯವನ್ನು ತಂದೊಡ್ಡಿದೆ. ಇದನ್ನೂ ಓದಿ: ವೈದ್ಯರ ಎಡವಟ್ಟು- ಕೊರೊನಾ ಲಸಿಕೆ ಬದಲು ರೇಬಿಸ್ ವ್ಯಾಕ್ಸಿನ್

    ಪ್ರತಿನಿತ್ಯ ಅಧಿಕಾರಿಗಳು ಹಾಗೂ ತಾಲೂಕು ಕಚೇರಿಯ ಸಿಬ್ಬಂದಿ ಕುಸಿಯುತ್ತಿರುವ ಮೇಲ್ಛಾವಣಿಯ ಭಯದಿಂದ ಕೆಲಸ ಮಾಡುವ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ಯಾರಿಗಾದರೂ ಅಪಾಯ ಸಂಭವಿಸಿದರೆ ಯಾರು ಹೊಣೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಉನ್ನತ ಅಧಿಕಾರಿಗಳು ದುರಸ್ತಿಕಾರ್ಯ ಮಾಡಿಸಿ ಜನಸಾಮಾನ್ಯರ ಹಾಗೂ ಸಿಬ್ಬಂದಿ ವರ್ಗದ ಬಗ್ಗೆ ಕಾಳಜಿವಹಿಸಬೇಕಿದೆ ಎಂದು ಎಲ್ಲರು ಆಗ್ರಹಿಸಿದ್ದಾರೆ.  ಇದನ್ನೂ ಓದಿ: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರ – ಶಿವನ ಭಕ್ತನಾಗಿದ್ದ ಗಾಂಜಾ ಆರೋಪಿ

  • ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯ  – 16 ದಿನಗಳಿಂದ ಗುರುಮಠಕಲ್ ಬಸ್ ನಿಲ್ದಾಣದಲ್ಲೇ ಕುಟುಂಬ ವಾಸ

    ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯ – 16 ದಿನಗಳಿಂದ ಗುರುಮಠಕಲ್ ಬಸ್ ನಿಲ್ದಾಣದಲ್ಲೇ ಕುಟುಂಬ ವಾಸ

    ಯಾದಗಿರಿ: ಜಮೀನು ವರ್ಗಾವಣೆಯ ಮೂಲ ನಕಲು ಪ್ರತಿಯನ್ನು ನೀಡಲು ಕಂದಾಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವ ಹಿನ್ನೆಲೆ ಊರಿಗೆ ತೆರಳದೆ ಬಸ್ ನಿಲ್ದಾಣದಲ್ಲಿ ಕುಟುಂಬವೊಂದು ವಾಸ ಮಾಡುತ್ತಿದೆ.

    ಜಿಲ್ಲೆಯ ಗುರುಮಠಕಲ್ ಬಸ್ ನಿಲ್ದಾಣದಲ್ಲಿ ಪ್ರಮಿಳಾ ವೆಂಕಟರೆಡ್ಡಿ ದಂಪತಿ ಕಳೆದ 16 ದಿನಗಳಿಂದ ವಾಸಮಾಡುತ್ತಿದ್ದಾರೆ. ಇವರು ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೆಡಪಳ್ಳಿ ಗ್ರಾಮದವರು. ಹೈದರಾಬಾದ್‍ನಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಪ್ರಮಿಳಾಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪ್ರಮಿಳಾ ತವರು ಊರು ಗುರುಮಠಕಲ್ ತಾಲೂಕಿನ ಹಿಮಲಾಪುರ ಗ್ರಾಮ, ಪಿತ್ರಾರ್ಜಿತ ಆಸ್ತಿ ಪಡೆಯಲು ಜಮೀನಿನ ದಾಖಲೆಗಾಗಿ ಹೈದರಾಬಾದ್‍ನಿಂದ ಸೆ.6 ರಂದು ಗುರುಮಠಕಲ್‍ಗೆ ಬಂದಿದ್ದಾರೆ. ಇದನ್ನೂ ಓದಿ: ನಿಷ್ಪಕ್ಷಪಾತವಾದ ವರದಿ ಕೊಡಿ – ಆಧಿಕಾರಿಗಳಿಗೆ ಆಣೆ ಮಾಡಿಸಿದ ಗ್ರಾಮಸ್ಥರು

    ತಹಶೀಲ್ದಾರ್ ಕಚೇರಿಗೆ ತೆರಳಿ ಜಮೀನಿನ ಮೂಲ ನಕಲು ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ಸಲ್ಲಿಸಿ 16 ದಿನಗಳಾದರೂ ಮೂಲ ನಕಲು ಪ್ರತಿ ನೀಡದೆ ಕಂದಾಯ ಇಲಾಖೆಯ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಗುರುಮಿಠಕಲ್ ಪಟ್ಟಣದಲ್ಲಿ ಪ್ರಮಿಳಾವರಿಗೆ ಯಾವುದೇ ಸಂಬಂಧಿಕರಿಲ್ಲ, ಹೋಟೆಲ್ ನಲ್ಲಿ ರೂಮ್ ಮಾಡುವಷ್ಟು ಶಕ್ತರಲ್ಲದ ಕಾರಣ ಬಸ್ ನಿಲ್ದಾಣದಲ್ಲಿ ರಾತ್ರಿ ಕಳೆದು ಬೆಳಗ್ಗೆ ತಹಶೀಲ್ದಾರ್ ಕಚೇರಿ ಬಾಗಿಲು ಕಾಯುತ್ತಿದ್ದಾರೆ.  ಇದನ್ನೂ ಓದಿ: ಮಕ್ಕಳನ್ನು ವೈದ್ಯರಲ್ಲಿ ತೋರಿಸಲು ಪೋಷಕರ ನೂಕುನುಗ್ಗಲು

  • ಬಬಲೇಶ್ವರ, ತಿಕೋಟ ಜನರಿಗೆ ಸಿಹಿ ಸುದ್ದಿ- ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಡರ್ ಆಹ್ವಾನ

    ಬಬಲೇಶ್ವರ, ತಿಕೋಟ ಜನರಿಗೆ ಸಿಹಿ ಸುದ್ದಿ- ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಡರ್ ಆಹ್ವಾನ

    ವಿಜಯಪುರ: ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಬಬಲೇಶ್ವರ ಮತ್ತು ತಿಕೋಟಾ ನೂತನ ತಾಲೂಕು ಕೇಂದ್ರಗಳಾಗಿ ಒಂದು ವರ್ಷ ಕಳೆದಿದೆ. ಆದರೂ ತಾಲೂಕು ಅಡಳಿತ ಕಚೇರಿ ಇಲ್ಲ. ಇದೀಗ ಎರಡೂ ತಾಲೂಕುಗಳ ಜನತೆಗೆ ಸಿಹಿ ಸುದ್ದಿ ಸಿಕ್ಕಿದ್ದು, ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದೆ.

    ಎರಡು ನೂತನ ತಾಲೂಕಿನ ಜನರು ತಾಲೂಕು ಕಚೇರಿಗಳನ್ನು ನಿರ್ಮಿಸಲು ಅನೇಕ ಹೋರಾಟ ಮಾಡಿದ್ದರು. ಆದರೆ ಸೂಕ್ತ ಕಟ್ಟಡಗಳ ಕೊರತೆ ಇರುವುದರಿಂದ ತಾಲೂಕು ಕಚೇರಿ ನಿರ್ಮಾಣಕ್ಕೆ ಹಿಂದೇಟು ಹಾಕಿದ್ದರು. ಇದೀಗ ಎರಡು ನೂತನ ತಾಲೂಕಿನ ಜನರಿಗೆ ಕ್ಷೇತ್ರದ ಶಾಸಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಖುಷಿ ವಿಚಾರ ಪ್ರಕಟಿಸಿದ್ದಾರೆ. ತಾಲೂಕು ಕೇಂದ್ರಗಳಾದ ಬಬಲೇಶ್ವರ ಮತ್ತು ತಿಕೋಟಾದಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿದೆ.

    ನೂತನ ತಾಲೂಕು ಕೇಂದ್ರಗಳಲ್ಲಿ ಎಲ್ಲ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ತಲಾ 10 ಕೋಟಿ ರೂ. ವೆಚ್ಚದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ಎರಡು ಕಡೆ ಸುಸಜ್ಜಿತ ಮಿನಿ ವಿಧಾನಸೌಧ ನಿರ್ಮಿಸಲಾಗುತ್ತಿದೆ. ಬಬಲೇಶ್ವರದಲ್ಲಿ ಅಡವಿಸಂಗಾಪುರ ರಸ್ತೆಯಲ್ಲಿರುವ ಸರ್ಕಾರಿ ಜಾಗದಲ್ಲಿ ಹಾಗೂ ತಿಕೋಟಾದಲ್ಲಿ ಹಳೆ ಪ್ರವಾಸಿ ಮಂದಿರದ ಜಾಗದಲ್ಲಿ ಈ ಮಿನಿ ವಿಧಾನಸೌಧಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ.

  • ಖಾತೆಗಾಗಿ ಅಲೆದಾಟ – ಏಕಾಂಗಿಯಾಗಿ ಹೋರಾಟಕ್ಕೆ ಇಳಿದ ವ್ಯಕ್ತಿ

    ಖಾತೆಗಾಗಿ ಅಲೆದಾಟ – ಏಕಾಂಗಿಯಾಗಿ ಹೋರಾಟಕ್ಕೆ ಇಳಿದ ವ್ಯಕ್ತಿ

    ಬೆಂಗಳೂರು: ಸರ್ಕಾರಿ ಕಚೇರಿಗೆ ತಮ್ಮ ಮನೆಯ ಖಾತೆ ಮಾಡಿಸಿಕೊಳ್ಳಲು ಅಲೆದು ಅಲೆದು ಸುಸ್ತಾಗಿ ಬೇರೆ ದಾರಿಯಿಲ್ಲದೆ, 68 ವರ್ಷದ ವ್ಯಕ್ತಿಯೊಬ್ಬರು ಒಬ್ಬಂಟಿಯಾಗಿ ಪ್ರತಿಭಟನೆ ಮಾಡಿರುವ ಘಟನೆ ಬೆಂಗಳೂರು ಪೂರ್ವ ತಾಲೂಕಿನ ಕೆಆರ್ ಪುರಂ ತಾಲೂಕು ಕಚೇರಿ ಮುಂದೆ ನಡೆದಿದೆ.

    ಮಾರತಳ್ಳಿ ಸಮೀಪದ ಪಣತೂರ್ ಗ್ರಾಮದ ನಿವಾಸಿ ಶ್ರೀಲೋಕ ಮೂರ್ತಿ ಕಳೆದ ನಾಲ್ಕು ತಿಂಗಳಿಂದ ತಮ್ಮ ಮನೆ ಖಾತೆ ಮಾಡಿಕೊಡಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಕರೋನಾ ಸಮಯದಲ್ಲಿ ಪ್ರತಿದಿನ ಕಚೇರಿಗೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.

    ಇವತ್ತು ಒಬ್ಬಂಟಿಯಾಗಿ ಬೋರ್ಡ್ ಹಿಡಿದು ಪ್ರತಿಭಟನೆ ಮಾಡುತ್ತಿದ್ದಂತೆ ಸ್ಥಳಕ್ಕೆ ಬಂದ ತಹಸೀಲ್ದಾರ್ ಅವರ ದಾಖಲಾತಿ ಪರಿಶೀಲನೆ ತರಾತುರಿಯಲ್ಲಿ ಮಾಡಲು ಪ್ರಯತ್ನ ಮಾಡಿದ್ದಾರೆ. ಆದರೆ ಅವರು ನೀಡಿದ ದಾಖಲಾತಿಗಳು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ನಿರ್ಲಕ್ಷ್ಯ ಮಾಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಲೋಕ ಮೂರ್ತಿ ಆಗ್ರಹಪಡಿಸಿದ್ದಾರೆ.

  • ಚಿಕ್ಕಬಳ್ಳಾಪುರ ತಾಲೂಕು ಕಚೇರಿಯ ನಾಲ್ವರಿಗೆ ಕೊರೊನಾ-ಕಚೇರಿ ಸಿಬ್ಬಂದಿಗೆ ಆತಂಕ

    ಚಿಕ್ಕಬಳ್ಳಾಪುರ ತಾಲೂಕು ಕಚೇರಿಯ ನಾಲ್ವರಿಗೆ ಕೊರೊನಾ-ಕಚೇರಿ ಸಿಬ್ಬಂದಿಗೆ ಆತಂಕ

    ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕು ಕಚೇರಿಯ 4 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಕಚೇರಿಯಲ್ಲಿನ 50ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆತಂಕ ಶುರುವಾಗಿದೆ.

    ತಾಲೂಕು ಕಚೇರಿಯ ಭೂ ದಾಖಲೆಗಳ ವಿಭಾಗದ ಸಹಾಯಕ ನಿರ್ದೇಶಕಿ ಹಾಗೂ ಇಬ್ಬರು ಮಹಿಳಾ ಕೇಸ್ ವರ್ಕರ್ಸ್ ಸೇರಿದಂತೆ ಒರ್ವ ಸರ್ವೇಯರ್‍ಗೆ ಸೋಂಕು ದೃಢವಾಗಿದೆ. ಹೀಗಾಗಿ ತಾಲೂಕು ಕಚೇರಿಯಗೆ ಸಂಪೂರ್ಣ ಸೋಂಕು ನಿವಾರಕ ರಾಸಾಯನಿಕ ದ್ರಾವಣ ಸಿಂಪಡಿಸಲಾಗಿದೆ. ಅಲ್ಲದೆ ಇಡೀ ತಾಲೂಕು ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

    ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 13 ಪ್ರಕರಣಗಳು ಪತ್ತೆಯಾಗಿದ್ದು, ಸೋಮವಾರ 15 ಪ್ರಕರಣಗಳು ಕಂಡು ಬಂದಿದ್ದವು. ಜಿಲ್ಲೆಯಲ್ಲಿ 214 ಜನರಿಗೆ ಸೋಂಕು ತಗುಲಿದ್ದು, ಇದರಲ್ಲಿ 165 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4 ಜನ ಮೃತಪಟ್ಟಿದ್ದಾರೆ. ಸದ್ಯ 44 ಸಕ್ರಿಯ ಪ್ರಕರಣಗಳಿವೆ.

  • ಲಂಚ ಕೇಳಿದ ಎಫ್‍ಡಿಎ ಅಧಿಕಾರಿಯ ಬೆವರಿಳಿಸಿದ ನಿವೃತ್ತ ಯೋಧ

    ಲಂಚ ಕೇಳಿದ ಎಫ್‍ಡಿಎ ಅಧಿಕಾರಿಯ ಬೆವರಿಳಿಸಿದ ನಿವೃತ್ತ ಯೋಧ

    – 50 ಸಾವಿರಕ್ಕಾಗಿ 10 ವರ್ಷ ಕೆಲ್ಸ ಮಾಡಿಕೊಟ್ಟಿರಲಿಲ್ಲ

    ಕೋಲಾರ: ಲಂಚ ಕೇಳಿದ ತಾಲೂಕು ಕಚೇರಿಯ ಎಫ್‍ಡಿಎ ಕ್ಲಾರ್ಕ್ ಒಬ್ಬನಿಗೆ ಮಾಜಿ ಯೋಧರೊಬ್ಬರು ಕಚೇರಿಯಲ್ಲೇ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕು ಕಚೇರಿಯಲ್ಲಿ ನಡೆದಿದೆ.

    ಮಾಲೂರು ತಾಲೂಕು ಮಣಿ ಶೆಟ್ಟಿಹಳ್ಳಿ ಗ್ರಾಮದ ಮಾಜಿ ಯೋಧ ವೆಂಕಟೇಶಪ್ಪನ ಜಮೀನಿನ ಕಡತ ವಿಲೇವಾರಿಗಾಗಿ ಕಳೆದ ಹತ್ತು ವರ್ಷಗಳಿಂದ ತಾಲೂಕು ಕಚೇರಿಗೆ ಬರುತ್ತಿದ್ದಾರೆ. ಹೀಗಿದರೂ ಎಫ್‍ಡಿಎ ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಕೆಲಸ ಮಾಡಿಕೊಡದೆ ಸತಾಯಿಸುತ್ತಿದ್ದು, ಕೆಲಸ ಮಾಡಿಕೊಡಲು 50 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

    ಹಣ ಕೊಡದ ಹಿನ್ನೆಲೆ ಕೆಲಸ ಮಾಡಿಕೊಡದೆ ಇವತ್ತು ನಾಳೆ ಎಂದು ಸತಾಯಿಸುತ್ತಿದ್ದ ಸಿಬ್ಬಂದಿಗೆ ಕಚೇರಿಯಲ್ಲೇ ಇಂದು ಮಾಜಿ ಯೋಧ ತರಾಟೆಗೆ ತೆಗೆದುಕೊಂಡಿದ್ದಾರೆ. ನಿನ್ನ ಹೆಂಡತಿ ಮಕ್ಕಳನ್ನು ನೋಡಿಕೊಳ್ಳಲು ನೀನು ಲಂಚ ಕೇಳುವುದಾದರೆ ನಮ್ಮ ಮನೆಗೆ ಕಳಿಸು ಅವರನ್ನು ಕೂಲಿ ಮಾಡಿ ಸಾಕಿಕೊಳ್ಳುತ್ತೇನೆ. ನಾನೇನು ನಿಮ್ಮ ಮನೆ ಆಳಲ್ಲ, ನಿನಗ್ಯಾಕೆ ಲಂಚ ಕೊಡಬೇಕು ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಇದರಿಂದ ಅವಮಾನಿತರಾದ ತಾಲೂಕು ಕಚೇರಿ ಸಿಬ್ಬಂದಿ ಮಾಜಿ ಯೋಧನನ್ನು ಸಮಾಧಾನಪಡಿಸಿ ಉಳಿದ ಕೆಲಸವನ್ನು ಮಾಡಿ ಕೊಡುವುದಾಗಿ ತಿಳಿಸಿ ಕಳುಹಿಸಿ ಕೊಟ್ಟಿದ್ದಾರೆ.

  • ಸರಿಯಾಗಿ ಕೆಲಸ ನಿರ್ವಹಿಸಿದ ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ಕ್ಲಾಸ್

    ಸರಿಯಾಗಿ ಕೆಲಸ ನಿರ್ವಹಿಸಿದ ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ಕ್ಲಾಸ್

    ಬೆಂಗಳೂರು: ಉಪಲೋಕಾಯುಕ್ತ ಎನ್. ಆನಂದ್ ನೇತೃತ್ವದ ತಂಡವು ಇಂದು ಬೆಳಿಗ್ಗೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಕಚೇರಿಯ ಸಮಯವಾಗಿದ್ದರೂ ಬಾರದ ಅಧಿಕಾರಿಗಳ ವಿರುದ್ಧ ಉಪಲೋಕಾಯುಕ್ತರು ಗರಂ ಆಗಿ, ಸಮಯಕ್ಕೆ ಸರಿಯಾಗಿ ಕಚೇರಿಗೆ ಬರುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

    ಆನೇಕಲ್ ತಾಲೂಕು ಕಚೇರಿಯಲ್ಲಿ ಖಾತೆ ಪಹಣಿಗಳನ್ನು ಸರಿಯಾದ ಸಮಯಕ್ಕೆ ಮಾಡಿಕೊಡುತ್ತಿಲ್ಲ. ಕಡತಗಳ ವಿಲೇವಾರಿ ಮಾಡದೆ ಸಾರ್ವಜನಿಕರಿಗೆ ವಿಳಂಬ ಮಾಡಲಾಗುತ್ತಿದೆ ಎಂಬ ದೂರು ಬಂದಿದ್ದವು. ಈ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರು ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದರು.

    ಸಾರ್ವಜನಿಕರಿಗೆ ಪಹಣಿ ಹಾಗೂ ಖಾತೆ ಮಾಡಿಕೊಡಲು ಯಾಕೆ ವಿಳಂಬ ನೀತಿ ಅನುಸರಿಸುತ್ತಿದ್ದೀರಿ? ಈ ಬಗ್ಗೆ ತನಿಖೆ ನಡೆಸಬೇಕು ಎಂದು ಎನ್. ಆನಂದ್ ಸೂಚನೆ ನೀಡಿದರು. ಉಪಲೋಕಾಯುಕ್ತರ ಭೇಟಿ ಸಮಯದಲ್ಲಿ ಆನೇಕಲ್ ತಾಲೂಕು ಕಚೇರಿಯಲ್ಲಿರುವ ಅಧಿಕಾರಿಗಳು ಬರದಿರುವುದನ್ನು ಕಂಡು ಅಧಿಕಾರಿಗಳಿಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

    ಇದೇ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಆನೇಕಲ್ ತಾಲೂಕು ಕಚೇರಿಯಲ್ಲಿ ರೈತರ ಸಾರ್ವಜನಿಕರ ಕೆಲಸಗಳು ನಡೆಯುತ್ತಿಲ್ಲ ಕೇಸ್ ವರ್ಕರ್, ಸರ್ವೆಯರ್ ಗಳು ಹಾಗೂ ಇತರೆ ಅಧಿಕಾರಿಗಳು ಹಣ ಪಡೆದು ಕೆಲಸ ಮಾಡಿಕೊಡುತ್ತಾರೆ ಎಂದು ದೂರಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪಲೋಕಾಯುಕ್ತರು, ದೂರು ಪಡೆದು ಇದರ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

  • ಆಸ್ತಿ ವಿಚಾರಕ್ಕೆ ತಾಲೂಕು ಕಚೇರಿಯಲ್ಲೇ ಬಡಿದಾಡಿಕೊಂಡ ಅಣ್ಣ, ತಮ್ಮ

    ಆಸ್ತಿ ವಿಚಾರಕ್ಕೆ ತಾಲೂಕು ಕಚೇರಿಯಲ್ಲೇ ಬಡಿದಾಡಿಕೊಂಡ ಅಣ್ಣ, ತಮ್ಮ

    ಕೋಲಾರ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ದಾಯಾದಿಗಳಿಬ್ಬರು ಕೋಲಾರ ತಾಲೂಕು ಕಚೇರಿ ಬಳಿ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ.

    ಆಸ್ತಿಯನ್ನು ಲಪಟಾಯಿಸಿದ ತಮ್ಮನನ್ನ ಅಣ್ಣ ಕೇಳಿದ ಹಿನ್ನೆಲೆಯಲ್ಲಿ ತಮ್ಮ ಮನಬಂದಂತೆ ಅಣ್ಣನನ್ನ ಥಳಿಸಿದ್ದಾನೆ. ಇದರಿಂದ ಅಣ್ಣನಿಗೆ ಮುಖದಲ್ಲಿ ಸಣ್ಣ ಪುಟ್ಟ ಗಾಯಗಳಾಗಿ ಬಾಯಲ್ಲಿ ರಕ್ತ ಸುರಿದಿದೆ. ಈಗ ಗಾಯಾಳು ಅಣ್ಣ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಇಬ್ಬರು ದಾಯಾದಿಗಳು ಕೋಲಾರ ತಾಲೂಕಿನ ಅರಳಕುಂಟೆ ಗ್ರಾಮದವರಾಗಿದ್ದು, ತಮ್ಮ ತಿಮ್ಮರಾಯ ಪಿತ್ರಾರ್ಜಿತ ಆಸ್ತಿಯನ್ನು ತಂಗಿ ಶಶಿಕಲಾಗೆ ಮೋಸ ಮಾಡಿ ಲಪಾಟಯಿಸಿದ್ದಾನೆ ಎಂಬುದು ರಾಮಕೃಷ್ಣ ಆರೋಪ. ಇಂದು ಕೋಲಾರ ತಾಲೂಕು ಕಚೇರಿ ಬಳಿ ಎದುರು ಬದರಾಗಿರುವ ಅಣ್ಣ ತಮ್ಮಂದಿರು ಜಮೀನು ವಿವಾದದ ಹಿನ್ನೆಲೆಯಲ್ಲಿ ಇಟ್ಟಿಗೆ ಕಲ್ಲುಗಳಲ್ಲಿ ಹೊಡೆದಾಡಿಕೊಂಡಿದ್ದಾರೆ.

    ಈ ವೇಳೆ ಅಣ್ಣನ ರಾಮಕೃಷ್ಣನನ್ನು ಹೊಡೆದ ತಿಮ್ಮರಾಯ ಕ್ಯಾಮೆರಾ ಕಾಣಿಸುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತರೆ ಅಣ್ಣ ಮಾತ್ರ ಅಂಗಿ ಹರಿದುಕೊಂಡು ಮನಸೋ ಇಚ್ಛೆ ಅವಾಚ್ಯ ಶಬ್ದಗಳಿಂದ ಬೈದು ರಂಪಾಟ ಮಾಡಿದ್ದಾನೆ.

  • ತಾಲೂಕು ಕಚೇರಿಯಲ್ಲಿ ವಿದ್ಯಾರ್ಥಿಗಳಿಂದ ಕೆಲಸ – ಸರ್ಕಾರಿ ಕೆಲಸಕ್ಕೆ ವಿದ್ಯಾರ್ಥಿಗಳ ದುರ್ಬಳಕೆ

    ತಾಲೂಕು ಕಚೇರಿಯಲ್ಲಿ ವಿದ್ಯಾರ್ಥಿಗಳಿಂದ ಕೆಲಸ – ಸರ್ಕಾರಿ ಕೆಲಸಕ್ಕೆ ವಿದ್ಯಾರ್ಥಿಗಳ ದುರ್ಬಳಕೆ

    ಚಿಕ್ಕಬಳ್ಳಾಪುರ: ಸರ್ಕಾರಿ ಕೆಲಸ ಮಾಡಬೇಕಾದ ಅಧಿಕಾರಿಗಳು ತಮ್ಮ ಕೆಲಸವನ್ನು ವಿದ್ಯಾರ್ಥಿಗಳ ಕೈಯಲ್ಲಿ ಮಾಡಿಸುತ್ತಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ಕಚೇರಿಯಲ್ಲಿ ನಡೆದಿದೆ.

    ಗುಡಿಬಂಡೆ ಸರ್ಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿಗಳನ್ನು ತಹಶೀಲ್ದಾರ್ ಹನುಮಂತರಾಯಪ್ಪ ತಾಲೂಕು ಕಚೇರಿಗೆ ಕರೆಸಿ ಕೊಠಡಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಮಾಡಿಸುತ್ತಿದ್ದಾರೆ. ಕಾಲೇಜಿಗೆ ಹೋಗಿ ಪಾಠಪ್ರವಚನ ಕೇಳಬೇಕಾದ ವಿದ್ಯಾರ್ಥಿಗಳು ಇಂದು ತಾಲೂಕು ಕಚೇರಿಗೆ ಬಂದು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಿದ್ದಾರೆ.

    ತಮ್ಮ ಅಂಡ್ರಾಯ್ಡ್ ಮೂಬೈಲ್‍ಗಳ ಮೂಲಕ ಎನ್.ಎಸ್.ವಿ ಆ್ಯಪ್ ಮೂಲಕ ಸಾರ್ವಜನಿಕರ ಮತದಾರರ ಪಟ್ಟಿಯ ಪರಿಷ್ಕರಣೆಯ ಮಾಹಿತಿಯನ್ನು ಅಪ್ ಲೋಡ್ ಮಾಡುವ ಕೆಲಸವನ್ನು ವಿದ್ಯಾರ್ಥಿಗಳು ಮಾಡುತ್ತಿದ್ದಾರೆ. ಅಧಿಕಾರಿಗಳು ಮಾಡಬೇಕಾದ ಕೆಲಸ ವಿದ್ಯಾರ್ಥಿಗಳ ಕೈಯಲ್ಲಿ ಮಾಡಿಸೋದು ಎಷ್ಟು ಸರಿ ಅಂತ ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

    ಏನಿದು ಮತದಾರರ ಪಟ್ಟಿ ಪರಿಷ್ಕರಣೆ?
    ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ನಡೆಸುವಂತೆ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ಚುನಾವಣಾ ಆಯೋಗ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ಗಡುವು ನೀಡಿದೆ. ಆಕ್ಟೋಬರ್ 1 ರಿಂದ ಆಕ್ಟೋಬರ್ 15 ರ ಒಳಗೆ ಶೇ.50 ರಷ್ಟು ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವಂತೆ ಸೂಚನೆ ನೀಡಿದೆ.

    ಹೀಗಾಗಿ ಅಧಿಕಾರಿಗಳು ಮನೆ ಮನೆಗೆ ಹೋಗಿ ಈಗಿರುವ ವೋಟರ್ ಐಡಿ ಕಾರ್ಡ್ ಅನ್ನು ಅನ್ ಲೈನ್ ಆ್ಯಪ್ ಮೂಲಕ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಸೇರಿದಂತೆ ಇತರೆ ಏನಾದ್ರೂ ಲೋಪ ದೋಷಗಳಿದ್ದಲ್ಲಿ ಅವುಗಳನ್ನು ತಿದ್ದುಪಡಿ ಮಾಡಿ ನೂತನವಾಗಿ ವೋಟರ್ ಐಡಿ ಕಾರ್ಡ್ ನೊಂದಣಿ ಮಾಡಿಸಬೇಕಿದೆ. ನೊಂದಣಿಯಾದ ನಂತರ ಜನವರಿ ತಿಂಗಳಲ್ಲಿ ಹೊಸ ಸ್ಮಾರ್ಟ್ ಕಾರ್ಡ್ ರೀತಿಯ ವೋಟರ್ ಐಡಿ ಮತದಾರರಿಗೆ ಸಿಗಲಿದೆ. ಇದರಿಂದ ಬೇರೆ ಬೇರೆ ವಿಳಾಸಗಳಲ್ಲಿ ಒಬ್ಬ ವ್ಯಕ್ತಿಯದ್ದೇ ಎರಡು ಎರಡು ಕಾರ್ಡ್‍ಗಳಿದ್ದರೆ ಅವುಗಳಿಗೆ ಕಡಿವಾಣ ಹಾಕುವುದರ ಜೊತೆಗೆ ವೋಟರ್ ಐಡಿ ಡಿಜಿಟಲೈಜೆಷನ್ ಮಾಡುವ ಉದ್ದೇಶ ಚುನಾವಣಾ ಆಯೋಗದ್ದಾಗಿದೆ.

    ಟಾರ್ಗೆಟ್ ರೀಚ್ ಮಾಡಲು ವಾಮಮಾರ್ಗ:
    ಚುನಾವಣಾ ಆಯೋಗ ನೀಡಿದ ಟಾರ್ಗೆಟ್ ರೀಚ್ ಮಾಡೋಕೆ ಅಧಿಕಾರಿಗಳು ಹೆಣಗಾಡುವಂತಾಗಿದೆ. ಸಿಬ್ಬಂದಿ ಕೊರತೆ, ಸರ್ವರ್ ಪ್ರಾಬ್ಲಂ ನಿಂದ ಟಾರ್ಗೆಟ್ ರೀಚ್ ಮಾಡುವುದು ಕಷ್ಟಕರವಾಗಿದೆ. ಹೀಗಾಗಿ ಜಿಲ್ಲಾಪಂಚಾಯತಿ ವತಿಯಿಂದ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಗೆ ನುರಿತ ತಂತ್ರಜ್ಞರಿಂದ ತಮ್ಮ ಮೊಬೈಲ್ ಗಳಲ್ಲೇ ಚುನಾವಣಾ ಆಯೋಗದ ಆ್ಯಪ್ ಮೂಲಕ ತಮ್ಮ ಮನೆಯ ವೋಟರ್ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಿಕೊಳ್ಳುವಂತೆ ತರಬೇತಿ ನೀಡಲು ಆದೇಶಿಸಲಾಗಿದೆ. ಆದರೆ ಇದೇ ಆದೇಶದ ಮೂಲಕ ತರಬೇತಿ ಪಡೆದ ಕಾಲೇಜು ವಿದ್ಯಾರ್ಥಿಗಳನ್ನ ತಾಲೂಕು ಕಚೇರಿಗೆ ಕರೆಸಿದ ತಹಶೀಲ್ದಾರ್ ಅವರ ಮೂಲಕ ಸಾರ್ವಜನಿಕರ ಮತದಾರರ ಪಟ್ಟಿ ಯ ಪರಿಷ್ಕರಣೆಯ ಕಾರ್ಯ ನಡೆಸುತ್ತಿದ್ದಾರೆ.