Tag: Taluk Panchayat

  • ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ಪರಿಷತ್ ಸದಸ್ಯ

    ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ಪರಿಷತ್ ಸದಸ್ಯ

    ಬೆಂಗಳೂರು: ಜಿಪಂ (Zilla Panchayat), ತಾಪಂ (Taluk Panchayat) ಮೀಸಲಿಟ್ಟಿದ್ದ ಬಳಕೆಯಾಗದ ಅನುದಾನ ವಾಪಸ್ ಪಡೆದು ಹಣ ಬಳಕೆ ಆರೋಪ ಮಾಡಿದ್ದು, ಎಲ್ಲಿಗೆ ಬಳಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಬಿಜೆಪಿ ಪರಿಷತ್ ಸದಸ್ಯ ಡಿ.ಎಸ್.ಅರುಣ್ (D S Arun) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

    ಸಿಎಂ ವಿರುದ್ಧ ದೂರಿನ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜ್ಯ ಹಣಕಾಸು ಸಚಿವರು. ಜೆಡ್‌ಪಿ-ಟಿಪಿ (ಜಿಲ್ಲಾ ಪಂಚಾಯತಿ -ತಾಲ್ಲೂಕು ಪಂಚಾಯತಿ) ಬಳಕೆ ಆಗದ ಹಣ ಎಷ್ಟು ಇದೆ ಎಂದು ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರ ಬಳಿ ಕೇಳಿದ್ದೆ. ಆಗ ಅವರು 1,953 ಕೋಟಿ ರೂ. ಬಳಕೆ ಆಗದ ಹಣ ಇದೆ ಎಂದಿದ್ದರು. ಅದರಲ್ಲಿ 1,494 ಕೋಟಿ ರೂ. ಖಜಾನೆಗೂ ಜಮಾ ಆಗಿಲ್ಲ ಎಂದು ಪ್ರಶ್ನಿಸಿದಾಗ ನಿಯಮಿತವಾಗಿ ಪೇಮೆಂಟ್ ಜಮೆ ಆಗ್ತಾ ಇದೆ ಎಂದು ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದರು.

    ಖರ್ಚಾಗದೇ ಇದ್ದ ಹಣ ಸಂಚಿತ ನಿಧಿ ಮೂಲಕ ಸರ್ಕಾರಕ್ಕೆ ಬರಬೇಕು. ಅಲ್ಲದೆ ಆ ಹಣ ಬಳಕೆ ಆಗುವಾಗ ಶಾಸಕರ ಅನುಮತಿ ಪಡೆಯಬೇಕು. ನಾನು ಹಣಕಾಸು ಇಲಾಖೆಗೂ ಪತ್ರ ಬರೆದಿದ್ದೆ, ಅಲ್ಲೂ ಹಣ ಜಮಾ ಆಗಿಲ್ಲ, ಆ ಹಣ ಎಲ್ಲಿಗೆ ಹೋಯ್ತು….? ಎಂದು ಪ್ರಶ್ನಿಸಿದ್ದಾರೆ.

    ಜೆಡ್‌ಪಿ-ಟಿಪಿಗೆ ಇಟ್ಟ ಹಣ ಎಲ್ಲಿಗೆ ಹೋಯ್ತು..? ಜೆಡ್‌ಪಿ-ಟಿಪಿಯಲ್ಲಿ ಹಿಂದುಳಿದ ವರ್ಗದವರೆ ಜಾಸ್ತಿ ಇದ್ದಾರೆ. ಈ ಹಣದ ಬಳಕೆ ಸಂಬಂಧಿಸಿದಂತೆ ತನಿಖೆ ಆಗಬೇಕು. ಇದಕ್ಕೆಲ್ಲಾ ಹಣಕಾಸು ಸಚಿವರೇ ಹೊಣೆ ಎಂದರು. ಅದಕ್ಕಾಗಿಯೇ ನಾನು ಸಿದ್ದರಾಮಯ್ಯ ವಿರುದ್ಧವೇ ರಾಜ್ಯಪಾಲರಿಗೆ ದೂರು ನೀಡಿದ್ದೇನೆ. ಸಾರ್ವಜನಿಕ ಖಾತೆ ಸಮಿತಿಗೂ ದೂರು ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.

  • ನರೇಗಾ ಕಾಮಗಾರಿಯಲ್ಲಿ ಕೋಟ್ಯಂತರ ರೂ. ಗೋಲ್ಮಾಲ್- ಅಧಿಕಾರಿಗಳಿಬ್ಬರ ವಿರುದ್ಧ ಎಫ್‌ಐಆರ್

    ನರೇಗಾ ಕಾಮಗಾರಿಯಲ್ಲಿ ಕೋಟ್ಯಂತರ ರೂ. ಗೋಲ್ಮಾಲ್- ಅಧಿಕಾರಿಗಳಿಬ್ಬರ ವಿರುದ್ಧ ಎಫ್‌ಐಆರ್

    ರಾಯಚೂರು: ಜಿಲ್ಲೆಯ ದೇವದುರ್ಗ (Devadurga) ತಾಲೂಕಿನಲ್ಲಿ 2020-21 ರಿಂದ 2022-23ರವರೆಗೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಮಹಾ ಲೂಟಿ ನಡೆದಿರುವುದು ವಿಶೇಷ ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿ ವರದಿಯಲ್ಲಿ ಬಯಲಾದ ಬೆನ್ನಲ್ಲೇ ದೇವದುರ್ಗ ತಾಲೂಕು ಪಂಚಾಯ್ತಿಯ (Taluk Panchayat) ಹಿಂದಿನ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

    ಹಿಂದಿನ ಇಓ ಪಂಪಾಪತಿ ಹಿರೇಮಠ ಹಾಗೂ ಸಹಾಯಕ ನಿರ್ದೇಶಕ ಬಸಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ನರೇಗಾ ಕಾಮಗಾರಿಗಳ ಒಟ್ಟು 49.29 ಕೋಟಿ ರೂ. ಸರ್ಕಾರದ ಹಣ ನಷ್ಟ ಮಾಡಿದ ಆರೋಪ ಹಿನ್ನೆಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವದುರ್ಗ ತಾಲೂಕಿನ 33 ಗ್ರಾ.ಪಂ ನರೇಗಾ (NREGA) ಕಾಮಗಾರಿಯಲ್ಲಿ ಲೂಟಿಯಾಗಿರುವುದು ಬಯಲಾಗಿದ್ದು, ದೇವದುರ್ಗ ತಾ.ಪಂ ಸಹಾಯಕ ನಿರ್ದೇಶಕ ಅಣ್ಣಾರಾವ್ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಇಂದು ಬೆಂಗಳೂರಲ್ಲಿ 2ನೇ ದಿನದ ಕಂಬಳ – ಏನೇನಿದೆ ಕಾರ್ಯಕ್ರಮ?

    115 ಕಾಮಗಾರಿಗಳು ಅನುಷ್ಠಾನಗೊಳ್ಳದೇ ಇದ್ದರೂ 66.86 ಕೋಟಿ ರೂ. ಪಾವತಿ ಮಾಡಲಾಗಿದೆ. ಅಸ್ತಿತ್ವದಲ್ಲೇ ಇರದ ಮಾರುತೇಶ್ವರ ಎಂಟರ್ಪ್ರೈಸ್ ಸಾಮಗ್ರಿ ಖರೀದಿ ಅಂತ 102 ಕೋಟಿ ರೂ. ಪಾವತಿ ಮಾಡಿದ್ದು, 19.26 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಕಡತಗಳೇ ಇಲ್ಲಾ. ಈ ಎಲ್ಲಾ ಗೋಲ್‌ಮಾಲ್‌ಗಳ ಹಿನ್ನೆಲೆ ಜಿಲ್ಲಾ ಪಂಚಾಯ್ತಿ ಸಿಇಓ ನಿರ್ದೇಶನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಹಣ ಲಪಟಾಯಿಸಿದ್ರೂ ಬಿಡದಿ ಇನ್ಸ್‌ಪೆಕ್ಟರ್‌ ಸಸ್ಪೆಂಡ್ ಯಾಕಿಲ್ಲ?- ಭ್ರಷ್ಟನಿಗೆ ರಾಜಕೀಯ ರಕ್ಷಣೆ ಎಂದ ಮಾಜಿ ಶಾಸಕ

  • ನಾವು ದಲಿತರೆಂದು ಮನೆಯ ಒಳಗೆ ಸೇರಿಸಲ್ಲ – ತಹಶೀಲ್ದಾರ್ ಮುಂದೆಯೇ ಆಶಾ ಕಾರ್ಯಕರ್ತೆ ಕಣ್ಣೀರು

    ನಾವು ದಲಿತರೆಂದು ಮನೆಯ ಒಳಗೆ ಸೇರಿಸಲ್ಲ – ತಹಶೀಲ್ದಾರ್ ಮುಂದೆಯೇ ಆಶಾ ಕಾರ್ಯಕರ್ತೆ ಕಣ್ಣೀರು

    ದಾವಣಗೆರೆ: ಗ್ರಾಮಗಳಲ್ಲಿ ನಾವು ದಲಿತರೆಂದು ಮನೆಯ ಒಳಗೆ ಸೇರಿಸುವುದಿಲ್ಲ ಎಂದು ಆಶಾ ಕಾರ್ಯಕರ್ತೆಯೊಬ್ಬರು ತಹಶೀಲ್ದಾರರ ಮುಂದೆ ಕಣ್ಣೀರು ಹಾಕಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರು ಗ್ರಾಪಂ ವ್ಯಾಪ್ತಿಯ ಕಾನನಕಟ್ಟೆ ಗ್ರಾಮದಲ್ಲಿ ನಡೆದಿದೆ.

    ಗ್ರಾಮಗಳಲ್ಲಿ ಸಮೀಕ್ಷಾ ಕಾರ್ಯ ಮಾಡಲು ಪ್ರತಿ ಮನೆಗೆ ತೆರಳಿದರೆ ನಾವು ದಲಿತರೆನ್ನುವ ಕಾರಣಕ್ಕೆ ಒಳಗೆ ಪ್ರವೇಶ ನೀಡದೆ ಹೊರಗೇ ನಿಲ್ಲಿಸುತ್ತಾರೆ. ಹೀಗಿರುವಾಗ ಹೇಗೆ ಕೆಲಸ ಮಾಡಲಿ ಸರ್? ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: 819 ಕೋಟಿ ವಂಚಿಸಿದ್ರಾ ಮಾಜಿ ಸಚಿವ..? – ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ

    ಕಾನನಕಟ್ಟೆ ಗ್ರಾಮದ ಗ್ರಾಮಸ್ಥರು ನಿಗೂಢ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಪತಿ, ತಾಲೂಕು ಆರೋಗ್ಯಾಧಿಕಾರಿ ನಾಗರಾಜ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಪೂಜಾರ ಸಿದ್ದಪ್ಪ ಕಾನನಕಟ್ಟೆಗೆ ಭೇಟಿ ನೀಡಿದ್ದರು. ಈ ವೇಳೆ ಆಶಾ ಕಾರ್ಯಕರ್ತೆ ತಮ್ಮ ನೋವು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸರ್ಜರಿಗಾಗಿ ಸುನೀಲ್ ಶೆಟ್ಟಿ ಪುತ್ರಿ ಜೊತೆ ಜರ್ಮನಿಗೆ ಹಾರಿದ ಕ್ರಿಕೆಟಿಗ ಕೆ.ಎಲ್ ರಾಹುಲ್

    ಅಧಿಕಾರಿಗಳು ಕೆಲಸ ಮಾಡಿ ಎಂದು ಹೇಳುತ್ತಾರೆ. ಆದರೆ ನಾವು ಎಸ್ಸಿ ಜನಾಂಗದವರೆಂದು ಸವರ್ಣಿಯರು ಮನೆಯೊಳಗೆ ಪ್ರವೇಶ ನೀಡುತ್ತಿಲ್ಲ. ಇದರಿಂದ ನೀರು ಸಂಗ್ರಹಿಸುವ ತೊಟ್ಟಿಗಳನ್ನು ಪರಿಶೀಲನೆ ನಡೆಸಲು ಸಾಧ್ಯವಿಲ್ಲ. ಸಮೀಕ್ಷೆ ಮಾಡಿ ವರದಿ ನೀಡಲೂ ಸಾಧ್ಯವಾಗುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ. ಬಳಿಕ ತಾಪಂ ಇಓ ಲಕ್ಷ್ಮೀಪತಿ ಸಮಾಧಾನಪಡಿಸಿ ಸಮೀಕ್ಷೆ ಕಾರ್ಯ ನಡೆಸುವಂತೆ ಸಲಹೆ ನೀಡಿದ್ದಾರೆ.

    Live Tv

  • ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಚುನಾವಣೆ ಮುಂದೂಡಿಕೆಗೆ ಕಾರಣ: ಎಎಪಿ

    ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಚುನಾವಣೆ ಮುಂದೂಡಿಕೆಗೆ ಕಾರಣ: ಎಎಪಿ

    ಬೆಂಗಳೂರು: ರಾಜ್ಯದ ಜನತೆಗೆ ಲಸಿಕೆ ನೀಡಲು ಸರ್ಕಾರ ನಿರ್ಲಕ್ಷ್ಯ ತೋರಿರುವುದೇ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಮುಂದೂಡಲು ಕಾರಣ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

    ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಎಪಿಯ ರಾಜ್ಯ ಉಪಸಂಚಾಲಕಿ ಶಾಂತಲಾ ದಾಮ್ಲೆರವರು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥ ಬರುವುದೇ ಚುನಾವಣೆಗಳಿಂದ. ರಾಜ್ಯ ಸರ್ಕಾರವು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಿದ್ದರಿಂದ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಸರ್ಕಾರವು ಸರಿಯಾಗಿ ಕೋವಿಡ್ ಲಸಿಕೆ ನೀಡಿದ್ದರೆ ಇಂದು ಚುನಾವಣೆಯನ್ನು ಮುಂದೂಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಅಧಿಕಾರ ಉಳಿಸಿಕೊಳ್ಳಲು, ಕುರ್ಚಿಗಾಗಿ ಲಾಬಿ ಮಾಡಲು ಪದೇಪದೇ ದೆಹಲಿಗೆ ಹೋಗುವ ಸಿಎಂ ಹಾಗೂ ಸಚಿವರು ಕೇಂದ್ರದಿಂದ ಲಸಿಕೆ ತರಿಸಿ ವಿತರಿಸಲು ನಿರ್ಲಕ್ಷ್ಯ ತೋರುತ್ತಿರುವುದು ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ – ಪಿಯುಸಿ ಬೋರ್ಡ್

    ಜೂನ್ 21ರಂದು ರಾಜ್ಯದ 11 ಲಕ್ಷ ಜನರಿಗೆ ಲಸಿಕೆ ನೀಡಲಾಗಿತ್ತು. ನಂತರ ಅದು ನಿಧಾನವಾಗಿ ಕಡಿಮೆಯಾಗಿ ಈಗ 1 ಲಕ್ಷಕ್ಕೆ ಬಂದು ನಿಂತಿದೆ. ಈವರೆಗೆ ಕೇವಲ 30% ಜನರಿಗೆ ಮಾತ್ರ ಲಸಿಕೆ ನೀಡಲಾಗಿದ್ದು, ಇದೇ ರೀತಿ ಲಸಿಕೆ ನೀಡುವ ಪ್ರಮಾಣವನ್ನು ಕಡಿಮೆ ಮಾಡುತ್ತಾ ಹೋದರೆ ಮೂರು ವರ್ಷವಾದರೂ ಎಲ್ಲರಿಗೂ ಲಸಿಕೆ ಸಿಗುವುದಿಲ್ಲ. ದಿನಕ್ಕೆ 11 ಲಕ್ಷ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವಿದ್ದರೂ ಕೇವಲ ಒಂದು ಲಕ್ಷ ಲಸಿಕೆ ನೀಡುತ್ತಿರುವುದಕ್ಕೆ ಕಾರಣವೇನು? ಲಸಿಕೆ ಕೊರತೆಯಿಲ್ಲ ಎಂದು ಸುಳ್ಳು ಹೇಳಿ ಜನತೆಯನ್ನು ವಂಚಿಸುತ್ತಿರುವ ಆರೋಗ್ಯ ಸಚಿವರಿಗೆ ನಾಚಿಕೆಯಾಗಬೇಕು ಎಂದು ಶಾಂತಲಾ ದಾಮ್ಲೆಯವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

    ಎಎಪಿಯ ರಾಜ್ಯ ಯುವಘಟಕದ ಅಧ್ಯಕ್ಷರಾದ ಮುಕುಂದ್ ಗೌಡರವರು ಮಾತನಾಡಿ, ರಾಜ್ಯದ ಜನರು ಈಗಲೂ ಕೊರೊನಾ ಆತಂಕದಲ್ಲಿ ಬದುಕುತ್ತಿರುವುದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ. ಕೊರೊನಾ ರೋಗಿಗಳಿಗೆ ಬೆಡ್, ಆಕ್ಸಿಜನ್ ಕಲ್ಪಿಸುವುದರಲ್ಲಿ ವಿಫಲವಾಗಿದ್ದ ಸರ್ಕಾರವು ಈಗ ಲಸಿಕೆ ನೀಡುವುದರಲ್ಲಿಯೂ ವಿಫಲವಾಗಿದೆ. ಕಮಿಷನ್ ಆಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಯನ್ನು ಮಾರಿಕೊಂಡು ಸರ್ಕಾರಿ ಆಸ್ಪತ್ರೆಗಳಲ್ಲಿ ಕೃತಕ ಅಭಾವ ಸೃಷ್ಟಿಸಿದೆ. ಇವೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿರುವ ರಾಜ್ಯದ ಜನರು ಆಡಳಿತದ ವಿರುದ್ಧ ನಿಲುವು ಹೊಂದಿದ್ದಾರೆ ಎಂಬುದು ಸರ್ಕಾರಕ್ಕೆ ಗೊತ್ತಿದೆ. ಸೋಲಿನ ಭಯದಿಂದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಮುಂದೂಡಿದೆ. ಮಾರ್ಕೆಟ್, ಮಾಲ್ ಮುಂತಾದ ಜನಸಂದಣಿ ಪ್ರದೇಶಗಳಿಗೆ ಅವಕಾಶ ನೀಡಿರುವಾಗ, ಚುನಾವಣೆ ನಡೆಸಲು ಮಾತ್ರ ಕೋವಿಡ್ ನೆಪ ಹೇಳುತ್ತಿರುವುದು ಆಶ್ಚರ್ಯಕರವಾಗಿದೆ ಎಂದು ಹೇಳಿದರು.

  • ತಾಲೂಕು ಪಂಚಾಯತ್ ರದ್ಧತಿ ಸರ್ಕಾರದಿಂದ ಸಾಧ್ಯವಿಲ್ಲ: ಹೆಬ್ಬಾರ್

    ತಾಲೂಕು ಪಂಚಾಯತ್ ರದ್ಧತಿ ಸರ್ಕಾರದಿಂದ ಸಾಧ್ಯವಿಲ್ಲ: ಹೆಬ್ಬಾರ್

    ಕಾರವಾರ: ತಾಲೂಕು ಪಂಚಾಯತ್ ರದ್ಧತಿ ಕೇವಲ ಊಹಾಪೋಹ. ರದ್ದು ಮಾಡಲು ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ಈ ಬಾರಿಯೂ ಮೂರು ವಿಭಾಗದ ಪಂಚಾಯತ್ ರಾಜ್ ವ್ಯವಸ್ಥೆಯಡಿಯಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದರು.

    ಶಿರಸಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಾಲೂಕು ಪಂಚಾಯತ್ ರದ್ದತಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವರು ಸಹ ತಿಳಿಸಿದ್ದಾರೆ ಮುಂದಿನ ಚುನಾವಣೆಯಲ್ಲಿ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತಿಗೆ ಚುನಾವಣೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

    ಸಚಿವನಾಗಿ ಪ್ರಮಾಣವಚನ ಸ್ವೀಕರಿಸಿ ಇಂದಿಗೆ ಒಂದು ವರ್ಷ ಆಯಿತು. ಜನ ನನ್ನ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಿರೀಕ್ಷೆಗೆ ತಕ್ಕ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

  • ಕುಸಿದು ಬಿತ್ತು ತಾಲೂಕು ಪಂಚಾಯಿತಿ ಸಭಾಂಗಣದ ಮೇಲ್ಛಾವಣಿ- ತಪ್ಪಿದ ಭಾರೀ ಅನಾಹುತ

    ಕುಸಿದು ಬಿತ್ತು ತಾಲೂಕು ಪಂಚಾಯಿತಿ ಸಭಾಂಗಣದ ಮೇಲ್ಛಾವಣಿ- ತಪ್ಪಿದ ಭಾರೀ ಅನಾಹುತ

    ಶಿವಮೊಗ್ಗ: ತಾಲೂಕು ಪಂಚಾಯಿತಿ ಸಭಾಂಗಣದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಸಭಾಂಗಣದಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

    ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಘಟನೆ ನಡೆದಿದೆ. ತೀರ್ಥಹಳ್ಳಿಯ ತಾಲೂಕು ಪಂಚಾಯಿತಿ ಸಭಾಂಗಣದ ಕಟ್ಟಡ ಹಲವು ವರ್ಷಗಳಿಂದ ಶಿಥಿಲಗೊಂಡಿತ್ತು. ಶಿಥಿಲಗೊಂಡಿದ್ದ ಕಟ್ಟಡವನ್ನು ದುರಸ್ತಿಗೊಳಿಸುವಂತೆ ಸ್ಥಳೀಯರು ಹಲವು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರು. ಆದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೇಜವಾಬ್ದಾರಿ ತೋರಿದ್ದರು.

    ಇಂದು ಸಭಾಂಗಣದ ಮೇಲ್ಛಾವಣಿ ಕುಸಿದು ಬಿದ್ದಿದೆ. ಆದರೆ ಸಭಾಂಗಣದಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಜನ ಪ್ರತಿನಿಧಿಗಳು ಇನ್ನಾದರೂ ಈ ಕುರಿತು ಚಿತ್ತ ಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

  • ಬಣಕಲ್ ಪೊಲೀಸರಿಂದ ಮಂಗ್ಳೂರು ತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿ ಸೀಜ್

    ಬಣಕಲ್ ಪೊಲೀಸರಿಂದ ಮಂಗ್ಳೂರು ತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿ ಸೀಜ್

    ಚಿಕ್ಕಮಗಳೂರು: ಪೊಲೀಸರು ಅಡ್ಡ ಹಾಕಿದರು ಗಾಡಿ ನಿಲ್ಲಸದೆ ಮೂಡಿಗೆರೆ ತಾಲೂಕಿನ ಬಣಕಲ್‍ಗೆ ಬಂದು ಹಿಂದಿರುಗಿದ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿಯನ್ನು ಬಣಕಲ್ ಪೊಲೀಸರು ಸೀಜ್ ತಂದು ಠಾಣೆಯಲ್ಲಿ ನಿಲ್ಲಿಸಿದ್ದಾರೆ.

    ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆ ಹಾಗೂ ರಾಜ್ಯಗಳ ಗಡಿಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಕೊರೊನಾ ವೈರಸ್ ಆತಂಕದಲ್ಲಿ ಮಂಗಳೂರು ರೆಡ್ ಝೋನ್‍ನಲ್ಲಿದೆ. ಮಂಗಳೂರಿನಿಂದ ಚಾರ್ಮಾಡಿ ಮೂಲಕ ಚಿಕ್ಕಮಗಳೂರಿಗೆ ಬರುವ ಪ್ರತಿಯೊಂದು ಗಾಡಿಯನ್ನು ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ತೊಳೆದುಕೊಂಡು ಬರುವಂತೆ ಹೇಳಿ, ಚೆಕ್ ಮಾಡಿ ಜಿಲ್ಲೆಯೊಳಗೆ ಬರುವಂತೆ ಸೂಚಿಸಿದ್ದಾರೆ.

    ಮಂಗಳೂರಿನಿಂದ ಎರಡು ದಿನಗಳ ಹಿಂದೆ ತಾಲೂಕು ಪಂಚಾಯತ್ ಅಧ್ಯಕ್ಷರ ಗಾಡಿ ಕೊಟ್ಟಿಗೆಹಾರದಲ್ಲಿ ಪೊಲೀಸರು ಅಡ್ಡ ಹಾಕಿದರು ನಿಲ್ಲಿಸದೆ ಬಣಕಲ್ ಬಂದಿದ್ದರು. ಪುನಃ ಹೋಗುವಾಗಲೂ ಗಾಡಿ ನಿಲ್ಲಿಸದೆ ಹೋಗಿದ್ದರು. ಗಾಡಿಯಲ್ಲಿ ಡ್ರೈವರ್ ಸೇರಿ ನಾಲ್ಕೈದು ಜನ ಇದ್ದರೆಂದು ಹೇಳಲಾಗಿದೆ.

    ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಗಡಿಗಳು ಬಂದ್ ಮಾಡಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಹೋಗಲು ಎಸ್‍ಪಿ ಹಾಗೂ ಡಿಸಿ ಅನುಮತಿ ಬೇಕು. ಆದರೆ ಅನುಮತಿ ಇದ್ಯೋ-ಇಲ್ಲವೋ ಎರಡನೇ ಮಾತು. ಪೊಲೀಸರು ಕೈ ಅಡ್ಡ ಹಾಕದರು ಗಾಡಿ ನಿಲ್ಲಿಸಿಲ್ಲ. ಗಾಡಿಯ ಮುಂದೆ ಅಧ್ಯಕ್ಷರು ತಾಲೂಕು ಪಂಚಾಯತ್ ಎಂಬ ಬೋರ್ಡ್ ಇತ್ತು. ಸರ್ಕಾರದ ನಿಯಮವನ್ನ ಉಲ್ಲಂಘಿಸಿದ ಆರೋಪದಡಿ ಬಣಕಲ್ ಪೊಲೀಸರು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರ ಗಾಡಿಯನ್ನ ಸೀಜ್ ಮಾಡಿ ಸ್ಟೇಷನ್‍ಗೆ ತಂದು ನಿಲ್ಲಸಿದ್ದಾರೆ.

  • ತಾ.ಪಂ ಅಧ್ಯಕ್ಷರ ಕೊಠಡಿಯಲ್ಲಿ ಬಿಯರ್ ಬಾಟಲ್ ಒಡೆದ ಕಿಡಿಗೇಡಿಗಳು

    ತಾ.ಪಂ ಅಧ್ಯಕ್ಷರ ಕೊಠಡಿಯಲ್ಲಿ ಬಿಯರ್ ಬಾಟಲ್ ಒಡೆದ ಕಿಡಿಗೇಡಿಗಳು

    ಯಾದಗಿರಿ: ತಾಲೂಕು ಪಂಚಾಯತ್ ಅಧ್ಯಕ್ಷರ ಕೊಠಡಿಯಲ್ಲಿ ಕಿಡಿಗೇಡಿಗಳು ಬಿಯರ್ ಬಾಟಲ್ ಒಡೆದಿರುವ ಘಟನೆ ನಡೆದಿದೆ. ಕೊಠಡಿ ತುಂಬೆಲ್ಲ ಬಿಯರ್ ಬಾಟಲ್ ಗ್ಲಾಸ್ ಹಾಗೂ ಕಲ್ಲುಗಳು ಬಿಸಾಕಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

    ತಾ.ಪಂ ಅಧ್ಯಕ್ಷೆ ಭಿಮ್ಮವ್ವ ಅಚ್ಚೋಲಾ ಮತ್ತು ಸದಸ್ಯರ ನಡುವೆ ಮುಸುಕಿನ ಗುದ್ದಾಟ ಹಿನ್ನೆಲೆಯಲ್ಲಿ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಒಂದೇ ತಿಂಗಳಲ್ಲಿ ಎರಡು ಬಾರಿ ಇದೇ ರೀತಿಯ ಘಟನೆ ನಡೆದಿದ್ದು ಗೊಂದಲಕ್ಕೆ ಕಾರಣವಾಗಿದೆ. ಅಧ್ಯಕ್ಷರ ಹೆಸರಿಗೆ ಕಳಂಕ ತರಲು ತಾ.ಪಂ ಸದಸ್ಯರೇ ಈ ರೀತಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಒಂದೇ ತಿಂಗಳಲ್ಲಿ ಎರಡು ಬಾರಿ ಈ ರೀತಿಯ ಘಟನೆ ನಡೆದ ಹಿನ್ನೆಲೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪೊಲೀಸರಿಗೆ ದೂರು ಕೊಟ್ಟು ಕಿಡಿಗೇಡಿಗಳ ಪತ್ತೆಗೆ ಮುಂದಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ ಇನ್ನುಮುಂದೆ ಕಚೇರಿಯಲ್ಲಿ ಸಿಸಿಟಿವಿ ಅಳವಡಿಸುವುದಾಗಿ ತಿಳಿಸಿದ್ದಾರೆ.

  • ಅಧಿಕಾರಿಗಳಿಗೆ ಶ್ರೀರಾಮುಲು ಕ್ಲಾಸ್- ಸಭೆಗೆ ಗೈರಾಗಿದ್ದ ಟಿಎಚ್‍ಓ ಸಸ್ಪೆಂಡ್‍ಗೆ ಸೂಚನೆ

    ಅಧಿಕಾರಿಗಳಿಗೆ ಶ್ರೀರಾಮುಲು ಕ್ಲಾಸ್- ಸಭೆಗೆ ಗೈರಾಗಿದ್ದ ಟಿಎಚ್‍ಓ ಸಸ್ಪೆಂಡ್‍ಗೆ ಸೂಚನೆ

    ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅವರು ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಸಮಯಕ್ಕೆ ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಅಷ್ಟೇ ಅಲ್ಲದೆ ಹಲವು ಸಭೆಗಳಿಗೆ ಪದೇ ಪದೇ ಗೈರು ಹಾಜರಾಗುತ್ತಿದ್ದ ಮೊಳಕಾಲ್ಮೂರಿನ ಟಿಎಚ್‍ಓ ತುಳಸಿ ರಂಗನಾಥ್ ಅವರನ್ನು ಅಮಾನತುಗೊಳಿಸಲು ಸೂಚನೆ ನೀಡಿದ್ದಾರೆ.

    ಮೊಳಕಾಲ್ಮೂರು ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕುಂಟಿತವಾಗಲು ಎಇಇ ಶಿವಕುಮಾರ್ ಪವಾರ್ ಕಾರಣವಾಗಿದ್ದಾರೆ. ಅವರಿಗೆ ನೋಟಿಸ್ ನೀಡಬೇಕು ಎಂದು ಉನ್ನತ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಇದೇ ವೇಳೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿನ ಸಮಸ್ಯೆ ಕುರಿತು ತೀವ್ರ ಕಾಳಜಿವಹಿಸಿ, ಸಭೆಯಲ್ಲಿನ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜೊತೆಗೆ ಆಸ್ಪತ್ರೆಗೆ ಅಗತ್ಯವಿರುವ ರೇಡಿಯಾಲಜಿಸ್ಟ್, ಅರವಳಿಕೆ ತಜ್ಞರು, ಮಕ್ಕಳ ತಜ್ಞರು, ಚರ್ಮ ರೋಗ ತಜ್ಞರು, ಫಿಸಿಯೋಥೆರಪಿಸ್ಟ್, 3 ಔಷಧ ವಿತರಕರು, 11 ಶುಶ್ರೂಷಕಿಯರು ಹಾಗೂ ಅತಿ ಮುಖ್ಯವಾಗಿ ಅಲ್ಟ್ರಾ ಸ್ಕ್ಯಾನಿಂಗ್ ಮೆಷಿನ್, ಪಲ್ಸ್ ಆಕ್ಸಿ ಮೀಟರ್, ಎಕ್ಸ್ ರೇ ಮೆಷಿನ್‍ಗಳನ್ನು ಆದಷ್ಟು ಬೇಗ ಒದಗಿಸಲು ಅಗತ್ಯವಿರುವ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

    ಸಚಿವ ಶ್ರೀರಾಮುಲು ಅವರು ಮೊಳಕಾಲ್ಮೂರು ಕ್ಷೇತ್ರದ ರಾಯಪುರದಲ್ಲಿ ಆಯುರ್ವೇದ ಮೆಡಿಕಲ್ ಕಾಲೇಜ್ ಹಾಗೂ ಹೋಮಿಯೋಪತಿ ಕಾಲೇಜ್ ಸಹ ಸ್ಥಾಪನೆ ಮಾಡುವ ಇಂಗಿತ ವ್ಯಕ್ತಪಡಿಸಿದರು. ಪಶುಸಂಗೋಪನೆ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆಗೂ ಸಭೆಯಲ್ಲಿ ಮನವಿ ಮಾಡಿದಾಗ, ಸಂಪುಟದಲ್ಲಿ ಈ ಬಗ್ಗೆ ಚರ್ಚಿಸುವ ಭರವಸೆ ನೀಡಿದರು.

    ಶಾಲಾ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅಂಗನವಾಡಿಗಳ ಬಳಿ ನೆಲ್ಲಿಕಾಯಿ, ಸೀಬೆಕಾಯಿ, ಹುಣಸೆ ಕಾಯಿ ಮರಗಳ ಸಸಿ ನೆಟ್ಟು ಬೆಳೆಸಲು ವೈದ್ಯರ ನೀಡಿದ ಸಲಹೆ ಹಾಗೂ ಮನವಿಯನ್ನು ಸಚಿವರು ಪಡೆದರು. ಬಳಿಕ ಅಂಗನವಾಡಿಗಳ ಬಳಿ ಕುಡಿಯುವ ನೀರಿನ ಸೌಲಭ್ಯ ಜೊತೆಗೆ ಗಿಡಮರಗಳನ್ನು ಬೆಳೆಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೆಯೇ ಅಂಗನವಾಡಿಗಳಲ್ಲಿ ಶೌಚಾಲಯ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಅಂಗನವಾಡಿ ಸಿಬ್ಬಂದಿಗೆ ಗೌರವಧನ ಹಾಗೂ ಮೊಟ್ಟೆಗೆ ಹಣ ಬಿಡುಗಡೆಯಲ್ಲಿ ವಿಳಂಭವಾದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಸಚಿವ ಶ್ರೀರಾಮುಲು ಅವರು ಗರಂ ಆದರು.

    ಮೊಳಕಾಲ್ಮೂರು ಕ್ಷೇತ್ರದಲ್ಲಿ 1.35 ಲಕ್ಷ ಬಿಪಿಎಲ್ ಕಾರ್ಡ್ ಗಳಿವೆ. ಆದರೆ ಸಂಪೂರ್ಣ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೀಡದ ಅಧಿಕಾರಿಗೆ ಸಚಿವರು ತರಾಟೆ ತೆಗೆದುಕೊಂಡರು. ತಕ್ಷಣ ಕಾರ್ಡ್ ವಿತರಿಸಲು ಸೂಚಿಸಿದರು. ಮಹಿಳಾ ಹಾಸ್ಟೆಲ್ ನಿರ್ಮಾಣಕ್ಕೆ ಬೇಡಿಕೆಗೂ ಸ್ಪಂದಿಸಿದ ಅವರು, ವಿದ್ಯಾರ್ಥಿಗಳ ಹಾಸ್ಟೆಲ್ ಪೂರ್ಣಗೊಂಡ ಬಳಿಕ ಆರಂಭಿಸುವ ಭರವಸೆ ನೀಡಿದರು.

    ಭಾಗ್ಯ ಲಕ್ಷ್ಮಿ ಬಾಂಡ್ ವಿತರಣೆ ಮತ್ತೆ ಆರಂಭ:
    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಈ ಹಿಂದೆ ಜಾರಿಗೆ ತರಲಾಗಿದ್ದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ ವಿಳಂಬದ ಬಗ್ಗೆ ಅಧಿಕಾರಿಗಳನ್ನು ಸಚಿವರು ಪ್ರಶ್ನಿಸಿದರು. ಆಗ ಅವರ ಮಾತಿಗೆ ಉತ್ತರಿಸಿದ ಅಧಿಕಾರಿಗಳು, 2015-16ರಿಂದ ಈಚೆಗೆ ವಿತರಣೆ ಆಗಿರಲಿಲ್ಲ. ಬಿಜೆಪಿ ಸರ್ಕಾರ ಬಂದ ನಂತರ ಬಾಂಡ್ ವಿತರಿಸುತ್ತಿರುವುದಾಗಿ ತಿಳಿಸಿದರು.

    ದೇವರಾಜ ಅರಸು ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಬಿಡುಗಡೆ ಆಗಿದೆ. ಕೆಲಸ ಕೂಡ ನಡೆಯುತ್ತಿದ್ದು, ಉಳಿದ 50 ಲಕ್ಷ ರೂ. ಬಿಡುಗಡೆಗೆ ಅಧಿಕಾರಿಗಳಿಂದ ಮನವಿ ಸಲ್ಲಿಸಲಾಯಿತು. ಆಗ ಸಚಿವರು ತಕ್ಷಣ ಹಣ ಬಿಡುಗಡೆ ಮಾಡುವ ಭರವಸೆ ನೀಡಿದರು.

    ಗಡಿಭಾಗದ ಅಧಿಕಾರಿಗಳು ನಿಷ್ಠೆ ಹಾಗೂ ಬದ್ಧತೆಯಿಂದ ಕೆಲಸ ಮಾಡಬೇಕು. ತಾಲೂಕು ಕೇಂದ್ರಗಳಲ್ಲಿರುವ ಅಧಿಕಾರಿಗಳು ಹೆಡ್ ಕ್ವಾರ್ಟರ್ಸ್ ನಲ್ಲಿಯೇ ಉಳಿಯಬೇಕು. ಒಂದು ವೇಳೆ ಸರಿಯಾಗಿ ಕೆಲಸ ಮಾಡಲು ಆಗದವರು ಹೊರಗಡೆಗೆ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು. ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಗಳು ಬಾರದ ರೀತಿ ಜನರಿಗೆ ಸ್ಪಂದಿಸಬೇಕು, ಜನರ ಕೆಲಸ ಮಾಡಬೇಕು ಎಂದು ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದರು.

  • ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಒತ್ತಡ ಹೇರಲ್ಲ: ಶರತ್ ಬಚ್ಚೇಗೌಡ

    ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಒತ್ತಡ ಹೇರಲ್ಲ: ಶರತ್ ಬಚ್ಚೇಗೌಡ

    – ಅಧಿಕಾರಿಗಳು ಪಕ್ಷಪಾತ ತೋರದೆ ಕೆಲಸ ನಿರ್ವಹಿಸಿ

    ಬೆಂಗಳೂರು: ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಯಾವುದೇ ಅಧಿಕಾರಿಯ ಮೇಲೆ ಒತ್ತಡ ತರುವುದಿಲ್ಲ. ಅಧಿಕಾರಿಗಳು ಸಹ ಪಕ್ಷಪಾತ ಮಾಡದೆ ಕೆಲಸ ಮಾಡಿ ತಾಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಕರಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಮನವಿ ಮಾಡಿಕೊಂಡಿದ್ದಾರೆ.

    ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳು ಸಂಬಂಧಪಟ್ಟ ಪಲಾನುಭವಿಗೆ ತಲುಪಬೇಕು. ಇದರಲ್ಲಿ ಯಾರದೋ ಕೈವಾಡವಾಗಲಿ ರಾಜಕೀಯವಾಗಿಲಿ ಮಾಡುವುದು ಬೇಡ. ನಾನು ಸಹ ಅಭಿವೃದ್ಧಿಯ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಯಾವುದೇ ರಾಜಕೀಯ ಮಾಡದೇ ಕೆಲಸ ಮಾಡೋಣ. ಈಗಾಗಲೇ ತಾಲೂಕು ಪಂಚಾಯಿತಿ ಹಂತದಲ್ಲಿ ಸಾಕಷ್ಟು ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

    ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ತಾಲೂಕಿನಲ್ಲಿ ಈವರೆಗೆ ಶೇ.69.94ರಷ್ಟು ಕೆಲಸವಾಗಿದ್ದು, ಇದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ ಅಧಿಕ ಎಂದು ತಾಲೂಕು ಕಾರ್ಯನಿರ್ವಹಣಾಧಿಕಾರಿ ಶ್ರೀನಾಥ್ ಗೌಡ ತಿಳಿಸಿದರು. ತಾಲೂಕಿನಲ್ಲಿ 268 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಅದರಲ್ಲಿ 8 ಮಾತ್ರ ಕೆಲಸ ಮಾಡುತ್ತಿಲ್ಲ. ಉಳಿದಂತೆ ತಾಲೂಕಿನಲ್ಲಿ ಕುಡಿಯುವ ನೀರಿಗೆ ವ್ಯವಸ್ಥೆ ಇದೆ ಎಂದು ಮಾಹಿತಿ ನೀಡಿದರು.

    ತಾಲೂಕಿನ ಚೊಕ್ಕಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಊರಿನ ಎಲ್ಲ ಬೀದಿ ದೀಪಗಳಿಗೂ ಸೋಲಾರ್ ಕರೆಂಟ್ ಅಳವಡಿಸಿದ್ದು, ಇದಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡೆಸಿದರು. ನೀರಿಗೆ ಹೆಚ್ಚು ಒತ್ತು ಕೊಟ್ಟು ಕೆಲಸಮಾಡಿ, ನೀರಿನ ಸಮಸ್ಯೆ ಬಗೆಹರಿಸಿವಂತೆ ಅಧಿಕಾರಿಗಳಿಗೆ ಸೂಚಿಸಿದರು.