Tag: Tamakuru

  • ವಿಡಿಯೋ ಕಾಲ್ ಮೂಲಕ ಮೃತದೇಹ ತೋರಿಸಿ ಅಂತ್ಯಸಂಸ್ಕಾರ

    ವಿಡಿಯೋ ಕಾಲ್ ಮೂಲಕ ಮೃತದೇಹ ತೋರಿಸಿ ಅಂತ್ಯಸಂಸ್ಕಾರ

    ತುಮಕೂರು: ಲಾಕ್‍ಡೌನ್‍ನಿಂದಾಗಿ ಸಂಬಂಧಿಕರು ಮೃತಪಟ್ಟರೂ ಅಂತ್ಯಸಂಸ್ಕಾರ ಮಾಡಲು ಹೋಗದ ಪರಿಸ್ಥಿತಿ ಇದೆ. ಈ ರೀತಿ ಇರುವಾಗ ದೂರದ ಊರಿನಲ್ಲಿದ್ದ ಸಂಬಂಧಿಕರು ಮೃತಪಟ್ಟ ತಮ್ಮ ಸಂಬಂಧಿಯೊಬ್ಬರ ಅಂತ್ಯಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ನೋಡಿ ದೂರದಿಂದಲೇ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

    ಅಂದಹಾಗೆ ಈ ಘಟನೆ ನಡೆದದ್ದು ತುಮಕೂರು ನಗರದಲ್ಲಿ. ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಕನೈದಾಸ್ ಮೃತಪಟ್ಟಿದ್ದ. ತುಮಕೂರಿನ ಎಂ.ಜಿ ರಸ್ತೆಯಲ್ಲಿ ಕರವಸ್ತ್ರ ಮಾರಿಕೊಂಡು ಜೀವನ ನಡೆಸುತ್ತಿದ್ದ ಕನೈದಾಸ್‍ಗೆ ಏಪ್ರಿಲ್ 2ರಂದು ಹೃದಯಾಘಾತ ಸಂಭವಿಸಿತ್ತು. ಕನೈದಾಸ್ ಸ್ನೇಹಿತರು ಆತನನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

    ಸದ್ಯ ಲಾಕ್‍ಡೌನ್ ಇರುವ ಕಾರಣ ಮೃತ ಶರೀರವನ್ನು ಪಶ್ಚಿಮ ಬಂಗಾಳಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಾಗಿರಲಿಲ್ಲ. ಈ ಕಾರಣದಿಂದ ಕುಟುಂಬಸ್ಥರ ಮನವಿ ಮೇರೆಗೆ ಇಲ್ಲಿಯೇ ಅಂತ್ಯಸಂಸ್ಕಾರ ನಡೆದಿದೆ. ಆದರೆ ಅಂತ್ಯಸಂಸ್ಕಾರಕ್ಕೆ ಆತನ ಸಂಬಂಧಿಕರು ಬಂದಿರಲಿಲ್ಲ. ಹಾಗಾಗಿ ವಾಟ್ಸಪ್ ಮೂಲಕ ವಿಡಿಯೋ ಕಾಲ್ ಮಾಡಿ ಸಂಬಂಧಿಕರು ಮೃತದೇಹವನ್ನು ವೀಕ್ಷಣೆ ಮಾಡಿದ್ದಾರೆ.

  • ನಾಡಿನ ರಾಜ ಒಳ್ಳೆಯವನಾಗಿದ್ದರೆ ನಾಡು ಸುಭಿಕ್ಷವಾಗಿರುತ್ತದೆ – ಕುಪ್ಪೂರು ಶ್ರೀ

    ನಾಡಿನ ರಾಜ ಒಳ್ಳೆಯವನಾಗಿದ್ದರೆ ನಾಡು ಸುಭಿಕ್ಷವಾಗಿರುತ್ತದೆ – ಕುಪ್ಪೂರು ಶ್ರೀ

    ತುಮಕೂರು: ನಾಡು ಆಳುವ ದೊರೆ ಒಳ್ಳೆಯವನಾಗಿದ್ದರೆ ನಾಡು ಸುಭಿಕ್ಷವಾಗಿರುತ್ತದೆ ಎಂದು ಕುಪ್ಪೂರು ಶ್ರೀ ಹೇಳಿದರು.

    ಕುಪ್ಪೂರು ಗದ್ದಿಗೆ ಮಠಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಭಾವೈಕ್ಯ ಧರ್ಮಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಯತೀಶ್ವರ ಶಿವಾಚಾರ್ಯ ಶ್ರೀಗಳು, ಯಡಿಯೂರಪ್ಪ ಸಿಎಂ ಆಗಿದಾಗಿಂದ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆ ಆಗುತ್ತಿದೆ. ಸಿಎಂ ಯಡಿಯೂರಪ್ಪ ದೈವಕ್ಕೆ ಹೆಚ್ಚಿನ ಒತ್ತು ಕೊಡುವವರು ಹಾಗಾಗಿ ನಾಡು ಸುಭೀಕ್ಷವಾಗಿದೆ ಎಂದು ಹಾಡಿಹೊಗಳಿದರು.

    ಚಿಕ್ಕನಾಯಕನಹಳ್ಳಿ ತಾಲೂಕಿನ ಕಪ್ಪೂರು ಗ್ರಾಮದಲ್ಲಿರುವ ಮಠದ ಆವರಣದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಸಚಿವರಾದ ಜೆ.ಸಿ ಮಾಧುಸ್ವಾಮಿ, ಆರ್ ಅಶೋಕ್ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    ಕಾರ್ಯಕ್ರಮದಲ್ಲಿ ಮರಳುಸಿದ್ದೇಶ್ವರ ಪವಾಡ ಪುಸ್ತಕ ಹಾಗೂ ಹಲವು ಸಾಧಕರಿಗೆ ಕುಪ್ಪೂರು ಮಠ ನೀಡುವ ಪ್ರಶಸ್ತಿ ಪ್ರಧಾನ ಮಾಡಿದರು.

  • ಫೋಟೋಗೆ ಅಶ್ಲೀಲ ಪದ ಬಳಸಿ ಫೇಸ್ಬುಕ್ ಗೆ ಪೋಸ್ಟ್- ಲಕ್ಷ ಲಕ್ಷ ಡಿಮ್ಯಾಂಡ್ ಇಟ್ಟಿದ್ದ ವ್ಯಕ್ತಿಗೆ ಸಖತ್ ಗೂಸಾ

    ಫೋಟೋಗೆ ಅಶ್ಲೀಲ ಪದ ಬಳಸಿ ಫೇಸ್ಬುಕ್ ಗೆ ಪೋಸ್ಟ್- ಲಕ್ಷ ಲಕ್ಷ ಡಿಮ್ಯಾಂಡ್ ಇಟ್ಟಿದ್ದ ವ್ಯಕ್ತಿಗೆ ಸಖತ್ ಗೂಸಾ

    ತುಮಕೂರು: ವಿವಾಹಿತ ಮಹಿಳೆಗೆ ಫೇಸ್ಬುಕ್ ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಯೋರ್ವನನ್ನು ಸಾರ್ವಜನಿಕರು ಹಿಡಿದು ಗೂಸಾ ಕೊಟ್ಟ ಘಟನೆ ತುಮಕೂರು ನಗರದ ಭೀಮಸಂದ್ರದಲ್ಲಿ ನಡೆದಿದೆ.

    ನೆಲಮಂಗಲ ಮೂಲದ ಮೋಹನ್ ಗೂಸಾ ತಿಂದ ವ್ಯಕ್ತಿ. ಈತ ಫೇಸ್ಬುಕ್ ನಲ್ಲಿ ಭೀಮಸಂದ್ರದ ಮಹಿಳೆಯನ್ನ ಪರಿಚಯ ಮಾಡಿಕೊಂಡು ಬಳಿಕ ಅವರ ಫೋಟೋಗೆ ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಮಾಡಿದ್ದಾನೆ. ನಂತರ ಆ ಫೋಟೋ ತೋರಿಸಿ ಬ್ಲಾಕ್ ಮೇಲ್ ಮಾಡಿದ್ದಾನೆ. ಜೊತೆಗೆ ಮಹಿಳೆಯ ಸಹೋದರ ಮಂಜುನಾಥ್ ಮತ್ತು ಕುಟುಂಬದವರಿಗೆ ಕಳೆದ ಆರು ತಿಂಗಳಿನಿಂದ ಕರೆಮಾಡಿ ಮಾನಸಿಕವಾಗಿ ಹಿಂಸೆ ನೀಡಿದ್ದಲ್ಲದೆ, 5 ಲಕ್ಷ, 15 ಲಕ್ಷ ಹಣ ನೀಡುವಂತೆ ಡಿಮ್ಯಾಂಡ್ ಕೂಡ ಮಾಡಿದ್ದಾನೆ ಎಂಬುವುದಾಗಿ ತಿಳಿದುಬಂದಿದೆ.

    ಮೋಹನ್ ವರ್ತನೆಯಿಂದ ಬೇಸತ್ತಿದ್ದ ಮಹಿಳೆಯ ಪೋಷಕರು 6-7 ತಿಂಗಳಿನಿಂದ ಮೋಹನನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಕಿಲಾಡಿ ಮೋಹನ ಅವರಿಗೆ ಚಳ್ಳೆಹಣ್ಣು ತಿನ್ನಿಸಿ ಓಡಾಡುತ್ತಿದ್ದನು. ಆದ್ರೆ ಇಂದು ಬೆಳಗ್ಗೆ ಮಹಿಳೆಯ ಸಹೋದರ ಮಂಜುನಾಥನ ಕೈಗೆ ಅಚಾನಕ್ಕಾಗಿ ಮೋಹನ್ ಭೀಮಸಂದ್ರದ ಬಳಿ ಯಾವುದೋ ಮದುವೆ ಮನೆಗೆ ಬಂದವನು ಸಿಕ್ಕಿಬಿದ್ದಿದ್ದಾನೆ.

    ಕೂಡಲೇ ಮಂಜುನಾಥ್ ಮೋಹನ್ ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈತ ಕಾರು ಚಾಲಕನ ಕೆಲಸ ಮಾಡುತ್ತಿರೋದಾಗಿ ತಿಳಿದುಬಂದಿದೆ. ಜೊತೆಗೆ ನಾನು ಫೇಸ್ಬುಕ್ ನಲ್ಲಿ ಮಹಿಳೆಯ ಫೋಟೋ ಪೋಸ್ಟ್ ಮಾಡಿದ್ದು ನಿಜ ಎಂಬುದಾಗಿ ಆರೋಪಿ ಮೋಹನ್ ಮಾಧ್ಯಮಗಳ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

    https://www.youtube.com/watch?v=sPePsZEFJ48