Tag: Tamil actor

  • ತಮಿಳಿನ ಜನಪ್ರಿಯ ಹಾಸ್ಯನಟ ಮಧನ್ ಬಾಬ್ ನಿಧನ

    ತಮಿಳಿನ ಜನಪ್ರಿಯ ಹಾಸ್ಯನಟ ಮಧನ್ ಬಾಬ್ ನಿಧನ

    ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮಧನ್ ಬಾಬ್ (71) (Madhan Bob) ಶನಿವಾರ ರಾತ್ರಿ ನಿಧನರಾಗಿದ್ದಾರೆ.

    ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ ನಟ ಶನಿವಾರ ಸಂಜೆ ಅಡ್ಯಾರ್‌ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1984ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಟ ಮಧನ್‌ ಬಾಬ್‌, ಕಮಲ್ ಹಾಸನ್, ರಜನಿಕಾಂತ್, ಅಜಿತ್ ಕುಮಾರ್‌, ಸೂರ್ಯ ಮತ್ತು ವಿಜಯ್ ಅವರಂತಹ ಸ್ಟಾರ್‌ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಹಾಸ್ಯ, ಖಳನಾಯಕ ಸೇರಿದಂತೆ ಪ್ರಮುಖ ಪಾತ್ರಗಳಲ್ಲಿ ನಟಿಸಿ ಜನರನ್ನ ರಂಜಿಸಿದ್ದರು. ಇದನ್ನೂ ಓದಿ: ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಅರೆಸ್ಟ್ – ಬೆಂಗ್ಳೂರು ಪೊಲೀಸರ ಕಾರ್ಯಕ್ಕೆ ನಟಿ ರಮ್ಯಾ ಮೆಚ್ಚುಗೆ

    ಚಲನಚಿತ್ರೋದ್ಯಮದಲ್ಲಿ ಅವರ ಸುದೀರ್ಘ ವೃತ್ತಿಜೀವನದಲ್ಲಿ, ಅವರು 150ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ತಮಿಳು ಮಾತ್ರವಲ್ಲದೆ ಮಲಯಾಳಂ, ಹಿಂದಿ ಮತ್ತು ತೆಲುಗು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ತಮಿಳಿನ ತೆನಾಲಿ ಚಿತ್ರದಲ್ಲಿ ಡೈಮಂಡ್ ಬಾಬು, ಫ್ರೆಂಡ್ಸ್ ಚಿತ್ರದಲ್ಲಿ ಮ್ಯಾನೇಜರ್ ಸುಂದರೇಶನ್‌ ಪಾತ್ರಗಳು ಪ್ರೇಕ್ಷಕರನ್ನ ನಕ್ಕು ನಲಿಸಿದ್ದವು. ಇದನ್ನೂ ಓದಿ: ಕೂಲಿ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ `ಎ’ ಸರ್ಟಿಫಿಕೇಟ್

    ಕಳೆದ ಕೆಲ ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಲ್ಲದ ಮಧನ್ ಬಾಬು ಅವರು 71ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ನಟನ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ಇದನ್ನೂ ಓದಿ: ಮಲಯಾಳಂ ನಟ ಕಲಾಭವನ್ ನವಾಸ್ ಹೋಟೆಲ್ ರೂಮ್‌ನಲ್ಲಿ ಶವವಾಗಿ ಪತ್ತೆ – ಹೃದಯಾಘಾತ ಶಂಕೆ

  • ಹೊಸ ಚಿತ್ರ ಘೋಷಿಸಿದ ರವಿ ಮೋಹನ್ – `ಬ್ರೋಕೋಡ್’ ಮೂಲಕ ನಿರ್ಮಾಣ ರಂಗಕ್ಕಿಳಿದ ತಮಿಳು ನಟ

    ಹೊಸ ಚಿತ್ರ ಘೋಷಿಸಿದ ರವಿ ಮೋಹನ್ – `ಬ್ರೋಕೋಡ್’ ಮೂಲಕ ನಿರ್ಮಾಣ ರಂಗಕ್ಕಿಳಿದ ತಮಿಳು ನಟ

    ಮಿಳು ಚಿತ್ರರಂಗದ ಪ್ರತಿಭಾನ್ವಿತ ನಟ ರವಿ ಮೋಹನ್ (Ravi Mohan) ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಬ್ರೋಕೋಡ್ (Bro Code) ಎಂಬ ಚಿತ್ರ ಅನೌನ್ಸ್ ಮಾಡಿರುವ ಅವರೀಗ, ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ.

    ಇತ್ತೀಚೆಗಷ್ಟೇ ತಮ್ಮದೇ ನಿರ್ಮಾಣ ಸಂಸ್ಥೆ ಬಗ್ಗೆ ಮಾಹಿತಿ ನೀಡಿದ್ದ ರವಿ ಮೋಹನ್, ಆ ಸಂಸ್ಥೆಯ ಚೊಚ್ಚಲ ಚಿತ್ರ ಯಾವುದು ಎಂಬ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ರವಿ ಮೋಹನ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬ್ರೋಕೋಡ್‌ಗೆ ಅವರೇ ನಾಯಕ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ನಾಳೆ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ

    ಡಿಕ್ಕಿಲೂನಾ ಮತ್ತು ವಡಕ್ಕುಪಟ್ಟಿ ರಾಮಸಾಮಿ ಚಿತ್ರದ ನಿರ್ದೇಶಕ ಕಾರ್ತಿಕ್ ಯೋಗಿ `ಬ್ರೋಕೋಡ್’ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ. ರವಿ ಮೋಹನ್ ಜೊತೆಗೆ ಎಸ್.ಜೆ ಸೂರ್ಯ ಹಾಗೂ ನಾಲ್ವರು ಪ್ರಮುಖ ನಟಿಯರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಆ ನಾಲ್ವರು ನಟಿಯರು ಯಾರೆಂದು ಚಿತ್ರತಂಡ ಇನ್ನೂ ರಿವೀಲ್ ಮಾಡಿಲ್ಲ. ಪೊರ್ ತೋಝಿಲ್ ಚಿತ್ರದ ಮೂಲಕ ಹೆಸರುವಾಸಿಯಾದ ಕಲೈಸೆಲ್ವನ್ ಶಿವಾಜಿ ಅವರ ಛಾಯಾಗ್ರಹಣ ಈ ಚಿತ್ರಕ್ಕೆ ಇರಲಿದೆ. ಇದನ್ನೂ ಓದಿ: ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ – ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ ಕೋರ್ಟ್‌

    ಅನಿಮಲ್ ಮತ್ತು ಅರ್ಜುನ್ ರೆಡ್ಡಿಯಂತಹ ಹಿಟ್ ಸಾಂಗ್‌ಗಳ ಸಂಗೀತ ನಿರ್ದೇಶಕ ಹರ್ಷವರ್ಧನ್ ಮ್ಯೂಸಿಕ್, ಪ್ರದೀಪ್ ಇ. ರಾಘವ್ ಸಂಕಲನ, ಎ. ರಾಜೇಶ್ ಕಲಾ ನಿರ್ದೇಶನದಲ್ಲಿ `ಬ್ರೋಕೋಡ್’ ಸಿನಿಮಾ ಮೂಡಿಬರಲಿದೆ. ಇದೊಂದು ಪಕ್ಕ ಫ್ಯಾಮಿಲಿ ಎಂಟರ್‌ಟೈನಿಂಗ್ ಜೊತೆಗೆ ಕಾಮಿಡಿ ಜಾನರ್ ಕಥೆಯನ್ನು ಒಳಗೊಂಡಿದೆ. ಇದನ್ನೂ ಓದಿ: ಸಿದ್ದು ಸಂಪುಟಕ್ಕೆ ನಡೆಯುತ್ತಾ ಮೇಜರ್‌ ಸರ್ಜರಿ? – 10 ಸಚಿವರಿಗೆ ಕೊಕ್‌ ಸಾಧ್ಯತೆ

    `ಬ್ರೋಕೋಡ್’ ಸಿನಿಮಾದ ಕುರಿತು ಮಾತನಾಡಿದ ನಿರ್ದೇಶಕ ಕಾರ್ತಿಕ್ ಯೋಗಿ, ನಾನು ರವಿ ಮೋಹನ್ ಅವರಿಗೆ ಕಥೆಯನ್ನು ಹೇಳಿದಾಗ, ಅವರು ಅದನ್ನು ಸಂಪೂರ್ಣವಾಗಿ ಆನಂದಿಸಿದರು. ಅಲ್ಲದೇ ತಕ್ಷಣವೇ ಅದನ್ನು ನಿರ್ಮಿಸಲು ಮುಂದೆ ಬಂದರು ಎಂದು ಹೇಳಿದ್ದಾರೆ. ಇದನ್ನೂ ಓದಿ: Nelamangala | 2 ಸ್ಕೂಲ್ ಬಸ್‌ಗಳ ನಡುವೆ ಅಪಘಾತ – ಮಕ್ಕಳಿಗೆ ಸಣ್ಣಪುಟ್ಟ ಗಾಯ

    ಈ ಸಿನಿಮಾದ ಚಿತ್ರೀಕರಣವು ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾಗಲಿದೆ. ಇನ್ನೂ, ರವಿ ಮೋಹನ್ ಅವರು ಸುಧಾ ಕೊಂಗರ ನಿರ್ದೇಶನದ ಪರಾಶಕ್ತಿ ಮತ್ತು ಗಣೇಶ್ ಕೆ.ಬಾಬು ನಿರ್ದೇಶನದ ಕರಾಟೆ ಬಾಬು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಇದೀಗ ಅವರು ಮತ್ತೊಂದು ಸಿನಿಮಾ ಘೋಷಣೆ ಮಾಡಿರುವುದು ಅವರ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ.

  • Transgender Beauty Contest | ವೇದಿಕೆಯಲ್ಲೇ ಪ್ರಜ್ಞೆ ತಪ್ಪಿದ ನಟ ವಿಶಾಲ್

    Transgender Beauty Contest | ವೇದಿಕೆಯಲ್ಲೇ ಪ್ರಜ್ಞೆ ತಪ್ಪಿದ ನಟ ವಿಶಾಲ್

    ಮಿಳುನಾಡಿನ (Tamil Nadu) ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್‌ಜೆಂಡರ್ ಬ್ಯೂಟಿ ಕಂಟೆಸ್ಟ್‌ಗೆ (Transgender Beauty Contest) ಅತಿಥಿಯಾಗಿ ತೆರಳಿದ್ದ ತಮಿಳು ನಟ ವಿಶಾಲ್ (Actor Vishal) ವೇದಿಕೆಯ ಮೇಲೆ ಕುಸಿದು ಬಿದ್ದು ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ.

    ಕಾರ್ಯಕ್ರಮದ ವೇಳೆ ವಿಶಾಲ್ ಹಠಾತ್ತನೆ ಪ್ರಜ್ಞೆ ತಪ್ಪಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಮಾಜಿ ಸಚಿವ ಕೆ. ಪೊನ್ಮುಡಿ ಹಾಗೂ ಕಾರ್ಯಕ್ರಮ ಆಯೋಜಕರು, ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಯಾವುದೇ ಅಧಿಕೃತ ವೈದ್ಯಕೀಯ ಹೇಳಿಕೆ ಬಿಡುಗಡೆಯಾಗಿಲ್ಲ. ಇದನ್ನೂ ಓದಿ: ಕಯಾದು ಸೌಂದರ್ಯಕ್ಕೆ ಕ್ಯೂ ನಿಂತ ಅರ್ಧ ಡಜನ್ ಸಿನಿಮಾ!

    ಇತ್ತೀಚೆಗೆ ಅವರ ಅನಾರೋಗ್ಯದ ಬಗ್ಗೆ ಹಲವಾರು ವರದಿಗಳು ಬಂದಿವೆ. ಇದರ ಬೆನ್ನಲ್ಲೇ ಅಭಿಮಾನಿಗಳು ಆರೋಗ್ಯಕ್ಕೆ ಆದ್ಯತೆ ನೀಡಬೇಕೆಂದು ಅವರನ್ನು ಒತ್ತಾಯಿಸುತ್ತಿದ್ದಾರೆ. ಇದೀಗ ಈ ಘಟನೆಯು ವಿಶಾಲ್ ಮತ್ತು ಅವರ ಅಭಿಮಾನಿಗಳಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದ್ದು, ಅವರ ಆರೋಗ್ಯಕ್ಕಾಗಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

    ವಿಶಾಲ್ ಅವರ ಮ್ಯಾನೇಜರ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಊಟ ಮಾಡದ ಕಾರಣ ಅವರ ಆರೋಗ್ಯದಲ್ಲಿ ಏರುಪೇರಾಗಿರಬಹುದು ಎಂದಿದ್ದಾರೆ. ಇನ್ನೂ ಈ ವರ್ಷ ಜನವರಿಯಲ್ಲಿ ಡೆಂಗ್ಯೂನಿಂದ ಬಳಲಿ ಅವರು ಚೇತರಿಸಿಕೊಂಡಿದ್ದರು. ಈ ವೇಳೆ ಅವರ ಆರೋಗ್ಯಕ್ಕಾಗಿ ಅಭಿಮಾನಿಗಳು ನಿರಂತರವಾಗಿ ಪ್ರಾರ್ಥಿಸಿದ್ದರು.

    ಜನವರಿಯಲ್ಲಿ ‘ಮದಗಜರಾಜ’ (Madha Gaja Raja) ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾಗ, ಅವರ ಮಾತು ತೊದಲುತ್ತಿತ್ತು. ಅಲ್ಲದೇ ಕೈ ಸಹ ನಡುಗುತ್ತಿತ್ತು. ಅವರ ಈ ಸ್ಥಿತಿ ಕಂಡು ಫ್ಯಾನ್ಸ್ ಆಘಾತಗೊಂಡಿದ್ದರು. ಇದನ್ನೂ ಓದಿ: ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್‌ ಪೂಜಾರಿ ನಿಧನ

  • 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ನಟ ಡೆಲ್ಲಿ ಗಣೇಶ್ ನಿಧನ

    400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ನಟ ಡೆಲ್ಲಿ ಗಣೇಶ್ ನಿಧನ

    ಚಿತ್ರರಂಗಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಕಿದೆ. ಕಾಲಿವುಡ್‌ನ (Kollywood) ಖ್ಯಾತ ನಟ ಡೆಲ್ಲಿ ಗಣೇಶ್ (Delhi Ganesh) ನಿಧನರಾಗಿದ್ದಾರೆ. ದೀರ್ಘಕಾಲದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ನಿನ್ನೆ (ನ.9) ತಮ್ಮ 80ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

    ತಮಿಳು‌ ನಟ ಗಣೇಶ್ ಅವರ ಸಾವನ್ನು ಪುತ್ರ ಮಹದೇವನ್ ಅಧಿಕೃತವಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ನಮ್ಮ ತಂದೆ ದೆಹಲಿ ಗಣೇಶ್ ನವೆಂಬರ್ 9 ರಂದು ರಾತ್ರಿ 11 ಗಂಟೆಗೆ ನಿಧನರಾದರು ಎಂದು ತಿಳಿಸಿದ್ದಾರೆ. ದೆಹಲಿ ಗಣೇಶ್ ಸುಮಾರು 400ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಕಮಲ್ ಹಾಸನ್ ಅವರ ಇಂಡಿಯನ್ 2 ದೆಹಲಿ ಗಣೇಶ್ ಅವರ ಕೊನೆಯ ಚಿತ್ರವಾಗಿತ್ತು. ಇದನ್ನೂ ಓದಿ: ಸೈಕ್ಯಾಡೆಲಿಕ್ ಥ್ರಿಲ್ಲರ್ `ಅಂಶು’ಗೀಗ ಸೆನ್ಸಾರ್ ಸರ್ಟಿಫಿಕೆಟ್ ಸಿಕ್ಕ ಖುಷಿ!

    1976 ರಲ್ಲಿ ಬಾಲಚಂದರ್ ಅವರ ‘ಪತ್ತಿನ ಪ್ರವೇಶಂ’ ಚಿತ್ರದ ಮೂಲಕ ವೃತ್ತಿಜೀವನ ಪ್ರಾರಂಭಿಸಿದರು. ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ಗಣೇಶ್ ಕೆಲಸ ಮಾಡಿದ್ದರು.

  • `ಮನೆ ಒಳಗೆ ಬಿಟ್ಟುಕೊಳ್ತಿಲ್ಲ ಪತ್ನಿ’..ಪೊಲೀಸರ ಮೊರೆ ಹೋದ ಜಯಂ ರವಿ

    `ಮನೆ ಒಳಗೆ ಬಿಟ್ಟುಕೊಳ್ತಿಲ್ಲ ಪತ್ನಿ’..ಪೊಲೀಸರ ಮೊರೆ ಹೋದ ಜಯಂ ರವಿ

    ತಮಿಳು ನಟ ಜಯಂ ರವಿ (Jayam Ravi) ಪತ್ನಿ ಆರತಿ ಜೊತೆಗಿನ ವಿವಾಹ ವಿಚ್ಛೇದನ (Divorce) ಘೋಷಣೆ ಬೆನ್ನಲ್ಲೇ ಸಂಸಾರ ಗಲಾಟೆ ಬೀದಿಗೆ ಬಂದಿದೆ. ಪತ್ನಿ ಆರತಿ ಜೊತೆ 15 ವರ್ಷಗಳ ದಾಂಪತ್ಯ ಜೀವನ ಅಂತ್ಯಗೊಳಿಸಿದ್ದಾಗಿ ಜಯಂ ರವಿ ಘೋಷಿಸಿದ್ದರು. ಬಳಿಕ ಆರತಿ ಕೂಡ ಸೋಶಿಯಲ್ ಮೀಡಿಯಾದಲ್ಲೇ ಪೋಸ್ಟ್ ಮಾಡಿ ಜಯಂ ರವಿ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾಗಿ ಹೇಳಿ ಪತಿಯ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಜಯಂ ರವಿ ತಮ್ಮ ಪತ್ನಿ ವಿರುದ್ಧವೇ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

    ಚೆನೈನಲ್ಲಿ (Chennai) ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಿದ್ದ ಜಯಂರವಿ ಸಂಸಾರ ತಾಪತ್ರಯ ಈಗ ಮುರಾಬಟ್ಟೆಯಾಗಿದೆ. ಕಾರಣ ಪತಿ ವಿಚ್ಛೇದನ ಘೋಷಿಸಿದ ಬಳಿಕ ಪತ್ನಿ ಆರತಿ ಪತಿಯನ್ನ ಮನೆಯೊಳಗೆ ಬಿಟ್ಟುಕೊಳ್ಳುತ್ತಿಲ್ಲವಂತೆ, ಕಾರು, ಬೈಕ್ ಹಾಗೂ ಬಟ್ಟೆಗಳು ಜೊತೆಗೆ ಕೆಲವು ಬೆಲೆ ಬಾಳುವ ವಸ್ತುಗಳು ಮನೆಯಲ್ಲೇ ಇರುವ ಕಾರಣ ಮನೆಯೊಳಗೆ ಬರಲು ಜಯಂ ರವಿ ಯತ್ನಿಸಿದ್ದಾರೆ. ಆದರೆ ಪತಿ ನಿರ್ಧಾರದಿಂದ ಅಸಮಾಧಾನಗೊಂಡಿದ್ದ ಆರತಿ ಪತಿಗೆ ಮನೆಗೆ ಬರಲು ಅನುಮತಿ ನೀಡಲಿಲ್ಲ. ಈ ಕಾರಣಕ್ಕೆ ಜಯಂ ರವಿ ನಿವಾಸವಿರುವ ಜಾಗದ ವ್ಯಾಪ್ತಿಗೆ ಬರುವ ಹತ್ತಿರದ ಪೊಲೀಸ್ ಠಾಣೆಯಲ್ಲಿ ಪತ್ನಿ ವಿರುದ್ಧ ದೂರು ದಾಖಲಿಸಿ ಮನೆಯೊಳಗೆ ಪ್ರವೇಶ ಪಡೆಯಲು ಅನುಮತಿ ಕೋರಿದ್ದಾರೆ. ನಾಲ್ಕು ಗೋಡೆ ಮಧ್ಯೆ ಇದ್ದ ಜಗಳ ಈಗ ಜಗಜ್ಜಾಹೀರಾಗಿದೆ.ಇದನ್ನೂ ಓದಿ: ರಂಗೀಲಾ ಬೆಡಗಿ ಊರ್ಮಿಳಾ ವಿಚ್ಛೇದನ !

    ಓರ್ವ ಸಿಂಗರ್ ಜೊತೆ ಜಯಂ ರವಿ ಹೆಸರು ಥಳುಕು ಹಾಕಿಕೊಂಡಿತ್ತು. ಆಕೆಯೊಂದಿಗೆ ಜಯಂ ರವಿ ಗೋವಾದಲ್ಲಿ ಇದ್ದರಂತೆ. ಈ ವಿಚಾರ ತಿಳಿದು ಪತ್ನಿ ಆರತಿ ಗೋವಾಕ್ಕೆ ತೆರಳಿ ರೆಸಾರ್ಟ್ನಲ್ಲಿ ರಾದ್ಧಾಂತ ಮಾಡಿದ್ದರಂತೆ, ಬಳಿಕ ಪತ್ನಿ ಸುಮ್ಮನಿದ್ದರೆ ಜಯಂ ರವಿ ಅಲ್ಲಿಂದಲೇ ವಿಚ್ಛೇದನ ಘೋಷಿಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಕೋಪಗೊಂಡ ಆರತಿ ಪತ್ನಿಯನ್ನ ಮನೆಗೆ ಬಿಟ್ಟುಕೊಳ್ತಿಲ್ಲ. ಹೀಗಾಗಿ ತಮ್ಮ ವಸ್ತುಗಳನ್ನ ಕೊಡಿಸುವಂತೆ ಜಯಂ ರವಿ ಈಗ ಕೋರ್ಟ್ ಮೊರೆಹೋಗಬೇಕಾದ ಸ್ಥಿತಿ ಎದುರಾಗಿದೆ. ಇನ್ನು ಇವರಿಬ್ಬರ ವಿಚ್ಚೇದನ ಗಲಾಟೆ ಅದೆಷ್ಟು ವರ್ಷಗಳು ಮುಂದುವರೆಯುತ್ತದೆಯೋ!

  • ಕಿರಾತಕ ಸಿನಿಮಾದಲ್ಲಿ ಖಳನಟನಾಗಿ ನಟಿಸಿದ್ದ ಡೇನಿಯಲ್‌ ಬಾಲಾಜಿ ಹೃದಯಾಘಾತದಿಂದ ನಿಧನ

    ಕಿರಾತಕ ಸಿನಿಮಾದಲ್ಲಿ ಖಳನಟನಾಗಿ ನಟಿಸಿದ್ದ ಡೇನಿಯಲ್‌ ಬಾಲಾಜಿ ಹೃದಯಾಘಾತದಿಂದ ನಿಧನ

    ಚೆನ್ನೈ: ಕನ್ನಡದ ಕಿರಾತಕ ಸಿನಿಮಾದಲ್ಲಿ ಖಳ ನಟನಾಗಿ ಅಭಿನಯಿಸಿದ್ದ ನಟ ಡೇನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಪ್ರಮುಖವಾಗಿ ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿದ್ದ ನಟ ಡೇನಿಯಲ್ ಬಾಲಾಜಿ ನಿನ್ನೆ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎದೆನೋವಿನಿಂದ ಬಳಲುತ್ತಿದ್ದ ನಟನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ವರದಿಯಾಗಿದೆ.

    48 ವರ್ಷದ ನಟನ ಹಠಾತ್ ಸಾವು ತಮಿಳು ಚಿತ್ರರಂಗ ಮತ್ತು ಅವರ ಅಭಿಮಾನಿಗಳನ್ನು ದಿಗ್ಭ್ರಮೆಗೊಳಿಸಿದೆ. ಬಾಲಾಜಿ ಅವರ ನಿಧನಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸಲಾಗುತ್ತಿದೆ.

    ಡೇನಿಯಲ್ ಬಾಲಾಜಿ ಅವರು ಕಮಲ್ ಹಾಸನ್ ಅವರ ಅಪೂರ್ಣ ‘ಮರುದುನಾಯಗಂ’ನಲ್ಲಿ ಯುನಿಟ್ ಪ್ರೊಡಕ್ಷನ್ ಮ್ಯಾನೇಜರ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಂತರ ಅವರು ರಾಧಿಕಾ ಶರತ್‌ಕುಮಾರ್ ಅವರ ‘ಚಿತ್ತಿ’ ಯೊಂದಿಗೆ ದೂರದರ್ಶನಕ್ಕೆ ತೆರಳಿದರು. ಅಲ್ಲಿನ ಪಾತ್ರದ ಮೂಲಕ ಡೇನಿಯಲ್ ಎಂದು ಜನಪ್ರಿಯತೆ ಗಳಿಸಿದರು.

    ‘ಕಾಕ್ಕ ಕಾಕ್ಕ’ ಮತ್ತು ‘ವೆಟ್ಟಾಯಡು ವಿಲಾಯಡು’ ಚಿತ್ರಗಳಲ್ಲಿನ ಮರೆಯಲಾಗದ ನಟನೆಯು ಸಿನಿ ಜಗತ್ತಿನಲ್ಲಿ ಅವರ ಜನಪ್ರಿಯತೆಗೆ ಕಾರಣವಾಯಿತು. ನಟ ಡೇನಿಯಲ್‌ ಬಾಲಾಜಿ ಅವರು ಮಲಯಾಳಂ, ತೆಲುಗು ಮತ್ತು ಕನ್ನಡ ಚಲನಚಿತ್ರಗಳಲ್ಲೂ ನಟಿಸಿದ್ದಾರೆ. ಅವರು ಅಭಿನಯಿಸಿದ ಕೊನೆಯ ಚಿತ್ರ ‘ಅರಿಯವನ್’.

  • Citizenship Law: ಸಿಎಎ ಜಾರಿಗೆ ದಳಪತಿ ವಿಜಯ್‌ ವಿರೋಧ

    ಚೆನ್ನೈ: ಇತ್ತೀಚೆಗಷ್ಟೇ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ಥಾಪಿಸಿ ರಾಜಕೀಯ ಪ್ರವೇಶಿಸಿರುವ ನಟ ವಿಜಯ್‌ ದಳಪತಿ (Vijay Thalapathy) ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ವಿರೋಧ ವ್ತಕ್ಯಪಡಿಸಿದ್ದಾರೆ.

    ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ (Narendra Modi) ನೇತೃತ್ವದ ಸರ್ಕಾರ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿ ಸೋಮವಾರವಷ್ಟೇ (ಮಾ.11) ಅಧಿಸೂಚನೆ ಹೊರಡಿಸಿತ್ತು. ಸಿಎಎ ಕಾಯ್ದೆಗೆ ಕೆಲವರು ಮೆಚ್ಚುಗೆ ಸೂಚಿಸಿದ್ರೆ, ಇನ್ನೂ ಕೆಲವರು ವಿರೋಧಿಸಿ ಸೋಶಿಯಲ್‌ ಮೀಡಿಯಾಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಬೆನ್ನಲ್ಲೇ ದಳಪತಿ ವಿಜಯ್‌ ಸಹ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಭಾರತದ ಪ್ರತಿಯೊಬ್ಬ ಮುಸ್ಲಿಮರೂ ಸಿಎಎಯನ್ನು ಸ್ವಾಗತಿಸಬೇಕು: ಮುಸ್ಲಿಂ ಜಮಾತ್‌ ಅಧ್ಯಕ್ಷ ಕರೆ

    ದಳಪತಿ ಹೇಳಿದ್ದೇನು?
    ಸಿಎಎ ಜಾರಿಗೆ ವಿರೋಧಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಜಯ್‌, ಸಿಎಎ ಜಾರಿಗೆ ಜಾರಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ದೇಶದ ಎಲ್ಲಾ ನಾಗರಿಕರು ಸಾಮಾಜಿಕ ಸಾಮರಸ್ಯದಿಂದ ಬದುಕುವ ವಾತಾವರಣದಲ್ಲಿ ಭಾರತೀಯ ಪೌರತ್ವ ತಿದ್ದುಪಡಿ ಕಾಯಿದೆ-2019 (ಸಿಎಎ) ನಂತಹ ಯಾವುದೇ ಕಾನೂನನ್ನು ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ ಎಂದಿದ್ದಾರೆ. ಅಲ್ಲದೇ ತಮಿಳುನಾಡಿನಲ್ಲಿ ಈ ಕಾಯ್ದೆ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ (Tamil Nadu government) ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಿಷನ್‌ ದಿವ್ಯಾಸ್ತ್ರ ಪ್ರಯೋಗ ಯಶಸ್ವಿ – ಏನಿದು MIRV ತಂತ್ರಜ್ಞಾನ? ಯುದ್ಧದ ವೇಳೆ ಹೇಗೆ ಸಹಾಯವಾಗುತ್ತೆ? ಯಾರ ಬಳಿಯಿದೆ?

    ಸಿಎಎಯಲ್ಲಿ ಏನಿದೆ?
    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂಬುದನ್ನು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

  • ತಮಿಳು ಜನಪ್ರಿಯ ಹಾಸ್ಯನಟ ಬೋಂಡಾ ಮಣಿ ನಿಧನ

    ತಮಿಳು ಜನಪ್ರಿಯ ಹಾಸ್ಯನಟ ಬೋಂಡಾ ಮಣಿ ನಿಧನ

    ಮಿಳಿನ ಜನಪ್ರಿಯ ಹಾಸ್ಯನಟ (Tamil Actor) ಬೋಂಡಾ ಮಣಿ (Bonda Mani) ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಡಿ.23ರಂದು ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರ ಹಠಾತ್ ನಿಧನ ಕುಟುಂಬಕ್ಕೆ ಮತ್ತು ಫ್ಯಾನ್ಸ್‌ಗೆ ಶಾಕ್ ಕೊಟ್ಟಿದೆ. ಇದನ್ನೂ ಓದಿ:ಡಬಲ್‌ ಎಲಿಮಿನೇಷನ್‌ ಶಾಕ್‌ ನಡುವೆ ಬಿಗ್‌ ಬಾಸ್‌ಗೆ ಶೈನ್‌ ಶೆಟ್ಟಿ, ಶುಭಾ ಎಂಟ್ರಿ

    ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ 60 ವರ್ಷದ ನಟ ಬೋಂಡಾ ಮಣಿ ಅವರು ಪೊಜಿಚಲೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮೂರ್ಛೆ ತಪ್ಪಿದ್ದರು. ಕೂಡಲೇ ಆಸ್ಪತ್ರೆಗೆ ಸೇರಿಸುವ ಮುನ್ನವೇ ಬೋಂಡಾ ಮಣಿ ವಿಧಿವಶರಾಗಿದ್ದರು.

    ಬೋಂಡಾ ಮಣಿ ಅವರ ಪಾರ್ಥಿವ ಶರೀರವನ್ನು ಪೊಜಿಚಲೂರಿಯ ಅವರ ನಿವಾಸದಲ್ಲಿ ಇರಿಸಲಾಗಿದೆ. ಇಂದು (ಡಿ.24) ಸಂಜೆ 5ರ ಸುಮಾರಿಗೆ ಕ್ರೋಂಪೇಟೆಯಲ್ಲಿರುವ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿವೆ ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ.

    ನಟ ಧನುಷ್ (Dhanush) ಮತ್ತು ವಿಜಯ್ ಸೇತುಪತಿ (Vijay Sethupathi) ಅವರು ಬೋಂಡಾ ಮಣಿ ಅವರ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕವಾಗಿ ಸಹಾಯ ಮಾಡಿದ್ದರು. ಬೋಂಡಾ ಮಣಿ ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟರಾಗಿದ್ದು, 270ಕ್ಕೂ ಚಿತ್ರಗಳಲ್ಲಿ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಇದೀಗ ತಮಿಳು ಬೋಂಡಾ ಮಣಿ ಅವರ ನಿಧನಕ್ಕೆ ಫ್ಯಾನ್ಸ್ ಸೇರಿದಂತೆ ಸಿನಿಮಾ ತಾರೆಯರು ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

  • ಬ್ಯಾನರ್‌ ಕಟ್ಟುತ್ತಿದ್ದಾಗ ವಿದ್ಯುತ್‌ ಶಾಕ್‌ – ನಟ ಸೂರ್ಯನ ಅಭಿಮಾನಿಗಳು ಸಾವು!

    ಬ್ಯಾನರ್‌ ಕಟ್ಟುತ್ತಿದ್ದಾಗ ವಿದ್ಯುತ್‌ ಶಾಕ್‌ – ನಟ ಸೂರ್ಯನ ಅಭಿಮಾನಿಗಳು ಸಾವು!

    ಅಮರಾವತಿ: ತಮಿಳು ಚಿತ್ರರಂಗದ ನಟ ಸೂರ್ಯ (Actor Surya) ಅವರ ಹುಟ್ಟುಹಬ್ಬದ ಬ್ಯಾನರ್‌ ಕಟ್ಟುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ಇಬ್ಬರು ಅಭಿಮಾನಿಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ (Andhra Pradesh) ನಡೆದಿದೆ.

    ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮೋಪುಲವಾರಿಪಾಲೆಂ ಗ್ರಾಮದಲ್ಲಿ ನರಸರಾವ್‌ ಪೇಟೆ ಮಂಡಲದ ನಕ್ಕಾ ವೆಂಕಟೇಶ್‌ ಮತ್ತು ಪೋಲೂರಿ ಸಾಯಿ ಹೆಸರಿನ ಅಭಿಮಾನಿಗಳಿಬ್ಬರು ಸಾವನ್ನಪ್ಪಿರುವುದಾಗಿ ಪೊಲೀಸರು (Andhra Police) ತಿಳಿಸಿದ್ದಾರೆ. ಇದನ್ನೂ ಓದಿ: ವಿದೇಶಿ ಪ್ರಜೆಯಿಂದ 5,000 ರೂ. ಪಡೆದು ರಶೀದಿ ಕೊಡದೇ ಯಾಮಾರಿಸಿದ್ದ ಟ್ರಾಫಿಕ್‌ ಪೊಲೀಸ್‌ ಅಮಾನತು

    ಪೊಲೀಸರ ಪ್ರಕಾರ, ಬ್ಯಾನರ್‌ ಕಟ್ಟುತ್ತಿದ್ದ ಇಬ್ಬರೂ ನಟ ಸೂರ್ಯ ಅವರ ಅಭಿಮಾನಿಗಳು. ಅವರ ಹುಟ್ಟುಹಬ್ಬಕ್ಕೆ ಬ್ಯಾನರ್‌ ಕಟ್ಟುತ್ತಿದ್ದರು. ಈ ವೇಳೆ ಫ್ಲೆಕ್ಸ್‌ನ ಕಬ್ಬಿಣದ ರಾಡ್‌ ಓವರ್ಹೆಡ್‌ ವಿದ್ಯುತ್‌ ತಂತಿಗೆ ತಗುಲಿ ದುರಂತ ಸಂಭವಿಸಿದೆ. ಇಬ್ಬರು ಯುವಕರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರೂ ನರಸರಾವ್‌ಪೇಟೆಯ ಖಾಸಗಿ ಪದವಿ ಕಾಲೇಜಿನಲ್ಲಿ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತದೇಹಗಳನ್ನ ನರಸರಾವ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುದ್ದಿನ ನಾಯಿ ನಾಪತ್ತೆ – ಭದ್ರತಾ ಸಿಬ್ಬಂದಿ ಅಮಾನತು ಮಾಡುವಂತೆ ಪೊಲೀಸ್ ಅಧಿಕಾರಿಗೆ ಪತ್ರ ಬರೆದ ನ್ಯಾಯಾಧೀಶ

    ಈ ನಡುವೆ ಮೃತ ಪೋಲೂರಿ ಸಾಯಿ ಅವರ ಸಹೋದರಿ ಅನನ್ಯಾ ತನ್ನ ಅಣ್ಣನ ಸಾವಿಗೆ ತಾನೇ ಕಾರಣ ಎಂಬುದಾಗಿ ಮರುಕ ವ್ಯಕ್ತಪಡಿಸಿದ್ದಾಳೆ. ಕಾಲೇಜಿಗೆ ಸಾಕಷ್ಟು ಶುಲ್ಕ ಕಟ್ಟುತ್ತಿದ್ದೇವೆ. ಕಾಲೇಜಿಗೆ ಸೇರುವ ಮುನ್ನವೇ ವಿದ್ಯಾರ್ಥಿಗಳಿಗೆ ಭದ್ರತೆ, ನಿಗಾ ಇಡುವುದಾಗಿ ಭರವಸೆ ನೀಡಿದ್ದರು. ಆದ್ರೆ ಕಾಲೇಜು ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳ ರಕ್ಷಣೆ, ನಿಗಾ ಇಡುತ್ತಿಲ್ಲ. ನಾವು ದಿನಗೂಲಿ ನೌಕರರು, ಕಾಲೇಜು ಶುಲ್ಕ ಕಟ್ಟಲು ಅಣ್ಣ ಪಾರ್ಟ್‌ ಟೈಂ ಕೆಲಸ ಮಾಡುತ್ತಿದ್ದ. ನನಗಾಗಿ ಶುಲ್ಕ ಕಟ್ಟಲು ಕೆಲಸ ಮಾಡುತ್ತಿದ್ದ ವೇಳೆ ನನ್ನ ಅಣ್ಣ ಸಾವನ್ನಪ್ಪಿದ್ದಾನೆ ಎಂಬುದಾಗಿ ಹೇಳಿಕೊಂಡಿದ್ದಾಳೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಖ್ಯಾತ ತಮಿಳು ಹಾಸ್ಯ ನಟ ಮಯಿಲ್‌ಸಾಮಿ ಹಠಾತ್ ನಿಧನ

    ಖ್ಯಾತ ತಮಿಳು ಹಾಸ್ಯ ನಟ ಮಯಿಲ್‌ಸಾಮಿ ಹಠಾತ್ ನಿಧನ

    ಚೆನ್ನೈ: ತಮಿಳಿನ (Tamil) ಖ್ಯಾತ ಹಾಸ್ಯ ನಟ (Comedian) ಆರ್ ಮಯಿಲ್‌ಸಾಮಿ (Mayilsamy) (57) ಅವರು ಭಾನುವಾರ ಮುಂಜಾನೆ ಹಠಾತ್ತನೆ ನಿಧನ ಹೊಂದಿದ್ದಾರೆ.

    ವರದಿಗಳ ಪ್ರಕಾರ ಮಯಿಲ್‌ಸಾಮಿ ಅವರಿಗೆ ಶನಿವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಅವರನ್ನು ಕುಟುಂಬಸ್ಥರು ಪೋರೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದು, ಬಳಿಕ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಇದನ್ನೂ ಓದಿ: ನಟ ನಂದಮೂರಿ ತಾರಕ ರತ್ನ ಇನ್ನಿಲ್ಲ

    ಮಯಿಲ್‌ಸಾಮಿ ಅವರು ಹಲವಾರು ತಮಿಳು ಚಲನಚಿತ್ರಗಳಲ್ಲಿ ಹಾಸ್ಯ ಮತ್ತು ಅನೇಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರು ಸ್ಟ್ಯಾಂಡ್ ಅಪ್ ಹಾಸ್ಯನಟ, ನಿರೂಪಕ, ರಂಗಭೂಮಿ ಕಲಾವಿದರಾಗಿಯೂ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

    ಹಾಸ್ಯ ಕಾರ್ಯಕ್ರಮವೊಂದರ ನಿರೂಪಕ ಹಾಗೂ ತೀರ್ಪುಗಾರರಾಗಿ ಮೊದಲ ಬಾರಿಗೆ ಅವರು ದೂರದರ್ಶನಗಳಲ್ಲಿ ಕಾಣಿಸಿಕೊಂಡಿದ್ದರು. ಬಳಿಕ 1984ಲ್ಲಿ ಬಿಡುಗಡೆಯಾದ ನಿರ್ಮಾಪಕ ಹಾಗೂ ನಟ ಕೆ ಭಾಗ್ಯರಾಜ್ ಅವರ ಚಿತ್ರ ಧವನಿ ಕನವುಗಲ್ ಮೂಲಕ ಹಾಸ್ಯ ನಟರಾಗಿ ತಮಿಳು ಚಲನಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಇದನ್ನೂ ಓದಿ: ಅಂಗಾಂಗ ದಾನ ಮಾಡಿದ ಅಭಿಮಾನಿ ಕುಟುಂಬಕ್ಕೆ ಧ್ರುವ ಸರ್ಜಾ ನೆರವು

    ಇದೀಗ ಮಯಿಲ್‌ಸಾಮಿ ಹಠಾತ್ ನಿಧನಕ್ಕೆ ತಮಿಳು ಚಿತ್ರರಂಗ ಸೇರಿದಂತೆ ಅನೇಕರು ಆಘಾತ ವ್ಯಕ್ತಪಡಿಸಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k