Tag: Tamil Nadu Water

  • ಕಾವೇರಿ ಸಮಸ್ಯೆ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ದೇವೇಗೌಡರಿಂದ ಪತ್ರ; ಸಿದ್ದರಾಮಯ್ಯ ಶ್ಲಾಘನೆ

    ಕಾವೇರಿ ಸಮಸ್ಯೆ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ದೇವೇಗೌಡರಿಂದ ಪತ್ರ; ಸಿದ್ದರಾಮಯ್ಯ ಶ್ಲಾಘನೆ

    ಬೆಂಗಳೂರು: ಕೃಷ್ಣರಾಜಸಾಗರ ಜಲಾಶಯದಿಂದ (KRS Reservoir) ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು (HD Devegowda) ಪತ್ರ ಬರೆದಿದ್ದಾರೆ. ದೊಡ್ಡಗೌಡರ ಈ ನಡೆಯನ್ನು ಸಿಎಂ ಸಿದ್ದರಾಮಯ್ಯ (Siddaramaiah) ಶ್ಲಾಘಿಸಿದ್ದಾರೆ.

    ಕಾವೇರಿ ನೀರು (Cauvery Water) ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಟ್ವಿಟ್ಟರ್‌ (X) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಶಾಸಕ ನಾರಾಯಣಸ್ವಾಮಿ, ಸಂಸದ ಮುನಿಸ್ವಾಮಿ ನಡುವೆ ಜಟಾಪಟಿ- ಅಧಿಕಾರಿಗಳು, ಸಾರ್ವಜನಿಕರಿಗೆ ಪುಕ್ಕಟೆ ಮನರಂಜನೆ

    ಸಿಎಂ ಟ್ವೀಟ್‌ನಲ್ಲಿ ಏನಿದೆ?
    ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ (Narendra Modi) ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ.

    ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನಿಗಳು ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ. ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ.

    ಮಳೆ ಕೊರತೆಯಿಂದಾಗಿ ಉದ್ಭವವಾಗಿರುವ ಕಾವೇರಿ ನೀರು ಹಂಚಿಕೆ ವಿವಾದವನ್ನು ರಾಜ್ಯದ ರೈತರ ಹಿತರಕ್ಷಣೆಗೆ ಅಡ್ಡಿಯಾಗದಂತೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ವಿವಾದ ಈಗ ನ್ಯಾಯಾಂಗ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಂಗಳದಲ್ಲಿರುವುದರಿಂದ ಸಂವಿಧಾನಕ್ಕೆ ಬದ್ಧವಾಗಿರುವ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ. ಇದನ್ನೂ ಓದಿ: ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಈದ್ ಮಿಲಾದ್‍ಗೆ ಕಡ್ಡಾಯ ರಜೆ ಬ್ಯಾನರ್: ವ್ಯಾಪಕ ಆಕ್ರೋಶ

    ನೆಲ-ಜಲ-ಭಾಷೆಯ ಹಿತರಕ್ಷಣೆಯ ವಿಷಯ ಬಂದಾಗ ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ನಾವೆಲ್ಲ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು. ಕಾವೇರಿ ನದಿ ನೀರಿನ ವಿವಾದ ಇದೇ ಮೊದಲ ಸಲ ಹುಟ್ಟಿಕೊಂಡದ್ದಲ್ಲ. ದಶಕಗಳ ಕಾಲದಿಂದ ಇದು ನಡೆಯುತ್ತಿದೆ. ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವುದು ಕೂಡಾ ಸತ್ಯ ಮತ್ತು ಸ್ಪಷ್ಟವಾಗಿದೆ. ಈಗ ನನ್ನ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆಯಲ್ಲಿ ಯಾಕೆ ಇದೇ ಮಾತು ಹೇಳಿಲ್ಲ?

    ಹಿಂದೆಲ್ಲ ಕಾವೇರಿ ನದಿನೀರಿನ ವಿವಾದ ಹುಟ್ಟಿಕೊಂಡಾಗ ಎಲ್ಲ ರಾಜಕೀಯ ಪಕ್ಷಗಳು ತಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಪಕ್ಕಕ್ಕಿಟ್ಟು ಒಗ್ಗಟ್ಟಿನಿಂದ ನಡೆದುಕೊಂಡಿವೆ. ಈ ವರೆಗಿನ ಎಲ್ಲ ಪಕ್ಷಗಳ ಸರ್ಕಾರಗಳು ಅನಿವಾರ್ಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡಿರುವ ಇತಿಹಾಸ ಕೂಡಾ ನಮ್ಮ ಕಣ್ಣ ಮುಂದಿದೆ. ಈಗಿನ ವಿವಾದವನ್ನು ರಾಜ್ಯದ ಹಿತ ಮತ್ತು ನ್ಯಾಯಾಂಗದ ಗೌರವಕ್ಕೆ ಧಕ್ಕೆಯಾಗದಂತೆ ಸೂಕ್ಷ್ಮವಾಗಿ ನಿರ್ವಹಿಸಬೇಕಾಗಿದೆ. ರಾಜ್ಯ ಸರ್ಕಾರ ಆ ಪ್ರಯತ್ನದಲ್ಲಿದೆ. ನಾವು ಈಗಾಗಲೇ ಕಾನೂನು ಮತ್ತು ನೀರಾವರಿ ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಲಹೆ ಮೇರೆಗೆ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಬರೆದುಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುಡ್‌ನ್ಯೂಸ್‌ː ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಳ, ಒಂದೇ ವಾರದಲ್ಲಿ 3 ಅಡಿ ನೀರು ಸಂಗ್ರಹ

    ಗುಡ್‌ನ್ಯೂಸ್‌ː ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಳ, ಒಂದೇ ವಾರದಲ್ಲಿ 3 ಅಡಿ ನೀರು ಸಂಗ್ರಹ

    ಮೈಸೂರು: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕಬಿನಿ ಜಲಾಶಯಕ್ಕೆ (Kabini Reservoir) ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಂತಸ ತಂದಿದೆ.

    ಮೈಸೂರು (Mysuru) ಜಿಲ್ಲೆ ಹೆಚ್.ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯ ಒಂದೇ ವಾರದಲ್ಲಿ ಮೂರು ಅಡಿಯಷ್ಟು ನೀರು ಸಂಗ್ರಹವಾಗಿದೆ.

    ತಮಿಳುನಾಡಿಗೆ (TamilNadu) ನಿರಂತರವಾಗಿ ನೀರು ಹರಿಸುತ್ತಿದ್ದ ಹಿನ್ನೆಲೆಯಲ್ಲಿ ಜಲಾಶಯದ ಮಟ್ಟ ದಿನೇ ದಿನೇ ಕುಸಿಯುತ್ತಿತ್ತು. 2,284 ಅಡಿಯಷ್ಟಿದ್ದ ನೀರಿನ ಪ್ರಮಾಣ 2,273 ಅಡಿಗೆ ಕುಸಿತಕಂಡಿತ್ತು. ಆದ್ರೆ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದಾಗಿ ನೀರಿನ ಮಟ್ಟವೂ ಏರಿಕೆಯಾಗಿದೆ. ಸದ್ಯ ಡ್ಯಾಂನಲ್ಲಿ 2,276.26 ಅಡಿಯಷ್ಟು ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ 3ನೇ ದಿನಕ್ಕೆ ಕಾಲಿಟ್ಟ ಸೇನಾ ಕಾರ್ಯಾಚರಣೆ – ಉಗ್ರರ ಹುಟ್ಟಡಗಿಸಲು ವಿಳಂಬವಾಗ್ತಿರುವುದ್ಯಾಕೆ?

    ಜಲಾಶಯಕ್ಕೆ ನಿತ್ಯ 3,659 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, 1,100 ಕ್ಯೂಸೆಕ್ ಹೊರಹರಿವು ಇದೆ. ಇದನ್ನೂ ಓದಿ: ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ಧ ದ್ವೇಷ ಭಾಷಣ ಆಗಬಾರದು: ಮದ್ರಾಸ್ ಹೈಕೋರ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ನೀರು – KRS ಡ್ಯಾಂನಲ್ಲಿ 5 ದಿನಕ್ಕೆ 2 TMC ನೀರು ಖಾಲಿ

    ತಮಿಳುನಾಡಿಗೆ ನೀರು – KRS ಡ್ಯಾಂನಲ್ಲಿ 5 ದಿನಕ್ಕೆ 2 TMC ನೀರು ಖಾಲಿ

    ಮಂಡ್ಯ: ಭಾರೀ ವಿರೋಧದ ನಡುವೆಯೂ ತಮಿಳುನಾಡಿಗೆ (TamilNadu) ನಿರಂತರವಾಗಿ ನೀರು ಹರಿಸುತ್ತಿರುವ ಕಾರಣ ಕೆಆರ್‌ಎಸ್‌ನಲ್ಲಿ (KRS) ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 5 ದಿನಗಳಲ್ಲಿ 2 TMC ನೀರು ಖಾಲಿಯಾಗಿದ್ದು, ಜಲಾಶಯದಲ್ಲಿ ಸದ್ಯ 22 ಟಿಎಂಸಿಯಷ್ಟು ಮಾತ್ರ ನೀರು ಉಳಿದಿದೆ.

    ಬುಧವಾರ ಸುಪ್ರೀಂ ಕೋರ್ಟ್ (Supreme Court) ಕಾವೇರಿ ನೀರಿನ ಸಂಬಂಧ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಬಿಡುವುದನ್ನು ಮುಂದುವರಿಸಿದರೆ, ಡ್ಯಾಂನಲ್ಲಿ ಒಟ್ಟು 3 ಟಿಎಂಸಿ ನೀರು ಖಾಲಿಯಾಗಲಿದೆ. ಒಂದು ವೇಳೆ ಇನ್ನೂ 10 ದಿನ ನೀರು ಬಿಟ್ಟರೆ 6 ಟಿಎಂಸಿಯಷ್ಟು ನೀರು ಖಾಲಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಲ್ಲ, ಆಗಿರಲೂ ಇಲ್ಲ: RSS ವಿರುದ್ಧ ಎಸ್‌ಪಿ ನಾಯಕ ಕಿಡಿ

    ಇದರಿಂದ 22.70 ಟಿಎಂಸಿ ನಷ್ಟಿರುವ ನೀರಿನ ಪ್ರಮಾಣ 17 ಟಿಎಂಸಿಗೆ ಕುಸಿಯಲಿದೆ. ಇದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ ತೆಗೆದುಹಾಕಿದ್ರೆ 12 ಟಿಎಂಸಿಯಷ್ಟು ನೀರು ಮಾತ್ರ ಉಳಿಯಲಿದೆ. ಇದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ನೀರು ಸಿಗುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ. ಈಗಾಗಲೇ ಬೆಳೆದಿರುವ ಕಬ್ಬು ಬೆಳೆ ಬಣಗುತ್ತಿವೆ. ಇದೇ ಸ್ಥಿತಿ ಮುಂದುವರಿದರೆ ಉಳಿದ ಬೆಳೆಗಳಿಗೂ ಸಮಸ್ಯೆಯಾಗಲಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಗರ್ಭಿಣಿಗೆ ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪತಿ – ರಾಜಸ್ಥಾನದಲ್ಲಿ ಮಹಿಳೆಯರ ಸುರಕ್ಷತೆ ನಿರ್ಲಕ್ಷ್ಯ ಎಂದು ನಡ್ಡಾ ಟೀಕೆ

    ನಿನ್ನೆ ಕಾವೇರಿ ವಿಚಾರದಲ್ಲಿ ಜಲಸಂಪನ್ಮೂಲ ಸಚಿವರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ. ಮಾತಾಡೋ ಮುಂಚೆ ಅದರ ಫಲಾಫಲಗಳ ಬಗ್ಗೆ ಯೋಚನೆ ಮಾಡ್ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಅನ್ನದಾತರ ಹೋರಾಟ ಮುಂದುವರೆದಿರುವ ಹೊತ್ತಲ್ಲೇ ಜೆಡಿಎಸ್ ಕೂಡ ಬೀದಿಗಿಳಿದು ಹೋರಾಟ ಮುಂದುವರಿಸಿದೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಕೇಳಿದಷ್ಟು ನೀರು ಬಿಡೋಕೆ ನಮ್ಮ ಬಳಿ ನೀರಿಲ್ಲ. ಪ್ರಧಾನಿ ಭೇಟಿಗೆ ಸಮಯ ಕೇಳಲಾಗಿದೆ ಅಂತ ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಗಿನ ಅರ್ಪಣೆಗೂ ಮುನ್ನವೇ ಖಾಲಿಯಾಗ್ತಿದೆ ಕಬಿನಿಯ ಒಡಲು

    ಬಾಗಿನ ಅರ್ಪಣೆಗೂ ಮುನ್ನವೇ ಖಾಲಿಯಾಗ್ತಿದೆ ಕಬಿನಿಯ ಒಡಲು

    ಮೈಸೂರು: ಭರ್ತಿಯಾದ ಜಲಾಶಯ ಬಾಗಿನ ಅರ್ಪಿಸುವ ಮುನ್ನವೇ ಖಾಲಿಯಾಗುತ್ತಿದೆ. 15 ದಿನಗಳ ಹಿಂದೆಯಷ್ಟೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯ (Kabini Dam) ಭರ್ತಿಯಾಗಿತ್ತು. ಇದೀಗ ಜಲಾಶಯದಲ್ಲಿ 5.5 ಅಡಿಯಷ್ಟು ನೀರು ಖಾಲಿಯಾಗಿದೆ.

    ಕಳೆದ 15 ದಿನಗಳ ಹಿಂದೆಯಷ್ಟೆ ಜಲಾಶಯ ಭರ್ತಿಯಾಗಿತ್ತು. ಜಲಾಶಯ ಭರ್ತಿಯಾದಾಗ ರಾಜ್ಯ ಸಿಎಂ ಬಾಗಿನ ಅರ್ಪಿಸುವುದು ಸಂಪ್ರದಾಯ. ಆದ್ರೆ ಬಾಗಿನ ಸಮರ್ಪಣೆ ಆಗಿರಲಿಲ್ಲ, ಇದೀಗ ಜಲಾಶಯದಿಂದ ತಮಿಳುನಾಡಿಗೆ ನೀರು (TamilNadu Water) ಹರಿಸುತ್ತಿರುವುದರಿಂದ 5.5 ಅಡಿಯಷ್ಟು ನೀರು ಖಾಲಿಯಾಗಿದೆ. ಇದನ್ನೂ ಓದಿ: ನಮ್ಮ ಸಿದ್ಧಾಂತ ಒಪ್ಪಿ ಬರುವವರನ್ನ ನಾವು ಸ್ವಾಗತ ಮಾಡುತ್ತೇವೆ: ಜಿ.ಪರಮೇಶ್ವರ್‌

    2,284 ಅಡಿ ಗರಿಷ್ಠಮಟ್ಟ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 78.50 ಅಡಿಯಷ್ಟು ನೀರಿದೆ. ಜಲಾಶಯದಿಂದ ಪ್ರತಿ ದಿನ ನದಿಗೆ 5,000 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಇದನ್ನೂ ಓದಿ: ಮೊದಲ ಓವರ್‌ನಲ್ಲೇ 2 ವಿಕೆಟ್‌ ಉಡೀಸ್‌ – 11 ತಿಂಗಳ ಬಳಿಕ ಎಂಟ್ರಿ ಕೊಟ್ಟು ​ಭಾರತಕ್ಕೆ ಜಯ ತಂದ ಬುಮ್ರಾ

    ಕಳೆದ ವರ್ಷ ಉತ್ತಮ ಮಳೆಯಾಗಿದ್ದರಿಂದ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಜುಲೈ ತಿಂಗಳಲ್ಲೇ ಕೆಆರ್‌ಎಸ್ ಕಬಿನಿ ಜಲಾಶಯಕ್ಕೆ ಬಾಗೀನ ಅರ್ಪಿಸಿದ್ದರು. 8 ತಿಂಗಳ ಅವಧಿಯಲ್ಲೇ ಬಾಗೀನ ಅರ್ಪಣೆ ಮಾಡಿದ್ದರು. ಆದ್ರೆ ಈ ಬಾರಿ ಮುಂಗಾರು ತಡವಾಗಿ ಆರಂಭವಾದರೂ ಸಿಎಂ ಇನ್ನೂ ಬಾಗಿನ ಅರ್ಪಿಸಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]