Tag: tamil nadu

  • ಕನ್ನಡ ಕಲಿಯೋದಿಲ್ವಾ: ಅಮಿತ್ ಶಾಗೆ ಸಿಎಂ ಪ್ರಶ್ನೆ

    ಕನ್ನಡ ಕಲಿಯೋದಿಲ್ವಾ: ಅಮಿತ್ ಶಾಗೆ ಸಿಎಂ ಪ್ರಶ್ನೆ

    ಬೆಂಗಳೂರು: ತಮಿಳು, ಬಂಗಾಳಿ ಭಾಷೆಯನ್ನು ಕಲಿಯುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಿಎಂ ಸಿದ್ದರಾಮಯ್ಯ ಕನ್ನಡವನ್ನು ಕಲಿಯುದಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

    ಈ ಸಂಬಂಧ ಸಿದ್ದರಾಮಯ್ಯನವರು ವೈಯಕ್ತಿಕ ಖಾತೆಯಿಂದ ಟ್ವೀಟ್ ಮಾಡಿ ಕನ್ನಡ ಕಲಿಯುವುದಿಲ್ವಾ ಅಮಿತ್ ಶಾ ಅವರೆ ಎಂದು ಪ್ರಶ್ನಿಸಿದ್ದಾರೆ.

    ಈ ಪ್ರಶ್ನೆಗೆ ಪರ ಮತ್ತು ವಿರೋಧ ಟ್ವೀಟ್‍ಗಳನ್ನು ಮಾಡಿ ಜನ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

    ಶಾ ತಮಿಳು, ಬಂಗಾಳಿ ಕಲಿಯುತ್ತಿರುವುದು ಯಾಕೆ?
    ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಮತ ಗೆಲ್ಲಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಣತಂತ್ರ ಹೂಡಿದ್ದಾರೆ. ಈ ಎರಡು ಕಡೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲೆಂದೇ ಅಮಿತ್ ಶಾ ತಮಿಳು ಹಾಗೂ ಬಂಗಾಳಿ ಭಾಷೆಗಳನ್ನು ಕಲಿಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತದ ಬಳಿಕ ಮೋದಿ, ಅಮಿತ್ ಶಾ ಹೊಸ ಟಾರ್ಗೆಟ್ ಇದು

    ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಲ ಕಡಿಮೆ ಇದ್ದು, ಪ್ರತಿ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳು ಜಯಗಳಿಸಿದರೆ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಎಡಪಕ್ಷಗಳು ಜಯಗಳಿಸುತ್ತಿವೆ. ಹೀಗಾಗಿ ಈ ಎರಡು ರಾಜ್ಯಗಳಲ್ಲಿ ಕಮಲ ಅರಳಿಸಲು ಈಗ ಬಿಜೆಪಿಯ ಚುನಾವಣಾ ಚಾಣಕ್ಯ ಸಿದ್ಧತೆ ನಡೆಸುತ್ತಿದ್ದಾರೆ. ತವರು ರಾಜ್ಯವನ್ನು ಮತ್ತೊಮ್ಮೆ ಗೆಲ್ಲುವ ರಣತಂತ್ರದ ನಡುವೆಯೂ `ಭಾಷಾ’ ಅಧ್ಯಯನದಲ್ಲಿ ಅಮಿತ್ ಶಾ ಬ್ಯುಸಿಯಾಗಿರುವುದು ಇದೀಗ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

    ಈ ಎರಡು ರಾಜ್ಯಗಳಲ್ಲಿ ಮಾತೃಭಾಷೆಯಲ್ಲೇ ಜನರೊಂದಿಗೆ ವ್ಯವಹರಿಸಿದ್ರೆ ಚುನಾವಣೆಗೆ ಲಾಭ ಎನ್ನುವ ನಿಟ್ಟಿನಲ್ಲಿ ಶಾ ಈ ತೀರ್ಮಾನಕ್ಕೆ ಬಂದಿದ್ದಾರೆ. ಇಷ್ಟು ಮಾತ್ರವಲ್ಲದೇ ಶಾ ಅಸ್ಸಾಂ, ಮಣಿಪುರ ಭಾಷೆಯನ್ನೂ ಕರಗತ ಮಾಡಿಕೊಳ್ಳುತ್ತಿದ್ದಾರಂತೆ. ಒಟ್ಟಿನಲ್ಲಿ ಗುಜರಾತ್ ಚುನಾವಣೆಯ ಬ್ಯುಸಿ ನಡುವೆಯೂ ದಕ್ಷಿಣದತ್ತ ಅಮಿತ್ ಶಾ ಕಣ್ಣು ಹಾಕಿದ್ದಾರೆ.

    ಈಗಾಗಲೇ ಶಾ ಅವರಿಗೆ ತಮಿಳು, ಬೆಂಗಾಳಿ, ಅಸ್ಸಾಂ ಹಾಗೂ ಮಣಿಪುರಿ ಭಾಷೆಗಳನ್ನು ಕಲಿಸಲು ವೃತ್ತಿಪರ ಶಿಕ್ಷಕರು ಆಯ್ಕೆಯಾಗಿದ್ದು, ಶಾ ತಮ್ಮ ಭಾಷಾ ಕಲಿಕೆಯನ್ನು ಮುಂದುವರಿಸಿದ್ದಾರೆ. ಕಳೆದ ಒಂದು ವರ್ಷದಿಂದ ನಿರಂತರ ತರಗತಿಗಳು ನಡೆಯುತ್ತಿವೆ. ಸದ್ಯಕ್ಕೆ ಶಾ ಎರಡೂ ಭಾಷೆಗಳಲ್ಲಿ ಮಾತನಾಡುವಷ್ಟು ಕಲಿತಿದ್ದಾರೆ. ಆದರೆ ನಿರರ್ಗಳವಾಗಿ ಮಾತನಾಡಲು ಮತ್ತಷ್ಟು ಅಧ್ಯಯನದ ಅಗತ್ಯವಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಒಟ್ಟಿನಲ್ಲಿ ತಮಿಳುನಾಡು ಹಾಗೂ ಬಂಗಾಳ ರಾಜ್ಯದಲ್ಲೂ ಗೆದ್ದು, ಬಿಜೆಪಿ ಒಂದು ಪ್ರಬಲ ಪಕ್ಷವಾಗಿ ಹೊರಹೊಮ್ಮಲು ಅಮಿತ್ ಶಾ ಈ ಉಪಾಯ ಹೂಡಿದ್ದಾರೆ. ಆಯಾ ರಾಜ್ಯದ ಭಾಷೆಯಲ್ಲೇ ಜನರೊಂದಿಗೆ ಮಾತನಾಡಿದ್ರೆ ಮಾತ್ರ ಜನ ಇನ್ನೂ ತಮ್ಮೊಂದಿಗೆ ಹತ್ತಿರವಾಗುತ್ತಾರೆ. ಹೀಗೆ ಮಾಡಿದ್ದಲ್ಲಿ ತಮ್ಮ ಪಕ್ಷಕ್ಕೆ ಜನ ಮತ ನೀಡಬಹುದೆಂಬ ಉದ್ದೇಶ ಅವರದ್ದಾಗಿದೆ.

    https://twitter.com/winner2008/status/932995532326240256

    https://twitter.com/kanwarlalbolo/status/932983862317039616

  • ಕ್ಲಾಸ್ ರೂಮಿನಲ್ಲೇ ಆತ್ಮಹತ್ಯೆ ಮಾಡಿಕೊಂಡ 12ನೇ ತರಗತಿ ವಿದ್ಯಾರ್ಥಿ

    ಕ್ಲಾಸ್ ರೂಮಿನಲ್ಲೇ ಆತ್ಮಹತ್ಯೆ ಮಾಡಿಕೊಂಡ 12ನೇ ತರಗತಿ ವಿದ್ಯಾರ್ಥಿ

    ತಂಜಾವೂರ್: 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಯ ಒಳಗಡೆಯೇ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯ ತಿರುಕ್ಕಟ್ಟುಪಲ್ಲಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

    ಸುದೀಶ್ ಬಾಬು (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ತಿರುಕ್ಕಟ್ಟುಪುಲ್ಲಿ ಗ್ರಾಮದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ ಬೆಳಗ್ಗೆ ಸುಮಾರು 8 ಗಂಟೆಗೆ ಸ್ಪೆಷಲ್ ಕ್ಲಾಸ್‍ಗೆಂದು ಶಾಲೆಗೆ ತೆರಳಿದ್ದಾನೆ. ಆದ್ರೆ ಒಂದು ಗಂಟೆ ನಂತರ ಇದ್ದಕ್ಕಿದ್ದಂತೆ ಹೊರಟು ಹೋಗಿದ್ದಾನೆ. ಆದರೆ ಇತರೆ ವಿದ್ಯಾರ್ಥಿಗಳು ಕ್ಲಾಸ್ ಮುಗಿಸಿಕೊಂಡು ಹೊರಗೆ ಬಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ವಿದ್ಯಾರ್ಥಿಗಳು ತಮ್ಮ ತರಗತಿಗೆ ಹೋದಾಗ ಸುದೀಶ್ ಹಗ್ಗದಿಂದ ಛಾವಣಿಗೆ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡಿರುವುದನ್ನ ನೋಡಿದ್ದಾರೆ. ಇದನ್ನು ನೋಡಿದ ವಿದ್ಯಾರ್ಥಿಗಳು ಗಾಬರಿಗೊಂದು ತಕ್ಷಣ ಶಿಕ್ಷಕರಿಗೆ ತಿಳಿಸಿದ್ದಾರೆ. ಅವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

    ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದು, ವಿದ್ಯಾರ್ಥಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿ ಬ್ಲೂವೇಲ್ ಗೇಮ್ ಗೆ ಅಡಿಕ್ಟ್ ಆಗಿದ್ದನಾ ಎಂಬ ಬಗ್ಗೆಯೂ ಪರಿಶೀಲನೆ ನಡೆಸಿದ್ದಾರೆ.

  • ವಿವಾದಿತ ಮೆರ್ಸೆಲ್ ಪರ ನಿಂತ ಖಳನಟ ಸಂಪತ್ ರಾಜ್

    ವಿವಾದಿತ ಮೆರ್ಸೆಲ್ ಪರ ನಿಂತ ಖಳನಟ ಸಂಪತ್ ರಾಜ್

    ಉಡುಪಿ: ತಮಿಳು ನಟ ಇಳಯ ದಳಪತಿ ವಿಜಯ್ ಅಭಿನಯದ ಮೆರ್ಸೆಲ್ ಚಿತ್ರ ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. ನಟನ ವಿಚಾರದಲ್ಲಿ ಜಾತಿ ಧರ್ಮ ಕೂಡಾ ಸಾಕಷ್ಟು ಚರ್ಚೆಯಾಗುತ್ತಿದೆ. ರಾಜಕೀಯ ನುಸುಳಿ ದೊಡ್ಡ ಸುದ್ದಿಯಾಗಿದೆ. ಈ ನಡುವೆ ಬಹುಭಾಷಾ ಖಳನಟ ಸಂಪತ್ ರಾಜ್ ನಟ ವಿಜಯ್ ಪರ ಬ್ಯಾಟ್ ಬೀಸಿದ್ದಾರೆ.

    ಕ್ರಿಯೇಟಿವ್ ಫೀಲ್ಡ್ ಸಿನೆಮಾವನ್ನು ಸಿನಿಮಾವಾಗಿ ಸ್ವೀಕರಿಸಬೇಕು. ಚಿತ್ರಕಥೆಯನ್ನು ನಿಜ ಜೀವನಕ್ಕೆ ಅಳವಡಿಸಿದರೆ ತೊಂದರೆ ಹೆಚ್ಚು ಎಂದರು. ಬಣ್ಣ ಹಚ್ಚುವ ಕಲಾವಿದನಿಗೆ ಜಾತಿ ಇಲ್ಲ, ನಾನು ಉತ್ತರ ಪ್ರದೇಶದಲ್ಲಿ ಹುಟ್ಟಿದವನು. ದೆಹಲಿಯಲ್ಲಿ ಬೆಳೆದು ಬೆಂಗಳೂರಲ್ಲಿ ನೆಲೆಸಿದ್ದೇನೆ. ಮದ್ರಾಸಿನಲ್ಲಿ ನಾನು ಹೆಚ್ಚು ಕೆಲಸ ಮಾಡುತ್ತೇನೆ ಎಂದು ಹೇಳಿದರು.

    ಈವರೆಗೆ ಯಾರೂ ನನ್ನ ಜಾತಿ ಕೇಳಿಲ್ಲ. ಟೀಕೆಯನ್ನು ಹೇಗೆ ಸ್ವೀಕಾರ ಮಾಡುತ್ತೀರಿ ಅನ್ನೋದು ಮುಖ್ಯ. ಅದನ್ನು ಚಾಲೆಂಜಾಗಿ ಯಾಕೆ ತೆಗೆದುಕೊಳ್ಳಬಾರದು ಎಂದು ಪ್ರಶ್ನೆ ಮಾಡಿ ಮೋದಿ ಪರ ಬ್ಯಾಟ್ ಬೀಸಿ ತಮಿಳುನಾಡಿನ ಹೋರಾಟಗಾರರಿಗೆ ಟಾಂಗ್ ಕೊಟ್ಟರು.

    ಅನುಕ್ತ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರಕಥೆ ಹಿಡಿಸಿದ್ದರಿಂದ ನಾನು ಒಪ್ಪಿಕೊಂಡೆ. ಉಡುಪಿಯಲ್ಲೇ ಬಂದು ಸೆಟಲ್ ಆಗುವ ಮನಸ್ಸಿದೆ. ಇಲ್ಲಿ ಟ್ರಾಫಿಕ್ಕೂ ಇಲ್ಲ, ಡರ್ಟಿ ವೆದರೂ ಇಲ್ಲ, ಕರಾವಳಿಯ ವಾತಾವರಣ- ಫುಡ್ ನಂಗೆ ಇಷ್ಟ. ನನ್ನ ಅಪ್ಪ ಅಮ್ಮನ ಪುಣ್ಯದ ಫಲ, ಹೀಗಾಗಿ ಶ್ರೀಕೃಷ್ಣನ ದರ್ಶನ ಆಗಿದೆ.  ಎಲ್ಲರಿಗೂ ಒಳಿತು ಮಾಡು ಭಗವಂತನಲ್ಲಿ ಪ್ರಾರ್ಥಿಸಿದೆ ಎಂದು ಹೇಳಿದರು.

  • ಕರ್ನಾಟಕಕ್ಕೆ ಮಹಾಮೋಸ – ನದಿ ಜೋಡಣೆ ನೆಪದಲ್ಲಿ ಆಂಧ್ರ-ತಮಿಳುನಾಡಿನಲ್ಲಿ ‘ಕಮಲ’ದ ಬೀಜ ಬಿತ್ತಲು ತಯಾರಿ..?!

    ಕರ್ನಾಟಕಕ್ಕೆ ಮಹಾಮೋಸ – ನದಿ ಜೋಡಣೆ ನೆಪದಲ್ಲಿ ಆಂಧ್ರ-ತಮಿಳುನಾಡಿನಲ್ಲಿ ‘ಕಮಲ’ದ ಬೀಜ ಬಿತ್ತಲು ತಯಾರಿ..?!

    ಬೆಂಗಳೂರು: ಪದೇ ಪದೇ ಕರ್ನಾಟಕ ರಾಜ್ಯಕ್ಕೆ ತಾರತಮ್ಯ ಮಾಡಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಈಗ ಮತ್ತೊಂದು ಮಹಾಮೋಸ ಮಾಡಲು ರೆಡಿಯಾಗ್ತಿದೆ. ರಾಜ್ಯಕ್ಕೆ ಅನ್ಯಾಯ ಆಗ್ತಿದ್ದರೂ ಮಹದಾಯಿ ವಿಚಾರದಲ್ಲಿ ಮೂಗು ತೂರಿಸದ ಕೇಂದ್ರ ಸರ್ಕಾರ ಇದೀಗ ಕಾವೇರಿ ವಿಚಾರವನ್ನು ಕೆದಕಿದೆ. ಕಾವೇರಿ ಕೊಳ್ಳದ ಜಲಾಶಯಗಳು ರಾಜ್ಯದ ಕೈತಪ್ಪುವ ಭೀತಿಯ ಬೆನ್ನಲ್ಲೇ ಮತ್ತೊಂದು ಹೊಡೆತಕ್ಕೂ ರಾಜ್ಯ ಸಿದ್ಧವಾಗಬೇಕಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ವಿವಾದ ಬಗೆಹರಿಸಲು ಕೃಷ್ಣಾ-ಪಿನಾಕಿನಿ-ಕಾವೇರಿ ನದಿಗಳ ಜೋಡಣೆ ಪ್ಲಾನ್ ಮಾಡಿದೆ.

    ಕೃಷ್ಣಾ-ಗೋದಾವರಿ ನದಿ ಜೋಡಣೆ ಮಾಡಿದ ಆಂಧ್ರ ಸರ್ಕಾರದಿಂದ ಉತ್ತೇಜಿತಗೊಂಡಿರುವ ಕೇಂದ್ರ ಸರ್ಕಾರ ಹೊಸ ನದಿ ಜೋಡಣೆ ಯೋಜನೆ ಕುರಿತು ಡಿಪಿಆರ್ ತಯಾರಿಸುವ ಹೊಣೆಯನ್ನು ಆಂಧ್ರ ಸರ್ಕಾರಕ್ಕೆ ವಹಿಸಿದೆ. ಈ ಯೋಜನೆಯಿಂದ ಕಾವೇರಿ ವಿವಾದ ಬಗೆಹರಿಯುವ ಆಶಾಕಿರಣ ಮೂಡಿದ್ರೂ ಕರ್ನಾಟಕಕ್ಕೆ ಮಾತ್ರ ಯಾವುದೇ ಉಪಯೋಗವಿಲ್ಲ. ಮಹಾನದಿ ಗೋದಾವರಿ ಕಣಿವೆಯಲ್ಲಿ ಲಭ್ಯವಿರುವ ಹೆಚ್ಚುವರಿ ನೀರನ್ನು ಕೊರತೆ ಎದುರಿಸುತ್ತಿರುವ ಕೃಷ್ಣಾ, ಪಿನಾಕಿನ ಕಾವೇರಿ, ವೈಗೈ ಹಾಗೂ ಗುಂಡಾರ್ ವಲಯಗಳಿಗೆ ಹರಿಸುವುದು ಕೇಂದ್ರದ ಉದ್ದೇಶ. ಈ ಮೂಲಕ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಕಮಲ ಅರಳಿಸಲು ನರೇಂದ್ರ ಮೋದಿ ಸರ್ಕಾರ ಪ್ಲಾನ್ ಮಾಡಿದೆಯಾ ಅನ್ನೋ ಅನುಮಾನ ಕಾಡ್ತಿದೆ. ಇನ್ನು ವಿಜಯಪುರದ ಆಲಮಟ್ಟಿಯಿಂದ ಕೃಷ್ಣಾ ನದಿಯನ್ನು ತಿರುಗಿಸಿ ಆಂಧ್ರದ ಬರಪೀಡಿತ ಅನಂತಪುರ ಜಿಲ್ಲೆಗೆ ನೀರು ನೀಡುವ ಆಲೋಚನೆಯನ್ನು ಹೊಂದಲಾಗಿದೆ.

    ಕರ್ನಾಟಕದಲ್ಲೂ ಸಾಕಷ್ಟು ಬರಪೀಡಿತ ಪ್ರದೇಶಗಳು ಇವೆ. ಆದ್ರೆ ಕೃಷ್ಣಾ ನದಿ ಮೂಲಕ ಆ ಭಾಗಗಳಿಗೆ ನೀರು ಕೊಡಿಸುವ ಪ್ರಯತ್ನವನ್ನೇ ಮಾಡಿಲ್ಲದಿರುವುದು ಬೇಸರದ ಸಂಗತಿಯಾಗಿದೆ. ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ಮಾತ್ರ ಹನಿ ನೀರು ಸಿಗದಿದ್ದರೂ ಕೇಂದ್ರದ ಮಹಾ ಮೋಸ ರಾಜ್ಯ ಸರ್ಕಾರಕ್ಕೆ ಗೊತ್ತಿದೆಯಾ ಎಂಬ ಪ್ರಶ್ನೆಯೂ ಮೂಡುತ್ತಿದೆ. ಈ ಎಲ್ಲದರ ಮಧ್ಯೆ ರಾಜ್ಯದ ಬಿಜೆಪಿ ಸಂಸದರು ಹಾಗೂ ಜನಪ್ರತಿನಿಧಿಗಳು ಏನು ಮಾಡುತ್ತಾರೆ. ರಾಜ್ಯದ ಪರ ದನಿ ಎತ್ತುತ್ತಾರಾ ಅಥವಾ ಕೇಂದ್ರದ ಮೋದಿ ಸರ್ಕಾರದ ಯೋಜನೆ ಎಂಬ ಕಾರಣಕ್ಕೆ ಮೌನಕ್ಕೆ ಶರಣಾಗುತ್ತಾರಾ ಎನ್ನುವುದಷ್ಟೇ ಈಗ ಎಲ್ಲರಲ್ಲಿರುವ ಕುತೂಹಲ.

  • ಶಶಿಕಲಾಗೆ 5 ದಿನಗಳ ಪೆರೋಲ್, ಇಂದು ತಮಿಳುನಾಡಿಗೆ

    ಶಶಿಕಲಾಗೆ 5 ದಿನಗಳ ಪೆರೋಲ್, ಇಂದು ತಮಿಳುನಾಡಿಗೆ

    ಬೆಂಗಳೂರು: ಎಐಎಡಿಎಂಕೆ ನಾಯಕಿ ವಿ.ಕೆ ಶಶಿಕಲಾಗೆ 5 ದಿನಗಳ ಪೆರೋಲ್ ಸಿಕ್ಕಿದ್ದು ಶುಕ್ರವಾರ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.

    ಈಗಾಗಲೇ ಆಪ್ತ ಟಿಟಿವಿ ದಿನಕರನ್ ಪರಪ್ಪನ ಅಗ್ರಾಹರಕ್ಕೆ ಭೇಟಿ ನೀಡಿದ್ದು, ಶಶಿಕಲಾ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ.

    ಪತಿ ನಟರಾಜನ್ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ 15 ದಿನಗಳ ತುರ್ತು ಪೆರೋಲ್ ರಜೆ ನೀಡಬೇಕು ಎಂದು ಶಶಿಕಲಾ ಮನವಿ ಸಲ್ಲಿಸಿದ್ದರು. ಎರಡು ದಿನಗಳ ಹಿಂದೆ ಚೆನ್ನೈ ಆಸ್ಪತ್ರೆಯಲ್ಲಿ ನಟರಾಜನ್ ಅವರಿಗೆ ಯಕೃತ್ ಕಸಿ ಮಾಡಲಾಗಿತ್ತು.

    ಜೈಲಾಧಿಕಾರಿಗಳು 15 ದಿನಗಳ ಪೆರೋಲ್ ರಜೆ ನೀಡದೇ ಐದು ದಿನಗಳ ರಜೆಯನ್ನು ಮಂಜೂರು ಮಾಡಿದ್ದಾರೆ. ಇದೇ ವೇಳೆ ಯಾವುದೇ ರಾಜಕೀಯ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಷರತ್ತು ವಿಧಿಸಿಸಲಾಗಿದ್ದು, ಒಂದು ವೇಳೆ ಭಾಗವಹಿಸಿದ್ದು ಬೆಳಕಿಗೆ ಬಂದರೆ ಮುಂದೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಜೈಲಾಧಿಕಾರಿಗಳು ಶಶಿಕಲಾಗೆ ಸೂಚನೆ ನೀಡಿದ್ದಾರೆ.

  • ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ ಸಿನಿಮಾ ಖ್ಯಾತಿ, ಹಣ ಸಾಕಾಗುವುದಿಲ್ಲ: ನಟ ರಜನಿಕಾಂತ್

    ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ ಸಿನಿಮಾ ಖ್ಯಾತಿ, ಹಣ ಸಾಕಾಗುವುದಿಲ್ಲ: ನಟ ರಜನಿಕಾಂತ್

    ಚೆನ್ನೈ: ರಾಜಕೀಯ ಪ್ರವೇಶಕ್ಕೆ ತುದಿ ಕಾಲಿನಲ್ಲಿ ನಿಂತಿರುವ ನಟ ಕಮಲ್ ಹಾಸನ್ ಅವರಿಗೆ ರಜನಿಕಾಂತ್ ಸಲಹೆಯೊಂದನ್ನು ನೀಡಿದ್ದು, ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ ಸಿನಿಮಾ ಖ್ಯಾತಿ ಹಾಗೂ ಹಣ ಎರಡೇ ಸಾಕಾಗುವುದಿಲ್ಲ ಎಂದು ತಿಳಿಸಿದ್ದಾರೆ.

    ಯಾವುದೇ ಒಬ್ಬ ನಟ ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ ಅವರ ಖ್ಯಾತಿ ಹಾಗೂ ಹಣ ಸಾಕಾಗುವುದಿಲ್ಲ, ಅದಕ್ಕಿಂತ ಹೆಚ್ಚಿನ ಅವಶ್ಯಕತೆಗಳಿವೆ. ಇದನ್ನು ನಟ ಕಮಲ್ ಹಾಸನ್ ಚೆನ್ನಾಗಿ ತಿಳಿದಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ನಾನು ಕೇಳಿದ ಮಾತನ್ನು ಇಂದು ಕಮಲ್ ನನ್ನನ್ನೇ ಕೇಳುತ್ತಿದ್ದಾರೆ ಎಂದು ರಜನಿ ಹೇಳಿದ್ದಾರೆ.

    ತಮಿಳು ಚಿತ್ರ ರಂಗದ ದಂತಕತೆ ಶಿವಾಜಿ ಗಣೇಶನ್ ಅವರ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ರಜನಿ ಅದೇ ಸಮಾರಂಭದಲ್ಲಿ ವೇದಿಕೆ ಹಂಚಿಕೊಂಡಿದ್ದ ಸಹನಟ ಕಮಲ್ ಅವರಿಗೆ ಸಲಹೆಯನ್ನು ನೀಡಿದರು.

    ಕಮಲ್ ಹಾಸನ್ ಮಾತನಾಡಿ, ಶಿವಾಜಿ ಗಣೇಶನ್ ಅವರು ಸಿನಿಮಾ ಮತ್ತು ರಾಜಕೀಯಕ್ಕೂ ಮೀರಿದ ಪ್ರಸಿದ್ಧ ವ್ಯಕ್ತಿಯಾಗಿದ್ದಾರೆ. ಈ ಕಾರಣಕ್ಕೆ ನಾನು ಭಾಗವಹಿಸುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದರೂ ಈ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದೇನೆ ಎಂದರು.

    ತಮಿಳುನಾಡು ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಸ್ಮಾರಕ ಭವನವನ್ನು ಉದ್ಘಾಟಿಸಿದರು. 2015ರಲ್ಲಿ ಸಿಎಂ ಆಗಿದ್ದ ಜಯಲಲಿತಾ ಅವರು ಸ್ಮಾರಕ ನಿರ್ಮಾಣ ಘೋಷಣೆಯನ್ನು ಮಾಡಿದ್ದರು. ತಮಿಳು ಚಿತ್ರರಂಗದಲ್ಲಿ ಸುಮಾರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ, ದಾದಾ ಫಾಲ್ಕೆ ಸಾಹೇಬ್ ಪ್ರಶಸ್ತಿ ವಿಜೇತರಾದ ಗಣೇಶನ್ 1950ರ ದಶಕದ ನಂತರ ಅಪಾರ ಖ್ಯಾತಿಯನ್ನು ಗಳಿಸಿದ್ದರು.

    ಗಣೇಶನ್ ಪುತ್ರ ಪ್ರಭು ಮಾತನಾಡಿ ಸ್ಮಾರಕ ನಿರ್ಮಾಣ ಅಮ್ಮ(ಜಯಲಲಿತಾ) ಕನಸಗಿತ್ತು, ಇಂದು ನಾನು ಹೆಚ್ಚು ಸಂತೋಷದಿಂದ ಇದ್ದು, ಅಪ್ಪ(ಗಣೇಶನ್) ತಮ್ಮ ಸಿನಿಮಾಗಳ ಮೂಲಕ ಜನರಿಗೆ ಹತ್ತಿರವಾಗಿದ್ದು, ಇದು ಅವರಿಗೆ ನೀಡುವ ಅತ್ಯುತ್ತಮ ಗೌರವ ಎಂದು ತಿಳಿಸಿದರು.

  • ಕಮಲ್ ಭೇಟಿಯಾದ ಕೇಜ್ರಿವಾಲ್: ಇಬ್ಬರ ನಡುವೆ ಏನು ಮಾತುಕತೆ ನಡೆದಿದೆ?

    ಕಮಲ್ ಭೇಟಿಯಾದ ಕೇಜ್ರಿವಾಲ್: ಇಬ್ಬರ ನಡುವೆ ಏನು ಮಾತುಕತೆ ನಡೆದಿದೆ?

    ಚೆನ್ನೈ: ಸ್ವಂತ ಪಕ್ಷ ಸ್ಥಾಪಿಸುವ ಅಧಿಕೃತ ಸೂಚನೆಯನ್ನು ನೀಡಿರುವ ತಮಿಳು ನಟ ಕಮಲ್ ಹಾಸನ್‍ರ ರಾಜಕೀಯ ನಡೆಗಳು ಕುತೂಹಲವನ್ನು ಹುಟ್ಟಿಸುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಇಂದು ಕಮಲ್ ಮನೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿದ್ದು ಹೊಸ ರಾಜಕೀಯ ಚಿಂತನೆಗಳಿಗೆ ಕಾರಣವಾಗಿದೆ.

    ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್‍ರನ್ನು ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವತಃ ಕಮಲ್ ಹಿರಿಯ ಪುತ್ರಿ ಅಕ್ಷರ ಹಾಸನ್ ಸ್ವಾಗತಿಸಿದರು. ಕಳೆದ ಒಂಬತ್ತು ದಿನಗಳಿಂದ ಮಹಾರಾಷ್ಟ್ರದಲ್ಲಿ ಧ್ಯಾನವನ್ನು ಕೈಗೊಂಡಿದ್ದ ಕೇಜ್ರಿವಾಲ್ ಧ್ಯಾನದ ವಿರಾಮದಲ್ಲಿ ಚೆನ್ನೈಗೆ ಭೇಟಿ ನೀಡಿದ್ದರು.

    ನಾನು ಕಮಲ್ ಹಾಸನ್ ಅವರ ಉತ್ತಮ ಕಾರ್ಯಗಳ ಬಹುದೊಡ್ಡ ಅಭಿಮಾನಿಯಾಗಿದ್ದು, ಪ್ರಸ್ತುತ ದೇಶದಲ್ಲಿ ಹಲವು ಕೋಮು ಶಕ್ತಿಗಳು ಬಲ ಪಡೆದುಕೊಳ್ಳುತ್ತಿವೆ ಎಂಬ ಭಾವನೆಯನ್ನು ಜನರು ವ್ಯಕ್ತಪಡಿಸಿದ್ದಾರೆ. ನಮ್ಮಿಬ್ಬರ ಭೇಟಿಯಲ್ಲಿ ಉತ್ತಮ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಕೇಜ್ರಿವಾಲ್ ತಿಳಿಸಿದರು.

    ನಂತರ ಮಾತನಾಡಿದ ಕಮಲ್, ನನ್ನ ಮನೆ ಹಲವು ದಿನಗಳಿಂದ ರಾಜಕೀಯ ಚಟುಟಿಕೆಗಳ ತಾಣವಾಗಿದೆ. ನಮ್ಮ ತಂದೆಯ ಅವಧಿಯಲ್ಲಿಯೂ ಇದೇ ರೀತಿ ಇತ್ತು. ನಾನು ಅದನ್ನು ದೂರ ಮಾಡಿದ್ದೆ. ಆದರೆ ಇಂದು ರಾಜಕೀಯ ಪ್ರವೇಶವನ್ನು ಪಡೆಯುತ್ತಿರುವ ನನಗೆ ಕೆಲವು ಸಲಹೆಗಳನ್ನು ನೀಡಲು ಅರವಿಂದ್ ಕೇಜ್ರಿವಾಲ್ ಆಗಮಿಸಿದ್ದರು ಎಂದು ಹೇಳಿದರು.

    ಕಮಲ್ ರಾಜಕೀಯ ಪ್ರವೇಶ ಖಚಿತವಾದ ನಂತರ ಭೇಟಿ ಮಾಡುತ್ತಿರುವ ಎರಡನೇ ಮುಖ್ಯಮಂತ್ರಿ ಕೇಜ್ರಿವಾಲ್ ಆಗಿದ್ದು, ಈ ಮೊದಲು ಕೇರಳ ಸಿಎಂ ಪಿಣರಾಯಿ ವಿಜಯನ್‍ರನ್ನು ಭೇಟಿ ಮಾಡಿ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿದ್ದರು. ಈ ಹಿಂದೆ ಕಮಲ್ ಹಾಗೂ ಕೇಜ್ರಿವಾಲ್ ಭೇಟಿ 2015 ರ ಸಿನಿಮಾ ಚಿತ್ರೀಕರಣ ಸಮಯದಲ್ಲಿ ನಡೆದಿತ್ತು.

    ಪ್ರಸ್ತುತ ಕಮಲ್ ತಮಿಳು ಅವತರಣಿಕೆಯ ಬಿಗ್‍ಬಾಸ್ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಕಳೆದ ಕೆಲವು ತಿಂಗಳಿಂದ ತಮಿಳುನಾಡಿನ ರಾಜಕೀಯದಲ್ಲಿ ಕಾಣಿಸಿಕೊಂಡಿರುವ ಅಸ್ಥಿರತೆಯ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.

    ಕೆಲ ದಿನಗಳ ಹಿಂದೆ ಮಾಧ್ಯಮಗಳು ಕಮಲ್ ರಾಜಕೀಯ ಪ್ರವೇಶದ ಕುರಿತು ಪ್ರಶ್ನಿಸಿದಾಗ, ನಾನು ಈ ಕುರಿತು ಮಹತ್ವದ ಚಿಂತನೆಗಳನ್ನು ನಡೆಸುತ್ತಿದ್ದು, ಯಾವುದಾದರು ರಾಜಕೀಯ ಪಕ್ಷವು ತನ್ನ ಚಿಂತನೆಗೆ ಸೂಕ್ತ ಎನಿಸುವ ವೇದಿಕೆಯನ್ನು ಒದಗಿಸಿಕೊಡುವ ಸಾಧ್ಯತೆಗಳಿವೆಯೇ ಎಂದು ಮಾಧ್ಯಮಗಳಿಗೆ ಮರು ಪ್ರಶ್ನಿಸಿದ್ದರು.

  • ಕೆಲ್ಸ ಮಾಡದೇ ಇದ್ರೆ ನನ್ನನ್ನು ಕಿತ್ತೊಗೆಯಿರಿ: ಕಮಲ್ ಹಾಸನ್

    ಕೆಲ್ಸ ಮಾಡದೇ ಇದ್ರೆ ನನ್ನನ್ನು ಕಿತ್ತೊಗೆಯಿರಿ: ಕಮಲ್ ಹಾಸನ್

    ಚೆನ್ನೈ: ತಮಿಳು ರಾಜಕೀಯ ಪರಿಸ್ಥಿತಿಗಳು ದಿನನಿತ್ಯ ಹೊಸ ತಿರುವುಗಳು ಪಡೆದುಕೊಳ್ಳುತ್ತಿವೆ. ಈ ಸಂದರ್ಭದಲ್ಲಿ ತಮಿಳು ರಾಜಕೀಯ ರಂಗಕ್ಕೆ ಕಾಲಿವುಡ್ ಮೆಗಾ ಸ್ಟಾರ್ ಖ್ಯಾತ ನಟ ಕಮಲ್ ಹಾಸನ್ ಪ್ರವೇಶಿಸುವುದು ಖಚಿತವಾಗಿದೆ.

    ತಮಿಳು ರಾಜಕೀಯದಲ್ಲಿ ಕೆಲವು ಬದಲಾವಣೆಗಳನ್ನು ತರುವ ಅಗತ್ಯವಿದ್ದು, ಈ ಬದಲಾವಣೆಗಳನ್ನು ನಾನು ತರಲು ನಿರ್ಧರಿಸಿದ್ದೇನೆ. ಆದರೆ ಇದು ಎಷ್ಟು ಸಮಯವನ್ನು ತೆಗೆದುಕೊಳ್ಳಲಿದೆ ಎನ್ನುವುದನ್ನು ತಿಳಿಸುವುದು ಕಷ್ಟಸಾಧ್ಯ ಎಂದು ತಮ್ಮ ರಾಜಕೀಯ ಪ್ರವೇಶವನ್ನು ವಿಷಯದ ಬಗ್ಗೆ ಕಮಲ್ ಹಾಸನ್ ಸ್ಪಷ್ಟಪಡಿಸಿದರು.

    ರಾಜಕೀಯದಲ್ಲಿ ತೀವ್ರ ಬದಲಾವಣೆಯನ್ನು ತರುವುದು ಸತ್ಯ ಸಂಗತಿಯಾಗಿದ್ದು, ಆದರೆ ಈ ಪ್ರಕ್ರಿಯೆಯನ್ನು ಯಾವಾಗ ಆರಂಭಿಸುತ್ತೇನೆ ಎಂದು ಭರವಸೆ ನೀಡುವುದು ಕಷ್ಟಸಾಧ್ಯ ಎಂದು ತಿಳಿಸಿದರು.

    ಚುನಾವಣೆ ಭರವಸೆಗಳ ಬಗ್ಗೆ ನನಗೆ ಯಾವುದೇ ನಂಬಿಕೆ ಇಲ್ಲ. ಭರವಸೆಗಳನ್ನು ಆಧರಿಸಿ ನನಗೆ ಮತವನ್ನು ನೀಡಬೇಡಿ, ನಾನು ಸರಿಯಾಗಿ ಕೆಲಸ ನಿರ್ವಹಿಸದಿದ್ದಾರೆ ತಕ್ಷಣ ನನ್ನನ್ನು ಕಿತ್ತೊಗೆಯಿರಿ ಎಂದಿದ್ದಾರೆ.

    ಪ್ರಸ್ತುತ ರಾಜಕೀಯದಲ್ಲಿ ಭ್ರಷ್ಟಚಾರ ಪ್ರಮುಖ ಸಮಸ್ಯೆಯಾಗಿದೆ. ಭ್ರಚ್ಟಚಾರವನ್ನು ರಾಜಕೀಯದಿಂದ ನಿರ್ಮೂಲನೆ ಮಾಡುತ್ತೇನೆ, ಇಲ್ಲವಾದಲ್ಲಿ ನಾನು ಹೊರ ನಡೆಯುತ್ತೇನೆ. ಪ್ರತಿ ರಾಜಕೀಯ ಪಕ್ಷವು ಒಂದು ಸಿದ್ಧಾಂತವನ್ನು ಹೊಂದಿರುತ್ತದೆ. ಆದರೆ ನನ್ನ ಯಾವುದೇ ಸಿದ್ಧಾಂತಗಳು, ಗುರಿಗಳು ಯಾವುದೇ ರಾಜಕೀಯ ಪಕ್ಷಕ್ಕೆ ಹೊಂದಿಕೆ ಯಾಗುವುದಿಲ್ಲ ಎಂದರು.

    ಮಾಧ್ಯಮದವರ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದ ಅವರು ನಾನು ಪ್ರಸ್ತುತ ತಮಿಳುನಾಡಿನಲ್ಲಿರುವ ಯಾವುದೇ ಪಕ್ಷವನ್ನು ಸೇರುವುದಿಲ್ಲ, ಕೆಲವು ದಿನಗಳಲ್ಲಿ ಹೊಸ ಪಕ್ಷವನ್ನು ಘೋಷಿಸುವುದಾಗಿ ಉತ್ತರಿಸಿದರು.

    ಪ್ರಸ್ತುತ ಕಮಲ್ ಹಾಸನ್ ಸಿಪಿಎಂ ಪಕ್ಷದ ಕಾರ್ಯದರ್ಶಿಗಳಾದ ಸೀತಾರಾಮ್ ಯಚೂರಿ ಜೊತೆ ಸಂಪರ್ಕದಲ್ಲಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಕೇರಳ ರಾಜ್ಯ ಸಿಎಂ ಪಿಣರಾಯಿ ವಿಜಯನ್ ಅವರ ಜೊತೆ ಕಳೆದ ತಿಂಗಳು ಮಾತುಕತೆ ನಡೆಸಿದ್ದರು.

    ಕೆಲ ದಿನಗಳ ಹಿಂದೆ ತಮ್ಮ ರಾಜಕೀಯ ಪ್ರವೇಶದ ಕುರಿತು ಮಾತಾನಾಡಿದ್ದ ಕಮಲ್ ಹಾಸನ್, ನನ್ನ ಬಣ್ಣವು ಎಂದು ಕೇಸರಿ ಬಣ್ಣದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದರು.

  • ತಮಿಳುನಾಡು ಪೊಲೀಸರಿಂದ 20 ಕೋಟಿ ರೂ. ಆಮಿಷ: ಶಾಸಕ ಬಾಲಾಜಿ

    ತಮಿಳುನಾಡು ಪೊಲೀಸರಿಂದ 20 ಕೋಟಿ ರೂ. ಆಮಿಷ: ಶಾಸಕ ಬಾಲಾಜಿ

    ಮಡಿಕೇರಿ: ತಮಿಳುನಾಡು ಪೊಲೀಸರು ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಹೇಳಿದ್ದು ಮಾತ್ರವಲ್ಲದೇ 20 ಕೋಟಿ ರೂ. ಹಣವನ್ನು ನೀಡುವ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ಬಾಲಾಜಿ ಹೇಳಿದ್ದಾರೆ.

    ಒಂದು ವಾರದ ಬಳಿಕ ಸೋಮವಾರಪೇಟೆಯಲ್ಲಿರುವ ಪ್ಯಾಂಡಿಟನ್ ರೆಸಾರ್ಟ್ ನಿಂದ ಹೊರಬಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ ಕರೂರು ಅರವಕುರುಚ್ಚಿ ಶಾಸಕ ಬಾಲಾಜಿ ಸೆಂದಿಲ್, ಪಳನಿಸ್ವಾಮಿ ಅವರನ್ನು ನಾವೆಲ್ಲರೂ ಸೇರಿ ಮುಖ್ಯಮಂತ್ರಿ ಮಾಡಿದ್ದೆವು. ಆದರೆ ಈಗ ಪನ್ನೀರ್ ಸೆಲ್ವಂ ಜೊತೆ ಸೇರಿ ಟಿಟಿಡಿ ದಿನಕರನ್ ಹಾಗೂ ಶಶಿಕಲಾ ಅವರಿಗೆ ದ್ರೋಹ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

     

    ನಾವು 18 ಜನ ಶಾಸಕರು ಬದ್ಧರಾಗಿದ್ದೇವೆ. ಅಲ್ಲದೇ ಮಂಗಳವಾರ ಏಕಾಏಕಿ ದಿಢೀರ್ ಅಗಿ ರೆಸಾರ್ಟ್ ಗೆ ಭೇಟಿ ನೀಡಿದ ತಮಿಳುನಾಡು ಪೊಲೀಸ್ ಅಧಿಕಾರಿಗಳು ಸರ್ಕಾರಕ್ಕೆ ಬೆಂಬಲ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಡಿವೈಎಸ್‍ಪಿ ಮಟ್ಟದ ಅಧಿಕಾರಿಗಳು ಮೊಬೈಲ್ ಫೋನ್ ನೀಡಿ ಮಾತನಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ 20 ಕೋಟಿ ರೂ. ಹಣ ಕೊಡಿಸುವ ಬಗ್ಗೆ ಮಾತನಾಡಿದ್ದಾರೆ ಎಂದು ತಿಳಿಸಿದರು.

    ಪೊಲೀಸ್ ಅಧಿಕಾರಿಗಳು ಹೀಗೆ ಮಾಡುವುದು ಎಷ್ಟು ಸರಿ? ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜೊತೆ ನೇರವಾಗಿ ಕರೆ ಮಾಡಿ ಮಾತನಾಡುವಂತೆ ಹೇಳುತ್ತಿದ್ದಾರೆ. 30ಕ್ಕೂ ಅಧಿಕ ತಮಿಳುನಾಡಿನ ಪೊಲೀಸ್ ಅಧಿಕಾರಿಗಳಿಂದ ನಮಗೆ ಅಭದ್ರತೆ ಉಂಟಾಗಿದೆ. ಸರ್ಕಾರಕ್ಕೆ ಬೆಂಬಲ ನೀಡದೇ ಇದ್ದರೆ ಬಂಧಿಸಿ ಕೇಸು ದಾಖಲಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದರು.

    ರೆಸಾರ್ಟ್‍ನಲ್ಲಿ ಇರುವ ನಮಗೆ ಭದ್ರತೆ ಬೇಕು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಭದ್ರತೆ ನೀಡುವಂತೆ ಮನವಿ ಮಾಡುತ್ತೇವೆ. ಸ್ಥಳೀಯ ಕೊಡಗು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಡಿವೈಎಸ್ಪಿ ಅವರಿಗೆ ದೂರು ನೀಡಲು ಮುಂದಾಗಿದ್ದೇವೆ ಎಂದು ಬಾಲಾಜಿ ಹೇಳಿದರು.

  • ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯ

    ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯ

    ಚೆನ್ನೈ: ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯವಾಗಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಕೌನ್ಸಿಲ್ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಶಿಕಲಾ ಹಾಗೂ ಉಪಕಾರ್ಯದರ್ಶಿ ಟಿಟಿವಿ ದಿನಕರನ್‍ರನ್ನು ಉಚ್ಛಾಟನೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.

    ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಮ್ಮ ಬಣಗಳ ವಿಲೀನ ಒಪ್ಪಂದದಂತೆ ನಿರ್ಣಯ ಅಂಗೀಕರಿಸಿದ್ದಾರೆ. ಇದರ ಜೊತೆ ಜಯಲಲಿತಾ ಅವರನ್ನ ಎಐಎಡಿಎಂಕೆಯ ಶಾಶ್ವತ ಮುಖ್ಯ ಕಾರ್ಯದರ್ಶಿಯಾಗಿ ನಿರ್ಣಯ ಕೈಗೊಳ್ಳಲಾಗಿದೆ. ಈ ಮೂಲಕ ಜಯಲಲಿತಾ ಸಾವಿನ ಬಳಿಕ ಸೃಷ್ಟಿಯಾಗಿದ್ದ ರಾಜಕೀಯ ಹೈಡ್ರಾಮಕ್ಕೆ ಸದ್ಯ ಫುಲ್‍ಸ್ಟಾಪ್ ಬಿದ್ದಿದೆ.

    ಈ ಹಿಂದೆ ಪನ್ನಿರ್ ಸೆಲ್ವಂ ಎಐಡಿಎಂಕೆ ಸೇರ್ಪಡೆಯಾಗುವ ಮೊದಲು ಶಶಿಕಲಾ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕೆಂಬ ಬೇಡಿಕೆಯನ್ನು ಇರಿಸಿದ್ದರು.

    ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕಣದಲ್ಲಿ ದೋಷಿಯಾಗಿರುವ ಶಶಿಕಲಾ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.