Tag: TamilNadu Water

  • ತಮಿಳುನಾಡಿಗೆ ನಿರಂತರ ಕಾವೇರಿ ನೀರು – KRS ನೀರಿನ ಮಟ್ಟ 100 ಅಡಿಗೆ ಕುಸಿತ

    ತಮಿಳುನಾಡಿಗೆ ನಿರಂತರ ಕಾವೇರಿ ನೀರು – KRS ನೀರಿನ ಮಟ್ಟ 100 ಅಡಿಗೆ ಕುಸಿತ

    ಮಂಡ್ಯ/ಬೆಂಗಳೂರು: ರಾಜ್ಯದಲ್ಲಿ ಮಳೆಯ (Rain) ಕೊರತೆಯಾಗಿದೆ. ಆದರೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನ ಕರ್ನಾಟಕ ಚಾಚೂತಪ್ಪದೇ ಪಾಲನೆ ಮಾಡುತ್ತಿದೆ.

    ಕಳೆದ ಮೂರು ದಿನಗಳಿಂದ ನಿತ್ಯ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಯುತ್ತಿದೆ. ಪರಿಣಾಮ ಕೆಆರ್‌ಎಸ್ ಜಲಾಶಯದಲ್ಲಿ (KRS Dam) ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಕುಸಿಯುತ್ತಿದ್ದು, 100 ಅಡಿಗೆ ಬಂದು ನಿಂತಿದೆ. ಇದು ಹಳೇ ಮೈಸೂರು (Old Mysuru) ಭಾಗದ ಜನತೆಯ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮಂಡ್ಯಗೆ ಬರಾಕ್‌ ಒಬಾಮಾ, ದಲೈಲಾಮಾ ಭೇಟಿ – ಹೆಲಿಪ್ಯಾಡ್‌, ಮೂಲಸೌಕರ್ಯಕ್ಕೆ ಸಿಎಂಗೆ ಮನವಿ

    ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಬೆಳೆಗಳಿಗೆ ಮಾತ್ರವಲ್ಲ. ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಮಂದಿಗೆ ಕುಡಿಯುವ ನೀರಿಗೂ ಸಮಸ್ಯೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.  ಇದನ್ನೂ ಓದಿ: ಭಾರತೀಯರು ಎಲ್ಲಿ ಬೇಕಾದ್ರೂ ಜಯಿಸ್ತಾರೆ ಅನ್ನೋದಕ್ಕೆ ನೀವು ಮಾದರಿ – ಪ್ರಜ್ಞಾನಂದ ಕುಟುಂಬ ಭೇಟಿ ಮಾಡಿದ ಮೋದಿ

    KRS ಡ್ಯಾಂ ನ ಇಂದಿನ ನೀರಿನ ಮಟ್ಟ
    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 100.96 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ – 23.571 ಟಿಎಂಸಿ
    ಒಳ ಹರಿವು – 1,610 ಕ್ಯೂಸೆಕ್
    ಹೊರ ಹರಿವು – 7,329 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • CT ರವಿ ಸೋಲಿನಿಂದ ಇನ್ನೂ ಹೊರಬಂದಿಲ್ಲ, ಅದಕ್ಕೆ ಆರೋಪ ಮಾಡ್ತಿದ್ದಾರೆ: ಎಂ.ಬಿ ಪಾಟೀಲ್

    CT ರವಿ ಸೋಲಿನಿಂದ ಇನ್ನೂ ಹೊರಬಂದಿಲ್ಲ, ಅದಕ್ಕೆ ಆರೋಪ ಮಾಡ್ತಿದ್ದಾರೆ: ಎಂ.ಬಿ ಪಾಟೀಲ್

    ವಿಜಯಪುರ: ಪಾಪ ಸಿ.ಟಿ ರವಿ (CT Ravi) ಸೋತಿದ್ದಾರೆ, ಅದಕ್ಕೆ ಏನ್ ಮಾಡೋಕೆ ಆಗುತ್ತೆ? ಇನ್ನೂ ಅವರು ಸೋಲಿನಿಂದ ಹೊರಗೆ ಬಂದಿಲ್ಲ. ಅದಕ್ಕಾಗಿ ಕೈ ಶಾಸಕರು (Congress MLA) ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಅಂತಾ ಆರೋಪ ಮಾಡ್ತಿದ್ದಾರೆ. ಅವರು ನನ್ನ ಆತ್ಮೀಯ ಸ್ಮೇಹಿತರು ಸೋತಿರುವ ಮತ್ತು ಅಧಿಕಾರ ಕಳೆದುಕೊಂಡ ಮೇಲೆ ಕೆಲವರು ಅದನ್ನು ಹೇಳಲೇಬೇಕಾಗುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ ಎನ್ನುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಹೇಳಿಕೆಗೆ ಪ್ರತಿಕ್ರಿಯಿಸಿ, 136 ಸೀಟ್ ಕೊಟ್ಟು ನಮ್ಮನ್ನ ಅಧಿಕಾರಕ್ಕೆ ತಂದಿದ್ದು ಈ ರಾಜ್ಯದ ಜನತೆ. ಯಾವುದೇ ಸರ್ಕಾರ ಇರೋದು ಬಿಡೋದು ಜನತೆ ಮೇಲಿರುತ್ತದೆ. ಯಾರೋ ಒಬ್ಬರು ಹೇಳಿಕೆ ಕೊಟ್ಟರೆ ಅದು ಸರ್ಕಾರದ ಮೇಲೆ ಪರಿಣಾಮ ಬಿರೋದಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ – ಶಾಸಕ ಯತ್ನಾಳ್ ಭವಿಷ್ಯ

    ವಿಜಯಪುರ ಮಹಾನಗರ ಪಾಲಿಕೆಗೆ ಆಯುಕ್ತರ ನೇಮಕ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಗೌರವಾನ್ವಿತ ಶಾಸಕರಿಗೆ (ಯತ್ನಾಳ್) ಹೇಳ್ತೆನೆ, ಮಹಾನಗರ ಪಾಲಿಕೆ ಅಧಿಕಾರಿಗಳು ಲೋವರ್ ಕೆಟಗೆರಿ ಅವರನ್ನು ನೇಮಿಸಿದ್ದಾರೆ ಎಂದು ಆರೋಪಿಸ್ತಾರೆ. ಶಾಸಕರು ಸ್ವಲ್ಪ ಹಿಂದೆ ಹೋಗಿ ನೆನಪು ಮಾಡಿಕೊಳ್ಳಲಿ. ಈ ಹಿಂದೆ ವಿಜಯಕುಮಾರ ಮೆಕ್ಕಳಕಿ ಅವರನ್ನ ಮುಂದುವರಿಸಬೇಕು ಎಂದು ಸಿಎಂಗೆ ಪತ್ರ ಕೊಟ್ಟಿದ್ದರು ಅವರೇ. ಅವರು ಯಾವ ಕೆಡರ್‌ನವರು ಇಬ್ರೂ ಸೇಮ್ ಕೆಡರ್‌ನವರೇ ಇದ್ದಾರೆ. ಮೊದಲು ಅದನ್ನ ನೋಡಿಕೊಳ್ಳಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಹೆಸ್ಕಾಂ ಗುತ್ತಿಗೆ ನೌಕರ ಸಾವು

    ಇನ್ನೂ ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ಸುಪ್ರೀಂ ಮೊರೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ನೀರಾವರಿ ಸಚಿವರಾಗಿದ್ದೆ. ಯಾವಾಗ ಸಂಕಷ್ಟ ಬರುತ್ತೆ, ಡಿಸ್ಟೆನ್ಸ್ ಫಾರ್ಮುಲಾ ಅಂತಾರೆ. ನಮ್ಮಲ್ಲಿ ನೀರು ಇದ್ದಾಗ ನೀರು ಹಂಚಿಕೊಳ್ತೀವಿ. ಮಳೆ ಕಡಿಮೆ ಆಗಿದೆ, ಡಿಸ್ಟೆನ್ಸ್ ಹಂಚಿಕೊಳ್ಳಬೇಕಾಗುತ್ತೆ. ನನಗೆ ಒಂದು ಮಾಹಿತಿ ಬಂದಿದೆ. ಸಿಎಂ, ಡಿಸಿಎಂ ಜೊತೆಗೆ ಮಾತನಾಡ್ತೀನಿ. ತಮಿಳುನಾಡಿನಲ್ಲಿ ಯಾವ ಯಾವ ಡ್ಯಾಂಗಳಲ್ಲಿ ಎಷ್ಟೆಷ್ಟು ನೀರು ಇದೆ ಅನ್ನೋದರ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ. ಎಲ್ಲವನ್ನು ಪರಿಶೀಲಿಸಿ ಮುಂದಿನ ಹೆಜ್ಜೆ ಇಡುತ್ತೇವೆ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]