Tag: tamilndu

  • ಆ್ಯಸಿಡ್ ಎರಚಿದ ಕಿರಾತಕನಿಗೆ ಲುಕ್‍ಔಟ್ ನೊಟೀಸ್ ಜಾರಿ

    ಆ್ಯಸಿಡ್ ಎರಚಿದ ಕಿರಾತಕನಿಗೆ ಲುಕ್‍ಔಟ್ ನೊಟೀಸ್ ಜಾರಿ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಯುವತಿಗೆ ಆ್ಯಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಲೆಮರೆಸಿಕೊಂಡಿದ್ದು, ಇನ್ನೂ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಲುಕ್‍ಔಟ್ ನೊಟೀಸ್ ಜಾರಿ ಮಾಡಿದ್ದಾರೆ.

    ಎಲ್ಲಾ ರಾಜ್ಯಗಳಿಗೆ ಹಾಗೂ ಎಲ್ಲಾ ಭಾಷೆಗಳಲ್ಲೂ ಲುಕ್ ಔಟ್ ನೊಟೀಸ್ ಜಾರಿ ಮಾಡಿರುವ ಪೊಲೀಸರು, ಏರ್ ಪೋರ್ಟ್, ರೈಲ್ವೇ ನಿಲ್ದಾಣಗಳಿಗೂ ರವಾನೆ ಮಾಡಿದ್ದಾರೆ. ಸದ್ಯ ಆಶ್ರಮ, ಧ್ಯಾನಮಂದಿರಗಳಲ್ಲಿ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ದಾಳಿಗೆ ತುತ್ತಾದ ಯುವತಿಯ ಚಿಕಿತ್ಸೆಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ ಮುರುಗೇಶ್ ನಿರಾಣಿ

    ನಾಗೇಶ್ ತಮಿಳುನಾಡಿನಲ್ಲಿ ಅವಿತಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಇದ್ದಾನೆ ಅನ್ನೋ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, ತಮಿಳುನಾಡಿನ ದೇಗುಲಗಳಲ್ಲಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

  • ಕನ್ನಡದ ಕಲಾವಿದೆಗೆ ಯಾಕೆ ತೊಂದರೆ ನೀಡ್ತೀರಿ: ಲೀಲಾವತಿ ಪರ ಬರೆದಿದ್ದ ಕರುಣಾನಿಧಿ

    ಕನ್ನಡದ ಕಲಾವಿದೆಗೆ ಯಾಕೆ ತೊಂದರೆ ನೀಡ್ತೀರಿ: ಲೀಲಾವತಿ ಪರ ಬರೆದಿದ್ದ ಕರುಣಾನಿಧಿ

    ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ನಾಯಕ ಕರುಣಾನಿಧಿ ಅವರು ಒಳ್ಳೆಯ ಸಾಹಿತಿ. ಮಾತ್ರವಲ್ಲದೆ ಸಕಲಕಲಾವಲ್ಲಭರಾಗಿದ್ದರು. ಎಲ್ಲಾ ಕಲೆಯಲ್ಲಿಯೂ ಅವರಿದ್ದರು. ಸಾಧ್ಯವಾಗಲ್ಲ ಅನ್ನೋ ವಿಷಯಗಳೇ ಅವರಿಗೆ ಇರಲಿಲ್ಲ ಅಂತ ಹಿರಿಯ ನಟಿ ಲೀಲಾವತಿ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, 60 ವರ್ಷ ತಮಿಳುನಾಡಿನಲ್ಲಿ ತೋಟ ಮಾಡಿಕೊಂಡಿದ್ದೆ. ನಾನು ಮಾತ್ರವಲ್ಲ ಎನ್ ಟಿ ರಾಮ್ ರಾವ್, ಚಿರಂಜಿವಿ ಹೀಗೆ ಎಲ್ಲ ಶ್ರೇಷ್ಠ ನಟರು ಅಲ್ಲೇ ಇದ್ದು ಬಂದವರು. ಇಲ್ಲಿ ನಮ್ಮ ಮೇಲೆ ಶೂಟೌಟ್ ಆಗಿದ್ದಾಗ ಅಲ್ಲಿನ ಪೇಪರ್ ನಲ್ಲಿ ಹಾಕಿದ್ದರು. ಪಾಪ ಕನ್ನಡದ ಕಲಾವಿದೆ ಲೀಲಾವತಿಗೆ ಅವರಿಗೆ ಯಾಕೆ ಅಲ್ಲಿ ತೊಂದರೆ ಮಾಡುತ್ತಿದ್ದಾರೆ ಅಂತ ಬರೆದಿದ್ದರಂತೆ. ಈ ಬಗ್ಗೆ ನಾನು ನೋಡಿಲ್ಲ. ಕೆಲ ಜನರು ಬಂದು ನನಗೆ ಹೇಳಿದ್ದರು ಎಂದು ತಿಳಿಸಿದರು.

    ಜನರನ್ನು ಆಕರ್ಷಣೆ ಮಾಡುವ ಶಕ್ತಿ ಕರುಣಾನಿಧಿ ಅವರಲ್ಲಿತ್ತು. ಥಳ್ಳುವ ಗಾಡಿಯೊಂದಿಗೆ ಬಂದಾದ್ರೂ ಅವರು ಜನಗಳ ಜೊತೆಯೇ ಇರುತ್ತಿದ್ದರು. ಎಷ್ಟೋ ಜನರು ಸತ್ತಾಗ ಅವರ ಜೊತೆಗೆ ನಾನು ಸತ್ತು ಸತ್ತು ಹೋಗುತ್ತಿದ್ದೆ. ಆದ್ರೆ ಕರುಣಾನಿಧಿ ಅವರನ್ನು ನೋಡಿದಾಗ ನಾನು ಬದುಕಬೇಕು ಅನ್ನೋ ಆಸೆ ಹುಟ್ಟಿದೆ.

    ಎಷ್ಟೇ ಕಷ್ಟ ಆದ್ರೂ ಚಕ್ರದ ಗಾಡಿಯಲ್ಲಿ ಬಂದು ಜನರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದರು. ಕೈ ಎತ್ತಕ್ಕೆ ಆಗದಿದ್ದರೂ ಕಷ್ಟು ಪಟ್ಟಾದ್ರೂ ಕೈ ಎತ್ತಿ ಜನರಿಗೆ ಧನ್ಯವಾದ ತಿಳಿಸುತ್ತಿದ್ದರು ಅಂತ ಕಣ್ಣೀರು ಸುರಿಸಿದ್ರು.

    https://www.youtube.com/watch?v=XBSxkFb20h4

  • ಕೆಜಿಎಫ್ ನಲ್ಲಿ ಕರುಣಾನಿಧಿ ಫೋಟೋಗೆ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ

    ಕೆಜಿಎಫ್ ನಲ್ಲಿ ಕರುಣಾನಿಧಿ ಫೋಟೋಗೆ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ

    ಕೋಲಾರ: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಅಧ್ಯಕ್ಷ ಕರುಣಾನಿಧಿ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಜಿಎಫ್ ನಲ್ಲಿ ಕರುಣಾನಿಧಿ ಫೋಟೋಗೆ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

    ಕೆಜಿಎಫ್ ನಗರದ ಗಾಂಧಿ ವೃತ್ತದಲ್ಲಿ ಕರುಣಾನಿಧಿ ಅಭಿಮಾನಿಗಳು ಹಾಗೂ ಡಿಎಂಕೆ ಕಾರ್ಯಕರ್ತರು ಈ ರೀತಿ ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ. ಈ ಕಾರ್ಯಕ್ರಮದ ಬಳಿಕ 10ಕ್ಕೂ ಹೆಚ್ಚು ಜನ ಅಭಿಮಾನಿಗಳು ಚೆನ್ನೈಗೆ ತೆರಳಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತಮಿಳುನಾಡು ಗಡಿ ಜಿಲ್ಲೆ ರಾಜ್ಯದಲ್ಲೂ ಖಾಕಿ ಕಟ್ಟೆಚ್ಚರ ವಹಿಸಿದೆ.

    ಆಸ್ಪತ್ರೆಯಲ್ಲಿಯೇ ನಿಧನ:
    ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಅವರು ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೇ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ವಿಧಿವಶರಾದ್ರು.

    ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ರಾತ್ರಿ 9.30ರ ಸುಮಾರಿಗೆ ಕಾವೇರಿ ಆಸ್ಪತ್ರೆಯಿಂದ ಗೋಪಾಲಪುರಂ ನಿವಾಸಕ್ಕೆ ಕೊಂಡೊಯ್ದು ಅಂತಿಮ ದರ್ಶನಕ್ಕಿಡಲಾಗಿತ್ತು. ಈ ವೇಳೆ ನಟ ರಜಿನಿಕಾಂತ್, ಪಶ್ಚಿಮಗಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು. ಬಳಿಕ ಮಧ್ಯರಾತ್ರಿ 1.30 ರ ಸುಮಾರಿಗೆ ಸಿಐಟಿ ಕಾಲೋನಿಯಲ್ಲಿರುವ ಪುತ್ರಿ ಕನಿಮೋಳಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯ್ತು. ನಸುಕಿನ ಜಾವ 5.30ರ ನಂತರ ರಾಜಾಜಿ ಹಾಲ್‍ನಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗಿದ್ದು, ಸಾಗರೋಪಾದಿಯಲ್ಲಿ ಜನ ಹರಿದು ಬರ್ತಿದ್ದಾರೆ.

    ಐದು ಬಾರಿ ಮುಖ್ಯಮಂತ್ರಿ:
    ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್ ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈ ನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ನ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • 4 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಿ: ಕರ್ನಾಟಕಕ್ಕೆ ಸುಪ್ರೀಂ ಖಡಕ್ ಸೂಚನೆ

    4 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಿ: ಕರ್ನಾಟಕಕ್ಕೆ ಸುಪ್ರೀಂ ಖಡಕ್ ಸೂಚನೆ

    ನವದೆಹಲಿ: ತಮಿಳುನಾಡಿಗೆ ಏಪ್ರಿಲ್ ಮತ್ತು ಮೇ ತಿಂಗಳ ನೀರನ್ನು ಬಿಡುಗಡೆ ಮಾಡಿ ಎಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ.

    ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧ ಸ್ಕೀಂ ರೂಪಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು. ಇಂದು ವಿಚಾರಣೆ ನಡೆಸಿದ ಕೋರ್ಟ್ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತಮಿಳುನಾಡಿಗೆ ಬಿಡಬೇಕಾಗಿದ್ದ 4 ಟಿಎಂಸಿ ನೀರನ್ನು ಬಿಡುಗಡೆ ಮಾಡಿ ಎಂದು ಆದೇಶಿಸಿದೆ.

    ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಸ್ಕೀಂ ಹೇಗಿರಬೇಕು ಎನ್ನುವ ಬಗ್ಗೆ ಕರಡು ಈಗಾಗಲೇ ತಯಾರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರು ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ಸಕ್ರೀಯರಾಗಿದ್ದರಾರೆ. ಸ್ಕೀಂಗೆ ಕ್ಯಾಬಿನೆಟ್ ಒಪ್ಪಿಗೆ ಸಿಕ್ಕಿಲ್ಲ ಎಂದು ತಿಳಿಸಿದರು. ಈ ವೇಳೆ ಎಜೆ ವಾದವನ್ನು ಆಕ್ಷೇಪಿಸಿದ ಕೋರ್ಟ್ ಮುಂದಿನ 10 ದಿನದ ಒಳಗಡೆ ಕಾವೇರಿ ಸ್ಕೀಂ ಕರಡನ್ನು ಕೋರ್ಟ್ ಗೆ ಸಲ್ಲಿಸಬೇಕು ಎಂದು ಕೇಂದ್ರಕ್ಕೆ ಸೂಚಿಸಿತು.

    ಇದೂವರೆಗೆ ತಮಿಳುನಾಡಿಗೆ ಹರಿಸಿದ ನೀರಿನ ಪ್ರಮಾಣ, ಅಣೆಕಟ್ಟುಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣದ ಮಾಹಿತಿಯನ್ನು ಸಲ್ಲಿಸಿ ಎಂದು ಕೋರ್ಟ್ ಕರ್ನಾಟಕಕ್ಕೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಮೆ 8 ಮಂಗಳವಾರಕ್ಕೆ ಮುಂದೂಡಿತು.

    ಅಂತಿಮ ಐತೀರ್ಪು ಪ್ರಕಾರ ಯಾರಿಗೆ ಎಷ್ಟು ನೀರು?
    ನ್ಯಾ. ಎನ್.ಪಿ.ಸಿಂಗ್, ನ್ಯಾ. ಸುಧೀರ್ ನಾರಿಯನ್, ನ್ಯಾ. ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪು ನೀಡಿತ್ತು. ಈ ತೀರ್ಪಿನ ಅನ್ವಯ ಜೂನ್ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಸೇರಿ ಒಟ್ಟು 192 ಟಿಎಂಸಿ ನೀರನ್ನು ಕನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕು ಎಂದು ಆದೇಶಿಸಿತ್ತು.

    ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು Cubic feet per Second ಜನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

  • ಮನೆಗೆ ನಡೆದುಕೊಂಡು ಹೋಗ್ತಿದ್ದ ಐಟಿಐ ವಿದ್ಯಾರ್ಥಿಯ ಬರ್ಬರ ಹತ್ಯೆ!

    ಮನೆಗೆ ನಡೆದುಕೊಂಡು ಹೋಗ್ತಿದ್ದ ಐಟಿಐ ವಿದ್ಯಾರ್ಥಿಯ ಬರ್ಬರ ಹತ್ಯೆ!

    ಚೆನ್ನೈ: ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು 18 ವರ್ಷದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆಗೈದ ಭಯಾನಕ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಈ ಘಟನೆ ನುಂಗಂಬಕ್ಕಮ್‍ನ ಟ್ಯಾಂಕ್ ಬಂಕ್ ರೋಡಿನಲ್ಲಿ ನಡೆದಿದ್ದು, ಮೃತ ದುರ್ದೈವಿ ಯುವಕನನ್ನು ರಂಜಿತ್ ಎಂದು ಗುರುತಿಸಲಾಗಿದೆ. ಈತ ನಗರದ ಅಪ್ಪು ಸ್ಟ್ರೀಟ್ ನಿವಾಸಿಯಾಗಿದ್ದಾನೆ. ಹತ್ಯೆಯಾದ ಸ್ಥಳದಲ್ಲಿ ಮೃತನ ಐಡಿ ಕಾರ್ಡ್ ದೊರೆತಿದ್ದು, ಅದರಲ್ಲಿ ಆತ ಗಿಂಡಿ ಇಂಡಸ್ಟ್ರಿಯಲ್ ಎಸ್ಟೇಟ್ ಕ್ಯಾಂಪಸ್‍ನಲ್ಲಿನ ಐಟಿಐ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಎಂಬುದಾಗಿ ತಿಳಿದುಬಂದಿದೆ.

    ಏನಿದು ಘಟನೆ?: ಶುಕ್ರವಾರ ಸಂಜೆ 7.30ರ ಸುಮಾರಿಗೆ ಮನೆಗೆ ಕರೆ ಮಾಡಿದ ರಂಜಿತ್, ಅಮ್ಮ ಚೆನ್ನೈ ಬೀಚ್ ಬಳಿ ರೈಲು ಹತ್ತಿದ್ದಾರೆ. ಅವರು ಬೇಗ ಬರುತ್ತಾರೆ. ಆದ್ರೆ ನಾನು ಬರೋದು ಸ್ವಲ್ಪ ತಡವಾಗುತ್ತದೆ ಅಂತ ತಿಳಿಸಿದ್ದಾನೆ. ಆದ್ರೆ ಆ ಬಳಿಕ 12.45ರ ಸುಮಾರಿಗೆ ಮಂಗಲ್ ನಗರ ನಿವಾಸಿ ಶೇಕ್ ಮೊಹಮ್ಮದ್ ಎಂಬವರು ರಂಜಿತ್ ಮನೆಗೆ ಕರೆ ಮಾಡಿ ಆತ ಸಾವನ್ನಪ್ಪಿರುವ ವಿಚಾರ ತಿಳಿಸುತ್ತಾರೆ.

    ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಯುವಕ ತನ್ನ ಕತ್ತು ಹಿಡಿದು ಓಡುತ್ತಿರುವುದು ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ತೀವ್ರ ಹಲ್ಲೆಗೊಳಗಾಗಿದ್ದ ರಂಜಿತ್ ತನ್ನ ಕುತ್ತಿಗೆಯಲ್ಲಿ ರಕ್ತ ಹರಿಯುತ್ತಿದ್ದಂತೆಯೆ ದುಷ್ಕರ್ಮಿಗಳ ಕೈಯಿಂದ ತಪ್ಪಿಸಿಕೊಂಡು ಸುಮಾರು 50 ಮೀಟರ್ ದೂರ ಓಡಿದ್ದಾನೆ. ಕೆಲ ದೂರ ಓಡಿದ ನಂತ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದಾನೆ. ಅಲ್ಲದೇ ಎರಡು ಬೈಕ್ ಗಳಲ್ಲಿ ನಾಲ್ವರು ದುಷ್ಕರ್ಮಿಗಳು ಆತನನ್ನು ಫಾಲೋ ಮಾಡುವುದು ದೃಶ್ಯದಲ್ಲಿ ಕಾಣುತ್ತದೆ. ಆ ನಾಲ್ವರೇ ರಂಜಿತ್ ನನ್ನು ಹತ್ಯೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

    ಇತ್ತ ರಕ್ತದ ಮಡುವಿನಲ್ಲಿ ಬಿದ್ದಿದ್ದ ರಂಜಿತ್ ನನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಯುವಕನ್ನು ಸ್ಥಳೀಯ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಅದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂಬುದಾಗಿ ವರದಿಯಾಗಿದೆ.

    ರಂಜಿತ್ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವಾಗಿಂದಲೇ ದುಷ್ಕರ್ಮಿಗಳು ಫಾಲೋ ಮಾಡಿದ್ದಾರೆ. ಬಳಿಕ ಆತ ನುಂಗಂಬಕ್ಕಮ್ ರೈಲ್ವೇ ಸ್ಟೇಷ್ ನಲ್ಲಿ ಇಳಿದು ನಡೆದುಕೊಂಡು ಹೋಗುತ್ತಿರುವಾಗ ಬೈಕ್ ನಲ್ಲಿ ಫಾಲೋ ಮಾಡಿ ಈ ಕೃತ್ಯ ಎಸಗಿರಬಹುದು ಎಂದು ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಪ್ರೀತಿ ಪ್ರೇಮದ ವಿಚಾರವಾಗಿ ಅಥವಾ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಂಡ ಈ ಕೃತ್ಯ ಎಸಗಿರಬಹುದೆಂದು ಮತ್ತೊಬ್ಬ ಅಧಿಕಾರಿ ಶಂಕಿಸಿದ್ದಾರೆ. ಒಟ್ಟಿನಲ್ಲಿ ಪ್ರಕರಣದ ಜಾಡು ಹಿಡಿದ ಪೊಲೀಸರು ರಂಜಿತ್ ಗೆ ಯಾವುದಾದರೂ ಜೀವ ಬೆದರಿಕೆಗಳು ಬಂದಿವೆಯೇ ಎಂದು ಆತನ ಗೆಳೆಯರನ್ನು ವಿಚಾರಣೆ ಮಾಡುತ್ತಿದ್ದಾರೆ.

    ಸದ್ಯ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು, ಸಿಸಿಟಿವಿ ದೃಶ್ಯವನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೇ ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

  • ಅಭಿಮಾನಿಗಳೆದುರು ತಲೈವಾ ರಾಜಕೀಯ ಪ್ರವೇಶ ಘೋಷಣೆ- ಬಾಬಾ ಮುದ್ರೆ ಪ್ರದರ್ಶಿಸಿ ಭಗವದ್ಗೀತೆ ಪಠಣ

    ಅಭಿಮಾನಿಗಳೆದುರು ತಲೈವಾ ರಾಜಕೀಯ ಪ್ರವೇಶ ಘೋಷಣೆ- ಬಾಬಾ ಮುದ್ರೆ ಪ್ರದರ್ಶಿಸಿ ಭಗವದ್ಗೀತೆ ಪಠಣ

    ಚೆನ್ನೈ: ತಮಿಳುನಾಡಿನಲ್ಲಿ ರಜಿನಿ ಯುಗಾರಂಭವಾಗಿದೆ. ರಾಜಕೀಯ ಪ್ರವೇಶದ ಬಗ್ಗೆ ತಲೈವಾ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

    ಚೆನ್ನೈನ ರಾಘವೇಂದ್ರ ಹಾಲ್‍ನಲ್ಲಿ ನಡೆದ ಅಭಿಮಾನಿಗಳ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಜನಿಕಾಂತ್, ಸ್ವಂತ ಪಕ್ಷ ಸ್ಥಾಪಿಸುತ್ತಿರುವುದಾಗಿ ಘೋಷಿಸಿದ್ರು. ಬಾಬಾನ ಮುದ್ರೆ ಪ್ರದರ್ಶಿಸಿ, ಭಗವದ್ಗೀತೆಯ ಶ್ಲೋಕ ಪಠಿಸಿದ್ರು. ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಬೇಕಾಗಿರುವ ಕಾರಣ, ತಮಿಳರಿಗಾಗಿ ನನ್ನ ಹೋರಾಟ ಮುಂದುವರೆಸುವುದಾಗಿ ಹೇಳಿದ್ರು.

    ಪಕ್ಷದ ಹೆಸರನ್ನ ಲೋಕಸಭಾ ಚುನಾವಣೆ ಹೊತ್ತಲ್ಲಿ ಬಹಿರಂಗಗೊಳಿಸುತ್ತೇನೆ. ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಲ್ಲೂ ತಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡುವುದಾಗಿ ತಿಳಿಸಿರುವ ರಜನಿ, ನಿಮ್ಮೆಲ್ಲರ ಸಹಕಾರ ನನಗೆ ಅಗತ್ಯವಾಗಿ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ನಮ್ಮ ಜನರೇ ನಮ್ಮ ಶಕ್ತಿ. ಸರ್ಕಾರ ರಚನೆ ಅಷ್ಟು ಸುಲಭವಲ್ಲ. ಕಳೆದ ಒಂದು ವರ್ಷದಿಂದ ತಮಿಳುನಾಡು ಜನ ರೋಸಿ ಹೋಗಿದ್ದಾರೆ. ನಿಮ್ಮೆಲ್ಲರ ಆಶಿರ್ವಾದ ಇದ್ದರೆ ಉತ್ತಮ ಆಡಳಿತ ನಡೆಸುತ್ತೇನೆ ಅಂದ್ರು.

    ತಲೈವಾ ರಾಜಕೀಯ ಪ್ರವೇಶ ಘೋಷಿಸುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಈ ಸಂಭ್ರಮಾಚರಣೆ ವೇಳೆ ರಜಿನಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದ ಘಟನೆಯೂ ನಡೆದಿದೆ.

    https://www.youtube.com/watch?v=0PzGj6rn8yc

    https://www.youtube.com/watch?v=8PQP7EkcPPk

  • ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೊಲೆ ಆರೋಪಿಯೇ ಬರ್ಬರವಾಗಿ ಹತ್ಯೆಯಾದ!

    ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೊಲೆ ಆರೋಪಿಯೇ ಬರ್ಬರವಾಗಿ ಹತ್ಯೆಯಾದ!

    ಚೆನ್ನೈ: ಇಲ್ಲಿನ ವಾಡಿಪಟ್ಟಿ ಬಳಿಯ ತನಿಚಿಯಂನಲ್ಲಿ ದಿಂಡಿಗುಲ್- ಮಧುರೈ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ಸಿನೊಳಗೆಯೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

    ಈ ಘಟನೆ ಶುಕ್ರವಾರ ಮಧ್ಯಾಹ್ನ ಸುಮಾರು 2.15ರ ಸುಮಾರಿಗೆ ನಡೆದಿದೆ. ಮೃತನನ್ನು ಆರ್ ಅಮರ್ ಸೇನ್(22) ಎಂದು ಗರುತಿಸಲಾಗಿದೆ. 6 ವರ್ಷಗಳ ಹಿಂದೆ ನಡೆದ ಕೊಲೆಯೊಂದರ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ಕೃತ್ಯ ಎಸಗಲಾಗಿದೆ ಅಂತ ವಿರುದುವಾಘ್‍ನಗರ್ ಎಸ್‍ಪಿ ಎಂ ರಾಜರಾಜನ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಕರಿಮೆದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ನಡೆದ ರಾಮ್ ಪ್ರಸಾದ್ ಕೊಲೆ ಪ್ರಕರಣದಲ್ಲಿ ಅಮರ್ ಮೂರನೇ ಆರೋಪಿಯಾಗಿದ್ದ. ಅಮರ್ ಕೊಲೆಯ ಹಿಂದೆ ರಾಮ್ ಪ್ರಸಾದ್ ಸಂಬಂಧಿಕರು ಹಾಗೂ ಗೆಳೆಯರ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

     

    ದಿಂಡಿಗುಲ್ ಜಿಲ್ಲೆಯ ಬಟ್ಲಗುಂಡುವಿನಿಂದ ಅರಪಾಳಯಂ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ ನಲ್ಲಿ ಅಮರ್ ಸಂಚರಿಸುತ್ತಿದ್ದ. ಈ ವೇಳೆ ಬಸ್ ತನಿಚಿಯಂ ಬಳಿ ಹೋಗುತ್ತಿದ್ದಾಗ, ಚತುಷ್ಪಥ ಹೆದ್ದಾರಿಯಲ್ಲಿ ಕಾರ್ ಮತ್ತು 2 ಬೈಕ್ ನಲ್ಲಿ ಬಂದ 10 ಜನರ ತಂಡ ಬಸ್ಸನ್ನು ಅಡ್ಡಹಾಕಿತ್ತು. ನೋಡನೋಡುತ್ತಿದ್ದಂತೆಯೇ 10 ಮಂದಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಸ್ಸಿನೊಳಗೆ ನುಗ್ಗಿ ಮುಂಬದಿ ಸೀಟಲ್ಲಿ ಕುಳಿತಿದ್ದ ಅಮರ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಅಮರ್ ರಕ್ತದ ಮಡುವಿನಲ್ಲಿ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಬಸ್ ನಿಂದ ಇಳಿದು ತಮ್ಮ ವಾಹನದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ.

    ಸದ್ಯ ಘಟನೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ 3 ವಿಶೇಷ ತನಿಖಾ ತಂಡಗಳನ್ನ ರಚಿಸಲಾಗಿದೆ ಎಂದು ಎಸ್‍ಪಿ ಹೇಳಿದ್ದಾರೆ.