Tag: tamtam

  • ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ – ಟಂಟಂ ಚಾಲಕ ಅರೆಸ್ಟ್

    ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ – ಟಂಟಂ ಚಾಲಕ ಅರೆಸ್ಟ್

    – ಮಗುವನ್ನು ಹಿಡ್ಕೊಂಡು ಹೊಲದ ಕಡೆ ಓಡೋದ ಚಾಲಕ

    ರಾಯಚೂರು: ಸಹಾಯ ಕೇಳಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ಮೇಲೆ ಚಾಲಕ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸರ್ಜಾಪುರ ಬಳಿ ಘಟನೆ.

    ಟಂಟಂ ವಾಹನ ಚಾಲಕ ಬಾಗಲಕೋಟೆ ಮೂಲದ ಶಂಕರಪ್ಪ ಮುಳಗುಂದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಾನೆ. ಮೂರು ವರ್ಷದ ಮಗುವನ್ನ ಆಸ್ಪತ್ರೆಗೆ ತೋರಿಸಲು ಲಿಂಗಸುಗೂರಿಗೆ ತೆರಳುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಯತ್ನ ನಡೆದಿದೆ.

    ಮಾರ್ಗ ಮಧ್ಯೆ ಮೂತ್ರ ವಿಸರ್ಜನೆ ನೆಪದಲ್ಲಿ ವಾಹನ ನಿಲ್ಲಿಸಿ ಮಹಿಳೆ ಜೊತೆಗಿದ್ದ ಮಗುವನ್ನು ಕಸಿದುಕೊಂಡು ಜೋಳದ ಹೊಲದತ್ತ ಚಾಲಕ ಓಡಿದ್ದಾನೆ. ಮಗುವನ್ನು ಆತನಿಂದ ಬಿಡಿಸಿಕೊಳ್ಳಲು ತೆರಳಿದಾಗ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಅಂತ ಮಹಿಳೆ ಆರೋಪಿಸಿದ್ದಾಳೆ.

    ರಸ್ತೆಯಲ್ಲಿ ತೆರಳುತ್ತಿದ್ದ ಜನ ಕೂಗಾಟದ ಶಬ್ದ ಕೇಳಿ ಮಹಿಳೆಯನ್ನ ರಕ್ಷಣೆ ಮಾಡಿದ್ದಾರೆ. ತಪ್ಪಿಸಿಕೊಂಡು ಹೋಗುತ್ತಿದ್ದ ಚಾಲಕನನ್ನ ವಾಹನ ಸಮೇತ ಹಿಡಿದು ಸಾರ್ವಜನಿಕರು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತಡ ರಾತ್ರಿ ಪ್ರಕರಣ ದಾಖಲಾಗಿದ್ದಕ್ಕೆ ಮಹಿಳೆ ಪೊಲೀಸರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

    ಆರೋಪಿ ಬಾಗಲಕೋಟೆಯ ಶಂಕರಪ್ಪ ಮುಳಗುಂದ ವಿರುದ್ಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

  • ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ಕ್ಷಣಾರ್ಧದಲ್ಲಿ ತಪ್ಪಿತು ಭಾರೀ ಅನಾಹುತ

    ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ಕ್ಷಣಾರ್ಧದಲ್ಲಿ ತಪ್ಪಿತು ಭಾರೀ ಅನಾಹುತ

    ಬಾಗಲಕೋಟೆ: ನಗರದ ಮುಚಖಂಡಿ ಕ್ರಾಸ್‍ನಲ್ಲಿ ಲಾರಿಯೊಂದು ಶಾಲಾ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸು ಟಂಟಂಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಇದ್ದ ಶಾಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಬೆಳಂಬೆಳಗ್ಗೆ ನಗರದ ವಿದ್ಯಾಗಿರಿಯ ಲಯನ್ಸ್ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳು ಇದ್ದ ಶಾಲಾ ಬಸ್ಸಿಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸು ಪಕ್ಕದಲ್ಲಿ ಚಲಿಸುತ್ತಿದ್ದ ಟಂಟಂಗೆ ಡಿಕ್ಕಿ ಹೊಡೆದಿದೆ. ತಕ್ಷಣ ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತದಿಂದ ವಿದ್ಯಾರ್ಥಿಗಳು ಪಾರಾಗಿದ್ದಾರೆ.

    ಘಟನಾ ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಸುರಕ್ಷಿತವಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಎಸ್.ಆರ್ ಪಾಟೀಲ್

    ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಎಸ್.ಆರ್ ಪಾಟೀಲ್

    – ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ

    ಬಾಗಲಕೋಟೆ: ಜಿಲ್ಲೆಯ ವಿದ್ಯಾಗಿರಿ ಬಳಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಶಾಲಾ ಮಕ್ಕಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್ ಪಾಟೀಲ್ ಭೇಟಿ ನೀಡಿ ಆರೋಗ್ಯಸ್ಥಿತಿ ವಿಚಾರಿಸಿದ್ದಾರೆ.

    ಮಕ್ಕಳ ಆರೋಗ್ಯ ಹಾಗೂ ಚಿಕಿತ್ಸೆಯ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಈ ಅಪಘಾತದಲ್ಲಿ ಗಾಯಗೊಂಡ ಮಕ್ಕಳು ಶೀಘ್ರ ಗುಣಮುಖರಾಗ್ಲೀ ಎಂದು ದೇವರಲ್ಲಿ ಪಾರ್ಥಿಸಿದ್ರು. ಇದೇ ವೇಳೆ ಎಸ್.ಆರ್. ಪಾಟೀಲ್ ಮಕ್ಕಳ ವೈದ್ಯಕೀಯ ಖರ್ಚಿಗಾಗಿ ವೈಯಕ್ತಿಕವಾಗಿ 2 ಲಕ್ಷ ರೂ ಸಹಾಯಧನ ನೀಡಿದ್ರು. 6 ಜನ ಮಕ್ಕಳ ಕುಟುಂಬಗಳಿಗೆ ಆರ್ಥಿಕ ಸಹಾಯ ಮಾಡಲು ಸಿಎಂಗೆ ಮನವಿ ಮಾಡೋದಾಗಿ ಭರವಸೆ ನೀಡಿದ್ರು. ಇದನ್ನೂ ಓದಿ: ಟಂಟಂ ಹಿಂಬದಿಗೆ ಬೊಲೆರೊ ಡಿಕ್ಕಿ – ವಿದ್ಯಾರ್ಥಿಯ ಕೈ ಕಟ್, 6 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

    ಇಂತಹ ಅಪಘಾತ ನಡೆಯದಂತೆ ಪೋಷಕರು ಹಾಗೂ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು. ಅಲ್ಲದೇ ಕರ್ತವ್ಯ ಪ್ರಜ್ಞೆ ಮರೆತು ವಾಹನ ಚಲಾಯಿಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.

    ವಿದ್ಯಾಗಿರಿ ಬಳಿ ಟಂಟಂ ಹಾಗೂ ಬೊಲೆರೋ ವಾಹನದ ಮಧ್ಯೆ ಮಂಗಳವಾರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಕೆರೂಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.