Tag: tanisha kuppanda

  • ಕೋಣ ಚಿತ್ರದ ಹೊಸ ಅವತಾರದಲ್ಲಿ ಕೋಮಲ್: ಟ್ರೇಲರ್‌  ರಿಲೀಸ್

    ಕೋಣ ಚಿತ್ರದ ಹೊಸ ಅವತಾರದಲ್ಲಿ ಕೋಮಲ್: ಟ್ರೇಲರ್‌ ರಿಲೀಸ್

    ಹಜಾಭಿನಯದ ಮೂಲಕ ಮನೆ ಮಾತಾಗಿರುವ ಕೋಮಲ್ ಕುಮಾರ್ (Komal) ಇದೀಗ ಕೋಣ (Kona) ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿಯಾಗುತ್ತಿದ್ದಾರೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದ್ದ ಕೋಣ ಚಿತ್ರದ ಟ್ರೇಲರ್ (Trailer) ಇದೀಗ ರಿಲೀಸ್ ಆಗಿದೆ. ಕಾಮಿಡಿ, ಆಕ್ಷನ್, ಸಸ್ಪೆನ್ಸ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಇಲ್ಲಿ ಕೋಮಲ್ ಹೊಸ ಅವತಾರದಲ್ಲಿ ಕಾಣಿಸುತ್ತಾರೆ.

    ನಿರ್ಮಾಣದಲ್ಲಿ ಕೈ ಜೋಡಿಸಿರುವ ತನಿಷಾ ಕುಪ್ಪಂಡ (Tanisha Kuppanda) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೀರ್ತಿರಾಜ್, ರಿತ್ವಿ ಜಗದೀಶ್, ನಮ್ರತಾ ಗೌಡ, ವಿನಯ್ ಗೌಡ, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ನಿರಂಜನ್, ಅನಂತ್, ಶಿಶಿರ್ ಶಾಸ್ತ್ರಿ, ಗೋಲ್ಡ್ ಸುರೇಶ್, ಸುಷ್ಮಿತ, ಜಗಪ್ಪ, ಮಂಜು ಪಾವಗಡ, ಕುರಿ ಸುನಿಲ್, ಮೋಹನ್ ಕೃಷ್ಣರಾಜ್ ಹೀಗೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.  ಇದನ್ನೂ ಓದಿ:  ಮೊದಲ ದಿನವೇ ಬುಕ್‌ಮೈಶೋದಲ್ಲಿ ದಾಖಲೆ ಬರೆದ ಕಾಂತಾರ

    ಡಾರ್ಕ್ ಕಾಮೆಡಿ ಶೈಲಿಯಲ್ಲಿ ‘ಕೋಣ’ ಸಿನಿಮಾ ಮೂಡಿಬರಲಿದೆ. ಜಗ್ಗೇಶ್ ನಟನೆಯ ‘8 MM’ ಸಿನಿಮಾಗೆ ನಿರ್ದೇಶನ ಮಾಡಿದ್ದ ಎಸ್. ಹರಿಕೃಷ್ಣ ಅವರು ಈ ಸಿನಿಮಾಗೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ನಾಗೇಶ್.ಎನ್ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಒಂದು ನೈಜ ಘಟನೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದ್ದು ತೆರೆಗೆ ಬರಲು ಸಿದ್ಧವಾಗಿದೆ. ಕೋಮಲ್ ಕುಮಾರ್ ಅವರು ಈವರೆಗೂ ಕಾಣಿಸಿಕೊಂಡಿರದ ಪಾತ್ರವನ್ನು ‘ಕೋಣ’ ಸಿನಿಮಾದಲ್ಲಿ ನಿಭಾಯಿಸಿದ್ದಾರೆ. ಇದನ್ನೂ ಓದಿKantara: Chapter 1ಗೆ ಭರ್ಜರಿ ರೆಸ್ಪಾನ್ಸ್  ಮೊದಲ ದಿನವೇ 55 ಕೋಟಿ ಗಳಿಕೆ

    ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಷಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್, ರವಿಕಿರಣ್ .ಎನ್ ಅವರು ‘ಕೋಣ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವೀನಸ್ ನಾಗರಾಜ್ಮೂರ್ತಿ ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದು ಇವರ ಜೊತೆ ವಿಶಾಲ್ ಗೌಡ ಸಹ ಕೈ ಜೋಡಿಸಿದ್ದಾರೆ. ಉಮೇಶ್ ಆರ್. ಬಿ. ಅವರ ಸಂಕಲನ ಚಿತ್ರಕ್ಕಿದೆ, ಸಾಹಸ ನಿರ್ದೇಶಕರಾಗಿ ವಿನೋದ್‌ ಕುಮಾರ್‌, ಮುರುಗನ್ ಅವರ ನೃತ್ಯ ನಿರ್ದೇಶನ ಹಾಗೂ ಶಶಿಕುಮಾರ್, ಸಂದೀಪ್ ಆಚಾರ್ಯ ಸಂಭಾಷಣೆ ಚಿತ್ರಕ್ಕಿದ್ದು ಕೋಣ ಚಿತ್ರ ಅದ್ಭುತವಾಗಿ ಮೂಡಿಬಂದಿದ್ದು ಪ್ರೇಕ್ಷಕರನ್ನ ಸೆಳೆಯುವಲ್ಲಿ ಅನುಮಾನವೇ ಇಲ್ಲ.

  • ‘ಪೆನ್‌ ಡ್ರೈವ್‌’ಗಾಗಿ ಕಿಶನ್ ಜೊತೆ ಜಬರ್ದಸ್ತ್ ಕುಣಿದ ತನಿಷಾ ಕುಪ್ಪಂಡ

    ‘ಪೆನ್‌ ಡ್ರೈವ್‌’ಗಾಗಿ ಕಿಶನ್ ಜೊತೆ ಜಬರ್ದಸ್ತ್ ಕುಣಿದ ತನಿಷಾ ಕುಪ್ಪಂಡ

    ರ್‌ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ‘ಪೆನ್ ಡ್ರೈವ್’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ವಿ.ನಾಗೇಂದ್ರಪ್ರಸಾದ್ ಹಾಡುಗಳನ್ನು ಬರೆದು ಸಂಗೀತ ನೀಡಿದ್ದಾರೆ. ಆಡಿಯೋ ಬಿಡುಗಡೆ ಸಮಾರಂಭಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಪದಾಧಿಕಾರಿಗಳಾದ ಶಿಲ್ಪ ಶ್ರೀನಿವಾಸ್, ಕುಶಾಲ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ‘ಪೆನ್ ಡ್ರೈವ್’ ಆರಂಭವಾಗಲು ನಿರ್ಮಾಪಕ ಲಯನ್ ವೆಂಕಟೇಶ್ ಕಾರಣ. ಅನಂತರ ಹನುಮಂತರಾಜು ಅವರು ನಿರ್ಮಾಣಕ್ಕೆ ಸಾಥ್ ನೀಡಿದರು. ನಿರ್ಮಾಪಕರು ಹಾಗೂ ಚಿತ್ರತಂಡದ ಸಹಕಾರದಿಂದ ಅಂದುಕೊಂಡ ಹಾಗೆ ಸಿನಿಮಾ ಮೂಡಿಬಂದಿದೆ. ವಿ.ನಾಗೇಂದ್ರಪ್ರಸಾದ್ ಸಂಗೀತ ನೀಡಿರುವ ಚಿತ್ರದ ಎಲ್ಲಾ ಹಾಡುಗಳು ಚೆನ್ನಾಗಿದೆ. ನನ್ನ ಹಿಂದಿನ ಚಿತ್ರಗಳಲ್ಲೂ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥಾಹಂದರವಿತ್ತು. ಇದರಲ್ಲೂ ಜನರು ಅದನ್ನು ನಿರೀಕ್ಷಿಸಬಹುದು. ‘ಪೆನ್ ಡ್ರೈವ್’, ಕಳೆದ ವರ್ಷ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿದ ಪದ. ನಮ್ಮ ಚಿತ್ರಕ್ಕೆ ಈ ಶೀರ್ಷಿಕೆಯಿಟ್ಟ ಮೇಲೆ ಅನೇಕ ಅನಾಮಾಧೇಯ ಕರೆಗಳನ್ನು ಸ್ವೀಕರಿಸಿದ್ದೇನೆ. ಈ ಶೀರ್ಷಿಕೆ ಇಟ್ಟಿದ್ದು ಏಕೆ? ಎಂಬ ಪ್ರಶ್ನೆಯನ್ನು ಸಾಕಷ್ಟು ಜನ ಕೇಳಿದ್ದಾರೆ. ಸಾಕಷ್ಟು ಅಡೆತಡೆಗಳನ್ನು ದಾಟಿ ನಮ್ಮ ಚಿತ್ರ ಜುಲೈ 4 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಹಾರೈಸಿ ಎಂದರು ನಿರ್ದೇಶಕ ಸೆಬಾಸ್ಟಿನ್ ಡೇವಿಡ್. ಇದನ್ನೂ ಓದಿ: ಟಾಕ್ಸಿಕ್ ನಟಿಗಾಗಿ ಬೆಂಗಳೂರಿನಿಂದ ಮುಂಬೈಗೆ ಲೊಕೇಶನ್ ಶಿಫ್ಟ್ !

    ನಾನು ಈ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿ. ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ್ದೇನೆ. ಕಿಶನ್ ಅವರ ಜೊತೆಗೆ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದೇನೆ ಎಂದು ನಟಿ ತನಿಷಾ ಕುಪ್ಪಂಡ ತಿಳಿಸಿದರು. ‘ಬಿಗ್ ಬಾಸ್’ ನಂತರ ನಾನು ನಟಿಸಿರುವ ಮೊದಲ ಚಿತ್ರವಿದು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಟ ಕಿಶನ್.

    ಹಾಡು ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ಚಿತ್ರತಂಡದವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ಮಾಪಕರಾದ ಹನುಮಂತ ರಾಜು ಹಾಗೂ ಲಯನ್ ಎಸ್ ವೆಂಕಟೇಶ್ ಅವರು, ಚಂದನ್ ಫಿಲಂಸ್ ಮೂಲಕ ರಾಜ್ಯಾದ್ಯಂತ 150 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಜುಲೈ 4 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ಎಲ್ಲರೂ ಪ್ರೋತ್ಸಾಹ ನೀಡಿ. ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಿ ಎಂದರು. ಇದನ್ನೂ ಓದಿ: ಏನಿಲ್ಲ ಏನಿಲ್ಲ ಅನ್ನುತ್ತಲೇ ಒಂದೇ ಕಾರ್‌ನಲ್ಲಿ ಹೊರಟ ರಶ್ಮಿಕಾ, ದೇವರಕೊಂಡ

    ಸಂಗೀತ ನಿರ್ದೇಶಕ ಹಾಗೂ ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್, ಛಾಯಾಗ್ರಾಹಕ ಪಿ.ವಿ.ಆರ್ ಸ್ವಾಮಿ, ಸಹ ನಿರ್ದೇಶಕ ನಾಗೇಶ್, ನಟ ಕರಿಸುಬ್ಬು, ಟೈಗರ್ ವೆಂಕಟೇಶ್ ಮುಂತಾದವರು ‘ಪೆನ್ ಡ್ರೈವ್’ ಕುರಿತು ಮಾತನಾಡಿದರು.

  • ತಮಿಳು ಚಿತ್ರದಲ್ಲಿ ಸೊಂಟ ಬಳುಕಿಸಿದ ತನಿಷಾ ಕುಪ್ಪಂಡ – ಬೆಂಕಿ ಡ್ಯಾನ್ಸ್ ಎಂದ ಫ್ಯಾನ್ಸ್

    ತಮಿಳು ಚಿತ್ರದಲ್ಲಿ ಸೊಂಟ ಬಳುಕಿಸಿದ ತನಿಷಾ ಕುಪ್ಪಂಡ – ಬೆಂಕಿ ಡ್ಯಾನ್ಸ್ ಎಂದ ಫ್ಯಾನ್ಸ್

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಖ್ಯಾತಿಯ ತನಿಷಾ ಕುಪ್ಪಂಡ (Tanisha Kuppanda) ಅವರು ತಮಿಳು ಸಿನಿಮಾವೊಂದರಲ್ಲಿ ಸೊಂಟ ಬಳುಕಿಸಿದ್ದಾರೆ. ಮಾದಕವಾಗಿ ನಟಿ ಹೆಜ್ಜೆ ಹಾಕಿದ್ದಾರೆ. ಈ ಬಗ್ಗೆ ನಟಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ

    ಕನ್ನಡದ ಸಿನಿಮಾಗಳಲ್ಲಿ ತನಿಷಾ ಬ್ಯುಸಿಯಾಗಿದ್ದಾರೆ. ಇದರ ನಡುವೆ ತಮಿಳಿನಲ್ಲಿಯೂ ಕೆಲಸ ಮಾಡಿದ್ದಾರೆ. ‘ಎನ್ ಕಾಧಲೇ’ ಚಿತ್ರದ ರಾಸಾನಾ ಓತಾ ರೋಸಾ ಹಾಡಿನ ಮೇಕಿಂಗ್ ವಿಡಿಯೋವನ್ನು ನಟಿ ಶೇರ್ ಮಾಡಿದ್ದಾರೆ. ಈ ಹಾಡು ಈಗಾಗಲೇ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ಆದರೆ ಈ ಡ್ಯಾನ್ಸ್ ಮಾಡಲು ತೆರೆಹಿಂದಿನ ತಯಾರಿ ಹೇಗಿತ್ತು ಎಂಬುದರ ಝಲಕ್ ಅನ್ನು ನಟಿ ಹಂಚಿಕೊಂಡಿದ್ದಾರೆ. ಮಾದಕವಾಗಿ ಹೆಜ್ಜೆ ಹಾಕಿರೋ ತನಿಷಾರನ್ನು ನೋಡಿ ಬೆಂಕಿ ಡ್ಯಾನ್ಸ್ ಎಂದು ಫ್ಯಾನ್ಸ್ ಕೊಂಡಾಡಿದ್ದಾರೆ. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ

     

    View this post on Instagram

     

    A post shared by Tanisha Kuppanda (@tanishakuppanda)

    ಅಂದಹಾಗೆ, ಕನ್ನಡದ ‘ಪೆನ್‌ಡ್ರೈವ್’ ಸಿನಿಮಾದಲ್ಲಿ ಮಾಲಾಶ್ರೀ ಜೊತೆ ತನಿಷಾ ನಟಿಸಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅವರೊಂದಿಗೆ ಕಿಶನ್ ಬಿಳಗಲಿ ಕೂಡ ನಟಿಸಿದ್ದಾರೆ.

    ಸಾಕಷ್ಟು ಸೀರಿಯಲ್ ಮತ್ತು ಸಿನಿಮಾಗಳಲ್ಲಿ ತನಿಷಾ ನಟಿಸಿದ್ದರೂ ಕೂಡ ಅವರಿಗೆ ಹೇಳಿಕೊಳ್ಳುವಂತಹ ಬ್ರೇಕ್ ಸಿಕ್ಕಿರಲಿಲ್ಲ. ಕಳೆದ ಸೀಸನ್ ಬಿಗ್ ಬಾಸ್ ಕನ್ನಡ 10ರಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡ್ಮೇಲೆ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಇದಷ್ಟೇ ಅಲ್ಲ, ನಟನೆಯ ಜೊತೆ ಹೋಟೆಲ್ ಉದ್ಯಮ, ಆಭರಣದ ಮಳಿಗೆ ಹಾಗೂ ನಿರ್ಮಾಣ ಸಂಸ್ಥೆ ಕೂಡ ಶುರು ಮಾಡಿದ್ದಾರೆ.

  • ‘ನಾನು ನಿನ್ನ ಪ್ರೀತಿಸುವೆ’ ಎಂದ ನಟಿ- ತನಿಷಾ ಪ್ರೀತಿಯಲ್ಲಿ ಬಿದ್ದಿರೋದು ಪಕ್ಕಾ ಎಂದ ಫ್ಯಾನ್ಸ್

    ‘ನಾನು ನಿನ್ನ ಪ್ರೀತಿಸುವೆ’ ಎಂದ ನಟಿ- ತನಿಷಾ ಪ್ರೀತಿಯಲ್ಲಿ ಬಿದ್ದಿರೋದು ಪಕ್ಕಾ ಎಂದ ಫ್ಯಾನ್ಸ್

    ‘ಬಿಗ್ ಬಾಸ್ ಕನ್ನಡ 10’ರ (Bigg Boss Kannada 10) ಸ್ಪರ್ಧಿ, ತನಿಷಾ ಕುಪ್ಪಂಡ (Tanisha Kuppanda) ಅವರು ಸಿನಿಮಾ ಮತ್ತು ಉದ್ಯಮ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದಾರೆ. ಇದರ ನಡುವೆ ‘ನಾನು ನಿನ್ನ ಪ್ರೀತಿಸುವೆ’ ಎಂದು ನಟಿ ರೀಲ್ಸ್‌ ಮಾಡಿ ಗಮನ ಸೆಳೆದಿದ್ದಾರೆ. ವಿಡಿಯೋ ನೋಡಿದ ಅಭಿಮಾನಿಗಳು ನಟಿ ಪ್ರೀತಿಯಲ್ಲಿ ಬಿದ್ದಿದ್ದಾರೆ ಪಕ್ಕಾ ಎಂದೇ ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.

    ತನಿಷಾ ಕುಪ್ಪಂಡ ಹೊಸ ರೀಲ್ಸ್‌ವೊಂದನ್ನು ಹಂಚಿಕೊಂಡಿದ್ದಾರೆ. ನನ್ನಂತ ಹುಡುಗಿ ಸಿಗೋಕೆ ಪುಣ್ಯ ಮಾಡಿರಬೇಕು. ನಾನು ನಿನ್ನ ಪ್ರೀತಿಸುವೆ ಹಾಡಿಗೆ ಮಸ್ತ್ ಸ್ಟೆಪ್ಸ್ ಹಾಕಿ ನಾಚಿ ನೀರಾಗಿದ್ದಾರೆ. ರೀಲ್ಸ್ ನೋಡಿದ ಫ್ಯಾನ್ಸ್ ತನಿಷಾ ಮೆಚ್ಚಿರೋ ಆ ಹುಡುಗ ಯಾರು ಎಂದೆಲ್ಲಾ ಚರ್ಚಿಸುತ್ತಿದ್ದಾರೆ. ಇದನ್ನೂ ಓದಿ:ಅಪ್ಪುಗಾಗಿ ‘ನೀನೇ ರಾಜಕುಮಾರ’ ಹಾಡನ್ನು ಸ್ಟೈಲಿಶ್ ಆಗಿ ಹಾಡಿದ ವಿದೇಶಿ ಮಹಿಳೆ

     

    View this post on Instagram

     

    A post shared by Tanisha Kuppanda (@tanishakuppanda)

    ಇನ್ನೂ ‘ಬಿಗ್ ಬಾಸ್’ ಶೋ ಬಳಿಕ ತನಿಷಾಗೆ ಬೇಡಿಕೆ ಹೆಚ್ಚಾಗಿದೆ. ಹೊಸ ಪ್ರಾಜೆಕ್ಟ್‌ಗಳಿಗೆ ಸಿನಿಮಾ ಆಫರ್ಸ್‌ ಅರಸಿ ಬರುತ್ತಿವೆ. ಸದ್ಯ ಅವರು ಕೋಮಲ್‌ಗೆ ಜೋಡಿಯಾಗಿ ‘ಕೋಣ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ತನಿಷಾ ಕುಪ್ಪಂಡ ಅವರೇ ನಿರ್ಮಾಣ ಮಾಡುತ್ತಿದ್ದಾರೆ.

    ತನಿಷಾ ನಿರ್ಮಾಣದ ಸಿನಿಮಾದಲ್ಲಿ ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್, ನಮ್ರತಾ ಗೌಡ, ಶಿಶಿರ್ ಶಾಸ್ತ್ರಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಅವರ ಪಾತ್ರ ಹೇಗಿರಲಿದೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲ ಕೆರಳಿಸಿದೆ.

  • ‘ಪೆನ್ ಡ್ರೈವ್’ ಚಿತ್ರದಲ್ಲಿ ಮಾಲಾಶ್ರೀ : ಇದು ತನಿಷಾ ನಟನೆಯ ಚಿತ್ರ

    ‘ಪೆನ್ ಡ್ರೈವ್’ ಚಿತ್ರದಲ್ಲಿ ಮಾಲಾಶ್ರೀ : ಇದು ತನಿಷಾ ನಟನೆಯ ಚಿತ್ರ

    ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ (Tanisha Kuppanda) ಅಭಿನಯದ ‘ಪೆನ್ ಡ್ರೈವ್’ (Pen Drive)  ಚಿತ್ರದ ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಅಭಿನಯಿಸುತ್ತಿದ್ದಾರೆ. ಚಾಮುಂಡಿ, ದುರ್ಗಿ ಮುಂತಾದ ಆಕ್ಷನ್ ಚಿತ್ರಗಳಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಆಕ್ಷನ್ ಕ್ವೀನ್ ಎಂದು ಜನಪ್ರಿಯರಾಗಿರುವ ಮಾಲಾಶ್ರೀ  ಹಾಗೂ “ಬಿಗ್ ಬಾಸ್” ನಂತರ ಬೆಂಕಿ ಅಂತಲೇ ಕರೆಯಲ್ಪಡುವ ತನಿಷಾ ಕುಪ್ಪಂಡ ಇಬ್ಬರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಾಗಾಗಿ ಅಭಿಮಾನಿ ವಲಯದಲ್ಲಿ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹಾಗೂ ಕುತೂಹಲ ಇದೆ.

    ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದ ನಿಮಿಷಾಂಬ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇ ಗೌಡ ಆರಂಭ ಫಲಕ ತೋರಿದರು. ಹಿರಿಯ ವಕೀಲ ರೇವಣ್ಣ ಸಿದ್ದಯ್ಯ ಕ್ಯಾಮೆರಾ ಚಾಲನೆ ಮಾಡಿದರು. ಮಾಲಾಶ್ರೀ ಅವರು ಅಧ್ಯಕ್ಷತೆ ವಹಿಸಿದ್ದರು. ಆನಂತರ ಚಿತ್ರತಂಡದವರು ಹಾಗೂ ಗಣ್ಯರು ಸೇರಿ ಅಲ್ಲಿ ಉಪಸ್ಥಿತರಿದ್ದ ಮಹಿಳೆಯರಿಗೆ ಮಂಗಳದ್ರವ್ಯ ಸಮೇತ ಸೀರೆ ನೀಡಿದರು.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಈಗಾಗಲೇ ಹದಿನೈದು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವ  ಸೆಬಾಸ್ಟಿನ್ ಡೇವಿಡ್ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.  ಮಾಲಾಶ್ರೀ, ತನಿಷಾ ಕುಪ್ಪಂಡ, ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.  ಡಾ||ವಿ.ನಾಗೇಂದ್ರ ಪ್ರಸಾದ್ ಗೀತರಚನೆ ಹಾಗೂ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಾಗೇಶ್ ಅವರು ಸಂಕಲನ ಕಾರ್ಯದೊಂದಿಗೆ ಸಂಭಾಷಣೆಯನ್ನು ಬರೆಯುತ್ತಿದ್ದಾರೆ‌.

  • ‌’ಪೆನ್‌ ಡ್ರೈವ್’ ಸಿನಿಮಾದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ

    ‌’ಪೆನ್‌ ಡ್ರೈವ್’ ಸಿನಿಮಾದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ

    ಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ‘ಬಿಗ್ ಬಾಸ್’ (Bigg Boss Kannada 10) ಖ್ಯಾತಿಯ ತನಿಷಾ ಕುಪ್ಪಂಡ (Tanisha Kuppanda) ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚಿಗೆ ನಡೆಯಿತು. ಚಿತ್ರಕ್ಕೆ ‌’ಪೆನ್‌ ಡ್ರೈವ್’ (Pen Drive) ಎಂದು ಹೆಸರಿಡಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಶುಭ ಕೋರಿದರು. ಇದನ್ನೂ ಓದಿ:ದರ್ಶನ್ ನಿರಪರಾಧಿಯಾಗಿ ಹೊರ ಬರಲಿ, ನ್ಯಾಯದ ಬಗ್ಗೆ ನಂಬಿಕೆಯಿದೆ: ನಟಿ ಯಮುನಾ

    ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಮಾತನಾಡಿ, ‌’ಪೆನ್‌ ಡ್ರೈವ್’ ಶೀರ್ಷಿಕೆ ನೀಡಿದ ವಾಣಿಜ್ಯ ಮಂಡಳಿಗೆ ಧನ್ಯವಾದ. ಪ್ರಸ್ತುತ ಚಾಲ್ತಿಯಲ್ಲಿರುವ, ‌’ಪೆನ್‌ ಡ್ರೈವ್’ಗೂ ನಮ್ಮ ಚಿತ್ರದ ಶೀರ್ಷಿಕೆಗೂ ಯಾವುದೇ ಸಂಬಂಧವಿಲ್ಲ. ಈ ಚಿತ್ರದ ಕಥೆಯೇ ಬೇರೆ. ನಮ್ಮ ಚಿತ್ರದಲ್ಲಿ, ‌’ಪೆನ್‌ ಡ್ರೈವ್’ ಮುಖ್ಯಪಾತ್ರ ವಹಿಸುತ್ತದೆ. ಹಾಗಾಗಿ ಆ ಶೀರ್ಷಿಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಲಯನ್ ಆರ್ ವೆಂಕಟೇಶ್ ಅವರ ಸಹಕಾರದಿಂದ ಚಿತ್ರವನ್ನು ಬೇಗೆ ತೆರೆಗೆ ತರುವ ಪ್ರಯತ್ನ ಮಾಡುತ್ತೇನೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಹೆಚ್ಚಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯಲಿದೆ. ತನಿಷಾ ಕುಪ್ಪಂಡ, ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ತಾರಾಬಳಗದಲ್ಲಿದ್ದಾರೆ. ತಾರಾಬಳಗದಲ್ಲಿ ಹೆಚ್ಚಿನವರು ಮಹಿಳೆಯರೆ ಇರುತ್ತಾರೆ. ವಿ.ನಾಗೇಂದ್ರ ಪ್ರಸಾದ್ ಗೀತರಚನೆ ಹಾಗೂ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ ಎಂದರು.

    ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು ಹಾಗಾಗಿ ಈ ಚಿತ್ರ ನಿರ್ಮಾಣಕ್ಕೆ ಮುಂದಾದೆವು. ನಮ್ಮ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಲಯನ್ ಆರ್ ವೆಂಕಟೇಶ್ ಮಾತನಾಡಿದ್ದಾರೆ. ‌’ಪೆನ್‌ ಡ್ರೈವ್’ ಚಿತ್ರದ ಕಥೆ ಚೆನ್ನಾಗಿದೆ. ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಕೊಳ್ಳುತ್ತಿದ್ದೇನೆ ಎಂದು ನಟಿ ತನಿಷಾ ಕುಪ್ಪಂಡ ತಿಳಿಸಿದರು.


    ಹಾಡುಗಳ ಬಗ್ಗೆ ಡಾ||ವಿ.ನಾಗೇಂದ್ರಪ್ರಸಾದ್ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸುತ್ತಿರುವ ರಾಧಿಕಾ ರಾಮ್, ಸಂಜನಾ ನಾಯ್ಡು, ಕರಿಸುಬ್ಬು ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಸಂಭಾಷಣೆ ಬರೆದು ಸಂಕಲನ ಮಾಡುತ್ತಿರುವ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ಟಿಪಿಎಲ್ ಆಯ್ತು ಈಗ IPT12ಗೆ ಚಾಲನೆ ಕೊಟ್ಟ ಎನ್ 1 ಕ್ರಿಕೆಟ್ ಅಕಾಡೆಮಿ

    ಟಿಪಿಎಲ್ ಆಯ್ತು ಈಗ IPT12ಗೆ ಚಾಲನೆ ಕೊಟ್ಟ ಎನ್ 1 ಕ್ರಿಕೆಟ್ ಅಕಾಡೆಮಿ

    ಕಿರುತೆರೆ ಕಲಾವಿದರಿಗಾಗಿ ಟಿಪಿಎಲ್-ಟೆಲಿವಿಷನ್ ಪ್ರೀಮಿಯರ್ ಲೀಗ್ ಎಂಬ ಕ್ರಿಕೆಟ್ ಟೂರ್ನ್‌ಮೆಂಟ್ ನಡೆಸಿಕೊಂಡು ಬರುತ್ತಿರುವ ಎನ್ 1 ಕ್ರಿಕೆಟ್ ಅಕಾಡೆಮಿ ಇದೀಗ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಈಗಾಗಲೇ ಯಶಸ್ವಿಯಾಗಿ ಮೂರು ಟಿಪಿಎಲ್ ಸೀಸನ್ ಮುಗಿಸಿರುವ ಎನ್ 1 ಅಕಾಡೆಮಿ ಸೂತ್ರಧಾರ ಸುನಿಲ್ ಕುಮಾರ್ ಬಿ.ಆರ್ ಈಗ IPT12 ಎಂಬ ಹೊಸ ಕ್ರಿಕೆಟ್ ಟೂರ್ನಮೆಂಟ್ ಗೆ ಚಾಲನೆ ಕೊಟ್ಟಿದ್ದಾರೆ. ಇದನ್ನೂ ಓದಿ:ಫಹಾದ್ ಫಾಸಿಲ್ ಸಿನಿಮಾ ನೋಡಿ ಹೊಗಳಿದ ಸಮಂತಾ

    ಡಾಕ್ಟರ್ಸ್, ಲಾಯರ್ಸ, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರು ಹೀಗೆ ಎಲ್ಲಾ ಕ್ಷೇತ್ರದವರು ಸೇರಿ ಆಡಲಿರುವ ಕ್ರಿಕೆಟ್ ಟೂರ್ನಮೆಂಟ್. ಈ ಪಂದ್ಯಾವಳಿ ಆರಂಭಕ್ಕೂ ಮುನ್ನ ಲೋಗೋ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಈ ಕಾರ್ಯಕ್ರಮ ನೆರವೇರಿದೆ. ನಟಿಯರಾದ ತನಿಷಾ ಕುಪ್ಪಂಡ, ಭವ್ಯಾ ಗೌಡ, ಎನ್ 1 ಕ್ರಿಕೆಟ್ ಅಕಾಡೆಮಿ ಅಧ್ಯಕ್ಷ ಸುನಿಲ್ ಕುಮಾರ್, ಶೈಲೇಶ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಬಳಿಕ ನಟಿ ತನಿಷಾ ಕುಪ್ಪಂಡ (Tanisha Kuppanda) ಮಾತನಾಡಿ, ಎನ್ 1 ಕ್ರಿಕೆಟ್ ಅಕಾಡೆಮಿ ಮೂಲಕ ಹಲವು ಟೂರ್ನಮೆಂಟ್ ಮಾಡುವ ಮೂಲಕ ಸುನಿಲ್ ಅವರು ಖ್ಯಾತಿ ಪಡೆದಿದ್ದಾರೆ. ನಾನು ಇದಕ್ಕೂ ಮುನ್ನ ಟಿಪಿಎಲ್ ಸೀಸನ್ ಒಂದರಲ್ಲಿ ಟೀಂ ಒಂದಕ್ಕೆ ಬ್ರ‍್ಯಾಂಡ್ ಅಂಬಾಸಿಡರ್ ಆಗಿದ್ದೆ. ಯಾವುದೇ ಪ್ರೊಫೆಷನ್ ಆಗಲಿ ಕ್ರಿಕೆಟ್ ಅಂದರೆ ಪ್ರಾಣ ಕೊಡುವವರು ಬಹಳಷ್ಟು ಜನ ಇದ್ದಾರೆ. ಈ ಟೂರ್ನಮೆಂಟ್ ವಿಶೇಷತೆ ಏನೆಂದರೆ ಎಲ್ಲಾ ಕ್ರಿಕೆಟ್ ಪ್ರೇಮಿಗಳು ಇದರಲ್ಲಿ ಭಾಗಿಯಾಗಬಹುದು. ಎನ್ 1 ಕ್ರಿಕೆಟ್ ಅಕಾಡೆಮಿ ಅಂದರೆ ಹೊಸ ಪ್ರಯತ್ನ. ಈ ಮೂಲಕ ಮಾಧ್ಯಮದವರು, ಡಾಕ್ಟರ್ಸ್, ಲಾಯರ್ಸ, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರಿಗೆ ಏರ್ಪಡಿಸಲಾಗಿದೆ ಎಂದರು.

    ಶೈಲೇಶ್ ಅವರು ಮಾತನಾಡಿ, ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಚೆನ್ನಾಗಿ ಆಡುವ ಎಲ್ಲರಿಗೂ ಬಹುಮಾನ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ತಂಡಗಳು, ಸೇರಿದಂತೆ ಮತ್ತಿತರ ಅಪ್ ಡೇಟ್ ನೀಡಲಾಗುತ್ತದೆ.

  • ‘ಸ್ಪೆಷಲ್ ಸಾಂಗ್’ ಗೆ ಕುಣಿಯಲು ಹೆಚ್ಚು ಬೇಡಿಕೆ ಎಂದ ತನಿಷಾ ಕುಪ್ಪಂಡ

    ‘ಸ್ಪೆಷಲ್ ಸಾಂಗ್’ ಗೆ ಕುಣಿಯಲು ಹೆಚ್ಚು ಬೇಡಿಕೆ ಎಂದ ತನಿಷಾ ಕುಪ್ಪಂಡ

    ಬಿಗ್ ಬಾಸ್ ಮನೆಯಿಂದ ಬಂದ ನಂತರ ಸಾಕಷ್ಟು ಅವಕಾಶಗಳು ನಟಿ ತನಿಷಾ ಕುಪ್ಪಂಡ  (Tanisha Kuppanda) ಅವರನ್ನು ಹುಡುಕಿಕೊಂಡು ಬರುತ್ತಿವೆಯಂತೆ. ಅದರಲ್ಲೂ ಸ್ಪೆಷಲ್ ಹಾಡಿಗೆ (Dance) ಹೆಜ್ಜೆ ಹಾಕಲು ಅನೇಕರು ಕೇಳಿದ್ದಾರಂತೆ. ಬಿಸ್ನೆಸ್ ನಲ್ಲಿ ಪೂರ್ತಿಯಾಗಿ ತೊಡಗಿಕೊಂಡಿದ್ದರಿಂದ ಅವುಗಳನ್ನು ಒಪ್ಪಿಕೊಳ್ಳಲು ಆಗುತ್ತಿಲ್ಲ ಎಂದಿದ್ದಾರೆ ತನಿಷಾ.

    ದೊಡ್ಮನೆ ಆಟ ಮುಗಿದ ಮೇಲೆ ಒಂದಿಲ್ಲೊಂದು ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ತನಿಷಾ. ಹೋಟೆಲ್ ಬ್ಯುಸಿನೆಸ್ ಜೊತೆಗೆ ಮೊನ್ನೆಯಷ್ಟೇ ಜ್ಯುವೆಲರಿ ಶಾಪ್ ಕೂಡ ಶುರು ಮಾಡಿದ್ದಾರೆ. ಈ ನಡುವೆ ಶೇರ್ ಹೆಸರಿನ ಚಿತ್ರದಲ್ಲಿ ಪೊಲೀಸ್ ಅವತಾರದಲ್ಲಿ ಎತ್ತಿದ್ದಾರೆ. ಈ ಪಾತ್ರಕ್ಕೆ ನಟಿ ಮಾಲಾಶ್ರೀ (Malashree) ಅವರು ಸ್ಪೂರ್ತಿ ಎಂದು ತನಿಷಾ ಕುಪ್ಪಂಡ ಮಾತನಾಡಿದ್ದಾರೆ.

    ತನಿಷಾ ಕುಪ್ಪಂಡ ಖಡಕ್ ಮಾತುಗಳ ಮೂಲಕ ಗಮನ ಸೆಳೆದ ನಟಿ. ಬಿಗ್ ಬಾಸ್ ಮನೆಯ ಬೆಂಕಿ ಎಂದೇ ಹೈಲೆಟ್ ಆಗಿರೋ ತನಿಷಾ ಕಾಕಿ ತೊಟ್ಟು ದುಷ್ಟರಿಗೆ ಕ್ಲ್ಯಾಸ್ ತೆಗೆದುಕೊಳ್ಳೋಕೆ ರೆಡಿಯಾಗಿದ್ದಾರೆ.

    ಕನ್ನಡತಿ ಹೀರೋ ಕಿರಣ್ ರಾಜ್ (Kiran Raj) ನಟನೆಯ ‘ಶೇರ್’ (Sherr) ಸಿನಿಮಾದಲ್ಲಿ ತನಿಷಾ ಕುಪ್ಪಂಡ ಬಹುಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಬಗ್ಗೆ ನಟಿಯೇ ಸ್ವತಃ ಅಪ್‌ಡೇಟ್ ನೀಡಿದ್ದಾರೆ. ನಟಿಯ ಖದರ್ ನೋಡಿ ಫ್ಯಾನ್ಸ್ ವಾವ್ ಎಂದಿದ್ದಾರೆ. ನಿಮ್ಮ ಗೆಟಪ್ ಬೆಂಕಿ ಎಂದು ತನಿಷಾಗೆ ಮೆಚ್ಚುಗೆ ಸೂಚಿಸಿದ್ದಾರೆ.

     

    ನಿಮ್ಮ ಶತ್ರುವಿಗಾಗಿ ನೀವು ಹೊತ್ತಿಸುವ ಬೆಂಕಿಯು ಅವರಿಗಿಂತ ಹೆಚ್ಚಾಗಿ ನಿಮ್ಮನ್ನು ಸುಡುತ್ತದೆ ಎಂದು ನಟಿ ಅಡಿಬರಹ ನೀಡಿದ್ದಾರೆ. ಪೊಲೀಸ್ ಅವತಾರದಲ್ಲಿರುವ ವಿವಿಧ ಭಂಗಿಯ ಫೋಟೋ ಶೇರ್ ಮಾಡಿದ್ದಾರೆ.

  • ಪೊಲೀಸ್ ಪಾತ್ರಕ್ಕೆ ನಟಿ ಮಾಲಾಶ್ರೀ ಸ್ಫೂರ್ತಿ ಎಂದ ತನಿಷಾ ಕುಪ್ಪಂಡ

    ಪೊಲೀಸ್ ಪಾತ್ರಕ್ಕೆ ನಟಿ ಮಾಲಾಶ್ರೀ ಸ್ಫೂರ್ತಿ ಎಂದ ತನಿಷಾ ಕುಪ್ಪಂಡ

    ಟಿ, ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ (Tanisha Kuppanda) ದೊಡ್ಮನೆ ಆಟ ಮುಗಿದ ಮೇಲೆ ಒಂದಿಲ್ಲೊಂದು ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಹೋಟೆಲ್ ಬ್ಯುಸಿನೆಸ್ ಜೊತೆಗೆ ಮೊನ್ನೆಯಷ್ಟೇ ಜ್ಯುವೆಲರಿ ಶಾಪ್ ಕೂಡ ಶುರು ಮಾಡಿದ್ದಾರೆ. ಈ ನಡುವೆ ಶೇರ್ ಹೆಸರಿನ ಚಿತ್ರದಲ್ಲಿ ಪೊಲೀಸ್ ಅವತಾರದಲ್ಲಿ ಎತ್ತಿದ್ದಾರೆ. ಈ ಪಾತ್ರಕ್ಕೆ ನಟಿ ಮಾಲಾಶ್ರೀ (Malashree) ಅವರು ಸ್ಪೂರ್ತಿ ಎಂದು ತನಿಷಾ ಕುಪ್ಪಂಡ ಮಾತನಾಡಿದ್ದಾರೆ.

    ತನಿಷಾ ಕುಪ್ಪಂಡ ಖಡಕ್ ಮಾತುಗಳ ಮೂಲಕ ಗಮನ ಸೆಳೆದ ನಟಿ. ಬಿಗ್ ಬಾಸ್ ಮನೆಯ ಬೆಂಕಿ ಎಂದೇ ಹೈಲೆಟ್ ಆಗಿರೋ ತನಿಷಾ ಕಾಕಿ ತೊಟ್ಟು ದುಷ್ಟರಿಗೆ ಕ್ಲ್ಯಾಸ್ ತೆಗೆದುಕೊಳ್ಳೋಕೆ ರೆಡಿಯಾಗಿದ್ದಾರೆ.

    ಕನ್ನಡತಿ ಹೀರೋ ಕಿರಣ್ ರಾಜ್ (Kiran Raj) ನಟನೆಯ ‘ಶೇರ್’ (Sherr) ಸಿನಿಮಾದಲ್ಲಿ ತನಿಷಾ ಕುಪ್ಪಂಡ ಬಹುಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಬಗ್ಗೆ ನಟಿಯೇ ಸ್ವತಃ ಅಪ್‌ಡೇಟ್ ನೀಡಿದ್ದಾರೆ. ನಟಿಯ ಖದರ್ ನೋಡಿ ಫ್ಯಾನ್ಸ್ ವಾವ್ ಎಂದಿದ್ದಾರೆ. ನಿಮ್ಮ ಗೆಟಪ್ ಬೆಂಕಿ ಎಂದು ತನಿಷಾಗೆ ಮೆಚ್ಚುಗೆ ಸೂಚಿಸಿದ್ದಾರೆ.

     

    ನಿಮ್ಮ ಶತ್ರುವಿಗಾಗಿ ನೀವು ಹೊತ್ತಿಸುವ ಬೆಂಕಿಯು ಅವರಿಗಿಂತ ಹೆಚ್ಚಾಗಿ ನಿಮ್ಮನ್ನು ಸುಡುತ್ತದೆ ಎಂದು ನಟಿ ಅಡಿಬರಹ ನೀಡಿದ್ದಾರೆ. ಪೊಲೀಸ್ ಅವತಾರದಲ್ಲಿರುವ ವಿವಿಧ ಭಂಗಿಯ ಫೋಟೋ ಶೇರ್ ಮಾಡಿದ್ದಾರೆ.

  • ಹೊಸ ಉದ್ಯಮಕ್ಕೆ ಕೈ ಹಾಕಿದ ತನಿಷಾ- ಶುಭಕೋರಿದ ‘ಬಿಗ್‌ ಬಾಸ್‌’ ಸ್ಪರ್ಧಿಗಳು

    ಹೊಸ ಉದ್ಯಮಕ್ಕೆ ಕೈ ಹಾಕಿದ ತನಿಷಾ- ಶುಭಕೋರಿದ ‘ಬಿಗ್‌ ಬಾಸ್‌’ ಸ್ಪರ್ಧಿಗಳು

    ‘ಬಿಗ್ ಬಾಸ್’ (Bigg Boss) ಖ್ಯಾತಿಯ ತನಿಷಾ ಕುಪ್ಪಂಡ (Tanisha Kuppanda) ಬಣ್ಣದ ಲೋಕದಲ್ಲಿ ಅಷ್ಟೇ ಗುರುತಿಸಿಕೊಂಡಿಲ್ಲ. ಉದ್ಯಮಿಯಾಗಿಯೂ ನಟಿ ಗುರುತಿಸಿಕೊಂಡಿದ್ದಾರೆ. ಹೋಟೆಲ್ ಉದ್ಯಮದ ನಂತರ ಇದೀಗ ಆಭರಣ ಮಳಿಗೆಗೆ ತನಿಷಾ ಚಾಲನೆ ನೀಡಿದ್ದಾರೆ. ನಟಿಯ ಹೊಸ ಹೆಜ್ಜೆಗೆ ‘ಬಿಗ್ ಬಾಸ್’ ಸ್ಪರ್ಧಿಗಳು ಕೂಡ ಸಾಥ್‌ ನೀಡಿದ್ದಾರೆ.

    ದೊಡ್ಮನೆ ಆಟ ಮುಗಿಯುತ್ತಿದ್ದಂತೆ ತಮಗೆ ಸಿಕ್ಕಿರುವ ಜನಪ್ರಿಯತೆಯನ್ನು ಸದುಪಯೋಗಪಡಿಸಿಕೊಳ್ತಿದ್ದಾರೆ. ನಟನೆಗೆ ಮಾತ್ರ ಸೀಮಿತವಾಗದೇ ಹೊಸ ಉದ್ಯಮಕ್ಕೂ ನಟಿ ಕೈ ಹಾಕಿದ್ದಾರೆ. ಈಗೀನ ಕಾಲಕ್ಕೆ ತಕ್ಕಂತೆ ಮಹಿಳಾ ಮಣಿಗಳಿಗೆ ಇಷ್ಟವಾಗುವ ಹಾಗೇ ಸ್ಟೈಲೀಶ್ ಆಭರಣಗಳು ತನಿಷಾ ಜ್ಯುವೆಲ್ಲರಿಯಲ್ಲಿ ಸಿಗಲಿದೆ. ಇದನ್ನೂ ಓದಿ: ಸಹೋದರಿ ಮನ್ನಾರಾ ಬರ್ತ್‌ಡೇ ಪಾರ್ಟಿಯಲ್ಲಿ ಪ್ರಿಯಾಂಕಾ ಚೋಪ್ರಾ ದಂಪತಿ

    ತನಿಷಾ ಹೊಸ ಹೆಜ್ಜೆಗೆ ಸಾಥ್ ನೀಡಲು ಲೂಸ್ ಮಾದ ಯೋಗಿ ದಂಪತಿ, ‘ಬಿಗ್ ಬಾಸ್’ ವಿನ್ನರ್ ಕಾರ್ತಿಕ್ ಮಹೇಶ್ (Karthik Mahesh), ಸಿರಿ, ಪವಿ ಪೂವಪ್ಪ, ರಕ್ಷಕ್, ನಮ್ರತಾ ಗೌಡ, ವರ್ತೂರು ಸಂತೋಷ್ (Varthur Santhosh), ವಿನಯ್ ಗೌಡ, ನೀತು ವನಜಾಕ್ಷಿ, ಸ್ನೇಹಿತ್‌ ಗೌಡ, ಕಿರುತೆರೆ ನಟಿ ಭವ್ಯಾ ಗೌಡ, ಕಾರುಣ್ಯ ರಾಮ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

    ನಟಿ ಸಂಗೀತಾ ಶೃಂಗೇರಿ (Sangeetha Sringeri) ಈ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಬೇರೇ ಕಾರ್ಯಕ್ರಮದಲ್ಲಿ ಬ್ಯುಸಿಯಿರುವ ಕಾರಣ ಮುಂದಿನ ಬಾರಿ ಬರೋದಾಗಿ ಸಂಗೀತಾ ತಿಳಿಸಿದ್ದಾರೆ ಎಂದು ತನಿಷಾ ಮಾಹಿತಿ ನೀಡಿದ್ದರು.