Tag: target group

  • ನ್ಯಾಯ ಕೊಡ್ಸಿ, ಇಲ್ಲಾಂದ್ರೆ ಆತ್ಮಹತ್ಯೆ ಮಾಡ್ಕೋತೀನಿ- ಇಲಿಯಾಸ್ ಪತ್ನಿ ಹೆಸರಲ್ಲಿ ಬರೆದ ಪತ್ರ ವೈರಲ್

    ನ್ಯಾಯ ಕೊಡ್ಸಿ, ಇಲ್ಲಾಂದ್ರೆ ಆತ್ಮಹತ್ಯೆ ಮಾಡ್ಕೋತೀನಿ- ಇಲಿಯಾಸ್ ಪತ್ನಿ ಹೆಸರಲ್ಲಿ ಬರೆದ ಪತ್ರ ವೈರಲ್

    ಮಂಗಳೂರು: ಟಾರ್ಗೆಟ್ ಗ್ರೂಪ್ ಲೀಡರ್ ಇಲಿಯಾಸ್ ಹತ್ಯೆ ಪ್ರಕರಣದಲ್ಲಿ ನ್ಯಾಯ ಕೊಡಿಸುವಂತೆ ಕೇಳಿ ಇಲಿಯಾಸ್ ಪತ್ನಿ ಹೆಸರಲ್ಲಿ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪತ್ರದಲ್ಲಿ ದಾವೂದ್, ಸಫ್ವಾನ್ ಸೇರಿದಂತೆ ಉಳ್ಳಾಲ ನಗರಸಭಾ ಸದಸ್ಯನೊಬ್ಬನ ಹೆಸರು ಉಲ್ಲೇಖವಾಗಿದೆ. ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ನಾನು ನೇಣಿಗೆ ಶರಣಾಗಿ ಸಾಯುತ್ತೇನೆಂದು ಪತ್ರದಲ್ಲಿ ಇಲಿಯಾಸ್ ಪತ್ನಿ ಫರ್ಜಾನಾ ಹೆಸರಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ಇಲ್ಯಾಸ್ ಹತ್ಯೆಗೆ ಪ್ರತೀಕಾರ ತೀರಿಸದೇ ಬಿಡಲ್ಲ: ಬ್ಯಾರಿ ಭಾಷೆಯ ಆಡಿಯೋ ವೈರಲ್

    ಹತ್ಯೆ ಆರೋಪಿಗಳಿಗೆ ಸಚಿವ ಯು.ಟಿ.ಖಾದರ್ ಆಪ್ತನಾಗಿರುವ ನಗರಸಭಾ ಸದಸ್ಯ ಉಸ್ಮಾನ್ ಕಲ್ಲಾಪು ಬೆಂಗಾವಲಿದ್ದಾನೆ ಎಂಬಂತೆ ಬಿಂಬಿಸಿ ಸುದ್ದಿ ಹರಡಲಾಗುತ್ತಿದೆ. ಅಲ್ಲದೆ ದಾವೂದ್ ತನ್ನನ್ನು ಕೊಲ್ಲಲು ಸಂಚು ಹೂಡಿದ್ದಾನೆ. ಆತನಿಗೆ ಸಫ್ವಾನ್, ಉಸ್ಮಾನ್ ಕಲ್ಲಾಪು, ರಹೀಮ್ ಮಂಚಿಲ ಸಪೋರ್ಟ್ ಇದೆ. ಆದರೆ ತಾನು ಮಾತ್ರ ಇನ್ನು ಯಾವುದೇ ಜಗಳ ಮಾಡುವುದಿಲ್ಲ ಅಂತಾ ಇಲಿಯಾಸ್ ಕೆಲವು ದಿನಗಳ ಹಿಂದೆ ಹೇಳಿಕೊಂಡಿದ್ದನೆಂದು ಪತ್ರದಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಸಚಿವ ಖಾದರ್ ಜೊತೆ ಕಾಣಿಸಿಕೊಂಡಿದ್ದ ಇಲಿಯಾಸ್ ನ ಬರ್ಬರ ಹತ್ಯೆ

    ನನಗೆ ನ್ಯಾಯ ಕೊಡಿಸಬೇಕು. ಇಲ್ಲದಿದ್ದರೆ ನನ್ನ ಸಾವಿಗೆ ನೀವೇ ಹೊಣೆಯಾಗುತ್ತೀರಿ ಅಂತಾ ಫರ್ಜಾನಾ ಹೆಸರಲ್ಲಿ ಬರೆದಿರುವ ಪತ್ರ ವಾಟ್ಸಪ್ ಗ್ರೂಪ್ ಗಳಲ್ಲಿ ತಲ್ಲಣ ಮೂಡಿಸಿದೆ. ಆದರೆ ಪತ್ರ ಆಕೆಯೇ ಬರೆದಿದ್ದಾರಾ ಹಾಗೂ ಯಾರಿಗೆ ಬರೆದ ಪತ್ರ ಅನ್ನೋದು ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಯುಟಿ ಖಾದರ್ ಜೊತೆ ದೀಪಕ್ ಹತ್ಯೆಯ ಆರೋಪಿ ಕುಳಿತಿರುವ ಫೋಟೋ ವೈರಲ್

     

  • ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಕೊಲೆ, ಗುಪ್ತಚರ ಇಲಾಖೆ ಏನ್ ಮಾಡ್ತಿದೆ?- ಶೋಭಾ ಪ್ರಶ್ನೆ

    ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಕೊಲೆ, ಗುಪ್ತಚರ ಇಲಾಖೆ ಏನ್ ಮಾಡ್ತಿದೆ?- ಶೋಭಾ ಪ್ರಶ್ನೆ

    ಬೆಂಗಳೂರು: ಕರಾವಳಿಯಲ್ಲಿ ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿಯೇ ಕೊಲೆಗಳು ನಡೆಯುತ್ತಿವೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.

    ಮಂಗಳೂರಿನ ಇಲಿಯಾಸ್ ಕೊಲೆ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಯಾರನ್ನು ಹತ್ಯೆ ಮಾಡ್ತಾರೋ ಗೊತ್ತಿಲ್ಲ. ಸರ್ಕಾರಕ್ಕೆ ಇಷ್ಟೆಲ್ಲ ಆಗುತ್ತಿದ್ರೂ, ಅವರ ಹತ್ತಿರವೇ ಗುಪ್ತಚರ ಇಲಾಖೆ ಇದ್ದರೂ ಏನೂ ಮಾಡ್ತಿಲ್ಲ. ಕೂಡಲೇ ಅಪರಾಧಿಗಳನ್ನು ಬಂಧಿಸಬೇಕು ಅಂತ ಆಗ್ರಹಿಸಿದ್ರು. ಇದನ್ನೂ ಓದಿ: ಸಚಿವ ಖಾದರ್ ಜೊತೆ ಕಾಣಿಸಿಕೊಂಡಿದ್ದ ಇಲಿಯಾಸ್ ನ ಬರ್ಬರ ಹತ್ಯೆ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಿ ಹಿಂದೂ-ಮುಸ್ಲಿಂ ಮಧ್ಯೆ ಜಗಳ ಹಚ್ಚುವಂತಹ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಸರ್ಕಾರದ ಪ್ರಾಯೋಜಕತ್ವದಲ್ಲಿ ರಾಜ್ಯದಲ್ಲಿ ಕೊಲೆಗಳು ನಡೆಯುತ್ತಿವೆ ಅಂತ ಆರೋಪಿಸಿದ ಅವರು, ಹಿಂದೂಗಳನ್ನು ಮುಸಲ್ಮಾನರು ಕೊಲೆ ಮಾಡಬೇಕು. ಮುಸಲ್ಮಾನರನ್ನು ಹಿಂದೂಗಳು ಕೊಲೆ ಮಾಡಬೇಕು ಅನ್ನೋ ಕುಮ್ಮಕ್ಕನ್ನು ರಾಜ್ಯ ಸರ್ಕಾರ ಕೊಡುತ್ತಿದೆ. ಅಪರಾಧಿಗಳನ್ನು ಬಂಧಿಸುವಂತಹ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿಲ್ಲ. ಅದರ ಬದಲಾಗಿ ಉಗ್ರವಾದಿ ಸಂಘಟನೆಗಳಿಗೆ ಬೆಂಬಲ ನೀಡುತ್ತಿದೆ ಅಂದ್ರು. ಇದನ್ನೂ ಓದಿ: `ಟಾರ್ಗೆಟ್’ ಇಲಿಯಾಸ್ ಕೊಲೆ ಬಗ್ಗೆ ಸಚಿವ ಖಾದರ್ ಹೀಗಂದ್ರು

    ಮುಸಲ್ಮಾನರಲ್ಲಿ ಕೆಲವೇ ಜನ ಉಗ್ರವಾದಿಗಳು, ಜಿಹಾದಿಗಳು ಹಾಗೂ ಪಿಎಫ್‍ಐ ಸಂಘಟನೆ ಜೊತೆ ಇದ್ದಾರೆ. ಇಂತಹವರಿಗೆ ಪ್ರೇರಣೆ ನೀಡಿ ಒಡೆದು ಆಳುವಂತಹ ನೀತಿಯನ್ನು ಮಾಡಿ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಸಂಘರ್ಷವನ್ನು ಉಂಟುಮಾಡುವಂತಹ ವ್ಯವಸ್ಥಿತ ಷಡ್ಯಂತ್ರದ ಫಲವಾಗಿ ಇಂತಹ ಘಟನೆಗಳು ನಡೆಯುತ್ತಿದೆ ಅಂತ ಕಿಡಿಕಾರಿದ್ರು.

    ತಕ್ಷಣ ಕೊಲೆ ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟಬೇಕು. ಹಾಗೆಯೇ ಇನ್ನುಳಿದ 3 ತಿಂಗಳಾದ್ರೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಹೊರಬೇಕು ಅಂತ ಸರ್ಕಾರಕ್ಕೆ ಆಗ್ರಹಿಸಿದ್ರು.

    https://www.youtube.com/watch?v=vmgH5FDGx6Y

    https://www.youtube.com/watch?v=pnLn279DzSc

  • ಸಚಿವ ಖಾದರ್ ಜೊತೆ ಕಾಣಿಸಿಕೊಂಡಿದ್ದ ಇಲಿಯಾಸ್ ನ ಬರ್ಬರ ಹತ್ಯೆ

    ಸಚಿವ ಖಾದರ್ ಜೊತೆ ಕಾಣಿಸಿಕೊಂಡಿದ್ದ ಇಲಿಯಾಸ್ ನ ಬರ್ಬರ ಹತ್ಯೆ

    ಮಂಗಳೂರು: ದೀಪಕ್ ರಾವ್ ಮತ್ತು ಬಶೀರ್ ಸಾವಿನ ಬಳಿಕ ಶಾಂತವಾಗಿದ್ದ ಕರಾವಳಿಯಲ್ಲಿ ಇದೀಗ ಮತ್ತೊಂದು ಹೆಣ ಬಿದ್ದಿದೆ. ಮಂಗಳೂರಿನ ಜಪ್ಪಿನಮೊಗರಿನ ಕುದ್ಪಾಡಿಯಲ್ಲಿ ಟಾರ್ಗೆಟ್ ಗ್ರೂಪಿನ ಇಲಿಯಾಸ್ (31) ನನ್ನು ಇಂದು ಬೆಳಗ್ಗೆ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ.

    ಉಳ್ಳಾಲದ ಟಾರ್ಗೆಟ್ ಗ್ರೂಪ್ ರೂವಾರಿ ಹಾಗೂ ಕಾಂಗ್ರೆಸ್ ಕಾರ್ಯಕರ್ತನಾಗಿದ್ದ ಇಲಿಯಾಸ್, ಮಂಗಳೂರಿನ ಇಲ್ಯಾಸ್ ಫ್ಲಾಟ್‍ನಲ್ಲಿ ಮಲಗಿದ್ದ ಸಮಯದಲ್ಲಿ ಮುಂಜಾನೆ ಇಬ್ಬರು ಆಗಂತುಕರು ಮನೆಗೆ ನುಗ್ಗಿ ಕೊಚ್ಚಿ ಕೊಲೆಗೈದಿದ್ದಾರೆ.

    ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಒಂದೂವರೆ ತಿಂಗಳ ಹಿಂದೆಯಷ್ಟೆ ಜೈಲು ಸೇರಿದ್ದ ಇಲಿಯಾಸ್, 2 ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದ. ಹೀಗಾಗಿ ಆತ ಮನೆಯಲ್ಲಿ ಒಬ್ಬನೇ ಇರುವುದರ ಮಾಹಿತಿ ಪಡೆದು ಆಗಂತುಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

    ಟಾರ್ಗೆಟ್ ಗ್ರೂಪ್ ಸದಸ್ಯರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಆಹಾರ ಸಚಿವ ಯು.ಟಿ ಖಾದರ್ ಜೊತೆ ಇಲಿಯಾಸ್ ಕಾಣಿಸಿಕೊಂಡಿದ್ದ ಫೋಟೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಇದನ್ನೂ ಓದಿ: ಯುಟಿ ಖಾದರ್ ಜೊತೆ ದೀಪಕ್ ಹತ್ಯೆಯ ಆರೋಪಿ ಕುಳಿತಿರುವ ಫೋಟೋ ವೈರಲ್

    ಯಾರು ಈ ಇಲಿಯಾಸ್?
    ಮಂಗಳೂರು ರೌಡಿ ನಿಗ್ರಹ ದಳದ ಪೊಲೀಸರು ಉಳ್ಳಾಲದ ನಟೋರಿಯಸ್ ಟಾರ್ಗೆಟ್ ಗ್ಯಾಂಗ್ ನಾಯಕ ಇಲಿಯಾಸ್ ನನ್ನು 2017ರ ನವೆಂಬರ್ ನಲ್ಲಿ ಬಂಧಿಸಿದ್ದರು. ಈತನ ಮೇಲೆ ರಾಜ್ಯದ ನಾನಾ ಭಾಗಗಳಲ್ಲಿ ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ.

    ಇಲ್ಯಾಸ್ ಈ ಹಿಂದೆ ಉಳ್ಳಾಲ ಯುವ ಕಾಂಗ್ರೆಸ್ ಉಪಾಧ್ಯಕ್ಷನಾಗಿದ್ದ. ಗಂಭೀರ ಆರೋಪಗಳಿದ್ದರೂ ಇಲಿಯಾಸ್ ನನ್ನು ಯು.ಟಿ. ಖಾದರ್ ಉಳ್ಳಾಲ ಬ್ಲಾಕ್ ನ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಸ್ಥಾನ ಕೊಟ್ಟಿದ್ದು ಹೇಗೆ ಎಂದು ಜನ ಈಗ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ. ಅಕ್ಟೋಬರ್ ನಲ್ಲಿ ಮುಕ್ಕಚ್ಚೇರಿಯಲ್ಲಿ ನಡೆದ ಝುಬೈರ್ ಎಂಬವರ ಕೊಲೆಯಲ್ಲೂ ಟಾರ್ಗೆಟ್ ಹೆಸರು ತಳುಕು ಹಾಕಿದಾಗ ಇಲಿಯಾಸ್ ನನ್ನು ಯುವ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಲಾಗಿತ್ತು.  ಇದನ್ನೂ ಓದಿ: ದೀಪಕ್ ಬರ್ಬರ ಹತ್ಯೆಗೈದ ನಾಲ್ವರು ಅರೆಸ್ಟ್: ಪೊಲೀಸರ ಮೇಲೆ ತಲ್ವಾರ್ ಬೀಸಿದ್ದ ಆರೋಪಿಗಳು

    ಯುವತಿಯರ ಮೂಲಕ ಶ್ರೀಮಂತರನ್ನು ಖೆಡ್ಡಾಕ್ಕೆ ಬೀಳಿಸಿ, ಬ್ಲಾಕ್ ಮೇಲ್ ಮಾಡಿ ಲಕ್ಷಾಂತರ ರುಪಾಯಿಯನ್ನು ದೋಚುವ ಕೆಲಸವನ್ನು ಈ ಟಾರ್ಗೆಟ್ ಗ್ರೂಪ್ ಮಾಡಿದೆ ಎನ್ನುವ ಆರೋಪವಿದೆ. ಅಷ್ಟೇ ಅಲ್ಲದೇ ಈ ಗ್ರೂಪಿನ ಸದಸ್ಯರು ಉಳ್ಳಾಲ ಬೀಚ್ ಗೆ ಬಂದವರನ್ನು ದೋಚಿ ಹಲ್ಲೆ ನಡೆಸುತ್ತಿದ್ದರು. ಒಂದು ವೇಳೆ ದೂರು ನೀಡಿದ್ರೆ ಖಾದರ್ ಅವರ ಜನ ಎಂದು ಪೊಲೀಸರೂ ಸಮ್ಮನಾಗುತ್ತಿದ್ದರು ಎನ್ನುವ ಆರೋಪವನ್ನು ಜನ ಮಾಡುತ್ತಿದ್ದಾರೆ. ಇತ್ತೀಚೆಗೆ ಕಾಟಿಪಳ್ಳದ ಸಫ್ವಾನ್ ಎಂಬ ಯುವಕನನ್ನು ಇದೇ ಟಾರ್ಗೆಟ್ ತಂಡ ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟು ಕೊನೆಗೆ ಕೊಲೆ ಮಾಡಿ ಚಾರ್ಮಾಡಿ ಘಾಟಿ ಯಿಂದ ಕೆಳಗೆ ಎಸೆದಿತ್ತು.

    ಈ ಫೋಟೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಜೊತೆ ಅಶ್ರಫ್ ಕೊಲೆ ಕೇಸ್ ಆರೋಪಿ ಭರತ್ ಕುಂಡೆಲ್ ಕುಳಿತಿರುವ ಫೋಟೋ ವೈರಲ್ ಆಗಿದೆ. ಬಿಸಿ ರೋಡ್‍ನಲ್ಲಿ ಟಿಪ್ಪು ಜಯಂತಿಯಂದು ಅಶ್ರಫ್ ಕೊಲೆ ನಡೆದಿತ್ತು.