Tag: tarun

  • ಮೆಗಾಸ್ಟಾರ್ ಮನೆಮಗಳು ನಿಹಾರಿಕಾ ಜೊತೆಗಿನ ಮದುವೆ ಬಗ್ಗೆ ತರುಣ್ ಸ್ಪಷ್ಟನೆ

    ಮೆಗಾಸ್ಟಾರ್ ಮನೆಮಗಳು ನಿಹಾರಿಕಾ ಜೊತೆಗಿನ ಮದುವೆ ಬಗ್ಗೆ ತರುಣ್ ಸ್ಪಷ್ಟನೆ

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಮನೆಮಗಳು ನಿಹಾರಿಕಾ ಕೊನಿಡೆಲಾ (Niharika Konidela) ಅವರು ಪತಿ ಚೈತನ್ಯ ಅವರಿಗೆ ಡಿವೋರ್ಸ್ ನೀಡಿ ಈಗ ಸಿಂಗಲ್ ಲೈಫ್ ಲೀಡ್ ಮಾಡ್ತಿದ್ದಾರೆ. ಈಗ ಸೋಷಿಯಲ್ ಮೀಡಿಯಾದಲ್ಲಿ ನಿಹಾರಿಕಾ 2ನೇ ಮದುವೆ ಬಗ್ಗೆ ಸಖತ್ ಚರ್ಚೆ ನಡೆಯುತ್ತಿದೆ. ತೆಲುಗಿನ ಹೀರೋ ತರುಣ್ ಜೊತೆ ನಟಿ ಮದುವೆಯಾಗುತ್ತಾರೆ ಎಂಬ ವಿಚಾರ ಸದ್ದು ಮಾಡುತ್ತಿದೆ. ಅಷ್ಟಕ್ಕೂ ಇದು ನಿಜಾನಾ? ಈ ಬಗ್ಗೆ ತರುಣ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಈ ನಟಿಯರಿಂದ ರಶ್ಮಿಕಾ, ಪೂಜಾ ಹೆಗ್ಡೆ, ಕೃತಿ ಶೆಟ್ಟಿ ಆಫರ್‌ಗೆ ಬಿತ್ತು ಕತ್ತರಿ

    ನಿಹಾರಿಕಾ ಕೊನಿಡೆಲಾ ಅವರು ಚೈತನ್ಯ ಅವರನ್ನ ಪ್ರೀತಿಸಿ ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು. ನಿಹಾರಿಕಾ ಅವರ ಮದುವೆ ಇಡೀ ಮೆಗಾಸ್ಟಾರ್ ಕುಟುಂಬದ ಬೆಂಬಲ ಮತ್ತು ಹಾರೈಕೆಯಿತ್ತು. ಆದರೆ ನಿಹಾರಿಕಾ ದಾಂಪತ್ಯ, ಮದುವೆಯಾಗಿ ಎರಡೂವರೆ ವರ್ಷಕ್ಕೆ ಅಂತ್ಯವಾಯಿತು. ಚೈತನ್ಯಗೆ ಡಿವೋರ್ಸ್ ನೀಡಿ ಮತ್ತೆ ಸಿನಿಮಾದತ್ತ ನಟಿ ಮುಖ ಮಾಡಿದ್ದಾರೆ.

    ವೈಯಕ್ತಿಕ ಜೀವನ ಸರಿ ಇಲ್ಲದೇ ಇರುವ ಕಾರಣ, ಮತ್ತೆ ಬೆಳ್ಳಿಪರದೆಯಲ್ಲಿ ನಟಿ ಮಿಂಚ್ತಾರೆ ಎಂಬ ಸುದ್ದಿ ವೈರಲ್ ಆಗಿತ್ತು. ನಿಹಾರಿಕಾ ನಿರ್ಧಾರಕ್ಕೆ ಕುಟುಂಬದ ಸಹಮತವಿಲ್ಲ. ಆದರೂ ಅವರ ವಿರುದ್ಧ ನಿಂತು ನಿಹಾರಿಕಾ ನಾಯಕಿಯಾಗಲು ತಯಾರಿ ಮಾಡ್ತಿದ್ದಾರೆ ಎನ್ನಲಾಗಿತ್ತು. ಇದೀಗ ಈ ಸುದ್ದಿ ನಡುವೆ ಮತ್ತೊಂದು ಸುದ್ದಿ ಸೌಂಡ್ ಮಾಡ್ತಿದೆ. ತೆಲುಗಿನ ನಟ ತರುಣ್ (Actor Tarun) ಜೊತೆ ನಿಹಾರಿಕಾ 2ನೇ ಮದುವೆಯಾಗಲು (Wedding) ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಅಷ್ಟಕ್ಕೂ ಈ ವಿಚಾರ ನಿಜಾನಾ ಎಂಬುದರ ಬಗ್ಗೆ ತರುಣ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯ ಬಯೋಪಿಕ್: ಪಾರ್ಟ್ 1 ಚಿತ್ರಕ್ಕೆ ನಿರೂಪ್ ಭಂಡಾರಿ ಹೀರೋ

    ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಮಿಂಚಿದ್ದ ನಟ ತರುಣ್ ಈಗ ಬ್ಯುಸಿನೆಸ್ ಫೀಲ್ಡ್‌ನಲ್ಲಿ ಗುರುತಿಸಿಕೊಳ್ತಿದ್ದಾರೆ. ಇತ್ತೀಚಿಗೆ ತರುಣ್ ತಾಯಿ ರೋಜಾ ಅವರು ನನ್ನ ಮಗ ಮದುವೆಯಾಗುತ್ತಾನೆ. ದೊಡ್ಮನೆಯ ಹುಡುಗಿಯನ್ನೇ ಮದುವೆಯಾಗುತ್ತಾರೆ ಎಂದು ಮಾತನಾಡಿದ್ದರು. ಹಾಗಾಗಿ ನಿಹಾರಿಕಾ ಜೊತೆ ತರುಣ್ ಹೆಸರು ಕೇಳಿ ಬಂದಿತ್ತು.

    ನಿಹಾರಿಕಾ ಜೊತೆಗಿನ ಮದುವೆ ಬಗ್ಗೆ ನಟ ಪ್ರತಿಕ್ರಿಯಿಸಿ, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು, ನಿಹಾರಿಕಾ ಜೊತೆ ನಾನು ಮದುವೆಯಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬಳಿಕ ನನ್ನ ಮದುವೆ ಬಗ್ಗೆ ಮುಂದಿನ ದಿನಗಳಲ್ಲಿ ನಾನೇ ತಿಳಿಸುತ್ತೇನೆ ಎಂದು ತರುಣ್ ರಿಯಾಕ್ಟ್ ಮಾಡಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿವೃತ್ತ ಐಪಿಎಸ್ ಅಧಿಕಾರಿಯ ಮಧ್ಯಸ್ಥಿಕೆಯಿಂದ ಇಡೀ ಕೇಸ್ ಹಳ್ಳ ಹಿಡಿದಿದೆ: ಸಂಬರ್ಗಿ ಆರೋಪ

    ನಿವೃತ್ತ ಐಪಿಎಸ್ ಅಧಿಕಾರಿಯ ಮಧ್ಯಸ್ಥಿಕೆಯಿಂದ ಇಡೀ ಕೇಸ್ ಹಳ್ಳ ಹಿಡಿದಿದೆ: ಸಂಬರ್ಗಿ ಆರೋಪ

    ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರ ಪ್ರಭಾವದಿಂದ ಇಡೀ ಡ್ರಗ್ಸ್ ಪ್ರಕರಣ ಹಳ್ಳ ಹಿಡಿದಿದೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ಗಂಭೀರ ಆರೋಪ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತರುಣ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆದರೆ ಚಾರ್ಜ್ ಶೀಟ್ ನಲ್ಲಿ ತರುಣ್ ಹೆಸರು ಯಾಕೆ ಉಲ್ಲೇಖ ಆಗಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬರೀ ಯೂರಿನ್, ರಕ್ತ ಪರೀಕ್ಷೆ ಮಾಡಿದ್ರೆ ಸಾಲದು -ಹೇರ್ ಫೋಲಿಕಲ್ ಟೆಸ್ಟ್‌ಗೆ ಇಂದ್ರಜಿತ್ ಆಗ್ರಹ

    ನಿವೃತ್ತ ಐಪಿಎಸ್ ಆಫೀಸ್ ಅವರ ಮಧ್ಯಸ್ಥಿಕೆಯಿಂದ ಇಡೀ ಕೇಸ್ ಹಳ್ಳ ಹಿಡಿದಿದೆ. ಇಲ್ಲಿ ಅನುಶ್ರೀ ಡ್ರಗ್ಸ್ ಸೇವನೆ ಮಾಡಿಲ್ಲ. ಬೆಂಗಳೂರಿಗಿಂತ ಮಂಗಳೂರಿನಲ್ಲಿ ಡ್ರಗ್ಸ್ ಮಾತ್ರೆಗಳು ಹೆಚ್ಚಾಗಿ ಸಿಗುತ್ತಿದೆ ಎಂಬುದು ಕಿಶೋರ್ ಅಮನ್ ಶೆಟ್ಟಿ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ. ಅಲ್ಲಿಗೆ ಗೋವಾ ಹಾಗೂ ಕೇರಳದಿಂದ ಡ್ರಗ್ಸ್ ಮಾತ್ರೆಗಳು ರವಾನೆಯಾಗುತ್ತಿವೆ ಎಂದು  ಆರೋಪಿಸಿದರು. ಇದನ್ನೂ ಓದಿ: ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದ್ರೆ ಖುಷಿ ಆಗುತ್ತೆ ಅಂತಿದ್ರು ಅನುಶ್ರೀ: ಕಿಶೋರ್ ಅಮನ್ ಶೆಟ್ಟಿ

    ಇದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿದ್ದ ಇಂದ್ರಜಿತ್, ಯೂರಿನ್ ರಕ್ತ ಪರೀಕ್ಷೆಯ ಬದಲು ಹೇರ್ ಫೋಲಿಕಲ್ ಟೆಸ್ಟ್ ಮಾಡಿ ಎಂದು ಆಗ್ರಹಿಸಿದ್ದರು. ಈ ಹಿಂದೆ ಪ್ರಕರಣ ಸಂಬಂಧ ಯಾರನ್ನು ವಿಚಾರಣೆಗೆ ಕರೆದಿದ್ದಾರೋ ಅವರಿಗೆ ಯಾವುದೇ ರೀತಿಯ ಭಯ ಹುಟ್ಟಿಲ್ಲ. ಕೊರೊನಾ ಎರಡನೇ ಅಲೆಯ ಬಳಿಕ ಅವರು ಮತ್ತೆ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.  ಇದನ್ನೂ ಓದಿ: Exclusive: ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು: ಕಿಶೋರ್ ಅಮನ್ ಶೆಟ್ಟಿ

    ನಾನು ಈ ಹಿಂದೆ ಹೇಳಿದಂತೆ ಇದೊಂದು ಇಡೀ ಕರ್ನಾಟಕದ ಇತಿಹಾಸದಲ್ಲಿಯೇ ದೊಡ್ಡ ಸ್ಕ್ಯಾಮ್ ಆಗಿದೆ. ರಾಜಕೀಯ, ಸಮಾಜ, ಯುವಕ ಹಾಗೂ ಚಿತ್ರರಂಗದ ಆ್ಯಂಗಲ್ ಗಳಿವೆ. ಹೀಗಾಗಿ ನೀವು ಕಳಿಸಿರುವ ಸಂದೇಶದಿಂದ ಯಾರಿಗೂ ಭಯ ಇಲ್ಲ. ಇಂದಿಗೂ ಕೋಟ್ಯಂತರ ರೂ. ಡ್ರಗ್ಸ್ ಕರ್ನಾಟಕ ಮಾತ್ರವಲ್ಲದೇ ಅದರಲ್ಲೂ ಬೆಂಗಳೂರಿನಲ್ಲಿ ಡಂಪ್ ಆಗುತ್ತಿದೆ ಎಂದು ಇಂದ್ರಜಿತ್ ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಡ್ರಗ್ಸ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು