Tag: tarun shivappa

  • ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ

    ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ

    ಸೈಲೆಂಟಾಗೇ ರಿಯಲ್ ಸ್ಟಾರ್ ಉಪೇಂದ್ರ (Upendra) ಅವರ ಹೊಸ ಸಿನಿಮಾ ಪ್ಲ್ಯಾನ್‌ ಆಗಿದೆ, ಟೀಮ್ ಕೂಡ ರಿವೀಲ್ ಆಗಿದೆ. ಇನ್ನುಳಿದ ಮಾಹಿತಿಗಳು ಇನ್ನಷ್ಟೇ ಹೊರಬೀಳಬೇಕಿದ್ದು, ಉಪೇಂದ್ರಗೆ ಈ ಬಾರಿ ಅರವಿಂದ್ ಕೌಶಿಕ್ ನಿರ್ದೇಶನ ಮಾಡುತ್ತಿದ್ದಾರೆ.

    ಚಿತ್ರವನ್ನು ತರುಣ್ ಸ್ಡುಡಿಯೋಸ್ ಬ್ಯಾನರ್‌ನಲ್ಲಿ ತರುಣ್ ಶಿವಪ್ಪ (Tarun Shivappa) ನಿರ್ಮಿಸುತ್ತಿದ್ದಾರೆ. ಈ ನಯಾ ಕಾಂಬಿನೇಶನ್ ಆರಂಭದಲ್ಲೇ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: ಭಾರೀ ಸರಕು ವಾಹನ ಪರವಾನಗಿಯುಳ್ಳ ಚಾಲಕರು ಪ್ರಯಾಣಿಕ ವಾಹನ ಚಾಲನೆ ಮಾಡಲು ಅರ್ಹರು: ಕಾಶ್ಮೀರ ಹೈಕೋರ್ಟ್

    ಸದ್ಯಕ್ಕೀಗ ಉಪೇಂದ್ರ, ಸೂರಪ್ಪ ಬಾಬು ನಿರ್ಮಾಣದ ನಾಗಣ್ಣ ನಿರ್ದೇಶನದಲ್ಲಿ ʻಭಾರ್ಗವʼ ಚಿತ್ರದಲ್ಲಿ ತೊಡಗಿದ್ದು ಇದರ ಶೂಟಿಂಗ್ ಮುಗಿದ ಬಳಿಕ ಹೊಸ ಸಿನಿಮಾ ಪ್ರಾರಂಭಿಸುವ ಪ್ಲ್ಯಾನ್‌ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ ಭಾರತದ ಸೇನಾ ಶಕ್ತಿಯನ್ನ ಇಡೀ ವಿಶ್ವವೇ ನೋಡಿದೆ; ಸಂಸತ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು

    ಹಲವು ದಿನಗಳಿಂದ ಅರವಿಂದ್ ಕೌಶಿಕ್ ನಿರ್ದೇಶನದಲ್ಲಿ ಉಪ್ಪಿ ನಟಿಸುವ ಸುದ್ದಿ ಇತ್ತು. ಇದೀಗ ನಿರ್ಮಾಣ ಸಂಸ್ಥೆಯಿಂದಲೇ ಅಧಿಕೃತ ಮಾಹಿತಿ ಸಿಕ್ಕಿದ್ದು ಚಿತ್ರಕ್ಕೆ ಶೀರ್ಷಿಕೆಯೇ ಮುಖ್ಯ ಆಕರ್ಷಣೆ ಆಗಿದೆ. ಚಿತ್ರಕ್ಕೆ ʻನೆಕ್ಸ್ಟ್‌ ಲೆವೆಲ್ʼ ಎಂದು ಶೀರ್ಷಿಕೆ ಇಡಲಾಗಿದೆ. ಇದರ ಇನ್ನಷ್ಟು ಸೀಕ್ರೆಟ್‌ಗಳನ್ನ ಹಂತಹಂತವಾಗಿ ರಿವ್ಹೀಲ್‌ ಮಾಡುವ ಸುದ್ದಿ ಕೊಟ್ಟಿದೆ ಚಿತ್ರತಂಡ. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

  • ‘ಛೂಮಂತರ್’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿದ ರವಿಚಂದ್ರನ್

    ‘ಛೂಮಂತರ್’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿದ ರವಿಚಂದ್ರನ್

    ರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ (Tarun Shivappa) ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ (Sharan) ನಾಯಕರಾಗಿ ನಟಿಸಿರುವ ‘ಛೂ ಮಂತರ್’ (Choomantar) ಚಿತ್ರದ ಟೈಟಲ್ ಟ್ರ್ಯಾಕ್ ನಿನ್ನೆ ಅದ್ಧೂರಿ ಸಮಾರಂಭದಲ್ಲಿ ಬಿಡುಗಡೆಯಾಗಿದೆ. ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ (Ravichandran)  ಅವರು ಟೈಟಲ್ ಟ್ರ್ಯಾಕ್ (Title Track) ಬಿಡುಗಡೆ ಮಾಡಿದರು.

    ಚಿತ್ರತಂಡದವರ ಮಾತು ಕೇಳಿದಾಗ ಈ ತಂಡದಿಂದ ಒಳ್ಳೆಯ ಚಿತ್ರ ಬರುವ ಎಲ್ಲಾ ಲಕ್ಷಣಗಳು ಇದೆ ಎಂದು ಮಾತು ಆರಂಭಿಸಿದ ಕ್ರೇಜಿಸ್ಟಾರ್ ರವಿಚಂದ್ರನ್, ಶರಣ್ ಒಬ್ಬ ಒಳ್ಳೆಯ ನಟ. ಆತನ ಚಿತ್ರದಲ್ಲಿ ಎರಡು ಹಾಡುಗಳು ಹಿಟ್ ಆಗೇ ಆಗುತ್ತದೆ. ಚಂದನ್ ಶೆಟ್ಟಿ ಸಂಗೀತದಲ್ಲಿ ಮೂಡಿ ಬಂದಿರುವ ಈ ಹಾಡು ಕೂಡ ಚೆನ್ನಾಗಿದೆ. ನಿರ್ಮಾಪಕ ತರುಣ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

    ನಾನು ನಾಯಕನಾಗಲು ರವಿಚಂದ್ರನ್ ಅವರೆ ಕಾರಣ. ನಾನು ಅವರೊಂದಿಗೆ ಹಠವಾದಿ ಚಿತ್ರದಲ್ಲಿ ಅಭಿನಯಿಸಬೇಕಾದರೆ, ನೀನು ಇನ್ನು ನಾಯಕನಾಗಿಲ್ವಾ? ಎಂದು ಕೇಳಿದರು. ಆಮೇಲೆ ನಾಯಕನಾಗಬೇಕು ಎಂದು ಯಾವತ್ತೂ ಅಂದುಕೊಂಡಿರದ ನಾನು, ಅವರು ಹೇಳಿದ ಎರಡು ವರ್ಷಗಳಲ್ಲೇ ನಾಯಕನಾದೆ. ಅಷ್ಟು ಒಳ್ಳೆಯ ಮನಸ್ಸು ರವಿ ಸರ್ ಅವರದು. ಇಂದು ನಮ್ಮ ಚಿತ್ರದ ಹಾಡನ್ನು ಅವರು ಬಿಡುಗಡೆ ಮಾಡಿದ್ದು ಖುಷಿಯಾಗಿದೆ. ಇನ್ನೂ ಇಂದು ಬಿಡುಗಡೆಯಾಗಿರುವ ಹಾಡಿನ ಬಗ್ಗೆ ಹೇಳಬೇಕಾದರೆ, ಚಂದನ್ ಶೆಟ್ಟಿ ಅಮೋಘವಾಗಿ ಸಂಗೀತ ನೀಡಿ ಹಾಡಿದ್ದಾರೆ‌. ವಿಜಯ್ ಈಶ್ವರ್ ಈ ಹಾಡನ್ನು ಬರೆದಿದ್ದು, ದರ್ಶಿನಿ ನೃತ್ಯ ಸಂಯೋಜನೆ ಮಾಡಿದ್ದಾರೆ. ನಾನು, ಚಿಕ್ಕಣ್ಣ ಹಾಗೂ ಅದಿತಿ ಪ್ರಭುದೇವ ಅಭಿನಯಿಸಿದ್ದೇವೆ‌ ಎಂದು ನಾಯಕ ಶರಣ್ ತಿಳಿಸಿದರು‌.

    ನಾನು, ರವಿ ಸರ್ ಅವರಿಗೆ ಕೆಲವು ದಿನಗಳ ಹಿಂದೆ ಟೀಸರ್ ತೋರಿಸಿದ್ದೆ. ಟೈಟಲ್ ಟ್ರ್ಯಾಕ್ ಅನ್ನು ನೀವೇ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿದ್ದೆ. ಇಂದು ರವಿಚಂದ್ರನ್ ಸರ್ ಬಂದು ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ.  ರವಿ ಸರ್ ಅವರಿಗೆ,  ಈ ಚಿತ್ರದ ಟೈಟಲ್ ನೀಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹಾಗೂ ಕಥೆ ಮೆಚ್ಚಿ ಪ್ರೋತ್ಸಾಹ ನೀಡಿದ ತರುಣ್ ಸುಧೀರ್ ಅವರಿಗೆ ಈ ಸಂದರ್ಭದಲ್ಲಿ ನಾನು ಧನ್ಯವಾದ ತಿಳಿಸುತ್ತೇನೆ. ಇಂದು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಟ್ರೇಲರ್ ಸಹ ಬರಲಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ತರುಣ್ ಶಿವಪ್ಪ.

    ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಹಾಗೂ ಆಗಮಿಸಿದ ಗಣ್ಯರಿಗೆ ನಿರ್ದೇಶಕ ನವನೀತ್ ಧನ್ಯವಾದ ತಿಳಿಸಿದರು‌. ಹಾಡಿ‌ನ ಬಗ್ಗೆ ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ ಮಾಹಿತಿ ನೀಡಿದರು.

     

    ನಟಿಯರಾದ ‌ಅದಿತಿ ಪ್ರಭುದೇವ ಹಾಗೂ ಮೇಘನಾ ಗಾಂವ್ಕರ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಛಾಯಾಗ್ರಾಹಕ ಅನೂಪ್, ಹಾಡು ಬರೆದಿರುವ ವಿಜಯ್ ಈಶ್ವರ್, ನೃತ್ಯ ಸಂಯೋಜಕಿ ದರ್ಶಿನಿ ಮುಂತಾದವರು ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ಸಾಹಸ ಸಂಯೋಜಕ ರವಿವರ್ಮ, ನಿರ್ಮಾಪಕ ಸಂಜಯ್ ಗೌಡ ಸೇರಿದಂತೆ ಅನೇಕ ಗಣ್ಯರು ಹಾಡು ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜನವರಿ 24ಕ್ಕೆ ‘ಖಾಕಿ’ ದರ್ಶನ!

    ಜನವರಿ 24ಕ್ಕೆ ‘ಖಾಕಿ’ ದರ್ಶನ!

    ನಟ ಚಿರಂಜೀವಿ ಸರ್ಜಾ ಅಭಿನಯದ ‘ಖಾಕಿ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ಈ ಸಿನಿಮಾದ ಟೀಸರ್ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿತ್ತು. ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಜೊತೆ ತಾನ್ಯಾ ಹೋಪ್ ನಟಿಸಿರುವ ‘ಖಾಕಿ’ ಸಿನಿಮಾ ಪಕ್ಕಾ ಕಮರ್ಷಿಯಲ್ ಕತೆಯನ್ನು ಹೊಂದಿರುವ ಆ್ಯಕ್ಷನ್ ಸಿನಿಮಾ. ಇದೆ 24ರಂದು ಸಿನಿಮಾ ಎಲ್ಲಾ ಚಿತ್ರಮಂದಿರಗಳಲ್ಲೂ ತನ್ನ ಪ್ರದರ್ಶನ ನೀಡಲು ರೆಡಿಯಾಗಿದೆ.

    ‘ಸಿಂಗ’ ಸಿನಿಮಾ ನಂತರ ಮತ್ತೊಮ್ಮೆ ಆ್ಯಕ್ಷನ್ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ ಅಭಿನಯಿಸಿದ್ದಾರೆ. ‘ಖಾಕಿ’ಯಲ್ಲಿ ಮಾಸ್ ಹೀರೋ ಆಗಿ ಕಾಣಿಸಿಕೊಂಡಿರುವ ಚಿರು ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರದ ಹಾಡುಗಳು, ಟ್ರೇಲರ್ ಈಗಾಗಲೇ ಸಾಕಷ್ಟು ಸದ್ದು ಮಾಡಿದ್ದು, ಸಿನಿಮಾ ನೋಡಲು ಕಾತರದಿಂದ ಕಾಯುತ್ತಿದ್ದಾರೆ.

    ‘ಖಾಕಿ’ ಹಾಕದೆಯೆ ಈ ಸಿನಿಮಾದಲ್ಲಿ ಅಬ್ಬರಿಸಲಿರುವ ಚಿರುಗೆ, ಮಗಧೀರ ಸಿನಿಮಾದಲ್ಲಿ ಕಾಲಭೈರವ ರಾಮ್‍ಚರಣ್ ಎದುರು ಅಬ್ಬರಿಸಿದ್ದ ರಣದೇವ್ ಬಿಲ್ಲಾ, ದೇವ್ಗಿಲ್ ಈ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಚಿರು ಮತ್ತು ದೇವ್ಗಿಲ್ ನಡುವಿನ ಪೈಪೋಟಿ ಪ್ರೇಕ್ಷಕರಿಗೆ ಸಖತ್ ಮಜಾ ಕೊಡಲಿದೆ. ಪಂಚಿಂಗ್ ಡೈಲಾಗ್ಸ್, ಜಬರ್ದಸ್ತ್ ಆ್ಯಕ್ಷನ್ ಝಲಕ್ ಅನ್ನು ಸಿನಿಮಾದಲ್ಲಿ ಕಾಣಬಹುದಾಗಿದೆ. ಚಿರಂಜಿವಿ ಸರ್ಜಾ ಅವರನ್ನು ಮಾಸ್ ಲುಕ್ ನಲ್ಲಿ ನೋಡಲು ಅಭಿಮಾನಿಗಳಂತು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ. ಸಿನಿಮಾ ಕೂಡ ಚಿರಂಜೀವಿ ಸರ್ಜಾಗೆ ಒಂದೊಳ್ಳೆ ಫೇಮ್ ತಂದು ಕೊಡುವ ನಿರೀಕ್ಷೆ ಬೆಟ್ಟದಷ್ಟಿದೆ.

    ‘ಖಾಕಿ’ ಕಥೆ, ಚಿತ್ರಕಥೆ ಬರೆದು ನವೀನ್ ರೆಡ್ಡಿ ಸಿನಿಮಾ ನಿರ್ದೇಶಿಸಿದ್ದಾರೆ. ರಿತ್ವಿಕ್ ಸಂಗೀತ ನೀಡಿದ್ದು, ಬಾಲಾ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಧನು ನೃತ್ಯ ನಿರ್ದೇಶನ ಮಾಡಿದ್ದಾರೆ. ಚಿರಂಜೀವಿ ಸರ್ಜಾ, ತಾನ್ಯ ಹೋಪ್ ಮುಖ್ಯಭೂಮಿಕೆಯಲ್ಲಿದ್ದು, ದೇವ್ ಗಿಲ್, ಶಿವಮಣಿ, ಶಶಿ, ನವ್ಯ ಮುಂತಾದವರು ತಾರಾಬಳಗದಲ್ಲಿದ್ದಾರೆ.

  • ‘ಖಾಕಿ’ಯಲ್ಲಿ ಅಬ್ಬರಿಸಿದ ಚಿರಂಜೀವಿ ಸರ್ಜಾ!

    ‘ಖಾಕಿ’ಯಲ್ಲಿ ಅಬ್ಬರಿಸಿದ ಚಿರಂಜೀವಿ ಸರ್ಜಾ!

    ‘ಖಾಕಿ’ ತೊಡದೆಯೇ ಖಡಕ್ ಲುಕ್ ನಲ್ಲಿ ಚಿರು ಅಬ್ಬರಿಸಿದ್ದಾರೆ. ಈಗಾಗಲೇ ದೊಡ್ಡ ದೊಡ್ಡ ನಟರು ಈ ಸಿನಿಮಾದ ಟ್ರೇಲರ್ ನೋಡಿ ಇಷ್ಟಪಟ್ಟಿದ್ದಾರೆ. ಸಕ್ಸಸ್ ಕಾಣುತ್ತೆ ಎಂಬ ಭರವಸೆ ಮಾತುಗಳನ್ನು ಆಡಿದ್ದಾರೆ. ಚಿರಂಜೀವಿ ಸರ್ಜಾ ಅವರ ನಟನೆ ಕೂಡ ಅದ್ಭುತವಾಗಿ ಮೂಡಿಬಂದಿರುವುದು ಟ್ರೇಲರ್ ನಲ್ಲಿ ಎದ್ದು ಕಾಣುತ್ತಿದೆ. ಚಿತ್ರಮಂದಿರದಲ್ಲಿ ಸೀಟ್ ಮೇಲೆ ಕುಳಿತವರು ಎದ್ದೇಳದ ಹಾಗೇ ನೋಡುವಂತೆ ಮಾಡುವ ಸಾಮರ್ಥ್ಯ ಸಿನಿಮಾಗಿರುವುದು ಈಗಾಗಲೇ ಟ್ರೇಲರ್ ನಲ್ಲೇ ಸಾಬೀತಾಗಿದೆ.

    ಲ್ಯಾಂಡ್ ಮಾಫಿಯಾನ ಹೇಗೆಲ್ಲ ಮಾಡಬಹುದು ಎಂಬುದನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಈ ಹಿಂದೆ ಲ್ಯಾಂಡ್ ಮಾಫಿಯಾ ಬಗ್ಗೆ ಸಾಕಷ್ಟು ಚಿತ್ರಗಳು ತೆರೆಗೆ ಬಂದಿದ್ದರು ಸಹ ಇದೊಂದು ರೀತಿ ವಿಭಿನ್ನವಾಗಿದೆ ಅಂತಾರೆ ನಟ ಉಪೇಂದ್ರ. ಹೌದು, ರಿಯಲ್ ಸ್ಟಾರ್ ಉಪೇಂದ್ರ ಕೂಡ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದು, ನಿರ್ದೇಶಕ ನವೀನ್ ರೆಡ್ಡಿ ನನ್ನ ಮಿತ್ರ. ಮಿತ್ರನ ದೃಷ್ಟಿಗಿಂತ ಒಬ್ಬ ನಿರ್ದೇಶಕನ ದೃಷ್ಟಿಯಲ್ಲಿ ಸಿನಿಮಾ ಅದ್ಭುತವಾಗಿ ಬಂದಿದೆ ಎಂದು ಹಾಡಿ ಹೊಗಳಿದ್ದಾರೆ.

    ಟೈಟಲ್ ಹಾಗೂ ಟ್ಯಾಗ್ ಲೈನ್ ಮೂಲಕ ಸ್ಯಾಂಡಲ್ ವುಡ್‍ನಲ್ಲಿ ಸಂಚಲನ ಸೃಷ್ಟಿಸ್ತಿರೋ ಸಿನಿಮಾ ‘ಖಾಕಿ’. ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ, ಮಾಸ್ ಲುಕ್ ನಲ್ಲಿ ಅಷ್ಟೆ ಅಲ್ಲದೆ ಲವ್ವರ್ ಬಾಯ್ ಆಗಿ ಕೂಡ ಕಾಣಿಸಿಕೊಂಡಿದ್ದಾರೆ. ಲ್ಯಾಂಡ್ ಮಾಫಿಯಾದ ವಿರುದ್ಧ ಹೇಗೆ ಹೋರಾಡಬಹುದು, ಜನರನ್ನ ರಕ್ಷಿಸಲು ನಾಯಕ ತೆಗೆದುಕೊಳ್ಳುವ ರಿಸ್ಕ್ ಎಲ್ಲವೂ ಈಗಾಗಲೇ ಟ್ರೇಲರ್ ನಲ್ಲಿ ಅನಾವರಣಗೊಂಡಿದೆ.

    ಚಿರಂಜೀವಿ ಸರ್ಜಾ ಅಭಿನಯದ ಈ ವರೆಗಿನ ಸಿನಿಮಾಗಳಿಗಿಂತಾ ‘ಖಾಕಿ’ ತೀರಾ ಭಿನ್ನವಾಗಿ ಮೂಡಿಬಂದಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಟ್ರೇಲರ್ ನೋಡಿದ ಪ್ರತಿಯೊಬ್ಬರು ಸಿನಿಮಾಗಾಗಿ ಕಾಯುವಂತೆ ಮಾಡಿದೆ. ತರುಣ್ ಶಿವಪ್ಪ ನಿರ್ಮಾಣ ಎಂದಾಕ್ಷಣಾ ಸಹಜವಾಗಿಯೇ ಒಂದಷ್ಟು ನಿರೀಕ್ಷೆಗಳು ಹುಟ್ಟುತ್ತವೆ. ತರುಣ್ ಟಾಕೀಸ್ ನಿಂದ ಹೊರಬಂದಿರುವ ಸಿನಿಮಾಗಳು ತಾಂತ್ರಿಕ ಶ್ರೀಮಂತಿಕೆಯಿಂದ ಕೂಡಿರುವುದೇ ಇದಕ್ಕೆ ಕಾರಣ. ಸದ್ಯ ತರುಣ್ ಶಿವಪ್ಪ ನಿರ್ಮಾಣದ ‘ಖಾಕಿ’ ಜನವರಿ 24ಕ್ಕೆ ರಿಲೀಸ್ ಗೆ ರೆಡಿಯಾಗಿದೆ.

    ನವೀನ್ ರೆಡ್ಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ರಿತ್ವಿಕ್ ಸಂಗೀತ ನೀಡಿದ್ದಾರೆ. ಬಾಲಾ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಧನು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯಾಗಿ ತಾನ್ಯ ಹೋಪ್ ನಟಿಸಿದ್ದಾರೆ. ದೇವ್ ಗಿಲ್, ಶಿವಮಣಿ, ಶಶಿ, ನವ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಬಣ್ಣದ ಲೋಕದಲ್ಲಿ ಮಿಂಚಬೇಕಾ? ಇಲ್ಲಿದೆ ನಿಮಗೊಂದು ಸುವರ್ಣಾವಕಾಶ

    ಬಣ್ಣದ ಲೋಕದಲ್ಲಿ ಮಿಂಚಬೇಕಾ? ಇಲ್ಲಿದೆ ನಿಮಗೊಂದು ಸುವರ್ಣಾವಕಾಶ

    ನ್ನಡದ ಖ್ಯಾತ ನಿರ್ಮಾಪಕ, ಚಂದನವನಕ್ಕೆ ರೋಜ್, ಮಾಸ್ ಲೀಡರ್, ವಿಕ್ಟರಿ-2ಗಳಂತಹ ಸೂಪರ್ ಸಕ್ಸಸ್ ಸಿನಿಮಾಗಳ ಕೊಟ್ಟಿರೋ ಹ್ಯಾಟ್ರಿಕ್ ಪ್ರೊಡ್ಯೂಸರ್ ತರುಣ್ ಶಿವಪ್ಪ. ತಮ್ಮದೇ ತರುಣ್ ಟಾಕೀಸ್ ಅನ್ನೋ ಒಂದು ಪ್ರೊಡಕ್ಷನ್ ಹೌಸ್ ಸ್ಥಾಪಿಸಿರೋ ಇವರು, ಇದೀಗ ಮತ್ತೊಂದು ಮಹತ್ತರ ಕಾರ್ಯಕ್ಕೆ ಮುಂದಾಗಿದ್ದಾರೆ.

    ಬಣ್ಣದ ಲೋಕದಲ್ಲಿ ಮಿಂಚಬೇಕು ಅನ್ನೋ ಪ್ರತಿಭೆಗಳಿಗೆ ಅವಕಾಶವೊಂದನ್ನ ಒದಗಿಸಿದ್ದಾರೆ. ಹಾಗಂತ ತರುಣ್ ಸಿನಿಮಾದಲ್ಲಿ ನಟಿಸೋ ಚಾನ್ಸ್ ಕೊಡ್ತಿಲ್ಲ. ಬದಲಾಗಿ ನಟನೆ, ನಿರ್ದೇಶನ, ಛಾಯಾಗ್ರಾಹಣ, ಸಂಗೀತ, ಸಂಕಲನ ಹಾಗೂ ನಿರೂಪಣೆಯಲ್ಲಿ ಆಸಕ್ತಿ ಇರೋ ಪ್ರತಿಭೆಗಳಿಗೆ ತರಬೇತಿ ನೀಡೋದಿಕ್ಕೆ ‘ಸಿನಿಮಾ ಸ್ಕೂಲ್’ ಅನ್ನೋ ತರಬೇತಿ ಸಂಸ್ಥೆ ಆರಂಭಿಸಿದ್ದಾರೆ. ಇವರ ಈ ಕಾರ್ಯಕ್ಕೆ ನಿರ್ದೇಶಕ ವಿಶಾಲ್ ರಾಜ್ ಕೂಡ ಕೈ ಜೋಡಿಸಿದ್ದಾರೆ.

    ಸದಾ ಹೊಸತನಕ್ಕೆ ತುಡಿಯೋ ನಿರ್ಮಾಪಕ ತರುಣ್ ಶಿವಪ್ಪ ‘ಸಿನಿಮಾ ಸ್ಕೂಲ್’ ಮುಂದಿನ ತಿಂಗಳ 15 ರಿಂದ ಶುರುವಾಗ್ತಿದ್ದು, ಸಿನಿಮಾಸಕ್ತರು ಸಂಪರ್ಕಿಸಬಹುದು. ಅಷ್ಟಕ್ಕೂ ‘ಸಿನಿಮಾ ಸ್ಕೂಲ್’ ತರಬೇತಿ ಸಂಸ್ಥೆ ನಾಗರಬಾವಿ ನಮ್ಮೂರ ತಿಂಡಿ ಹಿಂಭಾಗದಲ್ಲಿರುವ ಸವೆನ್ ವಂಡರ್ಸ್ ಕಟ್ಟಡದ ಎರಡನೇ ಮಹಡಿಯಲ್ಲಿ ಕಾರ್ಯನಿರ್ವಹಿಸಲಿದೆ.

    ಅಂದಹಾಗೇ ‘ಸಿನಿಮಾ ಸ್ಕೂಲ್’ ಚಿತ್ರರಂಗದ ಪ್ರತಿಯೊಂದು ವಿಭಾಗದ ಕೆಲಸ ಕಾರ್ಯಗಳನ್ನು ಇಲ್ಲಿ ಕಲಿಸಿಕೊಡಲಾಗುತ್ತದೆ. ಆದರೆ ಅದಕ್ಕೂ ಮುಂಚೆ ಯಾವ ವಿದ್ಯಾರ್ಥಿಗಳು ಯಾವ ವಿಭಾಗವನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಎನ್ನುವುದನ್ನು ಆಯಾ ವಿದ್ಯಾರ್ಥಿಗಳ ಆಸಕ್ತಿಯನ್ನು ಗಮನಿಸಿ ಸೂಚಿಸಲಾಗುತ್ತದೆ. ಇಲ್ಲಿ ಒಟ್ಟು ಮೂರು ಮತ್ತು ಆರು ತಿಂಗಳ ಕೋರ್ಸ್ ಗಳು ಇರುತ್ತದೆ. ಕೋರ್ಸು ಮುಗಿಸಿದ ಎರಡು ಮೂರು ಬ್ಯಾಚ್ ಗಳ ಅಭ್ಯರ್ಥಿಗಳಲ್ಲಿ ಯಾರು ಉತ್ತಮವಾಗಿ ಕಲಿತಿರುತ್ತಾರೋ ಅವರಿಗಾಗಿಯೇ ತರುಣ್ ಟ್ಯಾಕೀಸ್ ಅಡಿಯಲ್ಲಿ ಹೊಸ ಚಿತ್ರಗಳನ್ನು ಆರಂಭಿಸಿ, ಆದ್ಯತೆ ಮೇರೆಗೆ ಸಿನಿಮಾದಲ್ಲಿ ಕೆಲಸ ಮಾಡುವ ಅವಕಾಶ ನೀಡಲಾಗುತ್ತದೆ.

    ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ಸೇರಿದಂತೆ ರಾಜ್ಯದ ಹಲವಾರು ಸಿನಿಮಾ ಶಾಲೆಗಳಲ್ಲಿ ಕಳೆದ 25 ವರ್ಷಗಳಿಂದ ತರಬೇತುದಾರರಾಗಿ ಕಾರ್ಯ ನಿರ್ವಹಿಸಿರುವ ನಿರ್ದೇಶಕ ವಿಶಾಲ್ ರಾಜ್ ಅವರು ಈ ‘ಸಿನಿಮಾ ಸ್ಕೂಲ್’ಗೆ ಪ್ರಾಂಶುಪಾಲರಾಗಿದ್ದಾರೆ. ಇವರು ಈಗಾಗಲೇ ‘ಶಿವಾನಿ’, ‘ಮಿಂಚು’, ‘ಇಂಗಳೆ ಮಾರ್ಗ’, ‘ಸಾವಿತ್ರಿ ಬಾಯಿ ಫುಲೆ’ ಸೇರಿದಂತೆ ಹಲವಾರು ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

  • ‘ಖಾಕಿ’ ಖದರ್‌ಗೂ ರೋಮಾಂಚನ ಮೂಡಿಸಿದ ವೀಡಿಯೋ ಸಾಂಗ್!

    ‘ಖಾಕಿ’ ಖದರ್‌ಗೂ ರೋಮಾಂಚನ ಮೂಡಿಸಿದ ವೀಡಿಯೋ ಸಾಂಗ್!

    ಬೆಂಗಳೂರು: ಚಿರಂಜೀವಿ ಸರ್ಜಾ ಇತ್ತೀಚೆಗೆ ಒಂದರ ಹಿಂದೊಂದರಂತೆ ಮಾಸ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ನಿರ್ವಹಿಸಿ ಮಾಸ್ ಲುಕ್ಕಿನತ್ತ ಹೊರಳಿಕೊಂಡಿರೋ ಅವರು ಸದ್ಯಕ್ಕೆ ಸದ್ದು ಮಾಡುತ್ತಿರೋದು `ಖಾಕಿ’ ಚಿತ್ರದ ಮೂಲಕ. ಕನ್ನಡ ಚಿತ್ರರಂಗದಲ್ಲಿ ಅದ್ಧೂರಿ ಸಿನಿಮಾಗಳ ನಿರ್ಮಾಪಕರೆಂದೇ ಹೆಸರು ಮಾಡಿರುವ ತರುಣ್ ಶಿವಪ್ಪ ನಿರ್ದೇಶನದಲ್ಲಿ ಮೂಡಿ ಬಂದಿರೋ ಚಿತ್ರವಿದು. ಕೆಲ ದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ಟೀಸರ್ ಮೂಲಕ ಖಾಕಿ ಖದರ್‍ನ ಸಣ್ಣ ಝಲಕ್ ಜಾಹೀರಾಗಿತ್ತು. ಆ ಥ್ರಿಲ್ ಇನ್ನೂ ಹಬೆಯಾಡುತ್ತಿರುವಾಗಲೇ `ಖಾಕಿ’ಯ ಕಡೆಯಿಂದ ರೋಮಾಂಚನದ ಕಾವೇರಿಸುವಂಥಾ ಚೆಂದದ ವೀಡಿಯೋ ಸಾಂಗೊಂದು ಬಿಡುಗಡೆಯಾಗಿದೆ.

    ಸಂಜಿತ್ ಹೆಗ್ಡೆ ಮತ್ತು ಇಶಾ ಸುಚಿ ಹಾಡಿರೋ ಈ ಹಾಡು ಸಾಹಿತ್ಯ, ಸಂಗೀತ ಸೇರಿದಂತೆ ಎಲ್ಲ ರೀತಿಯಲ್ಲಿಯೂ ಒಂದೇ ಗುಕ್ಕಿಗೆ ಎಲ್ಲರನ್ನೂ ಆವರಿಸಿಕೊಳ್ಳುವಂತೆ ಮೂಡಿ ಬಂದಿದೆ. ಯಾರೇ ನೀನು, ಯಾರೇ ನೀನು ಎಂಬ ಈ ವೀಡಿಯೋ ಸಾಂಗ್ ರಿತ್ವಿಕ್ ಮುರಳೀಧರ್ ಸಂಗೀತ ಸಂಯೋಜನೆಯೊಂದಿಗೆ ಮೂಡಿ ಬಂದಿದೆ. ಕವಿರತ್ನ ಡಾ ವಿ. ನಾಗೇಂದ್ರ ಪ್ರಸಾದ್ ಬರೆದಿರುವ ಲವಲವಿಕೆಯ ಸಾಲುಗಳಂತೂ ಒಂದೇ ಸಲಕ್ಕೆ ಎಲ್ಲರಿಗೂ ನಾಟುವಂತಿವೆ. ಆಹ್ಲಾದದ ಬುಗ್ಗೆಗಳನ್ನು ಎದೆಯ ಮಿದುವಿಗೆ ಸೋಕಿಸುವಂತಿರೋ ಸಾಹಿತ್ಯ, ಅದಕ್ಕೆ ತಕ್ಕುದಾದ ಸಂಗೀತ ಮತ್ತು ಸಂಜಿತ್ ಹೆಗ್ಡೆ, ಇಶಾ ಸುಚಿಯ ಗಾನ ಮಾಧುರ್ಯದೊಂದಿಗೆ ಈ ಹಾಡು ಖಾಕಿ ಖದರ್‍ಗೂ ರೋಮಾಂಚನ ಮೂಡಿಸುವಂತಿದೆ.

    ಈ ಹಾಡಿನಲ್ಲಿ ಚಿರಂಜೀವಿ ಸರ್ಜಾ ಮತ್ತು ತಾನ್ಯಾ ಹೋಪ್ ಮೋಹಕವಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಖಾಕಿ ಚಿತ್ರದ ಅಸಲಿ ಕಥೆ ಏನೆಂಬುದರ ಸುತ್ತಾ ಥರ ಥರದ ಚರ್ಚೆಗಳು ನಡೆಯುತ್ತಿವೆ. ಇದೊಂದು ಪಕ್ಕಾ ಮಾಸ್ ಚಿತ್ರ. ಖಾಕಿ ಅಂದೇಟಿಗೆ ಪೊಲೀಸ್ ನೆನಪಾಗೋದರಿಂದ ಇಲ್ಲಿ ಚಿರು ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆಂದೇ ಆರಂಭದಲ್ಲಿ ಅಂದುಕೊಳ್ಳಲಾಗಿತ್ತು. ಆದರೆ ಅವರಿಲ್ಲಿ ಕೇಬಲ್ ಆಪರೇಟರ್ ಆಗಿ ನಟಿಸಿದ್ದಾರೆಂಬ ವಿಚಾರ ಇತ್ತೀಚೆಗಷ್ಟೇ ಬಹಿರಂಗಗೊಂಡಿತ್ತು. ಕಥೆಯ ವಿಚಾರ ಏನೋ ಗೊತ್ತಿಲ್ಲ, ಆದರೆ ಆ ಕಥೆಯೊಳಗೊಂದು ಮುದ್ದಾದ ಲವ್ ಸ್ಟೋರಿ ಇದೆ ಎಂಬುದನ್ನು ಈ ವೀಡಿಯೋ ಸಾಂಗ್ ಖಚಿತ ಪಡಿಸಿದೆ. ಇದರೊಂದಿಗೆ ಖಾಕಿ ಖದರ್ ಮೋಹಕ ರೂಪ ಪಡೆದುಕೊಂಡಿದೆ!

  • ಕಲಾದೇವಿಯನ್ನು ಆರಾಧಿಸುವ ಕಲಾರಾಧಕರಿಗಾಗಿ ಸಿನಿಮಾ ಸ್ಕೂಲ್!

    ಕಲಾದೇವಿಯನ್ನು ಆರಾಧಿಸುವ ಕಲಾರಾಧಕರಿಗಾಗಿ ಸಿನಿಮಾ ಸ್ಕೂಲ್!

    ಬೆಂಗಳೂರು: ನಿರ್ಮಾಪಕ ತರುಣ್ ಶಿವಪ್ಪ ಸದಾ ಕ್ರಿಯಾಶೀಲತೆಗಾಗಿ ತುಡಿಯುವವರು. ತರುಣ್ ಟಾಕೀಸ್ ಸಂಸ್ಥೆಯನ್ನು ಆರಂಭಿಸಿ ಆ ಮೂಲಕ ರೋಸ್, ಮಾಸ್ ಲೀಡರ್, ವಿಕ್ಟರಿ-2 ಥರದ ಸೂಪರ್ ಹಿಟ್ ಚಿತ್ರಗಳನ್ನು ಸೇರಿದಂತೆ ಈಗ ನಿರ್ಮಾಣ ಹಂತದಲ್ಲಿರುವ ಖಾಕಿ ಸಿನಿಮಾವನ್ನು ನಿರ್ಮಿಸಿರುವವರು ನಿರ್ಮಾಪಕ ತರುಣ್ ಶಿವಪ್ಪ. ಸಾಮಾನ್ಯಕ್ಕೆ ಸಿನಿಮಾ ನಿರ್ಮಾಪಕರು ತಾವಾಯಿತು ತಮ್ಮ ಹಣಕಾಸಿನ ವ್ಯವಹಾರವಾಯಿತು ಎಂದು ಸುಮ್ಮನಾಗಿಬಿಡುತ್ತಾರೆ. ಯಾವ ಸಿನಿಮಾದ ಮೇಲೆ ಹೂಡಿಕೆ ಮಾಡಿದರೆ ಎಷ್ಟು ಲಾಭವಾಗಬಹುದು ಎಂಬುದಷ್ಟೇ ಅವರ ಲೆಕ್ಕಾಚಾರವಾಗಿರುತ್ತದೆ. ಆದರೆ ನಿರ್ಮಾಪಕ ತರುಣ್ ಶಿವಪ್ಪ ಅವರ ಆಲೋಚನಾ ಲಹರಿಯೇ ಬೇರೆ. ಕನ್ನಡ ಚಿತ್ರರಂಗವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವುದು ಹೇಗೆ? ಇಲ್ಲಿ ಕೊರತೆ ಇರುವ ಸಮರ್ಥ ಕಲಾವಿದರು, ತಂತ್ರಜ್ಞರನ್ನು ಹುಟ್ಟುಹಾಕುವುದು ಹೇಗೆ ಎಂದು ಚಿಂತಿಸಿ, ಸಾಕಷ್ಟು ಜನರೊಂದಿಗೆ ಚರ್ಚಿಸಿ ಒಂದು ತೀರ್ಮಾನಕ್ಕೆ ಬಂದಿದ್ದಾರೆ. ಅದು ಸಿನಿಮಾ ಶಾಲೆಯನ್ನು ಆರಂಭಿಸುವುದು.

    `ಸಿನಿಮಾ ಸ್ಕೂಲ್’ ಹೆಸರಿನಲ್ಲಿ ಚಲನಚಿತ್ರ ರಂಗಕ್ಕೆ ಸಂಬಂಧಿಸಿದ ತರಬೇತಿ ಕೇಂದ್ರವನ್ನು ನಿರ್ಮಾಪಕ ತರುಣ್ ಶಿವಪ್ಪ ಆರಂಭಿಸುತ್ತಿದ್ದಾರೆ. ಕಲಾದೇವಿಯನ್ನು ಆರಾಧಿಸುವ ಕಲಾರಾಧಕರಿಗೆ ಎನ್ನುವ ಅಡಿಬರಹವನ್ನೂ ನೀಡಿದ್ದಾರೆ.

    ನಿಜ ಚಿತ್ರರಂಗದ ಭಾಗವಾಗಬೇಕು ಎಂದು ತುಡಿಯುವ ಅಸಂಖ್ಯ ಜನರಿದ್ದಾರೆ. ಆದರೆ ಸರಿಯಾದ ಮಾರ್ಗದರ್ಶನವಿಲ್ಲದೆ ಅನೇಕರು ತಮ್ಮ ಮನಸ್ಸಿಗೊಪ್ಪದ ಕ್ಷೇತ್ರಗಳಲ್ಲಿ ದುಡಿಯುವಂತಹ ಸಂದರ್ಭ ಒದಗಿಬರುತ್ತದೆ. ಇನ್ನು ಕೆಲವರು ಹೇಗೋ ಮಾಡಿ ಚಿತ್ರರಂಗದ ಸಂಪರ್ಕ ಸಾಧಿಸುತ್ತಾರಾದರೂ, ಪರಿಣತಿಯ ಕೊರತೆಯಿಂದ ಗೆಲುವು ಮರೀಚಿಕೆಯಾಗುತ್ತದೆ. ಈ ನಿಟ್ಟಿನಲ್ಲಿ ಕರಾರುವಕ್ಕಾದ, ಸ್ಪಷ್ಟ ಮಾರ್ಗದರ್ಶನ, ನಿಯಮಿತವಾದ ಶಿಕ್ಷಣ ಅಗತ್ಯ. ಆದರೆ, ಎಲ್ಲಿ ಹೋಗಿ ಯಾರ ಬಳಿ ಕಲಿಯುವುದು, ಅಸಲಿಗೆ ತಮಗೊಪ್ಪುವ ಯಾವ ವಿಭಾಗವನ್ನು ಆಯ್ಕೆ ಮಾಡಿಕೊಂಡರೆ ಸೂಕ್ತ ಎನ್ನುವ ಗೊಂದಲ ಇರುತ್ತದೆ. ಇಂಥ ಅಭ್ಯರ್ಥಿಗಳಿಗೆ `ಸಿನಿಮಾ ಸ್ಕೂಲ್’ ಸಂಪೂರ್ಣ ಸಹಕಾರಿಯಾಗಲಿದೆ. ನಟನೆ, ನಿರ್ದೇಶನ, ಛಾಯಾಗ್ರಹಣ, ಸಂಗೀತ, ಸಂಕಲನ ಮತ್ತು ನಿರೂಪಣೆಯ ಕುರಿತಾಗಿ ಇಲ್ಲಿ ತರಬೇತಿ ಆರಂಭಿಸಲಾಗುತ್ತಿದೆ.

    ಆದರ್ಶ ಫಿಲಂ ಇನ್ಸ್ ಟಿಟ್ಯೂಟ್ ಸೇರಿದಂತೆ ರಾಜ್ಯದ ಹಲವಾರು ಸಿನಿಮಾ ಶಾಲೆಗಳಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ತರಬೇತುದಾರರಾಗಿ ಕಾರ್ಯ ನಿರ್ವಹಿಸಿರುವ, ಶಿವಾನಿ, ಮಿಂಚು, ಜುಲೈ22, 1947, ಇಂಗಳೆ ಮಾರ್ಗ, ಸಾವಿತ್ರಿ ಬಾಯಿ ಫುಲೆ, ಗೌರಿಪುತ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ವಿಶಾಲ್ ರಾಜ್ ಈ `ಸಿನಿಮಾ ಸ್ಕೂಲ್’ಗೆ ಪ್ರಾಂಶುಪಾಲರಾಗಿದ್ದಾರೆ. ಅನುಭವೀ ತಂತ್ರಜ್ಞರು, ನಿರ್ದೇಶಕರು ಸೇರಿದಂತೆ ಸಿನಿಮಾದಲ್ಲಿ ಹೆಸರು ಮಾಡಿದವರು, ರಂಗಕರ್ಮಿಗಳು `ಸಿನಿಮಾ ಸ್ಕೂಲ್’ ನಲ್ಲಿ ತರಬೇತಿ, ಉಪನ್ಯಾಸ ನೀಡಲಿದ್ದಾರೆ.

    ನಾಗರಬಾವಿ ನಮ್ಮೂರ ತಿಂಡಿ ಹಿಂಭಾಗದಲ್ಲಿರುವ ಸೆವೆನ್ ವಂಡರ್ಸ್ ಕಟ್ಟಡದ ಎರಡನೇ ಮಹಡಿಯಲ್ಲಿ `ಸಿನಿಮಾ ಸ್ಕೂಲ್’ ಅಕ್ಟೋಬರ್ ತಿಂಗಳ ಕೊನೆಯ ವೇಳೆಗೆ ಕಾರ್ಯಾರಂಭ ಮಾಡಲಿದೆ. ಮೂರು ಮತ್ತು ಆರು ತಿಂಗಳ ಕೋರ್ಸ್ ಗಳು ಇಲ್ಲಿರುತ್ತವೆ. ಸಾಮಾನ್ಯವಾಗಿ ಸಿನಿಮಾ ಶಾಲೆಗಳು ನಿಗದಿತ ಅವಧಿಯಲ್ಲಿ ಕಲಿಸಿ ಸರ್ಟಿಫಿಕೇಟ್ ಕೊಟ್ಟು ಕಳಿಸಲಾಗುತ್ತದೆ. ಆದರೆ `ಸಿನಿಮಾ ಸ್ಕೂಲ್’ನ ಧ್ಯೇಯವೇ ಬೇರೆ ಇದೆ. ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಕಳಿಸಿಕೊಟ್ಟುಬಿಟ್ಟರೆ ಮತ್ತೆ ಅವರು ಆಡಿಷನ್‍ಗಳಲ್ಲಿ ಭಾಗವಹಿಸುತ್ತಾ, ಅವಕಾಶಕ್ಕಾಗಿ ಅಲೆದಾಡುವಂತಾಗುತ್ತದೆ. ಹೊಸದಾಗಿ ಕಲಿತು ಹೋದವರಿಗೆ ಅಷ್ಟು ಸುಲಭಕ್ಕೆ ಅವಕಾಶಗಳು ದೊರೆಯುವುದೂ ಇಲ್ಲ. ಸಿನಿಮಾ ಸ್ಕೂಲ್‍ನಲ್ಲಿ ಕೋರ್ಸು ಮುಗಿಸಿದ ಎರಡು ಮೂರು ಬ್ಯಾಚ್‍ಗಳ ಅಭ್ಯರ್ಥಿಗಳಲ್ಲಿ ಯಾರು ಉತ್ತಮವಾಗಿ ಕಲಿತಿರುತ್ತಾರೋ ಅವರಿಗಾಗಿಯೇ ತರುಣ್ ಟಾಕೀಸ್ ಅಡಿಯಲ್ಲಿ ಹೊಸ ಚಿತ್ರಗಳನ್ನು ಆರಂಭಿಸಿ, ಆದ್ಯತೆ ಮೇರೆಗೆ ಸಿನಿಮಾದಲ್ಲಿ ಕೆಲಸ ಮಾಡುವ ಅವಕಾಶ ನೀಡಲಾಗುತ್ತದೆ. ಕಮರ್ಷಿಯಲ್, ಕಲಾತ್ಮಕ ಮತ್ತು ಬ್ರಿಡ್ಜ್ ಚಿತ್ರಗಳನ್ನು ರೂಪಿಸಿ ಆ ಮೂಲಕ ಹೊಸ ಪ್ರತಿಭೆಗಳನ್ನು ಪರಿಚಯಿಸಲಾಗುತ್ತದೆ.

     ಕಲಾದೇವಿಯನ್ನು ಆರಾಧಿಸುವ, ಚಿತ್ರರಂಗದಲ್ಲಿ ಕೆಲಸ ಮಾಡಲು ಬಯಕೆ ಇರುವವರು `ಸಿನಿಮಾ ಸ್ಕೂಲ್’ ಸೇರಿ ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಬಹುದು.

    ಸಂಪರ್ಕ: #40, 2ನೇ ಮಹಡಿ, ನಮ್ಮೂರ ತಿಂಡಿ ಬಳಿ, ಎನ್.ಜಿ.ಇ.ಎಫ್ ಲೇಔಟ್ ಪಾರ್ಕ್ ಎದುರು, ನಾಗರಬಾವಿ, ಬೆಂಗಳೂರು-560072, ಮೊಬೈಲ್ 92069 20689

  • ಕರ್ವ ನವನೀತ್‍ಗೆ ರಿಯಲ್ ಸ್ಟಾರ್ ಸಾಥ್!

    ಕರ್ವ ನವನೀತ್‍ಗೆ ರಿಯಲ್ ಸ್ಟಾರ್ ಸಾಥ್!

    ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಐ ಲವ್ ಯೂ ಚಿತ್ರದ ದೊಡ್ಡ ಗೆಲುವಿನ ಪ್ರಭೆಯಲ್ಲಿ ಒಂದರ ಹಿಂದೊಂದರಂತೆ ಚಿತ್ರಗಳನ್ನು ಒಪ್ಪಿಕೊಳ್ಳುತ್ತಾ ಸಾಗುತ್ತಿದ್ದಾರೆ. ಇದೀಗ ಕರ್ವ ಎಂಬ ಹೊಸ ಅಲೆಯ ಹಿಟ್ ಸಿನಿಮಾ ನಿರ್ದೇಶನ ಮಾಡಿದ್ದ ನವನೀತ್ ನಿರ್ದೇಶನದ ಚಿತ್ರವೊಂದರಲ್ಲಿ ನಟಿಸಲು ಉಪ್ಪಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕಥೆ ಕೇಳಿ ಖುಷ್ ಆಗಿರೋ ಉಪ್ಪಿ ತಕ್ಷಣವೇ ಒಪ್ಪಿಗೆ ಸೂಚಿಸಿರೋ ಈ ಸಿನಿಮಾ ತರುಣ್ ಶಿವಪ್ಪ ನಿರ್ಮಾಣದಲ್ಲಿ ಮೂಡಿ ಬರಲಿದೆ.

    ಕರ್ವ ಚಿತ್ರದ ಹೊಸತನದ ಕಥೆ, ನಿರೂಪಣೆಯ ಮೂಲಕ ಚೊಚ್ಚಲ ಪ್ರಯತ್ನದಲ್ಲಿಯೇ ಹಿಟ್ ಸಿನಿಮಾ ಕೊಟ್ಟಿದ್ದವರು ನವನೀತ್. ಅವರು ಬಲು ಪ್ರೀತಿಯಿಂದ ಇದೀಗ ಉಪೇಂದ್ರ ಅವರಿಗಾಗಿ ಒಂದು ಅಚ್ಚುಕಟ್ಟಾದ ಕಥೆಯನ್ನು ಸಿದ್ಧಗೊಳಿಸಿದ್ದಾರೆ. ಈ ಹಿಂದಿನ ಚಿತ್ರಕ್ಕಿಂತಲೂ ಹೊಸ ಜಾನರಿನ ಮೂಲಕ ನವನೀತ್ ಈ ಚಿತ್ರವನ್ನು ರೂಪಿಸಲು ಮುಂದಾಗಿದ್ದಾರೆ. ಈಗಾಗಲೇ ಯಶಸ್ವಿ ನಿರ್ಮಾಪಕರಾಗಿ ಗುರುತಿಸಿಕೊಂಡಿರೋ ತರುಣ್ ಶಿವಪ್ಪ ಕಥೆ ಹೊಸತನದಿಂದ ಕೂಡಿದೆ, ಚೆನ್ನಾಗಿದೆ ಎಂಬ ಕಾರಣದಿಂದಲೇ ನಿರ್ಮಾಣ ಮಾಡಲು ಒಪ್ಪಿಕೊಂಡಿದ್ದಾರಂತೆ. ಅಂದಹಾಗೆ ಇದು ತರುಣ್ ಶಿವಪ್ಪ ನಿರ್ಮಾಣದ ಐದನೇ ಸಿನಿಮಾ.

    ಇದೀಗ ತರುಣ್ ಶಿವಪ್ಪ ಚಿರಂಜೀವಿ ಸರ್ಜಾ ನಟನೆಯ ಖಾಕಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅದು ಬಿಡುಗಡೆಯಾಗೋ ಘಳಿಗೆಯಲ್ಲಿ ಅದ್ಧೂರಿಯಾಗಿ ಈ ಸಿನಿಮಾಗೆ ಚಾಲನೆ ನೀಡಲೂ ನಿರ್ಧರಿಸಿದ್ದಾರೆ. ಈ ಕಥೆಯನ್ನು ಕೇಳಿ ಉಪೇಂದ್ರ ಕೂಡಾ ಖುಷಿಗೊಂಡಿದ್ದಾರೆ. ಯುವ ಪ್ರತಿಭೆಗಳಿಗೆ ಸದಾ ಪ್ರೋತ್ಸಾಹಿಸುವ ಸ್ವಭಾವದ ಉಪ್ಪಿ ಈ ಕಥೆನ್ನು ಕೇಳಿ ಥ್ರಿಲ್ ಆಗಿದ್ದಾರಂತೆ. ಇದೇ ತಿಂಗಳ ಹದಿನೆಂಟರಂದು ಉಪ್ಪಿ ಹುಟ್ಟುಹಬ್ಬವಿದೆ. ಆ ಸಂದರ್ಭದಲ್ಲಿಯೇ ಶೀರ್ಷಿಕೆ ಮತ್ತು ಫಸ್ಟ್ ಲುಕ್ ಅನಾವರಣಗೊಳಿಸಲು ನಿರ್ಮಾಪಕ ತರುಣ್ ಶಿವಪ್ಪ ತೀರ್ಮಾನಿಸಿದ್ದಾರೆ.

  • ತರುಣ್ ಶಿವಪ್ಪ ಸಿನಿಮಾದಲ್ಲಿ ತಾನ್ಯ ಹೋಪ್

    ತರುಣ್ ಶಿವಪ್ಪ ಸಿನಿಮಾದಲ್ಲಿ ತಾನ್ಯ ಹೋಪ್

    -ಚಿರಂಜೀವಿ ಸರ್ಜಾಗೆ ಜೊತೆಯಾಗಿ ತಾನ್ಯ ಮಿಂಚಿಂಗ್

    ಬೆಂಗಳೂರು: ಚಂದನವನದ ಚೆಂದದ ಚೆಲುವೆ ತಾನ್ಯ ಹೋಪ್ ನಟಿಸಿದ್ದ ಯಜಮಾನ ಕಳೆದ ವಾರ ಬಿಡುಗಡೆಯಾಗಿದೆ. ಕೈಯಲ್ಲಿ ಮೂರು ಚಿತ್ರಗಳನ್ನು ಹೊಂದಿರುವ ತಾನ್ಯ ಹೋಪ್ ಸ್ಯಾಂಡಲ್‍ವುಡ್ ನ ಬೇಡಿಕೆಯ ನಟಿಯಾಗಿದ್ದಾರೆ.

    ಚಿರಂಜೀವಿ ಸರ್ಜಾ ನಟಿಸುತ್ತಿರುವ ‘ಖಾಕಿ-ದ ಪವರ್ ಆಫ್ ಕಾಮನ್ ಮ್ಯಾನ್’ ಚಿತ್ರದಲ್ಲಿ ತಾನ್ಯ ಹೋಪ್ ನಟಿಸೋದು ಪಕ್ಕಾ ಆಗಿದೆ. ನವೀನ್ ರೆಡ್ಡಿ ಆ್ಯಕ್ಷನ್ ಕಟ್ ಹೇಳಲಿದ್ದು, ತರುಣ್ ಶಿವಪ್ಪ ನಿರ್ಮಾಣದಲ್ಲಿ ಸಿನಿಮಾ ಮೂಡಿಬರಲಿದೆ. ನವೀನ್ ರೆಡ್ಡಿ `ಖಾಕಿ’ ಸಿನಿಮಾದ ಮೂಲಕ ನಿರ್ದೇಶಕರಾಗಿದ್ದಾರೆ. ಈ ಹಿಂದೆ ತರುಣ್ ಶಿವಪ್ಪ ನಿರ್ಮಾಣದ ‘ಮಾಸ್ ಲೀಡರ್’ ಮತ್ತು ‘ರೋಜ್’ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವನ್ನು ನವೀನ್ ರೆಡ್ಡಿ ಹೊಂದಿದ್ದಾರೆ.

    ಮಾಸ್ ಮತ್ತು ಎಂಟರ್‍ಟೈನರ್ ಕಥೆಯನ್ನು ಸಿನಿಮಾ ಒಳಗೊಂಡಿದ್ದು, ಕೊನೆಗೆ ಯುವ ಸಮುದಾಯಕ್ಕೆ ಸಂದೇಶವನನ್ನು ನೀಡಲಿದೆ ಎಂದು ಚಿತ್ರತಂಡ ತಿಳಿಸಿದೆ. ಮುಂದಿನ ತಿಂಗಳನಿಂದ ಹೈದರಾಬಾದ್ ನಲ್ಲಿ ಮೂವತ್ತು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ತಾನ್ಯ ನಾಯಕನಿಗೆ ಜೊತೆಯಾಗಿ ಕಾಣಸಿಕೊಳ್ಳವ ಬಬ್ಲಿ ಗರ್ಲ್ ಪಾತ್ರದಲ್ಲಿ ಮಿಂಚಲಿದ್ದಾರೆ.

    ತಮಿಳಿನ “ನ್ಯೂ’ ಚಿತ್ರ ನಿರ್ದೇಶಕ ವಿದ್ಯಾದರ್ ಕಥೆ ಬರೆದಿದ್ದು, ಬಾಲು ಛಾಯಾಗ್ರಹಣ ಮಾಡುತ್ತಿದ್ದಾರೆ. ಈ ಮೊದಲು ಸ್ಟಂಟ್ ಮಾಸ್ಟರ್ ಪೀಟರ್ ಹೇನ್ಸ್ ನಿರ್ದೇಶನದ ಹಾಲಿವುಡ್ ಚಿತ್ರಕ್ಕೆ ಕ್ಯಾಮೆರಾ ವಿಭಾಗದಲ್ಲಿ ಬಾಲು ಕೆಲಸ ಮಾಡಿದ್ದವರು. ‘ಸಂಕಷ್ಟಕರ ಗಣಪತಿ’ಯ ಋತ್ವಿಕ್ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕನ್ನಡ ರಾಜ್ಯೋತ್ಸವಕ್ಕೆ ಕನ್ನಡಾಭಿಮಾನಿಗಳಿಗೆ ಡಬಲ್ ಧಮಾಕಾ

    ಕನ್ನಡ ರಾಜ್ಯೋತ್ಸವಕ್ಕೆ ಕನ್ನಡಾಭಿಮಾನಿಗಳಿಗೆ ಡಬಲ್ ಧಮಾಕಾ

    -ಮದ್ವೆಯಾದವ್ರು ಕೇಳಲೇ ಬೇಕು ‘ನಾನು ಮನೆಗೆ ಹೋಗಲ್ಲ’ ಹಾಡು

    ಬೆಂಗಳೂರು: ಶರಣ್ ಅಭಿನಯದ ವಿಕ್ಟರಿ-2 ಸಿನಿಮಾ ಇದೇ ನವೆಂಬರ್ 1 ಅಂದ್ರೆ ಕನ್ನಡ ರಾಜ್ಯೋತ್ಸವ ದಿನದಂದು ಬಿಡುಗಡೆ ಆಗಲಿದೆ ಎಂದು ನಿರ್ದೇಶಕ ತರುಣ್ ಸುಧೀರ್ ಟ್ವಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಚಿತ್ರದಲ್ಲಿ ಡಬಲ್ ಫನ್ ಅಂತಾನೇ ಹೇಳಲಾಗುತ್ತಿದ್ದು, ಕನ್ನಡಾಭಿಮಾನಿಗಳು ರಾಜ್ಯೋತ್ಸವದಂದು ಸಿನಿಮಾ ನೋಡಿ ಎಂಜಾಯ್ ಮಾಡಬಹುದು.

    ಈಗಾಗಲೇ ಟ್ರೇಲರ್, ಹಾಡು, ಫೋಟೋಗಳ ಮೂಲಕ ಜನರ ಮೆಚ್ಚುಗೆಯನ್ನು ವಿಕ್ಟರಿ-2 ಸಿನಿಮಾ ಪಡೆದುಕೊಂಡಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಕುತೂಹಲವನ್ನು ಮೂಡಿಸಿದ್ದ ಚಿತ್ರ ಫಸ್ಟ್ ಲುಕ್‍ನಲ್ಲಿ ಶರಣ್ ದ್ವಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಚಿಕ್ಕ ಸುಳಿವು ನೀಡಿತ್ತು. ಫಸ್ಟ್ ಲುಕ್ ಬಳಿಕ ನಾಯಕ ನಟ ಶರಣ್, ರವಿಶಂಕರ್ ಮತ್ತು ಸಾಧುಕೋಕಿಲ ಹೆಣ್ಣು ವೇಷಧಾರಿಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ್ದವು. ಇದನ್ನು ಓದಿ: ಎರಡನೇ ವಿಕ್ಟರಿಯಲ್ಲಿ ಡಬಲ್ ಫನ್ ಫಿಕ್ಸ್

    ಅಕ್ಟೋಬರ್ 16ರಂದು ವಿಕ್ಟರಿ-2 ಚಿತ್ರದ `ನಾನು ಮನೆಗೆ ಹೋಗೋದಿಲ್ಲ’ ಹಾಡು ಮದುವೆ ಆದವರ ನೆಚ್ಚಿನ ಹಾಡು. ಕೇಳಲು ತುಂಬಾ ಕ್ಯಾಚಿಯಾಗಿದ್ದು, ಯೋಗರಾಜ್ ಭಟ್ಟರು ಲೇಖನಿಯಲ್ಲಿ ಮದುವೆಯಾದ ಗಂಡಸರಿಗೆ ಮತ್ತೊಂದು ಸ್ಪೆಷಲ್ ಹಾಡನ್ನು ನೀಡಿದ್ದಾರೆ. ಈ ಹಾಡು ಕೇಳಿದ ಪುನೀತ್ ರಾಜ್‍ಕುಮಾರ್, ಪ್ರಜ್ವಲ್ ದೇವರಾಜ್, ಲೂಸ್ ಮಾದಯೋಗಿ, ಉಪೇಂದ್ರ ಸಖತ್ ಆಗಿದೆ ಎಂದು ಕೊಂಡಾಡಿದ್ದಾರೆ. ಖಾಲಿ ಕ್ವಾಟರ್ ಬಾಟಲ್ ಹಂಗ ಲೈಫು ಎಂದು ಹಾಡಿದ್ದ ವಿಜಯ್ ಪ್ರಕಾಶ್ ನಾನು ಮನೆಗೆ ಹೋಗುದಿಲ್ಲ ಹಾಡಿಗೆ ಕಂಠದಾನ ನೀಡಿದ್ದಾರೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಇದನ್ನು ಓದಿ: ಪ್ಲೀಸ್ ಟ್ರಸ್ಟ್, ನಾನು ಚೀಪ್ & ಬೆಸ್ಟ್- ಆಸ್ಮಿತಾ ಜೊತೆ ವಿಕ್ಟರಿ ಶರಣ್ ಡ್ಯಾನ್ಸ್

    ಕೆಲವು ದಿನಗಳ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿಕ್ಟರಿ-2 ಸಿನಿಮಾ ಸೆಟ್ ಗೆ ಭೇಟಿ ನೀಡಿದ್ದರು. ಚಿತ್ರದಲ್ಲಿ ದರ್ಶನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಸಹ ಹರಿದಾಡಿದ್ದವು. ಈ ಹಿಂದೆ ತರುಣ್ ನಿರ್ದೇಶನದ ‘ಚೌಕ’ ಸಿನಿಮಾದಲ್ಲಿ ದರ್ಶನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ತರುಣ್ ಮತ್ತು ದರ್ಶನ್ ಇಬ್ಬರು ಒಳ್ಳೆಯ ಸ್ನೇಹಿತರಾಗಿದ್ದರಿಂದ ಸಿನಿಮಾ ಸೆಟ್ ಗೆ ಭೇಟಿ ನೀಡಿದ್ದಾರೆಂದು ಹೇಳಲಾಗಿದೆ.

    ಶರಣ್‍ಗೆ ನಾಯಕಿಯಾಗಿ ಅಪೂರ್ವ, ಅಸ್ಮಿತಾ ಸೂದ್ ಜೊತೆಯಾಗಿದ್ದಾರೆ. ರವಿಶಂಕರ್, ಸಾಧುಕೋಕಿಲಾ, ತಬಲಾ ನಾಣಿ, ನಾಸೀನ್, ಅವಿನಾಶ್, ಮಿತ್ರಾ, ಕಲ್ಯಾಣಿ, ಅರಸು ಮತ್ತು ಸಿದ್ದಿ ಸೇರಿದಂತೆ ದೊಡ್ಡ ತಾರಾಗಣವನ್ನು ಚಿತ್ರ ಹೊಂದಿದೆ. ವಿಕ್ಟರಿಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯಾ ಸಂಗೀತ ನೀಡಿದ್ದಾರೆ. ತರುಣ್ ಸುಧೀರ್ ಕಥೆ ಬರೆದಿದ್ದು, ಅಲೆಮಾರಿ ಸಂತು ನಿರ್ದೇಶನ ಮತ್ತು ತರುಣ್ ಶಿವಪ್ಪ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv