Tag: Taslima Nasreen

  • ಪ್ರವಾದಿ ಮೊಹಮ್ಮದ್ ಇದ್ದಿದ್ದರೆ…: ಭುಗಿಲೆದ್ದ ಪ್ರತಿಭಟನೆಗೆ ತಸ್ಲೀಮಾ ನಸ್ರೀನ್ ಪ್ರತಿಕ್ರಿಯೆ

    ಪ್ರವಾದಿ ಮೊಹಮ್ಮದ್ ಇದ್ದಿದ್ದರೆ…: ಭುಗಿಲೆದ್ದ ಪ್ರತಿಭಟನೆಗೆ ತಸ್ಲೀಮಾ ನಸ್ರೀನ್ ಪ್ರತಿಕ್ರಿಯೆ

    ಢಾಕಾ: ಪ್ರವಾದಿ ಮೊಹಮ್ಮದ್‌ಗೆ ಅವಹೇಳನ ಮಾಡಿರುವ ಹಿನ್ನೆಲೆ ಭುಗಿಲೆದ್ದಿರುವ ಹಿಂಸಾಚಾರವನ್ನು ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್ ಖಂಡಿಸಿದ್ದಾರೆ.

    ಬಿಜೆಪಿ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನ ಮಾಡಿದ್ದು, ದೇಶದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲೂ ಆಕ್ರೋಶ ವ್ಯಕ್ತವಾಗಿದೆ. ಈ ಪ್ರತಿಭಟನೆಯನ್ನು ತಸ್ಲೀಮಾ ನಸ್ರೀನ್ ಟ್ವೀಟ್‌ನಲ್ಲಿ ಖಂಡಿಸಿದ್ದಾರೆ.

    ಪ್ರವಾದಿ ಮೊಹಮ್ಮದ್ ಇಂದಿಗೂ ಜೀವಂತವಾಗಿದ್ದರೆ, ಪ್ರಪಂಚದಾದ್ಯಂತ ಮುಸ್ಲಿಂ ಮತಾಂಧರ ಹುಚ್ಚುತನವನ್ನು ನೋಡಿ ಅವರೇ ಆಘಾತಕ್ಕೊಳಗಾಗುತ್ತಿದ್ದರು ಎಂದು ನಸ್ರೀನ್ ಹಿಂಸಾಚಾರವನ್ನು ಟೀಕಿಸಿದ್ದಾರೆ. ಇದನ್ನೂ ಓದಿ: ನಾಳೆ ದೇಶಾದ್ಯಂತ ಕಾಂಗ್ರೆಸ್ ಮಹತ್ವದ ಸುದ್ದಿಗೋಷ್ಠಿ

    ನೂಪುರ್ ಶರ್ಮಾ ಅವರ ಹೇಳಿಕೆಗೆ ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದೆ. ಪ್ರತಿಭಟನಾಕಾರರು ನೂಪುರ್ ಅವರನ್ನು ಬಂಧಿಸಬೇಕೆಂದು ಹಾಗೂ ಕೆಲವರು ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದ್ದರೆ. ಇದನ್ನೂ ಓದಿ: ಪ್ರವಾದಿಯನ್ನು ಅವಹೇಳನಗೈದ ನೂಪುರ್ ಶರ್ಮಾರನ್ನು ಗಲ್ಲಿಗೇರಿಸಿ: ಎಐಎಂಐಎಂ

    ಈ ವಿವಾದ ನೆರೆಯ ಬಾಂಗ್ಲಾದೇಶಕ್ಕೂ ಹಬ್ಬಿದ್ದು, ಶುಕ್ರವಾರ ಸಾವಿರಾರು ಜನರು ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನೂಪುರ್ ಶರ್ಮಾರನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಮಾತ್ರವಲ್ಲದೇ ಭಾರತ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಘೋಷಣೆ ಕೂಗಿದ್ದಾರೆ. ಪ್ರತಿಭಟನಾಕಾರರು ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೂ ಕರೆ ನೀಡಿದ್ದಾರೆ.

  • ಪಾಕ್‌ ಪ್ರಧಾನಿಯಾಗ್ತಾರೆ ಅಂತ ಭವಿಷ್ಯ ನುಡಿದಿದ್ದ ಬುಶ್ರಾ ಬೀಬಿಗೆ ಇಮ್ರಾನ್‌ ಈಗ ಡಿವೋರ್ಸ್‌ ನೀಡಬಹುದು: ತಸ್ಲೀಮಾ

    ಪಾಕ್‌ ಪ್ರಧಾನಿಯಾಗ್ತಾರೆ ಅಂತ ಭವಿಷ್ಯ ನುಡಿದಿದ್ದ ಬುಶ್ರಾ ಬೀಬಿಗೆ ಇಮ್ರಾನ್‌ ಈಗ ಡಿವೋರ್ಸ್‌ ನೀಡಬಹುದು: ತಸ್ಲೀಮಾ

    ಢಾಕಾ: ಇಮ್ರಾನ್‌ ಪಾಕ್‌ ಪ್ರಧಾನಿಯಾಗುತ್ತಾರೆ ಎಂದು ತಮ್ಮ ಆಧ್ಯಾತ್ಮಿಕ ಶಕ್ತಿಯಿಂದ ಭವಿಷ್ಯ ನುಡಿದಿದ್ದ ಬುಶ್ರಾ ಬೀಬಿಗೆ ಇಮ್ರಾನ್‌ ಖಾನ್‌ ಈಗ ವಿಚ್ಛೇದನ ನೀಡಬಹುದು ಎಂದು ಬಾಂಗ್ಲಾದೇಶ ಬರಹಗಾರ್ತಿ ತಸ್ಲೀಮಾ ನಸ್ರಿನ್‌ ಕುಟುಕಿದ್ದಾರೆ.

    ಪಾಕಿಸ್ತಾನದ ಪ್ರಧಾನಿ ಸ್ಥಾನ ಬಿಕ್ಕಟ್ಟು ಕುರಿತು ಟ್ವೀಟ್‌ ಮಾಡಿರುವ ಅವರು, ʻಇಮ್ರಾನ್ ಖಾನ್, ಬುಶ್ರಾ ಅವರನ್ನು ವಿವಾಹವಾದರು. ಏಕೆಂದರೆ ಬುಶ್ರಾ ತನ್ನ ವಿಶೇಷ ಆಧ್ಯಾತ್ಮಿಕ ಶಕ್ತಿಯಿಂದ ಇಮ್ರಾನ್ ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದರು. ಆದರೆ ಇಮ್ರಾನ್‌ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಎಂದು ಅವರು ಭವಿಷ್ಯ ನುಡಿದಿರಲಿಲ್ಲ. ಅದಕ್ಕಾಗಿ ಆಕೆಗೆ ಇಮ್ರಾನ್‌ ವಿಚ್ಛೇದನ ನೀಡಬಹುದು. ಇಮ್ರಾನ್ ಎಂದಿಗೂ ಸಾಯುವುದಿಲ್ಲ ಎಂದು ಭವಿಷ್ಯವಾಣಿ ನುಡಿಯುವ ಹೆಣ್ಣು ಗಿಣಿಯನ್ನು ಖಾನ್‌ ಮದುವೆಯಾಗಬಹುದುʼ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಭಾರತವನ್ನು ಹೊಗಳಿದ ಇಮ್ರಾನ್ ಖಾನ್‍ಗೆ ಪಾಕ್ ಬಿಟ್ಟು ತೊರೆಯಿರಿ ಎಂದ ಷರೀಫ್ ಪುತ್ರಿ

    ಇಮ್ರಾನ್ ಖಾನ್ ಚುನಾವಣೆಯಲ್ಲಿ ಗೆದ್ದ ನಂತರ 2018 ರಲ್ಲಿ ಬುಶ್ರಾ ಬೀಬಿ ಅವರನ್ನು ವಿವಾಹವಾದರು. ಬುಶ್ರಾ ಬೀಬಿ ಅವರು ಪಾಕಿಸ್ತಾನದ ಪ್ರಥಮ ಮಹಿಳೆಯಾದಾಗಿನಿಂದ ವಾಮಾಚಾರ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಇಮ್ರಾನ್ ಖಾನ್ 2015 ರಿಂದ ಬುಶ್ರಾ ಬೀಬಿಯನ್ನು ಆಧ್ಯಾತ್ಮಿಕ ಮಾರ್ಗದರ್ಶನಕ್ಕಾಗಿ ಭೇಟಿಯಾಗುತ್ತಿದ್ದರು.

    ಬೀಬಿ ಅವರ ರಾಜಕೀಯ ಭವಿಷ್ಯವಾಣಿಗಳು ನಿಜವಾಗಿವೆ ಎಂದು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ. ಇಮ್ರಾನ್ ಖಾನ್ ಅವರನ್ನು ಮದುವೆಯಾಗುವ ಮೊದಲು, ಬುಶ್ರಾ ಬೀಬಿ ಅವರು ಸರ್ಕಾರಿ ಅಧಿಕಾರಿಯಾಗಿದ್ದ ಖವಾರ್ ಫರೀದ್ ಮೇನಕಾ ಅವರನ್ನು ವಿವಾಹವಾಗಿದ್ದರು. ಇದನ್ನೂ ಓದಿ: ಪಾಕ್ ಅನ್ನು ಟಿಶ್ಯೂ ಪೇಪರ್ ಆಗಿ ಬಳಸಿ ಎಸೆಯಲಾಗಿದೆ: ಇಮ್ರಾನ್ ಕಿಡಿ

  • ಬಾಂಗ್ಲಾ ಹಿಂದೂಗಳ ವಲಸೆ ಬಗ್ಗೆ ಸಿನಿಮಾ ಯಾಕಾಗಿಲ್ಲ: ಕಾಶ್ಮೀರ್‌ ಫೈಲ್ಸ್‌ಗೆ ಲೇಖಕಿ ತಸ್ಲೀಮಾ ನಸ್ರಿನ್ ಪ್ರತಿಕ್ರಿಯೆ

    ಬಾಂಗ್ಲಾ ಹಿಂದೂಗಳ ವಲಸೆ ಬಗ್ಗೆ ಸಿನಿಮಾ ಯಾಕಾಗಿಲ್ಲ: ಕಾಶ್ಮೀರ್‌ ಫೈಲ್ಸ್‌ಗೆ ಲೇಖಕಿ ತಸ್ಲೀಮಾ ನಸ್ರಿನ್ ಪ್ರತಿಕ್ರಿಯೆ

    ಢಾಕಾ: ಕಾಶ್ಮೀರಿ ಪಂಡಿತರ ವಲಸೆಗೆ ಸಂಬಂಧಿಸಿ ಸಿನಿಮಾ ಮಾಡಿರುವಂತೆ ಬಂಗಾಳಿ ಹಿಂದೂಗಳ ವಲಸೆ ಕುರಿತು ಯಾಕೆ ಸಿನಿಮಾ ಮಾಡಿಲ್ಲ ಎಂದು ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರಿನ್‌ ಪ್ರಶ್ನಿಸಿದ್ದಾರೆ.

    ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಕುರಿತು ಮಾತನಾಡಿರುವ ಅವರು, ವಿಭಜನೆಯ ಸಮಯದಲ್ಲಿ ಬಾಂಗ್ಲಾದೇಶದಿಂದ ಬಂಗಾಳಿ ಹಿಂದೂಗಳ ವಲಸೆಯ ಕುರಿತು ಯಾವುದೇ ಚಲನಚಿತ್ರ ಏಕೆ ಇಲ್ಲ? ಕಥೆಯು ಶೇ.100 ನಿಜವಾಗಿದ್ದರೆ, ಉತ್ಪ್ರೇಕ್ಷೆಯಿಲ್ಲ. ಅರ್ಧ ಸತ್ಯವಿಲ್ಲದಿದ್ದರೆ ಅದು ನಿಜವಾಗಿಯೂ ದುಃಖದ ಕಥೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

    ಕಾಶ್ಮೀರಿ ಪಂಡಿತರು ಕಾಶ್ಮೀರದಲ್ಲಿ ವಾಸಿಸುವ ತಮ್ಮ ಹಕ್ಕನ್ನು ಮರಳಿ ಪಡೆಯಬೇಕು. ಬಾಂಗ್ಲಾದೇಶದ ವಿಭಜನೆ ಸಂದರ್ಭದಲ್ಲಿ ವಲಸೆ ಹೋದ ಹಿಂದೂಗಳ ಬಗ್ಗೆ ಇದುವರೆಗೂ ಯಾಕೆ ಸಿನಿಮಾ ಮಾಡಿಲ್ಲ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಕೇಳಿದ್ದಾರೆ.

    ವಿವೇಕ್‌ ಅಗ್ನಿಹೋತ್ರಿ ನಿರ್ದೇಶನದ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಮಾ.11ರಂದು ತೆರೆ ಕಂಡಿತು. ಸಿನಿಮಾ ಈಗ ರಾಜಕೀಯ ದೃಷ್ಟಿಕೋನದಲ್ಲಿ ವಿವಾದಕ್ಕೆ ಸಿಲುಕಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಹುಟ್ಟುಕೊಂಡಿವೆ. ಇದನ್ನೂ ಓದಿ: ಗುಜರಾತ್ ಫೈಲ್ಸ್ ಚಿತ್ರಕ್ಕಾಗಿ ಪ್ರಧಾನಿ ಮೋದಿಗೆ ಸವಾಲು ಹಾಕಿದ ಬಾಲಿವುಡ್ ನಿರ್ದೇಶಕ

    ಕಾಶ್ಮೀರಿ ಪಂಡಿತರು ವಲಸೆ ಹೋಗುವ ಸಂದರ್ಭದಲ್ಲಿ ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಇತ್ತು. ಈ ವೇಳೆ ಕೇಂದ್ರದಲ್ಲಿ ಬಿಜೆಪಿ ಬೆಂಬಲಿತ ವಿ.ಪಿ.ಸಿಂಗ್‌ ಅವರ ಆಡಳಿತ ಇತ್ತು ಎಂದು ಸಿನಿಮಾ ಕುರಿತು ಕಾಂಗ್ರೆಸ್‌ ಟೀಕೆ ವ್ಯಕ್ತಪಡಿಸಿದೆ.

  • ಹಿಜಬ್, ಬುರ್ಕಾ ಪುರುಷ ದಬ್ಬಾಳಿಕೆಯ ಸಂಕೇತ: ತಸ್ಲೀಮಾ ನಸ್ರೀನ್

    ಹಿಜಬ್, ಬುರ್ಕಾ ಪುರುಷ ದಬ್ಬಾಳಿಕೆಯ ಸಂಕೇತ: ತಸ್ಲೀಮಾ ನಸ್ರೀನ್

    ಢಾಕಾ: ಹಿಜಬ್, ಬುರ್ಕಾ ಅಥವಾ ನಿಖಾಬ್ ದಬ್ಬಾಳಿಕೆಯ ಸಂಕೇತ ಎಂದು ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್ ಹೇಳಿಕೆ ನೀಡಿದ್ದಾರೆ.

    ಹಿಜಬ್ ಕುರಿತ ವಿವಾದ ಕರ್ನಾಟಕದಲ್ಲಿ ಹುಟ್ಟಿ ದೇಶಾದ್ಯಂತ ಹರಡಿದೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಲೇಖಕಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

    ಶಿಕ್ಷಣದ ಹಕ್ಕು ಧರ್ಮದ ಹಕ್ಕು ಎಂಬುದು ನಾನು ನಂಬುತ್ತೇನೆ. ಕೆಲವು ಮುಸ್ಲಿಮರು ಹಿಜಬ್ ಅತ್ಯಗತ್ಯ ಎಂದು ಭಾವಿಸುತ್ತಾರೆ. ಇನ್ನೂ ಕೆಲವರು ಅದು ಅನಿವಾರ್ಯವಲ್ಲ ಎಂದು ಭಾವಿಸುತ್ತಾರೆ. ಆದರೆ 7ನೇ ಶತಮಾನದಲ್ಲಿ ಕೆಲವು ಸ್ತ್ರೀ ದ್ವೇಷವಾದಿಗಳು ಹಿಜಬ್ ಪರಿಚಯಿಸಿದರು. ಏಕೆಂದರೆ ಆ ಸಮಯದಲ್ಲಿ ಮಹಿಳೆಯರನ್ನು ಲೈಂಗಿಕ ವಸ್ತುಗಳಂತೆ ಪರಿಗಣಿಸಲಾಗುತ್ತಿತ್ತು ಎಂದಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಹಿಜಬ್ ಹೋರಾಟಕ್ಕೆ ಪರೀಕ್ಷೆ ಬಲಿ

    ಮಹಿಳೆಯರನ್ನು ನೋಡಿದರೆ ಪುರುಷರಿಗೆ ಲೈಂಗಿಕ ಪ್ರಚೋದನೆ ಉಂಟಾಗುತ್ತದೆ ಎಂಬ ಕಾರಣಕ್ಕೆ ಹಿಜಬ್ ಪರಿಚಯವಾಗಿತ್ತು. ಹೀಗಾಗಿ ಮಹಿಳೆಯರು ಹಿಜಬ್ ಅಥವಾ ಬುರ್ಕಾ ಧರಿಸಬೇಕಾಯಿತು ಹಾಗೂ ಪರುಷರಿಂದ ತಮ್ಮನ್ನು ಮರೆಮಾಡಿಕೊಳ್ಳಬೇಕಾಯಿತು ಎಂದು ತಿಳಿಸಿದರು. ಇದನ್ನೂ ಓದಿ: ನಮಗೆ ಆಜಾದಿ ಬೇಕು ಅಂತಾ ಘೋಷಣೆ ಕೂಗ್ತಿಯಾ? ನಿನ್ನನ್ನು ಅಟ್ಟಾಡಿಸಿ ಹೊಡೀತಿವಿ: ಸೀಮಾ ಇನಾಂದಾರ್‌ಗೆ ಜೀವ ಬೆದರಿಕೆ

    ಇದು 21 ನೇ ಶತಮಾನ, ಆಧುನಿಕ ಸಮಾಜ. ಮಹಿಳೆಯರು ಪುರುಷರೊಂದಿಗೆ ಸಮಾನರು ಎಂಬುದನ್ನು ನಾವು ಕಲಿತಿದ್ದೇವೆ. ಆದ್ದರಿಂದ ಹಿಜಬ್, ನಿಖಾಬ್ ಅಥವಾ ಬುರ್ಕಾ ದಬ್ಬಾಳಿಕೆಯ ಸಂಕೇತಗಳಾಗಿವೆ ಎಂದಿದ್ದಾರೆ.

  • ಎ.ಆರ್.ರಹಮಾನ್ ಪುತ್ರಿ ನೋಡಿದ್ರೆ ಉಸಿರುಗಟ್ಟಿದಂತಾಗುತ್ತೆ: ತಸ್ಲಿಮಾ ನಸ್ರೀನ್

    ಎ.ಆರ್.ರಹಮಾನ್ ಪುತ್ರಿ ನೋಡಿದ್ರೆ ಉಸಿರುಗಟ್ಟಿದಂತಾಗುತ್ತೆ: ತಸ್ಲಿಮಾ ನಸ್ರೀನ್

    ನವದೆಹಲಿ: ಸಂಗೀತ ಮಾಂತ್ರಿಕ, ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್.ರಹಮಾನ್ ಪುತ್ರಿಯನ್ನು ನೋಡಿದ್ರೆ ಉಸಿರುಗಟ್ಟಿದಂತಾಗುತ್ತೆ ಎಂದು ಲೇಖಕಿ ತಸ್ಲಿಮಾ ನಸ್ರೀನ್ ಟ್ವೀಟ್ ಮಾಡಿದ್ದಾರೆ.

    ಕಳೆದ ವರ್ಷ ಎ.ಆರ್.ರಹಮಾನ್ ಪುತ್ರಿ ಹಿಜಬ್ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವಿಷಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ನಡೆದಿದ್ದರಿಂದ ಎ.ಆರ್.ರಹಮಾನ್ ಸ್ಪಷ್ಟನೆ ನೀಡಿದ್ದರು. ಇದೀಗ ತಸ್ಲಿಮಾ ನಸ್ರೀನ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ನನಗೆ ಎ.ಆರ್.ರಹಮಾನ್ ಸಂಗೀತ ಅಂದ್ರೆ ತುಂಬಾ ಇಷ್ಟ. ಆದ್ರೆ ಪ್ರತಿಬಾರಿ ಅವರ ಪುತ್ರಿಯನ್ನು ನೋಡಿದಾಗ ಉಸಿರು ಗಟ್ಟಿದಂತಾಗುತ್ತದೆ. ಒಬ್ಬ ವಿದ್ಯಾವಂತೆಯನ್ನು ಕುಟುಂಬದ ಸಂಪ್ರದಾಯದ ಹೆಸರಿನಲ್ಲಿ ಸರಳವಾಗಿ ಬ್ರೈನ್ ವಾಶ ಮಾಡಬಹುದು ಎಂದು ಬರೆದುಕೊಂಡಿದ್ದಾರೆ.

    ‘ಸ್ಲಂಡಾಗ್ ಮಿಲಿಯೇನರ್’ ಸಿನಿಮಾ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ರೆಹಮಾನ್ ಪುತ್ರಿ ಖತೀಜಾ ಸಹ ಭಾಗಿಯಾಗಿದ್ದರು. ಸೀರೆ ಧರಿಸಿದ್ದ ಖತೀಜಾ, ಮುಖ ಕಾಣದಂತೆ ಹಿಜಬ್ ಧರಿಸಿದ್ದರು. ಕಾರ್ಯಕ್ರಮದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ ಪುತ್ರಿಗೆ ರಹಮಾನ್ ಬಲವಂತವಾಗಿ ಹಿಜಬ್ ಧರಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಟ್ರೋಲ್ ಮಾಡಲಾಗಿತ್ತು.

    ಟ್ರೋಲ್ ಗಳಿಗೆ ಪ್ರತಿಕ್ರಿಯಿಸಿದ್ದ ರಹಮಾನ್, ಬುರ್ಖಾ ಧರಿಸೋದು ಪುತ್ರಿಯ ನಿರ್ಧಾರವಾಗಿದೆ ಎಂದಿದ್ದರು. ಇನ್ನು ಫೇಸ್‍ಬುಕ್ ನಲ್ಲಿ ಸ್ಪಷ್ಟನೆ ನೀಡಿದ್ದ ಖತೀಜಾ, ನಾನು ಹೇಗೆ ಇರಬೇಕೆಂಬುವುದು ಗೊತ್ತಿದೆ. ವಿಷಯದ ಬಗ್ಗೆ ಗೊತ್ತಿಲ್ಲದೇ ನಿಮ್ಮ ಊಹೆಗಳನ್ನು ಸತ್ಯ ಎಂದು ವಾದಿಸಬೇಡಿ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದರು.

    https://www.instagram.com/p/BtjSI1KlTfW/?utm_source=ig_embed