Tag: Tata Company

  • ಟಾಟಾ ಸನ್ಸ್ ಗ್ರೂಪ್‌ಗೆ ಎನ್ ಚಂದ್ರಶೇಖರನ್ ಅಧ್ಯಕ್ಷರಾಗಿ ಮರು ನೇಮಕ

    ಟಾಟಾ ಸನ್ಸ್ ಗ್ರೂಪ್‌ಗೆ ಎನ್ ಚಂದ್ರಶೇಖರನ್ ಅಧ್ಯಕ್ಷರಾಗಿ ಮರು ನೇಮಕ

    ನವದೆಹಲಿ: ಟಾಟಾ ಸನ್ಸ್ ಮಂಡಳಿಯಲ್ಲಿ ಮುಂದಿನ 5 ವರ್ಷಗಳ ವರೆಗೆ ನಟರಾಜನ್ ಚಂದ್ರಶೇಖರನ್ ಅವರು ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

    ಎನ್ ಚಂದ್ರಶೇಖರನ್ 2017ರಲ್ಲಿ ಟಾಟಾ ಸನ್ಸ್ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಅವರ 5 ವರ್ಷಗಳ ಅಧಿಕಾರ ಅವಧಿ ಮುಗಿದಿದ್ದು, ಮತ್ತೆ 5 ವರ್ಷಗಳ ಅಧ್ಯಕ್ಷೀಯ ಅವಧಿಯನ್ನು ನವೀಕರಿಸಲಾಗಿದೆ.

    ಚಂದ್ರಶೇಖರನ್ 2016ರ ಅಕ್ಟೋಬರ್‌ನಲ್ಲಿ ಟಾಟಾ ಸನ್ಸ್ ಮಂಡಳಿಗೆ ಸೇರಿದ್ದರು. ಜನವರಿ 2017ರಲ್ಲಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಇವರು 100ಕ್ಕೂ ಅಧಿಕ ಟಾಟಾ ಆಪರೇಟಿಂಗ್ ಕಂಪನಿಗಳ ಪ್ರವರ್ತಕರಾಗಿದ್ದು, 100 ಶತಕೋಟಿ ಡಾಲರ್‌ಗೂ ಹೆಚ್ಚಿನ ಆದಾಯ ಹೊಂದಿದ್ದಾರೆ. ಇದನ್ನೂ ಓದಿ: IPL 2022 Auction: ಲಿವಿಂಗ್‍ಸ್ಟೋನ್ ದುಬಾರಿ ವಿದೇಶಿ ಆಟಗಾರ – ಫಿಂಚ್, ಮಾರ್ಗನ್ ಅನ್‍ಸೋಲ್ಡ್

     

    ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸೇರಿದಂತೆ ಹಲವಾರು ಗ್ರೂಪ್ ಆಪರೇಟಿಂಗ್ ಕಂಪನಿಗಳ ಮಂಡಳಿಗೆ ಅಧ್ಯಕ್ಷರಾಗಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ 15ರ ಸೆಟ್‌ಗೆ ಬೆಂಕಿ!

    ಚಂದ್ರಶೇಖರನ್ ತಮ್ಮ ಅಧಿಕಾರಾವಧಿಯಲ್ಲಿ ಏರ್ ಇಂಡಿಯಾವನ್ನು ಮರಳಿ ಪಡೆದಿದ್ದಾರೆ. ಟಾಟಾ ಗ್ರೂಪ್‌ಗೆ ಏರ್ ಇಂಡಿಯಾವನ್ನು ಮರಳಿ ಪಡೆಯಲು ನಾವು ಉತ್ಸುಕರಾಗಿದ್ದೇವೆ. ಇದನ್ನು ವಿಶ್ವದರ್ಜೆಯ ವಿಮಾನಯಾನ ಮಾಡಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದರು.

  • ಟಾಟಾ ಸ್ಟೀಲ್ಸ್ ಮ್ಯಾನೇಜರ್‌ನನ್ನು ಗುಂಡಿಕ್ಕಿ ಕೊಂದ ಮಾಜಿ ನೌಕರ

    ಟಾಟಾ ಸ್ಟೀಲ್ಸ್ ಮ್ಯಾನೇಜರ್‌ನನ್ನು ಗುಂಡಿಕ್ಕಿ ಕೊಂದ ಮಾಜಿ ನೌಕರ

    ಚಂಡೀಗಡ್: ಟಾಟಾ ಸ್ಟೀಲ್ ಮ್ಯಾನೇಜರ್ ಒಬ್ಬರನ್ನು ಅದೇ ಕಂಪನಿಯ ಮಾಜಿ ನೌಕರ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹರಿಯಾಣದ ಫರಿದಾಬಾದ್‍ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಅರಿಂದಾಲ್ ಪಾಲ್ (40) ಮೃತ ದುರ್ದೈವಿ. ಶುಕ್ರವಾರ ಮಧ್ಯಾಹ್ನ ಫರಿದಾಬಾದಿನ ಹಾರ್ಡ್ ವೇರ್ ರಸ್ತೆಯಲ್ಲಿರುವ ಟಾಟಾ ಸ್ಟೀಲ್ ತಯಾರಿಕಾ ಘಟಕದಲ್ಲಿ, ಎಂದಿನಂತೆ ಮ್ಯಾನೇಜರ್ ಅರಿಂದಾಲ್ ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಚೇರಿಗೆ ನುಗ್ಗಿದ ವ್ಯಕ್ತಿಯೊಬ್ಬ ಏಕಾಏಕಿ ಅವರ ಮೇಲೆ 4-5 ಬಾರಿ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದನು.

    ರಕ್ತದ ಮಡುವಿನಲ್ಲಿ ಬಿದ್ದಿದ್ದ ಪಾಲ್ ರನ್ನು ಕಚೇರಿಯ ಸಿಬ್ಬಂದಿ ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಅವರು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದರು. ಆಸ್ಪತ್ರೆಯಿಂದ ಮ್ಯಾನೇಜರ್ ಹತ್ಯೆ ಮಾಡಿರುವ ವಿಷಯ ತಿಳಿಯುತ್ತಿದ್ದಂತೆ, ನಾನು ಆಸ್ಪತ್ರೆಗೆ ಕಡೆ ಹೊರಟೆ, ಆದರೆ ನಾನು ತಲುಪುವಷ್ಟರಲ್ಲಿ ಅರಿಂದಾಲ್ ಪಾಲ್ ಮೃತಪಟ್ಟಿದ್ದರೆಂದು ಮುಜೆಶರ್ ಪೊಲೀಸ್ ಠಾಣಾ ಅಧಿಕಾರಿ ಅಶೋಕ್ ಕುಮಾರ್ ಹೇಳಿದ್ದಾರೆ.

    ಮ್ಯಾನೇಜರ್ ಪಾಲ್‍ಗೆ ಗುಂಡಿನ ದಾಳಿ ನಡೆಸಿದ್ದು, ಅದೇ ಸಂಸ್ಥೆಯ ಮಾಜಿ ನೌಕರ 32 ವರ್ಷದ ವಿಶ್ವಾಸ್ ಪಾಂಡೆಯಾಗಿದ್ದಾನೆ. ಆರೋಪಿ ಪಾಂಡೆ ಟಾಟಾ ಕಂಪನಿಯಲ್ಲಿ ಕಳೆದ 4 ವರ್ಷಗಳಿಂದ (2015-2018) ಕೆಲಸ ನಿರ್ವಹಿಸಿತ್ತಿದ್ದ. ಅಲ್ಲದೇ ಕಳೆದ ಆಗಸ್ಟ್ ತಿಂಗಳಿನಲ್ಲಿ ಆರೋಪಿಯನ್ನು ಕೆಲಸದಿಂದ ಹೊರಹಾಕಲಾಗಿತ್ತು. ಘಟನೆ ಸಂಬಂಧ ಆರೋಪಿ ವಿಶ್ವಾಸ್ ಪಾಂಡೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ಪಾಂಡೆಗಾಗಿ ತೀವ್ರ ಶೋಧ ನಡೆಸುತ್ತಿದ್ದೇವೆ. ಸದ್ಯ ಪಾಲ್ ರವರ ಮೃತ ದೇಹವನ್ನ ಫರಿದಾಬಾದ್‍ನ ಬಾದ್‍ಷಾ ಖಾನ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಭಾನುವಾರ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಅಶೋಕ್ ತಿಳಿಸಿದ್ದಾರೆ.

    ಮ್ಯಾನೇಜರ್ ಅರಿಂದಾಲ್ ಪಾಲ್ ಹತ್ಯೆಯ ಕುರಿತು ಟಾಟಾ ಸ್ಟೀಲ್ಸ್ ಪ್ರೋಸೆಸಿಂಗ್ ಮತ್ತು ಡಿಸ್ಟ್ರಿಬ್ಯೂಶನ್ ಕಂಪನಿ ಸಂತಾಪ ಸೂಚಿಸಿದೆ. ಪಾಲ್ ಅವರು ಹೆಂಡತಿ, ಮಗಳು ಮತ್ತು ತಂದೆ-ತಾಯಿಯನ್ನ ಅಗಲಿದ್ದಾರೆ. ಮೃತ ಕುಟುಂಬಕ್ಕೆ ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರ ನೀಡಲಿದೆ ಎಂದು ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews