Tag: tata magic

  • ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

    ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

    ಬೆಂಗಳೂರು: ಚಿಂತಾಮಣಿ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ ವಿಷಯ ತಿಳಿದು ಸಿಎಂ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

    ಅಮೆರಿಕ ಪ್ರವಾಸದಲ್ಲಿರುವ ಸಿಎಂ ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದ್ದು, ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇತ್ತ ಚಿಂತಾಮಣಿ ಶಾಸಕ ಹಾಗೂ ವಿಧಾನಸಭಾ ಉಪಾಧ್ಯಕ್ಷ ಜೆ.ಕೆ ಕೃಷ್ಣಾರೆಡ್ಡಿ ಅವರು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ತಲಾ 25 ಸಾವಿರ ರೂ. ಹಾಗೂ ಗಾಯಾಳುಗಳಿಗೆ 5 ಸಾವಿರ ರೂ. ಪರಿಹಾರ ಧನ ವಿತರಣೆ ಮಾಡಿದ್ದಾರೆ.

    ಮೃತ 12 ಮಂದಿಯಲ್ಲಿ 9 ಮಂದಿ ಮೃತರ ಗುರುತು ಪತ್ತೆಯಾಗಿದ್ದು, ಟಾಟಾ ಮ್ಯಾಜಿಕ್ ಚಾಲಕ ಶಾಬಾಜ್ (19), ಬೈನಹಳ್ಳಿಯ ವೆಂಕಟರಮಣಪ್ಪ (55), ಚಲಮಕೋಟೆ ಗ್ರಾಮದ ಕಿಟ್ಟಣ್ಣ(50), ದಂಡುಪಾಳ್ಯ ನಾರಾಯಣಸ್ವಾಮಿ (63), ಕೋನಪ್ಪಲ್ಲಿಯ ತಿಮ್ಮಯ್ಯ (56), ತಮಿಳುನಾಡು ಮೂಲದವರಾದ ಸಿದ್ದೀಕ್ (40), ರಂಜಿನ (35), ಗುರ್ರವಾರಂಪಲ್ಲಿಯ ಕುಮಾರ್ ಹಾಗೂ ಮುರುಗಮಲ್ಲ ಸುರೇಶ್(40) ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಆಗಿದ್ದೇನು?:
    ಹಿಂದೂ ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳವಾದ ಮುರುಗಮಲ್ಲದಿಂದ ಖಾಸಗಿ ಬಸ್ ಚಿಂತಾಮಣಿ ಕಡೆಗೆ ಆಗಮಿಸುತ್ತಿತ್ತು. ಚಿಂತಾಮಣಿ ಕಡೆಯಿಂದ ಮುರಗಮಲ್ಲದ ಕಡೆಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಮ್ಯಾಜಿಕ್ ಮುರುಗಮಲ್ಲದ ಕಡೆಗೆ ಸಾಗುತ್ತಿತ್ತು. ಈ ವೇಳೆ ಮುರಗಮಲ್ಲ ಸಮೀಪದಲ್ಲಿ ಖಾಸಗಿ ಬಸ್ ಹಾಗೂ ಟಾಟಾ ಮ್ಯಾಜಿಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಟಾಟಾ ಮ್ಯಾಜಿಕ್‍ನಲ್ಲಿದ್ದ 12 ಮಂದಿ ಮೃತಪಟ್ಟಿದ್ದಾರೆ.

    ಖಾಸಗಿ ಬಸ್‍ನಲ್ಲಿದ್ದ 8 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ. ಖಾಸಗಿ ಬಸ್ ಚಾಲಕನ ಅತಿವೇಗ, ಅಜಾಗೂರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.

  • ಟಾಟಾ ಮ್ಯಾಜಿಕ್ ವಾಹನದಲ್ಲಿ ಅವಿತಿದ್ದ ನಾಗರಹಾವನ್ನ ರಕ್ಷಿಸಿದ ಪೇದೆ

    ಟಾಟಾ ಮ್ಯಾಜಿಕ್ ವಾಹನದಲ್ಲಿ ಅವಿತಿದ್ದ ನಾಗರಹಾವನ್ನ ರಕ್ಷಿಸಿದ ಪೇದೆ

    ಹಾವೇರಿ: ಮನೆ ಮುಂದೆ ನಿಲ್ಲಿಸಿದ್ದ ಟಾಟಾ ಮ್ಯಾಜಿಕ್ ವಾಹನದಲ್ಲಿ ಅವಿತಿದ್ದ ನಾಗರಹಾವೊಂದು ಕೆಲಕಾಲ ವಾಹನದ ಮಾಲೀಕರು ಮತ್ತು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಿಸಿದ್ದ ಘಟನೆ ಹಾವೇರಿ ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ನಾಗಪ್ಪ ಮಣ್ಣೂರ ಎಂಬವರ ಮನೆಯ ಮುಂದೆ ನಿಲ್ಲಿಸಿದ್ದ ವಾಹನದಲ್ಲಿ ನಾಲ್ಕು ಅಡಿ ಉದ್ದದ ನಾಗರಹಾವು ಅವಿತು ಕುಳಿತಿತ್ತು. ವಾಹನದಲ್ಲಿ ಕುಳಿತಿದ್ದ ಹಾವನ್ನ ಗಮನಿಸಿದ ಮಾಲೀಕರು ಮತ್ತು ಸ್ಥಳೀಯರು ಕೆಲಕಾಲ ಆತಂಕಕ್ಕೆ ಒಳಗಾಗಿದ್ರು. ನಂತರ ವಾಹನದಿಂದ ಹಾವನ್ನ ಹೊರಗೆಳೆದು ಹೊಡೆದು ಸಾಯಿಸಲು ನಿರ್ಧರಿಸಿದ್ರು. ಆದ್ರೆ ಗ್ರಾಮದ ಕೆಲವರು ಹಾವು ಹಿಡಿಯೋದ್ರಲ್ಲಿ ಪಳಗಿರೋ ಹಾವೇರಿ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕಾನ್ಸ್ ಸ್ಟೇಬಲ್ ರಮೇಶ್ ಹರಿಜನಗೆ ಮಾಹಿತಿ ಮುಟ್ಟಿಸಿದ್ರು.

    ಕೂಡಲೇ ಸ್ಥಳಕ್ಕೆ ಧಾವಿಸಿದ ಕಾನ್ಸ್ ಸ್ಟೇಬಲ್ ರಮೇಶ್, ಅರ್ಧ ಗಂಟೆ ಕಾಲ ಕಾರ್ಯಾಚರಣೆ ನಡೆಸಿ ವಾಹನದಲ್ಲಿ ಅವಿತು ಕುಳಿತಿದ್ದ ಹಾವನ್ನ ಹಿಡಿದುಕೊಂಡು ನಂತರ ಕಾಡಿಗೆ ಬಿಡೋದಾಗಿ ಹೋದ್ರು.

    ರಮೇಶ್ ಕೈಗೆ ಸಿಕ್ಕ ನಗರಹಾವು ಬದುಕಿದೆಯಾ ಬಡಜೀವವೆ ಅಂತಾ ನಿಟ್ಟಿಸಿರು ಬಿಟ್ಟಿತು. ಗ್ರಾಮಸ್ಥರಂತೂ ಹಾವು ಸೆರೆಹಿಡಿದಿದ್ದು ಕಂಡು ಆತಂಕವನ್ನ ದೂರ ಮಾಡಿಕೊಂಡ್ರು.