Tag: Tata Sons

  • ರತನ್ ಟಾಟಾ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ನಿರ್ಧಾರ

    ರತನ್ ಟಾಟಾ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ನಿರ್ಧಾರ

    ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರ ಚಿತಾ ಭಸ್ಮವನ್ನು (Ashes) ಅರಬ್ಬಿ ಸಮುದ್ರದಲ್ಲಿ (Arabian Sea) ವಿಸರ್ಜಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ (Breach Candy Hospital) ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ಅ.9 ರಂದು ಕೊನೆಯುಸಿರೆಳೆದರು. ಅ.10 ರಂದು ಅಂತಿಮ ವಿಧಿವಿಧಾನಗಳನ್ನು ಮುಂಬೈನ (Mumbai) ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಸಹೋದರ ದೀಪಕ್‌ ಅರಸ್‌ ನಿಧನ

    ಇದೀಗ ಅವರ ಆಸೆಯಂತೆ ಅವರ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸುವುದಾಗಿ ಟಾಟಾ ಕುಟುಂಬ ನಿರ್ಧಾರ ಕೈಗೊಂಡಿದೆ. ಮುಂಬೈನ ಗೇಟ್ ವೇ ಆಫ್ ಇಂಡಿಯಾದಿಂದ (Gate Way Of India) ಹಡಗಿನಲ್ಲಿ ಮೆರವಣಿಗೆಯ ಮೂಲಕ ಚಿತಾ ಭಸ್ಮವನ್ನು ವಿಸರ್ಜಿಸಲಾಗುವುದು. ಈ ಸಂದರ್ಭದಲ್ಲಿ ಅವರ ಕುಟುಂಬ, ಅವರ ಸ್ನೇಹಿತರು ಸೇರಿದಂತೆ ಇನ್ನಿತರರು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ರತನ್ ಟಾಟಾ ಮುಂಬೈ ನಗರದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದರು. ಜೊತೆಗೆ ತಮ್ಮ ಜೀವನದ ಬಹುಪಾಲು ದಿನಗಳನ್ನು ಅವರು ಅಲ್ಲಿಯೇ ಕಳೆದಿದ್ದು, ಟಾಟಾ ಗ್ರೂಪ್ಸ್ (Tata Groups) ಎಂಬ ವ್ಯವಹಾರ ಸಾಮ್ರಾಜ್ಯಕ್ಕೆ ಮುಂಬೈನಲ್ಲಿ ಅಡಿಪಾಯ ಹಾಕಿದ್ದರು. ಅರಬ್ಬಿ ಸಮುದ್ರದ ನೀರು ಪ್ರಶಾಂತವಾದ ನೀರು. ಒಬ್ಬ ವ್ಯಕ್ತಿಗೆ ಅಂತಿಮ ವಿಶ್ರಾಂತಿಯನ್ನು ನೀಡುತ್ತದೆ ಎಂಬ ಅಭಿಪ್ರಾಯದೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.ಇದನ್ನೂ ಓದಿ: ಭಾರತದಲ್ಲಿರುವ ಶೇಖ್ ಹಸೀನಾ ವಿರುದ್ಧ ಅರೆಸ್ಟ್‌ ವಾರೆಂಟ್‌ ಜಾರಿ

  • ಕೊಡಗಿನಲ್ಲಿದೆ ರತನ್ ಟಾಟಾ ಒಡೆತನದ ಸಾವಿರಾರು ಎಕರೆ ಕಾಫಿ, ಚಹಾ ತೋಟ!

    ಕೊಡಗಿನಲ್ಲಿದೆ ರತನ್ ಟಾಟಾ ಒಡೆತನದ ಸಾವಿರಾರು ಎಕರೆ ಕಾಫಿ, ಚಹಾ ತೋಟ!

    ಮಡಿಕೇರಿ: ಖ್ಯಾತ ಉದ್ಯಮಿ, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ (Ratan Tata) ನಿಧನರಾಗಿದ್ದಾರೆ. ಕೊಡಗಿನಲ್ಲಿ (Kodagu) ರತನ್ ಟಾಟಾ ಅವರ ಒಡೆತನದಲ್ಲಿ ಸಾವಿರ ಎಕರೆ ಕಾಫಿ ಹಾಗೂ ಚಹಾ ತೋಟವಿದೆ.

    ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿ ಹಾಸನ, ಚಿಕ್ಕಮಗಳೂರು, ಪಕ್ಕದ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಸುಮಾರು 33 ಸಾವಿರ ಎಕರೆ ಕೃಷಿ ಭೂಮಿ ಹೊಂದಿದ್ದು, ಇಲ್ಲಿ ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ. ಇಲ್ಲಿ ಸಾವಿರಾರು ಮಂದಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಹತ್ತರ ಬದಲಾವಣೆ: ಜೈಲನ್ನು 3 ವಿಭಾಗ ಮಾಡಲಿರುವ ಗೃಹ ಇಲಾಖೆ

    ಟಾಟಾ ಕಾಫಿ ಸಂಸ್ಥೆ ಟಾಟಾ ಸಮೂಹದ ಒಂದು ಭಾಗ. ಟಾಟಾ ಕಾಫಿ ವಿಶ್ವದ ಅತಿದೊಡ್ಡ ಸಮಗ್ರ ಕಾಫಿ ಕೃಷಿ ಮತ್ತು ಸಂಸ್ಕರಣಾ ಕಂಪನಿಗಳಲ್ಲಿ ಒಂದಾಗಿದೆ. ಭಾರತೀಯ ಮೂಲದ ಕಾಳು ಮೆಣಸು ಉತ್ಪಾದಿಸುವ ಅತಿದೊಡ್ಡ ಸಂಸ್ಥೆಯಾಗಿದೆ. ಕನ್ಸಲ್ಟೆಂಟ್ ಕಾಫಿ ಸಂಸ್ಥೆಯೊಂದಿಗೆ 2000 ಇಸವಿಯಲ್ಲಿ ಕೊಡಗು ಸೇರಿ ಹಲವು ಕಡೆ ಟಾಟಾ ಸಂಸ್ಥೆ ಕಾಫಿ ತೋಟವನ್ನು ಖರೀದಿಸಿತ್ತು.

    ಕೊಡಗಿನಲ್ಲಿ ಸುಮಾರು 13 ಕಾಫಿ ತೋಟಗಳನ್ನು ಹೊಂದಿದ್ದು, 18 ಸಾವಿರ ಎಕರೆ ಜಮೀನನ್ನು ಸಂಸ್ಥೆ ಹೊಂದಿದೆ ಎನ್ನಲಾಗುತ್ತಿದೆ. ಟಾಟಾ ಸಂಸ್ಥೆಯಿಂದ ಜಿಲ್ಲೆಯಲ್ಲಿ ಅರೇಬಿಕಾ ಹಾಗೂ ರೊಬೆಸ್ಟಾ ಕಾಫಿಯನ್ನು ಬೆಳೆಯಲಾಗುತ್ತಿದ್ದು, ಟಾಟಾ ಕಾಫಿಯ ಅರೇಬಿಕಾ ಕಾಫಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಬೇಡಿಕೆಯಿದೆ.

    ಕುಶಾಲನಗರದಲ್ಲಿ ಕಾಫಿ ಕ್ಯೂರಿಂಗ್ ಮಾಡಲಾಗುತ್ತಿದ್ದು, ಜಿಲ್ಲೆಯ ವಿವಿಧೆಡೆ ಕೊಯ್ಲು ಮಾಡಿದ ಕಾಫಿಯನ್ನು ಇಲ್ಲಿ ಕ್ಯೂರಿಂಗ್ ಮಾಡಲಾಗುತ್ತದೆ. ಟಾಟಾ ಕಾಫಿ ತೋಟದಲ್ಲಿ ಗೆಸ್ಟ್ ಹೌಸ್ ಕೂಡ ಇದೆ. ಇನ್ನೂ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿರುವ ಟೀ ಎಸ್ಟೇಟ್ ಸರ್ಕಾರದಿಂದ ಲೀಸ್‌ಗೆ ಪಡೆಯಲಾಗಿದೆ. ಟಾಟಾ ಕಾಫಿಯಲ್ಲಿ ಕೂರ್ಗ್ ಫೌಂಡೇಷನ್ ಸ್ಥಾಪನೆ ಮಾಡಲಾಗಿದ್ದು, ಸಿಆರ್‌ಎಸ್ ಫಂಡ್ ಮೂಲಕ ಆರೋಗ್ಯ ಶಿಬಿರ ಸೇರಿ ಹಲವು ಚಟುವಟಿಕೆ ನಡೆಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ರತನ್ ಟಾಟಾ ತಮ್ಮದೇ ಆದ ಪಾಲುದಾರ ಟಾಟಾ ಕಾಫಿ ಸಂಸ್ಥೆಯ ಸಾವಿರಾರು ಎಕರೆ ಕಾಫಿ ತೋಟವನ್ನು ಹೊಂದಿದ್ದರೂ, ತಮ್ಮ ಸಂಸ್ಥೆಗೆ ಯಾವತ್ತೂ ಭೇಟಿ ನೀಡಿರಲಿಲ್ಲ.ಇದನ್ನೂ ಓದಿ: ಡಿಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಸಿರಾಜ್‌

  • ಒಂದು ಯುಗ ಈಗಷ್ಟೇ ಊರುಳಿತು: ರತನ್ ಟಾಟಾ ನಿಧನಕ್ಕೆ ಅಮಿತಾಬ್ ಬಚ್ಚನ್ ಸಂತಾಪ

    ಒಂದು ಯುಗ ಈಗಷ್ಟೇ ಊರುಳಿತು: ರತನ್ ಟಾಟಾ ನಿಧನಕ್ಕೆ ಅಮಿತಾಬ್ ಬಚ್ಚನ್ ಸಂತಾಪ

    ಮುಂಬೈ: ಭಾರತದ ಖ್ಯಾತ ಉದ್ಯಮಿ, ಟಾಟಾಸನ್ಸ್‌ನ (Tata Sons) ಗೌರವ ಅಧ್ಯಕ್ಷ ರತನ್ ಟಾಟಾ (Ratan Tata) ಅವರ ನಿಧನಕ್ಕೆ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ (Amitabh Bachchan) ಸಂತಾಪ ಸೂಚಿಸಿದ್ದಾರೆ.

    ರತನ್ ಟಾಟಾ ಅವರೊಂದಿಗೆ ಏತ್‌ಬಾರ್ ಎಂಬ ಸಿನಿಮಾದಲ್ಲಿ ಸಹ ನಿರ್ಮಾಪಕನಾಗಿ ಕೆಲಸ ಮಾಡಿದ್ದೆ. ಖ್ಯಾತ ಉದ್ಯಮಿಯೊಂದಿಗಿನ ನೆನಪು ಅಮರವಾದದ್ದು ಎಂದು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ರತನ್ ಟಾಟಾ ಅವರೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ.

    ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಮಿತಾಬ್ ಬಚ್ಚನ್ ಸಂತಾಪ ಸೂಚಿಸಿದ್ದಾರೆ. ಒಂದು ಯುಗ ಈಗಷ್ಟೇ ಊರುಳಿತು. ಅವರ ನಮ್ರತೆ, ಅವರ ಮಹಾನ್ ಸಂಕಲ್ಪ, ಅವರ ದೂರದೃಷ್ಟಿ ಹಾಗೂ ರಾಷ್ಟ್ರಕ್ಕೆ ಅತ್ಯುತ್ತಮವಾದದ್ದನ್ನು ಸಾಧಿಸುವ ಅವರ ಸಂಕಲ್ಪ, ಎಂದಿಗೂ ಹೆಮ್ಮೆ ತರುವಂತದ್ದು. ಸಾಮಾನ್ಯ ಮಾನವೀಯ ಕಾರಣಗಳಿಗಾಗಿ ರತನ್ ಟಾಟಾ ಅವರೊಂದಿಗೆ ನನಗೆ ಕೆಲಸ ಮಾಡಲು ಅವಕಾಶ ಸಿಕ್ಕದ್ದು ನನಗೆ ಅದೊಂದು ದೊಡ್ಡ ಗೌರವವಾಗಿದೆ. ಈ ದಿನ ತುಂಬಾ ದು:ಖವಾದ ದಿನ. ನನ್ನ ನಮನಗಳು ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ನಿಮ್ಮ ಆತ್ಮ ನಕ್ಷತ್ರಗಳಾಗಿ ಭೂಮಿಗೆ ಬರಲಿ: ರತನ್ ಟಾಟಾ ನಿಧನಕ್ಕೆ ನಿತ್ಯಾ ಮೆನನ್ ಭಾವುಕ

     

    View this post on Instagram

     

    A post shared by Amitabh Bachchan (@amitabhbachchan)

    ಜೊತೆಗೆ ಕಮಲ್ ಹಾಸನ್ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ರತನ್ ಟಾಟಾ ಜಿ ನನ್ನ ಪರ್ಸನಲ್ ಹೀರೋ. ನನ್ನ ಜೀವನದುದ್ದಕ್ಕೂ ನಾನು ಅವರನ್ನು ಅನುಕರಿಸಲು ಪ್ರಯತ್ನಿಸಿದ್ದೇನೆ. ರಾಷ್ಟ್ರ ನಿರ್ಮಾಣದಲ್ಲಿ ಅವರು ತಮ್ಮ ಕೊಡುಗೆಗಳನ್ನು ಶಾಶ್ವತವಾಗಿ ಕೆತ್ತನೆ ಮಾಡಿದ್ದಾರೆ. ಅವರ ನಿಜವಾದ ಶ್ರೀಮಂತಿಕೆ ಭೌತಿಕ ಸಂಪತ್ತಿನಲ್ಲಿ ಅಲ್ಲ. ಆದರೆ ಅವರ ನೈತಿಕತೆ, ಸಮಗ್ರತೆ, ನಮ್ರತೆ ಮತ್ತು ದೇಶಭಕ್ತಿಯಲ್ಲಿದೆ ಎಂದು ಬರೆದುಕೊಂಡಿದ್ದಾರೆ.

    ಅಮಿತಾಬ್ ಬಚ್ಚನ್ ಸೇರಿದಂತೆ ಅನುಷ್ಕಾ ಶರ್ಮಾ, ಪ್ರಿಯಾಂಕಾ ಚೋಪ್ರಾ, ಆಲಿಯಾ ಭಟ್, ಸಲ್ಮಾನ್ ಖಾನ್, ವರುಣ್ ಧವನ್ ಮುಂತಾದ ನಟ-ನಟಿಯರು ಸಂತಾಪ ಸೂಚಿಸಿದ್ದು, ಕಮಲ್ ಹಾಸನ್, ಜೂನಿಯರ್ ಎನ್‌ಟಿಆರ್, ರಾಣಾ ದಗ್ಗುಬಾಟಿ ಕೂಡ ಪೋಸ್ಟ್‌ನ್ನು  ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಉರಿನತ್ತ ಜನ | ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

  • ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ, ಐಸಿಯುಗೆ ದಾಖಲು – ಆಪ್ತರಿಂದ ಮಾಹಿತಿ

    ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ, ಐಸಿಯುಗೆ ದಾಖಲು – ಆಪ್ತರಿಂದ ಮಾಹಿತಿ

    ಮುಂಬೈ: ಟಾಟಾ ಸನ್ಸ್ (Tata Sons) ಮಾಜಿ ಅಧ್ಯಕ್ಷ ರತನ್ ಟಾಟಾ (Ratan Tata) (86) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ (Breach Candy Hospital) ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    20ಕ್ಕೂ ಹೆಚ್ಚು ವರ್ಷಗಳಿಂದ ಟಾಟಾ ಸನ್ಸ್ ಕಂಪನಿಯನ್ನು ನಡೆಸಿಕೊಂಡು ಬಂದಿರುವ 86 ವರ್ಷದ ರತನ್ ಟಾಟಾ ಅವರು ಸೋಮವಾರ ತಮ್ಮ ವಯೋಸಹಜ ಪರೀಕ್ಷೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಇದನ್ನೂ ಓದಿ: ನಿತೀಶ್‌-ರಿಂಕು ಸ್ಫೋಟಕ ಫಿಫ್ಟಿ; ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ 86 ರನ್‌ಗಳ ಜಯ

    ಟಾಟಾ ಸಮೂಹದ ಆಪ್ತರೊಬ್ಬರು, ರತನ್ ಟಾಟಾ ಅವರ ಆರೋಗ್ಯ ಪರಿಸ್ಥಿತಿಯ ಕುರಿತು ನೇರ ಮಾಹಿತಿಯನ್ನು ತಿಳಿದು ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದು, ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಅವರು ಹಂಚಿಕೊಂಡಿಲ್ಲ.

    ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದರು. ವಯೋಸಹಜ ಸಮಸ್ಯೆಗಳಿಂದ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದೇನೆ. ಆಂತಕಗೊಳ್ಳುವ ಅಗತ್ಯವಿಲ್ಲ. ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದೇನೆ. ನನ್ನ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿವೆ. ಆ ಬಗ್ಗೆ ನನಗೆ ಮಾಹಿತಿ ಇದೆ. ನಾನು ಹಿಂದಿನ ಉತ್ಸಾಹದಲ್ಲೇ ಇರುತ್ತೇನೆ. ತಪ್ಪು ಮಾಹಿತಿ ಹರಡದಂತೆ ಮನವಿ ಮಾಡುತ್ತೇನೆ ಎಂದು ರತನ್ ಟಾಟಾ ಸ್ಪಷ್ಟನೆ ನೀಡಿದ್ದರು.

    ಕಂಪನಿಯ ನಿರ್ವಾಹಕರೊಬ್ಬರು ಮಾತನಾಡಿ, ಮೊದಲಿನಂತೆ ಟಾಟಾ ಅವರು ದಿನನಿತ್ಯದ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಲ್ಲ. ಆದರೆ ಟಾಟಾ ಸನ್ಸ್ ನಾಯಕತ್ವದಿಂದ ಕೆಲವು ನಿರ್ಧಾರಗಳ ಕುರಿತು ಸಲಹೆ ನೀಡುತ್ತಾರೆ ಎಂದು ತಿಳಿಸಿದರು.

    ಸದ್ಯ ಇದೀಗ ಅವರು ಟಾಟಾ ಟ್ರಸ್ಟ್ನ ಲೋಕೋಪಕಾರಿ ಸಂಸ್ಥೆಯನ್ನು ನಡೆಸುವುದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ: ಬೈಕ್ ವ್ಹೀಲಿಂಗ್ ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ – ಆರೋಪಿಗಳ ಅರೆಸ್ಟ್

  • ಅಯೋಧ್ಯೆಯಲ್ಲಿ ತಲೆ ಎತ್ತಲಿದೆ 650 ಕೋಟಿ ವೆಚ್ಚದ ‘ದೇಗುಲಗಳ ಮ್ಯೂಸಿಯಂʼ

    ಅಯೋಧ್ಯೆಯಲ್ಲಿ ತಲೆ ಎತ್ತಲಿದೆ 650 ಕೋಟಿ ವೆಚ್ಚದ ‘ದೇಗುಲಗಳ ಮ್ಯೂಸಿಯಂʼ

    ಅಯೋಧ್ಯೆ: ಪ್ರತಿನಿತ್ಯ ಸಾವಿರಾರು ಭಕ್ತರನ್ನು ಆಕರ್ಷಿಸುವ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಇದೀಗ ಟಾಟಾ ಸನ್ಸ್‌ ಸಂಸ್ಥೆಯು (TaTa Sons) 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ( Museum of Temples) ಅನ್ನು ಸ್ಥಾಪಿಸಲು ಮುಂದಾಗಿದೆ.

    ಉತ್ತರ ಪ್ರದೇಶ ಸಚಿವ ಸಂಪುಟ (Uttarpradesh Cabinet) ಮಂಗಳವಾರ ಟಾಟಾ ಗ್ರೂಪ್‌ನ ಮಾತೃ ಸಂಸ್ಥೆಯಾಗಿರುವ ಟಾಟಾ ಸನ್ಸ್‌ನ ಈ ಯೋಜನೆಗೆ ಹಸಿರು ನಿಶಾನೆ ತೋರಿದೆ.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಯುಪಿ ಪ್ರವಾಸೋದ್ಯಮ ಸಚಿವ ಜೈವಿರ್ ಸಿಂಗ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಟಾಟಾ ಸನ್ಸ್ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯ ಅಡಿಯಲ್ಲಿ 650 ಕೋಟಿ ರೂಪಾಯಿ ವೆಚ್ಚದಲ್ಲಿ ವಸ್ತುಸಂಗ್ರಹಾಲಯವನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಮೂಲಕ ಯೋಜನೆಯನ್ನು ಪ್ರಸ್ತಾಪಿಸಿದೆ ಎಂದು ಹೇಳಿದರು.

    ಈ ಅತ್ಯಾಧುನಿಕ ವಸ್ತುಸಂಗ್ರಹಾಲಯವು ಅಂತಾರಾಷ್ಟ್ರೀಯ ಗುಣಮಟ್ಟವನ್ನು ಪೂರೈಸುತ್ತದೆ. ಭಾರತದ ಪ್ರಸಿದ್ಧ ದೇವಾಲಯಗಳ ಇತಿಹಾಸ ಮತ್ತು ವಾಸ್ತುಶಿಲ್ಪವನ್ನು ಪ್ರದರ್ಶಿಸುತ್ತದೆ ಎಂದರು. ಇದನ್ನೂ ಓದಿ: ರಾಮಮಂದಿರದಲ್ಲಿ ಭಕ್ತರೆಲ್ಲಾ ಸಮಾನರು – ಅರ್ಚಕರು ವಿಐಪಿಗಳಿಗೆ ತಿಲಕ ಇಡುವಂತಿಲ್ಲ

    ವಸ್ತುಸಂಗ್ರಹಾಲಯದ ಕುರಿತು ಕಳೆದ ವರ್ಷವೇ ಚಿಂತನೆ ನಡೆಸಲಾಗಿದ್ದು, ಸಿಎಂ ಆದಿತ್ಯನಾಥ್ ಹಾಗೂ ಹಿರಿಯ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಈ ಕುರಿತು ಪ್ರಸ್ತಾಪ ಮಾಡಿದ್ದಾರೆ. ಈ ವೇಳೆ ದೇವಾಲಯದ ವಸ್ತುಸಂಗ್ರಹಾಲಯದ ಕಲ್ಪನೆಯನ್ನು ಮೋದಿಯವರು ಇಷ್ಟಪಟ್ಟಿದ್ದಾರೆ. ನಂತರ ಈ ಕುರಿತು ವಿವರವಾಗಿ ಚರ್ಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಈ ಹಿಂದೆ ಮಾಧ್ಯಮಕ್ಕೆ ತಿಳಿಸಿದ್ದರು.

    ಇದಲ್ಲದೇ ದೇವಾಲಯದ ಪಟ್ಟಣದಲ್ಲಿ 100 ಕೋಟಿ ರೂಪಾಯಿಗಳ ಹೆಚ್ಚುವರಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಟಾಟಾ ಸನ್ಸ್‌ನ ಮತ್ತೊಂದು ಪ್ರಸ್ತಾವನೆಗೆ ಯುಪಿ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂಬುದಾಗಿ ವರದಿಯಾಗಿದೆ.

  • ಏರ್‌ಬಸ್‌-ಬೋಯಿಂಗ್‌ ಜೊತೆ ಮೆಗಾ ಡೀಲ್‌: ವಿಶ್ವದಾಖಲೆ ನಿರ್ಮಿಸಿದ ಏರ್‌ ಇಂಡಿಯಾ

    ಏರ್‌ಬಸ್‌-ಬೋಯಿಂಗ್‌ ಜೊತೆ ಮೆಗಾ ಡೀಲ್‌: ವಿಶ್ವದಾಖಲೆ ನಿರ್ಮಿಸಿದ ಏರ್‌ ಇಂಡಿಯಾ

    ನವದೆಹಲಿ: ಟಾಟಾ ಸನ್ಸ್ (Tata Sons) ಒಡೆತನದ ಏರ್ ಇಂಡಿಯಾ 470 ವಿಮಾನಗಳನ್ನು ಆರ್ಡರ್ ಮಾಡುವ ಮೂಲಕ ವಾಯುಯಾನ ಕ್ಷೇತ್ರದಲ್ಲಿ ದಾಖಲೆ ಬರೆದಿದೆ. ಇದು ಆಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಏರ್‌ಲೈನ್ಸ್ ಕಂಪನಿಯೊಂದು ಮಾಡಿದ ಅತಿದೊಡ್ಡ ಆರ್ಡರ್‌ಗಳಲ್ಲಿ ಒಂದಾಗಿದೆ.

    ಫ್ರಾನ್ಸಿನ ಏರ್‌ಬಸ್‌ನಿಂದ (Air Bus) 250 ಮತ್ತು ಅಮೆರಿಕದ ಬೋಯಿಂಗ್‌ನಿಂದ (Boeing) 220 ವಿಮಾನಗಳನ್ನು ಏರ್‌ ಇಂಡಿಯಾದಿಂದ ಖರೀದಿಸಲಿದೆ. ಒಟ್ಟು 420 ಸಣ್ಣ, ಮಧ್ಯಮ ಗಾತ್ರ ಮತ್ತು 40 ದೊಡ್ಡ ಗಾತ್ರದ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ (Air India) ಮುಂದಾಗಿದ್ದು, ಮುಂದಿನ ಏಳರಿಂದ ಎಂಟು ವರ್ಷಗಳಲ್ಲಿ ವಿಮಾನಗಳು ಏರ್‌ ಇಂಡಿಯಾವನ್ನು ಸೇರಲಿದೆ.

    ಈ ಹಿಂದೆ ಅಮೆರಿಕನ್ ಏರ್‌ಲೈನ್ಸ್‌ (American Airlines) 460 ವಿಮಾನಗಳನ್ನು ಆರ್ಡರ್‌ ಮಾಡುವ ಮೂಲಕ ದಾಖಲೆ ಮಾಡಿತ್ತು. 2019 ರಲ್ಲಿ ಇಂಡಿಗೋ (Indigo) 300 ವಿಮಾನ ಖರೀದಿಗೆ ಆರ್ಡರ್‌ ಮಾಡಿತ್ತು.

    ಫ್ರಾನ್ಸ್‌ನ ಏರ್‌ಬಸ್‌ ಸಂಸ್ಥೆಯಿಂದ 40 ಭಾರೀಗಾತ್ರದ ಎ350 ವಿಮಾನಗಳನ್ನು, 20 ಬೋಯಿಂಗ್‌ 787 ಎಸ್‌, 10 ಬೋಯಿಂಗ್‌ 777-9ಎಸ್‌, 210 ಎರ್‌ಬಸ್‌ ಎ320/321 ನಿಯೋ, 190 ಬೋಯಿಂಗ್‌ ಮ್ಯಾಕ್ಸ್‌ ವಿಮಾನಗಳನ್ನು ವಿಮಾನಗಳನ್ನು ಖರೀದಿಸಲು ಟಾಟಾ ಮಾಲಿಕತ್ವದ ಏರ್‌ ಇಂಡಿಯಾ ಒಪ್ಪಂದ ಮಾಡಿಕೊಂಡಿದೆ.  ಇದನ್ನೂ ಓದಿ: ಅದಾನಿ ಎಂಟರ್‌ಪ್ರೈಸಸ್‌ಗೆ 820 ಕೋಟಿ ನಿವ್ವಳ ಲಾಭ – ಷೇರು ಬೆಲೆ ಜಿಗಿತ

    ಏರ್‌ಬಸ್‌ ಜೊತೆ ಒಪ್ಪಂದ
    ಏರ್‌ಬಸ್‌ ಜೊತೆ ಒಪ್ಪಂದ ಈ ಕ್ಷಣಕ್ಕೆ ಪ್ರಧಾನಿ ಮೋದಿ, ಟಾಟಾ ಸಂಸ್ಥೆ ಮುಖ್ಯಸ್ಥ ರತನ್ ಟಾಟಾ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುವಲ್ ಮ್ಯಾಕ್ರಾನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಾಕ್ಷಿಯಾದರು.

    ಏರ್ ಇಂಡಿಯಾದ ಪುನಶ್ಚೇತನಕ್ಕಾಗಿ ಏರ್ ಬಸ್ ಸಂಸ್ಥೆ ಸಹಾಯ ಮಾಡಲಿದೆ. ಇದು ಐತಿಹಾಸಿಕ ಕ್ಷಣ ಎಂದು ಏರ್‌ಬಸ್‌ ಚೀಫ್ ಎಕ್ಸಿಕ್ಯೂಟೀವ್ ಗೀಲಮ್ ಫೌರಿ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ವೈಮಾನಿಕ ಕ್ಷೇತ್ರದಲ್ಲಿ ಮೂರನೇ ಅತಿದೊಡ್ಡ ದೇಶವಾಗಿ ಭಾರತ ಹೊರಹೊಮ್ಮಲಿದೆ. ಮುಂದಿನ 15 ವರ್ಷದಲ್ಲಿ ಭಾರತಕ್ಕೆ 2500 ಏರ್‌ಕ್ರಾಫ್ಟ್‌ ಬೇಕಾಗುತ್ತವೆ ಎಂದು ಮೋದಿ ಹೇಳಿದ್ದಾರೆ.

    ಬೋಯಿಂಗ್‌ ಜೊತೆ ಡೀಲ್‌:
    ಏರ್‌ಬಸ್‌ ಡೀಲ್‌ ಅಧಿಕೃತವಾದ ಬೆನ್ನಲ್ಲೇ ಟಾಟಾ ಕಂಪನಿ ಅಮೆರಿಕದ ಬೋಯಿಂಗ್‌ ಜೊತೆ 200 ವಿಮಾನ ಖರೀದಿಗೆ ಒಪ್ಪಂದ ಮಾಡಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಈ ಡೀಲ್‌ ವಿಚಾರವನ್ನು ಅಧಿಕೃತವಾಗಿ ಪ್ರಕಟಿಸಿದರು.

    ಏರ್ ಇಂಡಿಯಾ ಮತ್ತು ಬೋಯಿಂಗ್ ನಡುವಿನ ಐತಿಹಾಸಿಕ ಒಪ್ಪಂದದ ಮೂಲಕ 220 ಅಮೆರಿಕನ್ ನಿರ್ಮಿತ ವಿಮಾನಗಳ ಖರೀದಿಸಲಿದೆ ಎಂದು ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ. ಈ ಖರೀದಿ ಒಪ್ಪಂದಿಂದ ಅಮೆರಿಕದ 44 ರಾಜ್ಯಗಳಲ್ಲಿ ಒಟ್ಟು 10 ಲಕ್ಷ ಹೆಚ್ಚು ಮಂದಿಗೆ ಉದ್ಯೋಗ ಸಿಗಲಿದೆ. ಈ ಘೋಷಣೆ ಅಮೆರಿಕ -ಭಾರತದ ಆರ್ಥಿಕ ಪಾಲುದಾರಿಕೆಯ ಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಘೋಷಿಸಿದ್ದಾರೆ.

     

    ಎ350 ವಿಮಾನ ವಿಶೇಷವೇನು?
    ಏಕಕಾಲದಲ್ಲಿ 17,000 ಕಿ.ಮೀ ಹಾರುವ ಸಾಮರ್ಥ್ಯ ಹೊಂದಿರುವ ಈ ವಿಮಾನವನ್ನು 3 ಕ್ಲಾಸ್ ಆಗಿ ವಿಭಜಿಸಿದರೆ 410 ಪ್ರಯಾಣಿಕರು ಪ್ರಯಾಣಿಸಬಹುದು. ಸಿಂಗಲ್ ಕ್ಲಾಸ್ ವಿಮಾನವಾದರೆ 480 ಪ್ರಯಾಣಿಕರನ್ನು ಕರೆದೊಯ್ಯಬಹುದು.

    ಕೋವಿಡ್‌ ಬಳಿಕ ಭಾರತದಲ್ಲಿ ವಿಮಾನಯಾನ ಕ್ಷೇತ್ರ ನಿರೀಕ್ಷೆಗಿಂತಲೂ ವೇಗವಾಗಿ ಬೆಳೆಯುತ್ತಿದೆ. ಈ ಕಾರಣಕ್ಕೆ ಏರ್‌ ಇಂಡಿಯಾ ಮೊದಲೇ ಆರ್ಡರ್‌ ಬುಕ್ಕಿಂಗ್‌ ಮಾಡಿದೆ. ಮುಂದಿನ ಐದು ವರ್ಷಗಳಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳಲ್ಲಿ ತನ್ನ ಮಾರುಕಟ್ಟೆ ಪಾಲನ್ನು 30% ಗೆ ಹೆಚ್ಚಿಸುವ ಗುರಿಯನ್ನು ಏರ್‌ ಇಂಡಿಯಾ ಹಾಕಿಕೊಂಡಿದೆ. 2024ರ ಅಂತ್ಯದ ವೇಳೆಗೆ ಏರ್ ಇಂಡಿಯಾಗೆ 50 ಹೊಸ ವಿಮಾನಗಳು ಸೇರ್ಪಡೆಯಾಗುವ ಸಾಧ್ಯತೆಯಿದೆ.

    ಇಂಡಿಗೋಗೆ ಸ್ಪರ್ಧೆ ನೀಡಲು 5-6 ಗಂಟೆಯ ಒಳಗಡೆ ದೇಶದ ವಿವಿಧ ಸ್ಥಳಗಳನ್ನು ತಲುಪಲು ಸಣ್ಣ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ ಮುಂದಾಗಿದೆ. ಅಮೆರಿಕ, ಯುರೋಪ್ ದೇಶಗಳಿಗೆ ಸೇವೆ ನೀಡಲು ದೊಡ್ಡ ಗಾತ್ರ ವಿಮಾನಗಳನ್ನು ಖರೀದಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 500 ವಿಮಾನ ಖರೀದಿಗೆ ಆರ್ಡರ್‌ – ವಿಶ್ವ ದಾಖಲೆ ಬರೆದ ಏರ್‌ ಇಂಡಿಯಾ

    500 ವಿಮಾನ ಖರೀದಿಗೆ ಆರ್ಡರ್‌ – ವಿಶ್ವ ದಾಖಲೆ ಬರೆದ ಏರ್‌ ಇಂಡಿಯಾ

    ಮುಂಬೈ: ಟಾಟಾ ಸನ್ಸ್ (Tata Sons) ಒಡೆತನದ ಏರ್ ಇಂಡಿಯಾ 500 ವಿಮಾನಗಳನ್ನು ಆರ್ಡರ್ ಮಾಡುವ ಮೂಲಕ ವಾಯುಯಾನ ಕ್ಷೇತ್ರದಲ್ಲಿ ದಾಖಲೆ ಬರೆದಿದೆ. ಇದು ಆಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಏರ್‌ಲೈನ್ಸ್ ಕಂಪನಿಯೊಂದು ಮಾಡಿದ ಅತಿದೊಡ್ಡ ಆರ್ಡರ್‌ಗಳಲ್ಲಿ ಒಂದಾಗಿದೆ.

    430 ಸಣ್ಣ ಮತ್ತು 30 ದೊಡ್ಡ ಗಾತ್ರದ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ (Air India) ಮುಂದಾಗಿದ್ದು, ಮುಂದಿನ ಏಳರಿಂದ ಎಂಟು ವರ್ಷಗಳಲ್ಲಿ ವಿಮಾನಗಳು ಏರ್‌ ಇಂಡಿಯಾವನ್ನು ಸೇರಲಿದೆ.

    ಈ ಹಿಂದೆ ಅಮೆರಿಕನ್ ಏರ್‌ಲೈನ್ಸ್‌ (American Airlines) 460 ವಿಮಾನಗಳನ್ನು ಆರ್ಡರ್‌ ಮಾಡುವ ಮೂಲಕ ದಾಖಲೆ ಮಾಡಿತ್ತು. 2019 ರಲ್ಲಿ ಇಂಡಿಗೋ (Indigo) 300 ವಿಮಾನ ಖರೀದಿಗೆ ಆರ್ಡರ್‌ ಮಾಡಿತ್ತು.

    ಯಾವ ವಿಮಾನಗಳು?
    ಯುರೋಪ್‌ ಮೂಲದ ಏರ್‌ಬಸ್ (Airbus) ಕಂಪನಿ ಜೊತೆ A320 ನಿಯೋ 240 ವಿಮಾನಗಳು ಮತ್ತು A350 40 ವಿಮಾನ ಖರೀದಿಗೆ ಆರ್ಡರ್‌ ನೀಡಿದೆ. ಅಮೆರಿಕದ ಬೋಯಿಂಗ್ (Boeing) ಬಳಿ 737 ಮ್ಯಾಕ್ಸ್ 190 ವಿಮಾನಗಳು, 787 ಡ್ರೀಮ್‌ಲೈನರ್‌ 20 ಮತ್ತು 777x 10 ವಿಮಾನಗಳನ್ನು ಖರೀದಿ ಮಾಡಲಿದೆ. ಇದನ್ನೂ ಓದಿ: ಏರ್‌ಬಸ್‌ ಜೊತೆಗೂಡಿ ವಾಯುಸೇನೆಗೆ ವಿಮಾನ ತಯಾರಿಸಲಿದೆ ಟಾಟಾ ಸಮೂಹ

    ಮುಂದಿನ ವಾರ ಅಧಿಕೃತ ಪ್ರಕಟಣೆ ಘೋಷಣೆಯಾಗುವ ಸಾಧ್ಯತೆ ಇದೆ. 150 ಶತಕೋಟಿ ಡಾಲರ್‌ ಮೌಲ್ಯದ ಖರೀದಿ ಒಪ್ಪಂದ ನಡೆದಿದ್ದರೂ ಏರ್‌ ಇಂಡಿಯಾ ಹಲವು ರಿಯಾಯಿತಿಗಳನ್ನು ಪಡೆಯಲಿದೆ ಎಂದು ವರದಿಯಾಗಿದೆ.

    ಇಂದು ಏರ್‌ಬಸ್ ಮತ್ತು ಏರ್ ಇಂಡಿಯಾ ಅಧಿಕಾರಿಗಳ ನಡುವೆ ನಡೆದ ಸಭೆಯಲ್ಲಿ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಮತ್ತು ಏರ್‌ಬಸ್ ಮುಖ್ಯ ವಾಣಿಜ್ಯ ಅಧಿಕಾರಿ ಕ್ರಿಶ್ಚಿಯನ್ ಸ್ಕೆರೆರ್ ಭಾಗಿಯಾಗಿ ಆರ್ಡರ್‌ ಅಂತಿಮಗೊಳಿಸಿದ್ದಾರೆ. ಜನವರಿ 29 ರಂದು ಟಾಟಾ ಸನ್ಸ್‌ನ ಪ್ರಧಾನ ಕಛೇರಿಯಾದ ಬಾಂಬೆ ಹೌಸ್‌ನಲ್ಲಿ ಬೋಯಿಂಗ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.

    ಕೋವಿಡ್‌ ಬಳಿಕ ವಿಮಾನಯಾನ ಕ್ಷೇತ್ರ ನಿರೀಕ್ಷೆಗಿಂತಲೂ ವೇಗವಾಗಿ ಬೆಳೆಯುತ್ತಿದೆ. ಈ ಕಾರಣಕ್ಕೆ ಏರ್‌ ಇಂಡಿಯಾ ಮೊದಲೇ ಆರ್ಡರ್‌ ಬುಕ್ಕಿಂಗ್‌ ಮಾಡಿದೆ. ಮುಂದಿನ ಐದು ವರ್ಷಗಳಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳಲ್ಲಿ ತನ್ನ ಮಾರುಕಟ್ಟೆ ಪಾಲನ್ನು 30% ಗೆ ಹೆಚ್ಚಿಸುವ ಗುರಿಯನ್ನು ಏರ್‌ ಇಂಡಿಯಾ ಹಾಕಿಕೊಂಡಿದೆ. 2024ರ ಅಂತ್ಯದ ವೇಳೆಗೆ ಏರ್ ಇಂಡಿಯಾಗೆ 50 ಹೊಸ ವಿಮಾನಗಳು ಸೇರ್ಪಡೆಯಾಗುವ ಸಾಧ್ಯತೆಯಿದೆ.

    ಇಂಡಿಗೋಗೆ ಸ್ಪರ್ಧೆ ನೀಡಲು 5-6 ಗಂಟೆಯ ಒಳಗಡೆ ದೇಶದ ವಿವಿಧ ಸ್ಥಳಗಳನ್ನು ತಲುಪಲು ಸಣ್ಣ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ ಮುಂದಾಗಿದೆ. ಅಮೆರಿಕ, ಯುರೋಪ್ ದೇಶಗಳಿಗೆ ಸೇವೆ ನೀಡಲು ದೊಡ್ಡ ಗಾತ್ರ ವಿಮಾನಗಳನ್ನು ಖರೀದಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಿಂಬದಿ ಸವಾರರಿಗೂ ಸೀಟ್‌ಬೆಲ್ಟ್ ಕಡ್ಡಾಯ, ತಪ್ಪಿದರೆ ದಂಡ

    ಹಿಂಬದಿ ಸವಾರರಿಗೂ ಸೀಟ್‌ಬೆಲ್ಟ್ ಕಡ್ಡಾಯ, ತಪ್ಪಿದರೆ ದಂಡ

    ನವದೆಹಲಿ: ಕಾರಿನಲ್ಲಿ ಹಿಂದೆ ಕುಳಿತು ಸೀಟ್ ಬೆಲ್ಟ್ ಧರಿಸದೇ ಇರುವವರಿಗೆ ದಂಡ ವಿಧಿಸುವ ಕ್ರಮವನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ಮುಂಬೈನಲ್ಲಿ ನಡೆದ ಕಾರು ಅಪಘಾತದಲ್ಲಿ ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮೃತಪಟ್ಟ ಎರಡು ದಿನಗಳ ನಂತರ ಈ ಕ್ರಮಕ್ಕೆ ಕೇಂದ್ರ ಸಚಿವರು ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಹಾವಳಿ: ನಾಳೆ ಸಾಫ್ಟ್‌ವೇರ್ ಕಂಪನಿಗಳ ಜತೆ ಸಭೆ

    ಸಾಂದರ್ಭಿಕ ಚಿತ್ರ

    ಈಗಾಗಲೇ ಹಿಂದಿನ ಸೀಟಿನಲ್ಲಿರುವವರೂ ಸೀಟ್‌ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ಆದರೆ ಜನರು ಅದನ್ನು ಅನುಸರಿಸುತ್ತಿಲ್ಲ. ಹಾಗಾಗಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಹಿಂಬದಿ ಸೀಟಿನಲ್ಲಿರುವವರು ಕಡ್ಡಾಯವಾಗಿ ಬೆಲ್ಟ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

    ದಂಡ ವಸೂಲಿ ಮಾಡುವುದು ಸರ್ಕಾರದ ಉದ್ದೇಶವಲ್ಲ. ಜಾಗೃತಿ ಮೂಡಿಸುವುದು ನಮ್ಮ ಉದ್ದೇಶ. ಈ ನೀತಿಯ ಹಿಂದೆ 2024ರ ವೇಳೆಗೆ ರಸ್ತೆ ಅಪಘಾತಗಳನ್ನು ಶೇ.50 ರಷ್ಟು ಕಡಿಮೆ ಮಾಡುವ ಗುರಿಯೂ ಇದೆ. ಹಾಗಾಗಿ ನಿಗಾ ವಹಿಸಲು ಹೆಚ್ಚುವರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಕನಿಷ್ಠ ದಂಡ 1 ಸಾವಿರ ರೂಪಾಯಿ ಇರುತ್ತದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಮಳೆ; ನಾಳೆ ಬೆಂಗಳೂರು ಪೂರ್ವ ಭಾಗದ ಶಾಲೆಗಳಿಗೆ ರಜೆ

    ಇದೇ ವೇಳೆ ಕಳೆದ 5 ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ 59 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 80 ಸಾವಿರದಷ್ಟು ಜನ ಗಂಭೀರ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪೊಲೀಸರು ಇಂದು ಬಿಡುಗಡೆ ಮಾಡಿದ ಅಂಕಿ-ಅಂಶಗಳನ್ನು ಬಹಿರಂಗಪಡಿಸಿದ್ದಾರೆ.

    ಅಲ್ಲದೇ `ಭಾರತದಲ್ಲಿ ರಸ್ತೆ ಅಪಘಾತಗಳು – 2020′ ಎಂಬ ಶೀರ್ಷಿಕೆಯ ವರದಿಯ ಪ್ರಕಾರ, ರಸ್ತೆ ಅಪಘಾತದಲ್ಲಿ ಉಂಟಾದ ಶೇ.11ಕ್ಕಿಂತ ಹೆಚ್ಚು ಸಾವುಗಳು ಸೀಟ್ ಬೆಲ್ಟ್ ಬಳಸದ ಕಾರಣದಿಂದ ಸಂಭವಿಸಿದ್ದರೇ, ಹೆಲ್ಮೆಟ್ ಧರಿಸದ ಕಾರಣದಿಂದ ಶೇ.30.1 ರಷ್ಟು ಸಾವುಗಳು ಸಂಭವಿಸಿದೆ. ಶೇ.26 ರಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ಅವರು ವರದಿಯನ್ನು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಏರ್‌ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್‌ ಮುಖ್ಯಸ್ಥ ಎನ್.ಚಂದ್ರಶೇಖರನ್‌ ನೇಮಕ

    ಏರ್‌ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್‌ ಮುಖ್ಯಸ್ಥ ಎನ್.ಚಂದ್ರಶೇಖರನ್‌ ನೇಮಕ

    ನವದೆಹಲಿ: ಏರ್‌ ಇಂಡಿಯಾ (Air India) ಅಧ್ಯಕ್ಷರಾಗಿ ಟಾಟಾ ಸನ್ಸ್‌ ಗ್ರೂಪ್‌ನ (Tata Group) ಮುಖ್ಯಸ್ಥ ನಟರಾಜನ್‌ ಚಂದ್ರಶೇಖರನ್‌ ಅವರನ್ನು ಆಯ್ಕೆ ಮಾಡಲಾಗಿದೆ.

    ಟಾಟಾ ಗ್ರೂಪ್, ಟರ್ಕಿಯ ಇಲ್ಕರ್ ಐಸಿ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಎಂದು ತಿಂಗಳ ಆರಂಭದಲ್ಲಿ ಘೋಷಿಸಿತ್ತು. ಆದರೆ ಆ ನೇಮಕಾತಿಯು ಭಾರತದಲ್ಲಿ ಸಾಕಷ್ಟು ವಿರೋಧವನ್ನು ಎದುರಿಸಿತು. ಬಳಿಕ ಟರ್ಕಿಯ ಇಲ್ಕರ್ ಐಸಿ ಅವರು ಟಾಟಾದ ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕರಾಗಲು ನಿರಾಕರಿಸಿದ್ದರು. ಇದನ್ನೂ ಓದಿ: ಟಾಟಾ ಸಂಸ್ಥೆಗೆ ಏರ್‌ ಇಂಡಿಯಾ ಅಧಿಕೃತ ಹಸ್ತಾಂತರ

    ಚಂದ್ರಶೇಖರನ್ ಅವರು ಟಾಟಾ ಸನ್ಸ್‌ನ ಮುಖ್ಯಸ್ಥರಾಗಿದ್ದಾರೆ. ಹಿಡುವಳಿ ಕಂಪನಿ ಮತ್ತು 100 ಕ್ಕೂ ಹೆಚ್ಚು ಟಾಟಾ ಆಪರೇಟಿಂಗ್ ಕಂಪನಿಗಳ ಪ್ರವರ್ತಕರಾಗಿದ್ದಾರೆ. ಅವರು ಅಕ್ಟೋಬರ್ 2016 ರಲ್ಲಿ ಟಾಟಾ ಸನ್ಸ್ ಮಂಡಳಿಗೆ ಸೇರಿದರು. ಜನವರಿ 2017 ರಲ್ಲಿ ಮುಖ್ಯಸ್ಥರಾಗಿ ನೇಮಕಗೊಂಡರು.

    ಚಂದ್ರಶೇಖರನ್‌ ಅವರು ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸೇರಿದಂತೆ ಹಲವಾರು ಗ್ರೂಪ್ ಆಪರೇಟಿಂಗ್ ಕಂಪನಿಗಳ ಮಂಡಳಿಗಳಿಗೆ ಅಧ್ಯಕ್ಷರಾಗಿದ್ದಾರೆ. ಅವರು 2009-17 ರಿಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಇದನ್ನೂ ಓದಿ: ಮತ್ತೆ ʼಮಹಾರಾಜʼನಾದ ಟಾಟಾ – Welcome Back ಏರ್‌ ಇಂಡಿಯಾ ಎಂದ ರತನ್‌ ಟಾಟಾ

    ಚಂದ್ರಶೇಖರನ್ ಅವರು ಟಾಟಾ ಗ್ರೂಪ್‌ನ ಮುಖ್ಯಸ್ಥರಾದ ಮೊದಲ ಪಾರ್ಸಿಯೇತರ ಮತ್ತು ವೃತ್ತಿಪರ ಕಾರ್ಯನಿರ್ವಾಹಕರಾಗಿದ್ದರು.

  • ಏರ್ ಇಂಡಿಯಾ ಸಿಇಒ ಹುದ್ದೆ ನಿರಾಕರಿಸಿದ ಟರ್ಕಿಶ್ ಏರ್‌ಲೈನ್ಸ್‌ ಮಾಜಿ ಅಧ್ಯಕ್ಷ

    ನವದೆಹಲಿ: ಏರ್ ಇಂಡಿಯಾ ತನ್ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ) ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಲು ಟರ್ಕಿಶ್ ಏರ್‍ಲೈನ್ಸ್‍ನ ಮಾಜಿ ಅಧ್ಯಕ್ಷ ಇಲ್ಕರ್ ಐಸಿ ಅವರಿಗೆ ಅವಕಾಶ ನೀಡಿತ್ತು. ಆದರೆ ಟಾಟಾ ಗ್ರೂಪ್‍ನ ಪ್ರಸ್ತಾಪವನ್ನು ಐಸಿ ನಿರಾಕರಿಸಿದ್ದಾರೆ.

    ಫೆಬ್ರವರಿ 14ರಂದು ಟಾಟಾ ಸನ್ಸ್ ಇಲ್ಕರ್ ಐಸಿ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸುವುದಾಗಿ ಘೋಷಿಸಿತ್ತು. ಆದರೆ ಈ ಅವಕಾಶವನ್ನು ಐಸಿ ನಿರಾಕರಿಸಿದ್ದಾರೆ ಎಂದು ಏರ್ ಇಂಡಿಯಾ ಮಂಗಳವಾರ ತಿಳಿಸಿದೆ. ಇದನ್ನೂ ಓದಿ: Microsoft ಸಿಇಒ ಸತ್ಯ ನಾಡೆಲ್ಲಾ ಪುತ್ರ ನಿಧನ!

    ರಾಷ್ಟ್ರೀಯ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕನಾಗಿ ಇಲ್ಕರ್ ಐಸಿ ಅವರನ್ನು ನೇಮಕ ಮಾಡಲು ಸರ್ಕಾರ ಅನುಮತಿ ನೀಡಬಾರದು ಎಂದು ಆರ್‍ಎಸ್‍ಎಸ್ ಅಂಗಸಂಸ್ಥೆ ಸ್ವದೇಶಿ ಜಾಗರಣಾ ವೇದಿಕೆ ಕಳೆದ ಶುಕ್ರವಾರ ಹೇಳಿತ್ತು. ಇದನ್ನೂ ಓದಿ: ಖಾರ್ಕಿವ್‍ನ ಆಡಳಿತ ಕಚೇರಿ ಮೇಲೆ ಬಾಂಬ್ ದಾಳಿ- ಕಟ್ಟಡ ಸಂಪೂರ್ಣ ಧ್ವಂಸ

    ಇದೀಗ ಟಾಟಾ ಸನ್ಸ್‍ನಿಂದ ನೇಮಕಗೊಂಡ ಕೇವಲ 2 ವಾರಗಳ ಬಳಿಕ ಐಸಿ ಏರ್ ಇಂಡಿಯಾದ ಸಿಇಒ ಹುದ್ದೆಯನ್ನು ನಿರಾಕರಿಸಿದ್ದಾರೆ.