Tag: tax

  • ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

    ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ತೆರಿಗೆ ವಂಚನೆ (Tax Evasion), ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ (Commercial Tax Department) ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಸುಲಭವಾಗಿ ಸಿಕ್ಕ 50 ಲಕ್ಷಕ್ಕೆ ಚೈತ್ರಾ ಫಿದಾ – 3.5 ಕೋಟಿಗೆ ಶುರುವಾದ ಪ್ಲಾನ್ 5 ಕೋಟಿಗೆ ಏರಿದ್ದೇ ರೋಚಕ

    ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ 19.2% ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಇಷ್ಟಕ್ಕೆ ಸಮಾಧಾನ ಪಟ್ಟುಕೊಳ್ಳದೇ ತೆರಿಗೆ ವಂಚಿಕೆ ಪ್ರಕರಣಗಳನ್ನ ಹೆಚ್ಚೆಚ್ಚು ಪತ್ತೆ ಹಚ್ಚಿ ತೆರಿಗೆ ಸಂಗ್ರಹ ಗುರಿಯನ್ನ ದಾಟಿ ಸಾಧನೆ ಮಾಡುವ ಅವಕಾಶಗಳಿವೆ. ಇದನ್ನು ಸಾಧಿಸಿ ತೋರಿಸಿ ಎಂದು ಸಲಹೆ ನೀಡಿದರು.

    ಇಲಾಖೆಯು Enforcement ಅನ್ನು ಇನ್ನಷ್ಟು ತೀವ್ರವಾಗಿ ನಡೆಸುವ ಮೂಲಕ ತೆರಿಗೆ ವಂಚನೆ ತಡೆಗಟ್ಟುವ ಕಡೆಗೆ ಹೆಚ್ಚು ಆಸಕ್ತಿ ಕೊಡಬೇಕು. ಬೆಳವಣಿಗೆ ದರವು 19.2% ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚು. ದೇಶದ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ದರ 15% ರಷ್ಟು ಮಾತ್ರ ಇದೆ. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು 9.4% ರಷ್ಟಿದೆ. ಕಳೆದ ಬಾರಿಗಿಂತ ಈ ಬಾರಿ ರಾಜ್ಯದ ಪಾಲು ಹೆಚ್ಚಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು.

    24% ಬೆಳವಣಿಗೆ ಗುರಿಯನ್ನು ನೀಡಲಾಗಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಈ ಗುರಿ ದಾಟಿ ಸಾಧಿಸಬೇಕು. ತೆರಿಗೆ ವಂಚನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.ಗುರಿಗಿಂತ ಹೆಚ್ಚಿನ ಸಾಧನೆಯಾಗಬೇಕು. ಜಾಗೃತ ದಳದವರೂ ಇದಕ್ಕೆ ಸಹಕರಿಸಬೇಕು. ಎರಡು ತಿಂಗಳ ನಂತರ ಮತ್ತೆ ಪ್ರಗತಿ ಪರಿಶೀಲಿಸಲಾಗುವುದು. ಆ ವೇಳೆಗೆ ಇನ್ನಷ್ಟು ಪ್ರಗತಿಯ ವರದಿ ನೀಡಿ. ಮುಂದಿನ ಸಭೆ ವೇಳೆಗೆ ಒಟ್ಟಾರೆ ಪರಿಸ್ಥಿತಿ ಈಗಿರುವುದಕ್ಕಿಂತ ಹೆಚ್ವು ಆಶಾದಾಯವಾಗಿರುವಂತೆ ಕ್ರಮ ವಹಿಸಿ ಎಂದು ಹೇಳಿದರು. ಇದನ್ನೂ ಓದಿ: ಐಸಿಸ್ ಉಗ್ರನೊಂದಿಗೆ ನಿರಂತರ ಸಂಪರ್ಕ – ಎನ್‍ಐಎಯಿಂದ ಯಾದಗಿರಿ ವ್ಯಕ್ತಿ ವಿಚಾರಣೆ

    ತೆರಿಗೆ ಕಳ್ಳತನ ತಡೆಯುವುದಕ್ಕಾಗಿ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ನಿಮ್ಮ ಪ್ರಯತ್ನದಿಂದ ರಾಜ್ಯಕ್ಕೆ ಹೆಚ್ಚು ತೆರಿಗೆ ಬರಲು ಸಾಧ್ಯ. ಅನೇಕ ಭಾಗಗಳಲ್ಲಿ ಅನೇಕ ಉತ್ಪನ್ನಗಳಲ್ಲಿ ತೆರಿಗೆ ವಂಚನೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಿ ತೆರಿಗೆ ಸಂಗ್ರಹಿಸಬೇಕು. ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಹೆಚ್ಚು ಅನುಕೂಲವಾಗುತ್ತದೆ. ಸಾಮೂಹಿಕ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು ಎಂದು ತಿಳಿಸಿದರು.

    ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ.ಪಿ.ಸಿ ಜಾಫರ್‌ ಹಾಗೂ ಡಾ.ಎಂ.ಟಿ ರೇಜು, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಶಿಖಾ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಮತ್ತು ನಸೀರ್‌ ಅಹ್ಮದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡೀಸೆಲ್‌ ವಾಹನಗಳ ಮೇಲೆ 10% ಹೆಚ್ಚುವರಿ ತೆರಿಗೆ ಇಲ್ಲ: ಗಡ್ಕರಿ ಸ್ಪಷ್ಟನೆ

    ಡೀಸೆಲ್‌ ವಾಹನಗಳ ಮೇಲೆ 10% ಹೆಚ್ಚುವರಿ ತೆರಿಗೆ ಇಲ್ಲ: ಗಡ್ಕರಿ ಸ್ಪಷ್ಟನೆ

    ನವದೆಹಲಿ: ಡೀಸೆಲ್‌ ವಾಹನಗಳ (Diesel Vehicles) ಮೇಲೆ ಹೆಚ್ಚುವರಿ 10% ತೆರಿಗೆ ವಿಧಿಸಲಾಗುವುದು ಎಂದು ಹರಿದಾಡುತ್ತಿದ್ದ ಸುದ್ದಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ (Nitin Gadkari) ಸ್ಪಷ್ಟನೆ ನೀಡಿದ್ದಾರೆ. ಅಂತಹ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ.

    ನವದೆಹಲಿಯಲ್ಲಿ ನಡೆದ 63 ನೇ ವಾರ್ಷಿಕ SIAM ಸಮಾವೇಶದಲ್ಲಿ ಮಾತನಾಡಿದ್ದ ಗಡ್ಕರಿ, ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಡೀಸೆಲ್‌ಗೆ ವಿದಾಯ ಹೇಳಿ. ದಯವಿಟ್ಟು ಡೀಸೆಲ್‌ ವಾಹನಗಳನ್ನು ತಯಾರಿಸುವುದನ್ನು ನಿಲ್ಲಿಸಿ. ಇಲ್ಲದಿದ್ದರೆ ಅಂತಹ ವಾಹನಗಳ ಮಾರಾಟ ಕಷ್ಟವಾಗುವಷ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತೇವೆ ಎಂದು ಸಚಿವರು ಎಚ್ಚರಿಸಿದ್ದಾರೆಂದು ವರದಿಯಾಗಿತ್ತು. ಇದನ್ನೂ ಓದಿ: G20 ಶೃಂಗಸಭೆಗೆ ನಿಗದಿಗಿಂತ 300 ಪಟ್ಟು ಅಧಿಕ ಹಣ ಖರ್ಚು- ಆರೋಪ ತಳ್ಳಿ ಹಾಕಿದ ಕೇಂದ್ರ ಸರ್ಕಾರ

    ಡೀಸೆಲ್‌ ವಾಹನಗಳ ಮೇಲೆ ಹೆಚ್ಚುವರಿ 10% ತೆರಿಗೆ ವಿಧಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಪತ್ರ ಬರೆಯಲಿದ್ದೇವೆ. ಬಹುತೇಕ ರಾಷ್ಟ್ರಗಳಲ್ಲಿ ಡೀಸೆಲ್‌ ವಾಹನಗಳ ಮೇಲೆ ಇಂಥ ತೆರಿಗೆ ವಿಧಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ ಎನ್ನಲಾಗಿತ್ತು.

    ಈ ರೀತಿಯ ಸುದ್ದಿ ಹರಿದಾಡುತ್ತಿದ್ದಂತೆ ಸಚಿವ ಗಡ್ಕರಿ ಟ್ವೀಟ್‌ ಮಾಡಿದ್ದಾರೆ. ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ 10% ತೆರಿಗೆ ವಿಧಿಸುವ ಮಾಧ್ಯಮ ವರದಿಗಳ ಬಗ್ಗೆ ಸ್ಪಷ್ಟಪಡಿಸುವ ತುರ್ತು ಅಗತ್ಯವಿದೆ. ಅಂತಹ ಯಾವುದೇ ಪ್ರಸ್ತಾಪವು ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಪರಿಸರಕ್ಕೆ ಡೀಸೆಲ್‌ ಮಾರಕ. ಹೀಗಾಗಿ ಪರಿಸರ ಸ್ನೇಹಿ ಇಂಧನಗಳತ್ತ ಕೈಗಾರಿಕೆಗಳು ಮುಖ ಮಾಡಬೇಕಾದ ಅಗತ್ಯವಿದೆ. ಪರ್ಯಾಯ ಇಂಧನದ ಬೇಡಿಕೆ ಪೂರೈಸಲು ಆಮದು ಮಾಡುವ ಅಗತ್ಯವಿದೆ ಎಂದು ಗಡ್ಕರಿ ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ ಸಿಬ್ಬಂದಿಗೆ ನೂತನ ಡ್ರೆಸ್ ಕೋಡ್

    ಸದ್ಯ ವಾಹನಗಳ ಮೇಲೆ 28% ಜಿಎಸ್‌ಟಿ ಇದೆ. ಜತೆಗೆ 1% ನಿಂದ 22% ರಷ್ಟು ಹೆಚ್ಚುವರಿ ಸೆಸ್‌ ವಿಧಿಸಲಾಗುತ್ತದೆ. ಇದು ವಾಹನಗಳ ಮಾದರಿಯನ್ನು ಅವಲಂಬಿಸಿರುತ್ತದೆ. ಎಸ್‌ಯುವಿಗಳ ಮೇಲೆ ಅತ್ಯಧಿಕ 28% ತೆರಿಗೆ ಮತ್ತು ಪರಿಹಾರದ ಸೆಸ್‌ ಆಗಿ 22% ಇದೆ ಎಂದು ವರದಿಯಾಗಿದೆ.

    ಮಾರುತಿ ಸುಜುಕಿ ಮತ್ತು ಹೋಂಡಾದಂತಹ ಕಾರು ತಯಾರಕ ಕಂಪನಿಗಳು ಡೀಸೆಲ್ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌

    ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌

    ಬೆಂಗಳೂರು: ಖಾಸಗಿ ಬಸ್‌ಗಳನ್ನ (Private Bus) ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ನೀಡಬೇಕು, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನ ಆಗ್ರಹಿಸಿ ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದ ಖಾಸಗಿ ಸಾರಿಗೆ ಒಕ್ಕೂಟ ಮಧ್ಯಾಹ್ನದ ವೇಳೆಗೆಲ್ಲಾ ಬಂದ್ ವಾಪಸ್ ಪಡೆದಿದೆ.

    ಇಂದಿನ ಪ್ರತಿಭಟನೆಯಲ್ಲಿ ಪೊಲೀಸರು ಒಟ್ಟು 13 ಪ್ರಕರಣಗಳನ್ನ ದಾಖಲಿಸಿದ್ದಾರೆ. 13 ಕೇಸ್‌ ದಾಖಲಿಸಿ ಕಾನೂನು ಉಲ್ಲಂಘನೆ ಮಾಡಿದ 12 ಮಂದಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ – ಬೆಂಗಳೂರು ಬಂದ್ ವಾಪಸ್

    ಕೇಂದ್ರ ವಿಭಾಗದಲ್ಲಿ 1 ಕೇಸ್, ಆಗ್ನೇಯ ವಿಭಾಗದಲ್ಲಿ 1 ಕೇಸ್, ಉತ್ತರ ವಿಭಾಗದಲ್ಲಿ 2 ಕೇಸ್, ಈಶಾನ್ಯ ವಿಭಾಗದಲ್ಲಿ 2 ಕೇಸ್, ಹಾಗೂ ಪಶ್ಚಿಮ ವಿಭಾಗದಲ್ಲಿ 7 ಪ್ರಕರಣಗಳು ದಾಖಲಾಗಿವೆ. ಒಟ್ಟು 13 ಕೇಸ್‌ನಲ್ಲಿ 12 ಜನರನ್ನ ಅರೆಸ್ಟ್ ಮಾಡಿರುವ ನಗರ ಪೊಲೀಸರು (Bengaluru City Police) ವಿಚಾರಣೆಗೊಳಪಡಿಸಿದ್ದಾರೆ. ಇದನ್ನ ಹೊರತುಪಡಿಸಿದ್ರೆ ಬಹುತೇಕ ಬಂದ್ ಶಾಂತಿಯುತವಾಗಿ ನಡೆದಿದ್ದು, ಖಾಸಗಿ ಸಾರಿಗೆಗಳು ತಮ್ಮ ಬೇಡಿಕೆಯನ್ನ ಸರ್ಕಾರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಿದ್ದಾರೆ.

    ಸೋಮವಾರ ಮಧ್ಯಾಹ್ನ ಸಚಿವ ರಾಮಲಿಂಗಾರೆಡ್ಡಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿರುವುದಾಗಿ ಖಾಸಗಿ ಸಾರಿಗೆ ಒಕ್ಕೂಟ ತಿಳಿಸಿದೆ. ಇದನ್ನೂ ಓದಿ: ಫುಡ್‌ ಡೆಲಿವರಿ ಬಾಯ್ಸ್‌ ಸೇರಿದಂತೆ ಎಲ್ಲಾ ಗಿಗ್‌ ಕಾರ್ಮಿಕರಿಗೆ 4 ಲಕ್ಷ ವಿಮೆ ಘೋಷಣೆ

    ಪ್ರಮುಖ ಬೇಡಿಕೆ ಏನಿತ್ತು?
    – ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
    – 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
    – ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
    – 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
    – ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
    – ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
    – ಚಾಲಕರಿಗೆ ವಸತಿ ಯೋಜನೆ ನೀಡಬೇಕು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ – ಬೆಂಗಳೂರು ಬಂದ್ ವಾಪಸ್

    ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ – ಬೆಂಗಳೂರು ಬಂದ್ ವಾಪಸ್

    ಬೆಂಗಳೂರು: ಖಾಸಗಿ ಬಸ್‌ಗಳನ್ನ (Private Bus) ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ನೀಡಬೇಕು, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನ ಆಗ್ರಹಿಸಿ ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದ ಖಾಸಗಿ ಸಾರಿಗೆ ಒಕ್ಕೂಟ ಮಧ್ಯಾಹ್ನದ ವೇಳೆಗೆಲ್ಲಾ ಬಂದ್ ವಾಪಸ್ ಪಡೆದಿದೆ.

    ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಬೇಡಿಕೆಗಳನ್ನ ಈಡೇರಿಸುವ ಭರವಸೆ ನೀಡಿದ್ದಾರೆ. ಇದರಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿರುವುದಾಗಿ ಖಾಸಗಿ ಸಾರಿಗೆ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ. ಸೋಮವಾರ ಮಧ್ಯರಾತ್ರಿ 12 ಗಂಟೆವರೆಗೂ ಇದ್ದ ಬಂದ್ ಮಧ್ಯಾಹ್ನ 3 ಗಂಟೆ ವೇಳೆಗೆ ಕೈಬಿಡಲಾಗಿದೆ. ಇದರಿಂದ ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ಎಂದಿನಂತೆ ರಸ್ತೆಗಿಳಿದಿದ್ದು, ಬೆಂಗಳೂರಿನ ಜನ ನಿಟ್ಟುಸಿರು ಬಿಡುವಂತಾಗಿದೆ. ಇದನ್ನೂ ಓದಿ: ನಾಳೆಯಿಂದ ಬೆಂಗಳೂರಿನ ಗಾರ್ಡನ್‌ ಟರ್ಮಿನಲ್‌ನಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಟೇಕಾಫ್‌, ಲ್ಯಾಂಡಿಂಗ್‌

    ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನಾ ನಿರತರ ಮನವಿ ಸ್ವೀಕರಿಸಿ ಮಾತನಾಡಿರುವ ಸಚಿವ ರಾಮಲಿಂಗಾರೆಡ್ಡಿ, 37 ಸಂಘಟನೆಯವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೀರಿ. ನನ್ನನ್ನೂ ನಿಮ್ಮ ಜೊತೆ ಸೇರಿಸಿಕೊಳ್ಳಿ. ನಿಮ್ಮ ಬೇಡಿಕೆಗಳಲ್ಲಿ ಶಕ್ತಿ ಯೋಜನೆ ಹಾಗೂ ತೆರಿಗೆ ಎರಡು ಬೇಡಿಕೆ ನಮ್ಮ ಸರ್ಕಾರದಿಂದ ಆಗಿರುವ ಸಮಸ್ಯೆ. ಉಳಿದೆಲ್ಲಾ ಬೇಡಿಕೆಗಳು ಎಲ್ಲಾ ಹಿಂದಿನ ಸರ್ಕಾರದಲ್ಲಿ ಆಗಿರುವುದು. ಆದಾಗ್ಯೂ ಈ ಬೇಡಿಕೆಗಳನ್ನ ಈಡೇರಿಸುವುದಾಗಿ ಹೇಳಿದ್ದೇನೆ, ಈಡೇರಿಸುತ್ತೆನೆ ಎಂದು ಭರವಸೆ ನೀಡಿದ್ದಾರೆ.

    ಚಾಲಕರ ನಿಗಮ ಮಾಡಬೇಕು ಅಂತಾ ಬೇಡಿಕೆ ಇದೆ, ಖಂಡಿತವಾಗಿಯೂ ಮಾಡುತ್ತೇವೆ. ಇಂದಿರಾ ಕ್ಯಾಂಟಿನ್ ಓಪನ್ ಮಾಡ್ತೇವೆ. ಅಗ್ರಿಗೇಟರ್ ಆ್ಯಪ್ ಮಾಡಬೇಕೆಂಬ ಬೇಡಿಕೆಯಿದೆ. ಅದನ್ನೂ ಈಡೇರಿಸುತ್ತೇವೆ. ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡುವ ಬೇಡಿಕೆ ನಿಮ್ಮ ನಿಗಮ ಸ್ಥಾಪನೆಯಾದ್ರೆ ಕೊಡಬಹುದು. ಟ್ಯಾಕ್ಸಿ ಮಾಲೀಕರ ಸಂಘದ ಬೇಡಿಕೆಗಳನ್ನೂ ಮುಖ್ಯಮಂತ್ರಿಗಳ ಮುಂದಿಟ್ಟು ಪರಿಹಾರ ಒದಗಿಸುವ ಕೆಲಸ ಮಾಡ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ಮಧ್ಯೆ ಬಂದ ರ‍್ಯಾಪಿಡೋ ಬೈಕ್ ಸವಾರನಿಗೆ ಬಿತ್ತು ಗೂಸಾ

    ಸದ್ಯ ಓಲಾ, ಊಬರ್, ಬೈಕ್ ಟ್ಯಾಕ್ಸಿ ಬೇಡಿಕೆ ಕೋರ್ಟ್ನಲ್ಲಿದೆ. ನಾವು ಸೀನಿಯರ್ ಅಡ್ವೋಕೇಟ್ ನೇಮಿಸಿ ತೆರವು ಮಾಡುವ ಕೆಲಸ ಮಾಡ್ತೇವೆ. ಚಾಲಕರಿಗೆ ವಸತಿ ಯೋಜನೆ ಬೇಡಿಕೆ ಇದೆ ಜಮೀರ್ ಅಹಮದ್ ಅವರ ಜೊತೆ ಮಾತಾಡ್ತೆವೆ, ಚಾಲಕರ ಮಕ್ಕಳ ವಿಧ್ಯಾಭ್ಯಾಸಕ್ಕೆ 17 ಕೋಟಿ ರೂ. ಅನುದಾನ ಇಟ್ಟಿದ್ದೆವೆ, ಖಾಸಗಿ ವಾಹನಗಳನ್ನ ಕಿಮೀ ರೀತಿಯಲ್ಲಿ ತೆಗೆದುಕೊಳ್ಳೊ ಬೇಡಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಪ್ರಮುಖ ಬೇಡಿಕೆ ಏನಿತ್ತು?
    – ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
    – 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
    – ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
    – 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
    – ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
    – ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
    – ಚಾಲಕರಿಗೆ ವಸತಿ ಯೋಜನೆ ನೀಡಬೇಕು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bengaluru Bandh – ಇಂದು ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಮರ

    Bengaluru Bandh – ಇಂದು ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಮರ

    – ವಿವಿಧ ಬೇಡಿಕೆಗಳ ಈಡೇರಿಕೆಗೆ ಖಾಸಗಿ ಪಟ್ಟು

    ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ (Private Transport Association) ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್‌ ಬಿಸಿ ಶುರುವಾಗಿದೆ.

    ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯುತ್ತಿಲ್ಲ. ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಒಕ್ಕೂಟ ಆಯೋಜಿಸಿದೆ.

    ಬಂದ್ ಯಶಸ್ಸಿಗಾಗಿ ಖಾಸಗಿ ಸಾರಿಗೆ ಒಕ್ಕೂಟ ಪಣತೊಟ್ಟಿದೆ. ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಒಂದರಲ್ಲೇ 250ಕ್ಕೂ ಹೆಚ್ಚು ಬಸ್ ಸ್ತಬ್ದವಾಗಲಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ನೆರೆಯ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಇದರ ಪರಿಣಾಮ ಬೆಂಗಳೂರು ಜನಜೀವನದ ಮೇಲೆ ಸ್ವಲ್ಪ ಮಟ್ಟಿಗೆ ಬೀರುವ ಸಂಭವ ಇದೆ.  ಇದನ್ನೂ ಓದಿ: ಸನಾತನ ಧರ್ಮದವರನ್ನು ಕಾಗೆಗಳಿಗೆ ಹೋಲಿಸಿದ ಪ್ರಕಾಶ್ ರಾಜ್

    ಖಾಸಗಿ ಸಮರ ಎದುರಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು, ಸರ್ವಾಜನಿಕರಿಗೆ ಯಾವುದೇ ಸಮಸ್ಯೆ ಆಗದೇ ಇರಲು ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಲು ಇಲಾಖೆ ಪ್ಲಾನ್‌ ಮಾಡಿದೆ. ಬಂದ್‌ನಿಂದ ಜನರಿಗೆ ತೊಂದರೆ ಆಗುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ.

    ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್ ಬಗ್ಗೆ ಆಟೋ ಚಾಲಕರು ಬೆಂಬಲ ನೀಡಿದ್ದಾರೆ. ಸಾರಿಗೆ ಒಕ್ಕೂಟ ಕರೆದಿರುವ ಬಂದ್‌ಗೆ ನಾವು ಬೆಂಬಲ ನೀಡುತ್ತೇವೆ. ಶಕ್ತಿಯೋಜನೆ (Shakti Scheme) ಜಾರಿಯಾದ  ದಿನದಿಂದ ನಮಗೆ ಸಮಸ್ಯೆ ಆಗುತ್ತಿದೆ. ಅಷ್ಟೇ ಅಲ್ಲದೇ ರ‍್ಯಾಪಿಡೋ ಬಂದ್ ಮಾಡುವ ನಿರ್ಧಾರ ಸರ್ಕಾರ ಮಾಡಬೇಕು. ಯಾವುದೇ ಟ್ಯಾಕ್ಸ್ ಕೊಡದೇ ಅವರು ಬಾಡಿಗೆ ಹೋಗುತ್ತಿದ್ದಾರೆ. ಹಾಗಾಗಿ ರ‍್ಯಾಪಿಡೋ ವಾಹನಗಳನ್ನ ಬಂದ್ ಮಾಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.

    ಪ್ರಮುಖ ಬೇಡಿಕೆಗಳೇನು?
    – ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
    – 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
    – ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
    – 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
    – ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
    – ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
    – ಚಾಲಕರಿಗೆ ವಸತಿ ಯೋಜನೆ ನೀಡಬೇಕು

    ಏನೆಲ್ಲಾ ಇರಲ್ಲ?
    ಆಟೋ, ಖಾಸಗಿ ಟ್ಯಾಕ್ಸಿ, ಏರ್‌ಪೋರ್ಟ್ ಟ್ಯಾಕ್ಸಿ, ಶಾಲೆಗಳ ಖಾಸಗಿ ವಾಹನ, ಖಾಸಗಿ ಬಸ್, ಗೂಡ್ಸ್ ವಾಹನ

    ಏನೆಲ್ಲಾ ಇರುತ್ತೆ?
    ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಸರ್ಕಾರಿ ಟ್ಯಾಕ್ಸಿ (ಕೆಎಸ್‌ಟಿಡಿಸಿ), ರೈಲು, ಖಾಸಗಿ ಶಾಲೆ, ಚಿತ್ರರಂಗದ ಚಟುವಟಿಕೆ


    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 11% ಏರಿಕೆ, ಆಗಸ್ಟ್‌ನಲ್ಲಿ 1.59 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ – ಕರ್ನಾಟಕದ ಪಾಲು ಎಷ್ಟು?

    11% ಏರಿಕೆ, ಆಗಸ್ಟ್‌ನಲ್ಲಿ 1.59 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ – ಕರ್ನಾಟಕದ ಪಾಲು ಎಷ್ಟು?

    ನವದೆಹಲಿ: ಆಗಸ್ಟ್‌ ತಿಂಗಳಿನಲ್ಲಿ 1,59,069 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಸತತ 17 ತಿಂಗಳಿನಿಂದ ಜಿಎಸ್‌ಟಿ ಸಂಗ್ರಹ 1.50 ಲಕ್ಷ ಕೋಟಿ ರೂ. ದಾಟುತ್ತಿದೆ.

    ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಿಎಸ್‌ಟಿ ಸಂಗ್ರಹ 11% ರಷ್ಟು ಏರಿಕೆಯಾಗಿದೆ. ಕಳೆದ ಆಗಸ್ಟ್‌ ತಿಂಗಳಿನಲ್ಲಿ1,43,612 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ಈ ವರ್ಷದ ಜುಲೈನಲ್ಲಿ 1,65,105 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು.

    ಒಟ್ಟು ಜಿಎಸ್‌ಟಿ ಸಂಗ್ರಹದಲ್ಲಿ ಕೇಂದ್ರ ಜಿಎಸ್‌ಟಿ (CGST) ಪಾಲು 28,328 ಕೋಟಿ ರೂ. ಆಗಿದ್ದರೆ ರಾಜ್ಯ ಜಿಎಸ್‌ಟಿ (SGST) 35,794 ಕೋಟಿ ರೂ. ಆಗಿದೆ. ಇಂಟಿಗ್ರೇಟೆಡ್ ಜಿಎಸ್‌ಟಿ (ಭಾರತಕ್ಕೆ ಆಮದು ಮಾಡಿಕೊಳ್ಳುವ ಮತ್ತು ಭಾರತದಿಂದ ರಫ್ತು ಮಾಡುವ ಸಂದರ್ಭಗಳಲ್ಲಿ ಸರಕು ಮೇಲೆ ಹಾಕುವ ತೆರಿಗೆ) 83,251 ಕೋಟಿ ರೂ.ಗಳಾಗಿವೆ. ಇದರಲ್ಲಿ 11,695 ಕೋಟಿ ರೂ.(ವಸ್ತುಗಳನ್ನು ಆಮದು ಮಾಡಿಕೊಂಡಿದ್ದಕ್ಕೆ 1,016 ಕೋಟಿ ರೂ. ಸಂಗ್ರಹ ಸೇರಿ) ಸೆಸ್‌ ಕೂಡ ಸೇರಿದೆ.  ಇದನ್ನೂ ಓದಿ: ಆದಿತ್ಯ ಎಲ್ 1 ಉಡಾವಣೆಗೂ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ಮುಖ್ಯಸ್ಥ

    ಇಂಟಿಗ್ರೇಟೆಡ್ ಜಿಎಸ್‌ಟಿಯಿಂದ ಕೇಂದ್ರ ಜಿಎಸ್‌ಟಿಗೆ 37,581 ಕೋಟಿ ರೂ. ಮತ್ತು ರಾಜ್ಯ ಜಿಎಸ್‌ಟಿಗೆ 31,408 ಕೋಟಿ ರೂ. ವರ್ಗಾಯಿಸಲಾಗಿದೆ. ಈ ಹಂಚಿಕೆಯ ಬಳಿಕ ಆಗಸ್ಟ್‌ ತಿಂಗಳಿನಲ್ಲಿ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯ ಕ್ರಮವಾಗಿ 65,909 ಕೋಟಿ ರೂ. ಮತ್ತು 67,202 ಕೋಟಿ ರೂ.ಗಳಾಗಿವೆ.

    ಕರ್ನಾಟಕದಲ್ಲಿ(Karnataka) ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 16% ರಷ್ಟು ಏರಿಕೆಯಾಗಿದ್ದು, 11,116 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದ್ದು ಎರಡನೇ ಸ್ಥಾನ ಪಡೆದಿದೆ. ಕಳೆದ ಆಗಸ್ಟ್‌ನಲ್ಲಿ 9,583 ಕೋಟಿ ರೂ. ಸಂಗ್ರಹವಾಗಿತ್ತು.

    ಮಹಾರಾಷ್ಟ್ರದಲ್ಲಿ 23,282 ಕೋಟಿ ರೂ. ಸಂಗ್ರಹವಾಗಿದ್ದು ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಗುಜರಾತ್‌ 9,765 ಕೋಟಿ ರೂ., ತಮಿಳುನಾಡು 9,475 ಕೋಟಿ ರೂ., ಉತ್ತರ ಪ್ರದೇಶದಲ್ಲಿ 7,468 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 1.38 ಕೋಟಿ ತೆರಿಗೆ ಕಟ್ಟುವಂತೆ ಗೋಕರ್ಣದ ದೇಗುಲಕ್ಕೆ ನೋಟಿಸ್

    1.38 ಕೋಟಿ ತೆರಿಗೆ ಕಟ್ಟುವಂತೆ ಗೋಕರ್ಣದ ದೇಗುಲಕ್ಕೆ ನೋಟಿಸ್

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ (Gokarna) ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನದ ಹಣಕಾಸಿನ ವ್ಯವಹಾರಕ್ಕೆ ಸಂಬಂಧಪಟ್ಟಂತೆ 1.38 ಕೋಟಿ ತೆರಿಗೆ ಕಟ್ಟುವಂತೆ ಆದಾಯ ತೆರಿಗೆ (Income Tax) ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.

    2015-16ನೇ ಸಾಲಿನಲ್ಲಿ ರಾಮಚಂದ್ರಾಪುರ ಮಠದಿಂದ (Ramachandrapur Mutt) ದೇವಸ್ಥಾನದ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಹಣಕಾಸಿನ ವ್ಯವಹಾರದಲ್ಲಿ ವ್ಯತ್ಯಯ ಕಂಡು ಬಂದ ಹಿನ್ನೆಲೆ ಆಡಳಿತ ಮಂಡಳಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಈ ಕುರಿತು ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ (B N Sri Krishna) ಅವರ ನೇತೃತ್ವದಲ್ಲಿ ಇರುವ ದೇವಸ್ಥಾನ ಆಡಳಿತ ಮಂಡಳಿಯು ತುರ್ತಾಗಿ ಆನ್ ಲೈನ್ ಮೂಲಕ ದೇವಸ್ಥಾನ ಉಸ್ತುವಾರಿ ಸಮಿತಿ ಸಭೆ ನಡೆಸಿದೆ. ಈ ಸಭೆಯಲ್ಲಿ ತಕ್ಷಣದಲ್ಲಿ ದಂಡ ಪಾವತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಿದರು.

    ಈ ಕುರಿತು ಮಾತನಾಡಿದ ಕಮಿಟಿ ಸದಸ್ಯರೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಹಿಂದೆ ಹಲವು ದೋಷಗಳು ಆಗಿದ್ದವು. ಇವುಗಳನ್ನು ಸರಿಪಡಿಸಿ ದೇವಸ್ಥಾನ ಕಾರ್ಯಗಳು ಸುಗಮವಾಗಿ ನಡೆದುಕೊಂಡು ಹೋಗಲು ಬೇಕಾದ ಎಲ್ಲಾ ಕಾರ್ಯವನ್ನು ಮಾಡಲಾಗುತ್ತದೆ. ಜೊತೆಗೆ ಆಡಳಿತದ ಲೆಕ್ಕಪತ್ರ ನಿರ್ವಹಣೆಗೆ ಲೆಕ್ಕಾಧಿಕಾರಿಯನ್ನು ನೇಮಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೆರಿಗೆ ಕಾನೂನುಗಳು ಸರಳವಾಗ್ಬೇಕು; ಹೆಚ್ಚು ತೆರಿಗೆ ಸಂಗ್ರಹವಾಗ್ತಿದ್ರೆ, ದೇಶದ ಅಭಿವೃದ್ಧಿಯ ಸಂಕೇತ: ಬೊಮ್ಮಾಯಿ

    ತೆರಿಗೆ ಕಾನೂನುಗಳು ಸರಳವಾಗ್ಬೇಕು; ಹೆಚ್ಚು ತೆರಿಗೆ ಸಂಗ್ರಹವಾಗ್ತಿದ್ರೆ, ದೇಶದ ಅಭಿವೃದ್ಧಿಯ ಸಂಕೇತ: ಬೊಮ್ಮಾಯಿ

    ಬೆಂಗಳೂರು: ತೆರಿಗೆ ಕಾನೂನುಗಳು ಸರಳವಾದಷ್ಟು ಸಾಮಾನ್ಯರಿಗೆ ಅನುಕೂಲವಾಗಲಿದ್ದು, ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದ್ದರೆ ದೇಶ ಅಭಿವೃದ್ಧಿ ಆಗುತ್ತಿದೆ ಎಂದು ಅರ್ಥ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯ ಪಟ್ಟರು.

    ರಾಷ್ಟ್ರೀಯ ತೆರಿಗೆ (Tax) ಸಲಹೆಗಾರರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ಆರ್ಥಿಕ ಬೆಳವಣಿಗೆ ಹೊಂದಲು ಬಯಸುತ್ತಾನೆ. ನಾನು ಹಣಕಾಸು ಸಚಿವನಾಗಿ ಅಧಿಕಾರ ಸ್ವೀಕರಿಸಿದಾಗ ಆರ್ಥಿಕ ಪರಿಸ್ಥಿತಿ ಸರಿ ಇರಲಿಲ್ಲ. ನಾನು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮನಸು ಮಾಡಿದರೆ ಯಾವುದೂ ಕಷ್ಟವಲ್ಲ ಎಂದು ಯೋಚಿಸಿ ಕಾರ್ಯ ಪ್ರವೃತ್ತನಾದೆ. ಮೂರು ತಿಂಗಳಲ್ಲಿ 70% ರಷ್ಟು ಆದಾಯ ಹೆಚ್ಚಳ ಮಾಡಿದೆ. ರಾಜ್ಯದ ಆದಾಯ ಹೆಚ್ಚಿಸಿ ಎರಡು ವರ್ಷದ ಅವಧಿಯಲ್ಲಿ ಸರಪ್ಲಸ್ ಬಜೆಟ್ ಮಂಡನೆ ಮಾಡಿದೆ. ಈಗಿನ ಸರ್ಕಾರ ಉಚಿತ ಯೋಜನೆಗಳಿಗೆ ಹೆಚ್ಚಿನ ಹಣ ವೆಚ್ಚ ಮಾಡುತ್ತಿದ್ದು, ಸರ್ಕಾರಕ್ಕೆ ಆದಾಯ ಕಡಿಮೆಯಾಗುತ್ತದೆ ಎಂದರು.

    ರಾಜ್ಯದ ಆರ್ಥಿಕತೆ ಹೆಚ್ಚಿಸಲು ಸಹಕಾರ ನೀಡಿದ ತೆರಿಗೆದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆರ್ಥಿಕತೆ ಬೆಳವಣಿಗೆಯಲ್ಲಿ ತೆರಿಗೆದಾರರ ಪಾತ್ರ ಮಹತ್ವದ್ದಾಗಿದೆ. ಅಂತಿಮವಾಗಿ ದೇಶದ ಅಭಿವೃದ್ಧಿ ಆಗಬೇಕು. ಅದರಲ್ಲಿ ತೆರಿಗೆದಾರರ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ- 9 ಮಂದಿಯ ರಕ್ಷಣೆ

    ಆರ್ಥಿಕತೆ ಯಾವುದೇ ಒತ್ತಡವಿಲ್ಲದೇ ಬೆಳೆಯುವಂತಾಗಬೇಕು. ಆದಾಗ ಮಾತ್ರ ಪ್ರಧಾನಿ ನರೇಂದ್ರ ಮೋದಿಯವರ ಐದು ಟ್ರಿಲಿಯನ್ ಡಾಲರ್ ಗುರಿ ಮುಟ್ಟುವ ಕನಸು ಸಾಧ್ಯವಾಗಲಿದೆ. ಆರಂಭದ ದಿನಗಳಲ್ಲಿ ಬಹುತೇಕರು ಜಿಎಸ್‍ಟಿಯನ್ನು ವಿರೋಧಿಸಿದ್ದರು. ಆದರೆ ಈಗ ಎಲ್ಲರು ಒಪ್ಪಿಕೊಂಡಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗುತ್ತಿದೆ ಎಂದರು.

    ಒಂದು ದೇಶದ ಜಿಡಿಪಿಯನ್ನು (GDP) ಅಳೆಯುವುದು ಹೇಗೆ ಎನ್ನುವುದು ಪ್ರಶ್ನೆ, ಆರ್ಥಿಕ ತಜ್ಞರು ಜಿಡಿಪಿಯನ್ನು ಕ್ಲಿಷ್ಟಮಯಗೊಳಿಸುತ್ತಾರೆ. ಕೆಲವರಿಗೆ ಕಾನೂನಿನ ಅರಿವಿಲ್ಲದೆ ತೆರಿಗೆ ಕಟ್ಟದೇ ಉಳಿಯುತ್ತಾರೆ. ಕೆಲವರಿಗೆ ಕಾನೂನಿನ ಮಾಹಿತಿ ಇದ್ದರೂ ಅದರಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಸಣ್ಣವರು ಹೆಚ್ಚು ಪ್ರಾಮಾಣಿಕವಾಗಿ ತೆರಿಗೆ ಕಟ್ಟುತ್ತಾರೆ. ಅವರಿಗೆ ಒಂದು ಸಾವಿರ ರೂಪಾಯಿ ಹೆಚ್ಚಿಗೆ ತೆರಿಗೆ ಕಟ್ಟಿ ಎಂದರೆ ಕಟ್ಟುತ್ತಾರೆ. ಆದರೆ ದೊಡ್ಡವರಿಗೆ ಒಂದು ಕೋಟಿ ರೂ. ತೆರಿಗೆ ಹೆಚ್ಚಾಗಿದೆ ಅಂದರೆ, ಆಗ ಅವರಿಂದ ತೆರಿಗೆ ಸಂಗ್ರಹಿಸುವುವ ಚಾಲೆಂಜ್ ಎದುರಾಗುತ್ತದೆ ಎಂದು ಹೇಳಿದರು.

    ತೆರಿಗೆ ಕಾನೂನುಗಳು ಸರಳವಾಗಬೇಕು. ದೇಶದ ಆರ್ಥಿಕತೆಯನ್ನು ತೆರಿಗೆ ಸಂಗ್ರಹದ ಮೂಲಕ ಅಳೆಯಲಾಗುವುದು. ತೆರಿಗೆ ಸಂಗ್ರಹ ಹೆಚ್ಚಾದರೆ ದೇಶ ಅಭಿವೃದ್ಧಿಯಾಗುತ್ತಿದೆ ಎಂದು ಅರ್ಥ. ಆಡಳಿತ ನಡೆಸುವವರು ಕಾನೂನು ಜಾರಿ ಮಾಡುತ್ತೇವೆ. ಅದನ್ನು ಅರ್ಥ ಮಾಡಿಕೊಂಡು, ಜಾರಿಗೆ ತರುವ ಕೆಲಸವನ್ನು ತೆರಿಗೆ ಸಲಹೆಗಾರರು ಮಾಡುತ್ತಿದ್ದಾರೆ. ತೆರಿಗೆ ಸಲಹೆಗಾರರು ಸರ್ಕಾರದ ಭಾಗವಾಗಿದ್ದು, ವ್ಯಾಪಾರಿ ಸಮುದಾಯದ ಭಾಗವಾಗಿಯೂ ಕೆಲಸ ಮಾಡುತ್ತಿದ್ದು, ದ್ವಿಪಾತ್ರ ನಿಭಾಯಿಸುತ್ತಿದ್ದಾರೆ ಎಂದು ಹೇಳಿದರು.

    ವ್ಯಾಪಾರ ಮತ್ತು ತತ್ವಜ್ಞಾನದಲ್ಲಿ ಲಾಭ ನಷ್ಟದ ಲೆಕ್ಕ ತದ್ವಿರುದ್ಧವಾಗಿದ್ದು, ವ್ಯಾಪಾರದಲ್ಲಿ ಪಾಪ ಪುಣ್ಯ, ತತ್ವಜ್ಞಾನದಲ್ಲಿ ಲಾಭನಷ್ಟದ ಲೆಕ್ಕ ಹಾಕಬೇಕು ಎಂದರು. ಸಾಮಾನ್ಯ ಜನರು ದೇಶದ ಆರ್ಥಿಕತೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ನಾವು ಅಭಿವೃದ್ಧಿಗೆ 100 ಕೋಟಿ ರೂ. ಬಿಡುಗಡೆ ಮಾಡಿದರೆ, ಆ ಹಣವನ್ನು ರಸ್ತೆ ಟಾರ್ ಹಾಕುವವರು ಟಾರ್ ಹಾಕದೇ ಇದ್ದರೆ ಅಭಿವೃದ್ಧಿ ಹೇಗೆ ಅಭಿವೃದ್ಧಿಯಾಗುತ್ತದೆ. ಕೆಳ ಹಂತದಿಂದಲೆ ಮಾನವ ಸಂಪನ್ಮೂಲ ಅಭಿವೃದ್ದಿಯಾದರೆ ದೇಶದ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಹನ ತೆರಿಗೆ ಪರಿಷ್ಕರಣೆ – ಯಾವುದು ಎಷ್ಟು ಏರಿಕೆ?

    ವಾಹನ ತೆರಿಗೆ ಪರಿಷ್ಕರಣೆ – ಯಾವುದು ಎಷ್ಟು ಏರಿಕೆ?

    ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಬಜೆಟ್‍ನಲ್ಲಿ (Karnataka Budget) ಘೋಷಿಸಿದಂತೆ ಮೋಟಾರ್ ವಾಹನ ತೆರಿಗೆಯನ್ನು (Motor Vehicle Tax) ಪರಿಷ್ಕರಿಸಿದ್ದು ಸೋಮವಾರದಿಂದಲೇ ಜಾರಿಗೆ ಬಂದಿದೆ.

    ಶಾಲೆ-ಕಾಲೇಜು ವಾಹನ, ಕ್ಯಾಬ್, ಟ್ರಕ್‍ಗಳ ಮೇಲೆ ವಿಧಿಸುವ ತೆರಿಗೆಯನ್ನು ಹೆಚ್ಚಿಸಲಾಗಿದೆ. 15 ಲಕ್ಷ ರೂ.ಗಿಂತ ಹೆಚ್ಚಿನ ಬೆಲೆಯ ಕ್ಯಾಬ್‍ಗಳಿಗೆ ಆ ವಾಹನದ 15% ರಷ್ಟು ತೆರಿಗೆ, 10 ಲಕ್ಷ ರೂ. ನಿಂದ 15 ಲಕ್ಷ ರೂ. ಬೆಲೆಯ ಕ್ಯಾಬ್‍ಗಳಿಗೆ ಅದರ ಮೌಲ್ಯದ 9% ರಷ್ಟು ತೆರಿಗೆ ವಿಧಿಸಲಾಗುತ್ತದೆ. ತೆರಿಗೆ ಹೆಚ್ಚಳದಿಂದ 472 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹಿಸುವ ಗುರಿಯನ್ನು ಸರ್ಕಾರ ಹೊಂದಿದೆ.

    ಜುಲೈ 7ರಂದು ಮಂಡಿಸಿದ್ದ ಬಜೆಟ್‌ನಲ್ಲಿ ಆಯ್ದ ವಾಹನಗಳ ತೆರಿಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರಕಟಿಸಿದ್ದರು. ಅದಕ್ಕೆ ಪೂರಕವಾಗಿ ‘ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಮಸೂದೆ 2023’ಕ್ಕೆ ಸದನದಲ್ಲಿ ಒಪ್ಪಿಗೆ ಪಡೆಯಲಾಗಿತ್ತು. ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಪರಿಚಯವಾದ ಪಾಕಿಸ್ತಾನಿ ಗೆಳೆಯನನ್ನು ವರಿಸಿದ ಅಂಜು – ಇಸ್ಲಾಂ ಧರ್ಮಕ್ಕೆ ಮತಾಂತರ

    ಯಾವುದಕ್ಕೆ ಎಷ್ಟು?
    ಆವರಣದಲ್ಲಿರುವುದು ಹಿಂದಿನ ತೆರಿಗೆ
    1.5-2 ಟನ್ ವಾಹನ – 20,000 ರೂ.(10,000 ರೂ.)
    2-3 ಟನ್ ವಾಹನ – 30,000 ರೂ. (15,000 ರೂ.)
    3-5.5 ಟನ್ ವಾಹನ – 40,000 ರೂ. (20,000 ರೂ.)

    5.5-7.5 ಟನ್ ವಾಹನ – ವರ್ಷಕ್ಕೆ 7,200 ರೂ. (ಪೂರ್ಣಾವಧಿಗೆ 60,000 ರೂ.)
    7.5-9.5 ಟನ್ ವಾಹನ – ವರ್ಷಕ್ಕೆ 7,200 ರೂ. (ಪೂರ್ಣಾವಧಿಗೆ 80,000 ರೂ.)
    9.5-12 ಟನ್ ವಾಹನ – ವರ್ಷಕ್ಕೆ 7,200 ರೂ. (ಪೂರ್ಣಾವಧಿಗೆ 1 ಲಕ್ಷ ರೂ.)

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೆರಿಗೆ ಇಳಿಸಿ ಇಲ್ಲಾಂದ್ರೆ ಬೆಳಗ್ಗೆ ನೈಂಟಿ, ಸಂಜೆ ನೈಂಟಿ ಎಣ್ಣೆ ಕೊಡಿ: ಕೂಲಿ ಕಾರ್ಮಿಕರಿಂದ ಪ್ರತಿಭಟನೆ

    ತೆರಿಗೆ ಇಳಿಸಿ ಇಲ್ಲಾಂದ್ರೆ ಬೆಳಗ್ಗೆ ನೈಂಟಿ, ಸಂಜೆ ನೈಂಟಿ ಎಣ್ಣೆ ಕೊಡಿ: ಕೂಲಿ ಕಾರ್ಮಿಕರಿಂದ ಪ್ರತಿಭಟನೆ

    ಉಡುಪಿ: ಸರ್ಕಾರ ಮದ್ಯದ (Liquor) ಮೇಲಿನ ತೆರಿಗೆ (Tax) ಇಳಿಕೆ ಮಾಡಿ ಇಲ್ಲವೇ, ಬೆಳಗ್ಗೆ ನೈಂಟಿ, ಸಂಜೆ ನೈಂಟಿ ಎಣ್ಣೆ ಉಚಿತವಾಗಿ ಕೊಡಿ ಎಂದು ಆಗ್ರಹಿಸಿ ಉಡುಪಿಯಲ್ಲಿ ಕೂಲಿ ಕಾರ್ಮಿಕರು ಪ್ರತಿಭಟನೆ (Protest) ನಡೆಸಿದ್ದಾರೆ.

    ಉಡುಪಿ ಜಿಲ್ಲಾ ನಾಗರಿಕ ಸಮಿತಿ, ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ಇಲ್ಲಿನ ಚಿತ್ತರಂಜನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರು ವಿನೂತನ ರೀತಿಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು. ಪ್ರತಿಭಟನೆಗೂ ಮುನ್ನ ಕುಡುಕರಿಗೆ ಹಾರ ಹಾಕಿ ಸನ್ಮಾನಿಸಿ, ಆರತಿಯೊಂದಿಗೆ ಗೌರವಿಸಲಾಯಿತು. ಇದನ್ನೂ ಓದಿ: 5 ಗ್ಯಾರಂಟಿ ಜಾರಿಗೆ ತೆರಿಗೆ ಏರಿಕೆ, 85ಸಾವಿರ ಕೋಟಿ ಸಾಲಕ್ಕೆ ನಿರ್ಧಾರ – ಯಾವ ತೆರಿಗೆ ಎಷ್ಟು ಏರಿಕೆ?

    ರಾಜ್ಯ ಸರ್ಕಾರ ಇತ್ತೀಚಿನ ಬಜೆಟ್‌ನಲ್ಲಿ (Karnataka Budget) ಮದ್ಯದ ಬೆಲೆ 20% ಏರಿಕೆ ಮಾಡಿದೆ. ಸರ್ಕಾರದ ಉಚಿತ ಯೋಜನೆಗಳಿಗೆ ನಮ್ಮಿಂದಲೇ ಹಣ ಬರುತ್ತದೆ. ನಮಗೆ ಮಧ್ಯದ ಬೆಲೆ ಇಳಿಕೆ ಮಾಡಿ ಇಲ್ಲವೇ ಬೆಳಗ್ಗೆ ನೈಂಟಿ, ಸಂಜೆ ನೈಂಟಿ ಉಚಿತವಾಗಿ ಕೊಡಿ. ಅದೂ ಆಗಲಿಲ್ಲ ಅಂದ್ರೆ ಎಣ್ಣೆಯನ್ನೇ ಬಂದ್ ಮಾಡಿ ಎಂದು ಆಗ್ರಹಿಸಿದ್ದಾರೆ.

    ಎಣ್ಣೆ ಬಂದ್ ಮಾಡಿದ್ರೆ, ಆ ಹಣವನ್ನ ನಮ್ಮ ಹೆಂಡತಿ, ಮಕ್ಕಳಿಗೆ ಕೊಡುತ್ತೇವೆ. ನಮ್ಮ ಹೆಂಡತಿ, ಮಕ್ಕಳನ್ನು ನಾವೇ ಹಣ ಕೊಟ್ಟು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತೆವೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ರಾಜ್ಯದಲ್ಲಿ ಡಿಸಿ, ಸಿಇಓ, ಕಮಿಷನರ್‌ಗಳಿಗೆ ರೇಟ್ ಫಿಕ್ಸ್ ಆಗಿದೆ: ಕಟೀಲ್ ಗಂಭೀರ ಆರೋಪ

    5 ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಅಬಕಾರಿ ಸುಂಕವನ್ನ ಭಾರೀ ಏರಿಕೆ ಮಾಡಿದೆ. ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲೆ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದಿರುವ ಮಧ್ಯಪ್ರಿಯರು ಅಲ್ಲಲ್ಲಿ ಪ್ರತಿಭಟನೆಗೆ ಇಳಿದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]