Tag: TB Dam crest gate collapse

  • ಈಗ ನೀರು ಹರಿಸಿದ್ರೂ ಅಕ್ಟೋಬರ್‌ ವೇಳೆಗೆ ಡ್ಯಾಂ ತುಂಬುವ ಸಾಧ್ಯತೆಯಿದೆ – ಸಿದ್ದರಾಮಯ್ಯ ವಿಶ್ವಾಸ

    ಈಗ ನೀರು ಹರಿಸಿದ್ರೂ ಅಕ್ಟೋಬರ್‌ ವೇಳೆಗೆ ಡ್ಯಾಂ ತುಂಬುವ ಸಾಧ್ಯತೆಯಿದೆ – ಸಿದ್ದರಾಮಯ್ಯ ವಿಶ್ವಾಸ

    – ಬಿಜೆಪಿಯವರಿಗೆ ಗೂಬೆ ಕೂರಿಸುವುದೇ ಕಸುಬು: ಸಿಎಂ ಕಿಡಿ

    ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ, 19ನೇ ಕ್ರಸ್ಟ್ ಗೇಟ್ ವೀಕ್ಷಣೆ ಮಾಡಿದರು. ಸಿಎಂ ಆಗಮನದ ಹಿನ್ನೆಲೆ ಜಲಾಶಯದ ಬಳಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ಒಬ್ಬರು ಎಸ್ಪಿ, ಇಬ್ಬರು ಅಡಿಷನಲ್ ಎಸ್ಪಿ ಸೇರಿದಂತೆ 400ಕ್ಕೂ ಸಿಬ್ಬಂದಿಯನ್ನ ನಿಯೋಜಿಸಲಾಗಿತ್ತು. ಅಲ್ಲದೇ ಮುಖ್ಯ ದ್ವಾರದ ಮುಂದೆ ಸಾರ್ವಜನಿಕರ ಅಹವಾಲು ಸ್ವೀಕಾರಕ್ಕೂ ವ್ಯವಸ್ಥೆ

    ಟಿಬಿ ಡ್ಯಾಂನ 19ನೇ ಕ್ರಸ್ಟ್‌ಗೇಟ್‌ ವೀಕ್ಷಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ 1952-53ರಲ್ಲಿ ಪೂರ್ಣಗೊಂಡಿತ್ತು. ಆಗಿನಿಂದ ಏನೂ ತೊಂದರೆ ಆಗಿರಲಿಲ್ಲ. ಈಗ ತೊಂದರೆಯಾಗಿದೆ. 19ನೇ ಕ್ರಸ್ಟ್ ಗೇಟ್ ಚೈನ್ ಕಟ್ಟಾಗಿದ್ದರಿಂದ ಸಮಸ್ಯೆಯಾಗಿದೆ. ಈಗ ಗೇಟ್ ರಿಪೇರಿ ಮಾಡೋದಕ್ಕೆ ಸುಮಾರು 60 ಟಿಎಂಸಿನಷ್ಟು ನೀರನ್ನ ಹೊರಗೆ ಬಿಡಬೇಕು. ಆದ್ರೆ ಇನ್ನೂ ಅಕ್ಟೋಬರ್ ವರೆಗೆ ಮಳೆ ಇರೋದ್ರಿಂದ ಈಗ ಹೊರಗೆ ಹೋದಷ್ಟು ನೀರು ತುಂಬುವ ಸಾಧ್ಯತೆ ಇದೆ. ಈ ವಿಶ್ವಾಸವನ್ನು ನಾವೆಲ್ಲರೂ ಇಟ್ಟುಕೊಳ್ಳೋಣ ಎಂದು ನುಡಿದರು. ಇದನ್ನೂ ಓದಿ: ಜಲಾಶಯ ನಿರ್ವಹಣೆಗೆ ಕೇಂದ್ರ ಸಮಿತಿ ಸಲಹೆ ಧಿಕ್ಕರಿಸಿದೆ ರಾಜ್ಯ ಸರ್ಕಾರ: ಜೋಶಿ ಆರೋಪ

    ಈಗ ಕ್ರಸ್ಟ್ ಗೇಟ್ ರಿಪೇರಿ ಮಾಡಬೇಕು ಅಂದ್ರೆ, ನೀರು ಹೊರಕ್ಕೆ ಬಿಡಬೇಕು. ಇದರಿಂದ ರೈತರಿಗೆ ಮೊದಲ ಬೆಳೆಗೆ ಯಾವುದೇ ತೊಂದರೆ ಆಗಲ್ಲ. ಅಲ್ಲದೇ ಹವಾಮಾನ ಮುನ್ಸೂಚನೆ ಪ್ರಕಾರ ಅಕ್ಟೋಬರ್ ವರೆಗೆ ಮಳೆ ಇರುವುದರಿಂದ ಈಗ ಹರಿದಷ್ಟೂ ನೀರು ಡ್ಯಾಂಗೆ ತುಂಬುವ ಸಾಧ್ಯತೆಯಿದೆ. ನಮ್ಮದು ರೈತಪರ ಸರ್ಕಾರ, ರೈತರಿಗೆ ತೊಂದರೆಯಾಗೋದಕ್ಕೆ ಬಿಡಲ್ಲ ಅಂತ ಸಿಎಂ ಆಶ್ವಾಸನೆ ನೀಡಿದರು. ಇದನ್ನೂ ಓದಿ: ಜಲಾಶಯ ನಿರ್ವಹಣೆಗೆ ಕೇಂದ್ರ ಸಮಿತಿ ಸಲಹೆ ಧಿಕ್ಕರಿಸಿದೆ ರಾಜ್ಯ ಸರ್ಕಾರ: ಜೋಶಿ ಆರೋಪ

    ಇದೇ ವೇಳೆ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿದ ಸಿಎಂ, ಜಲಾಶಯಗಳ ನಿರ್ವಹಣೆಗೆ ಒಂದು ಬೋರ್ಡ್ ಇದೆ. ಅದು ಕೇಂದ್ರದ ಸುಪರ್ದಿಗೆ ಬರುತ್ತೆ. ಈ ಬೋರ್ಡ್‌ನಲ್ಲಿ ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ಅಧಿಕಾರಿಗಳು ಇದ್ದಾರೆ. ಆದ್ರೆ ಈ ವಿಚಾರದಲ್ಲಿ ನಾನು ರಾಜಕೀಯ ಮಾಡಲ್ಲ. ಯಾರ ಮೇಲೂ ತಪ್ಪು ಹೊರಿಸಲ್ಲ. ಸರಿಪಡಿಸುವ ಕೆಲಸ ಆಗುತ್ತೆ ಎಂದರು.

    ಮುಂದುವರಿದು, ಬಿಜೆಪಿಯವರು ರಾಜಕೀಯವಾಗಿ ಟೀಕೆ ಮಾಡ್ತಿದ್ದಾರೆ. ಕ್ರಸ್ಟ್ ಗೇಟ್ ಕಟ್ಟಾಗಿ ನೀರು ಹೊರಗೆ ಹೋಗ್ತಿದೆ. ಸರ್ಕಾರದ ಹೊಣೆಗೇಡಿತನ ಅಂದ್ರೆ ಏನರ್ಥ? ಬಿಜೆಪಿಯವರಿಗೆ ಗೂಬೆ ಕೂರಿಸುವುದೇ ಕಸುಬು, ನಾವು ರೈತರ ಪರವಾಗಿದ್ದೇವೆ. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: Bengaluru | ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ ಅಪಘಾತ; ನಡುರಸ್ತೆಯಲ್ಲೇ ವಾಹನ ಸವಾರರ ಚಿರಾಟ!

  • ತುಂಗಭದ್ರಾ ಡ್ಯಾಂನ ಸರ್ಕಾರ ಕಂಟ್ರೋಲ್‌ ಮಾಡಲ್ಲ – ಡಿಕೆಶಿ ಸ್ಪಷ್ಟನೆ

    ತುಂಗಭದ್ರಾ ಡ್ಯಾಂನ ಸರ್ಕಾರ ಕಂಟ್ರೋಲ್‌ ಮಾಡಲ್ಲ – ಡಿಕೆಶಿ ಸ್ಪಷ್ಟನೆ

    – 2 ದಿನಗಳಲ್ಲಿ ತಜ್ಞರ ಸಮಿತಿ, 4-5 ದಿನಗಳಲ್ಲಿ ಗೇಟ್‌ ರಿಪೇರಿ; ಡಿಸಿಎಂ ಗ್ಯಾರಂಟಿ

    ಬೆಂಗಳೂರು: ತುಂಗಭದ್ರಾ ಜಲಾಶಯವನ್ನ (Tungabhadra Dam) ರಾಜ್ಯ ಸರ್ಕಾರ ಕಂಟ್ರೋಲ್‌ ಮಾಡಲ್ಲ. ಅದಕ್ಕೇ ಆದ ಪ್ರತ್ಯೇಕ ಸಮಿತಿಯಿದೆ. ನಾವು ಸದಸ್ಯರು ಅಷ್ಟೇ. ಆದರೂ ಅದು ನಮ್ಮದೇ. ಇನ್ನೂ 4-5 ದಿನಗಳಲ್ಲಿ ಗೇಟ್‌ ರಿಪೇರಿ ಮಾಡುವ ಕೆಲಸ ಆಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಅಭಯ ನೀಡಿದರು.

    ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಬಿ ಡ್ಯಾಮ್‌ಗೆ ಹೋಗಿ ವೀಕ್ಷಣೆ ಮಾಡಿ, ಕೂಡಲೇ ಕ್ರಮ ತೆಗೆದುಕೊಂಡಿದ್ದೇವೆ. ಎಲ್ಲಾ ಗುತ್ತಿಗೆದಾರರ ಜೊತೆ ಮಾತಾಡಿದ್ದೇನೆ. ಡಿಸೈನ್‌ಗಳನ್ನ ಕಳಿಸಿಕೊಟ್ಟಿದ್ದೇವೆ. ಇನ್ನೂ 4-5 ದಿನಗಳಲ್ಲಿ ರಿಪೇರಿ ಕೆಲಸ ಆಗುತ್ತೆ. ರೈತರ ಬೆಳೆ ಉಳಿಸುವ ವ್ಯವಸ್ಥೆ ಮಾಡಿದ್ದೇವೆ. ನಾಳೆ (ಆ.13) ನಮ್ಮ ಸಿಎಂ ಹೋಗ್ತಾರೆ. ನಾನು ಟೆಕ್ನಿಕಲ್ ಟೀಮ್ ಜೊತೆಗೆ ಚರ್ಚೆ ಮಾಡಿದ್ದೇನೆ. ಯಾರೂ ಗಾಬರಿ ಪಡಬೇಕಿಲ್ಲ ಎಂದು ಅಭಯ ನೀಡಿದರು. ಇದನ್ನೂ ಓದಿ: ಸುಳ್ಳು ವರದಿ ಪ್ರಕಟಿಸಿದ್ರೆ ಮಾಧ್ಯಮಗಳನ್ನು ಮುಚ್ಚುತ್ತೇವೆ: ಬಾಂಗ್ಲಾ ಸರ್ಕಾರ ಬೆದರಿಕೆ

    ಎರಡು ದಿನಗಳಲ್ಲಿ ತಜ್ಞರ ಸಮಿತಿ ರಚನೆ:
    ಡ್ಯಾಂ ಸ್ಥಿತಿ ಬಹಳ ಡೇಂಜರ್ ಇತ್ತು. ಕಳೆದ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ಆಗಿದೆ. ಸುರಕ್ಷತೆಗಾಗಿ ಟೀಮ್ ಮಾಡಿ ಎಲ್ಲಾ ಡ್ಯಾಮ್‌ಗಳಿಗೂ ಕಳಿಸಿಕೊಡುತ್ತಿದ್ದೇವೆ. ಇನ್ನೆರಡು ದಿನಗಳಲ್ಲಿ ತಜ್ಞರ ಸಮಿತಿ ರಚನೆ ಮಾಡ್ತೇವೆ. ಆ ಸಮಿತಿ ಎಲ್ಲಾ ಡ್ಯಾಮ್‌ಗಳಿಗೂ ವಿಸಿಟ್ ಮಾಡಿ ಪರಿಶೀಲಿಸುತ್ತದೆ. ಬೇರೆ ಕಡೆ ಡಬಲ್ ಆಪ್ಷನ್ಸ್ ಇದೆ, ಒಂದು ಗೇಟ್‌ಗೆ ಎರಡು ಲಿಂಕ್ ಇದ್ದಾವೆ. ಇಲ್ಲಿ ಒಂದೇ ಒಂದು ಚೈನ್ ಇತ್ತು, ಅದು ಕಟ್ ಆಗಿದೆ. ನೀರು, ನೋಡಿದ್ರೆ ಸ್ವಲ್ಪ ಸಮಸ್ಯೆಯಿತ್ತು. ನೀರು ಉಳಿಸಬಹುದು, 55-60 ಟಿಎಂಸಿ ನೀರು ಉಳಿಸುವ ವ್ಯವಸ್ಥೆ ಆಗುತ್ತಿದೆ ಎಂದು ಹೇಳಿದರು.

    ಇನ್ನೂ ಆಲಮಟ್ಟಿ ಡ್ಯಾಂಗೆ ಮಾನ್ಯತೆ ಕೊಟ್ಟಿಲ್ಲ ಎಂಬ ಆರೋಪಕ್ಕೆ ಉತ್ತರಿಸಿದ ಡಿಕೆಶಿ, ಆರೋಪ ಮಾಡುವವರು, ರಾಜಕೀಯ ಮಾತನಾಡುವವರು ಏನು ಬೇಕಾದರೂ ಮಾತಾಡಲಿ. ತುಂಗಭದ್ರಾ ಡ್ಯಾಂ ಸರ್ಕಾರ ಕಂಟ್ರೋಲ್ ಮಾಡಲ್ಲ. ಅದಕ್ಕೆ ಆದ ಕಮಿಟಿಯಿದೆ. ನಾವು ಸದಸ್ಯರು ಅಷ್ಟೇ. ಆದರೂ ಅದು ನಮ್ಮದೇ. ಏಕೆಂದರೆ ಹೆಚ್ಚಿನ ಬಳಕೆ ನಮ್ಮದು, ಹಾಗಾಗಿ ಜವಬ್ದಾರಿ ಹೆಚ್ಚಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: KRS ಡ್ಯಾಂನಲ್ಲೂ ಸ್ಟಾಪ್‌ ಲಾಕ್ ಗೇಟ್ ಇಲ್ಲ – ಈಗಲೇ ಎಚ್ಚೆತ್ತುಕೊಳ್ಳೋದು ಒಳ್ಳೆಯದು: ಹೆಚ್‌ಡಿಕೆ

    ಇದೇ ವೇಳೆ ವಾಲ್ಮೀಕಿ ಹಗರಣ ಸಂಬಂಧ ಬಿಜೆಪಿ ರೆಬೆಲ್‌ ನಾಯಕರಿಂದ ಮತ್ತೊಂದು ಪಾದಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಮಾಡಲಿ, ಅವ್ರ ಪಾದಯಾತ್ರೆ ಯಶಸ್ವಿಯಾಗಲಿ ಎಂದು ವ್ಯಂಗ್ಯವಾಡಿದರು.

    ಬೆಂಗಳೂರಿಗೆ ಮಳೆ ಬೀಳಬೇಕು:
    ಅಲ್ಲದೇ ಬೆಂಗಳೂರಿನಲ್ಲಿ ಹಲವೆಡೆ ಮಳೆಯ ಸುರಕ್ಷತಾ ಕ್ರಮಗಳ ಕುರಿತು ಮಾತನಾಡಿ, ಬೆಂಗಳೂರಿಗೆ ಮಳೆ ಬೀಳಬೇಕು. ಅಂತರ್ಜಲ ಹೆಚ್ಚಬೇಕು, ಕನಕಪುರ, ಮಾಗಡಿ, ಚನ್ನಪಟ್ಟಣ, ತುಮಕೂರು, ಕುಣಿಗಲ್, ಕೋಲಾರ ಸುತ್ತಮುತ್ತ ಮಳೆ ಬಂದಿಲ್ಲ. ನಗರದಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಆ ಕಡೆ ಮಳೆ ಬಂದಿದೆ ಡ್ಯಾಮ್‌ಗಳು ಫುಲ್ ಆಗಿವೆ. ಬೆಂಗ್ಳೂರಿಗೆ ಮಳೆ ಬೀಳಲಿ, ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿದ್ರೆ ಸರಿಪಡಿಸೋಣ ಎಂದು ಹೇಳಿದರು. ಇದನ್ನೂ ಓದಿ: ಸುಳ್ಳು ವರದಿ ಪ್ರಕಟಿಸಿದ್ರೆ ಮಾಧ್ಯಮಗಳನ್ನು ಮುಚ್ಚುತ್ತೇವೆ: ಬಾಂಗ್ಲಾ ಸರ್ಕಾರ ಬೆದರಿಕೆ

  • ತುಂಗಭದ್ರಾ ಡ್ಯಾಂ ವಾರ್ಷಿಕ ನಿರ್ವಹಣಾ ಗುತ್ತಿಗೆಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ? – ಜನಾರ್ದನ ರೆಡ್ಡಿ ಪ್ರಶ್ನೆ

    ತುಂಗಭದ್ರಾ ಡ್ಯಾಂ ವಾರ್ಷಿಕ ನಿರ್ವಹಣಾ ಗುತ್ತಿಗೆಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ? – ಜನಾರ್ದನ ರೆಡ್ಡಿ ಪ್ರಶ್ನೆ

    – ವಿಶ್ವದಲ್ಲಿರುವ ಎಲ್ಲಾ ಟೆಕ್ನಾಲಜಿ ಬಳಸಿ, ಡ್ಯಾಂ ಸರಿಪಡಿಸುವಂತೆ ಆಗ್ರಹ

    ಕೊಪ್ಪಳ: ತುಂಗಭದ್ರಾ ಡ್ಯಾಂನ (Tungabhadra Dam) ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಅಂತ ಬಹಿರಂಗ ಪಡಿಸಬೇಕು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ತುಂಗಭದ್ರಾ ಜಲಾಶಯದಲ್ಲಿ ಕಳಚಿಕೊಂಡ 19ನೇ ಕ್ರಸ್ಟ್‌ಗೇಟ್‌ (TB Dam crest gate collapse) ವೀಕ್ಷಣೆ ಮಾಡಿದ ಶಾಸಕ ಜನಾರ್ದನ ರೆಡ್ಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತುಂಗಭದ್ರಾ ಜಲಾಶಯದ ನಿರ್ವಹಣೆಗೆ ಯಾರಿಗೆ ಕೊಟ್ಟಿದ್ದಾರೆ? ಇದಕ್ಕೆ ಎಲ್ಲಾ ಸರ್ಕರವೇ ಹೊಣೆ. ಡಿಕೆಶಿ ಅಚಾನಕ್ ಆಗಿದೆ ಅಂತ ಹೇಳ್ತಾರೆ, ಇದನ್ನ ಒಪ್ಪುವ ಪ್ರಶ್ನೆಯೇ ಬರಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ: Tungabhadra Dam | 5 ದಿನಗಳಲ್ಲಿ ಗೇಟ್‌ ರಿಪೇರಿ – ಸರ್ಕಾರಕ್ಕೆ ಅಧಿಕಾರಿಗಳ ಭರವಸೆ

    ಸಿಬಿಐ ತನಿಖೆ ಆಗಲಿ:
    ತುಂಗಭದ್ರಾ ಡ್ಯಾಂ ವಿಚಾರದಲ್ಲಿ ನಾನು ಯಾರ ಮೇಲೂ ವೈಯಕ್ತಿಕ ಆರೋಪ ಮಾಡಲ್ಲ. ಆದ್ರೆ ಈ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದ ವಿರುದ್ಧ ಸಿಬಿಐ ತನಿಖೆಯಾಗಬೇಕು. ಡ್ಯಾಂನ ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಅಂತ ಸರ್ಕಾರ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ಗೆ ಡಿಜಿಟಲ್‌ ಸ್ಪರ್ಶ – ಇನ್ಮುಂದೆ ಆನ್‌ಲೈನ್‌ನಲ್ಲಿ ಊಟ ಬುಕ್ಕಿಂಗ್‌!

    ಅಲ್ಲದೇ ಗೇಟ್‌ ಅನ್ನು ನೀವು ಸರಿ ಮಾಡದಿದ್ದರೇ ಯಾರಾದ್ರೂ ಒಬ್ಬರು ಸರಿಪಡಿಸ್ತಾರೆ. ಆದ್ರೆ ಇದು ನಮ್ಮ ಭಾಗದ ರೈತರಿಗೆ (Farmers) ಆದ ದೊಡ್ಡ ಅನ್ಯಾಯ. ಸರ್ಕಾರ ಇದರ ಸಂಪೂರ್ಣ ಜವಾಬ್ದಾರಿ ಹೊರಬೇಕು, ನಿರ್ಲಕ್ಷತನ ತೋರಿದವರ ವಿರುದ್ಧ ಕ್ರಮ ಆಗಬೇಕು ಒತ್ತಾಯಿಸಿದ್ದಾರೆ.

    ಬೇಸಿಗೆ ಕಾಲದಲ್ಲಿ ಡ್ಯಾಂ ಗೇಟ್‌ ಪರಿಶೀಲಿಸಿ, ನಿರ್ವಹಣೆ ಮಾಡಬೇಕು. ಸರ್ಕಾರ ಯಾವ ಕೆಲಸವನ್ನೂ ಮಾಡಿಲ್ಲ. ಹಳೇ ಡ್ಯಾಂಗಳ ನಿರ್ವಹಣೆಗೆ ಕೇಂದ್ರ ಸರ್ಕಾರ ತಂಡ ರಚನೆ ಮಾಡಿದೆ. ಅದನ್ನ ಇವರು ಸಂಪರ್ಕ ಮಾಡಿದ್ದಾರಾ? ಇದೆಲ್ಲವೂ ಮುಖ್ಯವಾಗುತ್ತೆ. ಇದಕ್ಕಾಗಿ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡುತ್ತೆ? ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಇದ್ಯಾವುದೇ ನಿಯಮಗಳನ್ನ ಅನುಸರಿಸುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರಿಂದ ಹೋರಾಟ – ಸರ್ಕಾರಿ ಶಾಲೆಗಳಲ್ಲಿ ತರಗತಿ ವ್ಯತ್ಯಯ?

    ವಿಶ್ವದಲ್ಲಿರುವ ಎಲ್ಲಾ ಟೆಕ್ನಾಲಜಿ ಬಳಸಿ:
    ಸರಿಯಾಗಿ ನಿರ್ವಹಣೆ ಮಾಡಿದ್ದರೇ ಈ ಘಟನೆ ನಡೆಯುತ್ತಿರಲಿಲ್ಲ. ಇದರಲ್ಲಿ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತೆ. ಇದು ಮೂರು ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾದ್ರೂ ಡ್ಯಾಂ ನಮ್ಮ ಸುಪರ್ದಿಯಲ್ಲಿದೆ. ನಾನು ಯಾವುದೇ ರಾಜಕೀಯ ಉದ್ದೇಶದಿಂದ ಮಾತನಾಡುತ್ತಿಲ್ಲ. ವಿಶ್ವದಲ್ಲಿ ಇರುವ ಎಲ್ಲಾ ರೀತಿಯ ಟೆಕ್ನಾಲಜಿ ಬಳಸಿ ಇದನ್ನ ಕೂಡಲೇ ನಿರ್ವಹಣೆ ಮಾಡಿ ಡ್ಯಾಂ ಉಳಿಸುವ ಕೆಲಸ ಮಾಡಬೇಕು. ಡಿಕೆಶಿ ಹೇಳಿದಂತೆ ಅಚಾನಕ್ ಆಗಿ ಕಟ್ ಆಗಿದೆ ಅಂದ್ರೆ ಸಣ್ಣ ಮಕ್ಕಳು ಕೂಡಾ ನಗ್ತಾರೆ. ಈ ವೈಪಲ್ಯಕ್ಕೆ ಸಂಪೂರ್ಣ ಜವಾಬ್ದಾರಿ ಸರ್ಕಾರವೇ ತಗೊಬೇಕು. ಇದು ಡಿಬಿ ಡ್ಯಾಂ ಬೋರ್ಡ್‌ ಹಾಗೂ ಸರ್ಕಾರ ಎರಡರ ವೈಫಲ್ಯವೂ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.