Tag: tb jayachandra

  • ‘ಮನೆ ಮನೆಗೆ ಕಾಂಗ್ರೆಸ್’ಗೆ ಬಂದ ‘ಕೈ’ ಸಚಿವರಿಗೆ ಜನರ ಫುಲ್ ಕ್ಲಾಸ್!

    ‘ಮನೆ ಮನೆಗೆ ಕಾಂಗ್ರೆಸ್’ಗೆ ಬಂದ ‘ಕೈ’ ಸಚಿವರಿಗೆ ಜನರ ಫುಲ್ ಕ್ಲಾಸ್!

    ತುಮಕೂರು: ಮನೆ ಮನೆಗೆ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮಕ್ಕೆ ಹೊರಟ ಹಾಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಸ್ವಕ್ಷೇತ್ರದಲ್ಲಿ ಸಾರ್ವಜನಿಕರು ಸಚಿವರನ್ನೇ ತರಾಟೆ ತೆಗೆದುಕೊಂಡಿದ್ದಾರೆ.

    ಶಿರಾ ತಾಲ್ಲೂಕಿನ ಚಿರತಹಳ್ಳಿ ಗ್ರಾಮಸ್ಥರು ಅಭಿವೃದ್ಧಿ ಕೆಲಸ ಮಾಡದ ಸಚಿವರ ವಿರುದ್ಧ ಸಚಿವರ ಕಾರಿಗೆ ಘೆರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಕ್ಕೆ ಆಗಮಿಸಿದ್ದ ಸಚಿವ ಜಯಚಂದ್ರ ಅವರ ಕಾರು ಅಡ್ಡಗಟ್ಟಿದ ಗ್ರಾಮಸ್ಥರು ಚುನಾವಣೆ ಪ್ರಚಾರಕ್ಕೆ ಮಾತ್ರ ಗ್ರಾಮಕ್ಕೆ ಬರುತ್ತೀರಾ…? ಗೆದ್ದ ಮೇಲೆ ಇತ್ತ ಮುಖಮಾಡಿಯೂ ನೋಡಿಲ್ಲ. ಕಳೆದ ನಾಲ್ಕೂವರೆ ವರ್ಷದಿಂದ ಎಲ್ಲಿ ಹೋಗಿದ್ರಿ ಸ್ವಾಮಿ ಎಂದು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಗ್ರಾಮಕ್ಕೆ ಬರದಂತೆ ಸಚಿವರನ್ನ ತಡೆದರು. ಮನೆಮನೆಗೆ ಕಾಂಗ್ರೆಸ್ ನ ಪ್ರಚಾರ ಕಾರ್ಯಕ್ರಮದ ಆರಂಭದಲ್ಲೇ ಸಚಿವರಿಗೆ ತರಾಟೆ ತೆಗೆದುಕೊಂಡಿರುವುದು ಸಚಿವರಿಗೆ ತೀವ್ರ ಮುಖಭಂಗ ಉಂಟಾಗಿದೆ.

    ಕೊನೆಗೆ ಅರ್ಧ ಗಂಟೆ ನಂತರ ಪರಿಸ್ಥಿತಿ ಶಾಂತವಾದ ಬಳಿಕ ಸಚಿವರು ಮತ್ತೆ ಗ್ರಾಮಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

  • ಫಸ್ಟ್ ನೈಟ್‍ನಂದೇ ನವ ವಧು ಕಿಡ್ನ್ಯಾಪ್- ಹೆಂಡ್ತಿಗಾಗಿ ಫೋಟೋ ಹಿಡಿದು ಬೀದಿ ಬೀದಿ ಅಲೆಯುತ್ತಿರೋ ಪತಿ

    ಫಸ್ಟ್ ನೈಟ್‍ನಂದೇ ನವ ವಧು ಕಿಡ್ನ್ಯಾಪ್- ಹೆಂಡ್ತಿಗಾಗಿ ಫೋಟೋ ಹಿಡಿದು ಬೀದಿ ಬೀದಿ ಅಲೆಯುತ್ತಿರೋ ಪತಿ

    – ಅಪಹರಣದ ಹಿಂದೆ ಸಚಿವ ಜಯಚಂದ್ರ ಬಂಟನ ಹೆಸರು

    ತುಮಕೂರು: ಪ್ರಸ್ತದ ದಿನವೇ ನವವಧು ಕಿಡ್ನ್ಯಾಪ್ ಆಗಿರೋ ಘಟನೆ ತುಮಕೂರಿನಲ್ಲಿ ನಡೆದಿದೆ. ನಾಪತ್ತೆ ಹಿಂದೆ ಪೊಲೀಸರು, ಮಹಿಳಾ ಸ್ವೀಕೃತಿ ಕೇಂದ್ರದವರ ಕೈವಾಡವಿದೆ ಅನ್ನೋ ಆರೋಪವೂ ಇದೆ. ಖುದ್ದು ಕಿಡ್ನ್ಯಾಪ್ ಆದ ಯುವತಿಯೇ ವಿಡಿಯೋ ಮಾಡಿ ಕಳಿಸಿದ್ದಾಳೆ. ಆದ್ರೆ ಆಕೆ ಎಲ್ಲಿದ್ದಾಳೆ ಅನ್ನೋದು ಯಾರಿಗೂ ಗೊತ್ತಿಲ್ಲ.

    ಹೆಂಡತಿ ಫೋಟೋ ಹಿಡಿದು ಬೀದಿ ಬೀದಿ ಅಲೆಯುತ್ತಿರೋ ಈತ ಮಹೇಶ್. ಈಗ ಕಿಡ್ನ್ಯಾಪ್ ಆಗಿರೋ ವೀಣಾಳನ್ನ ಮದುವೆಯಾಗಿದ್ದವರು. ವೀಣಾ-ಮಹೇಶ್‍ಗೆ ಮೇ 21ರಂದು ಮದುವೆ ಆಗಿತ್ತು. ಮದುವೆಯಾದ 9 ದಿನಕ್ಕೆ ಪ್ರಸ್ತಕ್ಕೆ ಸಿದ್ಧತೆ ನಡೆಸ್ತಿದ್ದಾಗ ವೀಣಾಳನ್ನ ಕಿಡ್ನ್ಯಾಪ್ ಮಾಡಿಸಿದ್ದು ಶಿರಾ ತಾಲೂಕಿನ ಚನ್ನೆನಕುಂಟೆ ತಿಪ್ಪೇಶ್.

    ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಆಪ್ತರಲ್ಲಿ ಈ ತಿಪ್ಪೇಶನೂ ಒಬ್ಬ. ವಯಸ್ಸು 40 ಆಗಿದ್ರೂ 25 ವರ್ಷದ ವೀಣಾಳ ಮೇಲೆ ಕಣ್ಣಿಟ್ಟಿದ್ದ. ಆದ್ರೆ ವೀಣಾ ಈತನನ್ನ ಮದುವೆ ಆಗಿರ್ಲಿಲ್ಲ. ಮದುವೆ ಆಗಿ ಫಸ್ಟ್‍ನೈಟ್‍ಗೆ ರೆಡಿ ಆಗ್ತಿದ್ದಾಗ ತಿಪ್ಪೇಶ ತನ್ನ ತಂಗಿಯನ್ನ ಕಳಿಸಿ ಈಕೆಯನ್ನ ಕಿಡ್ನ್ಯಾಪ್ ಮಾಡಿಸಿದ್ದ.

    ಫಸ್ಟ್ ನೈಟ್ ದಿನವೇ ಹೆಂಡತಿಯನ್ನ ಅಪಹರಿಸಿದ್ದ ಸುದ್ದಿ ಗೊತ್ತಾದ್ಮೇಲೆ ಮಹೇಶ ತಿಪ್ಪೇಶ್ ವಿರುದ್ಧ ದೂರು ನೀಡಿದ್ದರು. ನಂತರ ವೀಣಾಳನ್ನ ಬಿಟ್ಟು ಹೋಗಿದ್ದ. ಬಳಿಕ ಪೊಲೀಸರು ಈಕೆಯನ್ನ ಕರೆದು ವಿಚಾರಣೆ ನಡೆಸಿ ಸ್ವೀಕೃತಿ ಕೇಂದ್ರಕ್ಕೆ ಒಪ್ಪಿಸಿದ್ರು. ಈಗ ಸ್ವೀಕೃತಿ ಕೇಂದ್ರದಿಂದಲೂ ಆಕೆ ನಾಪತ್ತೆಯಾಗಿದ್ದಾಳೆ. ಸಿಬ್ಬಂದಿಯನ್ನ ಕೇಳಿದ್ರೆ ಗೊತ್ತಿಲ್ಲ ಅಂತ ಕಥೆ ಕಟ್ತಿದ್ದಾರೆ.

    ಇಷ್ಟೆಲ್ಲದರ ಮಧ್ಯೆ ಯುವತಿ ಮನೆಗೆ ವಾಪಸ್ ಬಂದಾಗ ನಾನು ನನ್ನ ಗಂಡ, ಅತ್ತೆ-ಮಾವನ ಜೊತೆ ನೆಮ್ಮದಿಯಾಗಿದ್ದೀನಿ ಅಂತ ತಿಪ್ಪೇಶನಿಗೆ ಬಾಯಿಗೆ ಬಂದಂತೆ ಬೈದಿದ್ದಾಳೆ.

    ಇದೀಗ ವೀಣಾ ಮತ್ತೆ ನಾಪತ್ತೆಯಾಗಿದ್ದು, ದಯವಿಟ್ಟು ನನ್ನ ಹೆಂಡತಿಯನ್ನ ನನಗೆ ಒಪ್ಪಿಸಿ ಎಂದು ಗಂಡ ಮಹೇಶ್ ಅಳಲು ತೋಡಿಕೊಂಡಿದ್ದಾರೆ.

  • ಶೀಘ್ರದಲ್ಲೇ ರಾಜ್ಯಸರ್ಕಾರದಿಂದ ಬಡವರಿಗೆ ಸಿಗಲಿದೆ ಗುಡ್‍ನ್ಯೂಸ್

    ಶೀಘ್ರದಲ್ಲೇ ರಾಜ್ಯಸರ್ಕಾರದಿಂದ ಬಡವರಿಗೆ ಸಿಗಲಿದೆ ಗುಡ್‍ನ್ಯೂಸ್

    ತುಮಕೂರು: ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕ ಕಲ್ಪಿಸಲು ಸರ್ಕಾರ ಚಿಂತನೆ ಮಾಡಿದ್ದು ಅಧಿಕೃತ ಆದೇಶವಷ್ಟೆ ಬಾಕಿ ಉಳಿದಿದೆ ಎಂದು ಸಚಿವ ಟಿಬಿ ಜಯಚಂದ್ರ ತುಮಕೂರಿನಲ್ಲಿ ಹೇಳಿದ್ದಾರೆ.

    ರಾಜ್ಯದ 10 ಲಕ್ಷ ಬಿಪಿಎಲ್ ಕುಟುಂಬಕ್ಕೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡಲು ನಿರ್ಧರಿಸಲಾಗಿದೆ. ಅಡುಗೆ ಸ್ಟೌವ್ ಮತ್ತು ಸಿಲಿಂಡರ್‍ನ್ನು ಉಚಿತವಾಗಿ ಬಡವರಿಗೆ ನೀಡಲಾಗುತ್ತಿದೆ.

    ಶೀಘ್ರದಲ್ಲಿ ಈ ಯೋಜನೆ ಜಾರಿಯಾಗಲಿದ್ದು, ಪ್ರತಿ ಕುಟುಂಬಕ್ಕೆ 3 ಸಾವಿರ ರೂ. ಖರ್ಚಾಗುತ್ತದೆ. ಇದಕ್ಕಾಗಿ ರಾಜ್ಯ ಸರ್ಕಾರ 300 ಕೋಟಿ ರೂ. ವ್ಯಯಿಸಲಿದೆ ಎಂದು ಸಚಿವ ಜಯಚಂದ್ರ ಅವರು ಹೇಳಿದರು.

    ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕ (ಎಲ್‍ಪಿಜಿ) ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರಂಭಿಸಲಿರುವ ಯೋಜನೆಗೆ `ಮುಖ್ಯಮಂತ್ರಿ ಅನಿಲ ಭಾಗ್ಯ’ ಎಂದು ಹೆಸರಿಡಲಾಗಿದೆ. ಕೇಂದ್ರ ಸರ್ಕಾರದ `ಉಜ್ವಲ’ ಯೋಜನೆಯಡಿ ಅನಿಲ ಸಂಪರ್ಕ ದೊರೆಯದ ಫಲಾನುಭವಿಗಳಿಗೆ ಅನಿಲ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗಿದೆ.

    ಉಜ್ವಲದಲ್ಲಿ ಕೇವಲ ಅನಿಲ ಸಂಪರ್ಕ ಮಾತ್ರ ನೀಡಲಾಗುತ್ತದೆ. ಆದರೆ, ರಾಜ್ಯ ಸರ್ಕಾರದ ಯೋಜನೆಯಲ್ಲಿ ಸ್ಟೌ ಕೂಡಾ ವಿತರಣೆಯಾಗಲಿದೆ. ಆದರೆ ಯಾವುದಾದರೂ ಒಂದು ಯೋಜನೆಯಡಿ ಮಾತ್ರ ಸೌಲಭ್ಯ ಪಡೆದುಕೊಳ್ಳಲು ಅವಕಾಶವಿದೆ. ಉಜ್ವಲದಲ್ಲಿ ಸಂಪರ್ಕ ಪಡೆಯಲು ಇಚ್ಚಿಸದವರು ರಾಜ್ಯ ಸರ್ಕಾರದ ಯೋಜನೆ ಆಯ್ಕೆ ಮಾಡಿಕೊಳ್ಳಬಹುದು ಎಂದು ಈ ಹಿಂದೆ ಆಹಾರ ಸಚಿವ ಯುಟಿ ಖಾದರ್ ತಿಳಿಸಿದ್ದರು.

  • ಸಿದ್ದರಾಮಯ್ಯ ಸರ್ಕಾರದಲ್ಲಿ ಮೇವು ಹಗರಣ- 22 ಕೋಟಿ ರೂ. ಲೂಟಿ, ಉಪಲೋಕಾಯುಕ್ತರ ತನಿಖೆಯಲ್ಲಿ ದೃಢ

    ಸಿದ್ದರಾಮಯ್ಯ ಸರ್ಕಾರದಲ್ಲಿ ಮೇವು ಹಗರಣ- 22 ಕೋಟಿ ರೂ. ಲೂಟಿ, ಉಪಲೋಕಾಯುಕ್ತರ ತನಿಖೆಯಲ್ಲಿ ದೃಢ

    ತುಮಕೂರು: ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ತುಮಕೂರು ಜಿಲ್ಲೆಯಲ್ಲೇ ಭಾರಿ ಮೇವು ಹಗರಣ ನಡೆದಿದೆ. ಮೇವು ವಿತರಣೆಯಲ್ಲಿ ಬರೊಬ್ಬರಿ 22 ಕೋಟಿ ರೂ. ಲೂಟಿ ಮಾಡಲಾಗಿದೆ ಎಂದು ಉಪ ಲೋಕಾಯುಕ್ತ ನ್ಯಾ.ಸುಭಾಷ್ ಅಡಿ ಅವರ ವರದಿಯಲ್ಲಿ ಬಹಿರಂಗವಾಗಿದೆ.

    ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ನಿವಾಸಿ ಮಲ್ಲಿಕಾರ್ಜುನ್ ಎನ್ನುವವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಉಪಲೋಕಾಯುಕ್ತ ನ್ಯಾ. ಅಡಿಯವರು ಬರಗಾಲದ ಹಿನ್ನಲೆಯಲ್ಲಿ ಪ್ರಾರಂಭಿಸಿದ ಗೋ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದರು. ಇಲ್ಲಿ ಭಾರಿ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಮೇವು ಖರೀದಿಸಿರುವ ರಸೀದಿಗಳಿಗೂ, ದಾಸ್ತಾನು ನಿರ್ವಹಣೆ ಪುಸ್ತಕದಲ್ಲಿರುವ ಮಾಹಿತಿಗೂ ವ್ಯತ್ಯಾಸ ಕಂಡುಬಂದಿದೆ.

    ತುಮಕೂರು ಜಿಲ್ಲೆಯ 7 ತಾಲೂಕುಗಳ ಗೋಶಾಲೆ ನಿರ್ವಹಣೆಗೆ ಬಿಡುಗಡೆ ಮಾಡಿದ 33.96 ಲಕ್ಷ ರೂ. ಅಕ್ರಮ ನಡೆದಿದೆ. ಅದೇ ರೀತಿ ಮೇವು ಖರೀದಿಯಲ್ಲೂ 21.98 ಕೋಟಿ ರೂ ದುರ್ಬಳಕೆ ಅಗಿದೆ. ಕಾನೂನು ಸಚಿವ ಟಿ.ಬಿ.ಜಯಚಂದ್ರರ ಸ್ವಕ್ಷೇತ್ರ ಶಿರಾದಲ್ಲಿ ಬರೋಬ್ಬರಿ 6.55 ಕೋಟಿ ರೂ. ಅಕ್ರಮವಾಗಿದೆ. ಉಳಿದಂತೆ ಗುಬ್ಬಿಯಲ್ಲಿ 1 ಕೋಟಿ, ಗೃಹಸಚಿವರ ಕ್ಷೇತ್ರ ಕೊರಟಗೆರೆಯಲ್ಲಿ 1.55 ಕೋಟಿ, ತಿಪಟೂರಲ್ಲಿ 2.99 ಕೋಟಿ, ತುರುವೇಕೆರೆಯಲ್ಲಿ 1.49 ಕೋಟಿ, ಪಾವಗಡದಲ್ಲಿ 3.10 ಕೋಟಿ, ಚಿಕ್ಕನಾಯಕನ ಹಳ್ಳಿಯಲ್ಲಿ 4.92 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಉಪಲೋಕಾಯುಕ್ತರ ವರದಿಯಲ್ಲಿ ಹೇಳಲಾಗಿದೆ.