Tag: TDS

  • Budget 2025: ಬಾಡಿಗೆ ಮೇಲಿನ TDS ಕಡಿತ ಮಿತಿ 6 ಲಕ್ಷಕ್ಕೆ ಏರಿಕೆ

    Budget 2025: ಬಾಡಿಗೆ ಮೇಲಿನ TDS ಕಡಿತ ಮಿತಿ 6 ಲಕ್ಷಕ್ಕೆ ಏರಿಕೆ

    – ಹಿರಿಯ ನಾಗರಿಕರಿಗೆ ಬಡ್ಡಿ ಮೇಲಿನ ತೆರಿಗೆ ವಿನಾಯಿತಿ ಮಿತಿ 1 ಲಕ್ಷಕ್ಕೆ ಹೆಚ್ಚಳ

    ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮಂಡಿಸಿದ 2025-26ನೇ ಸಾಲಿನ ಆಯವ್ಯಯದಲ್ಲಿ, ಬಾಡಿಗೆ ಪಾವತಿಗೆ ಟಿಡಿಎಸ್ (TDS) ಮಿತಿಯನ್ನು 6 ಲಕ್ಷ ರೂ. ಹೆಚ್ಚಿಸಲಾಗಿದೆ.

    ಬಾಡಿಗೆ ಪಾವತಿಗಳು, ಹಣ ರವಾನೆ, ಉನ್ನತ ಶಿಕ್ಷಣ, ಸರಕುಗಳ ಮಾರಾಟ ಮತ್ತು ಅಪರಾಧಿಗಳ ಅಪರಾಧಮುಕ್ತೀಕರಣಕ್ಕೆ ಸಂಬಂಧಿಸಿದಂತೆ ಅವರು ಹಲವಾರು ಪ್ರಮುಖ ಸುಧಾರಣೆಗಳನ್ನು ಬಜೆಟ್‌ನಲ್ಲಿ ಪರಿಚಯಿಸಿದ್ದಾರೆ. ಇದನ್ನೂ ಓದಿ: ಮಧ್ಯಮ ವರ್ಗಕ್ಕೆ ಮತ್ತೊಂದು ಸಿಹಿ – ಎರಡನೇ ಮನೆಗೂ ತೆರಿಗೆ ಪಾವತಿಯಿಂದ ವಿನಾಯಿತಿ

    ಹಿರಿಯ ನಾಗರಿಕರಿಗೆ ಗುಡ್‌ನ್ಯೂಸ್
    ಹಿರಿಯ ನಾಗರಿಕರಿಗೆ ಬಡ್ಡಿಯ ಮೇಲಿನ ತೆರಿಗೆ ವಿನಾಯಿತಿ ಮಿತಿಯನ್ನು 50,000 ರೂ. ನಿಂದ 1 ಲಕ್ಷಕ್ಕೆ ಹೆಚ್ಚಿಸಲಾಗಿದೆ.

    ಬಾಡಿಗೆ
    ಬಾಡಿಗೆ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿ 2.40 ಲಕ್ಷದಿಂದ 6 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಬಾಡಿಗೆದಾರರು ತಿಂಗಳಿಗೆ 20,000 ರೂ. ದರದಲ್ಲಿ ನೀಡಲಾಗುವ ಬಾಡಿಗೆಗೆ ಟಿಡಿಎಸ್ ಕಡಿತಗೊಳಿಸಬೇಕಾಗಿತ್ತು. ಆದರೆ, ಈಗ ಮಿತಿಯನ್ನು 50,000 ರೂ.ಗೆ ಹೆಚ್ಚಿಸಲಾಗಿದೆ.

    ಹಣ ರವಾನೆ
    ಆದಾಯ ಮೂಲದಿಂದ ತೆರಿಗೆ ಸಂಗ್ರಹ 7 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ವಿದೇಶದಿಂದ ರವಾನಿಸುವ ಹಣದ ಮೇಲಿನ ಟಿಡಿಎಸ್‌ ಕಡಿತಗೊಳಿಸಲಾಗಿದೆ. ಇದನ್ನೂ ಓದಿ: ಪ್ರವಾಸೋದ್ಯಮಕ್ಕೆ ಉತ್ತೇಜನ – ಹೋಂಸ್ಟೇ ನಿರ್ಮಾಣಕ್ಕೆ ಮುದ್ರಾ ಲೋನ್‌ ವಿಸ್ತರಣೆ

    ಉನ್ನತ ಶಿಕ್ಷಣ
    ಶೈಕ್ಷಣಿಕ ಉದ್ದೇಶಗಳಿಗಾಗಿ ಯಾರಾದರೂ ಬ್ಯಾಂಕಿನಿಂದ ಬ್ಯಾಂಕ್‌ನಿಂದ ಸಾಲ ಪಡೆದರೆ ಟಿಸಿಎಸ್ ಇರುವುದಿಲ್ಲ. ಹೆಚ್ಚಿನ ಟಿಡಿಎಸ್ ಕಡಿತದ ನಿಬಂಧನೆಗಳು ಪ್ಯಾನ್ ಅಲ್ಲದ ಪ್ರಕರಣಗಳಲ್ಲಿ ಮಾತ್ರ ಅನ್ವಯಿಸುತ್ತವೆ.

    ಸರಕುಗಳ ಮಾರಾಟ
    ಪ್ರಸ್ತುತ ಸರಕುಗಳ ಮಾರಾಟಕ್ಕೆ ಸಂಬಂಧಿಸಿದ ವಹಿವಾಟುಗಳಿಗೆ ಟಿಡಿಎಸ್ ಮತ್ತು ಟಿಸಿಎಸ್ ಎರಡೂ ಅನ್ವಯಿಸುತ್ತವೆ. ಟಿಸಿಎಸ್ ಅನ್ನು ಕೈಬಿಡುವ ಪ್ರಸ್ತಾಪ ಮಾಡಿದ್ದಾರೆ. ಇದನ್ನೂ ಓದಿ: Budget 2025 | ಉದ್ಯಮ ಆರಂಭಿಸುವ 5 ಲಕ್ಷ SC, ST ಮಹಿಳೆಯರಿಗೆ ಆರ್ಥಿಕ ನೆರವು: ನಿರ್ಮಲಾ ಸೀತಾರಾಮನ್‌

  • ಇಂದಿನಿಂದ ಹೊಸ ದುಬಾರಿ ಜೀವನ – ಎಲ್‍ಪಿಜಿ ಸಿಲಿಂಡರ್, ಹಾಲು, ಬ್ಯಾಂಕಿಂಗ್ ಚಾರ್ಜ್ ಹೆಚ್ಚಳ

    ಇಂದಿನಿಂದ ಹೊಸ ದುಬಾರಿ ಜೀವನ – ಎಲ್‍ಪಿಜಿ ಸಿಲಿಂಡರ್, ಹಾಲು, ಬ್ಯಾಂಕಿಂಗ್ ಚಾರ್ಜ್ ಹೆಚ್ಚಳ

    ನವದೆಹಲಿ: ಇಂದಿನಿಂದ ಹೊಸ ದುಬಾರಿ ಜೀವನಕ್ಕೆ ಜನರು ಹೊಂದಿಕೊಳ್ಳಬೇಕಿದೆ. ಕೊರೊನಾ ಲಾಕ್‍ಡೌನ್ ವೇಳೆ ನಿರುದ್ಯೋಗ ಸಮಸ್ಯೆ ಮತ್ತು ಆರ್ಥಿಕ ಸಂಕಷ್ಟದ ನಡುವೆ ಬೆಲೆ ಏರಿಕೆ ಹೊಡೆತ ಸಾರ್ವಜನಿಕರ ಮೇಲೆ ಬೀಳಲಿದೆ. ಹಾಲು, ಎಲ್‍ಪಿಜಿ ಸಿಲಿಂಡರ್ ಮತ್ತು ಬ್ಯಾಂಕ್ ಸೇವೆಗಳ ಶುಲ್ಕ ಇಂದಿನಿಂದ ಏರಿಕೆಯಾಗಲಿದೆ.

    ದುಬಾರಿ ಆಯ್ತು ಅಮೂಲ್ ಹಾಲು:
    ಅಮೂಲ್ ಹಾಲು ಇಂದಿನಿಂದ ತನ್ನ ಬೆಲೆಯನ್ನ ಹೆಚ್ಚಿಸಿಕೊಂಡಿದೆ. ದೆಹಲಿ, ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಅಮೂಲ್ ಉತ್ಪನ್ನಗಳು ತುಟ್ಟಿಯಾಗಲಿವೆ. ಪ್ರತಿ ಲೀಟರ್ ಹಾಲಿನ ಮೇಲೆ ಎರಡು ರೂಪಾಯಿಯನ್ನ ಅಮೂಲ್ ಹೆಚ್ಚಳ ಮಾಡಿಕೊಂಡಿದೆ. ಅಮೂಲ್ ಒಂದೂವರೆ ವರ್ಷದ ಬಳಿಕ ತನ್ನ ಉತ್ಪನ್ನಗಳ ಮೇಲಿನ ಬೆಲೆಯನ್ನು ಏರಿಕೆ ಮಾಡಿಕೊಂಡಿದೆ. ಬುಧವಾರವೇ ಅಮೂಲ್ ತನ್ನ ಬೆಲೆ ಏರಿಕೆಯ ಮಾಹಿತಿಯನ್ನು ನೀಡಿತ್ತು.

    ಇಂದಿನಿಂದ ಅಮೂಲ್ ಗೋಲ್ಡ್ 58 ರೂ. ಪ್ರತಿ ಲೀಟರ್, ಅಮೂಕ್ ತಾಜಾ 46 ರೂ. ಪ್ರತಿ ಲೀ., ಅಮೂಲ್ ಶಕ್ತಿ 52 ರೂ.ಪ್ರತಿ ಲೀಟರ್ ಗೆ ಗ್ರಾಹಕರಿಗೆ ಲಭ್ಯವಾಗಲಿದೆ. ಅಮೂಲ್ ಬಳಿಕ ಇನ್ನುಳಿದ ಹಾಲು ಉತ್ಪಾದಕ ಕಂಪನಿಗಳು ಬೆಲೆ ಏರಿಕೆ ಮಾಡುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ.

    ಬ್ಯಾಂಕ್ ಚಾರ್ಜ್ ಹೆಚ್ಚಳ:
    ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಎಸ್‍ಬಿಐ (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ)ತನ್ನ ಸೇವಾ ಶುಲ್ಕವನ್ನು ಹೆಚ್ಚಿಸಿಕೊಂಡಿದೆ. ಈಗ ಗ್ರಾಹಕರು ಎಟಿಎಂನಿಂದ ತಿಂಗಳಿಗೆ ನಾಲ್ಕು ಬಾರಿ ಮಾತ್ರ ಉಚಿತವಾಗಿ ಹಣ ಡ್ರಾ ಮಾಡಬಹುದು. ನಾಲ್ಕಕ್ಕಿಂತ ಹೆಚ್ಚಿನ ವಹಿವಾಟು ಮೇಲೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಪ್ರತಿ ವಹಿವಾಟಿನ ಮೇಲೆ 15 ರೂ.ಶುಲ್ಕವನ್ನು ಗ್ರಾಹಕರು ಪಾವತಿಸಬೇಕು.

    ಚೆಕ್ ಬಳಕೆ ಮೇಲೆಯೂ ಶುಲ್ಕ: ಎಟಿಎಂ ಮಾತ್ರ ಅಲ್ಲದೇ ಚೆಕ್ ಬಳಕೆಯ ಮೇಲೆಯೂ ಎಸ್‍ಬಿಐ ಶುಲ್ಕ ವಿಧಿಸುತ್ತಿದೆ. ವಿತ್ತಿಯ ವರ್ಷದಲ್ಲಿ ಒಬ್ಬ ಗ್ರಾಹಕ 10 ಚೆಕ್ ಗಳ ಬಳಕೆಗೆ ಯಾವುದೇ ಶುಲ್ಕ ಪಾವತಿಸಬೇಕಿಲ್ಲ. 10ಕ್ಕಿಂತ ಹೆಚ್ಚಾದ್ರೆ ಬ್ಯಾಂಕಿನ ಶುಲ್ಕ ಪಾವತಿಸಬೇಕು. ಎಸ್‍ಬಿಐ ಜೊತೆ ಆಕ್ಸಿಸ್, ಐಡಿಬಿಐ ಬ್ಯಾಂಕ್ ಸಹ ಎಸ್‍ಎಂಎಸ್, ಲಾಕರ್ ಚಾರ್ಜ್ ಹೆಚ್ಚಿಸಿಕೊಂಡಿವೆ. ಇಂದಿನಿಂದಲೇ ಈ ಹೊಸ ಶುಲ್ಕಗಳು ಅನ್ವಯವಾಗಲಿವೆ.

    ಟಿಡಿಎಸ್ ಕಟ್: ಕಳೆದ ಎರಡು ವರ್ಷಗಳಿಂದ ಐಟಿಆರ್ ಪಾವತಿಸದ ಜನರ ಟಿಡಿಎಸ್ ಜುಲೈನಿಂದ ಹೆಚ್ಚು ಕಟ್ ಆಗಲಿದೆ. 50 ಸಾವಿರ ರೂ.ಕ್ಕಿಂತ ಹೆಚ್ಚು ಟಿಡಿಎಸ್ ಕಟ್ ಆಗುವರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ.

    ಎಲ್‍ಪಿಜಿಯೂ ತುಟ್ಟಿಯಾಯ್ತು:
    ಇದೆಲ್ಲದರ ಜೊತೆ ಎಲ್‍ಪಿಜಿ ಸಿಲಿಂಡರ್ ಬೆಲೆಯೂ ಇಂದಿನಿಂದ ಹೆಚ್ಚಳವಾಗುತ್ತಿದೆ. ಸಬ್ಸಿಡಿ ರಹಿತ ಪ್ರತಿ ಸಿಲಿಂಡರ್ ಮೇಲೆ 25 ರೂ. ಹೆಚ್ಚು ನೀಡಬೇಕು. ಗೃಹ ಬಳಕೆಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 834 ರೂ.ಗೆ ತಲುಪಿದೆ. ಕೋಲ್ಕತ್ತಾದಲ್ಲಿ 861 ರೂಪಾಯಿ, ಬೆಂಗಳೂರಿನಲ್ಲಿ 812 ರೂ.ಇದೆ. ಇನ್ನೂ 19 ಕೆಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ದೆಹಲಿಯಲ್ಲಿ 1,550 ರೂ.ಗೆ ಏರಿಕೆಯಾಗಿದೆ. ಇದನ್ನೂ ಓದಿ: ಮೋದಿ ಸರ್ಕಾರದಿಂದ ‘ಸಾಲ’ ರೂಪದ ಸಹಾಯ

    ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಜೊತೆ ಸದ್ಯ ಹೊಸ ಹೊಸ ಶುಲ್ಕಗಳು ಜನ ಸಾಮನ್ಯರ ಜೇಬಿಗೆ ಹಂತ ಹಂತವಾಗಿ ಕತ್ತರಿ ಹಾಕಲಿವೆ. ಕಳೆದ ತಿಂಗಳಿನಲ್ಲಿ ಒಟ್ಟು 16 ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಕಂಡಿದೆ. ಇದನ್ನೂ ಓದಿ: ಮೊದಲು ಲಸಿಕೆ, ನಂತರ ಮನ್ ಕೀ ಬಾತ್: ರಾಹುಲ್ ಕಿಡಿ

  • ಮುಂದಿನ ವರ್ಷದ ಮಾರ್ಚ್ ವರೆಗೆ ಶೇ.25 ಟಿಡಿಎಸ್ ಕಡಿತ

    ಮುಂದಿನ ವರ್ಷದ ಮಾರ್ಚ್ ವರೆಗೆ ಶೇ.25 ಟಿಡಿಎಸ್ ಕಡಿತ

    ನವದೆಹಲಿ: ಸ್ವಾವಲಂಬಿ ಭಾರತಕ್ಕಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಂದು ಹಲವು ಯೋಜನೆಗಳನ್ನ ಘೋಷಿಸಿ, ಅನುದಾನ ಬಿಡುಗಡೆ ಮಾಡಿದ್ದಾರೆ. ಮುಂದಿನ ವರ್ಷದ ಮಾರ್ಚ್‍ವರೆಗೆ ಟಿಡಿಎಸ್ ಮತ್ತು ಟಿಸಿಎಸ್ ಕಡಿತವನ್ನು ಸದ್ಯ ಇರೋ ದರದಲ್ಲಿ ಶೇ.25ರಷ್ಟು ಕಡಿತಗೊಳಿಸಲಾಗುತ್ತದೆ.

    ಪ್ರಫೋಷನಲ್ ಫೀ, ಕ್ಯಾಂಟ್ರಾಕ್ಟ್ ಪೇಮೆಂಟ್, ಬಡ್ಡಿ, ಬಾಡಿಗೆ, ಡಿವಿಡೆಂಡ್, ಕಮಿಷನ್, ಬ್ರೋಕರೇಜ್ ಸೇರಿದಂತೆ ಎಲ್ಲವೂ ಟಿಡಿಎಸ್ ಕಡಿತಕ್ಕೆ ಅನ್ವಯವಾಗಲಿದೆ. ಈ ಕಡಿತದ ಅನ್ವಯ ನಾಳೆಯಿಂದ ಮಾರ್ಚ್ 31, 2021ರವರೆಗೆ ಇರಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 50 ಸಾವಿರ ಕೋಟಿ ಹೊರೆ ಆಗಲಿದೆ.

    ಇನ್‍ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಗೆ ಈ ಮೊದಲು ಜುಲೈ 31 ರಿಂದ ಅಕ್ಟೋಬರ್ 31ರವರೆಗೆ ದಿನಾಂಕ ನಿಗದಿಯಾಗಿತ್ತು. ಆದರೆ ಈಗ ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಟ್ಯಾಕ್ಸ್ ಆಡಿಟ್ ಅವಧಿಯನ್ನು ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ. ವಿವಾದ್ ಸೇ ವಿಶ್ವಾಸ್ ಯೋಜನೆಯಡಿಯಲ್ಲಿ ಹೆಚ್ಚುವರಿ ಮೊತ್ತವಿಲ್ಲದೇ ಪಾವತಿಸಲು ಅವಕಾಶ ನೀಡಿದ್ದು, 31ನೇ ಡಿಸೆಂಬರ್ 2020ರವರೆಗೆ ಅವಧಿ ವಿಸ್ತರಿಸಲಾಗಿದೆ.