Tag: Teacher Award

  • ಹಿಜಬ್ ವಿವಾದ ಎಫೆಕ್ಟ್: ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ

    ಹಿಜಬ್ ವಿವಾದ ಎಫೆಕ್ಟ್: ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ

    ಉಡುಪಿ: ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾದ ಪ್ರಾಂಶುಪಾಲನಿಗೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿಗೆ ಆಕ್ಷೇಪ ವ್ಯಕ್ತವಾಗಿದ್ದು, ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ.

    ಇಂದು (ಸೆ.5) ಶಿಕ್ಷಕರ ದಿನಾಚರಣೆ (Teachers Day) ಹಿನ್ನೆಲೆ ವಿವಿಧ ಶಿಕ್ಷಕರಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೇ ಹಿನ್ನೆಲೆಯಲ್ಲಿ ಕುಂದಾಪುರ (Kundapura) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ನೀಡುವ ಕುರಿತು ಸರ್ಕಾರ ತಡೆ ಹಿಡಿದಿದೆ.ಇದನ್ನೂ ಓದಿ: 2023-24ರಲ್ಲಿ ಅತಿಹೆಚ್ಚು ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳು ಇವರೇ – ಕಿಂಗ್‌ ಕೊಹ್ಲಿ, ಬಾದ್‌ ಶಾಗೆ ಅಗ್ರಸ್ಥಾನ

    ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ (Hijab Contraversy) ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿರುವಾಗ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಇದೀಗ ಕಾಂಗ್ರೆಸ್ (Congress) ಸರ್ಕಾರ ಇದಕ್ಕೆ ತಡೆ ನೀಡಿದೆ.

    ಏನಿದರ ಹಿನ್ನೆಲೆ:
    ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದ್ದು, ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಕಾಲೇಜು ಗೇಟ್ ಬಳಿ ನಿಲ್ಲಿಸಿದ್ದರು. ಆ ಫೋಟೊ ವೈರಲ್ ಆಗಿತ್ತು. ಪ್ರಾಂಶುಪಾಲರ ಪ್ರಶಸ್ತಿ ಹಿಂಪಡೆಯುವಂತೆ ಕೆಲ ಪ್ರಗತಿಪರರು ಒತ್ತಡ ಹಾಕಿದ್ದರು. ಒತ್ತಡಕ್ಕೆ ಮಣಿದ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ.ಇದನ್ನೂ ಓದಿ: ಅಮೆರಿಕದ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – ಇಬ್ಬರು ಶಿಕ್ಷಕರು ಸೇರಿ ನಾಲ್ವರು ಸಾವು

  • ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಲಿಂಗಸುಗೂರಿನ ಶಿಕ್ಷಕ ಚಂದ್ರು ಆಯ್ಕೆ

    ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಲಿಂಗಸುಗೂರಿನ ಶಿಕ್ಷಕ ಚಂದ್ರು ಆಯ್ಕೆ

    ರಾಯಚೂರು: 2021-22ರ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಬೆಂಡೋಣಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಜ್ಞಾನ ಶಿಕ್ಷಕ ಚಂದ್ರು ವೈ.ಎ ಆಯ್ಕೆಯಾಗಿದ್ದಾರೆ.

    ಅತ್ಯಂತ ಕಡಿಮೆ ಸೌಲಭ್ಯಗಳನ್ನ ಹೊಂದಿರುವ ಗ್ರಾಮೀಣ ಭಾಗದ ಶಾಲೆಯಲ್ಲಿ ತಮ್ಮದೇ ಆದ ವಿಶಿಷ್ಟ ಶೈಲಿಯ ಬೋಧನ ಕ್ರಮದಿಂದ ಮೆಚ್ಚುಗೆಗಳಿಸಿದ್ದ ಶಿಕ್ಷಕ ಚಂದ್ರು ವೈ.ಎ ಈಗ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ನಾಲಗೆ ಬಿದ್ದು ಹೋಗಿದೆ: ದಿನೇಶ್ ಗುಂಡೂರಾ

    ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು, ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನ ಆಯ್ಕೆ ಮಾಡಲಾಗಿದೆ. ಮಾತೆ ಸಾವಿತ್ರಿಬಾಯಿ ಪುಲೆ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಇದನ್ನೂ ಓದಿ: ಯೋಗಿ ಲಂಕೆ ಅಡ್ಡದಲ್ಲಿ ಕರಾವಳಿ ಬೆಡಗಿ ಕಾವ್ಯಾ ಶೆಟ್ಟಿ ಸಖತ್ ಬೋಲ್ಡ್

    ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರುಗಳಿಗೆ ತಲಾ 10 ಸಾವಿರದಂತೆ 3 ಲಕ್ಷ, 10 ಸಾವಿರ ರೂಪಾಯಿ ನಗದು ಪುರಸ್ಕಾರ ಹಾಗೂ ಅವರ ಶಾಲೆಗಳ ಅಭಿವೃದ್ಧಿಗೆ ತಲಾ 50 ಸಾವಿರದಂತೆ, 15 ಲಕ್ಷ, 50 ಸಾವಿರ ರೂಪಾಯಿಯನ್ನ ನೀಡಲಾಗುತ್ತಿದೆ. ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಿಂದ ವೆಚ್ಚ ಭರಿಸಲಾಗುತ್ತದೆ. ಶಿಕ್ಷಕರ ಆಯ್ಕೆ ಅಂತಿಮಗೊಳಿಸಿ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎಚ್.ಎಸ್.ಶಿವಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.