Tag: teacher

  • ಪ್ಲಾಸ್ಟಿಕ್ ಮುಕ್ತ ಶಾಲೆ, ಗ್ರಾಮಕ್ಕೆ ಪಣ – ಹಳೆ ಬಟ್ಟೆಯಿಂದಲೇ ಬ್ಯಾಗ್ ತಯಾರಿ

    ಪ್ಲಾಸ್ಟಿಕ್ ಮುಕ್ತ ಶಾಲೆ, ಗ್ರಾಮಕ್ಕೆ ಪಣ – ಹಳೆ ಬಟ್ಟೆಯಿಂದಲೇ ಬ್ಯಾಗ್ ತಯಾರಿ

    – ಔರಾದ್‍ನ ಶಿಕ್ಷಕ ವೀರಕುಮಾರ್ ಇವತ್ತಿನ ಪಬ್ಲಿಕ್ ಹೀರೋ

    ಬೀದರ್: ದೇಶಾದ್ಯಂತ ಏಕ ಬಳಕೆಯ (ಸಿಂಗಲ್ ಯೂಸ್) ಪ್ಲಾಸ್ಟಿಕ್ ನಿಷೇಧಕ್ಕೆ ಜಾಗೃತಿ ನಡೆಯುತ್ತಿದೆ. ಕೆಲವು ಕಡೆ ಜಾರಿಯೂ ಆಗುತ್ತಿದೆ. ಇದಕ್ಕೆ ಕೈಜೋಡಿಸಿರೋ ನಮ್ಮ ಇವತ್ತಿನ ಪಬ್ಲಿಕ್ ಹೀರೋ ಔರಾದ್‍ನ ಠಾಣಾಕುಸನೂರು ಗ್ರಾಮದ ಶಿಕ್ಷಕ ವೀರಕುಮಾರ್. ಪ್ಲಾಸ್ಟಿಕ್ ಬಳಕೆಯ ಕುರಿತು ಶಾಲೆಯಿಂದಲೇ ಮಕ್ಕಳಿಗೆ ಅರಿವು ಮೂಡಿಸುತ್ತಿದ್ದು, ಇದರಲ್ಲಿ ಯಶಸ್ವಿಯೂ ಆಗಿದ್ದಾರೆ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಠಾಣಾಕುಸನೂರು ಗ್ರಾಮದಲ್ಲಿರುವ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ನ ಆಂಗ್ಲ ಮಾದ್ಯಮ ಶಿಕ್ಷಕರಾದ ವೀರಕುಮಾರ್ ಮಂಠಾಳಕರ್ ಕ್ರಾಂತಿಕಾರಿ ಬದಲಾವಣೆಯನ್ನು ತಂದಿದ್ದಾರೆ. 7ನೇಯ ತರಗತಿ ಪಠ್ಯದಲ್ಲಿರುವ “ಅವೈಂಡ್ ಪ್ಲಾಸ್ಟಿಕ್” ಎಂಬ ಪಾಠದಿಂದ ಪ್ರೇರಣೆ ಪಡೆದ ಶಿಕ್ಷಕರು, 400 ವಿದ್ಯಾರ್ಥಿಗಳ ಮೇಲೆ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ.

    ಪ್ರತಿದಿನ ವಿದ್ಯಾರ್ಥಿಗಳು ಶಾಲೆಗೆ ಹೋಗಬೇಕಾದ್ರೂ, ತರಕಾರಿ, ಹಣ್ಣ ಹಂಪಲು ತರಲು ತಾವೇ ಕೈಯಾರ ಮಾಡಿಕೊಂಡಿರುವ ಬಟ್ಟೆ ಚೀಲವನ್ನೆ ಬಳಕೆ ಮಾಡುತ್ತಿದ್ದಾರೆ. 1 ರಿಂದ 7 ತರಗತಿವರೆಗೆ ಈ ಯೋಜನೆ ಅನುಷ್ಠಾನ ಮಾಡಿ ಯಶಸ್ವಿಯಾಗಿರೋ ಮೇಷ್ಟ್ರು ವೀರಕುಮಾರ್, ಈಗ ಗ್ರಾಮದಲ್ಲೂ ಆಂದೋಲನಕ್ಕೆ ಮುಂದಾಗಿದ್ದಾರೆ. 100 ಗ್ರಾಮಸ್ಥರಿಗೆ ಮಕ್ಕಳೇ ತಯಾರು ಮಾಡಿರೋ ಬಟ್ಟೆ ಚೀಲವನ್ನು ಉಚಿತವಾಗಿ ನೀಡಿದ್ದಾರೆ.

    ಪ್ಲಾಸ್ಟಿಕ್ ವಾಟರ್ ಬಾಟೆಲ್, ಪ್ಲಾಸ್ಟಿಕ್ ಕವರ್‍ನಲ್ಲಿರೋ ಸ್ನ್ಯಾಕ್ಸ್ ತಿನ್ನದಂತೆ ಮಕ್ಕಳಿಗೆ ಮೇಷ್ಟ್ರು ಸೂಚಿಸಿದ್ದು, ಇದು ಕಾರ್ಯಗತವೂ ಆಗುತ್ತಿದೆ. ಈ ಸ್ಟೋರಿಯನ್ನು ನೋಡೋ ಶಿಕ್ಷಕರೂ ಕೂಡ ತಮ್ಮ ಶಾಲೆಗಳಲ್ಲಿ ಅನುಷ್ಠಾನ ತಂದರೆ ಪ್ಲಾಸ್ಟಿಕ್ ಮುಕ್ತ ಜಾಗೃತಿ ಮತ್ತಷ್ಟು ಪರಿಣಾಮಕಾರಿಯಾಗಲಿದೆ.

  • ಮದ್ಯಪಾನ ಮಾಡಿಸಿ ಅನೇಕ ವಿದ್ಯಾರ್ಥಿಗಳೊಂದಿಗೆ ಮಾಜಿ ಶಿಕ್ಷಕಿ ಸೆಕ್ಸ್

    ಮದ್ಯಪಾನ ಮಾಡಿಸಿ ಅನೇಕ ವಿದ್ಯಾರ್ಥಿಗಳೊಂದಿಗೆ ಮಾಜಿ ಶಿಕ್ಷಕಿ ಸೆಕ್ಸ್

    – ಪ್ರೌಢ ಶಾಲೆಯ ಶಿಕ್ಷಕಿಯಿಂದ ನೀಚ ಕೃತ್ಯ

    ಅಟ್ಲಾಂಟಾ: ಶಾಲೆಯ ಮಾಜಿ ಉದ್ಯೋಗಿಯೊಬ್ಬಳು ಅನೇಕ ವಿದ್ಯಾರ್ಥಿಗಳೊಂದಿಗೆ ಸೆಕ್ಸ್ ಮಾಡಿದಲ್ಲದೇ ಅವರಿಗೆ ಮದ್ಯಪಾನ ಮಾಡಿಸಿರುವ ಘಟನೆ  ಅಮೆರಿಕದ ಅಟ್ಲಾಂಟಾನಲ್ಲಿ ನಡೆದಿದೆ.

    ಆರೋಪಿಯನ್ನು ಬೆತ್ಲೆಹೆಮ್ ನಿವಾಸಿ ಹೀದರ್ ಕಿಶುನ್ (35) ಎಂದು ಗುರುತಿಸಲಾಗಿದೆ. ಈಕೆ ಜಾರ್ಜಿಯಾ ಪ್ರೌಢ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದಳು. ಈಕೆ ಅನೇಕ ವಿದ್ಯಾರ್ಥಿಗಳೊಂದಿಗೆ ಸೆಕ್ಸ್ ಮಾಡಿದ್ದಾಳೆ. ಅಲ್ಲದೇ ಅವರಿಗೆ ಮದ್ಯಪಾನ ಕೂಡ ಮಾಡಿಸಿದ್ದಾಳೆ. ಹೀಗಾಗಿ ಈಕೆಯ ಮೇಲೆ ಅಪ್ರಾಪ್ತ ಮಕ್ಕಳಿಗೆ ಕಿರುಕುಳ, ಮದ್ಯಪಾನ ಮಾಡಿಸಿದ ಪ್ರಕರಣ ಸೇರಿದಂತೆ ಅನೇಕ ಕೇಸ್‍ಗಳು ದಾಖಲಾಗಿವೆ.

    ಸ್ಥಳೀಯ ಶಾಲೆಯ ವಿದ್ಯಾರ್ಥಿಗಳ ಜೊತೆ ತನ್ನ ಮನೆಯಲ್ಲಿ ಇದ್ದಾಗಲೇ ಆರೋಪಿ ಕಿಶುನ್‍ನನ್ನು ಕಳೆದ ಶುಕ್ರವಾರ ಬಂಧಿಸಲಾಗಿದೆ. ಈಕೆ ಜಾರ್ಜಿಯಾ ಪ್ರೌಢ ಶಾಲೆಯಲ್ಲಿ ಪ್ಯಾರಾ ಪ್ರೊಫೆಷನಲ್ ಆಗಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.

    ಆರೋಪಿ ಕಿಶುನ್ ಅನೇಕ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾಳೆ. ಅಲ್ಲದೇ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿ ಮದ್ಯಪಾನ ಮಾಡಿಸಿದ್ದಾಳೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕಿಶುನ್ ಈ ಘಟನೆಯ ಸಮಯದಲ್ಲಿ ಬ್ಯಾರೊ ಕೌಂಟಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ಅವಳು ಕೆಲಸ ಮಾಡಿದ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾಳೆ ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ. ಆರೋಪಿಯನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಈ ಹಿಂದೆ ಕಿಶುನ್ ಗ್ವಿನ್ನೆಟ್ ಕೌಂಟಿ ಸಾರ್ವಜನಿಕ ಶಾಲೆಗಳಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು ಎಂದು ಅಧಿಕಾರಿ ತಿಳಿಸಿದ್ದಾರೆ.

    ಪೊಲೀಸರು ಆರೋಪಿ ಕಿಶುನ್‍ನನ್ನು ಶುಕ್ರವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅಲ್ಲಿ ಆಕೆಯ ಜಾಮೀನು ಅರ್ಜಿಯನ್ನು ನಿರಾಕರಿಸಲಾಗಿದೆ. ಸದ್ಯಕ್ಕೆ ಆಕೆಯನ್ನು ಬ್ಯಾರೊ ಕೌಂಟಿ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ.

  • ಶಿಕ್ಷಕನ ರೊಮ್ಯಾಂಟಿಕ್ ಮಾತಿಗೆ ಬಿತ್ತು ಗೂಸಾ

    ಶಿಕ್ಷಕನ ರೊಮ್ಯಾಂಟಿಕ್ ಮಾತಿಗೆ ಬಿತ್ತು ಗೂಸಾ

    ತುಮಕೂರು: ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಶಿಕ್ಷಕನೊಬ್ಬನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.

    ತುಮಕೂರು ತಾಲೂಕಿನ ಕೈದಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿರುವ ಯತೀಶ್ ಕುಮಾರ್ ಎಂಬವರು ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದರು ಎಂಬ ಆರೋಪ ಕೇಳಿ ಬಂದಿದೆ.

    ವಿದ್ಯಾರ್ಥಿನಿಯರನ್ನು ಕರೆಸಿ ದೇಹದಲ್ಲಿ ಕೂದಲುಗಳು ಎಲ್ಲಿ ಬೆಳೆಯುತ್ತದೆ ಎಂದು ವಿಚಿತ್ರವಾಗಿ ಯತೀಶ್ ಕುಮಾರ್ ಪ್ರಶ್ನೆ ಕೇಳಿದ್ದರು ಎನ್ನಲಾಗಿದೆ. ಕೂದಲು ಬೆಳೆಯುತ್ತಿದ್ದಾಗ ನಿಮಗೆ ಏನೋ ಬೇಕು ಅನಿಸುತ್ತದೆ. ಆ ಔಷಧಿ ನನ್ನ ಬಳಿ ಇದೆ ಎಂದು ರೊಮ್ಯಾಂಟಿಕ್ಕಾಗಿ ಶಿಕ್ಷಕ ಹೇಳುತ್ತಿದ್ದರು ಎಂದು ಹೇಳಲಾಗುತ್ತಿದೆ.

    ವಿಜ್ಞಾನ ಶಿಕ್ಷಕನ ಪೋಲಿ ಮಾತುಗಳಿಂದ ವಿದ್ಯಾರ್ಥಿನಿಯರು ಪ್ರತಿದಿನ ಮುಜುಗರಕ್ಕೆ ಒಳಗಾಗುತಿದ್ದರು. ಇತ್ತ ಶಿಕ್ಷಕರಿಗೆ ಪ್ರತಿರೋಧ ಒಡ್ಡಲಾಗದೇ, ಅತ್ತ ಮನೆಯವರಿಗೂ ಹೇಳಲಾಗಿದೆ ಇಕ್ಕಟ್ಟಿನಲ್ಲಿ ಬಾಲಕಿಯರು ಸಿಲುಕಿದ್ದರು. ಹಲವು ಬಾರಿ ಸೌಜನ್ಯಯುತವಾಗಿಯೇ ಶಿಕ್ಷಕನ ನಡೆಯನ್ನು ಖಂಡಿಸಿದ್ದರು. ಆದರೂ ಶಿಕ್ಷಕ ಪೋಲಿ ಆಟ ಮುಂದುವರಿಸಿದ್ದರು.

    ಕೊನೆಗೆ ವಿಧಿಯಿಲ್ಲದೆ ವಿದ್ಯಾರ್ಥಿನಿಯರು ಪೋಷಕರಿಗೆ ವಿಚಾರ ಮುಟ್ಟಿಸಿದ್ದಾರೆ. ಹೀಗಾಗಿ ಪೋಷಕರು ಶಾಲೆಗೆ ಬಂದು ಶಿಕ್ಷಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಒಂದು ಹಂತದಲ್ಲಿ ಮಹಿಳೆಯರು ಹಿಗ್ಗಾಮುಗ್ಗ ಬಡಿದರು.

    ಈ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪರಿಸ್ಥಿತಿಯನ್ನು ಹತೋಟಿಗೆ ತಂದರು. ಅಲ್ಲದೆ ಪೋಷಕರ ಮಾತುಗಳನ್ನು ಆಲಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

  • ಪಕ್ಕೆಲುಬು ವಿಡಿಯೋ ಆಯ್ತು – ಈಗ ನಪುಂಸಕ ವಿಡಿಯೋ ವೈರಲ್

    ಪಕ್ಕೆಲುಬು ವಿಡಿಯೋ ಆಯ್ತು – ಈಗ ನಪುಂಸಕ ವಿಡಿಯೋ ವೈರಲ್

    ಬೆಂಗಳೂರು: ಇತ್ತೀಚೆಗಷ್ಟೆ ಪಕ್ಕೆಲುಬು ಎನ್ನುವ ಪದವನ್ನು ವಿದ್ಯಾರ್ಥಿಯಿಂದ ಪದೇ ಪದೇ ಹೇಳಿಸಿ ಅದನ್ನು ವಿಡಿಯೋ ಮಾಡಿ ಶಿಕ್ಷಕನೊಬ್ಬ ವೈರಲ್ ಮಾಡಿದ್ದನು. ಆ ವಿಡಿಯೋ ಗಂಭೀರವಾಗಿ ಪರಿಗಣಿಸಿದ್ದ ಸಚಿವ ಸುರೇಶ್ ಕುಮಾರ್ ಶಿಕ್ಷಕನನ್ನು ಅಮಾನತು ಮಾಡಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂತಹದ್ದೇ ವಿಡಿಯೋ ವೈರಲ್ ಆಗಿದೆ.

    ಸರ್ಕಾರಿ ಶಾಲೆಯೊಂದರಲ್ಲಿ ಮಗುವಿನ ಕೈಯಲ್ಲಿ ಶಿಕ್ಷಕ ನಪುಂಸಕ ಲಿಂಗ ಎಂದು ಉಚ್ಛಾರಣೆ ಮಾಡಿಸುವ ವಿಡಿಯೋ ವೈರಲ್ ಆಗಿದೆ. ಸುಮಾರು 2.12 ನಿಮಿಷದ ವಿಡಿಯೋದಲ್ಲಿ, ಲಿಂಗಗಳ ಉಚ್ಛಾರಣೆಯನ್ನು ಪದೇ ಪದೇ ಹೇಳಿಸಿ ಅಪಮಾನ ಮಾಡುವಂತೆ ವಿಡಿಯೋ ಮಾಡಿ ಶಿಕ್ಷಕ ವೈರಲ್ ಮಾಡಿದ್ದಾನೆ. ಇದನ್ನೂ ಓದಿ: ‘ಪಕ್ಕೆಲುಬು’ ವಿಡಿಯೋ ವೈರಲ್ ಮಾಡಿದ್ದ ಶಿಕ್ಷಕ ಅಮಾನತು

    ಸದ್ಯ ಆ ಶಾಲೆ ಯಾವುದು, ಯಾವ ಜಿಲ್ಲೆ, ತಾಲೂಕು ಎಂಬ ಮಾಹಿತಿ ಲಭ್ಯವಾಗಿಲ್ಲ. ಈಗಾಗಲೇ ಇಂತಹ ವಿಡಿಯೋ ಮಾಡಬಾರದು ಎಂದು ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಹೀಗಿದ್ದರೂ ಈಗ ವಿಡಿಯೋ ವೈರಲ್ ಆಗಿದೆ. ಇದನ್ನೂ ಓದಿ: ಪಕ್ಕೆಲುಬು ಶಿಕ್ಷಕನ ‘ಪಕ್ಕೆಲುಬು’ ಮುರಿದ ಸಚಿವ ಸುರೇಶ್ ಕುಮಾರ್

  • ‘ಪಕ್ಕೆಲುಬು’ ವಿಡಿಯೋ ವೈರಲ್ ಮಾಡಿದ್ದ ಶಿಕ್ಷಕ ಅಮಾನತು

    ‘ಪಕ್ಕೆಲುಬು’ ವಿಡಿಯೋ ವೈರಲ್ ಮಾಡಿದ್ದ ಶಿಕ್ಷಕ ಅಮಾನತು

    ಬಳ್ಳಾರಿ: ಶಾಲೆಯ ಮುಗ್ಧ ಬಾಲಕನಿಗೆ ಪಕ್ಕೆಲುಬು ಶಬ್ದವನ್ನು ಉಚ್ಚರಿಸುವಂತೆ ಹೇಳಿಕೊಟ್ಟು, ಬಾಲಕ ಅದನ್ನು ತಪ್ಪು ತಪ್ಪಾಗಿ ಹೇಳುವ ವಿಡಿಯೋ ಮಾಡಿ ವೈರಲ್ ಮಾಡಿದ್ದ ಶಾಲಾ ಶಿಕ್ಷಕ ಕೊನೆಗೂ ಪತ್ತೆಯಾಗಿದ್ದಾನೆ.

    ಹೌದು. ಶಾಲಾ ಬಾಲಕನೋರ್ವ ತೊದಲು ತೊದಲಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಟಿ ಚಂದ್ರಶೇಖರಪ್ಪಾ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದರು. ಹೀಗಾಗಿ ಶಿಕ್ಷಕನನ್ನು ತಾಲೂಕಿನ ಶಿಕ್ಷಣಾಧಿಕಾರಿ ಅಮಾನತು ಮಾಡಿದ್ದಾರೆ.

    ಇತ್ತ ವಿಡಿಯೋ ವೈರಲ್ ಆಗುತಿದ್ದಂತೆಯೇ ಶಿಕ್ಷಣ ಸಚಿವರು ಎಚ್ಚೆತ್ತುಕೊಂಡು ಕೂಡಲೇ ಶಿಕ್ಷಕನ ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಲು ಇಲಾಖೆಗೆ ಸೂಚನೆ ನೀಡಿದ್ದರು. ಸಚಿವರು ನೀಡಿದ್ದ ಆದೇಶದ ಪ್ರತಿ ಸಹ ವೈರಲ್ ಆಗಿತ್ತು. ಹೀಗಾಗಿ ವಿಷಯ ತಿಳಿದು ಹೂವಿನಹಡಗಲಿ ತಾಲೂಕಿನ ಬಿಇಓ ನಾಗರಾಜ್ ಅವರು ಶಿಕ್ಷಕನ ವಿಚಾರಣೆ ನಡೆಸಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

    ಈ ಆದೇಶದ ನಂತರ ಶಿಕ್ಷಕರನ್ನು ಅಮಾನತ್ತಿನ ವಿಚಾರವಾಗಿ ಗ್ರಾಮಸ್ಥರು ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಶಿಕ್ಷಕ ಚಂದ್ರಶೇಖರ್ ಅವರು ತುಂಬಾ ಒಳ್ಳೆಯವರು. ಹೀಗಾಗಿ ಅಮಾನತು ಆದೇಶ ಹಿಪಡೆಯುವಂತೆ ಮನವಿ ಮಾಡಿದ್ದಾರೆ.

  • ಡಾ. ಚಿದಾನಂದಮೂರ್ತಿ ಅವರ ಕಿರು ಪರಿಚಯ

    ಡಾ. ಚಿದಾನಂದಮೂರ್ತಿ ಅವರ ಕಿರು ಪರಿಚಯ

    ಬೆಂಗಳೂರು: ಖ್ಯಾತ ಸಾಹಿತಿ, ಲೇಖಕ, ಸಂಶೋಧಕ ಡಾ. ಚಿದಾನಂದಮೂರ್ತಿ(88) ಅವರು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

    ಬಾಲ್ಯ ಮತ್ತು ಶಿಕ್ಷಣ:
    ಚಿದಾನಂದಮೂರ್ತಿಗಳು 1931 ಮೇ 10ರಂದು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೆಕೋಗಲೂರಿನಲ್ಲಿ ಜನಿಸಿದರು. ನಂತರ ಮೂರ್ತಿಗಳ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾಭ್ಯಾಸ ಕೋಗಲೂರು, ಸಂತೆಬೆನ್ನೂರುಗಳಲ್ಲಿ ಮಾಡಿದರು. ಇಂಟರ್ ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಅವರು 10ನೇ ಸ್ಥಾನಗಳಿಸಿದರು. ಆದರೆ ಮೆಡಿಕಲ್ ಎಂಜಿನಿಯರಿಂಗ್ ಸೇರದೆ ಕನ್ನಡ ಆನರ್ಸ್ ಸೇರಿದರು. ಅಂದಿನ ಪ್ರಸಿದ್ಧ ಅಧ್ಯಾಪಕರ ಮಾರ್ಗದರ್ಶನ ಮತ್ತು ಸುತ್ತೂರು ಸಂಸ್ಥಾನದ ಉಚಿತ ವಿದ್ಯಾರ್ಥಿನಿಲಯದ ಪೋಷಣೆಯಲ್ಲಿ ಪ್ರಥಮ ವರ್ಗ, ಪ್ರಥಮ ಶ್ರೇಣಿ ಅಲ್ಲದೆ ಆಲ್ ಆನರ್ಸ್ ಚಿನ್ನದ ಪದಕ ಕೂಡ ಪಡೆದರು. ಬಳಿಕ ಎರಡು ವರ್ಷಗಳ ಕಾಲ ಬೆಂಗಳೂರು, ತುಮಕೂರು, ಕೋಲಾರದ ಪದವಿ ಕಾಲೇಜುಗಳಲ್ಲಿ ಕನ್ನಡ ಅಧ್ಯಾಪಕರಾದರು. ಮತ್ತ ರಜೆ ಹಾಕಿ ಮೈಸೂರಿನಲ್ಲಿ ಕನ್ನಡ ಎಂ.ಎ ಪದವಿಯನ್ನು ಪ್ರಥಮ ಸ್ಥಾನದೊಂದಿಗೆ ಗಳಿಸಿದರು.

    ಶಾಸನ ಕ್ಷೇತ್ರದೆಡೆಗೆ:
    ಎಂ.ಎ ಓದುವಾಗಲೇ ಡಿ.ಎಲ್. ನರಸಿಂಹಾಚಾರ್ಯರ ಸೂಚನೆಯ ಮೇರೆಗೆ ಪಂಪನಿಗೆ ಹಿನ್ನೆಲೆಯಾಗಿದ್ದ ಸಾಮಾಜಿಕ ಬದುಕನ್ನು ಶಾಸನಗಳನ್ನು ಆಧರಿಸಿ ಪುನಃರಚಿಸುವ ಪ್ರಯತ್ನಕ್ಕೆ ಮೂರ್ತಿಗಳು ತೊಡಗಿದರು. ಅದರ ಫಲವಾಗಿ ಬಂದ ಲೇಖನ ‘ಪಂಪಕವಿ ಮತ್ತು ಮೌಲ್ಯಪ್ರಸಾರ’. ಆ ಮೂಲಕ ಶಾಸನ ಕ್ಷೇತ್ರದೆಡೆಗೆ ಹೊರಳಿದ ಮೂರ್ತಿಗಳು ‘ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ’ ಎಂಬ ನಿಬಂಧ ಸಿದ್ಧಪಡಿಸಿ ತೀ.ನಂ. ಶೀಕಂಠಯ್ಯನವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ ಪದವಿ ಪಡೆದರು. ಈ ನಿಬಂಧ ಕನ್ನಡ ಸಂಶೋಧನ ಕ್ಷೇತ್ರದ ಮಹತ್ವಪೂರ್ಣ ಕೃತಿಯಾಗಿದೆ.

    ಅಧ್ಯಾಪಕರಾಗಿ ಸೇವೆ:
    ಆರಂಭದ ಕೆಲವು ವರ್ಷ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದ ಚಿದಾನಂದಮೂರ್ತಿಗಳು 1957ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಯುವರಾಜ ಕಾಲೇಜಿನಲ್ಲಿ ಅಧ್ಯಾಪಕರಾದರು. 1960ರ ಹೊತ್ತಿಗೆ ಮೈಸೂರಿನ ಮಾನಸಗಂಗೋತ್ರಿಯ ಸ್ನಾತಕೋತ್ತರ ಕನ್ನಡ ವಿಭಾಗದ ಅಧ್ಯಾಪಕರಾದರು. 1968ರವರೆಗೆ ಅಲ್ಲಿ ಅಧ್ಯಾಪಕರಾಗಿ, ಕನ್ನಡ ರೀಡರ್ ಆಗಿದ್ದು, ನಂತರ ಬೆಂಗಳೂರು ವಿಶ್ವವಿದ್ಯಾಲಯವನ್ನು ಸೇರಿದರು. ಅಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕೆಲಸಮಾಡಿ 1990ರ ಅಕ್ಟೋಬರ್ 10ರಂದು ಸ್ವಯಂಸೇವಾ ನಿವೃತ್ತಿ ಪಡೆದರು.

    ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್, ಇಟಲಿ, ಗ್ರೀಸ್, ಈಜಿಪ್ಟ್, ಥೈಲಾಂಡ್, ಜಪಾನ್, ಹವಾಯ್, ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳನ್ನು ಅವರು ಸುತ್ತಿದ್ದಾರೆ. ಸಂಶೋಧನೆಗೆ ಕನ್ನಡದ ಕಾರಣಕ್ಕೆ ಕರ್ನಾಟಕದ ಬೇರೆ ಬೇರೆ ಪ್ರಾಂತ್ಯಗಳನ್ನು ಅವರು ವ್ಯಾಪಕವಾಗಿ ಸುತ್ತಿದ್ದಾರೆ. ಬಕ್ರ್ಲಿ, ಫಿಲಡೆಲ್ಫಿಯ, ಸ್ಟಾನ್ಫೊರ್ಡ್ ಮುಂತಾದ ಹಲವಾರು ವಿಶ್ವವಿದ್ಯಾಲಯಗಳು ಮತ್ತು ವಿಶ್ವಮಟ್ಟದ ಐತಿಹಾಸಿಕ ಭಾಷಾವಿಜ್ಞಾನ ಸಮ್ಮೇಳನಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ಈ ಎಲ್ಲವೂ ಅವರ ನಿರಂತರ ಅಧ್ಯಯನ ಶೀಲತೆ ಮತ್ತು ವಿದ್ವತ್ತಿನ ಸೂಚಕಗಳಾಗಿವೆ.

    ಕನ್ನಡ ಸಂಶೋಧನ ಕ್ಷೇತ್ರದಲ್ಲಿ ಚಿದಾನಂದಮೂರ್ತಿ ಅವರದು ಚಿರಸ್ಮರಣೀಯವಾದ ದೊಡ್ಡ ಹೆಸರು. ಯುಗಪ್ರವರ್ತನೆಯ ಸಂಶೋಧಕ, ಸಂಶೋಧನೆಯ ಸಂಶೋಧಕ, ಸಂಸ್ಕೃತಿ ಸಂಶೋಧಕ, ತೀ.ನಂ.ಶ್ರೀ ಉತ್ತರಾಧಿಕಾರಿ ಎಂಬೆಲ್ಲ ಹೊಗಳಿಕೆಗೆ ಮೂರ್ತಿಗಳು ಪಾತ್ರರಾಗಿದ್ದಾರೆ. ಸುಮಾರು ನಾಲ್ಕು ದಶಕಗಳವರೆಗೆ ಅವರು ಸಂಶೋಧನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಸಂಶೋಧನೆಗಳ ಕುರಿತಾದ ಮಹತ್ವದ ಬರಹಗಳನ್ನು ಪ್ರಕಟಿಸಿದ್ದಾರೆ.

    ಚಿದಾನಂದಮೂರ್ತಿಗಳು 25ಕ್ಕೂ ಹೆಚ್ಚು ಪುಸ್ತಕಗಳನ್ನೂ, 400ಕ್ಕೂ ಹೆಚ್ಚು ಸಂಪ್ರಬಂಧಗಳನ್ನೂ ಪ್ರಕಟಿಸಿದ್ದಾರೆ. ಭಾಷೆ, ವ್ಯಾಕರಣ, ಸ್ಥಳನಾಮ, ಛಂದಸ್ಸು, ಗ್ರಂಥ ಸಂಪಾದನೆ, ಸಾಹಿತ್ಯ ಚರಿತ್ರೆ, ಜಾನಪದ, ಶಾಸನ, ಕರ್ನಾಟಕ ಇತಿಹಾಸ ಸಂಸ್ಕೃತಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸಂಶೋಧನೆ ಕೈಗೊಂಡಿದ್ದಾರೆ. 1960ರ ದಶಕಗಳಲ್ಲಿ ತಾವು ಪ್ರಕಟಿಸಿದ ಹಲವಾರು ಲೇಖನಗಳಲ್ಲೇ ಉಂಬರಿ, ಇರ್, ಡುಂಡುಚಿ, ಅಮ್ಮ, ಅಬ್ಬೆ, ಅಲ್ಲಮ, ಬಾಮಬ್ಬೆ, ಶಬ್ದಗಳನ್ನು ಕನ್ನಡ ಭಾಷೆ, ವ್ಯಾಕರಣ, ಅವಸ್ಥಾಂತರಗಳ ಹಿನ್ನೆಲೆಯಲ್ಲಿ ಮೂರ್ತಿಗಳು ಪರಿಶೀಲಿಸಿದ್ದಾರೆ. ಅನಂತರ ‘ಭಾಷಾ ವಿಜ್ಞಾನದ ಮೂಲತತ್ವಗಳು’ (1965), ‘ವಾಗಾರ್ಥ'(1981) ಎಂಬ ಎರಡು ಮುಖ್ಯವಾದ ಅವರ ಭಾಷಾಸಂಬಂಧವಾದ ಕೃತಿಗಳು ಪ್ರಕಟವಾದವು.

    ಸಾಧನೆ:
    ಕನ್ನಡದ ಬಗೆಗಿನ ಚಿದಾನಂದಮೂರ್ತಿಗಳ ಚರಿತ್ರಾರ್ಹ ಸಾಧನೆ ಎಂದರೆ ಹಂಪಿಯಲ್ಲಿ ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆ. 1985ರಲ್ಲಿ ಕಾಲ್ನಡಿಗೆಯ ಮೂಲಕ ಬೆಂಗಳೂರಿನಿಂದ ಹಂಪಿಗೆ ಪ್ರಯಾಣ ಮಾಡುವಾಗ ಮೂರ್ತಿಗಳಿಗೆ ಕನ್ನಡಕ್ಕೆ ಏಕೆ ಒಂದು ಪ್ರತ್ಯೇಕ ವಿಶ್ವವಿದ್ಯಾನಿಲಯ ಅಸ್ತಿತ್ವಕ್ಕೆ ಬರಬಾರದು ಎನಿಸಿತು. ಸಾಹಿತಿಗಳ, ಕಲಾವಿದರ ಬಳಗದ ಮೂಲಕ ಆಗಿನ ಮುಖ್ಯಮಂತ್ರಿ, ಸಚಿವಸಂಪುಟ, ಶಾಸಕರ ಮೇಲೆ ಒತ್ತಾಯ ತಂದು ಅದರ ಸ್ಥಾಪನೆಗೆ ಓಡಾಡಿ ಮುಂದಿನ ಒಂದೆರಡು ವರ್ಷಗಳಲ್ಲಿ ಅದರ ಕಾರ್ಯಾರಂಭಕ್ಕೆ ಕಾರಣರಾದರು. ಕರ್ನಾಟಕದ ಬಾಷೆ, ಸಾಹಿತ್ಯ, ಇತಿಹಾಸ, ಭೂಶೋಧ, ಲಲಿತಕಲೆ, ಸಮಾಜಶಾಸ್ತ್ರ, ಜಾನಪದ, ಅರ್ಥಶಾಸ್ತ್ರ, ವಿಜ್ಞಾನ, ಸಮೂಹ ಮಾಧ್ಯಮ ಮುಂತಾದವುಗಳ ಅಧ್ಯಯನ ನಡೆಯಲು ಪೂರ್ಣಪ್ರಮಾಣದ ಉನ್ನತ ವಿಶ್ವವಿದ್ಯಾನಿಲಯವನ್ನು ಅಸ್ತಿತ್ವಕ್ಕೆ ತಂದು ಕನ್ನಡದ ಕೆಲಸಗಳಿಗೆ ಹೊಸ ಚಾಲನೆ ಕೊಟ್ಟರು.

    ಪ್ರಶಸ್ತಿ:
    ಚಿದಾನಂದಮೂರ್ತಿಗಳಿಗೆ ಅನೇಕ ಗೌರವಗಳು, ಅವರ ಕೃತಿಗಳಿಗೆ ಸಾಹಿತ್ಯ ಆಕಾಡೆಮಿ ಪುರಸ್ಕಾರಗಳು, ಗೌರವಗಳು ದೊರೆತಿವೆ. ಅಲ್ಲದೇ ಅವರ ಹೆಸರಿನಲ್ಲಿ ‘ಚಿದಾನಂದ ಪ್ರಶಸ್ತಿ’ ಎಂಬುದನ್ನು ಸ್ಥಾಪಿಸಿ ಚಿದಾನಂದಮೂರ್ತಿಯವರ ಜನ್ಮದಿನವಾದ ಮೇ 10ರಂದು ಪ್ರತೀವರ್ಷ ಕನ್ನಡ ಸಂಶೋಧನ ಕ್ಷೇತ್ರದಲ್ಲಿ ಕೆಲಸ ಮಾಡಿದ ವಿದ್ವಾಂಸರಿಗೆ ಅದನ್ನು ನೀಡುತ್ತ ಬಂದಿದ್ದಾರೆ.

  • ‘ಪಕ್ಕೆಲುಬು’ ಉಚ್ಚಾರಣೆ ತಪ್ಪಿದ ವಿದ್ಯಾರ್ಥಿ ವಿಡಿಯೋ ವೈರಲ್: ಶಿಕ್ಷಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ

    ‘ಪಕ್ಕೆಲುಬು’ ಉಚ್ಚಾರಣೆ ತಪ್ಪಿದ ವಿದ್ಯಾರ್ಥಿ ವಿಡಿಯೋ ವೈರಲ್: ಶಿಕ್ಷಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ

    – ವಿದ್ಯಾರ್ಥಿಗಳ ಕಲಿಕೆ ಬಗ್ಗೆ ವ್ಯಂಗ್ಯ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಿಕ್ಷಣ ಸಚಿವರ ಸೂಚನೆ

    ರಾಯಚೂರು: ರಾಜ್ಯದ ಶಾಲೆಯೊಂದರಲ್ಲಿ ಮಗುವೊಂದು ಶಿಕ್ಷಕರೊಬ್ಬರು ಹೇಳಿಕೊಡುತ್ತಿರುವ ‘ಪಕ್ಕೆಲುಬು’ ಪದವನ್ನು ಸರಿಯಾಗಿ ಉಚ್ಚರಿಸಲು ಬಾರದೇ ಪದೇ ಪದೇ ತಪ್ಪು ಹೇಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಕಳೆದ ಎರಡು ದಿನಗಳಿಂದ ವೈರಲ್ ಆಗಿದೆ. ಆದರೆ ಈ ವಿಡಿಯೋವನ್ನು ಪ್ರಾಥಮಿಕ ಹಾಗೂ ಪೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗಂಭೀರವಾಗಿ ತೆಗೆದುಕೊಂಡಿದ್ದಾರೆ.

    ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಸಚಿವರು, ಘಟನೆ ನಡೆದಿರುವ ಶಾಲೆಯನ್ನು ಪತ್ತೆ ಹಚ್ಚಬೇಕು. ಯಾವ ಶಿಕ್ಷಕರು ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಹರಿಯ ಬಿಟ್ಟಿದ್ದಾರೆ ಎನ್ನುವುದನ್ನು ಪತ್ತೆ ಮಾಡಲು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿ. ಜೊತೆಗೆ ಆ ಶಿಕ್ಷಕರ ಹಾಗೂ ಶಾಲಾ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಕೆಲಸಕ್ಕೆ ಮುಂದಾಗುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದೆಂಬ ಸೂತ್ತೋಲೆ ಹೊರಡಿಸಬೇಕು ಎಂದು ಸೂಚಿಸಿದ್ದಾರೆ.

    ಮಕ್ಕಳು ತಪ್ಪು ಉಚ್ಚಾರ ಮಾಡುವುದು ಸಹಜ. ನಿರಂತರ ಕಲಿಕೆಯ ನಂತರ ಆ ಪದದ ಕುರಿತು ಮಗುವಿಗೆ ಸ್ಪಷ್ಟತೆ ದೊರೆತಾಗ ಸರಿಯಾದ ಉಚ್ಚಾರ ಸಾಧ್ಯವಾಗುತ್ತದೆ. ಆದರೆ ಮಗುವೊಂದು ಕಲಿಕಾ ಹಂತದಲ್ಲಿ ತಪ್ಪು ಉಚ್ಚಾರ ಮಾಡುವುದನ್ನು ವಿಡಿಯೋದಲ್ಲಿ ಪ್ರಸಾರ ಮಾಡುತ್ತಿದ್ದರೆ ಮಗುವಿಗೆ ಗೊತ್ತಾದಾಗ ಆತನ ಆತ್ಮವಿಶ್ವಾಸಕ್ಕೆ ಧಕ್ಕೆಯಾಗುತ್ತದೆ. ಜೊತೆಗೆ ಆ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿಯುತ್ತಾನೆ ಎಂದು ಸಚಿವರು ಕಾಳಜಿ ವ್ಯಕ್ತಪಡಿಸಿದ್ದಾರೆ.

    ಶಿಕ್ಷಕರು ಮಕ್ಕಳಿಗೆ ಸರಿಯಾಗಿ ಉಚ್ಚಾರ ಮಾಡುವುದನ್ನು ಕಲಿಸಬೇಕೇ ಹೊರತು ಅದನ್ನೇ ದೊಡ್ಡ ಅಪರಾಧವೆಂಬಂತೆ ಬಿಂಬಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಬಾರದು. ಇಂತಹ ಕೆಲಸ ನಿಜಕ್ಕೂ ಅಪರಾಧ. ತಕ್ಷಣವೇ ವಿಡಿಯೋ ವೈರಲ್ ಮಾಡಿದ ಶಾಲೆ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ.

  • ಶಿಕ್ಷಕಿ ಜೊತೆ ಪೊಲೀಸ್ ಪೇದೆ ಲವ್ವಿ, ಡವ್ವಿ- ಶಾಲೆಗೆ ನುಗ್ಗಿ ಅನುಚಿತ ವರ್ತನೆ

    ಶಿಕ್ಷಕಿ ಜೊತೆ ಪೊಲೀಸ್ ಪೇದೆ ಲವ್ವಿ, ಡವ್ವಿ- ಶಾಲೆಗೆ ನುಗ್ಗಿ ಅನುಚಿತ ವರ್ತನೆ

    ಚಿಕ್ಕಬಳ್ಳಾಪುರ: ಶಾಲಾ-ಕಾಲೇಜು ಸಾರ್ವಜನಿಕ ಸ್ಥಳದಲ್ಲಿ ನಾಗರಿಕರಿಗೆ ರಕ್ಷಣೆ ಕೊಡಬೇಕಾದ ಪೊಲೀಸ್ ಪೇದೆಯೇ ಶಾಲಾ ಶಿಕ್ಷಕಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ.

    ಗುಡಿಬಂಡೆ ಪೊಲೀಸ್ ಠಾಣೆಯ ಗುಪ್ತವಾರ್ತೆಯ ಪೇದೆ ರಮೇಶ್ ಅನುಚಿತ ವರ್ತನೆ ತೋರಿದ ಪೇದೆ. ಇಲ್ಲಿನ ಖಾಸಗಿ ಶಾಲೆಗೆ ನುಗ್ಗಿ ಪಾಠ ಮಾಡುತ್ತಿದ್ದ ಶಿಕ್ಷಕಿಯ ಕೈ ಹಿಡಿದು ಎಳೆದಾಡಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಮ್ಮುಖದಲ್ಲೇ ಅಸಭ್ಯವಾಗಿ ವರ್ತಿಸಿದ್ದಾನೆ.

    ಇಂದು ಬೆಳಿಗ್ಗೆ ಶಾಲೆಯ ಬಳಿ ತೆರೆಳಿದ್ದ ಪೊಲೀಸ್ ಪೇದೆ ರಮೇಶ್, ಶಿಕ್ಷಕಿಯ ಕೈಹಿಡಿದು ಎಳೆದಾಡಿ ಬಾ ಹೋಗೋಣ, ಮದುವೆಯಾಗೋಣ ಎಂದು ರಂಪಾಟ ಮಾಡಿದ್ದಾನೆ. ಇದರಿಂದ ವಿಚಲಿತಳಾದ ಶಿಕ್ಷಕಿ, ಕೈಬಿಡಿಸಿಕೊಂಡು ಶಾಲೆಯ ಮುಖ್ಯಸ್ಥರ ಕಡೆ ಓಡಿ ಬಂದಿದ್ದಾರೆ. ಅಲ್ಲಿಗೂ ಬಂದು ರಮೇಶ್ ಶಾಲಾ ಮುಖ್ಯಸ್ಥರಿಗೆ ಅವಾಜ್ ಹಾಕಿದ್ದು, ಘಟನೆ ಸಂಬಂಧ ಶಾಲಾ ಮುಖ್ಯಸ್ಥರು ಗುಡಿಬಂಡೆ ಠಾಣೆಗೆ ದೂರು ನೀಡಿದ್ದಾರೆ.

    ವಿಷಯ ತಿಳಿದು ಶಿಕ್ಷಕಿಯ ಪೋಷಕರು ಶಾಲೆ ಬಳಿ ಬಂದು ನಂತರ ಗುಡಿಬಂಡೆ ಪೊಲೀಸ್ ಠಾಣೆಗೆ ತೆರಳಿ ರಮೇಶ್ ವಿರುದ್ಧ ಸಿಪಿಐ ಸುನೀಲ್‍ಗೆ ಮೌಖಿಕ ದೂರು ನೀಡಿದ್ದರು. ರಮೇಶ್ ಹೇಳುವ ಪ್ರಕಾರ, ಶಿಕ್ಷಕಿಯನ್ನು ಗಾಢವಾಗಿ ಪ್ರೀತಿಸುತ್ತಿದ್ದು, ಆಕೆಯೂ ಸಹ ತನ್ನನ್ನು ಪ್ರೀತಿಸುತ್ತಿದ್ದಾಳೆ. ಆದರೆ ಬೇರೆ ಬೇರೆ ಜಾತಿ ಎನ್ನುವ ಕಾರಣ ಆಕೆಯ ಪೋಷಕರು ನಮ್ಮ ಮದುವೆಗೆ ಒಪ್ಪುತ್ತಿಲ್ಲ ಎಂದು ತಿಳಿಸಿದ್ದಾನೆ. ಇದೇ ವೇಳೆ ಅಲ್ಲೇ ಇದ್ದ ಶಿಕ್ಷಕಿ ಸಹ ಹೌದು, ಪ್ರೀತಿ ಮಾಡುತ್ತಿದ್ದು ನಿಜ. ಆದರೆ ನಮ್ಮ ಪೋಷಕರನ್ನು ಒಪ್ಪಿಸಿ ಮದುವೆಯಾಗಬೇಕು ಎಂದು ನಿರ್ಧಾರ ಮಾಡಿದ್ದು, ಈಗ ನಮ್ಮ ಪೋಷಕರು ಮದುವೆಗೆ ಒಪ್ಪುತ್ತಿಲ್ಲ. ನನಗೂ ಈಗ ಇಷ್ಟ ಇಲ್ಲ ಎಂದು ಹೇಳಿ ಕಡ್ಡಿ ತುಂಡು ಮಾಡಿದಂತೆ ಪೊಲೀಸ್ ಪೇದೆಯ ಪ್ರೇಮಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ.

    ಘಟನೆ ಬಳಿಕ ತಾನು ಶಿಕ್ಷಕಿಯ ಸಹವಾಸಕ್ಕೆ ಹೋಗೋದಿಲ್ಲ ಎಂದು ರಮೇಶ್ ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ. ಆದರೆ ಯುವತಿ ಪೋಷಕರು ಗುಡಿಬಂಡೆ ಪೊಲೀಸ್ ಠಾಣೆಯಿಂದ ರಮೇಶ್ ನನ್ನ ವರ್ಗಾವಣೆ ಮಾಡಿ ಎಂದು ಪಟ್ಟು ಹಿಡಿದಿದ್ದು, ಎಸ್‍ಪಿ ಅವರಿಗೆ ದೂರು ನೀಡಲು ಮುಂದಾದರು. ಈ ಬಗ್ಗೆ ಸ್ಪಷ್ಟನೆ ನೀಡಿದ ಚಿಕ್ಕಬಳ್ಳಾಪುರ ಎಸ್‍ಪಿ, ಪೇದೆ ರಮೇಶ ಕೃತ್ಯ ಸರಿಯಲ್ಲ. ತಕ್ಷಣ ಆತನನ್ನು ಗುಡಿಬಂಡೆ ಠಾಣೆಯಿಂದ ವರ್ಗಾವಣೆ ಮಾಡಿ ತನಿಖೆಗೆ ಆದೇಶ ಮಾಡಿದ್ದೇವೆ. ವರದಿ ಬಂದ ನಂತರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

    ಪೊಲೀಸ್ ಪೇದೆ ರಮೇಶ ಹಾಗೂ ಶಿಕ್ಷಕಿಯ ಲವ್ ಸ್ಟೋರಿ ಶಾಲಾ ವಿದ್ಯಾರ್ಥಿಗಳ ಸಮ್ಮುಖದಲ್ಲೇ ಬಯಲಾಗಿದ್ದು, ಎಲ್ಲರ ಎದುರು ಘಟನೆ ನಡೆದ ಪರಿಣಾಮ ಶಿಕ್ಷಕಿ ತಮಗೆ ರಮೇಶ್ ಬೇಡ ಎಂದು ಪೊಲೀಸ್ ದೂರು ನೀಡಲು ಮುಂದಾಗಿದ್ದಾರೆ. ಆದರೆ ರಮೇಶ ಮಾತ್ರ ನನಗೆ ಆಕೆಯೊಂದಿಗೆ ಮದುವೆ ಮಾಡಿಸಿ ಎಂದು ಊರಿನ ಹಿರಿಯರ ಮೊರೆ ಹೋಗಿದ್ದಾನೆ.

  • ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ನೇಣಿಗೆ ಶರಣು

    ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ನೇಣಿಗೆ ಶರಣು

    ರಾಯಚೂರು: ಜಿಲ್ಲೆಯ ಮಾನ್ವಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೌಟುಂಬಿಕ ಸಮಸ್ಯೆಗಳ ಬಗ್ಗೆ ಡೆತ್ ನೋಟ್ ಬರೆದಿಟ್ಟು 33 ವರ್ಷದ ಶಾಲಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ತಾಲೂಕಿನ ನಸ್ಲಾಪೂರು ಗ್ರಾಮದ ಶಿಕ್ಷಕಿಯಾಗಿರುವ ಶಾಲಿನಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪತಿ ಮೋಹನ್ ತಾಲೂಕಿನ ಕೊರವಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿದ್ದಾನೆ. ಕಳೆದ ಒಂಬತ್ತು ವರ್ಷಗಳಿಂದ ದಂಪತಿ ಮಾನ್ವಿಯಲ್ಲಿ ಮನೆ ಮಾಡಿಕೊಂಡಿದ್ದರು.

    ಘಟನೆ ಹಿನ್ನೆಲೆ ಶಾಲಿನಿ ತಂದೆ ಲಕ್ಷ್ಮಿಪುತ್ರಯ್ಯ ಮಗಳ ಸಾವಿಗೆ ಮೋಹನ್ ಹಾಗೂ ಅವನ ತಾಯಿ ತಂಗಿಯೇ ಕಾರಣ ಅಂತ ಮಾನ್ವಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಗಳಿಗೆ ಮಾನಸಿಕ, ದೈಹಿಕವಾಗಿ ಹಿಂಸೆ ನೀಡುತ್ತಿದ್ದರು, ಅಳಿಯ ಮೋಹನ್ ಗೆ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿತ್ತು ಅಂತ ಆರೋಪಿಸಿದ್ದಾರೆ.

    ಮೋಹನ್ ತಾನು ದುಡಿದ ದುಡ್ಡನ್ನೆಲ್ಲಾ ತಾಯಿ-ತಂಗಿಗೆ ಕೊಡುತ್ತಿದ್ದ, ಮಗಳಿಗೆ ಮೊದಲಿನಿಂದಲೂ ಹಿಂಸೆ ಕೊಡುತ್ತಿದ್ದರು ಅಂತ ಮತೃಳ ತಂದೆ ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮಾನ್ವಿ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ಜಿಲ್ಲೆಯಲ್ಲಿ ಉತ್ತಮ ಶಿಕ್ಷಕ ಅಂತಲೇ ಹೆಸರು ಪಡೆದಿದ್ದ ಮೋಹನ್ ಕೊರವಿ ಗ್ರಾಮದ ಶಾಲೆಯ ಚಿತ್ರಣವನ್ನೇ ಬದಲಿಸಿದ್ದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

  • ಶಾಲೆಯಲ್ಲೇ ಬಾಲಕಿ ಮೇಲೆ ಶಿಕ್ಷಕನಿಂದ ರೇಪ್ – ಶೌಚಾಲಯದಲ್ಲಿಯೇ ಡೆಲಿವರಿ

    ಶಾಲೆಯಲ್ಲೇ ಬಾಲಕಿ ಮೇಲೆ ಶಿಕ್ಷಕನಿಂದ ರೇಪ್ – ಶೌಚಾಲಯದಲ್ಲಿಯೇ ಡೆಲಿವರಿ

    – ಯಾರಿಗೂ ಹೇಳದಂತೆ ಶಿಕ್ಷಕನಿಂದ ಬೆದರಿಕೆ

    ಚಿಕ್ಕೋಡಿ/ಬೆಳಗಾವಿ: ಶಿಕ್ಷಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದು, ಹಲವು ತಿಂಗಳ ನಂತರ ಶೌಚಾಲಯದಲ್ಲಿಯೇ ಬಾಲಕಿಗೆ ಡೆಲಿವರಿಯಾಗಿದೆ. ಅಲ್ಲದೆ ಮಗುವನ್ನು ಅಲ್ಲಿಯೇ ಬಿಟ್ಟಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.

    ಭೀಮಪ್ಪ ಬಸಪ್ಪ ಕುಂಬಾರ(31) ಬಂಧಿತ ಕಾಮುಕ ಶಿಕ್ಷಕ. ಬೆಳಗಾವಿ ಜಿಲ್ಲೆಯ ಶಾಲೆಯ ಶೌಚಾಲಯದಲ್ಲಿ ಹಸಗೂಸು ಪತ್ತೆಯಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಬೇಧಿಸಲು ಯಶಸ್ವಿಯಾಗಿದ್ದಾರೆ. ಶಾಲೆಯ ವಿದ್ಯಾರ್ಥಿನಿಯನ್ನೇ ಕಾಮುಕ ಶಿಕ್ಷಕ ಗರ್ಭಿಣಿ ಮಾಡಿರುವುದು ಬೆಳಕಿಗೆ ಬಂದಿದ್ದು, ಕಾಮುಕ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

    ಶಾಲೆಯಲ್ಲಿ ಹುಟ್ಟಿದ ಮಗುವನ್ನು ತಾಯಿಯೋರ್ವಳು ಶೌಚಾಲಯದಲ್ಲೆ ಎಸೆದು ಹೋಗಿದ್ದಳು. ಈ ಪ್ರಕರಣವನ್ನ ಬೆನ್ನತ್ತಿದ್ದ ಪೊಲೀಸರು ಅದೇ ಶಾಲೆಯ ವಿದ್ಯಾರ್ಥಿನಿಗೆ ಶಾಲೆಯಲ್ಲೇ ಹೆರಿಗೆ ಆಗಿ ಮಗುವನ್ನು ಅಲ್ಲೇ ಬಿಟ್ಟು ಹೋಗಿರುವುದು ತಿಳಿದಿದೆ.

    ಬಳಿಕ ಪ್ರಕರಣದ ಕುರಿತು ವಿಚಾರಣೆ ನಡೆಸಿದಾಗ ಪಾಪಿ ಶಿಕ್ಷಕ ಅದೇ ಶಾಲೆಯ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಶಾಲೆಯಲ್ಲೇ ಅತ್ಯಾಚಾರ ಮಾಡುತ್ತಿದ್ದ. ಅಲ್ಲದೆ ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ತಿಳಿದುಬಂದಿದೆ.

    ಶಿಕ್ಷಕನ ಮೇಲೆ ಅನುಮಾನ ಬಂದು ಪೊಲೀಸರು ಶಾಲಾ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಒಂದೊಂದೇ ಅಂಶವನ್ನು ಪೊಲೀಸರು ಪತ್ತೆ ಹಚ್ಚಿ ಕೊನೆಗೆ ಪಾಪಿ ಶಿಕ್ಷಕನನ್ನು ಬಂಧಿಸಿದ್ದಾರೆ. ಉನ್ನತ ಮೂಲಗಳ ಪ್ರಕಾರ ವಿದ್ಯಾರ್ಥಿನಿ ಬಡ ಕುಟುಂಬದವಳಾಗಿದ್ದು, ಈ ಕುರಿತು ಕುಟುಂಬದವರಿಗೆ ತಿಳಿದಿತ್ತು. ಶಿಕ್ಷಕ ಅವರಿಗೂ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಪಾಪಿ ಶಿಕ್ಷಕನ ವಿರುದ್ಧ ಐಗಳಿ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.