Tag: teacher

  • ಬುದ್ಧಿಮಾಂದ್ಯ ಮಗಳ ಆರೈಕೆಗಾಗಿ ಶಿಕ್ಷಕಿ ಪರದಾಟ – ವರ್ಗಾವಣೆ ರದ್ದು ಮಾಡದೆ ಸತಾಯಿಸ್ತಿರುವ ಶಿಕ್ಷಣ ಇಲಾಖೆ

    ಬುದ್ಧಿಮಾಂದ್ಯ ಮಗಳ ಆರೈಕೆಗಾಗಿ ಶಿಕ್ಷಕಿ ಪರದಾಟ – ವರ್ಗಾವಣೆ ರದ್ದು ಮಾಡದೆ ಸತಾಯಿಸ್ತಿರುವ ಶಿಕ್ಷಣ ಇಲಾಖೆ

    ರಾಯಚೂರು: ಮೇಲಾಧಿಕಾರಿಗಳ ಎಡವಟ್ಟು ಕೆಲವೊಮ್ಮೆ ಅವರ ಕೆಳಗಿನ ಸಿಬ್ಬಂದಿಗಳಿಗೆ ಹಿಂಸೆಯನ್ನೇ ತಂದಿಡುತ್ತೆ. ಮಾನಸಿಕ ಅಸ್ವಸ್ಥ ಮಗಳ ಆರೈಕೆಗಾಗಿ ವರ್ಗಾವಣೆ ರದ್ದು ಮಾಡುವಂತೆ ಕೋರಿ ರಾಯಚೂರಿನಲ್ಲಿ ಶಿಕ್ಷಕಿಯೊಬ್ಬಳು ಕಚೇರಿಯಿಂದ ಕಚೇರಿಗೆ ಅಲೆಯುತ್ತಿದ್ದಾರೆ.

    ಶಾಂತಾಲಕ್ಷ್ಮಿ ಅವರು ತಮ್ಮ ಪತಿಯನ್ನು ಕಳೆದುಕೊಂಡು ಶಿಕ್ಷಕಿ ವೃತ್ತಿ ಮಾಡುತ್ತಲೇ ಮಾನಸಿಕ ಅಸ್ವಸ್ಥ ಮಗಳನ್ನು ಸಾಕುತ್ತಿದ್ದು, ಈಗ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದೆ. ನಗರದ ಜಹಿರಾಬಾದ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಸುಮಾರು 25 ಕಿ.ಮೀ ದೂರದ ಮಟಮಾರಿ ಗ್ರಾಮದ ಶಾಲೆ ವರ್ಗಾವಣೆ ಮಾಡಲಾಗಿದೆ.

    ಕಡ್ಡಾಯ ವರ್ಗಾವಣೆ ಮಾಡಬೇಕಾದರೂ ಒಂದೇ ಜಾಗದಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿರಬೇಕು. ಆದರೆ ಶಾಂತಲಕ್ಷ್ಮಿ 8 ವರ್ಷಗಳಿಂದ ಸೇವೆ ಮಾಡುತ್ತಿದ್ದು, ಇನ್ನೂ ಎರಡು ವರ್ಷ ಬಾಕಿಯಿರುವಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿ ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅಲ್ಲದೆ ವಿಧವೆಯಾಗಿದ್ದು, ಬುದ್ಧಿಮಾಂದ್ಯ ಮಗಳನ್ನು ಸಾಕಬೇಕಿರುವುದರಿಂದ ವರ್ಗಾವಣೆ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಶಿಕ್ಷಕಿ ಕಲಬುರಗಿ ವಿಭಾಗದ ಅಪರ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ನಗರದಲ್ಲಿನ ಶಾಲೆಯಲ್ಲಿದ್ದರೆ ಮಗಳನ್ನು ನೋಡಿಕೊಳ್ಳಬಹುದು ಇಲ್ಲದಿದ್ದರೆ ಕಷ್ಟವಾಗುತ್ತೆ ಎಂದು ಶಿಕ್ಷಕಿ ತಮ್ಮ ನೋವನ್ನು ಹೊರಹಾಕಿದ್ದಾರೆ.

    ನಗರದಿಂದ ನಿಯಮ ಉಲ್ಲಂಘಿಸಿ ಗ್ರಾಮೀಣ ಭಾಗಕ್ಕೆ ವರ್ಗಾವಣೆ ಮಾಡಿದ್ದಲ್ಲದೇ ಉದ್ದೇಶಪೂರ್ವಕವಾಗಿ ರಿಲೀವ್ ಮಾಡಲಾಗಿದೆ ಎಂದು ಶಿಕ್ಷಕಿ ಶಾಂತಲಕ್ಷ್ಮಿ ಬುದ್ಧಿಮಾಂದ್ಯ ಮಗಳೊಂದಿಗೆ ಕಚೇರಿಯಿಂದ ಕಚೇರಿಗೆ ಅಲೆಯುತ್ತಿದ್ದಾರೆ.

  • 5 ವರ್ಷದ ಮಗಳ ಮುಂದೆ ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ

    5 ವರ್ಷದ ಮಗಳ ಮುಂದೆ ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ

    ಚಂಡೀಗಢ್: 5 ವರ್ಷದ ಮಗಳ ಮುಂದೆಯೇ ಶಿಕ್ಷಕಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಇಂದು ಬೆಳಗ್ಗೆ ಪಂಜಾಬ್‍ನ ಮೊಹಾಲಿಯಲ್ಲಿ ನಡೆದಿದೆ.

    ಸರಂಜೀತ್ ಕೌರ್(35) ಕೊಲೆಯಾದ ಶಿಕ್ಷಕಿ. ಏಪ್ರಿಲ್ ತಿಂಗಳಿನಿಂದ ಸರಂಜೀತ್ ನಾಲೆಡ್ಜ್ ಬಸ್ ಗ್ಲೋಬಲ್ ಶಾಲೆಯಲ್ಲಿ ಫ್ರೆಂಚ್ ಹಾಗೂ ಇಂಗ್ಲಿಷ್ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಶಾಲೆಗೆ ಬಂದ ಸಂದರ್ಭದಲ್ಲಿ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಇಂದು ಬೆಳಗ್ಗೆ ಖರಾರ್ ನ ಸನ್ನಿ ಎನ್‍ಕ್ಲೇವ್ ಪ್ರದೇಶದ ನಾಲೆಡ್ಜ್ ಬಸ್ ಗ್ಲೋಬಲ್ ಶಾಲೆಯ ಹೊರಗಡೆ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 7.45ಕ್ಕೆ ಸರಂಜೀತ್ ಶಾಲೆಗೆ ಆಗಮಿಸಿ ತನ್ನ ದ್ವಿಚಕ್ರ ವಾಹನವನ್ನು ಪಾರ್ಕ್ ಮಾಡುತ್ತಿದ್ದರು. ಈ ವೇಳೆ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.

    ವ್ಯಕ್ತಿಯೊಬ್ಬ ಶಾಲು ಹಾಕಿಕೊಂಡು ಬೆಳಗ್ಗೆಯಿಂದ ಶಾಲೆಯ ಬಳಿ ತಿರುಗಾಡುತ್ತಿದ್ದನು. ಶಿಕ್ಷಕಿ ಬರುತ್ತಿದ್ದಂತೆ ಆತ ಅವರ ಮೇಲೆ ಗುಂಡು ಹಾರಿಸಿ ಅಲ್ಲಿಂದ ಕಾರಿನಲ್ಲಿ ಪರಾರಿ ಆಗಿದ್ದಾನೆ ಎಂದು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

    ಗುಂಡು ಬಿದ್ದ ತಕ್ಷಣ ಶಿಕ್ಷಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಮುಗಿಯದ ಕಾಮುಕರ ಅಟ್ಟಹಾಸ – 6ರ ಬಾಲಕಿ ಮೇಲೆ ತರಗತಿಯಲ್ಲೇ ಅತ್ಯಾಚಾರಗೈದ ಶಿಕ್ಷಕ

    ಮುಗಿಯದ ಕಾಮುಕರ ಅಟ್ಟಹಾಸ – 6ರ ಬಾಲಕಿ ಮೇಲೆ ತರಗತಿಯಲ್ಲೇ ಅತ್ಯಾಚಾರಗೈದ ಶಿಕ್ಷಕ

    ಕೋಲ್ಕತ್ತಾ: ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ನಂತರ ಜನರು ಕಾಮುಕರ ಅಟ್ಟಹಾಸವನ್ನು ವಿರೋಧಿಸಿ ಅವರನ್ನು ಗಲ್ಲಿಗೇರಿಸಿ ಎಂದು ಸಿಡಿದ್ದೆದ್ದಿದ್ದಾರೆ. ಈ ಮಧ್ಯೆ ಶಾಲಾ ಶಿಕ್ಷಕನೋರ್ವ ತರಗತಿಯಲ್ಲಿಯೇ 6 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾನೆ.

    ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‍ನಲ್ಲಿ ಈ ಘಟನೆ ನಡೆದಿದೆ. ಚಂದ್ರಮನ್ ಕಾವಸ್(51) ಅತ್ಯಾಚಾರ ಮಾಡಿದ ಕಾಮುಕ ಶಿಕ್ಷಕ. ಗುರುವಾರದಂದು ಶಾಲೆಯಲ್ಲಿ ಮಕ್ಕಳೆಲ್ಲಾ ಮೈದಾನದಲ್ಲಿ ಆಟವಾಡುತ್ತಿದ್ದರು. ಆದರೆ ಬಾಲಕಿ ಮಾತ್ರ ಸುಮ್ಮನೆ ತರಗತಿಯಲ್ಲಿಯೇ ಕುಳಿತ್ತಿದ್ದಳು. ಈ ವೇಳೆ ತರಗತಿಗೆ ಬಂದ ಶಿಕ್ಷಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದನು. ಅಷ್ಟೇ ಅಲ್ಲ ಈ ಬಗ್ಗೆ ಯಾರ ಬಳಿ ಹೇಳಬೇಡ ಎಂದು ಬಾಲಕಿಯನ್ನು ಬೆದರಿಸಿದ್ದಾನೆ.

    ಭಯಗೊಂಡಿದ್ದ ಬಾಲಕಿ ಮನೆಗೆ ಬಂದ ತಾಯಿಯ ಬಳಿ ಈ ವಿಚಾರ ಹೇಳಿದ್ದಳು. ಆದರೆ ಮೊದಲು ತಾಯಿ ಮಗಳ ಮಾತನ್ನು ನಂಬಿರಲಿಲ್ಲ. ಬಳಿಕ ಗುಪ್ತಾಂಗದಲ್ಲಿ ನೋವು ಕಾಣಿಸಿಕೊಳ್ಳುತ್ತಿದೆ ಎಂದು ಬಾಲಕಿ ಕಣ್ಣಿರಿಟ್ಟಾಗ ತಾಯಿ ತಕ್ಷಣ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ.

    ದೂರಿನ ಆಧಾರದ ಮೇರೆಗೆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ, ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ಬಯಲಾಗಿದೆ. ಈ ಸಂಬಂಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆತನನ್ನು ಸೆರೆಹಿಡಿಯಲು ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

    ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ ಕಾಮುಕರ ಅಟ್ಟಹಾಸ ಮಾತ್ರ ಕಡಿಮೆಯಾಗಿಲ್ಲ. ಮಕ್ಕಳಿಗೆ ಒಳ್ಳೆಯ ವಿದ್ಯೆ, ತಿಳುವಳಿಕೆ ನೀಡಬೇಕಾದ ಶಿಕ್ಷಕರೇ ಈ ರೀತಿ ಕಾಮಪೀಶಾಚಿಗಳಾಗುತ್ತಿರುವುದು ವಿಪರ್ಯಾಸ. ಅಲ್ಲದೆ ಇತ್ತೀಚೆಗೆ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಮಟ್ಟಹಾಕಲು ಕಠಿಣ ಕಾನೂನು ರಚನೆಯಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

  • ಇಂಗ್ಲಿಷ್ ಓದಲು ಹೇಳಿದಾಗ ತೊದಲಿದ ಶಿಕ್ಷಕಿ- ವಿಡಿಯೋ ವೈರಲ್

    ಇಂಗ್ಲಿಷ್ ಓದಲು ಹೇಳಿದಾಗ ತೊದಲಿದ ಶಿಕ್ಷಕಿ- ವಿಡಿಯೋ ವೈರಲ್

    ಲಕ್ನೋ: ಭಾರತದ ಶಿಕ್ಷಣದ ಗುಣಮಟ್ಟ ಯಾವ ರೀತಿಯಲ್ಲಿದೆ ಎಂಬುದಕ್ಕೆ ಉತ್ತರಪ್ರದೇಶದಲ್ಲಿರುವ ಸರ್ಕಾರಿ ಶಾಲೆಯೊಂದು ಸಾಕ್ಷಿಯಾಗಿದೆ.

    ಹೌದು. ಇಲ್ಲಿನ ಸಿಕಂದರ್ ಪುರ್ ಸೌರಸಿ ಶಾಲೆಯೊಂದರಲ್ಲಿ ಇಂಗ್ಲಿಷ್ ಪಾಠ ಮಾಡುತ್ತಿರುವ ಶಿಕ್ಷಕಿಗೆ ಒಂದು ವಾಕ್ಯ ಓದಲು ಬರದೇ ಪೇಚಿಗೆ ಸಿಲುಕಿದ್ದಾರೆ. ಅಲ್ಲದೆ ಶಾಲೆಯಿಂದಲೇ ಆಕೆಯನ್ನು ಅಮಾನತು ಮಾಡಲಾಗಿದೆ.

    ಜಿಲ್ಲಾ ಮ್ಯಾಜಿಸ್ಟೇಟ್ ದೇವೇಂದ್ರ ಕುಮಾರ್ ಪಾಂಡೆ ಶಾಲೆಗೆ ಏಕಾಏಕಿ ಭೇಟಿ ನೀಡಿದ್ದಾರೆ. ಶಿಕ್ಷಕಿ 8 ನೇ ತರಗತಿಯಲ್ಲಿ ಪಾಠ ಮಾಡುತ್ತಿದ್ದರು. ಈ ವೇಳೆ ತರಗತಿಗೆ ತೆರಳಿದ ದೇವೇಂದ್ರ ಕುಮಾರ್, ಶಿಕ್ಷಕಿ ಬಳಿ ಪುಸ್ತಕ ಕೊಟ್ಟು ಒಂದು ವಾಕ್ಯ ಓದುವಂತೆ ತಿಳಿಸಿದ್ದು, ಶಿಕ್ಷಕಿ ಓದಲು ತೊದಲಿದ್ದಾರೆ. ಇದರಿಂದ ಸಿಟ್ಟಿಗೆದ್ದ ಅಧಿಕಾರಿ ಕೂಡಲೇ ಆಕೆಯನ್ನು ಅಮಾನತು ಮಾಡುವಂತೆ ಸೂಚಿಸಿದರು.

    ಶಿಕ್ಷಕಿಯನ್ನು ರಾಜ್ ಕುಮಾರಿ ಎಂದು ಗುರುತಿಸಲಾಗಿದೆ. ಈ ಶಿಕ್ಷಕಿಯ ಜಾಗಕ್ಕೆ ಬೇರೆ ಶಿಕ್ಷಕರನ್ನು ನೇಮಿಸುವಂತೆ ತಿಳಿಸಿದ್ದಾರೆ.

    ಶಿಕ್ಷಕಿಗೆ ಓದಲು ಬರುವುದಿಲ್ಲವೆಂದು ಗೊತ್ತಾದ ಕೂಡಲೇ ಆಕೆಯನ್ನು ಶಾಲೆಯಿಂದ ಅಮಾನತು ಮಾಡಲಾಗಿದೆ. ಆಕೆಗೆ ಒಂದು ವಾಕ್ಯವೂ ಓದಲು ಬರವುದಿಲ್ಲ. ಇನ್ನು ಮಕ್ಕಳಿಗೆ ಹೇಗೆ ಪಾಠ ಹೇಳಿಕೊಡುತ್ತಾಳೆ. ಆಕೆ ಶಿಕ್ಷಕಿ, ಆದ್ರೆ ಆಕೆಗೆಯೇ ಇಂಗ್ಲಿಷ್ ಓದಲು ಸಾಧ್ಯವಾಗುತ್ತಿಲ್ಲ. ನೀನು ಬಿಎ ಪಾಸ್ ಮಾಡಿದ್ಯಾ ಎಂದು ನಾನು ಆಕೆಯನ್ನು ಪ್ರಶ್ನಿಸಿದೆ. ಆಕೆಯ ಬಳಿ ಅರ್ಥ ಕೇಳಿಲ್ಲ. ಒಂದು ವಾಕ್ಯ ಓದೋದಕ್ಕೆ ಹೇಳಿದ್ದೆ ಅಷ್ಟೆ. ಅದು ಆಕೆಯಿಂದ ಸಾಧ್ಯವಾಗಿಲ್ಲ ಎಂದು ಪಾಂಡೆ ಹೇಳಿದ್ದಾರೆ.

    https://twitter.com/ANINewsUP/status/1200634024588402697

  • ಹಳ್ಳಿಯಲ್ಲಿ ಮಹಿಳೆಯರ ಒಳಉಡುಪು ಕದಿಯುತ್ತಿರುವ ಸೈಕೋ

    ಹಳ್ಳಿಯಲ್ಲಿ ಮಹಿಳೆಯರ ಒಳಉಡುಪು ಕದಿಯುತ್ತಿರುವ ಸೈಕೋ

    ಶಿವಮೊಗ್ಗ: ಸೈಕೋ ವ್ಯಕ್ತಿಯೊಬ್ಬ ಹಳ್ಳಿಯಲ್ಲಿ ಮಹಿಳೆಯರ ಒಳಉಡುಪು ಕದಿಯುತ್ತಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾರಶೆಟ್ಟಿಹಳ್ಳಿಯಲ್ಲಿ ನಡೆದಿದೆ.

    ಗ್ರಾಮದ ಸತೀಶ್ ಎಂಬ ಶಿಕ್ಷಕರ ಮನೆಯಲ್ಲಿ ಬಟ್ಟೆಯನ್ನು ತೊಳೆದು ಒಣಗಿಸುವುದಕ್ಕೆ ಹಾಕಿದ್ದರು. ಆದರೆ ಅಲ್ಲಿಗೆ ಬಂದಂತಹ ಸೈಕೋ ಮಹಿಳೆಯರ ಒಳಉಡುಪನ್ನು ಮಾತ್ರ ಕದಿಯುತ್ತಿದ್ದನು. ಈ ರೀತಿ ಪ್ರತಿದಿನ ಆ ವ್ಯಕ್ತಿ ಮಹಿಳೆಯರ ಒಳುಉಡುಪನ್ನು ಕದಿಯುತ್ತಿದ್ದನು. ಹೀಗಾಗಿ ಮನೆ ಮಾಲೀಕ ಸತೀಶ್ ತಮ್ಮ ಮನೆಗೆ ಸಿಸಿಟಿವಿ ಕ್ಯಾಮೆರಾ ಹಾಕಿಸಿದ್ದರು.

    ಸೈಕೋ ವ್ಯಕ್ತಿ ಉಡುಪು ಕದಿಯುತ್ತಿದ್ದ ದೃಶ್ಯ ಇದೀಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಒಳಉಡುಪು ಕದಿಯುತ್ತಿದ್ದ ಸೈಕೋ ಅದೇ ಗ್ರಾಮದ ಮನುಕುಮಾರ್ ಎಂದು ಪತ್ತೆ ಹಚ್ಚಲಾಗಿದೆ.

    ಈ ಬಗ್ಗೆ ಗ್ರಾಮಸ್ಥರು ಮನುಕುಮಾರ್ ನನ್ನು ವಿಚಾರಿಸಿದರೆ ನಾನು ಯಾವುದೇ ಒಳ ಉಡುಪು ಕದ್ದಿಲ್ಲ ಎಂದು ವಾದಿಸಿದ್ದಾನೆ. ನಂತರ ಆತನಿಗೆ ಸಿಸಿಟಿವಿ ದೃಶ್ಯಗಳನ್ನು ತೋರಿಸಿದಾಗ ಬೇರೆ ದಾರಿ ಕಾಣದೇ ಅದು ನಾನೇ ಎಂದು ಒಪ್ಪಿಕೊಂಡಿದ್ದಾನೆ.

    ಈ ಘಟನೆ ಬಳಿಕ ಸೈಕೋ ಮನುಕುಮಾರ್ ಕುಟುಂಬಸ್ಥರು ಮನೆ ಮಾಲೀಕ ಸತೀಶ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ತೀವ್ರ ಗಾಯಗೊಂಡಿರುವ ಸತೀಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಶಿಕ್ಷಕನ ದಿಢೀರ್ ವರ್ಗಾವಣೆ- ಮನಕಲಕುವಂತಿದೆ ಮಕ್ಕಳ ರೋಧನ

    ಶಿಕ್ಷಕನ ದಿಢೀರ್ ವರ್ಗಾವಣೆ- ಮನಕಲಕುವಂತಿದೆ ಮಕ್ಕಳ ರೋಧನ

    ಚಾಮರಾಜನಗರ: ನೆಚ್ಚಿನ ಶಿಕ್ಷಕ ದಿಢೀರ್ ವರ್ಗಾವಣೆ ಆಗಿರುವುದನ್ನು ತಿಳಿದ ಶಾಲಾ ಮಕ್ಕಳು ರೋಧಿಸಿ ಪ್ರತಿಭಟನೆ ನಡೆಸಿರುವ ಘಟನೆ ಹನೂರು ತಾಲೂಕಿನ ಮೀಣ್ಯಂನಲ್ಲಿ ನಡೆದಿದೆ.

    ಶಿಕ್ಷಕ ಪಿ. ಮಹಾದೇವಸ್ವಾಮಿ ಎಂಬವರನ್ನು ಮೀಣ್ಯಂ ಶಾಲೆಯಿಂದ ಲೊಕ್ಕನಹಳ್ಳಿ ಶಾಲೆಗೆ ದಿಢೀರ್ ನಿಯೋಜಿಸಲಾಗಿತ್ತು. ಈ ವಿಚಾರ ತಿಳಿದ ವಿದ್ಯಾರ್ಥಿಗಳು ನೆಚ್ಚಿನ ಶಿಕ್ಷಕರು ಬೇಕೆ ಬೇಕೆಂದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ವಿದ್ಯಾರ್ಥಿಗಳ ಜೊತೆಗೆ ಗ್ರಾಮಸ್ಥರು ಇದಕ್ಕೆ ದನಿಗೂಡಿಸಿದ್ದಾರೆ. ತಮ್ಮ ಶಾಲೆಗೆ ಮತ್ತೆ ಮಹಾದೇವಸ್ವಾಮಿ ನಿಯೋಜನೆ ಆಗದಿದ್ದರೇ ಶನಿವಾರದಿಂದ ಯಾರೂ ಶಾಲೆಗೆ ಬರುವುದಿಲ್ಲ ಎಂದು ಮಕ್ಕಳು ಎಚ್ಚರಿಸಿದ್ದು ಗ್ರಾಮಸ್ಥರು ಶಿಕ್ಷಣ ಇಲಾಖೆಯ ವಿರುದ್ಧ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಶಿಕ್ಷಕಿಯರ ವರ್ಗಾವಣೆ- ಬಿಕ್ಕಿಬಿಕ್ಕಿ ಅತ್ತ ವಿದ್ಯಾರ್ಥಿಗಳು

    ವರ್ಗಾವಣೆಯಾದ ಪಿ. ಮಹಾದೇವಸ್ವಾಮಿ ಕಳೆದ 4 ವರ್ಷದಿಂದ ಮೀಣ್ಯಂ ಶಾಲೆಯಲ್ಲಿದ್ದು ಕನ್ನಡ, ಇಂಗ್ಲಿಷ್ ಜೊತೆಗೆ ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದಿದ್ದರಿಂದ ಅದರ ಜವಾಬ್ದಾರಿಯನ್ನು ಹೊತ್ತಿದ್ದರು. ಇದರೊಟ್ಟಿಗೆ ಬಿಸಿಯೂಟದ ಮೇಲ್ವಿಚಾರಣೆಯನ್ನು ವಹಿಸಿಕೊಂಡು ಮಕ್ಕಳಿಗೆ ಶುಚಿ-ರುಚಿಯಾದ ಬಿಸಿಯೂಟ ಸಿಗುವಂತೆ ಮಾಡಿದ್ದರು ಎಂದು ಗ್ರಾಮಸ್ಥರಾದ ಮಾದೇಶ್ ತಿಳಿಸಿದ್ದಾರೆ.

    ಶನಿವಾರ ಇಲ್ಲವೇ ಸೋಮವಾರ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಪಿ. ಮಹಾದೇವಸ್ವಾಮಿ ಅವರ ಎತ್ತಂಗಡಿಯಲ್ಲಿ ಮುಖ್ಯ ಶಿಕ್ಷಕ ಬಾಲು ನಾಯ್ಕ್ ಎಂಬವರು ಪ್ರಭಾವ ಬೀರಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಶನಿವಾರ ಇಲ್ಲವೇ ಭಾನುವಾರ ಪ್ರತಿಭಟನೆ ನಡೆಸಿ ಶಿಕ್ಷಕರನ್ನು ಪುನರ್ ನಿಯೋಜಿಸುವಂತೆ ಒತ್ತಾಯಿಸಲಾಗುವುದು ಎಂದು ತಿಳಿದು ಬಂದಿದೆ. ಶಿಕ್ಷಣ ಸಚಿವರ ಭೇಟಿ ವೇಳೆ ಶಾಲಾ ಮುಖ್ಯ ಶಿಕ್ಷಕ ಬಾಲು ನಾಯ್ಕ ವರ್ಗಾವಣೆ ಆಗ್ರಹಿಸಿ ಸಚಿವರಿಗೆ ಮನವಿ ಪತ್ರ ನೀಡುವ ಜೊತೆಗೆ ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ್ದರು.

  • ಟ್ಯೂಷನ್ ನೆಪದಲ್ಲಿ 1ನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದ ಶಿಕ್ಷಕ

    ಟ್ಯೂಷನ್ ನೆಪದಲ್ಲಿ 1ನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದ ಶಿಕ್ಷಕ

    – ಶಾಲಾ ಶೌಚಾಲಯದಲ್ಲಿ ಕೃತ್ಯವೆಸೆಗಿದ
    – ಅಣ್ಣನಿಗೆ ಚಾಕಲೇಟ್ ಆಸೆ ತೋರಿಸಿ ತಂಗಿ ಮೇಲೆ ರೇಪ್

    ಲಕ್ನೋ: ಟ್ಯೂಷನ್ ಹೇಳಿ ಕೊಡುವ ನೆಪದಲ್ಲಿ ಕಾಮುಕ ಶಿಕ್ಷಕನೋರ್ವ 6 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರಗೈದ ಹೀನಾಯ ಘಟನೆ ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯಲ್ಲಿ ನಡೆದಿದೆ.

    ಬಾಂಡಾ ಜಿಲ್ಲೆಯ ಟಿಂಡ್ವಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕ ಕಿಶನ್ ಮಿಶ್ರಾ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಶಿಕ್ಷಕ. ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಶಾಲೆಯಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರ ಮಾಡಿದ್ದಾನೆ. ಇದನ್ನೂ ಓದಿ:ಮನೆಗೆ ನುಗ್ಗಿ ಅಪ್ರಾಪ್ತೆಯನ್ನು ಅತ್ಯಾಚಾರಗೈದು ಬೆಂಕಿ ಹಚ್ಚಿದ ಕಾಮುಕ

    ಶುಕ್ರವಾರ ಸಂಜೆ ಶಾಲೆ ಮುಗಿದ ಬಳಿಕ ಟ್ಯೂಷನ್ ಹೇಳಿ ಕೊಡುವ ನೆಪದಲ್ಲಿ ಬಾಲಕಿ ಹಾಗೂ ಆಕೆಯ ಅಣ್ಣನನ್ನು ಶಿಕ್ಷಕ ಶಾಲೆಯಲ್ಲಿ ಉಳಿಸಿಕೊಂಡಿದ್ದನು. ಸುಮಾರು 5 ಗಂಟೆ ವೇಳೆಗೆ ಇಬ್ಬರನ್ನು ಮನೆಗೆ ಹೋಗುವಂತೆ ಶಿಕ್ಷಕ ಹೇಳಿದ್ದಾನೆ.

    ಅಣ್ಣಾ, ತಂಗಿ ಮನೆಗೆ ತೆರಳುತ್ತಿದ್ದ ವೇಳೆ ಬಾಲಕಿಗೆ ಚಾಕಲೇಟ್ ತೆಗೆದುಕೊಂಡು ಬಾ ಎಂದು ಹೇಳಿ ಅಂಗಡಿಗೆ ಕಳುಹಿಸಿ, ಬಳಿಕ ಬಾಲಕಿಯನ್ನು ಪುಸಲಾಯಿಸಿ ಶಾಲಾ ಶೌಚಾಲಯಕ್ಕೆ ಶಿಕ್ಷಕ ಕರೆದುಕೊಂಡು ಹೋಗಿ ಆಕೆಯನ್ನು ಅತ್ಯಾಚಾರಗೈದಿದ್ದಾನೆ. ಈ ವೇಳೆ ಹೇಗೋ ಬಾಲಕಿ ಕಾಮುಕ ಶಿಕ್ಷಕನಿಂದ ತಪ್ಪಿಸಿಕೊಂಡು ಮನೆಗೆ ಸೇರಿದ್ದಳು. ಇದನ್ನೂ ಓದಿ:ಅಪ್ರಾಪ್ತೆ ಮೇಲೆ ತಂದೆಯಿಂದಲೇ ಅತ್ಯಾಚಾರ- 8 ವರ್ಷ ಬಳಿಕ ಆರೋಪಿ ಅರೆಸ್ಟ್

    ಮನೆಗೆ ಬಂದ ಬಾಲಕಿ ತಾಯಿಯ ಬಳಿ ನಡೆದ ವಿಚಾರವನ್ನು ಹೇಳಿದ್ದಾಳೆ. ಹೀಗಾಗಿ ಶನಿವಾರ ಬಾಲಕಿ ತಾಯಿ ಪೊಲೀಸರಿಗೆ ಶಿಕ್ಷಕನ ವಿರುದ್ಧ ದೂರು ಕೊಟ್ಟಿದ್ದರು. ತಾಯಿ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯ ವೈದ್ಯಕೀಯ ಪರೀಕ್ಷೆ ನಡೆದಿದ್ದು, ವರದಿ ಬರಬೇಕಿದೆ.

  • ಹಾವು ಕಚ್ಚಿದ್ರೂ ಪಾಠ ಮುಂದುವರಿಕೆ – ಟೀಚರ್ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

    ಹಾವು ಕಚ್ಚಿದ್ರೂ ಪಾಠ ಮುಂದುವರಿಕೆ – ಟೀಚರ್ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

    – ಆಸ್ಪತ್ರೆಗೆ ದಾಖಲಿಸದೆ ತರಗತಿ ಮುಂದುವರಿಸಿದ ಟೀಚರ್
    – ದಾರಿ ಮಧ್ಯೆ ಪ್ರಾಣಬಿಟ್ಟ ಬಾಲಕಿ

    ತಿರುವನಂತಪುರಂ: ಹಾವು ಕಡಿತದಿಂದ ಬಾಲಕಿ ಪ್ರಾಣಬಿಟ್ಟ ಘಟನೆ ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿಯಲ್ಲಿ ನಡೆದಿದೆ.

    ಶೆಹೆಲಾ ಶರ್ಲಿನ್(10) ಮೃತಪಟ್ಟ ಬಾಲಕಿ. ಹಾವು ಕಚ್ಚಿದ ಒಂದು ಗಂಟೆ ನಂತರ ಶೆಹೆಲಾಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಅಲ್ಲದೆ ಶೆಹೆಲಾಳಿಗೆ ಹಾವು ಕಚ್ಚಿದರೂ ಆಕೆಯ ತಂದೆ ಬಂದು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ ಎಂದು ಹೇಳಿ ಶಿಕ್ಷಕರು ತಮ್ಮ ಪಾಠವನ್ನು ಮುಂದುವರಿಸುತ್ತಿದ್ದರು. ಆದರೆ ಅಷ್ಟರಲ್ಲಿ ಶೆಹೆಲಾ ಕಾಲು ನೀಲಿ ಬಣ್ಣಕ್ಕೆ ತಿರುಗಿತ್ತು ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

    ನಾವು ಶಿಕ್ಷಕರ ಗಮನಕ್ಕೆ ತಂದರೂ ಅವರು ನಿರ್ಲಕ್ಷ್ಯ ವಹಿಸಿದರು. ಹಾವು ಕಡಿತದಿಂದ ಗಾಯವಾಗಿಲ್ಲ. ಬದಲಾಗಿ ಶೆಹೆಲಾ ಉಗುರಿನಿಂದ ಗಾಯ ಮಾಡಿಕೊಂಡಿದ್ದಾಳೆ ಎಂದು ಹೇಳಿ ಪಾಠ ಮುಂದುವರಿಸಿದ್ದರು ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

    ಮಾಧ್ಯಮದವರು ಬಾಲಕಿ ಕುಳಿತಿದ್ದ ಡೆಸ್ಕ್ ಕೆಳಗೆ ರಂಧ್ರದೊಂದಿಗೆ ತರಗತಿಯ ದೃಶ್ಯಗಳನ್ನು ಪ್ರಸಾರ ಮಾಡಿತ್ತು. ಮೂಲಗಳ ಪ್ರಕಾರ ಟೀಚರ್ ಅಮಾನತುಗೊಂಡಿದ್ದು ವಿಚಾರಣೆ ಬಾಕಿ ಇದೆ ಎಂದು ತಿಳಿದು ಬಂದಿದೆ.

    ಬಾಲಕಿಯ ಸಂಬಂಧಿಕರಾದ ಶಾನವಾಜ್ ಈ ಬಗ್ಗೆ ಪ್ರತಿಕ್ರಿಯಿಸಿ, ಶೆಹೆಲಾಳನ್ನು ಮೊದಲು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಬಳಿಕ ಅಲ್ಲಿನ ವೈದ್ಯರು ಶೆಹೆನಾಳನ್ನು ಕೋಝಿಕೋಡ್ ಮೆಡಿಕಲ್ ಕಾಲೇಜಿಗೆ ಕರೆದುಕೊಂಡು ಹೋಗಲು ತಿಳಿಸಿದ್ದರು. ಆದರೆ ಶೆಹೆಲಾಳ ಸ್ಥಿತಿ ಹದಗೆಟ್ಟಿದ್ದರಿಂದ ಆಕೆಯನ್ನು ಕೊಝಿಕೋಡ್ ಹೋಗುವ ಮಾರ್ಗದಲ್ಲಿರುವ ವೈತ್ರಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಆಕೆಯನ್ನು ಪರಿಶೀಲಿಸಿದ ವೈದ್ಯರು ಶೆಹೆಲಾ ಮೃತಪಟ್ಟಿದ್ದಾಳೆ ಎಂದು ತಿಳಿಸಿದರು ಎಂಬುದಾಗಿ ವಿವರಿಸಿದರು.

    ಈ ಬಗ್ಗೆ ವಯನಾಡ್ ಜಿಲ್ಲಾಧಿಕಾರಿ ಅದೀಲಾ ಅಬ್ದುಲಾ ಮಾತನಾಡಿ, ಇದು ಅತ್ಯಂತ ದುರದೃಷ್ಟಕರವಾದ ಸಂಗತಿ. ಈ ಘಟನೆಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಮಗುವಿನ ವೈದ್ಯಕೀಯ ನೆರವು ವಿಳಂಬವಾಗಿದೆ ಎಂಬ ಆರೋಪದ ಬಗ್ಗೆ ವರದಿ ಸಲ್ಲಿಸಲು ಶಿಕ್ಷಣ ಇಲಾಖೆಯ ಅಧಿಕಾರಿಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇತ್ತ ಕೇರಳ ಸಿಎಂ ಪಿಣರಾಯಿ ವಿಜಯನ್, ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಬಾಲಕಿ ಸಾವಿನಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹಾಗೂ ಬಾಲಕಿಯ ಸಂಬಂಧಿಕರು ಶಾಲೆ ಕಚೇರಿಗೆ ಹೋಗಿ ಅಲ್ಲಿದ್ದ ಶಿಕ್ಷಕರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಶಾಲೆಗೆ ಪೊಲೀಸರು ಬಿಗಿಯಾದ ಭದ್ರತೆ ನೀಡಿದ್ದು ಗ್ರಾಮಸ್ಥರನ್ನು ತಡೆದಿದ್ದಾರೆ.

  • ‘ನಮ್ಮನ್ನು ಬಿಟ್ಟು ಹೋಗ್ಬೇಡಿ ಸಾರ್ ಪ್ಲೀಸ್’ – ಶಿಕ್ಷಕನನ್ನು ಬಿಗಿದಪ್ಪಿ ಅತ್ತ ವಿದ್ಯಾರ್ಥಿಗಳು

    ‘ನಮ್ಮನ್ನು ಬಿಟ್ಟು ಹೋಗ್ಬೇಡಿ ಸಾರ್ ಪ್ಲೀಸ್’ – ಶಿಕ್ಷಕನನ್ನು ಬಿಗಿದಪ್ಪಿ ಅತ್ತ ವಿದ್ಯಾರ್ಥಿಗಳು

    ಬೀದರ್: ಶಿಕ್ಷಕರನ್ನು ವಿದ್ಯಾರ್ಥಿಗಳು ಹೆಚ್ಚು ಹಚ್ಚಿಕೊಂಡಿರುತ್ತಾರೆ. ಅದರಲ್ಲೂ ತಮ್ಮ ಅಚ್ಚುಮೆಚ್ಚಿನ ಶಿಕ್ಷಕರು ಶಾಲೆ ಬಿಟ್ಟುಹೋಗುತ್ತಾರೆ ಎಂದರೆ ಮಕ್ಕಳಿಗೆ ಬೇಸರವಾಗುತ್ತೆ. ಆದರೆ ಬೀದರ್‌ನಲ್ಲಿ ವರ್ಗಾವಣೆಯಾಗಿ ಶಾಲೆ ಬಿಟ್ಟು ಹೋಗುತ್ತಿದ್ದ ಶಿಕ್ಷಕರಿಗಾಗಿ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಬಿಟ್ಟು ಹೋಗ್ಬೇಡಿ ಸಾರ್ ಎಂದು ಶಿಕ್ಷಕನನ್ನು ಬಿಗಿದಪ್ಪಿ ಮಕ್ಕಳು ಕಣ್ಣೀರಿಟ್ಟಿದ್ದಾರೆ.

    ಹೌದು. ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಕುಮಾರ ಚಿಂಚೋಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಅತ್ತಿದ್ದಾರೆ. ಈ ಶಾಲೆಯ ಕನ್ನಡ ಮಾಧ್ಯಮ ಶಿಕ್ಷಕ ಅನಿಲ್ ರಾಠೋಡ್ ಅವರ ಮೇಲೆ ಮಕ್ಕಳು ತೋರಿದ ಪ್ರೀತಿ ನೋಡಿ ಇತರೆ ಶಿಕ್ಷಕರೂ ಕೂಡ ಭಾವುಕರಾಗಿದ್ದಾರೆ. ಶಾಲೆಯಿಂದ ವರ್ಗಾವಣೆಗೊಂಡು ತೆರಳುತ್ತಿದ್ದ ಅನಿಲ್ ಅವರಿಗೆ ಬೀಳ್ಕೊಡುವಾಗ ವಿದ್ಯಾರ್ಥಿಗಳು ಸಾಮೂಹಿಕವಾಗಿ ಬಿಕ್ಕಿ, ಬಿಕ್ಕಿ ಅಳುವ ದೃಶ್ಯ ಗುರು ಶಿಷ್ಯರ ಬಾಂಧವ್ಯಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ:ಶಿಕ್ಷಕಿಯರ ವರ್ಗಾವಣೆ- ಬಿಕ್ಕಿಬಿಕ್ಕಿ ಅತ್ತ ವಿದ್ಯಾರ್ಥಿಗಳು

    ಮೂಲತಃ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಗುಲ್ಲಳ್ಳಿ ತಾಂಡಾದವರಾದ ಶಿಕ್ಷಕ ಅನಿಲ್ ರಾಠೋಡ್ ಕಳೆದ 9 ವರ್ಷದಿಂದ ಇದೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲಿ ಇಲ್ಲಿನ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದರು. ಆದರೆ ಈಗ ತಮ್ಮೂರಿನ ಸಮೀಪವೇ ಇರುವ ಆಳಂದ ತಾಲೂಕಿನ ರುದ್ರವಾಡಿ ಗ್ರಾಮಕ್ಕೆ ಅನಿಲ್ ಅವರು ವರ್ಗಾವಣೆಗೊಂಡಿದ್ದು, ಕುಮಾರ ಚಿಂಚೊಳಿ ಗ್ರಾಮದ ಶಾಲೆಯಿಂದ ತೆರಳುತ್ತಿದ್ದ ಶಿಕ್ಷಕರಿಗಾಗಿ ವಿದ್ಯಾರ್ಥಿಗಳೆಲ್ಲರೂ ಗೊಳೋ ಎಂದು ಅತ್ತಿದ್ದಾರೆ. ನಮ್ಮನ್ನು ಬಿಟ್ಟು ಹೊಗಬೇಡಿ ಸಾರ್ ಎಂದು ಅಂಗಲಾಚಿದ್ದಾರೆ. ಈ ದೃಶ್ಯವನ್ನು ಸ್ಥಳೀಯರು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ವಿಡಿಯೋ ನೋಡಿದರೆ ವಿದ್ಯಾರ್ಥಿಗಳು ಶಿಕ್ಷಕರ ಮೇಲೆ ಎಷ್ಟು ಪ್ರೀತಿ ಇಟ್ಟಿದ್ದಾರೆ ಎನ್ನುವುದು ತಿಳಿಯುತ್ತದೆ.

  • 27 ವರ್ಷ ಉಪವಾಸ ಮಾಡಿ ಅಯೋಧ್ಯೆ ತೀರ್ಪಿಗೆ ಕಾದ ಆಧುನಿಕ ಶಬರಿ

    27 ವರ್ಷ ಉಪವಾಸ ಮಾಡಿ ಅಯೋಧ್ಯೆ ತೀರ್ಪಿಗೆ ಕಾದ ಆಧುನಿಕ ಶಬರಿ

    ಭೋಪಾಲ್: ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ.

    ಮಧ್ಯಪ್ರದೇಶದ ಜಬಲ್‍ಪುರದ ಊರ್ಮಿಳಾ ಚರ್ತುವೇದಿ(81) ರಾಮ ಜನ್ಮಭೂಮಿ ವಿವಾದ ಬಗೆಹರಿಯಲೆಂದು ಉಪವಾಸ ಮಾಡಿದ್ದಾರೆ. ಊರ್ಮಿಳಾ ಅವರು ಸಂಸ್ಕೃತ ಭಾಷಾ ಶಿಕ್ಷಕಿಯಾಗಿದ್ದು, ಅಯೋಧ್ಯೆ ಜಮೀನು ವಿವಾದ ಪರಿಹಾರಕ್ಕಾಗಿ 1992ರಿಂದ ಅನ್ನ ಆಹಾರ ತ್ಯಜಿಸಿ ಉಪವಾಸ ಮಾಡಿಕೊಂಡು ಬಂದಿದ್ದಾರೆ. ಜಮೀನು ವಿವಾದ ಇತ್ಯರ್ಥವಾಗುವ ತನಕ ಅಂದರೆ 27 ವರ್ಷ ಕಾಲ ಬರೀ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ ಕಾದು ಭಕ್ತಿ ಮೆರೆದಿದ್ದಾರೆ. ಇದನ್ನೂ ಓದಿ:ಅಯೋಧ್ಯೆ ರಾಮನಿಗೆ ಸಿಗಲು ‘ಸ್ಕಂದ’ ಕಾರಣ

    ಈ ಬಗ್ಗೆ ಊರ್ಮಿಳಾ ಮಗ ಅಮಿತ್ ಚರ್ತುವೇದಿ ಮಾತನಾಡಿ, ಶನಿವಾರ ಸುಪ್ರೀಂ ಕೋರ್ಟಿನ ಸಂವಿಧಾನ ಪೀಠ ಅಯೋಧ್ಯೆ ತೀರ್ಪು ಹೊರಡಿಸಿರುವುದನ್ನು ಕೇಳಿ ಅಮ್ಮ ಖುಷಿಪಟ್ಟಿದ್ದಾರೆ. 27 ವರ್ಷದಿಂದ ಊಟ ಬಿಟ್ಟಿದ್ದ ಅವರು ಈಗ ಊಟ ಮಾಡಲು ತೀರ್ಮಾನಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ:ರಾಮ ಮಂದಿರ ನಿರ್ಮಾಣಕ್ಕೆ 5 ವರ್ಷ ಬೇಕು

    ಅಮ್ಮ ಶ್ರೀರಾಮನ ದೊಡ್ಡ ಭಕ್ತೆ, ಅಯೋಧ್ಯೆ ಜಮೀನು ವಿವಾದ ಪರಿಹಾರಕ್ಕಾಗಿ ಎರಡು ದಶಕಗಳಿಂದ ಅವರು ಕಾಯುತ್ತಿದ್ದರು. ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ಸಂಸ್ಕೃತ ಭಾಷಾ ಶಿಕ್ಷಕಿಯಾಗಿ ಅಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸಗೊಂಡು ದೇಶದಾದ್ಯಂತ ಹಿಂಸಾಚಾರ ನಡೆದಾಗ ಅವರು ಬಹಳ ಖಿನ್ನತೆಗೊಳಗಾಗಿದ್ದರು. ತಮ್ಮ 54ನೇ ವಯಸ್ಸಿನಲ್ಲಿ ಅವರು ಉಪವಾಸ ಮಾಡಲು ಆರಂಭಿಸಿದರು. ಅನ್ನ ಸೇವಿಸುವುದನ್ನು ಬಿಟ್ಟು ಕೇವಲ ಹಣ್ಣು ಮತ್ತು ಹಾಲನ್ನು ಮಾತ್ರ ಸೇವನೆ ಮಾಡಿಕೊಂಡು ಬಂದಿದ್ದಾರೆ. ಸಂಬಂಧಿಕರು ಹಲವು ಬಾರಿ ಊಟ ಮಾಡುವಂತೆ ಮನವಿ ಮಾಡಿದರೂ ಅಮ್ಮ ಮಾತ್ರ ತಮ್ಮ ನಿರ್ಧಾರವನ್ನು ಕೈಬಿಡಲಿಲ್ಲ ಎಂದು ಅಮಿತ್ ತಿಳಿಸಿದರು. ಇದನ್ನೂ ಓದಿ:ಅಯೋಧ್ಯೆ ಕೇಸ್ – 92 ವರ್ಷದ ‘ತರುಣ’ ವಕೀಲನ ಸಾಧನೆಗೆ ಪ್ರಶಂಸೆಯ ಸುರಿಮಳೆ

    ಅಯೋಧ್ಯೆ ಜಮೀನು ವಿವಾದ ತೀರ್ಮಾನವಾಗಿ ಅಮ್ಮನ ಆಸೆ ನೆರವೇರಿದೆ. ಶೀಘ್ರದಲ್ಲೇ ನಮ್ಮ ಕುಟುಂಬ ಅಮ್ಮನ ಉಪವಾಸ ಕೈಬಿಡುವ `ಉದ್ಯಾಪನ್’ ಕಾರ್ಯಕ್ರಮವನ್ನು ಆಯೋಜಿಸಲಿದೆ. ಹಾಗೆಯೇ ನನ್ನ ಅಮ್ಮ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಹೊಂದಿಲ್ಲ ಎಂದು ಅಮಿತ್ ಮಾಹಿತಿ ನೀಡಿದರು.