Tag: teacher

  • ಎಲ್ಲರೂ ನೋಡ್ತಿದ್ದಂತೆ ರೂಮಿಗೆ ಎಳ್ದುಕೊಂಡು ಹೋಗಿ ಪ್ರೇಯಸಿಯ ಹತ್ಯೆ

    ಎಲ್ಲರೂ ನೋಡ್ತಿದ್ದಂತೆ ರೂಮಿಗೆ ಎಳ್ದುಕೊಂಡು ಹೋಗಿ ಪ್ರೇಯಸಿಯ ಹತ್ಯೆ

    ಡೆಹ್ರಾಡೂನ್: ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಲಾ ಶಿಕ್ಷಕನೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರಖಾಂಡದ ಋಷಿಕೇಶ್ ನಗರದಲ್ಲಿ ನಡೆದಿದೆ.

    ಕಲ್ಯಾಣಿ ಕೊಲೆಯಾದ ಯುವತಿ. ಆರೋಪಿ ಅಜಯ್ ಯಾದವ್ ತನ್ನ ಪ್ರೇಯಸಿಯನ್ನೇ ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಸದ್ಯಕ್ಕೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾನೆಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಏನಿದು ಪ್ರರಕಣ?
    ಮೃತ ಕಲ್ಯಾಣಿ ನೇಪಾಳಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಅದೇ ಶಾಲೆಯಲ್ಲಿ ಆರೋಪಿ ಕೂಡ ಕೆಲಸ ಮಾಡುತ್ತಿದ್ದು, ಇಬ್ಬರಿಗೂ ಪರಿಚಯವಿತ್ತು. ಇಬ್ಬರು ಪ್ರೀತಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಆದರೆ ಕಲ್ಯಾಣಿಗೆ ಶಾಲೆಗೆ ಹೋಗಬೇಕೆಂದು ಸಿದ್ಧವಾಗುತ್ತಿದ್ದಳು. ಆಗ ಆರೋಪಿ ಸ್ಕೂಟಿಯಲ್ಲಿ ಆಕೆಯಿದ್ದ ಬಾಡಿಗೆ ಮನೆಗೆ ಬಂದಿದ್ದಾನೆ.

    ಏಕಾಏಕಿ ಮನೆಯ ಮುಂದೆಯೇ ಕಲ್ಯಾಣಿ ಜೊತೆ ಜಗಳವಾಡಲು ಶುರುಮಾಡಿದ್ದಾನೆ. ಇದರಿಂದ ಮನೆ ಮಾಲೀಕ ಸೇರಿದಂತೆ ಸುತ್ತಮುತ್ತಲಿನ ಜನರು ಬಂದಿದ್ದಾರೆ. ಆದರೆ ಆತ ಕಲ್ಯಾಣಿಯನ್ನು ಬಲವಂತವಾಗಿ ಮನೆಯೊಳಗೆ ಎಳೆದುಕೊಂಡು ಹೋಗಿ ಬಾಗಿಲು ಲಾಕ್ ಮಾಡಿಕೊಂಡು ಚಾಕುವಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇತ್ತ ಸ್ಥಳದಲ್ಲಿದ್ದವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಬಾಗಿಲನ್ನು ಮುಗಿದು ರೂಮಿನೊಳಗೆ ಹೋಗಿದ್ದಾರೆ. ರೂಮಿನ ತುಂಬಾ ರಕ್ತ ಚೆಲ್ಲಿದ್ದು, ಕಲ್ಯಾಣಿಯ ಮೃತದೇಹ ಪತ್ತೆಯಾಗಿದೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಏಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

    ಪೊಲೀಸರು ಬರುವಷ್ಟರಲ್ಲಿ ಆರೋಪಿ ತಪ್ಪಿಸಿಕೊಂಡು ಹೋಗಬಾರದೆಂದು ಜನರು ಆತನನ್ನು ಹಿಡಿದುಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಆಸ್ಪತ್ರೆಗೆ ದಾಖಲಿಸಿ ತನಿಖೆಯನ್ನು ಮುಂದುವರಿಸಿದ್ದಾರೆ.

    ಮೊದಲಿಗೆ ನಾವು ಮೃತ ಕಲ್ಯಾಣಿಯ ತಂದೆಯ ಬಳಿ ಎಲ್ಲ ವಿಚಾರವನ್ನು ಕೇಳಿ ತಿಳಿದುಕೊಂಡಿದ್ದೇವೆ. ಆದರೆ ಆಕೆಯ ತಾಯಿ ಮಗಳ ಸಾವನ್ನು ನೋಡಿ ತಕ್ಷಣವೇ ಪ್ರಜ್ಞೆ ತಪ್ಪಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ. ಆದರೆ ಮಗಳ ಕೊಲೆಯಿಂದ ತಾಯಿ ಆಘಾತಕ್ಕೊಳಗಾಗಿ ಪದೇ ಪದೇ ಪ್ರಜ್ಞೆ ತಪ್ಪುತ್ತಿದ್ದಾರೆ. ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಆತ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

  • ಶಿಕ್ಷಕಿ ಕ್ರೌರ್ಯಕ್ಕೆ ಕಣ್ಣು ಕಳೆದುಕೊಂಡ ಎಲ್‍ಕೆಜಿ ವಿದ್ಯಾರ್ಥಿ

    ಶಿಕ್ಷಕಿ ಕ್ರೌರ್ಯಕ್ಕೆ ಕಣ್ಣು ಕಳೆದುಕೊಂಡ ಎಲ್‍ಕೆಜಿ ವಿದ್ಯಾರ್ಥಿ

    ಹಾಸನ: ಶಿಕ್ಷಕಿಯೊಬ್ಬರ ಕ್ರೌರ್ಯಕ್ಕೆ ವಿದ್ಯಾರ್ಥಿಯೋರ್ವ ಕಣ್ಣು ಕಳೆದುಕೊಂಡ ಘಟನೆ ಜಿಲ್ಲೆಯ ಹೊರವಲಯದ ಎಲ್‍ವಿಜಿಎಸ್ ಶಾಲೆಯಲ್ಲಿ ನಡೆದಿದೆ.

    ವಿದ್ಯಾರ್ಥಿ ಮನಿಷ್ ದೃಷ್ಟಿ ಕಳೆದುಕೊಂಡಿದ್ದಾನೆ. ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಗಿರಿಜಾ ಅವರ ವಿರುದ್ಧ ಈ ಆರೋಪ ಕೇಳಿಬಂದಿದೆ. ಮನಿಷ್ ಎಲ್‍ಕೆಜಿಯಲ್ಲಿ ವ್ಯಾಸಂಗ ವಾಡುತ್ತಿದ್ದಾನೆ. ಅಗಸ್ಟ್ 13ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಶಿಕ್ಷಕಿ ಮನಿಷ್ ಕಣ್ಣಿಗೆ ಕಬ್ಬಿಣದ ಸ್ಕೇಲ್‍ನಿಂದ ಹಲ್ಲೆ ಮಾಡಿದ್ದಾರೆ. ಹೀಗಾಗಿ ನಮ್ಮ ಮಗನಿಗೆ ಕಣ್ಣು ಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂದು ಪೋಷಕರು ಶಿಕ್ಷಕಿ ವಿರುದ್ಧ ಆರೋಪಿಸಿದ್ದಾರೆ.

    ಶಿಕ್ಷಕಿ ಹಲ್ಲೆ ನಡೆಸಿದ ದಿನದಿಂದ ವಿದ್ಯಾರ್ಥಿ ಕಣ್ಣು ನೋವು ಎಂದು ಹೇಳುತ್ತಿದ್ದನು. ಹೀಗಾಗಿ ವೈದ್ಯರ ಬಳಿ ಚಿಕಿತ್ಸೆಗೆ ಪೋಷಕರು ವಿದ್ಯಾರ್ಥಿಯನ್ನು ಕರೆದುಕೊಂಡ ಹೋದಾಗ ಆತನ ಕಣ್ಣಿಗೆ ಬಲವಾಗಿ ಹಾನಿಯಾಗಿದೆ ಎಂಬ ಸತ್ಯಾಂಶ ಹೊರಬಿದ್ದಿದೆ. ಹೀಗಾಗಿ ಶಿಕ್ಷಕಿಯ ಕ್ರೌರ್ಯಕ್ಕೆ ವಿದ್ಯಾರ್ಥಿ ಕಣ್ಣು ಕಳೆದುಕೊಂಡಿದ್ದಾನೆ. ಇದರಿಂದ ಪೋಷಕರು ಶಿಕ್ಷಕಿ ಹಾಗೂ ಶಾಲಾ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದಿದ್ದಾರೆ.

    ಹಾಗೆಯೇ ಈ ಬಗ್ಗೆ ಪೊಲೀಸರಿಗೆ ಶಿಕ್ಷಕಿ ಹಾಗೂ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಸದ್ಯ ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹೆಡ್‍ಫೋನ್ ಬೆಲೆ ಜಗಳ ಶಿಕ್ಷಕನ ಕೊಲೆಯಲ್ಲಿ ಅಂತ್ಯ

    ಹೆಡ್‍ಫೋನ್ ಬೆಲೆ ಜಗಳ ಶಿಕ್ಷಕನ ಕೊಲೆಯಲ್ಲಿ ಅಂತ್ಯ

    ನವದೆಹಲಿ: ಹೆಡ್‍ಫೋನ್ ಬೆಲೆ ವಿಚಾರವಾಗಿ ಶಿಕ್ಷಕನನ್ನು ಇಬ್ಬರು ವ್ಯಾಪಾರಿಗಳು ಹೊಡೆದು ಕೊಲೆ ಮಾಡಿರುವ ಘಟನೆ ಉತ್ತರ ದೆಹಲಿಯ ಕೊತ್ವಾಲಿ ಪ್ರದೇಶದಲ್ಲಿ ನಡೆದಿದೆ.

    27 ವರ್ಷದ ಮೊಹಮ್ಮದ್ ಒವೈಶ್ ಕೊಲೆಯಾದ ಶಿಕ್ಷಕ. ಇವರು ದೆಹಲಿಯ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದನು. ಕೊಲೆ ಆರೋಪಿಗಳನ್ನು ಅಲ್ಲನ್ ಮತ್ತು ಅಯೂಬ್ ಎಂದು ಗುರುತಿಸಲಾಗಿದೆ.

    ದೆಹಲಿಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಒವೈಶ್ ಕೆಲಸ ಮುಗಿಸಿ ಉತ್ತರ ಪ್ರದೇಶದ ತನ್ನ ಮನೆಗೆ ಹೋಗಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾನೆ. ಈ ವೇಳೆ ರಸ್ತೆ ಬದಿಯಲ್ಲಿ ಮಾರುತ್ತಿದ್ದ ಹೆಡ್‍ಫೋನ್ ಕೊಂಡುಕೊಳ್ಳಲು ಹೋದಾಗ ಬೆಲೆ ವಿಚಾರಕ್ಕೆ ಓವೈಶ್ ಮತ್ತು ಅಲ್ಲನ್ ನಡುವೆ ಜಗಳವಾಗಿದೆ. ಈ ವೇಳೆ ಕೋಪಗೊಂಡ ಹೆಡ್‍ಫೋನ್ ವ್ಯಾಪಾರಿಗಳು ಶಿಕ್ಷಕನನ್ನು ಹೊಡೆದು ಸಾಯಿಸಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಹರೇಂದ್ರ ಕುಮಾರ್ ಸಿಂಗ್, ನಮಗೆ ರೈಲ್ವೆ ನಿಲ್ದಾಣದ ಬಳಿ ಒಬ್ಬ ವ್ಯಕ್ತಿ ಬಿದ್ದಿದ್ದಾನೆ ಎಂದು ಕರೆ ಬಂತು. ನಾವು ತಕ್ಷಣ ಅಲ್ಲಿಗೆ ಹೋಗಿ ಅವನನ್ನು ಅಸಫ್ ಅಲಿ ಆಸ್ಪತ್ರೆಗೆ ದಾಖಲು ಮಾಡಿದೆವು. ಅಲ್ಲಿನ ವೈದ್ಯರು ಆತ ಅದಾಗಲೇ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದರು. ನಂತರ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಆತನ ಕುಟುಂಬಕ್ಕೆ ಹಸ್ತಾಂತರ ಮಾಡಿರುವುದಾಗಿ ಹೇಳಿದರು.

  • 7ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಶಿಕ್ಷಕ

    7ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಶಿಕ್ಷಕ

    ತಿರುವನಂತಪುರಂ: 12 ವರ್ಷದ ಬಾಲಕಿ ಮೇಲೆ ಶಿಕ್ಷಕನೇ ಅತ್ಯಾಚಾರ ಎಸಗಿದ್ದು, 7ನೇ ತರಗತಿ ವಿದ್ಯಾರ್ಥಿನಿ ಇದೀಗ ಗರ್ಭಿಣಿಯಾಗಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.

    ಕುಟುಂಬಸ್ಥರು ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋದಾಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಅತ್ಯಾಚಾರ ಎಸಗಿದ 30 ವರ್ಷದ ಶಾಲಾ ಶಿಕ್ಷಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದಾರೆ.

    ವಿದ್ಯಾರ್ಥಿನಿ ಮೇಲೆ ಸತತ ಎರಡು ತಿಂಗಳಿಂದ ಅತ್ಯಾಚಾರ ಮಾಡಲಾಗಿದ್ದು, ಈ ಕುರಿತು ಕುಟುಂಬಸ್ಥರಿಗೆ ತಿಳಿದಿಲ್ಲ. ತಪಾಸಣೆಗಾಗಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ನಂತರ ಕುಟುಂಬಸ್ಥರಿಗೆ ಹಾಗೂ ಪೊಲೀಸರಿಗೆ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಕುರಿತು ತಿಳಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕುರಿತು ವಿದ್ಯಾರ್ಥಿನಿಯ ಹೇಳಿಕೆ ಪಡೆದಿದ್ದು, ತನ್ನ ಶಿಕ್ಷಕನೇ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾಳೆ. ನಾಪತ್ತೆಯಾದ ಶಿಕ್ಷಕನ ಮೇಲೆ ಅತ್ಯಾಚಾರ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

  • ತರಗತಿಯಲ್ಲಿ ಕುಡಿದು ಮಲಗಿದ್ದ ಶಿಕ್ಷಕ – ಡಿಸಿಯಿಂದ ಅಮಾನತು

    ತರಗತಿಯಲ್ಲಿ ಕುಡಿದು ಮಲಗಿದ್ದ ಶಿಕ್ಷಕ – ಡಿಸಿಯಿಂದ ಅಮಾನತು

    ರಾಯ್ಪುರ: ತರಗತಿಯಲ್ಲಿ ಕುಡಿದು ಮಲಗಿದ್ದ ಶಿಕ್ಷಕನನ್ನು ಜಿಲ್ಲಾಧಿಕಾರಿ ಅಮಾನತು ಮಾಡಿರುವ ಘಟನೆ ಛತ್ತೀಸ್‍ಗಢದ ಆಶ್‍ಪುರದಲ್ಲಿ ನಡೆದಿದೆ.

    ಆಶ್‍ಪುರ ಜಿಲ್ಲೆಯ ತುರಾಂಗ್‍ಖಾರ್ ಎಂಬ ಹಳ್ಳಿಯ ಪ್ರಾಥಮಿಕ ಶಾಲೆಯ ಶಿಕ್ಷಕನೊಬ್ಬ ಶಾಲೆಗೆ ಮದ್ಯಪಾನ ಮಾಡಿಕೊಂಡು ಬಂದು ಮಕ್ಕಳಿಗೆ ಪಾಠ ಮಾಡದೇ ತರಗತಿಯಲ್ಲಿ ಮಲಗಿದ್ದ.

    ಕುಡಿದು ಶಾಲೆಗೆ ಬಂದಿದ್ದ ಶಿಕ್ಷಕ ತರಗತಿಯಲ್ಲಿ ಪಾಠ ಮಾಡದೇ ಮಾಲಗಿದ್ದನ್ನು ಅಲ್ಲಿನ ಸ್ಥಳೀಯರು ವಿಡಿಯೋ ಮಾಡಿದ್ದಾರೆ. ನಂತರ ಅವನನ್ನು ಎಬ್ಬಿಸಿ ಪ್ರಶ್ನೆ ಮಾಡಿದ್ದಕ್ಕೆ ನಾನು ಮದ್ಯಪಾನ ಮಾಡಿಲ್ಲ ಎಂದು ಹೇಳಿದ್ದಾನೆ. ಈಗ ಈ ವಿಚಾರವಾಗಿ ಸ್ಥಳೀಯರು ಮಕ್ಕಳ ಬಳಿ ಮಾಹಿತಿ ಪಡೆದು ಶಿಕ್ಷಕನ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಜನರು ಒತ್ತಾಯ ಮಾಡಿದ್ದರು.

    ಈ ವಿಚಾರವಾಗಿ ಮಾತನಾಡಿರುವ ಜಿಲ್ಲಾ ಶಿಕ್ಷಣಾಧಿಕಾರಿ ಬಾಲಾ ರಾಮ್ ಧ್ರುವ ಈ ಘಟನೆಯ ಬಗ್ಗೆ ಪ್ರಸ್ತುತ ವರದಿಗಾಗಿ ಕಾಯಲಾಗುತ್ತಿದ್ದು, ವರದಿ ಬಂದಲ್ಲಿ ಅ ವರದಿಯ ಆಧಾರದ ಮೇಲೆ ಅ ಶಿಕ್ಷಕನಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

  • ಪಾಠ ಮಾಡ್ತಿದ್ದ ಶಿಕ್ಷಕಿ ಪತ್ನಿಗೆ ವಿದ್ಯಾರ್ಥಿಗಳ ಮುಂದೆಯೇ ಚಾಕು ಇರಿದ

    ಪಾಠ ಮಾಡ್ತಿದ್ದ ಶಿಕ್ಷಕಿ ಪತ್ನಿಗೆ ವಿದ್ಯಾರ್ಥಿಗಳ ಮುಂದೆಯೇ ಚಾಕು ಇರಿದ

    ಚೆನ್ನೈ: ವ್ಯಕ್ತಿಯೊಬ್ಬ 35 ವರ್ಷದ ಶಿಕ್ಷಕಿ ಪತ್ನಿಯನ್ನು ಪಾಠ ಮಾಡುತ್ತಿದ್ದಾಗ ವಿದ್ಯಾರ್ಥಿಗಳ ಮುಂದೆಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಮಧುರೈ ಬಳಿಯ ತಿರುಮಂಗಲಂನಲ್ಲಿ ನಡೆದಿದೆ.

    ತಿರುಮಂಗಲಂನಲ್ಲಿರುವ ಸರ್ಕಾರಿ ಶಾಲೆಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಜಿ. ರತಿದೇವಿ ಮೃತ ಶಿಕ್ಷಕಿ. ರತಿದೇವಿ ಕರಿಯಪಟ್ಟಿ ಸಮೀಪದ ಸೀತಾನೆಂಡಲ್ ಗ್ರಾಮದವರಾಗಿದ್ದಾರೆ. ಪತಿ ರಾಮನಾಥಪುರಂನ ಓಂಸಕ್ತಿನಗರ ನಿವಾಸಿ ಜಿ.ಗುರುಮುನೀಶ್ವರನ್ ಕೌಟುಂಬಿಕ ಕಾರಣದಿಂದ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ರತಿದೇವಿ ಸೋಮವಾರ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದರು. ಆಗ ಆರೋಪಿ ಗುರುಮುನೀಶ್ವರನ್ ಕ್ಲಾಸ್‍ರೂಮಿಗೆ ಹೋಗಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಆರೋಪಿ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

    ಏನಿದು ಪ್ರಕರಣ?
    ಗುರುಮುನೀಶ್ವರನ್ ಆರು ವರ್ಷಗಳ ಹಿಂದೆ ರತಿದೇವಿಯನ್ನು ಮದುವೆಯಾಗಿದ್ದನು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ಮೃತ ರತಿದೇವಿ 10 ತಿಂಗಳ ಹಿಂದೆ ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ಪತಿಯಿಂದ ಬೇರೆಯಿದ್ದರು. ಮೃತ ರತಿದೇವಿ ಸುಮಾರು ಮೂರುವರೆ ವರ್ಷದಿಂದ ಶಿಕ್ಷಕಿಗಾಗಿ ಕೆಲಸ ಮಾಡುತ್ತಿದ್ದರು. ಆರೋಪಿ ಸಿವಿಲ್ ಎಂಜಿನಿಯರ್ ಮಾಡಿದ್ದು, ವಿದೇಶದಲ್ಲಿ ಕೆಲಸ ಮಾಡುತ್ತಿದ್ದನು. ಈತ ಮೂರು ವರ್ಷದ ಹಿಂದೆ ಭಾರತಕ್ಕೆ ಹಿಂದಿರುಗಿ ಪತ್ನಿಯಿಂದ ಬೇರೆಯಾದ ಬಳಿಕ ವಿರುಧುನಗರದಲ್ಲಿ ವಾಸಿಸುತ್ತಿದ್ದನು. ಮಕ್ಕಳು ತಾಯಿ ರತಿದೇವಿ ಬಳಿ ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

    ಕೊಲೆ:
    ಸೋಮವಾರ ಮಧ್ಯಾಹ್ನ ಆರೋಪಿ ಶಾಲೆ ಸೆಕ್ಯೂರಿಟಿ ಬಳಿ ಅನುಮತಿ ಪಡೆದು ಶಾಲೆಯೊಳಗೆ ಹೋಗಿದ್ದಾನೆ. ಶಾಲೆಯ ಕಟ್ಟಡದ 2ನೇ ಮಹಡಿಯಲ್ಲಿ ರತಿದೇವಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಹೋಗಿ ಪತ್ನಿಯೊಂದಿಗೆ ಜಗಳ ಮಾಡಿದ್ದಾನೆ. ನಂತರ ಏಕಾಏಕಿ ಚಾಕು ತೆಗೆದು ವಿದ್ಯಾರ್ಥಿಗಳ ಮುಂದೆಯೇ ರತಿದೇವಿಗೆ ಇರಿದ್ದಾನೆ. ಆಗ ವಿದ್ಯಾರ್ಥಿಗಳು ಭಯದಿಂದ ಕಿರುಚಾಡಿದ್ದಾರೆ. ಮಕ್ಕಳ ಕೂಗಾಟ ಕೇಳಿ ಬೇರೆ ಶಿಕ್ಷಕರು ಬಂದಿದ್ದಾರೆ. ಆದರೆ ಅವರು ಬರುವಷ್ಟರಲ್ಲಿ ರತಿದೇವಿ ಮೃತಪಟ್ಟಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಿದ್ದನು.

    ಮಾಹಿತಿ ತಿಳಿದು ಪೊಲೀಸರು ಶಾಲೆಗೆ ಹೋಗಿ ವಿಚಾರಣೆ ಮಾಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದೇವೆ. ಈಗಾಗಲೇ ಆರೋಪಿಯನ್ನು ಬಂಧಿಸಿದ್ದೇವೆ ಎಂದು ಡಿಎಸ್‍ಪಿ ತಿಳಿಸಿದ್ದಾರೆ.

  • ಹೋಂವರ್ಕ್ ಮಾಡ್ಕೊಂಡು ಬಾರದ ವಿದ್ಯಾರ್ಥಿಗಳಿಗೆ ಬಳೆ ತೊಡಿಸಿದ ಟೀಚರ್

    ಹೋಂವರ್ಕ್ ಮಾಡ್ಕೊಂಡು ಬಾರದ ವಿದ್ಯಾರ್ಥಿಗಳಿಗೆ ಬಳೆ ತೊಡಿಸಿದ ಟೀಚರ್

    ಗಾಂಧೀನಗರ: ಹೋಂ ವರ್ಕ್ ಮಾಡಿಕೊಂಡು ಬಾರದ ಮೂವರು ವಿದ್ಯಾರ್ಥಿಗಳಿಗೆ ಶಿಕ್ಷೆಯಾಗಿ ಟೀಚರ್ ಬಳೆ ತೊಡಿಸಿದ ಘಟನೆ ಗುಜರಾತ್ ನ ಮೆಹ್ಶಾನ ಜಿಲ್ಲೆಯ ಖೆರಲು ತಾಲೂಕಿನಲ್ಲಿ ನಡೆದಿದೆ.

    ಸರ್ಕಾರಿ ಪ್ರಾಥಮಿಕ ಶಾಲೆಯ ಟೀಚರ್ ಮನಭಾಯ್ ಪ್ರಜಾಪತಿ ಮೇಲೆ ಈ ಆರೋಪ ಕೇಳಿಬಂದಿದೆ. 6 ನೇ ತರಗತಿಯ ಮೂವರು ವಿದ್ಯಾರ್ಥಿಗಳು ಟೀಚರ್ ಕೊಟ್ಟ ಮನೆ ಕೆಲಸವನ್ನು ಸಂಪೂರ್ಣ ಮಾಡದೇ ಶಾಲೆಗೆ ಬಂದಿದ್ದಾರೆ.

    ತರಗತಿಗೆ ಬಂದ ಟೀಚರ್ ಎಲ್ಲರ ಹೋಂ ವರ್ಕ್ ಗಮನಿಸಿದ್ದಾರೆ. ಈ ವೇಳೆ ಮೂವರು ಟೀಚರ್ ಕೊಟ್ಟ ಕೆಲಸವನ್ನು ಸಂಪೂರ್ಣ ಮಾಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ಟೀಚರ್, ಬಳೆ ಹಾಕಿಕೊಂಡಿದ್ದ ವಿದ್ಯಾರ್ಥಿನಿಯನ್ನು ಕರೆದು ಕೈಯಲಿದ್ದ ಬಳೆಯನ್ನು ಬಿಚ್ಚಿಕೊಡುವಂತೆ ಕೇಳಿದ್ದಾರೆ. ಹಾಗೆಯೇ ವಿದ್ಯಾರ್ಥಿನಿ ಕೂಡ ಬಳೆ ಬಿಚ್ಚಿ ಕೊಟ್ಟಿದ್ದಾಳೆ. ನಂತರ ಟೀಚರ್ ಮೂವರೂ ವಿದ್ಯಾರ್ಥಿಗಳ ಕೈಗೆ ಬಳೆಗಳನ್ನು ತೊಡಿಸಿದ್ದಾರೆ.

    ಬಳೆ ತೊಡಿಸಿದ್ದ ಪರಿಣಾಮ ವಿದ್ಯಾರ್ಥಿಗಳು ನಾಚಿಕೆಯಿಂದ ಶುಕ್ರವಾರ ಹಾಗೂ ಶನಿವಾರ ಶಾಲೆಗೆ ಗೈರಾಗಿದ್ದಾರೆ. ಹೀಗಾಗಿ ಇದರಿಂದ ಗಾಬರಿಯಾದ ಮೂವರ ಪೋಷಕರು ಶನಿವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ನಡೆದ ಘಟನೆಯನ್ನು ವಿವರಿಸಿದ್ದಾರೆ.

    ಸದ್ಯ ಘಟನೆ ಸಂಬಂಧ ಟೀಚರ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇಂದು ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನೂ ಶಾಲೆಗೆ ಕರೆಸಿರುವುದಾಗಿ ಶಿಕ್ಷಣಾಧಿಕಾರಿ ಸ್ಮಿತಾ ಪಟೇಲ್ ತಿಳಿಸಿದ್ದಾರೆ.

    ಘಟನೆ ಸಂಬಂಧ ತನಿಖೆ ನಡೆಯುತ್ತಿರುವುದರಿಂದ ಶಿಕ್ಷಕಿಯನ್ನು ರಜೆಯ ಮೇಲೆ ಕಳುಹಿಸಲಾಗಿದೆ. ಇಂದಿನಿಂದ ಮೂವರು ವಿದ್ಯಾರ್ಥಿಗಳು ಕೂಡ ಶಾಲೆಗೆ ಬಂದಿದ್ದಾರೆ ಎಂದು ತಾಲೂಕು ಶಿಕ್ಷಣಾಧಿಕಾರಿ ಕಲ್ಪನಾ ಚೌಧರಿ ಹೇಳಿದ್ದಾರೆ.

  • ಶಿಕ್ಷಕಿಯ ಮೇಲೆ 2 ವರ್ಷಗಳಿಂದ ಅತ್ಯಾಚಾರವೆಸಗಿದ್ದ ಪ್ರಾಂಶುಪಾಲ ಅರೆಸ್ಟ್

    ಶಿಕ್ಷಕಿಯ ಮೇಲೆ 2 ವರ್ಷಗಳಿಂದ ಅತ್ಯಾಚಾರವೆಸಗಿದ್ದ ಪ್ರಾಂಶುಪಾಲ ಅರೆಸ್ಟ್

    – ಪಾನೀಯದಲ್ಲಿ ಮತ್ತು ಬರುವ ಔಷಧಿ ಹಾಕಿ ರೇಪ್

    ನವದೆಹಲಿ: ಶಿಕ್ಷಕಿಯ ಮೇಲೆ ಕಳೆದ 2 ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ್ದ ಪ್ರಾಂಶುಪಾಲನನ್ನು ದೆಹಲಿ ಪೊಲೀಸರು ಗುರುವಾರ ಬಂದಿಸಿದ್ದಾರೆ.

    ದಕ್ಷಿಣ ದೆಹಲಿಯ ಜಸೋಲ ಖಾಸಗಿ ಶಾಲೆಯ ಪ್ರಾಂಶುಪಾಲ ರಾಕೇಶ್ ಸಿಂಗ್ ಬಂಧಿತ ಪ್ರಾಂಶುಪಾಲ. 27 ವರ್ಷದ ಸಂತ್ರಸ್ತೆ ಬುಧವಾರ ನೀಡಿದ್ದ ದೂರು ಪಡೆದ ಪೊಲೀಸರು ಆರೋಪಿ ರಾಕೇಶ್ ಸಿಂಗ್‍ನನ್ನು ಬಂಧಿಸಿದ್ದಾರೆ.

    ಆಗಿದ್ದೇನು?:
    ಪ್ರಾಶುಂಪಾಲ ರಾಕೇಶ್ ಸಿಂಗ್ 2017ರ ಜೂನ್‍ನಲ್ಲಿ ಶಾಲಾ ಅವಧಿಯ ಬಳಿಕ ಸ್ಪೆಷಲ್ ಕ್ಲಾಸ್ ತೆಗೆದುಕೊಳ್ಳುವಂತೆ ಸಂತ್ರಸ್ತೆಯನ್ನು ಕರೆದಿದ್ದನು. ನಂತರ ಶಿಕ್ಷಕಿಯನ್ನು ತನ್ನ ಕಚೇರಿಗೆ ಕರೆದುಕೊಂಡು ಹೋಗಿ ಮತ್ತು ಬರುವ ಔಷಧ ಬೆರೆಸಿದ ಪಾನೀಯ ನೀಡಿದ್ದನು. ಇದನ್ನು ಕುಡಿದ ಶಿಕ್ಷಕಿ ಪ್ರಜ್ಞೆ ತಪ್ಪಿ ಬಿದ್ದ ವೇಳೆ ರಾಕೇಶ್ ಅತ್ಯಾಚಾರ ಮಾಡಿದ್ದಾನೆ. ಅಲ್ಲದೆ ಈ ದೃಶ್ಯವನ್ನು ತನ್ನ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಪೊಲೀಸ್ ಆಯುಕ್ತ ಚಿನ್ಮೊಯ್ ಬಿಸ್ವಾಲ್ ತಿಳಿಸಿದ್ದಾರೆ.

    ಪ್ರಾಂಶುಪಾಲ ತನ್ನ ಬಳಿ ಇದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಈ ಮೂಲಕ ಕಳೆದ 5 ವರ್ಷಗಳಿಂದ ಶಾಲೆಯ ಆವರಣದಲ್ಲಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಗೆ ಇಬ್ಬರು ಸಹ ಶಿಕ್ಷಕರು ಸಹಾಯ ಮಾಡಿದ್ದಾರೆ. ನಾನು ಗರ್ಭಿಣಿಯಾದಾಗ ಮಗುವನ್ನು ತೆಗೆಸುವಂತೆ ಒತ್ತಾಯಿಸಿದ್ದರು ಎಂದು ಸಂತ್ರಸ್ತೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಚಿನ್ಮೊಯ್ ಬಿಸ್ವಾಲ್ ವಿವರಿಸಿದ್ದಾರೆ.

    ಈ ಸಂಬಂಧ ಸಂತ್ರಸ್ತೆಯು ಸಾವಿತ್ರಿ ವಿಹಾರ್ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದಾರೆ. ಆರೋಪಿ ರಾಕೇಶ್ ಸಿಂಗ್‍ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.

  • ಮಾರ್ಕ್ಸ್‌ಗಾಗಿ ವಿದ್ಯಾರ್ಥಿನಿ ಜೊತೆ ಪ್ರಿನ್ಸಿಪಾಲ್ ಕಾಮದಾಟ

    ಮಾರ್ಕ್ಸ್‌ಗಾಗಿ ವಿದ್ಯಾರ್ಥಿನಿ ಜೊತೆ ಪ್ರಿನ್ಸಿಪಾಲ್ ಕಾಮದಾಟ

    ಗದಗ: ಕಾಲೇಜಿನ ಕಾಮುಕ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿ ಜೊತೆ ಅಶ್ಲೀಲವಾಗಿ ವರ್ತಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಖಾಸಗಿ ಕಾಲೇಜಿನ ಕನ್ನಡ ಉಪನ್ಯಾಸಕರು ಹಾಗೂ ಕಾಲೇಜಿನ ಪ್ರಾಂಶುಪಾಲ ಬಸವರಾಜ್ ವಿದ್ಯಾರ್ಥಿನಿ ಜೊತೆ ಅಶ್ಲೀಲವಾಗಿ ವರ್ತಿಸಿದ ಕಾಮುಕ. ಈತ ಕಾಲೇಜಿನ ವಿದ್ಯಾರ್ಥಿನಿ ಜೊತೆ ಚಿನ್ನ, ರನ್ನಾ, ಬಂಗಾರ ಎಂದು ಸೆಕ್ಸ್ ಪಾಠ ಮಾಡಿರುವುದು ಬೆಳಕಿಗೆ ಬಂದಿದೆ. ಇಂಟರ್ನಲ್ ಮಾರ್ಕ್ಸ್‌ ಗಾಗಿ ನಡೆದ ವಿದ್ಯಾರ್ಥಿನಿ ಹಾಗೂ ಪ್ರಾಂಶುಪಾಲನ ಕಾಮಪುರಾಣ ಈಗ ಬೆಳಕಿಗೆ ಬಂದಿದೆ.

    ಬೆಳಗ್ಗೆ ಸಭ್ಯನ ಹಾಗೆ ಬಂದು ಪಾಠ ಮಾಡುತ್ತಿದ್ದ ಬಸವರಾಜ್, ಆ ಬಳಿಕ ವಿದ್ಯಾರ್ಥಿನಿಯರ ಇಂಟರ್ನಲ್ ಮಾರ್ಕ್ಸ್‌ ಮುಂದಿಟ್ಟುಕೊಂಡು ಕಾಮದ ಪಾಠ ಶುರು ಮಾಡಿಕೊಳ್ಳುತ್ತಿದ್ದನು. ಇದೇ ರೀತಿ ಅರೆಬೆತ್ತಲಾಗಿ ಓರ್ವ ವಿದ್ಯಾರ್ಥಿನಿಗೆ ವಿಡಿಯೋ ಕಾಲ್ ಮಾಡಿ, ಅದರ ಸ್ಕ್ರೀನ್‍ಶಾಟ್ ತೆಗೆದು ಸರಿಯಾಗೇ ತಗಲಾಕ್ಕೊಂಡಿದ್ದಾನೆ. ಈ ಫೋಟೋ, ಮೆಸೇಜ್‍ಗಳು ವೈರಲ್ ಆಗಿದ್ದು, ಕಾಲೇಜಿನ ಹಳೆ ವಿದ್ಯಾರ್ಥಿಗಳು ಬಸವರಾಜ್‍ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಬಸವರಾಜ್ ಈ ರೀತಿ ಮಾಡಿರುವುದು ಇದೇ ಮೊದಲೇನಲ್ಲ. ಕಳೆದ ಮೂರ್ನಾಲ್ಕು ವರ್ಷಗಳಿಂದ ಇದೇ ರೀತಿ ಕಾಮಪುರಾಣ ಮುಂದುವರಿಸಿದ್ದಾನೆ. ಈ ಬಗ್ಗೆ ಕಾಲೇಜ್ ಆಡಳಿತಕ್ಕೆ ಕೇಳಿದರೆ ಸೂಕ್ತ ದಾಖಲೆ ನೀಡಿ, ರೈಟಿಂಗ್‍ನಲ್ಲಿ ಬರೆದುಕೊಡಿ ಎನ್ನುತ್ತಿದ್ದಾರೆ.

    ಏನು ಸಾರ್ ಹೀಗೆಲ್ಲಾ ಮಾಡುತ್ತಿರಲ್ಲ ಎಂದು ಬಸವರಾಜ್‍ನನ್ನು ಕೇಳಿದರೆ, ನಾನು ವಿದ್ಯಾರ್ಥಿನಿಯೊಂದಿಗೆ ಮೆಸೇಜ್ ಮಾಡಿದ್ದು ನಿಜ. ಆದರೆ ಇದು ನನ್ನ ಖಾಸಗಿ ಬದುಕು. ಯಾರೋ ನನ್ನ ಮತ್ತು ಆ ಹುಡುಗಿ ಮೊಬೈಲ್ ಹ್ಯಾಕ್ ಮಾಡಿ ಈ ಫೋಟೋ, ಮೆಸೇಜ್ ಕದ್ದಿದ್ದಾರೆ. ಅವರನ್ನು ಸುಮ್ನೆ ಬಿಡಲ್ಲ, ಕೇಸ್ ಹಾಕುತ್ತೇನೆ ಎಂದು ಎಚ್ಚರಿಕೆ ಕೊಟ್ಟಿದ್ದಾನೆ.

    ಭಾರತೀಯ ಪರಂಪರೆಯಲ್ಲಿ ಶಿಕ್ಷಕರಿಗೆ ಒಂದು ಮಹತ್ವದ ಸ್ಥಾನ ಇದೆ. ಆದರೆ ಇಂತಹ ಕೆಲ ನೀಚರಿಂದ ಶಿಕ್ಷಕರ ಹೆಸರು ಹಾಳಾಗುತ್ತಿದೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆ ಯಾವ ರೀತಿ ಕ್ರಮಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

  • ನೆಚ್ಚಿನ ಶಿಕ್ಷಕನ ವರ್ಗಾವಣೆ – ವಿದ್ಯಾರ್ಥಿಗಳಿಂದ ಕ್ಲಾಸ್ ಬಹಿಷ್ಕರಿಸಿ ಪ್ರತಿಭಟನೆ

    ನೆಚ್ಚಿನ ಶಿಕ್ಷಕನ ವರ್ಗಾವಣೆ – ವಿದ್ಯಾರ್ಥಿಗಳಿಂದ ಕ್ಲಾಸ್ ಬಹಿಷ್ಕರಿಸಿ ಪ್ರತಿಭಟನೆ

    ಕೊಪ್ಪಳ: ನೆಚ್ಚಿನ ಶಿಕ್ಷಕ ವರ್ಗಾವಣೆಯಾದ ಹಿನ್ನೆಲೆ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡಿರುವ ಘಟನೆ ಕೊಪ್ಪಳ ತಾಲೂಕಿನ ಹೀರೆಸಿಂಧೋಗಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

    ಇಲ್ಲಿನ ಪ್ರೌಢ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕಾರದ ಸೋಮರೆಡ್ಡಿ ಹೆಚ್ಚುವರಿ ಶಿಕ್ಷಕ ಎಂಬ ಕಾರಣಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕ್ಲಾಸ್ ಬಹಿಷ್ಕಾರ ಮಾಡಿ ಮಕ್ಕಳು ಪ್ರತಿಭಟನೆ ಮಾಡಿದ್ದಾರೆ.

    ಶಿಕ್ಷಕ ಸೋಮರೆಡ್ಡಿ ಅವರನ್ನು ಹೀರೆಸಿಂಧೋಗಿಯ ಸರ್ಕಾರಿ ಪ್ರೌಢಶಾಲೆಯಿಂದ ಕಾರಟಗಿ ತಾಲೂಕಿನ ನವಲಿ ಗ್ರಾಮಕ್ಕೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಶಾಲಾ ಮಕ್ಕಳು ನಮಗೆ ಸೋಮರೆಡ್ಡಿ ಶಿಕ್ಷಕರೇ ಬೇಕೆಂದು ಕ್ಲಾಸ್ ಬಹಿಷ್ಕರಿಸಿ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದರು.