Tag: teacher

  • ಮೀಟರ್ ಬಡ್ಡಿವ್ಯವಹಾರ ಮಾಡುತ್ತಾ ಶಾಲೆಗೆ ಬಾರದ ಶಿಕ್ಷಕನ ವಿರುದ್ಧ ಪ್ರತಿಭಟನೆ!

    ಮೀಟರ್ ಬಡ್ಡಿವ್ಯವಹಾರ ಮಾಡುತ್ತಾ ಶಾಲೆಗೆ ಬಾರದ ಶಿಕ್ಷಕನ ವಿರುದ್ಧ ಪ್ರತಿಭಟನೆ!

    ಕೋಲಾರ: ಮೀಟರ್ ಬಡ್ಡಿವ್ಯವಹಾರ ಮಾಡಿಕೊಂಡು ಶಾಲೆಗೆ ಬಾರದ ಶಿಕ್ಷಕನನ್ನು ವರ್ಗಾವಣೆ ಮಾಡಿ, ಬೇರೆ ಶಿಕ್ಷರನ್ನು ನೇಮಿಸುವಂತೆ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

    ಕೋಲಾರ ತಾಲೂಕಿನ ನಂದಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಂಜುಂಡಗೌಡ, ಊರಿನಲ್ಲಿ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದು, ಶಾಲೆಗೆ ಸರಿಯಾಗಿ ಹಾಜರಾಗುತ್ತಿಲ್ಲ. ಅಲ್ಲದೇ ಕಳೆದ 5 ವರ್ಷಗಳಿಂದಲೂ ಶಿಕ್ಷಕ ಶಾಲೆಗೆ ಸರಿಯಾಗಿ ಬಾರದೆ ವಿದ್ಯಾರ್ಥಿಗಳಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

    ಶಾಲೆಯಲ್ಲಿ ಸುಮಾರು 70 ಮಕ್ಕಳು ಕಲಿಯುತ್ತಿದ್ದು, ಶಿಕ್ಷಕನ ವರ್ತನೆಯಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಹೈರಾಣಾಗಿದ್ದಾರೆ. ಅಲ್ಲದೇ ಇದನ್ನು ಪ್ರಶ್ನಿಸುವ ಸಹ ಶಿಕ್ಷಕರ ಮೇಲೆಯೂ ರಾಜಕೀಯ ಪ್ರಭಾವ ಬಳಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ. ಶಿಕ್ಷಕನ ವರ್ತನೆಯಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಶಿಕ್ಷಕನನ್ನು ಕೂಡಲೇ ವರ್ಗಾವಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿದ್ಯಾರ್ಥಿ ತಡವಾಗಿ ಬಂದಿದ್ದಕ್ಕೆ ಎರಡು ಕೈಗೆ ಬರೆ ಹಾಕಿದ್ಲು ಟ್ಯೂಷನ್ ಶಿಕ್ಷಕಿ!

    ವಿದ್ಯಾರ್ಥಿ ತಡವಾಗಿ ಬಂದಿದ್ದಕ್ಕೆ ಎರಡು ಕೈಗೆ ಬರೆ ಹಾಕಿದ್ಲು ಟ್ಯೂಷನ್ ಶಿಕ್ಷಕಿ!

    ವಿಜಯಪುರ: ಟ್ಯೂಷನ್ ಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯ ಎರಡು ಕೈಗೆ ಬರೆ ಹಾಕಿದ ಅಮಾನವೀಯ ಘಟನೆ ವಿಜಯಪುರ ನಗರದ ಮಾರುತಿ ಕಾಲೊನಿಯಲ್ಲಿ ನಡೆದಿದೆ.

    ಆರು ವರ್ಷದ ವಿದ್ಯಾರ್ಥಿ ಶುಭಂ ರಾಠೋಡ್ ಮೇಲೆ ಟ್ಯೂಷನ್ ಶಿಕ್ಷಕಿ ಪಲ್ಲವಿ ಶರ್ಮಾ ಬರೆ ಹಾಕಿದ್ದಾಳೆ. ವಿಜಯಪುರದ ಮಾರುತಿ ನಗರದ ತನ್ನ ಮನೆಯಲ್ಲಿ ಪಲ್ಲವಿ ಶರ್ಮಾ ಟ್ಯೂಷನ್ ಹೇಳಿಕೊಡುತ್ತಿದ್ದು ಇಲ್ಲಿಗೆ ಒಂದನೇ ತರಗತಿ ಓದುತ್ತಿದ್ದ ಶುಭಂ ಕೂಡಾ ಟ್ಯೂಷನ್‍ಗೆ ಹೋಗುತ್ತಿದ್ದ.

    ಎರಡು ದಿನಗಳ ಹಿಂದೆ ಶುಭಂ ಟ್ಯೂಷನ್‍ಗೆ ತಡವಾಗಿ ಹೋಗಿದ್ದಕ್ಕೆ, ಆತನನ್ನು ಶಿಕ್ಷಕಿ ಪಲ್ಲವಿ ಹಿಡಿದು, ಕೂರಿಸಿ ಎರಡು ಕೈಗಳಿಗೆ ಬರೆ ಹಾಕಿದ್ದಾಳೆ. ಶಿಕ್ಷಕಿಯ ವರ್ತನೆಯಿಂದ ಕೋಪಗೊಂಡು ಏಕೆ ಹೀಗೆ ಮಾಡಿದ್ದು ಎಂದು ವಿಚಾರಿಸಿದ್ದಕ್ಕೆ ನಮ್ಮ ಮೇಲೆಯೇ ಪಲ್ಲವಿ ರೇಗಾಡಿ, ಧಮ್ಕಿ ಹಾಕಿದ್ದಾಳೆ ಎಂದು ವಿದ್ಯಾರ್ಥಿಯ ತಾಯಿ ಅನಿತಾ ರಾಠೋಡ ಆರೋಪಿಸಿದ್ದಾರೆ. ಈ ಕುರಿತು ಶುಭಂ ಪೋಷಕರು ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಅರೆ ಬೆತ್ತಲೆಯಾಗಿ ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಕಳ್ಳತನಕ್ಕೆ ಯತ್ನ!

    ಅರೆ ಬೆತ್ತಲೆಯಾಗಿ ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಕಳ್ಳತನಕ್ಕೆ ಯತ್ನ!

    – ಸಿಸಿಟಿವಿಯಲ್ಲಿ ಸೆರೆಯಾಯ್ತು ವಿಚಿತ್ರ ಕಳ್ಳರ ದೃಶ್ಯ

    ತುಮಕೂರು: ಅರೆ ಬೆತ್ತಲೆಯಾಗಿ ಸೊಂಟಕ್ಕೆ ಕಲ್ಲುಗಳು ತುಂಬಿರುವ ಬಟ್ಟೆಕಟ್ಟಿಕೊಂಡು ವಿಚಿತ್ರ ವೇಷದಲ್ಲಿ ಬಂದ ಕಳ್ಳರ ಗುಂಪೊಂದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕು ಹುಲಿಯೂರುದುರ್ಗದಲ್ಲಿ ನಡೆದಿದೆ.

    ಹುಲಿಯೂರು ದುರ್ಗದ ಶೃಂಗಾರ ಸಾಗರ ಬಡಾವಣೆಯಲ್ಲಿರುವ ನಿವೃತ್ತ ಶಿಕ್ಷಕಿ ಸಾವಿತ್ರಿ ಭಟ್ ಮನೆ ಕಳ್ಳತನ ಮಾಡಲು ಯತ್ನಿಸಿದ್ದಾರೆ. ಗುರುವಾರ ರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದು, ವಿಚಿತ್ರ ವೇಷದಲ್ಲಿ ಬರುವ ಕಳ್ಳರ ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಕಳ್ಳರ ವಿಚಿತ್ರ ವೇಷ ನೋಡುವವರಿಗೆ ಭಯ ಹುಟ್ಟಿಸುವ ಆಗಿದ್ದು, ಅರೆಬೆತ್ತಲೆಯಾಗಿ ಮನೆಯ ಬಳಿ ಸಾವಿತ್ರಿ ಅವರ ಮನೆಯೊಳಗೆ ಮೂವರು ಪ್ರವೇಶ ಮಾಡಿ ಸುಮಾರು ಒಂದೂವರೆ ಗಂಟೆಗಳ ಕಾಲ ಮನೆಯ ಬೀರು ಒಡೆಯಲು ಪ್ರಯತ್ನಿಸಿದ್ದಾರೆ. ಆದರೆ ಬೀರು ತೆರೆಯಲು ಕಳ್ಳರು ವಿಫಲರಾಗಿದ್ದು, ಬೀರು ಮೇಲಿದ್ದ ಸುಮಾರು ಐದು ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ.

    ಕಳ್ಳತನಕ್ಕೆ ಯತ್ನಿಸಿದ ವೇಳೆ ಶಿಕ್ಷಕಿ ಸಾವಿತ್ರಿ ಅವರ ಮನೆಯಲ್ಲಿ ಯಾರು ಇರಲಿಲ್ಲ. ಇದನ್ನೇ ಅನುಕೂಲ ಮಾಡಿಕೊಂಡು ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ಕಳ್ಳರು ಕೃತ್ಯ ಎಸಗುವ ವೇಳೆ ಯಾರಾದರು ತಮ್ಮನ್ನು ನೋಡಿದರೆ ಅವರ ಮೇಲೆ ದಾಳಿ ನಡೆಸಲು ಈ ಉಪಾಯ ಬಳಸಿದ್ದಾರೆ.

    ಘಟನೆ ಕುರಿತು ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ವಿದ್ಯಾರ್ಥಿನಿಯರಿಂದ ಮನೆ ಕೆಲಸ – ತಪ್ಪೊಪ್ಪಿಕೊಂಡ ಕೊಪ್ಪಳ ಸ್ಕೂಲ್ ಮಾಸ್ಟರ್

    ವಿದ್ಯಾರ್ಥಿನಿಯರಿಂದ ಮನೆ ಕೆಲಸ – ತಪ್ಪೊಪ್ಪಿಕೊಂಡ ಕೊಪ್ಪಳ ಸ್ಕೂಲ್ ಮಾಸ್ಟರ್

    ಕೊಪ್ಪಳ: ಪಾಠ ಹೇಳಬೇಕಾದ ಶಿಕ್ಷಕನೊಬ್ಬ ಗಂಗಾವತಿ ತಾಲೂಕಿನ ಹೊಸಳ್ಳಿಯ ಕಲ್ಮಠ ಗ್ರಾಮದಲ್ಲಿ ಮಕ್ಕಳಿಂದ ಮನೆ ಕೆಲಸ ಮಾಡಿಸಿಕೊಂಡಿದ್ದಾನೆ.

    ದೈಹಿಕ ಶಿಕ್ಷಕನಾದ ಚಂದ್ರಶೇಖರ್ ಶಾಲೆಯಲ್ಲಿ ಓದುತ್ತಿರುವ ಆರನೇ ತರಗತಿ ಇಬ್ಬರು ವಿದ್ಯಾರ್ಥಿನಿಯರ ಕೈಯಲ್ಲಿ ಮನೆಯ ಬಟ್ಟೆಯನ್ನು ಒಗೆಸಿದ್ದಾನೆ. ಪುಟ್ಟ ಮಕ್ಕಳು ಬಟ್ಟೆ ಒಗೆದು ತಗೆದುಕೊಂಡು ಹೋಗುತ್ತಿರೋದನ್ನ ಹೊಸಳ್ಳಿಯ ಗ್ರಾಮಸ್ಥರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಶಿಕ್ಷಕ ಚಂದ್ರಶೇಖರ್‍ನನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಯಾಕೆ ಬಟ್ಟೆ ಒಗೆದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿಯರು, ಶಿಕ್ಷಕರೇ ನಮ್ಮನ್ನ ಬಟ್ಟೆ ಒಗೆಯಲು ಕಳುಹಿಸಿದ್ದರು. ನಂತರ ಅದನ್ನು ಮನೆಗೆ ಇಟ್ಟು ಬರಲು ಹೇಳಿದರು ಎಂದು ತಿಳಿಸಿದ್ದಾರೆ.

    ಸೋಮವಾರ ಯಲಬುರ್ಗಾ ತಾಲೂಕಿನ ವಣಗೇರಿ ಗ್ರಾಮದಲ್ಲಿ ಶಾಲಾ ಮಕ್ಕಳನ್ನ ಕಂಪೌಂಡ್ ಕಟ್ಟಲು ಬಳಕೆ ಮಾಡಿಕೊಂಡಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಗಂಗಾವತಿಯಲ್ಲಿ ಶಿಕ್ಷಕರು ಇದೀಗ ಮಕ್ಕಳನ್ನ ಮನೆಗೆಲಸಕ್ಕೆ ಬಳಸಿಕೊಂಡಿದ್ದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

    ದೈಹಿಕ ಶಿಕ್ಷಕರಾದ ಚಂದ್ರಶೇಖರ್ ನಿನ್ನೆ ಬಟ್ಟೆ ಒಗೆಯಲು ಬಳಸಿಕೊಂಡಿದ್ದರ ಹೊರತಾಗಿಯೂ ಹೊಸಹಳ್ಳಿಯ ಬಹುತೇಕ ಶಿಕ್ಷಕರು ತಮ್ಮ ಮನೆ ಕೆಲಸಕ್ಕೆ ಮಕ್ಕಳನ್ನೇ ಬಳಸಿಕೊಳ್ಳುತ್ತಿದ್ದಾರೆ ಅನ್ನೊ ಆರೋಪವು ಕೇಳಿ ಬಂದಿದೆ. ಈ ಕುರಿತು ಚಂದ್ರಶೇಖರ್ ನನ್ನು ಕೇಳಿದ್ರೆ ಉದ್ದೇಶಪೂರ್ವಕವಾಗಿ ಮಾಡಿಸಿಲ್ಲ. ಮಕ್ಕಳು ಚಾವಿ ತರಲು ಬಂದಾಗ ಸ್ವಲ್ಪ ಬಟ್ಟೆ ತೆಗೆದುಕೊಂಡು ಹೋಗಲು ಹೇಳಿದೆ. ಅದು ತಪ್ಪು ನಾನು ಇನ್ನೊಮ್ಮೆ ಹೀಗೆ ಮಾಡುವುದಿಲ್ಲ ಎಂದು ಹೇಳಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಸರ್ಕಾರಿ ಶಾಲೆಗೆ ಸೇರಿದ ಜಾಗಕ್ಕಾಗಿ ವಾಗ್ವಾದ- ಆಟವಾಡ್ತಿದ್ದ ಮಕ್ಳನ್ನೂ ಗದರಿಸಿದ!

    ಸರ್ಕಾರಿ ಶಾಲೆಗೆ ಸೇರಿದ ಜಾಗಕ್ಕಾಗಿ ವಾಗ್ವಾದ- ಆಟವಾಡ್ತಿದ್ದ ಮಕ್ಳನ್ನೂ ಗದರಿಸಿದ!

    ಮಂಡ್ಯ: ಸರ್ಕಾರಿ ಶಾಲೆಗೆ ಸೇರಿದ ಜಾಗ ನಮ್ಮದೆಂದು ಗ್ರಾಮದ ವ್ಯಕ್ತಿಯೊಬ್ಬರು ಶಿಕ್ಷಕರ ಜೊತೆ ವಾಗ್ವಾದ ನಡೆಸಿದ್ದಲ್ಲದೆ, ಶಾಲಾ ಮೈದಾನದಲ್ಲಿ ಆಟವಾಡುತ್ತಿರುವ ಮಕ್ಕಳನ್ನೂ ಗದರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಸಂತೆಬಾಚಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಗ್ರಾಮದ ಸರ್ವೆ ನಂಬರ್ 196ರಲ್ಲಿ ಸರ್ಕಾರಿ ಶಾಲೆಗೆ ಮೀಸಲಿರಿಸಿದ 98 ಗುಂಟೆ ಜಾಗವಿದೆ. 1950ನೇ ಇಸವಿಯಿಂದಲೂ ಈ ಜಾಗ ಶಾಲೆಯ ಒಡೆತನದಲ್ಲೇ ಇದೆ.

    ಆದರೆ ಕಳೆದ ನಾಲ್ಕು ವರ್ಷಗಳಿಂದ ಗ್ರಾಮದ ಲಕ್ಷ್ಮಣ ಮತ್ತು ತಂಗ್ಯಮ್ಮ ಶಾಲೆಗೆ ಸೇರಿದ ಜಾಗ ನಮ್ಮದು ಎಂದು ದನಕರುಗಳನ್ನು ಕಟ್ಟುತ್ತಿದ್ದಾರೆ. ಜೊತೆಗೆ ಶಾಲಾ ಮೈದಾನದಲ್ಲಿ ಗಿಡ ನೆಡಲು ಹೋದರೆ ಅಥವಾ ಕ್ರೀಡಾಕೂಟ ನಡೆದರೆ ಅಡ್ಡಿಪಡಿಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ ಶಿಕ್ಷಕರ ಮೇಲೂ ಜೋರು ಧ್ವನಿಯಲ್ಲಿ ಗಲಾಟೆ ಮಾಡಿದ್ದಾರೆ. ಅಲ್ಲದೇ ಮೈದಾನದಲ್ಲಿ ಆಟವಾಡುತ್ತಿರುವ ಮಕ್ಕಳನ್ನೂ ಗದರಿದ್ದಾರೆ.

    ಈ ಎಲ್ಲ ದೃಶ್ಯಗಳನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಜೊತೆಗೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನ ಆಗುತ್ತಿಲ್ಲವೆಂದು ಶಿಕ್ಷಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಅಲ್ಲದೇ ಈ ಕೂಡಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸರ್ಕಾರಿ ಶಾಲೆಗೆ ಸೇರಿದ ಜಾಗವನ್ನು ಅಳತೆ ಮಾಡಿಸಿ ಬಂದೋಬಸ್ತ್ ಮಾಡಬೇಕು. ಅನವಶ್ಯಕವಾಗಿ ಯಾವುದೇ ವ್ಯಕ್ತಿ ಸರ್ಕಾರಿ ಶಾಲೆಯ ಜಾಗವನ್ನು ಅತಿಕ್ರಮವಾಗಿ ಪ್ರವೇಶಿಸಬಾರದು ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಮಕ್ಕಳ ಅಭಿವೃದ್ಧಿಯೇ ನಮ್ಮ ಪ್ರಗತಿ- ಶಾಲೆಗಾಗಿಯೇ ಅರ್ಧ ಸಂಬಳ ಮೀಸಲಿಡ್ತಾರೆ ರೋಣಾದ ಶರಣಪ್ಪ ಮೇಷ್ಟ್ರು

    ಮಕ್ಕಳ ಅಭಿವೃದ್ಧಿಯೇ ನಮ್ಮ ಪ್ರಗತಿ- ಶಾಲೆಗಾಗಿಯೇ ಅರ್ಧ ಸಂಬಳ ಮೀಸಲಿಡ್ತಾರೆ ರೋಣಾದ ಶರಣಪ್ಪ ಮೇಷ್ಟ್ರು

    ಗದಗ: ಸರ್ಕಾರಿ ಕೆಲಸ ತಿಂಗಳಿಗೆ ಸಂಬಳ ಎಣಿಸಿಕೊಂಡು ಮನೆಗೆ ಹೋಗೋವ್ರೇ ಜಾಸ್ತಿ. ಆದ್ರೆ, ಇವತ್ತಿನ ನಮ್ಮ ಪಬ್ಲಿಕ್ ಹೀರೋ ರೋಣಾ ತಾಲೂಕಿನ ಕಳಕಾಪುರದ ಮೇಷ್ಟ್ರು ಶರಣಪ್ಪ ಅವರು ತಮ್ಮ ಅರ್ಧ ಸಂಬಳವನ್ನು ವಿದ್ಯಾರ್ಥಿಗಳಿಗಾಗಿ ಖರ್ಚು ಮಾಡ್ತಿದ್ದಾರೆ.

    ಗದಗ ಜಿಲ್ಲೆಯ ರೋಣ ತಾಲೂಕಿನ ಕಳಕಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಶರಣಪ್ಪ ಮೇಸ್ಟ್ರು ಕಾರ್ಯನಿರ್ವಹಿಸುತ್ತಿದ್ದಾರೆ. ತಮಗೆ ಬರುವ ಶೇಕಡಾ ಅರ್ಧದಷ್ಟು ಸಂಬಳ ಬಡಮಕ್ಕಳ ಶಿಕ್ಷಣ, ಪರಿಸರ, ಕ್ರೀಡೆ, ಗ್ರಾಮದ ಆರೋಗ್ಯಕರ ಕೆಲಸಕ್ಕೆ ಮೀಸಲಿಡುತ್ತಿದ್ದಾರೆ.

    ಕಳೆದ ಎಂಟು ವರ್ಷದಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಲಿ-ನಲಿ ಈ ಶರಣಪ್ಪ ಮೆಸ್ಟ್ರು, ಕೇವಲ ಶಾಲೆಗೆ ಸೀಮಿತರಾಗಿಲ್ಲ. ಊರ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಶ್ರಮಜೀವಿ. ಕ್ರೀಡಾ, ಸಂಗೀತ, ಶಿಕ್ಷಣ, ಪರಿಸರ, ಆರೋಗ್ಯ ಗ್ರಾಮ ಹೀಗೆ ನಾನಾ ಬಗೆಯ ಕಾರ್ಯಗಳ ಮೂಲಕ ಕಳಕಾಪುರ ಗ್ರಾಮಕ್ಕೆ ಕಳೆ ತುಂಬುತ್ತಿದ್ದಾರೆ. ತಮ್ಮ ಹಿರಿಯ ವಿದ್ಯಾರ್ಥಿ ಬಳಗ ಕಟ್ಟಿಕೊಂಡು “ಸ್ನೇಹಜೀವಿ ಕಲಾತಂಡ”ವನ್ನು ಸ್ಥಾಪಿಸಿದ್ದಾರೆ.

    ಪ್ರತಿ ತಿಂಗಳಿಗೊಮ್ಮೆ ಗ್ರಾಮದ ಅಭಿವೃದ್ಧಿ, ಸ್ವಚ್ಛತೆ, ಆರೋಗ್ಯ ಬಗ್ಗೆ ಜನಜಾಗ್ರತಿ ಮೂಡಿಸುವ ವಿಶೇಷ ಶಿಬಿರ ಹಮ್ಮಿಕೊಳ್ಳುವ ಮೂಲಕ ಏನನ್ನಾದರೂ ಸಾಧನೆ ಮಾಡಬೇಕೆಂಬ ಬಯಕೆ ಶಿಕ್ಷಕ ಶರಣಪ್ಪ ಹೆಬ್ಬಳ್ಳಿಯವರದ್ದಾಗಿದೆ. ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಯ ಚಹರೆಯನ್ನೇ ಬದಲಿಸಿದ್ದಾರೆ. ಶಾಲಾ ಸೌಂದರ್ಯಕ್ಕೆ ಸುಣ್ಣ, ಬಣ್ಣ, ಚಿತ್ರಕಲೆ, ನಕಾಶೆ, ಮಕ್ಕಳ ಶಿಕ್ಷಣಕ್ಕೆ ಬೇಕಾದ ವಸ್ತುಚಿತ್ರ, ಪ್ರಾಜೆಕ್ಟರ್ ಹೀಗೆ ಅನೇಕ ವಿಷಯಕ್ಕೆ ತಮ್ಮ ಸ್ವಂತ ಹಣ ಖರ್ಚುಮಾಡಿದ್ದಾರೆ. ಪ್ರಾಥಮಿಕ ಮಕ್ಕಳಿಗೆ ಪ್ರೊಜೆಕ್ಟರ್ ಮೂಲಕ ಶಿಕ್ಷಣ, ಕುಳಿತುಕೊಳ್ಳಲು ರೌಂಡ್ ಟೆಬಲ್ ಹಾಗೂ ಖುರ್ಚಿಗೆ ಸರ್ಕಾರ ಹಾಗೂ ಸ್ಥಳೀಯರ ಸಹಾಯ ಬಯಸದೇ ತಾವೇ ಖರ್ಚುಮಾಡ್ತಾರೆ.

    ಗ್ರಾಮದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯುಸಿ ಓದುವ ಮಕ್ಕಳ ಮನೆಗೆ ನಿತ್ಯ ಭೇಟಿ ನೀಡಿ ವಿಚಾರಿಸಿ ಓದಿನ ಉಪಚಾರ ಮಾಡ್ತಾರೆ. ಸಾಯಂಕಾಲ 6 ರಿಂದ 9 ಗಂಟೆವರೆಗೆ ಟಿವಿ ಹಾಕದಂತೆ ಪಾಲಕರಿಗೆ ಸೂಚನೆ ನೀಡ್ತಾರೆ. ಇವರು ಪ್ರಾಥಮಿಕ ಶಾಲೆ ಶಿಕ್ಷಕರಾದ್ರೂ ಗ್ರಾಮದ ಹೈಸ್ಕೂಲ್ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗೆ ಶಿಕ್ಷಣದ ಸಿಹಿ ಉಣಬಡಿಸುವ ಮಹಾನ್ ಮೆಸ್ಟ್ರು. ಇವರ ಈ ಕಾರ್ಯ ಇಡೀ ಗ್ರಾಮದ ಪ್ರತಿಯೊಬ್ಬರ ಮೆಚ್ಚುಗೆ ಹಾಗೂ ಅಭಿಮಾನಕ್ಕೂ ಕಾರಣವಾಗಿದೆ.

    ಮಕ್ಕಳು ದೇವರ ಸಮಾನ, ಮಕ್ಕಳಿಂದ ಬರುವ ವೇತನದಲ್ಲೆ ಮಕ್ಕಳಿಗಾಗಿ ಖರ್ಚು ಮಾಡಿದರೆ ತಮಗೆ ಒಳಿತಾಗುತ್ತೆ ಅನ್ನೋ ನಂಬಿಕೆ ಶರಣಪ್ಪ ಅವರದ್ದಾಗಿದ್ದು, ಶಿಕ್ಷಕ ರಾಷ್ಟ್ರ ರಕ್ಷಕ ಅನ್ನೋ ಮಾತು ಶರಣಪ್ಪ ಗುರುಗಳಿಗೆ ಹೇಳಿ ಮಾಡಿಸಿವೆ. ಶರಣಪ್ಪ ಅವರ ಶಿಕ್ಷಣ ಕಾಳಜಿ ಇತರ ಶಿಕ್ಷಕರಿಗೆ ಮಾದರಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

    https://www.youtube.com/watch?v=ff_hhrXot4o

  • ವಿನಾಕಾರಣ ಥಳಿಸಿ ವಿದ್ಯಾರ್ಥಿಗಳಿಗೆ ಹಿಂಸೆ- ಶಿಕ್ಷಕಿಯ ವರ್ಗಾವಣೆ

    ವಿನಾಕಾರಣ ಥಳಿಸಿ ವಿದ್ಯಾರ್ಥಿಗಳಿಗೆ ಹಿಂಸೆ- ಶಿಕ್ಷಕಿಯ ವರ್ಗಾವಣೆ

    ಮೈಸೂರು: ವಿನಾಕಾರಣ ಥಳಿಸಿ ಹಿಂಸೆ ಕೊಡುತಿದ್ದ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಪೋಷಕರು ಪಟ್ಟು ಹಿಡಿದು ವರ್ಗ ಮಾಡಿಸಿದ್ದಾರೆ.

    ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಗೀತಾ ಗಾಯಿತ್ರಿ ವರ್ಗಗೊಂಡಿದ್ದಾರೆ. ಎರಡು ದಿನಗಳ ಹಿಂದೆ ಇಬ್ಬರು ವಿದ್ಯಾರ್ಥಿಗಳಿಗೆ ಗೀತಾಗಾಯಿತ್ರಿ ಮನಬಂದಂತೆ ಥಳಿಸಿದ್ದರು. ಈ ವಿಚಾರವಾಗಿ ಪೋಷಕರು ಶಾಲೆಗೆ ಬಂದು ಗಲಾಟೆ ಮಾಡಿ ಶಿಕ್ಷಕಿಯನ್ನ ಬೇರೆಡೆಗೆ ವರ್ಗಾಯಿಸುವಂತೆ ಪಟ್ಟು ಹಿಡಿದಿದ್ರು.

    ವರ್ಗಾವಣೆ ಮಾಡದಿದ್ದಲ್ಲಿ ಮಕ್ಕಳನ್ನ ಶಾಲೆಗೆ ಕಳುಹಿಸುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಹೀಗಾಗಿ ಬಿಇಓ ಶಾಲೆಗೆ ಭೇಟಿ ಕೊಟ್ಟ ವಿಚಾರಣೆ ನಡೆಸಿದ ವೇಳೆ ಗೀತಾಗಾಯಿತ್ರಿ ಹಲ್ಲೆ ಮಾಡಿದ್ದು ರುಜುವಾತಾಗಿತ್ತು. ಕೂಡಲೇ ಬಿಇಓ ರವರು ಉಪನಿರ್ದೇಶಕರಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ನಿವೃತ್ತ ಶಿಕ್ಷಕರನ್ನು ಸಾರೋಟಿನಲ್ಲಿ ಕೂರಿಸಿ ಅದ್ಧೂರಿಯಾಗಿ ಬೀಳ್ಕೊಟ್ಟ ವಿದ್ಯಾರ್ಥಿಗಳು!

    ನಿವೃತ್ತ ಶಿಕ್ಷಕರನ್ನು ಸಾರೋಟಿನಲ್ಲಿ ಕೂರಿಸಿ ಅದ್ಧೂರಿಯಾಗಿ ಬೀಳ್ಕೊಟ್ಟ ವಿದ್ಯಾರ್ಥಿಗಳು!

    ತುಮಕೂರು: ನೆಚ್ಚಿನ ಶಿಕ್ಷಕರೊಬ್ಬರು ನಿವೃತ್ತಿಯಾಗಿದ್ದಕ್ಕೆ ವಿದ್ಯಾರ್ಥಿಗಳು, ಶಾಲೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸೇರಿ ಅದ್ಧೂರಿಯಾಗಿ ಬೀಳ್ಕೊಟ್ಟಿರುವ ಅಪರೂಪದ ಕಾರ್ಯಕ್ರಮವೊಂದು ಬೆಳ್ಳಾವಿಯಲ್ಲಿ ನಡೆದಿದೆ.

    ಬೆಳ್ಳಾವಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಎಸ್. ಈಶ್ವರಯ್ಯ ನಿವೃತ್ತಿಯಾಗಿದ್ದಾರೆ. ಕಳೆದ 32 ವರ್ಷಗಳಿಂದ ಇದೇ ಕಾಲೇಜಿನಲ್ಲಿ ಕಾರ್ಯನಿರ್ವಸುತ್ತಿದ್ದ ಈಶ್ವರಯ್ಯ ಅವರು ಅನೇಕ ವಿದ್ಯಾರ್ಥಿಗಳ ಅಚ್ಚು-ಮೆಚ್ಚಿನ ಶಿಕ್ಷಕರಾಗಿದ್ದರು.

     

    ಈಶ್ವರಯ್ಯ ಅವರಿಗೆ ಮಕ್ಕಳಿಲ್ಲ. ಹೀಗಾಗಿ ಶಾಲೆಯ ವಿದ್ಯಾರ್ಥಿಗಳನ್ನೇ ತಮ್ಮ ಮಕ್ಕಳೆಂದು ತಿಳಿದು, ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಅಷ್ಟೇ ಅಲ್ಲದೇ ಊಟ, ವಸತಿ ಹೀಗೆ ಅನೇಕ ಸಹಾಯ ಮಾಡಿದ್ದಾರೆ. ನೆಚ್ಚಿನ ಶಿಕ್ಷಕರ ದಯಾಗುಣವನ್ನು ನೆನೆದ ಈಗಿನ ಮತ್ತು ಹಳೇ ವಿದ್ಯಾರ್ಥಿಗಳು ಈಶ್ವರಯ್ಯ ಅವರಿಗೆ ಪೇಟಾ ತೊಡಿಸಿ, ಸಾರೋಟಿನಲ್ಲಿ ಕೂರಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಮೆರವಣಿಗೆಯುದ್ದಕ್ಕೂ ವಿದ್ಯಾರ್ಥಿಗಳು ಈಶ್ವರಯ್ಯ ಅವರಿಗೆ ಜಯಘೋಷಗಳನ್ನು ಕೂಗುತ್ತ ಬೀಳ್ಕೊಟ್ಟಿದ್ದಾರೆ.

    ಯಾವ ಶಿಕ್ಷಕರೇ ಆದರೂ ಮಕ್ಕಳಿಗೆ ಸರಿಯಾದ ಮಾರ್ಗ, ಸನ್ನಡೆತೆ ಕಲಿಸಬೇಕು. ಜೊತೆಗೆ ತನ್ನ ವೃತ್ತಿಗೆ ಮೋಸ ಮಾಡದೇ ವಿದ್ಯಾರ್ಥಿಗಳನ್ನು ತನ್ನ ಮಕ್ಕಳಂತೆ ಬೆಳೆಸಿದರೆ ಶಿಕ್ಷಕರು ಉನ್ನತ ಸ್ಥಾನಕ್ಕೆ ಏರುತ್ತಾರೆ ಎಂದು ಈಶ್ವರಯ್ಯ ಅವರು ಹೇಳಿದರು.

  • 15ರ ಅಪ್ರಾಪ್ತನ ಜೊತೆ 26 ವಯಸ್ಸಿನ ಆಂಟಿ ಶಿಕ್ಷಕಿ ಎಸ್ಕೇಪ್!

    15ರ ಅಪ್ರಾಪ್ತನ ಜೊತೆ 26 ವಯಸ್ಸಿನ ಆಂಟಿ ಶಿಕ್ಷಕಿ ಎಸ್ಕೇಪ್!

    ಚಂಡೀಗಡ: 15 ವರ್ಷದ ಅಪ್ರಾಪ್ತನ ಜೊತೆ 26 ವಯಸ್ಸಿನ ಶಿಕ್ಷಕಿ ಓಡಿಹೋಗಿದ್ದರಿಂದ ಆಕೆಯನ್ನು ಪೊಲೀಸರು ಬಂಧಿಸಿರುವ ಘಟನೆ ಪಂಜಾಬ್ ನ ಫತೇಹಾಬಾದಿನಲ್ಲಿ ಸೋಮವಾರ ಈ ನಡೆದಿದೆ.

    ಶಾಲೆಯಿಂದಲೇ 15 ವರ್ಷದ ಬಾಲಕ ಮತ್ತು 26 ವರ್ಷದ ಶಿಕ್ಷಕಿ ಶುಕ್ರವಾರದಿಂದ ನಾಪತ್ತೆಯಾಗಿದ್ದರು. ಬಳಿಕ ಶಾಲೆ ಎಲ್ಲ ಕಡೆ ಹುಡುಕಿದ್ದಾರೆ. ಆದರೆ ಎಲ್ಲೂ ಪತ್ತೆಯಾಗಿಲ್ಲ. ಕೊನೆಗೆ ಈ ಬಗ್ಗೆ ಎರಡು ಕುಟುಂಬದವರನ್ನು ಶಾಲೆಗೆ ಕರೆಸಿ ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ತಿಳಿಸಿದ್ದಾರೆ.

    ಬಾಲಕನ ತಂದೆ ನನ್ನ ಮಗ ಕಾಣೆಯಾಗಿದ್ದಾನೆ ಎಂದು ಫತೇಹಾಬಾದಿ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಷ್ಟೇ ಅಲ್ಲದೇ ಆ ಶಿಕ್ಷಕಿ ವಿರುದ್ಧ ಅಪಹರಣ ಮತ್ತು ಹತ್ಯೆ ಪ್ರಕರಣವೂ ದಾಖಲಾಗಿತ್ತು. ನಮ್ಮ ಮಗನಿಗೆ ಶಿಕ್ಷಕಿ ಒತ್ತಡ ಹಾಕಿ ಮತ್ತು ಆಮಿಷ ಒಡ್ಡಿ ಕರೆದುಕೊಂಡು ಹೋಗಿದ್ದಾಳೆ ಎಂದು ಬಾಲಕನ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದರು.

    ಬಾಲಕ ಮತ್ತು ಶಿಕ್ಷಕಿ ಯಾವಾಗಲೂ ಫೋನಿನ ಮೂಲಕ ಸಂಪರ್ಕದಲ್ಲಿರುತ್ತಿದ್ದರು. ಜೊತೆಗೆ ಇಬ್ಬರು ತಮ್ಮ ಮೊಬೈಲ್ ನಂಬರ್ ಕೂಡ ಬದಲಿಸಿಕೊಂಡಿದ್ದರು. ಫೇಸ್‍ಬುಕ್, ವಾಟ್ಸಪ್ ನಲ್ಲಿ ಪ್ರತಿದಿನ ಚಾಟಿಂಗ್ ಮಾಡುತ್ತಿದ್ದರು ಎಂಬುದಾಗಿ ಪ್ರಾಥಮಿಕೆ ತನಿಖೆ ವೇಳೆ ತಿಳಿದು ಬಂದಿದೆ.

    ಪೊಲೀಸರು ಈ ಬಗ್ಗೆ ತೀವ್ರವಾಗಿ ತನಿಖೆ ಮಾಡಿ ಫೋನಿನ ಮೂಲಕ ಇಬ್ಬರನ್ನು ಪತ್ತೆಹಚ್ಚಿದ್ದು, ಸೋಮವಾರ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ ವಿಚಾರಣೆ ವೇಳೆ ಶಿಕ್ಷಕಿ ನಾನೇ ಕರೆದುಕೊಂಡು ಹೋಗಿರುವುದಾಗಿ ಒಪ್ಪಿಕೊಂಡಿದ್ದಾಳೆ. ಮೊದಲು ಬಾಲಕನನ್ನು ಹಿಸ್ಸಾರ್ ಗೆ ಕರೆದುಕೊಂಡು ಹೋಗಿದ್ದಾಳೆ. ಬಳಿಕ ಅಲ್ಲಿಂದ ದೆಹಲಿಗೆ ಇಬ್ಬರು ಹೋಗಿದ್ದಾರೆ. ನಂತರ ಜಮ್ಮು ಕಾಶ್ಮೀರದ ಕತ್ರಾಗೆ ಹೋಗಿದ್ದಾರೆ. ಕೊನೆಗೆ ಬಾಲಕ ಕತ್ರಾದಲ್ಲಿ ಪತ್ತೆಯಾಗಿದ್ದಾನೆ ಎಂದು ಇನ್ಸ್ ಪೆಕ್ಟ್‍ರ್ ವಿವರಿಸಿದರು.

    ಸದ್ಯಕ್ಕೆ ಇಬ್ಬರನ್ನು ವಶಕ್ಕೆ ಪಡೆದಿದ್ದು, ಬಾಲಕನನ್ನು ವೈದ್ಯಕೀಯ ಪರೀಕ್ಷಗೆ ಒಳಪಡಿಸುವುದಿಲ್ಲ. ಆದರೆ ಶಿಕ್ಷಕಿಯನ್ನು ಬಂಧಿಸಿದ್ದು, ಶೀಘ್ರವಾಗಿ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

  • ವಿದ್ಯಾರ್ಥಿನಿಯೊಬ್ಬಳಿಗೆ ಇಬ್ಬರು ಶಿಕ್ಷಕರು!

    ವಿದ್ಯಾರ್ಥಿನಿಯೊಬ್ಬಳಿಗೆ ಇಬ್ಬರು ಶಿಕ್ಷಕರು!

    ಚಿತ್ರದುರ್ಗ: ಮಕ್ಕಳು ಖಾಸಗಿ ಶಾಲೆಗೆ ಸೇರಿಕೊಳ್ಳುತ್ತಿರುವ ಪರಿಣಾಮ ವಿದ್ಯಾರ್ಥಿನಿಗೆ ಇಬ್ಬರು ಶಿಕ್ಷಕರು ಇರುವ ಪರಿಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ.

    ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಂಜೆಹಟ್ಟಿ ಗ್ರಾಮದಲ್ಲಿರುವ ಪ್ರಾಥಮಿಕ ಕಿರಿಯ ಶಾಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರಬೇಕು ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಅನ್ನೋ ದೃಷ್ಟಿಯಿಂದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಮಕ್ಕಳಿಗೆ ಮಾತ್ರ ಸರ್ಕಾರಿ ಶಾಲೆಯಲ್ಲಿ ಸರಿಯಾಗಿ ದೊರೆಯುತ್ತಿಲ್ಲ. ಇದೇ ಕಾರಣಕ್ಕೆ ಪೋಷಕರು ಖಾಸಗಿ ಶಾಲೆಗಳ ಕಡೆಗೆ ಮುಖ ಮಾಡುತ್ತಿದ್ದಾರೆ. ಇದರಿಂದಾಗಿ ಇಲ್ಲೊಂದು ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಇಬ್ಬರು ಶಿಕ್ಷಕರಿದ್ದಾರೆ.

    ಒಂದೊಂದು ದಿನ ಬೆಳಗ್ಗೆ ಶಾಲೆ ಆರಂಭಿಸಿ ಮಧ್ಯಾಹ್ನ 2 ಗಂಟೆ ಸಮಯಕ್ಕೆ ಶಾಲೆಗೆ ಬೀಗ ಜಡಿದು ಮನೆ ದಾರಿ ಹಿಡಿಯುತ್ತಾರೆ. ಕಳೆದ ನಾಲ್ಕು ವರ್ಷಗಳಲ್ಲಿ 80 ಜನ ವಿದ್ಯಾರ್ಥಿಗಳಿದ್ದೂ, ಕಳೆದ ಸಾಲಿನಲ್ಲಿ ಪಾಠಗಳು ಸರಿಯಾಗಿ ನಡೆಯುವುದಿಲ್ಲ ಎಂದು ಬೇಸರದಿಂದ ಮಕ್ಕಳ ಟಿಸಿ ಪಡೆದು ಚಳ್ಳಕೆರೆ ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ.

    ಉಳಿದ ಮೂವರು ಮಕ್ಕಳು ಆದರೆ ಜೂನ್ ತಿಂಗಳಲ್ಲಿ ದಾಖಲಾತಿ ಸಂಖ್ಯೆ 10ಕ್ಕೆ ಏರಿದೆ ಅಂತ ಹೇಳಿ ಶಾಲೆ ನಡೆಸಲಾಗುತ್ತಿದೆ. ಆದರೆ ಅವರುಗಳಲ್ಲಿ ವಿದ್ಯಾರ್ಥಿನಿ ಮಾತ್ರ ಶಾಲೆಗೆ ಬರುತ್ತಿದ್ದಾಳೆ. ಶಾಲೆಯ ಆರಂಭದಲ್ಲಿ ಗ್ರಾಮದಲ್ಲಿ ಶಿಕ್ಷಕರು ಬಂದು ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸುವಂತೆ ಪ್ರೇರೇಪಿಸಬೇಕು. ಆದರೆ ಅಂತಹ ಕೆಲಸವನ್ನು ಯಾವುದೇ ಶಿಕ್ಷಕರು ಮಾಡುವುದಿಲ್ಲ. ಇದರಿಂದಾಗಿ ಸರ್ಕಾರಿ ಶಾಲೆಯು ಮುಚ್ಚುವ ಸ್ಥಿತಿಗೆ ತಲುಪಿದೆ ಅಂತ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.