Tag: teacher

  • ಯೋಗ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಶಿಕ್ಷಕ ಸಾವು!

    ಯೋಗ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಶಿಕ್ಷಕ ಸಾವು!

    ಬಾಗಲಕೋಟೆ: ಯೋಗ ಮಾಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದಲ್ಲಿ ನಡೆದಿದೆ.

    ವಿಶ್ವನಾಥ್ ಬಿರಾದಾರ(50) ಮೃತ ದುರ್ದೈವಿ ಶಿಕ್ಷಕ. ತೇರದಾಳ ಪಟ್ಟಣದ ಜೆವಿ ಮಂಡಲ ಸಂಸ್ಥೆಯ ಗುರುಕುಲ ಕ್ಯಾಂಪಸ್ ನಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಭಾಗಿಯಾಗಿದ್ದರು. ಯೋಗ ಮಾಡುತ್ತಿದ್ದ ವೇಳೆಯೇ ವಿಶ್ವನಾಥ್ ಅವರಿಗೆ ಹೃದಯಾಘಾತವಾಗಿದೆ.

    ವಿಶ್ವನಾಥ್ ಎಸ್.ಜೆ. ಹೆಣ್ಣು ಮಕ್ಕಳ ಪ್ರೌಢಶಾಲೆಯ ಗಣಿತ ಶಿಕ್ಷಕರಾಗಿದ್ದು, ಮೊದಲಿಂದಲೂ ಯೋಗ ಅಭ್ಯಾಸ ಮಾಡುತ್ತಿದ್ದರು. ಸದ್ಯ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಿಮ್ಮ ಸ್ತನಗಳು ನೈಜವೇ? – ಸಂದರ್ಶನದಲ್ಲಿ ಶಿಕ್ಷಕಿಗೆ ಎದುರಾಯ್ತು ಭಯಾನಕ ಪ್ರಶ್ನೆ

    ನಿಮ್ಮ ಸ್ತನಗಳು ನೈಜವೇ? – ಸಂದರ್ಶನದಲ್ಲಿ ಶಿಕ್ಷಕಿಗೆ ಎದುರಾಯ್ತು ಭಯಾನಕ ಪ್ರಶ್ನೆ

    ಕೋಲ್ಕತ್ತಾ: ಲಿಂಗಾ ಪರಿವರ್ತನೆ ಶಸ್ತ್ರ ಚಿಕಿತ್ಸೆ ಒಳಪಟ್ಟ ಶಿಕ್ಷಕಿಯರೊಬ್ಬರಿಗೆ ಶಾಲೆಯ ಸಂದರ್ಶನದಲ್ಲಿ ನಿಮ್ಮ ಸ್ತನಗಳು ನಿಜವೇ, ನೀವು ಮಗುವಿಗೆ ಜನ್ಮ ನೀಡಲು ಸಾಧ್ಯವಾಗುತ್ತಾ ಎಂಬ ಪ್ರಶ್ನೆಗಳನ್ನು ಎದುರಿಸಿದ್ದಾಗಿ ತಿಳಿಸಿದ್ದಾರೆ.

    ಸುಚಿತ್ರಾ ಡೇ ಎಂಬವರು ಇಂಗ್ಲಿಷ್ ಹಾಗೂ ಭೂಗೋಳ ಶಾಸ್ತ್ರದಲ್ಲಿ ಉನ್ನತ ಪದವಿಯನ್ನು ಪಡೆದಿದ್ದು, ಬಿಎಡ್ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಅಲ್ಲದೇ ಶಿಕ್ಷಕರಾಗಿ ಅನುಭವವನ್ನು ಹೊಂದಿದ್ದು, ಶಾಲೆಯೊಂದರಲ್ಲಿ ಶಿಕ್ಷಕರ ಸಂದರ್ಶನಕ್ಕೆ ಹೋದ ವೇಳೆ ಲೈಂಗಿಕ ಶೋಷಣೆ ನಡೆದಿರುವ ಕುರಿತು ಬಹಿರಂಗ ಪಡಿಸಿದ್ದಾರೆ.

    ಅಂದಹಾಗೇ ಹಿರಣ್ಮೆ ಡೇ ಎಂದು ಹೆಸರು ಹೊಂದಿದ್ದ 30 ವರ್ಷದ ಸುಚಿತ್ರಾ ಡೇ 2017 ರಲ್ಲಿ ಲಿಂಗಾ ಪರಿವರ್ತನೆಗೆ ಒಳಗಾಗಿದ್ದರು. ಸಂದರ್ಶನದ ವೇಳೆ ತಮ್ಮನ್ನು ತೃತೀಯ ಲಿಂಗಿಯಂತೆ ಕಂಡು ಹಾಸ್ಯಾಸ್ಪದವಾಗಿ ವರ್ತಿಸಿದ್ದರು ಎಂದು ತಿಳಿಸಿದ್ದಾರೆ. ಇದೇ ವೇಳೆ 2014 ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಸ್ತಾಪಿಸಿದ ಅವರು ಶೈಕ್ಷಣಿಕ ಸಂಸ್ಥೆಗಳಲ್ಲಿ ತೃತೀಯ ಲಿಂಗಿಗಳು ಉದ್ಯೋಗ ಅವಕಾಶ ಪಡೆಯಬಹುದು ಎಂದು 2014 ರಲ್ಲಿ ತೀರ್ಪು ನೀಡಿತ್ತು. ಸದ್ಯ ತಮಗಾದ ಅನುಭವವನ್ನು ಸುಚಿತ್ರಾ ಡೇ ಅವರು ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಸಮಿತಿಗೆ ಪತ್ರ ಬರೆದಿದ್ದಾರೆ.

  • ಕುಡಿದ ಅಮಲಿನಲ್ಲಿ ರಾಕ್ಷಸನಂತೆ ವರ್ತಿಸಿದ ಶಿಕ್ಷಕ

    ಕುಡಿದ ಅಮಲಿನಲ್ಲಿ ರಾಕ್ಷಸನಂತೆ ವರ್ತಿಸಿದ ಶಿಕ್ಷಕ

    ವಿಜಯಪುರ: ಜಿಲ್ಲೆಯ ಸಿಂಧಗಿ ತಾಲೂಕಿನ ಮೊರಟಗಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನೊಬ್ಬ ಕುಡಿದ ಅಮಲಿನಲ್ಲಿ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    4ನೇ ತರಗತಿಯ ನಿಂಗಪ್ಪ ಹಲ್ಲೆಗೊಳಗಾದ ವಿದ್ಯಾರ್ಥಿ. ಸಹ ಶಿಕ್ಷಕ ನಗನೂರ ಹಲ್ಲೆ ನಡೆಸಿದ ಆರೋಪಿ. ಶಿಕ್ಷಕ ಶಾಲೆಗೆ ಪಾನಮತ್ತನಾಗಿ ಆಗಮಿಸಿದ್ದು, ನಶೆಯಲ್ಲಿ ನಿಂಗಪ್ಪನಿಗೆ ಮನಬಂದಂತೆ ಥಳಿಸಿದ್ದಾನೆ. ಈ ವೇಳೆ ನಿಂಗಪ್ಪನ ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ವಿದ್ಯಾರ್ಥಿ ನೆಲದ ಮೇಲೆ ಬಿದ್ದು ಹೊರಳಾಡಿದ್ದಾನೆ. ವಿದ್ಯಾರ್ಥಿ ನೋವಿನಿಂದ ಅಳುತ್ತಿದ್ದನ್ನು ನೋಡಿ ಗಾಬರಿಯಾದ ಶಿಕ್ಷಕ ಪರಾರಿಯಾಗಿದ್ದಾನೆ. ಇದನ್ನು ಓದಿ: ಸ್ಕೇಲ್‍ನಿಂದ ಹೊಡೆದ ಟೀಚರ್- ವಿದ್ಯಾರ್ಥಿ ಕಣ್ಣಿನ ದೃಷ್ಟಿಯೇ ಹೋಯ್ತು!

    ಸದ್ಯ ನಿಂಗಪ್ಪನನ್ನು ಜಿಲ್ಲಾಸ್ಪತ್ರೆಗೆ ದಾಖಲಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿಕ್ಷಕನ ಅಮಾನವೀಯ ಕೃತ್ಯಕ್ಕೆ ನಿಂಗಪ್ಪನ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಸ್ಕೇಲ್‍ನಿಂದ ಹೊಡೆದ ಟೀಚರ್- ವಿದ್ಯಾರ್ಥಿ ಕಣ್ಣಿನ ದೃಷ್ಟಿಯೇ ಹೋಯ್ತು!

    ಸ್ಕೇಲ್‍ನಿಂದ ಹೊಡೆದ ಟೀಚರ್- ವಿದ್ಯಾರ್ಥಿ ಕಣ್ಣಿನ ದೃಷ್ಟಿಯೇ ಹೋಯ್ತು!

    ಚಾಮರಾಜನಗರ: ಮುಖ್ಯ ಶಿಕ್ಷಕ ವಿದ್ಯಾರ್ಥಿಗೆ ಸ್ಕೇಲ್‍ನಿಂದ ಹೊಡೆದ ಪರಿಣಾಮ ವಿದ್ಯಾರ್ಥಿ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡ ಆಘಾತಕಾರಿ ಘಟನೆಯೊಂದು ನಡೆದಿರುವುದಾಗಿ ವಿದ್ಯಾರ್ಥಿಯ ಪೋಷಕರು ಆರೋಪಿಸುತ್ತಿದ್ದಾರೆ.

    ಚಾಮರಾಜನಗರದ ರಾಮಸಮುದ್ರದ ಬಾಲರ ಪಟ್ಟಣ ಶಾಲೆಯ ಮುಖ್ಯ ಶಿಕ್ಷಕ ಯುಸೇಫ್, ಗಿರಿಮಲ್ಲೇಶ್ ಎಂಬ ವಿದ್ಯಾರ್ಥಿಗೆ ಸ್ಕೇಲ್‍ನಿಂದ ಹೊಡೆದಿದ್ದಾರೆ. ಹೊಡೆಯುವ ವೇಳೆ ವಿದ್ಯಾರ್ಥಿಯ ಎಡಗಣ್ಣಿಗೆ ತಾಗಿ ವಿದ್ಯಾರ್ಥಿ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ.

    ಕಳೆದ ಜನವರಿಯಲ್ಲಿ ಶಾಲೆಯ ಸಮಯದಲ್ಲಿ ಗಿರಿಮಲ್ಲೇಶ್ ಗಲಾಟೆ ಮಾಡುತ್ತಿದ್ದ ಎಂದು ಶಿಕ್ಷಕ ಸ್ಕೇಲ್ ಮೂಲಕ ಹೊಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ಕಣ್ಣಿಗೆ ಸ್ಕೇಲ್ ಬಿದ್ದ ಕಾರಣ ವಿದ್ಯಾರ್ಥಿಯ ಕಣ್ಣಿಗೆ ಪೆಟ್ಟು ಬಿದ್ದಿದೆ. ಇದಾದ ನಂತರ ವಿದ್ಯಾರ್ಥಿ ತನಗೆ ಯಾವುದೇ ನೋವಾಗಿಲ್ಲ ಎಂದು ತಿಳಿದುಕೊಂಡಿದ್ದಾನೆ.

    ಇದೀಗ ವಿದ್ಯಾರ್ಥಿಗೆ ಕಣ್ಣಿನ ನೋವು ಕಾಡುತ್ತಿದ್ದ ಕಾರಣ ತಂದೆ ಸೋಮೇಶ್ ಮೈಸೂರಿನ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿದ್ದಾರೆ. ಈ ವೇಳೆ ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ ಹೀಗಾಗಿ ಇತನ ದೃಷ್ಟಿ ಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಂತರ ಗಿರಿಮಲ್ಲೇಶ್‍ನನ್ನು ಪೋಷಕರು ವಿಚಾರಿಸಿದಾಗ ಐದು ತಿಂಗಳ ಹಿಂದೆ ಶಾಲೆಯಲ್ಲಿ ಹೀಗೆ ಆಗಿದೆ ಎಂದು ಹೇಳಿದ್ದಾನೆ.

    ಈ ಬಗ್ಗೆ ಗಿರಿಮಲ್ಲೇಶ್ ಪೋಷಕರು ಶಾಲೆಯ ಆಡಳಿತ ಮಂಡಳಿಯನ್ನು ಪ್ರಶ್ನಿಸಿದ್ದಾರೆ. ಇದ್ದನ್ನು ಒಪ್ಪಿಕೊಳ್ಳದ ಶಾಲೆ ಆಡಳಿತ ಮಂಡಳಿ ಮುಖ್ಯ ಶಿಕ್ಷಕ ಯುಸೇಫ್‍ರನ್ನು 10 ದಿನಗಳ ರಜೆ ಮೇಲೆ ಕಳುಹಿಸಲಾಗಿದೆ. ಸದ್ಯ ಗಿರಿಮಲ್ಲೇಶ್ ತಮಿಳುನಾಡಿನ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • 13ರ ಬಾಲೆ ಮೇಲೆ ಅತ್ಯಾಚಾರವೆಸಗಿದ್ದ 75ರ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

    13ರ ಬಾಲೆ ಮೇಲೆ ಅತ್ಯಾಚಾರವೆಸಗಿದ್ದ 75ರ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

    ಮುಂಬೈ: ಪರೀಕ್ಷೆಗೆ ಟಿಪ್ಸ್ ಹೇಳಿಕೊಡುವ ನೆಪವೊಡ್ಡಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಶಿಕ್ಷಕನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

    75 ವರ್ಷದ ಶಿಕ್ಷಕನೊಬ್ಬ ಪರೀಕ್ಷೆಗೆ ಟಿಪ್ಸ್ ಹೇಳಿಕೊಡುವ ನೆಪವೊಡ್ಡಿ 13 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿದ್ದ. ಅಷ್ಟೇ ಅಲ್ಲದೆ ವಿಡಿಯೋ ಚಿತ್ರೀಕರಿಸಿದ್ದ. ಈತನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಸ್ಕೋ ಕಾಯ್ದೆಯ ಅಡಿಯಲ್ಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

    ಶಿಕ್ಷಕನ ಕೃತ್ಯದ ವಿಡಿಯೋವನ್ನು ಯುವಕರು ಮೊಬೈಲ್ ನಲ್ಲಿ ನೋಡುತ್ತಿದ್ದಾಗ ಸಂತ್ರಸ್ತೆಯ ನೆರೆಮನೆಯಾತ ಗಮನಿಸಿದ್ದಾನೆ. ಈ ವಿಚಾರವನ್ನು ಆತ ಬಾಲಕಿಯ ಸಂಬಂಧಿಕರಿಗೆ ತಿಳಿಸಿದ ಪರಿಣಾಮ ಪ್ರಕರಣ ಬೆಳಕಿಗೆ ಬಂದಿದೆ.

    2013ರಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು. ನಂತರ ಅವರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. 4 ವರ್ಷಗಳ ಕಾಲ ನಡೆದ ವಿಚಾರಣೆಯಲ್ಲಿ ಆರೋಪ ಸಾಬೀತಾಗಿದ್ದು, 75 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆಯಾಗಿದೆ.

    ಕೃತ್ಯ ಎಸಗಿದ್ದು ಹೇಗೆ?
    2012ರ ಡಿಸೆಂಬರ್‍ನಲ್ಲಿ ಒಂದು ದಿನ ಬಾಲಕಿ ತನ್ನ ಸ್ನೇಹಿತೆಯರೊಂದಿಗೆ ಪರೀಕ್ಷೆಗೆ ಹೋಗುತ್ತಿದ್ದಳು. ಆರೋಪಿ ಶಿಕ್ಷಕ ಅವರನ್ನು ಕರೆದು ಪರೀಕ್ಷೆಯ ಟಿಪ್ಸ್ ಹಾಗೂ ನೋಟ್ಸ್ ನೀಡುವುದಾಗಿ ಹೇಳಿದ್ದಾನೆ.

    ಹುಡಗಿಯರು ಒಳಗೆ ಬರುತ್ತಿದ್ದಂತೆ ಬಾಗಿಲು ಹಾಕಲು ಪ್ರಯತ್ನಿಸಿದಾಗ ಸಂತ್ರಸ್ತ ಬಾಲಕಿಯನ್ನು ಬಿಟ್ಟು ಎಲ್ಲ ಹುಡುಗಿಯರು ತಪ್ಪಿಸಿಕೊಂಡಿದ್ದಾರೆ. ಆದರೆ, ಅಲ್ಲೆ ಉಳಿದುಕೊಂಡ ಬಾಲಕಿಯ ಮೇಲೆ ಶಿಕ್ಷಕ ಅತ್ಯಾಚಾರವೆಸಗಿದ್ದ. ನಂತರ ಮತ್ತೆರಡು ಬಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ವೇಳೆ ವಿಡಿಯೋ ಕೂಡ ಮಾಡಿಕೊಂಡಿದ್ದನು. ಅಲ್ಲದೇ ಯಾರಿಗಾದರೂ ಹೇಳಿದರೆ ನಿಮ್ಮ ತಂದೆ-ತಾಯಿಯರನ್ನು ಕೊಲೆ ಮಾಡುವುದಾಗಿ ಬೆದರಿಸಿದ್ದ.

  • ಬಸ್ ಡ್ರೈವರ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಶಿಕ್ಷಕಿ

    ಬಸ್ ಡ್ರೈವರ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಶಿಕ್ಷಕಿ

    ರಾಯಚೂರು: ನಿಲ್ದಾಣವಿಲ್ಲದ ಸ್ಥಳದಲ್ಲಿ ಬಸ್ ನಿಲ್ಲಿಸುವಂತೆ ಗಲಾಟೆ ಮಾಡಿ ಶಿಕ್ಷಕಿಯೊಬ್ಬಳು ಚಾಲಕನಿಗೆ ಚಪ್ಪಲಿಯಿಂದ ಥಳಿಸಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಪಾಮನಕಲ್ಲೂರಿನಲ್ಲಿ ನಡೆದಿದೆ.

    ಪಾಮನಕಲ್ಲೂರ ಪ್ರೌಢ ಶಾಲೆಯ ಶಿಕ್ಷಕಿ ಬಸಮ್ಮ, ಚಾಲಕ ಚನ್ನಪ್ಪನ ಮೇಲೆ ಹಲ್ಲೆ ಮಾಡಿದ್ದಾಳೆ. ಚಾಲಕ ಸ್ಟಾಪ್ ಬಂತು ಕೆಳಗೆ ಇಳಿರಿ ಎಂದಿದ್ದಾರೆ. ಅದಕ್ಕೆ ಶಿಕ್ಷಕಿ ಶಾಲೆಯ ಮುಂದೆಯೇ ಬಸ್ ನಿಲ್ಲಿಸುವಂತೆ ಕಿರಿಕಿರಿ ಮಾಡಿದ್ದಾಳೆ. ಬಳಿಕ ಚಾಲಕ ಶಾಲೆಯ ಮುಂದೆಯೇ ಬಸ್ ನಿಲ್ಲಿಸಿದ್ದಾರೆ. ಆದರೂ ಶಿಕ್ಷಕಿ ಗಲಾಟೆ ಮಾಡಿದ್ದಾಳೆ.

    ಲಿಂಗಸುಗೂರ ನಿಂದ ಕರ್ನೂಲ್ ಗೆ ಹೋಗುವ ಮಾರ್ಗದ ಎಕ್ಸಪ್ರೆಸ್ ಬಸ್ ನಲ್ಲಿ ಶಿಕ್ಷಕಿ ಕಿರಿಕಿರಿ ಮಾಡಿದ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರಿಂದ ಚಾಲಕ ಸಹ ಬೈದಿದ್ದಾನೆ. ನಂತರ ಜಗಳ ವಿಕೋಪಕ್ಕೆ ಹೋಗಿ ಶಿಕ್ಷಕಿ ಚಪ್ಪಲಿಯಿಂದ ಚಾಲಕನಿಗೆ ಹೊಡೆದಿದ್ದಾಳೆ. ಬಸಮ್ಮಳ ದರ್ಪಕ್ಕೆ ಸಹ ಪ್ರಯಾಣಿಕರು ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಘಟನೆ ಹಿನ್ನೆಲೆಯಲ್ಲಿ ಕವಿತಾಳ ಪೊಲೀಸ್ ಠಾಣೆಯಲ್ಲಿ ಬಸ್ಸಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ.

  • ಶಾಲೆ ಪಾಠ ಬಿಟ್ಟು ಫೋನಿನಲ್ಲಿ ಕಾಮ ಪಾಠ ಮಾಡಿದ ಶಿಕ್ಷಕ!

    ಶಾಲೆ ಪಾಠ ಬಿಟ್ಟು ಫೋನಿನಲ್ಲಿ ಕಾಮ ಪಾಠ ಮಾಡಿದ ಶಿಕ್ಷಕ!

    ಬೆಂಗಳೂರು: ಶಿಕ್ಷಕನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಖಾಸಗಿ ಶಾಲೆಯೊಂದರಲ್ಲಿ ಗಣಿತ ಶಿಕ್ಷಕನಾಗಿ ಕೆಲಸ ಮಾಡುವ ಆರೋಪಿ ಮಂಜೇಶ್ ಅದೇ ಶಾಲೆಯಲ್ಲಿ ಆರನೇ ತರಗತಿ ಓದುವ ವಿದ್ಯಾರ್ಥಿನಿಯ ಜೊತೆಯಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆಗೆ ಫೋನ್ ಮಾಡಿ ವಾಟ್ಸಪ್ ಕಾಲ್ ಮಾಡುವಂತೆ ಒತ್ತಾಯಿಸಿದ್ದಾನೆ. ಅಷ್ಟೇ ಅಲ್ಲದೇ ಮನೆಬಿಟ್ಟು ಬಂದು ತನ್ನ ಜೊತೆ ಮಲಗು.. ಹೀಗೆ ಅಸಭ್ಯ ರೀತಿಯಲ್ಲಿ ಮಾತನಾಡಿದ್ದಾನೆ.

    ವಿದ್ಯಾರ್ಥಿನಿ ತನ್ನ ಅಣ್ಣನ ಮೊಬೈಲ್‍ನಲ್ಲಿ ಆತನ ಜೊತೆ ಮಾತನಾಡಿದ್ದು, ಹೀಗಾಗಿ ಮನೆಯವರಿಗೆ ತಿಳಿದಿದೆ. ನಂತರ ಮನೆಯವರು ಮೊಬೈಲ್ ನ ಆಡಿಯೋ ರೆಕಾರ್ಡ್ ಕೇಳಿಸಿಕೊಂಡಿದ್ದಾರೆ. ಆಗ ಆರೋಪಿ ಮಂಜೇಶ್‍ನ ಕೃತ್ಯ ಗೊತ್ತಾಗಿದೆ. ತಕ್ಷಣ ಪೋಷಕರೇ ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

    ಶಿಕ್ಷಕನೇ ಕಾಮುಕನಾಗಿದ್ದಕ್ಕೆ ವಿದ್ಯಾರ್ಥಿನಿಯ ಪೋಷಕರು ಆತನಿಗೆ ಸರಿಯಾಗಿಯೇ ಪಾಠ ಕಲಿಸಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಸಂಬಂಧ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • ಗಣಿತ ಸಮಸ್ಯೆ ಬಿಡಿಸಲಿಲ್ಲವೆಂದು 8 ವರ್ಷದ ಬಾಲಕನ ಗಂಟಲಿಗೆ ಕೋಲಿನಿಂದ ಚುಚ್ಚಿದ ಶಿಕ್ಷಕಿ

    ಗಣಿತ ಸಮಸ್ಯೆ ಬಿಡಿಸಲಿಲ್ಲವೆಂದು 8 ವರ್ಷದ ಬಾಲಕನ ಗಂಟಲಿಗೆ ಕೋಲಿನಿಂದ ಚುಚ್ಚಿದ ಶಿಕ್ಷಕಿ

    ಅಹ್ಮದ್‍ನಗರ: ಗಣಿತ ಸಮಸ್ಯೆ ಬಿಡಿಸಲಿಲ್ಲ ಎಂದು ಕೋಪಗೊಂಡ ಶಿಕ್ಷಕಿಯೋರ್ವಳು 8 ವರ್ಷದ ಬಾಲಕನ ಗಂಟಲಿಗೆ ಮರದ ಕೋಲಿನಿಂದ ಚುಚ್ಚಿದ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

    ಮಹಾರಾಷ್ಟ್ರದ ಪಿಂಪಲ್ಗಾಂವ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘೋರ ಕೃತ್ಯ ನಡೆದಿದ್ದು, ಬಾಲಕ ರೋಹನ್ ಡಿ ಜಂಜೀರ್ ಹಲ್ಲೆಗೊಳಗಾದ ಬಾಲಕ. ಘಟನೆಯಿಂದ ರೋಹನ್ ನ ಅನ್ನನಾಳ ಮತ್ತು ವಾಯುನಾಳಗಳಿಗೆ ತೀವ್ರ ಏಟಾಗಿದ್ದು, ಸದ್ಯ ಮಾತನಾಡಲು ಸಾಧ್ಯವಾಗುತ್ತಿಲ್ಲ.

    ಶಿಕ್ಷಕಿ ಹಲ್ಲೆ ನಡೆಸಿದ ತಕ್ಷಣ ರೋಹನ್ ಗಂಟಲಿನಿಂದ ರಕ್ತಸ್ರಾವವಾಗಿದೆ. ಘಟನೆಯನ್ನು ಕಣ್ಣಾರೆ ಕಂಡ ಇತರೆ ವಿದ್ಯಾರ್ಥಿಗಳು ಕಿರುಚಿಕೊಂಡಿದ್ದಾರೆ. ಕೂಗು ಕೇಳಿ ಸಿಬ್ಬಂದಿಗಳು ಶಾಲಾ ಕೊಠಡಿಗೆ ದೌಡಾಯಿಸಿದ್ದಾರೆ. ಬಳಿಕ ರೋಹನ್ ನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

    ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಪುಣೆ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ. ಸದ್ಯಕ್ಕೆ ರೋಹನ್ ಪುಣೆ ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಬಾಲಕನ ಮೇಲೆ ದರ್ಪ ತೋರಿದ ಶಿಕ್ಷಕಿ ಮೇಲೆ ಹಲ್ಲೆ ಪ್ರಕರಣ ದಾಖಲಾಗಿದೆ. ಆದ್ರೆ ಇದೂವರೆಗೂ ಆಕೆಯ ಬಂಧನವಾಗಿಲ್ಲ. ಬಾಲಕನ ಆರೋಗ್ಯ ಸ್ವಲ್ಪ ಮಟ್ಟಿಗೆ ಸುಧಾರಣೆಯಾದ ಬಳಿಕ ಆತನ ಬಳಿಯಿಂದ ಹೇಳಿಕೆ ಪಡೆದುಕೊಳ್ಳುತ್ತೇವೆ. ಬೇಕಿದ್ದಲ್ಲಿ ದೂರಿನ ಪ್ರಮಾಣವನ್ನು ಹೆಚ್ಚಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಸರಿಯಾಗಿ ಕಲ್ತಿಲ್ಲ ಅಂತ ಡಸ್ಟರ್ ನಿಂದ ವಿದ್ಯಾರ್ಥಿ ತಲೆ ಓಪನ್ ಮಾಡಿದ ಶಿಕ್ಷಕ!

    ಸರಿಯಾಗಿ ಕಲ್ತಿಲ್ಲ ಅಂತ ಡಸ್ಟರ್ ನಿಂದ ವಿದ್ಯಾರ್ಥಿ ತಲೆ ಓಪನ್ ಮಾಡಿದ ಶಿಕ್ಷಕ!

    ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವಿದ್ಯಾರಣ್ಯಪುರದ ತಿಂಡ್ಲು ಬಳಿ ಇರುವ ನಾರಾಯಣ ಈ ಟೆಕ್ನಿಕೊ ಶಾಲೆಯಲ್ಲಿ ನಡೆದಿದೆ.

    ವೆಂಕಟೇಶ್ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಗಣಿತ ಶಿಕ್ಷಕ. ಸರಿಯಾಗಿ ಕಲಿತ್ತಿಲ್ಲ ಎಂದು ವೆಂಕಟೇಶ್ ಡಸ್ಟರ್ ನಿಂದ ವಿದ್ಯಾರ್ಥಿ ತಲೆ ಓಪನ್ ಮಾಡಿದ್ದು, ಕ್ಲಾಸ್ ರೂಂನಲ್ಲಿ ಹಾಕಲಾಗಿರೋ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

    ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ ಖಂಡಿಸಿ ಪೋಷಕರಿಂದ ಶಾಲೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಶಿಕ್ಷಕ ವೆಂಕಟೇಶ್ ವಿರುದ್ಧ ವಿದ್ಯಾರ್ಥಿ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

  • ಲೈಂಗಿಕ ಕಿರುಕುಳ ನೀಡ್ತಿದ್ದ ಸಿಆರ್ ಪಿ ಅಧಿಕಾರಿ ವಿರುದ್ಧ ದೂರು ಸಲ್ಲಿಸಿದ ಶಿಕ್ಷಕಿಗೆ ಸಿಕ್ಕಿಲ್ಲ ನ್ಯಾಯ

    ಲೈಂಗಿಕ ಕಿರುಕುಳ ನೀಡ್ತಿದ್ದ ಸಿಆರ್ ಪಿ ಅಧಿಕಾರಿ ವಿರುದ್ಧ ದೂರು ಸಲ್ಲಿಸಿದ ಶಿಕ್ಷಕಿಗೆ ಸಿಕ್ಕಿಲ್ಲ ನ್ಯಾಯ

    ಯಾದಗಿರಿ: ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಒಂದು ವರ್ಷದ ಹಿಂದೆ ಸಿಆರ್ ಪಿ ಅಧಿಕಾರಿ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ದೂರು ಸಲ್ಲಿಸಿದ್ದರು. ಆದ್ರೆ ಇದೂವರೆಗೂ ಸಂತ್ರಸ್ತೆ ಶಿಕ್ಷಕಿಗೆ ನ್ಯಾಯ ಮಾತ್ರ ಸಿಕ್ಕಿಲ್ಲ.

    ಯಾದಗಿರಿ ತಾಲೂಕಿನ ಯರಗೋಳ ಶಿಕ್ಷಣ ಇಲಾಖೆಯ ಎಚ್. ಶರಣಪ್ಪ ಎಂಬ ಅಧಿಕಾರಿ ತನಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಅಂತಾ ಸಂತ್ರಸ್ತೆ ಮುಖ್ಯಮಂತ್ರಿ ಕಾರ್ಯದರ್ಶಿ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳಿಗೆ ಜೂನ್ 10, 2017ರಂದು ಲಿಖಿತ ದೂರು ನೀಡಿದ್ದರು. ದೂರು ಸಲ್ಲಿಸಿ ಒಂದು ವರ್ಷವಾದ್ರೂ ಯಾವ ಅಧಿಕಾರಿಗಳು ಪ್ರತಿಕ್ರಿಯೆ ನೀಡಿಲ್ಲ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಯಾದಗಿರಿ ಜಿಲ್ಲಾ ಪಂಚಾಯಿತ ಸಿಇಓ ಅವಿನಾಶ್ ಮೆನನ್, ತಕ್ಷಣವೇ ಸಿಆರ್ ಪಿಓ ಮೇಲೆ ಕ್ರಮಕೈಗೊಳ್ಳಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನೊಂದ ಸಂತ್ರಸ್ತೆ ಸೇರಿದಂತೆ ಸಹ ಶಿಕ್ಷಕರನ್ನು ಈ ಪ್ರಕರಣದ ಬಗ್ಗೆ ವಿಚಾರಿಸಿ ಕ್ರಮ ಕೈಗೊಳ್ಳಲು ಯಾದಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಡಿಡಿಪಿಐ ಕಚೇರಿ ಆದೇಶಿಸಿದ್ದಾರೆ. ಆದೇಶದ ಅನ್ವಯ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಅಂತಾ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.