Tag: Teak

  • ತೇಗದ ಮರ ಕಡಿದ ಮಾಲೀಕನ ವಿರುದ್ಧ ಕೇಸ್‌ ದಾಖಲು

    ತೇಗದ ಮರ ಕಡಿದ ಮಾಲೀಕನ ವಿರುದ್ಧ ಕೇಸ್‌ ದಾಖಲು

    ಚಾಮರಾಜನಗರ: ಜಮೀನೊಂದರಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಕಟಾವು ಮಾಡಿ, ಮಾರಾಟ ಮಾಡಲು ಮುಂದಾಗಿದ್ದ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಮಾಲೀಕನ ವಿರುದ್ಧ ದೂರು ದಾಖಲಾಗಿದೆ.

    ಸತ್ತೇಗಾಲದ ಅಗ್ರಹಾರದ ಸಮೀಪವಿರುವ ಜಮೀನೊಂದರಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಜಮೀನು ‌ಮಾಲೀಕ ಸಚಿನ್ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಕಟಾವು ಮಾಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದರು. ಇದನ್ನೂ ಓದಿ: ಜಮ್ಮು ಕಾಶ್ಮೀರ ಅಭಿವೃದ್ಧಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

    ಈ ಬಗ್ಗೆ ಪ್ರತಿಕ್ರಿಯಿಸಿದ ಮಲೆ ಮಹದೇಶ್ವರ ವನ್ಯ ಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು‌, ಸಚಿನ್ ಎಂಬುವರ ಜಮೀನಿನಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಡಿಯಲಾಗಿದೆ ಎಂಬ ಮಾಹಿತಿ ತಿಳಿದು ಬಂದಿತ್ತು. ಈ‌ ಸಂಬಂಧ ಅರಣ್ಯಾಧಿಕಾರಿ ಸಿದ್ದಪ್ಪ ಹಾಗೂ ಗಾರ್ಡ್ ಪ್ರಮೋದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಸಿದಾಗ ತೇಗದ ಮರ ಕಟಾವು ಮಾಡಿರುವುದು ತಿಳಿದು ಬಂದಿದೆ. ಸದ್ಯ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

  • ಬಟ್ಟೆ ವ್ಯಾಪಾರದ ಸೋಗಿನಲ್ಲಿ ತೇಗದ ಮರ ಸಾಗಾಟ- ಇಬ್ಬರ ಬಂಧನ

    ಬಟ್ಟೆ ವ್ಯಾಪಾರದ ಸೋಗಿನಲ್ಲಿ ತೇಗದ ಮರ ಸಾಗಾಟ- ಇಬ್ಬರ ಬಂಧನ

    ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಕಾನನಕಾಡು ವ್ಯಾಪ್ತಿಯ ಕಾಫಿ ತೋಟದಿಂದ ತೇಗದ ಮರವನ್ನು ಅಕ್ರಮವಾಗಿ ಕಡಿದು ಮಾರುತಿ ಒಮ್ನಿಯಲ್ಲಿ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜಿಲ್ಲಾ ಡಿಸಿಐಬಿ ತಂಡ ಮಾಲು ಸಹಿತ ವಶಕ್ಕೆ ಪಡೆದಿದೆ.

    ಮಡಿಕೇರಿ ಸಮೀಪದ ನೀರುಕೊಲ್ಲಿ ನಿವಾಸಿ ಚಾಲಕ ವೃತ್ತಿಯ ಟಿ.ವಿ.ಲೋಹಿತ್(26) ಹಾಗೂ ಮೇಕೇರಿ ಗ್ರಾಮದ ನಿವಾಸಿ ಕೂಲಿ ಕಾರ್ಮಿಕ ಟಿ.ಎಸ್.ಕೀರ್ತಿ ಬಂಧಿತ ಆರೋಪಿಗಳು. ಆರೋಪಿಗಳಿಂದ 6 ತೇಗದ ಮರದ ನಾಟಾಗಳು ಮತ್ತು ಒಮ್ನಿ ವ್ಯಾನ್ ವಶಕ್ಕೆ ಪಡೆದಿದ್ದು, ಒಟ್ಟು ಮೌಲ್ಯ 3 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಶರ್ಟ್, ಪ್ಯಾಂಟ್ ವ್ಯಾಪಾರದ ಸೋಗು
    ಒಮ್ನಿ ವ್ಯಾನಿನಲ್ಲಿ ಸುತ್ತಲೂ ಟೀ ಶರ್ಟ್, ಹಾಫ್ ಪ್ಯಾಂಟ್ ಗಳನ್ನು ನೇತು ಹಾಕಿ ವ್ಯಾಪಾರ ಮಾಡುವ ಸೋಗಿನಲ್ಲಿ ವಿವಿಧ ಅಳತೆಯ 6 ತೇಗದ ಮರದ ನಾಟಾಗಳನ್ನು ತುಂಬಿ ಸಾಗಾಟ ಮಾಡುತ್ತಿದ್ದ ಸಂದರ್ಭ ಸೋಮವಾರಪೇಟೆ ತಾಲೂಕು ವಾಲ್ಲೂರು ಪೊಲೀಸರು ತ್ಯಾಗತ್ತೂರು ಜಂಕ್ಷನ್ ಬಳಿ ಕಾರ್ಯಾಚರಣೆ ನಡೆಸಿದರು. ಜಿಲ್ಲಾ ಡಿಸಿಐಬಿ ವಿಭಾಗದ ಪಿ.ಐ. ಎನ್.ಕುಮಾರ್ ಆರಾಧ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಯಾದ ಬಿ.ಎಲ್.ಯೊಗೇಶ್ ಕುಮಾರ್, ಎಂ.ಎನ್.ನಿರಂಜನ್, ಕೆ.ಆರ್.ವಸಂತ, ಕೆ.ಎಸ್.ಅನಿಲ್ ಕುಮಾರ್, ವಿ.ಜಿ.ವೆಂಕಟೇಶ್, ಬಿ.ಜಿ.ಶರತ್ ರೈ, ಸುರೇಶ್ ಹಾಗೂ ಶಶಿಕುಮಾರ್ ಪಾಲ್ಗೊಂಡಿದ್ದರು.