Tag: Team

  • ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-3 ಆಟಗಾರರ ಆಯ್ಕೆ ಪ್ರಕ್ರಿಯೆ ಮುಕ್ತಾಯ

    ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-3 ಆಟಗಾರರ ಆಯ್ಕೆ ಪ್ರಕ್ರಿಯೆ ಮುಕ್ತಾಯ

    ನ್ 1 ಕ್ರಿಕೆಟ್ ಅಕಾಡೆಮಿ ಕಳೆದೆರೆಡು ವರ್ಷಗಳಿಂದ ಆಯೋಜಿಸಿಕೊಂಡು ಬರುತ್ತಿರುವ ಟೆಲಿವಿಷನ್ ಪ್ರೀಮಿಯರ್(Television) ಲೀಗ್-ಟಿಪಿಎಲ್ ಮತ್ತೆ ಶುರುವಾಗುತ್ತಿದೆ. ಈಗಾಗಲೇ ಯಶಸ್ವಿಯಾಗಿ ಎರಡು ಸೀಸನ್ ಮುಗಿದಿದ್ದು, ಮೂರನೇ ಸೀಸನ್ ಜನವರಿ ತಿಂಗಳಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ ತಂಡಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಇಂದು ನೆಲಮಂಗಲ ಸಮೀಪದ ಆದಿತ್ಯ ಗ್ಲೋಬಲ್ ಕ್ರಿಕೆಟ್ (Cricket) ಸ್ಟೇಡಿಯಂನಲ್ಲಿ ಟಿಪಿಎಲ್ ಸೀಸನ್-3 ಫ್ಲೇಯರ್ಸ್ ಗಳ ಆಯ್ಕೆ ಮಾಡಲಾಯಿತು. ಬರೋಬ್ಬರಿ 100ಕ್ಕೂ ಹೆಚ್ಚು ಕಲಾವಿದರು ಆಟಗಾರರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.

    ಈ ಬಗ್ಗೆ ಮಾತನಾಡಿ ಟಿಪಿಎಲ್ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್, ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗಿಯಾಗುತ್ತಿರುವ ಎಲ್ಲರಿಗೂ ಒಳ್ಳೆಯದಾಗಲಿ. ಸೆಲೆಬ್ರಿಟಿಗಳ ಸಪೋರ್ಟ್ ಇಲ್ಲದೇ ಏನೂ ಆಗುವುದಿಲ್ಲ. ನಾವು ಕರೆ ಮಾಡಿದ ತಕ್ಷಣ ರೆಸ್ಪಾನ್ಸ್ ಮಾಡುತ್ತಾರೆ. ಅವರ ಬೆಂಬಲದಿಂದ ಪಂದ್ಯಾವಳಿ ಅಚ್ಚುಕಟ್ಟಾಗಿ ನಡೆಯುತ್ತಿದೆ. ಕ್ಯಾಪ್ಟನ್, ಓನರ್ಸ್ ಹಾಗೂ ಮಾಧ್ಯಮದವರು ಎಲ್ಲರು ಬೆಂಬಲಿಸುತ್ತಿದ್ದಾರೆ ಎಂದರು.

    ಈ ಬಾರಿಯ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-3ನಲ್ಲಿ ಮಾಧ್ಯಮದವರಿಗೂ ಅವಕಾಶ ನೀಡಲಾಗಿದೆ. ಜೆರ್ಸಿ, ತಂಡಗಳು, ಆಟಗಾರರು, ಮತ್ತಿತರ ಅಪ್ ಡೇಟ್ ಬಗ್ಗೆ ಒಂದೊಂದಾಗಿ ತಿಳಿಸಲಾಗುತ್ತದೆ. ವಿಶೇಷ ಎಂದರೆ ಮ್ಯಾನ್ ಆಫ್ ದಿ ಸೀರಿಸ್ ಪಟ್ಟ ಪಡೆದವರಿಗೆ ಕಾರು, ಆರೆಂಜ್ ಕ್ಯಾಪ್ ಹೋಲ್ಡರ್(Batsman), ಪರ್ಪಲ್ ಕ್ಯಾಪ್ ಹೋಲ್ಡರ್(Bowler) ಪಡೆದವರಿಗೆ ಬೈಕ್ ಕೊಡಲಾಗುತ್ತದೆ ಎಂದು ಪಂದ್ಯಾವಳಿ ಆಯೋಜಕ ಸುನಿಲ್ ಕುಮಾರ್ ಬಿ.ಆರ್. ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • T20 ಕ್ರಿಕೆಟ್‍ನಲ್ಲಿ ಭಾರತ vs ಪಾಕಿಸ್ತಾನ ನಡುವೆ ಯಾರು ಬೆಸ್ಟ್?

    T20 ಕ್ರಿಕೆಟ್‍ನಲ್ಲಿ ಭಾರತ vs ಪಾಕಿಸ್ತಾನ ನಡುವೆ ಯಾರು ಬೆಸ್ಟ್?

    ದುಬೈ: ಟಿ20 ವಿಶ್ವಕಪ್ ಆರಂಭವಾಗಿದೆ. ಈಗಾಗಲೇ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಾಟಕ್ಕಾಗಿ ಇಡೀ ವಿಶ್ವ ಕಾದು ಕುಳಿತಿದೆ. ಈ ನಡುವೆ ಟಿ20 ಕ್ರಿಕೆಟ್‍ನಲ್ಲಿ ಯಾರು ಬೆಸ್ಟ್ ಎಂಬ ಪ್ರಶ್ನೆಗೆ ಈ ಅಂಕಿ ಅಂಶ ಉತ್ತರ ನೀಡುತ್ತಿದೆ.

    ಹೌದು ಭಾರತ ಹಾಗೂ ಪಾಕಿಸ್ತಾನ ನಡುವಿನ ಟೀಂ ರ‍್ಯಾಂಕಿಂಗ್, ಆಟಗಾರರ ರ‍್ಯಾಂಕಿಂಗ್ ಮತ್ತು ಟಿ20 ವಿಶ್ವಕಪ್ ಇತಿಹಾಸದಲ್ಲಿನ ಸಾಧನೆಯನ್ನು ಗಮನಿಸಿದರೆ ಎರಡು ತಂಡಗಳು ಪ್ರಬಲವಾಗಿರುವುದು ತಿಳಿಯುತ್ತದೆ. ಇದನ್ನೂ ಓದಿ: ಮೊದಲ ಟಿ20 ವಿಶ್ವಕಪ್ ಬಾಲ್‍ಔಟ್ ಮೂಲಕ ಪಾಕ್‍ಗೆ ಶಾಕ್ ಕೊಟ್ಟ ಭಾರತ

    ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಎರಡು ಬಾರಿ ಫೈನಲ್ ಪ್ರವೇಶಿಸಿದ್ದು ತಲಾ ಒಂದೊಂದು ಬಾರಿ ಚಾಂಪಿಯನ್ ಆಗಿದೆ ಜೊತೆಗೆ ಒಂದೊಂದು ಬಾರಿ ರನ್ನರ್ ಅಪ್ ಆಗಿ ತೃಪ್ತಿಪಟ್ಟಿದೆ. 2007ರಲ್ಲಿ ಆರಂಭಗೊಂಡ ಮೊದಲ ವಿಶ್ವಕಪ್‍ನಲ್ಲಿ ಭಾರತ ತಂಡ ವಿಶ್ವಕಪ್ ಗೆದ್ದರೆ, 2009ರ ವಿಶ್ವಕಪ್‍ನಲ್ಲಿ ಪಾಕಿಸ್ತಾನ ವಿಶ್ವಕಪ್‍ಗೆ ಮುತ್ತಿಕ್ಕಿದೆ.

    ಪ್ರಸ್ತುತ ಟಿ20 ಕ್ರಿಕೆಟ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ಸಾಧನೆಯನ್ನು ಗಮನಿಸಿದರೆ, ರ‍್ಯಾಂಕಿಂಗ್ ನಲ್ಲಿ ಭಾರತ ತಂಡ 2ನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ ತಂಡ 3ನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಟೀಂ ಇಂಡಿಯಾಗೆ ಕ್ಲಾಸ್ ಆರಂಭಿಸಿದ ಧೋನಿ – ವಿಶ್ವಕಪ್‍ಗಾಗಿ ಭರ್ಜರಿ ತಯಾರಿ

    ವೈಯಕ್ತಿಕ ಆಟಗಾರರ ರ‍್ಯಾಂಕಿಂಗ್ ಗಮನಿಸಿದರೆ ಬ್ಯಾಟಿಂಗ್‍ನಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಟಿ20 ಕ್ರಿಕೆಟ್‍ನಲ್ಲಿ 2ನೇ ರ‍್ಯಾಂಕಿಂಗ್ ನಲ್ಲಿದ್ದರೆ, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 4ನೇ ರ‍್ಯಾಂಕಿಂಗ್ ನಲ್ಲಿದ್ದಾರೆ. ಜೊತೆಗೆ ಭಾರತದ ಇನ್ನೊಬ್ಬ ಆಟಗಾರ ಕೆ.ಎಲ್ ರಾಹುಲ್ 6ನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ 7ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್ – ಕರ್ಟಿಸ್ ಕ್ಯಾಂಫರ್ ಹ್ಯಾಟ್ರಿಕ್ ವಿಕೆಟ್ ಸಾಧನೆ

    ತಂಡಗಳ ರ‍್ಯಾಂಕಿಂಗ್, ಆಟಗಾರರ ರ‍್ಯಾಂಕಿಂಗ್ ಗಮನಿಸದರೆ ಎರಡು ತಂಡಗಳ ಪ್ರದರ್ಶನ ಶ್ರೇಷ್ಠ ಮಟ್ಟದಲ್ಲಿದೆ. ಆದರೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಪ್ರತಿ ಬಾರಿ ಗೆದ್ದಿದೆ ಇದು ಭಾರತಕ್ಕೆ ಪ್ಲಸ್ ಪಾಯಿಂಟ್.

  • ಹಿಗ್ಗಾಮುಗ್ಗ ಥಳಿಸಿ ಕಾರೊಳಗೆ ತುಂಬಿಕೊಂಡು ಮಹಿಳೆಯರಿಂದ್ಲೇ ಗೃಹಿಣಿ ಅಪಹರಣ!

    ಹಿಗ್ಗಾಮುಗ್ಗ ಥಳಿಸಿ ಕಾರೊಳಗೆ ತುಂಬಿಕೊಂಡು ಮಹಿಳೆಯರಿಂದ್ಲೇ ಗೃಹಿಣಿ ಅಪಹರಣ!

    ಕೋಲಾರ: ಕುಟುಂಬ ಕಲಹ ಹಿನ್ನೆಲೆಯಲ್ಲಿ ಮಹಿಳೆಯನ್ನು ಹಿಗ್ಗಾಮುಗ್ಗ ಥಳಿಸಿ ಕಾರಿನಲ್ಲಿ ಅಪಹರಣ ಆರೋಪ ಇದೀಗ ಕೇಳಿ ಬಂದಿದೆ. ಕೋಲಾರ ತಾಲೂಕಿನ ಸೋಮಸಂದ್ರ ಗ್ರಾಮದಲ್ಲಿ ಕಳೆದ ರಾತ್ರಿ ಸುಮಾರು 5 ಜನ ಮಹಿಳೆಯರ ತಂಡ ಮಹಿಳೆಯೋರ್ವಳನ್ನ ಹಿಗ್ಗಾಮುಗ್ಗ ಥಳಿಸಿ ಅಪಹರಣ ಮಾಡಿದ್ದಾರೆ ಎನ್ನಲಾಗಿದೆ.

    33 ವರ್ಷದ ಕಮಲಮ್ಮ ಅಪಹರಣಕ್ಕೊಳಗಾದ ಮಹಿಳೆ ಎನ್ನಲಾಗುತ್ತಿದೆ. ಅಪಹರಣಕ್ಕೂ ಮೊದಲು ಹಲ್ಲೆ ಮಾಡಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ. ಮಹಿಳೆಯನ್ನು ಎಳೆದಾಡಿ ದೊಣ್ಣೆಗಳಿಂದ ಹೊಡೆದು ಕಾರಿನಲ್ಲಿ ಕರೆದೊಯ್ದ ದುಷ್ರ್ಕಮಿಗಳ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ವೈರಲ್ ಆಗಿದೆ.

    ಮೀನಾಕ್ಷಿ, ಶಾಲಿನಿ ಎಂಬವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ನಡೆದಿರುವ ಕೃತ್ಯ ಎನ್ನಲಾಗಿದೆ. ಅಲ್ಲದೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಹೀಗೆ ಥಳಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 15 ಸಾವಿರ ರೂ., ದಾಖಲಾತಿಗಳಿದ್ದ ಪರ್ಸ್ ಹಿಂದಿರುಗಿಸಿದ ಕಾಲೇಜಿನ ವಿದ್ಯಾರ್ಥಿಗಳು

    ಕೋಲಾರ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ದೂರು ದಾಖಲಾಗಿದೆ. ಇದನ್ನೂ ಓದಿ:  5ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ- ಶಿಕ್ಷಕ ಅರೆಸ್ಟ್

  • ಟಿ20 ವಿಶ್ವಕಪ್‍ಗೆ ಅಚ್ಚರಿಯಾಗಿ ಆಯ್ಕೆಗೊಂಡ ಆಟಗಾರರಿವರು

    ಟಿ20 ವಿಶ್ವಕಪ್‍ಗೆ ಅಚ್ಚರಿಯಾಗಿ ಆಯ್ಕೆಗೊಂಡ ಆಟಗಾರರಿವರು

    ದುಬೈ: ಟಿ20 ವಿಶ್ವಕಪ್‍ಗಾಗಿ ಪ್ರತಿ ದೇಶದ ತಂಡಗಳು ಕೂಡ ತಯಾರಿಯಲ್ಲಿ ತೊಡಗಿಕೊಂಡಿದೆ. ಈಗಾಗಲೇ ಟೂರ್ನಿಗೆ ಪ್ರತಿ ದೇಶದ ತಂಡಗಳಿಗೆ ಆಟಗಾರರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಈ ಪಟ್ಟಿಯಲ್ಲಿ ಕೆಲ ಆಟಗಾರರ ಆಯ್ಕೆ ಅಚ್ಚರಿ ಮೂಡಿಸುತ್ತಿದೆ.

    ಪ್ರತಿ ದೇಶಗಳು ಕೂಡ 15 ಸದಸ್ಯರ ತಂಡವನ್ನು ದುಬೈಗೆ ಕಳುಹಿಸಿಕೊಡಲು ತಂಡವನ್ನು ಆಯ್ಕೆ ಮಾಡಿದೆ. ಈ ನಡುವೆ ಕೆಲ ದೇಶಗಳ ಹಿರಿಯ ಆಟಗಾರರು ಮತ್ತು ಕಳಪೆ ಫಾರ್ಮ್‍ನಲ್ಲಿರುವವರು ಕೂಡ ತಂಡದಲ್ಲಿ ಸ್ಥಾನ ಪಡೆದು ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ನೀಡಿದ್ದಾರೆ.

    ಅಚ್ಚರಿಯ ಆಯ್ಕೆ ಕಂಡವರಲ್ಲಿ ಮೊದಲಿಗರಾಗಿ ಕಾಣ ಸಿಗುವುದು ಭಾರತ ತಂಡದ ಆಟಗಾರ ರವಿಚಂದ್ರನ್ ಅಶ್ವಿನ್ ಭಾರತ ತಂಡಕ್ಕೆ ಕಳೆದ 4 ವರ್ಷಗಳಿಂದ ಸ್ಥಾನ ಪಡೆಯಲು ವಿಫಲರಾಗಿದ್ದರು. ಆದರೆ ಇದೀಗ ಅಶ್ವಿನ್ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಇದನ್ನೂ ಓದಿ: ಐಪಿಎಲ್ ಆಡಲ್ಲವೆಂದ ಇಂಗ್ಲೆಂಡ್ ಸ್ಟಾರ್ ಆಟಗಾರ..!

    ಅಶ್ವಿನ್‍ರಂತೆ ಅಚ್ಚರಿಯಾಗಿ ಆಯ್ಕೆಗೊಂಡವರಲ್ಲಿ ವೆಸ್ಟ್ ಇಂಡೀಸ್ ತಂಡದ ರವಿ ರಾಂಪಾಲ್ ಕೂಡ ಒಬ್ಬರು. ಅವರು ವೆಸ್ಟ್ ಇಂಡೀಸ್ ತಂಡದಿಂದ ಹೊರ ಬಿದ್ದು ಈಗಾಗಲೇ 6 ವರ್ಷ ಕಳೆದು ಹೋಗಿತ್ತು. ಆದರೆ ಇದೀಗ ನಡೆಯುತ್ತಿರುವ ಸಿಪಿಎಲ್‍ನಲ್ಲಿ ಭರ್ಜರಿ ಫಾರ್ಮ್ ಕಂಡುಕೊಂಡಿರುವ ರಾಂಪಾಲ್ ಮತ್ತೊಮ್ಮೆ ವೆಸ್ಟ್ ಇಂಡೀಸ್ ತಂಡ ಸೇರಿಕೊಂಡಿದ್ದಾರೆ.

    ತಾಲಿಬಾನಿಗಳಿಗಳ ಅಟ್ಟಹಾಸದಿಂದಾಗಿ ನಲುಗಿ ಹೋಗಿರುವ ಅಘ್ಘಾನಿಸ್ತಾನ ದೇಶ ಇದೀಗ ಟಿ20 ವಿಶ್ವಕಪ್‍ಗೆ ತಮ್ಮ ತಂಡವನ್ನು ಕಳುಹಿಸಿಕೊಡಲು ನಿರ್ಧರಿಸಿದೆ. ಈಗಾಗಲೇ ತಂಡವನ್ನು ಕೂಡ ಆಯ್ಕೆ ಮಾಡಲಾಗಿದೆ. ತಂಡದಲ್ಲಿ 2 ವರ್ಷಗಳ ಬಳಿಕ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ಮೊಹಮ್ಮದ್ ಶಹಜಾದ್ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್‍ನಲ್ಲಿ ನಡೆದ ಏಕದಿನ ವಿಶ್ವಕಪ್ ಬಳಿಕ ತಂಡದಿಂದ ಹೊರ ಬಿದ್ದಿದ್ದ ಶಹಜಾದ್ ಟಿ20 ವಿಶ್ವಕಪ್‍ಗಾಗಿ ತಂಡಕ್ಕೆ ಮರಳಿದ್ದಾರೆ. ಇದನ್ನೂ ಓದಿ: ಆರು ಬಾಲಿಗೆ ಆರು ಸಿಕ್ಸರ್ ಸಿಡಿಸಿದ ಅಮೆರಿಕದ ಆಟಗಾರ

    ದೇಶಿ ಟೂರ್ನಿಯಲ್ಲಿ ಮಿಂಚಿದ ಇಂಗ್ಲೆಂಡ್ ತಂಡದ ವೇಗದ ಬೌಲರ್ ಟೈಮಲ್ ಮಿಲ್ಸ್ 2 ವರ್ಷಗಳ ಬಳಿಕ ಮತ್ತೆ ಇಂಗ್ಲೆಂಡ್ ತಂಡ ಸೇರಿಕೊಂಡಿದ್ದು, ರಾಷ್ಟ್ರೀಯ ತಂಡಕ್ಕಾಗಿ ಈ ಬಾರಿ ಟಿ20 ವಿಶ್ವಕಪ್ ಗೆಲ್ಲಿಸಿಕೊಡುವ ಇರಾದೆಯಲ್ಲಿದ್ದಾರೆ.

    ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಡೇವಿಡ್ ವೈಸ್ ಇದೀಗ ನಮೀಬಿಯಾ ತಂಡದ ಪರ ಆಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ತಂಡದಿಂದ ಹೊರ ಬಿದ್ದ ಬಳಿಕ ನಮೀಬಿಯಾ ತಂಡ ಸೇರಿಕೊಂಡ ವೈಸ್ ಇದೀಗ ಟಿ20 ವಿಶ್ವಕಪ್‍ನ ಅರ್ಹತಾ ಸುತ್ತಿನಲ್ಲಿ ಆಡುವ ಮೂಲಕ ಮತೊಮ್ಮೆ ಮಿಂಚಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ತಂಡದಲ್ಲಿ ಸ್ಟಾರ್ ಆಟಗಾರರಿಗಿಲ್ಲ ಸ್ಥಾನ

    ಈ ಎಲ್ಲಾ ಆಟಗಾರರು ಕೂಡ ಹಿರಿಯ ಅಟಗಾರಾಗಿದ್ದರೂ ಕೂಡ ಮತ್ತೊಮ್ಮೆ ತಮ್ಮ ಸಾಮರ್ಥ್ಯ ಪ್ರದರ್ಶಿಸಿ ರಾಷ್ಟ್ರೀಯ ತಂಡದಲ್ಲಿ ಮಿಂಚುಹರಿಸಲು ಸಿದ್ಧರಾಗಿದ್ದಾರೆ. ಆದರೆ ಇವೆಲ್ಲರಿಗೂ ಆಡುವ 11ರ ಬಳಗದಲ್ಲಿ ಸ್ಥಾನ ಸಿಗುವುದೇ ಎನ್ನುವುದನ್ನು ಕಾದು ನೋಡಬೇಕಾಗಿದೆ.

  • ಟಿ20 ವಿಶ್ವಕಪ್ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ತಂಡದಲ್ಲಿ ಸ್ಟಾರ್ ಆಟಗಾರರಿಗಿಲ್ಲ ಸ್ಥಾನ

    ಟಿ20 ವಿಶ್ವಕಪ್ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ತಂಡದಲ್ಲಿ ಸ್ಟಾರ್ ಆಟಗಾರರಿಗಿಲ್ಲ ಸ್ಥಾನ

    ದುಬೈ: ಅಕ್ಟೋಬರ್, ನವೆಂಬರ್​ನಲ್ಲಿ ದುಬೈನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‍ಗೆ ಈಗಾಗಲೇ ಹಲವು ದೇಶಗಳು ತಮ್ಮ ತಂಡವನ್ನು ಪ್ರಕಟಿಸಿದೆ. ಈ ನಡುವೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ತಂಡದಲ್ಲಿ ಟಿ20 ಸ್ಪೇಷಲಿಸ್ಟ್ ಎನಿಸಿಕೊಂಡಿರುವ ಸ್ಟಾರ್ ಆಟಗಾರರು ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

    ಪ್ರತಿ ದೇಶಗಳು ಕೂಡ ಮಹತ್ವದ ಕ್ರಿಕೆಟ್ ಟೂರ್ನಿಗೆ ಬಲಿಷ್ಠ ತಂಡವನ್ನು ಕಟ್ಟಿ ದುಬೈಗೆ ಕಳುಹಿಸಿಕೊಡಲು ಪ್ಲ್ಯಾನ್ ಹಾಕಿಕೊಂಡಿದೆ. ಅದರಲ್ಲೂ ಕೂಡ ಟಿ20 ಕ್ರಿಕೆಟ್‍ನಲ್ಲಿ ತಮ್ಮ ಬ್ಯಾಟಿಂಗ್, ಬೌಲಿಂಗ್ ಮೂಲಕ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿರು ಕೆಲ ಆಟಗಾರರು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಸಿಗದೆ ನಿರಾಸೆ ಅನುಭವಿಸಿದ್ದಾರೆ. ಇದನ್ನೂ ಓದಿ: ಇದೇ ಧೋನಿಯ ಕೊನೆಯ ಐಪಿಎಲ್?

    ದಕ್ಷಿಣ ಆಫ್ರಿಕಾದ ಟಿ20 ಸ್ಪೇಷಲಿಸ್ಟ್ ಆಟಗಾರರಾದ ಫಾಫ್ ಡು ಪ್ಲೆಸಿಸ್, ಕ್ರೀಸ್ ಮೋರಿಸ್, ಇಮ್ರಾನ್ ತಾಹೀರ್ ಟಿ20 ವಿಶ್ವಕಪ್‍ಗಾಗಿ ಆಯ್ಕೆ ಮಾಡಿರುವ ರಾಷ್ಟ್ರೀಯ ತಂಡದಲ್ಲಿ ಆಯ್ಕೆಯಾಗಿಲ್ಲ. ಇವರೊಂದಿಗೆ ಇಂಗ್ಲೆಂಡ್ ತಂಡದ ಆಲ್‍ರೌಂಡರ್‍ ಗಳಾದ ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್ ಕೂಡ ತಂಡದಲ್ಲಿ ಸ್ಥಾನ ಪಡೆದಿಲ್ಲ. ಈ ಎಲ್ಲ ಆಟಗಾರರು ಕೂಡ ಟಿ20 ಕ್ರಿಕೆಟ್‍ಗೆ ಹೇಳಿ ಮಾಡಿಸಿದಂತಿರುವ ಆಟಗಾರರು. ಇವರು ವಿದೇಶಗಳಲ್ಲಿ ನಡೆಯುವ ಪ್ರಮುಖ ಟಿ20 ಲೀಗ್‍ಗಳಲ್ಲಿನ ತಾರಾ ಆಟಗಾರರು. ಹೀಗಿರುವಾಗ ರಾಷ್ಟ್ರೀಯ ತಂಡದಲ್ಲಿ ಇವರಿಗೆ ಸ್ಥಾನ ಸಿಕ್ಕಿಲ್ಲ. ಇದನ್ನೂ ಓದಿ: ಟೀಂ ಇಂಡಿಯಾ ಮೆಂಟರ್ ಸ್ಥಾನ ಸಿಗುತ್ತಿದ್ದಂತೆ ಧೋನಿಗೆ ಸ್ವಹಿತಾಸಕ್ತಿ ಸಂಕಷ್ಟ

  • ದೇಶಕ್ಕೆ ಹೆಮ್ಮೆ ತಂದಿದ್ದೀರಿ – ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಕೋವಿಂದ್ ಅಭಿನಂದನೆ

    ದೇಶಕ್ಕೆ ಹೆಮ್ಮೆ ತಂದಿದ್ದೀರಿ – ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಕೋವಿಂದ್ ಅಭಿನಂದನೆ

    ನವದೆಹಲಿ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕ್ರೀಡಾಪಟುಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟೀ ಪಾರ್ಟಿ ನೀಡಿ ಅಭಿನಂದಿಸಿದ್ದಾರೆ.

    ರಾಷ್ಟ್ರಪತಿ ಭವನದಲ್ಲಿ ಚಹಾ ಕೂಟ ನೀಡಿ ಮಾತನಾಡಿದ ಕೋವಿಂದ್, ಇಡೀ ದೇಶವೇ ಹೆಮ್ಮೆ ಪಡುವ ಸಾಧನೆ ಮಾಡಿದ್ದೀರಿ ಎಂದು ಹೇಳಿ ಕ್ರೀಡಾಪಟುಗಳನ್ನು ಶ್ಲಾಘಿಸಿದ್ದಾರೆ.

    ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶ ವಿದೇಶಗಳಲ್ಲಿರುವ ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿದರು. ಈ ವರ್ಷ ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ವಿಶೇಷತೆಯಿಂದ ಆಚರಿಸಲಾಗುತ್ತಿದೆ. ಇದು 75ನೇ ಸ್ವಾತಂತ್ರ್ಯ ದಿನಾಚರಣೆಯಾಗಿದೆ. ನಾವೆಲ್ಲರೂ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸುತ್ತೇವೆ. ಆದರೆ ಈ ವಿಶೇಷ ದಿನದ ಹಿಂದೆ ಹಲವು ಗಣ್ಯರ ತ್ಯಾಗ ಬಲಿದಾನಗಳಿವೆ ಎಂದು ಸ್ಮರಿಸಿಕೊಂಡರು.

    ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಹೋರಾಟ ಮಾಡಿದ ಸರ್ವರಿಗೂ ನನ್ನ ನಮನಗಳು. ನಾವೆಲ್ಲರೂ 75 ವರ್ಷಗಳಲ್ಲಿ ಹಲವು ಅಡೆ ತಡೆಗಳನ್ನು ಮೆಟ್ಟಿನಿಂತು ಎಲ್ಲರೂ ಒಂದಾಗಿ ಸಾಗಿ ಬಂದಿದ್ದೇವೆ. ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪ್ರದರ್ಶನ ಕಂಡು ದೇಶವೇ ಹೆಮ್ಮೆ ಪಡುತ್ತಿದೆ. ಹಾಗಾಗಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಮತ್ತಷ್ಟು ವಿಶೇಷವಾಗಿದೆ. 121 ವರ್ಷಗಳ ಬಳಿಕ ಒಲಿಂಪಿಕ್ಸ್ ಇತಿಹಾಸದಲ್ಲಿ ನಮ್ಮ ದೇಶದಿಂದ ಅತೀ ಹೆಚ್ಚು ಕ್ರೀಡಾಪಟುಗಳನ್ನು ಕಳುಹಿಸಿದ್ದೇವೆ ಅವರು ಉತ್ತಮ ಸಾಧನೆ ತೋರಿ ಪದಕ ಬೇಟೆಯಾಡಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಶ್ಲಾಘಿಸಿದರು. 

    ದೇಶದಲ್ಲಿ ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಹಾಗಾಗಿ ಪ್ರತಿಯೊಬ್ಬರು ಕೊರೊನಾದ ಬಗ್ಗೆ ಎಚ್ಚರದಿಂದ ಇರಬೇಕು. ಯಾರು ಕೂಡ ಮುಂಜಾಗ್ರತಾ ಕ್ರಮಗಳನ್ನು ಮರೆಯಬಾರದು. ಎಲ್ಲರೂ ಕೂಡ ಕೊರೊನಾ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಿ ಎಂದು ಕೋವಿಂದ್ ಅವರು ಮನವಿ ಮಾಡಿಕೊಂಡರು. ಇದನ್ನೂ ಓದಿ: ತವರಿಗೆ ಬಂದ ಟೋಕಿಯೋ ಒಲಿಂಪಿಕ್ಸ್ ವೀರರಿಗೆ ಅದ್ಧೂರಿ ಸ್ವಾಗತ – ದೆಹಲಿಯಲ್ಲಿ ಕೇಂದ್ರ ಸರ್ಕಾರದಿಂದ ಸನ್ಮಾನ

  • ಕೊಡಗಿನ ಯುವತಿ ಸಮುದ್ರದಲ್ಲಿ ಕಣ್ಮರೆ- ವಿಹಾರಕ್ಕೆ ಬಂದಿದ್ದ ನಾಲ್ವರ ತಂಡ

    ಕೊಡಗಿನ ಯುವತಿ ಸಮುದ್ರದಲ್ಲಿ ಕಣ್ಮರೆ- ವಿಹಾರಕ್ಕೆ ಬಂದಿದ್ದ ನಾಲ್ವರ ತಂಡ

    ಉಡುಪಿ: ಕರಾವಳಿ ಜಿಲ್ಲೆಗಳಿಗೆ ವಿಶೇಷವಾಗಿ ಸಮುದ್ರತೀರಕ್ಕೆ ಪ್ರವಾಸ ಬರಬೇಡಿ ಎಂದು ಎಷ್ಟು ಎಚ್ಚರಿಕೆ ನೀಡಿದರೂ ಜನ ಕೇಳುತ್ತಿಲ್ಲ. ವೀಕೆಂಡ್ ಬಂದ್ರೆ ಈಗಲೂ ನೂರಾರು ಜನ ಸಮುದ್ರ ತೀರದತ್ತ ಮುಖ ಮಾಡುತ್ತಾರೆ. ಹೀಗೆ ಕೊಡಗು ಮತ್ತು ಮೈಸೂರು ಭಾಗದಿಂದ ಬಂದಿದ್ದ ಯುವಕ-ಯುವತಿಯರ ತಂಡವೊಂದು ಮಲ್ಪೆಗೆ ಆಗಮಿಸಿತ್ತು. ಈ ವೇಳೆ ಸಮುದ್ರದ ಅಲೆಗಳಲ್ಲಿ ಈಜುತ್ತಿದ್ದಾಗ ನೀರು ಪಾಲಾದ ಘಟನೆ ಮಲ್ಪೆ ಸಮುದ್ರ ತೀರದಲ್ಲಿ ನಡೆದಿದೆ.

    ಮೈಸೂರಿನ ಯುವಕ ಹಾಗೂ ಕೊಡಗಿನಿಂದ ಮೂವರು ಯುವತಿಯರು ಬೀಚ್ ಗೆ ಬಂದಿದ್ದರು. ನಾಲ್ವರ ಪೈಕಿ ಓರ್ವ ಯುವಕ ಹಾಗೂ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ಕೊಡಗಿನ ಯುವತಿ ದಶಮಿ (20) ಸಮುದ್ರದಲ್ಲಿ ಕಣ್ಮರೆಯಾಗಿದ್ದಾಳೆ. ಯುವಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಗಾಗಿ ಹುಡುಕಾಟ ನಡೆಯುತ್ತಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅಲೆಗಳ ತೀವ್ರತೆ ಹೆಚ್ಚಿರುವುದರಿಂದ ಸಮುದ್ರಕ್ಕೆ ಇಳಿಯಬೇಡಿ ಎಂದು ಎಚ್ಚರಿಕೆ ನೀಡಲಾಗಿತ್ತು. ಎಚ್ಚರಿಕೆಯ ಹೊರತಾಗಿಯೂ ತಂಡ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳ ಆರ್ಭಟಕ್ಕೆ ಸಿಲುಕಿದೆ. ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ಒಂದು ತಿಂಗಳಿನಿಂದ ನಿರಂತರ ಮಳೆ ಸುರಿಯುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಸಮುದ್ರದ ಅಬ್ಬರ ಹೆಚ್ಚಾಗಿದೆ. ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದರೂ ಹೊರ ಜಿಲ್ಲೆಯವರು ನಿರ್ಲಕ್ಷ್ಯ ತೋರುತ್ತಿದ್ದಾರೆ.

  • ದುಬೈನಲ್ಲಿ ಮೃತಪಟ್ಟ ಯುವಕ- ಮೃತದೇಹ ಮಂಗ್ಳೂರಿಗೆ ಕಳಿಸಿದ ಸರ್ವಧರ್ಮದ ಯುವಕರು

    ದುಬೈನಲ್ಲಿ ಮೃತಪಟ್ಟ ಯುವಕ- ಮೃತದೇಹ ಮಂಗ್ಳೂರಿಗೆ ಕಳಿಸಿದ ಸರ್ವಧರ್ಮದ ಯುವಕರು

    ಮಂಗಳೂರು: ಸರ್ವಧರ್ಮದ ಯುವಕರ ತಂಡವೊಂದು ದುಬೈನಲ್ಲಿ ಮೃತಪಟ್ಟ ಯುವಕನ ವಿಳಾಸವನ್ನು ಪತ್ತೆಹಚ್ಚಿ ಬಳಿಕ ಆತನ ಮೃತದೇಹವನ್ನು ಮಂಗಳೂರಿಗೆ ಕಳುಹಿಸಿದ ಘಟನೆ ನಡೆದಿದೆ.

    ನಗರದ ಅಡ್ಡೂರು ನಿವಾಸಿ ಯಶವಂತ ಪೂಜಾರಿ ಕಳೆದ 12 ದಿನಗಳ ಹಿಂದೆ ದುಬೈನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಕೆಲಸಕ್ಕಾಗಿ ದುಬೈಗೆ ಹೋಗಿದ್ದ ಯಶವಂತ ಪೂಜಾರಿಯ ಸೂಕ್ತ ದಾಖಲೆಗಳು ಸಿಗದ ಕಾರಣ ಅವರ ಹುಟ್ಟೂರನ್ನು ಗುರುತಿಸಲು ಸಾಧ್ಯವಾಗಿರಲಿಲ್ಲ.

    ಇತ್ತ ಕೊರೊನಾ ಸಮಸ್ಯೆಯಿಂದಾಗಿಯೂ ದುಬೈನಲ್ಲಿ ಲಾಕ್ ಡೌನ್ ಇರೋ ಹಿನ್ನೆಲೆಯಲ್ಲೂ ವಿಳಾಸ ಪತ್ತೆ ಕಷ್ಟಕರವಾಗಿತ್ತು. ಈ ವಿಚಾರವನ್ನು ಅರಿತ ದುಬೈನಲ್ಲಿರುವ ಮಂಗಳೂರು ಮೂಲದ ಎಲ್ಲಾ ಧರ್ಮದ ಯುವಕರು ಮೃತರ ವಿಳಾಸವನ್ನು ಪತ್ತೆಹಚ್ಚಿ ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕಳುಹಿಸಲು ವ್ಯವಸ್ಥೆ ಮಾಡಿದ್ದಾರೆ. ಅದರಂತೆ ಪಾರ್ಥಿವ ಶರೀರವನ್ನು ಹೊತ್ತ ವಿಮಾನ ಶನಿವಾರ ದುಬೈನಿಂದ ಕ್ಯಾಲಿಕಟ್ ಗೆ ಏಳು ಗಂಟೆಗೆ ತಲುಪಿದೆ.

    ಅಲ್ಲದೇ ಕ್ಯಾಲಿಕಟ್ ನಿಂದ ಮಂಗಳೂರಿಗೆ ಮೃತದೇಹದ ತರಲು ಅಂಬುಲೆನ್ಸ್ ವ್ಯವಸ್ಥೆ ಕೂಡ ಇದೇ ಯುವಕರ ತಂಡ ಮಾಡಿದೆ. ಭಾನುವಾರ ಮೃತದೇಹ ಮಂಗಳೂರು ತಲುಪಲಿದೆ. ಕರಾವಳಿಯಲ್ಲಿ ಕೋಮುದ್ವೇಷದ ಗಲಭೆಗಳು ಮಾತ್ರ ನಡೆಯೋದಲ್ಲ, ದೂರದ ದುಬೈನಲ್ಲಿರುವ ಇದೇ ಕರಾವಳಿಯ ಯುವಕರು ಸಾಮರಸ್ಯದಿಂದಲೂ ಇದ್ದಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.

  • ಕೊಹ್ಲಿ ನಾಯಕನಾಗಿ ಏನನ್ನೂ ಗೆದ್ದಿಲ್ಲ, ಗೆಲ್ಲೋದು ತುಂಬಾ ಇದೆ: ಗಂಭೀರ್

    ಕೊಹ್ಲಿ ನಾಯಕನಾಗಿ ಏನನ್ನೂ ಗೆದ್ದಿಲ್ಲ, ಗೆಲ್ಲೋದು ತುಂಬಾ ಇದೆ: ಗಂಭೀರ್

    ನವದೆಹಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನಾಯಕನಾಗಿ ಏನನ್ನೂ ಗೆದ್ದಿಲ್ಲ. ಆತ ಸಾಧಿಸುವುದು ಇನ್ನೂ ತುಂಬಾ ಇದೆ ಎಂದು ಭಾರತ ತಂಡದ ಮಾಜಿ ಆಟಗಾರ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.

    ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಗಂಭೀರ್, ಕೇವಲ ವೈಯಕ್ತಿಕವಾಗಿ ಉತ್ತಮವಾಗಿ ಆಡುವುದರಿಂದ ಟೀಮ್ ಅನ್ನು ಗೆಲ್ಲಿಸಲು ಆಗುವುದಿಲ್ಲ. ನಾಯಕ ವೈಯಕ್ತಿಕ ಆಟದ ಜೊತೆಗೆ ತಂಡದ ಸದಸ್ಯರನ್ನು ಹುರಿದುಂಬಿಸಬೇಕು ಎಂದು ಕೊಹ್ಲಿ ಅವವರಿಗೆ ಸಲಹೆ ನೀಡಿದ್ದಾರೆ.

    ಕ್ರಿಕೆಟ್ ಒಂದು ಟೀಮ್ ಸೇರಿ ಆಡಬೇಕಾದ ಕ್ರೀಡೆ. ನೀವು ವೈಯಕ್ತಿಕವಾಗಿಯೂ ಸ್ಕೋರ್ ಮಾಡಬೇಕು. ಆದರ ಜೊತೆ ತಂಡವನ್ನು ದೊಡ್ಡ ದೊಡ್ಡ ಟೂರ್ನಿಯಲ್ಲಿ ಗೆಲ್ಲಿಸಬೇಕು. ವೆಸ್ಟ್ ಇಂಡೀಸ್ ಬ್ರಿಯಾನ್ ಲಾರಾ, ಸೌತ್ ಆಫ್ರಿಕಾದ ಜಾಕ್ ಕಾಲಿಸ್ ಬಹಳ ರನ್ ಹೊಡೆದರು. ಆದರೆ ಅವರು ಟ್ರೋಫಿ ಗೆಲ್ಲಲಿಲ್ಲ. ಹಾಗೆಯೇ ಕೊಹ್ಲಿ ಕೂಡ ನಾಯಕನಾಗಿ ಏನನ್ನೂ ಗೆದ್ದಿಲ್ಲ. ಇನ್ನೂ ಸಾಧಿಸಬೇಕಿರುವುದು ತುಂಬಾ ಇದೆ ಎಂದು ಹೇಳಿದ್ದಾರೆ.

    ನೀವು ಎಷ್ಟೇ ದೊಡ್ಡ ಮಟ್ಟದ ರನ್ ಹೊಳೆಯನ್ನೇ ಹರಿಸಿ, ಆದರೆ ನನ್ನ ಪ್ರಕಾರ ದೊಡ್ಡ ಟ್ರೋಫಿಯನ್ನು ಗೆಲ್ಲದೇ ಇದ್ದರೆ, ನಿಮ್ಮ ಕ್ರೀಡಾ ಜೀವನ ಪೂರ್ಣಗೊಳ್ಳಲ್ಲ. ಹಾಗಾಗಿ ಕೊಹ್ಲಿ ತಮ್ಮ ತಂಡವನ್ನು ಸರಿಯಾದ ದಾರಿಯಲ್ಲಿ ನಡೆಸಿಕೊಂಡು ಹೋಗಬೇಕು. ಬೇರೆ ಆಟಗಾರರನ್ನು ಇವರಿಗೆ ಹೋಲಿಸಬಾರದು. ಎಲ್ಲ ಆಟಗಾರರಿಗೂ ಅವರದ್ದೇ ಆದ ಸ್ಕಿಲ್ ಇರುತ್ತದೆ. ಈ ನಿಟ್ಟಿನಲ್ಲಿ ಕೊಹ್ಲಿ ತಂಡದ ಆಟಗಾರರನ್ನು ಹುರಿದುಂಬಿಸಿ ಆಡಬೇಕು ಎಂದು ಗೌತಮ್ ತಿಳಿಸಿದ್ದಾರೆ.

    ತಂಡದಲ್ಲಿರುವ ಯುವ ಆಟಗಾರರನ್ನು ಕೊಹ್ಲಿ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ದೊಡ್ಡ ದೊಡ್ಡ ಐಸಿಸಿ ಟೂರ್ನಿಗಳಲ್ಲಿ ಕೊಹ್ಲಿ ತಂಡವನ್ನು ಸರಿಯಾಗಿ ನಿರ್ವಹಣೆ ಮಾಡುವುದರಲ್ಲಿ ಎಡವಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಎಂಎಸ್ ಧೋನಿ ನಂತರ ಕೊಹ್ಲಿ 2017ರಲ್ಲಿ ಭಾರತದ ನಾಯಕನಾಗಿ ಅಧಿಕಾರ ವಹಿಸಿಕೊಂಡಿದ್ದರು. ನಂತರ 2017ರಲ್ಲಿ ಚಾಂಪಿಯನ್ಸ್ ಟ್ರೋಫಿ ಮತ್ತು 2019ರ ವಿಶ್ವಕಪ್ ನಲ್ಲಿ ತಂಡವನ್ನು ಮುನ್ನಡೆಸಿದರು. ಆದರೆ ತಂಡ ಟ್ರೋಫಿಯನ್ನು ಗೆಲ್ಲುವಲ್ಲಿ ವಿಫಲವಾಗಿತ್ತು. ನಾಕೌಟ್ ಹಂತದಲ್ಲಿ ಟೂರ್ನಿಯಿಂದ ಔಟ್ ಆಗಿತ್ತು.

    ಭಾರತದ ರನ್ ಮಷಿನ್ ಎಂದೇ ಖ್ಯಾತಿಯಾಗಿರುವ ಕೊಹ್ಲಿ ವೈಯಕ್ತಿಕವಾಗಿ ಉತ್ತಮವಾಗಿ ಆಡುತ್ತಿದ್ದಾರೆ. ಟಿ-20 ಮಾದರಿಯಲ್ಲಿ ಉತ್ತಮವಾಗಿ ಬ್ಯಾಟ್ ಬೀಸಿದ್ದಾರೆ. ಜೊತೆಗೆ ಏಕದಿನ ಮಾದರಿಯಲ್ಲಿ ಈಗಾಗಲೇ ಒಟ್ಟು 11,867 ರನ್ ಸಿಡಿಸಿರುವ ಕೊಹ್ಲಿ, 205 ಪಂದ್ಯಗಳಲ್ಲೇ 10,000 ರನ್ ಪೂರೈಸಿ 2018ರಲ್ಲಿ ಅತೀ ಬೇಗ 10 ಸಾವಿರ ರನ್ ಗಳಿಸಿದ ಆಟಗಾರ ಎಂಬ ಖ್ಯಾತಿ ಪಡೆದಿದ್ದರು. ಜೊತೆಗೆ ಟೆಸ್ಟ್ ಮಾದರಿಯಲ್ಲಿ ಐಸಿಸಿ ರ‍್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನದಲ್ಲಿ ಇದ್ದಾರೆ. ಆದರೆ ನಾಯಕನಾಗಿ ಇಲ್ಲಿಯವರೆಗೂ ಒಂದು ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ.

  • ‘ರಾಬರ್ಟ್’ ನಂತ್ರ ‘ಯುವರತ್ನ’ನಿಗೂ ತಟ್ಟಿದ ಕೊರೊನಾ ಭೀತಿ

    ‘ರಾಬರ್ಟ್’ ನಂತ್ರ ‘ಯುವರತ್ನ’ನಿಗೂ ತಟ್ಟಿದ ಕೊರೊನಾ ಭೀತಿ

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನೇ ಆತಂಕಕ್ಕೀಡುಮಾಡಿದೆ. ಚೀನಾದಲ್ಲಿ ಮರಣಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ ಸುಮಾರು 77 ದೇಶಗಳಲ್ಲಿ ಹರಡಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಈ ಕೊರೊನಾ ಎಫೆಕ್ಟ್ ಸ್ಯಾಂಡಲ್‍ವುಡ್‍ಗೂ ತಟ್ಟಿದ್ದು, ‘ರಾಬರ್ಟ್’ ಚಿತ್ರತಂಡದ ಬಳಿಕ ‘ಯುವರತ್ನ’ ಚಿತ್ರತಂಡ ಕೂಡ ವಿದೇಶದಲ್ಲಿ ನಡೆಯಬೇಕಿದ್ದ ಶೂಟಿಂಗ್ ರದ್ದು ಮಾಡಿದೆ.

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟಿಸುತ್ತಿರುವ `ಯುವರತ್ನ` ಸಿನಿಮಾ ಬಾರೀ ನಿರೀಕ್ಷೆ ಹುಟ್ಟುಹಾಕಿದೆ. ಯುವರತ್ನ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಹಾಡೊಂದರ ಚಿತ್ರೀಕರಣಕ್ಕಾಗಿ ಚಿತ್ರತಂಡ ಯುರೋಪ್‍ಗೆ ತೆರಳಲು ಪ್ಲಾನ್ ಮಾಡಿಕೊಂಡಿತ್ತು. ಯುರೋಪ್‍ನ ಸ್ಲೋವೇನಿಯಾದಲ್ಲಿ ಹಾಡಿನ ಚಿತ್ರೀಕರಣ ಮಾಡಲು ಚಿತ್ರತಂಡ ಮುಂದಾಗಿತ್ತು.

    3-4 ದಿನಗಳ ಕಾಲ ಯುರೋಪಿನಲ್ಲೇ ಚಿತ್ರತಂಡ ತಂಗಲು ಪ್ಲಾನ್ ಮಾಡಿದ್ದ ಹಿನ್ನೆಲೆ ಟಿಕೆಟ್, ಹೋಟೆಲ್ ಎಲ್ಲವೂ ಬುಕ್ ಮಾಡಲಾಗಿತ್ತು. ಆದರೆ ಮಹಾಮಾರಿ ಕೊರೊನಾ ಭೀತಿಯಿಂದ `ಯುವರತ್ನ`ನ ಯುರೋಪ್ ಪ್ರವಾಸ ರದ್ದು ಮಾಡಿದೆ. ಹಣ ಹೋದರೆ ಹೋಗಲಿ ಕೊರೊನಾ ಸಹವಾಸ ಬೇಡಪ್ಪ ಎಂದು ಚಿತ್ರತಂಡ ಸುಮ್ಮನಾಗಿದೆ.

    ಕೆಲವು ದಿನಗಳ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ‘ರಾಬರ್ಟ್’ ಚಿತ್ರತಂಡವು ಶೂಟಿಂಗ್‍ಗಾಗಿ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿತ್ತು. ಆದರೆ ವಿಶ್ವಾದ್ಯಂತ ಹರಡುತ್ತಿರುವ ಕೊರೊನಾ ಭೀತಿಗೆ ವಿದೇಶ ಪ್ರವಾಸವನ್ನು ಚಿತ್ರತಂಡ ರದ್ದು ಮಾಡಿತ್ತು. ಇದೇ ಬೆನ್ನಲ್ಲೇ ಯುವರತ್ನ ಚಿತ್ರತಂಡ ಕೂಡ ವಿದೇಶದಲ್ಲಿ ನಡೆಯಬೇಕಿದ್ದ ಶೂಟಿಂಗ್ ಪ್ಲಾನ್ ರದ್ದುಮಾಡಿದೆ. ಅದೇ ರೀತಿ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರುವ ‘ಅರ್ಜುನ್ ಗೌಡ’ ಸಿನಿಮಾ ತಂಡ ಕೂಡ ವಿದೇಶದಲ್ಲಿ ಮಾಡಬೇಕಿದ್ದ ಶೂಟಿಂಗ್ ಕ್ಯಾನ್ಸಲ್ ಮಾಡಿದೆ.

    ಈ ಹಿಂದೆ `ರಾಜಕುಮಾರ` ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಿಸಿದ ಸಂತೋಷ್ ಆನಂದ್ ರಾಮ್ ಅವರೇ `ಯುವರತ್ನ` ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾದಲ್ಲಿ ಪವರ್ ಸ್ಟಾರ್ ಗೆ ಜೋಡಿಯಾಗಿ ಸಯೇಷ ಸೈಗಲ್ ಕಾಣಿಸಿಕೊಳ್ಳಲಿದ್ದು, ಇದರ ಜೊತೆಗೆ ಸೋನು, ಡಾಲಿ ಧನಂಜಯ್, ವಸಿಷ್ಠ ಸಿಂಹ ಸಿನಿಮಾದಲ್ಲಿ ನಟಿಸಲಿದ್ದಾರೆ.

    ಬುಧವಾರ ಬೆಳಗ್ಗೆಯವರೆಗೆ ಭಾರತದಲ್ಲಿ 438 ಮಂದಿ ಕೊರೊನಾ ಶಂಕಿತರೆಂದು ವರದಿಯಾಗಿದೆ. ಅದರಲ್ಲಿ 225 ಜನರ ಮೇಲೆ 28 ದಿನಗಳ ಕಾಲ ತೀವ್ರ ನಿಗಾ ವಹಿಸಲಾಗಿತ್ತು. 189 ಮಂದಿ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ. 89 ಮಂದಿಯನ್ನು ಪ್ರತ್ಯೇಕ ಸ್ಥಳದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 118 ಮಂದಿ ಕೊರೊನಾ ಪರೀಕ್ಷೆ ಮಾಡಿಸಿದ್ದು, 103 ಜನರ ವರದಿಯಲ್ಲಿ ನೆಗೆಟಿವ್ ಬಂದಿದ್ದು, 4 ಮಂದಿಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.