Tag: Team india

  • ಮಹಿಳಾ ವಿಶ್ವಕಪ್ ಕ್ರಿಕೆಟ್ – ಸ್ಮೃತಿ ಶತಕದ ಮೂಲಕ ಟೀಂ ಇಂಡಿಯಾಗೆ 2ನೇ ಗೆಲುವು

    ಮಹಿಳಾ ವಿಶ್ವಕಪ್ ಕ್ರಿಕೆಟ್ – ಸ್ಮೃತಿ ಶತಕದ ಮೂಲಕ ಟೀಂ ಇಂಡಿಯಾಗೆ 2ನೇ ಗೆಲುವು

    ಎಡ್ಜ್ ಬಾಸ್ಟನ್: ಮಹಿಳೆಯರ ವಿಶ್ವಕಪ್ 2ನೇ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡದ ವಿರುದ್ಧ 7 ವಿಕೆಟ್ ಅಂತರದ ಜಯಗಳಿಸಿದೆ. ಭಾರತದ ಪರವಾಗಿ ಸ್ಮೃತಿ ಮಂಧನ ಶತಕ ಗಳಿಸಿ ಗೆಲುವಿನ ರೂವಾರಿ ಎನಿಸಿದರು. ಐಸಿಸಿ ಮಹಿಳಾ ವಿಶ್ವಕಪ್ 2ನೇ ಪಂದ್ಯದಲ್ಲೂ ಸೊಗಸಾದ ಆಟದ ಮೂಲಕ ಎಲ್ಲರ ಗಮನ ಸೆಳೆದರು. ಈ ಪಂದ್ಯದಲ್ಲಿ 2 ಸಿಕ್ಸರ್ ಹಾಗೂ 13 ಬೌಂಡರಿಗಳ ನೆರವಿನಿಂದ 106 ರನ್ ಗಳಿಸಿದರು. ಈ ಮೂಲಕ ಸ್ಮೃತಿ ತಮ್ಮ ಜೀವನದ 2ನೇ ಶತಕ ಬಾರಿಸಿದರು.

    ಟಾಸ್ ಗೆದ್ದ ಮಿಥಾಲಿ ರಾಜ್ ನಾಯಕತ್ವದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ತಂಡ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 183 ರನ್ ಗಳಿಸಿತು.

    ವಿಂಡೀಸ್ ಪರವಾಗಿ ಮ್ಯಾಥ್ಯೂಸ್ 43, ಡೇಲಿ 33, ಫ್ಲೆಚರ್ 36, ಟೇಲರ್ 16, ನೇಷನ್ 12, ಮೊಹಮ್ಮದ್ 11, ವಾಲ್ಟರ್ಸ್ 9, ಡಾಟಿನ್ 7, ಅಗಿಲೇರಿಯಾ 6, ನೈಟ್ 5 ರನ್ ಗಳಿಸಿದರು.

    ಟೀಂ ಇಂಡಿಯಾ ಪರವಾಗಿ ದೀಪ್ತಿ ಶರ್ಮಾ, ಹರ್ಮನ್ ಪ್ರೀತ್ ಕೌರ್ ಹಾಗೂ ಪೂನಂ ಯಾದವ್ ತಲಾ 2 ಹಾಗೂ ಏಕ್ತಾ ಬಿಷ್ಟ್ 1 ವಿಕೆಟ್ ಪಡೆದರು.

    184 ರನ್ ಟಾರ್ಗೆಟ್ ಬೆನ್ನತ್ತಿ ಬ್ಯಾಟಿಂಗ್ ಆರಂಭಿಸಿದ ಭಾರತ ಆರಂಭದಲ್ಲೇ ಆಘಾತ ಅನುಭವಿಸಬೇಕಾಯಿತು. ಟೀಂ ರನ್ ಶುಭಾರಂಭ ಮಾಡುವಷ್ಟರಲ್ಲೇ ಶೂನ್ಯಕ್ಕೆ ಪೂನಂ ರಾವತ್ ಔಟಾದರು.

    ಇದಾದ ನಂತರ ಬ್ಯಾಟಿಂಗ್ ಮಾಡಲು ಆಗಮಿಸಿದ ದೀಪ್ತಿ ಶರ್ಮಾ ಕೇವಲ 6 ರನ್ ಗಳಿಸಿ ಔಟಾದರು. ಆದರೆ ನಂತರ ಆಗಮಿಸಿದ ನಾಯಕಿ ಮಿಥಾಲಿ ರಾಜ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನ ಜೊತೆಗೆ ಉತ್ತಮ ಜೊತೆಯಾಟ ನೀಡಿದರು. ಸ್ಮೃತಿ ಮಂಧನ ಇಂಗ್ಲೆಂಡ್ ವಿರುದ್ಧದ ಆರಂಭಿಕ ಪಂದ್ಯದಲ್ಲೂ ಅರ್ಧ ಶತಕ ಗಳಿಸಿದ್ದರು.

     

     

  • ಕೊಹ್ಲಿ ಆ ಟ್ವೀಟ್ ಡಿಲೀಟ್ ಮಾಡಿದ್ದು ಯಾಕೆ?

    ಕೊಹ್ಲಿ ಆ ಟ್ವೀಟ್ ಡಿಲೀಟ್ ಮಾಡಿದ್ದು ಯಾಕೆ?

    ಮುಂಬೈ: ಕುಂಬ್ಳೆ ರಾಜೀನಾಮೆಗೆ ಕೊಹ್ಲಿಯೆ ಕಾರಣ ಎನ್ನುವ ಭಾರೀ ಚರ್ಚೆ ನಡೆಯುತ್ತಿರುವಾಗಲೇ ಕೊಹ್ಲಿ ಒಂದು ವರ್ಷದ ಹಿಂದೆ ತಾವು ಮಾಡಿದ್ದ ಟ್ವೀಟ್ ಒಂದನ್ನು ಡಿಲೀಟ್ ಮಾಡುವ ಮೂಲಕ ಮತ್ತೊಮ್ಮೆ ಚರ್ಚೆಗೆ ಕಾರಣರಾಗಿದ್ದಾರೆ.

    ಹೌದು. ಕುಂಬ್ಳೆ ಟೀಂ ಇಂಡಿಯಾದ ಕೋಚ್ ಆಗಿ ನೇಮಕವಾದ ಬಳಿಕ 2016ರ ಜೂನ್ 23ರಂದು ಕೊಹ್ಲಿ ಅವರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದರು. ಆದರೆ ಈಗ ಅವರ ಖಾತೆಯಲ್ಲಿ ಅಭಿನಂದಿಸಿದ ಆ ಟ್ವೀಟ್ ಈಗ ಮಾಯವಾಗಿದೆ.

    ನಿಮಗೆ ನಮ್ಮ ತಂಡಕ್ಕೆ ಹೃದಯಪೂರ್ವಕ ಸ್ವಾಗತಗಳು, ಭಾರತೀಯ ಕ್ರಿಕೆಟ್ ತಂಡದ ಜೊತೆ ನೀವು ಇರುವುದು ದೊಡ್ಡ ವಿಚಾರ ಎಂದು ಕುಂಬ್ಳೆ ಅವರಿಗೆ ಟ್ಯಾಗ್ ಮಾಡಿ ಅವರನ್ನು ಸ್ವಾಗತಿಸಿದ್ದರು.

    ಕುಂಬ್ಳೆ ರಾಜೀನಾಮೆ ಚರ್ಚೆಯ ನಡುವೆ ಈ ಟ್ವೀಟ್ ಈಗ ಡಿಲೀಟ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ಜನರು ಕೊಹ್ಲಿಗೆ ಆ ಟ್ವೀಟನ್ನು ಡಿಲೀಟ್ ಮಾಡುವ ಉದ್ದೇಶ ಏನಿತ್ತು ಎಂದು ಪ್ರಶ್ನಿಸುತ್ತಿದ್ದಾರೆ.

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಮಾಜಿ ಕ್ರಿಕೆಟ್ ಕೋಚ್ ಅನಿಲ್ ಕುಂಬ್ಳೆ ಮಧ್ಯೆ ಬಿರುಕು ಇರುವ ವಿಚಾರ ಚಾಂಪಿಯನ್ಸ್ ಟ್ರೋಫಿ ವೇಳೆ ತುಂಬಾ ಓಡಾಡಿತ್ತು. ಆದ್ರೆ, ಇಬ್ಬರೂ ಟೂರ್ನ್  ಮೆಂಟ್ ಮುಗಿಯುವ ವರೆಗೂ ಅದೇಕೋ ಮೌನತಾಳಿದ್ದರು. ಆದರೆ ಜೂನ್ 20 ರಂದು ಕೋಚ್ ಸ್ಥಾನಕ್ಕೆ ಕುಂಬ್ಳೆ ರಾಜೀನಾಮೆ ನೀಡಿದ್ದರು.

    ಇದನ್ನೂ ಓದಿ: ಕುಂಬ್ಳೆ ರಾಜೀನಾಮೆ ನೀಡಿದ್ದು ಯಾಕೆ? ಡ್ರೆಸ್ಸಿಂಗ್ ರೂಂ ಸೀಕ್ರೆಟ್ ಬಹಿರಂಗ

    ಇದನ್ನೂ ಓದಿ: ಪಾಕ್ ಗೆದ್ದ ಬಳಿಕ ಅಭಿಮಾನಿ ಉದ್ಧಟತನ: ಗರಂ ಶಮಿಯನ್ನು ಕೂಲ್ ಮಾಡಿದ ಧೋನಿ – ವಿಡಿಯೋ

    ಇದನ್ನೂ ಓದಿ: ಅಂಗಳದಲ್ಲಿ ಆಯ್ತು, ಟ್ವಿಟ್ಟರ್‍ನಲ್ಲೂ ಪಾಂಡ್ಯ ಕಿಡಿ ಕಿಡಿ: ವೈರಲ್ ಆಯ್ತು ಟ್ವೀಟ್

     

     

     

  • ಸಚಿನ್ ದಾಖಲೆ ಮುರಿದ ಶಿಖರ್ ಧವನ್

    ಸಚಿನ್ ದಾಖಲೆ ಮುರಿದ ಶಿಖರ್ ಧವನ್

    ಲಂಡನ್: ಆಂಗ್ಲರ ನಾಡಿನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ.

    ಹೌದು. ಐಸಿಸಿಯ ಆಯೋಜಿಸಿದ್ದ ಏಕದಿನ ಟೂರ್ನಿಗಳಲ್ಲಿ ಕೇವಲ 16 ಇನ್ನಿಂಗ್ಸ್ ಗಳಲ್ಲಿ 1 ಸಾವಿರ ರನ್‍ಗಳನ್ನು ಪೂರ್ಣಗೊಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಸಚಿನ್ ತೆಂಡೂಲ್ಕರ್ 1 ಸಾವಿರ ರನ್ ಪೂರ್ಣಗೊಳಿಸಲು 18 ಇನ್ನಿಂಗ್ಸ್ ಆಡಿದ್ದರು.

    ಸೌರವ್ ಗಂಗೂಲಿ, ದಕ್ಷಿಣ ಆಫ್ರಿಕಾದ ಹರ್ಷಲ್ ಗಿಬ್ಸ್ ಮತ್ತು ಆಸ್ಟ್ರೇಲಿಯಾದ ಮಾರ್ಕ್ ವೋ 20 ಇನ್ನಿಂಗ್ಸ್ ಮೂಲಕ 1 ಸಾವಿರ ರನ್ ಗಳಿಸಿದ್ದರು.

    ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಶಿಖರ್ ಧವನ್ 78 ರನ್ ಗಳಿಸಿದ್ದರು. ಪಾಕ್ ವಿರುದ್ಧದ ಪಂದ್ಯದಲ್ಲಿ 68 ರನ್ ಗಳಿಸಿದ್ದರೆ, ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ 125 ರನ್ ಹೊಡೆದಿದ್ದರು. ಒಟ್ಟು ಈ ಟೂರ್ನಿಯಲ್ಲಿ 271 ರನ್‍ಗಳಿಸುವ ಮೂಲಕ ಶಿಖರ್ ಧವನ್ ಅತಿ ಹೆಚ್ಚು ರನ್ ಹೊಡೆದ ಬ್ಯಾಟ್ಸ್ ಮನ್ ಎನ್ನುವ ಪಟ್ಟ ಸಿಕ್ಕಿದೆ.

     

  • ಐಸಿಸಿ ಚಾಂಪಿಯನ್ಸ್ ಟ್ರೋಫಿ: ಇಂದು ಭಾರತ- ಶ್ರೀಲಂಕಾ ಮುಖಾಮುಖಿ

    ಐಸಿಸಿ ಚಾಂಪಿಯನ್ಸ್ ಟ್ರೋಫಿ: ಇಂದು ಭಾರತ- ಶ್ರೀಲಂಕಾ ಮುಖಾಮುಖಿ

    ಲಂಡನ್‍: ಚಾಂಪಿಯನ್ಸ್ ಟ್ರೋಫಿಯಲ್ಲಿ ಇವತ್ತು ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ. ಪಾಕಿಸ್ತಾನ ವಿರುದ್ಧ ದಾಖಲೆ ರನ್‍ಗಳಲ್ಲಿ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಇವತ್ತು ಲಂಕಾ ವಿರುದ್ಧ ಅಂಗಳಕ್ಕೆ ಇಳಿಯಲಿದೆ.

    ಪಾಕಿಸ್ತಾನ ವಿರುದ್ಧ ಗೆದ್ದ ಪಡೆಯನ್ನೇ ಕೊಹ್ಲಿ ಉಳಿಸಿಕೊಂಡಿದ್ದಾರೆ. ಇಂದು ನಡೆಯುವ ಪಂದ್ಯದಲ್ಲಿ ಶ್ರೀಲಂಕಾ ತಂಡದಲ್ಲಿ ಮ್ಯಾಥ್ಯೂ ಬೌಲಿಂಗ್ ಅನುಮಾನ ಎಂದು ಹೇಳಲಾಗುತ್ತಿದೆ. ಶ್ರೀಲಂಕಾ ಇತ್ತೀಚೆಗೆ ನಡೆದ 23 ಪಂದ್ಯಗಳಲ್ಲಿ ಗೆದ್ದಿರೋದು ಕೇವಲ 8 ಪಂದ್ಯಗಳನ್ನು ಮಾತ್ರ.

    ಲಂಡನ್‍ನ ಓವಲ್ಸ್ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಪಂದ್ಯ ಆರಂಭವಾಗಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಜಯಭೇರಿ ಕಂಡ್ರೆ ಕೊಹ್ಲಿ ಪಡೆ ಸೆಮಿಫೈನಲ್‍ಗೆ ತಲುಪುತ್ತೆ ಅನ್ನೋದು ಕ್ರಿಕೆಟ್ ತಜ್ಞರ ಲೆಕ್ಕಾಚಾರ ಆಗಿದೆ. ಆದರೆ ಮಳೆ ಬಂದರೆ ಪಂದ್ಯವನ್ನು ಯಾವ ದಿಕ್ಕಿಗಾದ್ರೂ ಬದಲಿಸಬಹುದು.

     

  • ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ 240 ರನ್ ಗೆಲುವು

    ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ 240 ರನ್ ಗೆಲುವು

    ಲಂಡನ್: ಚಾಂಪಿಯನ್ಸ್ ಟ್ರೋಫಿಯ ತನ್ನ 2ನೇ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಹೀನಾಯವಾಗಿ ಸೋಲಿಸಿದೆ. ಟೀಂ ಇಂಡಿಯಾ ಈ ಪಂದ್ಯವನ್ನು 240 ರನ್ ಗಳ ಅಂತರದಿಂದ ಗೆದ್ದಿದೆ.

    ಜೂನ್ 4ರಂದು ಚಾಂಪಿಯನ್ಸ್ ಟ್ರೋಫಿಯ ತನ್ನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೆಣಸಾಡಲಿದೆ.

    325 ಟಾರ್ಗೆಟ್ ಬೆನ್ನತ್ತಿ ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ತಂಡಕ್ಕೆ 3ನೇ ಓವರ್ ನಲ್ಲೇ ಉಮೇಶ್ ಯಾದವ್ ಮೊದಲ ಆಘಾತ ನೀಡಿದರು. ಮೊದಲ ವಿಕೆಟ್ ಪತನವಾದಾಗ ಬಾಂಗ್ಲಾ ಮೊತ್ತ 11 ರನ್ ಆಗಿತ್ತು. ಇದೇ ಮೊತ್ತಕ್ಕೆ ಮತ್ತೆ 2 ವಿಕೆಟ್ ಪತನವಾದವು. ಬಾಂಗ್ಲಾದ 4 ಆಟಗಾರರು ಸೊನ್ನೆ ಸುತ್ತಿದರು. ಕೇವಲ ಮೂವರು ಆಟಗಾರರು ಮಾತ್ರ ಎರಡಂಕಿಗಳ ರನ್ ಗಳಿಸಿದರು.

    ಕೊನೆಗೆ ಬಾಂಗ್ಲಾದೇಶ 23.5 ಓವರ್ ಗಳಲ್ಲಿ 84 ರನ್ ಗಳಿಸಿ ಆಲೌಟಾಯಿತು. ಟೀಂ ಇಂಡಿಯಾ ಪರವಾಗಿ ಭುವನೇಶ್ವರ್ ಕುಮಾರ್ 3, ಉಮೇಶ್ ಯಾದವ್ 3, ಮೊಹಮ್ಮದ್ ಶಮಿ, ಅಶ್ವಿನ್, ಬೂಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಗಳಿಸಿದರು.

    ಇಂದಿನ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ವಿಕೆಟ್ ಕೀಪಿಂಗ್ ಮಾಡಿದರೆ, ಮಹೇಂದ್ರ ಸಿಂಗ್ ಧೋನಿ ಫೀಲ್ಡರ್ ಆಗಿ ಕಣಕ್ಕಿಳಿದಿದ್ದರು.

    ಲಂಡನ್ ನ ಓವಲ್ ಕ್ರೀಡಾಂಗಣದಲ್ಲಿ ನಡೆದ ಟೀಂ ಇಂಡಿಯಾದ 2ನೇ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಬ್ಯಾಟಿಂಗ್ ಮಾಡಲು ಇಳಿದ ಭಾರತದ ಮೊದಲ ವಿಕೆಟ್ 2ನೇ ಓವರ್ ನಲ್ಲೇ ಪತನವಾಯಿತು. 3 ಎಸೆತಗಳಲ್ಲಿ 1 ರನ್ ಗಳಿಸಿದ್ದ ರೋಹಿತ್ ಶರ್ಮಾ ರುಬೆಲ್ ಹೊಸೈನ್ ಎಸೆತಕ್ಕೆ ಬೌಲ್ಡ್. ನಂತರ ಬ್ಯಾಟ್ ಮಾಡಲು ಆಗಮಿಸಿದ ಅಜಿಂಕ್ಯಾ ರಹಾನೆ 21 ಎಸೆತಗಳಲ್ಲಿ ಕೇವಲ 11 ರನ್ ಗಳಿಸಿ ಔಟಾದರು. ಆದರೆ 3ನೇ ವಿಕೆಟ್ ಗೆ ಶಿಖರ್ ಧವನ್ ಹಾಗೂ ದಿನೇಶ್ ಕಾರ್ತಿಕ್ ಉತ್ತಮ ಜೊತೆಯಾಟ ನೀಡಿದರು. ಈ ನಡುವೆ ಶಿಖರ್ ಧವನ್ 67 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನಿಂದ ಧವನ್ 60 ರನ್ ಗಳಿಸಿದರು.

    ಎಚ್ಚರಿಕೆಯ ಆಟವಾಡಿದ ದಿನೇಶ್ ಕಾರ್ತಿಕ್ 8 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 77 ಎಸೆತಗಳಲ್ಲಿ 94 ರನ್ ಗಳಿಸಿ ರಿಟೈರ್ಡ್ ಔಟಾದರು. ಬಳಿಕ ಆಗಮಿಸಿದ ಕೇದಾರ್ ಜಾಧವ್ 31 ರನ್ ಗಳಿಸಿದರೆ, ನಂತರ ಬ್ಯಾಟಿಂಗ್ ಮಾಡಲು ಇಳಿದ ಹಾರ್ದಿಕ್ ಪಾಂಡ್ಯ ಬಿರುಸಿನ ಆಟಕ್ಕೆ ಇಳಿದರು. ಕೇವಲ 54 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 80 ರನ್ ಮಾಡಿ ಅಜೇಯರಾಗಿ ಉಳಿದರು. ಪಾಂಡ್ಯಾಗೆ ಉತ್ತಮ ಜೊತೆಯಾಟ ನೀಡಿದ ರವೀಂದ್ರ ಜಡೇಜಾ 36 ಎಸೆತಗಳಲ್ಲಿ 31 ರನ್ ಗಳಿಸಿದರು. ನಿಗದಿತ 50 ಓವರ್ ಮುಗಿದಾಗ ಭಾರತ 7 ವಿಕೆಟ್ ಕಳೆದುಕೊಂಡು 324 ರನ್ ಗಳಿಸಿತ್ತು.

    ಬಾಂಗ್ಲಾದೇಶ ತಂಡದ ಪರವಾಗಿ ರುಬೆಲ್ ಹೊಸೈನ್ 3, ಸುನ್ಸಮುಲ್ ಇಸ್ಲಾಂ 2, ಮುಸ್ತಫಿಜುರ್ ರಹಮಾನ್ 1 ವಿಕೆಟ್ ಗಳಿಸಿದರು.

     

     

  • ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟ: ಯಾರಿಗೆ ಸ್ಥಾನ ಸಿಕ್ಕಿದೆ?

    ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟ: ಯಾರಿಗೆ ಸ್ಥಾನ ಸಿಕ್ಕಿದೆ?

    ಮುಂಬೈ: ಇಂಗ್ಲೆಂಡ್‍ನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸುವ 15 ಜನ ಸದಸ್ಯರ ಟೀಂ ಇಂಡಿಯಾ ತಂಡ ಪ್ರಕಟವಾಗಿದೆ.

    ಎಂಎಸ್ ಕೆ ಪ್ರಸಾದ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ 6 ಜನ ಬ್ಯಾಟ್ಸ್ ಮನ್‍ಗಳಿಗೆ ಸ್ಥಾನ ನೀಡಲಾಗಿದ್ದು, ವಿಕೆಟ್ ಕೀಪರ್, ಆಲ್‍ರೌಂಡರ್ಸ್ ಮತ್ತು ಸ್ಪಿನ್ನರ್ ವಿಭಾಗದಲ್ಲಿ ತಲಾ ಇಬ್ಬರಿಗೆ ಸ್ಥಾನ ಕಲ್ಪಿಸಲಾಗಿದೆ. ಜೊತೆಗೆ ಐವರು ವೇಗಿಗಳನ್ನು ಆಯ್ಕೆ ಸಮಿತಿ ತಂಡದಲ್ಲಿ ಇರಿಸಿದೆ.

    ಐಸಿಸಿಯ ನೂತನ ಹಣಕಾಸು ಹಂಚಿಕೆ ನೀತಿಗೆ ವಿರೋಧ ವ್ಯಕ್ತಪಡಿಸಿದ್ದ ಕಾರಣವನ್ನು ಮುಂದಿಟ್ಟುಕೊಂಡು ಬಿಸಿಸಿಐ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಟೀಂ ಇಂಡಿಯಾ ಕಳುಹಿಸಲು ಹಿಂದೇಟು ಹಾಕಿತ್ತು. ಬಳಿಕ ಸುಪ್ರೀಂ ಕೋರ್ಟ್ ನೇಮಿಸಿರುವ ಆಡಳಿತ ಸಮಿತಿಯ ಎಚ್ಚರಿಕೆಯ ನಂತರ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿದೆ.

    ಭುಜದ ನೋವಿಗೆ ತುತ್ತಾಗಿ ಸದ್ಯ ಇಂಗ್ಲೆಂಡಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಎಲ್ ರಾಹುಲ್ ಫಿಟ್ ಆಗದ ಕಾರಣ ಅವರ ಬದಲಿಗೆ ಅಜಿಂಕ್ಯಾ ರಹಾನೆ ಸ್ಥಾನ ಪಡೆದಿದ್ದಾರೆ. ಆರಂಭಿಕ ಬ್ಯಾಟ್ಸ್ ಮನ್‍ಗಳ ಪೈಕಿ ಗೌತಮ್ ಗಂಭೀರ್ ಮತ್ತು ಶಿಖರ್ ಧವನ್ ನಡುವೆ ಸ್ಪರ್ಧೆ ಇತ್ತು. ಆದರೆ ಆಯ್ಕೆ ಸಮಿತಿ ಶಿಖರ್ ಧವನ್ ಅವರಿಗೆ ಸ್ಥಾನ ನೀಡಿದ್ದಾರೆ.

    ಜೂನ್ 1 ರಿಂದ 18ರ ವರೆಗೆ 18 ದಿನಗಳ ಅವಧಿಯಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್‍ನ 3 ಕ್ರಿಕೆಟ್ ಮೈದಾನಗಳಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ 2017 ಪಂದ್ಯಗಳು ನಡೆಯಲಿವೆ.

    ಟೀಂ ಇಂಡಿಯಾ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯಾ, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಜಸ್‍ಪ್ರೀತ್ ಬೂಮ್ರಾ ಮತ್ತು ಮನೀಷ್ ಪಾಂಡೆ.

  • ವಿರಾಟ್ ಕೊಹ್ಲಿಯ ಜಾಹಿರಾತು ಸಂಭಾವನೆ ಹೆಚ್ಚಳ- 1 ದಿನದ ಸಂಭಾವನೆ ಎಷ್ಟು ಗೊತ್ತಾ?

    ವಿರಾಟ್ ಕೊಹ್ಲಿಯ ಜಾಹಿರಾತು ಸಂಭಾವನೆ ಹೆಚ್ಚಳ- 1 ದಿನದ ಸಂಭಾವನೆ ಎಷ್ಟು ಗೊತ್ತಾ?

    ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜಾಹಿರಾತಿಗಾಗಿ ಪಡೆಯುವ ಸಂಭಾವನೆಯ ಮೊತ್ತವನ್ನ ಹೆಚ್ಚಿಸಿಕೊಂಡಿದ್ದಾರೆ. ಈಗ ಕೊಹ್ಲಿಯ ಜಾಹಿರಾತು ಸಂಭಾವನೆ 1 ದಿನಕ್ಕೆ 5 ಕೋಟಿ ರೂ. ಆಗಿದ್ದು, ದೇಶದಲ್ಲೇ ಅತೀ ಹೆಚ್ಚು ಮೊತ್ತದ ಸಂಭಾವನೆ ಪಡೆಯುವ ಸೆಲೆಬ್ರಿಟಿ ಎನಿಸಿಕೊಂಡಿದ್ದಾರೆ.

    ಈ ಹಿಂದೆ ಕೊಹ್ಲಿಯ ಸಂಭಾವನೆ ಒಂದು ದಿನಕ್ಕೆ 2.5 ಕೋಟಿ ಯಿಂದ 4 ಕೋಟಿ ರೂ.ವರೆಗೆ ಇತ್ತು. ಕೊಹ್ಲಿಯ ಪೆಪ್ಸಿಕೋ ಕಂಪೆನಿಯ ಜಾಹಿರಾತಿನ ಒಪ್ಪಂದ ಏಪ್ರಿಲ್ 30ಕ್ಕೆ ಮುಗಿಯಲಿದ್ದು, ಇದರ ನವೀಕರಣದ ಬಗ್ಗೆ ಮಾತುಕತೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೊಹ್ಲಿ ಸಂಭಾವನೆ ಹೆಚ್ಚಳದ ವಿಷಯ ಹೊರಬಿದ್ದಿದೆ. ಆದ್ರೆ ತಂಪುಪಾನೀಯಗಳಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ ಎಂಬ ಕಾರಣದಿಂದ ಕೊಹ್ಲಿ ಪೆಪ್ಸಿ ಒಪ್ಪಂದವನ್ನ ಮುಂದುವರೆಸುತ್ತಾರಾ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

    ಸಾಮಾನ್ಯವಾಗಿ ಕಂಪೆನಿಗಳು ಸೆಲೆಬ್ರಿಟಿಗಳೊಂದಿಗೆ ವರ್ಷದಲ್ಲಿ 2 ರಿಂದ 4 ದಿನಗಳ ಒಪ್ಪಂದ ಮಾಡಿಕೊಂಡಿರುತ್ತಾರೆ. ಈ ಒಪ್ಪಂದದ ದಿನಗಳಲ್ಲಿ ಸೆಲೆಬ್ರಿಟಿಗಳು ಜಾಹಿರಾತಿನ ಚಿತ್ರೀಕರಣ, ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದು, ಅಭಿಮಾನಿಗಳೊಂದಿಗೆ ಮಾತನಾಡುವುದು ಅಥವಾ ಮಾಧ್ಯಮ ಮತ್ತು ಕಂಪೆನಿಯ ಸಿಬ್ಬಂದಿಯನ್ನು ಭೇಟಿ ಮಡುವಂತೆ ಕಂಪೆನಿಗಳು ಕೇಳಬಹುದು. ಹೀಗಾಗಿ ದಿನಕ್ಕೆ 5 ಕೋಟಿ ರೂ ಎಂದಾದರೆ ಒಂದು ಬ್ರ್ಯಾಂಡ್‍ಗೆ ವರ್ಷದಲ್ಲಿ 4 ದಿನಗಳಿಗೆ ಕೊಹ್ಲಿ ಸಂಭಾವನೆ 20 ಕೋಟಿ ರೂ. ಆಗುತ್ತದೆ.

    ಕೊಹ್ಲಿ ಜಾಹಿರಾತು ನೀಡುತ್ತಿರುವ ಎರಡು ಪ್ರಮುಖ ಬ್ರಾಂಡ್‍ಗಳ ಅಧಿಕಾರಿಗಳು ಸಂಭಾವನೆ ಹೆಚ್ಚಳದ ವಿಷಯವನ್ನ ಸ್ಪಷ್ಟಪಡಿಸಿದ್ದಾರೆ. ಸದ್ಯ ಕೊಹ್ಲಿ ಪಡೆಯುತ್ತಿರುವ ಸಂಭಾವನೆ ಈ ಹಿಂದೆ ಮಹೇಂದ್ರ ಸಿಂಗ್ ಧೋನಿ ಪಡೆಯುತ್ತಿದ್ದ ಸಂಭಾವನೆ ಹಾಗೂ ಬಾಲಿವುಡ್ ಸ್ಟಾರ್‍ಗಳಾದ ರಣವೀರ್ ಸಿಂಗ್ ಮತ್ತು ರಣಬೀರ್ ಕಪೂರ್ ಅವರ ಸಂಭಾವನೆಯನ್ನೂ ಮೀರಿಸಿದೆ.

    ಬೇರೆ ಸೆಲೆಬ್ರಿಟಿಗಳ ಸಂಭಾವನೆ ಎಷ್ಟು: ವರದಿಯ ಪ್ರಕಾರ ಮಾಜಿ ನಾಯಕ ಎಂಎಸ್ ಧೋನಿ ಒಂದು ದಿನಕ್ಕೆ 3 ರಿಂದ 3.5 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. ಇನ್ನು ಬಾಲಿವುಡ್ ಸ್ಟಾರ್ ಶಾರೂಖ್ ಖಾನ್ ಹಾಗೂ ಆಮೀರ್ ಖಾನ್ ಕೂಡ ಒಂದು ದಿನಕ್ಕೆ ಪಡೆಯುವ ಸಂಭಾವನೆ 3 ರಿಂದ 3.5 ಕೋಟಿ ರೂ. ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಒಂದು ದಿನಕ್ಕೆ 1 ರಿಂದ 1.25 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. (ಈ ಮೊತ್ತ ಕೇವಲ ಅಂದಾಜು ಮೊತ್ತವಾಗಿದ್ದು ಒಂದು ಬ್ರ್ಯಾಂಡ್‍ನಿಂದ ಮತ್ತೊಂದು ಬ್ರ್ಯಾಂಡ್‍ಗೆ ವ್ಯತ್ಯಯವಾಗುತ್ತದೆ. ಕೆಲವೊಂದು ಒಪ್ಪಂದಗಳು ಕೇವಲ ಆನ್‍ಲೈನ್‍ಗಾಗಿ ಮಾತ್ರ ಮಾಡಿಕೊಂಡಿದ್ದರೆ ಸಂಭಾವನೆ ಕಡಿಮೆ ಇರುತ್ತದೆ.)

    ಕಳೆದ ತಿಂಗಳು ಕೊಹ್ಲಿ ಪೂಮಾದೊಂದಿಗೆ 110 ಕೋಟಿ ರೂ. ಗಳ 8 ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ್ದರು. ಈ ಮೂಲಕ ಕೊಹ್ಲಿ 100 ಕೋಟಿ ರೂ. ಮೀರಿಸಿದ ಒಪ್ಪಂದಕ್ಕೆ ಸಹಿ ಹಾಕಿದ ಮೊದಲ ಭಾರತೀಯ ಕ್ರೀಡಾಪಟು ಎನಿಸಿಕೊಂಡರು. ಇದರ ಜೊತೆಗೆ ಕೊಹ್ಲಿ ಆಡಿ, ಎಮ್‍ಆರ್‍ಎಫ್ ಟೈರ್ಸ್ , ಟಿಸ್ಸಾಟ್ ವಾಚ್, ಜಿಯೋನಿ ಫೋನ್, ಬೂಸ್ಟ್, ಕೋಲ್ಗೇಟ್, ವಿಕ್ಸ್ ಸೇರಿದಂತೆ 18 ಬ್ರ್ಯಾಂಡ್‍ಗಳಿಗೆ ಜಾಹಿರಾತು ನೀಡುತ್ತಿದ್ದಾರೆ.

  • ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಕಿತ್ತ ಚಹಲ್ ಚೆಸ್‍ನಲ್ಲೂ ಚಾಂಪಿಯನ್ ಆಗಿದ್ರು!

    ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಕಿತ್ತ ಚಹಲ್ ಚೆಸ್‍ನಲ್ಲೂ ಚಾಂಪಿಯನ್ ಆಗಿದ್ರು!

    ಬೆಂಗಳೂರು: ಮೂರನೇ ಟಿ20 ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ಹಠಾತ್ ಕುಸಿತ ಕಾಣಲು ಕಾರಣರಾದ ಯಜುವೇಂದ್ರ ಚಹಲ್ ಒಂದು ಕಾಲದಲ್ಲಿ ಚೆಸ್ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

    ಹೌದು, ಹರ್ಯಾಣ ರಾಜ್ಯದ ಚಹಲ್ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕ್ರಿಕೆಟ್ ಜೊತೆಗೆ ಚೆಸ್ ಆಡುತ್ತಿದ್ದರು. ಏಷ್ಯಾ ಮತ್ತು ವಿಶ್ವ ಯೂಥ್ ಚಾಂಪಿಯನ್ ಶಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಅಷ್ಟೇ ಅಲ್ಲದೇ ಅಂಡರ್ – 12 ವಯಸ್ಸಿನಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದರು.

    ಎಳವೆಯಲ್ಲೇ ವಿಶೇಷ ಸಾಧನೆ ಮಾಡಿದ್ದರೂ ಚೆಸ್‍ನಲ್ಲಿ ಯಾಕೆ ಮುಂದುವರಿಯಲಿಲ್ಲ ಎಂದು ಕೇಳಿದ್ದಕ್ಕೆ, ಚೆಸ್ ನಲ್ಲಿ ಸಾಧನೆ ಮಾಡಬೇಕಾದರೆ ವರ್ಷಕ್ಕೆ 50 ಲಕ್ಷ ರೂ. ಬೇಕಾಗುತ್ತದೆ. ಆದರೆ ನನಗೆ ಪ್ರಯೋಜಕರ ಕೊರತೆಯಿಂದ ಮುಂದುವರಿಯಲು ಸಾಧ್ಯವಾಗಲಿಲ್ಲ. ಆದರೆ ಹವ್ಯಾಸವಾಗಿ ಚೆಸ್ ಆಡುತ್ತೇನೆ ಎಂದು ಈ ಹಿಂದೆ ಮಾಧ್ಯಮವೊಂದಕ್ಕೆ ತಿಳಿಸಿದ್ದರು.

    ಚೆಸ್ ನಿಮಗೆ ಯಾವ ರೀತಿ ಸಹಕಾರವಾಗಿದೆ ಎಂದು ಕೇಳಿದ್ದಕ್ಕೆ, ವಿಶೇಷವಾಗಿ ಟಿ 20ಯಲ್ಲಿ ಬ್ಯಾಟ್ಸ್ ಮನ್‍ಗಳು ದೊಡ್ಡ ಶಾಟ್‍ಗಳನ್ನು ಹೊಡೆಯುತ್ತಾರೆ. ಇದರಿಂದಾಗಿ ಬೌಲರ್‍ಗಳ ಮೇಲೆ ಒತ್ತಡ ಜಾಸ್ತಿ ಇರುತ್ತದೆ. ಆದರೆ ನಾನು ಬಹಳ ಶಾಂತವಾಗಿ ಇರುತ್ತೇನೆ. ಚೆಸ್ ತರಬೇತಿಯಿಂದಾಗಿ ನಾನು ನನ್ನ ಬೌಲಿಂಗ್ ಎಸೆಯುವ ಬಗ್ಗೆ ಹೆಚ್ಚು ಗಮನ ಕೊಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದರು.

    ಫಿಡೆ ವಿಶ್ವ ಚೆಸ್ ಶ್ರೇಯಾಕ ಪಟ್ಟಿಯಲ್ಲಿ ಈಗಲೂ ಚಹಲ್ ಹೆಸರು ಇದ್ದು 1956ನೇ ಸ್ಥಾನದಲ್ಲಿದ್ದಾರೆ. 1990 ಜುಲೈ 23ರಂದು ಜನಿಸಿದ ಚಹಲ್, ಮೂರು ಏಕದಿನ ಮತ್ತು 6 ಟಿ20 ಪಂದ್ಯವನ್ನು ಆಡಿದ್ದಾರೆ. ಟಿ20ಯಲ್ಲಿ 11 ವಿಕೆಟ್, ಏಕದಿನದಲ್ಲಿ 6 ವಿಕೆಟ್ ಪಡೆದಿದ್ದಾರೆ.

    ಬೆಂಗಳೂರಿನಲ್ಲಿ ನಡೆದ ಮೂರನೇ ಟಿ20ಯಲ್ಲಿ ಚಹಲ್ 25 ರನ್ ನೀಡಿ 6 ವಿಕೆಟ್ ಪಡೆಯುವ ಮೂಲಕ ಭಾರತ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಕಾರಣಕ್ಕಾಗಿ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಒಲಿದಿತ್ತು.

     ಇದನ್ನೂ ಓದಿ: 8 ರನ್‍ಗಳಿಗೆ 8 ವಿಕೆಟ್ ಪತನ: ಇದು ಚಹಲ್ ಕಮಾಲ್- ಭಾರತಕ್ಕೆ ಸರಣಿ

  • ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮಗಳಿಗೆ ಕೊಹ್ಲಿ ಮರು ಪ್ರಶ್ನೆ ಎಸೆದಿದ್ದು ಹೀಗೆ: ವಿಡಿಯೋ ನೋಡಿ

    ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮಗಳಿಗೆ ಕೊಹ್ಲಿ ಮರು ಪ್ರಶ್ನೆ ಎಸೆದಿದ್ದು ಹೀಗೆ: ವಿಡಿಯೋ ನೋಡಿ

    ಬೆಂಗಳೂರು: ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ತಂಡದ ನಾಯಕ ವಿರಾಟ್ ಕೊಹ್ಲಿ ಅಲ್ಪಮೊತ್ತಕ್ಕೆ ಔಟಾಗುತ್ತಿದ್ದು ಈ ಸಂಬಂಧ ಪತ್ರಕರ್ತರು ಕೇಳಿದ ಪ್ರಶ್ನೆಗೆ ಕೊಹ್ಲಿ ಈ ರೀತಿ ಉತ್ತರ ನೀಡಿದ್ದಾರೆ.

    `ನಾನು ಹೆಚ್ಚು ರನ್ ಗಳಿಸಿದ ಸಂದರ್ಭದಲ್ಲಿ ಹೋ.. ಕ್ರಿಕೆಟ್ ಜಗತ್ತಿನಲ್ಲೇ ಕೊಹ್ಲಿ ಕ್ರಾಂತಿ ಮೂಡಿಸಿದ್ದಾರೆ ಅಂತ ಹೇಳ್ತಿರ ಹೊರತು ಬೇರೆ ಏನೂ ಕೇಳಲ್ಲ. ಆದ್ರೆ ಆದರೆ ಈಗ ನಾನು ರನ್ ಗಳಿಸಿದೇ ಇರುವುದು ನಿಮಗೆ ಸಮಸ್ಯೆಯಾಗಿ ಕಾಣುತ್ತಿದೆಯೇ ಎಂದು ಮರು ಪ್ರಶ್ನೆಯನ್ನು ಎಸೆದರು. ನನ್ನಂತೆಯೇ ಉಳಿದವರ ಆಟದತ್ತನೂ ಗಮನ ಕೊಡಿ. ಒಂದು ಟೀಂ ನಲ್ಲಿ 10 ಮಂದಿ ಆಟಗಾರರಿದ್ದಾರೆ. ನಾನೇ ಎಲ್ಲವನ್ನೂ ಮಾಡಿ ಮುಗಿಸಿದರೆ ಇನ್ನುಳಿದವರು ಏನು ಮಾಡುತ್ತಾರೆ ಎಂದು ಪ್ರಶ್ನಿಸಿದರು.

    ಆರಂಭಿಕ ಬ್ಯಾಟ್ಸ್ ಮನ್ ಆಗಿ ಕಣಕ್ಕೆ ಇಳಿದ ಕೊಹ್ಲಿ ಮೂರು ಪಂದ್ಯದಲ್ಲಿ ಒಟ್ಟು 52 ರನ್ ಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಸರಣಿಯಲ್ಲಿ ನನ್ನ ಆಟದ ಬಗ್ಗೆ ಸಂತೋಷವಿದೆ. ಒಂದು ವೇಳೆ ಎರಡೂ ಪಂದ್ಯಗಳಲ್ಲಿ 70 ರನ್ ಗಳಿಸಿದ್ದರೆ ನೀವು ಈ ಪ್ರಶ್ನೆಯನ್ನು ಕೇಳುತ್ತಿದ್ರಾ ಅಂತಾ ಪ್ರಶ್ನಿಸಿದ ಅವರು, ಸರಣಿ ಆಟಗಳ ಬಗ್ಗೆ ಖುಷಿ ಪಡಿ. ಅದೇ ನಮಗೆ ಗೆಲುವು ತಂದುಕೊಡುತ್ತೆ ಅಂತಾ ಕೊಹ್ಲಿ ಹೇಳಿದ್ದಾರೆ.

    ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಇಂಗ್ಲೆಂಡ್-ಟೀಂ ಇಂಡಿಯಾ ನಡುವಿನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 2 ರನ್ ಗೆ ಔಟಾಗಿದ್ದರು. ಈ ಪಂದ್ಯದಲ್ಲಿ ಸುರೇಶ್ ರೈನಾ, ಎಂಎಸ್ ಧೋನಿ, ಯುವರಾಜ್ ಸಿಂಗ್ ಅಬ್ಬರದ ಬ್ಯಾಟಿಂಗ್ ನಿಂದಾಗಿ ಭಾರತ 202 ರನ್ ಗಳಿಸಿತ್ತು. ಜತೆಗೆ ಇಂಗ್ಲೆಂಡ್ ತಂಡವನ್ನು 127 ರನ್ ಗಳಿಗೆ ಆಲೌಟ್ ಮಾಡುವ ಮೂಲಕ 75 ರನ್ ಗಳಿಂದ ಜಯಗಳಿಸಿತ್ತು.

  • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಭಾರತ-ಇಂಗ್ಲೆಂಡ್ ಟಿ20 ಫೈನಲ್

    – ಭಾರತ ಗೆದ್ರೆ ಕೊಹ್ಲಿ ಟಿ-20ಗೂ ಸಾಮ್ರಾಟ್

    ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಇಂಡೋ-ಇಂಗ್ಲೆಂಡ್ ಟಿ-20 ಸರಣಿಯ ಅಂತಿಮ ಹಣಾಹಣಿ ನಡೆಯಲಿದೆ. 3 ಪಂದ್ಯಗಳ ಸರಣಿಯಲ್ಲಿ 1-1ರ ಸಮಬಲ ಸಾಧಿಸಿರೋದ್ರಿಂದ ಜಿದ್ದಾಜಿದ್ದಿನ ಹೋರಾಟ ನಡೆಯೋದಂತೂ ಸತ್ಯ.

    ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಜಯಿಸಿದ ಕೊಹ್ಲಿ ಮೂರೂ ಪ್ರಕಾರದ ಪಂದ್ಯಗಳಿಗೆ ನಾಯಕರಾದ ಮೇಲೆ ಏಕದಿನ ಸರಣಿಯನ್ನೂ ಬಾಚಿಕೊಂಡು ಈಗ ಟಿ-20 ಮೇಲೂ ಕಣ್ಣಿಟ್ಟಿದ್ದಾರೆ. ಟೀಂ ಇಂಡಿಯಾ ಗೆದ್ರೆ ಆಂಗ್ಲರ ಭಾರತ ಪ್ರವಾಸ `ಹೋದ ಪುಟ್ಟಾ ಬಂದ ಪುಟ್ಟ’ ಎಂಬಂತಾಗುತ್ತೆ. ಇಂದು ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

    ಆರ್‍ಸಿಬಿ ನಾಯಕರಾಗಿರೋ ಹಾಗೂ ಟಿ-20 ನಾಯಕರಾಗಿ ಆಯ್ಕೆಯಾದ ಬಳಿಕ ವಿರಾಟ್ ಕೊಹ್ಲಿಗೆ ಬೆಂಗಳೂರಿನಲ್ಲಿ ಇದೇ ಮೊದಲ ಪಂದ್ಯವಾಗಿದೆ. ಹೀಗಾಗಿ ನೆಚ್ಚಿನ ನಾಯಕನ ಆಟದ ಜೊತೆಗೆ ಟೀಂ ಇಂಡಿಯಾದ ಆಟವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.