Tag: Team india

  • ಏಪ್ಯಾ ಕಪ್ ಗೆದ್ದ ಭಾರತಕ್ಕೆ ವಿಶ್, ಬಳಿಕ ಟ್ವಿಸ್ಟ್ ಕೊಟ್ಟ ನಖ್ವಿ!

    ಏಪ್ಯಾ ಕಪ್ ಗೆದ್ದ ಭಾರತಕ್ಕೆ ವಿಶ್, ಬಳಿಕ ಟ್ವಿಸ್ಟ್ ಕೊಟ್ಟ ನಖ್ವಿ!

    ಮುಂಬೈ: ಏಷ್ಯಾಕಪ್ (Asia Cup) ಟ್ರೋಫಿ ಹಿಂದಿರುಗಿಸುವಂತೆ ಬಿಸಿಸಿಐ (BCCI) ಇಮೇಲ್ ಪತ್ರಕ್ಕೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqwi) ಪ್ರತಿಕ್ರಿಯಿಸಿದ್ದಾರೆ. ಟ್ರೋಫಿ ಗೆದ್ದ ಟೀಂ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸಿರುವ ನಖ್ವಿ ಕೊನೆಯಲ್ಲಿ ಟ್ವಿಸ್ಟ್ ಕೊಟ್ಟಿದ್ದಾರೆ. `ಬಿಸಿಸಿಐ ಅಥವಾ ತಂಡದ ಯಾರಾದ್ರೂ ಬಂದು ಟ್ರೋಫಿ ಪಡೆಯಬಹುದು’ ಅಂತ ಹೇಳಿದ್ದಾರೆ.

    ಮಂಗಳವಾರ (ಅ.21) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮೊಹ್ಸಿನ್ ನಖ್ವಿಗೆ ಏಷ್ಯಾ ಕಪ್ ಟ್ರೋಫಿ ಹಸ್ತಾಂತರಿಸುವಂತೆ ಇಮೇಲ್ ಮೂಲಕ ಪತ್ರ ಬರೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಏಪ್ಯಾ ಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ತಿಳಿಸುತ್ತೇನೆ. ಬಿಸಿಸಿಐ ಅಥವಾ ಭಾರತ ತಂಡದ ಯಾರಾದರೂ ಬಂದು ತೆಗೆದುಕೊಂಡು ಹೋಗಬಹುದು. ಅಲ್ಲದೇ ಭಾರತ ತಂಡಕ್ಕೆ ಏಷ್ಯಾ ಕಪ್ ಟ್ರೋಫಿಯನ್ನು ನೀಡಬೇಕೆಂದು ಬಯಸಿದರೆ, ದುಬೈನಲ್ಲಿ ಇನ್ನೊಮ್ಮೆ ಪ್ರಶಸ್ತಿ ವಿತರಿಸಲು ಕಾರ್ಯಕ್ರಮ ಆಯೋಜಿಸುವಂತೆ ಕೇಳಿಕೊಂಡಿದ್ದಾರೆ.ಇದನ್ನೂ ಓದಿ: ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸಿ – ಮೊಹ್ಸಿನ್‌ ನಖ್ವಿಗೆ ಬಿಸಿಸಿಐ ವಾರ್ನಿಂಗ್‌

    ಮೂಲಗಳ ಪ್ರಕಾರ, ಭಾರತಕ್ಕೆ ನಾನು ಟ್ರೋಫಿ ನೀಡುವುದಿಲ್ಲ, ಅದರ ಬದಲು ನವೆಂಬರ್ ಮೊದಲ ವಾರದಲ್ಲಿ ಕಾರ್ಯಕ್ರಮ ಆಯೋಜಿಸುತ್ತೇವೆ. ಭಾರತ ತಂಡದ ಯಾರಾದರೂ ಬಂದು ಟ್ರೋಫಿ ಪಡೆಯಬಹುದು ಎಂದು ತಿಳಿಸಿದ್ದಾರೆ. ನಖ್ವಿ ಪ್ರತಿಕ್ರಿಯೆನ್ನು ಬಿಸಿಸಿಯ ನಿರಾಕರಿಸಿದ್ದು, ನಮಗೆ ಏಷ್ಯಾ ಕಪ್ ಟ್ರೋಫಿಯೇ ಬೇಡ ಎನ್ನುವ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಜೊತೆಗೆ ಈ ಕುರಿತು ಐಸಿಸಿ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆಯಿದೆ.

    ಕಳೆದ ಸೆಪ್ಟೆಂಬರ್ 28ರಂದು ನಡೆದ ಟಿ೨೦ ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ, ಪಾಕ್ ವಿರುದ್ಧ ೫ ವಿಕೆಟ್‌ಗಳ ಜಯ ಸಾಧಿಸಿತು. ಆದ್ರೆ ನಖ್ವಿ ಅವರಿಂದ ಟ್ರೋಫಿ ಪಡೆಯಲು ಟೀಂ ಇಂಡಿಯಾ ನಿರಾಕರಿಸಿತು. ಹೀಗಾಗಿ ನಖ್ವಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಿಂದ ಹೊರಟರು ಜೊತೆಗೆ ಟ್ರೋಫಿಯನ್ನ ತೆಗೆದುಕೊಂಡು ಹೋದರು. ಹೀಗಾಗಿ ಭಾರತ ತಂಡ ಗೆದ್ದಿರುವ ಟ್ರೋಫಿಯನ್ನ ಹಿಂದಿರುಗಿಸುವಂತೆ ಹೇಳಿದೆ.

    ಟ್ರೋಫಿ ಎಲ್ಲಿದೆ?
    ಸದ್ಯ ಭಾರತ ಗೆದ್ದಿರುವ ಏಷ್ಯಾಕಪ್ ಟ್ರೋಫಿ ದುಬೈನ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಕಚೇರಿಯಲ್ಲೇ ಇದೆ. ತಮ್ಮ ಅನುಮತಿಯಿಲ್ಲದೇ ಯಾರೋ ಟ್ರೋಫಿಯನ್ನ ಹಸ್ತಾಂತರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ನಖ್ವಿಯವರ ಆಪ್ತ ಮೂಲದ ಪ್ರಕಾರ, ಟ್ರೋಫಿ ದುಬೈನ ಎಸಿಸಿ ಕಚೇರಿಯಲ್ಲಿದೆ. ತನ್ನ ಅನುಮತಿಯಿಲ್ಲದೇ ಯಾರಿಗೂ ಟ್ರೋಫಿ ಹಸ್ತಾಂತರಿಸಬಾರದು. ಒಂದು ವೇಳೆ ಹಸ್ತಾಂತರಿಸಬೇಕಿದ್ರೆ, ನಾನೇ ಭಾರತ ತಂಡ ಅಥವಾ ಬಿಸಿಸಿಐಗೆ ವೈಯಕ್ತಿಕವಾಗಿ ಟ್ರೋಫಿ ಹಸ್ತಾಂತರಿಸೋದಾಗಿ ಹೇಳಿದ್ದಾರೆ.ಇದನ್ನೂ ಓದಿ: ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

  • ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸಿ – ಮೊಹ್ಸಿನ್‌ ನಖ್ವಿಗೆ ಬಿಸಿಸಿಐ ವಾರ್ನಿಂಗ್‌

    ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸಿ – ಮೊಹ್ಸಿನ್‌ ನಖ್ವಿಗೆ ಬಿಸಿಸಿಐ ವಾರ್ನಿಂಗ್‌

    ಮುಂಬೈ: ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸುವಂತೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI), ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ACC) ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಮೊಹ್ಸಿನ್‌ ನಖ್ವಿಗೆ (Mohsin Naqvi) ಅಧಿಕೃತವಾಗಿ ಇ-ಮೇಲ್‌ ಪತ್ರ ಬರೆದಿದೆ.

    ಕಳೆದ ಸೆಪ್ಟೆಂಬರ್‌ 28ರಂದು ನಡೆದ ಟಿ20 ಏಷ್ಯಾಕಪ್‌ (Asia Cup ) ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ, ಪಾಕ್‌ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿತು. ಆದ್ರೆ ನಖ್ವಿ ಅವರಿಂದ ಟ್ರೋಫಿ ಪಡೆಯಲು ಟೀಂ ಇಂಡಿಯಾ ನಿರಾಕರಿಸಿತು. ಹೀಗಾಗಿ ನಖ್ವಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಿಂದ ಹೊರಟರು ಜೊತೆಗೆ ಟ್ರೋಫಿಯನ್ನ ತೆಗೆದುಕೊಂಡು ಹೋದರು. ಹೀಗಾಗಿ ಭಾರತ ತಂಡ ಗೆದ್ದಿರುವ ಟ್ರೋಫಿಯನ್ನ ಹಿಂದಿರುಗಿಸುವಂತೆ ಹೇಳಿದೆ.

    ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಬಿಸಿಸಿಐ ನಖ್ವಿ ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದೆ. ಅವರ ಕಡೆಯಿಂದ ಯಾವುದೇ ಉತ್ತರ ಬರದಿದ್ದರೆ, ಐಸಿಸಿಗೆ (ICC) ದೂರು ನೀಡುವುದಾಗಿ ಎಚ್ಚರಿಸಿದೆ.

    ಟ್ರೋಫಿ ಎಲ್ಲಿದೆ?
    ಸದ್ಯ ಭಾರತ ಗೆದ್ದಿರುವ ಏಷ್ಯಾಕಪ್‌ ಟ್ರೋಫಿ ದುಬೈನ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಕಚೇರಿಯಲ್ಲೇ ಇದೆ. ತಮ್ಮ ಅನುಮತಿಯಿಲ್ಲದೇ ಯಾರೋ ಟ್ರೋಫಿಯನ್ನ ಹಸ್ತಾಂತರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ನಖ್ವಿಯವರ ಆಪ್ತ ಮೂಲದ ಪ್ರಕಾರ, ಟ್ರೋಫಿ ದುಬೈನ ಎಸಿಸಿ ಕಚೇರಿಯಲ್ಲಿದೆ. ತನ್ನ ಅನುಮತಿಯಿಲ್ಲದೇ ಯಾರಿಗೂ ಟ್ರೋಫಿ ಹಸ್ತಾಂತರಿಸಬಾರದು. ಒಂದು ವೇಳೆ ಹಸ್ತಾಂತರಿಸಬೇಕಿದ್ರೆ, ನಾನೇ ಭಾರತ ತಂಡ ಅಥವಾ ಬಿಸಿಸಿಐಗೆ ವೈಯಕ್ತಿಕವಾಗಿ ಟ್ರೋಫಿ ಹಸ್ತಾಂತರಿಸೋದಾಗಿ ಹೇಳಿದ್ದಾರೆ.

  • ವಿಂಡೀಸ್‌ 2-0 ವೈಟ್‌ವಾಶ್‌ – ಭಾರತಕ್ಕೆ 7 ವಿಕೆಟ್‌ಗಳ ಜಯ; ಗಿಲ್‌ ನಾಯಕತ್ವದಲ್ಲಿ ಮೊದಲ ಸರಣಿ ಗೆಲುವು

    ವಿಂಡೀಸ್‌ 2-0 ವೈಟ್‌ವಾಶ್‌ – ಭಾರತಕ್ಕೆ 7 ವಿಕೆಟ್‌ಗಳ ಜಯ; ಗಿಲ್‌ ನಾಯಕತ್ವದಲ್ಲಿ ಮೊದಲ ಸರಣಿ ಗೆಲುವು

    ನವದೆಹಲಿ: ಕೆ.ಎಲ್‌ ರಾಹುಲ್‌ (KL Rahul) ಅವರ ಅಮೋಘ ಅರ್ಧಶತಕದೊಂದಿಗೆ ಭಾರತ ವೆಸ್ಟ್‌ ಇಂಡೀಸ್‌ ವಿರುದ್ಧ 2ನೇ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲಿ ನಡೆದ ಟೆಸ್ಟ್‌ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಮಾಡಿಕೊಂಡಿದೆ. ವಿಶೇಷವೆಂದ್ರೆ 37ನೇ ಟೆಸ್ಟ್‌ ಕ್ಯಾಪ್ಟನ್‌ ಶುಭಮನ್‌ ಗಿಲ್‌ (Shubman Gill) ಅವರ ನಾಯಕತ್ವದಲ್ಲಿ ಭಾರತದ ತಂಡದ (Team India) ಮೊದಲ ಜಯ ಕೂಡ ಇದಾಗಿದೆ.

    ಇಲ್ಲಿನ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ ಟೆಸ್ಟ್‌ ಪಂದ್ಯದಲ್ಲಿ ವಿಂಡೀಸ್‌ (West Indies) ಭಾರತಕ್ಕೆ ಸುಲಭ ತುತ್ತಾಯಿತು. 58 ರನ್‌ಗಳ ಅಲ್ಪ ಹಿನ್ನಡೆಯೊಂದಿಗೆ ಕೊನೆಯ ದಿನದ ಕ್ರೀಸ್‌ ಆರಂಭಿಸಿದ ಭಾರತ ಮತ್ತೆರಡು ವಿಕೆಟ್‌ಗಳನ್ನ ಕಳೆದುಕೊಂಡಿತು. ಆದ್ರೆ ಭಾರತದ ಪರ ಒಂದು ತುದಿಯಲ್ಲಿ ಗಟ್ಟಿಯಾಗಿ ನೆಲೆಯೂರಿದ ಕನ್ನಡಿಗ ಕೆಎಲ್ ರಾಹುಲ್ ತಂಡವನ್ನು ಜಯದ ದಡ ಸೇರಿಸುವಲ್ಲಿ ಯಶಸ್ವಿಯಾದರು. 108 ಎಸೆತಗಳನ್ನು ಎದುರಿಸಿದ ಅವರು 6 ಬೌಂಡರಿ ಮತ್ತು 2 ಸಿಕ್ಸರ್‌ನೊಂದಿಗೆ 58 ರನ್ ಗಳಿಸಿ ಅಜೇಯರಾಗಿ ಉಳಿದರು. ವಿಂಡೀಸ್ ಪರ ನಾಯಕ ರೋಸ್ಟನ್ ಚೇಸ್ 2 ವಿಕೆಟ್‌, ಜೋಮೆಲ್ ವಾರಿಕನ್ ಒಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಏನಾಯ್ತು?
    ಮೊದಲ ಇನ್ನಿಂಗ್ಸ್‌ನಲ್ಲಿ ಟಾಸ್‌ ಗೆದ್ದ ಭಾರತ ತಂಡ ಬ್ಯಾಟಿಂಗ್‌ ಆಯ್ದುಕೊಂಡಿತ್ತು. 5 ವಿಕೆಟ್ ಕಳೆದುಕೊಂಡು 518 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕುತ್ತರವಾಗಿ ವಿಂಡೀಸ್ ಪ್ರಥಮ ಇನ್ನಿಂಗ್ಸ್ ನಲ್ಲಿ ಕೇವಲ 248 ರನ್ ಗಳನ್ನಷನ್ನೇ ಗಳಿಸಲು ಸಾಧ್ಯವಾಯಿತು. 270 ರನ್ ಗಳ ಪ್ರಥಮ ಇನ್ನಿಂಗ್ಸ್ ಮುನ್ನಡೆ ಪಡೆದಿದ್ದ ನಾಯಕ ಶುಭಮನ್ ಗಿಲ್ ಅವರು ವಿಂಡೀಸ್‌ಗೆ ಫಾಲೋ ಆನ್ ಹೇರಿದರು.

    ವಿಂಡೀಸ್ ತಂಡ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಪ್ರತಿಹೋರಾಟ ನೀಡಿ 390 ರನ್ ಗಳಿಸಿತಾದರೂ ಜಯದ ಗುರಿ ಕೇವಲ 120 ರನ್ ಗಳಾಗಿದ್ದರಿಂದ ಭಾರತಕ್ಕೆ ಸುಲಭ ತುತ್ತಾಯಿತು. ಪಂದ್ಯವನ್ನು 4ನೇ ದಿನದೊಳಗೇ ಮುಗಿಸುವ ಉತ್ಸಾಹವನ್ನು ಭಾರತ ಹೊಂದಿತ್ತು. ಆದ್ರೆ ಯಶಸ್ವಿ ಜೈಸ್ವಾಲ್ 8 ರನ್‌ಗಳಿಗೆ ವಿಕೆಟ್‌ ಒಪ್ಪಿಸಿದ ಬಳಿಕ ನಿಧಾನಗತಿಯ ಬ್ಯಾಟಿಂಗ್‌ಗೆ ಇಳಿಯಿತು.

    4ನೇ ದಿನಾಂತ್ಯಕ್ಕೆ 18 ಓವರ್ ಗಳಲ್ಲಿ ಒಂದು ವಿಕೆಟ್‌ಗೆ 63 ರನ್ ಗಳಿಸಿದ್ದ ಭಾರತ ತಂಡ 5ನೇ ದಿನ ಮೊದಲ ಅವಧಿಯಲ್ಲಿ 13 ಓವರ್ ಗಳಲ್ಲಿ ಗೆಲುವಿಗೆ ಅಗತ್ಯವಿದ್ದ ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು. ಕೆಎಲ್ ರಾಹುಲ್ ಅವರಿಗೆ ಉತ್ತಮ ಸಾಥ್ ನೀಡಿದ್ದ ಸಾಯಿ ಸುದರ್ಶನ್ 76 ಎಸೆತಗಳಲ್ಲಿ 39 ರನ್ ಗಳಿಸಿದ್ರೆ, ನಾಯಕ ಶುಭಮನ್ ಗಿಲ್ 13 ರನ್‌ ಔಟಾದ್ರೆ, ಧ್ರುವ್ ಜುರೆಲ್‌ 6 ರನ್‌ ಗಳಿಸಿ ಅಜೇಯರಾಗುಳಿದರು.

    ಸಂಕ್ಷಿಪ್ತ ಸ್ಕೋರ್
    * ಭಾರತ ಪ್ರಥಮ ಇನ್ನಿಂಗ್ಸ್ 518/5ಡಿ
    ವೆಸ್ಟ್ ಇಂಡೀಸ್ ಪ್ರಥಮ ಇನ್ನಿಂಗ್ಸ್ 248ಕ್ಕೆ ಆಲೌಟ್

    * ವೆಸ್ಟ್ ಇಂಡೀಸ್ ದ್ವಿತೀಯ ಇನ್ನಿಂಗ್ಸ್ 390ಕ್ಕೆ ಆಲೌಟ್
    ಭಾರತ ದ್ವಿತೀಯ ಇನ್ನಿಂಗ್ಸ್ 124/3

  • ದಿಲ್ಲಿಯಲ್ಲಿ ಬೌಲರ್‌ಗಳ ದರ್ಬಾರ್‌ – ಫಾಲೋ ಆನ್‌ ಬಳಿಕ ವಿಂಡೀಸ್‌ ದಿಟ್ಟ ಹೋರಾಟ; ಭಾರತಕ್ಕೆ ಇನ್ನಿಂಗ್ಸ್‌ & 97 ರನ್‌ಗಳ ಮುನ್ನಡೆ

    ದಿಲ್ಲಿಯಲ್ಲಿ ಬೌಲರ್‌ಗಳ ದರ್ಬಾರ್‌ – ಫಾಲೋ ಆನ್‌ ಬಳಿಕ ವಿಂಡೀಸ್‌ ದಿಟ್ಟ ಹೋರಾಟ; ಭಾರತಕ್ಕೆ ಇನ್ನಿಂಗ್ಸ್‌ & 97 ರನ್‌ಗಳ ಮುನ್ನಡೆ

    ನವದೆಹಲಿ: ಇಲ್ಲಿನ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್‌ ಇಂಡೀಸ್‌ ನಡುವಿನ 3ನೇ ದಿನದಾಟ ರೋಚಕವಾಗಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ 248 ರನ್‌ಗಳಿಗೆ ಆಲೌಟ್‌ ಆದ ವಿಂಡೀಸ್‌ ತಂಡ ಫಾಲೋ ಆನ್‌ ಬಳಿಕ ದಿಟ್ಟ ಹೋರಾಟದ ಮೂಲಕ ಭಾರತ ತಂಡಕ್ಕೆ ತಿರುಗೇಟು ನೀಡಿದೆ. ಆದಾಗ್ಯೂ ಭಾರತ 3ನೇ ದಿನದ ಅಂತ್ಯಕ್ಕೆ ಇನ್ನಿಂಗ್ಸ್‌ನೊಂದಿಗೆ 97 ರನ್‌ಗಳ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.

    ಶನಿವಾರ 2ನೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ ಶುರು ಮಾಡಿದ್ದ ವಿಂಡೀಸ್‌ ತಂಡ ದಿನದ ಅಂತ್ಯಕ್ಕೆ 43 ಓವರ್‌ಗಳಲ್ಲಿ 140 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಿತ್ತು. 3ನೇ ದಿನ 248 ರನ್‌ ಗಳಿಸುವಷ್ಟರಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡಿತ್ತು. ಮೊದಲ ಇನ್ನಿಂಗ್ಸ್‌ ಬಳಿಕ 270 ರನ್‌ಗಳ ಭಾರೀ ಹಿನ್ನಡೆಯಲ್ಲಿದ್ದ ಕಾರಣ ಭಾರತ ಫಾಲೋ ಆನ್‌ ಘೋಷಿಸಿತು. ಹೀಗಾಗಿ ವೆಸ್ಟ್‌ ಇಂಡೀಸ್‌ ತಂಡ 3ನೇ ದಿನವೇ ತನ್ನ 2ನೇ ಇನ್ನಿಂಗ್ಸ್‌ ಶುರು ಮಾಡಿತು.

    ಫಾಲೋ ಆನ್​ ಎಂದರೇನು?
    ಈ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್​ ಮಾಡಿ 518 ರನ್​ ಕಲೆ ಹಾಕಿತ್ತು. ಇದಕ್ಕುತ್ತರವಾಗಿ ವೆಸ್ಟ್ ಇಂಡೀಸ್​ ತಂಡ​ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 248 ರನ್​ಗಳಿಗೆ ಆಲೌಟ್​ ಆಯ್ತು. ಇದರೊಂದಿಗೆ 270 ರನ್​ಗಳ ಹಿನ್ನಡೆ ಸಾಧಿಸಿತು. ಟೆಸ್ಟ್​ನಲ್ಲಿ ಯಾವುದೇ ತಂಡವೂ 200 ರನ್​ ಹಿನ್ನಡೆಯೊಂದಿಗೆ ಆಲೌಟ್ ಆಗುವ ಮೂಲಕ ಮೊದಲ ಇನ್ನಿಂಗ್ಸ್​ ಕೊನೆಗೊಂಡರೇ ಎದುರಾಳಿ ತಂಡಗಳು ಫಾಲೋ ಆನ್​ ಹೇರಬಹುದು.​ ಆಗ ಫಾಲೋ ಆನ್​ ಪಡೆದ ತಂಡ ಬೆನ್ನಲ್ಲೇ ಎರಡನೇ ಇನ್ನಿಂಗ್ಸ್​ ಬ್ಯಾಟಿಂಗ್ ಆರಂಭಿಸಬೇಕು. 2ನೇ ಇನ್ನಿಂಗ್ಸ್‌ನಲ್ಲಿ ಹಿನ್ನಡೆ ರನ್​ಗಳನ್ನು ಪೂರ್ಣಗೊಳಿಸಿ ಅದರ ನಂತರ ಎಷ್ಟು ರನ್ ಕಲೆಹಾಕುತ್ತದೊ ಅದನ್ನು ಟಾರ್ಗೆಟ್​ ಆಗಿ ಪರಿಗಣಿಸಲಾಗುತ್ತದೆ.

    ಫಾಲೋ ಆನ್‌ ಬಳಿಕ ಬ್ಯಾಟಿಂಗ್‌ ಶುರು ಮಾಡಿದ ವೆಸ್ಟ್‌ ಇಂಡೀಸ್‌ ತಂಡದ ಕೇವಲ 35 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಬಳಿಕ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಆರಂಭಿಕ ಜಾನ್ ಕ್ಯಾಂಪ್ಬೆಲ್ ಮತ್ತು ಶಾಯಿ ಹೋಪ್‌ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. 208 ಎಸೆತಗಳಲ್ಲಿ 138 ರನ್‌ಗಳ ಅಜೇಯ ಶತಕದ ಜೊತೆಯಾಟ ಆಡುವ ಮೂಲಕ ಭಾರತಕ್ಕೆ ತಿರುಗೇಟು ನೀಡಿದರು. ಇದರಿಂದಾಗಿ ವಿಂಡೀಸ್‌ ತಂಡ 3ನೇ ದಿನದ ಅಂತ್ಯಕ್ಕೆ ಮುರಿಯದ 3ನೇ ವಿಕೆಟ್‌ಗೆ 173 ರನ್‌ ಗಳಿಸಿದೆ. 145 ಎಸೆತಗಳಲ್ಲಿ 87 ರನ್‌ (2 ಸಿಕ್ಸರ್‌, 9 ಬೌಂಡರಿ) ಬಳಿಸಿರುವ ಜಾನ್ ಕ್ಯಾಂಪ್ಬೆಲ್, 103 ಎಸೆತಗಳಲ್ಲಿ 66 ರನ್‌ (2 ಸಿಕ್ಸರ್‌, 8 ಬೌಂಡರಿ) ಸಿಡಿಸಿರುವ ಶಾಯಿ ಹೋಪ್‌ ಕ್ರೀಸ್‌ನಲ್ಲಿದ್ದು, ಸೋಮವಾರ 4ನೇ ದಿನದಾಟ ಆರಂಭಿಸಲಿದ್ದಾರೆ.

    ದಿಲ್ಲಿಯಲ್ಲಿ ಬೌಲರ್‌ಗಳ ದರ್ಬಾರ್‌
    ಇನ್ನೂ 3ನೇ ದಿನ ಭಾರತೀಯ ಬೌಲರ್‌ಗಳು ಪಾರಮ್ಯ ಮೆರೆದರು. ಮೊದಲ ಇನ್ನಿಂಗ್ಸ್‌ನಲ್ಲಿ ಕುಲ್ದೀಪ್‌ ಯಾದವ್‌ 5 ವಿಕೆಟ್‌ ಗೊಂಚಲು ಪಡೆದರೆ, ರವೀಂದ್ರ ಜಡೇಜಾ 3 ವಿಕೆಟ್‌, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌ ತಲಾ ಒಂದು ವಿಕೆಟ್‌ ಕಿತ್ತರು. 2ನೇ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್‌ ಸಿರಾಜ್‌, ವಾಷಿಂಗ್ಟನ್‌ ಸುಂದರ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಸಂಕ್ಷಿಪ್ತ ಸ್ಕೋರ್
    ಭಾರತ ಪ್ರಥಮ ಇನ್ನಿಂಗ್ಸ್ 518/5 ಡಿ, ಯಶಸ್ವಿ ಜೈಸ್ವಾಲ್ 175, ಶುಭಮನ್ ಗಿಲ್ 129, ಸಾಯಿ ಸುದರ್ಶನ್ 87
    ವಾರಿಕನ್ 98ಕ್ಕೆ 3, ರೋಸ್ಟನ್ ಚೇಸ್ 83ಕ್ಕೆ 1.

    ವೆಸ್ಟ್ ಇಂಡೀಸ್ ಪ್ರಥಮ ಇನ್ನಿಂಗ್ಸ್ 248ಕ್ಕೆ ಆಲೌಟ್, ಅಲಿಖ್ ಅಥನಾಝ್ 41, ಶಾಯಿ ಹೋಪ್ 36, ಚಂದ್ರಪಾಲ್ 34
    ಕುಲ್ದೀಪ್ ಯಾದವ್ 82ಕ್ಕೆ 5, ರವೀಂದ್ರ ಜಡೇಜಾ 46ಕ್ಕೆ 3

  • ದಿಲ್ಲಿಯಲ್ಲಿ ದರ್ಬಾರ್‌, ದಿಲ್‌ ಗೆದ್ದ ಗಿಲ್‌ – ಭಾರತದ ಹಿಡಿತದಲ್ಲಿ ಪಂದ್ಯ, ವಿಂಡೀಸ್‌ 140ಕ್ಕೆ 4 ವಿಕೆಟ್‌

    ದಿಲ್ಲಿಯಲ್ಲಿ ದರ್ಬಾರ್‌, ದಿಲ್‌ ಗೆದ್ದ ಗಿಲ್‌ – ಭಾರತದ ಹಿಡಿತದಲ್ಲಿ ಪಂದ್ಯ, ವಿಂಡೀಸ್‌ 140ಕ್ಕೆ 4 ವಿಕೆಟ್‌

    • 518ಕ್ಕೆ ಭಾರತ ಡಿಕ್ಲೇರ್‌

    ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್‌ ಪಂದ್ಯದ 2ನೇ ದಿನದಾಟದಲ್ಲಿ ಯಶಸ್ವಿ ಜೈಸ್ವಾಲ್ 173 ರನ್ ಗಳಿಸಿ ಕ್ರೀಸ್‌ಗೆ ಬಂದಾಗ, ನೆರೆದಿದ್ದ ಜನರೆಲ್ಲಾ ಅವರು ದ್ವಿಶತಕ ಗಳಿಸುವುದನ್ನ ನೋಡಲು ಕಾತರರಾಗಿದ್ದರು. ಆದ್ರೆ ಸಣ್ಣ ಎಡವಟ್ಟಿನಿಂದ ದ್ವಿಶತಕ ಗಳಿಸುವ ಅವಕಾಶದಿಂದ ವಂಚಿತರಾದರು. ಜೈಸ್ವಾಲ್‌ ಪೆವಿಲಿಯನ್‌ ಸೇರಿದ ಬಳಿಕ ನಾಯಕ ಗಿಲ್‌ ಶತಕದ ನೆರವಿನಿಂದ ಭಾರತ, ವೆಸ್ಟ್‌ ಇಂಡೀಸ್‌ ವಿರುದ್ಧ 518 ರನ್‌ಗೆ 5 ವಿಕೆಟ್‌ ಕಳೆದುಕೊಂಡು ಡಿಕ್ಲೇರ್‌ ಮಾಡಿಕೊಂಡಿತು.

    ಬಳಿಕ ತನ್ನ ಮೊದಲ ಇನ್ನಿಂಗ್ಸ್‌ ಶುರು ಮಾಡಿರುವ ವಿಂಡೀಸ್‌ ತಂಡ 2ನೇ ದಿನದ ಅಂತ್ಯಕ್ಕೆ 43 ಓವರ್‌ಗಳಲ್ಲಿ 140 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಿದೆ. ಟೆವಿನ್ ಇಮ್ಲಾಚ್ 14 ರನ್‌, ಶಾಯಿ ಹೋಪ್‌ 31 ರನ್‌ ಗಳಿಸಿ ಕ್ರೀಸ್‌ನಲ್ಲಿಂದು ಭಾನುವಾರ 3ನೇ ದಿನದ ಆಟ ಆರಂಭಿಸಲಿದ್ದಾರೆ. ಇದನ್ನೂ ಓದಿ: IPL Auction 2026 | ಡಿಸೆಂಬರ್‌ನಲ್ಲಿ ಮಿನಿ ಹರಾಜು – ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌!

    ದ್ವಿಶತಕ ಸನಿಹದಲ್ಲಿ ರನೌಟ್‌
    ಜೇಡನ್ ಸೀಲ್ಸ್ ಅವರ ಬೌಲಿಂಗ್‌ನಲ್ಲಿ ಮಿಡ್-ಆಫ್ ಕಡೆಗೆ ಚೆಂಡನ್ನು ತಳ್ಳಿ ಯಶಸ್ವಿ ಒಂದು ರನ್‌ಗಾಗಿ ಓಡಿದರು. ಆದರೆ, ಅರ್ಧ ದೂರ ಕ್ರಮಿಸುವ ವೇಳೆಗೆ ಇನ್ನೊಂದು ತುದಿಯಲ್ಲಿದ್ದ ನಾಯಕ ಶುಭಮನ್ ಗಿಲ್ ಸರಿಯಾಗಿ ಪ್ರತಿಕ್ರಿಯಿಸಲಿಲ್ಲ. ತಕ್ಷಣ ಎಚ್ಚೆತ್ತ ಟ್ಯಾಗನರೈನ್ ಚಂದ್ರಪಾಲ್ ತ್ವರಿತವಾಗಿ ಚೆಂಡನ್ನು ಹಿಡಿದು ವಿಕೆಟ್ ಕೀಪರ್ ಟೆವಿನ್ ಇಮ್ಲಾಕ್ ಎಸೆದರು. ಇಮ್ಲಾಕ್ ಸ್ಟಂಪ್ಸ್‌ಗಳನ್ನು ಉರುಳಿಸಿ ರನ್ ಔಟ್ ಮಾಡಿದರು. ನಾಯಕ ಶುಭಮನ್ ಗಿಲ್ ಅವರೊಂದಿಗಿನ ಗೊಂದಲಮಯ ಓಟದಿಂದಾಗಿ ಯಶಸ್ವಿ ಕೇವಲ 175 ರನ್‌ಗಳಿಗೆ ತಮ್ಮ ಆಟವನ್ನು ಮುಗಿಸಬೇಕಾಯಿತು. ದ್ವಿಶತಕದಿಂದ ವಂಚಿತರಾಗಿದ್ದಕ್ಕೆ ತೀವ್ರ ನಿರಾಶೆಗೊಂಡ ಯಶಸ್ವಿ ಜೈಸ್ವಾ, ತಮ್ಮ ಹಣೆಗೆ ಬಡಿದುಕೊಂಡು ಮೈದಾನದಿಂದ ಹೊರನಡೆದರು. ಇದನ್ನೂ ಓದಿ: ಮತ್ತೊಮ್ಮೆ ದ್ವಿಶತಕ ಸಿಡಿಸುವ ತವಕದಲ್ಲಿ ಜೈಸ್ವಾಲ್‌ -ಬೃಹತ್‌ ಮೊತ್ತದತ್ತ ಭಾರತ

    10ನೇ ಟೆಸ್ಟ್‌ ಶತಕ, ಒಂದೇ ವರ್ಷದಲ್ಲಿ 5 ಶತಕ
    ಇನ್ನೂ ಭಾರತ ಟೆಸ್ಟ್ ತಂಡದ ನಾಯಕ ಶುಭಮನ್‌ ಗಿಲ್, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ತಮ್ಮ 10ನೇ ಟೆಸ್ಟ್ ಶತಕವನ್ನು ಭಾರಿಸಿ ರೆಕಾರ್ಡ್ ಮುರಿದಿದ್ದಾರೆ. 26 ವರ್ಷದ ಗಿಲ್, ನಾಯಕನಾಗಿ ತಮ್ಮ ಐದನೇ ಶತಕ ಗಳಿಸುವ ಮೂಲಕ ತಮ್ಮ ಬ್ಯಾಟಿಂಗ್‌ನಲ್ಲಿ ಚಿನ್ನದ ಓಟವನ್ನು ಮುಂದುವರೆಸಿದರು. ಶನಿವಾರ ಮಧ್ಯಾಹ್ನದ ಊಟದ ವಿರಾಮದ ನಂತರ, ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಸಾಧನೆ ಮಾಡಿದ್ದು, ನಾಯಕನಾಗಿ ಐದನೇ ಟೆಸ್ಟ್ ಶತಕದೊಂದಿಗೆ, ಗಿಲ್ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ, ಭಾರತದ ಟೆಸ್ಟ್ ತಂಡದ ನಾಯಕರಾಗಿ ಅತಿ ಹೆಚ್ಚು ಶತಕಗಳ ವಿಷಯದಲ್ಲಿ ಎಂ.ಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದರು. ಇದನ್ನೂ ಓದಿ: ಮಹಿಳಾ ವಿಶ್ವಕಪ್‌ | ಭಾರತದ ವನಿತೆಯರ ಪರಾಕ್ರಮ – ಪಾಕ್‌ ವಿರುದ್ಧ 88 ರನ್‌ಗಳ ಭರ್ಜರಿ ಜಯ

    ಇಂಗ್ಲೆಂಡ್‌ನಲ್ಲಿ ನಡೆದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯಲ್ಲಿ ತಮ್ಮ ಮೊದಲ ಸರಣಿಯಲ್ಲಿಯೇ ನಾಲ್ಕು ಶತಕಗಳನ್ನು ಗಳಿಸಿದ್ದರು. ವಿರಾಟ್ ಕೊಹ್ಲಿ 20 ಶತಕಗಳೊಂದಿಗೆ ಭಾರತದ ಟೆಸ್ಟ್ ನಾಯಕರಾಗಿ ಅಗ್ರಸ್ಥಾನದಲ್ಲಿದ್ದಾರೆ, ನಂತರ ಸುನಿಲ್ ಗವಾಸ್ಕರ್ 11 ಮತ್ತು ಮೊಹಮ್ಮದ್ ಅಜರುದ್ದೀನ್ 9 ಶತಕಗಳ ಪಟ್ಟಿಯಲ್ಲಿ ಇದ್ದಾರೆ.

  • ಮತ್ತೊಮ್ಮೆ ದ್ವಿಶತಕ ಸಿಡಿಸುವ ತವಕದಲ್ಲಿ ಜೈಸ್ವಾಲ್‌ -ಬೃಹತ್‌ ಮೊತ್ತದತ್ತ ಭಾರತ

    ಮತ್ತೊಮ್ಮೆ ದ್ವಿಶತಕ ಸಿಡಿಸುವ ತವಕದಲ್ಲಿ ಜೈಸ್ವಾಲ್‌ -ಬೃಹತ್‌ ಮೊತ್ತದತ್ತ ಭಾರತ

    – ಶತಕ ಬಾರಿಸಿ ಸಚಿನ್‌ ಬಳಿಕ ವಿಶೇಷ ಸಾಧನೆ ಮಾಡಿದ ಯಶಸ್ವಿ

    ನವದೆಹಲಿ: ವಿಂಡೀಸ್‌ (West Indies) ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯ 2ನೇ ಪಂದ್ಯದಲ್ಲಿ ಭಾರತ (Team India) ಮೊದಲ ದಿನವೇ 300 ರನ್‌ಗಳ ಗಡಿ ದಾಟಿದೆ. ಮೊದಲ ದಿನದ ಅಂತ್ಯಕ್ಕೆ ಕೇವಲ 2 ವಿಕೆಟ್‌ಗೆ 90 ಓವರ್‌ಗಳಲ್ಲಿ 318 ರನ್‌ ಸಿಡಿಸಿದ್ದು, ಬೃಹತ್‌ ಮೊತ್ತ ಪೇರಿಸುವ ವಿಶ್ವಾಸದಲ್ಲಿದೆ.

    ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಮೊದಲ ದಿನ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದೆ. ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ (Yashasvi Jaiswal) ವಿಕೆಟ್‌ ಬಿಟ್ಟುಕೊಡದೇ ಅಜೇಯ ಶತಕ ಸಿಡಿಸಿ ಮಿಂಚಿದ್ದಾರೆ. 173 ರನ್‌ ಗಳಿಸಿ ಕ್ರೀಸ್‌ನಲ್ಲಿರುವ ಯಶಸ್ವಿ ಮತ್ತೊಮ್ಮೆ ದ್ವಿಶತಕ ಸಿಡಿಸುವ ವಿಶ್ವಾಸದಲ್ಲಿದ್ದಾರೆ.

    ಭಾರತ ಪರ ಕೆ.ಎಲ್ ರಾಹುಲ್ (KL Rahul) ಹಾಗೂ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿದರು. ಮೊದಲ ವಿಕೆಟ್​ಗೆ ಈ ಜೋಡಿ 58 ರನ್​ಗಳ ಜೊತೆಯಾಟ ಆಡಿತು. ರಾಹುಲ್ 54 ಎಸೆತಗಳಲ್ಲಿ 38 ರನ್ ಗಳಿಸಿ ಔಟಾದರು. ಊಟದ ವಿರಾಮದ ಬಳಿಕ ಬಿರುಸಿನ ಬ್ಯಾಟಿಂಗ್ ನಡೆಸಿದ ಜೈಸ್ವಾಲ್ 145 ಎಸೆತಗಳಲ್ಲಿ 16 ಫೋರ್​ನೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ 7ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದರು. ಅತ್ತ ಸಾಯಿ ಸುದರ್ಶನ್ ಕೂಡ ಅರ್ಧಶತಕ ಸಿಡಿಸಿ ಮಿಂಚಿದರು.

    ಸುದರ್ಶನ್‌ ಕೈತಪ್ಪಿದ ಶತಕ
    ಇನ್ನೂ ಅರ್ಧಶತಕ ಗಳಿಸಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಿದ್ದ ಸುದರ್ಶನ್‌ ಶತಕ ವಂಚಿತರಾದರು. 165 ಎಸೆತಗಳಲ್ಲಿ 12 ಬೌಂಡರಿ ಸಹಿತ 87 ರನ್‌ ಗಳಿಸಿ ಔಟಾದರು. ನಂತರ ಕ್ರೀಸ್‌ಗೆ ಬಂದ ಶುಭಮನ್‌ ಗಿಲ್‌ 68 ಎಸೆತಗಳಲ್ಲಿ 20 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು. ದಿನದ ಕೊನೆಯವರೆಗೂ ವಿಕೆಟ್‌ ಬಿಟ್ಟು ಕೊಡದ ಜೈಸ್ವಾಲ್‌ 253 ಎಸೆತಗಳಲ್ಲಿ 22 ಬೌಂಡರಿ ಸಹಿತ 173 ರನ್‌ ಬಾರಿಸಿದ್ದಾರೆ. ಶನಿವಾರ 2ನೇ ದಿನದ ಆಟ ಮುಂದುವರಿಸಲಿದ್ದಾರೆ.

    ವಿಶೇಷ ದಾಖಲೆ ಬರೆದ ಜೈಸ್ವಾಲ್‌
    ಇನ್ನೂ ಈ ಪಂದ್ಯದ ಮಧ್ಯೆ ಜೈಸ್ವಾಲ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ತಲುಪಿದರು. ಅವರು 3,000 ರನ್‌ಗಳನ್ನು ಪೂರ್ಣಗೊಳಿಸಿದ ಸಾಧನೆ ಮಾಡಿದರು. ಈ ಪಂದ್ಯಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ 25 ಟೆಸ್ಟ್ ಪಂದ್ಯಗಳ 47 ಇನ್ನಿಂಗ್ಸ್‌ಗಳಲ್ಲಿ 2,245 ರನ್ ಗಳಿಸಿದ್ದರು. ಇದರಲ್ಲಿ 6 ಶತಕಗಳು ಮತ್ತು 12 ಅರ್ಧಶತಕಗಳು ಸೇರಿವೆ. ಜೈಸ್ವಾಲ್ ಅವರ ಟೆಸ್ಟ್ ಸರಾಸರಿ ಸುಮಾರು 49.88 ಆಗಿದ್ದು, ಇದನ್ನು ಅತ್ಯುತ್ತಮ ಪರಿಗಣಿಸಬಹುದು.

    ಜೈಸ್ವಾಲ್ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕವೇ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದರು. ಆಗಲೂ ಚೊಚ್ಚಲ ಪಂದ್ಯದಲ್ಲೇ ಶತಕ ಗಳಿಸಿದರು. ಅಲ್ಲದೇ 23ನೇ ವರ್ಷ ವಯಸ್ಸಿನವರಲ್ಲಿ ಸಚಿನ್‌ ತೆಂಡೂಲ್ಕರ್‌ ಬಳಿಕ ಅಧಿಕ ಶತಕ ಸಿಡಿಸಿದ 2ನೇ ಭಾರತೀಯ ಬ್ಯಾಟರ್‌ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಸಚಿನ್‌ 23 ವರ್ಷದ ಹೊತ್ತಿಗೆ 11 ಶತಕ ಗಳಿಸಿದ್ದರೆ, ಯಶಸ್ವಿ 7 ಶತಕ ಗಳಿಸಿದ್ದಾರೆ. ಇನ್ನುಳಿದಂತೆ ರವಿ ಶಾಸ್ತ್ರಿ ಹಾಗೂ ದಿಲೀಪ್ ವೆಂಗ್‌ಸರ್ಕಾರ್ ತಲಾ 5 ಶತಕ ಗಳಿಸಿದ್ದು, ಕ್ರಮವಾಗಿ ಮೂರು ಮತ್ತು 4ನೇ ಸ್ಥಾನದಲ್ಲಿದ್ದಾರೆ.

  • 2027ರ ವಿಶ್ವಕಪ್‌ ಆಡೋದು ಡೌಟ್‌ – ಆಸೀಸ್‌ ಸರಣಿ ಬಳಿಕ ʻಹಿಟ್‌ಮ್ಯಾನ್‌, ಕ್ರಿಕೆಟ್‌ ಲೋಕದ ಕಿಂಗ್‌ ಯುಗ ಅಂತ್ಯ?

    2027ರ ವಿಶ್ವಕಪ್‌ ಆಡೋದು ಡೌಟ್‌ – ಆಸೀಸ್‌ ಸರಣಿ ಬಳಿಕ ʻಹಿಟ್‌ಮ್ಯಾನ್‌, ಕ್ರಿಕೆಟ್‌ ಲೋಕದ ಕಿಂಗ್‌ ಯುಗ ಅಂತ್ಯ?

    ಭಾರತೀಯ ಕ್ರಿಕೆಟ್ ಲೋಕ ಎಂದೂ ನೆನಪಿಟ್ಟುಕೊಳ್ಳುವ ಸ್ಟಾರ್‌ ಆಟಗಾರ ಹಿಟ್‌ಮ್ಯಾನ್‌ ರೋಹಿತ್ ಶರ್ಮಾ (Rohit Sharma). ಇನ್ನೂ ಕೆಲ ವರ್ಷಗಳವರೆಗೆ ಟಾಪ್-10 ಕ್ರಿಕೆಟಿಗರ ಪಟ್ಟಿಯಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುವ ಹೆಸರೆಂದರೇ ಅದು ರೋಹಿತ್ ಶರ್ಮಾ. ಅವರಿಗೆ ತಮ್ಮ ಕ್ರೆಕೆಟ್‌ ಬದುಕಿಗೆ ತೆರೆ ಎಳೆಯುವ ಸನಿಹಕ್ಕೆ ಬಂದಿದ್ದಾರೆ. ಅಲ್ಲದೇ ಕ್ರಿಕೆಟ್‌ ಲೋಕದ ಕಿಂಗ್‌ ಆಗಿ ಮೆರೆದಾಡಿದ ವಿರಾಟ್‌ ಕೊಹ್ಲಿ (Virat kohli) ಕೂಡ ಆಸ್ಟ್ರೇಲಿಯಾ ಏಕದಿನ ಸರಣಿ ಬಳಿಕ ಕ್ರಿಕೆಟ್‌ ವೃತ್ತಿ ಜೀವನಕ್ಕೆ ಗುಡ್‌ಬೈ ಹೇಳುವ ಸಾಧ್ಯತೆಗಳಿವೆ.

    ರೋಹಿತ್ ಶರ್ಮಾ ಅವರು ಈ ಮಟ್ಟಕ್ಕೆ ಬೆಳೆಯಲು ಕಠಿಣಶ್ರಮವೇ ಕಾರಣ. ಯಶಸ್ಸಿಗೆ ಮತ್ತೇನಾದ್ರೂ ಸೂತ್ರ ಇದೆಯಾ ಅಂತ ರೋಹಿತ್ ಅವರನ್ನೊಮ್ಮೆ ಕೇಳಿ ನೋಡಿದ್ರೆ ಅವರು ಕೊಡುವ ಆನ್ಸರ್, `ಹಾರ್ಡ್ ವರ್ಕ್.. ಹಾರ್ಡ್ ವರ್ಕ್.. ಓನ್ಲಿ ಹಾರ್ಡ್ ವರ್ಕ್’. ಬಾಲ್ಯದಿಂದಲೇ ರೋಹಿತ್‌ಗೆ ಕ್ರಿಕೆಟ್ (Cricket) ಅಂದರೆ ಪ್ರಾಣ. ಮುಂಬೈಗೆ ಬಂದ ಮೇಲೆ ಗಲ್ಲಿಗಲ್ಲಿಗಳಲ್ಲಿ ಕ್ರಿಕೆಟ್ ಆಡಿಕೊಂಡಿದ್ದರು. 2006ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಹಿಟ್‌ಮ್ಯಾನ್‌ 2007ರ ಹೊತ್ತಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದುಕೊಂಡರು. 2007ರ ಜೂನ್‌ 23ರಂದು ಐರ್ಲೆಂಡ್‌ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಪದಾರ್ಪಣೆ ಮಾಡಿದರು. ಇದೀಗ ತಮ್ಮ 18 ವರ್ಷಗಳ ಕ್ರಿಕೆಟ್‌ ವೃತ್ತಿ ಜೀವನಕ್ಕೆ ತೆರೆ ಎಳೆಯುವ ಸನಿಹದಲ್ಲಿದ್ದಾರೆ. ಇದನ್ನೂ ಓದಿ: ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    ರೋಹಿತ್‌ ಸಾಧನೆ
    ಭಾರತದ ಆತಿಥ್ಯದಲ್ಲಿ ನಡೆದ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 11 ಪಂದ್ಯಗಳ ಪೈಕಿ 10ರಲ್ಲಿ ಭಾರತ ವಿಜಯ ಸಾಧಿಸಿತ್ತು. ಈ ವೇಳೆ ರೋಹಿತ್‌ ಕ್ಯಾಪ್ಟನ್‌ ಆಗಿದ್ದರು. ಅಲ್ಲದೇ 2024ರಲ್ಲಿ ಭಾರತ ತಂಡಕ್ಕೆ ಟಿ20 ವಿಶ್ವಕಪ್‌, 2025ರಲ್ಲಿ ಚಾಂಪಿಯನ್ಸ್‌ ಟ್ರೋಫಿ ಗೆದ್ದುಕೊಟ್ಟರು. ಸದ್ಯ ಟಿ20, ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್‌, ವಿರಾಟ್‌ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿಯುತ್ತಿದ್ದಾರೆ.

    ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಯುವ ಆಟಾರ ಶುಭಮನ್‌ ಗಿಲ್ ಅವರಿಗೆ ನಾಯಕನ ಪಟ್ಟ ಕಟ್ಟಲಾಗಿದೆ. ಆದರೆ ರೋಹಿತ್‌ ಶರ್ಮಾ ಅವರಿಂದ ನಾಯಕತ್ವ ಕಸಿದುಕೊಂಡಿರುವ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಅವರ ಅಭಿಮಾನಿಗಳು ಕೆರಳಿದ್ದಾರೆ. ಈ ಮಧ್ಯೆ ಮಾಜಿ ಇಂಗ್ಲೆಂಡ್‌ ಆಟಗಾರ ಡೇವಿಡ್‌ ಗೋವರ್‌ ಅವರು, ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಅವರು 2027ರ ಏಕದಿನ ವಿಶ್ವಕಪ್‌ ಹೊತ್ತಿಗೆ ಭಾರತ ತಂಡದ ಭಾಗವಾಗಿರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.‌  

    ಡೇವಿಡ್‌ ಗೋವರ್‌ ಹೇಳಿದ್ದೇನು?
    ರೋ-ಕೊ (ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ) ಖ್ಯಾತಿಯ ಇಬ್ಬರು ಅನುಭವಿ ಆಟಗಾರರು 2027ರ ವಿಶ್ವಕಪ್‌ ಆಡುವುದಿಲ್ಲ. ಇದೇ ಕಾರಣಕ್ಕೆ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆಗಳಾಗುತ್ತಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ ನನ್ನ ಮಾತೃಭೂಮಿ, ಪಾಕಿಸ್ತಾನ ನನ್ನ ಜನ್ಮಭೂಮಿ – ಪಾಕ್‌ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ

    ಅಜಿತ್‌ ಅಗರ್ಕರ್‌ ಸಮರ್ಥನೆ
    ಇನ್ನೂ ಏಕದಿನ ಕ್ರಿಕೆಟ್‌ ಕ್ಯಾಪ್ಟನ್‌ ಆಗಿ ಶುಭಮನ್‌ ಗಿಲ್‌ ಅಯ್ಕೆಯನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌ ಸಮರ್ಥಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ 2027ರ ವಿಶ್ವಕಪ್ ಆಡುವ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಆಸೀಸ್‌ ಸರಣಿ ಬಳಿಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಅವರ ಒಂದು ಯುಗ ಅಂತ್ಯವಾಗಲಿದೆ ಎನ್ನೋದು ಕೋಟ್ಯಂತರ ಅಭಿಮಾನಿಗಳ ಬೇಸರ. ಇದನ್ನೂ ಓದಿ: ವಿಂಡೀಸ್‌ ವಿರುದ್ಧ ಇನ್ನಿಂಗ್ಸ್ & 140 ರನ್‌ಗಳ ಭರ್ಜರಿ ಗೆಲುವು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡ ಭಾರತ

  • ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    ಮುಂಬೈ: ಇದೇ ಅಕ್ಟೋಬರ್‌ 19ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಟೀಂ ಇಂಡಿಯಾದ ಬಲಿಷ್ಠ ತಂಡವನ್ನ ಪ್ರಕಟಿಸಿದೆ.

    ಟಿ20 ಸರಣಿಗೆ ನಿರೀಕ್ಷೆಯಂತೆ ಸೂರ್ಯಕುಮಾರ್‌ ಯಾದವ್‌ ನಾಯಕನಾಗಿದ್ದಾರೆ. ಆದ್ರೆ ರೋಹಿತ್‌, ಕೊಹ್ಲಿ ತಂಡದಲ್ಲಿದ್ದರೂ ಏಕದಿನ ಕ್ರಿಕೆಟ್‌ಗೆ ನೂತನ ನಾಯಕನಾಗಿ ಶುಭಮನ್‌ ಗಿಲ್‌ ಅವರನ್ನ ಆಯ್ಕೆ ಮಾಡಿದೆ. ಹೀಗಾಗಿ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರ ನಿವೃತ್ತಿಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

    ಸರಣಿ ಬಳಿಕ ನಿವೃತ್ತಿ ಹೇಳ್ತಾರಾ ರೊ-ಕೊ?
    ಈಗಾಗಲೇ ಟೆಸ್ಟ್‌‌ ಹಾಗೂ ಟಿ20 ಕ್ರಿಕೆಟ್‌ಗೆ (T20 Cricket) ನಿವೃತ್ತಿ ಘೋಷಿಸಿರುವ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದೀಗ ಏಕದಿನ ಕ್ರಿಕೆಟ್‌ ವೃತ್ತಿ ಜೀವನಕ್ಕೂ ತೆರೆ ಎಳೆಯುವ ಸನಿಹದಲ್ಲಿದ್ದಾರೆ. ಮೂಲಗಳ ಹೇಳುವಂತೆ, 2027ರ ಏಕದಿನ ವಿಶ್ವಕಪ್‌ ತಂಡದಲ್ಲಿ ಈ ಜೋಡಿ ಸ್ಥಾನ ಪಡೆಯುವುದು ಖಚಿತವಿಲ್ಲ. ಏಕೆಂದ್ರೆ ಈಗಾಗಲೇ ಇಬ್ಬರೂ ದಿಗ್ಗಜರು ಟೆಸ್ಟ್‌ ಹಾಗೂ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಕಾರಣ ಮುಂಬರುವ ವರ್ಷಗಳಲ್ಲಿ ಪಂದ್ಯದ ಸಮಯವೂ ಸೀಮಿತವಾಗಿರಲಿದೆ. ಹೀಗಾಗಿ ಭಾರತೀಯ ಕ್ರಿಕೆಟ್‌ (Indian Cricket) ನಿಯಂತ್ರಣ ಮಂಡಳಿ ಕೂಡ ಇವರಿಬ್ಬರ ಆಯ್ಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಈ ಅಕ್ಟೋಬರ್‌ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಅತ್ಯಂತ ನಿರ್ಣಾಯಕವಾಗಿದೆ.

    ರೋಹಿತ್‌ ಮತ್ತು ಕೊಹ್ಲಿ 2027ರ ಏಕದಿನ ವಿಶ್ವಕಪ್‌ (World Cup 2027) ರೇಸ್‌ನಲ್ಲಿ ಉಳಿಯಬೇಕಾದ್ರೆ ಈ ವರ್ಷ ಡಿಸೆಂಬರ್‌ನಲ್ಲಿ ಶುರುವಾಗಲಿರುವ ದೇಸಿ ಕ್ರಿಕೆಟ್‌ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಬೇಕಾಗುತ್ತೆ. ಇಲ್ಲದಿದ್ದರೆ, ಬಹುತೇಕ ಏಕದಿನ ಕ್ರಿಕೆಟ್‌ನಿಂದಲೂ ಔಟ್‌ ಆಗಲಿದ್ದಾರೆ. ಇದಕ್ಕೆ ವಯಸ್ಸಿನ ಮಿತಿಯೂ ಒಂದು ಕಾರಣವಾಗಿರಲಿದೆ.

    ಅಯ್ಯರ್‌ ಕಂಬ್ಯಾಕ್‌
    ಇನ್ನೂ ಏಷ್ಯಾಕಪ್‌ ಟೂರ್ನಿಯಿಂದ ಕಡೆಗಣಿಸಲ್ಪಟ್ಟಿದ್ದ ಶ್ರೇಯಸ್‌ ಅಯ್ಯರ್‌ಗೆ ಮುಂಬರುವ ಟೂರ್ನಿಗಳನ್ನ ಗಮನದಲ್ಲಿಟ್ಟಿಕೊಂಡು ಉಪನಾಯಕನ ಸ್ಥಾನ ನೀಡಲಾಗಿದೆ. ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ಬಳಿಕ ಏಕದಿನ ಕ್ರಿಕೆಟ್‌ಗೆ ಕನ್ನಡಿಗ ಕೆ.ಎಲ್‌ ರಾಹುಲ್‌ ಕೂಡ ಕಂಬ್ಯಾಕ್‌ ಮಾಡಿದ್ದಾರೆ. ಇದರೊಂದಿಗೆ ಇದೇ ಮೊದಲಬಾರಿಗೆ ಏಕದಿನ ಕ್ರಿಕೆಟ್‌ಗೆ ಯುವ ಆಟಗಾರ ಯಶಸ್ವಿ ಜೈಸ್ವಾಲ್‌ ಪದಾರ್ಪಣೆ ಮಾಡಲಿದ್ದಾರೆ. ಆದ್ರೆ ಯಾರ್ಕರ್‌ ಸ್ಪೆಷಲಿಸ್ಟ್‌ ಜಸ್ಪ್ರೀತ್‌ ಬುಮ್ರಾ ಅವರನ್ನು ಏಕದಿನ ತಂಡದಿಂದ ಕೈಬಿಟ್ಟು, ಟಿ20 ತಂಡಕ್ಕೆ ಮಾತ್ರ ಆಯ್ಕೆ ಮಾಡಿರೋದು ಅಚ್ಚರಿ ಮೂಡಿಸಿದೆ. ಅಲ್ಲದೇ ಧ್ರುವ್‌ ಜುರೆಲ್‌, ನಿತೀಶ್‌ ಕುಮಾರ್‌ ರೆಡ್ಡಿ ಹೊಸ ಮುಖಗಳಿಗೆ ಬಿಸಿಸಿಐ ಮಣೆ ಹಾಕಿದೆ.

    ಭಾರತ ಏಕದಿನ ತಂಡ
    ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್‌ ಪಟೇಲ್, ಕೆ.ಎಲ್ ರಾಹುಲ್ (ವಿಕೆಟ್‌ ಕೀಪರ್‌), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್‌ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್, ಪ್ರಸಿದ್ಧ್‌ ಕೃಷ್ಣ, ಧ್ರುವ್‌ ಜುರೆಲ್ (ವಿಕೆಟ್‌ ಕೀಪರ್‌), ಯಶಸ್ವಿ ಜೈಸ್ವಾಲ್‌.

    ಭಾರತ ಟಿ20 ತಂಡ
    ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ವರುಣ್ ಚಕ್ರವರ್ತಿ, ಜಸ್ಪ್ರೀತ್‌ ಬುಮ್ರಾ, ಅರ್ಷ್‌ದೀಪ್ ಸಿಂಗ್, ಕುಲ್ದೀಪ್‌ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್‌ಸನ್ (ವಿಕೆಟ್‌ ಕೀಪರ್‌), ವಾಷಿಂಗ್ಟನ್‌ ಸುಂದರ್‌.

    ಅ.19ರಿಂದ ನವೆಂಬರ್‌ 8ರ ವರೆಗೆ ಮೂರು ಏಕದಿನ ಪಂದ್ಯಗಳು ಹಾಗೂ 5 ಟಿ20 ಪಂದ್ಯಗಳ ಸರಣಿ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಇದಕ್ಕಾಗಿ ಭಾರತ ತಂಡ ಶೀಘ್ರವೇ ಆಸ್ಟ್ರೇಲಿಯಾಕ್ಕೆ ಪ್ರವಾಸ ತೆರಳಲಿದ್ದು, ಅಭ್ಯಾಸ ಆರಂಭಿಸಲಿದೆ.

    ಗಿಲ್‌ ಮೇಲೆ ಹೆಚ್ಚಿದ ಭರವಸೆ
    ಕೆಲ ದಿನಗಳ ಹಿಂದೆ ಇಂಗ್ಲೆಂಡ್‌ನಲ್ಲಿ ನಡೆದ ʻಆಂಡರ್ಸನ್‌-ತೆಂಡೂಲ್ಕರ್‌ʼ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾದ ಯುವ ನಾಯಕನಾಗಿದ್ದ ಗಿಲ್‌ ಅವರ ಯಶಸ್ಸು ಆಯ್ಕೆ ಸಮಿತಿಗೆ ನಂಬಿಕೆ ತಂದುಕೊಟ್ಟಿದೆ. ಹೀಗಾಗಿ 2027ರ ವಿಶ್ವಕಪ್‌ಗೆ ಹೊಸ ಪ್ರತಿಭೆಗಳೊಂದಿಗೆ ಮುನ್ನಡೆಯಲು ಬಿಸಿಸಿಐ ನಿರ್ಧರಿಸಿದ್ದು, ಶುಭಮನ್‌ ಗಿಲ್‌ ಅವರನ್ನೇ ಟೀಂ ಇಂಡಿಯಾದ ದೀರ್ಘಾವಧಿ ನಾಯಕನ್ನಾಗಿ ಆಯ್ಕೆ ಮಾಡಲು ನಿರ್ಧರಿಸಿದೆ. ಆದ್ದರಿಂದ ರೋಹಿತ್‌, ಕೊಹ್ಲಿ ಅಂತಹ ದಿಗ್ಗಜರು ಇರುವಾಗಲೇ ಗಿಲ್‌ಗೆ ನಾಯಕನ ಹೊಣೆ ನೀಡಲಾಗಿದೆ.

  • ರಾಹುಲ್‌, ಜುರೆಲ್‌, ಜಡೇಜಾ ಶತಕ – 286 ರನ್‌ಗಳ ಮುನ್ನಡೆ, ಬೃಹತ್‌ ಮೊತ್ತದತ್ತ ಭಾರತ

    ರಾಹುಲ್‌, ಜುರೆಲ್‌, ಜಡೇಜಾ ಶತಕ – 286 ರನ್‌ಗಳ ಮುನ್ನಡೆ, ಬೃಹತ್‌ ಮೊತ್ತದತ್ತ ಭಾರತ

    ಅಹಮದಾಬಾದ್‌: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ (IND vs WI Test Match) ಮೂರು ಶತಕಗಳ ನೆರವಿನಿಂದ ಭಾರತ (Team India) 286 ರನ್‌ಗಳ ಭರ್ಜರಿ ಮುನ್ನಡೆ ಸಾಧಿಸಿದೆ.

    ಮೊದಲ ದಿನ 2 ವಿಕೆಟ್‌ ನಷ್ಟಕ್ಕೆ 121 ರನ್‌ ಗಳಿಸಿದ್ದ ಭಾರತ ಇಂದು 327 ರನ್‌ ಕಲೆ ಹಾಕಿದೆ. ದಿನದ ಅಂತ್ಯಕ್ಕೆ 128 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 448 ರನ್‌ ಗಳಿಸಿದೆ. ಇದನ್ನೂ ಓದಿ: ಸಿರಾಜ್‌, ಬುಮ್ರಾ ಬೌಲಿಂಗ್‌ಗೆ ವಿಂಡೀಸ್‌ ತತ್ತರ – ಮೊದಲ ದಿನ ಭಾರತಕ್ಕೆ ಮೇಲುಗೈ

    ಗುರುವಾರ 18 ರನ್‌ಗಳಿಸಿದ್ದ ನಾಯಕ ಶುಭಮನ್‌ ಗಿಲ್‌ ಇಂದು (50) ರನ್‌ ಹೊಡೆದರೆ ಕೆಎಲ್‌ ರಾಹುಲ್‌ 197 ಎಸೆತಗಳಲ್ಲಿ 12 ಬೌಂಡರಿಗಳ ನೆರವಿನಿಂದ ಶತಕ ಸಿಡಿಸಿ ಔಟಾದರು.

    ಧ್ರುವ್ ಜುರೆಲ್ 210 ಎಸೆತಗಳಲ್ಲಿ 15 ಬೌಂಡರಿ, 3 ಸಿಕ್ಸರ್‌ ಸಿಡಿಸಿ 125 ರನ್ ಗಳಿಸಿ ವಿಕೆಟ್‌ ಒಪ್ಪಿಸಿದರು. ಧ್ರುವ್ ಜುರೆಲ್ ಮತ್ತು ಜಡೇಜಾ 5ನೇ ವಿಕೆಟಿಗೆ 331 ಎಸೆತಗಳಲ್ಲಿ 206 ರನ್‌ ಜೊತೆಯಾಟವಾಡಿದ್ದರಿಂದ ಭಾರತ ಬೃಹತ್‌ ಮುನ್ನಡೆ ಸಾಧಿಸಿದೆ.

    ರವೀಂದ್ರ ಜಡೇಜಾ ಔಟಾಗದೇ 104 ರನ್‌(176 ಎಸೆತ, 6 ಬೌಂಡರಿ, 5 ಸಿಕ್ಸ್‌) ಸಿಡಿಸಿದರೆ ವಾಷಿಂಗ್ಟನ್‌ ಸುಂದರ್‌ 9 ರನ್‌ಗಳಿಸಿ ಅಜೇಯರಾಗಿ ಉಳಿದರು. ಮೂರು ದಿನಗಳು ಪಂದ್ಯ ಬಾಕಿ ಇದ್ದು ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಬೃಹತ್‌ ಮೊತ್ತ ಕಲೆ ಹಾಕುವ ಸಾಧ್ಯತೆ ಇದೆ.

    ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ್ದ ವೆಸ್ಟ್ ಇಂಡೀಸ್ 162 ರನ್ ಗಳಿಸಿ ಮೊದಲ ದಿನವೇ ಆಲೌಟ್ ಆಗಿತ್ತು. ಇದನ್ನೂ ಓದಿ: 1 ಪಂದ್ಯದ ಆಟದಿಂದ ಕೊಹ್ಲಿ, ಸಾಲ್ಟ್‌ ಹಿಂದಿಕ್ಕಿ ಟಿ20ಯಲ್ಲಿ ಅಭಿಷೇಕ್‌ ಶರ್ಮಾ ವಿಶ್ವದಾಖಲೆ

  • ಬಿಸಿಸಿಐ ಮುಂದೆ ಮಂಡಿಯೂರಿದ ಪಾಕ್‌ ಸಚಿವ – ಕದ್ದೊಯ್ದಿದ್ದ ಏಷ್ಯಾ ಕಪ್‌ ವಾಪಸ್‌

    ಬಿಸಿಸಿಐ ಮುಂದೆ ಮಂಡಿಯೂರಿದ ಪಾಕ್‌ ಸಚಿವ – ಕದ್ದೊಯ್ದಿದ್ದ ಏಷ್ಯಾ ಕಪ್‌ ವಾಪಸ್‌

    ಮುಂಬೈ: ಬಿಸಿಸಿಐ ಮುಂದೆ ಕೊನೆಗೂ ಪಾಕ್‌ ಸಚಿವ, ಎಸಿಸಿ ಮುಖ್ಯಸ್ಥ ಮೊಹ್ಸಿನ್‌ ನಖ್ವಿ (Mohsin Naqvi) ಮಂಡಿಯೂರಿದ್ದಾರೆ. ಏಷ್ಯಾ ಕಪ್‌ ಟ್ರೋಫಿಯನ್ನು ಯುಎಇ ಕ್ರಿಕೆಟ್‌ ಮಂಡಳಿಗೆ ವಾಪಸ್‌ ಕೊಟ್ಟಿದ್ದಾರೆ.

    ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಿ ಏಷ್ಯಾ ಕಪ್‌ (Asia Cup) ಟ್ರೋಪಿ ಜಯಿಸಿತು. ಆದರೆ, ಪಾಕ್‌ ಸಚಿವ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ಭಾರತ ತಂಡ ನಿರಾಕರಿಸಿತು. ಈ ವೇಳೆ, ಟ್ರೋಫಿ ಕೊಡದೇ ಪಾಕ್‌ ಸಚಿವ ಉದ್ಧಟತನ ತೋರಿದರು. ಈ ಬೆಳವಣಿಗೆ ಸಾಕಷ್ಟು ವಿವಾದ ಸೃಷ್ಟಿಸಿತು. ಇದನ್ನೂ ಓದಿ: ಪಾಕ್‌ ಸಚಿವನಿಂದ ಏಷ್ಯಾಕಪ್‌ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಟೀಂ ಇಂಡಿಯಾ

    ಏಷ್ಯಾ ಕಪ್‌ ಟ್ರೋಫಿ ಕಳ್ಳತನ ಮಾಡಿದ್ದಾರೆಂಬ ಅಪವಾದವನ್ನೂ ನಖ್ವಿ ಹೊತ್ತುಕೊಂಡರು. ಟ್ರೋಫಿಯನ್ನು ಟೀಂ ಇಂಡಿಯಾ ಕ್ಯಾಪ್ಟನ್‌ ಕಚೇರಿಗೆ ಬಂದು ತೆಗೆದುಕೊಂಡು ಹೋಗಬಹುದು ಎಂಬಂತಹ ದರ್ಪದ ಮಾತುಗಳನ್ನು ಆಡಿದ್ದರು.

    ನಖ್ವಿ ನಡೆಯನ್ನು ಖಂಡಿಸಿದ ಬಿಸಿಸಿಐ, ಪಾಕ್‌ ಜೊತೆಗೆ ಕ್ರಿಕೆಟ್‌ ಪಂದ್ಯವಾಡುವ ಯಾವ ತಂಡದ ಜೊತೆಗೂ ಭಾರತದ ತಂಡ ಆಟವಾಡಲ್ಲ ಎಂದು ಖಡಕ್‌ ಸಂದೇಶ ರವಾನಿಸಿತು. ಬಿಸಿಸಿಐನಿಂದ ಹೇಳಿಕೆ ಹೊರಬಿದ್ದ ಬೆನ್ನಲ್ಲೇ, ಕದ್ದೊಯ್ದಿದ್ದ ಕಪ್‌ನ್ನು ನಖ್ವಿ ಹಿಂದಿರುಗಿಸಿದ್ದಾರೆ. ಇದನ್ನೂ ಓದಿ: ಚೆಕ್‌ ಹರಿದು ಎಸೆದ ಪಾಕ್‌ ಕ್ಯಾಪ್ಟನ್‌ ದುರಹಂಕಾರ – ಗೆದ್ರೂ ಟ್ರೋಫಿ ಇಲ್ಲದೇ ಸಂಭ್ರಮಿಸಿದ ಭಾರತ!

    ನವೆಂಬರ್‌ನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ದೂರು ಸಲ್ಲಿಸುವುದಾಗಿ ಭಾರತ ಬೆದರಿಕೆ ಹಾಕಿತ್ತು. ‘ಟ್ರೋಫಿ ಮತ್ತು ಪದಕಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವ ಹಕ್ಕನ್ನು ನೀಡುವುದಿಲ್ಲ. ಇದು ಅತ್ಯಂತ ದುರದೃಷ್ಟಕರ ಮತ್ತು ಕ್ರೀಡಾ ಮನೋಭಾವಕ್ಕೆ ವಿರುದ್ಧವಾಗಿದೆ. ಟ್ರೋಫಿ ಮತ್ತು ಪದಕಗಳನ್ನು ಆದಷ್ಟು ಬೇಗ ಭಾರತಕ್ಕೆ ಹಿಂದಿರುಗಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಬಿಸಿಸಿಐ ತಿಳಿಸಿತ್ತು.