Tag: TeamIndia

  • ಇಂದಿನಿಂದ ಭಾರತ-ಆಸೀಸ್‌ T20 ಸರಣಿ – ODI ನಲ್ಲಿ ಫ್ಲಾಪ್‌ ಆದ್ರೂ T20ಯಲ್ಲಿ ಅಬ್ಬರಿಸ್ತಾರಾ ಸೂರ್ಯ?

    ಇಂದಿನಿಂದ ಭಾರತ-ಆಸೀಸ್‌ T20 ಸರಣಿ – ODI ನಲ್ಲಿ ಫ್ಲಾಪ್‌ ಆದ್ರೂ T20ಯಲ್ಲಿ ಅಬ್ಬರಿಸ್ತಾರಾ ಸೂರ್ಯ?

    ಬೆಂಗಳೂರು: ಏಕದಿನ ವಿಶ್ವಕಪ್‌ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ವಿಶ್ವಕಪ್‌ ಮುಗಿದ ನಾಲ್ಕೇ ದಿನಗಳಲ್ಲಿ ಭಾರತ ತಂಡವು ಆಸ್ಟ್ರೇಲಿಯಾ (Australia) ವಿರುದ್ಧ 5 ಪಂದ್ಯಗಳ ಟಿ20 ಸರಣಿಗೆ ಸಜ್ಜಾಗಿದೆ. ಇದು ಈ ವರ್ಷದಲ್ಲಿ ಆಸೀಸ್‌ ವಿರುದ್ಧವೇ ಆಡುತ್ತಿರುವ 4ನೇ ದ್ವಿಪಕ್ಷೀಯ ಸರಣಿಯಾಗಿದೆ. ನ.23 ರಂದು (ಇಂದು) ಮೊದಲ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿದೆ.

    ವಿಶಾಖಪಟ್ಟಣದಲ್ಲಿರುವ (Visakhapatnam) ಆಂಧ್ರಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಮೈದಾನದಲ್ಲಿ ಮೊದಲ ಪಂದ್ಯ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಈವರೆಗೆ 26 ಅಂತಾರಾಷ್ಟ್ರೀಯ T20 ಪಂದ್ಯಗಳು ನಡೆದಿದ್ದು, ಭಾರತ 15 ರಲ್ಲಿ ಮತ್ತು ಆಸ್ಟ್ರೇಲಿಯಾ 10ರಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಫಲಿತಾಂಶವಿಲ್ಲದೇ ರದ್ದಾಗಿದೆ. ಇದನ್ನೂ ಓದಿ: ಟಿ20-ಐಗೆ ರೋಹಿತ್ ಶರ್ಮಾ ನಿವೃತ್ತಿ? ಬಿಸಿಸಿಐ ಜೊತೆ ಚರ್ಚೆ

    ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್​ ಯಾದವ್​ (Suryakumar Yadav) ತಂಡದ ನಾಯಕರಾಗಿದ್ದು, ವಿಶ್ವಕಪ್ ಆಡಿರುವ ಭಾರತ ತಂಡದ ಎಲ್ಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆದ್ರೆ ಸೂರ್ಯಕುಮಾರ್‌ ಯಾದವ್‌ ಜೊತೆಗೆ ಇಶಾನ್‌ ಕಿಶನ್‌ ಮತ್ತು ಕನ್ನಡಿಗ ಪ್ರಸಿದ್ಧ್​ ಕೃಷ್ಣಗೆ ಸ್ಥಾನ ಸಿಕ್ಕಿದೆ. ಶ್ರೇಯಸ್‌ ಅಯ್ಯರ್‌ (Shreyas Iyer) ಕೊನೆಯ ಎರಡು ಪಂದ್ಯ ಆಡಲಿದ್ದು, ಈ ಅವಧಿಯಲ್ಲಿ ಉಪನಾಯಕನ ಸ್ಥಾನ ತುಂಬಲಿದ್ದಾರೆ. ಮೊದಲ 3 ಪಂದ್ಯಗಳಿಗೆ ಏಷ್ಯನ್ ಗೇಮ್ಸ್​ನ ಕ್ರಿಕೆಟ್​ ತಂಡದ ನಾಯಕತ್ವ ವಹಿಸಿದ್ದ ಋತುರಾಜ್ ಗಾಯಕ್ವಾಡ್​ಗೆ ಉಪನಾಯಕನ ಸ್ಥಾನ ನೀಡಲಾಗಿದೆ.

    ಈ ಸರಣಿಗೆ ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ (VVS Laxman) ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ. ಐರ್ಲೆಂಡ್ ಸರಣಿ ಆಡಿದ ಬಹುಪಾಲು ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸದ್ಯ ಏಕದಿನ ಕ್ರಿಕೆಟ್‌ನಲ್ಲಿ ಸಂಪೂರ್ಣ ಫ್ಲಾಪ್‌ ಪ್ರದರ್ಶನ ಮುಂದುವರಿಸಿದ ಸೂರ್ಯಕುಮಾರ್‌ ಯಾದವ್‌ ಟಿ20 ಕ್ರಿಕೆಟ್‌ನಲ್ಲಿ ಯಾವ ರೀತಿ ಅಬ್ಬರಿಸುತ್ತಾರೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ಆಸ್ಟ್ರೇಲಿಯಾಗೆ ಬಂದಿಳಿದ ಚಾಂಪಿಯನ್ ಪ್ಯಾಟ್ ಕಮ್ಮಿನ್ಸ್- ಸ್ವಾಗತಿಸಲು ಜನವೇ ಇಲ್ಲ

    ಭಾರತ ತಂಡ:
    ಸೂರ್ಯಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್​ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್

    ಆಸೀಸ್‌ ತಂಡ:
    ಸ್ವೀವ್‌ ಸ್ಮಿತ್‌, ಶಾರ್ಟ್‌, ಆರೋನ್‌ ಹಾರ್ಡಿ, ಜೋಸ್‌ ಇಂಗ್ಲಿಸ್‌, ಮಾರ್ಕಸ್‌ ಸ್ಟೋಯ್ನಿಸ್‌, ಡೇವಿಡ್‌, ಮ್ಯಾಥ್ಯೂ ವೇಡ್‌ (ನಾಯಕ), ಶಾನ್‌ ಅಬ್ಬಾಟ್‌, ಎಲ್ಲೀಸ್‌, ಬೆಹ್ರೆನ್‌ ಡಾರ್ಫ್‌, ತನ್ವೀರ್‌ ಸಂಘ.

    ಯಾವ ದಿನ-ಎಲ್ಲಿ ಪಂದ್ಯ?
    ನ.23 – ವಿಶಾಖಪಟ್ಟಣ
    ನ.26 – ತಿರುವನಂತಪುರಂ
    ನ.28 – ಗುವಾಹಟಿ
    ಡಿ.1 – ರಾಯ್‌ಪುರ
    ಡಿ.3 – ಬೆಂಗಳೂರು

  • ಚೇಸ್ ಮಾಸ್ಟರ್ ಕೊಹ್ಲಿ ವಿಕೆಟ್ ಮೇಲೆ ಆಸ್ಟ್ರೇಲಿಯಾ ಕಣ್ಣು- ಔಟ್ ಮಾಡಲು ಆಸೀಸ್ ರಣತಂತ್ರ

    ಚೇಸ್ ಮಾಸ್ಟರ್ ಕೊಹ್ಲಿ ವಿಕೆಟ್ ಮೇಲೆ ಆಸ್ಟ್ರೇಲಿಯಾ ಕಣ್ಣು- ಔಟ್ ಮಾಡಲು ಆಸೀಸ್ ರಣತಂತ್ರ

    ಅಹಮದಾಬಾದ್: ಭಾರತ (India) – ಆಸ್ಟ್ರೇಲಿಯಾ (Australia) ವಿಶ್ವಕಪ್ (World Cup) ಫೈನಲ್ (Final) ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಆಸೀಸ್‌ಗೆ ಭಾರತದ ಈ ಆಟಗಾರನದ್ದೆ ಫುಲ್ ಟೆನ್ಶನ್. ಟೀಂ ಇಂಡಿಯಾದ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ (Virat Kohli) ವಿಕೆಟ್ ಪಡೆಯೋದೆ ಆಸಿಸ್‌ನ ಫಸ್ಟ್ ಟಾರ್ಗೆಟ್. ವಿರಾಟ್ ಕೊಹ್ಲಿ ವಿಶ್ವಕಪ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಆಸಿಸ್‌ಗೆ ನಡುಕ ಹುಟ್ಟಿಸಿದ್ದಾರೆ.

    ಏಕದಿನ ಕ್ರಿಕೆಟ್‌ನಲ್ಲಿ 50 ಶತಕ ಪೂರೈಸಿದ ಮೊದಲ ಆಟಗಾರ ಎಂಬ ದಾಖಲೆ ಬರೆದ ಕ್ರಿಕೆಟ್ ಲೋಕದ ಸರದಾರ ವಿರಾಟ್ ಕೊಹ್ಲಿ. ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಮತ್ತು 50+ ಸ್ಕೋರ್‌ಗಳ ದಾಖಲೆಗಳಲ್ಲಿ ಕೊಹ್ಲಿ, ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ಕ್ರಿಕೆಟ್‌ನ ಮತ್ತೊಬ್ಬ ದೇವರು ಎನಿಸಿಕೊಂಡಿದ್ದಾರೆ. ಇದೇ ಕಿಂಗ್ ಕೊಹ್ಲಿ ಇದೀಗ ಆಸ್ಟ್ರೇಲಿಯಾ ಪಾಲಿಗೆ ದ್ವಿಸ್ವಪ್ನವಾಗಿ ಕಾಡುತ್ತಿದ್ದಾರೆ. ಇಂದು ನಡೆಯುವ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ರನ್ ಮಿಷನ್ ವಿರಾಟ್ ಕೊಹ್ಲಿಯದ್ದೆ ಟೆನ್ಶನ್. ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿಯ ವಿಕೆಟ್ ಕಬಳಿಸೋಕೆ ಆಸೀಸ್‌ನ ಬೌಲರ್‌ಗಳು ರಣತಂತ್ರ ಹಣೆಯುತ್ತಿದ್ದು, ವಿರಾಟ್ ಕೊಹ್ಲಿಯೇ ಆಸೀಸ್ ತಂಡದ ಮೊದಲ ಟಾರ್ಗೆಟ್ ಆಗಿದ್ದಾರೆ. ಇದನ್ನೂ ಓದಿ: ಬರೊಬ್ಬರಿ 20 ವರ್ಷದ ಮುಯ್ಯಿಗೆ ಕಾದಿದೆ ಟೀಂ ಇಂಡಿಯಾ!

    2023ರ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಉಗ್ರ ರೂಪಕ್ಕೆ ಎದುರಾಳಿ ಬೌಲರುಗಳು ಪತರುಗಟ್ಟಿ ಹೋಗಿದ್ದಾರೆ. ಒಟ್ಟು 10 ಪಂದ್ಯಗಳಲ್ಲಿ, 90.68 ರನ್ ಸ್ಟ್ರೈಕ್ ರೇಟ್‌ನೊಂದಿಗೆ 711 ರನ್ ಗಳಿಸಿ, 2023ರ ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿದವರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಇಳಿದು, ಆಡಿದ 10 ಇನ್ನಿಂಗ್ಸ್ನಲ್ಲಿ 711 ರನ್ ಗಳಿಸಿದ್ದು, ಇದರಲ್ಲಿ ಮೂರು ಶತಕ, 5 ಅರ್ಧಶತಕ ಸೇರಿದೆ. 10 ಇನ್ನಿಂಗ್ಸ್ಗಳಲ್ಲಿ 64 ಬೌಂಡರಿ, 9 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಕಿಂಗ್ ಕೊಹ್ಲಿಯ ಈ ಬೆಂಕಿಯಂತಹ ಪರ್ಫಾಮೆನ್ಸ್ ನೋಡಿಯೇ ಕಾಂಗಾರುಗಳಿಗೆ ನಡುಕ ಶುರುವಾಗಿದೆ. ಇದನ್ನೂ ಓದಿ: World Cup 2023: ಟೀಂ ಇಂಡಿಯಾಗೆ 3ನೇ ಪ್ರಶಸ್ತಿ ಗೆಲ್ಲುವ ಕನಸು- ಆಸೀಸ್‍ಗೆ 6ನೇ ಟ್ರೋಫಿ ಮೇಲೆ ಕಣ್ಣು

    ಮೊದಲ ಬ್ಯಾಟಿಂಗ್ ಮಾಡಿದರೂ ಕೊಹ್ಲಿ ಸರಾಗವಾಗಿ ರನ್ ಗಳಿಕೆ ಮಾಡುತ್ತಾರೆ. ಒಂದೊಮ್ಮೆ ಭಾರತಕ್ಕೆ ಎಷ್ಟೇ ಟಾರ್ಗೆಟ್ ನೀಡಿದರೂ ಕೊಹ್ಲಿ ಕ್ರಿಸ್‌ನಲ್ಲಿದ್ದರೆ ಚೇಸ್ ಮಾಡಿ, ಭಾರತವನ್ನು ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಅದೇನೆ ಆಗಲಿ, ವಿರಾಟ್ ಫೈನಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ವಿಶ್ವಕಪ್ ಗೆಲ್ಲಲಿ ಅನ್ನೋದು ಕೋಟ್ಯಂತರ ಭಾರತೀಯರ ಪ್ರಾರ್ಥನೆ, ಹಾರೈಕೆ. ಇದನ್ನೂ ಓದಿ: ಇಂದು IND Vs AUS ಸಮರ – 12 ವರ್ಷಗಳ ಬಳಿಕ ವಿಶ್ವಕಪ್ ಗೆಲ್ಲುವ ತವಕ

  • World Cup Semi Final: ಮಳೆ ಬಂದು ಮ್ಯಾಚ್ ನಡೆಯದಿದ್ದರೆ ಏನಾಗುತ್ತೆ..?

    World Cup Semi Final: ಮಳೆ ಬಂದು ಮ್ಯಾಚ್ ನಡೆಯದಿದ್ದರೆ ಏನಾಗುತ್ತೆ..?

    ಬೆಂಗಳೂರು: ವಿಶ್ವಕಪ್ 2023ರ (World Cup 2023) ಪಂದ್ಯಾವಳಿಯ ಕೊನೆಯ 3 ಪಂದ್ಯಗಳು ಬಾಕಿ ಉಳಿದಿವೆ. ಇನ್ನು 3 ಪಂದ್ಯಗಳು ನಡೆದರೆ ವಿಶ್ವ ಕ್ರಿಕೆಟ್ ಏಕದಿನ ಪಂದ್ಯಗಳ ಸಾಮ್ರಾಟ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ಇನ್ನೆರಡು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯ ನಡೆದರೆ ವಿಶ್ವ ವಿಜೇತ ತಂಡ ಯಾವುದು ಎಂಬುದು ಗೊತ್ತಾಗಲಿದೆ.

    ಸೆಮಿಫೈನಲ್ ಹಣಾಹಣಿಗೆ ಮುಂಬೈನ ವಾಂಖೆಡೆ, ಕೋಲ್ಕತ್ತಾದ ಈಡನ್‌ ಗಾರ್ಡನ್‌ ವೇದಿಕೆ ಸಿದ್ಧವಾಗಿದ್ದು ಮೊದಲ ಸೆಮಿಫೈನಲ್ ನಲ್ಲಿ ಟೀಂ ಇಂಡಿಯಾ-ನ್ಯೂಜಿಲೆಂಡ್ (India Vs Newzealand) ತಂಡದ ವಿರುದ್ಧ ಸೆಣಸಲು ಸಿದ್ಧವಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನವೆಂಬರ್ 15ರಂದು ಮೊದಲ ಸೆಮಿಫೈನಲ್ ನಡೆಯಲಿದೆ. ಟೂರ್ನಿಯ 2ನೇ ಸೆಮಿಫೈನಲ್ (World Cup SemiFinal) ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ನವೆಂಬರ್ 16ರಂದು ನಡೆಯಲಿದೆ. ಫೈನಲ್ ಪಂದ್ಯ ನವೆಂಬರ್ 19ರಂದು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

    ಸೆಮಿಫೈನಲ್ ಮ್ಯಾಚ್ ವೇಳೆ ಮಳೆ ಬಂದರೆ ಏನಾಗಬಹುದು..? ಮಳೆ ಬಂದರೆ ಯಾವ ತಂಡ ಫೈನಲ್ ಪ್ರವೇಶಿಸಬಹುದು…? ಮುಂದೇನಾಗಬಹುದು ಎಂಬ ಕುತೂಹಲ ನಿಮಗಿದ್ದರೆ ಮುಂದಕ್ಕೆ ಓದಿ. ಇದನ್ನೂ ಓದಿ: World Cup 2023: ಭಾರತಕ್ಕೆ ಗೆಲುವಿನ ʻಶ್ರೇಯಸ್ಸುʼ – ಡಚ್ಚರ ವಿರುದ್ಧ 160 ರನ್‌ಗಳ ಭರ್ಜರಿ ಜಯ..!

    ಎರಡು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಕ್ಕೆ ಐಸಿಸಿಯು ರಿಸರ್ವ್ ಡೇ ನಿಗದಿ ಮಾಡಿದೆ. ಒಂದು ವೇಳೆ ಸೆಮಿಫೈನಲ್ ನಡೆಯುವ ದಿನ ಮಳೆ ಬಂದು ಒಂದೇ ದಿನ ಪಂದ್ಯ ಪೂರ್ಣವಾಗದಿದ್ದರೆ, ರಿಸರ್ವ್ ಡೇ ದಿನ ಆಟ ಮುಂದುವರಿಸಬಹುದು. ಹಿಂದಿನ ದಿನ ಆಟ ನಿಂತಲ್ಲಿಂದಲೇ ಮತ್ತೆ ಶುರುವಾಗುತ್ತದೆ. 2023ರ ಏಷ್ಯಾಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸೂಪರ್‌ ಫೋರ್‌ ಪಂದ್ಯಕ್ಕೆ ಈ ರೀತಿ ಮೀಸಲು ದಿನ ನಿಗದಿಯಾಗಿತ್ತು.

    ರಿಸರ್ವ್ ಡೇ ದಿನವೂ ಮಳೆ ಬಂದರೆ…?: ರಿಸರ್ವ್ ಡೇ ದಿನ ಮಳೆ ಬಂದರೆ ಏನಾಗಬಹುದು ಎಂಬ ಕುತೂಹಲವೂ ನಿಮಗಿರುತ್ತೆ. ರಿಸರ್ವ್ ಡೇ ದಿನವೂ ಮಳೆ ಬಂದು ಪಂದ್ಯ ನಡೆಯದಿದ್ದರೆ ಪಾಯಿಂಟ್ ಟೇಬಲ್ ಆಧಾರದಲ್ಲಿ ತಂಡಗಳು ಫೈನಲ್ ಪ್ರವೇಶಿಸಲಿದೆ. ಅರ್ಥಾತ್ ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ಮಳೆಯಿಂದ ನಡೆಯದಿದ್ದರೂ ಟೀಂ ಇಂಡಿಯಾ ಫೈನಲ್ ಪ್ರವೇಶಿಸಲಿದೆ. ಸದ್ಯ 9ಕ್ಕೆ 9 ಪಂದ್ಯವನ್ನು ಗೆದ್ದಿರುವ ಟೀಂ ಇಂಡಿಯಾ ಅಗ್ರಸ್ಥಾನದಲ್ಲಿದೆ. ಇದನ್ನೂ ಓದಿ: ಏಕದಿನ ಕ್ರಿಕೆಟ್‌ನಲ್ಲಿ 9 ವರ್ಷಗಳ ಬಳಿಕ ಮೊದಲ ವಿಕೆಟ್‌ ಕಿತ್ತ ಕೊಹ್ಲಿ – ಕುಣಿದು ಕುಪ್ಪಳಿಸಿದ ಅನುಷ್ಕಾ

    ದಕ್ಷಿಣ ಆಫ್ರಿಕಾ – ಆಸ್ಟ್ರೇಲಿಯಾ (Australia Vs South Africa) ನಡುವಿನ ಪಂದ್ಯಕ್ಕೂ ಇದೇ ನಿಯಮ ಅನ್ವಯವಾಗಲಿದೆ. ಮಳೆ ಬಂದು ಪಂದ್ಯವೇ ನಡೆಯದಿದ್ದರೆ ದಕ್ಷಿಣ ಆಫ್ರಿಕಾ ತಂಡ ಫೈನಲ್ ಪ್ರವೇಶಿಸಲಿದೆ. ಯಾಕೆಂದರೆ ಸದ್ಯ ಅಂಕಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ 2ನೇ ಹಾಗೂ ಆಸ್ಟ್ರೇಲಿಯಾ 3ನೇ ಸ್ಥಾನದಲ್ಲಿದೆ.

    ಈ ವಿಶ್ವಕಪ್ ನಲ್ಲಿ ಮಳೆಯಿಂದ ಪಂದ್ಯ ರದ್ದಾಗಿಲ್ಲ!: ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯಲ್ಲಿ ಇದುವರೆಗೆ 45 ಪಂದ್ಯಗಳು ನಡೆದಿದೆ. 45 ಪಂದ್ಯಗಳಲ್ಲೂ ಫಲಿತಾಂಶ ಬಂದಿದೆ. ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ – ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾದರೂ ಡಕ್‌ವರ್ಥ್ ಲೂಯಿಸ್ ನಿಯಮದ ಪ್ರಕಾರ ಪಾಕಿಸ್ತಾನ ಗೆಲುವು ಸಾಧಿಸಿತ್ತು.

    ಫೈನಲ್ ಮಳೆ ಬಂದ್ರೆ ಟ್ರೋಫಿ ಶೇರ್!: ಸೆಮಿಫೈನಲ್‌ಗೆ ಪಾಯಿಂಟ್ ಪಟ್ಟಿ ಆಧಾರದಲ್ಲಿ ಫೈನಲ್ ಪ್ರವೇಶಿಸಿದರೂ, ಅಂಕಪಟ್ಟಿ ಆಧಾರದಲ್ಲಿ ವಿಜೇತರ ಘೋಷಣೆ ಮಾಡಲ್ಲ. ನವೆಂಬರ್ 19ರಂದು ಫೈನಲ್ ನಡೆಯಲಿದ್ದು, ನವೆಂಬರ್ 20ರಂದು ರಿಸರ್ವ್ ಡೇ ಎಂದು ಮೀಸಲಿಡಲಾಗಿದೆ. ಈ ದಿನವೂ ಮಳೆ ಬಂದು ಫೈನಲ್ ನಡೆಯದಿದ್ದರೆ ಎರಡೂ ತಂಡಗಳಿಗೂ ವಿಶ್ವಕಪ್ ಟ್ರೋಫಿ ಹಂಚಿಕೆಯಾಗಲಿದೆ.

    ಸದ್ಯಕ್ಕೆ ಇರುವ ಮಾಹಿತಿ ಪ್ರಕಾರ ಮುಂಬೈ, ಕೋಲ್ಕತ್ತಾ, ಅಹಮದಾಬಾದ್ ನಲ್ಲಿ ನಿಗದಿಯಾಗಿರುವ ದಿನಗಳಂದು ಮಳೆ ಬರುವ ಸಾಧ್ಯತೆ ಇಲ್ಲ.

  • ಸಾಕು ನಾಯಿಗಳೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ – ವೀಡಿಯೋ ಹಂಚಿಕೊಂಡ ಧೋನಿ

    ಸಾಕು ನಾಯಿಗಳೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ – ವೀಡಿಯೋ ಹಂಚಿಕೊಂಡ ಧೋನಿ

    ನವದೆಹಲಿ: ಟೀಂ ಇಂಡಿಯಾ (Team India) ಮಾಜಿ ನಾಯಕ ಎಮ್.ಎಸ್ ಧೋನಿ (MS Dhoni) ತಮ್ಮ ಹುಟ್ಟುಹಬ್ಬವನ್ನು ತಾವು ಸಾಕಿರುವ ನಾಯಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.

    ಶುಕ್ರವಾರ ತಮ್ಮ 42 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕೇಕ್ ಕಟ್ ಮಾಡುವಾಗ ಅವರ ಸುತ್ತ ಸಾಕುನಾಯಿಗಳು ಸುತ್ತುವರೆದ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕ್ರಿಕೆಟ್‍ನಲ್ಲಿ (Cricket) ತಮ್ಮದೇ ಛಾಪು ಮೂಡಿಸಿ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ವಿಶ್ವದ ಮೂಲೆ ಮೂಲೆಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿತ್ತು. ಇದಕ್ಕೆ ಪ್ರತಿಯಾಗಿ ಶುಭಕೋರಿದ ಎಲ್ಲರಿಗೂ ಇನ್ಸ್ಟಾಗ್ರಾಮ್‍ನಲ್ಲಿ ಧನ್ಯವಾದ ಹೇಳಿದ್ದಾರೆ. ಇದನ್ನೂ ಓದಿ: USA ಮೇಜರ್‌ ಲೀಗ್‌ ಕ್ರಿಕೆಟ್‌ನಿಂದ ಹಿಂದೆ ಸರಿದ ಅಂಬಾಟಿ ರಾಯುಡು

     

    View this post on Instagram

     

    A post shared by M S Dhoni (@mahi7781)

    ಧೋನಿ ಆಗಸ್ಟ್ 2020 ರಲ್ಲಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರು. ಟೆಸ್ಟ್ ಕ್ರಿಕೆಟ್‍ನಲ್ಲಿ ಧೋನಿ 90 ಪಂದ್ಯಗಳನ್ನು ಆಡಿದ್ದಾರೆ. 38.09 ರ ಸರಾಸರಿಯಲ್ಲಿ 4,876 ರನ್ ಗಳಿಸಿದ್ದಾರೆ. ಆರು ಶತಕಗಳು ಮತ್ತು 33 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಟೆಸ್ಟ್‍ನಲ್ಲಿ ಅವರ ಅತ್ಯುತ್ತಮ ಸ್ಕೋರ್ 224 ಆಗಿದೆ.

    350 ಏಕದಿನ ಪಂದ್ಯಗಳಲ್ಲಿ 10,773 ರನ್ ಹೊಡೆದಿರುವ ಧೋನಿ 10 ಶತಕಗಳು ಮತ್ತು 73 ಅರ್ಧಶತಕಗಳನ್ನು ಗಳಿಸಿದ್ದಾರೆ. ಇದರಲ್ಲಿ 183 ಅತ್ಯುತ್ತಮ ಸ್ಕೋರ್ ಆಗಿದೆ. ಏಕದಿನ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ರನ್ ದಾಖಲಿಸಿದ ಐದನೇ ಬ್ಯಾಟ್ಸ್‍ಮನ್ ಆಗಿದ್ದಾರೆ. ಸಚಿನ್ ತೆಂಡೂಲ್ಕರ್ 18,426 ರನ್ ಸಿಡಿಸಿ ಅಗ್ರಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: Asian Games 2023 ನಲ್ಲಿ ಟೀಂ ಇಂಡಿಯಾ ಪಾಲ್ಗೊಳ್ಳಲು ಬಿಸಿಸಿಐ ಗ್ರೀನ್‌ ಸಿಗ್ನಲ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿಂಗ್ ಕೊಹ್ಲಿ ಶತಕದ ವೈಭವ – ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 88 ರನ್ ಮುನ್ನಡೆ

    ಕಿಂಗ್ ಕೊಹ್ಲಿ ಶತಕದ ವೈಭವ – ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 88 ರನ್ ಮುನ್ನಡೆ

    ಅಹಮದಾಬಾದ್: ಟೀಂ ಇಂಡಿಯಾ (Team India) ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಶತಕದ ಬ್ಯಾಟಿಂಗ್ ನೆರವಿನಿಂದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ಭಾರತ 88 ರನ್‌ಗಳ ಮುನ್ನಡೆ ಸಾಧಿಸಿದೆ.

    ಬಾರ್ಡರ್ ಗಾವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 4ನೇ ದಿನದಾಟದ ಅಂತ್ಯಕ್ಕೆ 178.5 ಓವರ್‌ಗಳಲ್ಲಿ 571 ರನ್‌ಗಳಿಗೆ ಆಲೌಟ್ ಆಯಿತು. ಬಳಿಕ 2ನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 6 ಓವರ್‌ಗಳಲ್ಲಿ ಕೇವಲ 3 ರನ್ ಗಳಿಸಿ 88 ರನ್‌ಗಳ ಹಿನ್ನಡೆಯಲ್ಲಿದೆ.

    ಆರಂಭಿಕರಾದ ಟ್ರಾವಿಸ್ ಹೆಡ್ (Travis Head) 18 ಎಸೆತಗಳಲ್ಲಿ 3 ರನ್ ಗಳಿಸಿದರೆ, ಮತ್ತೋರ್ವ ಆರಂಭಿಕ ಮ್ಯಾಥಿವ್ ಕುನ್ಹೆಮನ್ ಯಾವುದೇ ರನ್‌ಗಳಿಸದೇ ವಿಕೆಟ್ ಉಳಿಸಿಕೊಂಡಿದ್ದು, ಸೋಮವಾರ ಬ್ಯಾಟಿಂಗ್ ಮುಂದುವರಿಸಲಿದ್ದಾರೆ.

    ಶತಕದ ಬರ ನೀಗಿಸಿಕೊಂಡ ಕೊಹ್ಲಿ: 4ನೇ ದಿನ ಆಸ್ಟ್ರೇಲಿಯಾ ವಿರುದ್ಧ ತಾಳ್ಮೆಯ ಆಟವಾಡಿದ ಕೊಹ್ಲಿ 1,205 ದಿನಗಳ ಬಳಿಕ ಟೆಸ್ಟ್‌ನಲ್ಲಿ ಶತಕ ಸಿಡಿಸಿ ಮಿಂಚಿದರು. ಈ ಮೂಲಕ ತಮ್ಮ ವೃತ್ತಿಜೀವನದ 75ನೇ ಶತಕ ಪೂರ್ಣಗೊಳಿಸಿದರು.

    Virat Kohli 2

    3ನೇ ದಿನದ ಅಂತ್ಯಕ್ಕೆ 128 ಎಸೆತಗಳಲ್ಲಿ 59 ರನ್ ಗಳಿಸಿದ್ದ ಕೊಹ್ಲಿ 4ನೇ ದಿನ ಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. 4ನೇ ದಿನದಾಟದಲ್ಲಿ ಕೊಹ್ಲಿ 364 ಎಸೆತಗಳಲ್ಲಿ 15 ಬೌಂಡರಿಗಳೊಂದಿಗೆ 186 ರನ್ ಗಳಿಸಿದರೆ, ಜೊತೆಯಾಗಿ ಸಾಥ್ ನೀಡಿದ ಆಲ್‌ರೌಂಡರ್ ಅಕ್ಷರ್ ಪಟೇಲ್ (Axar Patel) 113 ಎಸೆತಗಳಲ್ಲಿ 79 ರನ್ (5 ಬೌಂಡರಿ, 4 ಸಿಕ್ಸರ್) ಬಾರಿಸಿದರು.

    ರವೀಂದ್ರ ಜಡೇಜಾ 28 ರನ್, ಶ್ರೀಕರ್ ಭರತ್ 44 ರನ್, ರವಿಚಂದ್ರನ್ ಅಶ್ವಿನ್ 7 ರನ್ ಗಳಿಸಿದರೆ, ಉಮೇಶ್ ಯಾದವ್ ಒಂದು ಎಸೆತವನ್ನೂ ಎದುರಿಸದೇ ರನೌಟ್ ಆಗಿ ನಿರ್ಗಮಿಸಿದರು. ಮೊಹಮ್ಮದ್ ಶಮಿ ಅಜೇಯರಾಗುಳಿದರು.

    Smit

    ಆಸ್ಟ್ರೇಲಿಯಾ ತಂಡದ ಪರ ನಥನ್ ಲಿಯಾನ್ (Nathan Lyon), ಟಾಡ್ ಮರ್ಫಿ ತಲಾ 3 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್, ಮ್ಯಾಥಿವ್ ಕುನ್ಹೆಮನ್ ತಲಾ ಒಂದೊಂದು ವಿಕೆಟ್ ಪಡೆದರು.

  • 1,205 ದಿನಗಳ ಬಳಿಕ ಶತಕ ಸಿಡಿಸಿ ಮೆರೆದಾಡಿದ ಕೊಹ್ಲಿ

    1,205 ದಿನಗಳ ಬಳಿಕ ಶತಕ ಸಿಡಿಸಿ ಮೆರೆದಾಡಿದ ಕೊಹ್ಲಿ

    ಅಹಮದಾಬಾದ್: ಬಾರ್ಡರ್ ಗಾವಾಸ್ಕರ್ ಟ್ರೋಫಿ (Border Gavaskar Trophy) ಸರಣಿಯ 4ನೇ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಶತಕ ಸಿಡಿಸುವ ಮೂಲಕ ಬಹುದಿನಗಳ ಶತಕದ ಬರ ನೀಗಿಸಿಕೊಂಡಿದ್ದಾರೆ.

    2019ರಲ್ಲಿ ಬಾಂಗ್ಲಾದೇಶ (Bangladesh) ವಿರುದ್ಧ ನಡೆದ ಟೆಸ್ಟ್‌ನಲ್ಲಿ ಶತಕ ಸಿಡಿಸಿದ್ದ ಕೊಹ್ಲಿ, ಬರೋಬ್ಬರಿ 1,205 ದಿನಗಳ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ 28ನೇ ಶತಕ ಸಿಡಿಸಿದ್ದು, 75 ಶತಕಗಳನ್ನ ಪೂರೈಸಿದ್ದಾರೆ. ಇದನ್ನೂ ಓದಿ: 10 ಬೌಂಡರಿ, 5 ಸಿಕ್ಸರ್‌ – ಶಫಾಲಿ ವರ್ಮ ಸ್ಫೋಟಕ ಫಿಫ್ಟಿ; ಡೆಲ್ಲಿ ಕ್ಯಾಪಿಟಲ್ಸ್‌ಗೆ 10 ವಿಕೆಟ್‌ಗಳ ಭರ್ಜರಿ ಜಯ

    ಬಾರ್ಡರ್ ಗಾವಾಸ್ಕರ್ ಟ್ರೋಫಿ ಸರಣಿಯ ಅಂತಿಮ ಟೆಸ್ಟ್‌ನ 4ನೇ ದಿನದಾಟದಲ್ಲಿ ವಿರಾಟ್ ಕೊಹ್ಲಿ 241 ಎಸೆತಗಳಲ್ಲಿ 5 ಬೌಂಡರಿಗಳೊಂದಿಗೆ ಶತಕ ಸಿಡಿಸಿದ್ದಾರೆ. ಇದು ಕೊಹ್ಲಿ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದ 28ನೇ ಶತಕ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನದ 75ನೇ ಶತಕವಾಗಿದೆ. ಜೊತೆಗೆ ಇದು ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿ ಸಿಡಿಸಿದ 16ನೇ ಶತಕವಾಗಿದೆ. ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಆಸ್ಟ್ರೇಲಿಯಾ ವಿರುದ್ಧ 20 ಶತಕಗಳನ್ನು ಸಿಡಿಸಿದ್ದರು.

    ಸಚಿನ್ ತೆಂಡೂಲ್ಕರ್ 566 ಇನ್ನಿಂಗ್ಸ್‌ಗಳಲ್ಲಿ 75 ಶತಕಗಳನ್ನ ಸಿಡಿಸಿದ್ದರು. ಆದರೆ ಕೊಹ್ಲಿ 552 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿರುವುದು ವಿಶೇಷ. ಇದನ್ನೂ ಓದಿ: ಸೋಲಿನ ಹೊಣೆ ನಾನೇ ಹೊರುತ್ತೇನೆ – ತನ್ನನ್ನು ತಾನೇ ಟೀಕಿಸಿಕೊಂಡ ಸ್ಮೃತಿ ಮಂದಾನ

    ಆಸ್ಟ್ರೇಲಿಯಾ (Australia) ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 480 ರನ್‌ಗಳಿಗೆ ಆಲೌಟ್ ಆಗಿದೆ. ತನ್ನ ಸರದಿ ಆರಂಭಿಸಿರುವ ಟೀಂ ಇಂಡಿಯಾ 169.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 530 ರನ್ ಗಳಿಸಿ ಆಟ ಮುಂದುವರಿಸಿದೆ.

  • 3ನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ – ಆಸ್ಟ್ರೇಲಿಯಾಗೆ 9 ವಿಕೆಟ್‌ಗಳ ಭರ್ಜರಿ ಜಯ

    3ನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ – ಆಸ್ಟ್ರೇಲಿಯಾಗೆ 9 ವಿಕೆಟ್‌ಗಳ ಭರ್ಜರಿ ಜಯ

    ಇಂದೋರ್: ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ (Travis Head) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ (Australia), ಟೀಂ ಇಂಡಿಯಾ (Team India) ವಿರುದ್ಧ 3ನೇ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 4 ಪಂದ್ಯಗಳ ಬಾರ್ಡರ್ ಗಾವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಮೊದಲ ಜಯ ಸಾಧಿಸಿದೆ.

    2ನೇ ದಿನದಾಟದ ಅಂತ್ಯಕ್ಕೆ 60.3 ಓವರ್‌ಗಳಲ್ಲಿ 163 ರನ್‌ಗಳಿಸಿದ್ದ ಭಾರತ 2ನೇ ಇನ್ನಿಂಗ್ಸ್‌ನಲ್ಲೂ ಒಂದೇ ದಿನಕ್ಕೆ ಸರ್ವಪತನ ಕಂಡಿತ್ತು. ಈ ಮೂಲಕ ಹೆಚ್ಚುವರಿ 75 ರನ್ ಗಳಿಸಿ ಆಸ್ಟ್ರೇಲಿಯಾಗೆ ಕೇವಲ 76 ರನ್‌ಗಳ ಗುರಿ ನೀಡಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 18.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 78 ರನ್ ಗಳಿಸುವ ಮೂಲಕ ಸುಲಭ ಜಯ ಸಾಧಿಸಿತು. ಇದನ್ನೂ ಓದಿ: ಎರಡನೇ ದಿನ 16 ವಿಕೆಟ್ ಪತನ – ಆಸೀಸ್ ಗೆಲುವಿಗೆ ಬೇಕು 76 ರನ್

    INDvsAUS

    ಆರಂಭಿಕರಾದ ಉಸ್ಮಾನ್ ಖವಾಜ ಆರಂಭದಲ್ಲಿ ಅಶ್ವಿನ್ ಸ್ಪಿನ್ ದಾಳಿಗೆ ತುತ್ತಾದರು. ಮತ್ತೊಬ್ಬ ಆರಂಭಿಕನಾಗಿದ್ದ ಟ್ರಾವಿಸ್ ಹೆಡ್ ಏಕದಿನ ಶೈಲಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆದರು. 53 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್‌ನೊಂದಿಗೆ 49 ರನ್ ಚಚ್ಚಿದರು. ಇದರೊಂದಿಗೆ ಸಾಥ್ ನೀಡಿದ ಮಾರ್ನಸ್ ಲಾಬುಶೇನ್ 58 ಎಸೆತಗಳಲ್ಲಿ 28 ರನ್ ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ ಆಸ್ಟ್ರೇಲಿಯಾ 18.5 ಓವರ್‌ಗಳಲ್ಲಿ 78 ರನ್‌ಗಳಿಸಿ ಜಯ ಸಾಧಿಸಿತು.

    Australia 6

    ಟೀಂ ಇಂಡಿಯಾ ಪರ ಅಶ್ವಿನ್ (Ravichandran Ashwin) 1 ವಿಕೆಟ್ ಪಡೆದರು. ಇದನ್ನೂ ಓದಿ: ಮೊದಲ ದಿನವೇ 14 ವಿಕೆಟ್‌ ಪತನ – ಪಿಚ್‌ ವಿರುದ್ಧ ಭಾರೀ ಟೀಕೆ

    ಮೂರೇ ದಿನಕ್ಕೆ 31 ವಿಕೆಟ್ ಪತನ: ಇಂದೋರ್ ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಎರಡೂ ತಂಡಗಳಿಂದ ಮೂರೇ ದಿನಗಳಲ್ಲಿ 31 ವಿಕೆಟ್ ಪತನಗೊಂಡಿತು. ಮೊದಲ ದಿನ 14 ವಿಕೆಟ್, 2ನೇ ದಿನ 16 ವಿಕೆಟ್ ಹಾಗೂ 3ನೇ ದಿನ 1 ವಿಕೆಟ್ ಪತನಗೊಂಡಿತು.

    ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಭಾರತ ಸರಣಿ ಗೆಲ್ಲುವ ತವಕದಲ್ಲಿತ್ತು. ಭಾರತದ ಸರಣಿ ಗೆಲುವಿನ ಕನಸಿಗೆ ಕಾಂಗರೂ ಪಡೆ ತಣ್ಣೀರು ಎರಚಿದೆ. ಇದರಿಂದ ಮಾರ್ಚ್‌ 9 ರಿಂದ 13ರ ವರೆಗೆ ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್‌ ಪಂದ್ಯ ನಿರ್ಣಾಯಕವಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.

    Australia

    ಸಂಕ್ಷಿಪ್ತ ಸ್ಕೋರ್:
    ಭಾರತ ಮೊದಲ ಇನ್ನಿಂಗ್ಸ್ 109/10
    ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 197/10
    ಭಾರತ ಎರಡನೇ ಇನ್ನಿಂಗ್ಸ್ 163/10
    ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ 78/1

  • ಇಂದಿನಿಂದ ಹೈವೋಲ್ಟೇಜ್ ಏಕದಿನ ಸರಣಿ – ಟೀಂ ಇಂಡಿಯಾ ವಿಶ್ವಕಪ್ ಅಭಿಯಾನ ಶುರು

    ಇಂದಿನಿಂದ ಹೈವೋಲ್ಟೇಜ್ ಏಕದಿನ ಸರಣಿ – ಟೀಂ ಇಂಡಿಯಾ ವಿಶ್ವಕಪ್ ಅಭಿಯಾನ ಶುರು

    ದಿಸ್ಪುರ್: ಶ್ರೀಲಂಕಾ (SriLanka) ವಿರುದ್ಧದ ಟಿ20 ಸರಣಿಯನ್ನು (T20 Series) 2-1 ಅಂತರದಿಂದ ಗೆದ್ದು ಬೀಗಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಗಾಗಿ ಸಜ್ಜಾಗಿದ್ದು, ಜನವರಿ 10 ರಿಂದ ಮೂರು ಪಂದ್ಯಗಳ ಈ ಸರಣಿ ಆರಂಭವಾಗಲಿದೆ.

    ಲಂಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ಭಾರತ ತಂಡದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ (Rohit Sharma), ಕೆ.ಎಲ್ ರಾಹುಲ್ (KL Rahul) ಸರಣಿಯ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಆದರೆ ಗಾಯಾಳುವಾಗಿದ್ದ ಟೀಂ ಇಂಡಿಯಾ (Team India) ವೇಗಿ ಜಸ್ಪ್ರೀತ್‌ ಬುಮ್ರಾ ಅವರನ್ನು ಲಂಕಾ ಏಕದಿನ ಸರಣಿಯಿಂದಲೂ ಹೊರಗಿಡಲಾಗಿದೆ. ಅಲ್ಲದೇ ಮುಂದೆ ನಡೆಯುವ ಆಸ್ಟ್ರೇಲಿಯಾ ಸರಣಿಯಿಂದಲೂ ಔಟಾಗುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

    ಈ ಏಕದಿನ ಸರಣಿಯೊಂದಿಗೆ ಟೀಂ ಇಂಡಿಯಾದ ವಿಶ್ವಕಪ್ (ODI WorldCup) ಏಕದಿನದ ಅಭಿಯಾನ ಕೂಡ ಶುರುವಾಗಲಿದೆ. ಇದೇ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಪೂರ್ವಭಾವಿಯಾಗಿ ಭಾರತ ತಂಡವು ಒಟ್ಟು 35 ಪಂದ್ಯಗಳನ್ನು ಆಡಲಿದೆ. ಇದರ ಮೊದಲ ಭಾಗವಾಗಿ ಇದೀಗ ಲಂಕಾ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ಹೀಗಾಗಿಯೇ 2023ರ ಮೊದಲ ಏಕದಿನ ಸರಣಿಯು ಟೀಂ ಇಂಡಿಯಾ ಪಾಲಿಗೆ ಮಹತ್ವದೆನಿಸಿಕೊಂಡಿದೆ. ಇದನ್ನೂ ಓದಿ: 9 ಸಿಕ್ಸರ್‌, 7 ಬೌಂಡರಿ – 45 ಎಸೆತಗಳಲ್ಲೇ ಸ್ಫೋಟಕ ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ರೋಹಿತ್ ಶರ್ಮಾ ಏಕದಿನ ಸರಣಿಯನ್ನು ಮುನ್ನಡೆಸಲಿದ್ದು, ಟಿ20 ಏಕದಿನ ನಾಯಕ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಹಿರಿಯ ಆಟಗಾರರ ಕಂಬ್ಯಾಕ್ ಹಿನ್ನೆಲೆಯಲ್ಲಿ ಟಿ20 ತಂಡದಲ್ಲಿದ್ದ ಕೆಲ ಆಟಗಾರರು ಏಕದಿನ ಸರಣಿಗೆ ಆಯ್ಕೆಯಾಗಿಲ್ಲ. ಇದನ್ನೂ ಓದಿ: ಸೂರ್ಯನ ಸಿಡಿಲಬ್ಬರದ ಶತಕಕ್ಕೆ ಲಂಕಾ ಭಸ್ಮ – ಭಾರತಕ್ಕೆ ಟಿ20 ಸರಣಿ ಕಿರೀಟ

    ಈ ಬಳಗದಲ್ಲಿ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್, ಕೆ.ಎಲ್ ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಹಾಗೂ ಅರ್ಷ್‌ದೀಪ್ ಸಿಂಗ್ ಆಯ್ಕೆಯಾಗಿದ್ದಾರೆ. ಒಟ್ಟಿನಲ್ಲಿ ಈ ಏಕದಿನ ಸರಣಿ ಗೆಲವು ಕೂಡ ವಿಶ್ವಕಪ್ ಮೇಲೆ ಭಾರೀ ಪರಿಣಾಮ ಬೀರಲಿದ್ದು, ರೋಹಿತ್ ಪಡೆಗೆ ಕಠಿಣ ಪರೀಕ್ಷೆಯಾಗಿದೆ.

    ಏಕದಿನ ಸರಣಿ ವೇಳಾಪಟ್ಟಿ:

    • ಜನವರಿ 10: ಮೊದಲ ಏಕದಿನ ಪಂದ್ಯ (ಸ್ಥಳ- ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ)
    • ಜನವರಿ 12: 2ನೇ ಏಕದಿನ ಪಂದ್ಯ (ಸ್ಥಳ- ಈಡನ್ ಗಾರ್ಡನ್ಸ್, ಕೋಲ್ಕತ್ತಾ)
    • ಜನವರಿ 15: 3ನೇ ಏಕದಿನ ಪಂದ್ಯ (ಗ್ರೀನ್‌ಫೀಲ್ಡ್ ಸ್ಟೇಡಿಯಂ, ತಿರುವನಂತಪುರಂ)

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸೂರ್ಯನ ಸಿಡಿಲಬ್ಬರದ ಶತಕಕ್ಕೆ ಲಂಕಾ ಭಸ್ಮ – ಭಾರತಕ್ಕೆ ಟಿ20 ಸರಣಿ ಕಿರೀಟ

    ಸೂರ್ಯನ ಸಿಡಿಲಬ್ಬರದ ಶತಕಕ್ಕೆ ಲಂಕಾ ಭಸ್ಮ – ಭಾರತಕ್ಕೆ ಟಿ20 ಸರಣಿ ಕಿರೀಟ

    ಮುಂಬೈ: ಸೂರ್ಯಕುಮಾರ್‌ ಯಾದವ್‌ (Suryakumar Yadav) ಸಿಡಿಲಬ್ಬರದ ಶತಕ ಹಾಗೂ ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದಾಗಿ ಟೀಂ ಇಂಡಿಯಾ (Team India) ಶ್ರೀಲಂಕಾ (Srilanka) ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ 91 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 2-1 ಅಂತರದಲ್ಲಿ ಗೆದ್ದು ಸರಣಿ ಕಿರೀಟ ಮುಡಿಗೇರಿಸಿಕೊಂಡಿದೆ.

    ಶ್ರೀಲಂಕಾ ವಿರುದ್ಧದ T20 ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಹಾರ್ದಿಕ್‌ ಪಡೆ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 228 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. 229 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಶ್ರೀಲಂಕಾ ನಿಗದಿತ 16.4 ಓವರ್‌ಗಳಲ್ಲಿ 137 ರನ್‌ಗಳಿಗೆ ಸರ್ವಪತನ ಕಂಡು, ಸೋಲೊಪ್ಪಿಕೊಂಡಿತು. ಟೀಂ ಇಂಡಿಯಾ 2-1 ಅಂತರದಲ್ಲಿ ಸರಣಿ ಗೆದ್ದು ಬೀಗಿತು.

    ಟೀಂ ಇಂಡಿಯಾದ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಶ್ರೀಲಂಕಾ (SriLanka) ಉತ್ತಮ ಶುಭಾರಂಭ ನೀಡಿತು. ಒಂದೆಡೆ ರನ್‌ ಕಲೆಹಾಕುತ್ತಿದ್ದರೂ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಭಾರತದ ಬೌಲರ್‌ಗಳು ತಮ್ಮ ಮಾರಕ ದಾಳಿಯಿಂದ ಲಂಕನ್ನರಿಗೆ ಲಗಾಮು ಹಾಕಿದರು. ಪರಿಣಾಮ ಪವರ್‌ ಪ್ಲೇ ಮುಗಿಯುವಷ್ಟರಲ್ಲೇ 51 ರನ್‌ ಗಳಿಸಿದ್ದ ಲಂಕಾ ತಂಡ 2 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

    ಆರಂಭಿಕರಾಗಿ ಕಣಕ್ಕಿಳಿದ ಪಾತುಮ್‌ ನಿಸಾಂಕ 3 ಬೌಂಡರಿಗಳೊಂದಿಗೆ 15 ರನ್‌ ಗಳಿಸಿದ್ರೆ, ಕುಸಾಲ್‌ ಮೆಂಡಿಸ್‌ (Kusal Mendis) 15 ಎಸೆತಗಳಲ್ಲಿ 23ರನ್‌ (2 ಸಿಕ್ಸರ್‌, 2 ಬೌಂಡರಿ) ಬಾರಿಸಿ ಪೆವಿಲಿಯನ್‌ ನತ್ತ ಮುಖ ಮಾಡಿದ್ರು. 2ನೇ ಕ್ರಮಾಂಕದಲ್ಲಿ ಬಂದ ಅವಿಷ್ಕಾ ಫರ್ನಾಂಡೋ 1 ರನ್‌ ಗಳಿಸಿದರು. ವಾನಿಂದು ಹಸರಂಗ (Wanindu Hasaranga de Silva) ಸಹ 9 ರನ್‌, ಚಮಿಕ ಕರುಣ ರತ್ನೆ (Chamika Karunaratne) ಶೂನ್ಯಕ್ಕೆ ನಿರ್ಗಮಿಸಿ ನಿರಾಸೆ ಮೂಡಿಸಿದ್ರು.

    ನಂತರ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಧನಂಜಯ ಡಿ ಸಿಲ್ವಾ ಹಾಗೂ ಚರಿತ್ ಅಸಲಂಕಾ ಉತ್ತಮ ಇನ್ನಿಂಗ್ಸ್‌ ಕಟ್ಟಲು ಪ್ರಯತ್ನಿಸಿದರು. ಸೆಲ್ವಾ 14 ಎಸೆತಗಳಲ್ಲಿ 22 ರನ್‌ ಗಳಿಸಿದ್ರೆ, ಅಸಲಂಕಾ 14 ಎಸೆತಗಳಲ್ಲಿ 19 ರನ್‌ ಗಳಿಸಿದರು. ಇವರಿಬ್ಬರ ಆಟಕ್ಕೆ ಭಾರತದ ಬೌಲರ್‌ಗಳು ಬ್ರೇಕ್‌ ಹಾಕಿದ್ರು. ನಾಯಕ ದಸುನ್‌ ಶನಕ  (Dasun Shanaka) ಕೂಡ 23 ರನ್‌ಗಳಿಸಿ ಔಟಾದರು. ಮಹೀಶ್‌ ತೀಕ್ಷಣ 2 ರನ್‌ ದಿಲ್ಶನ್‌ 9ರನ್‌ ಗಳಿಸಿದ್ರೆ, ಕುಸನ್‌ ರಜಿತ ಶೂನ್ಯಕ್ಕೆ ನಿರ್ಗಮಿಸಿದರು. ಕಳಪೆ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಪ್ರದರ್ಶನದಿಂದಾಗಿ ಶ್ರೀಲಂಕಾ ತಂಡ ಹೀನಾಯ ಸೋಲನ್ನು ಅನುಭವಿಸಿತು.

    ಅರ್ಷ್‌ದೀಪ್‌, ಹಾರ್ದಿಕ್‌, ಚಾಹಲ್‌ ಬೌಲಿಂಗ್‌ ಕಮಾಲ್‌:
    ಬೌಲಿಂಗ್‌ನಲ್ಲೀ ತಮ್ಮ ಕೈಚಳಕ ತೋರಿದ ಭಾರತೀಯ ಬೌಲರ್‌ಗಳು ಪ್ರಮುಖ ವಿಕೆಟ್‌ಗಳನ್ನು ಉರುಳಿಸುವಲ್ಲಿ ಯಶಸ್ವಿಯಾದರು.‌ ಕಳೆದ ಪಂದ್ಯದಲ್ಲಿ ನೋಬಾಲ್‌ ನೀಡಿ ಕೆಟ್ಟ ದಾಖಲೆ ಬರೆದಿದ್ದ ಅರ್ಷ್‌ದೀಪ್‌ ಸಿಂಗ್‌ (Arshdeep Singh) ಈ ಬಾರಿ 3 ವಿಕೆಟ್‌ ಪಡೆದು ಗೆಲುವಿಗೆ ಶ್ರಮಿಸಿದರು. ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya), ಯಜುವೇಂದ್ರ ಚಾಹಲ್‌, ಉಮ್ರಾನ್‌ ಮಲಿಕ್‌ ತಲಾ 2 ವಿಕೆಟ್‌ ಪಡೆದರೆ, ಅಕ್ಷರ್‌ ಪಟೇಲ್‌ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    ಟಾಸ್‌ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಆರಂಭಿಕನಾಗಿ ಕಣಕ್ಕಿಳಿದ ಇಶಾನ್‌ ಕಿಶನ್‌ 1 ರನ್‌ ಗಳಿಸಿ ಟೀಂ ಇಂಡಿಯಾಕ್ಕೆ ನಿರಾಸೆ ಮೂಡಿಸಿದರು. ಈ ವೇಳೆ 2ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಾಹುಲ್‌ ತ್ರಿಪಾಟಿ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಪವರ್‌ ಪ್ಲೇನಲ್ಲಿ ಭರ್ಜರಿ ರನ್‌ ತಂದುಕೊಟ್ಟರು. 16 ಎಸೆತಗಳನ್ನು ಎದುರಿಸಿದ ತ್ರಿಪಾಟಿ 218.75 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿ 35 ರನ್‌ (2 ಸಿಕ್ಸರ್‌, 5 ಬೌಂಡರಿ) ಸಿಡಿಸಿದರು. ಈ ವೇಳೆ ಚಮಿಕ ಕರುಣರತ್ನೆ ಬೌಲಿಂಗ್‌ನಲ್ಲಿ ಬೌಂಡರಿಗೆ ತಳ್ಳಲುಹೋಗಿ ಕ್ಯಾಚ್‌ ನೀಡಿ ನಿರ್ಗಮಿಸಿದರು. ನಂತರ ಸೂರ್ಯನ ಅಬ್ಬರ ಶುರುವಾಯಿತು.

    2ನೇ ಪಂದ್ಯದಲ್ಲಿ ಅರ್ಧ ಶತಕ ಗಳಿಸಿ ಔಟಾಗಿದ್ದ ಸೂರ್ಯ ಈ ಬಾರಿ ಆರಂಭದಿಂದಲೇ ಅಬ್ಬರಿಸಲು ಶುರು ಮಾಡಿದರು. ಸಿಕ್ಸರ್‌- ಬೌಂಡರಿಗಳನ್ನು ಬಾರಿಸುತ್ತಾ ಲಂಕಾ ಬೌಲರ್‌ಗಳು ಕಂಗಾಲಾಗುವಂತೆ ಮಾಡಿದ್ರು. 219.60 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸೂರ್ಯ 51 ಎಸೆತಗಳಲ್ಲಿ 7 ಬೌಂಡರಿ ಹಾಗೂ 9 ಸಿಕ್ಸರ್ ಗಳೊಂದಿಗೆ 112 ರನ್‌ ಗಳಿಸಿ ಅಜೇಯರಾಗುಳಿದರು.

    ಈ ವೇಳೆ ಸೂರ್ಯನಿಗೆ ಸಾಥ್‌ ನೀಡಿದ ಶುಭಮನ್‌ ಗಿಲ್‌ 36 ಎಸೆತಗಳಲ್ಲಿ 46 ರನ್‌ (3 ಸಿಕ್ಸರ್‌, 2 ಬೌಂಡರಿ) ಸಿಡಿಸಿ ಪೆವಿಲಿಯನ್‌ಗೆ ಮರಳಿದರು. ಅಂತಿಮ ಹಂತದಲ್ಲಿ ಅಕ್ಷರ್ ಪಟೇಲ್ ಕೂಡ ಭರ್ಜರಿ ಬ್ಯಾಟಿಂಗ್‌ ಮಾಡಿದರು. 9 ಎಸೆತ ಎದುರಿಸಿದ ಅಕ್ಷರ್ 21 ರನ್‌ಗಳಿಸಿ ಅಜೇಯವಾಗುಳಿದರು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಬಂದ ನಾಯಕ ಹಾರ್ದಿಕ್‌ ಪಾಂಡ್ಯ 4 ಎಸೆತಗಳಲ್ಲಿ 4 ರನ್‌ ಗಳಿಸಿ ಔಟಾದರು.

    ಶ್ರೀಲಂಕಾ ತಂಡದ ಪರ ದಿಲ್ಶನ್ ಮಧುಶಂಕ 2 ವಿಕೆಟ್‌ ಪಡೆದರೆ, ಕಸುನ್ ರಜಿತಾ, ಚಮಿಕ ಕರುಣರತ್ನೆ ಹಾಗೂ ವಾನಿಂದು ಹಸರಂಗ ತಲಾ ಒಂದೊಂದು ವಿಕೆಟ್‌ ಪಡೆದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 9 ಸಿಕ್ಸರ್‌, 7 ಬೌಂಡರಿ – 45 ಎಸೆತಗಳಲ್ಲೇ ಸ್ಫೋಟಕ ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    9 ಸಿಕ್ಸರ್‌, 7 ಬೌಂಡರಿ – 45 ಎಸೆತಗಳಲ್ಲೇ ಸ್ಫೋಟಕ ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ಮುಂಬೈ: ದಾಖಲೆಗಳ ಸರದಾರ ಸೂರ್ಯಕುಮಾರ್ ಯಾದವ್ (Suryakumar Yadav) ಭರ್ಜರಿ ಶತಕ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

    ಈ ಹಿಂದೆ ಕಿವೀಸ್‌ ಪಡೆಯ ದ್ವಿಪಕ್ಷೀಯ ಸರಣಿಯ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್‌ ಬೌಲರ್‌ಗಳನ್ನು ಬೆಂಡೆತ್ತಿದ್ದ ಸೂರ್ಯ ಈಗ ಲಂಕಾ ಬೌಲರ್‌ಗಳ ಬೆವರಿಳಿಸಿದ್ದಾರೆ. ಇದನ್ನೂ ಓದಿ: 11 ಬೌಂಡರಿ, 7 ಸಿಕ್ಸ್ – ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ಶನಿವಾರ ಗುಜರಾತ್‌ನ ರಾಜ್‌ಕೋಟ್‌ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ 45 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸುವ ಮೂಲಕ ಸೂರ್ಯಕುಮಾರ್‌ ತನ್ನ ದಾಖಲೆಯನ್ನು ತಾನೇ ಮುರಿದಿದ್ದಾರೆ. ಕಿವೀಸ್‌ ಪಡೆ ಎದುರು 49 ಎಸೆತಗಳಲ್ಲಿ ಶತಕ ಸಿಡಿಸಿದ್ದ ಸೂರ್ಯ‌ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ 219.60 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿ 45 ಎಸೆತಗಳಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ (Rohit Sharma) ನಂತರ ಅತೀ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ 2ನೇ ಭಾರತೀಯನೆಂಬ ಖ್ಯಾತಿ ಪಡೆದಿದ್ದಾರೆ.

    ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಅಜೇಯ 112 ರನ್ ಚಚ್ಚಿದ್ದಾರೆ. ಸಿಂಹಳೀಯರ ವಿರುದ್ಧ ಆರಂಭದಿಂದಲೇ ಅಬ್ಬರಿಸಲು ಮುಂದಾದ ಸೂರ್ಯಕುಮಾರ್ ಮೊದಲ 26 ಎಸೆತಗಳಲ್ಲಿ 50 ರನ್ ಸಿಡಿಸಿದ್ರೆ, ಮುಂದಿನ 25 ಎಸೆತಗಳಲ್ಲಿ 62 ರನ್ ಚಚ್ಚಿದ್ದಾರೆ. 9 ಸಿಕ್ಸರ್, 7 ಬೌಂಡರಿಗಳೂ ಇದರಲ್ಲಿ ಸೇರಿವೆ.

    ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (Cricket) ಇದು ಸೂರ್ಯಕುಮಾರ್ ಯಾದವ್ ಅವರ 3ನೇ ಶತಕವಾಗಿದೆ. 2022ರ ಆವೃತ್ತಿಯ ಜುಲೈನಲ್ಲಿ ಇಂಗ್ಲೆಂಡ್ (England) ವಿರುದ್ಧ ನಡೆದ ಟಿ20 ಸರಣಿಯಲ್ಲಿ 48 ಎಸೆತಗಳಲ್ಲಿ ಸೂರ್ಯಕುಮಾರ್ ಭರ್ಜರಿ ಶತಕ ಬಾರಿಸಿದ್ದರು. ಇದರಲ್ಲಿ 14 ಬೌಂಡರಿ ಮತ್ತು 6 ಸಿಕ್ಸ್‌ಗಳು ದಾಖಲಾಗಿದ್ದವು. 2022ರಲ್ಲಿ ನ್ಯೂಜಿಲೆಂಡ್‌ ವಿರುದ್ಧ ನಡೆದ ಟಿ20ಯಲ್ಲಿ 49 ಎಸೆತಗಳಲ್ಲಿ ಶತಕ ಸಿಡಿಸಿದ್ದರು ಇದರಲ್ಲಿ 11 ಬೌಂಡರಿ, 7 ಸಿಕ್ಸರ್‌ ದಾಖಲಾಗಿದ್ದವು. ಇದೀಗ ಶ್ರೀಲಂಕಾ ವಿರುದ್ಧ 45 ಎಸೆತಗಳಲ್ಲಿ 8 ಸಿಕ್ಸರ್‌, 6 ಬೌಂಡರಿಗಳೊಂದಿಗೆ ಸ್ಫೋಟಕ ಶತಕ ಸಿಡಿಸಿ ದಾಖಲೆಯ ಪುಟ ಸೇರಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 2018ರ ಆವೃತ್ತಿಯಲ್ಲಿ ಶ್ರೀಲಂಕಾ ವಿರುದ್ಧ 35 ಎಸೆತಗಳಲ್ಲಿ ಶತಕ ಸಿಡಿಸಿದ್ದು, ಈವರೆಗಿನ ದಾಖಲೆಯಾಗಿದೆ.

    ಟಿ20ನಲ್ಲಿ ಸೂರ್ಯಕುಮಾರ್ ಸಿಡಿಸಿದ 3ನೇ ಶತಕವಾಗಿದ್ದು, ರೋಹಿತ್ ಶರ್ಮಾ (Rohit Sharma) ನಂತರ ಅತೀ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ 2ನೇ ಭಾರತೀಯನೆಂಬ ಖ್ಯಾತಿ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k